Narendra Modi : ಸಂದೇಶ್​ಖಾಲಿ ಸಂತ್ರಸ್ತೆಯನ್ನು 'ಶಕ್ತಿ ಸ್ವರೂಪ' ಎಂದು ಕರೆದ ಪ್ರಧಾನಿ ಮೋದಿ - Vistara News

ಪ್ರಮುಖ ಸುದ್ದಿ

Narendra Modi : ಸಂದೇಶ್​ಖಾಲಿ ಸಂತ್ರಸ್ತೆಯನ್ನು ‘ಶಕ್ತಿ ಸ್ವರೂಪ’ ಎಂದು ಕರೆದ ಪ್ರಧಾನಿ ಮೋದಿ

Narendra Modi : ಬಸಿರ್ಹತ್​ ​ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ರೇಖಾ ಪಾತ್ರ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿತ್ತು.

VISTARANEWS.COM


on

Rekha Patra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಬಸಿರ್ಹತ್​ ​ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಸಂದೇಶ್​ಖಾಲಿ ಘಟನೆಯ ಸಂತ್ರಸ್ತರಲ್ಲಿ ಒಬ್ಬರಾದ ರೇಖಾ ಪಾತ್ರಾ (Rekha Patra) ಅವರಿಗೆ ಕರೆ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಪ್ರಧಾನಿ ಮೋದಿ (Narendra Modi) ರೇಖಾ ಅವರನ್ನು ‘ಶಕ್ತಿ ಸ್ವರೂಪ’ (Shakti Swaroopa) ಎಂದು ಕರೆದರು. ಪಾತ್ರಾ ಅವರು ಚುನಾವಣೆಗೆ ಸ್ಪರ್ಧಿಸಿರುವುದು ಸಂದೇಶ್​ಖಾಲಿ ಮತ್ತು ಪಶ್ಚಿಮ ಬಂಗಾಳದ ಮಹಿಳೆಯರ ಸುರಕ್ಷತೆಯ ಪ್ರಶ್ನೆ ಎಂಬುದಾಗಿ ಬಿಜೆಪಿ ಸಮರ್ಥಿಸಿಕೊಂಡಿದೆ.

ಶಕ್ತಿ ಎಂಬುದು ದುರ್ಗಾ ಮತ್ತು ಕಾಳಿಯಂತಹ ದೇವತೆಗಳಿಗೆ ಸಂಬಂಧಿಸಿದ ಹಿಂದೂ ಧರ್ಮ ಪದವಾಗಿದೆ.

ಮಾತುಕತೆಯ ವೇಳೆ ಪ್ರಧಾನಿ ಮೋದಿ ರೇಖಾ ಅವರ ಪ್ರಚಾರ ಸಿದ್ಧತೆಗಳು, ಬಿಜೆಪಿಗೆ ದೊರಕಿರುವ ವಿಶ್ವಾಸ ಮತ್ತಿತರ ವಿಷಯಗಳ ಬಗ್ಗೆ ಮಾತನಾಡಿದರು. ಏತನ್ಮಧ್ಯೆ, ರೇಖಾ ಪಾತ್ರಾ ಸಂದೇಶ್​ಖಾಲಿಯ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: Delhi Excise Policy : ಕೆ ಕವಿತಾಗೆ ಇನ್ನೂ 14 ದಿನ ಜೈಲು

ರೇಖಾ ಪಾತ್ರಾ 2024 ರ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಬಸಿಹರ್ತ್​​ನಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಅವರು ಅದಕ್ಕಿಂತ ಹಿಂದೆ ಸ್ಥಳೀಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪ್ರಬಲ ಮುಖಂಡ ಶಹಜಹಾನ್ ಶೇಖ್ ಮತ್ತು ಅವರ ಸಹಚರರ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದ್ದರು. ಸಂದೇಶ್​ಖಾಲಿ ಉತ್ತರ 24 ಪರಗಣ ಜಿಲ್ಲೆಯ ಬಸಿರ್ಹತ್ ಉಪವಿಭಾಗದ ಒಂದು ಹಳ್ಳಿಯಾಗಿದೆ. ಪಶ್ಚಿಮ ಬಂಗಾಳದ 42 ಲೋಕಸಭಾ ಕ್ಷೇತ್ರಗಳಲ್ಲಿ ಒಂದಾದ ಬಸಿರ್ಹತ್ ನಲ್ಲಿ ಪ್ರಸ್ತುತ ಟಿಎಂಸಿ ಪ್ರತಿನಿಧಿ ಇದ್ದಾರೆ.

ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೇಖ್ ಮತ್ತು ಅವರ ಕೆಲವು ಸಹಚರರನ್ನು ಬಂಧಿಸಲಾಗಿದ್ದು, ಅವರು ಕೇಂದ್ರ ತನಿಖಾ ದಳ (ಸಿಬಿಐ) ವಶದಲ್ಲಿದ್ದಾರೆ. ಶೇಖ್ ಅವರ ವಿರುದ್ಧದ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಟಿಎಂಸಿ ಅವರನ್ನು ಅಮಾನತುಗೊಳಿಸಿದೆ.

ಸಂದೇಶ್​ಖಾಲಿಯ ಮಹಿಳೆಯರಿಗಾಗಿ ಹೋರಾಡುವುದನ್ನು ಮುಂದುವರಿಸುವುದಾಗಿ ರೇಖಾ ಹೇಳಿದ್ದಾರೆ. “ನನಗೆ ಟಿಕೆಟ್ ನೀಡಿದ ನರೇಂದ್ರ ಮೋದಿ ಮತ್ತು ಬಿಜೆಪಿಗೆ ನಾನು ಕೃತಜ್ಞನಾಗಿದ್ದೇನೆ. ನಾನು ಯಾವಾಗಲೂ ಸಂದೇಶ್​​ಖಾಲಿಯ ಮಹಿಳೆಯರೊಂದಿಗೆ ನಿಲ್ಲುತ್ತೇನೆ ಮತ್ತು ಅವರಿಗಾಗಿ ಪ್ರತಿಭಟಿಸುತ್ತೇನೆ. ನಾನು ಅವರ ಧ್ವನಿಯಾಗುತ್ತೇನೆ” ಎಂದು ಅವರು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Drought Relief: 3,454 ಕೋಟಿ ರೂ. ಬರ ಪರಿಹಾರ; ‘ಅರೆಕಾಸಿನ ಮಜ್ಜಿಗೆ’ ಎಂದ ಸಿದ್ದರಾಮಯ್ಯ!

Drought Relief: ಕರ್ನಾಟಕಕ್ಕೆ ಕೇಂದ್ರ ಸರ್ಕಾರವು ಕೊನೆಗೂ ಬರ ಪರಿಹಾರ ಬಿಡುಗಡೆ ಮಾಡಿದೆ. ರಾಜ್ಯಕ್ಕೆ ಒಟ್ಟು 3,454 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಇದರೊಂದಿಗೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದ ಕರ್ನಾಟಕ ಸರ್ಕಾರಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ. 18,171 ಕೋಟಿ ರೂ. ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಹಾಗಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Drought Relief
Koo

ಕಲಬುರಗಿ: ಕರ್ನಾಟಕ ಸರ್ಕಾರವು ಬರ ಪರಿಹಾರಕ್ಕಾಗಿ ಸುಪ್ರೀಂ ಕೋರ್ಟ್‌ (Supreme Court) ಮೊರೆ ಹೋದ ಬಳಿಕ ಕೊನೆಗೂ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ (Drought Relief) ನೀಡಿದೆ. ಬರ ಪರಿಹಾರ ಬಿಡುಗಡೆ ಮಾಡಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಮೊದಲ ಪ್ರತಿಕ್ರಿಯೆ ನೀಡಿದ್ದು, “ಕೇಂದ್ರ ಸರ್ಕಾರವು ನಾವು ಕೇಳಿದ್ದಕ್ಕಿಂತ ತುಂಬ ಕಡಿಮೆ ಹಣ ಬಿಡುಗಡೆ ಮಾಡಿದೆ. ಈ ಕುರಿತು ಅಧಿಕಾರಿಗಳ ಜತೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದರು.

“ರಾಜ್ಯದಲ್ಲಿ 35 ಸಾವಿರ ಕೋಟಿ ರೂ. ಮೊತ್ತದ ಬೆಳೆ ನಷ್ಟವಾಗಿದೆ. 48 ಸಾವಿರ ಹೆಕ್ಟೇರ್‌ ಬೆಳೆ ನಾಶ ಆಗಿದೆ. 223 ತಾಲೂಕುಗಳು ಬರಪೀಡಿತ ಎಂಬುದಾಗಿ ಘೋಷಣೆ ಮಾಡಿದ್ದೇವೆ. ಹಾಗಾಗಿ, ನಾವು ಕೇಂದ್ರ ಸರ್ಕಾರಕ್ಕೆ 18,172 ಕೋಟಿ ರೂ. ಪರಿಹಾರ ಕೇಳಿದ್ದೆವು. ಆದರೆ, ಈಗ ಕೇಂದ್ರ ಸರ್ಕಾರವು ನಾವು ಕೇಳಿದ ನಾಲ್ಕನೇ ಒಂದು ಭಾಗದಷ್ಟು ಮಾತ್ರ ಪರಿಹಾರ ನೀಡಿದೆ. ಇದು ತುಂಬ ಕಡಿಮೆ ಆಯಿತು. ಈ ಕುರಿತು ಅಧಿಕಾರಿಗಳ ಜತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂಬುದಾಗಿ ಕಲಬುರಗಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ತಿಳಿಸಿದರು.

ಲೋಕಸಭೆ ಚುನಾವಣೆ ಕುರಿತು ಮಾತನಾಡಿದ ಅವರು, “ಕರ್ನಾಟಕದಲ್ಲಿ ನಿನ್ನೆ (ಏಪ್ರಿಲ್‌ 26) ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಮತದಾನವಾಗಿದೆ ಎಂಬುದಾಗಿ ವರದಿ ತಿಳಿಸಿದೆ. ಕರ್ನಾಟಕ ಸರ್ಕಾರ ಘೋಷಿಸಿದ ಐದು ಗ್ಯಾರಂಟಿಗಳು ಜನ ನಮ್ಮ ಮೇಲೆ ಹೆಚ್ಚು ವಿಶ್ವಾಸ ಇರಿಸಲು ಕಾರಣವಾಗಿದೆ. ಹಾಗಾಗಿ, ಎಲ್ಲ ಕ್ಷೇತ್ರಗಳಲ್ಲೂ ನಮಗೆ ಮುನ್ನಡೆ ಸಿಗುವುದು ನಿಶ್ಚಿತ” ಎಂದು ಹೇಳಿದರು. ನರೇಂದ್ರ ಮೋದಿ ಅಬ್ಬರದ ಭಾಷಣ, ಕಾಂಗ್ರೆಸ್‌ ವಿರುದ್ಧ ಟೀಕೆಗಳ ಕುರಿತು ಮಾತನಾಡಿದ ಅವರು, “ಪ್ರಧಾನಿಯವರಿಗೆ ಸುಳ್ಳು ಹೇಳುವುದು ರೂಢಿಯಾಗಿದೆ. ಆ ಸುಳ್ಳುಗಳನ್ನು ಜನ ಇನ್ನು ನಂಬುವುದಿಲ್ಲ” ಎಂದು ಕುಟುಕಿದರು.

ಮಲತಾಯಿ ಧೋರಣೆ ಎಂದ ಕೃಷ್ಣ ಭೈರೇಗೌಡ

ಕೇಂದ್ರ ಸರ್ಕಾರವು ಕಡಿಮೆ ಮೊತ್ತದ ಬರ ಪರಿಹಾರ ಬಿಡುಗಡೆ ಮಾಡಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯದಲ್ಲಿ 200ಕ್ಕೂ ಅಧಿಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಇಷ್ಟಿದ್ದರೂ ಕೇವಲ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ಈ ದುಡ್ಡು ಯಾವುದಕ್ಕೂ ಸಾಕಾಗುವುದಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೋದಿಗೆ ಧನ್ಯವಾದ ಎಂದ ಕರ್ನಾಟಕ ಬಿಜೆಪಿ

ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿಯು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದೆ. ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಬಿಜೆಪಿ, “ಬರ ಪರಿಹಾರ ಮಾಡಿದ ಹಿನ್ನೆಲೆಯಲ್ಲಿ ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತುಂಬು ಹೃದಯದ ಧನ್ಯವಾದಗಳು” ಎಂದಿದೆ.

ಕರ್ನಾಟಕದಲ್ಲಿ ಕಂಡು ಕೇಳರಿಯದಂತಹ ಬರ ಉಂಟಾದರೂ, ರೈತರಿಗೆ ಬಿಡಿಗಾಸು ಮಧ್ಯಂತರ ಪರಿಹಾರ ನೀಡದೆ ರಾಜ್ಯ ಕಾಂಗ್ರೆಸ್‌ ಸರ್ಕಾರವು ಸಂಪೂರ್ಣ ಓಲೈಕೆ ರಾಜಕಾರಣದಲ್ಲಿ ನಿರತವಾಗಿತ್ತು. ಆದರೆ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿಯೂ ಕನ್ನಡಿಗರ ಸಂಕಷ್ಟಕ್ಕೆ ನೆರವಾಗಿರುವ ನರೇಂದ್ರ ಮೋದಿಯವರು ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ನೀಡುವ ಮೂಲಕ ಸಮಸ್ತ ಕನ್ನಡಿಗರ ಹಿತ ಕಾಯುವ ಕೆಲಸ ಮಾಡಿದ್ದಾರೆ” ಎಂದಿದೆ.

ಇದನ್ನೂ ಓದಿ: Drought Relief: ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

Continue Reading

ಆರೋಗ್ಯ

Vampire Facial: ಹೆಣ್ಣುಮಕ್ಕಳೇ ಎಚ್ಚರ; ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ!

Vampire Facial: ವಯಸ್ಸಾದ ಮಹಿಳೆಯರು, ಸುಕ್ಕು ಗಟ್ಟಿದ ಚರ್ಮದ ಕಾಂತೀಯತೆಯನ್ನು ಸೂಜಿಯ ಮೂಲಕವೇ ಹೆಚ್ಚಿಸುವುದು ಇದರ ಪ್ರಮುಖ ವಿಧಾನವಾಗಿದೆ. ಚರ್ಮದಲ್ಲಿ ಕಾಲಜಿನ್‌ ಉತ್ಪಾದನೆ ಹೆಚ್ಚಿಸಿ, ಚರ್ಮವು ಹೊಳೆಯುವಂತೆ ಮಾಡುವುದೇ ರಕ್ತಪಿಶಾಚಿ ಫೇಶಿಯಲ್‌ ಆಗಿದೆ. ಆದರೆ, ಇದು ಮಾರಣಾಂತಿಕ ಕಾಯಿಲೆಗಳಿಗೆ ದಾರಿ ಮಾಡಿಕೊಡುತ್ತಿರುವುದು ಆತಂಕ ಹೆಚ್ಚಿಸಿದೆ.

VISTARANEWS.COM


on

Vampire Facial
Koo

ನವದೆಹಲಿ: ಹೆಣ್ಣುಮಕ್ಕಳಿಗೆ ಸೌಂದರ್ಯದ (Beauty) ಬಗ್ಗೆ ಹೆಚ್ಚು ಕಾಳಜಿ ಇರುತ್ತದೆ. ಹೆಚ್ಚು ವಯಸ್ಸಾದರೂ 18ರ ಯುವತಿಯಂತೆ ಕಾಣಲು ಹಲವು ಕಸರತ್ತು ಮಾಡುತ್ತಾರೆ. ಇನ್ನು ನಗರ ಹಾಗೂ ಮಹಾನಗರಗಳಲ್ಲಂತೂ ಬ್ಯೂಟಿ ಪಾರ್ಲರ್‌ಗಳಿಗೆ ನಿಯಮಿತವಾಗಿ ತೆರಳಿ ಮೇಕಪ್‌, ಫೇಶಿಯಲ್‌ (Facial) ಮಾಡಿಸಿಕೊಳ್ಳುತ್ತಾರೆ. ಆದರೆ, ಅಮೆರಿಕದಲ್ಲಿ ಸ್ಪಾಗಳಲ್ಲಿ ಫೇಶಿಯಲ್‌ ಮಾಡಿಸಿಕೊಂಡ ಮೂವರು ಮಹಿಳೆಯರಿಗೆ ಎಚ್‌ಐವಿ ಸೋಂಕು (HIV) ತಗುಲಿದೆ ಎಂಬ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ವ್ಯಾಂಪೈರ್‌ ಫೇಶಿಯಲ್‌ (Vampire Facial) ಮಾಡಿಸಿಕೊಂಡ ಕಾರಣ ಇವರಿಗೆ ಎಚ್‌ಐವಿ ತಗುಲಿದೆ ಎಂಬ ಮಾಹಿತಿಯು ಅಧ್ಯಯನ ವರದಿಯಿಂದ ಲಭ್ಯವಾಗಿದೆ.

ಅಮೆರಿಕದ ನ್ಯೂ ಮೆಕ್ಸಿಕೋ ಸ್ಪಾದಲ್ಲಿ ಕಾಸ್ಮೆಟಿಕ್‌ ಇಂಜೆಕ್ಷನ್‌ ಪ್ರೊಸೀಜರ್‌ ಮೂಲಕ ನಡೆಸುವ ವ್ಯಾಂಪೈರ್‌ ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ ತಗುಲಿದೆ ಎಂದು ಅಮೆರಿಕದ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರವು ಮಾಹಿತಿ ನೀಡಿದೆ. ವ್ಯಾಂಪೈರ್‌ ಫೇಶಿಯಲ್‌ಅನ್ನು ಕಡಿಮೆ ಬೆಲೆಗೆ ಮಾಡುವುದರಿಂದ ಹೆಚ್ಚಿನ ಮಹಿಳೆಯರು, ಅದರಲ್ಲೂ 40 ವರ್ಷ ದಾಟಿದವರು ಹೆಚ್ಚು ಮಾಡಿಸಿಕೊಳ್ಳುತ್ತಾರೆ. ಆದರೆ, ಇದು ಈಗ ಮಾರಣಾಂತಿಕ ಕಾಯಿಲೆಗಳಿಗೆ ಕಾರಣವಾಗುತ್ತಿದೆ.

ಏನಿದು ವ್ಯಾಂಪೈರ್‌ ಫೇಶಿಯಲ್?‌

ವ್ಯಾಂಪೈರ್‌ ಫೇಶಿಯಲ್‌ಅನ್ನು ರಕ್ತಪಿಶಾಚಿ ಫೇಶಿಯಲ್‌ ಎಂದೂ ಕರೆಯಲಾಗುತ್ತದೆ. ಸ್ಪಾಗಳಲ್ಲಿ ಸೂಜಿ ಅಥವಾ ಇಂಜೆಕ್ಷನ್‌ ಮೂಲಕ ಮಹಿಳೆಯರ ಮುಖದ ಮೇಲಿನ ಸುಕ್ಕು ಮಾಯಮಾಡುವುದು, ಅವರು ಯುವತಿಯರಂತೆ ಮಾಡುವ ಸೌಂದರ್ಯ ವರ್ಧಕ ವಿಧಾನ ಇದಾಗಿದೆ. ಇದನ್ನು ಪ್ಲೇಟ್‌ಲೆಟ್‌ ರಿಚ್‌ ಪ್ಲಾಸ್ಮಾ (PRP) ಅಥವಾ ಪ್ಲೇಟ್‌ಲೆಟ್‌ ರಿಚ್‌ ಫೈಬ್ರಿನ್‌ (PRF) ಎಂದು ಕೂಡ ಕರೆಯಲಾಗುತ್ತದೆ.

ವಯಸ್ಸಾದ ಮಹಿಳೆಯರು, ಸುಕ್ಕು ಗಟ್ಟಿದ ಚರ್ಮದ ಕಾಂತೀಯತೆಯನ್ನು ಸೂಜಿಯ ಮೂಲಕವೇ ಹೆಚ್ಚಿಸುವುದು ಇದರ ಪ್ರಮುಖ ವಿಧಾನವಾಗಿದೆ. ಚರ್ಮದಲ್ಲಿ ಕಾಲಜಿನ್‌ ಉತ್ಪಾದನೆ ಹೆಚ್ಚಿಸಿ, ಚರ್ಮವು ಹೊಳೆಯುವಂತೆ ಮಾಡುವುದೇ ರಕ್ತಪಿಶಾಚಿ ಫೇಶಿಯಲ್‌ ಆಗಿದೆ. ಇದನ್ನು ಭಾರತದ ಪ್ರಮುಖ ನಗರಗಳು ಸೇರಿ ಜಗತ್ತಿನಾದ್ಯಂತ ಸ್ಪಾಗಳಲ್ಲಿ ಮಾಡುತ್ತಾರೆ. ಆದರೆ, ಈ ಫೇಶಿಯಲ್‌ ಈಗ ಮಹಿಳೆಯರ ಪ್ರಾಣಕ್ಕೇ ಕುತ್ತು ತರುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಹೆಣ್ಣುಮಕ್ಕಳ ಕೈಗಳಿಂದ ರಕ್ತವನ್ನು ತೆಗೆದು, ಅದರಿಂದ ಪ್ಲೇಟ್‌ಲೆಟ್‌ಗಳನ್ನು ವಿಗಂಡಣೆ ಮಾಡಿ, ಆ ರಕ್ತವನ್ನು ಸಣ್ಣ ಸೂಜಿಯ ಮೂಲಕ ಮುಖಕ್ಕೆ ಅಳವಡಿಸುತ್ತಾರೆ. ಇದರಿಂದ ಚರ್ಮವು ಹೊಳೆಯುತ್ತದೆ. ಸುಕ್ಕುಗಳು ಮಾಯವಾಗುತ್ತಿವೆ. ಇದು ಸುಲಭ ಹಾಗೂ ಅಷ್ಟೇನೂ ಹೆಚ್ಚಿನ ಹಣ ಖರ್ಚಾಗದ ಕಾರಣ ಜಾಸ್ತಿ ಮಹಿಳೆಯರು ಈ ಫೇಶಿಯಲ್‌ ಮೊರೆಹೋಗುತ್ತಿದ್ದಾರೆ ಎನ್ನಲಾಗಿದೆ. ಇಂತಹ ಫೇಶಿಯಲ್‌ ಮಾಡಿಸಿಕೊಳ್ಳುವ ಮೊದಲು ಹೆಣ್ಣುಮಕ್ಕಳು ಎಚ್ಚರಿಕೆಯಿಂದ ಇರಬೇಕು ಎಂದು ಅಮೆರಿಕದ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Sweet Potatoes: ಗೆಣಸಿಗೆ ಮಧುಮೇಹ ನಿಯಂತ್ರಿಸುವ, ಕ್ಯಾನ್ಸರ್ ತಡೆಯುವ ಸಾಮರ್ಥ್ಯವಿದೆ!

Continue Reading

ಪ್ರಮುಖ ಸುದ್ದಿ

Yogi Adityanath: “ಗೋಮಾಂಸ ಸೇವಿಸುವ ಹಕ್ಕು….” ಕಾಂಗ್ರೆಸ್‌ ವಿರುದ್ಧ ಯೋಗಿ ಇನ್ನೊಂದು ಆರೋಪ

Yogi Adityanath: ಮೊರಾದಾಬಾದ್‌ನಲ್ಲಿ ಲೋಕಸಭೆ ಚುನಾವಣೆ (Lok Sabha Election 2024) ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, “ಕಾಂಗ್ರೆಸ್‌ ಪಕ್ಷವು ಅಲ್ಪಸಂಖ್ಯಾತರಿಗೆ ಅವರ ಆಯ್ಕೆಯ ಆಹಾರವನ್ನು ತಿನ್ನುವ ಸ್ವಾತಂತ್ರ್ಯವನ್ನು ನೀಡಲು ಬಯಸುತ್ತದೆ. ಅಂದರೆ ಅವರು ಗೋಹತ್ಯೆಗೆ ಅವಕಾಶ ನೀಡುವ ಬಗ್ಗೆ ಮಾತನಾಡುತ್ತಿದ್ದಾರೆ” ಎಂದು ಹೇಳಿದರು.

VISTARANEWS.COM


on

Yogi Adithyanatha
Koo

ಲಖನೌ: “ಕಾಂಗ್ರೆಸ್ (Congress) ಪಕ್ಷವು ಅಲ್ಪಸಂಖ್ಯಾತರಿಗೆ (minorities) ಗೋಮಾಂಸ (beef) ತಿನ್ನುವ ಹಕ್ಕನ್ನು ನೀಡಲು ಬಯಸುತ್ತಿದೆ” ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (UP CM Yogi Adityanath) ಶುಕ್ರವಾರ ಟೀಕಿಸಿದ್ದಾರೆ. “ಈ ನಾಚಿಕೆಯಿಲ್ಲದ ಜನರು ಗೋಮಾತೆಗಳನ್ನು ಕಟುಕರ ಕೈಗೆ ಒಪ್ಪಿಸಲು ಬಯಸುತ್ತಿದ್ದಾರೆ” ಎಂದು ಅವರು ಆಕ್ರೋಶಿಸಿದ್ದಾರೆ.

ಮೊರಾದಾಬಾದ್‌ನಲ್ಲಿ ಲೋಕಸಭೆ ಚುನಾವಣೆ (Lok Sabha Election 2024) ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, “ಕಾಂಗ್ರೆಸ್‌ ಪಕ್ಷವು ಅಲ್ಪಸಂಖ್ಯಾತರಿಗೆ ಅವರ ಆಯ್ಕೆಯ ಆಹಾರವನ್ನು ತಿನ್ನುವ ಸ್ವಾತಂತ್ರ್ಯವನ್ನು ನೀಡಲು ಬಯಸುತ್ತದೆ. ಅಂದರೆ ಅವರು ಗೋಹತ್ಯೆಗೆ ಅವಕಾಶ ನೀಡುವ ಬಗ್ಗೆ ಮಾತನಾಡುತ್ತಿದ್ದಾರೆ” ಎಂದು ಹೇಳಿದರು.

ಸಂಭಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರಮೇಶ್ವರ್ ಲಾಲ್ ಸೈನಿ ಪರ ರ್ಯಾಲಿಯಲ್ಲಿ ಯೋಗಿ ಆದಿತ್ಯನಾಥ್ ಮಾತನಾಡಿದರು. “ಸ್ತ್ರೀಧನ (ಮಹಿಳೆಯರ ಚಿನ್ನಾಭರಣಗಳು) ಅನ್ನು ಕಾಂಗ್ರೆಸ್‌ ಕಸಿದುಕೊಂಡು ರೊಹಿಂಗ್ಯಾ ಮತ್ತು ಬಾಂಗ್ಲಾದೇಶಿ ನುಸುಳುಕೋರರಿಗೆ ಹಂಚಲಿದೆ” ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರ “ಪಿತ್ರಾರ್ಜಿತ ತೆರಿಗೆ” ಆರೋಪವನ್ನು ಉಲ್ಲೇಖಿಸಿದ ಅವರು, “ಕಾಂಗ್ರೆಸ್ ಜನರ ಆಸ್ತಿಯ ಎಕ್ಸ್-ರೇ ಮಾಡುವ ಭರವಸೆ ನೀಡಿದೆ” ಎಂದು ಆರೋಪಿಸಿದರು.

“ಇದರರ್ಥ, ಯಾರದಾದರೂ ಮನೆಯಲ್ಲಿ ನಾಲ್ಕು ಕೋಣೆಗಳಿದ್ದರೆ, ಅದರಲ್ಲಿ ಎರಡನ್ನು ಅವರು ಕಸಿದುಕೊಳ್ಳುತ್ತಾರೆ. ಅಷ್ಟೇ ಅಲ್ಲ, ಕಾಂಗ್ರೆಸ್ ಮಹಿಳೆಯರ ಆಭರಣಗಳನ್ನು ಸ್ವಾಧೀನಪಡಿಸಿಕೊಳ್ಳುತ್ತದೆ ಎಂದು ಹೇಳುತ್ತದೆ. ಇದನ್ನು ದೇಶ ಎಂದಿಗೂ ಒಪ್ಪಿಕೊಳ್ಳುವುದಿಲ್ಲ” ಎಂದು ಅವರು ಹೇಳಿದರು. “ಕರ್ನಾಟಕದಲ್ಲಿ SC/ST/OBC ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಪ್ರಯತ್ನಿಸಿದೆ. ಆ ಪಕ್ಷವು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಕೋಟಾದಿಂದ ಮುಸ್ಲಿಮರಿಗೆ 6 ಪ್ರತಿಶತ ಮೀಸಲಾತಿ ನೀಡುತ್ತದೆ” ಎಂದು ಪ್ರತಿಪಾದಿಸಿದರು.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ಎಂಬ ವರದಿಗಳನ್ನು ಉಲ್ಲೇಖಿಸಿದ ಯೋಗಿ ಆದಿತ್ಯನಾಥ್, “ಅವರು ರಾಮನ ಅಸ್ತಿತ್ವವನ್ನು ಪ್ರಶ್ನಿಸುವವರು. ಅವರ ಸರ್ಕಾರ ಇದ್ದಾಗ ಭಗವಾನ್ ರಾಮನ ಅಸ್ತಿತ್ವವನ್ನು ಪ್ರಶ್ನಿಸುತ್ತಿದ್ದರು. ಇದು ಅವರ ದ್ವಂದ್ವ ನೀತಿಗೆ ಉದಾಹರಣೆಯಾಗಿದೆ” ಎಂದಿದ್ದಾರೆ.

ಈ ವಾರದ ಆರಂಭದಲ್ಲಿ ಯೋಗಿ ಆದಿತ್ಯನಾಥ್ ಅವರು, ದೇಶದ ಮೇಲೆ ಶರಿಯಾ ಕಾನೂನನ್ನು ಹೇರಲು ಕಾಂಗ್ರೆಸ್ ಬಯಸಿದೆ ಎಂದು ಹೇಳಿದ್ದರು. “ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ದೇಶಕ್ಕೆ ದ್ರೋಹ ಬಗೆದಿವೆ. ಮತ್ತೊಮ್ಮೆ ತಮ್ಮ ಸುಳ್ಳು ಪ್ರಣಾಳಿಕೆಯೊಂದಿಗೆ ನಿಮ್ಮ ಬಳಿಗೆ ಬಂದಿವೆ. ನೀವು ಕಾಂಗ್ರೆಸ್‌ನ ಪ್ರಣಾಳಿಕೆಯನ್ನು ನೋಡಿದರೆ, ಅವರು ಸರ್ಕಾರ ರಚಿಸಿದರೆ ಶರಿಯಾ ಕಾನೂನನ್ನು ಜಾರಿಗೆ ತರಲು ಉದ್ದೇಶಿಸಿರುವುದು ಗೊತ್ತಾಗುತ್ತದೆ” ಎಂದು ಯೋಗಿ ಆರೋಪಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌ ಅಧಿಕಾರಕ್ಕೆ ಬಂದೆ ದೇಶದಲ್ಲಿ ಶರಿಯಾ ಕಾನೂನು ಜಾರಿ; ಯೋಗಿ ಆದಿತ್ಯನಾಥ್ ವಾಗ್ದಾಳಿ

Continue Reading

ಕರ್ನಾಟಕ

Drought Relief: ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

Drought Relief: ಕರ್ನಾಟಕದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಆದರೆ, ಕೇಂದ್ರ ಸರ್ಕಾರ ಸಕಾಲಕ್ಕೆ ಬಿಡುಗಡೆ ಮಾಡದ ಕಾರಣ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿತ್ತು. ಅದರಂತೆ, ಕೇಂದ್ರ ಸರ್ಕಾರವು ಈಗ ಬರ ಪರಿಹಾರ ಘೋಷಣೆ ಮಾಡಿದೆ.

VISTARANEWS.COM


on

Drought Relief
Koo

ಬೆಂಗಳೂರು: ಕರ್ನಾಟಕಕ್ಕೆ ಕೇಂದ್ರ ಸರ್ಕಾರವು (Centra Government) ಕೊನೆಗೂ ಬರ ಪರಿಹಾರ (Drought Relief) ಬಿಡುಗಡೆ ಮಾಡಿದೆ. ರಾಜ್ಯಕ್ಕೆ ಒಟ್ಟು 3,454 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಇದರೊಂದಿಗೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದ ಕರ್ನಾಟಕ ಸರ್ಕಾರಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ. 18,171 ಕೋಟಿ ರೂ. ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಈಗ ಕೇಂದ್ರ ಸರ್ಕಾರವು ಪರಿಶೀಲನೆ ನಡೆಸಿ 3,454 ಕೋಟಿ ರೂ. ಬಿಡುಗಡೆ ಮಾಡಿದೆ.

ಕರ್ನಾಟಕದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಆದರೆ, ಕೇಂದ್ರ ಸರ್ಕಾರ ಸಕಾಲಕ್ಕೆ ಬಿಡುಗಡೆ ಮಾಡದ ಕಾರಣ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿತ್ತು. ಅದರಂತೆ, ಕೇಂದ್ರ ಸರ್ಕಾರವು ಈಗ ಬರ ಪರಿಹಾರ ಘೋಷಣೆ ಮಾಡಿದೆ. ಹಾಗೆಯೇ, ನೆರೆ ರಾಜ್ಯವಾದ ತಮಿಳುನಾಡಿಗೆ 275 ಕೋಟಿ ರೂ. ನೆರೆ ಪರಿಹಾರ ಬಿಡುಗಡೆ ಮಾಡಿದೆ.

ಬರ ಪರಿಹಾರ ನೀಡಲು ಒಂದು ವಾರ ಬೇಕು ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿತ್ತು. “ಒಂದು ವಾರದಲ್ಲಿ ಬರ ಪರಿಹಾರದ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಹಾಗಾಗಿ, ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯವು ಒಂದು ವಾರ ಸಮಯಾವಕಾಶ ನೀಡಬೇಕು” ಎಂದು ಅಟಾರ್ನಿ ಜನರಲ್‌ ಆರ್‌.ವೆಂಕಟರಮಣಿ ಅವರು ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಕೇಂದ್ರ ಸರ್ಕಾರದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು, ಏಪ್ರಿಲ್‌ 29ಕ್ಕೆ ವಿಚಾರಣೆ ಮುಂದೂಡಿತ್ತು. ಈಗ ವಿಚಾರಣೆಗೂ ಮೊದಲೇ ಬರ ಪರಿಹಾರ ಬಿಡುಗಡೆ ಮಾಡಿದೆ.

ಕರ್ನಾಟಕಕ್ಕೆ ಬರ ಪರಿಹಾರ ವಿತರಣೆ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ತೀವ್ರ ಜಟಾಪಟಿ ಉಂಟಾಗಿತ್ತು. ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಅನ್ಯಾಯ ಮಾಡಿತ್ತು. ತೆರಿಗೆ ಪಾಲು ನೀಡದ ಕೇಂದ್ರ ಸರ್ಕಾರವು ಬರ ಪರಿಹಾರವನ್ನೂ ನೀಡದೆ ಅನ್ಯಾಯ ಮಾಡುತ್ತಿದೆ. ಇನ್ನಾದರೂ ಬರ ಪರಿಹಾರ ನೀಡಬೇಕು ಎಂಬುದಾಗಿ ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಆಗ್ರಹಿಸಿತ್ತು. ಕೊನೆಗೆ ನಮಗೆ ಬರ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕು ಎಂಬುದಾಗಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು.

ಕೆಲ ದಿನಗಳ ಹಿಂದಷ್ಟೇ ಕರ್ನಾಟಕ ಸರ್ಕಾರದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ಕೇಂದ್ರ ಸರ್ಕಾರವು ಒಕ್ಕೂಟ ವ್ಯವಸ್ಥೆಯ ತತ್ವಗಳನ್ನು ಪಾಲಿಸಬೇಕು ಎಂದಿತ್ತು. “ಕೇಂದ್ರ ಸರ್ಕಾರವು ಒಕ್ಕೂಟ ವ್ಯವಸ್ಥೆಯ ತತ್ವಗಳನ್ನು ಪಾಲಿಸಬೇಕು. ಎರಡು ವಾರಗಳಲ್ಲಿ ಬರ ಪರಿಹಾರದ ಕುರಿತು ಉತ್ತರ ನೀಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಧ್ಯೆ ಎಂದಿಗೂ ಸ್ಪರ್ಧೆ ಇರಬಾರದು. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯ ಸರ್ಕಾರಗಳ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಬೇಕು. ಇತ್ತೀಚೆಗೆ ಹಲವು ರಾಜ್ಯ ಸರ್ಕಾರಗಳು ಪರಿಹಾರಕ್ಕಾಗಿ ನ್ಯಾಯಾಲಯದ ಮೊರೆ ಹೋಗುತ್ತಿವೆ. ಇಂತಹ ಬೆಳವಣಿಗೆಗಳು ಸರಿಯಲ್ಲ” ಎಂದು ತಿಳಿಸಿತ್ತು.

ಇದನ್ನೂ ಓದಿ: Drought Relief: ಬರ ಪರಿಹಾರ ನೀಡಲು ಕೇಂದ್ರ ಒಪ್ಪಿಗೆ; ನಮ್ಮ ಹೋರಾಟಕ್ಕೆ ಮೊದಲ ಹಂತದ ಜಯ ಎಂದ ಸಿಎಂ

Continue Reading
Advertisement
gold rate today beauty
ಚಿನ್ನದ ದರ2 mins ago

Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಚಿನ್ನದ ಬೆಲೆ ಇಂದು ಹೀಗಿವೆ; ತುಸುವೇ ಏರಿಕೆ

Drought Relief
ಕರ್ನಾಟಕ3 mins ago

Drought Relief: 3,454 ಕೋಟಿ ರೂ. ಬರ ಪರಿಹಾರ; ‘ಅರೆಕಾಸಿನ ಮಜ್ಜಿಗೆ’ ಎಂದ ಸಿದ್ದರಾಮಯ್ಯ!

Rakshit Shetty Richard Anthony Pre Production
ಸ್ಯಾಂಡಲ್ ವುಡ್8 mins ago

Rakshit Shetty: ʻರಿಚರ್ಡ್​ ಆಂಟನಿʼಯಲ್ಲಿ ಕರಾವಳಿ ಕಲಾವಿದರಿಗೆ ಮೊದಲ ಆದ್ಯತೆ ಅಂದ್ರಾ ರಕ್ಷಿತ್‌ ಶೆಟ್ಟಿ?

Krishna Mukherjee accuses Shubh Shagun producer
ಕಿರುತೆರೆ9 mins ago

Krishna Mukherjee: ಮೇಕಪ್‌ ರೂಮ್‌ನಲ್ಲಿ ಕೂಡಿ ಹಾಕಿದ್ರು, ಬಟ್ಟೆ ಬದಲಿಸಲೂ ಬಿಡಲಿಲ್ಲ; ʻನಾಗಿಣ್-3′ ಖ್ಯಾತ ನಟಿಯ ಅಳಲು!

ದೇಶ28 mins ago

Trinamool Congress: ಮಮತಾ ಬ್ಯಾನರ್ಜಿಯನ್ನು ಅರೆಸ್ಟ್‌ ಮಾಡಿ; ಟಿಎಂಸಿ ಉಗ್ರ ಸಂಘಟನೆ ಎಂದು ಘೋಷಿಸಿ-ಬಿಜೆಪಿ ಆಗ್ರಹ

road Accident in kolar evm
ಕೋಲಾರ38 mins ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Vampire Facial
ಆರೋಗ್ಯ51 mins ago

Vampire Facial: ಹೆಣ್ಣುಮಕ್ಕಳೇ ಎಚ್ಚರ; ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ!

Yogi Adithyanatha
ಪ್ರಮುಖ ಸುದ್ದಿ53 mins ago

Yogi Adityanath: “ಗೋಮಾಂಸ ಸೇವಿಸುವ ಹಕ್ಕು….” ಕಾಂಗ್ರೆಸ್‌ ವಿರುದ್ಧ ಯೋಗಿ ಇನ್ನೊಂದು ಆರೋಪ

Road Accident in Bengaluru
ಬೆಂಗಳೂರು1 hour ago

Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ ಆಂಬ್ಯುಲೆನ್ಸ್‌ ಚಾಲಕ; ಸರಣಿ ಅಪಘಾತಕ್ಕೆ ಕಾರುಗಳು ಜಖಂ, ಗರ್ಭಿಣಿ ಸೇಫ್

Dhanush Gowda Wedding With Sanjana Photos
ಕಿರುತೆರೆ1 hour ago

Dhanush Gowda:  ವೈವಾಹಿಕ ಜೀವನಕ್ಕೆ ಕಾಲಿಟ್ಟ ʻಗೀತಾʼ ಧಾರಾವಾಹಿ ನಟ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

road Accident in kolar evm
ಕೋಲಾರ38 mins ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ8 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

ಟ್ರೆಂಡಿಂಗ್‌