Prajwal Revanna Case: 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ ಮಾಡಿಸಿಕೊಳ್ತಿದ್ದ ಪ್ರಜ್ವಲ್ ರೇವಣ್ಣ! - Vistara News

ಪ್ರಮುಖ ಸುದ್ದಿ

Prajwal Revanna Case: 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ ಮಾಡಿಸಿಕೊಳ್ತಿದ್ದ ಪ್ರಜ್ವಲ್ ರೇವಣ್ಣ!

Prajwal Revanna Case: ಸಾಕಷ್ಟು ಮಹಿಳೆಯರಿಗೆ ಬೆದರಿಕೆ ಹಾಕಿ ಬಲವಂತವಾಗಿ ಅಸುರಕ್ಷಿತ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ದೂರು ಪ್ರಜ್ವಲ್ ಮೇಲಿದೆ. ಇದರಿಂದ ಎಚ್‌ಐವಿ ಬರಬಹುದು ಎಂಬ ಆತಂಕದಿಂದಲೇ ಪ್ರತೀ ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ ಮಾಡಿಸಿಕೊಳ್ಳುತ್ತಿದ್ದಿರಬಹುದು ಎಂದು ಶಂಕಿಸಲಾಗಿದೆ.

VISTARANEWS.COM


on

prajwal revanna case test
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಇದೀಗ ಜೈಲಿನಲ್ಲಿರುವ ಹಾಸನ (Hassan news) ಮಾಜಿ ಸಂಸದ ಪ್ರಜ್ವಲ್ ರೇವಣ್ಣ , (Prajwal Revanna case) ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ (HIV Test) ಮಾಡಿಸಿಕೊಳ್ಳುತ್ತಿದ್ದರು ಎಂಬ ಸಂಗತಿ ಇದೀಗ ಬಯಲಾಗಿದೆ.

ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದೆ. ಸದ್ಯಕ್ಕೆ ಪ್ರಜ್ವಲ್ ಮೇಲೆ ನಾಲ್ಕು ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳ ವಿಚಾರಣೆ ವೇಳೆ ಹಲವು ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಅದರಲ್ಲಿ ಈ ಎಚ್‌ಐವಿ ಟೆಸ್ಟ್ ವಿಚಾರವೂ ಒಂದು. ಸಾಕಷ್ಟು ಮಹಿಳೆಯರಿಗೆ ಬೆದರಿಕೆ ಹಾಕಿ ಬಲವಂತವಾಗಿ ಅಸುರಕ್ಷಿತ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ದೂರು ಪ್ರಜ್ವಲ್ ಮೇಲಿದೆ. ಇದರಿಂದ ಎಚ್‌ಐವಿ ಬರಬಹುದು ಎಂಬ ಆತಂಕದಿಂದಲೇ ಪ್ರತೀ ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ ಮಾಡಿಸಿಕೊಳ್ಳುತ್ತಿದ್ದಿರಬಹುದು ಎಂದು ಶಂಕಿಸಲಾಗಿದೆ.

ಹಲವು ಮಹಿಳೆಯರ ಜೊತೆ ಪ್ರಜ್ವಲ್ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ಎಂಬ ಆರೋಪಕ್ಕೆ ಈ ಸಂಗತಿ ಪುಷ್ಟಿ ನೀಡಿದ್ದು, ಇದನ್ನು ಪ್ರಜ್ವಲ್‌ಗೆ ವಿರೋಧ ಸಾಕ್ಷ್ಯವಾಗಿ ಬಳಸಿಕೊಳ್ಳಲು ಎಸ್‌ಐಟಿ ಮುಂದಾಗಿದೆ. ಇದು ಪ್ರಜ್ವಲ್ ಮಹಿಳೆಯರ ಮೇಲೆ ಬಲಾತ್ಕಾರ ನಡೆಸಿದ್ದಕ್ಕೆ ದಾಖಲೆಗಳಲ್ಲಿ ಒಂದಾಗಲಿದೆ.

ಪ್ರತಿದಿನ ಫೋನ್‌ ಮಾಡಿ ಬೆತ್ತಲಾಗಲು ಹೇಳ್ತಿದ್ದ: ಪ್ರಜ್ವಲ್‌ ವಿರುದ್ಧ ನಾಲ್ಕನೇ ದೂರು

ಪ್ರಜ್ವಲ್ ರೇವಣ್ಣ (Prajwal Revanna Case) ವಿರುದ್ಧ ನಾಲ್ಕನೇ ಪ್ರಕರಣ ದಾಖಲಾಗಿದ್ದು, ಆರೋಪಿಯ ಕುರಿತು ಇನ್ನಷ್ಟು ವಿಕೃತಿಯ ದೂರುಗಳು ದಾಖಲಾಗಿವೆ. ಈ ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ (Preetham Gowda) ಹೆಸರು ಕೂಡ ತಳುಕು ಹಾಕಿಕೊಂಡಿದೆ.

ಸಿಐಡಿ ಸೈಬರ್ ಕ್ರೈಂ (CID Cyber Crime) ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರಿನನ್ವಯ ಎಫ್ಐಆರ್ (FIR) ದಾಖಲಾಗಿದೆ. ಎಫ್ಐಆರ್‌ನಲ್ಲಿ ಸಂತ್ರಸ್ತೆಯಿಂದ ಉಲ್ಲೇಖವಾಗಿರುವ ಅಂಶಗಳು ಹೀಗಿವೆ: ಮಗನ ಶಾಲೆ‌ ವಿಚಾರಕ್ಕೆ ಪ್ರಜ್ವಲ್‌ನನ್ನು ಸಂತ್ರಸ್ತ ಮಹಿಳೆ ಭೇಟಿಯಾಗಿದ್ದರು. ಭೇಟಿ ವೇಳೆ ಸಂತ್ರಸ್ತೆಯಿಂದ ಪ್ರಜ್ವಲ್‌ ಫೋನ್‌ ನಂಬರ್ ಪಡೆದಿದ್ದ. ನಂಬರ್‌ ಪಡೆದು ವಿಡಿಯೊ ಕಾಲ್ ಮಾಡಿ ದಿನ ನಿತ್ಯ ಮಾತಾಡುತ್ತಿದ್ದ.

ನಂತರ ಮಹಿಳೆಗೆ ವಿಡಿಯೊ ಕಾಲ್ ಮಾಡಿ ವಿವಸ್ತ್ರವಾಗುವಂತೆ ಒತ್ತಾಯಿಸುತ್ತಿದ್ದ. ವಿವಸ್ತ್ರಗೊಂಡ ಮಹಿಳೆಯನ್ನು ನೋಡುತ್ತ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ. ವಿವಸ್ತ್ರವಾಗಲು ಒಪ್ಪದಿದ್ದಾಗ ವಿಡಿಯೊ ಸೇವ್ ಮಾಡಿಕೊಂಡಿರುವುದಾಗಿಯೂ, ವೈರಲ್ ಮಾಡುವುದಾಗಿಯೂ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ.

ನಂತರ ಏಕಾಏಕಿ ಸಾಮಾಜಿಕ ಜಾಲತಾಣದಲ್ಲಿ ಈ ಫೋಟೊ ವೈರಲ್ ಆಗಿರುವ ವಿಚಾರ ಸಂತ್ರಸ್ತೆ ಗಮನಕ್ಕೆ ಬಂದಿದೆ. ಈ ಕುರಿತು ಪ್ರಜ್ವಲ್‌ನನ್ನು ಸಂತ್ರಸ್ತ ಮಹಿಳೆ ಸಂಪರ್ಕ ಮಾಡಿದ್ದಾರೆ. ಆಗ ʼಸ್ಟೇ ತಂದಿದ್ದೇನೆ, ಏನೂ ಆಗಲ್ಲʼ ಎಂದಿದ್ದರಂತೆ. ಎರಡನೇ ಬಾರಿ ಫೋಟೊ ವೈರಲ್ ಆದಾಗ ಸಂತ್ರಸ್ತೆ ದೂರು ನೀಡಲು ಮುಂದಾಗಿದ್ದರು.

ವೈರಲ್ ಆದ ಕೆಲವು ಫೋಟೊಗಳನ್ನು ಕಿರಣ್, ಶರತ್ ಹಾಗೂ ಪ್ರೀತಂ ಗೌಡ ವೈರಲ್‌ ಮಾಡಿಸಿರುವ ಆರೋಪ ಇದೆ. ಈ ಹಿನ್ನೆಲೆಯಲ್ಲಿ ಒಟ್ಟು ನಾಲ್ಕು ಜನರ ಮೇಲೆ ದೂರು ನೀಡಲು ಮಹಿಳೆ ಮುಂದಾಗಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಎಸ್ಐಟಿ ಅಧಿಕಾರಿಗಳಿಂದ ತನಿಖೆ‌ ಚುರುಕುಗತಿ ಪಡೆದುಕೊಂಡಿದೆ.

ಇದನ್ನೂ ಓದಿ: Suraj Revanna Case: ಸೂರಜ್‌ ರೇವಣ್ಣಗೇ ʼಹಿಂದಿನಿಂದ ಇರಿದವರುʼ ಯಾರು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Champions Trophy 2025 : ಭಾರತ ತಂಡ ಪಾಕಿಸ್ತಾನಕ್ಕೆ ಬರಲೇಬೇಕು ಹಠ ಹಿಡಿದು ಕುಳಿತಿರುವ ಪಿಸಿಬಿ

Champions Trophy 2025 : ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈ ತಿಂಗಳು ಶ್ರೀಲಂಕಾದಲ್ಲಿ ನಡೆಯಲಿರುವ ಐಸಿಸಿ ಸಭೆಯಲ್ಲಿ ಈ ವಿಷಯವನ್ನು ಎತ್ತಲು ಯೋಜಿಸಿದೆ. ಅಲ್ಲದೆ ಭಾರತ ತಂಡ ಬರಲೇಬೇಕು ಎಂದು ಒತ್ತಾಯ ಮಾಡುವ ಸಾಧ್ಯತೆಗಳಿವೆ. ಇದು ಸಭೆಯಲ್ಲಿ ನಿರ್ಧಾರ ಮಾಡಲು ದೊಡ್ಡ ಸಮಸ್ಯೆಗಳನ್ನು ತಂದೊಡ್ಡಲಿದೆ.

VISTARANEWS.COM


on

Champions Trophy 2025:
Koo

ಬೆಂಗಳೂರು: 2024ರ ಟಿ20 ವಿಶ್ವಕಪ್ ಬಳಿಕ ಇದೀಗ ಎಲ್ಲರ ಗಮನ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರತ್ತ (Champions Trophy 2025 ) ನೆಟ್ಟಿದೆ. ಮುಂದಿನ ವರ್ಷ ಫೆಬ್ರವರಿ-ಮಾರ್ಚ್​​ನಲ್ಲಿ ಪಾಕಿಸ್ತಾನದಲ್ಲಿ ಪಂದ್ಯಾವಳಿ ಆಯೋಜನೆಗೊಂಡಿದೆ. ಆದರೆ, ಟೂರ್ನಿಯಲ್ಲಿ ಭಾರತೀಯ ತಂಡದ ಭಾಗವಹಿಸುವಿಕೆಯೇ ಯಕ್ಷ ಪ್ರಶ್ನೆಯಾಗಿ ಉಳಿದಿದೆ. ಇತ್ತೀಚಿನ ವರದಿಗಳ ಪ್ರಕಾರ, ಐಸಿಸಿ ಚಾಂಪಿಯನ್ಸ್ ಟ್ರೋಫಿಯ 2025 ರ ಆವೃತ್ತಿಯಲ್ಲಿ ಭಾಗವಹಿಸಲು ಭಾರತ ಕ್ರಿಕೆಟ್ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವ ಸಾಧ್ಯತೆಯಿಲ್ಲ. ಪಂದ್ಯಾವಳಿಯಲ್ಲಿ ಅವರ ಭಾಗವಹಿಸುವಿಕೆಯು ಭಾರತ ಸರ್ಕಾರ ತೆಗೆದುಕೊಳ್ಳುವ ನಿರ್ಧಾರವನ್ನು ಅವಲಂಬಿಸಿರುತ್ತದೆ.

ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸದಿರಲು ಕಾರಣವೆಂದರೆ ದೇಶಗಳ ನಡುವಿನ ರಾಜಕೀಯ ಉದ್ವಿಗ್ನತೆ. ಉಭಯ ತಂಡಗಳು ದ್ವಿಪಕ್ಷೀಯ ಸರಣಿಗಳಲ್ಲಿ ಪರಸ್ಪರ ಆಡುವುದಿಲ್ಲ. ಐಸಿಸಿ ಈವೆಂಟ್ಗಳು ಮತ್ತು ಏಷ್ಯಾ ಕಪ್​ಗಳಲ್ಲಿ ಮಾತ್ರ ಪರಸ್ಪರ ಮುಖಾಮುಖಿಯಾಗುತ್ತವೆ. 2012-13ರಲ್ಲಿ ಕೊನೆಯ ಬಾರಿ ಸರಣಿ ಆಡಿತ್ತು.

ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ ಭಾರತ ಪ್ರಯಾಣಿಸದಿರುವ ವಿಷಯ ಸರ್ಕಾರದ ನಿರ್ಧಾರದ ಮೇಲೆ ಅವಲಂಬಿತವಾಗಿರುತ್ತದೆ/ ಅದರ ವಿವರಗಳನ್ನು ಐಸಿಸಿ ಸಭೆಯ ನಂತರ ಬಹಿರಂಗಪಡಿಸಲಾಗುವುದು ಎಂದು ಬಿಸಿಸಿಐ ಹೇಳಿದೆ.

ಇದನ್ನೂ ಓದಿ: ZIM vs IND : ಜಿಂಬಾಬ್ವೆ ವಿರುದ್ಧ 13 ರನ್​ಗಳಿಂದ ಸೋತ ವಿಶ್ವ ವಿಜೇತ ಭಾರತ ತಂಡ

ಪಂದ್ಯಾವಳಿಯ ವಿವರಗಳನ್ನು ಇನ್ನೂ ಚರ್ಚಿಸಲಾಗಿಲ್ಲವಾದರೂ, ಭಾರತ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವ ಸಾಧ್ಯತೆಯಿಲ್ಲ. ಅಂತಿಮವಾಗಿ, ನಿರ್ಧಾರವು ಭಾರತ ಸರ್ಕಾರಕ್ಕೆ ಬಿಟ್ಟಿದ್ದು. ಆದಾಗ್ಯೂ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈ ತಿಂಗಳು ಶ್ರೀಲಂಕಾದಲ್ಲಿ ನಡೆಯಲಿರುವ ಐಸಿಸಿ ಸಭೆಯಲ್ಲಿ ಈ ವಿಷಯವನ್ನು ಎತ್ತಲು ಯೋಜಿಸಿದೆ. ಅಲ್ಲದೆ ಭಾರತ ತಂಡ ಬರಲೇಬೇಕು ಎಂದು ಒತ್ತಾಯ ಮಾಡುವ ಸಾಧ್ಯತೆಗಳಿವೆ. ಇದು ಸಭೆಯಲ್ಲಿ ನಿರ್ಧಾರ ಮಾಡಲು ದೊಡ್ಡ ಸಮಸ್ಯೆಗಳನ್ನು ತಂದೊಡ್ಡಲಿದೆ.

ಈ ವಿಷಯದಲ್ಲಿ ಸರ್ಕಾರದ ನಿರ್ಧಾರವು ಅಂತಿಮವಾಗಿರುತ್ತದೆ. ಏಕೆಂದರೆ ನಾವು ಅದನ್ನು ಆಂತರಿಕವಾಗಿ ಇನ್ನೂ ದೃಢಪಡಿಸಿಲ್ಲ. ಇದು ಐಸಿಸಿ ಟೂರ್ನಿಯಾಗಿರುವುದರಿಂದ ಯಾವುದೇ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ನಮಗಿಲ್ಲ. ಆದಾಗ್ಯೂ, ಮುಂದಿನ ಐಸಿಸಿ ಸಭೆಯಲ್ಲಿ ಹೆಚ್ಚಿನ ವಿವರಗಳು ಹೊರಬರಬಹುದು ಎಂದು ಮೂಲಗಳು ತಿಳಿಸಿವೆ. ಭಾರತ ತನ್ನ ನಿರ್ಧಾರ ಬದಲಿಸದು ಎಂಬ ಕಾರಣಕ್ಕೆ ಪಾಕಿಸ್ತಾನ ಹಠ ಹಿಡಿಯಲಿದೆ.

2008ರ ಬಳಿಕ ಭಾರತ ತಂಡ ಪಾಕಿಸ್ತಾನ ಪ್ರವಾಸ ಕೈಗೊಂಡಿಲ್ಲ. ಅವರು 2023 ರಲ್ಲಿ ಏಷ್ಯಾ ಕಪ್ ಆಡಬೇಕಿತ್ತು ಆದರೆ ಅವರು ಪ್ರಯಾಣಿಸಲಿಲ್ಲ ಮತ್ತು ಪಂದ್ಯಾವಳಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಡಲಾಯಿತು. ಭಾರತ ಶ್ರೀಲಂಕಾದಲ್ಲಿ ಪಂದ್ಯಗಳನ್ನು ಆಡಿತು. ಆದರೆ ಅದರ ನಂತರ, ಭಾರತವು ಪ್ರಯಾಣಿಸಲು ನಿರಾಕರಿಸಿದರೂ ಪಾಕಿಸ್ತಾನವು ಸಕಾರಾತ್ಮಕ ಪ್ರತಿಕ್ರಿಯೆ ನೀಡಿತು.

2023ರ ಐಸಿಸಿ ವಿಶ್ವಕಪ್ ಟೂರ್ನಿಗಾಗಿ ಪಾಕಿಸ್ತಾನ ತಂಡ ಭಾರತಕ್ಕೆ ಪ್ರಯಾಣ ಬೆಳೆಸಿತ್ತು. ಅವರು ಹೈದರಾಬಾದ್, ಅಹಮದಾಬಾದ್, ಚೆನ್ನೈ, ಬೆಂಗಳೂರು ಮತ್ತು ಕೋಲ್ಕತ್ತಾದಲ್ಲಿ ಪಂದ್ಯಗಳನ್ನು ಆಡಿದರು ಮತ್ತು ಅವರು ಭಾರತದಲ್ಲಿ ಆಡಿದ ಎಲ್ಲಾ ಸ್ಥಳಗಳಾದ್ಯಂತ ಅಭಿಮಾನಿಗಳಿಂದ ಗರಿಷ್ಠ ಸ್ವಾಗತವನ್ನು ಪಡೆದಿದ್ದರು.

ವೇಳಾಪಟ್ಟಿ ಪ್ರಕಟಿಸಿದ ಪಾಕಿಸ್ತಾನ ಕ್ರಿಕೆಟ್ ಮಂಡಳಿ

ಇತ್ತೀಚೆಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ 2025 ರ ಚಾಂಪಿಯನ್ಸ್ ಟ್ರೋಫಿಯ ಕರಡು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತು. ಲಾಹೋರ್​ನಲ್ಲಿ 7 ಪಂದ್ಯಗಳು, ರಾವಲ್ಪಿಂಡಿಯಲ್ಲಿ 5 ಪಂದ್ಯಗಳು ಮತ್ತು ಕರಾಚಿಯಲ್ಲಿ 3 ಪಂದ್ಯಗಳು ನಡೆಯಲಿವೆ. ಭಾರತವು ತನ್ನ ಎಲ್ಲಾ ಪಂದ್ಯಗಳನ್ನು ಲಾಹೋರ್​ನಲ್ಲಿ ಆಡಬೇಕಾಗಿದೆ.

ಮಾರ್ಚ್ 1 ರಂದು ಲಾಹೋರ್​ನ ಗಡಾಫಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ಪಂದ್ಯ ನಡೆಯಲಿದೆ ಎಂದು ವರದಿಗಳು ಉಲ್ಲೇಖಿಸಿವೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಗಾಗಿ ಬಹುತೇಕ ಎಲ್ಲಾ ಯೋಜನೆಗಳು ಪೂರ್ಣಗೊಂಡಿದ್ದು, ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ನೋಡಬೇಕಾಗಿದೆ.

Continue Reading

ದೇಶ

Rain News: ವರುಣನ ಆರ್ಭಟ; ಮಳೆ ಸಂಬಂಧಿ ಅವಘಡಗಳಿಗೆ 24 ಗಂಟೆಯಲ್ಲಿ 13 ಜನ ಬಲಿ

Rain News: ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದಲ್ಲಿ 18.3 ಮಿಲಿಮೀಟರ್‌ ಮಳೆಯಾಗಿದೆ. ಫತೇಪುರದಲ್ಲಿ ಇಬ್ಬರು, ರಾಯ್‌ಬರೇಲಿಯಲ್ಲಿ ಇಬ್ಬರು, ಬುಲಂದ್‌ಶಹರ್‌, ಕನೌಜ್‌, ಮೈನ್‌ಪುರಿ, ಕೌಶಂಬಿ, ಫಿರೋಜಾಬಾದ್‌, ಪ್ರತಾಪ್‌ಗಢ ಹಾಗೂ ಉನ್ನಾವೋ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

Rain News
Koo

ಲಖನೌ: ಕರ್ನಾಟಕದ (Karnataka) ಹಲವೆಡೆ, ಅದರಲ್ಲೂ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಸ್ತೆಗಳು ಕೊಚ್ಚಿಕೊಂಡು ಹೋಗಿದ್ದು, ಮನೆಗಳು ಕುಸಿದಿವೆ. ಇದರಿಂದ ನಾಡಿನ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಕರ್ನಾಟಕ ಮಾತ್ರವಲ್ಲ, ಉತ್ತರ ಪ್ರದೇಶದಲ್ಲೂ (Uttar Pradesh) ವರುಣನ ಆರ್ಭಟವು (Rain News) ಜೋರಾಗಿದೆ. ಕಳೆದ 24 ಗಂಟೆಗಳಲ್ಲಿಯೇ ಮಳೆ ಸಂಬಂಧಿ ಅವಘಡಗಳಿಂದ 13 ಜನ ಮೃತಪಟ್ಟಿದ್ದು, ನೂರಾರು ಜನ ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಮಳೆ ಸಂಬಂಧಿ ಅವಘಡಗಳ ಕುರಿತು ಉತ್ತರ ಪ್ರದೇಶ ಪರಿಹಾರ ಇಲಾಖೆಯ ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ. ಮಳೆ ಸಂಬಂಧಿ ಅವಘಡಗಳಾದ ಸಿಡಿಲು, ಕಟ್ಟಡ ಕುಸಿತ, ಭೂಕುಸಿತ ಸೇರಿ ಹಲವು ರೀತಿಯ ಅವಘಡಗಳಿಂದ 13 ಜನ ಮೃತಪಟ್ಟಿದ್ದಾರೆ. ಶುಕ್ರವಾರ ಸಂಜೆ 6.30ರಿಂದ ಶನಿವಾರ ಸಂಜೆ 6.30ರ ಅವಧಿಯ 24 ಗಂಟೆಗಳಲ್ಲಿಯೇ ಇಷ್ಟು ಜನ ಮೃತಪಟ್ಟಿದ್ದಾರೆ. ನೂರಾರು ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದಲ್ಲಿ ಸರಾಸರಿ 18.3 ಮಿಲಿಮೀಟರ್‌ ಮಳೆಯಾಗಿದೆ. ಫತೇಪುರದಲ್ಲಿ ಇಬ್ಬರು, ರಾಯ್‌ಬರೇಲಿಯಲ್ಲಿ ಇಬ್ಬರು, ಬುಲಂದ್‌ಶಹರ್‌, ಕನೌಜ್‌, ಮೈನ್‌ಪುರಿ, ಕೌಶಂಬಿ, ಫಿರೋಜಾಬಾದ್‌, ಪ್ರತಾಪ್‌ಗಢ ಹಾಗೂ ಉನ್ನಾವೋ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ 75 ಜಿಲ್ಲೆಗಳ ಪೈಕಿ 45 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಸತತ ಮಳೆಯಿಂದಾಗಿ ರಾಜ್ಯದ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿವೆ. ಮೀನುಗಾರಿಕೆಗೆ ತೆರಳದಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಅಸ್ಸಾಂನಲ್ಲಿ 52 ಮಂದಿ ಸಾವು

ಅಸ್ಸಾಂನಲ್ಲಿ ಮಳೆಯಿಂದಾಗಿ ಕಳೆದ 24 ಗಂಟೆಗಳಲ್ಲಿ ಸುಮಾರು 52 ಮಂದಿ ಮೃತಪಟ್ಟಿದ್ದು, ನೂರಾರು ಮಂದಿ ಮನೆ ಕಳೆದುಕೊಂಡಿದ್ದಾರೆ. ನೆರೆಯಿಂದಾಗಿ ಅಂದಾಜು 24 ಲಕ್ಷ ಮಂದಿ ತೊಂದರೆಗೆ ಒಳಗಾಗಿದ್ದಾರೆ. ರಾಜ್ಯದ ಮುಕ್ಕಾಲು ಭಾಗಗಳಲ್ಲಿ ನೆರೆ ಆವರಿಸಿದೆ. ರಾಜ್ಯದ 35 ಜಿಲ್ಲೆಗಳ ಪೈಕಿ 30 ಜಿಲ್ಲೆಗಳು ತೀವ್ರವಾಗಿ ಪ್ರವಾಹದ ಹೊಡೆತಕ್ಕೆ ಸಿಲುಕಿವೆ. ಒಂದು ತಿಂಗಳಿನಿಂದ ಇಲ್ಲಿನ ಪರಿಸ್ಥಿತಿ ಭೀಕರವಾಗಿದ್ದು, ಪ್ರಾಣಹಾನಿಯ ಜತೆಗೆ ವ್ಯಾಪಕ ಪ್ರಮಾಣದಲ್ಲಿ ಬೆಳೆ ನಾಶ ಉಂಟಾಗಿದೆ. ಈ ಈಶಾನ್ಯ ರಾಜ್ಯದ ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ ಮತ್ತು ನಿರಾಶ್ರಿತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Continue Reading

ಕರ್ನಾಟಕ

KAS: ಕೆಎಎಸ್‌ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್;‌ ನೇಮಕಾತಿಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ, ಇಲ್ಲಿದೆ ಮಾಹಿತಿ

KAS: 2024ರ ಜುಲೈ 6ರಿಂದ ಜುಲೈ 21ರವರೆಗೆ 2017-18ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗವು ಅವಕಾಶ ನೀಡಿದೆ. ಈ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್‌ 25ರಂದು ನಡೆಸಲು ಕೂಡ ಕರ್ನಾಟಕ ಲೋಕಸೇವಾ ಆಯೋಗವು ತೀರ್ಮಾನಿಸಿದೆ.

VISTARANEWS.COM


on

KAS
Koo

ಬೆಂಗಳೂರು: 2017-18ನೇ ಸಾಲಿನಲ್ಲಿ ಗೆಜೆಟೆಡ್‌ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ (KAS) ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗವು (Karnataka Public Service Commission) ಸಿಹಿ ಸುದ್ದಿ ನೀಡಿದೆ. ಹೌದು, 2017-18ರಲ್ಲಿ ಕೆಎಎಸ್‌ ನೇಮಕಾತಿಗೆ ಅರ್ಜಿ ಸಲ್ಲಿಸಿದವರಿಗೆ 2023-24ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ನೇಮಕಾತಿಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ ಕಲ್ಪಿಸಲಾಗಿದ್ದು, ಇದರಿಂದ ಸಾವಿರಾರು ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸಬಹುದಾಗಿದೆ.

2024ರ ಜುಲೈ 6ರಿಂದ ಜುಲೈ 21ರವರೆಗೆ 2017-18ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗವು ಅವಕಾಶ ನೀಡಿದೆ. ಈ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್‌ 25ರಂದು ನಡೆಸಲು ಕೂಡ ಕರ್ನಾಟಕ ಲೋಕಸೇವಾ ಆಯೋಗವು ತೀರ್ಮಾನಿಸಿದೆ. ಕೆಎಎಸ್‌ ಸೇರಿ ಇತರ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಜುಲೈ 21ರಂದು ನಡೆಸಲಾಗುವುದು ಎಂದು ಈಗಾಗಲೇ ಕೆಪಿಎಸ್‌ಸಿ ತಿಳಿಸಿತ್ತು. ಅಭ್ಯರ್ಥಿಗಳ ಮನವಿ ಮೇರೆಗೆ ಪರೀಕ್ಷಾ ದಿನಾಂಕ ಮುಂದೂಡಲಾಗಿತ್ತು.

ಕೆಪಿಎಸ್‌ಸಿ ಅಧಿಸೂಚನೆ

2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್‌) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳು 26-02-2024 ರಂದು ಹೊರಡಿಸಿರುವ ಅಧಿಸೂಚನೆಯ ಹುದ್ದೆಗಳಿಗೆ / ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಕೆಪಿಎಸ್‌ಸಿ 15 ದಿನಗಳ ಕಾಲಾವಕಾಶ ನೀಡಬೇಕೆಂದು ಸರ್ಕಾರ ಸೂಚನೆ ನೀಡಿತ್ತು. ಅದರಂತೆ ಈಗ ಕೆಪಿಎಸ್‌ಸಿಯು ಅರ್ಜಿ ಸಲ್ಲಿಸಲು ಅವಕಾಶ ನೀಡುವ ಜತೆಗೆ ಪೂರ್ವಭಾವಿ ಪರೀಕ್ಷೆಯ ದಿನಾಂಕವನ್ನು ಘೋಷಿಸಿದೆ.

ವಿಶೇಷ ಸೂಚನೆ

2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿಗೆ ಅರ್ಜಿ ಸಲ್ಲಿಸಿದವರಿಗೆ ಕೆಪಿಎಸ್‌ಸಿಯು ವಿಶೇಷ ಸೂಚನೆ ನೀಡಿದೆ. ಅಭ್ಯರ್ಥಿಗಳು ಈಗಾಗಲೇ ಕೆಪಿಎಸ್‌ಸಿ ಉದ್ಯೋಗ ಸಾಫ್ಟ್‌ವೇರ್‌ನಲ್ಲಿ ಒಟಿಆರ್‌ ಅನ್ನು ರಚಿಸಿದ್ದರೆ ಅವರು ನೇರವಾಗಿ ವೆಬ್‌ಸೈಟ್‌ಗೆ (https://kpsconline.karnataka.gov.in) ಭೇಟಿ ನೀಡಿ, ಲಾಗ್‌ಇನ್‌ ಆಗುವ ಮೂಲಕ ಅರ್ಜಿ ಸಲ್ಲಿಸಬಹುದು. ಒಟಿಆರ್‌ ರಚಿಸದವರು ವೆಬ್‌ಸೈಟ್‌ಗೆ ಭೇಟಿ ನೀಡಿ, ಮೊದಲು ಒಟಿಆರ್‌ ರಚಿಸಿ, ನಂತರ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಿದೆ.

ಇದನ್ನೂ ಓದಿ: Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Continue Reading

ದೇಶ

Mid Day Meal: ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ; Video ಇದೆ

Mid Day Meal: ಛತ್ತೀಸ್‌ಗಢದಲ್ಲಿ ಅಪೌಷ್ಟಿಕತೆ ಪ್ರಮಾಣ ಶೇ.17.76ರಷ್ಟಿದೆ. ಇದರಿಂದಾಗಿ ಬಿಸಿಯೂಟ ಯೋಜನೆಗೆ ರಾಜ್ಯ ಸರ್ಕಾರವು ಹೆಚ್ಚಿನ ಆದ್ಯತೆ ನೀಡುತ್ತದೆ. ಬಿಸಿಯೂಟದಲ್ಲಿ ಮಕ್ಕಳಿಗೆ ಚಪಾತಿ, ಅನ್ನ, ಸಾಂಬಾರ್‌, ಬೇಳೆ-ಕಾಳಿನಿಂದ ಮಾಡಿದ ಪಲ್ಯ ಸೇರಿ ಹಲವು ರೀತಿಯ ತಿನಿಸುಗಳು ಇರಬೇಕು ಎಂಬ ನಿಯಮ ರೂಪಿಸಿದೆ. ಆದರೆ, ಮಕ್ಕಳಿಗೆ ಸಿಗುತ್ತಿರುವುದು ಮಾತ್ರ ಅರಿಶಿಣ ಮಿಶ್ರಿತ ಅನ್ನ. ಸಾಮಾಜಿಕ ಜಾಲತಾಣದಲ್ಲಿ ಮಕ್ಕಳ ದುಸ್ಥಿತಿಯ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Mid Day Meal
Koo

ರಾಯ್‌ಪುರ: ಬಡವರ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಸಿಗಲಿ, ಊಟದ ಆಸೆಗಾಗಿಯಾದರೂ ಬಡವರ ಮಕ್ಕಳು ಶಾಲೆಗೆ ಬಂದು, ವಿದ್ಯಾವಂತರಾಗಲಿ ಎಂದು ಕರ್ನಾಟಕ ಸೇರಿ ದೇಶದ ಹಲವು ರಾಜ್ಯಗಳ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟದ (Mid Day Meal) ಯೋಜನೆಗಳನ್ನು ಜಾರಿಗೆ ತರಲಾಗಿದೆ. ಆದರೆ, ಸರ್ಕಾರಗಳು ಜಾರಿಗೆ ತಂದಿರುವ ಇಂತಹ ಉತ್ತಮ ಯೋಜನೆಗಳಲ್ಲೂ, ಮಕ್ಕಳ ಊಟದಲ್ಲೂ ಅಧಿಕಾರಿಗಳು ಕಳ್ಳಾಟ ಆಡುತ್ತಿದ್ದಾರೆ. ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಬಿಸಿಯೂಟ ನೀಡುವುದಿಲ್ಲ ಎಂಬ ಆರೋಪಗಳು ಕೇಳಿಬರುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಛತ್ತೀಸ್‌ಗಢದ (Chhattisgarh) ಶಾಲೆಯೊಂದರಲ್ಲಿ ಮಕ್ಕಳಿಗೆ ಬಿಸಿಯೂಟ ಯೋಜನೆ ಅನ್ವಯ ಬರೀ ಅನ್ನ ಹಾಗೂ ಅರಿಶಿಣ ಮಿಶ್ರಣ ಮಾಡಿ, ಅದನ್ನೇ ನೀಡಲಾಗಿದೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಹೌದು, ಛತ್ತೀಸ್‌ಗಢದ ಬಲರಾಮ್‌ಪುರ ಜಿಲ್ಲೆಯ ಬಿಜಾಕುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಇಷ್ಟೊಂದು ಕಳಪೆ ಆಹಾರವನ್ನು ನೀಡಲಾಗುತ್ತಿದೆ. ಮಕ್ಕಳು ಅರಿಶಿಣ ಮಿಕ್ಸ್‌ ಆಗಿರುವ ಅನ್ನವನ್ನು ಸೇವಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 43 ವಿದ್ಯಾರ್ಥಿಗಳು ಓದುತ್ತಿದ್ದು, ಬಹುತೇಕರು ಬಡವರ ಮಕ್ಕಳಾಗಿದ್ದಾರೆ. ಆದರೆ, ಇವರಿಗೆ ಕಳೆದ ಒಂದು ವಾರದಿಂದ ಬಿಸಿಯೂಟದಲ್ಲಿ ತರಕಾರಿ ನೀಡದೆ, ಬರೀ ಅರಿಶಿಣ ಮಿಶ್ರಣ ಆಗಿರುವ ಅನ್ನ ನೀಡಲಾಗುತ್ತಿದೆ. ಇದನ್ನು ಶಾಲೆಯ ಅಧಿಕಾರಿಗಳೇ ದೃಢಪಡಿಸಿದ್ದಾರೆ.

“ಕಳೆದ ಒಂದು ವಾರದಿಂದ ತರಕಾರಿ ಪೂರೈಸುವವರು ಶಾಲೆಗೆ ತರಕಾರಿ ಪೂರೈಸುತ್ತಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ತರಕಾರಿ ವ್ಯವಸ್ಥೆ ಆಗಿಲ್ಲ. ಹಾಗಾಗಿ, ಮಕ್ಕಳಿಗೆ ಅನ್ನ-ಸಾರು ಇಲ್ಲವೇ ಅರಿಶಿಣ ಮಿಶ್ರಿತ ಅನ್ನ ನೀಡುತ್ತಿದ್ದೇವೆ” ಎಂದು ಶಾಲೆಯ ಮುಖ್ಯೋಪಾಧ್ಯಾಯ ತಿಳಿಸಿದ್ದಾರೆ. ಇವರ ಆರೋಪಗಳಿಗೆ ತರಕಾರಿ ಪೂರೈಸುವವರು ಪ್ರತಿಕ್ರಿಯಿಸಿದ್ದು, “ಶಾಲೆಗೆ ತರಕಾರಿ ಪೂರೈಸಿದ್ದಕ್ಕೆ ಹಲವು ತಿಂಗಳಿಂದ ಹಣ ನೀಡಿಲ್ಲ. ಇದರಿಂದಾಗಿ ನಾವು ತರಕಾರಿ ಪೂರೈಸುತ್ತಿಲ್ಲ” ಎಂದು ಹೇಳಿದ್ದಾರೆ. ಹೀಗೆ ಆರೋಪ-ಪ್ರತ್ಯಾರೋಪದ ಮಧ್ಯೆ ಮಕ್ಕಳು ಪೌಷ್ಟಿಕಾಂಶಯುಕ್ತ ಊಟದಿಂದ ವಿಮುಖರಾಗುತ್ತಿದ್ದಾರೆ. ಇದಕ್ಕೆ ಗ್ರಾಮಸ್ಥರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಛತ್ತೀಸ್‌ಗಢದಲ್ಲಿ ಅಪೌಷ್ಟಿಕತೆ ಪ್ರಮಾಣ ಶೇ.17.76ರಷ್ಟಿದೆ. ಇದರಿಂದಾಗಿ ಬಿಸಿಯೂಟ ಯೋಜನೆಗೆ ರಾಜ್ಯ ಸರ್ಕಾರವು ಹೆಚ್ಚಿನ ಆದ್ಯತೆ ನೀಡುತ್ತದೆ. ಬಿಸಿಯೂಟದಲ್ಲಿ ಮಕ್ಕಳಿಗೆ ಚಪಾತಿ, ಅನ್ನ, ಸಾಂಬಾರ್‌, ಬೇಳೆ-ಕಾಳಿನಿಂದ ಮಾಡಿದ ಪಲ್ಯ ಸೇರಿ ಹಲವು ರೀತಿಯ ತಿನಿಸುಗಳು ಇರಬೇಕು ಎಂಬ ನಿಯಮ ರೂಪಿಸಿದೆ. ಇದಕ್ಕಾಗಿ ವಾರ್ಷಿಕ ಕೋಟ್ಯಂತರ ರೂ. ಖರ್ಚು ಮಾಡುತ್ತಿದೆ. ಇಷ್ಟಾದರೂ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಮಕ್ಕಳು ಅಪೌಷ್ಟಿಕಾಂಶಯುಕ್ತ ಆಹಾರ ಸೇವಿಸುವಂತಾಗಿದೆ. ಮಕ್ಕಳು ಬರೀ ಅನ್ನ ತಿನ್ನುತ್ತಿರುವ ವಿಡಿಯೊ ವೈರಲ್‌ ಆಗುತ್ತಲೇ ಜಿಲ್ಲಾ ಶಿಕ್ಷಣ ಅಧಿಕಾರಿ ದೇವೇಂದ್ರ ನಾಥ್‌ ಮಿಶ್ರಾ ಪ್ರತಿಕ್ರಿಯಿಸಿದ್ದು, “ಪ್ರಕರಣ ಈಗ ಗಮನಕ್ಕೆ ಬಂದಿದೆ. ಕೂಡಲೇ ಕ್ರಮ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ: Students Fall Sick: ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆರೋಗ್ಯ ವಿಚಾರಿಸಿದ ಶಾಸಕ

Continue Reading
Advertisement
Champions Trophy 2025:
ಪ್ರಮುಖ ಸುದ್ದಿ24 mins ago

Champions Trophy 2025 : ಭಾರತ ತಂಡ ಪಾಕಿಸ್ತಾನಕ್ಕೆ ಬರಲೇಬೇಕು ಹಠ ಹಿಡಿದು ಕುಳಿತಿರುವ ಪಿಸಿಬಿ

Rain News
ದೇಶ24 mins ago

Rain News: ವರುಣನ ಆರ್ಭಟ; ಮಳೆ ಸಂಬಂಧಿ ಅವಘಡಗಳಿಗೆ 24 ಗಂಟೆಯಲ್ಲಿ 13 ಜನ ಬಲಿ

KAS
ಕರ್ನಾಟಕ1 hour ago

KAS: ಕೆಎಎಸ್‌ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್;‌ ನೇಮಕಾತಿಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ, ಇಲ್ಲಿದೆ ಮಾಹಿತಿ

Mid Day Meal
ದೇಶ2 hours ago

Mid Day Meal: ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ; Video ಇದೆ

Dr HS Shetty: Rs 7 crore spent on charity; Businessman Dr. HS Shetty
ಪ್ರಮುಖ ಸುದ್ದಿ2 hours ago

Dr HS Shetty : ದಾನಗಳಿಗಾಗಿಯೇ ವರ್ಷದಲ್ಲಿ 7 ಕೋಟಿ ರೂ. ವಿನಿಯೋಗ

Vasishtha Simha starrer VIP Kannada movie
ಕರ್ನಾಟಕ2 hours ago

Kannada New Movie: ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಕಂಠಸಿರಿಯಲ್ಲಿ ವಸಿಷ್ಠ ಸಿಂಹ ಅಭಿನಯದ ‘ವಿಐಪಿ’ ಚಿತ್ರದ ಹಾಡು

Asia Cup 2024
ಪ್ರಮುಖ ಸುದ್ದಿ3 hours ago

Asia Cup 2024 : ಮಹಿಳಾ ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

Viral Video
Latest3 hours ago

Viral Video: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಪ್ರಾಂಶುಪಾಲರನ್ನು ಕುರ್ಚಿ ಸಹಿತ ಹೊರಗೆಳೆದ ಸಿಬ್ಬಂದಿ

Kashmir Encounter
ದೇಶ3 hours ago

Kashmir Encounter: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ನಾಲ್ವರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

Viral Video
Latest3 hours ago

Viral Video : ಹೀಗೆಲ್ಲಾ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಾರಾ…? ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ6 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ8 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ9 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು11 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ13 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ18 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ1 day ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ1 day ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ1 day ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ1 day ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

ಟ್ರೆಂಡಿಂಗ್‌