Raichur News : ಉಸಿರಾಡುತ್ತಿವೆ ಮುಸ್ಲಿಂ ಧರ್ಮಗುರುಗಳ ಗೋರಿಗಳು, ಪವಾಡ ಎಂದ ಭಕ್ತರು - Vistara News

ಪ್ರಮುಖ ಸುದ್ದಿ

Raichur News : ಉಸಿರಾಡುತ್ತಿವೆ ಮುಸ್ಲಿಂ ಧರ್ಮಗುರುಗಳ ಗೋರಿಗಳು, ಪವಾಡ ಎಂದ ಭಕ್ತರು

Raichur News : ಲಿಂಗಸ್ಗೂರು ತಾಲೂಕಿನ ಆನೆಹೊಸೂರು ಗ್ರಾಮದಲ್ಲಿ ಈ ಅಚ್ಚರಿ ಉಂಟಾಗಿದೆ ಎಂಬುದಾಗಿ ಸಾರ್ವಜನಿಕರು ಹೇಳಿದ್ದಾರೆ ಇಲ್ಲಿನ ಸೈಯದ್ ಶಾ ನಸರುದ್ದೀನ್ ನಬಿರಾ ಖಾದ್ರಿ ದರ್ಗಾದಲ್ಲಿನ ಉರುಸ್ ಬಳಿಕ ಇಂಥದ್ದೊಂದು ಪವಾಡ ಸಂಭವಿಸಿದೆ ಎಂಬುದಾಗಿ ಜನರು ಹೇಳುತ್ತಿದ್ದಾರೆ. ನೂರಾರು ವರ್ಷಗಳ ಹಳೆ ಗೋರಿಗಳು ಉಸಿರಾಟ ನಡೆಸಿದಂತೆ ಅಲ್ಲಿಗೆ ಭೇಟಿ ನೀಡುತ್ತಿರುವ ಭಕ್ತರಿಗೆ ಭಾಸವಾಗುತ್ತಿದೆ. ಅದರ ವಿಡಿಯೊಗಳು ಸಾರ್ವಜನಿಕವಾಗಿ ಹರಿದಾಡುತ್ತಿದೆ.

VISTARANEWS.COM


on

Raichur News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು : ಜಿಲ್ಲೆಯಲ್ಲಿ ವಿಸ್ಮಯಕಾರಿ (Raichur News) ಘಟನೆಯೊಂದು ನಡೆಯುತ್ತಿದ್ದು ಇಸ್ಲಾಂ ಧರ್ಮಗುರುಗಳ ಗೋರಿಗಳು ಉಸಿರಾಡುತ್ತಿವೆ ಎಂಬುದಾಗಿ ಭಕ್ತರು ನಂಬಿದ್ದಾರೆ. ಹೀಗಾಗಿ ಗೋರಿಗಳ ವೀಕ್ಷಣೆಗೆ ಭಕ್ತರು ಸಾಲು ಗಟ್ಟಿ ಬರುತ್ತಿದ್ದಾರೆ ಎಂಬುದಾಗಿ ವರದಿಯಾಗಿದೆ.

ಲಿಂಗಸ್ಗೂರು ತಾಲೂಕಿನ ಆನೆಹೊಸೂರು ಗ್ರಾಮದಲ್ಲಿ ಈ ಅಚ್ಚರಿ ಉಂಟಾಗಿದೆ ಎಂಬುದಾಗಿ ಸಾರ್ವಜನಿಕರು ಹೇಳಿದ್ದಾರೆ ಇಲ್ಲಿನ ಸೈಯದ್ ಶಾ ನಸರುದ್ದೀನ್ ನಬಿರಾ ಖಾದ್ರಿ ದರ್ಗಾದಲ್ಲಿನ ಉರುಸ್ ಬಳಿಕ ಇಂಥದ್ದೊಂದು ಪವಾಡ ಸಂಭವಿಸಿದೆ ಎಂಬುದಾಗಿ ಜನರು ಹೇಳುತ್ತಿದ್ದಾರೆ. ನೂರಾರು ವರ್ಷಗಳ ಹಳೆ ಗೋರಿಗಳು ಉಸಿರಾಟ ನಡೆಸಿದಂತೆ ಅಲ್ಲಿಗೆ ಭೇಟಿ ನೀಡುತ್ತಿರುವ ಭಕ್ತರಿಗೆ ಭಾಸವಾಗುತ್ತಿದೆ. ಅದರ ವಿಡಿಯೊಗಳು ಸಾರ್ವಜನಿಕವಾಗಿ ಹರಿದಾಡುತ್ತಿದೆ.

ಈ ದರ್ಗಾದಲ್ಲಿ ಉರುಸ್‌ ನಡೆದಿದ್ದು ಆ ಬಳಿಕ 40 ದಿನಗಳ ಕಾಲ ಜನರಿಗೆ ಇದೇ ಅನುಭವ ಉಂಟಾಗುತ್ತಿದೆ ಎಂದು ಹೇಳಲಾಗಿದೆ. ಅಲ್ಲಿರುವ ಒಟ್ಟು ಮೂರು ಗೋರಿಗಳು ಉಸಿರಾಟ ನಡೆಸಿದಂತೆ ಅನುಭವವಾಗುತ್ತಿದೆ ಎಂದು ಹೇಳಲಾಗಿದೆ. ಗೋರಿಗಳು ಉಸಿರಾಟದಿಂದಾಗಿ ಅದರ ಮೇಲೆ ಹಾಕಿರುವ ಹೂವುಗಳು ಪುಟಿಯುತ್ತಿದೆ ಎಂದು ಭೇಟಿ ನೀಡಿದ ಭಕ್ತರು ಹೇಳಿದ್ದಾರೆ. ಸಂಜೆಯಿಂದ ಬೆಳಗಿನವರೆಗೂ ಮೂರು ಗೋರಿಗಳು ಉಸಿರಾಡಿದಂತೆ ಭಾಸವಾಗುತ್ತಿದೆ ಎಂದು ಭಕ್ತರು ನುಡಿದಿದ್ದಾರೆ. ಕೌತುಕಕಾರಿ ಘಟನೆಯನ್ನು ವೀಕ್ಷಿಸಲ ಸಾವಿರಾರು ಮಂದಿ ದರ್ಗಾಕ್ಕೆ ಬರುತ್ತಿದ್ದಾರೆ.

ಈ ವಸ್ತುಗಳನ್ನು ಮನೆಯಲ್ಲಿಟ್ಟರೆ ಸಂತೋಷ, ಸಮೃದ್ಧಿ, ನೆಮ್ಮದಿ ಸಿಗುತ್ತವೆ!

ಮನೆಯಲ್ಲಿ ಕೆಲವೊಂದು ವಸ್ತುಗಳನ್ನು ಇರಿಸುವುದು ಶುಭ ಸಂಕೇತವೆಂದು (Good sign) ಪರಿಗಣಿಸಲಾಗಿದೆ. ವಾಸ್ತು ಶಾಸ್ತ್ರದಲ್ಲೂ (Vastu Tips) ಇದನ್ನು ಉಲ್ಲೇಖಿಸಲಾಗಿದೆ. ಹಿಂದೂ ಧರ್ಮದಲ್ಲಿ (hindu dharma) ವಾಸ್ತು ಶಾಸ್ತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಯಾಕೆಂದರೆ ಇದು ಭಾರತೀಯರ ಅತ್ಯಂತ ಪುರಾತನ ವಿಜ್ಞಾನವೂ ಹೌದು.

ಕೆಲವೊಂದು ವಸ್ತುಗಳು ಮನೆಯಲ್ಲಿ ಇದ್ದರೆ ಅದು ನಮ್ಮ ಜೀವನದಿಂದ ನಕಾರಾತ್ಮಕತೆಯನ್ನು ತೆಗೆದುಹಾಕುತ್ತದೆ ಮತ್ತು ಸಕಾರಾತ್ಮಕತೆಯನ್ನು ತರುತ್ತದೆ. ಮನೆಯಲ್ಲಿ ಸಂತೋಷ, ಸಮೃದ್ಧಿ ಮತ್ತು ಸಂಪತ್ತನ್ನು ತುಂಬಲು ಬಯಸಿದರೆ ವಾಸ್ತು ಪ್ರಕಾರ ಈ ದಿಕ್ಕುಗಳಲ್ಲಿ ಈ ವಸ್ತುಗಳನ್ನು ಇರಿಸಿ.

ಇದನ್ನೂ ಓದಿ: Sudha Murthy : ವಿವಾದ ಸೃಷ್ಟಿಸಿದ ಸುಧಾ ಮೂರ್ತಿಯವರ ‘ರಕ್ಷಾ ಬಂಧನ’ದ ಕತೆ; ಸ್ಪಷ್ಟನೆ ನೀಡಿದ ಸಂಸದೆ

ಆನೆಯ ಪ್ರತಿಮೆಗಳು: ಮನೆಯಲ್ಲಿ ಎರಡು ಜೋಡಿ ಎತ್ತರಿಸಿದ ಸೊಂಡಿಲು ಇರುವ ಆನೆಯ ಪ್ರತಿಮೆಗಳನ್ನು ಇಟ್ಟುಕೊಳ್ಳುವುದರಿಂದ ಕುಟುಂಬ ಸದಸ್ಯರಲ್ಲಿ ಸಂತೋಷ, ಶಾಂತಿ ಮತ್ತು ಪ್ರೀತಿಯನ್ನು ತರಬಹುದು. ಈ ಮೂರ್ತಿಗಳನ್ನು ಉತ್ತರ ದಿಕ್ಕಿನಲ್ಲಿ ಇಡುವುದು ವಿಶೇಷವಾಗಿ ಪ್ರಯೋಜನಕಾರಿಯಾಗಿದೆ.
ಕಾಮಧೇನು ಹಸುವಿನ ಪ್ರತಿಮೆ : ಕಾಮಧೇನು ಹಸುವಿನ ಪ್ರತಿಮೆಯನ್ನು ಮನೆಯಲ್ಲಿ ಇಡುವುದರಿಂದ ಉತ್ತಮ ಆರೋಗ್ಯ ಮತ್ತು ಸಂಪತ್ತು ಆಶೀರ್ವಾದವನ್ನು ತರುತ್ತದೆ. ಉತ್ತಮ ಫಲಿತಾಂಶಗಳಿಗಾಗಿ ಈ ಪ್ರತಿಮೆಯನ್ನು ಮನೆಯ ಈಶಾನ್ಯ ದಿಕ್ಕಿನಲ್ಲಿ ಇರಿಸಿ.

ಗೂಬೆ ಪ್ರತಿಮೆ: ಇದು ಕೆಟ್ಟ ಕಣ್ಣು ಮತ್ತು ನಕಾರಾತ್ಮಕ ಶಕ್ತಿಗಳಿಂದ ರಕ್ಷಿಸುತ್ತದೆ. ಮನೆಯ ಮುಖ್ಯ ದ್ವಾರದಲ್ಲಿ ಗೂಬೆಯ ಪ್ರತಿಮೆಯನ್ನು ಇರಿಸುವುದು ನಕಾರಾತ್ಮಕ ಶಕ್ತಿಗಳನ್ನು ದೂರವಿಡಲು ಮತ್ತು ಮನೆಯವರ ಮೇಲೆ ಹೊರಗಿನವರ ಕೆಟ್ಟ ದೃಷ್ಟಿ ಬೀಳದಂತೆ ಮಾಡಲು ಸಹಾಯ ಮಾಡುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Sexual Assault: ಫೇಕ್‌ NCC ಕ್ಯಾಂಪ್‌ ಆಯೋಜಿಸಿ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ; ರಾಜಕಾರಣಿ ಸೇರಿ 8 ಮಂದಿ ಅರೆಸ್ಟ್‌

Sexual Assault: ನಕಲಿ ಎನ್‌ಸಿಸಿ ಕ್ಯಾಂಪ್‌ನಲ್ಲಿ 13 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ರಾಜಕೀಯ ಪಕ್ಷದ ಮುಖಂಡ ಸೇರಿದಂತೆ ಎಂಟು ಜನರನ್ನು ಅರೆಸ್ಟ್‌ ಮಾಡಲಾಗಿದೆ.

VISTARANEWS.COM


on

Sexual Assault
Koo

ಚೆನ್ನೈ: ಕೋಲ್ಕತ್ತಾ ಟ್ರೈನಿ ವೈದ್ಯೆ ಹತ್ಯೆ ಪ್ರಕರಣ(Kolkata Doctor Murder case) ಖಂಡಿಸಿ ರಾಷ್ಟ್ರವ್ಯಾಪಿ ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ ತಮಿಳುನಾಡಿ(Tamil Nadu)ನಲ್ಲಿ ಇಂತಹದ್ದೇ ಒಂದು ಬೆಚ್ಚಿ ಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ನಕಲಿ ಎನ್‌ಸಿಸಿ ಕ್ಯಾಂಪ್‌(NCC)ನಲ್ಲಿ 13 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ(Sexual Assault) ನಡೆದಿದೆ. ವಿಚಾರಣೆ ನಡೆಸಿದಾಗ ಇತರ ನಾಲ್ವರು ಬಾಲಕಿಯರಿಗೂ ಕಿರುಕುಳ ನೀಡಿರುವ ಬಗ್ಗೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ರಾಜಕೀಯ ಪಕ್ಷದ ಮುಖಂಡ ಸೇರಿದಂತೆ ಎಂಟು ಜನರನ್ನು ಅರೆಸ್ಟ್‌ ಮಾಡಲಾಗಿದೆ.

ಘಟನೆ ವಿವರ:

ಕೃಷ್ಣಗಿರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ರಾಜಕೀಯ ಪಕ್ಷವಾಗಿರುವ ನಾಮ್‌ ತಮಿಳರ್‌ ಕಚ್ಚಿಯ ಜಿಲ್ಲಾ ಕಾರ್ಯದರ್ಶಿ ಶಿವರಾಮನ್‌ ಖಾಸಗಿ ಶಾಲೆಯೊಂದಕ್ಕೆ ಭೇಟಿ ಕೊಟ್ಟು ಎನ್‌ಸಿಸಿ ಕ್ಯಾಂಪ್‌ ಆಯೋಜಿಸುವ ಬಗ್ಗೆ ಚರ್ಚೆ ನಡೆಸಿದ್ದಾನೆ. ಆತನೇ ಸ್ವಯಂ ಆಸಕ್ತಿಯಿಂದ ಎನ್‌ಸಿಸಿ ಕ್ಯಾಂಪ್‌ ಆಯೋಜಿಸಿದ್ದ. ಆತನ ಜೊತೆಗಿದ್ದ ತಂಡವನ್ನು ಮತ್ತು ಆತನ ಹಿನ್ನೆಲೆ ಬಗ್ಗೆ ಸರಿಯಾಗಿ ಪರಿಶೀಲನೆ ನಡೆಸದೇ ಶಾಲಾ ಪ್ರಾಂಶುಪಾಲರು ಇದಕ್ಕೆ ಒಪ್ಪಿದರು.

ಶಿಬಿರವು ಆಗಸ್ಟ್ 5 ರಿಂದ ಆಗಸ್ಟ್ 9 ರವರೆಗೆ ನಡೆದಿದ್ದು, 17 ಹುಡುಗಿಯರು ಸೇರಿದಂತೆ 41 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಿಬಿರದ ಸಮಯದಲ್ಲಿ, ಹುಡುಗರನ್ನು ನೆಲ ಮಹಡಿಯಲ್ಲಿ ಮತ್ತು ಹುಡುಗಿಯರನ್ನು ಮೇಲಿನ ಮಹಡಿಯಲ್ಲಿ ಇರಿಸಲಾಗಿತ್ತು. ಅಲ್ಲಿ ಮಿಲಿಟರಿ ತರಹದ ತರಬೇತಿ ನೀಡಲಾಗಿತ್ತು. ಅಲ್ಲದೇ ರಾತ್ರಿಯಲ್ಲಿ ನಾಲ್ಕು ಗಂಟೆಗಳ ಪಾಳಿಗಳವರೆಗೆ ಶಾಲೆಯ ಕಾಂಪೌಂಡ್ ಅನ್ನು ಕಾವಲು ಕಾಯಲು ವಿದ್ಯಾರ್ಥಿಗಳನ್ನು ಗುಂಪುಗಳಲ್ಲಿ ನಿಯೋಜಿಸಲಾಯಿತು. ಈ ರಾತ್ರಿ ಪಾಳಿಯಲ್ಲಿ ಶಿವರಾಮನ್ 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ತನಿಖೆಯ ಮೇಲ್ವಿಚಾರಣೆ ನಡೆಸುತ್ತಿರುವ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ಸಂತ್ರಸ್ತೆ ಶಾಲೆಯ ಪ್ರಾಂಶುಪಾಲರಾದ ಸತೀಶ್ ಕುಮಾರ್ ಅವರಿಗೆ ಈ ಹೀನ ಕೃತ್ಯದ ಬಗ್ಗೆ ದೂರು ನೀಡಿದ್ದಳು. ಆದರೆ ಕ್ರಮ ತೆಗೆದುಕೊಳ್ಳುವ ಬದಲು, ಪ್ರಾಂಶುಪಾಲರು, ಶಾಲೆಯ ಇಬ್ಬರು ಶಿಕ್ಷಕರೊಂದಿಗೆ ಸೇರಿ ಈ ಕೃತ್ಯವನ್ನು ಮುಚ್ಚಿಡಲು ನಿರ್ಧರಿಸಿದರು. ಹುಡುಗಿ ಅಂತಿಮವಾಗಿ ತನ್ನ ತಾಯಿಗೆ ತಿಳಿಸಿದಳು, ಆಕೆಯ ತಂದೆ ಶುಕ್ರವಾರ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರ ಪ್ರಕಾರ, ಲೈಂಗಿಕ ದೌರ್ಜನ್ಯಕ್ಕೊಳಗಾದ ಹುಡುಗಿಯನ್ನು ಹೊರತುಪಡಿಸಿ, ಕನಿಷ್ಠ ನಾಲ್ವರು ವಿದ್ಯಾರ್ಥಿನಿಯರಿಗೆ ಶಿವರಾಮನ್ ಮತ್ತು ಅವರ ಸಹಚರರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಶಿವರಾಮನ್ ಮತ್ತು ಆತನ ಸಹಚರರು ಕೃಷ್ಣಗಿರಿಯ ಇತರ ಮೂರು ಶಾಲೆಗಳಲ್ಲಿ ಇದೇ ರೀತಿಯ ಅನಧಿಕೃತ ಎನ್‌ಸಿಸಿ ಕ್ಯಾಂಪ್‌ ನಡೆಸಿದೆ ಎನ್ನಲಾಗಿದೆ. ಅವರು ಈ ಹಿಂದಿನ ಅವಧಿಗಳ ಫೋಟೋಗಳು ಮತ್ತು ವೀಡಿಯೊಗಳನ್ನು ತೋರಿಸುವ ಮೂಲಕ ಪ್ರಸ್ತುತ ಶಾಲೆಯ ಆಡಳಿತವನ್ನು ಮನವೊಲಿಸಿದರು.

ಇದನ್ನೂ ಓದಿ: Uttarakhand Horror: ದೇಶವನ್ನೇ ಬೆಚ್ಚಿಬೀಳಿಸೋ ಮತ್ತೊಂದು ಘಟನೆ! ಬಸ್‌ನಲ್ಲೇ ಯುವತಿ ಮೇಲೆ ಡ್ರೈವರ್‌ ಸೇರಿ ಐವರಿಂದ ಗ್ಯಾಂಗ್‌ರೇಪ್‌

Continue Reading

ಪ್ರಮುಖ ಸುದ್ದಿ

Bengaluru Rape Attempt Case : ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಯತ್ನ ಪ್ರಕರಣಕ್ಕೆ ಹೊಸ ತಿರುವು, ಸಂತ್ರಸ್ತೆಯ ವಿರುದ್ಧವೇ ಕೇಸ್‌ ದಾಖಲು!

Bengaluru Rape Attempt case : ದಾರಿ ಮಧ್ಯೆ ವೇಳೆ ಯುವತಿಯ ಮೇಲೆ ಅತ್ಯಾಚಾರದ ಯತ್ನ ನಡೆದಿದೆ. ಇದೀಗ ಯುವತಿ ಹಾಗೂ ಆಕೆಯ ಸ್ನೇಹಿತ ಇಬ್ಬರ ವಿರುದ್ಧ ಆಡುಗೋಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜಾಗರೂಕತೆ ಮತ್ತು ಅತಿಯಾದ ವೇ ಗ ಮತ್ತು ಮದ್ಯಪಾನ ಮಾಡಿ ಚಾಲನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಆಟೋ ಚಾಲಕ ಅಜಾಜ್ ಎಂಬುವರು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.

VISTARANEWS.COM


on

Koo

ಬೆಂಗಳೂರು: ಮಹಾನಗರದಲ್ಲಿ ಎರಡು ದಿನಗಳ ಹಿಂದೆ ಸಂಚಲನ ಮೂಡಿಸಿದ್ದ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಯತ್ನ ಪ್ರಕರಣಕ್ಕೆ (Bengaluru Rape Attempt case) ಹೊಸ ತಿರುವು ಸಿಕ್ಕಿದ್ದು, ಸಂತ್ರಸ್ತೆಯ ವಿರುದ್ದವೇ ದೂರೊಂದು ದಾಖಲಾಗಿದೆ. ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಆಕೆಯಿಂದ ಪೊಲೀಸರು ಮುಂದಿನ ದಿನಗಳಲ್ಲಿ ಈ ಬಗ್ಗೆ ಹೇಳಿಕೆ ಪಡೆದುಕೊಳ್ಳಲಿದ್ದಾರೆ.

ಎಚ್‌ಎಸ್‌ಆರ್‌ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಇದಾಗಿದೆ. ಪಾನಮತ್ತಳಾಗಿದ್ದ ಯುವತಿ ತನ್ನ ಆಟೋಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾಳೆ ಎಂಬುದಾಗಿ ಆಟೋ ಡ್ರೈವರ್ ದೂರು ನೀಡಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಯ ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

ಪಬ್‌ನಲ್ಲಿ ಪಾರ್ಟಿ ಮಾಡಿದ್ದ ಯುವತಿ ಅಪರಿಚಿತ ವ್ಯಕ್ತಿಯ ಬೈಕ್‌ನಲ್ಲಿ ತೆರಳುವ ಮುನ್ನ ಈ ಘಟನೆ ನಡೆದಿದೆ. ಅಂದು ರಾತ್ರಿ ಕೊರಮಂಗಲಕ್ಕೆ ಗೆಳೆಯನ ಜೊತೆ ಬಂದಿದ್ದ ಸಂತ್ರಸ್ತೆ ಊಟ ಮುಗಿಸಿಕೊಂಡು ಗೆಳೆಯನ ಜೊತೆ ಕಾರ್ ವಾಪಸಾಗುತ್ತಿದ್ದಳು. ಈ ವೇಳೆ ತಾನೇ ಕಾರು ಚಾಲನೆ ಮಾಡಿಕೊಂಡು ಹೋಗ್ತಿದ್ದಳು. ಟಾನಿಕ್ ಬಳಿಯ ಮಂಗಳ ಜಂಕ್ಷನ್ ಬಳಿ ಆಕೆ ಚಾಲನೆ ಮಾಡುತ್ತಿದ್ದ ಕಾರು ಸರಣಿ ಅಫಘಾತಕ್ಕೆ ಒಳಗಾಗಿದೆ. ಮೂರು ವಾಹನಗಳಿಗೆ ಕಾರು ಡಿಕ್ಕಿ ಹೊಡೆದಿದೆ. ಎರಡು ಆಟೋ ಹಾಗೂ ಒಂದು ಬೈಕ್ ಗೆ ಡಿಕ್ಕಿ ಹೊಡೆದು ಫೋರಂ ಮಾಲ್ ಕಡೆ ಆಕೆ ಸಾಗಿದ್ದಳು. ಆ ಬಗ್ಗೆ ಇದೀಗ ಪ್ರಕರಣ ದಾಖಲಾಗಿದೆ. ಅಜಾಗರೂಕತೆ ಮತ್ತು ಅತಿ ವೇಗದ ಚಾಲನೆ ಮಾಡಿದ್ದ ಆರೋಪದಲ್ಲಿ ಕೇಸ್ ದಾಖಲಾಗಿದೆ.

ಕಾರನ್ನು ಹಾನಿಗೊಳಲಾದ ಆಟೊ ಚಾಲಕರು ಬೆನ್ನಟ್ಟಿ ಪ್ರಶ್ನಿಸಿದ್ದರು. ಅವರು ಅಡ್ಡಗಟ್ಟುತ್ತಿದ್ದಂತೆ ಕಾರನ್ನು ಬಿಟ್ಟು ಆಕೆ ಅಲ್ಲಿಂದ ತೆರಳಿದ್ದಲು. ಆಕೆಯ ಸ್ನೇಹಿತ ಚಾಲಕರ ಜೊತೆ ವಾದ ಮಾಡುವಾಗ ಅಲ್ಲಿಂದ ಯುವತಿ ಪರಾರಿಯಾಗಿದ್ದಳು. ಪಬ್‌ನಲ್ಲಿ ಮರೆತು ಬಂದಿದ್ದು ಅದನ್ನು ತರಲು ಹೋಗಿದ್ದಳು ಎನ್ನಲಾಗಿದೆ. ಅಷ್ಟರಲ್ಲಿ ಆಕೆಯ ಸ್ನೇಹಿತ ಕಾರು ಬಿಟ್ಟು ಹುಡುಕಲು ಹೊರಟಿದ್ದ. ಈ ವೇಳೆ ಇಬ್ಬರೂ ಒಬ್ಬರಿಗೊಬ್ಬರು ತಪ್ಪಿಸಿಕೊಂಡಿದ್ದಾರೆ. ಬಳಿಕ ಯುವತಿ ಅಪರಿಚಿತ ವ್ಯಕ್ತಿ ಬಳಿ ಡ್ರಾಪ್ ಕೇಳಿದ್ದಳು.

ದಾರಿ ಮಧ್ಯೆ ವೇಳೆ ಯುವತಿಯ ಮೇಲೆ ಅತ್ಯಾಚಾರದ ಯತ್ನ ನಡೆದಿದೆ. ಇದೀಗ ಯುವತಿ ಹಾಗೂ ಆಕೆಯ ಸ್ನೇಹಿತ ಇಬ್ಬರ ವಿರುದ್ಧ ಆಡುಗೋಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜಾಗರೂಕತೆ ಮತ್ತು ಅತಿಯಾದ ವೇ ಗ ಮತ್ತು ಮದ್ಯಪಾನ ಮಾಡಿ ಚಾಲನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಆಟೋ ಚಾಲಕ ಅಜಾಜ್ ಎಂಬುವರು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Student Death : ಮೈಸೂರಿನ ಕಾಲೇಜಿನ ಹಾಸ್ಟೆಲ್‌‌ನಲ್ಲಿ 17 ವರ್ಷದ ವಿದ್ಯಾರ್ಥಿನಿ ಅನಾರೋಗ್ಯದಿಂದ ಸಾವು

ಅತ್ಯಾಚಾರ ಯತ್ನ ನಡೆದಿದೆ ಎಂದು ಹೇಳಿರುವ ಯುವತಿ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿತಿದ್ದಾಳೆ. ಸಂತ್ರಸ್ತೆ ಚೇತರಿಕೆಯಾದ ಬಳಿಕ ಕೇಸ್ ಸಂಬಂಧ ವಿಚಾರಣೆ ನಡೆಯಲಿದೆ.

ಯುವತಿ ಪ್ರಾಣ ಉಳಿಸಿದ SOS ಬಟನ್

ಎಚ್ಎಸ್‌ಆರ್ ಲೇಔಟ್ ಯುವತಿ ಅತ್ಯಾಚಾರ ಪ್ರಕರಣದಲ್ಲಿ SOS ಬಟನ್ ಯುವತಿ ಪ್ರಾಣ ಉಳಿಸಿದೆ ಎಂಬ ವಿಷಯ ತಿಳಿದುಬಂದಿದೆ. ಮೊಬೈಲ್‌ನಲ್ಲಿ ಸ್ವಿಚ್ ಆಫ್ ಬಟನ್ ಪ್ರೆಸ್ ಮಾಡಿದಾಗ SOS ಆಪ್ಷನ್ ಕಾಣಲಿದೆ. ಅದಕ್ಕೆ ಎಮೆರ್ಜೆನ್ಸಿ ನಂಬರ್ ಆ್ಯಡ್ ಮಾಡಬಹುದು. ಅದನ್ನು ಪ್ರೆಸ್ ಮಾಡಿದಾಗ ಆ್ಯಡ್ ಮಾಡಿದ ನಂಬರ್‌ಗೆ ನಿರಂತರ ಕರೆ ಹಾಗೂ ಲೊಕೆಶನ್ ಶೇರ್ ಆಗುತ್ತೆ.

ಹೀಗಾಗಿ SOS ನಲ್ಲಿ ತಂದೆ ಹಾಗೂ ಸ್ನೇಹಿತೆ ನಂಬರ್ ಅನ್ನು ಆ್ಯಡ್ ಸಂತ್ರಸ್ತ ಯುವತಿ ಮಾಡಿದ್ದಳು. ಹೀಗಾಗಿ ತಕ್ಷಣ ಸ್ನೇಹಿತರಿಗೆ ಕರೆ ಹೋಗಿದೆ. ಲೊಕೇಶನ್ ಆಧರಿಸಿ ಬಂದು ಸ್ನೇಹಿತರು ಯುವತಿಯ ರಕ್ಷಣೆ ಮಾಡಿದ್ದಾರೆ. ಅರೆನಗ್ನ ಸ್ಥಿತಿಯಲ್ಲೇ ಯುವತಿಯನ್ನು ಆರೋಪಿ ಬಿಟ್ಟು ತೆರಳಿದ್ದ. ದೌರ್ಜನ್ಯ ಎಸಗಿದಾಗ ಯುವತಿ ಕೂಡ ಪ್ರತಿರೋಧ ಒಡ್ಡಿದ್ದಳು. ಇದರಿಂದ‌ ಆರೋಪಿ ಹೆದರಿ ಯುವತಿಯನ್ನು ಬಿಟ್ಟು ಪರಾರಿಯಾಗಿದ್ದ. ಸದ್ಯ ಹೆಬ್ಬಗೋಡಿ ಖಾಸಗಿ ಆಸ್ಪತ್ರೆಯಲ್ಲಿ ಯುವತಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಡ್ರಾಪ್‌ ಕೊಡುವ ನೆಪದಲ್ಲಿ ಅತ್ಯಾಚಾರ

ಘಟನೆ ಕುರಿತು ಹೆಚ್ಚುವರಿ ಪೊಲೀಸ್ ಆಯುಕ್ತ ರಮನ್ ಗುಪ್ತಾ ಮಾಹಿತಿ ನೀಡಿದ್ದಾರೆ. ಶನಿವಾರ ಮಧ್ಯರಾತ್ರಿ 1:30ರ ಸಂಧರ್ಭದಲ್ಲಿ ಈ ಘಟನೆ ನಡೆದಿದೆ. ಅಪರಿಚಿತನ ಜತೆಗೆ ಯುವತಿ ಡ್ರಾಪ್ ತೆಗೆದುಕೊಂಡಿದ್ದಾಳೆ. ಇದೇ ಅವಕಾಶವನ್ನು ಬಳಸಿಕೊಂಡ ಆರೋಪಿ ಅತ್ಯಾಚಾರವೆಸಗಿದ್ದಾನೆ. ಇದು ಗೆಟ್ ಟು ಗೆದರ್‌ ಪಾರ್ಟಿ ಮುಗಿಸಿ ಅಲ್ಲಿಂದ ವಾಪಾಸ್ ಬರುವಾಗ ಘಟನೆ ನಡೆದಿದೆ. ಇದು ಗ್ಯಾಂಗ್ ರೇಪ್ ಅಲ್ಲ, ಡ್ರಾಪ್‌ ತೆಗೆದುಕೊಂಡವನಿಂದ ಈ ಕೃ

Continue Reading

ಪ್ರಮುಖ ಸುದ್ದಿ

Student Death : ಮೈಸೂರಿನ ಕಾಲೇಜಿನ ಹಾಸ್ಟೆಲ್‌‌ನಲ್ಲಿ 17 ವರ್ಷದ ವಿದ್ಯಾರ್ಥಿನಿ ಅನಾರೋಗ್ಯದಿಂದ ಸಾವು

Student Death : ಮೈಸೂರಿನ ಹೂಟಗಳ್ಳಿಯಲ್ಲಿರುವ ಕಾಲೇಜಿನ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತಿದ್ದ ಜಯಪ್ರಾರ್ಥನಾ ಮೂಲತಃ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನವರಾಗಿದ್ದಾರೆ. ಭಾನುವಾರ ಊಟದ ನಂತರ ಜಯಪ್ರಾರ್ಥನಾ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ವಿಚಾರ ತಿಳಿದು ಖಾಸಗಿ ಆಸ್ಪತ್ರೆಯಲ್ಲಿ ಆಡಳಿತ ಮಂಡಳಿ ಚಿಕಿತ್ಸೆ ಕೊಡಿಸಿತ್ತು. ಆದರೆ ಅನಾರೋಗ್ಯದ ವಿಚಾರವನ್ನು ಪೋಷಕರ ಗಮನಕ್ಕೆ ತರದೇ ನಿರ್ಲಕ್ಷ್ಯ ತೋರಿತ್ತು.

VISTARANEWS.COM


on

Student Death
Koo

ಮೈಸೂರು: ಮೈಸೂರಿನ ಕಾಲೇಜಿನ ಹಾಸ್ಟೆಲ್‌ವೊಂದರಲ್ಲಿ ವಾಸವಿದ್ದು ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅನಾರೋಗ್ಯದಿಂದ ಮೃತಪಟ್ಟಿದ್ದಾಳೆ. ದಕ್ಷ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತಿದ್ದ ಜಯಪ್ರಾರ್ಥನಾ (17) ಮೃತಪಟ್ಟ ವಿದ್ಯಾರ್ಥಿನಿ. ಪೋಷಕರಿಗೆ ಘಟನೆಯ ಬಗ್ಗೆ ಕಾಲೇಜು ಆಡಳಿತ ಮಂಡಳಿ ಮಾಹಿತಿ ನೀಡಿದೆ. ವಿದ್ಯಾರ್ಥಿನಿಯ ಸಾವಿಗೆ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ. ಏಕಾಏಕಿ ಅನಾರೋಗ್ಯ ಉಂಟಾಗಿದ್ದ ಕಾರಣ ಮೃತಪಟ್ಟಿದ್ದಾಳೆ ಎಂದು ಹೇಳಲಾಗಿದೆ.

ಮೈಸೂರಿನ ಹೂಟಗಳ್ಳಿಯಲ್ಲಿರುವ ಕಾಲೇಜಿನ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತಿದ್ದ ಜಯಪ್ರಾರ್ಥನಾ ಮೂಲತಃ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನವರಾಗಿದ್ದಾರೆ. ಭಾನುವಾರ ಊಟದ ನಂತರ ಜಯಪ್ರಾರ್ಥನಾ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ವಿಚಾರ ತಿಳಿದು ಖಾಸಗಿ ಆಸ್ಪತ್ರೆಯಲ್ಲಿ ಆಡಳಿತ ಮಂಡಳಿ ಚಿಕಿತ್ಸೆ ಕೊಡಿಸಿತ್ತು. ಆದರೆ ಅನಾರೋಗ್ಯದ ವಿಚಾರವನ್ನು ಪೋಷಕರ ಗಮನಕ್ಕೆ ತರದೇ ನಿರ್ಲಕ್ಷ್ಯ ತೋರಿತ್ತು.

ಸೋಮವಾರ ಬೆಳಗ್ಗೆ ಜಯಪ್ರಾರ್ಥನಾಳ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿತ್ತು. ಆ ಸಮಯದಲ್ಲಿ ವಿಷಯವನ್ನು ಪೊಷಕರಿಗೆ ತಿಳಿಸಿದ್ದಾರೆ. ಆದರೆ, ಪೋಷಕರು ಆಸ್ಪತ್ರೆಗೆ ಬರುವ ಮುನ್ನವೇ ಜಯಪ್ರಾರ್ಥನಾ ಮೃತಪಟ್ಟಿದ್ದಾಳೆ. ಮಗಳ ಸಾವಿಗೆ ಕಾಲೇಜು ಆಡಳಿತ ಮಂಡಳಿಯ ಕಾರಣ ಎಂದು ಪೋಷಕರ ಆರೋಪ ಮಾಡಿದ್ದಾರೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Murder Case : ಬೈಕ್‌ನಲ್ಲಿ ಸಾಗುತ್ತಿದ್ದ ವ್ಯಕ್ತಿಯನ್ನು ನಡು ರಸ್ತೆಯಲ್ಲೇ ಕೊಚ್ಚಿ ಕೊಲೆ

ಬೆಳಗಾವಿ: ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ (Murder Case) ಘಟನೆ ಬೆಳಗಾವಿ ತಾಲೂಕಿನ ಕರ್ಲೆ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಕರ್ಲೆ ಗ್ರಾಮದ ಮೋಹನ ತಳವಾರ( 52) ಹತ್ಯೆಯಾದ ವ್ಯಕ್ತಿಯಾಗಿದ್ದು, ಕೆಲಸದ ನಿಮಿತ್ತವಾಗಿ ಕಿಣೆಯೆ ಗ್ರಾಮ ಪಂಚಾಯತ್ ಗೆ ಹೋಗಿದ್ದ ವೇಳೆ ದುಷ್ಕರ್ಮಿಗಳು ದಾಳಿ ಮಾಡಿ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: Electricity Theft : ಸರ್ಕಾರ ಫ್ರೀ ಕೊಡುತ್ತಿದ್ದರೂ ಮತ್ತಷ್ಟು ಕರೆಂಟ್‌ ಕದ್ದು ಸಿಕ್ಕಿಬಿದ್ದ ಕಾಂಗ್ರೆಸ್‌ ನಾಯಕಿ!

ಮೋಹನ್ ಅವರು ಕೆಲಸ ಮುಗಿಸಿಕೊಂಡು ಮರಳಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ, ಬೈಕ್ ಅಡ್ಡಗಟ್ಟಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದರು. ಮನಬಂದಂತೆ ಮಾರಕಾಸ್ತ್ರಗಳಿಂದ ಮೋಹನ ಮೇಲೆ ದಾಳಿ ನಡೆಸಿ ದುಷ್ಕರ್ಮಿಗಳ ಪರಾರಿಯಾಗಿದ್ದರು. ರಕ್ತದಲ್ಲಿ ಮಡುವಿನಲ್ಲಿ ಬಿದ್ದಿದ್ದ ಮೋಹನ್ ಅವರನ್ನು ಬೀಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಬೀಮ್ಸ್ ಆಸ್ಪತ್ರೆಯ ಶವಗಾರಕಕ್ಕೆ ಮೃತದೇಹ ರವಾನೆ ಮಾಡಲಾಗಿದೆ.

ಮೋಹನ್ ಅವರ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ‌. ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್, ಗ್ರಾಮೀಣ ಪೊಲೀಸರು ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಪ್ರಮುಖ ಸುದ್ದಿ

Electricity Theft : ಸರ್ಕಾರ ಫ್ರೀ ಕೊಡುತ್ತಿದ್ದರೂ ಮತ್ತಷ್ಟು ಕರೆಂಟ್‌ ಕದ್ದು ಸಿಕ್ಕಿಬಿದ್ದ ಕಾಂಗ್ರೆಸ್‌ ನಾಯಕಿ!

Electricity theft : ಕಾಂಗ್ರೆಸ್ ಮಹಿಳಾ ಮೋರ್ಚಾದ ಅಧ್ಯಕ್ಷೆ ಆಶಾ ನಾರಾಯಣ್ ಅವರು ವಂಚನೆ ಮಾಡಿರುವುದನ್ನು ಮೆಸ್ಕಾಂ ಅಧಿಕಾರಿಗಳು ಪತ್ತೆ ಹಚ್ಚಿ ದಂಡ ವಿಧಿಸಿದ್ದಾರೆ. ಎನ್‌‌ಆರ್ ಪುರ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿರುವ ಅವರು ಕಡಬಗೆರೆಯಲ್ಲಿ ಮೂರು ಮನೆಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದರು. ಅಂತೆಯೇ ಮನೆಯ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

VISTARANEWS.COM


on

Electricity theft
Koo

ಚಿಕ್ಕಮಗಳೂರು : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ 200 ಯೂನಿಟ್‌ಗಳ ತನಕ ಫ್ರೀ ಕರೆಂಟ್ ನೀಡುತ್ತಿದ್ದರೂ ಅಕ್ರಮವಾಗಿ ಕರೆಂಟ್‌‌ ಸಂಪರ್ಕ ಪಡೆದುಕೊಂಡ (Electricity theft) ಕಾಂಗ್ರೆಸ್‌ ನಾಯಕಿಯೊಬ್ಬರು ಸಿಕ್ಕಿ ಬಿದ್ದು ಲಕ್ಷಾಂತರ ರೂಪಾಯಿ ದಂಡ ಹಾಕಿಸಿಕೊಂಡಿದ್ದಾರೆ. ಇಲ್ಲಿನ ಗ್ರಾಮ ಪಂಚಾಯಿತಿ ಸದಸ್ಯರು ಕರೆಂಟ್ ಕದ್ದ ಕಾಂಗ್ರೆಸ್‌ ಮುಖಂಡೆ.

ಕಾಂಗ್ರೆಸ್ ಮಹಿಳಾ ಮೋರ್ಚಾದ ಅಧ್ಯಕ್ಷೆ ಆಶಾ ನಾರಾಯಣ್ ಅವರು ವಂಚನೆ ಮಾಡಿರುವುದನ್ನು ಮೆಸ್ಕಾಂ ಅಧಿಕಾರಿಗಳು ಪತ್ತೆ ಹಚ್ಚಿ ದಂಡ ವಿಧಿಸಿದ್ದಾರೆ. ಎನ್‌‌ಆರ್ ಪುರ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿರುವ ಅವರು ಕಡಬಗೆರೆಯಲ್ಲಿ ಮೂರು ಮನೆಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದರು. ಅಂತೆಯೇ ಮನೆಯ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

ಕರೆಂಟ್‌ ಕಳ್ಳತನ ವಿಷಯ ತಿಳಿದು ನಡೆಸಿದ ಮೆಸ್ಕಾಂ ಅಧಿಕಾರಿಗಳು ದಿಢೀರನೆ ದಾಳಿ ಮಾಡಿದ್ದಾರೆ. ಮಂಗಳೂರಿನಿಂದ ಆಗಮಿಸಿ ಮೆಸ್ಕಾಂ ಅಧಿಕಾರಿಗಳು ದಾಳಿ ಮಾಡಿ 1 ಲಕ್ಷಕ್ಕೂ ಹೆಚ್ಚು ದಂಡ ವಿಧಿಸಿದ್ದಾರೆ. ಪ್ರಭಾವಿ ಎನ್ನುವ ಕಾರಣಕ್ಕೆ ಸ್ಥಳೀಯ ಅಧಿಕಾರಿಗಳು ಸುಮ್ಮನಾಗಿದ್ದರು. ಹೀಗಾಗಿ ಮಂಗಳೂರಿನಿಂದಲೇ ಅಧಿಕಾರಿಗಳು ಬಂದು ದಾಳಿ ಮಾಡಿದ್ದಾರೆ. ಅಕ್ರಮ ಗೊತ್ತಿದ್ದರೂ ಚಿಕ್ಕಮಗಳೂರು ಮೆಸ್ಕಾಂ ಅಧಿಕಾರಿಗಳು ಸುಮ್ಮನೆ ಇದ್ದರು ಎಂಬ ಆರೋಪವಿದೆ. ಇದೀಗ ಮಂಗಳೂರು ಅಧಿಕಾರಿಗಳು ವಂಚನೆ ಬೆಳಕಿಗೆ ತಂದಿದ್ದಾರೆ.

ಕಳ್ಳರಿಂದ ಸೀಜ್‌ ಮಾಡಿದ ₹72 ಲಕ್ಷ ಗುಳುಂ ಮಾಡಿ ಇನ್‌ಸ್ಪೆಕ್ಟರ್‌ ನಾಪತ್ತೆ!

ಬೆಂಗಳೂರು: ಕಳ್ಳತನ ಪ್ರಕರಣದಲ್ಲಿ (Theft Case) ಮುಟ್ಟುಗೋಲು (Seize) ಹಾಕಿಕೊಂಡಿದ್ದ ಹಣವನ್ನು ದುರ್ಬಳಕೆ (misuse) ಮಾಡಿದ ಆರೋಪ ಹೊತ್ತಿರುವ ಪೊಲೀಸ್‌ ಇನ್‌ಸ್ಪೆಕ್ಟರ್‌ ನಾಪತ್ತೆ (Police inspector abscond) ಯಾಗಿದ್ದು, ಸಿಸಿಬಿ ಪೊಲೀಸರಿಂದ (CCB police) ಶೋಧ ನಡೆಯುತ್ತಿದೆ. ಬಿಡದಿ ಠಾಣೆಯಿಂದ ಪರಾರಿಯಾಗಿರುವ ಇನ್‌ಸ್ಪೆಕ್ಟರ್‌ ಶಂಕರ್ ನಾಯ್ಕ್ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದು, ಹತ್ತು ದಿನಗಳಿಂದ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದಾರೆ.

ಇದನ್ನೂ ಓದಿ: Murder Case : ಬೈಕ್‌ನಲ್ಲಿ ಸಾಗುತ್ತಿದ್ದ ವ್ಯಕ್ತಿಯನ್ನು ನಡು ರಸ್ತೆಯಲ್ಲೇ ಕೊಚ್ಚಿ ಕೊಲೆ

ಕರ್ತವ್ಯದ ವೇಳೆ ಕಳ್ಳತನ ಪ್ರಕರಣವೊಂದರಲ್ಲಿ ಶಂಕರ್ ನಾಯ್ಕ್ ₹72 ಲಕ್ಷ ಜಪ್ತಿ ಮಾಡಿದ್ದರು. ಈ ಹಣವನ್ನು ಸರ್ಕಾರದ ಖಜಾನೆ ಅಥವಾ ಠಾಣೆಯ ಸುಪರ್ದಿಗೆ ಕೊಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪವಿದೆ. ಈ ಸಂಬಂಧ ಬ್ಯಾಟರಾಯನಪುರ ಠಾಣೆಯಲ್ಲಿ ಶಂಕರ್ ಹಾಗೂ ಮಧ್ಯವರ್ತಿ ಲೋಕನಾಥ್ ವಿರುದ್ಧ ಕೇಸ್ ದಾಖಲಾಗಿತ್ತು. ಎಸಿಪಿ ಭರತ್ ರೆಡ್ಡಿ ದೂರು ಆಧರಿಸಿ FIR ದಾಖಲಾಗಿತ್ತು.

2023ರ ನವೆಂಬರ್‌ನಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ನಂತರ ಪ್ರಕರಣದ ತನಿಖೆಯನ್ನು ಕಮಿಷನರ್ ಸಿಸಿಬಿಗೆ ವಹಿಸಿಸಲಾಗಿತ್ತು. ಪ್ರಕರಣ ರದ್ದು ಕೋರಿ ಶಂಕರ್‌ ನಾಯ್ಕ್‌ ಹೈಕೋರ್ಟ್ ಮೆಟ್ಟಲೇರಿದ್ದರು. ಪ್ರಕರಣದ ತನಿಖೆಗೆ ಹೈಕೋರ್ಟ್‌ ತಡೆ ನೀಡಿತ್ತು. ಆದರೆ ತಡೆಯಾಜ್ಞೆ ತೆರವುಗೊಳಿಸುವಂತೆ ಸಿಸಿಬಿ ಮೇಲ್ಮನವಿ ಸಲ್ಲಿಸಿತ್ತು. ಈ ಹಿನ್ನೆಲೆಯನ್ನು ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ತಡೆಯಾಜ್ಞೆ ತೆರವುಗೊಳಿಸುತ್ತಿದ್ದಂತೆ ಇನ್‌ಸ್ಪೆಕ್ಟರ್ ಶಂಕರ್ ನಾಯಕ್ ನಾಪತ್ತೆಯಾಗಿದ್ದಾರೆ.

Continue Reading
Advertisement
Sexual Assault
ದೇಶ10 mins ago

Sexual Assault: ಫೇಕ್‌ NCC ಕ್ಯಾಂಪ್‌ ಆಯೋಜಿಸಿ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ; ರಾಜಕಾರಣಿ ಸೇರಿ 8 ಮಂದಿ ಅರೆಸ್ಟ್‌

Rayara Aradhane 2024
ಧಾರ್ಮಿಕ22 mins ago

Rayara Aradhane 2024 : ಏಕಾಏಕಿ ಸುರಿದ ಮಳೆ; ಭಕ್ತರಿಗೆ ಮಠದ ಪ್ರಾಕಾರದಲ್ಲಿ ಮಲಗಲು ವ್ಯವಸ್ಥೆ ಮಾಡಿಕೊಟ್ಟ ಮಂತ್ರಾಲಯ ಶ್ರೀಗಳು

ಪ್ರಮುಖ ಸುದ್ದಿ49 mins ago

Bengaluru Rape Attempt Case : ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಯತ್ನ ಪ್ರಕರಣಕ್ಕೆ ಹೊಸ ತಿರುವು, ಸಂತ್ರಸ್ತೆಯ ವಿರುದ್ಧವೇ ಕೇಸ್‌ ದಾಖಲು!

Student Death
ಪ್ರಮುಖ ಸುದ್ದಿ1 hour ago

Student Death : ಮೈಸೂರಿನ ಕಾಲೇಜಿನ ಹಾಸ್ಟೆಲ್‌‌ನಲ್ಲಿ 17 ವರ್ಷದ ವಿದ್ಯಾರ್ಥಿನಿ ಅನಾರೋಗ್ಯದಿಂದ ಸಾವು

Electricity theft
ಪ್ರಮುಖ ಸುದ್ದಿ2 hours ago

Electricity Theft : ಸರ್ಕಾರ ಫ್ರೀ ಕೊಡುತ್ತಿದ್ದರೂ ಮತ್ತಷ್ಟು ಕರೆಂಟ್‌ ಕದ್ದು ಸಿಕ್ಕಿಬಿದ್ದ ಕಾಂಗ್ರೆಸ್‌ ನಾಯಕಿ!

Earthquake
ದೇಶ2 hours ago

Earthquake: ಜಮ್ಮು-ಕಾಶ್ಮೀರದಲ್ಲಿ ಬೆಳ್ಳಂಬೆಳಗ್ಗೆ ಬ್ಯಾಕ್‌ ಟು ಬ್ಯಾಕ್‌ ಭೂಕಂಪ

Hyderabad Tour
ಪ್ರವಾಸ2 hours ago

Hyderabad Tour: ಹೈದರಾಬಾದ್‌ನ ಈ 10 ಅದ್ಭುತ ತಾಣಗಳು ಫೋಟೋಶೂಟ್‌ಗೆ ಹೇಳಿಮಾಡಿಸಿದಂತಿವೆ!

Murder case
ಕ್ರೈಂ2 hours ago

Murder Case : ಬೈಕ್‌ನಲ್ಲಿ ಸಾಗುತ್ತಿದ್ದ ವ್ಯಕ್ತಿಯನ್ನು ನಡು ರಸ್ತೆಯಲ್ಲೇ ಕೊಚ್ಚಿ ಕೊಲೆ

Kolkata Doctor murder case
ದೇಶ2 hours ago

Kolkata Doctor murder case: ಕೋಲ್ಕತ್ತಾ ಟ್ರೈನಿ ವೈದ್ಯೆಯ ಕೊಲೆ ಪ್ರಕರಣ- ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

Tungabhadra dam
ಪ್ರಮುಖ ಸುದ್ದಿ2 hours ago

Tungabhadra Dam : ತುಂಗಭದ್ರಾ ಜಲಾಶಯದ ಬಳಿ ವಿಧಿಸಿದ್ದ ಸೆಕ್ಷನ್‌ 144 ವಾಪಸ್‌‌

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌