Site icon Vistara News

Caste Census report: ಜಾತಿಗಣತಿ ವರದಿಯಲ್ಲಿ ಜನಸಂಖ್ಯೆ ಬಹಿರಂಗ; ಎಸ್ಸಿಗಳು ಫಸ್ಟ್‌, 2ನೇ ಸ್ಥಾನದಲ್ಲಿ ಮುಸ್ಲಿಮರು!

Population revealed in caste census report SCs first and Muslims second place

ಬೆಂಗಳೂರು: ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನೊಳಗೊಂಡ ಜಾತಿ ಗಣತಿ ವರದಿಯನ್ನು (Caste Census report) ರಾಜ್ಯ ಸರ್ಕಾರ ಅಧಿಕೃತವಾಗಿ ಸ್ವೀಕಾರ ಮಾಡಿದೆ. ಅಲ್ಲದೆ, ಈ ವರದಿಯನ್ನು ಬಾಕ್ಸ್‌ಗಳಲ್ಲಿ ಸೀಲ್‌ ಮಾಡಲಾಗಿದ್ದರೂ ಕೆಲವು ಅಂಶಗಳು ಸೋರಿಕೆಯಾಗಿವೆ. ಇದರ ಅನ್ವಯ ಒಟ್ಟು 6 ಕೋಟಿ ಕನ್ನಡಿಗರಲ್ಲಿ ಯಾವ ಜಾತಿ ಹಾಗೂ ಧರ್ಮದವರು ಎಷ್ಟು ಮಂದಿ ಇದ್ದಾರೆ ಎಂಬ ಅಂಕಿ-ಸಂಖ್ಯೆಯೂ ಬಹಿರಂಗಗೊಂಡಿದೆ. ಇದರ ಅನ್ವಯ ಪರಿಶಿಷ್ಟ ಜಾತಿ (ಎಸ್‌ಸಿ – Scheduled Castes) ಸಮುದಾಯದವರು ಅತಿ ಹೆಚ್ಚು (1.08 ಕೋಟಿ) ಇದ್ದರೆ, ನಂತರದ ಸ್ಥಾನದಲ್ಲಿ ಮುಸ್ಲಿಂ ಸಮುದಾಯದವರು (Muslim Community) ಇದ್ದಾರೆ. ಲಿಂಗಾಯತ (Lingayat Community) ಮತ್ತು ಒಕ್ಕಲಿಗ ಸಮುದಾಯದವರು (Okkaliga Community) ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಒಟ್ಟು 200 ಪುಟ ಹಾಗೂ 48 ಸಂಪುಟಗಳ ವರದಿಯನ್ನು ಹಸ್ತಾಂತರ ಮಾಡಿದ್ದಾರೆ. ಪ್ರಬಲ ಸಮುದಾಯಗಳಿಗಿಂತ ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರ (ಅಹಿಂದ ವರ್ಗ) ಜನಸಂಖ್ಯೆಯೇ ಅಧಿಕವಾಗಿರುವುದು ಈ ವರದಿಯ ಸಾರವಾಗಿದೆ. ಹೀಗಾಗಿ ಇದು ರಾಜಕೀಯವಾಗಿ ಇನ್ನು ಯಾವ ತಿರುವನ್ನು ಪಡೆದುಕೊಳ್ಳಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಅತಿ ಹಿಂದುಳಿದ ಸಮುದಾಯ ಯಾವುದು?

ಒಟ್ಟು 5.98 ಕೋಟಿ ಜನ ಸಮೀಕ್ಷೆಗೆ ಒಳಪಟ್ಟಿದ್ದು, ಅವರಲ್ಲಿ 32 ಲಕ್ಷ ಜನ ಸಮೀಕ್ಷೆಯಿಂದ ಹೊರಗುಳಿದಿದ್ದಾರೆ. ಮೂಲಗಳ ಪ್ರಕಾರ, ರಾಜ್ಯದಲ್ಲಿ ದಲಿತರೇ ಹೆಚ್ಚಾಗಿದ್ದು, ಕುರುಬ ಜನಾಂಗವೇ ಅತಿ ಹಿಂದುಳಿದ ಸಮುದಾಯವಾಗಿದೆ. ರಾಜ್ಯದ ಒಟ್ಟಾರೆ ಜನಸಂಖ್ಯೆ 5.98 ಕೋಟಿ. ಈ ಪೈಕಿ ಅಹಿಂದ ವರ್ಗದವರು 3.96 ಕೋಟಿಯಷ್ಟಿದ್ದಾರೆ. ಲಿಂಗಾಯತ, ಒಕ್ಕಲಿಗ, ಬ್ರಾಹ್ಮಣ ಹಾಗೂ ಇತರರ ಸಂಖ್ಯೆ 1.87 ಕೋಟಿಯಷ್ಟಿದೆ.

192 ಹೊಸ ಜಾತಿ ದಾಖಲು

ಒಟ್ಟು ರಾಜ್ಯದಲ್ಲಿ ಪರಿಶಿಷ್ಟ ಜಾತಿಯ 1.08 ಕೋಟಿ, ಪರಿಶಿಷ್ಟ ಪಂಗಡದ 40.45 ಲಕ್ಷ, ಮುಸ್ಲಿಮರು 70 ಲಕ್ಷ ಹಾಗೂ ಹಿಂದುಳಿದ ಸಮುದಾಯಕ್ಕೆ ಸೇರಿದ ಕುರುಬರು 45 ಲಕ್ಷ ಸಂಖ್ಯೆಯಲ್ಲಿದ್ದಾರೆ. ಒಟ್ಟು 816 ಇತರ ಹಿಂದುಳಿದ ಜಾತಿಗಳೆಂದು ಗುರುತಿಸಲಾಗಿದೆ. ಒಟ್ಟು 1,351 ಜಾತಿಗಳನ್ನು ಸಮೀಕ್ಷೆಯಡಿ ಪರಿಗಣನೆಗೆ ತೆಗೆದುಕೊಳ್ಳಲಾಗಿದ್ದು, ಹೊಸದಾಗಿ 192 ಜಾತಿಗಳನ್ನು ದಾಖಲಿಸಲಾಗಿದೆ. 10ಕ್ಕಿಂತ ಕಡಿಮೆ ಜನಸಂಖ್ಯೆ ಇರುವ 80 ಜಾತಿಗಳ ಹೆಸರನ್ನು ವರದಿಯಲ್ಲಿ ದಾಖಲಿಸಲಾಗಿದೆ. ಸುಮಾರು 30 ಜಾತಿಗಳು ಅತ್ಯಂತ ಹಿಂದುಳಿದ ಜಾತಿ ವರ್ಗದಡಿ ಸೇರಲಿವೆ.

ಜಾತಿವಾರು ಜನಸಂಖ್ಯೆಯ ವಿವರ

ವರದಿಯ ಸಾರಾಂಶ ಏನು?

ಇದನ್ನೂ ಓದಿ: Sedition case: ರಾಜ್ಯಪಾಲರ ಅಂಗಳಕ್ಕೆ ‘ಪಾಕಿಸ್ತಾನ್‌ ಜಿಂದಾಬಾದ್‌’ ಕದನ; ಸರ್ಕಾರ ವಜಾಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು ಜಿಲ್ಲಾಧಿಕಾರಿ ಸುಪರ್ದಿಗೆ ವರದಿ

ಜಯಪ್ರಕಾಶ್ ಹೆಗ್ಡೆ ನೀಡಿದ ವರದಿಯನ್ನು ಬೆಂಗಳೂರು ಜಿಲ್ಲಾಧಿಕಾರಿ ದಯಾನಂದ್ ಸುಪರ್ದಿಗೆ ರಾಜ್ಯ ಸರ್ಕಾರ ನೀಡಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್, ವರದಿಯನ್ನು ಕೊಂಡೊಯ್ದಿದ್ದಾರೆ.

Exit mobile version