Prajwal Revanna Case: ಪ್ರಜ್ವಲ್‌ ಪ್ರತ್ಯಕ್ಷವಾದ ಬೆನ್ನಲ್ಲೇ ನಿರೀಕ್ಷಣಾ ಜಾಮೀನಿಗೆ ಭವಾನಿ ರೇವಣ್ಣ ಅರ್ಜಿ - Vistara News

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್‌ ಪ್ರತ್ಯಕ್ಷವಾದ ಬೆನ್ನಲ್ಲೇ ನಿರೀಕ್ಷಣಾ ಜಾಮೀನಿಗೆ ಭವಾನಿ ರೇವಣ್ಣ ಅರ್ಜಿ

Prajwal Revanna Case: ಲೈಂಗಿಕ ದೌರ್ಜನ್ಯ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್‌ ಕೋರ್ಟ್‌ಗೆ ಭವಾನಿ ರೇವಣ್ಣ ಅವರು ಅರ್ಜಿ ಸಲ್ಲಿಸಿದ್ದಾರೆ. ಸಂತ್ರಸ್ತೆ ಅಪಹರಣಕ್ಕೆ ಕುಮ್ಮಕ್ಕು ನೀಡಿದ ಆರೋಪ ಇವರ ಮೇಲಿದೆ.

VISTARANEWS.COM


on

Prajwal Revanna Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ ರೇವಣ್ಣ, ವಿಚಾರಣೆಗೆ ಹಾಜರಾಗುವೆ ಎಂದು ವಿಡಿಯೊ ಮಾಡಿ ಹರಿಬಿಟ್ಟ ಬೆನ್ನಲ್ಲೇ ಅವರ ತಾಯಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಲೈಂಗಿಕ ದೌರ್ಜನ್ಯ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್‌ ಕೋರ್ಟ್‌ಗೆ ಅವರು ಅರ್ಜಿ ಸಲ್ಲಿಸಿದ್ದಾರೆ.

ಕೆ.ಆರ್‌.ನಗರದ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಹಾಗೂ ಭವಾನಿ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿತ್ತು. ಲೈಂಗಿಕ ದೌರ್ಜನ್ಯ ಮತ್ತು ಕಿಡ್ನ್ಯಾಪ್‌ ಕೇಸ್‌ನಲ್ಲಿ ಈಗಾಗಲೇ ಮಾಜಿ ಸಚಿವ ರೇವಣ್ಣ ಅವರಿಗೆ ಬೇಲ್‌ ಸಿಕ್ಕಿದೆ. ಈ ನಡುವೆ ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಮುಖ ಆರೋಪಿಯಾದ ಪ್ರಜ್ವಲ್‌ ರೇವಣ್ಣ ಅವರು ವಿದೇಶದಿಂದ ಮೇ 31ರಂದು ಬೆಂಗಳೂರಿಗೆ ಆಗಮಿಸುವುದಾಗಿ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿದ ಬೆನ್ನಲ್ಲೇ ತಾಯಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ಇತ್ತೀಚೆಗೆ ಚಾಮರಾಜನಗರದ ಸಂತ್ರಸ್ತೆಯ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು. ಆರು ದಿನಗಳ ನಿರಂತರ ಕಾನೂನು ಸಮರದ ಬಳಿಕ ಅವರಿಗೆ ಮೇ 13ರಂದು ಜಾಮೀನು ದೊರೆತಿತ್ತು. ನಂತರ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ (physical abuse) ಪ್ರಕರಣದಲ್ಲೂ ಮಾಜಿ ಸಚಿವ ಎಚ್‌ಡಿ ರೇವಣ್ಣ (HD Revanna case) ಅವರಿಗೆ ಮೇ 20ರಂದು ಜಾಮೀನು (Bail) ಮಂಜೂರಾಗಿತ್ತು. ಈ ನಡುವೆ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರಿಗೂ ನೋಟಿಸ್‌ ನೀಡಲಾಗಿತ್ತು.

ಇದನ್ನೂ ಓದಿ | Prajwal Revanna Case: ವಿಚಾರಣೆಗೆ ಬರುವ ಪ್ರಜ್ವಲ್‌ ನಿರ್ಧಾರ ಸ್ವಾಗತಿಸುವೆ ಎಂದ ಸಚಿವ ಪರಮೇಶ್ವರ್‌

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಕುಮ್ಮಕ್ಕು ಕೊಟ್ಟ ಆರೋಪವನ್ನು ಭವಾನಿ ರೇವಣ್ಣ ಹೊತ್ತಿದ್ದಾರೆ. ಮೊದಲ ನೋಟಿಸ್‌ಗೆ ಉತ್ತರಿಸದ ಹಿನ್ನೆಲೆಯಲ್ಲಿ ಇತ್ತೀಚೆಗೆ ಎರಡನೇ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ, ಭವಾನಿ ಅವರು ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದರು. ಇದೀಗ ಮಗ ಪ್ರಜ್ವಲ್‌ ಪ್ರಜ್ವಲ್‌ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ.

ಯಾವ ನಿಯಮದಡಿ ನೋಟಿಸ್ ನೀಡಿದ್ದಾರೆಂದು ಎಸ್ಐಟಿ ತಿಳಿಸಿಲ್ಲ. ಹೀಗಾಗಿ ಭವಾನಿ ರೇವಣ್ಣಗೂ ಬಂಧನದ ಭೀತಿ ಇದೆ. ಹೀಗಾಗಿ ನಿರೀಕ್ಷಣಾ ಜಾಮೀನು ನೀಡಲು ವಕೀಲರು ಮನವಿ ಮಾಡಿದ್ದಾರೆ. ಆಕ್ಷೇಪಣೆ ಸಲ್ಲಿಸುವಂತೆ ಎಸ್ಐಟಿ ಪೊಲೀಸರಿಗೆ ಕೋರ್ಟ್‌ನಿಂದ ನೋಟಿಸ್ ನೀಡಲಾಗಿದೆ. ನಾಳೆಗೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ ಎಂದು ತಿಳಿದುಬಂದಿದೆ.

ಮೇ 31ಕ್ಕೆ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ವಿಚಾರಣೆ ಆಗಮನ

Prajwal revanna Case

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್‌ ರೇವಣ್ಣ (Prajwal Revanna Video) ಭಾರತಕ್ಕೆ ಬರುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಪ್ರಜ್ವಲ್‌ ರೇವಣ್ಣ ಅವರು ಹೊಸ ವಿಡಿಯೊ ಬಿಡುಗಡೆ ಮಾಡಿದ್ದು, “ಮೇ 31ರಂದು ಭಾರತಕ್ಕೆ ಬಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ವಿಡಿಯೊದಲ್ಲಿ ಏನಿದೆ?

“ನಾನು ಎಲ್ಲಿದ್ದೇನೆ ಎಂಬ ಮಾಹಿತಿ ನೀಡಲು ಬಂದಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ” ಎಂಬುದಾಗಿ ಪ್ರಜ್ವಲ್‌ ರೇವಣ್ಣ ವಿಡಿಯೊದಲ್ಲಿ ತಿಳಿಸಿದ್ದಾರೆ.

“ನಾನು ಇದೇ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ. ನಾನು ಈ ಪ್ರಕರಣದಿಂದ ಆರೋಪಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ” ಎಂಬುದಾಗಿ ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ಅನ್ನು ರದ್ದುಗೊಳಿಸಬೇಕು ಎಂದು ಸಿದ್ದರಾಮಯ್ಯ ಅವರು ಎರಡು ಬಾರಿ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ ರದ್ದುಗೊಳಿಸುವ ಪ್ರಕ್ರಿಯೆ ಆರಂಭಿಸಿದೆ. ಇನ್ನು, ಇದರ ಭಾಗವಾಗಿಯೇ ಕೇಂದ್ರ ಸರ್ಕಾರವು ಪ್ರತಿಕ್ರಿಯೆ ಕೋರಿ ಪ್ರಜ್ವಲ್‌ ರೇವಣ್ಣಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ. ಶೋಕಾಸ್‌ ನೋಟಿಸ್‌ಗೂ ಉತ್ತರ ನೀಡದಿದ್ದರೆ, ಕೇಂದ್ರ ಸರ್ಕಾರವು ಪಾಸ್‌ಪೋರ್ಟ್‌ ರದ್ದುಗೊಳಿಸಲಿದೆ ಎಂದು ಹೇಳಲಾಗುತ್ತಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅವರು ವಿಡಿಯೊ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಅಜ್ಞಾತವಾಸಕ್ಕೆ ಒಂದು ತಿಂಗಳು, ಎಲ್ಲಿದ್ದೀಯಪ್ಪಾ ಪ್ರಜ್ವಲ್?

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ ಸೇರಿ ಹಲವು ಪ್ರಕರಣಗಳಲ್ಲಿ ಪ್ರಜ್ವಲ್‌ ರೇವಣ್ಣ ಪ್ರಮುಖ ಆರೋಪಿಯಾಗಿದ್ದಾರೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅವರ ತಂದೆ ಎಚ್‌.ಡಿ.ರೇವಣ್ಣ ಅವರು ಕೂಡ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಹೊರಬಂದಿದ್ದಾರೆ. ಇಷ್ಟಾದರೂ, ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರದ ಕಾರಣ ಅವರ ತಾತ ಎಚ್‌.ಡಿ.ದೇವೇಗೌಡ ಅವರು ಬಹಿರಂಗ ಪತ್ರ ಬರೆದಿದ್ದರು. ನನ್ನ ಮೇಲೆ ಗೌರವ ಇದ್ದರೆ ವಾಪಸ್‌ ಬಾ ಎಂದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Lockie Ferguson: 4 ಓವರ್‌ ಎಸೆದು, ಒಂದೂ ರನ್‌ ಕೊಡದೆ 3 ವಿಕೆಟ್‌ ಕಿತ್ತ ಲಾಕಿ ಫರ್ಗ್ಯೂಸನ್;‌ ವಿಶ್ವದಾಖಲೆ

Lockie Ferguson: ಟಿ-20 ವಿಶ್ವಕಪ್‌ ಟೂರ್ನಿಯ ಗ್ರೂಪ್‌ ಹಂತದ ಕೊನೆಯ ಪಂದ್ಯದಲ್ಲಿ ಟಾಸ್‌ ಗೆದ್ದ ಕೇನ್‌ ವಿಲಿಯಮ್ಸನ್‌ ಅವರು ಬೌಲಿಂಗ್‌ ಆಯ್ದುಕೊಂಡರು. ಪಪುವಾ ನ್ಯೂಗಿನಿಯಾ ಇನ್ನಿಂಗ್ಸ್‌ನ ಐದನೇ ಓವರ್‌ ಎಸೆಯಲು ಲಾಕಿ ಫರ್ಗ್ಯೂಸನ್‌ ಕಣಕ್ಕಿಳಿದರು. ಮೊದಲ ಓವರ್‌ನ ಮೊದಲ ಎಸೆತದಲ್ಲಿಯೇ ಲಾಕಿ ಫರ್ಗ್ಯೂಸನ್‌ ಅವರು ನಾಯಕ ಅಸಾದ್‌ ವಾಲಾ ಅವರ ವಿಕೆಟ್‌ ಪಡೆದರು. ಅಲ್ಲಿಂದ ಹಿಂತಿರುಗಿ ನೋಡದ ಲಾಕಿ ಫರ್ಗ್ಯೂಸನ್‌, ನಾಲ್ಕೂ ಓವರ್‌ ಮೇಡನ್‌ ಮಾಡುವ ಜತೆಗೆ ಮೂರು ವಿಕೆಟ್‌ ಕಬಳಿಸಿದರು.

VISTARANEWS.COM


on

Lockie Ferguson
Koo

ಟರೌಬಾ: ಟಿ-20 ಪಂದ್ಯಗಳಲ್ಲಿ ಯಾವುದೇ ಬೌಲರ್‌ ಒಂದು ಓವರ್‌ಗೆ 8ಕ್ಕಿಂತ ಕಡಿಮೆ ರನ್‌ಗಳನ್ನು ನೀಡಿದರೆ, ಆತನನ್ನೇ ಉತ್ತಮ ಬೌಲರ್‌ ಎಂದು ಕರೆಯಲಾಗುತ್ತದೆ. ಆದರೆ, ನ್ಯೂಜಿಲ್ಯಾಂಡ್‌ ಕ್ರಿಕೆಟ್‌ ತಂಡದ ವೇಗಿ ಲಾಕಿ ಫರ್ಗ್ಯೂಸನ್‌ (Lockie Ferguson) ಅವರು 4 ಓವರ್‌ಗಳನ್ನು ಎಸೆದು, ನಾಲ್ಕೂ ಓವರ್‌ಗಳನ್ನು ಮೇಡನ್‌ ಮಾಡಿದ್ದಲ್ಲದೆ 3 ವಿಕೆಟ್‌ಗಳನ್ನು ಪಡೆಯುವ ಮೂಲಕ ವಿಶ್ವದಾಖಲೆ ಬರೆದಿದ್ದಾರೆ. ಟಿ-20 ವಿಶ್ವಕಪ್‌ (T20 World Cup 2024) ಇತಿಹಾಸದಲ್ಲಿಯೇ ನಾಲ್ಕು ಓವರ್‌ ಎಸೆದು, ಒಂದು ರನ್‌ ಕೊಡದ ಅಥವಾ ಮೋಸ್ಟ್‌ ಎಕನಾಮಿಕಲ್‌ ಸ್ಪೆಲ್‌ ಮಾಡಿದ ಬೌಲರ್‌ ಎನಿಸಿದ್ದಾರೆ.

ಟಿ-20 ವಿಶ್ವಕಪ್‌ ಟೂರ್ನಿಯ ಗ್ರೂಪ್‌ ಹಂತದ ಕೊನೆಯ ಪಂದ್ಯದಲ್ಲಿ ಟಾಸ್‌ ಗೆದ್ದ ಕೇನ್‌ ವಿಲಿಯಮ್ಸನ್‌ ಅವರು ಬೌಲಿಂಗ್‌ ಆಯ್ದುಕೊಂಡರು. ಪಪುವಾ ನ್ಯೂಗಿನಿಯಾ ಇನ್ನಿಂಗ್ಸ್‌ನ ಐದನೇ ಓವರ್‌ ಎಸೆಯಲು ಲಾಕಿ ಫರ್ಗ್ಯೂಸನ್‌ ಕಣಕ್ಕಿಳಿದರು. ಮೊದಲ ಓವರ್‌ನ ಮೊದಲ ಎಸೆತದಲ್ಲಿಯೇ ಲಾಕಿ ಫರ್ಗ್ಯೂಸನ್‌ ಅವರು ನಾಯಕ ಅಸಾದ್‌ ವಾಲಾ ಅವರ ವಿಕೆಟ್‌ ಕಬಳಿಸಿದರು. ಇದೇ ಆತ್ಮವಿಶ್ವಾಸದಲ್ಲಿಯೇ ಲಾಕಿ ಫರ್ಗ್ಯೂಸನ್‌ ಅವರು ನಾಲ್ಕೂ ಓವರ್‌ಗಳನ್ನು ಎಸೆದರು. ನಾಲ್ಕಕ್ಕೆ ನಾಲ್ಕೂ ಮೇಡನ್‌ ಮಾಡಿದ ಅವರು, ಅಸಾದ್‌ ವಾಲಾ ಜತೆಗೆ ಚಾರ್ಲ್ಸ್‌ ಅಮಿತಿ ಹಾಗೂ ಚಾಡ್‌ ಸೋಪರ್‌ ಅವರ ವಿಕೆಟ್‌ ಪಡೆದರು.

ಲಾಕಿ ಫರ್ಗ್ಯೂಸನ್‌ ಸೇರಿ ನ್ಯೂಜಿಲ್ಯಾಂಡ್‌ ಬೌಲರ್‌ಗಳ ಎದುರು ಮಂಡಿಯೂರಿದ ಪಪುವಾ ನ್ಯೂಗಿನಿಯಾ ತಂಡವು 19.4 ಓವರ್‌ಗಳಲ್ಲಿ 78 ರನ್‌ಗಳಿಗೆ ಸರ್ವಪತನ ಕಂಡಿತು. ಟಿಮ್‌ ಸೌಥಿ, ಟ್ರೆಂಟ್‌ ಬೌಲ್ಟ್‌ ಹಾಗೂ ಐಶ್‌ ಸೋಧಿ ಅವರು ಕೂಡ ತಲಾ ಎರಡು ವಿಕೆಟ್‌ ಪಡೆದು ಎದುರಾಳಿ ತಂಡವನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕಿದರು. ಟಿ-20 ವಿಶ್ವಕಪ್‌ ಇತಿಹಾಸದಲ್ಲಿಯೇ ನಾಲ್ಕೂ ಓವರ್‌ಗಳನ್ನು ಮೇಡನ್‌ ಮಾಡಿದ ಮೊದಲ ಬೌಲರ್‌ ಎಂಬ ಖ್ಯಾತಿಗೆ ಲಾಕಿ ಫರ್ಗ್ಯೂಸನ್‌ ಪಾತ್ರರಾದರು. ಇನ್ನು ಟಿ-20 ಇತಿಹಾಸದಲ್ಲಿ ನಾಲ್ಕೂ ಓವರ್‌ ಮೇಡನ್‌ ಮಾಡಿದ ಎರಡನೇ ಬೌಲರ್‌ ಎನಿಸಿದರು. ಇದಕ್ಕೂ ಮೊದಲು ಅಂದರೆ 2021ರಲ್ಲಿ ಕೆನಡಾದ ಸಾದ್‌ ಬಿನ್‌ ಜಫರ್‌ ಅವರು ಪನಾಮ ವಿರುದ್ಧ ನಡೆದ ಟಿ-20 ಪಂದ್ಯದಲ್ಲಿ ಎಲ್ಲ ನಾಲ್ಕೂ ಓವರ್‌ಗಳನ್ನು ಮೇಡನ್‌ ಮಾಡಿದ್ದರು.

ಪಪುವಾ ನ್ಯೂಗಿನಿಯಾ ನೀಡಿದ ಅಲ್ಪ ಮೊತ್ತವನ್ನು ಬೆನ್ನತ್ತಿದ ನ್ಯೂಜಿಲ್ಯಾಂಡ್‌ ತಂಡವು 12.2 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು ಸುಲಭವಾಗಿ ಗೆಲುವಿನ ದಡ ಸೇರಿತು. ಇದರೊಂದಿಗೆ ಗ್ರೂಪ್‌ ಹಂತದ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದು ಟೂರ್ನಿಯಿಂದ ಹೊರ ನಡೆಯಿತು. ನ್ಯೂಜಿಲ್ಯಾಂಡ್‌ ತಂಡ ಇರುವ ಸಿ ಗ್ರೂಪ್‌ನಿಂದ ಅಫಘಾನಿಸ್ತಾನ ಹಾಗೂ ವೆಸ್ಟ್‌ ಇಂಡೀಸ್‌ ತಂಡಗಳು ಸೂಪರ್‌ 8ರ ಘಟ್ಟಕ್ಕೆ ತಲುಪಿವೆ. ಅಂದಹಾಗೆ, ಲಾಕಿ ಫರ್ಗ್ಯೂಸನ್‌ ಅವರು ಆರ್‌ಸಿಬಿಯ ಪ್ರಮುಖ ಬೌಲರ್‌ ಕೂಡ ಆಗಿದ್ದಾರೆ.

ಇದನ್ನೂ ಓದಿ: T20 World Cup Super 8 Stage: ಸೂಪರ್​-8 ಪಂದ್ಯಕ್ಕೂ ಮಳೆ ಭೀತಿ; ಭಾರತ-ಆಸೀಸ್​ ಪಂದ್ಯ ಅನುಮಾನ!

Continue Reading

ಪ್ರಮುಖ ಸುದ್ದಿ

Narendra Modi: ಅಮೆರಿಕ ಭದ್ರತಾ ಸಲಹೆಗಾರ-ನರೇಂದ್ರ ಮೋದಿ ಭೇಟಿ; ಯಾವೆಲ್ಲ ವಿಷಯ ಚರ್ಚೆ?

Narendra Modi: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್‌ ಸುಲಿವನ್‌ ಅವರನ್ನು ಭೇಟಿಯಾಗಿ ಹಲವು ವಿಷಯಗಳ ಕುರಿತು ಚರ್ಚಿಸಿದರು. ಜೇಕ್‌ ಸುಲಿವನ್‌ ಅವರ ಜತೆಗಿನ ಭೇಟಿಯ ಕುರಿತು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ನರೇಂದ್ರ ಮೋದಿ ಅವರೇ ಮಾಹಿತಿ ನೀಡಿದ್ದಾರೆ. ಇಬ್ಬರೂ ರಕ್ಷಣೆ, ಭದ್ರತೆ ಸೇರಿ ಹಲವು ವಿಷಯಗಳ ಕುರಿತು ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Narendra Modi
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದೆಹಲಿಯಲ್ಲಿ ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ (US NSA) ಜೇಕ್‌ ಸುಲಿವನ್‌ (Jake Sullivan) ಅವರನ್ನು ಭೇಟಿಯಾಗಿದ್ದಾರೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಎರಡು ದಿನಗಳ ಭೇಟಿಗಾಗಿ ಭಾರತ ಪ್ರವಾಸ ಕೈಗೊಂಡಿರುವ ಜೇಕ್‌ ಸುಲಿವನ್‌ ಅವರು ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ರಕ್ಷಣೆ, ಭದ್ರತೆ, ದ್ವಿಪಕ್ಷೀಯ ಸಂಬಂಧ ಸೇರಿ ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

ಜೇಕ್‌ ಸುಲಿವನ್‌ ಅವರನ್ನು ಭೇಟಿಯಾದ ಬಳಿಕ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ನರೇಂದ್ರ ಮೋದಿ ಅವರು ಪೋಸ್ಟ್‌ ಮಾಡಿದ್ದಾರೆ. “ಅಮೆರಿಕ ಎನ್‌ಎಸ್‌ಎ ಜೇಕ್‌ ಸುಲಿವನ್‌ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದೆ. ಜಾಗತಿಕ ಸ್ಥಿರತೆ ಹಾಗೂ ಅಭಿವೃದ್ಧಿಗಾಗಿ ಅಮೆರಿಕದ ಜತೆ ಭಾರತವು ವ್ಯೂಹಾತ್ಮಕ ಪಾಲುದಾರಿಕೆಯನ್ನು ಮುಂದುವರಿಸಲು ಬದ್ಧವಾಗಿದೆ” ಎಂಬುದಾಗಿ ಬರೆದುಕೊಂಡಿದ್ದಾರೆ. ಜೂನ್‌ 18ರಂದು ಕೂಡ ಜೇಕ್‌ ಸುಲಿವನ್‌ ಅವರು ಭಾರತದಲ್ಲಿಯೇ ಇರಲಿದ್ದಾರೆ.

ಇಟಲಿಯಲ್ಲಿ ಕೆಲ ದಿನಗಳ ಹಿಂದಷ್ಟೇ ನಡೆದ ಜಿ-7 ಶೃಂಗಸಭೆಯಲ್ಲಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರನ್ನು ಭೇಟಿಯಾಗಿ, ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಭಾರತ ಹಾಗೂ ಅಮೆರಿಕ ಸಂಬಂಧ, ಪರಸ್ಪರ ಸಹಕಾರ, ನೆರವು, ಒಪ್ಪಂದ, ರಕ್ಷಣೆ ಸೇರಿ ಹಲವು ವಿಷಯಗಳ ಕುರಿತು ನರೇಂದ್ರ ಮೋದಿ ಅವರು ಜೋ ಬೈಡೆನ್‌ ಅವರೊಂದಿಗೆ ಚರ್ಚಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಜೇಕ್‌ ಸುಲಿವನ್‌ ಅವರು ಭಾರತಕ್ಕೆ ಆಗಮಿಸಿರುವುದು ಮಹತ್ವದ ಸಂಗತಿ ಎಂದೇ ಹೇಳಲಾಗುತ್ತಿದೆ.

ದೋವಲ್-ಜೇಕ್‌ ಭೇಟಿ

ಜೇಕ್‌ ಸುಲಿವನ್‌ ಅವರು ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ಮೊದಲು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರನ್ನು ಭೇಟಿಯಾದರು. ರಕ್ಷಣಾ ಒಪ್ಪಂದಗಳು ಹಾಗೂ ಪ್ರಾದೇಶಿಕ ಭದ್ರತಾ ವ್ಯವಸ್ಥೆಯನ್ನು ಖಚಿತಪಡಿಸುವ ಭಾರತ-ಅಮೆರಿಕ ನಡುವಿನ ಇನಿಶಿಯೇಟಿವ್‌ ಆನ್‌ ಕ್ರಿಟಿಕಲ್‌ ಆ್ಯಂಡ್‌ ಎಮರ್ಜಿಂಗ್‌ ಟೆಕ್ನಾಲಜೀಸ್‌ (iCET) ಯೋಜನೆ ಜಾರಿ ಕುರಿತು ಇಬ್ಬರೂ ಎನ್‌ಎಸ್‌ಗಳು ಚರ್ಚಿಸಿದರು ಎಂಬುದಾಗಿ ಮೂಲಗಳು ತಿಳಿಸಿವೆ. ಇಂಡಿಯಾ-ಮಿಡಲ್‌ ಈಸ್ಟ್-ಯುರೋಪ್‌ ಎಕನಾಮಿಕ್‌ ಕಾರಿಡಾರ್‌ (IMEC) ಕುರಿತು ಕೂಡ ಚರ್ಚೆ ನಡೆಸಿದರು ಎನ್ನಲಾಗಿದೆ.

ಇದನ್ನೂ ಓದಿ: Amit Shah: ಕಾಶ್ಮೀರದಲ್ಲಿ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು; ಖಡಕ್‌ ಆದೇಶ ಕೊಟ್ಟ ಅಮಿತ್‌ ಶಾ

Continue Reading

ಕರ್ನಾಟಕ

Actor Chikkanna: ದರ್ಶನ್‌ ಊಟಕ್ಕೆ ಕರೆದಿದ್ರು, ಹೋಗಿದ್ದೆ; ಪೊಲೀಸ್‌ ವಿಚಾರಣೆ ಬಳಿಕ ಚಿಕ್ಕಣ್ಣ ಫಸ್ಟ್‌ ರಿಯಾಕ್ಷನ್!

Actor Chikkanna: Actor Chikkanna: ರೇಣುಕಾಸ್ವಾಮಿ ಕೊಲೆಯಾದ ದಿನವೇ ಅಂದರೆ, ಜೂನ್‌ 8ರಂದು ನಟ ದರ್ಶನ್‌ ಜತೆ ಪಾರ್ಟಿ ಮಾಡಿರುವುದು ನಿಜ ಎಂಬುದಾಗಿ ನಟ ಚಿಕ್ಕಣ್ಣ ಒಪ್ಪಿಕೊಂಡಿದ್ದಾರೆ. ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ನಲ್ಲಿ ಪೊಲೀಸರು ಮಹಜರು ಮಾಡುವ ವೇಳೆ ಪಬ್‌ಗೆ ತೆರಳಿದ ಚಿಕ್ಕಣ್ಣ, ಪಾರ್ಟಿಯ ಕುರಿತು ಮಾಹಿತಿ ನೀಡಿದ್ದಾರೆ. ಇದಾದ ಬಳಿಕ ಚಿಕ್ಕಣ್ಣ ಅವರು ಪೊಲೀಸ್‌ ಠಾಣೆಗೂ ತೆರಳಿ, ಸುಮಾರು ಮೂರು ತಾಸು ವಿಚಾರಣೆ ಎದುರಿಸಿದ್ದಾರೆ.

VISTARANEWS.COM


on

Actor Chikkanna
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ನಟ ಚಿಕ್ಕಣ್ಣ (Actor Chikkanna) ಅವರನ್ನೂ ಕಾಮಾಕ್ಷಿಪಾಳ್ಯ ಪೊಲೀಸರು ವಿಚಾರಣೆ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆಯಾದ ದಿನವಾದ ಜೂನ್‌ 8ರಂದೇ ಕೊಲೆ ಆರೋಪಿ ನಟ ದರ್ಶನ್‌ (Actor Darshan) ಜತೆಗೆ ಚಿಕ್ಕಣ್ಣ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್‌ ನೀಡಿದ್ದು, ಅದರಂತೆ ಚಿಕ್ಕಣ್ಣ ಅವರು ವಿಚಾರಣೆಗೆ ಹಾಜರಾದರು. ಸುಮಾರು ಮೂರು ತಾಸಿನ ವಿಚಾರಣೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಚಿಕ್ಕಣ್ಣ, “ದರ್ಶನ್‌ ಅವರು ಜೂನ್‌ 8ರಂದು ಊಟಕ್ಕೆ ಕರೆದಿದ್ರು, ಹೋಗಿದ್ದೆ” ಎಂದಷ್ಟೇ ತಿಳಿಸಿದ್ದಾರೆ.

“ಸಾಮಾನ್ಯವಾಗಿ ದರ್ಶನ್‌ ಅವರು ನನ್ನನ್ನು ಊಟಕ್ಕೆ ಕರೆಯುತ್ತಾರೆ. ಅದರಂತೆ, ಜೂನ್‌ 8ರಂದು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಊಟಕ್ಕೆ ಹೋಗಿದ್ದೆ. ಊಟ ಮುಗಿಸಿಕೊಂಡು ನಾನು ಅಲ್ಲಿಂದ ತೆರಳಿದೆ. ಅದಕ್ಕೆ ಸಂಬಂಧಿಸಿದಂತೆ ಪೊಲೀಸರು ಕರೆದಿದ್ದರು” ಎಂಬುದಾಗಿ ಚಿಕ್ಕಣ್ಣ ಮೊದಲ ಪ್ರತಿಕ್ರಿಯೆ ನೀಡಿದರು. “ದರ್ಶನ್‌ ಜತೆ ಊಟಕ್ಕೆ ಹೋದಾಗ ಯಾರ‍್ಯಾರು ಇದ್ದರು” ಎಂದು ಮಾಧ್ಯಮದವರು ಕೇಳಿದ್ದಕ್ಕೆ, “ಪ್ರಕರಣವು ವಿಚಾರಣೆ ಹಂತದಲ್ಲಿದೆ. ನಾನು ಇದುವರೆಗೆ ವಿಚಾರಣೆಗೆ ಸಹಕರಿಸಿದ್ದೇನೆ. ಇದಕ್ಕಿಂತ ಹೆಚ್ಚೇನೂ ಹೇಳಲು ಆಗುವುದಿಲ್ಲ” ಎಂಬುದಾಗಿ ಪ್ರತಿಕ್ರಿಯಿಸಿದರು.

ರೇಣುಕಾಸ್ವಾಮಿ ಕೊಲೆಗೀಡಾದ ದಿನವೇ ಸ್ಟೋನಿ ಬ್ರೂಕ್‌ನಲ್ಲಿ ದರ್ಶನ್‌ ಸೇರಿ ಹಲವರು ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳನ್ನು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಣ್ಣ ಅವರೂ ಸ್ಥಳ ಮಹಜರಿನ ವೇಳೆ ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಭೇಟಿ ನೀಡಿದ್ದಾರೆ. ಅಲ್ಲಿಯೇ, ದರ್ಶನ್‌ ಜತೆ ಪಾರ್ಟಿ ಮಾಡಿರುವುದನ್ನು ಚಿಕ್ಕಣ್ಣ ಪೊಲೀಸರ ಎದುರು ಒಪ್ಪಿಕೊಂಡಿದ್ದಾರೆ.

“ಜೂನ್‌ 8ರಂದು ಆರ್‌ ಆರ್‌ ನಗರದ ಸ್ಟೋನಿ ಬ್ರೂಕ್‌ ಪಬ್‌ಗೆ ಹೋಗಿದ್ದೆ. ಮಧ್ಯಾಹ್ನ 1.30ರ ಸುಮಾರಿಗೆ ಪಬ್‌ಗೆ ಹೋಗಿದ್ದೆ. ದರ್ಶನ್‌ ಹಾಗೂ ನಾನು ಒಂದೇ ಟೇಬಲ್‌ನಲ್ಲಿ ಪಾರ್ಟಿ ಮಾಡಿದ್ವಿ. ಸಂಜೆ 4.30ರ ಸುಮಾರಿಗೆ ದರ್ಶನ್‌ ಅವರು ಪಬ್‌ನಿಂದ ಹೊರಟರು. ಅವರ ಜತೆ ನಾನೂ ಅಲ್ಲಿಂದ ಹೊರಟೆ. ನಾನು ನಮ್ಮ ಮನೆಗೆ ಹೋದೆ, ದರ್ಶನ್‌ ಅವರು ಎಲ್ಲಿಗೆ ಹೋದರೋ ಗೊತ್ತಿಲ್ಲ. ನಾವು ಸಿನಿಮಾ ವಿಚಾರಕ್ಕಾಗಿ ಭೇಟಿ ಮಾಡಿದ್ವಿ. ಅದಷ್ಟೇ ಮಾತನಾಡಿ ನಾವು ಹೊರಟು ಹೋದೆವು” ಎಂಬುದಾಗಿ ಪೊಲೀಸರಿಗೆ ಚಿಕ್ಕಣ್ಣ ಮಾಹಿತಿ ನೀಡಿದ್ದಾರೆ.

ನಟ ದರ್ಶನ್‌ ಸೇರಿ ಹಲವು ಆರೋಪಿಗಳನ್ನು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಕರೆದುಕೊಂಡ ಹೋದ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ಇದಾದ ನಂತರ ಚಿಕ್ಕಣ್ಣ ಅವರು ಕೂಡ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ತೆರಳಿ ಹೇಳಿಕೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಚಿಕ್ಕಣ್ಣ ಅವರು ಪೊಲೀಸ್‌ ಠಾಣೆಗೆ ಹೋದ ವಿಡಿಯೊ ಕೂಡ ಲಭ್ಯವಾಗಿದೆ. ಪಾರ್ಟಿ ಹಿನ್ನೆಲೆಯಲ್ಲಿ ನಟ ಚಿಕ್ಕಣ್ಣ ಅವರಿಗೆ ಇದಕ್ಕೂ ಮೊದಲು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ನೋಟಿಸ್‌ ನೀಡಿದ್ದರು. ಇದು ಚಿಕ್ಕಣ್ಣ ಅವರಿಗೂ ಆತಂಕ ತಂದಿತ್ತು ಎನ್ನಲಾಗಿದೆ.

ಇದನ್ನೂ ಓದಿ: Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

Continue Reading

ಸಿನಿಮಾ

Pushpa 2: ಪುಷ್ಪ 2 ಸಿನಿಮಾ ಬಿಡುಗಡೆ 5 ತಿಂಗಳು ಮುಂದೂಡಿಕೆ; ಇಲ್ಲಿದೆ ಹೊಸ ಡೇಟ್

Pushpa 2: Pushpa 2: 2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡಿದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಇದರ ಬೆನ್ನಲ್ಲೇ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿದೆ.

VISTARANEWS.COM


on

Pushpa 2
Koo

ಹೈದರಾಬಾದ್:‌ ಟಾಲಿವುಡ್‌ ಐಕಾನ್‌ ಸ್ಟಾರ್‌ ಅಲ್ಲು ಅರ್ಜುನ್‌ (Allu Arjun) ನಟನೆಯ ಬಹುನಿರೀಕ್ಷಿತ ಪುಷ್ಪ 2 (Pushpa 2) ಸಿನಿಮಾದ ಬಿಡುಗಡೆಯನ್ನು ಐದು ತಿಂಗಳು ಮುಂದೂಡಲಾಗಿದೆ. ಪುಷ್ಪ 2 ಸಿನಿಮಾವನ್ನು ಆಗಸ್ಟ್‌ 5ರ ಬದಲಾಗಿ ಇದೇ ವರ್ಷದ ಡಿಸೆಂಬರ್‌ 6ರಂದು ಬಿಡುಗಡೆ ಮಾಡಲು ಚಿತ್ರತಂಡವು ತೀರ್ಮಾನಿಸಿದೆ. ಈ ಕುರಿತು ಅಲ್ಲು ಅರ್ಜುನ್‌ ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಇದರಿಂದಾಗಿ ಅಲ್ಲು ಅರ್ಜುನ್‌ ಅಭಿಮಾನಿಗಳಿಗೆ ತುಸು ಬೇಸರ ಉಂಟಾದಂತಾಗಿದೆ.

ಸಿನಿಮಾ ಮುಂದೂಡಿಕೆ ಏಕೆ?

ಅಲ್ಲು ಅರ್ಜುನ್‌ ವಿಧಾನಸಭೆ ಚುನಾವಣೆ ವೇಳೆ ನಂದಿಯಾಲ ವಿಧಾನಸಭೆ ಕ್ಷೇತ್ರದಲ್ಲಿ ವೈಎಸ್‌ಆರ್‌ಸಿಪಿ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದರು. ಇದರಿಂದಾಗಿ ಮೆಗಾ ಸ್ಟಾರ್‌ ಕುಟುಂಬದ ಪವನ್‌ ಕಲ್ಯಾಣ್‌ ಅವರ ಅಭಿಮಾನಿಗಳ ಆಕ್ರೋಶಕ್ಕೆ ಅಲ್ಲು ಅರ್ಜುನ್‌ ಗುರಿಯಾಗಿದ್ದಾರೆ. ಅಲ್ಲದೆ, ಪುಷ್ಟ 2 ಸಿನಿಮಾವನ್ನು ನಾವು ವೀಕ್ಷಿಸುವುದಿಲ್ಲ, ಬಾಯ್ಕಾಟ್‌ ಮಾಡುತ್ತೇವೆ ಎಂಬುದಾಗಿ ಪವರ್‌ ಸ್ಟಾರ್‌ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಾಗಿಯೇ, ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಮತ್ತೊಂದಿಷ್ಟು ಮೂಲಗಳ ಪ್ರಕಾರ, ನಿರ್ದೇಶಕ ಸುಕುಮಾರ್ ಇನ್ನೂ ಚಿತ್ರದ ಶೂಟಿಂಗ್ ಮತ್ತು ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸಗಳಲ್ಲಿ ನಿರತರಾಗಿರುವುದರಿಂದ ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಒಂದು ತಿಂಗಳ ಶೂಟಿಂಗ್ ಬಾಕಿಯಿದ್ದು ಜುಲೈ ವೇಳೆಗೆ ಚಿತ್ರೀಕರಣ ಪೂರ್ಣಗೊಳಿಸುವ ಗುರಿಯನ್ನು ಸುಕುಮಾರ್ ಹೊಂದಿದ್ದಾರೆ ಎನ್ನಲಾಗಿದೆ. ಅಗಸ್ಟ್ 15 ರಂದು ಅಕ್ಷಯ್ ಕುಮಾರ್ ಅವರ ‘ಖೇಲ್ ಖೇಲ್ ಮೇ’ ಕೂಡ ಬಿಡುಗಡೆಗೊಳ್ಳುತ್ತಿದೆ. ಈ ಮೊದಲು, ‘ಖೇಲ್ ಖೇಲ್ ಮೇ’ ಸೆಪ್ಟೆಂಬರ್ 6 ರಂದು ಅದ್ಧೂರಿಯಾಗಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು.

2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡುದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಎರಡನೇ ಹಾಡು ಕೂಡ ಔಟ್‌ ಆಗಿದ್ದು, ಅಲ್ಲು ಅರ್ಜುನ್‌ ಜತೆ ರಶ್ಮಿಕಾ ಹೆಜ್ಜೆ ಹಾಕಿದ್ದಾರೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆ ಪಡೆದುಕೊಂಡಿದೆ.

ಇದನ್ನೂ ಓದಿ: Pushpa 2: ʼಪುಷ್ಪ 2ʼ ಸಿನಿಮಾ ತಂಡದಿಂದ ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್ಸ್‌

Continue Reading
Advertisement
Lockie Ferguson
ಕ್ರಿಕೆಟ್1 hour ago

Lockie Ferguson: 4 ಓವರ್‌ ಎಸೆದು, ಒಂದೂ ರನ್‌ ಕೊಡದೆ 3 ವಿಕೆಟ್‌ ಕಿತ್ತ ಲಾಕಿ ಫರ್ಗ್ಯೂಸನ್;‌ ವಿಶ್ವದಾಖಲೆ

Narendra Modi
ಪ್ರಮುಖ ಸುದ್ದಿ2 hours ago

Narendra Modi: ಅಮೆರಿಕ ಭದ್ರತಾ ಸಲಹೆಗಾರ-ನರೇಂದ್ರ ಮೋದಿ ಭೇಟಿ; ಯಾವೆಲ್ಲ ವಿಷಯ ಚರ್ಚೆ?

Actor Chikkanna
ಕರ್ನಾಟಕ3 hours ago

Actor Chikkanna: ದರ್ಶನ್‌ ಊಟಕ್ಕೆ ಕರೆದಿದ್ರು, ಹೋಗಿದ್ದೆ; ಪೊಲೀಸ್‌ ವಿಚಾರಣೆ ಬಳಿಕ ಚಿಕ್ಕಣ್ಣ ಫಸ್ಟ್‌ ರಿಯಾಕ್ಷನ್!

Kalki 2898 AD Movie Bhairava Anthem Released
ಕರ್ನಾಟಕ4 hours ago

Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

Union Minister HD Kumaraswamy visit Shira
ತುಮಕೂರು4 hours ago

Shira News: ಶಿರಾಕ್ಕೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಭೇಟಿ

Maharashtra government appoints Marathi teachers to Kannada schools; Ashoka Chandragi wrote a letter to CM Siddaramaiah
ಬೆಳಗಾವಿ4 hours ago

Belagavi News: ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರು! ಮುಖ್ಯಮಂತ್ರಿಗಳೇ ಗಮನ ಹರಿಸಿ

District administration failed to prevent illegal activities in the district MLA Janardhana Reddy alleges
ಕರ್ನಾಟಕ4 hours ago

Koppala News: ಜಿಲ್ಲೆಯಲ್ಲಿ ಕಾನೂನುಬಾಹಿರ ಚಟುವಟಿಕೆ ತಡೆಯುವಲ್ಲಿ ಜಿಲ್ಲಾಡಳಿತ ವಿಫಲ; ಶಾಸಕ ಜನಾರ್ದನ ರೆಡ್ಡಿ ಆರೋಪ

Pushpa 2
ಸಿನಿಮಾ4 hours ago

Pushpa 2: ಪುಷ್ಪ 2 ಸಿನಿಮಾ ಬಿಡುಗಡೆ 5 ತಿಂಗಳು ಮುಂದೂಡಿಕೆ; ಇಲ್ಲಿದೆ ಹೊಸ ಡೇಟ್

HD Kumaraswamy
ಕರ್ನಾಟಕ4 hours ago

HD Kumaraswamy: ಕೊಬ್ಬರಿಗೆ 16-18 ಸಾವಿರ ಬೆಂಬಲ ಬೆಲೆ ಕೊಡಿಸುವೆ: ರೈತರಿಗೆ ಎಚ್‌ಡಿಕೆ ಭರವಸೆ

Narendra Modi
ದೇಶ4 hours ago

ಪೋಪ್‌-ಮೋದಿ ಭೇಟಿಯನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ಗೆ ಮುಖಭಂಗ; ಕ್ರೈಸ್ತರ ಕ್ಷಮೆ ಕೇಳಿದ್ದೇಕೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು12 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು13 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 day ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌