PM Narendra Modi: ʼಐತಿಹಾಸಿಕ ದಿನ….ʼ ಸೆಮಿ ಕಂಡಕ್ಟರ್‌ ಘಟಕಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ - Vistara News

ಪ್ರಮುಖ ಸುದ್ದಿ

PM Narendra Modi: ʼಐತಿಹಾಸಿಕ ದಿನ….ʼ ಸೆಮಿ ಕಂಡಕ್ಟರ್‌ ಘಟಕಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಗುಜರಾತ್‌ನಲ್ಲಿ ಎರಡು ಮತ್ತು ಅಸ್ಸಾಂನಲ್ಲಿ ಒಂದು ಹೊಸ ಸೆಮಿಕಂಡಕ್ಟರ್‌ ಘಟಕಗಳಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಬುಧವಾರ ಶಂಕುಸ್ಥಾಪನೆ ಮಾಡಿದರು.

VISTARANEWS.COM


on

pm narendra modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಇಂದು ಐತಿಹಾಸಿಕ ದಿನ. ಭವಿಷ್ಯದಲ್ಲಿ ಭಾರತ ಸೆಮಿಕಂಡಕ್ಟರ್ (semiconductor) ಉತ್ಪಾದನೆಯ ಜಾಗತಿಕ ಕೇಂದ್ರವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದರು.

ಮೂರು ಸೆಮಿಕಂಡಕ್ಟರ್‌ ಉತ್ಪಾದನಾ ಘಟಕಗಳ ಉದ್ಘಾಟನೆ ಮಾಡಿದ ಬಳಿಕ ʻಇಂಡಿಯಾಸ್ ಟೆಕೇಡ್: ಚಿಪ್ಸ್ ಫಾರ್ ವಿಕಸಿತ್ ಭಾರತ್’ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಗುಜರಾತ್‌ನಲ್ಲಿ ಎರಡು ಮತ್ತು ಅಸ್ಸಾಂನಲ್ಲಿ ಒಂದು ಹೊಸ ಸೆಮಿಕಂಡಕ್ಟರ್‌ ಘಟಕಗಳಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಶಂಕುಸ್ಥಾಪನೆ ಮಾಡಿದರು. ₹1.25 ಲಕ್ಷ ಕೋಟಿ ಮೌಲ್ಯದ ಈ ಯೋಜನೆಗಳು ಸೆಮಿಕಂಡಕ್ಟರ್ ಉತ್ಪಾದನೆಗೆ ಜಾಗತಿಕ ಕೇಂದ್ರವಾಗುವತ್ತ ಭಾರತದ ನಿರ್ಣಾಯಕ ಹೆಜ್ಜೆಯಾಗಿದೆ. ಟಾಟಾ ಗ್ರೂಪ್ ಈ ಎರಡು ಉದ್ಯಮಗಳನ್ನು ಮುನ್ನಡೆಸುತ್ತಿದೆ.

ನಂತರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸೆಮಿಕಂಡಕ್ಟರ್ ಯೋಜನೆಗಳ ಪರಿಣಾಮದ ಬಗ್ಗೆ ಆಶಾವಾದ ವ್ಯಕ್ತಪಡಿಸಿದರು. ಸೆಮಿಕಂಡಕ್ಟರ್ ತಯಾರಿಕೆಯಲ್ಲಿ ಭಾರತದ ಮುನ್ನುಗ್ಗುವಿಕೆಯ ಕಾರ್ಯತಂತ್ರದ ಮಹತ್ವವನ್ನು ಮೋದಿ ಎತ್ತಿ ತೋರಿಸಿದ್ದು, ವಿಶ್ವಾಸಾರ್ಹ ಮತ್ತು ನಿರಂತರ ಪೂರೈಕೆ ಸರಪಳಿಯ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು.

“ಭಾರತವು ಒಪ್ಪಿಕೊಂಡ ಮಾತಿಗೆ ತಕ್ಕಹಾಗೆ ನಡೆದುಕೊಳ್ಳುತ್ತದೆ. ಜಗತ್ತಿನಲ್ಲಿ ಕೆಲವೇ ದೇಶಗಳು ಸೆಮಿಕಂಡಕ್ಟರ್‌ಗಳನ್ನು ತಯಾರಿಸುತ್ತಿವೆ. ವಿಶ್ವಾಸಾರ್ಹ ಮತ್ತು ನಿರಂತರ ಚಿಪ್ಸ್‌ ಪೂರೈಕೆ ಸರಪಳಿಯ ಅಗತ್ಯವಿದೆ ಎಂದು Covid-19 ನಮಗೆ ಕಲಿಸಿದೆ. ಇದರಲ್ಲಿ ನಿರ್ಣಾಯಕ ಪಾತ್ರ ವಹಿಸಲು ಭಾರತ ಉತ್ಸುಕವಾಗಿದೆ” ಎಂದು ಪ್ರಧಾನಿ ಹೇಳಿದರು.

“ಭಾರತವು ಈಗಾಗಲೇ ಬಾಹ್ಯಾಕಾಶ, ಪರಮಾಣು ಮತ್ತು ಡಿಜಿಟಲ್ ಶಕ್ತಿಯಾಗಿದೆ. ನಾವು ಈಗ ಸೆಮಿಕಂಡಕ್ಟರ್ ಉತ್ಪನ್ನಗಳ ವಾಣಿಜ್ಯ ಉತ್ಪಾದನೆಯನ್ನು ಸಹ ಪ್ರಾರಂಭಿಸಲಿದ್ದೇವೆ. ಭಾರತವು ಈ ವಲಯದಲ್ಲಿ ಜಾಗತಿಕ ಶಕ್ತಿಯಾಗುವ ದಿನ ದೂರವಿಲ್ಲ” ಎಂದು ಅವರು ಪ್ರತಿಪಾದಿಸಿದರು.

ಸ್ವದೇಶಿ ಚಿಪ್ ಉತ್ಪಾದನೆಯ ಮೂಲಕ ಸ್ವಾವಲಂಬನೆ ಮತ್ತು ಆಧುನಿಕತೆಗೆ ಭಾರತದ ಬದ್ಧತೆಯನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದರು. “ವಿವಿಧ ಕಾರಣಗಳಿಂದಾಗಿ, ಮೊದಲ ಮತ್ತು ಎರಡನೆಯ ಕೈಗಾರಿಕಾ ಕ್ರಾಂತಿಗಳ ಸಮಯದಲ್ಲಿ ಭಾರತವು ಹಿಂದುಳಿದಿತ್ತು. ಆದಾಗ್ಯೂ, ಭಾರತವು ನಾಲ್ಕನೇ ತಲೆಮಾರಿನ ಉದ್ಯಮವನ್ನು ಆತ್ಮವಿಶ್ವಾಸದಿಂದ ಮುನ್ನಡೆಸುತ್ತಿದೆ. 21ನೇ ಶತಮಾನವು ತಂತ್ರಜ್ಞಾನ-ಚಾಲಿತ ಶತಮಾನವಾಗಿದೆ. ಎಲೆಕ್ಟ್ರಾನಿಕ್ ಚಿಪ್ಸ್ ಇಲ್ಲದೆ ಇದನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ. ಮೇಡ್ ಇನ್ ಇಂಡಿಯಾ ಚಿಪ್, ಡಿಸೈನ್ಡ್ ಇನ್ ಇಂಡಿಯಾ ಚಿಪ್, ಭಾರತವನ್ನು ಸ್ವಾವಲಂಬನೆ ಮತ್ತು ಆಧುನಿಕತೆಯತ್ತ ಕೊಂಡೊಯ್ಯಲಿದೆ” ಎಂದು ಅವರು ಹೇಳಿದರು.

ಭಾರತದಲ್ಲಿ ಸೆಮಿಕಂಡಕ್ಟರ್ ಉದ್ಯಮವು ಇನ್ನೂ ಆರಂಭಿಕ ಹಂತದಲ್ಲಿದೆ. ವಿವಿಧ ಸ್ಥಳೀಯ ಮತ್ತು ಬಹುರಾಷ್ಟ್ರೀಯ ಕಂಪನಿಗಳು ಭಾರತದ ವಿಶಾಲ ಸಾಮರ್ಥ್ಯವನ್ನು ಬಳಸಿಕೊಳ್ಳಲು ಉದ್ದೇಶಿಸಿವೆ. ಮೂರು ಮಹತ್ವದ ಯೋಜನೆಗಳಿಗೆ ಮೋದಿ ಅಡಿಪಾಯ ಹಾಕಿದರು: ಗುಜರಾತ್‌ನ ಧೋಲೇರಾ ವಿಶೇಷ ಹೂಡಿಕೆ ಪ್ರದೇಶದಲ್ಲಿ (DSIR) ಸೆಮಿಕಂಡಕ್ಟರ್ ಫ್ಯಾಬ್ರಿಕೇಶನ್ ಸೌಲಭ್ಯ; ಗುಜರಾತ್‌ನ ಸಾನಂದ್‌ ಹಾಗೂ ಅಸ್ಸಾಂನ ಮೊರಿಗಾಂವ್‌ಗಳಲ್ಲಿ ಹೊರಗುತ್ತಿಗೆ ಸೆಮಿಕಂಡಕ್ಟರ್ ಅಸೆಂಬ್ಲಿ ಮತ್ತು ಟೆಸ್ಟ್ (OSAT) ಸೌಲಭ್ಯಗಳು.

ಇದನ್ನೂ ಓದಿ: Narendra Modi: ಮುಕ್ತ ವ್ಯಾಪಾರ ಒಪ್ಪಂದ; ಇಂಗ್ಲೆಂಡ್‌ ಪ್ರಧಾನಿ ರಿಷಿ ಸುನಕ್ ಜತೆ ಮೋದಿ ಮಾತುಕತೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024 : ಹಾರ್ದಿಕ್ ಪಾಂಡ್ಯಗೆ ನಿಷೇಧ ಹೇರಿದ ಬಿಸಿಸಿಐ; ಮುಂದಿನ ಪಂದ್ಯದಲ್ಲಿ ಆಡದಂತೆ ತಾಕೀತು

IPL 2024 : ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ ಪ್ಲೇಯಿಂಗ್ ಇಲೆವೆನ್​​ನ ಉಳಿದ ಸದಸ್ಯರಿಗೆ ತಲಾ 12 ಲಕ್ಷ ರೂ.ಗಳ ದಂಡ ಅಥವಾ ಆಯಾ ಪಂದ್ಯದ ಶುಲ್ಕದ 50 ಪ್ರತಿಶತದಷ್ಟು ದಂಡ ವಿಧಿಸಲಾಗಿದೆ. ಮುಂಬೈ ತಂಡದ ಐಪಿಎಲ್​ 2024ರ ಅಭಿಯಾನ ಮುಕ್ತಾಯಗೊಂಡಿದೆ. ಹೀಗಾಗಿ ಅವರ ಬ್ಯಾನ್ ಯಾವ ರೀತಿಯಲ್ಲಿ ಪರಿಣಾಮಕಾರಿ ಎಂಬುದು ಅಸ್ಪಷ್ಟ.

VISTARANEWS.COM


on

IPL 2024
Koo

ಮುಂಬೈ: ಇಲ್ಲಿನ ವಿಶ್ವ ಪ್ರಸಿದ್ಧ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ ರಾತ್ರಿ ನಡೆದ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧದ ಐಪಿಎಲ್​ 2024 (IPL 2024 ) ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ ನಿಯಮಗಳನ್ನು ಮೀರಿದ ಹಿನ್ನೆಲೆಯಲ್ಲಿ ಭಾರಿ ಮೊತ್ತದ ದಂಡ ಪಾವತಿ ಮಾಡಬೇಕಾಗಿದೆ. ಜತೆಗೆ ಅವರಿಗೆ ನಿಷೇಧವನ್ನೂ ಹೇರಿದೆ. ಪಂದ್ಯದಲ್ಲಿ ಅವರ ನೇತೃತ್ವದ ತಂಡವು ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿತ್ತು. ಹೀಗಾಗಿ ಬಿಸಿಸಿಐ 30 ಲಕ್ಷ ರೂ.ಗಳ ದಂಡ ವಿಧಿಸಿದೆ. ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದ ಐಪಿಎಲ್​​ನ ನೀತಿ ಸಂಹಿತೆಯ ಅಡಿಯಲ್ಲಿ ಇದು ಅವರ ತಂಡದ ಮೂರನೇ ಅಪರಾಧವಾಗಿದೆ. ಹೀಗಾಗಿ ಪಾಂಡ್ಯಗೆ 30 ಲಕ್ಷ ರೂ.ಗಳ ದಂಡ ವಿಧಿಸಲಾಯಿತು ಮತ್ತು ತಂಡದ ಮುಂದಿನ ಪಂದ್ಯವನ್ನು ಆಡದಂತೆ ನಿಷೇಧಿಸಲಾಗಿದೆ ಎಂದು ಐಪಿಎಲ್ ಹೇಳಿಕೆಯಲ್ಲಿ ತಿಳಿಸಿದೆ.

ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ ಪ್ಲೇಯಿಂಗ್ ಇಲೆವೆನ್​​ನ ಉಳಿದ ಸದಸ್ಯರಿಗೆ ತಲಾ 12 ಲಕ್ಷ ರೂ.ಗಳ ದಂಡ ಅಥವಾ ಆಯಾ ಪಂದ್ಯದ ಶುಲ್ಕದ 50 ಪ್ರತಿಶತದಷ್ಟು ದಂಡ ವಿಧಿಸಲಾಗಿದೆ. ಮುಂಬೈ ತಂಡದ ಐಪಿಎಲ್​ 2024ರ ಅಭಿಯಾನ ಮುಕ್ತಾಯಗೊಂಡಿದೆ. ಹೀಗಾಗಿ ಅವರ ಬ್ಯಾನ್ ಯಾವ ರೀತಿಯಲ್ಲಿ ಪರಿಣಾಮಕಾರಿ ಎಂಬುದು ಅಸ್ಪಷ್ಟ.

ನಿಕೋಲಸ್ ಪೂರನ್ (28 ಎಸೆತಗಳಲ್ಲಿ 75 ರನ್) ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ 45 ನಿಮಿಷಗಳ ಮಳೆ ವಿರಾಮದ ನಡುವೆ ಮುಂಬೈ ಇಂಡಿಯನ್ಸ್ ವಿರುದ್ಧ 18 ರರನ್​ಗಳ ಭರ್ಜರಿ ಜಯ ದಾಖಲಿಸಿದೆ. ಪೂರನ್ 19 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಅವರು 8 ಸಿಕ್ಸರ್ ಬಾರಿಸುವ ಮೂಲಕ ಐಪಿಎಲ್ 2024 ರಲ್ಲಿ ಅತಿ ಹೆಚ್ಚು ಸಿಕ್ಸ್ ಬಾರಿಸಿದವರು (36) ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಮುಂಬೈ ಇಂಡಿಯನ್ಸ್ 14 ಪಂದ್ಯಗಳಿಂದ 8 ಅಂಕಗಳನ್ನು ಗಳಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಎಲ್ಎಸ್ಜಿ 14 ಅಂಕಗಳೊಂದಿಗೆ ಅಭಿಯಾನ ಮುಗಿಸಿತು.

ಪಂದ್ಯದ ವಿವರ ಈ ಕೆಳಗೆ ಇದೆ

ಹಾರ್ದಿಕ್​ ಪಾಂಡ್ಯಗೆ ನಾಯಕತ್ವ ನೀಡಿದ್ದ ಮುಂಬೈ ಇಂಡಿಯನ್ಸ್ ತಂಡದ ಯೋಜನೆ ಸಂಪೂರ್ಣವಾಗಿ ಬುಡಮೇಲಾಗಿದೆ. ಹೀಗಾಗಿ ಐಪಿಎಲ್ 17ನೇ ಆವೃತ್ತಿಯ (IPL 2024) 14 ಪಂದ್ಯಗಳಲ್ಲಿ 10 ಸೋಲು ಮತ್ತು ಕೇವಲ 4 ಗೆಲುವಿನೊಂದಿಗೆ 8 ಅಂಕಗಳೊಂದಿಗೆ ಅಭಿಯಾನ ಮುಗಿಸಿದೆ. ತವರಿನಲ್ಲಿ ನಡೆದ ಕೊನೇ ಪಂದ್ಯದಲ್ಲಿ ಲಕ್ನೊ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿಯೂ 18 ರನ್​ಗಳ ಸೋಲಿಗೆ ಒಳಗಾಗಿದೆ. ಎರಡೂ ತಂಡಗಳಿಗೆ ಇದು ಕೊನೇ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಗೆದ್ದಿರುವ ಲಕ್ನೊ ಸೂಪರ್ ಜೈಂಟ್ಸ್ ತಂಡ ಒಟ್ಟು 7 ಗೆಲುವಿನೊಂದಿಗೆ 14 ಅಂಕಗಳ ಸಮೇತ ಏಳನೇ ಸ್ಥಾನ ಪಡೆದುಕೊಂಡಿದೆ. ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಬ್ಯಾಟರ್​ಗಳು ಮತ್ತೊಂದು ಬಾರಿ ತಮ್ಮ ಅಸಮರ್ಥತೆಯನ್ನು ಪ್ರದರ್ಶಿಸಿ ಅತ್ಯಂತ ನಿರಾಶಾದಾಯಕ ಸೀಸನ್ ಅನ್ನು ಎದುರಿಸಿದರು.

ಇದನ್ನೂ ಓದಿ: IPL 2024 : ಆರ್​ಸಿಬಿ- ಚೆನ್ನೈ ಪಂದ್ಯದ ವೇಳೆ ಮಳೆ ಬಂದು ರದ್ದಾದರೆ ಮುಂದೇನಾಗುವುದು?

ಇಲ್ಲಿನ ವಾಖೆಂಡೆ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡ ಚೇಸಿಂಗ್ ಸುಲಭ ಎಂಬ ಯೋಜನೆಯೊಂದಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲ ಬ್ಯಾಟ್ ಮಾಡಿದ ಲಕ್ನೊ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 214 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿ ಮುಂಬೈ ತನ್ನೆಲ್ಲ ಓವರ್​ಗಳು ಮುಕ್ತಾಯಗೊಂಡಾಗ 6 ವಿಕೆಟ್​ ನಷ್ಟಕ್ಕೆ 196 ರನ್​ ಬಾರಿಸಿ ಸೋಲೊಪ್ಪಿಕೊಂಡಿತು. ಚೇಸಿಂಗ್ ಸುಲಭ ಎಂದುಕೊಂಡಿದ್ದ ಮುಂಬೈ ತಂಡಕ್ಕೆ ಮಧ್ಯದಲ್ಲಿ ಸುರಿದ ಮಳೆ ಅಡಚಣೆ ಮಾಡಿತು. ಏಕಾಏಕಿ ವಾತಾವರಣ ತಂಪುಗೊಂಡ ಕಾರಣ ಇಬ್ಬನಿ ಪರಿಣಾಮವನ್ನು ಅನುಭವಿಸಿ ಸುಲಭವಾಗಿ ಸ್ಕೋರ್ ಬಾರಿಸಿ ಗೆಲ್ಲುವ ಯೋಜನೆ ವಿಫಲಗೊಂಡಿತು.
ದೊಡ್ಡ ಗುರಿಯನ್ನು ಬೆನ್ನಟ್ಟಲು ಹೊರಟ ಮುಂಬೈ ತಂಡ ಅದ್ಭುತ ಆರಂಭ ಪಡೆಯಿತು. ರೋಹಿತ್ ಶರ್ಮಾ 38 ಎಸೆತಕ್ಕೆ 6 ರನ್ ಬಾರಿಸಿ ಮಿಂಚಿದರು. ಡೀವಾಲ್ಡ್​ ಬ್ರೇವಿಸ್​ 23 ರನ್ ಹೊಡೆದರು. ಈ ಜೋಡಿ 8. 4 ಓವರ್​ಗಳಲ್ಲಿ ಮೊದಲ ವಿಕೆಟ್​ಗೆ 84 ರನ್ ಬಾರಿಸಿ ಗೆಲುವಿನ ನಿರೀಕ್ಷೆ ಹುಟ್ಟಿಸಿತು. ಆದರೆ, ಆ ಬಳಿಕ ಮುಂಬೈ ತಂಡ ಬ್ಯಾಟಿಂಗ್ ವೈಫಲ್ಯ ಪ್ರದರ್ಶನಗೊಂಡಿತು. ಸೂರ್ಯಕುಮಾರ್ ಶೂನ್ಯಕ್ಕೆ ಔಟಾದರೆ ಇಶಾನ್ ಕಿಶನ್ 14 ರನ್ ಬಾರಿಸಿದರು. ಹಾರ್ದಿಕ್ ಪಾಂಡ್ಯ ಕೊಡುಗೆ ಕೇವಲ 16 ರನ್​. ನೆಹಲ್ ವದೇರಾ 1 ರನ್​ಗೆ ಔಟಾಗುವ ಮೂಲಕ ಮುಂಬೈ ಆಸೆ ಕಮರಿತು. ಏತನ್ಮದ್ಯೆ ಮಧ್ಯಮ ಕ್ರಮಾಂಕದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ನಮನ್​ ಧಿರ್ 28 ಎಸೆತಕ್ಎಕ 68 ರನ್ ಬಾರಿಸಿದರು. ಅದರೆ ಅವರಿಗೆ ಗೆಲುವು ತಂದು ಕೊಡಲು ಸಾಧ್ಯವಾಗಲಿಲ್ಲ.

Continue Reading

ಅಂಕಣ

ರಾಜಮಾರ್ಗ ಅಂಕಣ: ಅವರ ನೆನಪೇ ನ್ಯಾಚುರಲ್‌ ಐಸ್‌ಕ್ರೀಂನ ತಾಜಾ ಹಣ್ಣಿನ ರುಚಿ, ಪರಿಮಳದಂತೆ!

ರಾಜಮಾರ್ಗ ಅಂಕಣ: ಅದು 1984ರಲ್ಲಿ ಮುಂಬೈಯಲ್ಲಿ ಜನ್ಮ ತಾಳಿದ ಮತ್ತು ಇಂದು ಭಾರತದ ನೂರಾರು ನಗರಗಳಿಗೆ ವಿಸ್ತರಿಸಿರುವ ಭಾರತದ ಟಾಪ್ ಮೋಸ್ಟ್ ಐಸ್ ಕ್ರೀಮ್ ಬ್ರಾಂಡ್ ಬೆಳೆದು ನಿಂತ ಕಥೆ ತುಂಬಾ ರೋಚಕ. ಅದರ ಹಿಂದಿರುವ ವಿಶನರಿ ಒಬ್ಬ ಹಣ್ಣಿನ ವ್ಯಾಪಾರಿಯ ಮಗ. ಅವರು ಮೂಲತಃ ಮುಲ್ಕಿಯವರು. ಹೆಸರು ರಘುನಂದನ್ ಶ್ರೀನಿವಾಸ್ ಕಾಮತ್.

VISTARANEWS.COM


on

natural ice cream 1 rajamarga coumn
Koo

ಮಂಗಳೂರಿನ ಒಬ್ಬ ಸಾಮಾನ್ಯ ಹಣ್ಣಿನ ವ್ಯಾಪಾರಿಯ ಮಗ 300 ಕೋಟಿ ರೂ. ವಾರ್ಷಿಕ ಆದಾಯದ ಕಂಪೆನಿಯನ್ನು ಕಟ್ಟಿದ ಕಥೆ!

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ʼನ್ಯಾಚುರಲ್ ಐಸ್ ಕ್ರೀಮ್’ (ಣಾಇಂದು ಯಾರಿಗೆ ಗೊತ್ತಿಲ್ಲ ಹೇಳಿ? ವೆನಿಲ್ಲಾ, ಸ್ಟ್ರಾಬೆರಿ, ಚಾಕೊಲೇಟ್ ಮೊದಲಾದ ಕೃತಕ ಫ್ಲೇವರಗಳ ಈ ಕಾಲದಲ್ಲಿ ತಾಜಾ ಹಣ್ಣುಗಳ ರುಚಿ ರುಚಿಯಾದ ತಿರುಳನ್ನು ಬೆರೆಸಿ ತಯಾರಿಸಿರುವ ಸ್ವಾದಿಷ್ಟವಾದ ಐಸ್ ಕ್ರೀಂ ಯಾರಿಗೆ ಇಷ್ಟ ಆಗೋದಿಲ್ಲ ಹೇಳಿ?

ಅದು 1984ರಲ್ಲಿ ಮುಂಬೈಯಲ್ಲಿ ಜನ್ಮ ತಾಳಿದ ಮತ್ತು ಇಂದು ಭಾರತದ ನೂರಾರು ನಗರಗಳಿಗೆ ವಿಸ್ತರಿಸಿರುವ ಭಾರತದ ಟಾಪ್ ಮೋಸ್ಟ್ ಐಸ್ ಕ್ರೀಮ್ ಬ್ರಾಂಡ್ ಬೆಳೆದು ನಿಂತ ಕಥೆ ತುಂಬಾ ರೋಚಕ. ಅದರ ಹಿಂದಿರುವ ವಿಶನರಿ ಒಬ್ಬ ಹಣ್ಣಿನ ವ್ಯಾಪಾರಿಯ ಮಗ. ಅವರು ಮೂಲತಃ ಮುಲ್ಕಿಯವರು. ಹೆಸರು ರಘುನಂದನ್ ಶ್ರೀನಿವಾಸ್ ಕಾಮತ್.

15ನೆಯ ವರ್ಷಕ್ಕೆ ಮುಂಬೈಗೆ ಹೊರಟರು

ಅವರ ತಂದೆ ಮೂಲ್ಕಿಯಲ್ಲಿ ಒಬ್ಬ ಸಣ್ಣ ಹಣ್ಣಿನ ವ್ಯಾಪಾರಿ ಆಗಿದ್ದರು. ಈ ಹುಡುಗ ರಘುನಂದನ್ ಕಾಮತ್ ಮನೆಯ ಏಳು ಮಂದಿ ಮಕ್ಕಳಲ್ಲಿ ಅತ್ಯಂತ ಕಿರಿಯರು. ಹುಟ್ಟಿದ್ದು 1954ರಲ್ಲಿ. ಮನೆಯಲ್ಲಿ ತೀವ್ರ ಬಡತನ ಇದ್ದ ಕಾರಣ ಶಿಕ್ಷಣ ಅರ್ಧಕ್ಕೆ ನಿಂತಿತು. ಅಪ್ಪನ ಜೊತೆ ಹೋಗಿ ಹಣ್ಣುಗಳನ್ನು ಕಿತ್ತು ತರುವುದು, ಒಳ್ಳೆಯ ಹಣ್ಣುಗಳನ್ನು ಆಯುವುದು ಅವರ ಕೆಲಸ. ಮುಂದೆ ಹಸಿವು ತಡೆಯಲು ಕಷ್ಟ ಆದಾಗ ಹದಿನೈದನೇ ವರ್ಷಕ್ಕೇ ಮುಂಬೈಗೆ ಪ್ರಯಾಣ ಬೆಳೆಸಿದರು.

ಅಲ್ಲಿ ಅವರ ಅಣ್ಣನ ಸಣ್ಣ ಹೋಟೆಲು ಇತ್ತು. ಅಲ್ಲಿ ಕೆಲಸ ಮಾಡುತ್ತ ರಘುನಂದನ್ ಹೋಟೆಲ್ ಕೆಲಸ ಕಲಿತರು. ಅಣ್ಣನ ಹೋಟೆಲಿನಲ್ಲಿ ವಿವಿಧ ಕಂಪೆನಿಯ ಐಸ್ ಕ್ರೀಮ್ ದೊರೆಯುತ್ತಿದ್ದವು. ಅವುಗಳೆಲ್ಲವೂ ಕೃತಕವಾದ ಫ್ಲೇವರ್ ಹೊಂದಿದ್ದವು. ನಾವ್ಯಾಕೆ ತಾಜಾ ಹಣ್ಣಿನ ತಿರುಳು ಇರುವ ಐಸ್ ಕ್ರೀಂ ಮಾಡಬಾರದು? ಎಂಬ ಯೋಚನೆಯು ಅವರ ಪುಟ್ಟ ಮೆದುಳಿಗೆ ಬಂದಿತು. ಅದನ್ನು ಅವರ ತನ್ನ ಅಣ್ಣನ ಜೊತೆಗೆ ಚರ್ಚೆ ಮಾಡಿದಾಗ ಅಣ್ಣ ರಿಸ್ಕ್ ತೆಗೆದುಕೊಳ್ಳಲು ಒಪ್ಪಲಿಲ್ಲ. ಬಂಡವಾಳ ಹಾಕೋದು ಸಾಧ್ಯವೇ ಇಲ್ಲ ಎಂದು ಬಿಟ್ಟರು. ಆದರೆ ರಘುನಂದನ್ ಕನಸು ಸಾಯಲೇ ಇಲ್ಲ.

1983ರಲ್ಲಿ ಜುಹೂನಲ್ಲಿ ಅವರ ಒಂದು ಸಣ್ಣ ಹೋಟೆಲು ಆರಂಭ ಮಾಡಿದರು.

ರಘುನಂದನ್ ಆರಂಭ ಮಾಡಿದ 200 ಚದರಡಿ ಜಾಗದ ಉಸಿರು ಕಟ್ಟುವ ಸಣ್ಣ ಹೋಟೆಲು ಅದು. ನಾಲ್ಕು ಜನ ಕೆಲಸದವರು. ಒಟ್ಟು ಆರು ಟೇಬಲಗಳು. ಪಾವ್ ಬಾಜಿ ಮತ್ತು ಕೆಲವೇ ಕೆಲವು ತಾಜಾ ಹಣ್ಣಿನ ಐಸ್ ಕ್ರೀಂ ತಯಾರಿಸಿ ಗ್ರಾಹಕರ ಮುಂದೆ ಅವರು ಇರಿಸಿದರು. ಆರಂಭದಲ್ಲಿ ಅನಾನಸು, ದ್ರಾಕ್ಷಿ, ಪಪ್ಪಾಯ, ಚಿಕ್ಕು, ಸೀಬೆ, ಮಾವು, ದಾಳಿಂಬೆ ಮೊದಲಾದ ಹಣ್ಣುಗಳ ಐಸ್ ಕ್ರೀಮ್ ರೆಡಿ ಆದವು.

ಮುಂಬೈಯ ಗ್ರಾಹಕರಿಗೆ ಈ ನ್ಯಾಚುರಲ್ ಐಸ್ ಕ್ರೀಂ ಭಾರೀ ಇಷ್ಟ ಆಯ್ತು. ಜನರು ಕ್ಯೂ ನಿಂತು ಐಸ್ ಕ್ರೀಮ್ ಚಪ್ಪರಿಸಿ ತಿಂದರು. ಜುಹೂ ನಗರದ ರಸ್ತೆಗಳಲ್ಲಿ ಇವರ ಕ್ರೀಮ್ ಪಾರ್ಲರ್ ಕಾರಣಕ್ಕೆ ಟ್ರಾಫಿಕ್ ಜಾಮ್ ಆಯಿತು! ಒಂದು ವರ್ಷ ಮುಗಿಯುವುದರ ಒಳಗೆ ಹತ್ತು ಹಣ್ಣಿನ ತಿರುಳು ಇರುವ ಐಸ್ ಕ್ರೀಮಗಳನ್ನು ಅವರು ರೆಡಿ ಮಾಡಿದ್ದರು. ಜನರಿಗೆ ತುಂಬಾ ತಾಜಾ ಆದ ಹಾಗೂ ಸ್ವಾದಿಷ್ಟತೆ ಇರುವ ಈ ಹಣ್ಣುಗಳ ಐಸ್ ಕ್ರೀಂ ರುಚಿ ತುಂಬಾನೇ ಇಷ್ಟ ಆಯ್ತು. ಕ್ರಮೇಣ ಪಾವ್ ಭಾಜಿ ನಿಲ್ಲಿಸಿ ಅವರು ಐಸ್ ಕ್ರೀಂ ಕಾರ್ನರ್ ಮಾತ್ರ ಮುಂದುವರೆಸಿದರು.

ನ್ಯಾಚುರಲ್ ಐಸ್ ಕ್ರೀಮ್ ಅಂದರೆ ರಾಜಿಯೇ ಇಲ್ಲದ ಗುಣಮಟ್ಟ ಮತ್ತು ಸ್ವಾದ

ರಘುನಂದನ್ ಕಾಮತ್ ಅವರ ದಣಿವರಿಯದ ಅದ್ಭುತ ಉತ್ಸಾಹ, ಸಂಶೋಧನಾ ಪ್ರವೃತ್ತಿ, ಗ್ರಾಹಕರ ಅಭಿರುಚಿ ರೀಡ್ ಮಾಡುವ ಕೌಶಲ ಮತ್ತು ಗುಣಮಟ್ಟ ಕಾಪಾಡುವ ಆಸ್ತೆ………ಇವುಗಳಿಂದ NATURALS ICE CREAM ಮುಂಬೈ ಮಹಾನಗರದ ಭಾರೀ ದೊಡ್ಡ ಬ್ರಾಂಡ್ ಆಗಿ ಬೆಳೆಯಲು ಹೆಚ್ಚು ವರ್ಷ ಬೇಕಾಗಲಿಲ್ಲ. Taste the original ಅನ್ನುವುದು ಅದರ ಟ್ಯಾಗ್ ಲೈನ್ ಆಗಿತ್ತು.

ಕೇವಲ ಹತ್ತು ವರ್ಷಗಳ ಅವಧಿಯಲ್ಲಿ ಮುಂಬೈಯಲ್ಲಿ ಐದು ಸುಸಜ್ಜಿತ ಕ್ರೀಮ್ ಪಾರ್ಲರ್ ಉದ್ಘಾಟನೆ ಆದವು. ಪೇರಳೆ, ಸೀಯಾಳ, ಹಲಸಿನ ಹಣ್ಣು, ಮಸ್ಕ್ ಮೇಲನ್, ಕಲ್ಲಂಗಡಿ, ಮಾವಿನ ಹಣ್ಣು, ಲಿಚ್ಚಿ, ಫಿಗ್, ಸೀತಾ ಫಲ, ಜಾಮೂನ್, ತಾಳೆ ಹಣ್ಣು, ನೇರಳೆ ಹಣ್ಣುಗಳ ಐಸ್ ಕ್ರೀಂಗಳು ಭಾರೀ ಜನಪ್ರಿಯವಾದವು.

ಜಾಹೀರಾತಿಗೆ ವಿನಿಯೋಗ ಮಾಡಿದ್ದು 1% ದುಡ್ಡು ಮಾತ್ರ!

ಪಾರ್ಲರಗಳಲ್ಲಿ ಗ್ರಾಹಕರ ಅಭಿರುಚಿಗೆ ಅನುಗುಣವಾದ ವಾತಾವರಣವು ರೆಡಿ ಆಯ್ತು. ತರಬೇತು ಆದ ಸಿಬ್ಬಂದಿ ವರ್ಗ ಗ್ರಾಹಕರ ಸೇವೆಗೆ ಸಿದ್ಧವಾಯಿತು. ಗುಣಮಟ್ಟ ಮತ್ತು ಸ್ವಾದ ಚೆನ್ನಾಗಿದ್ದ ಕಾರಣ ಕಾಮತರು ಕೇವಲ ಒಂದು ಶೇಕಡಾ ವ್ಯಾಪಾರದ ದುಡ್ಡನ್ನು ಜಾಹೀರಾತಿಗೆ ಖರ್ಚು ಮಾಡಿದರು. ಅವರ ಐಸ್ ಕ್ರೀಮ್ ಗೆ ಅವರೇ ಬ್ರಾಂಡ್ ರಾಯಭಾರಿ ಆದರು. ಗ್ರಾಹಕರ ಬಾಯಿಂದ ಬಾಯಿಗೆ ತಲುಪುವ ಮೆಚ್ಚುಗೆಯ ಮಾತುಗಳೇ ಕಂಪೆನಿಗೆ ಜಾಹೀರಾತು ಆದವು. ಗ್ರಾಹಕರ ವಿಶ್ವಾಸವು ಹೆಚ್ಚಿದಂತೆ ಅವರ ಐಸ್ ಕ್ರೀಂ ಬಹಳ ದೊಡ್ಡ ಬ್ರಾಂಡ್ ಆಗಿ ಬೆಳೆಯಿತು.

ನಾವೀನ್ಯತೆ, ಸಂಶೋಧನೆ ಮತ್ತು ಬ್ರಾಂಡಿಂಗ್!

ಮುಂದೆ ದೂರದ ಊರುಗಳಿಂದ ಬೇಡಿಕೆ ಬಂದಾಗ ಐಸ್ ಕ್ರೀಂ ಸಾಗಾಟವು ತೊಂದರೆ ಆಯಿತು. ಆಗ ಕಾಮತರು ವಿಶೇಷವಾದ ಥರ್ಮೋಕೊಲ್ ಪ್ಯಾಕೇಜಿಂಗ್ ಇಂಡಸ್ಟ್ರಿ ಆರಂಭ ಮಾಡಿದರು. ಅದರಿಂದ ಐಸ್ ಕ್ರೀಮನ್ನು ದೀರ್ಘ ಕಾಲಕ್ಕೆ ಕಾಪಿಡಲು ಸಾಧ್ಯ ಆಯ್ತು. ರಘುನಂದನ್ ಕಾಮತ್ ಅವರ ಉತ್ಸಾಹಕ್ಕೆ ಎಣೆಯೇ ಇರಲಿಲ್ಲ. ಅವರು ಶುದ್ಧವಾದ ಹಾಲು, ಫಾರ್ಮ್ ಫ್ರೆಶ್ ತೋಟದ ಹಣ್ಣುಗಳು ಇಡೀ ವರ್ಷ ದೊರೆಯುವಂತೆ ಮಾಡಿದರು. ಕೆಲವೇ ಕೆಲವು ಸೀಸನಲ್ ಹಣ್ಣುಗಳ ಐಸ್ ಕ್ರೀಮ್ ಕೂಡ ಸಿದ್ಧವಾಯಿತು. ಎಲ್ಲಾ ಹಣ್ಣುಗಳನ್ನು ಅವರು ರೈತರಿಂದ ನೇರ ಖರೀದಿ ಮಾಡಿದರು. ಇದೆಲ್ಲದರ ಫಲವಾಗಿ ನ್ಯಾಚುರಲ್ ಐಸ್ ಕ್ರೀಂ ಕಂಪೆನಿಯು ಮುಂಬೈ ಮಹಾನಗರದ ಹೊರಗೆ ತನ್ನ ಶಾಖೆಗಳನ್ನು ತೆರೆಯಿತು. ಫ್ರಾಂಚೈಸಿಗಳಿಗೆ ಭಾರೀ ಬೇಡಿಕೆ ಬಂದಿತು.

ನ್ಯಾಚುರಲ್ ಐಸ್ ಕ್ರೀಂ ಬ್ರಾಂಡಿನ ಸೀಮೋಲ್ಲಂಘನ!

2015ರ ಹೊತ್ತಿಗೆ ಕಂಪೆನಿಯು 125 ಹಣ್ಣುಗಳ ತಿರುಳು ಇರುವ ಐಸ್ ಕ್ರೀಮ್ ರೆಡಿ ಮಾಡಿತು. ನೂರು ಕೋಟಿ ಟರ್ನ್ ಓವರ್ ದಾಖಲು ಮಾಡಿತು. ಭಾರತದ ನೂರಾರು ನಗರಗಳನ್ನು ತಲುಪಿತು. ಕೋಟಿ ಕೋಟಿ ಗ್ರಾಹಕರ ನಾಲಗೆಯಲ್ಲಿ ಸ್ವಾದದ ಸಿಗ್ನೇಚರ್ ಮಾಡಿ ಜನಪ್ರಿಯ ಆಯಿತು. 2020ರ ಹೊತ್ತಿಗೆ ಕಂಪೆನಿಯು ವಾರ್ಷಿಕ 330 ಕೋಟಿ ಟರ್ನ್ ಓವರ್ ದಾಖಲಿಸಿ ಭಾರೀ ದೊಡ್ಡ ದಾಖಲೆಯನ್ನು ಮಾಡಿತು. ಒಮ್ಮೆ 2009ರಲ್ಲಿ 3000 ಕಿಲೋಗ್ರಾಂ ತೂಗುವ ಒಂದೇ ಫ್ಲೇವರ್ ಇರುವ ಕ್ರೀಮ್ ಸ್ಲಾಬ್ ರೆಡಿ ಮಾಡಿ ಲಿಮ್ಕಾ ದಾಖಲೆ ಕೂಡ ಬರೆಯಿತು. ಅವರ ಸೌತೆಕಾಯೀ ತಿರುಳಿನ ಐಸ್ ಕ್ರೀಂ ರಾಷ್ಟ್ರೀಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆಯಿತು.

ಈಗ ನ್ಯಾಚುರಲ್ ಐಸ್ ಕ್ರೀಂಗೆ ಸ್ಪರ್ಧೆಯೇ ಇಲ್ಲ!

ಈಗ ರಘುನಂದನ್ ಕಾಮತ್ ಅವರ ಮಗ ಸಿದ್ಧಾಂತ ಕಾಮತ್ ಅಪ್ಪನ ಉದ್ಯಮದಲ್ಲಿ ಕೈ ಜೋಡಿಸಿದ್ದಾರೆ. ಭಾರತದ 150 ಮಹಾನಗರಗಳಲ್ಲಿ ಇಂದು ನ್ಯಾಚುರಲ್ ಐಸ್ ಕ್ರೀಮಿನ ಔಟ್ ಲೆಟ್ ಇವೆ. ಹನ್ನೊಂದು ರಾಜ್ಯಗಳ ಮಾರ್ಕೆಟ್ ಗೆದ್ದು ಆಗಿದೆ. ನೂರಾ ಹತ್ತೊಂಬತ್ತು ಫ್ರಾಂಚೈಸಿ ಸ್ಟೋರ್ ಇವೆ. ವಿದೇಶದ ನಗರಗಳಿಗೆ ನ್ಯಾಚುರಲ್ ಐಸ್ ಕ್ರೀಂ ತಲುಪಿಸುವ ಪ್ರಯತ್ನಗಳು ಆರಂಭ ಆಗಿವೆ. ಇಂದು ನ್ಯಾಚುರಲ್ ಐಸ್ ಕ್ರೀಂ ಭಾರತದ ಟಾಪ್ 3 ಫ್ಲೇವರಗಳಲ್ಲಿ ಸ್ಥಾನ ಪಡೆದಿದೆ! ಅದರ ಹಿಂದೆ ರಘುನಂದನ್ ಕಾಮತ್ ಎಂಬ ಉದ್ಯಮಿಯ ಪರಿಶ್ರಮ ಮತ್ತು ದುಡಿಮೆ ಇವೆ.

ಸಜ್ಜನಿಕೆಯ ಸಾಕಾರ ಮೂರ್ತಿ ಅವರು.

ಅಂತಹ ರಘುನಂದನ್ ಕಾಮತ್ ಅವರನ್ನು ಒಂದು ಸಮ್ಮೇಳನದಲ್ಲಿ ನಾನು ಭೇಟಿ ಮಾಡಿದ್ದೆ. ಅಂದು ಅವರು ಹೇಳಿದ ಮಾತು ನನಗೆ ಅದ್ಭುತವಾದ ಸ್ಫೂರ್ತಿ ನೀಡಿತ್ತು.

‘ವೆನಿಲ್ಲಾ, ಸ್ಟ್ರಾಬೆರಿ, ಚಾಕೊಲೇಟ್ ಮೊದಲಾದ ಕೃತಕ ಫ್ಲೇವರ್ ರೆಡಿ ಮಾಡಲು ನಾನು ಹೊರಟಿದ್ದರೆ ಇಷ್ಟೆಲ್ಲ ಕಷ್ಟ ಪಡುವ ಅಗತ್ಯವೇ ಇರಲಿಲ್ಲ. ಗ್ರಾಹಕರಿಗೆ ತಾಜಾ ಹಣ್ಣುಗಳ ಸ್ವಾದವನ್ನು ಐಸ್ ಕ್ರೀಂ ಮಾಧ್ಯಮದ ಮೂಲಕ ನೀಡಬೇಕು ಎಂಬುದು ನನ್ನ ಬಯಕೆ ಆಗಿತ್ತು. ಜನರಿಗೂ ಅದು ಇಷ್ಟ ಆಯ್ತು. ಇದು ನನ್ನ ಸಾಧನೆ ಏನೂ ಇಲ್ಲ. ನಾನು ನಂಬಿರುವ ದೇವರು ನನ್ನ ಕೈಯನ್ನು ಹಿಡಿದು ಮುನ್ನಡೆಸುತ್ತಿದ್ದಾರೆ’ ಎಂದಿದ್ದರು.

ಅಂತಹ ಕಾಮತರು ನಿನ್ನೆ ಮುಂಬೈಯಲ್ಲಿ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸು. ಸೊನ್ನೆಯಿಂದ ಉದ್ಯಮದ ಮಹಾ ಸಾಮ್ರಾಜ್ಯವನ್ನು ಕಟ್ಟಿದ ಆ ಚೇತನಕ್ಕೆ ನಮ್ಮ ಶ್ರದ್ಧಾಂಜಲಿ ಇರಲಿ.

ಭರತ ವಾಕ್ಯ

ಕರ್ನಾಟಕ, ಮಹಾರಾಷ್ಟ್ರ, ಗೋವಾ ರಾಜ್ಯಗಳ ಹೆಚ್ಚಿನ ನಗರಗಳಲ್ಲಿ ನ್ಯಾಚುರಲ್ ಐಸ್ ಕ್ರೀಂ ಔಟ್‌ಲೆಟ್‌ಗಳಿವೆ. ಒಮ್ಮೆ ಭೇಟಿ ಕೊಡಿ ಮತ್ತು ತೋಟದ ಹಣ್ಣುಗಳ ಫ್ರೆಶ್ ರುಚಿ ಇರುವ ಐಸ್ ಕ್ರೀಂ ನೀವು ಸವಿದು ಇಷ್ಟಪಟ್ಟರೆ ನಮ್ಮ ರಘುನಂದನ್ ಕಾಮತ್ ಅವರಿಗೊಂದು ಶ್ರದ್ಧಾಂಜಲಿ ಹೇಳಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಭಾರತದಲ್ಲಿ ಕಡ್ಡಾಯ ಮತದಾನ ಕಾನೂನು ಯಾಕೆ ಸಾಧ್ಯವಿಲ್ಲ?

Continue Reading

ಪ್ರಮುಖ ಸುದ್ದಿ

IPL 2024 : ಸಹ ಆಟಗಾರ ರೊಮಾರಿಯೊ ಶೆಫರ್ಡ್​ಗೆ ಆಟೋಗ್ರಾಫ್​ ಕೊಟ್ಟ ರೋಹಿತ್​ , ಚಿತ್ರಗಳು ಇಲ್ಲಿವೆ

IPL 2024: ಐಪಿಎಲ್ 2024 ಪಂದ್ಯದ ಸಮಯದಲ್ಲಿ, ವೆಸ್ಟ್ ಇಂಡೀಸ್​​ನ ಯುವ ಆಲ್ರೌಂಡರ್ ರೊಮಾರಿಯೊ ಶೆಫರ್ಡ್ ಆಟೋಗ್ರಾಫ್​​ಗಾಗಿ ಪಡೆಯುವುದು ಕಂಡು ಬಂತು. ವಿಶೇಷವೆಂದರೆ, ಶುಕ್ರವಾರದ ಮುಖಾಮುಖಿಯಲ್ಲಿ, ರೋಹಿತ್ ಶರ್ಮಾ ಪಂದ್ಯದ ಮೊದಲ ಇನ್ನಿಂಗ್ಸ್​​ನಲ್ಲಿ ಆಡಿಲ್ಲ. ಏಕೆಂದರೆ ಅವರನ್ನು ತಂಡದ ಮ್ಯಾನೇಜ್ಮೆಂಟ್ ಇಂಪ್ಯಾಕ್ಟ್ ಪ್ಲೇಯರ್ ಎಂದು ಗುರುತಿಸಿತ್ತು.

VISTARANEWS.COM


on

IPL 2024
Koo

ಬೆಂಗಳೂರು: ಕ್ರಿಕೆಟ್ನ ‘ಹಿಟ್​ಮ್ಯಾನ್​ ‘ ಯಾನೆ ರೋಹಿತ್ ಶರ್ಮಾ ಕ್ರಿಕೆಟ್ ಅಭಿಮಾನಿಗಳಲ್ಲಿ ಮಾತ್ರವಲ್ಲದೆ ಸಹ ಆಟಗಾರರಲ್ಲಿಯೂ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಆದ್ದರಿಂದ, ಮುಂಬೈ ಇಂಡಿಯನ್ಸ್ (Mumbai Indians) ಮಾಜಿ ನಾಯಕನನ್ನು ಡ್ರೆಸ್ಸಿಂಗ್ ರೂಮ್​​ನಲ್ಲಿ ಹೆಚ್ಚು ಸಂಚಲನ ಮೂಡಿಸುತ್ತಾರೆ. ಎಲ್ಲಾ ಆಟಗಾರರ ಬಗ್ಗೆ ಅವರ ಕಾಳಜಿಯ ಸ್ವಭಾವದಿಂದಾಗಿ ಅವರು ಹೆಚ್ಚು ಹತ್ತಿರವಾಗುತ್ತಾರೆ. ಅಂತೆಯೇ ಐಪಿಎಲ್​ 2024ರಲ್ಲೂ (IPL 2024 ) ಅವರು ಸಹ ಆಟಗಾರರ ಅಭಿಮಾನ ಗಿಟ್ಟಿಸಿಕೊಂಡಿದ್ದಾರೆ.

ಇದರ ಪರಿಣಾಮವಾಗಿ, ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ನಡುವೆ ನಡೆಯುತ್ತಿರುವ ಐಪಿಎಲ್ 2024 ಪಂದ್ಯದ ಸಮಯದಲ್ಲಿ, ವೆಸ್ಟ್ ಇಂಡೀಸ್​​ನ ಯುವ ಆಲ್ರೌಂಡರ್ ರೊಮಾರಿಯೊ ಶೆಫರ್ಡ್ ಆಟೋಗ್ರಾಫ್​​ಗಾಗಿ ಪಡೆಯುವುದು ಕಂಡು ಬಂತು. ವಿಶೇಷವೆಂದರೆ, ಶುಕ್ರವಾರದ ಮುಖಾಮುಖಿಯಲ್ಲಿ, ರೋಹಿತ್ ಶರ್ಮಾ ಪಂದ್ಯದ ಮೊದಲ ಇನ್ನಿಂಗ್ಸ್​​ನಲ್ಲಿ ಆಡಿಲ್ಲ. ಏಕೆಂದರೆ ಅವರನ್ನು ತಂಡದ ಮ್ಯಾನೇಜ್ಮೆಂಟ್ ಇಂಪ್ಯಾಕ್ಟ್ ಪ್ಲೇಯರ್ ಎಂದು ಗುರುತಿಸಿತ್ತು. ಅವರು ಬ್ಯಾಟಿಂಗ್​ಗೆ ಮಾತ್ರ ಬಂದರು. ಅಲ್ಲದೆ ಭರ್ಜರಿ 68 ರನ್ ಬಾರಿಸಿದರು. ಹೀಗಾಗಿ ಅವರಿಗೆ ಮುಂಬೈನ ಪ್ರಸಿದ್ಧ ವಾಂಖೆಡೆ ಕ್ರೀಡಾಂಗಣದಲ್ಲಿ ಬಾಲ್ಕನಿಯಿಂದ ತಂಡದ ಬೌಲಿಂಗ್ ಅನ್ನು ಆನಂದಿಸಲು ಅವರಿಗೆ ಸಾಕಷ್ಟು ಸಮಯವನ್ನು ನೀಡಿತು. ಈ ವೇಳೆ ಅವರು ಆಟೋಗ್ರಾಫ್​ ನೀಡಿರುವ ಚಿತ್ರಗಳು ವೈರಲ್ ಆಗಿವೆ.

ಪಂದ್ಯದಲ್ಲಿ ಏನಾಯಿತು?

ಮುಂಬೈ: ಹಾರ್ದಿಕ್​ ಪಾಂಡ್ಯಗೆ ನಾಯಕತ್ವ ನೀಡಿದ್ದ ಮುಂಬೈ ಇಂಡಿಯನ್ಸ್ ತಂಡದ ಯೋಜನೆ ಸಂಪೂರ್ಣವಾಗಿ ಬುಡಮೇಲಾಗಿದೆ. ಹೀಗಾಗಿ ಐಪಿಎಲ್ 17ನೇ ಆವೃತ್ತಿಯ (IPL 2024) 14 ಪಂದ್ಯಗಳಲ್ಲಿ 10 ಸೋಲು ಮತ್ತು ಕೇವಲ 4 ಗೆಲುವಿನೊಂದಿಗೆ 8 ಅಂಕಗಳೊಂದಿಗೆ ಅಭಿಯಾನ ಮುಗಿಸಿದೆ. ತವರಿನಲ್ಲಿ ನಡೆದ ಕೊನೇ ಪಂದ್ಯದಲ್ಲಿ ಲಕ್ನೊ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿಯೂ 18 ರನ್​ಗಳ ಸೋಲಿಗೆ ಒಳಗಾಗಿದೆ. ಎರಡೂ ತಂಡಗಳಿಗೆ ಇದು ಕೊನೇ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಗೆದ್ದಿರುವ ಲಕ್ನೊ ಸೂಪರ್ ಜೈಂಟ್ಸ್ ತಂಡ ಒಟ್ಟು 7 ಗೆಲುವಿನೊಂದಿಗೆ 14 ಅಂಕಗಳ ಸಮೇತ ಏಳನೇ ಸ್ಥಾನ ಪಡೆದುಕೊಂಡಿದೆ. ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಬ್ಯಾಟರ್​ಗಳು ಮತ್ತೊಂದು ಬಾರಿ ತಮ್ಮ ಅಸಮರ್ಥತೆಯನ್ನು ಪ್ರದರ್ಶಿಸಿ ಅತ್ಯಂತ ನಿರಾಶಾದಾಯಕ ಸೀಸನ್ ಅನ್ನು ಎದುರಿಸಿದರು.

ಇದನ್ನೂ ಓದಿ: Aiden Markarm : ವಿಂಡೀಸ್ ವಿರುದ್ಧದ ಸರಣಿಗೆ ದ. ಆಫ್ರಿಕಾ ತಂಡದಲ್ಲಿ ಮಾರ್ಕ್ರಮ್​​ಗೆ ಇಲ್ಲ ಚಾನ್ಸ್​

ಇಲ್ಲಿನ ವಾಖೆಂಡೆ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡ ಚೇಸಿಂಗ್ ಸುಲಭ ಎಂಬ ಯೋಜನೆಯೊಂದಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲ ಬ್ಯಾಟ್ ಮಾಡಿದ ಲಕ್ನೊ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 214 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿ ಮುಂಬೈ ತನ್ನೆಲ್ಲ ಓವರ್​ಗಳು ಮುಕ್ತಾಯಗೊಂಡಾಗ 6 ವಿಕೆಟ್​ ನಷ್ಟಕ್ಕೆ 196 ರನ್​ ಬಾರಿಸಿ ಸೋಲೊಪ್ಪಿಕೊಂಡಿತು. ಚೇಸಿಂಗ್ ಸುಲಭ ಎಂದುಕೊಂಡಿದ್ದ ಮುಂಬೈ ತಂಡಕ್ಕೆ ಮಧ್ಯದಲ್ಲಿ ಸುರಿದ ಮಳೆ ಅಡಚಣೆ ಮಾಡಿತು. ಏಕಾಏಕಿ ವಾತಾವರಣ ತಂಪುಗೊಂಡ ಕಾರಣ ಇಬ್ಬನಿ ಪರಿಣಾಮವನ್ನು ಅನುಭವಿಸಿ ಸುಲಭವಾಗಿ ಸ್ಕೋರ್ ಬಾರಿಸಿ ಗೆಲ್ಲುವ ಯೋಜನೆ ವಿಫಲಗೊಂಡಿತು.
ದೊಡ್ಡ ಗುರಿಯನ್ನು ಬೆನ್ನಟ್ಟಲು ಹೊರಟ ಮುಂಬೈ ತಂಡ ಅದ್ಭುತ ಆರಂಭ ಪಡೆಯಿತು. ರೋಹಿತ್ ಶರ್ಮಾ 38 ಎಸೆತಕ್ಕೆ 6 ರನ್ ಬಾರಿಸಿ ಮಿಂಚಿದರು. ಡೀವಾಲ್ಡ್​ ಬ್ರೇವಿಸ್​ 23 ರನ್ ಹೊಡೆದರು. ಈ ಜೋಡಿ 8. 4 ಓವರ್​ಗಳಲ್ಲಿ ಮೊದಲ ವಿಕೆಟ್​ಗೆ 84 ರನ್ ಬಾರಿಸಿ ಗೆಲುವಿನ ನಿರೀಕ್ಷೆ ಹುಟ್ಟಿಸಿತು. ಆದರೆ, ಆ ಬಳಿಕ ಮುಂಬೈ ತಂಡ ಬ್ಯಾಟಿಂಗ್ ವೈಫಲ್ಯ ಪ್ರದರ್ಶನಗೊಂಡಿತು. ಸೂರ್ಯಕುಮಾರ್ ಶೂನ್ಯಕ್ಕೆ ಔಟಾದರೆ ಇಶಾನ್ ಕಿಶನ್ 14 ರನ್ ಬಾರಿಸಿದರು. ಹಾರ್ದಿಕ್ ಪಾಂಡ್ಯ ಕೊಡುಗೆ ಕೇವಲ 16 ರನ್​. ನೆಹಲ್ ವದೇರಾ 1 ರನ್​ಗೆ ಔಟಾಗುವ ಮೂಲಕ ಮುಂಬೈ ಆಸೆ ಕಮರಿತು. ಏತನ್ಮದ್ಯೆ ಮಧ್ಯಮ ಕ್ರಮಾಂಕದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ನಮನ್​ ಧಿರ್ 28 ಎಸೆತಕ್ಎಕ 68 ರನ್ ಬಾರಿಸಿದರು. ಅದರೆ ಅವರಿಗೆ ಗೆಲುವು ತಂದು ಕೊಡಲು ಸಾಧ್ಯವಾಗಲಿಲ್ಲ.

Continue Reading

ವಿದೇಶ

White House: ಭಾರತದಲ್ಲಿದೆ ಅತ್ಯುತ್ತಮ ಪ್ರಜಾಪ್ರಭುತ್ವ ವ್ಯವಸ್ಥೆ: ಅಮೆರಿಕದ ಮೆಚ್ಚುಗೆ; ಮೋದಿ ನಾಯಕತ್ವಕ್ಕೂ ಸಿಕ್ತು ಶಹಬ್ಬಾಸ್‌ಗಿರಿ

White House: ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವುದಕ್ಕೆ ಅಮೆರಿಕದ ಶ್ವೇತಭವನವು ಭಾರತೀಯರನ್ನು ಶ್ಲಾಘಿಸಿದೆ. ಶ್ವೇತಭವನದ ವಕ್ತಾರ ಜಾನ್ ಕಿರ್ಬಿ ಈ ಬಗ್ಗೆ ಮಾತನಾಡಿ, ಭಾರತವು ಜಾಗತಿಕವಾಗಿ ಅತ್ಯಂತ ರೋಮಾಂಚಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದೆ ಎಂದು ಬಣ್ಣಿಸಿದ್ದಾರೆ.

VISTARANEWS.COM


on

White House
Koo

ವಾಷಿಂಗ್ಟನ್‌: ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವುದಕ್ಕೆ ಅಮೆರಿಕದ ಶ್ವೇತಭವನ (White House)ವು ಭಾರತೀಯರನ್ನು ಶ್ಲಾಘಿಸಿದೆ. ಶ್ವೇತಭವನದ ವಕ್ತಾರ ಜಾನ್ ಕಿರ್ಬಿ (John Kirby) ಈ ಬಗ್ಗೆ ಮಾತನಾಡಿ, ಭಾರತವು ಜಾಗತಿಕವಾಗಿ ಅತ್ಯಂತ ರೋಮಾಂಚಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದೆ ಎಂದು ಬಣ್ಣಿಸಿದ್ದಾರೆ. ʼʼಸುಮಾರು 2,660 ನೋಂದಾಯಿತ ಪಕ್ಷಗಳನ್ನು ಪ್ರತಿನಿಧಿಸುವ ಸಾವಿರಾರು ಅಭ್ಯರ್ಥಿಗಳ ಪೈಕಿ 545 ಸಂಸದರನ್ನು ಆಯ್ಕೆ ಮಾಡಲು ಕೋಟ್ಯಂತರ ಮಂದಿ ಹತ್ತು ಲಕ್ಷಕ್ಕೂ ಅಧಿಕ ಮತದಾನ ಕೇಂದ್ರಗಳಲ್ಲಿ ಹಕ್ಕು ಚಲಾ ಚಲಾಯಿಸುತ್ತಿದ್ದಾರೆʼʼ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ಭಾರತಕ್ಕಿಂತ ಹೆಚ್ಚು ವ್ಯವಸ್ಥಿತ ಪ್ರಜಾಪ್ರಭುತ್ವ ಜಗತ್ತಿನ ಬೇರೆ ಕಡೆ ಇಲ್ಲ. ಮತ ಚಲಾಯಿಸುವ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಿರುವುದಕ್ಕಾಗಿ ಮತ್ತು ತಮ್ಮ ಭವಿಷ್ಯದ ಸರ್ಕಾರವನ್ನು ನಿರ್ಧರಿಸಲು ಸೂಕ್ತ ಕ್ರಮ ಕೈಗೊಳ್ಳುತ್ತಿರುವುದಕ್ಕಾಗಿ ನಾವು ಭಾರತೀಯರನ್ನು ಶ್ಲಾಘಿಸುತ್ತೇವೆ. ಈ ಮತದಾನದ ಪ್ರಕ್ರಿಯೆಯುದ್ದಕ್ಕೂ ನಾವು ಅವರಿಗೆ ಶುಭ ಹಾರೈಸುತ್ತೇವೆ” ಎಂದು ಜಾನ್ ಕಿರ್ಬಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರಿಗೂ ಮೆಚ್ಚುಗೆ

ಇದರ ಜತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ಮತ್ತು ಅಮೆರಿಕದ ನಡುವಿನ ಸಂಬಂಧ ವೃದ್ಧಿಸುತ್ತಿರುವ ಬಗ್ಗೆಯೂ ಅವರು ಪ್ರಸ್ತಾವಿಸಿದ್ದಾರೆ. ʼʼಮೋದಿ ಅವರ ನಾಯಕತ್ವದ ಅಡಿಯಲ್ಲಿ ವಿಶೇಷವಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಆಡಳಿತದ ಕೊನೆಯ ಮೂರು ವರ್ಷಗಳಲ್ಲಿ ಭಾರತ-ಅಮೆರಿಕ ಸಂಬಂಧ ಬಲವಾಗಿದೆ. ಉಭಯ ದೇಶಗಳ ನಡುವಿನ ಬಂಧವು ನಿರಂತರವಾಗಿ ವೃದ್ಧಿಸುತ್ತಿದೆʼʼ ಎಂದು ವಿವರಿಸಿದ್ದಾರೆ.

“ನಾವು ಎರಡೂ ದೇಶಗಳ ಸಂಬಂಧ ವೃದ್ಧಿಗೆ ಎಲ್ಲ ರೀತಿಯ ಹೊಸ ಉಪಕ್ರಮಗಳನ್ನು ಪ್ರಾರಂಭಿಸಿದ್ದೇವೆ. ನಿರ್ಣಾಯಕ ಉದಯೋನ್ಮುಖ ತಂತ್ರಜ್ಞಾನಗಳ ಮೇಲೆ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಮತ್ತು ಇಂಡೋ-ಪೆಸಿಫಿಕ್ ಕ್ವಾಡ್‌ನ ಪ್ರಸ್ತುತತೆಯನ್ನು ಹೆಚ್ಚಿಸುತ್ತಿದ್ದೇವೆ. ಜತೆಗೆ ನಾವು ರಕ್ಷಣಾ ಕ್ಷೇತ್ರದಲ್ಲಿಯೂ ಪರಸ್ಪರ ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸುತ್ತಿದ್ದೇವೆ. ಪ್ರಧಾನಿ ಮೋದಿ ಅವರ ನಾಯಕತ್ವಕ್ಕೆ ನಾವು ಕೃತಜ್ಞರಾಗಿದ್ದೇವೆʼʼ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: PM Modi US visit : ಶ್ವೇತಭವನದ ಔತಣಕೂಟದಲ್ಲಿ ಮಿಂಚಿದ ಮುಕೇಶ್‌, ನೀತಾ ಅಂಬಾನಿ, ನಿಖಿಲ್‌ ಕಾಮತ್

ಶ್ವೇತಭವನದಲ್ಲಿ ಮೊಳಗಿದ ʼಸಾರೆ ಜಹಾನ್‌ ಸೇ ಅಚ್ಚಾʼ

ಇತ್ತೀಚೆಗಷ್ಟೇ ಅಮೆರಿಕದಲ್ಲಿ ಆಯೋಜಿಸಲಾಗಿದ್ದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾರತದ ದೇಶಭಕ್ತಿಗೀತೆ ʼಸಾರಾ ಜಹಾನ್‌ ಸೇ ಅಚ್ಚಾʼ ಹಾಡು ಮೊಳಗಿತ್ತು. ಶ್ವೇತಭವನದಲ್ಲಿ ಆಯೋಜನೆಗೊಂಡಿದ್ದ ಏಷಿಯನ್‌ ಅಮೆರಿಕನ್‌, ಸ್ಥಳೀಯ ಹವಾಯಿಯನ್‌ ಮತ್ತು ಪೆಸಿಫಿಕ್‌ ಐಲ್ಯಾಂಡರ್‌ ಪಾರಂಪರ್ಯ ಮಾಸಾಚರಣೆ ಕಾರ್ಯಕ್ರಮದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಮತ್ತು ಉಪಾಧ್ಯಕ್ಷ ಕಮಲಾ ಹ್ಯಾರೀಸ್‌ ಭಾಗಿಯಾಗಿದ್ದರು. ಈ ವೇಳೆ ಶ್ವೇತಭವನದ ಮೆರೈನ್ ಬ್ಯಾಂಡ್ ʼಸಾರೆ ಜಹಾನ್ ಸೆ ಅಚ್ಚಾ ಹಿಂದೂಸ್ತಾನ್ ಹಮಾರಾʼ ಹಾಡನ್ನು ಹಾಡಿ ಎಲ್ಲರನ್ನು ರಂಜಿಸಿತ್ತು. ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿ ವೈರಲ್‌ ಆಗಿತ್ತು. ಅದಾಗಿ ಕೆಲವೇ ದಿನಗಳಲ್ಲಿ ಶ್ವೇತಭವನ ಭಾರತದ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿದೆ.

Continue Reading
Advertisement
Singer Suchitra makes shocking aligeations against shahrukh khan
ಬಾಲಿವುಡ್53 seconds ago

Singer Suchitra: ಶಾರುಖ್ – ಕರಣ್ ಸಲಿಂಗಿಗಳು ಎಂದು ಹೇಳಿ ವಿವಾದ ಸೃಷ್ಟಿಸಿದ ತಮಿಳು ಗಾಯಕಿ!

Lok Sabha Election 2024
ವೈರಲ್ ನ್ಯೂಸ್10 mins ago

Lok Sabha Election 2024: ʼನನ್ನ ಸ್ಟೈಲು ಬೇರೇನೆ…ʼ; ಕತ್ತೆ ಮೂಲಕ ಪ್ರಚಾರ ನಡೆಸುವ ಅಭ್ಯರ್ಥಿಯ ಕಾರ್ಯ ವೈಖರಿ ಈಗ ವೈರಲ್‌

IPL 2024
ಕ್ರೀಡೆ12 mins ago

IPL 2024 : ಹಾರ್ದಿಕ್ ಪಾಂಡ್ಯಗೆ ನಿಷೇಧ ಹೇರಿದ ಬಿಸಿಸಿಐ; ಮುಂದಿನ ಪಂದ್ಯದಲ್ಲಿ ಆಡದಂತೆ ತಾಕೀತು

natural ice cream 1 rajamarga coumn
ಅಂಕಣ19 mins ago

ರಾಜಮಾರ್ಗ ಅಂಕಣ: ಅವರ ನೆನಪೇ ನ್ಯಾಚುರಲ್‌ ಐಸ್‌ಕ್ರೀಂನ ತಾಜಾ ಹಣ್ಣಿನ ರುಚಿ, ಪರಿಮಳದಂತೆ!

naturals ic cream raghunandan kamath
ಶ್ರದ್ಧಾಂಜಲಿ45 mins ago

Raghunandan Kamath: ʼನ್ಯಾಚುರಲ್ಸ್‌ʼ ಖ್ಯಾತಿಯ ʼಐಸ್‌ಕ್ರೀಂ ಮ್ಯಾನ್‌ʼ ರಘುನಂದನ ಕಾಮತ್‌ ಇನ್ನಿಲ್ಲ

IPL 2024
ಪ್ರಮುಖ ಸುದ್ದಿ49 mins ago

IPL 2024 : ಸಹ ಆಟಗಾರ ರೊಮಾರಿಯೊ ಶೆಫರ್ಡ್​ಗೆ ಆಟೋಗ್ರಾಫ್​ ಕೊಟ್ಟ ರೋಹಿತ್​ , ಚಿತ್ರಗಳು ಇಲ್ಲಿವೆ

Kajal Aggarwal Kannappa Movie Entry
ಟಾಲಿವುಡ್1 hour ago

Kajal Aggarwal: ವಿಷ್ಣು ಮಂಚು `ಕಣ್ಣಪ್ಪ’ ಚಿತ್ರಕ್ಕೆ ಕಾಜಲ್ ಅಗರ್​ವಾಲ್​​ ಎಂಟ್ರಿ; ಪಾತ್ರ ಏನಿರಬಹುದು?

White House
ವಿದೇಶ1 hour ago

White House: ಭಾರತದಲ್ಲಿದೆ ಅತ್ಯುತ್ತಮ ಪ್ರಜಾಪ್ರಭುತ್ವ ವ್ಯವಸ್ಥೆ: ಅಮೆರಿಕದ ಮೆಚ್ಚುಗೆ; ಮೋದಿ ನಾಯಕತ್ವಕ್ಕೂ ಸಿಕ್ತು ಶಹಬ್ಬಾಸ್‌ಗಿರಿ

IPL 2024
ಕ್ರೀಡೆ1 hour ago

IPL 2024 : ಆರ್​ಸಿಬಿ- ಚೆನ್ನೈ ಪಂದ್ಯದ ವೇಳೆ ಮಳೆ ಬಂದು ರದ್ದಾದರೆ ಮುಂದೇನಾಗುವುದು?

hd deve gowda birthday
ಪ್ರಮುಖ ಸುದ್ದಿ1 hour ago

HD Deve Gowda: ಈ ಅವಮಾನದಿಂದ ಪಾರು ಮಾಡು: 93ರ ಜನ್ಮದಿನಂದು ದೇವೇಗೌಡರ ಮೌನ ಪ್ರಾರ್ಥನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ14 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌