Vinesh Phogat: ವಿನೇಶ್‌ ಫೋಗಟ್‌ ಅನರ್ಹ; ಕ್ರಮ ಕೈಗೊಳ್ಳುವಂತೆ ಒಲಿಂಪಿಕ್ಸ್‌ ಅಸೋಸಿಯೇಷನ್‌ಗೆ ಮೋದಿ ಸೂಚನೆ! - Vistara News

ಪ್ರಮುಖ ಸುದ್ದಿ

Vinesh Phogat: ವಿನೇಶ್‌ ಫೋಗಟ್‌ ಅನರ್ಹ; ಕ್ರಮ ಕೈಗೊಳ್ಳುವಂತೆ ಒಲಿಂಪಿಕ್ಸ್‌ ಅಸೋಸಿಯೇಷನ್‌ಗೆ ಮೋದಿ ಸೂಚನೆ!

Vinesh Phogat: 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ಅವರು ಇದೀಗ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇರುವ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹಗೊಳಿಸಲಗಿದೆ. ಇದಕ್ಕೆ ಭಾರತದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರೂ ಪಿ.ಟಿ. ಉಷಾ ಅವರಿಗೆ ಕರೆ ಮಾಡಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ ಎಂಬುದಾಗಿ ಕೇಂದ್ರ ಕ್ರೀಡಾ ಸಚಿವ ಮನ್ಸುಖ್‌ ಮಂಡಾವೀಯ ತಿಳಿಸಿದ್ದಾರೆ.

VISTARANEWS.COM


on

Vinesh Phogat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೆಹಲಿ/ಪ್ಯಾರಿಸ್:‌ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (Paris Olympics 2024) ಫೈನಲ್​ ಪ್ರವೇಶಿಸುವ ಮೂಲಕ ಇತಿಹಾಸ ಸೃಷ್ಟಿಸುವ ತವಕದಲ್ಲಿದ್ದ ಭಾರತದ ಖ್ಯಾತ ಮಹಿಳಾ ಕುಸ್ತಿಪಟು (Wrestler) ವಿನೇಶ್​ ಫೋಗಟ್ (Vinesh Phogat) ಅವರು ಅನರ್ಹಗೊಂಡಿರುವುದು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ವಿನೇಶ್‌ ಫೋಗಟ್‌ ಪರವಾಗಿ ದೇಶವೇ ಒಗ್ಗೂಡಿ ನಿಂತಿದೆ. ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ವಿನೇಶ್‌ ಫೋಗಟ್‌ ಪರವಾಗಿ ನಿಂತಿದ್ದಾರೆ. ಇದರ ಬೆನ್ನಲ್ಲೇ, ಭಾರತೀಯ ಒಲಿಂಪಿಕ್ಸ್‌ ಅಸೋಷಿಯೇಷನ್‌ (IOA) ಅಧ್ಯಕ್ಷೆ ಪಿ.ಟಿ.ಉಷಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕರೆ ಮಾಡಿದ್ದು, ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ಪಿ.ಟಿ.ಉಷಾ ಅವರಿಗೆ ನರೇಂದ್ರ ಮೋದಿ ಅವರು ಕರೆ ಮಾಡಿರುವ ಕುರಿತು ಕೇಂದ್ರ ಕ್ರೀಡಾ ಸಚಿವ ಮನ್ಸುಖ್‌ ಮಂಡಾವಿಯ ಅವರು ಸಂಸತ್‌ನಲ್ಲಿ ಮಾಹಿತಿ ನೀಡಿದ್ದಾರೆ. “50 ಕೆಜಿಗಿಂತ 100 ಗ್ರಾಂ ತೂಕ ಹೆಚ್ಚಿದ್ದ ಕಾರಣ ನೀಡಿ ವಿನೇಶ್‌ ಫೋಗಟ್‌ ಅವರನ್ನು ಅನರ್ಹಗೊಳಿಸಲಾಗಿದೆ. ಈಗಾಗಲೇ ಭಾರತೀಯ ಒಲಿಂಪಿಕ್ಸ್‌ ಅಸೋಸಿಯೇಷನ್‌ ಪ್ರತಿಭಟನೆ ವ್ಯಕ್ತಪಡಿಸಿದೆ. ನರೇಂದ್ರ ಮೋದಿ ಅವರೂ ಪಿ.ಟಿ. ಉಷಾ ಅವರಿಗೆ ಕರೆ ಮಾಡುವ ಮೂಲಕ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ” ಎಂದು ಸಚಿವ ತಿಳಿಸಿದ್ದಾರೆ.

ಪ್ರತಿಯೊಂದು ಹೆಜ್ಜೆಯಲ್ಲೂ ವಿನೇಶ್‌ ಫೋಗಟ್‌ ಅವರಿಗೆ ಕೇಂದ್ರ ಸರ್ಕಾರ ಸಹಕಾರ ನೀಡಿದೆ. ಅವರಿಗೆ ವೈಯಕ್ತಿಕ ಸಿಬ್ಬಂದಿಯನ್ನೂ ಭಾರತ ಕಳುಹಿಸಿದೆ. ಸಹಾಯಕ ಸಿಬ್ಬಂದಿಯನ್ನೂ ಅವರಿಗೆ ಒದಗಿಸಲಾಗಿದೆ. ಇದಕ್ಕೂ ಮೊದಲು ಕೂಡ ವಿನೇಶ್‌ ಫೋಗಟ್‌ ಅವರ ಸಾಧನೆಗೆ ಕೇಂದ್ರ ಸರ್ಕಾರ ಹಣಕಾಸು ನೆರವು ನೀಡಿದೆ. ಮುಂದಿನ ದಿನಗಳಲ್ಲೂ ನೆರವು ನೀಡಲಿದೆ ಎಂದು ಅವರು ತಿಳಿಸಿದ್ದಾರೆ.

ವಿನೇಶ್‌ ಫೋಗಟ್‌ಗೆ ಬಾಲಿವುಡ್‌ ತಾರೆಯರ ಬೆಂಬಲ

ವಿನೇಶ್‌ ಫೋಗಟ್‌ ಅವರ ಪರವಾಗಿ ಬಾಲಿವುಡ್‌ ಸೆಲೆಬ್ರಿಟಿಗಳು ನಿಂತಿದ್ದಾರೆ. ಫರ್ಹಾನ್ ಅಖ್ತರ್, ತಾಪ್ಸಿ ಪನ್ನು, ಸೋನಾಕ್ಷಿ ಸಿನ್ಹಾ ಮತ್ತು ವಿಕ್ಕಿ ಕೌಶಲ್ ಸೇರಿದಂತೆ ಹಲವಾರು ಬಾಲಿವುಡ್ ತಾರೆಯರು ಕುಸ್ತಿಪಟುವಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆಲಿಯಾ ಭಟ್ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ “ವಿನೇಶ್ ಫೋಗಟ್ ನೀವು ಇಡೀ ದೇಶಕ್ಕೆ ಸ್ಫೂರ್ತಿ. ನಿಮ್ಮ ಸ್ಥೈರ್ಯವನ್ನು , ನಿಮ್ಮ ಧೈರ್ಯವನ್ನು ಯಾವುದೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಮತ್ತು ಇತಿಹಾಸವನ್ನು ಸೃಷ್ಟಿಸಲು ನೀವು ಅನುಭವಿಸಿದ ಕಷ್ಟಗಳನ್ನು ಯಾವುದೂ ತೆಗೆದುಹಾಕುವುದಿಲ್ಲ! ನಾವು ನಿಮ್ಮೊಂದಿಗೆ ಇರುತ್ತೇವೆ. ನೀವೇ ಚಿನ್ನ – ನೀವೇ ಕಬ್ಬಿಣ ಮತ್ತು ನೀವೇ ಸ್ಟೀಲ್‌! ಯಾವುದೂ ನಿಮ್ಮಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲ! ಯುಗಗಳ ಚಾಂಪಿಯನ್! ನಿಮ್ಮಂತೆ ಯಾರೂ ಇಲ್ಲʼʼ ಎಂದು ಬರೆದುಕೊಂಡಿದ್ದಾರೆ.

ಫರ್ಹಾನ್ ಅಖ್ತರ್ ಅವರು ಪೋಸ್ಟ್‌ನಲ್ಲಿ ವಿನೇಶ್ ಅವರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಮತ್ತು ಶೀರ್ಷಿಕೆಯಲ್ಲಿ ಬರೆದಿದ್ದಾರೆ, ” ವಿನೇಶ್ ನಿಮ್ಮ ಬಗ್ಗೆ ನಮಗೆಲ್ಲರಿಗೂ ಹೆಮ್ಮೆಯಿದೆ ಮತ್ತು ನೀವು ಕ್ರೀಡೆಗಾಗಿ ಮಾಡಿದ್ದೀರಿʼʼ ಎಂದು ಬರೆದುಕೊಂಡಿದ್ದಾರೆ. ಜೋಯಾ ಅಖ್ತರ್ “ಚಾಂಪಿಯನ್ ನೀವು ಚಿನ್ನ! ನೀವು ಸಾಧಿಸಿದ್ದು ಪದಕಗಳನ್ನು ಮೀರಿದ್ದು. ತುಂಬಾ ಹೆಮ್ಮೆ. ಸ್ಫೂರ್ತಿʼʼಎಂದು ಬರೆದುಕೊಂಡಿದ್ದಾರೆ. ವಿಕ್ಕಿ ಕೌಶಲ್‌, ಪದಕಗಳನ್ನು ಮೀರಿದ ವಿಜೇತೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Vinesh Phogat: ವಿನೇಶ್ ಪದಕಗಳನ್ನು ಮೀರಿದ ವಿಜೇತೆ: ಆಲಿಯಾ, ವಿಕ್ಕಿ ಸೇರಿದಂತೆ ಬಾಲಿವುಡ್‌ ಸೆಲೆಬ್ರಿಟಿಗಳ ಬೆಂಬಲ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Vinesh Phogat: ವಿನೇಶ್‌ ಫೋಗಟ್‌ ಅನರ್ಹ; ದಿಢೀರ್ 2-3 ಕೆ.ಜಿ ತೂಕ ಇಳಿಸಲು ಮುಂದಾದರೆ ದೇಹಕ್ಕೆ ಏನಾಗುತ್ತದೆ?

Vinesh Phogat:‌ 52 ಕೆ.ಜಿ ತೂಕ ಹೊಂದಿದ್ದ ವಿನೇಶ್‌ ಫೋಗಟ್‌ ಅವರು 2 ಕೆ.ಜಿ ತೂಕ ಇಳಿಸಲು ಇಡೀ ರಾತ್ರಿ ವರ್ಕೌಟ್‌ ಮಾಡಿದ್ದು, ನಿರ್ಜಲೀಕರಣದಿಂದಾಗಿ ಬೆಳಗ್ಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ವಿನೇಶ್‌ ಫೋಗಟ್‌ ಅವರನ್ನು ಅನರ್ಹಗೊಳಿಸಿದ ಬೆನ್ನಲ್ಲೇ, ರಾತ್ರೋರಾತ್ರಿ 2 ಕೆ.ಜಿ ತೂಕ ಇಳಿಸಲು ಮುಂದಾದರೆ ದೇಹದಲ್ಲಿ ಏನೆಲ್ಲ ಆಗುತ್ತದೆ, ವಿನೇಶ್‌ ಫೋಗಟ್‌ ಮಾಡಿದ್ದು ಸರಿಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಇದಕ್ಕೆ ತಜ್ಞರು ಏನು ಹೇಳುತ್ತಾರೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Vinesh Phogat
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (Paris Olympics) ವಿನೇಶ್‌ ಫೋಗಟ್‌ (Vinesh Phogat) ಅವರಿಗೆ ಮಾತ್ರವಲ್ಲ ಇಡೀ ಭಾರತೀಯರಿಗೆ ಆಘಾತವಾಗಿದೆ. ಕುಸ್ತಿಯಲ್ಲಿ ಫೈನಲ್‌ ತಲುಪಿ ಇತಿಹಾಸ ಸೃಷ್ಟಿಸಿದ್ದ ಅವರು ಇನ್ನೇನು ಚಿನ್ನದ ಪದಕಕ್ಕಾಗಿ ಕಾದಾಡಬೇಕು ಎನ್ನುವರಷ್ಟರಲ್ಲಿಯೇ ದೇಹದ ತೂಕ 100 ಗ್ರಾಂ ಹೆಚ್ಚಾದ ಹಿನ್ನೆಲೆಯಲ್ಲಿ ಅವರನ್ನು ಅನರ್ಹಗೊಳಿಸಿರುವುದು ಕುಸ್ತಿಪಟುವಿನ ಜತೆಗೆ ಇಡೀ ದೇಶದ ಜನರಿಗೆ ಅಸಮಾಧಾನ ಉಂಟಾಗಿದೆ. ಮತ್ತೊಂದೆಡೆ, 52 ಕೆ.ಜಿ ತೂಕ ಹೊಂದಿದ್ದ ವಿನೇಶ್‌ ಫೋಗಟ್‌ ಅವರು 2 ಕೆ.ಜಿ ತೂಕ ಇಳಿಸಲು ಇಡೀ ರಾತ್ರಿ ವರ್ಕೌಟ್‌ ಮಾಡಿದ್ದು, ನಿರ್ಜಲೀಕರಣದಿಂದಾಗಿ ಬೆಳಗ್ಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಹೀಗೆ, ರಾತ್ರೋರಾತ್ರಿ ದೇಹದ ತೂಕವನ್ನು 2-3 ಕೆ.ಜಿ ಇಳಿಸಿದರೆ ದೇಹಕ್ಕೆ ಏನಾಗುತ್ತದೆ ಎಂಬುದರ ಕುರಿತು ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ತಜ್ಞರು ಮಾಹಿತಿ ನೀಡಿದ್ದಾರೆ.

ತಜ್ಞರು ಹೇಳುವುದೇನು?

‘ಒಂದೇ ರಾತ್ರಿಯಲ್ಲಿ ದೇಹದ ತೂಕವನ್ನು 2-3 ಕೆ.ಜಿ ಇಳಿಸುವುದು ಸಾಧ್ಯವೇ ಇಲ್ಲ ಅಂತಲ್ಲ. ಆದರೆ, ಹಾಗೆ ಮಾಡುವುದು ತುಂಬ ಅಪಾಯಕಾರಿ’ ಎಂದು ದೆಹಲಿಯ ಮಹಾರಾಜ ಅಗ್ರಸೇನ ಆಸ್ಪತ್ರೆಯ ಔಷಧ ತಜ್ಞ ಡಾ.ಸಂಜಯ್‌ ಗುಪ್ತಾ ತಿಳಿಸಿದ್ದಾರೆ. ಮತ್ತೊಬ್ಬ ಔಷಧ ತಜ್ಞರಾದ ಡಾ.ಮಂಜೀತಾ ನಾಥ್‌ ದಾಸ್‌ ಅವರು ಕೂಡ ಇದನ್ನೇ ಉಚ್ಚರಿಸಿದ್ದು, “ಹಾಗೆ ಮಾಡುವುದು ಪ್ರಾಣಕ್ಕೂ ಅಪಾಯಕಾರಿ” ಎಂದಿದ್ದಾರೆ.

“ನಮ್ಮ ದೇಹದ ತೂಕವು ಮೂಳೆ, ಮಾಂಸ ಹಾಗೂ ಬೊಜ್ಜನ್ನು ಆಧರಿಸಿರುತ್ತದೆ. ಆದರೆ, ನೀರು ಕುಡಿಯದೆ, ಉಪ್ಪು ಸೇವಿಸದೆ, ಕಾರ್ಬ್ಸ್‌ ಹಾಗೂ ಪ್ರೊಟೀನ್‌ಗಳನ್ನು ಮಾತ್ರ ಸೇವಿಸಿ ಇಡೀ ರಾತ್ರಿ ವರ್ಕೌಟ್‌ ಮಾಡಿದರೆ, 2-3 ಕೆ.ಜಿ ತೂಕ ಇಳಿಸಿದರೆ ದೇಹ ತಡೆದುಕೊಳ್ಳುವುದಿಲ್ಲ. ನಿರ್ಜಲೀಕರಣವು ದೇಹವನ್ನು ಬಾಧಿಸುತ್ತದೆ. ಅದರಲ್ಲೂ 29 ವರ್ಷದ ವಿನೇಶ್‌ ಫೋಗಟ್‌ ಅವರು ಇಂತಹ ದುಸ್ಸಾಹಸಕ್ಕೆ ಕೈಹಾಕಿದ್ದು ಅವರ ದೇಹದ ಮೇಲೆ ಪರಿಣಾಮ ಬೀರಿದೆ” ಎಂದು ಅವರು ತಿಳಿಸಿದ್ದಾರೆ.

ತೂಕ ಕಳೆದುಕೊಳ್ಳುವ ಪ್ರಸ್ತಾಪವೇ ಇಲ್ಲ

“ನೀರನ್ನೂ ಸೇವಿಸದೆ ರಾತ್ರಿಯಿಡೀ ವರ್ಕೌಟ್‌ ಮಾಡಿದರೆ ದೇಹವು ನಿರ್ಜಲೀಕರಣದಿಂದ ಬಸವಳಿದುಹೋಗುತ್ತದೆ. ಹಾಗೆ ಮಾಡಿದವರು ಬೆಳಗ್ಗೆ ಎದ್ದು ತಿರುಗಾಡಲು ಕೂಡ ಆಗುವುದಿಲ್ಲ. ಹೀಗೆ, ರಾತ್ರೋರಾತ್ರಿ ನೀರು ಕುಡಿಯದೆ, ವರ್ಕೌಟ್‌ ಮಾಡಿ, ತೂಕ ಕಳೆದುಕೊಳ್ಳುವಂತೆ ಸಾಮಾನ್ಯ ಜನರಿಗಾಗಲಿ, ಅಥ್ಲೀಟ್‌ಗಳಿಗಾಗಲಿ ವೈದ್ಯಕೀಯವಾಗಿ ಅನುಮತಿ ನೀಡಲು ಸಾಧ್ಯವೇ ಇಲ್ಲ” ಎಂಬುದಾಗಿ ಡಾ.ದಾಸ್‌ ತಿಳಿಸಿದ್ದಾರೆ.

ರಾತ್ರಿಯಿಡೀ ವರ್ಕೌಟ್‌ ಮಾಡುವುದು, ನೀರು ಸೇವಿಸದಿರುವುದರಿಂದ, ಕ್ಯಾಲರಿ ತೆಗೆದುಕೊಳ್ಳದಿರುವುದರಿಂದ ದೇಹದಲ್ಲಿ ಬ್ಲಡ್‌ ಶುಗರ್‌ ಲೆವೆಲ್‌ 70 ಮಿಲಿಗ್ರಾಂಗೆ (ಪ್ರತಿ ಡೆಸಿಲಿಟರ್‌ಗೆ) ಇಳಿಯಲಿದೆ. ದೇಹದ ಶಕ್ತಿಯ ಮೂಲವಾದ ಗ್ಲಿಕೋಜೆನ್‌ ಸಂಗ್ರಹವು ಕುಸಿತವಾಗುತ್ತದೆ. ಇದರಿಂದಾಗಿ ದೇಹವು ನಿಶ್ಯಕ್ತಿಗೊಳ್ಳುತ್ತದೆ ಎಂಬುದಾಗಿ ಡಾ.ಗುಪ್ತಾ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Vinesh Phogat: ವಿನೇಶ್‌ ಫೋಗಟ್‌ ಅನರ್ಹ; ಕ್ರಮ ಕೈಗೊಳ್ಳುವಂತೆ ಒಲಿಂಪಿಕ್ಸ್‌ ಅಸೋಸಿಯೇಷನ್‌ಗೆ ಮೋದಿ ಸೂಚನೆ!

Continue Reading

ಕರ್ನಾಟಕ

Lalbagh Flower Show: ಲಾಲ್‌ಬಾಗ್ ಫ್ಲವರ್‌ ಶೋ; ನಾಳೆಯಿಂದ ಬೆಂಗಳೂರಿನ ಈ ರಸ್ತೆಗಳಲ್ಲಿ ಪಾರ್ಕಿಂಗ್‌ ನಿಷೇಧ

Lalbagh Flower Show: ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಲಾಲ್‌ಬಾಗ್‌ಗೆ ಲಕ್ಷಾಂತರ ಜನ ಭೇಟಿ ನೀಡುವ ಹಿನ್ನೆಲೆಯಲ್ಲಿ ಸುಗಮ‌ ಸಂಚಾರಕ್ಕೆ ಟ್ರಾಫಿಕ್ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನಗಳ ನಿಲುಗಡೆ ನಿಷೇಧ ಮಾಡಲಾಗಿದ್ದು, ಫ್ಲವರ್ ಶೋಗೆ ಬರುವ ಜನರಿಗೆ ವಾಹನ ನಿಲುಗಡೆಗೆ 4 ಕಡೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

VISTARANEWS.COM


on

Lalbagh Flower Show
Koo

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ತೋಟಗಾರಿಕೆ ಇಲಾಖೆಯಿಂದ ಆ.8ರಿಂದ 19ರವರೆಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ (Lalbagh Flower Show) ಆಯೋಜಿಸಿರುವ ಹಿನ್ನೆಲೆಯಲ್ಲಿ ಉದ್ಯಾನಕ್ಕೆ ಗಣ್ಯವ್ಯಕ್ತಿಗಳು, ಪ್ರವಾಸಿಗರು, ಸಾರ್ವಜನಿಕರು ಸೇರಿ ಸುಮಾರು 8 ರಿಂದ 10 ಲಕ್ಷ ಜನ ಆಗಮಿಸುವ ನಿರೀಕ್ಷೆ ಇರುವುದರಿಂದ ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಲಿದೆ. ಹೀಗಾಗಿ ಸಂಚಾರ ಪೊಲೀಸ್‌ ವಿಭಾಗದಿಂದ ಸುಗಮ ಸಂಚಾರಕ್ಕಾಗಿ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿಷೇಧ ಮಾಡಲಾಗಿದ್ದು, ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಒಟ್ಟು 12 ದಿನಗಳ ಕಾಲ ಫಲಪುಷ್ಪ ಪ್ರದರ್ಶನ ನಡೆಯುವ ಹಿನ್ನೆಲೆಯಲ್ಲಿ ಲಾಲ್‌ಬಾಗ್‌ ಮಾರ್ಗದಲ್ಲಿ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಸುಗಮ ಸಂಚಾರಕ್ಕಾಗಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಿರುವ ಸ್ಥಳಗಳು

  1. ಡಾ. ಮರಿಗೌಡ ರಸ್ತೆ, ಆಲ್ ಅಮೀನ್ ಕಾಲೇಜ್ ಆವರಣದಲ್ಲಿ ದ್ವಿಚಕ್ರ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
  2. ಕೆ.ಎಚ್.ರಸ್ತೆ, ಶಾಂತಿನಗರ ಬಿ.ಎಂ.ಟಿ.ಸಿ. ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ
    ಮಾಡಬಹುದಾಗಿದೆ.
  3. ಡಾ. ಮರಿಗೌಡ ರಸ್ತೆ- ಹಾಪ್ ಕಾಮ್ಸ್‌ನಲ್ಲಿ ದ್ವಿ ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
  4. ಜೆ.ಸಿ. ರಸ್ತೆ- ಕಾರ್ಪೋರೇಷನ್ ಪಾರ್ಕಿಂಗ್ ಸ್ಥಳದಲ್ಲಿ ದ್ವಿ ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.

ವಾಹನಗಳ ನಿಲುಗಡೆ ನಿಷೇಧಿಸಿರುವ ರಸ್ತೆಗಳು

  1. ಡಾ. ಮರಿಗೌಡ ರಸ್ತೆ, ಲಾಲ್‌ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ
  2. ಕೆ.ಎಚ್.ರಸ್ತೆ, ಕೆ.ಎಚ್.ವೃತ್ತದಿಂದ ಶಾಂತಿನಗರ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ,
  3. ಲಾಲ್‌ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್‌ಬಾಗ್ ಮುಖ್ಯದ್ವಾರದವರೆಗೆ
  4. ಸಿದ್ದಯ್ಯ ರಸ್ತೆ, ಊರ್ವಶಿ ಥಿಯೇಟರ್ ಜಂಕ್ಷನ್‌ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್‌ವರೆಗೆ
  5. ಬಿಟಿಎಸ್ ಬಸ್ ಸ್ಟಾಪ್ ಬಿಎಂಟಿಸಿ ಜಂಕ್ಷನ್‌ನಿಂದ ರಸ್ತೆಯ ಎರಡೂ ಬದಿಗಳಲ್ಲಿ.
  6. ಕೃಂಬಿಗಲ್ ರಸ್ತೆಯ ಎರಡೂ ಕಡೆಗಳಲ್ಲಿ.
  7. ಲಾಲ್‌ಬಾಗ್ ವೆಸ್ಟ್‌ಗೇಟ್‌ನಿಂದ ಆರ್.ವಿ. ಟೀಚರ್ಸ್ ಕಾಲೇಜ್‌ವರೆಗೆ.
  8. ಆರ್‌ವಿ ಟೀಚರ್ಸ್ ಕಾಲೇಜ್‌ನಿಂದ ಅಶೋಕ ಪಿಲ್ಲ‌ರ್‌ವರೆಗೆ
  9. ಅಶೋಕ ಪಿಲ್ಲರ್‌ನಿಂದ ಸಿದ್ದಾಮರ ಜಂಕ್ಷನ್ ವರೆಗೆ.

ಡಾ. ಮರೀಗೌಡ ರಸ್ತೆ, ಲಾಲ್‌ಬಾಗ್ ರಸ್ತೆ, ಕೆ.ಎಚ್. ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವುದರಿಂದ ಸಾರ್ವಜನಿಕರು ಸಾಧ್ಯವಾದಷ್ಟು ಮಟ್ಟಿಗೆ ಸಮೂಹ ಸಾರಿಗೆ ವಾಹನಗಳಾದ ಬಿಎಂಟಿಸಿ ಬಸ್‌ಗಳು, ಮೆಟ್ರೋ, ಕ್ಯಾಬ್‌ಗಳನ್ನು ಬಳಸಲು ಹಾಗೂ ವಾಹನಗಳ ನಿಲುಗಡೆಗೆ ಮಾಡಲಾಗಿರುವ ವ್ಯವಸ್ಥೆಯನ್ನು ಅನುಸರಿಸಲು ಕೋರಲಾಗಿದೆ.

    ಆ.8ರಿಂದ 19ವರೆಗೆ ಲಾಲ್‌ಬಾಗ್‌ ಫ್ಲವರ್‌ ಶೋ; ಅನಾವರಣವಾಗಲಿದೆ ಭೀಮ ಸಂದೇಶ

    Lalbagh Flower Show 2024
    Lalbagh Flower Show 2024

    ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಲಾಲ್‌ಬಾಗ್‌ ಸಸ್ಯೋದ್ಯಾನದಲ್ಲಿ ಆ.8ರಿಂದ 19ವರೆಗೆ 216ನೇ ಫಲಪುಷ್ಪ ಪ್ರದರ್ಶನ (Lalbagh Flower Show) ನಡೆಯಲಿದೆ. ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ (Dr BR Ambedkar) ಅವರ ಜೀವನಗಾಥೆಯ ಥೀಮ್‌ ನೋಡುಗರನ್ನು ರಂಜಿಸಲಿದ್ದು, ಆಗಸ್ಟ್ 8 ರಂದು ಬೆಳಗ್ಗೆ 10.30ಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಫ್ಲವರ್‌ ಶೋಗೆ ಚಾಲನೆ ನೀಡಲಿದ್ದಾರೆ.

    ಈ ಬಗ್ಗೆ ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ಶಾಮಲಾ ಇಕ್ಬಾಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಆಗಸ್ಟ್ 8 ರಿಂದ 19ವರೆಗೆ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಅಂಬೇಡ್ಕರ್ ಅವರ ಜೀವನ ಆಧಾರಿತ ಪುಷ್ಪ ಪ್ರದರ್ಶನ ಇರಲಿದ್ದು, ಆಗಸ್ಟ್ 8ರಂದು ಬೆಳಗ್ಗೆ 10.30ಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಚಾಲನೆ ನೀಡಲಿದ್ದಾರೆ. ಇನ್ನು ಮುಖ್ಯ ಅತಿಥಿಯಾಗಿ ಅಂಬೇಡ್ಕರ್ ಅವರ ಮೊಮ್ಮಗ ಭೀಮರಾವ್ ಯಶವಂತ ಅಂಬೇಡ್ಕರ್ ಅವರು ಬರಲಿದ್ದಾರೆ ಎಂದ ತಿಳಿಸಿದ್ದಾರೆ.

    ತೋಟಗಾರಿಕೆ ಇಲಾಖೆ ನಿರ್ದೇಶಕ ರಮೇಶ್ ಮಾತನಾಡಿ, ಈ ಬಾರಿ ಲಾಲ್‌ಬಾಗ್‌ ಪರಿಸರದಲ್ಲಿ ಭೀಮ ಸಂದೇಶ ಅನಾವರಣವಾಗಲಿದೆ. 12 ದಿನಗಳ ಕಾಲ 6 ಆಂಬ್ಯುಲೆನ್ಸ್ ಸೇರಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಒದಗಿಸುತ್ತೇವೆ. ಡೆಂಗ್ಯೂ ಆತಂಕ ಇರುವುದರಿಂದ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಕಳೆದ ಬಾರಿ ಕುಡಿಯುವ ನೀರಿನ ಸಮಸ್ಯೆ ಆಗಿತ್ತು, ಈ ಬಾರಿ ಅಂತಹ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

    ಪ್ರವೇಶ ಶುಲ್ಕ ಎಷ್ಟು?

    168 ವಿವಿಧ ಪ್ರಭೇದದ ಸಸ್ಯಗಳನ್ನು ನಾವೇ ಬೆಳೆದಿದ್ದೇವೆ. ದ್ವಿ ಚಕ್ರ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ, ಸಂಚಾರ ದಟ್ಟಣೆ ಕಡಿಮೆ ಮಾಡಲು ಜನರು ಆದಷ್ಟು ಮೆಟ್ರೋ ಬಳಸಬೇಕು. ಆನ್‌ಲೈನ್‌ ಟಿಕೆಟ್ ಕೂಡ ಲಭ್ಯವಿರುತ್ತದೆ. ಪ್ರವೇಶ ಶುಲ್ಕ ಮಕ್ಕಳಿಗೆ 30 ರೂ., ಸಾಮಾನ್ಯರಿಗೆ 100 ರೂ. ಇರಲಿದೆ. ಶಾಲಾ ಮಕ್ಕಳಿಗೆ ಉಚಿತ ಪ್ರವೇಶವಿರಲಿದೆ ಎಂದು ತೋಟಗಾರಿಕೆ ಇಲಾಖೆ ನಿರ್ದೇಶಕ ರಮೇಶ್ ಮಾಹಿತಿ ನೀಡಿದರು.

    ಇದನ್ನೂ ಓದಿ | Rajya Sabha Election: 9 ರಾಜ್ಯಗಳ 12 ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ಘೋಷಣೆ; ಸೆ.3ಕ್ಕೆ ಮತದಾನ

    ಕಳೆದ ಬಾರಿ 60-70 ಲಕ್ಷ ಲಾಭ ಆಗಿದೆ.. ಈ ಬಾರಿ ಕೂಡ ಸಾಕಷ್ಟು ಆದಾಯ ಬರುವ ನಿರೀಕ್ಷೆ ಇದೆ. ವಾಕಿಂಗ್ ಬರುವವರು ಕೂಡ ಟಿಕೆಟ್ ತೆಗೆದುಕೊಂಡು ಬರಬೇಕು. ಪಾರ್ಕ್‌ನಲ್ಲಿ ಜೇನು ಹುಳುಗಳು ಇಲ್ಲ, ಎರಡು ವರ್ಷಗಳ ಹಿಂದೆ ಇತ್ತು, ಈಗ ಇಲ್ಲ. ಬಹುತೇಕ ಪ್ಲಾಸ್ಟಿಕ್ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು.

    Continue Reading

    ದೇಶ

    Rajya Sabha Election: 9 ರಾಜ್ಯಗಳ 12 ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ಘೋಷಣೆ; ಸೆ.3ಕ್ಕೆ ಮತದಾನ

    Rajya Sabha Election: ಸೆಪ್ಟೆಂಬರ್‌ 3ರಂದು ಮತದಾನ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ. ಮಹಾರಾಷ್ಟ್ರ, ಬಿಹಾರ, ಅಸ್ಸಾಂನ ತಲಾ 2, ಮಧ್ಯಪ್ರದೇಶ, ಹರಿಯಾಣ, ಒಡಿಶಾ, ತೆಲಂಗಾಣ, ಹರಿಯಾಣ ಹಾಗೂ ತ್ರಿಪುರದ ತಲಾ 1 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

    VISTARANEWS.COM


    on

    Rajya Sabha Election
    Koo

    ನವದೆಹಲಿ: ದೇಶದ 9 ರಾಜ್ಯಗಳ 12 ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ಆಯೋಗವು (Election Commission Of India) ಚುನಾವಣಾ (Rajya Sabha Election) ದಿನಾಂಕ ಘೋಷಣೆ ಮಾಡಿದೆ. ಸೆಪ್ಟೆಂಬರ್‌ 12ರಂದು ಮತದಾನ ನಡೆಯಲಿದ್ದು, 9 ರಾಜ್ಯಗಳ ವಿಧಾನಸಭೆಗಳ ಮೂಲಕ ಸದಸ್ಯರು ಆಯ್ಕೆಯಾಗಲಿದ್ದಾರೆ. ಕೇಂದ್ರ ಸಚಿವರಾದ ಪಿಯೂಷ್‌ ಗೋಯಲ್‌, ಸರ್ಬಾನಂದ ಸೋನೋವಾಲ್‌ ಹಾಗೂ ಜ್ಯೋತಿರಾದಿತ್ಯ ಸಿಂಧಿಯಾ ಸೇರಿ ಹಲವರು ಲೋಕಸಭೆಗೆ ಆಯ್ಕೆಯಾಗಿರುವ ಕಾರಣ ಸ್ಥಾನಗಳು ಖಾಲಿಯಾಗಿವೆ.

    ಚುನಾವಣೆ ಆಯೋಗವು ಆಗಸ್ಟ್‌ 14ರಂದು ಅಧಿಸೂಚನೆ ಹೊರಡಿಸಲಿದ್ದು, ಆಗಸ್ಟ್‌ 21ರೊಳಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದಾಗಿದೆ. ಆಗಸ್ಟ್‌ 22ರಂದು ನಾಮಪತ್ರ ಪರಿಶೀಲನೆ ಮಾಡಲಾಗುತ್ತದೆ. ಸೆಪ್ಟೆಂಬರ್‌ 3ರಂದು ಮತದಾನ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ. ಮಹಾರಾಷ್ಟ್ರ, ಬಿಹಾರ, ಅಸ್ಸಾಂನ ತಲಾ 2, ಮಧ್ಯಪ್ರದೇಶ, ಹರಿಯಾಣ, ಒಡಿಶಾ, ತೆಲಂಗಾಣ, ಹರಿಯಾಣ ಹಾಗೂ ತ್ರಿಪುರದ ತಲಾ 1 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

    ಎನ್‌ಡಿಎ ಬಲಾಬಲ ಹೇಗಿದೆ?

    ರಾಜ್ಯಸಭೆಯಲ್ಲಿ ಎನ್‌ಡಿಎ ಬಲವು 101 ಇದೆ. ಒಟ್ಟು 245 ಸದಸ್ಯರ ಬಲದ ರಾಜ್ಯಸಭೆಯಲ್ಲಿ ಈಗ 225 ಸದಸ್ಯರು ಇದ್ದು, ಬಹುಮತಕ್ಕೆ 113 ಸದಸ್ಯರ ಬೆಂಬಲದ ಅವಶ್ಯಕತೆ ಇದೆ. ಆದಾಗ್ಯೂ, ಒಬ್ಬ ಸ್ವತಂತ್ರ ಅಭ್ಯರ್ಥಿ ಹಾಗೂ 7 ನಾಮನಿರ್ದೇಶನಗೊಂಡಿರುವ ಸದಸ್ಯರ ಬಲವೂ ಎನ್‌ಡಿಎಗೆ ಇದೆ. ಅಲ್ಲಿಗೆ, ಮೇಲ್ಮನೆಯಲ್ಲಿ ಎನ್‌ಡಿಎ ಬಹುಮತಕ್ಕೆ ಇನ್ನೂ 4 ಸದಸ್ಯರ ಕೊರತೆ ಇದೆ. ಬಿಜೆಪಿಯು 87 ಸದಸ್ಯರನ್ನು ಹೊಂದಿದೆ.

    ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಒಕ್ಕೂಟವು 87 ಸದಸ್ಯರನ್ನು ಹೊಂದಿದೆ. ಇವರಲ್ಲಿ ಕಾಂಗ್ರೆಸ್‌ 26, ತೃಣಮೂಲ ಕಾಂಗ್ರೆಸ್‌ 13, ಆಮ್‌ ಆದ್ಮಿ ಪಕ್ಷ, ಡಿಎಂಕೆ ತಲಾ 10 ಸದಸ್ಯರನ್ನು ಹೊಂದಿವೆ. ಉಳಿದ ಸ್ಥಾನಗಳು ತೆಲಂಗಾಣದ ಬಿಆರ್‌ಎಸ್‌, ನಾಮನಿರ್ದೇಶಿತ ಸದಸ್ಯರು ಹಾಗೂ ಸ್ವತಂತ್ರ ಸದಸ್ಯರಾಗಿದ್ದಾರೆ. ಆದಾಗ್ಯೂ ಬಿಜೆಪಿಯು ಪ್ರಸಕ್ತ ವರ್ಷ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಬಹುದಾಗಿದೆ. ಈಗ 12 ಸ್ಥಾನಗಳಿಗೆ ಚುನಾವಣೆ ಘೋಷಣೆಯಾದ ಕಾರಣ ಸ್ಥಾನ ಹೆಚ್ಚಿಸಿಕೊಳ್ಳಲು ಪ್ರಯತ್ನಿಸಲಿದೆ.

    ಇದನ್ನೂ ಓದಿ: Amit Shah: 2029ರ ಚುನಾವಣೆಯಲ್ಲೂ ಬಿಜೆಪಿಗೆ ಗೆಲುವು, ಕಾಂಗ್ರೆಸ್‌ ಪ್ರತಿಪಕ್ಷದಲ್ಲೇ; ಅಮಿತ್‌ ಶಾ ಭವಿಷ್ಯ

    Continue Reading

    ಕ್ರೀಡೆ

    Vinesh Phogat: ವಿನೇಶ್ ಫೋಗಟ್‌ ಅನರ್ಹತೆಗೆ ಸಂಸತ್‌ನಲ್ಲಿ ಸಚಿವ ಮಂಡಾವಿಯ ಆಕ್ರೋಶ; ನೆರವಿನ ಅಭಯ

    Vinesh Phogat: ಫೈನಲ್‌ಗೆ ಪ್ರವೇಶಿಸಿದ ಬಳಿಕ ತಮ್ಮ ತೂಕ ಇಳಿಸಿಕೊಳ್ಳಲು ರಾತ್ರಿಪೂರ್ತಿ ವರ್ಕ್‌ಔಟ್‌ ಮಾಡಿದ್ದ ವಿನೇಶ್‌, ಇಂದು ನಿರ್ಜಲೀಕರಣದಿಂದಾಗಿ ಅಸ್ವಸ್ತಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಆದರೆ, ಅವರನ್ನು ಅನರ್ಹಗೊಳಿಸಿರುವ ಕುರಿತು ಭಾರತದಾದ್ಯಂತ ಆಕ್ರೋಶ ವ್ಯಕ್ತಪಡಿಸಿದೆ.

    VISTARANEWS.COM


    on

    Vinesh Phogat
    Koo

    ಪ್ಯಾರಿಸ್:‌ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (paris olympics) ಫೈನಲ್​ ಪ್ರವೇಶಿಸುವ ಮೂಲಕ ಇತಿಹಾಸ ಸೃಷ್ಟಿಸುವ ತವಕದಲ್ಲಿದ್ದ ಭಾರತದ ಖ್ಯಾತ ಮಹಿಳಾ ಕುಸ್ತಿಪಟು (Wrestler) ವಿನೇಶ್​ ಫೋಗಟ್ (Vinesh Phogat) ಅವರನ್ನು ಹೆಚ್ಚಿನ ತೂಕದ ಹಿನ್ನೆಲೆಯಲ್ಲಿ ಅನರ್ಹತೆಗೊಳಿಸಿರುವುದಕ್ಕೆ ಕೇಂದ್ರ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿದೆ. ವಿನೇಶ್‌ ಫೋಗಟ್‌ ಅನರ್ಹತೆ ಕುರಿತು ಸಂಸತ್‌ನಲ್ಲಿ ಕೇಂದ್ರ ಕ್ರೀಡಾ ಸಚಿವ ಮನ್ಸುಖ್‌ ಮಂಡಾವಿಯ (Mansukh Mandaviya) ಅವರು ಪ್ರಸ್ತಾಪಿಸಿದ್ದು, ಅನರ್ಹತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    100 ಗ್ರಾಂ ಹೆಚ್ಚು ತೂಕವಿದ್ದ ಕಾರಣ ಅವರು ಒಲಿಂಪಿಕ್ಸ್‌ನಿಂದ ಅನರ್ಹತೆ ಪಡೆದಿದ್ದಾರೆ. ಒಲಿಂಪಿಕ್ಸ್‌ ನಿಯಮಗಳ ಅನುಸಾರ ಅವರನ್ನು ಅನರ್ಹಗೊಳಿಸಲಾಗಿದೆ. ಭಾರತೀಯ ಒಲಿಂಪಿಕ್ಸ್‌ ಅಸೋಸಿಯೇಷನ್‌ ಈಗ ಒಲಿಂಪಿಕ್ಸ್‌ ಅಸೋಸಿಯೇಷನ್‌ಗೆ ದೂರು ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಒಲಿಂಪಿಕ್ಸ್‌ ಅಸೋಸಿಯೇಷನ್‌ ಅಧ್ಯಕ್ಷೆ ಪಿ.ಟಿ. ಉಷಾ ಅವರಿಗೆ ಕರೆ ಮಾಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಲು ಸೂಚಿಸಿದ್ದಾರೆ ಎಂದು ಮಂಡಾವಿಯ ಹೇಳಿದ್ದಾರೆ.

    ಪ್ರತಿಯೊಂದು ಹೆಜ್ಜೆಯಲ್ಲೂ ವಿನೇಶ್‌ ಫೋಗಟ್‌ ಅವರಿಗೆ ಸಹಕಾರ ನೀಡಲಾಗಿದೆ. ಅವರಿಗೆ ವೈಯಕ್ತಿಕ ಸಿಬ್ಬಂದಿಯನ್ನೂ ಭಾರತ ಕಳುಹಿಸಿದೆ. ಸಹಾಯಕ ಸಿಬ್ಬಂದಿಯನ್ನೂ ಅವರಿಗೆ ಒದಗಿಸಲಾಗಿದೆ. ಇದಕ್ಕೂ ಮೊದಲು ಕೂಡ ವಿನೇಶ್‌ ಫೋಗಟ್‌ ಅವರ ಸಾಧನೆಗೆ ಕೇಂದ್ರ ಸರ್ಕಾರ ಹಣಕಾಸು ನೆರವು ನೀಡಿದೆ. ಮುಂದಿನ ದಿನಗಳಲ್ಲೂ ನೆರವು ನೀಡಲಿದೆ ಎಂದು ಅವರು ತಿಳಿಸಿದ್ದಾರೆ.

    ತೂಕ ಇಳಿಸಿದ್ದೇ ಸಮಸ್ಯೆಗೆ ಕಾರಣ?

    ವಿನೇಶ್​ 50 ಕೆಜಿ ವಿಭಾಗದಲ್ಲಿ ಒಲಿಂಪಿಕ್ಸ್​ ಆಡುತ್ತಿರುವುದು ಇದೇ ಮೊದಲ ಬಾರಿ. ಇದಕ್ಕೂ ಮುನ್ನ ರಿಯೋ ಒಲಿಂಪಿಕ್ಸ್​ನಲ್ಲಿ 48 ಕೆಜಿ, ಟೋಕಿಯೊದಲ್ಲಿ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರು. ಒಲಿಂಪಿಕ್ಸ್​ ಆರಂಭಕ್ಕೂ ಮುನ್ನ ನಡೆದಿದ್ದ ಸೀನಿಯರ್‌ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿಯೂ ವಿನೇಶ್​ 55 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ ಚಿನ್ನದ ಪದಕ ಗೆದ್ದಿದ್ದರು. ಆದರೆ, 50 ಕೆಜಿ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಅವರು ಕಣಕ್ಕಿಳಿದ್ದರು. ಇದೀಗ ತೂಕ ಬದಲಿಸಿದ್ದೇ ಅವರ ಈ ಹಿನ್ನಡೆಗೆ ಕಾರಣ ಎಂದರೂ ತಪ್ಪಾಗಲಾರದು.

    ಒಲಿಂಪಿಕ್ಸ್​ ಸ್ಪರ್ಧೆಗೂ ಮುನ್ನ ವಿನೇಶ್​ ಅವರ ತೂಕ 2 ಕೆಜಿ ಹೆಚ್ಚಳವಾಗಿತ್ತು. ಇದನ್ನು ಕಡಿಮೆ ಮಾಡಲೆಂದೆ ಅವರು ನಿದ್ದೆ, ಆಹಾರ ಬಿಟ್ಟು ಅತ್ಯಂತ ಕಠಿಣ ವ್ಯಾಯಾಮ ನಡೆಸಿ ಸುಮಾರು 1.90 ಕೆಜಿ ತೂಕ ಇಳಿಸಿಕೊಂಡಿದ್ದರು. ಆದರೆ 100 ಗ್ರಾಂ ಹೆಚ್ಚಳದಿಂದ ಇದೀಗ ಅವರ ಒಲಿಂಪಿಕ್ಸ್​ ಪದಕದ ಕನಸು ನುಚ್ಚುನೂರಾಗಿದೆ. ಒಂದೊಮ್ಮೆ ಅವರು ತಮ್ಮ ಈ ಹಿಂದಿನಂತೆ 53 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರೆ ಈ ಹಿನ್ನಡೆ ಉಂಟಾಗುತ್ತಿರಲಿಲ್ಲ.

    ಪ್ರಧಾನಿ ಮೋದಿ ಟ್ವೀಟ್​ ಮೂಲಕ ಸಾಂತ್ವನ

    ಅನರ್ಹವಾಗಿ ಆಘಾತದಲ್ಲಿರುವ ವಿನೇಶ್​ಗೆ ಪ್ರಧಾನಿ ಮೋದಿ ಟ್ವೀಟ್​ ಮೂಲಕ ಸಾಂತ್ವನ ಹೇಳಿದ್ದಾರೆ. “ವಿನೇಶ್, ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್! ನೀವು ಭಾರತದ ಹೆಮ್ಮೆ ಮತ್ತು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿ. ಇಂದಿನ ಹಿನ್ನಡೆ ನಿಮಗೆ ಮಾತ್ರವಲ್ಲದೆ ಇಡೀ ದೇಶವಾಸಿಗಳಿಗೆ ನೋವು ತಂದಿದೆ. ಸವಾಲುಗಳನ್ನು ಎದುರಿಸುವುದು ಯಾವಾಗಲೂ ನಿಮ್ಮ ಸ್ವಭಾವವಾಗಿದೆ. ಬಲವಾಗಿ ಹಿಂತಿರುಗಿ! ನಾವೆಲ್ಲರೂ ನಿಮ್ಮೊಂದಿಗೆ ಇದ್ದೇವೆ” ಎಂದು ಮೋದಿ ಟ್ವೀಟ್​ ಮಾಡಿದ್ದಾರೆ. ಜತೆತೆ ಅಂತಾರಾಷ್ಟ್ರೀಯ ಒಲಿಂಪಿಕ್​ ಸಮಿತಿಗೆ ಮತ್ತೊಮ್ಮೆ ಈ ನಿರ್ಧಾರವನ್ನು ಪರಿಶೀಲಿಸುವಂತೆ ಮೋದಿ ಮನವಿ ಮಾಡಿದ್ದಾರೆ.

    ಇದನ್ನೂ ಓದಿ: Vinesh Phogat: ನೋ! ನೋ! ನೋ!; ವಿನೇಶ್​ ಫೋಗಟ್ ಅನರ್ಹತೆ ಕೆಟ್ಟ ಕನಸಾಗಿರಲಿ: ಆನಂದ್‌ ಮಹೀಂದ್ರಾ

    Continue Reading
    Advertisement
    National Handloom day 2024
    ಫ್ಯಾಷನ್34 mins ago

    National Handloom day 2024: ಕರ್ನಾಟಕದ ಹೆಮ್ಮೆಯ ವಿಶ್ವ ಪ್ರಸಿದ್ಧ ಹ್ಯಾಂಡ್‌ ಲೂಮ್‌ ಸೀರೆಗಳಿವು

    Viral Video
    Latest45 mins ago

    Viral Video: 11 ವರ್ಷಗಳ ಹಿಂದೆ ಸತ್ತಿದ್ದ ಗಂಡ ಕನಸಲ್ಲಿ ಬಂದು ʼಸೇರಿದʼ; ಹಾಗಾಗಿ ಮಗು ಹುಟ್ಟಿತು ಅಂತಿದ್ದಾಳೆ ಈ ಹೆಂಗಸು!

    Vinesh Phogat
    ಕ್ರೀಡೆ56 mins ago

    Vinesh Phogat: ವಿನೇಶ್‌ ಫೋಗಟ್‌ ಅನರ್ಹ; ದಿಢೀರ್ 2-3 ಕೆ.ಜಿ ತೂಕ ಇಳಿಸಲು ಮುಂದಾದರೆ ದೇಹಕ್ಕೆ ಏನಾಗುತ್ತದೆ?

    Lalbagh Flower Show
    ಕರ್ನಾಟಕ1 hour ago

    Lalbagh Flower Show: ಲಾಲ್‌ಬಾಗ್ ಫ್ಲವರ್‌ ಶೋ; ನಾಳೆಯಿಂದ ಬೆಂಗಳೂರಿನ ಈ ರಸ್ತೆಗಳಲ್ಲಿ ಪಾರ್ಕಿಂಗ್‌ ನಿಷೇಧ

    Viral Video
    Latest1 hour ago

    Viral Video: ರೀಲ್ಸ್‌ಗಾಗಿ ಬೆಡ್‌ರೂಮ್‌ನಲ್ಲಿ ಅರೆನಗ್ನ ಗೆಳತಿ ಕೈಗೆ ಪಿಸ್ತೂಲ್ ಕೊಟ್ಟ ಪೊಲೀಸ್ ಅಧಿಕಾರಿ!

    Viral News
    Latest2 hours ago

    Viral News: ಚಹಾ ಮಾರಾಟದಿಂದ ಇವರಿಗೆ ಪ್ರತಿ ತಿಂಗಳು 2 ಲಕ್ಷ ರೂ. ಆದಾಯ!

    Viral video
    ವೈರಲ್ ನ್ಯೂಸ್2 hours ago

    Viral Video: ಐದನೇ ಮಹಡಿಯಿಂದ ಬಾಲಕಿ ಮೇಲೆ ಬಿದ್ದ ಶ್ವಾನ; ಆಮೇಲೆ ಆಗಿದ್ದೇನು? ವಿಡಿಯೋ ಇದೆ

    OTT Releases
    ಸಿನಿಮಾ2 hours ago

    OTT Releases: ಇಂಡಿಯನ್ 2, ಟರ್ಬೊ ಸೇರಿದಂತೆ ಹಲವು ಹೊಸ ಚಿತ್ರಗಳು ಈ ವಾರ ಒಟಿಟಿಯಲ್ಲಿ!

    Gowri Movie Saanya Iyer Samar Lankesh eating dosa with together
    ಸಿನಿಮಾ2 hours ago

    Gowri Movie: ಸಮರ್ಜಿತ್‌ಗೆ ನಾಚಿಕೆಯಿಂದ ದೋಸೆ ತಿನ್ನಿಸಿದ ಸಾನ್ಯಾ ಅಯ್ಯರ್; ಇದೇನು ಡೇಟಿಂಗಾ ಎಂದು ಪ್ರಶ್ನೆ ಇಟ್ಟ ಫ್ಯಾನ್ಸ್!

    Self Harming
    ಕರ್ನಾಟಕ2 hours ago

    Self Harming: ಇನ್‍ಸ್ಟಾಗ್ರಾಂ ಪ್ರೇಯಸಿ ಕೈಕೊಟ್ಟಿದ್ದಕ್ಕೆ ನೇಣಿಗೆ ಶರಣಾದ ಯುವಕ

    Sharmitha Gowda in bikini
    ಕಿರುತೆರೆ10 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ10 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ10 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    Kannada Serials
    ಕಿರುತೆರೆ10 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    galipata neetu
    ಕಿರುತೆರೆ8 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ8 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    varun
    ಕಿರುತೆರೆ9 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Wild Animals Attack
    ಚಿಕ್ಕಮಗಳೂರು1 day ago

    Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

    Karnataka Weather Forecast
    ಮಳೆ1 day ago

    Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

    assault case
    ಬೆಳಗಾವಿ3 days ago

    Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

    karnataka rain
    ಮಳೆ4 days ago

    Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

    karnataka Rain
    ಮಳೆ6 days ago

    Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

    Karnataka Rain
    ಮಳೆ6 days ago

    Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

    karnataka Rain
    ಮಳೆ6 days ago

    Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

    karnataka Rain
    ಮಳೆ1 week ago

    Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

    Karnataka Rain
    ಮಳೆ1 week ago

    Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

    Bharachukki falls
    ಚಾಮರಾಜನಗರ1 week ago

    Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

    ಟ್ರೆಂಡಿಂಗ್‌