PM Narednra Modi: ಶಿವಮೊಗ್ಗದ ಮೋದಿ ಸಭೆಯಲ್ಲಿ 3 ಲಕ್ಷ ಜನ ಭಾಗಿ, ಈ ದಾರಿಗಳು ಇಂದು ಬಂದ್‌, ಗಮನಿಸಿ - Vistara News

ಪ್ರಮುಖ ಸುದ್ದಿ

PM Narednra Modi: ಶಿವಮೊಗ್ಗದ ಮೋದಿ ಸಭೆಯಲ್ಲಿ 3 ಲಕ್ಷ ಜನ ಭಾಗಿ, ಈ ದಾರಿಗಳು ಇಂದು ಬಂದ್‌, ಗಮನಿಸಿ

PM Narednra Modi: ಮೂರು ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ. ಸುತ್ತಮುತ್ತಲಿನ ಜಿಲ್ಲೆಯ ಜನರು ಕೂಡ ಆಗಮಿಸುತ್ತಿದ್ದಾರೆ. ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ” ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದ್ದಾರೆ.

VISTARANEWS.COM


on

Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಮಗಳೂರು: ಶಿವಮೊಗ್ಗಕ್ಕೆ ಇಂದು ಲೋಕಸಭೆ ಚುನಾವಣೆ (Lok Sabha Election 2024) ಪ್ರಚಾರಾರ್ಥ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಮೋದಿ ಸಾಗಲಿರುವ 10 ಕಿ.ಮೀ ರಸ್ತೆಯನ್ನು ಸಾರ್ವಜನಿಕರ ಬಳಕೆಗೆ ಬಂದ್ ಮಾಡಲಾಗಿದೆ.

ಶಿವಮೊಗ್ಗ ನಗರದಾದ್ಯಂತ ಪೊಲೀಸ್ ಬಿಗಿ ಭದ್ರತೆ ವಿಧಿಸಲಾಗಿದ್ದು, ವಿಮಾನ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವವರೆಗೂ ರಸ್ತೆ ಬಂದ್ ಮಾಡಲಾಗುತ್ತಿದೆ. ಬೆಳಗ್ಗೆ 11 ಗಂಟೆಯ ಬಳಿಕ ಸಾರ್ವಜನಿಕರ ವಾಹನಗಳ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಸಹ್ಯಾದ್ರಿ ಸರ್ಕಲ್, ಹೊಳೆ ಸ್ಟಾಪ್, ಅಮೀರ್ ಅಹ್ಮದ್ ಸರ್ಕಲ್, ಶಿವಪ್ಪ ನಾಯಕ ಸರ್ಕಲ್, ಕೆಎಸ್ಆರ್‌ಟಿಸಿ ಬಸ್‌ಸ್ಟ್ಯಾಂಡ್ ಸರ್ಕಲ್, ಸರ್ಕ್ಯೂಟ್ ಹೌಸ್ ಸರ್ಕಲ್‌ಗಳಲ್ಲಿ ಓಡಾಟ ನಿರ್ಬಂಧಿಸಲಾಗಿದೆ.

ರಸ್ತೆಯ ಎರಡು ಬದಿಗಳಿಗೂ ಬ್ಯಾರಿಕೇಡ್ ಹಾಕಿ ಮುನ್ನೆಚ್ಚರಿಕೆ ನೀಡಲಾಗಿದ್ದು, ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷೆ, ಸಾರ್ವಜನಿಕರ ಅಗತ್ಯ ಕಾರ್ಯಗಳಿಗೆ ಓಡಾಟಕ್ಕೆ ಸದ್ಯಕ್ಕೆ ಅವಕಾಶ ನೀಡಲಾಗಿದೆ. 11 ಗಂಟೆಯ ಬಳಿಕ 10 ಕಿ.ಮೀ ಮಾರ್ಗ ಸಂಪೂರ್ಣ ಬಂದ್ ಆಗಲಿದೆ.

ಮೋದಿಯವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್ ಬಳಿ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಎರಡು ಗೇಟ್‌ಗಳ ಬಳಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮೂರು ಹಂತಗಳಲ್ಲಿ ಪರಿಶೀಲನೆ ನಡೆಸುತ್ತಿರುವ ಪೊಲೀಸರು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಿದ್ದಾರೆ.

ಮೋದಿಯವರು ಎಂಟ್ರಿ ಕೊಡುವ ಗೇಟ್‌ನಲ್ಲಿ ಓಡಾಟ ನಿರ್ಬಂಧಿಸಲಾಗಿದೆ. 10 ಗಂಟೆ ನಂತರ ವಿನೋಬಾ ರಸ್ತೆಯನ್ನು ಬಂದ್ ಮಾಡಲಿದ್ದಾರೆ. ಅಂಗಡಿ ಮುಂಗಟ್ಟುಗಳನ್ನು ಸಹ ಬಂದ್ ಮಾಡಿಸಲಾಗಿದೆ.

ಮೋದಿ ಬರುತ್ತಿರುವುದು ಶಕ್ತಿ: ರಾಘವೇಂದ್ರ

ಶಿವಮೊಗ್ಗದಲ್ಲಿ ಕಾರ್ಯಕ್ರಮ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದ ಸಂಸದ ರಾಘವೇಂದ್ರ, ಪ್ರಧಾನಿ ಮೋದಿ ಬರುತ್ತಿರುವುದು ನಮಗೆ ಶಕ್ತಿ ಬಂದ ಹಾಗೆ ಆಗಿದೆ ಎಂದು ಹೇಳಿದ್ದಾರೆ. ವಿಸ್ತಾರ ನ್ಯೂಸ್‌ಗೆ ಅವರು ಹೇಳಿಕೆ ನೀಡಿದ್ದು, “ನಮ್ಮ ಪುಣ್ಯ, ಮೊದಲು ಶಿವಮೊಗ್ಗ ಜಿಲ್ಲೆಯಿಂದ ಚುನಾವಣಾ ಪ್ರಚಾರ ಆರಂಭವಾಗಿದೆ. ನಮ್ಮ ತುಂಗೆಯ ನಾಡಿಗೆ ಹೆಮ್ಮೆಯ ಪ್ರಧಾನಿ ಬರುತ್ತಿದ್ದಾರೆ. ಕಾರ್ಯಕ್ರಮಕ್ಕೆ ತುಂಬಾ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ” ಎಂದಿದ್ದಾರೆ.

“ಮೂರು ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ. ಸುತ್ತಮುತ್ತಲಿನ ಜಿಲ್ಲೆಯ ಜನರು ಕೂಡ ಆಗಮಿಸುತ್ತಿದ್ದಾರೆ. ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ವೇದಿಕೆ ಕೂಡ ಅಚ್ಚುಕಟ್ಟಾಗಿ ಸಿದ್ಧವಾಗಿದೆ. ಈ ಬಾರಿಯೂ ಶಿವಮೊಗ್ಗ ಕ್ಷೇತ್ರದಲ್ಲಿ ನಾವು ಗೆಲ್ಲುತ್ತವೆ. ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರದಲ್ಲೂ ಗೆಲ್ಲಲು ಎಲ್ಲ ಪ್ರಯತ್ನ ನಡೆಯುತ್ತಿದೆ. ರಾಜ್ಯ ಹಾಗೂ ರಾಷ್ಟ್ರ ನಾಯಕರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಕ್ಷೇತ್ರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: PM Narendra Modi: ಇಂದು ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಅಬ್ಬರದ ಪ್ರಚಾರ; ಈಶ್ವರಪ್ಪ ಬರ್ತಾರಾ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Karnataka Drought: ಬರ ಪರಿಹಾರ ಬಗ್ಗೆ ಸುಳ್ಳು ಹೇಳಿದ ಕಾಂಗ್ರೆಸ್‌; ಯುಪಿಎ ಕೊಟ್ಟಿದ್ದು ಅತಿ ಕಡಿಮೆ ಎಂದ ಎಚ್‌ಡಿಕೆ

Karnataka Drought: ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ 4,860 ಕೋಟಿ ರೂಪಾಯಿ ಕೊಟ್ಟರೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಈಗ ಕೇಂದ್ರ ಸರ್ಕಾರ 3,454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಈಗ ನೋಡಿದರೆ ನಾವು ₹18172 ಕೋಟಿ ಕೇಳಿದ್ದು ಎಂದು ಹೇಳುತ್ತಿದ್ದಾರೆ. ಇವರು ಪದೇ ಪದೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಎಚ್‌.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

VISTARANEWS.COM


on

Karnataka Drought Relief HDK accuses Congress government of lying says HD Kumarswamy
Koo

ಬೆಂಗಳೂರು: ಕರ್ನಾಟಕದ ಬರ ಪರಿಹಾರ (Karnataka Drought Relief) ವಿಷಯದಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರದಿಂದಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯ ಆಗಿದೆ. ಯುಪಿಎ ನೇತೃತ್ವದ ಕಾಂಗ್ರೆಸ್ ಸರ್ಕಾರ ಶೇ. 8ರಷ್ಟು ಬರ ಪರಿಹಾರವನ್ನು ಕೊಟ್ಟಿದ್ದರೆ, ಎನ್‌ಡಿಎ ಸರ್ಕಾರ ಈಗಿನ ಅನುದಾನವನ್ನು ಹೊರತುಪಡಿಸಿಯೇ ಶೇ. 38ರಷ್ಟು ಹಣವನ್ನು ಕರ್ನಾಟಕಕ್ಕೆ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ‌ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದರು.

ಬೆಂಗಳೂರಿನಲ್ಲಿ ಭಾನುವಾರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಅತ್ಯಲ್ಪ ಪರಿಹಾರ ಕೊಟ್ಟು ರಾಜ್ಯದ ಜನರಿಗೆ ವಂಚನೆ ಎಸಗಿದ್ದು ಯುಪಿಎ ಸರ್ಕಾರ ಎಂದು ಹೇಳಿದರು.

ಕೇಂದ್ರ ಸರ್ಕಾರ ಬರ ಪರಿಹಾರಕ್ಕಾಗಿ ಕಡಿಮೆ ಹಣ ಕೊಟ್ಟಿದೆ ಎಂಬ ಕಾಂಗ್ರೆಸ್‌ ಸರ್ಕಾರದ ಆರೋಪವನ್ನು ಟೀಕಿಸಿದ ಮಾಜಿ ಮುಖ್ಯಮಂತ್ರಿ‌ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ 4,860 ಕೋಟಿ ರೂಪಾಯಿ ಕೊಟ್ಟರೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಈಗ ಕೇಂದ್ರ ಸರ್ಕಾರ 3,454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಈಗ ನೋಡಿದರೆ ನಾವು ₹18172 ಕೋಟಿ ಕೇಳಿದ್ದು ಎಂದು ಹೇಳುತ್ತಿದ್ದಾರೆ. ಇವರು ಪದೇ ಪದೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ನನಗಿರುವ ಮಾಹಿತಿ ಪ್ರಕಾರ ಮನಮೋಹನ್ ಸಿಂಗ್ ಅವರ ಯುಪಿಎ ಸರಕಾರದ 2004ರಿಂದ 2013ರವರೆಗಿನ ಅವಧಿಯಲ್ಲಿ ವಿವಿಧ ಸಂದರ್ಭದಲ್ಲಿ ಎನ್‌ಡಿಆರ್‌ಎಫ್‌ ಮಾರ್ಗಸೂಚಿಯಂತೆ ಬರ ಪರಿಹಾರಕ್ಕಾಗಿ ಕೇವಲ ಶೇ. 8ರಷ್ಟು ಹಣ ನೀಡಿದ್ದಾರೆ. ನರೇಂದ್ರ ಮೋದಿ ಅವರು ಬಂದ ಮೇಲೆ ಅಂದರೆ, 2014ರಿಂದ ಇಲ್ಲಿಯವರೆಗೆ ಈಗ ಬಿಡುಗಡೆ ಆಗಿರುವ 3,454 ಕೋಟಿ ರೂಪಾಯಿ ಹೊರತುಪಡಿಸಿ ಶೇ. 38ರಷ್ಟು ಬರ ಪರಿಹಾರ ಹಣ ರಾಜ್ಯಕ್ಕೆ ಬಂದಿದೆ. ಕಾಂಗ್ರೆಸ್ ಸರ್ಕಾರ 8% ಕೊಟ್ಟರೆ, ಎನ್‌ಡುಎ ಸರ್ಕಾರ 38% ಹಣ ಕೊಟ್ಟಿದೆ. ಅನ್ಯಾಯ ಯಾರಿಂದ ಆಗಿದೆ ಎಂಬುದು ಇಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ ಎಂದು‌ ಎಚ್.ಡಿ. ಕುಮಾರಸ್ವಾಮಿ ಅವರು ಅಂಕಿ-ಅಂಶ ನೀಡಿದರು.

ಇವರು ಕೇಂದ್ರ ಸರ್ಕಾರದ ಸುಳ್ಳುಗಳನ್ನು ಹೇಳುತ್ತಾ ಅಪಪ್ರಚಾರ ಮಾಡುವುದನ್ನು ಬಿಟ್ಟು ಕೇಂದ್ರದಿಂದ ಬಂದಿರುವ ಹಣವನ್ನು ಸಮರ್ಪಕವಾಗಿ ಜನರಿಗೆ ಮುಟ್ಟಿಸುವ ಕೆಲಸ ಮಾಡಲಿ ಎಂದು ಎಚ್.ಡಿ. ಕುಮಾರಸ್ವಾಮಿ ಕಿವಿಮಾತು ಹೇಳಿದರು.‌

ಹಾಸನ ಪ್ರಕರಣ: ಉಪ್ಪು ತಿಂದವರು ನೀರು ಕುಡಿಯುತ್ತಾರೆ

ಹಾಸನ ಜಿಲ್ಲೆಯಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಂದ ನಡೆದಿದೆ ಎನ್ನಲಾದ ಪ್ರಕರಣದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ತನಿಖಾ ದಳ (ಎಸ್‌ಐಟಿ) ರಚನೆ ಮಾಡಿದ್ದಾರೆ. ಈ ನೆಲದ ಕಾನೂನಿನ ಪ್ರಕಾರ ಯಾರೇ ತಪ್ಪು ಮಾಡಿರಲಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: PM Narendra Modi: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 5 ವರ್ಷಕ್ಕೆ 5 ಪಿಎಂ; ಕರ್ನಾಟಕದಲ್ಲಿ ಶಿಕ್ಷಣ ನೀತಿಯಲ್ಲೂ ರಾಜಕೀಯ: ಮೋದಿ ಕಿಡಿ

ತನಿಖೆಯ ಮೂಲಕ ಎಲ್ಲ ಸತ್ಯಾಂಶಗಳು ಹೊರಗೆ ಬರಲಿ. ಯಾರೇ ತಪ್ಪೆಸಗಿದ್ದರೂ, ಅವರು ಯಾರೇ ಆಗಿದ್ದರೂ ಯಾವುದೇ ಕಾರಣಕ್ಕೂ ಅವರನ್ನು ಕ್ಷಮಿಸುವ ಪ್ರಶ್ನೆ ಬರುವುದಿಲ್ಲ. ಆದ್ದರಿಂದ ತನಿಖೆಯ ವರದಿ ಸಂಪೂರ್ಣವಾಗಿ ಹೊರ ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

Continue Reading

ಕರ್ನಾಟಕ

Delivery Boy: ಬೆಂಗಳೂರಲ್ಲಿ ವ್ಯಕ್ತಿಯ ಗುಪ್ತಾಂಗ ಮುಟ್ಟಿ ದುರ್ವರ್ತನೆ ತೋರಿದ ಡೆಲಿವರಿ ಬಾಯ್‌ ಅಹ್ಮದ್!

Delivery Boy: ಇಶಾನ್‌ ಶರ್ಮಾ ಎಂಬ ಯುವಕ ಜೆಪ್ಟೋದಲ್ಲಿ ಹಲವು ವಸ್ತುಗಳನ್ನು ಆರ್ಡರ್‌ ಮಾಡಿದ್ದಾರೆ. ಸಾಜನ್‌ ಅಹ್ಮದ್‌ ಲಷ್ಕರ್‌ ಎಂಬ ಡೆಲಿವರಿ ಬಾಯ್‌, ಇಶಾನ್‌ ಶರ್ಮಾ ಅವರ ಮನೆಬಾಗಿಲಿಗೆ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ. ವಸ್ತುಗಳನ್ನು ಡೆಲಿವರಿ ಮಾಡಿದ ಬಳಿಕ ಅವರು ಮೊದಲಿಗೆ ಯುವಕನ ಗುಪ್ತಾಂಗವನ್ನು ಸ್ಪರ್ಶಿಸಿದ್ದಾರೆ. ಯುವಕನು ಕೂಗಾಡಿದ ಬಳಿಕ ಆತನು ಅಲ್ಲಿಂದ ಕಾಲ್ಕಿತ್ತಿದ್ದಾನೆ.

VISTARANEWS.COM


on

Delivery Boy
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಡೆಲಿವರಿ ಬಾಯ್ಸ್‌ (Delivery Boy) ಆಹಾರ ಸೇರಿ ಹಲವು ವಸ್ತುಗಳನ್ನು ಮಳೆ, ಬಿಸಿಲು, ಚಳಿ, ರಾತ್ರಿ ಎನ್ನದೆ ಮನೆಬಾಗಿಲಿಗೆ ತಲುಪಿಸುವ ಮೂಲಕ ಗ್ರಾಹಕರ ಅಗತ್ಯಗಳನ್ನು ಪೂರೈಸುತ್ತಾರೆ. ಆದರೆ, ಕೆಲವು ಡೆಲಿವರಿ ಬಾಯ್‌ಗಳು ಗ್ರಾಹಕರ ಜತೆ ಜಗಳ ಆಡುವುದು, ವಾದ ಮಾಡುವುದು, ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ದುರ್ವರ್ತನೆ ತೋರುವ ಪ್ರಕರಣಗಳು ಆಗಾಗ ಕೇಳಿಬರುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ನಗರದಲ್ಲಿ ಡೆಲಿವರಿ ಬಾಯ್‌ ಒಬ್ಬ ಗ್ರಾಹಕನ ಗುಪ್ತಾಂಗ ಮುಟ್ಟಿ ದುರ್ವರ್ತನೆ ತೋರಿದ್ದಾನೆ. ಈ ಕುರಿತು ಗ್ರಾಹಕ ಇಶಾನ್‌ ಶರ್ಮಾ ಎಂಬುವರು ದೂರು ದಾಖಲಿಸಿದ್ದಾರೆ.

ಇಶಾನ್‌ ಶರ್ಮಾ ಎಂಬ ಯುವಕ ಜೆಪ್ಟೋದಲ್ಲಿ ಹಲವು ವಸ್ತುಗಳನ್ನು ಆರ್ಡರ್‌ ಮಾಡಿದ್ದಾರೆ. ಸಾಜನ್‌ ಅಹ್ಮದ್‌ ಲಷ್ಕರ್‌ ಎಂಬ ಡೆಲಿವರಿ ಬಾಯ್‌, ಇಶಾನ್‌ ಶರ್ಮಾ ಅವರ ಮನೆಬಾಗಿಲಿಗೆ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ. ವಸ್ತುಗಳನ್ನು ಡೆಲಿವರಿ ಮಾಡಿದ ಬಳಿಕ ಅವರು ಮೊದಲಿಗೆ ಯುವಕನ ಗುಪ್ತಾಂಗವನ್ನು ಸ್ಪರ್ಶಿಸಿದ್ದಾರೆ. ಆಕಸ್ಮಿಕ ಎಂದುಕೊಂಡ ಯುವಕ ಸುಮ್ಮನಾಗಿದ್ದಾರೆ. ಆದರೆ, ಎರಡನೇ ಬಾರಿಯೂ ಮುಟ್ಟಿದಾಗ ಉದ್ದೇಶಪೂರ್ವಕ ವರ್ತನೆ ಎಂಬುದು ಬಯಲಾಗಿದೆ. ಇದೇ ವೇಳೆ, ಯುವಕ ಕೂಗಿದ ಕಾರಣ ಡೆಲಿವರಿ ಬಾಯ್‌ ಅಲ್ಲಿಂದ ಕಾಲ್ಕಿತ್ತದ್ದಾನೆ ಎಂದು ಯುವಕ ತಿಳಿಸಿದ್ದಾರೆ.

ಡೆಲಿವರಿ ಬಾಯ್‌ ವರ್ತನೆ ಕುರಿತು ಇಶಾನ್‌ ಶರ್ಮಾ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೊಲೀಸರನ್ನು ಟ್ಯಾಗ್‌ ಮಾಡಿ ದೂರಿದ್ದಾರೆ. “ಜೆಪ್ಟೋದಲ್ಲಿ ನಾನು ಕೆಲ ವಸ್ತುಗಳನ್ನು ಆರ್ಡರ್‌ ಮಾಡಿದ್ದೆ. ಆದರೆ, ವಸ್ತುಗಳನ್ನು ಡೆಲಿವರಿ ಮಾಡಿದ ಆತನು ನನ್ನ ಗುಪ್ತಾಂಗವನ್ನು ಮುಟ್ಟಿದ್ದಾನೆ. ಮೊದಲಿಗೆ ಆಕಸ್ಮಿಕ ಎಂಬುದಾಗಿ ನಾನು ಸುಮ್ಮನಿದ್ದೆ. ಆದರೆ, ಆತನು ಎರಡನೇ ಬಾರಿಯೂ ಉದ್ದೇಶಪೂರ್ವಕವಾಗಿ ನನ್ನ ಗುಪ್ತಾಂಗವನ್ನು ಮುಟ್ಟಿ ಅಸಭ್ಯ ವರ್ತನೆ ತೋರಿದ್ದಾನೆ. ಈತನ ವಿರುದ್ಧ ದಯಮಾಡಿ ಕ್ರಮ ತೆಗೆದುಕೊಳ್ಳಿ” ಎಂಬುದಾಗಿ ಆರೋಪಿಸಿದ್ದಾನೆ. ಏಪ್ರಿಲ್‌ 26ರಂದು ಘಟನೆ ನಡೆದಿದೆ.

ಕೆಲ ವಾರಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಬೈಯ್ಯಪ್ಪನಹಳ್ಳಿ ಪೊಲೀಸರು ನಟೋರಿಯಸ್ ಬೈಕ್ ಕಳ್ಳನನ್ನು ಬಂಧಿಸಿದ್ದರು. ದೀಪಕ್ ಅಲಿಯಾಸ್‌ ದೀಪು ಬಂಧಿತ ಆರೋಪಿಯಾಗಿದ್ದಾನೆ. ದೀಪಕ್‌ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಈತನ ಮೇಲೆ ವಿವಿಧ ಪೊಲೀಸ್ ಠಾಣೆಯಲ್ಲಿ ಸುಮಾರು 14 ಪ್ರಕರಣ ದಾಖಲಾಗಿವೆ.

ಬೆಳಗಿನಿಂದ ಸಂಜೆವರೆಗೂ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿ, ರಾತ್ರಿ ವೇಳೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕದಿಯುತ್ತಿದ್ದ. ಕದ್ದ ಬೈಕ್‌ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ. ಬೈಕ್‌ ಮಾರಾಟಕ್ಕೂ ಮೊದಲು ದಾಖಲಾತಿಯನ್ನೆಲ್ಲ ನಂತರ ಕೊಡುತ್ತೇನೆ ಎಂದು ಯಮಾರಿಸಿ, ಕಡಿಮೆ ಬೆಲೆಗೆ ಬೈಕ್ ಮಾರುತ್ತಿದ್ದ ಎಂಬುದು ಗೊತ್ತಾಗಿತ್ತು.

ಇದನ್ನೂ ಓದಿ: Viral Video: ಐಷಾರಾಮಿ ಹಾರ್ಲೆ –ಡೇವಿಡ್ಸನ್​ ಬೈಕ್​ನಲ್ಲಿ ಫುಡ್​ ಡೆಲಿವರಿ ಕೊಟ್ಟ ಯುವಕ; ವಿಡಿಯೊ ವೈರಲ್

Continue Reading

ಉದ್ಯೋಗ

Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆ ಖಾಲಿ ಇದೆ; ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 1. ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ (Motor Vehicle Inspector)​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (KPSC Recruitment 2024). ಈ ಹಿಂದೆ ಅರ್ಜಿ ಸಲ್ಲಿಕೆಗೆ ಮೇ 21 ಕೊನೆಯ ದಿನಾಂಕ ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಹೊರಡಿಸಿದೆ. ಆಸಕ್ತರು ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 1 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

ವಯೋಮಿತಿ ಮತ್ತು ಅರ್ಜಿ ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1ರ ಅಭ್ಯರ್ಥಿಗಳಿಗೆ 5 ವರ್ಷ, ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 3 ವರ್ಷ ಮತ್ತು ಪಿಡಬ್ಲ್ಯುಡಿ / ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1/ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಮಾಜಿ ಯೋಧರು ಅರ್ಜಿ ಶುಲ್ಕವಾಗಿ 50 ರೂ., ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 300 ರೂ., ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ. ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 33,450 ರೂ. – 62,600 ರೂ. ಮಾಸಿಕ ವೇತನ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌: 080-30574957 / 30574901ಕ್ಕೆ ಕರೆ ಮಾಡಿ.

ಉಳಿಕೆ ವೃಂದದ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಹೈದರಾಬಾದ್‌-ಕರ್ನಾಟಕ ವೃಂದದ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ದಿನಾಂಕ ವಿಸ್ತರಣೆಯ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನಿಮ್ಮ ಮೊಬೈಲ್‌ ನಂಬರ್‌ ಮತ್ತು ಇಮೇಲ್‌ ಐಡಿ ನಮೂದಿಸಿ ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ / ರಿಕ್ವೆಸ್ಟ್‌ ನಂಬರ್‌ ತೆಗೆದಿಡಿ.

ಗಮನಿಸಿ ಮೇ 2ರ ಬಳಿಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

ಇದನ್ನೂ ಓದಿ: Job Alert: 247 ಪಿಡಿಒ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ; ಇಲ್ಲಿದೆ ಡೈರೆಕ್ಟ್‌ ಲಿಂಕ್‌

Continue Reading

ಕರ್ನಾಟಕ

POCSO Case: ಚಾಕೋಲೆಟ್‌ ಕೊಡೋದಾಗಿ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಇಬ್ಬರು ಯುವಕರಿಗೆ ಧರ್ಮದೇಟು

POCSO Case: ಕಾಡುಗೋಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚಾಕೋಲೆಟ್ ಮತ್ತು ಬೊಂಬೆ ಕೊಡಿಸುತ್ತೇನೆ ಎಂದು ಹೇಳಿ ಅಪ್ರಾಪ್ತ ಬಾಲಕಿಯನ್ನು ಈ ಕಾಮುಕರು ಕರೆದೊಯ್ದಿದ್ದಾರೆ. ಮನೆಯಲ್ಲಿ ಹೆಣ್ಣುಮಗಳನ್ನು ವಿವಸ್ತ್ರಗೊಳಿಸಿದ್ದರು. ಆದರೆ, ಈ ಯುವಕರ ವರ್ತನೆಯನ್ನು ದೂರದಿಂದಲೇ ಗಮನಿಸಿದ್ದ ಸ್ಥಳೀಯರಿಗೆ ಇವರ ಮೇಲೆ ಅನುಮಾನ ಬಂದಿದೆ. ಹೀಗಾಗಿ ನಿಗಾ ಇಟ್ಟಿದ್ದರು. ಅವರು ಮನೆಯೊಳಗೆ ಕರೆದೊಯ್ಯುತ್ತಿದ್ದಂತೆ ಬಂದು ರಕ್ಷಣೆ ಮಾಡಿದ್ದಾರೆ.

VISTARANEWS.COM


on

POCSO Case 7 year old girl attempted to rape on pretext of giving her chocolates
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: 7 ವರ್ಷದ ಹೆಣ್ಣು ಮಗಳೊಬ್ಬಳ ಮೇಲೆ ಇಬ್ಬರು ಯುವಕ ಕಾಮಪಿಶಾಚಿಗಳು ಅತ್ಯಾಚಾರಕ್ಕೆ (Assault case) ಯತ್ನಿಸಿದ್ದಾರೆ. ಅದೃಷ್ಟವಶಾತ್‌ ಸ್ಥಳೀಯರಿಗೆ ಮಾಹಿತಿ ಗೊತ್ತಾಗಿ ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೆ, ಇಬ್ಬರು ಯುವಕರಿಗೆ ಧರ್ಮದೇಟು ನೀಡಿದ್ದಾರೆ. ಏಪ್ರಿಲ್‌ 24ರಂದು ಈ ಪೋಕ್ಸೋ ಪ್ರಕರಣ (POCSO Case) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಒಬ್ಬ ಆರೋಪಿ ಮಾತ್ರ ಸಿಕ್ಕಿದ್ದು, ಇನ್ನೊಬ್ಬನಿಗಾಗಿ ಶೋಧ ಕಾರ್ಯ ನಡೆದಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಕಾಡುಗೋಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚಾಕೋಲೆಟ್ ಮತ್ತು ಬೊಂಬೆ ಕೊಡಿಸುತ್ತೇನೆ ಎಂದು ಹೇಳಿ ಅಪ್ರಾಪ್ತ ಬಾಲಕಿಯನ್ನು ಈ ಕಾಮುಕರು ಕರೆದೊಯ್ದಿದ್ದಾರೆ. ಮನೆಯಲ್ಲಿ ಹೆಣ್ಣುಮಗಳನ್ನು ವಿವಸ್ತ್ರಗೊಳಿಸಿದ್ದರು. ಆದರೆ, ಈ ಯುವಕರ ವರ್ತನೆಯನ್ನು ದೂರದಿಂದಲೇ ಗಮನಿಸಿದ್ದ ಸ್ಥಳೀಯರಿಗೆ ಇವರ ಮೇಲೆ ಅನುಮಾನ ಬಂದಿದೆ. ಹೀಗಾಗಿ ನಿಗಾ ಇಟ್ಟಿದ್ದರು.

ಯಾವಾಗ ಈ ಯುವಕರು ಆ ಬಾಲಕಿಯನ್ನು ಮನೆಯೊಳಗೆ ಕರೆದುಕೊಂಡು ಹೋಗಿ ಬಾಗಿಲು ಹಾಕಿಕೊಂಡರೋ ಆ ತಕ್ಷಣ ಸ್ಥಳೀಯರು ಆ ಮನೆಗೆ ದೌಡಾಯಿಸಿದ್ದಾರೆ. ಮನೆ ಬಾಗಿಲು ಬಡಿದು ಹೊರಗೆ ಬರುವಂತೆ ಕೂಗಿದ್ದಾರೆ . ಎಷ್ಟೇ ಬಾಗಿಲು ಬಡಿದರೂ ಯುವಕರು ಕೆಲ ಸಮಯ ಬಾಗಿಲು ತೆಗೆಯಲಿಲ್ಲ. ಕೊನೆಗೆ ಬಾಗಿಲು ಒಡೆಯುವ ಬೆದರಿಕೆಯನ್ನೂ ಒಡ್ಡಲಾಯಿತು. ಸ್ವಲ್ಪ ಸಮಯದ ಬಳಿಕ ಯುವಕರು ಬಾಗಿಲು ತೆಗೆದಿದ್ದಾರೆ. ಆಗ ಯುವಕರನ್ನು ಹಿಡಿದುಕೊಂಡ ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಆದರೆ, ಅಷ್ಟರಲ್ಲಿ ಒಬ್ಬ ತಪ್ಪಿಸಿಕೊಂಡಿದ್ದಾನೆ. ಆತನ ಶೋಧ ಕಾಋಯ ಮುಂದುವರಿದಿದೆ.

Sahil Khan: ಬೆಟ್ಟಿಂಗ್​ ಅಕ್ರಮದಲ್ಲಿ ಭಾಗಿ; ನಟ ಸಾಹಿಲ್ ಖಾನ್ ಅರೆಸ್ಟ್‌

ಮಹದೇವ್ ಬೆಟ್ಟಿಂಗ್ ಆ್ಯಪ್ (Mahadev betting app case) ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ (Betting App Case) ನಟ ಮತ್ತು ಫಿಟ್‌ನೆಸ್‌ ಪ್ರಭಾವಿ ಸಾಹಿಲ್ ಖಾನ್ (Sahil Khan Arrested) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್‌ಗಢದಲ್ಲಿ ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡ (ಎಸ್‌ಐಟಿ) ನಟನನ್ನು ಬಂಧಿಸಿದ್ದು, ಬಾಂಬೆ ಹೈಕೋರ್ಟ್‌ ಬಂಧನ ಪೂರ್ವ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಇದಕ್ಕೂ ಮೊದಲು, 2023ರ ಡಿಸೆಂಬರ್‌ನಲ್ಲಿ ಸಾಹಿಲ್ ಮತ್ತು ಇದೇ ಪ್ರಕರಣಕ್ಕೆ ಸಂಬಂಧಿಸಿದ ಇನ್ನುಳಿದ ಮೂವರನ್ನು ವಿಶೇಷ ತನಿಖಾ ತಂಡ ವಿಚಾರಣೆಗೆ ಕರೆದಿತ್ತು. ಆದರೆ, ಅವರು ಹಾಜರಾಗಲಿಲ್ಲ. ತಾವು ಕೇವಲ ಬ್ರ್ಯಾಂಡ್ ಪ್ರಮೋಟರ್‌ ಎಂದು ಹೇಳಿಕೊಂಡು ಬಂದಿದ್ದರು. ಆದರೆ, ಸಾಹಿಲ್ ಆ್ಯಪ್‌ನ ಸಹ ಮಾಲೀಕ ಎಂಬುದು ಪೊಲೀಸರಿಗೆ ತನಿಖೆಯಲ್ಲಿ ಗೊತ್ತಾಗಿದೆ. ಸಾಹಿಲ್‌ ಈ ಬೆಟ್ಟಿಂಗ್ ಆ್ಯಪ್‌ ಸಂಬಂಧಿಸಿದ ಪ್ರಚಾರದ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲು ತಿಂಗಳಿಗೆ 3 ಲಕ್ಷ ರೂ. ಹಣವನ್ನು ಪಡೆದುಕೊಳ್ಳುತ್ತಿದ್ದರು ಎಂದು ವರದಿಯಾಗಿದೆ. ಮಾತ್ರವಲ್ಲ 24 ತಿಂಗಳುಗಳ ಕಾಲ ಈ ಆ್ಯಪ್‌ ಜತೆಗೆ ಒಪ್ಪಂದ ಮಾಡಿಕೊಂಡಿದ್ದರು ಎಂದು ತನಿಖೆ ವೇಳೆ ಬಹಿರಂಗವಾಗಿತ್ತು.

ಇದರ ಹೊರತಾಗಿಯೂ, ಕಾನೂನುಬಾಹಿರ ಕಾರ್ಯಾಚರಣೆಯಲ್ಲಿ ನೇರವಾಗಿ ಭಾಗಿಯಾಗಿರುವುದನ್ನು ಉಲ್ಲೇಖಿಸಿ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ʻಸ್ಟೈಲ್ʼ ಮತ್ತು ʻಎಕ್ಸ್‌ಕ್ಯೂಸ್ ಮಿʼ ಸಿನಿಮಾ ಪಾತ್ರಗಳಿಗೆ ಹೆಸರುವಾಸಿಯಾದ ಸಾಹಿಲ್ ಈಗ ಫಿಟ್‌ನೆಸ್‌ನತ್ತ ಗಮನಹರಿಸಿದ್ದಾರೆ.

ಇದನ್ನೂ ಓದಿ: The Rulers: ಅಂಬೇಡ್ಕರ್ ಹೆಸರಲ್ಲಿ ಸಿನಿಮಾ ಮಾಡಿದ್ದಕ್ಕೆ` ರೌಡಿ ಶೀಟರ್ʼ ಪಟ್ಟ ಕೊಡ್ತಾ ಕಾಂಗ್ರೆಸ್ ಸರ್ಕಾರ? ನಟ ಹೇಳಿದ್ದೇನು?

2023ರಲ್ಲಿ, ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದ ವಿಚಾರಣೆ ನಡೆಸಿದ ಕ್ರೈಂ ಬ್ರ್ಯಾಂಚ್‌ ವಿಭಾಗವು ಡಿಸೆಂಬರ್ 15ರಂದು ತಮ್ಮ ಹೇಳಿಕೆಗಳನ್ನು ದಾಖಲಿಸಲು ಸಾಹಿಲ್ ಖಾನ್ ಮತ್ತು ಇತರ ಮೂವರಿಗೆ ಸಮನ್ಸ್ ನೀಡಿತ್ತು ಎಂದು ವರದಿಯಾಗಿದೆ. ಆದರೆ, ಸಾಹಿಲ್ ಖಾನ್ ತನಿಖೆಗಾಗಿ ಪೊಲೀಸರ ಮುಂದೆ ಹಾಜರಾಗಲಿಲ್ಲ. ಇದಲ್ಲದೆ ಸೋಷಿಯಲ್‌ ಮೀಡಿಯಾಗಳಲ್ಲಿ ನಿರಂತರವಾಗಿ ಪೋಸ್ಟ್‌ ಮಾಡುತ್ತಲೇ ಇರುತ್ತಿದ್ದರು. ಪೊಲೀಸರ ಸಮನ್ಸ್‌ಗಳನ್ನು ಅವರು ನಿರ್ಲಕ್ಷಿಸುತ್ತಿರುವುದನ್ನು ಕಂಡು ನೆಟ್ಟಿಗರಿಂದ ಟೀಕೆಗೆ ಗುರಿಯಾಗುತ್ತಿದ್ದರು. ವರದಿಗಳ ಪ್ರಕಾರ, ಸಾಹಿಲ್ ಖಾನ್ ಅವರು ಈ ಆ್ಯಪ್ ಪ್ರಚಾರ ಮಾಡಲು ಸೆಲೆಬ್ರಿಟಿ ಕೂಟಗಳನ್ನು ಆಯೋಜಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಏನಿದು ಮಹದೇವ್​ ಬೆಟ್ಟಿಂಗ್​ ಪ್ರಕರಣ?

ಛತ್ತೀಸ್‌ಗಢದಲ್ಲಿ ವಿಧಾನಸಭೆ ಚುನಾವಣೆಗೆ (Chhattisgarh Polls) ಕೆಲವೇ ದಿನಗಳು ಬಾಕಿ ಇರುವ ಮಧ್ಯೆಯೇ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಭಾಗಿಯಾಗಿದ್ದಾರೆ ಎನ್ನಲಾದ ಬೆಟ್ಟಿಂಗ್ ಹಗರಣವೊಂದು ಹೊರಕ್ಕೆ ಬಂದಿತ್ತು. ಮಹದೇವ್‌ ಆನ್‌ಲೈನ್‌ ಬೆಟ್ಟಿಂಗ್‌ ಆ್ಯಪ್ ಪ್ರಮೋಟರ್‌ಗಳಿಂದ (Mahadev Betting App Promoters) ಇದುವರೆಗೆ ಭೂಪೇಶ್‌ ಬಘೇಲ್‌ (Bhupel Bhaghel) ಅವರಿಗೆ ಸುಮಾರು 508 ಕೋಟಿ ರೂ. ಲಂಚ ನೀಡಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ED) ಹೇಳಿದ್ದರು. ಚುನಾವಣೆ ಹೊತ್ತಿನಲ್ಲೇ ಇ.ಡಿ ಪ್ರಸ್ತಾಪಿಸಿದ ವಿಷಯವು ಚರ್ಚೆಗೆ ಗ್ರಾಸವಾಗಿತ್ತು.

ಅಕ್ರಮವಾಗಿ ಹಣದ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ಈಗಾಗಲೇ ಮಹದೇವ್‌ ಬೆಟ್ಟಿಂಗ್‌ ಆ್ಯಪ್ ಪ್ರವರ್ತಕರನ್ನು ವಿಚಾರಣೆ ನಡೆಸುತ್ತಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢದಲ್ಲಿ ಇ.ಡಿ ಅಧಿಕಾರಿಗಳು ದಾಳಿ ನಡೆಸಿ 5.39 ಕೋಟಿ ರೂಪಾಯಿಯನ್ನು ವಶಪಡಿಸಿಕೊಂಡಿತ್ತು. ಅಷ್ಟೇ ಅಲ್ಲ, 15 ಕೋಟಿ ರೂ. ಇರುವ ಬ್ಯಾಂಕ್‌ ಖಾತೆಯನ್ನೂ ಜಪ್ತಿ ಮಾಡಿತ್ತು. ಆಸಿಂ ದಾಸ್‌ ಎಂಬಾತನನ್ನು ಕೂಡ ಇ.ಡಿ ಬಂಧಿಸಿತ್ತು. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರೇ ಲಂಚ ಸ್ವೀಕರಿಸಿದ್ದಾರೆ ಎಂದು ಇ.ಡಿ ತಿಳಿಸಿತ್ತು.

Continue Reading
Advertisement
KKR vs DC
ಕ್ರಿಕೆಟ್17 mins ago

KKR vs DC: ಮೊದಲ ಸೋಲಿಗೆ ಸೇಡು ತೀರಿಸಿಕೊಂಡೀತೇ ಡೆಲ್ಲಿ?; ಕೆಕೆಆರ್​ ಎದುರಾಳಿ

Karnataka Drought Relief HDK accuses Congress government of lying says HD Kumarswamy
ರಾಜಕೀಯ19 mins ago

Karnataka Drought: ಬರ ಪರಿಹಾರ ಬಗ್ಗೆ ಸುಳ್ಳು ಹೇಳಿದ ಕಾಂಗ್ರೆಸ್‌; ಯುಪಿಎ ಕೊಟ್ಟಿದ್ದು ಅತಿ ಕಡಿಮೆ ಎಂದ ಎಚ್‌ಡಿಕೆ

Parliament Flashback
Lok Sabha Election 202420 mins ago

Parliament Flashback: ಬಳ್ಳಾರಿಯಲ್ಲಿ ಸೋನಿಯಾ ಗಾಂಧಿ ಮತ್ತು ಸುಷ್ಮಾ ಸ್ವರಾಜ್‌ ಮಧ್ಯೆ ನಡೆದಿತ್ತು ಐತಿಹಾಸಿಕ ಕದನ!

Hassan Pen Drive Case
ಕರ್ನಾಟಕ41 mins ago

Hassan Pen Drive Case: ಪ್ರಜ್ವಲ್‌ ಜತೆಗೆ ಎಚ್‌.ಡಿ.ರೇವಣ್ಣ ಮೇಲೂ ಎಫ್‌ಐಆರ್‌; ದೂರಿನಲ್ಲಿದೆ ಭಯಾನಕ ಡಿಟೇಲ್ಸ್‌!

Delivery Boy
ಕರ್ನಾಟಕ45 mins ago

Delivery Boy: ಬೆಂಗಳೂರಲ್ಲಿ ವ್ಯಕ್ತಿಯ ಗುಪ್ತಾಂಗ ಮುಟ್ಟಿ ದುರ್ವರ್ತನೆ ತೋರಿದ ಡೆಲಿವರಿ ಬಾಯ್‌ ಅಹ್ಮದ್!

Job Alert
ಉದ್ಯೋಗ46 mins ago

Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆ ಖಾಲಿ ಇದೆ; ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

POCSO Case 7 year old girl attempted to rape on pretext of giving her chocolates
ಕರ್ನಾಟಕ50 mins ago

POCSO Case: ಚಾಕೋಲೆಟ್‌ ಕೊಡೋದಾಗಿ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಇಬ್ಬರು ಯುವಕರಿಗೆ ಧರ್ಮದೇಟು

Ishan Kishan
ಕ್ರೀಡೆ1 hour ago

Ishan Kishan: ಐಪಿಎಲ್​ ನೀತಿ ಸಂಹಿತೆ ಉಲ್ಲಂಘನೆ; ಇಶಾನ್​ ಕಿಶನ್​ಗೆ ಬಿತ್ತು ದಂಡದ ಬರೆ

5 PM for 5 years if Congress comes to power says PM Narendra Modi
Lok Sabha Election 20241 hour ago

PM Narendra Modi: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 5 ವರ್ಷಕ್ಕೆ 5 ಪಿಎಂ; ಕರ್ನಾಟಕದಲ್ಲಿ ಶಿಕ್ಷಣ ನೀತಿಯಲ್ಲೂ ರಾಜಕೀಯ: ಮೋದಿ ಕಿಡಿ

Summer Fashion
ಫ್ಯಾಷನ್1 hour ago

Summer Fashion: ಬೇಸಿಗೆಯಲ್ಲಿ ಕ್ರಾಪ್‌ ಟೀ ಶರ್ಟ್‌ ಸ್ಟೈಲಿಂಗ್‌ಗೆ 3 ಐಡಿಯಾ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20242 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20246 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20246 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ9 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌