PM Narendra Modi: ಭೂಕುಸಿತ ಪೀಡಿತ ವಯನಾಡಿಗೆ ಇಂದು ನರೇಂದ್ರ ಮೋದಿ ಭೇಟಿ - Vistara News

ಪ್ರಮುಖ ಸುದ್ದಿ

PM Narendra Modi: ಭೂಕುಸಿತ ಪೀಡಿತ ವಯನಾಡಿಗೆ ಇಂದು ನರೇಂದ್ರ ಮೋದಿ ಭೇಟಿ

ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ವಯನಾಡ್‌ ಭೂಕುಸಿತದ ಸಂತ್ರಸ್ತರನ್ನು ಆಸ್ಪತ್ರೆಗಳು ಮತ್ತು ಪರಿಹಾರ ಶಿಬಿರಗಳಲ್ಲಿ ಭೇಟಿ ಮಾಡಲಿದ್ದಾರೆ. ದುರಂತದಲ್ಲಿ ಸಂತ್ರಸ್ತರಾದವರಿಗೆ ಸರಿಯಾದ ಬೆಂಬಲ, ಪರಿಹಾರ ದೊರೆಯುವಿಕೆಯನ್ನು ಖಚಿತಪಡಿಸಿಕೊಳ್ಳಲಿದ್ದಾರೆ.

VISTARANEWS.COM


on

pm narendra modi wayanad landslide
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ದಾರುಣ ಭೂಕುಸಿತ (Kerala Landslide) ಸಂಭವಿಸಿದ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲು, ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು (ಆಗಸ್ಟ್ 10) ಕೇರಳದ ವಯನಾಡ್ (Wayanad Landslide) ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಪ್ರಧಾನಿ ಮೋದಿ ಭೂಕುಸಿತದ ಸಂತ್ರಸ್ತರನ್ನು ಆಸ್ಪತ್ರೆಗಳು ಮತ್ತು ಪರಿಹಾರ ಶಿಬಿರಗಳಲ್ಲಿ ಭೇಟಿ ಮಾಡಲಿದ್ದಾರೆ. ದುರಂತದಲ್ಲಿ ಸಂತ್ರಸ್ತರಾದವರಿಗೆ ಸರಿಯಾದ ಬೆಂಬಲ, ಪರಿಹಾರ ದೊರೆಯುವಿಕೆಯನ್ನು ಖಚಿತಪಡಿಸಿಕೊಳ್ಳಲಿದ್ದಾರೆ.

ವಯನಾಡ್‌ನ ಮಾಜಿ ಸಂಸದ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi), ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡುತ್ತಿರುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಭೇಟಿಯ ನಂತರ ಪ್ರಧಾನಿ ವಯನಾಡ್ ಭೂಕುಸಿತವನ್ನು ʼರಾಷ್ಟ್ರೀಯ ವಿಪತ್ತುʼ ಎಂದು ಘೋಷಿಸುತ್ತಾರೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

“ಮೋದಿ ಜೀ, ಭೀಕರ ದುರಂತದ ಬಗ್ಗೆ ವೈಯಕ್ತಿಕವಾಗಿ ಅವಲೋಕನ ಮಾಡಲು ವಯನಾಡ್‌ಗೆ ಭೇಟಿ ನೀಡುತ್ತಿರುವುದಕ್ಕಾಗಿ ಧನ್ಯವಾದಗಳು. ಇದೊಂದು ಒಳ್ಳೆಯ ನಿರ್ಧಾರ. ಪ್ರಧಾನಿ ಒಮ್ಮೆ ವಿನಾಶದ ಪ್ರಮಾಣವನ್ನು ನೇರವಾಗಿ ನೋಡಿದ ನಂತರ, ಅವರು ಅದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುತ್ತಾರೆ ಎಂದು ನನಗೆ ವಿಶ್ವಾಸವಿದೆ” ಎಂದು ಗಾಂಧಿ ಶುಕ್ರವಾರ ರಾತ್ರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮೋದಿ ಭೇಟಿಯ ಪೂರ್ಣ ವೇಳಾಪಟ್ಟಿ ಇಲ್ಲಿದೆ

ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಕೇರಳದ ಕಣ್ಣೂರು ತಲುಪುವ ನಿರೀಕ್ಷೆಯಿದೆ. ಅಲ್ಲಿಂದ ಅವರು ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಕೈಗೊಳ್ಳಲಿದ್ದಾರೆ. ನಂತರ, ಮಧ್ಯಾಹ್ನ 12:15ರ ಸುಮಾರಿಗೆ ಭೂಕುಸಿತದಿಂದ ಸಂತ್ರಸ್ತವಾಗಿರುವ ಸ್ಥಳಗಳಿಗೆ ನೇರ ಭೇಟಿ ನೀಡಲಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಸ್ಥಳಾಂತರ ಕಾರ್ಯಾಚರಣೆಗಳ ಕುರಿತು ರಕ್ಷಣಾ ತಂಡಗಳಿಂದ ವಿವರ ಪಡೆಯಲಿದ್ದಾರೆ. ಭೂಕುಸಿತದಿಂದ ಬದುಕುಳಿದವರು ಪ್ರಸ್ತುತ ಪುನರ್ವಸತಿ ಬಯಸುತ್ತಿರುವ ಪರಿಹಾರ ಶಿಬಿರ ಮತ್ತು ಆಸ್ಪತ್ರೆಗೆ ಪ್ರಧಾನಿ ಭೇಟಿ ನೀಡಲಿದ್ದಾರೆ. ಸಂತ್ರಸ್ತರೊಂದಿಗೆ ಸಂವಾದ ನಡೆಸಿ ಅವರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ. ನಂತರ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅಲ್ಲಿನ ಪರಿಹಾರ ಪ್ರಯತ್ನಗಳ ಬಗ್ಗೆ ವಿವರವಾಗಿ ತಿಳಿಯಲಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Kearala CM Pinarayi Vijayan) ಅವರು ಈ ವಾರದ ಆರಂಭದಲ್ಲಿ ಮೋದಿ ಅವರ ವಯನಾಡ್ ಭೇಟಿಯನ್ನು ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು. ಕೇಂದ್ರ ಸರ್ಕಾರ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.

400ಕ್ಕೂ ಹೆಚ್ಚು ಸಾವು

ಜುಲೈ 30ರಂದು ವಯನಾಡಿನ ಚೂರಲ್ಮಲಾ ಮತ್ತು ಮುಂಡಕ್ಕೈನಲ್ಲಿ ಸಂಭವಿಸಿದ ಭಾರಿ ಭೂಕುಸಿತ ವ್ಯಾಪಕ ವಿನಾಶವನ್ನು ಸೃಷ್ಟಿಸಿದ್ದವು. ಭೂಕುಸಿತದಲ್ಲಿ 400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 150 ಜನರು ಇನ್ನೂ ನಾಪತ್ತೆಯಾಗಿದ್ದಾರೆ. ಪತ್ತೆಯಾದ ಮೃತದೇಹಗಳ ಡಿಎನ್‌ಎ ಫಲಿತಾಂಶದ ಬಳಿಕ ಅಂತಿಮ ಸಾವಿನ ಸಂಖ್ಯೆ ಖಚಿತವಾಗಲಿದೆ ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: Wayanad Tragedy: ವಯನಾಡ್ ಭೂಕುಸಿತ; ದಕ್ಷಿಣ ಭಾರತದ ಸಿನಿಮಾ ನಟರಿಂದ ಸಂತ್ರಸ್ತರಿಗೆ ನೆರವಿನ‌ ಮಹಾಪೂರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Paris Olympics Medal Table: ಪಾಕಿಸ್ತಾನ 1 ಪದಕ ಗೆದ್ದರೂ ಪದಕ ಪಟ್ಟಿಯಲ್ಲಿ ಮೇಲೆ, ಭಾರತ 6 ಪದಕ ಗೆದ್ದರೂ ಕೆಳಗೆ ಏಕೆ?

Paris Olympics Medal Table: ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ(ಐಒಸಿ) ಆಯ್ಕೆ ಮಾಡಿಕೊಂಡ ರ‍್ಯಾಂಕಿಂಗ್ ವಿಧಾನದ ಪ್ರಕಾರ ಒಲಿಂಪಿಕ್ ಕೂಟದಲ್ಲಿ ಆಯಾ ದೇಶ ಗೆದ್ದ ಚಿನ್ನದ ಪದಕದ ಆಧಾರದಲ್ಲಿ ರ‍್ಯಾಂಕಿಂಗ್ ನೀಡಲಾಗುತ್ತದೆ.

VISTARANEWS.COM


on

Paris Olympics
Koo

ಬೆಂಗಳೂರು: ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಕ್ರೀಡಾಕೂಟ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ನಾಳೆ(ಭಾನುವಾರ) ಸಮಾರೋಪ ಸಮಾರಂಭ ನಡೆಯಲಿದ್ದು ಟೂರ್ನಿಗೆ ಅಧಿಕೃತವಾಗಿ ತೆರೆ ಬೀಳಲಿದೆ. ಸದ್ಯ ಪದಕ ಪಟ್ಟಿಯಲ್ಲಿ(Paris Olympics Medal Table) ಅಮೆರಿಕ ಅಗ್ರಸ್ಥಾನ ಪಡೆದಿದೆ. ಚೀನಾ ಮತ್ತು ಆಸ್ಟ್ರೇಲಿಯಾ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನಿಯಾಗಿ ಕಾಣಿಸಿಕೊಂಡಿದೆ. ಭಾರತ 6 ಪದಕ ಗೆದ್ದು 69ನೇ ಸ್ಥಾನಿಯಾಗಿದೆ. ಪಾಕಿಸ್ತಾನ ಏಕೈಕ ಪದಕ ಗೆದ್ದರೂ ಭಾರತಕ್ಕಿಂತ 8 ಸ್ಥಾನ ಪ್ರಗತಿ ಸಾಧಿಸಿ 58ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಒಂದು ಪದಕ ಗೆದ್ದರೂ ಪಾಕಿಸ್ತಾನ ಭಾರತಕ್ಕಿಂತ ಮೇಲೆ ಹೇಗೆ ಸ್ಥಾನ ಪಡೆಯಿತು ಎನ್ನುವುದು ಕ್ರೀಡಾಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಇದಕ್ಕೆ ಉತ್ತರ ಇಲ್ಲಿದೆ.

ಶುಕ್ರವಾರ ರಾತ್ರಿಯ ವರೆಗೂ ಪದಕದ ಖಾತೆಯನ್ನೇ ತೆರೆಯದೇ ಇದ್ದ ಪಾಕಿಸ್ತಾನಕ್ಕೆ ಪುರುಷರ ಜಾವೆಲಿನ್​ ಎಸೆತದಲ್ಲಿ ಬರೋಬ್ಬರಿ 92.97 ಮೀಟರ್ ದೂರ ಜಾವೆಲಿನ್ ಎಸೆದು ಒಲಿಂಪಿಕ್ಸ್ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದು ಬೀಗಿದ್ದರು. ಈ ಮೂಲಕ ಪಾಕ್​ಗೆ ಪದಕದ ಖಾತೆ ತೆರೆದಿದ್ದರು. ಜತೆಗೆ 40 ವರ್ಷಗಳ ಬಳಿಕ ಪಾಕಿಸ್ತಾನಕ್ಕೆ ಚಿನ್ನದ ಪದವೊಂದನ್ನು ಗೆದ್ದ ಸಾಧನೆ ಮಾಡಿದ್ದರು. ಭಾರತ 6 ಪದಕ ಗೆದ್ದರೂ ಕೂಡ ಪದಕ ಪಟ್ಟಿಯಲ್ಲಿ ಪಾಕ್​ಗಿಂತ ಕೆಳಗಿರಲು ಕಾರಣ ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಯಲ್ಲಿರುವ ನಿಯಮ.

ನಿಯಮ ಏನು ಹೇಳುತ್ತೆ?


ಹೌದು, ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ(ಐಒಸಿ) ಆಯ್ಕೆ ಮಾಡಿಕೊಂಡ ರ‍್ಯಾಂಕಿಂಗ್ ವಿಧಾನದ ಪ್ರಕಾರ ಒಲಿಂಪಿಕ್ ಕೂಟದಲ್ಲಿ ಆಯಾ ದೇಶ ಗೆದ್ದ ಚಿನ್ನದ ಪದಕದ ಆಧಾರದಲ್ಲಿ ರ‍್ಯಾಂಕಿಂಗ್ ನೀಡಲಾಗುತ್ತದೆ. ಉದಾಹರಣೆಗೆ ಒಂದು ದೇಶ 10 ಬೆಳ್ಳಿ ಅಥವಾ ಕಂಚಿನ ಪದಕ ಪಡೆದರೂ, ಏಕೈಕ ಚಿನ್ನದ ಪದಕ ಪಡೆದ ರಾಷ್ಟ್ರಕ್ಕಿಂತ ಕೆಳಗಿರುತ್ತದೆ. ಎರಡು ದೇಶಗಳು ಸಮಾನ ಸಂಖ್ಯೆಯ ಚಿನ್ನದ ಪದಕ ಗೆದ್ದಲ್ಲಿ, ಬೆಳ್ಳಿ ಹಾಗೂ ಕಂಚಿನ ಪದಕಗಳು ಗಣನೆಗೆ ಬರುತ್ತವೆ. ಒಟ್ಟಾರೆ ಚಿನ್ನದ ಪದಕ ಗೆದ್ದ ಆಧಾರದಲ್ಲಿ ಅಂಕಟ್ಟಿಯಲ್ಲಿ ಸ್ಥಾನ ನಿರ್ಧಾರವಾಗುತ್ತದೆ. ಹೀಗಾಗಿ ಭಾರತ ಪಾಕಿಸ್ತಾನಕ್ಕಿಂತ ಕೆಳಗಿನ ಸ್ಥಾನ ಪಡೆದಿದೆ.

ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಅವರ ಒಲಿಂಪಿಕ್ ಅನರ್ಹತೆ ಮತ್ತು ಮಹಿಳೆಯರ 50 ಕೆ.ಜಿ ವಿಭಾಗದ ಕುಸ್ತಿಯಲ್ಲಿ ಜಂಟಿ ಬೆಳ್ಳಿ ಪದಕಕ್ಕಾಗಿ ಕೋರ್ಟ್ ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್ (ಸಿಎಎಸ್)ಗೆ ಸಲ್ಲಿಸಿದ ಮನವಿಯ ಬಗ್ಗೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಮುಖ್ಯಸ್ಥ ಥಾಮಸ್ ಬಾಕ್​​ ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ. ಸ್ಪರ್ಧೆಯಲ್ಲಿ ಎರಡು ಬೆಳ್ಳಿ ಪದಕಗಳನ್ನು ನೀಡುವುದಕ್ಕೆ ಸಾಧ್ಯವೇ ಇಲ್ಲ ಎಂದು ಬಾಕ್​ ಹೇಳಿದ್ದಾರೆ. ಆದಾಗ್ಯೂ, ಚಿನ್ನದ ಪದಕದ ಪಂದ್ಯಕ್ಕೆ ಮುಂಚಿತವಾಗಿ ಅನರ್ಹಗೊಂಡ ಭಾರತೀಯ ಕುಸ್ತಿಪಟುವಿನ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡಿದ್ದೇನೆ ಎಂಬುದಾಗಿ ನುಡಿದಿದ್ದಾರೆ.

ಪ್ಯಾರಿಸ್​ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಥಾಮಸ್, ಸಿಎಎಸ್ ನಿರ್ಧಾರಕ್ಕೆ ಐಒಸಿ ಬದ್ಧವಾಗಿರುತ್ತದೆ ಎಂದು ಹೇಳಿದರು. ಎರಡು ಬೆಳ್ಳಿ ಪದಕಗಳನ್ನು ನೀಡುವುದು ತಪ್ಪು ಎಂದರು.

Continue Reading

ಪ್ರಮುಖ ಸುದ್ದಿ

Shiradi Landslide: ಶಿರಾಡಿ ಘಾಟಿ ರೈಲ್ವೇ ಹಳಿ ಮೇಲೆ ಮತ್ತೆ ಭೂಕುಸಿತ, ರೈಲು ಸಂಚಾರ ರದ್ದು; ಏರ್‌ಫೋರ್ಸ್‌ ಪರೀಕ್ಷೆ ತಪ್ಪಿದ್ದಕ್ಕೆ ಅಭ್ಯರ್ಥಿ ಕಣ್ಣೀರು

Shiradi Landslide: ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ಹಾಸನ- ಮಂಗಳೂರು ರೈಲು ಮಾರ್ಗದ ಮೇಲೆ ಮರಗಳ ಸಮೇತವಾಗಿ ಭಾರಿ ಪ್ರಮಾಣದ ಮಣ್ಣು ಕುಸಿತವಾಗಿದೆ. ಕಿಲೋಮೀಟರ್ ಸಂಖ್ಯೆ 42/43ರ ಮಧ್ಯೆ ಭೂಕುಸಿತವಾಗಿದ್ದು, ರೈಲುಗಳ ಸಂಚಾರ ಸ್ಥಗಿತವಾಗಿದೆ.

VISTARANEWS.COM


on

shiradi landslide trains cancelled
Koo

ಹಾಸನ: ಬೆಂಗಳೂರು- ಮಂಗಳೂರು (Bangalore- Mangalore) ಸಂಪರ್ಕಿಸುವ ರೈಲ್ವೇ ಹಳಿ (Railway Track) ಮೇಲೆ ಶಿರಾಡಿ ಘಾಟಿ (Shiradi Ghat) ಪ್ರದೇಶದಲ್ಲಿ ನಿನ್ನೆ ರಾತ್ರಿ ಮತ್ತೆ ಭಾರಿ ಪ್ರಮಾಣದಲ್ಲಿ (Shiradi Landslide) ಭೂಕುಸಿತವಾಗಿದೆ. ಇದರಿಂದಾಗಿ ರೈಲುಗಳ ಸಂಚಾರ (trains Cancelled) ಅಸ್ತವ್ಯಸ್ತವಾಗಿದೆ. ರೈಲುಗಳು ರದ್ದಾಗಿದ್ದರಿಂದ ಏರ್‌ಫೋರ್ಸ್ ಪರೀಕ್ಷೆ (Airforce Exam) ತಪ್ಪಿಸಿಕೊಂಡು ಅಭ್ಯರ್ಥಿಯೊಬ್ಬರು ಸೋಶಿಯಲ್‌ ಮೀಡಿಯಾದಲ್ಲಿ ಅಳಲು ತೋಡಿಕೊಂಡಿದ್ದಾರೆ.

ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ಹಾಸನ- ಮಂಗಳೂರು ರೈಲು ಮಾರ್ಗದ ಮೇಲೆ ಮರಗಳ ಸಮೇತವಾಗಿ ಭಾರಿ ಪ್ರಮಾಣದ ಮಣ್ಣು ಕುಸಿತವಾಗಿದೆ. ಕಿಲೋಮೀಟರ್ ಸಂಖ್ಯೆ 42/43ರ ಮಧ್ಯೆ ಭೂಕುಸಿತವಾಗಿದ್ದು, ರೈಲುಗಳ ಸಂಚಾರ ಸ್ಥಗಿತವಾಗಿದೆ. ಕಳೆದ ವಾರವಷ್ಟೇ ಈ ಮಾರ್ಗದಲ್ಲಿ ದೊಡ್ಡ ಪರಮಾಣದ ಗುಡ್ಡ ಕುಸಿತವಾಗಿತ್ತು. ಸುಮಾರು 430 ಮಂದಿ ಕಾರ್ಮಿಕರು ಹಗಲು ಇರುಳು ಕೆಲಸ ಮಾಡಿ ಮಾರ್ಗ ತೆರವು ಮಾಡಿದ್ದರು.

ಮಣ್ಣು ಕುಸಿತದ್‌ ಪರಿಣಾಮ ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರ ಸ್ಥಗಿತವಾಗಿದೆ. ಸಕಲೇಶಪುರ, ಎಡಕುಮೇರಿ, ಶಿರವಾಗಿಲು, ಆಲೂರು ಸೇರಿ ಆರು ಕಡೆ ಆರು ರೈಲುಗಳು ನಿಂತುಹೋಗಿವೆ. ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ಸಾವಿರಾರು ಪ್ರಯಾಣಿಕರು ಪರದಾಟ ಅನುಭವಿಸಿದರು. ನಿನ್ನೆ ಮಧ್ಯರಾತ್ರಿಯಿಂದ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಪ್ರಯಾಣಿಕರಿಗೆ ಪರ್ಯಾಯ ವಾಹನ ವ್ಯವಸ್ಥೆ ಮಾಡುವಂತೆ ಒತ್ತಾಯಿಸಲಾಗಿದೆ. ರೈಲ್ವೆ ಇಲಾಖೆ ಕಾರ್ಮಿಕರು ಮಣ್ಣು ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ.

ಪರೀಕ್ಷೆ ತಪ್ಪಿದ್ದಕ್ಕೆ ಬೇಸರ

ರೈಲು ವ್ಯತ್ಯಯದಿಂದ ಅಭ್ಯರ್ಥಿಯೊಬ್ಬರಿಗೆ ಏರ್‌ಫೋರ್ಸ್‌ ಪರೀಕ್ಷೆಗೆ ಹಾಜರಾಗುವುದು ತಪ್ಪಿಹೋಗಿದೆ. ಈ ಬಗ್ಗೆ ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ವಿದ್ಯಾರ್ಥಿ ಬೇಸರ ತೋಡಿಕೊಂಡಿದ್ದಾರೆ. ಮಂಗಳೂರಿಗೆ ಏರ್‌ಫೋರ್ಸ್ ಪರೀಕ್ಷೆಗಾಗಿ ತೆರಳುತ್ತಿದ್ದ ರೋಹಿತ್ ಸಿಂಗ್ ರಾವತ್ ದಾರಿ ಮಧ್ಯೆ ಸಿಲುಕಿಕೊಂಡಿದ್ದಾರೆ.

ರಾಜಸ್ಥಾನದಿಂದ ಬೆಂಗಳೂರಿಗೆ ಬಂದು ಮಂಗಳೂರಿಗೆ ಟ್ರೈನ್‌ನಲ್ಲಿ ರಾವತ್‌ ಪ್ರಯಾಣಿಸುತ್ತಿದ್ದರು. ಇಂದು ಬೆಳಗ್ಗೆ 8 ಗಂಟೆಗೆ ಮಂಗಳೂರಿನ ಅಬ್ಬಕ್ಕ ಸರ್ಕಲ್ ಬಳಿಯ ಖಾಸಗಿ ಕಾಲೇಜಿನಲ್ಲಿ ಪರೀಕ್ಷೆ ನಡೆದಿದೆ. ಇದರಲ್ಲಿ ಭಾಗವಹಿಸಲು ರಾವತ್‌ಗೆ ಸಾಧ್ಯವಾಗಿಲ್ಲ. ʼಬೆಂಗಳೂರು- ಮಂಗಳೂರು ನಡುವಿನ ರೈಲು 4 ಗಂಟೆ ಕಾಲ ತಡವಾಗಿ ಚಲಿಸುತ್ತಿದೆ. ಈ ಕಾರಣದಿಂದಾಗಿ ನನ್ನ ಪರೀಕ್ಷಾ ಕೇಂದ್ರವನ್ನು ತಲುಪಲು ನನಗೆ ಸಾಧ್ಯವಾಗುವುದಿಲ್ಲ. ಇದರ ಹೊಣೆ ಹೊರುವವರು ಯಾರು?ʼ ಎಂದು ಪೋಸ್ಟ್ ಹಾಕಿ ಅಭ್ಯರ್ಥಿ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Namma Metro: ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ; ಹಸಿರು ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ

Continue Reading

ಕ್ರೀಡೆ

Aman Sehrawat: 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್​ ಸೆಹ್ರಾವತ್; ಹೇಗಿತ್ತು ಅವರ ಪರಿಶ್ರಮ?

Aman Sehrawat: ಅಮನ್​ ಅವರು ಸೆಮಿಫೈನಲ್​ ಪಂದ್ಯದಲ್ಲಿ ಸೋತ ಬಳಿಕ 61 ಕೆಜಿ ತೂಕ ಹೊಂದಿದ್ದರಂತೆ. ಈ ವೇಳೆ ಅವರ ಕೋಚ್​ಗಳ ನೆರವಿನಿಂದ ಸತತ 10 ಗಂಟೆಗಳ ಕಾಲ ಕಸರತ್ತು ನಡೆಸಿ ಬರೋಬ್ಬರಿ 4.6 ಕೆಜಿ ತೂಕ ಇಳಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

VISTARANEWS.COM


on

Aman Sehrawa
Koo

ಪ್ಯಾರಿಸ್​: ನಿಗದಿತ ತೂಕಗಿಂತ ಹೆಚ್ಚಿನ ಭಾರ ಇದ್ದ ಕಾರಣ ಮಹಿಳಾ ಕುಸ್ತಿಪಟು ವಿನೇಶ್‌ ಪೋಗಟ್‌(vinesh phogat) ಫೈನಲ್​ ಪಂದ್ಯದಿಂದ ಅನರ್ಹಗೊಂಡು ಪದಕ ವಂಚಿತರಾಗಿದ್ದು ಎಲ್ಲರಿಗೂ ತಿಳಿದೇ ಇದೆ. ಇದರ ಬೆನ್ನಲ್ಲೇ ಶುಕ್ರವಾರ ನಡೆದಿದ್ದ 57 ಕೆಜಿ ವಿಭಾಗದ ಪುರುಷರ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಅಮನ್​ ಸೆಹ್ರಾವತ್(Aman Sehrawat)​ ಕೂಡ ಅನರ್ಹಗೊಳ್ಳುವ ಭೀತಿಗೆ ಎದುರಾಗಿದ್ದರಂತೆ. ಹೌದು, ಪಂದ್ಯಕ್ಕೂ ಮುನ್ನ ಅಮನ್​ ಕೇವಲ 10 ಗಂಟೆಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚಿನ ಪದಕ ಗೆದ್ದ ರೋಚಕ ಸಂಗತಿಯೊಂದನ್ನು ಅವರ ಕೋಚ್​ ಬಹಿರಂಗಪಡಿಸಿದ್ದಾರೆ.

ಹೌದು, ಅಮನ್​ ಅವರು ಸೆಮಿಫೈನಲ್​ ಪಂದ್ಯದಲ್ಲಿ ಸೋತ ಬಳಿಕ 61 ಕೆಜಿ ತೂಕ ಹೊಂದಿದ್ದರಂತೆ. ಈ ವೇಳೆ ಅವರ ಕೋಚ್​ಗಳ ನೆರವಿನಿಂದ ಸತತ 10 ಗಂಟೆಗಳ ಕಾಲ ಕಸರತ್ತು ನಡೆಸಿ ಬರೋಬ್ಬರಿ 4.6 ಕೆಜಿ ತೂಕ ಇಳಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಹೇಗಿತ್ತು ಅಮನ್​ ಕಸರತ್ತು?


ಕೋಚ್​ ವೀರೇಂದ್ರ ದಹಿಯಾ(virender dahiya coach) ನೀಡಿದ ಮಾಹಿತಿ ಪ್ರಕಾರ, ಅಮನ್​ ಗುರುವಾರ ಸಂಜೆ, ಅಂದರೆ ಸೆಮಿಫೈನಲ್​ ಮುಕ್ತಾಯದ ಬಳಿಕ 61.5 ಕೆಜಿ ತೂಕವನ್ನು ಹೊಂದಿದ್ದರು. ನಿಗದಿತ ಮಿತಿಗಿಂತ ನಿಖರವಾಗಿ 4.5 ಕಿಲೋಗ್ರಾಂಗಳಷ್ಟು ಹೆಚ್ಚು ತೂಕ ಹೊಂದಿದ್ದರು. ಈಗಾಗಲೇ ಕುಸ್ತಿಯಲ್ಲಿ ಒಂದು ಪದಕ ಕಳೆದುಕೊಂಡು ಆಘಾತದಲ್ಲಿದ್ದ ಕಾರಣ ಯಾವುದೇ ಕಾರಣಕ್ಕೂ ನಾವು ಮತ್ತೊಂದು ಪದಕ ಕಳೆದುಕೊಳ್ಳಬಾರದೆಂದು ನಿರ್ಧರಿಸಿ ಆರು ಸದಸ್ಯರ ಕುಸ್ತಿ ತಂಡದ ಹಿರಿಯ ಭಾರತೀಯ ತರಬೇತುದಾರರಾದ ಜಗಮಂದರ್ ಸಿಂಗ್ ಜತೆಗೂಡಿ ಅಮನ್​ಗೆ ವ್ಯಾಯಾಮ ಆರಂಭಿಸಲಾಯಿತು.

ತಮ್ಮ ಬಳಿ ಕೇವಲ 10 ಗಂಟೆ ಮಾತ್ರ ಉಳಿದಿತ್ತು. ಆರಂಭದಲ್ಲಿ ಅಮನ್​ಗೆ 1 ಗಂಟೆ ಟ್ರೆಡ್‌ಮಿಲ್‌ನಲ್ಲಿ ನಾನ್‌ಸ್ಟಾಪ್‌ ಓಟ ಅಭ್ಯಾಸ ಮಾಡಿಸಲಾಯಿತು. ಇದಾದ ಬಳಿಕ 5 ನಿಮಿಷ ವಿರಾಮ ನೀಡಿ ಬಳಿಕ ಸತತ ಒಂದೂವರೆ ಗಂಟೆ ಮ್ಯಾಚ್‌ ಸೆಷನ್‌ ಅಭ್ಯಾಸ ಮಾಡಿಸಿ 30 ನಿಮಿಷಗಳ ಕಾಲ ವಿರಾಮ ನೀಡಲಾಯಿತು. ಬಳಿಕ ಬಿಸಿ ನೀರಿನ ಸ್ನಾನ ಮಾಡಿಸಲಾಯಿತು. ಎಲ್ಲ ವ್ಯಾಯಮ ಮುಗಿದ ಬಳಿಕ ಅವರು 3.6 ಕಿಲೋಗಳನ್ನು ಕಳೆದುಕೊಂಡರು.

ಇದನ್ನೂ ಓದಿ Aman Sehrawat: ಬಾಲ್ಯದಲ್ಲೇ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದ ಅಮನ್​ ಇಂದು ದೇಶಕ್ಕಾಗಿ ಕಂಚು ಗೆದ್ದ ಸಾಧಕ

ಅಂತಿಮವಾಗಿ ಮಸಾಜ್ ಮಾಡಿ, ನಂತರ ಲಘು ಜಾಗಿಂಗ್ ಮತ್ತು 15 ನಿಮಿಷಗಳ ರನ್ನಿಂಗ್ ಸೆಷನ್ ಮಾಡಲಾಯಿತು. ಇದಾದ ಬಳಿಕ ಬೆಳಗಿನ ಜಾವ 4:30 ರ ಹೊತ್ತಿಗೆ, ಅವರ ತೂಕವು 56.9 ಕಿಲೋಗಳಿಗೆ ಕಡಿಮೆಯಾಯಿತು, ಅನುಮತಿಸುವ ಮಿತಿಗಿಂತ 100 ಗ್ರಾಂ ಕಡಿಮೆಯೇ ಆಗಿತ್ತು. ಬಳಿಕ ನಾವು ನಿಟ್ಟುಸಿರುವ ಬಿಟ್ಟೆವು ಎಂದು ಕೋಚ್​ ವೀರೇಂದ್ರ ದಹಿಯಾ ಹೇಳಿದ್ದಾರೆ.

ಕೇವಲ ನೀರು ಸೇವನೆ


ಅಮನ್‌ಗೆ ಯಾವುದೇ ಆಹಾರ ಪದಾರ್ಥಗಳನ್ನು ನೀಡಲಿಲ್ಲ. ಜೇನುತುಪ್ಪ ಬೆರಸಿದ ಉಗುರುಬೆಚ್ಚಗಿನ ನೀರು ಹಾಗೂ ಸ್ವಲ್ಪ ಕಾಫಿ ಕುಡಿಯಲು ಮಾತ್ರ ಅವಕಾಶ ನೀಡಲಾಗಿತ್ತು. ಅಲ್ಲದೇ ಕಂಚಿನ ಪದಕದ ಪಂದ್ಯ ಮುಗಿಯುವವರೆಗೂ ಅಮನ್‌ ನಿದ್ರೆಗೆ ಜಾರಲೇ ಇಲ್ಲ ಎಂದು ಕೋಚ್‌ಗಳು ತಿಳಿಸಿರುವುದಾಗಿ ವರದಿಗಳು ಉಲ್ಲೇಖಿಸಿವೆ.

Continue Reading

ಕ್ರೀಡೆ

Aman Sehrawat: ಬಾಲ್ಯದಲ್ಲೇ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದ ಅಮನ್​ ಇಂದು ದೇಶಕ್ಕಾಗಿ ಕಂಚು ಗೆದ್ದ ಸಾಧಕ

Aman Sehrawat: ಚೊಚ್ಚಲ ಪ್ರಯತ್ನದಲ್ಲೇ ಪದಕ ಗೆದ್ದ ಅಮನ್​ ಸೆಹ್ರಾವತ್​ ಈ ಪದಕವನ್ನು ಅಗಲಿದ ತಂದೆ-ತಾಯಿಗೆ ಅರ್ಪಿಸಿದ್ದಾರೆ. ಕಂಚು ಗೆಲ್ಲುವ ಮೂಲಕ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಭಾರತದ ಅತ್ಯಂತ ಕಿರಿಯ ಸ್ಪರ್ಧಿ ಎಂಬ ಇತಿಹಾಸವನ್ನು ಕೂಡ ಅಮನ್​ ನಿರ್ಮಿಸಿದ್ದಾರೆ.

VISTARANEWS.COM


on

Aman Sehrawat
Koo

ಬೆಂಗಳೂರು: ಕೆಲವು ಕ್ರೀಡಾಪಟುಗಳ ಬಗ್ಗೆ ಬರೆಯುವಾಗ, ಓದುವಾಗ ಯಾವಾಗಲೂ ರೋಮಾಂಚನಗೊಳ್ಳುತ್ತೇವೆ. ಕಡು ಬಡತನದಲ್ಲಿ ಬೆಳೆದು ಕೊನೆಗೆ ಯಶಸ್ಸಿನ ಸಾಧನೆಯ ಗೌರಿಶಿಖರವನ್ನು ಏರಿ ಗೆಲುವಿನ ಬಾವುಟ ಹಾರಿಸಿದ ಅದೆಷ್ಟೋ ಕ್ರೀಡಾಪಟುಗಳಿದ್ದಾರೆ. ಇದೀಗ ಈ ಸಾಲಿಗೆ ಪ್ಯಾರಿಸ್​ ಒಲಿಂಪಿಕ್ಸ್​(paris olympics 2024) ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ 21 ವರ್ಷದ ಅಮನ್​ ಸೆಹ್ರಾವತ್(Aman Sehrawat)​ ಸೇರ್ಪಡೆಗೊಂಡಿದ್ದಾರೆ.

ಬಾಲ್ಯದಲ್ಲೇ ತಂದೆ ತಾಯಿಯನ್ನು ಕಳೆದುಕೊಂಡ…


ಬಡ ಕುಟುಂಬದಿಂದ ಬಂದ ಅಮನ್ ಸೆಹ್ರಾವತ್​ ಹರಿಯಾಣದ ಮೂಲದವರು. ಇಲ್ಲಿ ಜಜ್ಜರ್ ಜಿಲ್ಲೆಯ ಬಿರೋಹರ್ ಗ್ರಾಮದವರು. ಅವರ ಬಾಲ್ಯದ ಜೀವನ ಎಲ್ಲರಂತೆ ಖಷಿಯಿಂದ ಕೂಡಿರಲಿಲ್ಲ. ಕಾರಣ ಅವರು 11 ವರ್ಷ ಇದ್ದಾಗಲೇ ತಾಯಿಯನ್ನು(ತಾಯಿ ಕಮಲೇಶ್​​ ಸೆಹ್ರಾವತ್) ಕಳೆದುಕೊಂಡರು. ಈ ಆಘಾತದಿಂದ ಮಗ ಹೊರ ಬರಬೇಕು ಎನ್ನುವ ಉದ್ದೇಶದಿಂದ ಅಮನ್ ಅವರ ತಂದೆ(ಸೋಮ್​ವೀರ್​ ಸೆಹ್ರಾವತ್) ಮಗನನ್ನು ಕುಸ್ತಿಗೆ ಸೇರಿದರು. ತಾಯಿಯನ್ನು ಕಳೆದುಕೊಂಡ ನೋವು ಇನ್ನೇನು ಮಾಸಬೇಕು ಎನ್ನುವಷ್ಟರಲ್ಲಿ ಅಮನ್​ಗೆ ಮತ್ತೊಂದು ಬರ ಸಿಡಿಲು ಬಡಿಯಿತು. ಅನಾರೋಗ್ಯದಿಂದ ತಂದೆಯನ್ನು ಕೂಡ ಕಳೆದುಕೊಂಡರು. ತಂದೆ ತಾಯಿ ಇಬ್ಬರನ್ನು ಕಳೆದುಕೊಂಡ ಅವರು ಅಕ್ಷರಶಃ ಅನಾಥರಾಗಿದ್ದರು.

ಇದನ್ನೂ ಓದಿ Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಇಂದು ಭಾರತಕ್ಕೆ ಯಾವ್ಯಾವ ಸ್ಪರ್ಧೆಗಳಿವೆ? ಇಲ್ಲಿದೆ ಎಲ್ಲ ವಿವರ

ಅಣ್ಣನ ನೆರವಿಗೆ ನಿಂತ ತಂಗಿ…


ತಂದೆ ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದ ಅಮನ್​ ಮತ್ತು ಅವರ ಸಹೋದರಿ ಪೂಜಾ ಮುಂದೆ ಅಜ್ಜ, ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಆಶ್ರಯದಲ್ಲಿ ಬೆಳೆದರು. ಕುಸ್ತಿಯಲ್ಲಿ ಅಮನ್​ ಮುಂದುವರಿಯುಂತೆ ಮಾಡಿದ್ದು ಅವರ ಸಹೋದರಿ. ಪ್ರತಿಭಾವಂತನಾಗಿದ್ದ ಅಮನ್‌ 18ನೇ ವಯಸ್ಸಿಗೆ 23 ವಯೋಮಿತಿಯ ಕುಸ್ತಿ ಆಡಿ ಚಾಂಪಿಯನ್‌ ಆಗಿದ್ದರು. ಈ ಪ್ರದರ್ಶನದಿಂದ ಅವರು ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ತರಬೇತಿಗೆ ಆಯ್ಕೆಯಾದರು. ಇಲ್ಲಿ ಪ್ರವೀಣ್ ದಹಿಯಾ ಅವರ ಅಡಿಯಲ್ಲಿ ಪಟ್ಟುಬಿಡದೆ ತರಬೇತಿ ಪಡೆದರು. ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿದ್ದಾರೆ.

ಪದಕ ತಂದೆ-ತಾಯಿಗೆ ಅರ್ಪಣೆ


ಚೊಚ್ಚಲ ಪ್ರಯತ್ನದಲ್ಲೇ ಪದಕ ಗೆದ್ದ ಅಮನ್​ ಸೆಹ್ರಾವತ್​ ಈ ಪದಕವನ್ನು ಅಗಲಿದ ತಂದೆ-ತಾಯಿಗೆ ಅರ್ಪಿಸಿದ್ದಾರೆ. ಕಂಚು ಗೆಲ್ಲುವ ಮೂಲಕ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಭಾರತದ ಅತ್ಯಂತ ಕಿರಿಯ ಸ್ಪರ್ಧಿ ಎಂಬ ಇತಿಹಾಸವನ್ನು ಕೂಡ ಅಮನ್​ ನಿರ್ಮಿಸಿದ್ದಾರೆ. ಈ ಹಿಂದೆ ಈ ದಾಖಲೆ ಪಿವಿ ಸಿಂಧು ಅವರ ಹೆಸರಿನಲ್ಲಿತ್ತು. ಸಿಂಧು ರಿಯೋ ಒಲಿಂಪಿಕ್ಸ್​ನಲ್ಲಿ 21 ವರ್ಷ  1 ತಿಂಗಳು ಮತ್ತು 14 ದಿನಗಳಲ್ಲಿ ಪದಕ ಗೆದ್ದಿದ್ದರು.

ಭಾರತದಿಂದ ಸ್ಪರ್ಧಿಸಿದ್ದ ಏಕೈಕ ಕುಸ್ತಿಪಟು


ಅಮನ್​ ಈ ಬಾರಿಯ ಒಲಿಂಪಿಕ್ಸ್‌ನಲ್ಲಿ(Paris Olympics) ಭಾಗಿಯಾಗಿದ್ದ ಭಾರತದ ಏಕೈಕ ಪುರುಷ ಕುಸ್ತಿಪಟು ಎನಿಸಿಕೊಂಡಿದ್ದರು. 57 ಕೆ.ಜಿ. ವಿಭಾಗದ ಕುಸ್ತಿಯಲ್ಲಿ ಕಳೆದ ಟೋಕಿಯೊ ಬೆಳ್ಳಿ ಪದಕ ಗೆದ್ದಿದ್ದ ರವಿ ದಹಿಯಾ ಅವರನ್ನು ರಾಷ್ಟ್ರೀಯ ಆಯ್ಕೆ ಟ್ರಯಲ್ಸ್‌ನಲ್ಲಿ ಮಣಿಸುವ ಮೂಲಕ ಅಮನ್‌ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದರು.  -ಕಾರ್ಟರ್‌ ಫೈನಲ್‌ ಮತ್ತು ಕ್ವಾರ್ಟರ್‌ ಫೈನಲ್‌ನಲ್ಲಿ ತಾಂತ್ರಿಕ ಮೇಲುಗೈ ಸಾಧಿಸುವ ಮೂಲಕ ಜಯ ಸಾಧಿಸಿದ್ದಾಗಲೇ ಅಮನ್​ ಪದಕ ಗೆಲ್ಲುವುದು ನಿಶ್ಚಿತ ಎನ್ನಲಾಗಿತ್ತು. ಸೆಮಿ ಫೈನಲ್​ ಪಂದ್ಯದಲ್ಲಿ ಅಗ್ರ ಶ್ರೇಯಾಂಕದ ಜಪಾನ್‌ನ ರೀ ಹಿಗುಚಿ ವಿರುದ್ಧ ಸೋಲು ಕಂಡ ಕಾರಣ ಕಂಚಿನ ಪದಕ್ಕೆ ಹೋರಾಟ ನಡೆಸಿ ಇಲ್ಲಿ ಮೇಲುಗೈ ಸಾಧಿಸಿದರು. ಕಂಚಿನ ಪದಕ ಸ್ಪರ್ಧೆಯಲ್ಲಿ ಅಮನ್​ ಪೆರುಗ್ವೆಯ ಡರಿಯನ್‌ ಟೊಯ್‌ ಕ್ರೂಜ್‌ರನ್ನು 13-5 ಅಂಕಗಳಿಂದ ಸೋಲಿಸಿ ಕಂಚಿಗೆ ಕೊರಳೊಡ್ಡಿದರು.

Continue Reading
Advertisement
love jihad mohammad ishphaq vismaya
ಕರ್ನಾಟಕ5 mins ago

Love Jihad: ಕೇರಳದ ಯುವಕನನ್ನು ಮದುವೆಯಾದ ಮಂಗಳೂರಿನ ಹಿಂದೂ ಯುವತಿ; ಹಿಂದೂ ಸಂಘಟನೆಗಳ ಹೋರಾಟ ನಿಷ್ಫಲ

Heart attack
ಉಡುಪಿ11 mins ago

Heart Attack : ಮಲಗಿದ್ದಲೇ ಹೃದಯ ಸ್ತಬ್ಧ! ನಾಲ್ಕೈದು ದಿನದ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

Paris Olympics
ಪ್ರಮುಖ ಸುದ್ದಿ23 mins ago

Paris Olympics Medal Table: ಪಾಕಿಸ್ತಾನ 1 ಪದಕ ಗೆದ್ದರೂ ಪದಕ ಪಟ್ಟಿಯಲ್ಲಿ ಮೇಲೆ, ಭಾರತ 6 ಪದಕ ಗೆದ್ದರೂ ಕೆಳಗೆ ಏಕೆ?

John Abraham slams actors for endorsing paan masala
ಬಾಲಿವುಡ್32 mins ago

John Abraham : ನಾನು ಸಾವನ್ನು ಮಾರಲ್ಲ ಎಂದು ಶಾರುಖ್ ಖಾನ್, ಅಜಯ್ ದೇವಗನ್‌ಗೆ ಪರೋಕ್ಷವಾಗಿ ತಿರುಗೇಟು ಕೊಟ್ಟ ಜಾನ್ ಅಬ್ರಹಾಂ!

ಚಿನ್ನದ ದರ40 mins ago

Gold Rate Today: ಮತ್ತೆ ಏರಿಕೆಯಾದ ಚಿನ್ನದ ಬೆಲೆ; ಇಂದಿನ ದರ ಚೆಕ್‌ ಮಾಡಿ

Viral Video
Latest49 mins ago

Viral Video: ವೇಗವಾಗಿ ಬಂದು ಅಪ್ಪಳಿಸಿದ ಸ್ಕಾರ್ಪಿಯೋ; ಒಂದೇ ಕುಟುಂಬದ ಮೂವರು ಪಾರಾಗಿದ್ದೇ ಅಚ್ಚರಿ!

anganawadi worker
ಕೊಪ್ಪಳ55 mins ago

Anganawadi workers: ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನೇ ಎಗರಿಸುತ್ತಿದ್ದ ಅಂಗನವಾಡಿ ಶಿಕ್ಷಕಿ, ಸಹಾಯಕಿ ವಜಾ!

Hindenburg
ವಾಣಿಜ್ಯ1 hour ago

Hindenburg: ಶೀಘ್ರದಲ್ಲೇ ಭಾರತದಲ್ಲಿ ಬಹುದೊಡ್ಡ ಸಂಚಲನ ಸೃಷ್ಟಿಯಾಗಲಿದೆ; ಹೊಸದೊಂದು ಬಾಂಬ್‌ ಸಿಡಿಸಿದ ಹಿಂಡನ್‌ಬರ್ಗ್‌

Indian Men’s Hockey Team
ಕ್ರೀಡೆ1 hour ago

Indian Men’s Hockey Team: ತವರಿಗೆ ಮರಳಿದ ಕಂಚು ವಿಜೇತ ಭಾರತ ಹಾಕಿ ತಂಡ; ದಿಲ್ಲಿಯಲ್ಲಿ ಭರ್ಜರಿ ಸ್ವಾಗತ

Road Accident
ರಾಯಚೂರು1 hour ago

Road Accident : ಜವರಾಯನಂತೆ ಬಂದ ಟಾಟಾಏಸ್‌ ಚಾಲಕ; ಪಾದಯಾತ್ರೆ ಹೊರಟಿದ್ದ ತಾಯಿ ದುರ್ಮರಣ, ಮಗಳು ಗಂಭೀರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ6 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌