PUC Result Is inspiration for Poor Studentsವಿಸ್ತಾರ ಸಂಪಾದಕೀಯ: ಪಿಯು ರಿಸಲ್ಟ್, ಬಡ ವಿದ್ಯಾರ್ಥಿಗಳ ಸಾಧನೆ ಸ್ಫೂರ್ತಿದಾಯಕ - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಪಿಯು ರಿಸಲ್ಟ್, ಬಡ ವಿದ್ಯಾರ್ಥಿಗಳ ಸಾಧನೆ ಸ್ಫೂರ್ತಿದಾಯಕ

ಕಡಿಮೆ ಅಂಕ ಪಡೆದವರು ಹತಾಶರಾಗಬೇಕಿಲ್ಲ. ಪಿಯುಸಿ ಪರೀಕ್ಷೆ ಎಂಬುದು ಬದುಕಿನ ಒಂದು ಹಂತವೇ ಹೊರತು ಅದೇ ಎಲ್ಲವೂ ಅಲ್ಲ. ಅದರಾಚೆಗೂ ವಿಸ್ತಾರವಾದ ಬದುಕಿನ ಅವಕಾಶಗಳು ತೆರೆದೇ ಇರುತ್ತವೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ.74.67 ಮಂದಿ ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿ ಶೇ. 61.88 ಫಲಿತಾಂಶ ಪ್ರಕಟವಾಗಿತ್ತು. ಈ ಬಾರಿಯದ್ದು ಇಲ್ಲಿಯವರೆಗಿನ ದಾಖಲೆಯಾಗಿದೆ. ಎಂದಿನಂತೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿಗೆ ಮೊದಲೆರಡು ಸ್ಥಾನ ದೊರೆತಿವೆ. ಸರ್ಕಾರಿ ಕಾಲೇಜುಗಳು ಉತ್ತಮ ಫಲಿತಾಂಶ ದಾಖಲಿಸಿವೆ. ರಾಜಧಾನಿಯಂತೆ ರಾಜ್ಯದ ಇತರೆಡೆಯ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೂ ಉತ್ತಮ ಅಂಕ ಗಳಿಸಿ ಟಾಪರ್‌ಗಳಾಗಿದ್ದಾರೆ. ಇವರೆಲ್ಲರಿಗೂ ನಮ್ಮ ಅಭಿನಂದನೆಗಳು ಸಲ್ಲುತ್ತವೆ.

ಉತ್ತೀರ್ಣರಾದವರು ಹಾಗೂ ಉತ್ತಮ ಅಂಕ ಗಳಿಸಿದವರಲ್ಲಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅಕ್ಷರ ಜ್ಞಾನ ಸಾಧಿಸುವ ಛಲವೊಂದಿದ್ದರೆ ಪ್ರಾದೇಶಿಕ ಹಿನ್ನೆಲೆಯಾಗಲೀ, ಬಡತನವಾಗಲೀ ಎಂದೂ ಅಡ್ಡಿಯಾಗುವುದಿಲ್ಲ ಎಂಬುದನ್ನು ಇವರು ತೋರಿಸಿಕೊಟ್ಟಿದ್ದಾರೆ. ಉದಾಹರಣೆಗೆ, ಕಲಾ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ವಿಜಯಪುರದ ಎಸ್‌ಕೆ ಪಿಯು ಕಾಲೇಜಿನ ವಿದ್ಯಾರ್ಥಿ ರಾಹುಲ್‌ ರಾಥೋಡ್‌ ಕುಟುಂಬ ಬಡತನದ ಕಾರಣದಿಂದ ಮಹಾರಾಷ್ಟ್ರಕ್ಕೆ ಗುಳೆ ಹೋಗಿ ಕೂಲಿ ಮಾಡುತ್ತಿದೆ. ಈತ ಕನ್ನಡ ಮಾಧ್ಯಮದಲ್ಲಿ ಕಲಿತು ಸಾಧನೆ ಮಾಡಿದ್ದಾನೆ. ಕೊಟ್ಟೂರು, ಹರಪನಹಳ್ಳಿ, ಯಾದಗಿರಿ ಮುಂತಾದ ಹಿಂದುಳಿದ ಪ್ರದೇಶಗಳ, ಗ್ರಾಮಾಂತರದಿಂದ ಬಂದ ಹಾಗೂ ಕನ್ನಡ ಮಾಧ್ಯಮದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಟಾಪರ್‌ಗಳಾಗಿದ್ದಾರೆ. ಇದು ನಿಜಕ್ಕೂ ಮೆಚ್ಚಬೇಕಾದ ಸಾಧನೆ. ಇವರು ನಮ್ಮೆಲ್ಲ ವಿದ್ಯಾರ್ಥಿಗಳಿಗೂ ಸ್ಫೂರ್ತಿದಾಯಕ.

ಸಹಜವಾಗಿಯೇ ಈ ಸಾಧಕರ ಮೇಲೆ ಲೈಮ್‌ಲೈಟ್‌ಗಳು ಬೀಳುತ್ತವೆ. ಆದರೆ ಇದರಾಚೆಗೆ ಅಗಾಧ ವಿದ್ಯಾರ್ಥಿ ವರ್ಗವೊಂದಿದೆ. ಇವರು ಒಂದು ಅಂಕದಿಂದ ಟಾಪರ್‌ ಸ್ಥಾನ ತಪ್ಪಿಸಿಕೊಂಡವರಿರಬಹುದು; ನಿರೀಕ್ಷೆಗಿಂತ ಕಡಿಮೆ ಅಂಕ ಪಡೆದವರಿರಬಹುದು; ಅನುತ್ತೀರ್ಣರಾದವರಿರಬಹುದು. ಇಂಥವರು ತಮ್ಮ ಬದುಕೇ ಮುಗಿಯಿತು ಎಂದುಕೊಳ್ಳಬೇಕಿಲ್ಲ. ಖಿನ್ನತೆಗೊಳಗಾಗುವುದು, ದುಡುಕಿ ಅನಾಹುತ ಮಾಡಿಕೊಳ್ಳುವುದು ಬೇಕಿಲ್ಲ. ವಿದ್ಯಾರ್ಥಿನಿಯೊಬ್ಬಳು ಅನುತ್ತೀರ್ಣಳಾದ ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಂಡ ವರದಿ ಬಂದಿದೆ; ಇದು ಆಘಾತ, ದುಃಖದ ವಿಷಯ. ಬದುಕಿ ಉಳಿದರೆ ಕಟ್ಟಿಕೊಳ್ಳಬಹುದಾಗಿದ್ದ ಭವ್ಯ ಭವಿಷ್ಯದ ಒಂದು ಭರವಸೆ ಆಕೆಯಲ್ಲಿದ್ದರೆ ಹೀಗೆ ಮಾಡುತ್ತಿರಲಿಲ್ಲ. ಅನುತ್ತೀರ್ಣರಾದರೆ ಸಪ್ಲಿಮೆಂಟರಿ ಪರೀಕ್ಷೆ ಬರೆದು ಪಾಸಾಗಬಹುದು; ಕಡಿಮೆ ಅಂಕ ಬಂದರೆ ಮರುಮೌಲ್ಯಮಾಪನ ಮಾಡಿಸಬಹುದು. ಕಲಿಕೆಯ ದಾರಿಯಲ್ಲಿ ಇವ್ಯಾವುದೂ ತಡೆಗಳೇ ಅಲ್ಲ. ಕಡಿಮೆ ಅಂಕ ತೆಗೆದೂ ಜೀವನದಲ್ಲಿ ಸಾಧನೆ ಮಾಡಿದವರ ಪಟ್ಟಿ ದೊಡ್ಡದಿದೆ. ಫೇಲಾದರೂ ದೊಡ್ಡ ಉದ್ಯಮಗಳನ್ನು ಕಟ್ಟಿ ಸಾಧಕರೆನಿಸಿದವರಿದ್ದಾರೆ. ಅಂದರೆ ಪಿಯುಸಿ ಪರೀಕ್ಷೆ ಎಂಬುದು ಬದುಕಿನ ಒಂದು ಹಂತವೇ ಹೊರತು ಅದೇ ಎಲ್ಲವೂ ಅಲ್ಲ. ಅದರಾಚೆಗೂ ವಿಸ್ತಾರವಾದ ಬದುಕಿನ ಅವಕಾಶಗಳು ತೆರೆದೇ ಇವೆ.

ಇದನ್ನೂ ಓದಿ: 2nd PUC Result 2023 : ದ್ವಿತೀಯ ಪಿಯುಸಿ ಫಲಿತಾಂಶ; ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ, ಡಿಕೆಶಿ ಅಭಿನಂದನೆ

ಆದರೆ ಇದನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿಸುವಲ್ಲಿ ನಾವು ವಿಫಲರಾಗಿದ್ದೇವೆ. ಆದ್ದರಿಂದಲೇ ಪಿಯುಸಿ ಪರೀಕ್ಷೆ ಎಂದರೆ ವಿಪರೀತ ಒತ್ತಡ ಸೃಷ್ಟಿಯಾಗುತ್ತದೆ. ಇತ್ತೀಚೆಗಂತೂ 90%ಗಿಂತ ಅಧಿಕ ಅಂಕಗಳು ಎಂಬುದು ಅತೀ ಸಾಮಾನ್ಯವಾಗಿ ಹೋಗಿದೆ. ಹೀಗಾಗಿ 80%ಗಿಂತ ಕಡಿಮೆ ಅಂಕ ಪಡೆದ ಮಕ್ಕಳು ಕೂಡ ಫೇಲಾದವರಂತೆ ಗಾಬರಿಗೀಡಾಗುವುದನ್ನು ನಾವು ಕಾಣಬಹುದು. ಕುಟುಂಬ, ಕಾಲೇಜು, ಸಮಾಜದ ಒತ್ತಡಗಳು ಉಂಟುಮಾಡುವ ನಿರೀಕ್ಷೆಗೆ ತಕ್ಕಂತೆ ಸಾಧನೆ ಮಾಡಲಾಗದೆ ಹೋದ ವಿದ್ಯಾರ್ಥಿಗಳು ಖಿನ್ನತೆಗೆ ಗುರಿಯಾಗುತ್ತಾರೆ. ಇಂಥ ಮಕ್ಕಳಿಗೆ ಸೂಕ್ತ ಕೌನ್ಸೆಲಿಂಗ್‌ ದೊರೆಯಬೇಕು. ಮಕ್ಕಳನ್ನು ಒತ್ತಡಕ್ಕೆ ಸಿಲುಕಿಸುವ ಪೋಷಕರು ಕೂಡ ಇಲ್ಲಿ ಅಪಾಯಕ್ಕೆ ಕಾರಣೀಭೂತರು. ಪೋಷಕರು ಇಂಥವರನ್ನು ಅನಾದರಕ್ಕೆ ಈಡುಮಾಡದೆ ಸಹಜವಾಗಿ ನೋಡಿಕೊಂಡಾಗ ಅನಗತ್ಯ ಅನಾಹುತಗಳು ತಪ್ಪುತ್ತವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Lok Sabha Election 2024: 2ನೇ ಹಂತದಲ್ಲಿ ಶೇ.70.41 ಮತದಾನ; ಕಳೆದ ಬಾರಿಗಿಂತ ಹೆಚ್ಚು, ಚಿಕ್ಕೋಡಿಯಲ್ಲಿ ಗರಿಷ್ಠ

Lok Sabha Election 2024: ಬೇಸಿಗೆಯ ಬಿರು ಬಿಸಿಲನ್ನೂ ಲೆಕ್ಕಿಸದೇ ಮತದಾರರು ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸಿದರು. ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಬಹಿಷ್ಕಾರ, ಪ್ರತಿಭಟನೆ ನಡುವೆ ಎಲ್ಲೆಡೆ ಶಾಂತಿಯುತವಾಗಿ ಮತದಾನ ನಡೆದಿದೆ.

VISTARANEWS.COM


on

Lok Sabha Election 2024
ಮತದಾನ ಪ್ರಕ್ರಿಯೆ ಮುಗಿದ ತಕ್ಷಣ ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತಗಟ್ಟೆಯಲ್ಲಿ ಚುನಾವಣೆ ಇವಿಎಂ, ವಿವಿ ಪ್ಯಾಟ್‌ ಸೇರಿ ಇತರೆ ಸಾಮಗ್ರಿಗಳನ್ನು ಭದ್ರಪಡಿಸಿದರು.
Koo

ಬೆಂಗಳೂರು: ರಾಜ್ಯದ ಬೆಳಗಾವಿ, ಚಿಕ್ಕೋಡಿ ಸೇರಿ 14 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನ (Lok Sabha Election 2024) ಮಂಗಳವಾರ ಮುಕ್ತಾಯವಾಯಿತು. ಮತದಾನ ಬಹಿಷ್ಕಾರ, ಪ್ರತಿಭಟನೆ ನಡುವೆ ಎಲ್ಲೆಡೆ ಶಾಂತಿಯುತವಾಗಿ ಮತದಾನ ನೆರವೇರಿದೆ. 2ನೇ ಹಂತದಲ್ಲಿ ಶೇ. 70.41 ಮತದಾನ (Voter Turnout) ದಾಖಲಾಗಿದ್ದು, ಬೇಸಿಗೆಯ ಬಿರು ಬಿಸಿಲನ್ನೂ ಲೆಕ್ಕಿಸದೇ ಮತದಾರರು ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸಿರುವುದು ಕಂಡುಬಂದಿದೆ.

14 ಕ್ಷೇತ್ರಗಳಿಂದ 227 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಇವರಲ್ಲಿ 206 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ. ಮತದಾನ ಮುಕ್ತಾಯವಾಗಿದ್ದರಿಂದ ಅಭ್ಯರ್ಥಿಗಳ ಭವಿಷ್ಯ ಇವಿಎಂಗಳಲ್ಲಿ ಭದ್ರವಾಗಿದ್ದು, ಜೂನ್‌ 4ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದೆ.

ಕರ್ನಾಟಕದ 14 ಕ್ಷೇತ್ರಗಳಲ್ಲಿ ನಡೆದ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಶೇ.69.23 ಮತದಾನ ದಾಖಲಾಗಿತ್ತು. ಮಂಗಳವಾರ ಮುಗಿದಿರುವ 2ನೇ ಹಂತದ ಚುನಾವಣೆಯಲ್ಲಿ ಶೇ. 70.41 ಮತದಾನ ದಾಖಲಾಗಿದೆ. ಇನ್ನು 2019 ಚುನಾವಣೆಯ ಮೊದಲ ಹಂತದಲ್ಲಿ ಶೇ. 68.96, ಎರಡನೇ ಹಂತದಲ್ಲಿ 68.66 ಮತದಾನವಾಗಿತ್ತು.

ಇದನ್ನೂ ಓದಿ | West Bengal: ಬಂಗಾಳದಲ್ಲಿ ಮತದಾನದ ವೇಳೆ ಹಿಂಸೆ; ಬಿಜೆಪಿ ಅಭ್ಯರ್ಥಿ ಮೇಲೆ ಟಿಎಂಸಿ ಕಾರ್ಯಕರ್ತರ ದಾಳಿ!

ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ?

ಕ್ಷೇತ್ರ20242019
ಚಿಕ್ಕೋಡಿಶೇ. 76.99ಶೇ. 75.62
ಬೆಳಗಾವಿಶೇ. 71ಶೇ. 67.84
ಬಾಗಲಕೋಟೆ
ಶೇ.70.10ಶೇ. 70.70
ವಿಜಯಪುರ
ಶೇ. 64.71ಶೇ.61.89
ಕಲಬುರಗಿ
ಶೇ. 61.73ಶೇ. 61.18
ರಾಯಚೂರುಶೇ. 64.10ಶೇ. 58.34
ಬೀದರ್
ಶೇ. 63.55ಶೇ. 63
ಕೊಪ್ಪಳ
ಶೇ. 69.87ಶೇ. 68.56
ಬಳ್ಳಾರಿ
ಶೇ.72.35ಶೇ. 69.76
ಹಾವೇರಿ
ಶೇ.76.78ಶೇ. 74.21
ಧಾರವಾಡ
ಶೇ. 72.53ಶೇ. 70.29
ಉತ್ತರ ಕನ್ನಡ
ಶೇ. 73.52ಶೇ. 74.16
ದಾವಣಗೆರೆ
ಶೇ. 76.23ಶೇ. 73.19
ಶಿವಮೊಗ್ಗಶೇ. 76.05
ಶೇ. 76.58
ಒಟ್ಟು ಶೇ. ಮತದಾನ ಶೇ. 70.41

ಉತ್ಸಾಹದಿಂದ ಹಕ್ಕು ಚಲಾವಣೆ

ಯುವಕ-ಯುವತಿಯರು, ಮಹಿಳೆಯರು, ವೃದ್ಧರು ಸೇರಿ ಎಲ್ಲ ವಯೋಮಾನದ ಮತಾದಾರರು ಅತ್ಯಂತ ಉತ್ಸಾಹದಿಂದ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬದಲ್ಲಿ ಪಾಲ್ಗೊಂಡು ಮತ ಚಲಾಯಿಸುವ ಮೂಲಕ ಸಂಭ್ರಮಿಸಿದರು. ಇನ್ನು ಹಲವೆಡೆ ಹೆಚ್ಚಿನ ಸಂಖ್ಯೆಯಲ್ಲಿ ವಿಶೇಷಚೇತನರು, ವೃದ್ಧರು, ಶತಾಯುಷಿ ಮತದಾರರು ಹಕ್ಕು ಚಲಾವಣೆ ಮಾಡುವ ಮೂಲಕ ಮತದಾರರಿಗೆ ಮಾದರಿಯಾದರು.

ಗಮನ ಸೆಳೆದ ವಿಷಯಾಧಾರಿತ ಮತಗಟ್ಟೆಗಳು

ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಉಪ್ಪಾರಗೇರಿಯಲ್ಲಿ ಸಾಂಪ್ರದಾಯಿಕ ಮತಗಟ್ಟೆ ಮತದಾರರನ್ನು ಆಕರ್ಷಿಸಿತು.

ಎರಡನೇ ಹಂತದ ಮತದಾನದಲ್ಲಿ ವಿಭಿನ್ನ ವಿಷಯಾಧಾರಿತ ಮತಗಟ್ಟೆಗಳು ಗಮನಸೆಳೆದವು. ಮಹಿಳೆಯರಿಂದ ಕಾರ್ಯ ನಿರ್ವಹಿಸಲ್ಪಡುವ ಮಾದರಿ ಮತಗಟ್ಟೆಯಾದ ಸಖಿ ಮತಗಟ್ಟೆ, ಅದೇ ರೀತಿ ವಿಶೇಷ ಚೇತನರ ಮಾದರಿ ಮತಗಟ್ಟೆ, ಸಾಂಪ್ರದಾಯಿಕ ಮತಗಟ್ಟೆ, ಗ್ರೀನ್ ಬೂತ್, ಯುವ ಮತಗಟ್ಟೆಗಳು ಮತದಾರರನ್ನು ಆಕರ್ಷಿಸಿದವು.

ಕಾಗವಾಡದಲ್ಲಿ ಶತಾಯುಷಿ ಮಹಿಳೆ ಮತದಾನ

ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದ 103 ವಯಸ್ಸಿನ ಹಿರಿಯ ಮಹಿಳೆ ನೀಲವ್ವ ಶಿವಗೌಡ ಗಾಳಿ ಅವರು ಉತ್ಸಾಹದಿಂದ ಮತ ಚಲಾಯಿಸಿದರು. ಬಸವನ ಬಾಗೇವಾಡಿ ಮತಕ್ಷೇತ್ರದಲ್ಲಿ ತಮ್ಮ 96 ವರ್ಷದ ಇಳಿ ವಯಸ್ಸಿನಲ್ಲಿ ಸಿದ್ದವ್ವ ಡೊನೂರ ಅವರು ಮರಿಮೊಮ್ಮಗಳೊಡನೆ ಮಸಬಿನಾಳ ಗ್ರಾಮದ ಮತಗಟ್ಟೆಗೆ ಬಂದು ಮತವನ್ನು ಚಲಾಯಿಸಿ ಎಲ್ಲರಿಗೂ ಆದರ್ಶರಾದರು.

ಇದನ್ನೂ ಓದಿ | Lok Sabha Election 2024: ಸಂಜೆ 5ಗಂಟೆವರೆಗೆ ಶೇ.66.05 ವೋಟಿಂಗ್‌; ಚಿಕ್ಕೋಡಿಯಲ್ಲಿ ಅತಿ ಹೆಚ್ಚು

ಸವದತ್ತಿ ತಾಲೂಕಿನ ಆಲದಕಟ್ಟಿ ಕೆ.ಎಂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಆಲದಕಟ್ಟಿ ಕೆ.ಎಂ ಗ್ರಾಮದ ನಿವಾಸಿ ಅಂತರಾಷ್ಟ್ರೀಯ ಮಟ್ಟದ ವ್ಹೀಲ್ ಚೇರ ಬಾಸ್ಕೆಟ್ ಬಾಲ್ ಕ್ರೀಡಾಪಟು ಕುಮಾರಿ ಲಕ್ಷ್ಮೀ ರಾಯಪ್ಪ ರಾಯಣ್ಣವರ ಅವರು ಇಂದು ಸ್ವಗ್ರಾಮದಲ್ಲಿ ಮತ ಚಲಾಯಿಸಿ ಅನಿಸಿಕೆ ಹಂಚಿಕೊಂಡರು. ಇನ್ನು ಅಂತರಾಷ್ಟ್ರೀಯ ಈಜುಗಾರ ವಿಶೇಷ ಮತದಾರರಾದ ಮೊಯಿನ್ ಅವರು ಬೆಳಗಾವಿ ನಗರದಲ್ಲಿ ತಮ್ಮ ಅಮೂಲ್ಯವಾದ ಮತ ಚಲಾಯಿಸಿದರು.

ಹಲವೆಡೆ ಮತದಾನ ಬಹಿಷ್ಕಾರ

ವಿವಿಧ ಕಾರಣಗಳಿಗಾಗಿ ಹಲವೆಡೆ ಜನರು ಮತದಾನ ಬಹಿಷ್ಕಾರ ಮಾಡಿರುವುದು ಕಂಡುಬಂದಿದೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣ 18ನೇ ವಾರ್ಡ್‌ನಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ ಸಾವು ಪ್ರಕರಣ ಖಂಡಿಸಿ ಮತಗಟ್ಟೆ ಸಂಖ್ಯೆ 147 ರಲ್ಲಿ ಜನರು ಮತದಾನ ಬಹಿಷ್ಕಾರ ಮಾಡಿದರು. ಅದೇ ರೀತಿ ಕುಕನೂರು ತಾಲೂಕಿನ ಗುದ್ನೆಪ್ಪನಮಠ ಗ್ರಾಮದಲ್ಲಿ ಸೇವಾದಾರರ ಭೂಮಿಯನ್ನು ಸರ್ಕಾರಿ ಕಟ್ಟಡಗಳ ನಿರ್ಮಾಣಕ್ಕೆ ಒತ್ತುವರಿ ವಿರೋಧಿಸಿ ಮತದಾನ ಬಹಿಷ್ಕಾರವಾಗಿದೆ.

ರಾಯಚೂರಿನ ಮಾನ್ವಿ ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ ಮತಗಟ್ಟೆ ಸಂಖ್ಯೆ 254 ಹಾಗೂ 255 ರಲ್ಲಿ ಮತದಾನ ಸ್ಥಗಿತವಾಗಿತ್ತು. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಚಿಲಕನಹಟ್ಟಿ ಗ್ರಾಮದ ಮಾರುತಿ ನಗರದಲ್ಲಿ ಪ್ರತ್ಯೇಕ ಮತದಾನ ಕೇಂದ್ರ ಮಾಡದ ಹಿನ್ನೆಲೆ ಮತದಾರರು ಮತ ಹಾಕಲಿಲ್ಲ. ಕಂದಾಯ ಗ್ರಾಮ ಮಾಡಿ ಮೂಲಭೂತ ಸೌಲಭ್ಯ ನೀಡಲು ಆಗ್ರಹಿಸಿ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಹಳವ ತರ್ಲಗಟ್ಟ ಗ್ರಾಮದಲ್ಲಿ ಮತದಾನ ಬಹಿಷ್ಕಾರ ಮಾಡಲಾಗಿದೆ.

ವೋಟರ್‌ ಲಿಸ್ಟ್‌ನಲ್ಲಿ ಹೆಸರು ಡಿಲೀಟ್; ಮತದಾರರ ಆಕ್ರೋಶ

ಹುಬ್ಬಳ್ಳಿ: ಮತಗಟ್ಟೆಯಲ್ಲಿ 200 ರಿಂದ 300 ಜನ ಮತದಾರರ ಹೆಸರುಗಳು ಡಿಲೀಟ್ ಆಗಿವೆ ಎಂದು ಮತಗಟ್ಟೆ ಮುಂದೆ ಮತದಾರರು ಆಕ್ರೋಶ ಹೊರಹಾಕಿದ ಘಟನೆ ಹುಬ್ಬಳ್ಳಿಯ ಪೆಂಡಾರಗಲ್ಲಿ ಸರ್ಕಾರಿ ಶಾಲೆಯಲ್ಲಿ ನಡೆಯಿತು. ಪೆಂಡಾರಗಲ್ಲಿಯ ಮತಗಟ್ಟೆ ಸಂಖ್ಯೆ 26 ಹಾಗೂ 27 ರಲ್ಲಿ ಹಲವು ಹೆಸರು ನಾಪತ್ತೆಯಾಗಿವೆ ಎಂದು ಮತದಾರರು ಕಿಡಿಕಾರಿದರು.

ಇದನ್ನೂ ಓದಿ | Lok Sabha Election: 3ನೇ ಹಂತದಲ್ಲಿ ಶೇ.60ರಷ್ಟು ಮತದಾನ, ಕಳೆದ ಬಾರಿಗಿಂತಲೂ ಕಡಿಮೆ

ಬಿಜೆಪಿ ಪರ‌ ಮತ ಹಾಕಿ ಎಂದ ಅಧಿಕಾರಿ ವಿರುದ್ಧ ಆಕ್ರೋಶ

ಚಿಕ್ಕೋಡಿ: ಬಿಜೆಪಿ ಪರ‌ ಮತ ಚಲಾಯಿಸುವಂತೆ ಮತಗಟ್ಟೆ ಒಳಗಿನ ಅಧಿಕಾರಿ ಒತ್ತಾಯ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮತಗಟ್ಟೆ ಎದುರು ಪ್ರತಿಭಟನೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಕೋಟೆಬಾಗ ಶಾಲೆಯ ಬೂತ್ ನಂಬರ್ 162 ರಲ್ಲಿ ನಡೆಯಿತು. ಮಹಿಳೆಯರಿಗೆ ಬಿಜೆಪಿ ಪರ ಮತಚಲಾಯಿಸುವಂತೆ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎಂದು ಮತಗಟ್ಟೆಗೆ ಕೈ ಕಾರ್ಯಕರ್ತರು ಆಗಮಿಸಿ ಆಕ್ರೋಶ ಹೊರಹಾಕಿದರು. ಇದರಿಂದ ಅವರನ್ನು ತಡೆಯಲು ಹೋದ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.

Continue Reading

ಪ್ರಮುಖ ಸುದ್ದಿ

Mayawati: ನೇಮಿಸಿದ 5 ತಿಂಗಳಲ್ಲೇ ಸೋದರಳಿಯನನ್ನು ಉತ್ತರಾಧಿಕಾರಿ ಹುದ್ದೆಯಿಂದ ತೆಗೆದ ಮಾಯಾವತಿ!

Mayawati: ಮಾಯಾವತಿ ಅವರು 2019ರಲ್ಲಿ ಆಕಾಶ್‌ ಆನಂದ್‌ ಅವರನ್ನು ಬಿಎಸ್‌ಪಿ ರಾಷ್ಟ್ರೀಯ ಸಂಚಾಲಕರನ್ನಾಗಿ ನೇಮಿಸಿದ್ದರು. 2023ರ ಡಿಸೆಂಬರ್‌ನಲ್ಲಿ ಅವರು ಸೋದರಳಿಯನನ್ನೇ ಉತ್ತರಾಧಿಕಾರಿ ಎಂಬುದಾಗಿ ಘೋಷಿಸಿದ್ದರು. ಆದರೆ, ಈಗ ದಿಢೀರನೆ ಅವರನ್ನು ಎರಡೂ ಹುದ್ದೆಗಳಿಂದ ತೆರವುಗೊಳಿಸಲು ಏನು ಕಾರಣ ಎಂಬುದು ಸ್ಪಷ್ಟವಾಗಿಲ್ಲ.

VISTARANEWS.COM


on

Mayawati
Koo

ಲಖನೌ: ಬಹುಜನ ಸಮಾಜ ಪಕ್ಷದ (BSP) ವರಿಷ್ಠ ನಾಯಕಿ ಮಾಯಾವತಿ (Mayawati) ಅವರು ಸೋದರಳಿಯ ಆಕಾಶ್‌ ಆನಂದ್‌ (Akash Anand) ಅವರನ್ನು ತಮ್ಮ ಉತ್ತರಾಧಿಕಾರಿ ಹುದ್ದೆಯಿಂದ ವಜಾಗೊಳಿಸಿದ್ದಾರೆ. ನೇಮಕ ಮಾಡಿದ ಐದೇ ತಿಂಗಳಲ್ಲಿ ಬಿಎಸ್‌ಪಿಯ ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದಲೂ ಮಾಯಾವತಿಯವರು ವಜಾಗೊಳಿಸಿದ್ದಾರೆ. ಲೋಕಸಭೆ ಚುನಾವಣೆ ಹೊತ್ತಿನಲ್ಲಿಯೇ ಮಾಯಾವತಿಯವರು ಇಂತಹ ತೀರ್ಮಾನ ತೆಗೆದುಕೊಂಡಿರುವುದು ಭಾರಿ ಚರ್ಚೆಗೂ ಗ್ರಾಸವಾಗಿದೆ.

ಆಕಾಶ್‌ ಆನಂದ್‌ ಅವರನ್ನು ಜವಾಬ್ದಾರಿಯಿಂದ ಮುಕ್ತಿಗೊಳಿಸಿರುವ ಕುರಿತು ಮಾಯಾವತಿಯವರೇ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. “ಆಕಾಶ್‌ ಆನಂದ್‌ ಅವರಿಗೆ ಪಕ್ಷದಲ್ಲಿ ಉನ್ನತ ಸ್ಥಾನಗಳನ್ನು ನಿಯೋಜಿಸಲಾಗಿತ್ತು. ಆದರೆ, ಬದಲಾದ ಸಾಮಾಜಿಕ ವ್ಯವಸ್ಥೆ, ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಅವರನ್ನು ರಾಷ್ಟ್ರೀಯ ಸಂಚಾಲಕ ಹಾಗೂ ಉತ್ತರಾಧಿಕಾರಿ ಹುದ್ದೆಯಿಂದ ತೆರವುಗೊಳಿಸಲಾಗಿದೆ. ಈಗಲೂ ಪಕ್ಷವು ಡಾ.ಬಿ.ಆರ್.ಅಂಬೇಡ್ಕರ್‌ ಅವರ ಚಿಂತನೆಗಳನ್ನು ಪಾಲಿಸಲು ಕಟಿಬದ್ಧವಾಗಿದೆ” ಎಂದು ತಿಳಿಸಿದ್ದಾರೆ.

ಮಾಯಾವತಿ ಅವರು 2019ರಲ್ಲಿ ಆಕಾಶ್‌ ಆನಂದ್‌ ಅವರನ್ನು ಬಿಎಸ್‌ಪಿ ರಾಷ್ಟ್ರೀಯ ಸಂಚಾಲಕರನ್ನಾಗಿ ನೇಮಿಸಿದ್ದರು. 2023ರ ಡಿಸೆಂಬರ್‌ನಲ್ಲಿ ಅವರು ಸೋದರಳಿಯನನ್ನೇ ಉತ್ತರಾಧಿಕಾರಿ ಎಂಬುದಾಗಿ ಘೋಷಿಸಿದ್ದರು. ಆದರೆ, ಈಗ ದಿಢೀರನೆ ಅವರನ್ನು ಎರಡೂ ಹುದ್ದೆಗಳಿಂದ ತೆರವುಗೊಳಿಸಲು ಏನು ಕಾರಣ ಎಂಬುದು ಸ್ಪಷ್ಟವಾಗಿಲ್ಲ. ಆದಾಗ್ಯೂ, ಮೊದಲಿನಂತೆ ಸಹೋದರ, ಆಕಾಶ್‌ ಆನಂದ್‌ ಅವರ ತಂದೆ ಆನಂದ್‌ ಕುಮಾರ್‌ ಅವರು ಜವಾಬ್ದಾರಿ ನಿಭಾಯಿಸಲಿದ್ದಾರೆ ಎಂಬುದಾಗಿ ಮಾಯಾವತಿ ಹೇಳೀದ್ದಾರೆ.

ಯಾರಿವರು ಆಕಾಶ್‌ ಆನಂದ್?

ಆಕಾಶ್ ಆನಂದ್ ತಮ್ಮ 22ನೇ ವಯಸ್ಸಿನಲ್ಲಿ 2017ರಲ್ಲಿ ರಾಜಕಾರಣವನ್ನು ಪ್ರವೇಶಿಸಿದರು. ಲಂಡನ್‌ನಲ್ಲಿ ಓದಿರುವ ಆಕಾಶ್ ಎಂಬಿಎ ಪದವೀಧರರು. ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ನಡೆದ ರ‍್ಯಾಲಿಯಲ್ಲಿ ಮಾಯಾವತಿಯವರೊಂದಿಗೆ ಅವರ ರಾಜಕೀಯ ಚೊಚ್ಚಲ ಪ್ರವೇಶವಾಗಿತ್ತು, ಅಲ್ಲಿ ಅವರು ಅಖಿಲೇಶ್ ಯಾದವ್ ಮತ್ತು ಅಜಿತ್ ಸಿಂಗ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು.

ಸಾಮಾನ್ಯವಾಗಿ ಬಹುಜನ ಸಮಾಜ ಪಾರ್ಟಿಯ ಪಾದಯಾತ್ರೆಗಳಂಥ ರಾಜಕೀಯ ಚಟುವಟಿಕೆಗಳನ್ನು ನಡೆಸುವುದಿಲ್ಲ. ಆದರೆ, ಆಕಾಶ್ ಆನಂದ್ ಅವರು ಈ ಪದ್ಧತಿಯನ್ನು ಮುರಿದು ಇದೇ ಮೊದಲ ಬಾರಿಗೆ, 14 ದಿನಗಳ ಸರ್ವಜನ ಹಿತಾಯ, ಸರ್ವಜನ ಸುಖಾಯ ಸಂಕಲ್ಪ ಯಾತ್ರೆಯನ್ನು ಕೈಗೊಂಡಿದ್ದರು. ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಬಿಎಸ್‌ಪಿಗಾಗಿ ವ್ಯಾಪಕವಾಗಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: Politicians Scandals : ದೇಶದ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಲೈಂಗಿಕ ಹಗರಣಗಳಿವು!

Continue Reading

ಪ್ರಮುಖ ಸುದ್ದಿ

IPL 2024 : ರಾಜಸ್ಥಾನ್​ ವಿರುದ್ಧ ಡೆಲ್ಲಿಗೆ 20 ರನ್​ ಗೆಲುವು, ಪ್ಲೇಆಫ್ ಕನಸು ಜೀವಂತ

IPL 2024: ಟಾಸ್​ ಗೆದ್ದ ರಾಜಸ್ಥಾನ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್​ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 221 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್​ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ಗೆ 201 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

IPL 2024
Koo

ನವ ದೆಹಲಿ : ಜಿದ್ದಾಜಿದ್ದಿನಿಂದ ಕೂಡಿದ್ದ ಐಪಿಎಲ್​ 17ನೇ ಆವೃತ್ತಿಯ (IPL 2024) 56ನೇ ಪಂದ್ಯದಲ್ಲಿ ರಾಜಸ್ಥಾನ್​ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್​​ 20 ರನ್​ಗಳಿಂದ ಗೆಲುವು ಸಾಧಿಸಿದೆ. ಗೆಲ್ಲಲೇಬೇಕಾದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಡೆಲ್ಲಿ ಆಟಗಾರರು ಗೆಲುವು ತಮ್ಮದಾಗಿಸಿಕೊಂಡು. ಇದು ಡೆಲ್ಲಿ ತಂಡದಕ್ಕೆ ಇದುವರೆಗೆ ಆಡಿರುವ 12 ಪಂದ್ಯಗಳಲ್ಲಿ 6ನೇ ಗೆಲುವಾಗಿದೆ. 12 ಅಂಕಗಳನ್ನು ಸಂಪಾದಿಸಿರುವ ರಿಷಭ್​ ಪಂತ್ ಬಳಗ ಲಕ್ನೊ ಸೂಪರ್ ಜೈಂಟ್ಸ್​ ತಂಡವನ್ನು ಹಿಂದಿಕ್ಕಿ 5ನೇ ಸ್ಥಾನಕ್ಕೇರಿತು. ಅತ್ತ ರಾಜಸ್ಥಾನ್ ತಂಡ ಆಡಿರುವ 11 ಪಂದ್ಯಗಳಲ್ಲಿ 3ನೇ ಸೋಲಿಗೆ ಒಳಗಾಯಿತು. ಆದಾಗ್ಯೂ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಬಿಟ್ಟುಕೊಟ್ಟಿಲ್ಲ.

ಇಲ್ಲಿನ ಅರುಣ್​ ಜೇಟ್ಲಿ ಕ್ರಿಕ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ರಾಜಸ್ಥಾನ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್​ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 221 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್​ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ಗೆ 201 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

ಸಂಜು ಹೋರಾಟ ವ್ಯರ್ಥ

ಸಂಜು ಸ್ಯಾಮ್ಸನ್​ 46 ಎಸೆತಕ್ಕೆ 86 ರನ್ ಬಾರಿಸಿದ್ದ ತನಕ ಪಂದ್ಯ ರಾಜಸ್ಥಾನ್ ತಂಡದ ಪರವಾಗಿತ್ತು. ಆದರೆ, ಸಂಜು ವಿಕೆಟ್​ ಪತನಗೊಳ್ಳುತ್ತಿದ್ದಂತೆ ಏಕಾಏಕಿ ಕುಸಿತ ಕಂಡ ಡೆಲ್ಲಿ ಕ್ಯಾಪಿಟಲ್ಸ್ ಬಳಗ ಸೋಲಿಗೆ ಸಿಲುಕಿತು. ಕುಲ್ದೀಪ್​ ಯಾದವ್​ 25 ರನ್​ಗಳಗೆ ಪ್ರಮುಖ 2 ವಿಕೆಟ್ ಉರುಳಿಸುವ ಮೂಲಕ ಕೊನೇ ಹಂತದಲ್ಲಿ ಪಂದ್ಯಕ್ಕೆ ತಿರುವು ತಂದುಕೊಟ್ಟರು. ಏತನ್ಮಧ್ಯೆ ಸಂಜು ಸ್ಯಾಮ್ಸನ್​ ವಿಕೆಟ್ ವಿವಾದಾತ್ಮಕ ವಿಕೆಟ್ ಆಗಿ ಪರಿವರ್ತನೆಗೊಂಡಿತು. ಮುಖೇಶ್ ಕುಮಾರ್​ ಎಸೆತವನ್ನು ಸಂಜು ಬೌಂಡರಿ ಲೈನ್ ಮೇಲೆ ಹೊಡೆಯಲು ಯತ್ನಿಸಿದ್ದರು. ಆದರೆ, ಲೈನ್​ನಲ್ಲಿ ಅದ್ಭುತ ಫೀಲ್ಡಿಂಗ್ ಮಾಡಿದ ಶಾಯ್​ ಹೋಪ್ ಕ್ಯಾಚ್ ನೀಡಿದರು. ಥರ್ಡ್​ ಅಂಪೈರ್ ಅದನ್ನು ಮರುಪರಿಶೀಲಿಸಿ ಔಟ್​ ನೀಡಿದರು. ಆದರೆ, ಸಂಜು ಸ್ಯಾಮ್ಸನ್​ ಫೀಲ್ಡರ್ ಕಾಲು ಬೌಂಡರಿ ಲೈನ್​ಗೆ ತಾಗಿದೆ ಎಂದು ಅಂಪೈರ್​ಗಳ ಜತೆ ವಾದ ಮಾಡಿದರು.

ರಾಜಸ್ಥಾನ್ ರಾಯಲ್ಸ್​ ಗುರಿ ಬೆನ್ನಟ್ಟುವ ಹಾದಿಯಲ್ಲಿ ಆರಂಭಿಕ ಆಘಾತ ಅನುಭವಿಸಿತು. ಯಶಸ್ವಿ ಜೈಸ್ವಾಲ್​ 4 ರನ್​ಗೆ ಔಟಾದರೆ ಜೋಸ್ ಬಟ್ಲರ್​ 19 ರನ್ ಬಾರಿಸಿದರು. ರಿಯಾನ್ ಪರಾಗ್​ 27 ಹಾಗೂ ಶುಭಂ ದುಬೆ 25 ರನ್ ಬಾರಿಸಿ ಗೆಲುವಿನ ಕನಸು ಬಿತ್ತಿದರು. ಆದರೆ, ಕೊನೇ ಹಂತದಲ್ಲಿ ಡೆಲ್ಲಿ ಬೌಲರ್​ಗಳು ಗೆಲುವಿನ ಅವಕಾಶವನ್ನು ತಮ್ಮದಾಗಿಸಿಕೊಂಡರು.

ಉತ್ತಮ ಆರಂಭ

ಮೊದಲು ಬ್ಯಾಟ್ ಮಾಡಿದ ಡೆಲ್ಲಿ ತಂಡಕ್ಕೆ ಉತ್ತಮ ಆರಂಭ ದೊರಕಿತು. ಪ್ರೇಸರ್ ಮೆಕ್​ಗುರ್ಕ್​ 20 ಎಸೆತಕ್ಕೆ 50 ರನ್​ ಬಾರಿಸಿದರೆ ಅಭಿಷೇಕ್ ಪೊರೆಲ್​ 65 ರನ್​ ಬಾರಿಸಿದರು. ಶಾಯ್​ ಹೋಪ್​ ವಿಫಲರಾಗಿ 1 ರನ್​ಗೆ ಔಟಾದಾಗ ಡೆಲ್ಲಿ ರನ್ ಗಳಿಕೆ ವೇಗ ಕಡಿಮೆಯಾಯಿತು. ಅಕ್ಷರ್ ಪಟೇಲ್​ ಹಾಗೂ ರಿಷಭ್​ ಪಂತ್​ ತಲಾ 15 ರನ್ ಬಾರಿಸಿದರು. ಆದರೆ, ಕೊನೇ ಹಂತದಲ್ಲಿ ಟ್ರಿಸ್ಟಾನ್​ ಸ್ಟಬ್ಸ್​​ 20 ಎಸೆತಕ್ಕೆ 41 ರನ್ ಬಾರಿಸಿ ದೊಡ್ಡ ಮೊತ್ತ ಪೇರಿಸಲು ನೆರವಾದರು.

ಡೆಲ್ಲಿ ಕ್ಯಾಪಿಟಲ್ಸ್ ಪರ ಆರ್​ ಅಶ್ವಿನ್​ 24 ರನ್​ಗಳ ವೆಚ್ಚದಲ್ಲಿ 3 ವಿಕೆಟ್​ ಉರುಳಿಸುವ ಮೂಲಕ ಉತ್ತಮ ಸಾಧನೆ ಮಾಡಿದರು.

Continue Reading

ದೇಶ

Amanatullah Khan: ಪೆಟ್ರೋಲ್‌ ಬಂಕ್‌ ಸಿಬ್ಬಂದಿ ಮೇಲೆ ಆಪ್‌ ಎಂಎಲ್‌ಎ ಪುತ್ರನಿಂದ ಹಲ್ಲೆ; ಬಿತ್ತು ಕೇಸ್

Amanatullah Khan: ನೊಯ್ಡಾದ ಸೆಕ್ಟರ್‌ 95 ಪ್ರದೇಶದಲ್ಲಿರುವ ಪೆಟ್ರೋಲ್‌ ಬಕ್‌ನಲ್ಲಿ ಅಲ್ಲಿನ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಕಾರಿನ ಡಿಕ್ಕಿಯಿಂದ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗಿ, ಹಲ್ಲೆ ಮಾಡುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದಾದ ಬಳಿಕ ಸಿಸಿಟಿವಿ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ. ಜನ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Amanatullah Khan
Koo

ನವದೆಹಲಿ: ರಾಜಕಾರಣಿಗಳು, ರಾಜಕಾರಣಿಗಳ ಮಕ್ಕಳು, ಅವರ ಕುಟುಂಬಸ್ಥರಿಗೊಂದು ದುರಹಂಕಾರ ಇರುತ್ತದೆ. ಹಣ, ಅಧಿಕಾರದ ಮದವು ಅವರನ್ನು ಸಾರ್ವಜನಿಕರೊಂದಿಗೆ ದುರಹಂಕಾರದಿಂದ, ದರ್ಪದಿಂದ ವರ್ತಿಸುವ ಹಾಗೆ ಮಾಡುತ್ತದೆ. ಚುನಾವಣೆ ಸಂದರ್ಭ ಹೊರತುಪಡಿಸಿ ಅವರು ಉಳಿದ ಸಮಯದಲ್ಲಿ ಅಹಂಕಾರದಿಂದಲೇ ವರ್ತಿಸುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ಆಮ್‌ ಆದ್ಮಿ ಪಕ್ಷದ (Aam Aadmy Party) ಶಾಸಕ ಅಮಾನತುಲ್ಲಾ ಖಾನ್‌ ಅವರ ಪುತ್ರನು ಪೆಟ್ರೋಲ್‌ ಪಂಪ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ಆತನ ವಿರುದ್ಧ ಕೇಸ್‌ ದಾಖಲಾಗಿದೆ.

ನೊಯ್ಡಾದ ಸೆಕ್ಟರ್‌ 95 ಪ್ರದೇಶದಲ್ಲಿರುವ ಪೆಟ್ರೋಲ್‌ ಬಕ್‌ನಲ್ಲಿ ಅಲ್ಲಿನ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಕಾರಿನ ಡಿಕ್ಕಿಯಿಂದ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗಿ, ಹಲ್ಲೆ ಮಾಡುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದಾದ ಬಳಿಕ ಸಿಸಿಟಿವಿ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ. ವೈರಲ್‌ ಆಗುತ್ತಲೇ ಜನ ಶಾಸಕನ ಪುತ್ರನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದಾರೆ.

ಅಮಾನತುಲ್ಲಾ ಖಾನ್‌ನ ಪುತ್ರನು ಕಾರಿನಲ್ಲಿ ಪೆಟ್ರೋಲ್‌ ಬಂಕ್‌ಗೆ ಬಂದಿದ್ದಾನೆ. ಆದರೆ, ಹಲವು ವಾಹನಗಳನ್ನು ಸಾಲಿನಲ್ಲಿ ನಿಲ್ಲಿಸಿದ ಕಾರಣ, ಕ್ಯೂ ಬಿಟ್ಟು ಹೋಗಿ, ಮೊದಲು ಪೆಟ್ರೋಲ್‌ ಹಾಕಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಆಗ ಅಲ್ಲಿದ್ದ ಸಾರ್ವಜನಿಕರು, ಪೆಟ್ರೋಲ್‌ ಬಂಕ್‌ ಸಿಬ್ಬಂದಿಯು ಆತನನ್ನು ತಡೆದಿದ್ದಾರೆ. ಇದರಿಂದ ಕುಪಿತಗೊಂಡ ಎಂಎಲ್‌ಎ ಪುತ್ರನು, ಕಾರಿನ ಡಿಕ್ಕಿಯಲ್ಲಿದ್ದ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗಿ ಅಲ್ಲಿನ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಇಷ್ಟೆಲ್ಲ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ತಂದೆಯೂ ಬಂಕ್‌ಗೆ ಬಂದು ಬೆದರಿಕೆ

ಸಾರ್ವಜನಿಕರ ಜತೆ ಅಸಭ್ಯವಾಗಿ ವರ್ತಿಸಿದ, ಪೆಟ್ರೋಲ್‌ ಬಂಕ್‌ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಮಗನಿಗೆ ಬುದ್ಧಿ ಮಾತು ಹೇಳಿ, ಪ್ರಕರಣವನ್ನು ತಣ್ಣಗಾಗಿಸುವ ಬದಲು, ಅಮಾನತುಲ್ಲಾ ಖಾನ್‌ ಅವರೇ ಪೆಟ್ರೋಲ್‌ ಬಂಕ್‌ಗೆ ತೆರಳಿ, ಅಲ್ಲಿನ ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿ ವಕ್ಫ್‌ ಬೋರ್ಡ್‌ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳಷ್ಟೇ ಅಮಾನತುಲ್ಲಾ ಖಾನ್‌ ಅವರನ್ನು ಜಾರಿ ನಿರ್ದೇಶನಾಲಯದ ವಿಚಾರಣೆ ನಡೆಸಿದ್ದಾರೆ. ಇವರು ದೆಹಲಿಯ ಓಖ್ಲಾ ವಿಧಾನಸಭೆ ಕ್ಷೇತ್ರದ ಶಾಸಕರಾಗಿದ್ದಾರೆ.

ಇದನ್ನೂ ಓದಿ: Harshika Poonacha: ಹಲ್ಲೆ ಪ್ರಕರಣ; ನ್ಯಾಯ ಕೋರಿ ಪ್ರಲ್ಹಾದ ಜೋಶಿ ಭೇಟಿಯಾದ ಹರ್ಷಿಕಾ ಪೂಣಚ್ಚ ದಂಪತಿ

Continue Reading
Advertisement
Lok Sabha Election 2024
ಕರ್ನಾಟಕ3 mins ago

Lok Sabha Election 2024: 2ನೇ ಹಂತದಲ್ಲಿ ಶೇ.70.41 ಮತದಾನ; ಕಳೆದ ಬಾರಿಗಿಂತ ಹೆಚ್ಚು, ಚಿಕ್ಕೋಡಿಯಲ್ಲಿ ಗರಿಷ್ಠ

Mayawati
ಪ್ರಮುಖ ಸುದ್ದಿ20 mins ago

Mayawati: ನೇಮಿಸಿದ 5 ತಿಂಗಳಲ್ಲೇ ಸೋದರಳಿಯನನ್ನು ಉತ್ತರಾಧಿಕಾರಿ ಹುದ್ದೆಯಿಂದ ತೆಗೆದ ಮಾಯಾವತಿ!

IPL 2024
ಪ್ರಮುಖ ಸುದ್ದಿ29 mins ago

IPL 2024 : ರಾಜಸ್ಥಾನ್​ ವಿರುದ್ಧ ಡೆಲ್ಲಿಗೆ 20 ರನ್​ ಗೆಲುವು, ಪ್ಲೇಆಫ್ ಕನಸು ಜೀವಂತ

Music Festival
ಬೆಂಗಳೂರು43 mins ago

Music Festival: ಬೆಂಗಳೂರಿನಲ್ಲಿ ಮೇ 12ರಂದು ಸಪ್ತಕ ʼಸಂಗೀತ ಸಂಭ್ರಮʼ

Amanatullah Khan
ದೇಶ1 hour ago

Amanatullah Khan: ಪೆಟ್ರೋಲ್‌ ಬಂಕ್‌ ಸಿಬ್ಬಂದಿ ಮೇಲೆ ಆಪ್‌ ಎಂಎಲ್‌ಎ ಪುತ್ರನಿಂದ ಹಲ್ಲೆ; ಬಿತ್ತು ಕೇಸ್

Yuzvendra Chahal
ಕ್ರಿಕೆಟ್1 hour ago

Yuzvendra Chahal : ಟಿ20 ವಿಕೆಟ್​​ಗಳ ಗಳಿಕೆಯಲ್ಲಿ ನೂತನ ದಾಖಲೆ ಬರೆದ ಸ್ಪಿನ್ನರ್ ಯಜ್ವೇಂದ್ರ ಚಹಲ್​

Bescom Helpline
ಕರ್ನಾಟಕ1 hour ago

BESCOM Helpline: ಮಳೆ ಹಾನಿ; ದೂರು ಸಲ್ಲಿಸಲು ಬೆಸ್ಕಾಂ ಗ್ರಾಹಕರಿಗೆ ಪರ್ಯಾಯ ವಾಟ್ಸ್‌ಆ್ಯಪ್‌, ದೂರವಾಣಿ ಸಂಖ್ಯೆ

Nissan India
ಆಟೋಮೊಬೈಲ್2 hours ago

Nissan India : ಉಚಿತ ಏಸಿ ರಿಪೇರಿ ಮಾಡಿಸಿಕೊಳ್ಳಲು ನಿಸ್ಸಾನ್ ಕಾರು ಮಾಲೀಕರಿಗೆ ಇಲ್ಲಿದೆ ಅವಕಾಶ

IPL 2024
ಕ್ರೀಡೆ3 hours ago

IPL 2024 : ಅಭಿಮಾನಿಯ 80 ಸಾವಿರ ರೂಪಾಯಿ ಮೊಬೈಲ್​ ಒಡೆದು ಹಾಕಿದ ಚೆನ್ನೈ ಸ್ಟಾರ್​; ಇಲ್ಲಿದೆ ವಿಡಿಯೊ

Murder Case
ಕರ್ನಾಟಕ3 hours ago

Murder Case: ಬೆಂಗಳೂರಿನಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ; ನಡು ರಸ್ತೆಯಲ್ಲೇ ಅಟ್ಟಾಡಿಸಿ ಕೊಲೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna has severe chest pain Admission in Victoria
ರಾಜಕೀಯ3 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ6 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ8 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ1 day ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ1 day ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌