Rachin Ravindra : ವರ್ಷದ ಕ್ರಿಕೆಟಿಗ ಪ್ರಶಸ್ತಿ ಪಡೆದು ವಿಶೇಷ ಸಾಧನೆ ಮಾಡಿದ ರಚಿನ್ ರವೀಂದ್ರ - Vistara News

ಪ್ರಮುಖ ಸುದ್ದಿ

Rachin Ravindra : ವರ್ಷದ ಕ್ರಿಕೆಟಿಗ ಪ್ರಶಸ್ತಿ ಪಡೆದು ವಿಶೇಷ ಸಾಧನೆ ಮಾಡಿದ ರಚಿನ್ ರವೀಂದ್ರ

Rachin Ravindra : ರಚಿನ್ ರವೀಂದ್ರ ಕಳೆದ ಒಂದು ವರ್ಷದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ.

VISTARANEWS.COM


on

Rachin Ravindra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತದಲ್ಲಿ ನಡೆದ ಏಕ ದಿನ ವಿಶ್ವ ಕಪ್ ನಲ್ಲಿ ನ್ಯೂಜಿಲ್ಯಾಂಡ್ ಪರ ಅತಿ ಹೆಚ್ಚು ಸ್ಕೋರ್ ಗಳಿಸಿದ್ದ ರಚಿನ್ ರವೀಂದ್ರ (Rachin Ravindra) ಬುಧವಾರ ಸರ್ ರಿಚರ್ಡ್ ಹ್ಯಾಡ್ಲೀ ಪ್ರಶಸ್ತಿ ಪಡೆದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದೇ ವೇಳೆ ನ್ಯೂಜಿಲ್ಯಾಂಡ್ನ ಮಹಿಳೆಯರ ವಿಭಾಗದಲ್ಲಿ ಲೆಗ್​ಸ್ಪಿನ್​ ಆಲ್​ರೌಂಡರ್​ ಅಮೆಲಿಯಾ ಕೆರ್ ಪ್ರಮುಖ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಕೇನ್ ವಿಲಿಯಮ್ಸನ್ ಟೆಸ್ಟ್ ಕ್ರಿಕೆಟ್​ನ ಅತ್ಯುತ್ತಮ ಫಾರ್ಮ್​ಗಾಗಿ ವರ್ಷದ ಟೆಸ್ಟ್ ಆಟಗಾರ ಪ್ರಶಸ್ತಿ ಪಡೆದರು. ಅವರಿಗೆ ರೆಡ್​​ಪಾಥ್​ ಪ್ರಶಸ್ತಿ ಒಲಿದಿದೆ.

24 ವರ್ಷದ ರವೀಂದ್ರ ಅವರು 2023ರಲ್ಲಿ ನ್ಯೂಜಿಲೆಂಡ್​ ಕ್ರಿಕೆಟ್​ನ ಕೆಂಪು ಮತ್ತು ಬಿಳಿ ಚೆಂಡು ತಂಡಗಳ ಪ್ರಮುಖ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಈ ಪ್ರಶಸ್ತಿಯ ಇತಿಹಾಸದಲ್ಲಿ ಅತ್ಯಂತ ಕಿರಿಯ ವಿಜೇತರಾಗಿದ್ದಾರೆ. ಕಳೆದ ವರ್ಷ ಮಾರ್ಚ್​ನಲ್ಲಿ 50 ಓವರ್​ಗಳ ಕಿವೀಸ್​ ತಂಡಕ್ಕೆ ಪ್ರವೇಶಿಸಿದ ನಂತರ ರವೀಂದ್ರ ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಮಿಂಚಿದ್ದರು. ಅಹಮದಾಬಾದ್​ನಲ್ಲಿ ಇಂಗ್ಲೆಂಡ್ ವಿರುದ್ಧದ ಟೂರ್ನಿಯ ಮೊದಲ ಪಂದ್ಯದಲ್ಲಿ ಅಜೇಯ 123 ರನ್ ಸೇರಿದಂತೆ ಮೂರು ಶತಕಗಳು ಮತ್ತು ಎರಡು ಅರ್ಧಶತಕಗಳನ್ನು ಸಿಡಿಸಿದ್ದರು. 64 ಸರಾಸರಿಯಲ್ಲಿ 578 ರನ್ ಬಾರಿಸಿ ಮಿಂಚಿದ್ದರು ಪರಿಣಾಮವಾಗಿ ಅವರು 2023ರ ಐಸಿಸಿಯ ವರ್ಷದ ಉದಯೋನ್ಮುಖ ಆಟಗಾರ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದರು. ಚೆನ್ನೈ ಸೂಪರ್ ಕಿಂಗ್ಸ್​​ ಜತೆಗೆ 1.8 ಕೋಟಿ ರೂಪಾಯಿಗೆ ಐಪಿಎಲ್​ ಒಪ್ಪಂದವನ್ನೂ ಮಾಡಿಕೊಂಡಿದ್ದಾರೆ.

ಬೇ ಓವಲ್​​ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್​ನಲ್ಲಿ 240 ರನ್ ಗಳಿಸುವ ಮೂಲಕ ರವೀಂದ್ರ ನ್ಯೂಜಿಲೆಂಡ್​ ಪರ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಅತ್ಯಧಿಕ ರನ್ ಬಾರಿಸಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಮೊದಲ ಟೆಸ್ಟ್ ಸರಣಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರು ಟಿ 20 ಅಂತಾರಾಷ್ಟ್ರೀಯ ವೇದಿಕೆಯಲ್ಲಿಯೂ ಮಿಂಚಿದ್ದಾರೆ. ಈ ಋತುವಿನಲ್ಲಿ 14 ಟಿ20 ಪಂದ್ಯದಲ್ಲಿ ಕಾಣಿಸಿಕೊಂಡಿದ್ದಾರೆ. ಸ್ಕೈ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ 20 ಐನಲ್ಲಿ 35 ಎಸೆತಗಳಲ್ಲಿ 68 ರನ್ ಗಳಿಸಿದ್ದರು.

ಇದನ್ನೂ ಓದಿ : IPL 2024 : ಐಪಿಎಲ್​ ಇತಿಹಾಸದಲ್ಲಿ ದಾಖಲಾಗಿರುವ ಅತಿವೇಗದ ಶತಕಗಳ ವಿವರ ಈ ಕೆಳಗಿನಂತಿದೆ

ನ್ಯೂಜಿಲ್ಯಾಂಡ್​ ಏಕದಿನ ಮತ್ತು ಟಿ 20ಐ ವರ್ಷದ ಆಟಗಾರ್ತಿ ಖ್ಯಾತಿ ಪಡೆದ ಅಮೇಲಿಯಾ ಕೆರ್​, ಡೆಬ್ಬಿ ಹಾಕ್ಲೆ ಪದಕ ಮತ್ತು ಡ್ರೀಮ್ 11 ಸೂಪರ್ ಸ್ಮಾಶ್ ಮಹಿಳಾ ಆಟಗಾರ್ತಿ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ಲೆಗ್ ಸ್ಪಿನ್ ಆಲ್ರೌಂಡರ್ ಏಕದಿನ ರನ್ ಮಾದರಿಯಲ್ಲಿ 67 ಸರಾಸರಿಯಲ್ಲಿ 541 ರನ್ ಗಳಿಸಿದ್ದಾರೆ. ವರ್ಷದಲ್ಲಿ ಅವರು ಎರಡು ಶತಕಗಳನ್ನು ಬಾರಿಸಿದ್ದಾರೆ. 42ರ ಸರಾಸರಿಯಲ್ಲಿ 252 ರನ್ ಹಾಗೂ 118ರ ಸ್ಟ್ರೈಕ್ ರೇಟ್​ನಲ್ಲಿ 252 ರನ್ ಗಳಿಸಿದ ಅವರು ತಂಡದ ಜಂಟಿ ಪ್ರಮುಖ ಟಿ20 ವಿಕೆಟ್ ಟೇಕರ್ ಮತ್ತು ಎರಡನೇ ಅತಿ ಹೆಚ್ಚು ಟಿ20 ರನ್ ಸ್ಕೋರರ್ ಎನಿಸಿಕೊಂಡಿದ್ದಾರೆ.

2023ರ ವರ್ಷದ ಮಹಿಳಾ ಏಕದಿನ ಮತ್ತು ಟಿ 20 ಐ ಐಸಿಸಿ ತಂಡಗಳೆರಡರಲ್ಲೂ ಆಯ್ಕೆಯಾಗುವ ಮೂಲಕ ಅಂತರರಾಷ್ಟ್ರೀಯ ರಂಗದಲ್ಲಿ ಕೆರ್ ಅವರ ಪ್ರದರ್ಶನವನ್ನು ಗುರುತಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತಂತ್ರಜ್ಞಾನ

WhatsApp AI: WhatsAppಗೂ ಬಂತು ಎಐ; ನಿಮ್ಮ ಪ್ರೊಫೈಲ್‌ ಫೋಟೊ ಇನ್ನು AI ಜನರೇಟೆಡ್!‌

WhatsApp AI: ವಾಟ್ಸ್‌ಆ್ಯಪ್‌ ಫೀಚರ್‌ಗಳ ಕುರಿತು ವಿಶ್ವಾಸಾರ್ಹ ಮಾಹಿತಿ ನೀಡುವ ಡಬ್ಲ್ಯೂಎ ಬೀಟಾ ಇನ್ಫೋ ಈ ಕುರಿತು ಮಾಹಿತಿ ನೀಡಿದೆ. ವಾಟ್ಸ್‌ಆ್ಯಪ್‌ ಬಳಕೆದಾರರು ಆ್ಯಪ್‌ನಲ್ಲಿ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನದ ಮೂಲಕ ತಮ್ಮ ಪ್ರೊಫೈಲ್‌ ಫೋಟೊ ಸೆಟ್‌ ಮಾಡಬಹುದಾಗಿದೆ. ಹೊಸ ಫೀಚರ್‌ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

VISTARANEWS.COM


on

WhatsApp AI
Koo

ನವದೆಹಲಿ: ಮೆಟಾ ಒಡೆತನದ ವಾಟ್ಸ್‌ಆ್ಯಪ್‌ (WhatsApp) ನಿಯಮಿತವಾಗಿ ಹೊಸ ಹೊಸ ಫೀಚರ್‌ಗಳನ್ನು ಪರಿಚಯಿಸುವ ಮೂಲಕ ಗ್ರಾಹಕರಿಗೆ ನೂತನ ಅನುಭವ, ಸೌಕರ್ಯಗಳನ್ನು ನೀಡುತ್ತದೆ. ಈಗ ವಾಟ್ಸ್‌ಆ್ಯಪ್‌ ಮತ್ತೊಂದು ಫೀಚರ್‌ ಬಿಡುಗಡೆ ಮಾಡಲಿದ್ದು, ಗ್ರಾಹಕರ ಡಿಪಿ ಅಥವಾ ಪ್ರೊಫೈಲ್‌ ಫೋಟೊಗಳು (Profile Photo) ಇನ್ನು ಎಐ ಜನರೇಟೆಡ್‌ (ಕೃತಕ ಬುದ್ಧಿಮತ್ತೆ) (WhatsApp AI) ಆಗಲಿವೆ. ಇತ್ತೀಚೆಗಷ್ಟೇ ಎಐ ಸ್ಟಿಕ್ಕರ್‌ಗಳನ್ನು (ಎಮೋಜಿ) ಪರಿಚಯಿಸಿದ್ದ ವಾಟ್ಸ್‌ಆ್ಯಪ್‌ ಈಗ ಮತ್ತೊಂದು ಫೀಚರ್‌ ಮುಂದಿಡುತ್ತಿದೆ.

ವಾಟ್ಸ್‌ಆ್ಯಪ್‌ ಫೀಚರ್‌ಗಳ ಕುರಿತು ವಿಶ್ವಾಸಾರ್ಹ ಮಾಹಿತಿ ನೀಡುವ ಡಬ್ಲ್ಯೂಎ ಬೀಟಾ ಇನ್ಫೋ ಈ ಕುರಿತು ಮಾಹಿತಿ ನೀಡಿದೆ. ವಾಟ್ಸ್‌ಆ್ಯಪ್‌ ಬಳಕೆದಾರರು ಆ್ಯಪ್‌ನಲ್ಲಿ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನದ ಮೂಲಕ ತಮ್ಮ ಪ್ರೊಫೈಲ್‌ ಫೋಟೊ ಸೆಟ್‌ ಮಾಡಬಹುದಾಗಿದೆ. ಐಎ ಆಧಾರಿತ, ಬಳಕೆದಾರರ ವ್ಯಕ್ತಿತ್ವ, ಆಸಕ್ತಿ ಅಥವಾ ಮನಸ್ಸಿನ ಸ್ಥಿತಿ (Mood) ಆಧಾರದ ಮೇಲೆ ಹೊಸ ಪ್ರೊಫೈಲ್‌ ಫೋಟೊ ಕ್ರಿಯೇಟ್‌ ಮಾಡಬಹುದಾಗಿದೆ ಎಂದು ಡಬ್ಲ್ಯೂಎ ಬೀಟಾ ಇನ್ಫೋ ಮಾಹಿತಿ ನೀಡಿದೆ.

employee attacked the boss and broke the iPhone for removing him from the WhatsApp group

ವಾಟ್ಸ್‌ಆ್ಯಪ್‌ ಈಗ ಬೀಟಾ ವರ್ಷನ್‌ನಲ್ಲಿ (ನಿಯಮಿತ ಬಳಕೆದಾರರಿಗೆ ಅಪ್‌ಡೇಟೆಡ್‌ ವರ್ಷನ್‌ ಆ್ಯಪ್‌ ಬಳಸಲು ಕೊಟ್ಟು, ಅವರ ಅಭಿಪ್ರಾಯ ಸಂಗ್ರಹಿಸುವುದು) ಅಪ್‌ಡೇಟ್‌ ಆಗಿರುವ ಅಪ್ಲಿಕೇಶನ್‌ ಬಿಡುಗಡೆ ಮಾಡಿದೆ. ಆ್ಯಂಡ್ರಾಯ್ಡ್‌ ಬಳಕೆದಾರರಿಗೆ ಹೊಸ ಫೀಚರ್‌ ಶೀಘ್ರದಲ್ಲೇ ಲಭ್ಯವಾಗಲಿದೆ ಎಂದು ಹೇಳಲಾಗುತ್ತಿದೆ. ಅನಗತ್ಯವಾದ, ಅನ್‌ರೀಡ್‌ (Unread) ಮೇಸೇಜ್‌ಗಳನ್ನು ಅಳಿಸಿ ಹಾಕುವುದು ಸೇರಿ ಹಲವು ಫೀಚರ್‌ಗಳನ್ನೂ ಶೀಘ್ರದಲ್ಲೇ ಪರಿಚಯಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಒರಿಜಿನಲ್‌ ಫೋಟೊ ಬೇಕಾಗಿಲ್ಲ

ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಮೂಲಕ ವಾಟ್ಸ್‌ಆ್ಯಪ್‌ ಪ್ರೊಫೈಲ್‌ ಫೋಟೊ ಕ್ರಿಯೇಟ್‌ ಮಾಡಲು ಒರಿಜಿನಲ್‌ ಫೋಟೊಗಳನ್ನು ಬಳಸಬೇಕಿಲ್ಲ. ಆಯಾ ವ್ಯಕ್ತಿಯ ಮನಸ್ಥಿತಿ, ಖುಷಿ, ದುಃಖವನ್ನು ಅಭಿವ್ಯಕ್ತಪಡಿಸುವ ರೀತಿಯಲ್ಲಿ ಕೃತಕ ಬುದ್ಧಿಮತ್ತೆ ಮೂಲಕ ಪ್ರೊಫೈಲ್‌ ಫೋಟೊ ತಯಾರಿಸಬಹುದಾಗಿದೆ. ಹಾಗೆಯೇ, ಬಳಕೆದಾರರ ಖಾಸಗಿತನವನ್ನು ಕಾಪಾಡಲು ವಾಟ್ಸ್‌ಆ್ಯಪ್‌ ಆದ್ಯತೆ ನೀಡಿದೆ. ಯಾರದ್ದೋ ವ್ಯಕ್ತಿಯ ಒರಿಜಿನಲ್‌ ಫೋಟೊ ಬಳಸಿ, ಎಐ ಮೂಲಕ ಇಮೇಜ್‌ ಕ್ರಿಯೇಟ್‌ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡುವುದನ್ನು ನಿಗ್ರಹಿಸುವ ತಂತ್ರಜ್ಞಾನ ಹೊಂದಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Fake News: ವಾಟ್ಸ್‌ಆ್ಯಪ್‌ನಲ್ಲಿ ಸಿಕ್ಕಿದ್ದೆಲ್ಲ ಫಾರ್ವರ್ಡ್‌ ಮಾಡಿದರೆ 3 ವರ್ಷ ಜೈಲು; ಹೊಸ ಕಾನೂನು ಬಗ್ಗೆ ಇರಲಿ ಎಚ್ಚರಿಕೆ

Continue Reading

ಕ್ರೀಡೆ

T20 World Cup 2024 : ಭಾರತ ತಂಡ ವಿಶ್ವ ಕಪ್​ ಗೆಲ್ಲುವುದಿಲ್ಲ; ಇಂಗ್ಲೆಂಡ್​ ಮಾಜಿ ಆಟಗಾರನ ಭವಿಷ್ಯ

T20 World Cup 2024: ಮೆನ್ ಇನ್ ಬ್ಲೂ ಪ್ರತಿಭೆಗಳನ್ನು ಹೊಂದಿರುತ್ತದೆ. ಅಂತಿಮವಾಗಿ ಅವರು ಮುಂಬರುವ ಟಿ 20 ವಿಶ್ವಕಪ್ 2024ರಲ್ಲಿ ವಿರೋಧ ತಂಡಗಳಿಗೆ ಗಮನಾರ್ಹ ಬೆದರಿಕೆ ಒಡ್ಡುವುದಿಲ್ಲ ಎಂದು ಲಾಯ್ಡ್ ಹೇಳಿದ್ದಾರೆ. ಈ ದಿಟ್ಟ ಹೇಳಿಕೆಯು ಐಸಿಸಿ ಪಂದ್ಯಾವಳಿಗಳಲ್ಲಿ ಭಾರತದ ಪ್ರದರ್ಶನದ ಬಗ್ಗೆ ನಡೆಯುತ್ತಿರುವ ಚರ್ಚೆಯನ್ನು ಹುಟ್ಟುಹಾಕಿದೆ.

VISTARANEWS.COM


on

T20 world cup 2024
Koo

ಬೆಂಗಳೂರು: ಜೂನ್ 1 ರಿಂದ ಯುಎಸ್ಎ ಮತ್ತು ವೆಸ್ಟ್ ಇಂಡೀಸ್ ಸಹ-ಆತಿಥ್ಯ ವಹಿಸಲಿರುವ ಐಸಿಸಿ ಟಿ 20 ವಿಶ್ವಕಪ್ 2024ರಲ್ಲಿ (T20 World Cup 2024) ಭಾರತ ಕಪ್ ಗೆಲ್ಲುವುದಿಲ್ಲ. ಆಯ್ಕೆ ಮಾಡಿರುವ ಭಾರತ ತಂಡ ಪ್ರಭಾವಿಯಾಗಿಲ್ಲ ಎಂದು ಇಂಗ್ಲೆಂಡ್​ನ ಮಾಜಿ ಕ್ರಿಕೆಟಿಗ ಡೇವಿಡ್ ಲಾಯ್ಡ್ ಹೇಳಿಕೆ ನೀಡಿದ್ದಾರೆ. ಭಾರತ ತಂಡ ಸಾಮಾನ್ಯ ತಂಡವಾಗಿದೆ. ಹೀಗಾಗಿ ಈ ತಂಡಕ್ಕೆ ಗೆಲುವಿನ ಅವಕಾಶ ಕಡಿಮೆಯಿದೆ ಎಂದು ಅವರು ಹೇಳಿದ್ದಾರೆ. ಗಮನಾರ್ಹವಾಗಿ, ಭಾರತ ಕ್ರಿಕೆಟ್ ತಂಡವು 2013 ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ನಂತರ ಐಸಿಸಿ ಟ್ರೋಫಿಯನ್ನು ಗೆದ್ದಿಲ್ಲ. ಆದಾಗ್ಯೂ, ಭಾರತವು ತವರು ನೆಲದಲ್ಲಿ ನಡೆದ 2023ರ ಐಸಿಸಿ ವಿಶ್ವಕಪ್​ನಲ್ಲಿ ರನ್ನರ್-ಅಪ್ ಆಗಿತ್ತು. ಎರಡು ಬಾರಿ ಡಬ್ಲ್ಯುಟಿಸಿಯ ಫೈನಲ್ ತಲುಪಿ ರನ್ನರ್ ಅಪ್​ ಸ್ಥಾನ ಪಡೆದುಕೊಂಡಿತ್ತು.

ಟಿ20 ವಿಶ್ವಕಪ್​ ಕುರಿತು ಹೇಳುವುದಾದರೆ 2007ರ ಆವೃತ್ತಿಯ ವಿಜೇತ ತಂಡ 2021ರ ಲೀಗ್ ಹಂತದಲ್ಲೇ ಹೊರಕ್ಕೆ ಬಿದ್ದಿತ್ತು. ಪ್ರತಿಷ್ಠಿತ ಪಂದ್ಯಾವಳಿಯ 2022ರ ಆವೃತ್ತಿಯಲ್ಲಿ ಸೆಮಿಫೈನಲ್​​ನಲ್ಲಿ ಇಂಗ್ಲೆಂಡ್​ಗೆ ಶರಣಾಗಿತ್ತು. ಈ ಹಿನ್ನೆಲೆಯಲ್ಲಿ ಭಾರತದ ಕೊರತೆ ಮುಂದುವರಿದಿದೆ.

ಭಾರತ ತಂಡದ ಸಾಮರ್ಥ್ಯವನ್ನು ಊಹಿಸಬಹುದು

ಲಾಯ್ಡ್​ ಅವರು ಟೀಮ್ ಇಂಡಿಯಾ ಆಯ್ಕೆ ವಿಧಾನವನ್ನು ಟೀಕಿಸಿದರು ಭಾರತ ತಂಡವನ್ನು ಬ್ಯಾಟ್ ಮತ್ತು ಬೌಲಿಂಗ್​ನಲ್ಲಿ ಅಪಾಯಗಳನ್ನು ತಡೆಯುವ ಸಾಮರ್ಥ್ಯ ಇರುವ ತಂಡ ಅಲ್ಲ ಎಂದಿದ್ದಾರೆ. ಈ ತಂಡದ ಸಾಮರ್ಥ್ಯವನ್ನು ಯಾರು ಬೇಕಾದರೂ ಊಹಿಸಬಹುದು ಎಂದು ಹೇಳಿದರು. ಕಳೆದ ದಶಕದಲ್ಲಿ ಭಾರತ ತಂಡದ ಸ್ಥಿರತೆಯ ಕೊರತೆಯನ್ನು ಸಹ ಲಾಯ್ಡ್ ಎತ್ತಿ ತೋರಿಸಿದರು. ಐಸಿಸಿ ಸ್ಪರ್ಧೆಗಳಲ್ಲಿ ಟೀಮ್ ಇಂಡಿಯಾದ ಕಳಪೆ ಪ್ರದರ್ಶನದ ಪ್ರವೃತ್ತಿಯನ್ನು ಬೊಟ್ಟು ಮಾಡಿದ್ದಾರೆ.

ಭಾರತವು ಪ್ರತಿಭಾವಂತ ಆಟಗಾರರನ್ನು ಹೊಂದಿದೆ. ಆದರೆ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಅವರ ಅಪಾಯ-ಮುಕ್ತ ಕಾರ್ಯತಂತ್ರ ಸರಿಯಾಗಿಲ್ಲ. ಕಳೆದ ದಶಕದಲ್ಲಿ ಸ್ಟಾರ್-ಸ್ಟಡೆಡ್ ಲೈನ್ಅಪ್ ಹೊಂದಿದ್ದರೂ ಐಸಿಸಿ ಸ್ಪರ್ಧೆಗಳಲ್ಲಿ ಪ್ರಬಲ ಶಕ್ತಿಯಾಗುವ ಸಾಮರ್ಥ್ಯ ಹೊಂದಿಲ್ಲ ಎಂದು ಇಂಗ್ಲೆಂಡ್​​ನ ಮಾಜಿ ವೇಗಿ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: IPL 2024 : ಸಚಿನ್​, ಧೋನಿ, ರೋಹಿತ್​; ಒಂದೇ ಜಾಹೀರಾತಿನಲ್ಲಿ ಮೂರು ಪೀಳಿಗೆಯ ನಾಯಕರು; ಇಲ್ಲಿದೆ ವಿಡಿಯೊ

ಮೆನ್ ಇನ್ ಬ್ಲೂ ಪ್ರತಿಭೆಗಳನ್ನು ಹೊಂದಿರುತ್ತದೆ. ಅಂತಿಮವಾಗಿ ಅವರು ಮುಂಬರುವ ಟಿ 20 ವಿಶ್ವಕಪ್ 2024ರಲ್ಲಿ ವಿರೋಧ ತಂಡಗಳಿಗೆ ಗಮನಾರ್ಹ ಬೆದರಿಕೆ ಒಡ್ಡುವುದಿಲ್ಲ ಎಂದು ಲಾಯ್ಡ್ ಹೇಳಿದ್ದಾರೆ. ಈ ದಿಟ್ಟ ಹೇಳಿಕೆಯು ಐಸಿಸಿ ಪಂದ್ಯಾವಳಿಗಳಲ್ಲಿ ಭಾರತದ ಪ್ರದರ್ಶನದ ಬಗ್ಗೆ ನಡೆಯುತ್ತಿರುವ ಚರ್ಚೆಯನ್ನು ಹುಟ್ಟುಹಾಕಿದೆ.

ಟಿ20 ವಿಶ್ವಕಪ್​​ನಲ್ಲಿ ಬೆದರಿಕೆ ಒಡ್ಡುವುದಿಲ್ಲ; ಡೇವಿಡ್ ಲಾಯ್ಡ್

ಟಾಕ್ಸ್ಪೋರ್ಟ್ ಕ್ರಿಕೆಟ್ ಪಾಡ್​ಕಾಸ್ಟ್​ನಲ್ಲಿ ಡೇವಿಡ್ ಲಾಯ್ಡ್ ಹೀಗೆ ಹೇಳಿದ್ದಾರೆ. “ಇದು ಸಾಕಷ್ಟು ಊಹಿಸಬಹುದಾದ ತಂಡ. ಕುಡುಗೋಲುಗಳು ಕಡಿಮೆಯಾಗಿಲ್ಲ. ಎದುರಾಳಿಗಳು ಗುಣಮಟ್ಟ ಸ್ವೀಕರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ಆದರೆ ಅವರು ಬ್ಯಾಟ್ ಅಥವಾ ಚೆಂಡಿನೊಂದಿಗೆ ಅಪಾಯವನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ.

ಮುಂಬರುವ ಟಿ 20 ವಿಶ್ವಕಪ್ 2024 ರಲ್ಲಿ ಭಾರತವನ್ನು ಪಾಕಿಸ್ತಾನ ಐರ್ಲೆಂಡ್, ಯುಎಸ್ಎ ಮತ್ತು ಕೆನಡಾ ಜೊತೆಗೆ ಎ ಗುಂಪಿನಲ್ಲಿ ಇದೆ. ಭಾರತೀಯ ತಂಡವು ಜೂನ್ 5 ರಂದು ನ್ಯೂಯಾರ್ಕ್​ನಲ್ಲಿ ಐರ್ಲೆಂಡ್ ವಿರುದ್ಧ ತಮ್ಮ ಅಭಿಯಾನ ಪ್ರಾರಂಭಿಸಿದೆ. ನಂತರ ಜೂನ್ 9 ರಂದು ಪಾಕಿಸ್ತಾನದ ವಿರುದ್ಧ ಬೃಹತ್ ಮುಖಾಮುಖಿಯಾಗಲಿದೆ. ಇದಕ್ಕೂ ಮುನ್ನ ಜೂನ್ 1ರಂದು ಅಮೆರಿಕದಲ್ಲಿ ಬಾಂಗ್ಲಾದೇಶ ವಿರುದ್ಧ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯವನ್ನು ಆಡಲಿದೆ.

ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ಶಿವಮ್ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.

ಮೀಸಲು ಆಟಗಾರರುಃ ಶುಭ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ಭಾರತದ ಗುಂಪು ಹಂತದ ಹಣಾಹಣಿ

ಜೂನ್ 05: ಭಾರತ vs ಐರ್ಲೆಂಡ್, ನಸ್ಸೌ ಕೌಂಟಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ನ್ಯೂಯಾರ್ಕ್​​
ಜೂನ್ 09: ಭಾರತ vs ಪಾಕಿಸ್ತಾನ, ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ನ್ಯೂಯಾರ್ಕ್
ಜೂನ್ 12: ಭಾರತ vs ಯುಎಸ್ಎ, ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ನ್ಯೂಯಾರ್ಕ್
ಜೂನ್ 14: ಫ್ಲೋರಿಡಾದ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್​​ನ ಭಾರತ vs ಕೆನಡಾ

Continue Reading

ಶಿಕ್ಷಣ

COMEDK UGET 2024: ನಾಳೆ ಮಧ್ಯಾಹ್ನ ಕಾಮೆಡ್‌ – ಕೆ ಫಲಿತಾಂಶ ಪ್ರಕಟ; ವೀಕ್ಷಣೆ, ಡೌನ್‌ಲೋಡ್‌ ಮಾಡಿಕೊಳ್ಳೋದು ಹೇಗೆ?

COMEDK UGET 2024: ಕಾಮೆಡ್‌ – ಕೆ ಪರೀಕ್ಷೆಯನ್ನು ದೇಶಾದ್ಯಂತ ನಡೆಸಲಾಗಿದ್ದು, 200ಕ್ಕೂ ಹೆಚ್ಚು ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಯುವ ಈ ಪ್ರವೇಶ ಪರೀಕ್ಷೆಯು ಪದವಿ ಪೂರ್ವ ಮೆಡಿಕಲ್, ಎಂಜಿನಿಯರಿಂಗ್, ಡೆಂಟಲ್‌ ಕೋರ್ಸ್‌ಗಳ ಪ್ರವೇಶಕ್ಕೆ ಬುನಾದಿಯಾಗಲಿದೆ. ಶುಕ್ರವಾರ (ಮೇ 24) ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಾಗುತ್ತದೆ. COMEDK UGET 2024ರ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ.

VISTARANEWS.COM


on

COMEDK UGET 2024 Result Declared Tomorrow Afternoon How to view and download
Koo

ಬೆಂಗಳೂರು: ಕರ್ನಾಟಕದ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (COMEDK) 2024ರ ಪ್ರವೇಶ ಪರೀಕ್ಷೆಯ (UGET) ಫಲಿತಾಂಶವನ್ನು ಶುಕ್ರವಾರ (ಮೇ 24) ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಾಗುತ್ತದೆ. COMEDK UGET 2024ರ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದ್ದು, ಡೌನ್‌ಲೋಡ್ ಮಾಡಿಕೊಳ್ಳುವ ಅವಕಾಶವನ್ನೂ ಕಲ್ಪಿಸಲಾಗಿದೆ.

ಕರ್ನಾಟಕದ 150 ಪ್ರೈವೇಟ್‌ ಎಂಜಿನಿಯರಿಂಗ್ ಕಾಲೇಜು, ದೇಶದ ಕೆಲವು ಕಡೆ ಇರುವ 40 ಖಾಸಗಿ ವಿವಿಗಳಲ್ಲಿನ ಸುಮಾರು 22 ಸಾವಿರ ಎಂಜಿನಿಯರಿಂಗ್ ಸೀಟುಗಳ ಪ್ರವೇಶಾತಿಗಾಗಿ ಈ ಅರ್ಹತಾ ಪರೀಕ್ಷೆಯನ್ನು ನಡೆಸಲಾಗಿತ್ತು. ದೇಶದ 1,03,799 (ಶೇಕಡಾ 87.96) ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ಶುಕ್ರವಾರ ಅವರ ಭವಿಷ್ಯ ನಿರ್ಧಾರ ಆಗಲಿದೆ. ವಿದ್ಯಾರ್ಥಿಗಳು ತಮ್ಮ ಶ್ರೇಯಾಂಕದ ಪಟ್ಟಿಯನ್ನು ಪರಿಶೀಲಿಸಿಕೊಂಡು ಸ್ಕೋರ್‌ ಕಾರ್ಡ್‌ ಅನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

COMEDK UGET ಫಲಿತಾಂಶ 2024 ಪರಿಶೀಲನೆ ಹೇಗೆ?

ಹಂತ 1: ಕಾಮೆಡ್‌ಕೆ ಪರೀಕ್ಷಾ ಪೋರ್ಟಲ್‌ಗೆ ಭೇಟಿ ನೀಡಿ.

ಹಂತ 2: COMEDK UGET 2024 ಫಲಿತಾಂಶದ ಲಾಗಿನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಹಂತ 3: ನಿಮ್ಮ ಲಾಗಿನ್ ರುಜುವಾತುಗಳನ್ನು ನಮೂದಿಸಿ – ಅಪ್ಲಿಕೇಶನ್ ಸಂಖ್ಯೆ ಅಥವಾ ಬಳಕೆದಾರ ID ಮತ್ತು ಪಾಸ್‌ವರ್ಡ್ ಮತ್ತು ನಂತರ ಸಲ್ಲಿಸು ಮೇಲೆ ಕ್ಲಿಕ್ ಮಾಡಿ.

ಹಂತ 4: COMEDK UGET ಫಲಿತಾಂಶ 2024 ಪರದೆಯ ಮೇಲೆ ಕಾಣಿಸುತ್ತದೆ.

ಹಂತ 5: ಕೀ ಉತ್ತರವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿ.

ವಾರದಲ್ಲಿ ಕೌನ್ಸೆಲಿಂಗ್‌ ನೋಂದಣಿ ಆರಂಭ

ಮೇ 24ರಂದು ಕಾಮೆಡ್‌ಕೆ ರಿಸಲ್ಟ್‌ ಪ್ರಕಟವಾಗಿ ವಾರದಲ್ಲಿ ಕೌನ್ಸೆಲಿಂಗ್‌ ನೋಂದಣಿ ಆರಂಭವಾಗಲಿದೆ. ಕರ್ನಾಟಕದಲ್ಲಿರುವ 150 ಖಾಸಗಿ ಎಂಜಿನಿಯರಿಂಗ್ ಕಾಲೇಜು ಮತ್ತು ದೇಶದ ವಿವಿಧ ಕಡೆ ಇರುವ 40 ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಯಾವ ಕಡೆಯಲ್ಲಾದರೂ ಪ್ರವೇಶ ಪಡೆಯಬೇಕೆಂದರೆ ಇಲ್ಲಿ ನೋಂದಣಿಯನ್ನು ಮಾಡಿಕೊಂಡಿರಬೇಕು.

ಇದನ್ನೂ ಓದಿ: Rave party: ರೇವ್‌ ಪಾರ್ಟಿಯಲ್ಲಿ ಹೇಮಾ, ಆಶಿ ಸೇರಿ 86 ಮಂದಿಯಿಂದ ಮಾದಕ ವಸ್ತು ಸೇವನೆ; ಬ್ಲಡ್‌ ರಿಪೋರ್ಟ್‌ ಪಾಸಿಟಿವ್‌

ಪ್ರತಿ ವರ್ಷ ಮೇ ತಿಂಗಳಲ್ಲಿ ಕಾಮೆಡ್‌-ಕೆ ಪರೀಕ್ಷೆ

ಕಾಮೆಡ್‌ – ಕೆ ಪರೀಕ್ಷೆಯನ್ನು ದೇಶಾದ್ಯಂತ ನಡೆಸಲಾಗಿದ್ದು, 200ಕ್ಕೂ ಹೆಚ್ಚು ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಯುವ ಈ ಪ್ರವೇಶ ಪರೀಕ್ಷೆಯು ಪದವಿ ಪೂರ್ವ ಮೆಡಿಕಲ್, ಎಂಜಿನಿಯರಿಂಗ್, ಡೆಂಟಲ್‌ ಕೋರ್ಸ್‌ಗಳ ಪ್ರವೇಶಕ್ಕೆ ಬುನಾದಿಯಾಗಲಿದೆ.

Continue Reading

ಪ್ರಮುಖ ಸುದ್ದಿ

IPL 2024 : ಸಚಿನ್​, ಧೋನಿ, ರೋಹಿತ್​; ಒಂದೇ ಜಾಹೀರಾತಿನಲ್ಲಿ ಮೂರು ಪೀಳಿಗೆಯ ನಾಯಕರು; ಇಲ್ಲಿದೆ ವಿಡಿಯೊ

IPL 2024 : ಜಾಹೀರಾತಿನಲ್ಲಿ ತನ್ನ ಮರೆಗುಳಿತನಕ್ಕೆ ಹೆಸರುವಾಸಿಯಾದ ರೋಹಿತ್ ತನ್ನ ಫೋನ್ ಅನ್ನು ತಂಡದ ಬಸ್​ನಲ್ಲಿ ಬಿಟ್ಟು ಹೋಗುವ ಹಾಸ್ಯಮಯವಾಗಿ ಸಂದರ್ಭವನ್ನು ತೋರಿಸಲಾಗಿದೆ. ಇದು ಮ್ಯೂಚುವಲ್​​ಫಂಡ್​ಸಹಿಹೈ ಎಂಬ ಪೋರ್ಟಲ್​ ಕುರಿತಾದ ಜಾಹೀರಾಗಿದೆ. ಸಚಿನ್ ತೆಂಡೂಲ್ಕರ್ ಮತ್ತು ಧೋನಿ ಮೂಲಕ ಇದನ್ನು ಹೆಚ್ಚು ರಸವತ್ತಾಗಿ ತೋರಿಸಲಾಗಿದೆ.

VISTARANEWS.COM


on

IPL 2024
Koo

ಬೆಂಗಳೂರು: ತಾವು ಆರಾಧಿಸುವ ಕ್ರಿಕೆಟಿಗರನ್ನು ಸಮಯ ಸಿಕ್ಕಾಗೆಲ್ಲ ನೋಡುವುದು ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಅತ್ಯಂತ ಸಂತೋಷದ ಸುದ್ದಿ. ಆದರೆ ಮೂರು ಪ್ರಖ್ಯಾತ ಕ್ರಿಕೆಟಿಗರನ್ನು ಒಂದೇ ವೇದಿಕೆಯಲ್ಲಿ ನೋಡುವುದರಲ್ಲಿ ಸಿಗುವ ಆನಂದ ಇನ್ನೆಲ್ಲೂ ಸಿಗುವುದಿಲ್ಲ. ಹೀಗಾಗಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸಮಯದಲ್ಲಿ ಪ್ರಸಾರವಾದ ಮ್ಯೂಚುವಲ್ ಫಂಡ್​ ಒಂದರ ಜಾಹೀರಾತು ಒಂದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಯಾಕೆಂದರೆ ಈ ಜಾಹೀರಾತಿನಲ್ಲಿ, ಮೂರು ತಲೆಮಾರಿನ ಭಾರತೀಯ ಕ್ರಿಕೆಟ್ ನಾಯಕರಾದ ಸಚಿನ್ ತೆಂಡೂಲ್ಕರ್, ಎಂ. ಎಸ್. ಧೋನಿ ಮತ್ತು ರೋಹಿತ್ ಶರ್ಮಾ ಒಟ್ಟಿಗೆ ಸೇರಿ ಕಾಣಿಸಿಕೊಂಡಿದ್ದಾರೆ. ಇದು ಸಂಚಲನ ಮೂಡಿಸಿದೆ.

ಜಾಹೀರಾತಿನಲ್ಲಿ ತನ್ನ ಮರೆಗುಳಿತನಕ್ಕೆ ಹೆಸರುವಾಸಿಯಾದ ರೋಹಿತ್ ತನ್ನ ಫೋನ್ ಅನ್ನು ತಂಡದ ಬಸ್​ನಲ್ಲಿ ಬಿಟ್ಟು ಹೋಗುವ ಹಾಸ್ಯಮಯವಾಗಿ ಸಂದರ್ಭವನ್ನು ತೋರಿಸಲಾಗಿದೆ. ಇದು ಮ್ಯೂಚುವಲ್​​ಫಂಡ್​ಸಹಿಹೈ ಎಂಬ ಪೋರ್ಟಲ್​ ಕುರಿತಾದ ಜಾಹೀರಾಗಿದೆ. ಸಚಿನ್ ತೆಂಡೂಲ್ಕರ್ ಮತ್ತು ಧೋನಿ ಮೂಲಕ ಇದನ್ನು ಹೆಚ್ಚು ರಸವತ್ತಾಗಿ ತೋರಿಸಲಾಗಿದೆ.

ಭಾರತದ ಮಾಜಿ ಆಟಗಾರರಾದ ಸಚಿನ್ ಮತ್ತು ಎಂ. ಎಸ್. ಧೋನಿ, ನಿವೃತ್ತಿ ನಂತರದ ಹೂಡಿಕೆ ಯೋಜನೆಯ ಬಗ್ಗೆ ರೋಹಿತ್​ಗೆ ಸಲಹೆ ನೀಡಲು ಮುಂದುವರಿಯುತ್ತಾರೆ. ಆದರೆ, ರೋಹಿತ್​ ಅದಾಗಲೇ ತಾವು ಹೂಡಿಕೆ ಮಾಡುತ್ತಿರುವಾಗಿ ಹೇಳುವ ಮೂಲಕ ಜಾಹೀರಾತು ಮುಂದುವರಿಯುತ್ತದೆ.

ಭಾರತದ ಮಾಜಿ ನಾಯಕ ಎಂ. ಎಸ್. ಧೋನಿ ಮತ್ತು ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಅವರು ಮ್ಯೂಚುವಲ್ ಫಂಡ್​ಗಳನ್ನು ಉತ್ತೇಜಿಸುವ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವ ಸುದೀರ್ಘ ಇತಿಹಾಸ ಹೊಂದಿದ್ದಾರೆ. ಆದರೆ, ಈ ಹೊಸ ಜಾಹೀರಾತಿನಲ್ಲಿ ರೋಹಿತ್ ಶರ್ಮಾ ಅವರನ್ನೂ ಸೇರಿಸಿಕೊಳ್ಳಲಾಗಿದೆ.

ಜಾಹೀರಾತಿನಲ್ಲಿ ಹಾಸ್ಯಮಯ ಅಂಶಗಳಿವೆ ಇದು ರೋಹಿತ್ ಅ ಮರೆತುಹೋಗುವ ಅಭ್ಯಾಸವನ್ನು ಎತ್ತಿ ತೋರಿಸುತ್ತದೆ. ಮೂವರು ಕ್ರಿಕೆಟ್ ಐಕಾನ್​ಗಳು ಲಘೂ ಹಾಸ್ಯದಲ್ಲಿ ತೊಡಗಿಕೊಂಡಿರುದು ಕಾಣುತ್ತದೆ. ಈ ಪ್ರಸಿದ್ಧ ಆಟಗಾರರು ಒಂದೇ ತೆರೆಯ ಮೇಲೆ ಕಾಣಿಸಿಕೊಳ್ಳುವುದು ವೀಕ್ಷಕರಿಗೆ ಒಂದು ಅದ್ಭುತ ಹಳಹಳಿಕೆಯಾಗಿರುತ್ತದೆ.

ಐಪಿಎಲ್ 2024 ನಂತರ ರೋಹಿತ್ ಶರ್ಮಾ ಭವಿಷ್ಯವೇನು?

2024 ರ ಐಪಿಎಲ್ ಆವೃತ್ತಿಯಲ್ಲಿ ರೋಹಿತ್ ಶರ್ಮಾ ಅದ್ಭುತ ಪ್ರದರ್ಶನ ತೋರಿದ್ದರು. ಅವರು ಪಂದ್ಯಾವಳಿಯನ್ನು ಆಕ್ರಮಣಕಾರಿ ವಿಧಾನದೊಂದಿಗೆ ಪ್ರಾರಂಭಿಸಿದರು. ಆದರೆ ಅಂತಿಮ ಹಂತಗಳಲ್ಲಿ ಸ್ಥಿರತೆ ಕಾಪಾಡಿಕೊಳ್ಳಲು ಹೆಣಗಾಡಿದರು. ಇದರ ಹೊರತಾಗಿಯೂ, ಅವರು ತವರು ನೆಲದಲ್ಲಿ ಸಿಎಸ್​​ಕೆ ವಿರುದ್ಧ ಶತಕ ಗಳಿಸುವಲ್ಲಿ ಯಶಸ್ವಿಯಾದರು. ಎಲ್ಎಸ್​ಜಿ ವಿರುದ್ಧ ಬಲವಾದ ಪ್ರದರ್ಶನದೊಂದಿಗೆ ಋತುವನ್ನು ಮುಗಿಸಿದರು. ಒಟ್ಟಾರೆಯಾಗಿ, ಶರ್ಮಾ 14 ಪಂದ್ಯಗಳಲ್ಲಿ 150 ರ ಸ್ಟ್ರೈಕ್ ರೇಟ್ ನೊಂದಿಗೆ 417 ರನ್ ಗಳಿಸಿದ್ದಾರೆ.

ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ನಿರಾಶಾದಾಯಕ ಋತು ಹೊಂದಿದ್ದು, 14 ಪಂದ್ಯಗಳಲ್ಲಿ ಕೇವಲ 4 ಗೆಲುವುಗಳೊಂದಿಗೆ ಪಾಯಿಂಟ್ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ. ಜೂನ್ 1 ರಿಂದ ಯುಎಸ್ಎಯಲ್ಲಿ ಪ್ರಾರಂಭವಾಗುವ ಟಿ 20 ವಿಶ್ವಕಪ್ 2024 ರಲ್ಲಿ ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸಲು ಸಜ್ಜಾಗಿದ್ದಾರೆ.

Continue Reading
Advertisement
WhatsApp AI
ತಂತ್ರಜ್ಞಾನ2 mins ago

WhatsApp AI: WhatsAppಗೂ ಬಂತು ಎಐ; ನಿಮ್ಮ ಪ್ರೊಫೈಲ್‌ ಫೋಟೊ ಇನ್ನು AI ಜನರೇಟೆಡ್!‌

T20 world cup 2024
ಕ್ರೀಡೆ11 mins ago

T20 World Cup 2024 : ಭಾರತ ತಂಡ ವಿಶ್ವ ಕಪ್​ ಗೆಲ್ಲುವುದಿಲ್ಲ; ಇಂಗ್ಲೆಂಡ್​ ಮಾಜಿ ಆಟಗಾರನ ಭವಿಷ್ಯ

Udupi Tour
ಪ್ರವಾಸ12 mins ago

Udupi Tour: ಉಡುಪಿಗೆ ಹೋದಾಗ ನೀವು ನೋಡಲೇಬೇಕಾದ 10 ಸ್ಥಳಗಳಿವು

Agee hunnime Thousands of devotees have darshan of Shri Renukamba Devi of Chandragutti
ಶಿವಮೊಗ್ಗ16 mins ago

Shivamogga News: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿಯ ದರ್ಶನ ಪಡೆದ ಸಾವಿರಾರು ಭಕ್ತರು

an inscription of Hulagi Katte built during the Vijayanagara kings was discovered
ಕೊಪ್ಪಳ18 mins ago

Koppala News: ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ್ದ ಹುಲಗಿ ಕಟ್ಟೆಯ ಶಾಸನ ಪತ್ತೆ

CM Siddaramaiah inaugurated the website of the inter caste marriage registration website in Mysore
ಕರ್ನಾಟಕ19 mins ago

Mysore News: ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು, ಆದರೆ ಆ ಹುಡುಗಿ ಒಪ್ಪಲಿಲ್ಲ ಎಂದ ಸಿದ್ದರಾಮಯ್ಯ

COMEDK UGET 2024 Result Declared Tomorrow Afternoon How to view and download
ಶಿಕ್ಷಣ22 mins ago

COMEDK UGET 2024: ನಾಳೆ ಮಧ್ಯಾಹ್ನ ಕಾಮೆಡ್‌ – ಕೆ ಫಲಿತಾಂಶ ಪ್ರಕಟ; ವೀಕ್ಷಣೆ, ಡೌನ್‌ಲೋಡ್‌ ಮಾಡಿಕೊಳ್ಳೋದು ಹೇಗೆ?

IPL 2024
ಪ್ರಮುಖ ಸುದ್ದಿ53 mins ago

IPL 2024 : ಸಚಿನ್​, ಧೋನಿ, ರೋಹಿತ್​; ಒಂದೇ ಜಾಹೀರಾತಿನಲ್ಲಿ ಮೂರು ಪೀಳಿಗೆಯ ನಾಯಕರು; ಇಲ್ಲಿದೆ ವಿಡಿಯೊ

Share Market
ದೇಶ1 hour ago

Share Market: ಸೆನ್ಸೆಕ್ಸ್‌ ನೆಗೆತ, ನಿಫ್ಟಿ ಜಿಗಿತ; ಮೋದಿ ಭವಿಷ್ಯ ನಿಜವಾಗುತ್ತಾ? ಇಂದಿನ ಏರಿಕೆಗೆ ಕಾರಣಗಳು ಗೊತ್ತಾ?

IPL 2024
ಪ್ರಮುಖ ಸುದ್ದಿ1 hour ago

IPL 2024 : ಮಾಜಿ ನಾಯಕ ಶೇನ್​ ವಾರ್ನ್​ ದಾಖಲೆ ಸರಿಗಟ್ಟಿದ ಸಂಜು ಸ್ಯಾಮ್ಸನ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ17 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌