Site icon Vistara News

Pralhad Joshi: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಯಾವತ್ತು ಅಧಿಕಾರಕ್ಕೆ ಬರಲ್ಲ; ಚಾಟಿ ಬೀಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ರಾಹುಲ್ ಗಾಂಧಿ ನೇತೃತ್ವದಲ್ಲಿ ನಾವೆಂದೂ ಅಧಿಕಾರಕ್ಕೆ ಬರೋದಿಲ್ಲ ಎಂಬುದು ಕಾಂಗ್ರೆಸ್ಸಿಗರಿಗೆ ಮನವರಿಕೆಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಚಾಟಿ ಬೀಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ರಾಹುಲ್ ಗಾಂಧಿ ನಾಯಕತ್ವದಲ್ಲಿ ತಾವು ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ ಎಂಬ ಸತ್ಯ ಕಾಂಗ್ರೆಸ್ಸಿಗರಿಗೆ ಗೊತ್ತಾಗಿದೆ. ಹಾಗಾಗಿ ಶತಾಯ-ಗತಾಯ ಕೇಂದ್ರ ಸರ್ಕಾರ ವಿರುದ್ಧ ಇಲ್ಲ ಸಲ್ಲದ ಮಾತಾಡುತ್ತಾರೆ ಅಷ್ಟೇ ಎಂದು ಹೇಳಿದರು.

ಬಿಜೆಪಿಯೇ ಬಲಿಷ್ಠ

ಭಾರತದಲ್ಲಿ ಯಾವುದೇ ಕಾಲಕ್ಕೂ ಬಿಜೆಪಿಯೇ ಬಲಿಷ್ಠವಾಗುತ್ತದೆ. ಸದ್ಯ ಮೋದಿ ನಾಯಕತ್ವದಲ್ಲಿ ಪ್ರಬಲವಾಗಿದೆ. ಕೆಲವು ವರ್ಷಗಳ ನಂತರ ಮತ್ಯಾರೋ ಪ್ರಬಲ ನೇತಾರರು ಮುಂಚೂಣಿಗೆ ಬರುತ್ತಾರೆ. ಕಾಂಗ್ರೆಸ್ ಅಧಿಕಾರದ ನಿರೀಕ್ಷೆಯಲ್ಲೇ ಕಾಲ ಕಳೆಯಬೇಕಾಗುತ್ತದೆ ಎಂದು ಸಚಿವ ಜೋಶಿ ಹೇಳಿದರು. ಕಾಂಗ್ರೆಸ್‌ ಹತಾಶೆಯಲ್ಲಿ ಕೇಂದ್ರದ ನಿರ್ಣಯಗಳನ್ನು ವಿರೋಧಿಸುತ್ತದೆ. ಮುಂದೆಯೂ ಅಧಿಕಾರಕ್ಕೆ ಬರುವುದು ಅಸಾಧ್ಯ ಎಂಬ ಹತಾಶೆಯಲ್ಲಿ ಕಾಂಗ್ರೆಸ್, “ಒಂದು ದೇಶ ಒಂದು ಚುನಾವಣೆ”ಗೆ ವಿರೋಧ ವ್ಯಕ್ತಪಡಿಸುತ್ತಿದೆ ಎಂದರು. ಕೇಂದ್ರ ಸರ್ಕಾರ ಕೈಗೊಳ್ಳುವ ಯಾವುದೇ ನಿರ್ಣಯವನ್ನು ಕಾಂಗ್ರೆಸ್ ವಿರೋಧಿಸುತ್ತಲೆ ಇದೆ. ಇದಕ್ಕೆ ಅವರಲ್ಲಿನ ಹತಾಶ ಮನಸ್ಥಿತಿಯೇ ಕಾರಣ ಎಂದು ಹೇಳಿದರು.

ದೇಶಾದ್ಯಂತ ಕಡಿಮೆ ಬೆಲೆಗೆ ಈರುಳ್ಳಿ

ಬೆಂಗಳೂರು ಮಾತ್ರವಲ್ಲ ದೇಶಾದ್ಯಂತ ಈರುಳ್ಳಿ ಕಡಿಮೆ ಬೆಲೆಗೆ ಈರುಳ್ಳಿ ಕೈಗೆಟುಕುವಂತೆ ಕೇಂದ್ರ ಕ್ರಮ ಕೈಗೊಂಡಿದೆ ಎಂದು ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ದೇಶಾದ್ಯಂತ 570 ಕಡೆ ಬೆಲೆ ಮಾನಿಟರಿಂಗ್ ಕೇಂದ್ರಗಳಿವೆ. ಎಲ್ಲ ಕಡೆಯೂ ಬೆಲೆ ನಿಯಂತ್ರಿಸಿ ಕಡಿಮೆ ಬೆಲೆಗೆ ಕೇಂದ್ರವೇ ಪೂರೈಸುತ್ತದೆ ಎಂದು ಹೇಳಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version