ರಾಜಮಾರ್ಗ ಅಂಕಣ: ಭಾರತೀಯ ಸೋದರತೆಯ ಮಹಾ ಪರ್ವ - ರಕ್ಷಾ ಬಂಧನ - Vistara News

ಪ್ರಮುಖ ಸುದ್ದಿ

ರಾಜಮಾರ್ಗ ಅಂಕಣ: ಭಾರತೀಯ ಸೋದರತೆಯ ಮಹಾ ಪರ್ವ – ರಕ್ಷಾ ಬಂಧನ

ರಾಜಮಾರ್ಗ ಅಂಕಣ: ಹಲವು ನೂಲಿನ ದಾರಗಳನ್ನು ಒಂದೇ ಗಟ್ಟಿ ದಾರದ ಮೂಲಕ ಬಂಧಿಸುವುದೇ ರಕ್ಷೆ. ಅಂದರೆ ಜಾತಿ, ವರ್ಣಬೇಧಗಳನ್ನು ಮೆಟ್ಟಿ ನಿಂತು ಇಡೀ ಹಿಂದೂಸಮಾಜವು ಒಗ್ಗಟ್ಟಾಗಿ ನಿಲ್ಲಬೇಕು ಎನ್ನುವುದು ಈ ರಕ್ಷಾಬಂಧನ ಹಬ್ಬದ ಅಲ್ಟಿಮೇಟ್ ಸಂದೇಶ.

VISTARANEWS.COM


on

raksha bandhan 2024 ರಾಜಮಾರ್ಗ ಅಂಕಣ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅದರ ಪೌರಾಣಿಕ, ಐತಿಹಾಸಿಕ ಮತ್ತು ಸಾಮಾಜಿಕ ಆಯಾಮ

:: ರಾಜೇಂದ್ರ ಭಟ್ ಕೆ.

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ನಾಡಿನ ಸಮಸ್ತ ಸೋದರ, ಸೋದರಿಯವರಿಗೆ ರಕ್ಷಾಬಂಧನ (Raksha bandhan) ಹಬ್ಬದ ಶುಭಾಶಯಗಳು. ಶ್ರಾವಣ ಪೌರ್ಣಮಿಯ ಈ ದಿನ ಪ್ರತಿಯೊಬ್ಬ ಸೋದರಿಯೂ ತನ್ನ ಸೋದರನಿಗೆ ರಕ್ಷೆ ಕಟ್ಟಿ ತನ್ನ ಮಾನ, ಪ್ರಾಣ ಮತ್ತು ಸ್ವಾಭಿಮಾನದ ರಕ್ಷಣೆ ಮಾಡು ಅಣ್ಣಾ ಎಂದು ವಿನಂತಿಸುವ ಹಬ್ಬವೇ ರಕ್ಷಾಬಂಧನ (Rakhi Festival 2024). ಅದನ್ನು ನಿಭಾಯಿಸಬೇಕಾದದ್ದು ಪ್ರತಿಯೊಬ್ಬ ಅಣ್ಣನ ಕರ್ತವ್ಯ.

ನಾವು ಆಚರಿಸುವ ಫಾದರ್ಸ್ ಡೇ, ಮದರ್ಸ್ ಡೇ, ಲವರ್ಸ್ ಡೇ ಇವೆಲ್ಲವೂ ಪಾಶ್ಚಾತ್ಯ ಅನುಕರಣೆಯಿಂದ ಬಂದ ಹಬ್ಬಗಳು. ಆದರೆ ರಕ್ಷಾಬಂಧನ (ಅಥವಾ ರಾಖೀ ಹಬ್ಬ) ಅಪ್ಪಟ ಭಾರತೀಯ ಸಂಸ್ಕೃತಿಯ ಹಬ್ಬ ಎಂಬ ಕಾರಣಕ್ಕೆ ಅದು ನಮಗೆ ಹೆಚ್ಚು ಆಪ್ತವಾಗಬೇಕು. ಇಲ್ಲಿ ಸೋದರತೆಯು ರಕ್ತ ಸಂಬಂಧವನ್ನು ಮೀರಿದ್ದು, ಜಾತಿ, ಮತ, ಭಾಷೆ, ರಾಷ್ಟ್ರಗಳ ಸೀಮೆಗಳನ್ನು ಮೀರಿದ್ದು ಎನ್ನುವುದು ನೂರಾರು ಬಾರಿ ಸಾಬೀತಾಗಿದೆ.

ಪುರಾಣಗಳ ಹಿನ್ನೆಲೆ

ಮಹಾಭಾರತದಲ್ಲಿ ಯಾವುದೋ ಸನ್ನಿವೇಶದಲ್ಲಿ ಯುದ್ಧ ಮಾಡುತ್ತಿರುವಾಗ ಕೃಷ್ಣ ದೇವರ ಬೆರಳಿಗೆ ಗಾಯವಾಗಿ ರಕ್ತ ಹರಿಯುತ್ತದೆ. ಆಗ ಸಮೀಪದಲ್ಲಿ ಇದ್ದ ದ್ರೌಪದಿ ಆತಂಕಗೊಂಡು ತನ್ನ ಕೇಸರಿ ಬಣ್ಣದ ಸೀರೆಯ ಸೆರಗನ್ನು ಹರಿದು ಅದನ್ನು ಕೃಷ್ಣ ದೇವರ ಬೆರಳಿಗೆ ಕಟ್ಟಿದ್ದೇ ರಕ್ಷೆ ಆಯಿತು. ಕೃಷ್ಣ ದ್ರೌಪದಿಯನ್ನು ಆ ಕ್ಷಣಕ್ಕೆ ಸೋದರಿಯಾಗಿ ತೆಗೆದುಕೊಳ್ಳುತ್ತಾನೆ. ಮುಂದೆ ಕೌರವನ ಆಸ್ಥಾನದಲ್ಲಿ ದ್ರೌಪದಿಯ ವಸ್ತ್ರಾಪಹರಣದ ಪ್ರಸಂಗ ಬಂದಾಗ ಅದೇ ಕೃಷ್ಣನು ದ್ರೌಪದಿಗೆ ಅಕ್ಷಯಾಂಬರವನ್ನು ನೀಡಿ ತನ್ನ
ಸೋದರತ್ವದ ಋಣವನ್ನು ತೀರಿಸಿದನು ಅನ್ನುವುದು ಮಹಾಭಾರತದ ಕಥೆ. ಹಾಗೆಯೇ ಮುಂದೆ ದ್ರೌಪದಿಯು ಆಸೆ ಪಟ್ಟಂತೆ ಕೃಷ್ಣನು ಕುರುಕ್ಷೇತ್ರದ ಯುದ್ಧವನ್ನು ಪೂರ್ತಿ ಮಾಡಿಕೊಟ್ಟದ್ದೂ ತನ್ನ ಸೋದರಿಯ ಮೇಲಿನ ಪ್ರೀತಿಯಿಂದ.

ಬಲಿ ಚಕ್ರವರ್ತಿಗೆ ಲಕ್ಷ್ಮಿದೇವಿಯು ರಕ್ಷೆ ಕಟ್ಟಿದ್ದು ಯಾಕೆ?

ಮಹಾಪರಾಕ್ರಮಿಯಾದ ದಾನವ ಬಲಿ ಚಕ್ರವರ್ತಿಗೆ ಲಕ್ಷ್ಮಿಯು ಕೇಸರಿ ಬಣ್ಣದ ನೂಲಿನ ದಾರವನ್ನು ಕಟ್ಟಿ ಕೈಮುಗಿದು ನಿಲ್ಲುತ್ತಾಳೆ. ಆಗ ಬಲಿಯು ಕರಗಿ ಏನಾಗಬೇಕು ತಂಗಿ? ಎಂದು ಕೇಳುತ್ತಾನೆ. ಆಗ ಲಕ್ಷ್ಮಿಯು ನನ್ನ ಗಂಡ ಮಹಾವಿಷ್ಣುವು ಶಾಪಗ್ರಸ್ತನಾಗಿ ನಿನ್ನ ದ್ವಾರಪಾಲಕ ಆಗಿದ್ದಾನೆ. ಆತನನ್ನು ಬಿಡುಗಡೆ ಮಾಡಿ ಅಣ್ಣ ಎನ್ನುತ್ತಾಳೆ. ಒಂದು ಕ್ಷಣವೂ ವಿಳಂಬ ಮಾಡದೆ ವಿಷ್ಣುವನ್ನು ಬಿಡುಗಡೆ ಮಾಡಿ ಲಕ್ಷ್ಮಿಯ ಜೊತೆಗೆ ವೈಕುಂಠಕ್ಕೆ ಕಳುಹಿಸಿಕೊಟ್ಟನು ಅನ್ನುವುದು ಇನ್ನೊಂದು ಉಲ್ಲೇಖ. ಇಂತಹ ನೂರಾರು ಉಲ್ಲೇಖಗಳು ನಮ್ಮ ಪುರಾಣಗಳಲ್ಲಿ ದೊರೆಯುತ್ತವೆ.

ರಕ್ಷೆಯ ಐತಿಹಾಸಿಕ ಹಿನ್ನೆಲೆ

ಭಾರತದ ಮೇಲೆ ಅಲೆಕ್ಸಾಂಡರ್ ದಂಡೆತ್ತಿ ಬಂದಾಗ ಅಳುಕಿದ್ದು ವಾಯುವ್ಯದ ದೊರೆ ಪುರೂರವನ ಬಲಿಷ್ಠ ಸೇನೆಯನ್ನು ನೋಡಿ. ಆಗ ಅಲೆಕ್ಸಾಂಡರನ ಪತ್ನಿ ರೋಕ್ಸಾನಾ ಪುರೂರವನ ಬಳಿಗೆ ಬಂದು ರಕ್ಷೆಯನ್ನು ಕಟ್ಟಿ ಪತಿಯ ಪ್ರಾಣ ಭಿಕ್ಷೆಯನ್ನು ಬೇಡಿದ್ದಳು. ಮುಂದೆ ಯುದ್ಧ ನಡೆದು ಅಲೆಕ್ಸಾಂಡರ್ ಸೋತು ಧರಾಶಾಯಿಯಾದಾಗ ಅದೇ ಪುರೂರವ ಆತನ ಪ್ರಾಣರಕ್ಷೆ ಮಾಡಿ ತನ್ನ ಸೋದರನ ಕರ್ತವ್ಯವನ್ನು ನಿಭಾಯಿಸಿದ್ದನು!

ಅದೇ ರೀತಿ ರಜಪೂತ ರಾಣಿ ಕರ್ಣಾವತಿಯು ತನ್ನ ಗಂಡನನ್ನು ಕಳೆದುಕೊಂಡರೂ ಧೃತಿಗೆಡದೆ ಮೇವಾಡವನ್ನು ಅಳುತ್ತಿದ್ದಳು. ಆಗ ಗುಜರಾತ್ ದೊರೆ ಬಹಾದ್ದೂರ್ ಶಾ ದುರಾಸೆಯಿಂದ ಮೇವಾಡದ ಮೇಲೆ ದಂಡೆತ್ತಿಕೊಂಡು ಬರುತ್ತಾನೆ. ಆಗ ಅಭಯವನ್ನು ಕೇಳಿ ರಾಣಿಯು ಪತ್ರವನ್ನು ಬರೆದು ರಕ್ಷೆ ಕಳುಹಿಸಿದ್ದು ಮೊಘಲ್ ದೊರೆ ಹುಮಾಯೂನನಿಗೆ. ಅದಕ್ಕೆ ಗೌರವ ಕೊಟ್ಟು ಹುಮಾಯೂನ್ ಆಕೆಯ ರಕ್ಷಣೆಗೆ ಓಡೋಡಿ ಬಂದ ಘಟನೆಯು ಇತಿಹಾಸದಲ್ಲಿ ಇದೆ.

Raksha Bandhan 2024
Raksha Bandhan 2024

ಬಂಗಾಳವನ್ನು ಒಗ್ಗೂಡಿಸಿದ ರಕ್ಷೆ!

1905ರಲ್ಲಿ ಬ್ರಿಟಿಷರು ಬಲಿಷ್ಠ ಬಂಗಾಳ ಪ್ರಾಂತ್ಯವನ್ನು ಒಡೆದು ಭಾರತೀಯರ ಐಕ್ಯತೆಯನ್ನು ಒಡೆದರು. ಆಗ ಹಿಂದೂ ಮುಸಲ್ಮಾನರು ಬೀದಿಗೆ ಇಳಿದು ಪರಸ್ಪರ ರಕ್ತ ಚೆಲ್ಲುವ ಕೆಲಸ ಆರಂಭ ಆಯಿತು. ಆಗ ರಾಷ್ಟ್ರಕವಿ ರವೀಂದ್ರನಾಥ ಟ್ಯಾಗೋರರು ಶ್ರಾವಣ ಹುಣ್ಣಿಮೆಯಂದು ಹಿಂದೂ ಮುಸಲ್ಮಾನರು ಪರಸ್ಪರ ರಕ್ಷೆಯನ್ನು ಕಟ್ಟಿ ಸೋದರತೆಯ ಸಂದೇಶವನ್ನು ಸಾರಬೇಕು ಎಂದು ಕರೆನೀಡಿದರು. ಬ್ರಿಟಿಷ್ ಸರಕಾರ ಈ ಆಚರಣೆಯನ್ನು ತಡೆಯಲು ಶತಪ್ರಯತ್ನ ಮಾಡಿದರೂ ಇಡೀ ಬಂಗಾಳ ರಕ್ಷಾಬಂಧನದ ಹಬ್ಬ ಆಚರಣೆ ಮಾಡಿ ಐಕ್ಯತೆಯ ಸಂದೇಶವನ್ನು ಸಾರಿತು!

ಕೇಸರಿ ಬಣ್ಣವು ತ್ಯಾಗದ ಸಂಕೇತ, ರಕ್ಷೆಯು ಐಕ್ಯತೆಯ ಸಂಕೇತ

ಹಿಂದೂ ಧರ್ಮದ ನಂಬಿಕೆಗಳ ಪ್ರಕಾರ ಕೇಸರಿ ಬಣ್ಣವು ತ್ಯಾಗ ಮತ್ತು ಬಲಿದಾನದ ಸಂಕೇತ. ಹಿಂದೆ ಋಷಿಮುನಿಗಳು ಧರಿಸುತ್ತಿದದ್ದು ಕಾವಿ ( ಕೇಸರಿ) ಬಣ್ಣದ ದಿರಿಸು. ಅವರು ಮಾಡುತ್ತಿದ್ದ ಯಜ್ಞದ ಅಗ್ನಿಯ ಬಣ್ಣ ಕೇಸರಿ. ಸೂರ್ಯ ಬೆಳಿಗ್ಗೆ ಉದಯಿಸುವಾಗ, ಸಂಜೆ ಮುಳುಗುವಾಗ ಅದೇ ಕೇಸರಿ ಬಣ್ಣವನ್ನು ಪಡೆಯುತ್ತಾನೆ. ಇಲ್ಲಿನ ಮಣ್ಣಿನ ಬಣ್ಣವೂ ಕೇಸರಿ.

ಹಾಗೆಯೇ ಹಲವು ನೂಲಿನ ದಾರಗಳನ್ನು ಒಂದೇ ಗಟ್ಟಿ ದಾರದ ಮೂಲಕ ಬಂಧಿಸುವುದೇ ರಕ್ಷೆ. ಅಂದರೆ ಜಾತಿ, ವರ್ಣಬೇಧಗಳನ್ನು ಮೆಟ್ಟಿ ನಿಂತು ಇಡೀ ಹಿಂದೂಸಮಾಜವು ಒಗ್ಗಟ್ಟಾಗಿ ನಿಲ್ಲಬೇಕು ಎನ್ನುವುದು ಈ ರಕ್ಷಾಬಂಧನ ಹಬ್ಬದ ಅಲ್ಟಿಮೇಟ್ ಸಂದೇಶ.

ಬದಲಾದ ಸಾಮಾಜಿಕ ಘಟ್ಟದಲ್ಲಿ ರಕ್ಷೆ

ಸ್ತ್ರೀಯು ದುರ್ಬಲಳು ಅಥವಾ ಪರಾಧೀನಳು ಎಂದು ಭಾವಿಸಿದ ಕಾಲ ಒಂದಿತ್ತು. ಈಗ ಕಾಲವು ಸಂಪೂರ್ಣ ಬದಲಾವಣೆ ಆಗಿದೆ. ಈಗ ಸ್ತ್ರೀ ಸ್ವಯಂಭೂ ಶಕ್ತಿಸಂಪನ್ನೆಯಾಗಿ ಇರುವ ಈ ಆಧುನಿಕ ಕಾಲದಲ್ಲಿಯೂ ಆಕೆ ತನ್ನ ಮಾನ, ಪ್ರಾಣ, ಸ್ವಾಭಿಮಾನಗಳ ರಕ್ಷಣೆಗಾಗಿ ರಕ್ಷೆಯನ್ನು ಕಟ್ಟುತ್ತಾಳೆ ಎನ್ನುವುದಕ್ಕಿಂತ ಆ ರಕ್ಷೆಯು ಸೋದರರ ಪರಸ್ಪರ ಪ್ರೀತಿ, ನಂಬಿಕೆ, ವಿಶ್ವಾಸಗಳ ಪ್ರತೀಕವಾಗಿ ಬದಲಾಗಿದೆ. ಪ್ರತೀ ವರ್ಷವೂ ಈ ಹಬ್ಬ ಬಂದಾಗ ತನ್ನ ಅಣ್ಣನನ್ನು (ಇಲ್ಲಿ ಮತ್ತೆ ರಕ್ತಸಂಬಂಧ ಮೀರಿದ್ದು ಕೂಡ ಹೌದು) ಹುಡುಕಿಕೊಂಡು ಬಂದು ರಕ್ಷೆ ಕಟ್ಟಿ ,ಆರತಿ ಎತ್ತಿ, ಸಿಹಿ ತಿನ್ನಿಸಿ ಇಡೀ ವರ್ಷ ಅಣ್ಣಾ ಎಂದು ಬಾಯ್ತುಂಬ ಕರೆಯುವ ತಂಗಿಯರ ಸಂಭ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಹಾಗೆಯೇ ಅಂಚೆಯ ಮೂಲಕ ರಕ್ಷೆ ಕಳುಹಿಸಿಕೊಟ್ಟು ಕೂಡ ಅಣ್ಣನ ನೆನಪು ಮಾಡುವ ಸೋದರಿಯರು ಇದ್ದಾರೆ.

ಹಾಗೆಯೇ ಅವಳು ನನ್ನ ತಂಗಿ, ಇವಳು ನನ್ನ ತಂಗಿ ಕಣೋ ಎಂದು ಜಂಬದಲ್ಲಿ ಹೇಳಿಕೊಂಡು ಅಂಗೈ ತುಂಬಾ ಕೇಸರಿಯ ರಕ್ಷೆಗಳನ್ನು ಕಟ್ಟಿಕೊಂಡು ಸಂಭ್ರಮಿಸುವ ಅಣ್ಣಂದಿರಿಗೇನೂ ಕಡಿಮೆ ಇಲ್ಲ!

ಬದಲಾದ ಕಾಲಘಟ್ಟದಲ್ಲಿ ಕೂಡ ಈ ರಕ್ಷಾಬಂಧನದ ಹಬ್ಬವು ಹಿಂದೂ ಸಂಸ್ಕೃತಿಯನ್ನು ಜಾಗೃತಿ ಮಾಡುತ್ತದೆ ಎಂಬ ಕಾರಣಕ್ಕೆ ಪ್ರಾಮುಖ್ಯತೆ ಪಡೆಯುತ್ತದೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕನ್ನಡ ಚಿತ್ರರಂಗದ ಬಂಗಾರದ ಹುಡುಗ ರಿಶಬ್ ಶೆಟ್ಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ದೇವಸ್ಥಾನದಿಂದ ಬರ್ತಿದ್ದ ಪುರೋಹಿತರ ಮೇಲೆ ಚಾಕು, ದೊಣ್ಣೆಯಿಂದ ಡೆಡ್ಲಿ ಅಟ್ಯಾಕ್‌! ವಿಡಿಯೋ ಇದೆ

Viral Video: ಆ.17ರಂದು ಈ ಭೀಕರ ಘಟನೆ ನಡೆದಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ ಅರ್ಚಕರು ದೇವಸ್ಥಾನದಿಂದ ಹಿಂತಿರುಗುತ್ತಿದ್ದರು. ಈ ವೇಳೆ ಅವರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗುಂಪೊಂದು ಚಾಕುವಿನಿಂದ ಇರಿದಿದೆ. ಗುಂಪು ಗುಂಪುಗಳಾಗಿ ಪುರೋಹಿತರ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ಕಿತ್ತಳೆ ಬಣ್ಣದ ಬಟ್ಟೆ ಧರಿಸಿದ್ದ ಒಬ್ಬ ಪುರೋಹಿತ ರಸ್ತೆಯಲ್ಲಿ ಬಿದ್ದ ಸ್ಕೂಟರ್‌ನ ಹತ್ತಿರ ನಿಂತಿರುವುದು ಕಂಡುಬಂದರೆ, ಮತ್ತೊಬ್ಬ ಬಿಳಿಬಣ್ಣದ ಬಟ್ಟೆ ಧರಿಸಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಹಲ್ಲೆ ನಡೆಸಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

VISTARANEWS.COM


on

Viral Video
Koo

ಮುಂಬೈ: ದೇವಸ್ಥಾನದಿಂದ ಪೂಜೆ ಮುಗಿಸಿ ಹಿಂದಿರುಗುತ್ತಿದ್ದ ಹಿಂದೂ ಪುರೋಹಿತರ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ(Priests attacked) ನಡೆಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಇಲ್ಲಿನ ಲಾಲ್ಜಿಪಾಡಾದ ಕಾಂದಿವಲಿಯಲ್ಲಿ ಈ ಆಘಾತಕಾರಿ ಘಟನೆ ವರದಿಯಾಗಿದ್ದು, ಜನನಿಬಿಡ ರಸ್ತೆಯಲ್ಲಿ ಚಾಕು ಮತ್ತು ಕೋಲುಗಳಿಂದ ಶಸ್ತ್ರಸಜ್ಜಿತವಾದ ಗುಂಪೊಂದು ಇಬ್ಬರು ಹಿಂದೂ ಪುರೋಹಿತರ ಮೇಲೆ ಹಲ್ಲೆ ನಡೆಸಿದೆ. ಈ ಆಘಾತಕಾರಿ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌(Viral Video) ಆಗುತ್ತಿದೆ.

ಆ.17ರಂದು ಈ ಭೀಕರ ಘಟನೆ ನಡೆದಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ ಅರ್ಚಕರು ದೇವಸ್ಥಾನದಿಂದ ಹಿಂತಿರುಗುತ್ತಿದ್ದರು. ಈ ವೇಳೆ ಅವರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗುಂಪೊಂದು ಚಾಕುವಿನಿಂದ ಇರಿದಿದೆ. ಗುಂಪು ಗುಂಪುಗಳಾಗಿ ಪುರೋಹಿತರ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ಕಿತ್ತಳೆ ಬಣ್ಣದ ಬಟ್ಟೆ ಧರಿಸಿದ್ದ ಒಬ್ಬ ಪುರೋಹಿತ ರಸ್ತೆಯಲ್ಲಿ ಬಿದ್ದ ಸ್ಕೂಟರ್‌ನ ಹತ್ತಿರ ನಿಂತಿರುವುದು ಕಂಡುಬಂದರೆ, ಮತ್ತೊಬ್ಬ ಬಿಳಿಬಣ್ಣದ ಬಟ್ಟೆ ಧರಿಸಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಹಲ್ಲೆ ನಡೆಸಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಒಬ್ಬ ವ್ಯಕ್ತಿಯು ಚಾಕುವನ್ನು ಹಿಡಿದಿರುವುದು ಕಂಡುಬರುತ್ತದೆ, ಇತರರು ತಮ್ಮ ಕೈಯಲ್ಲಿ ಕೋಲುಗಳನ್ನು ಹಿಡಿದಿರುವುದು ಕಂಡುಬರುತ್ತದೆ. ಆದರೆ, ದಾಳಿಯ ಹಿಂದಿನ ಕಾರಣ ತಿಳಿದುಬಂದಿಲ್ಲ.

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ದಾಳಿಯಲ್ಲಿ ಕನಿಷ್ಠ 5 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಲಭ್ಯವಾದ ಮಾಹಿತಿಯ ಪ್ರಕಾರ, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಮತ್ತು ಅರ್ಚಕರ ಮೇಲಿನ ಅಮಾನುಷ ಹಲ್ಲೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶ(Uttar Pradesh)ದ ಲಕ್ನೋದಲ್ಲಿ ಸಾಧುಗಳಂತೆ ನಟಿಸಿ ಜನರ ಬೆಲೆಬಾಳುವ ವಸ್ತುಗಳು ಮತ್ತು ಹಣವನ್ನು ದೋಚುತ್ತಿದ್ದ ನಾಲ್ವರು ಯುವಕರನ್ನು ಗ್ರಾಮಸ್ಥರು ಅಮಾನುಷವಾಗಿ ಥಳಿಸಿದ್ದಾರೆ. ನಾಲ್ವರನ್ನು ದೈಹಿಕವಾಗಿ ಚಪ್ಪಲಿಯಿಂದ ಹಲ್ಲೆ ನಡೆಸಲಾಗಿದ್ದು, ಈ ಘಟನೆಯ ವಿಡಿಯೋದಲ್ಲಿ ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಸಾಧುಗಳ ವೇಷ ಧರಿಸಿದ ಪುರುಷರು ಮಹುರಕಲಾ ಗ್ರಾಮದ ಅಂಗಡಿಯೊಂದಕ್ಕೆ ಭೇಟಿ ನೀಡಿದಾಗ ಗಲಾಟೆ ಶುರುವಾಗಿತ್ತು. ಅಂಗಡಿಯವನಿಗೆ ತಿಲಕವನ್ನು ಹಚ್ಚಿ, ಪ್ರಸಾದವನ್ನು ಕೊಡುವ ಮೊದಲು 1,100 ರೂಪಾಯಿಗಳನ್ನು ಕೊಡುವಂತೆ ಮನವೊಲಿಸಿದರು. ಒಮ್ಮೆ ಅಂಗಡಿಯವನು ಪ್ರಜ್ಞಾಹೀನನಾಗಿ ಬಿದ್ದಾಗ, ಖದೀಮರು ಪರಾರಿಯಾಗುವ ಮೊದಲು ಅಂಗಡಿಯಲ್ಲಿದ್ದ ಮೂರು ಗೋಣಿ ಸಾಸಿವೆ ಮತ್ತು ಹಣವನ್ನು ಕದ್ದೊಯ್ದಿದ್ದರು.

ಇದನ್ನೂ ಓದಿ: Mistaken Identity | ಕಳ್ಳರೆಂದು ಭಾವಿಸಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ಹೊಸಮನಿ ಹಟ್ಟಿ ಗ್ರಾಮಸ್ಥರು

Continue Reading

ಪ್ರಮುಖ ಸುದ್ದಿ

CM Siddaramaiah: ಇಂದು ಕಟಕಟೆ ಏರಲಿದೆ ಮುಡಾ ಪ್ರಕರಣ; 20 ಅಂಶಗಳೊಂದಿಗೆ ಸಿದ್ದರಾಮಯ್ಯ ಹೈಕೋರ್ಟ್‌ಗೆ; ಇಂದು ಏನೇನಾಗಲಿದೆ?

CM Siddaramaiah: ಸಿಎಂ ಸಿದ್ದರಾಮಯ್ಯ ಘಟಾನುಘಟಿ ವಕೀಲರನ್ನು ಮುಂದಿಟ್ಟುಕೊಂಡು ಕಾನೂನು ಸಮರಕ್ಕೆ ಸಜ್ಜಾಗಿದ್ದು, ಇಂದೇ ಹೈ ವೋಲ್ಟೇಜ್‌ ಲೀಗಲ್‌ ಫೈಟ್‌ ಆರಂಭವಾಗಲಿದೆ. ನ್ಯಾಯವಾದಿಗಳಾದ ಅಭಿಷೇಕ್ ಮನು ಸಿಂಗ್ವಿ ಹಾಗೂ ಕಪಿಲ್ ಸಿಬಲ್ ಟೀಮ್‌ ಸಿದ್ದರಾಮಯ್ಯ ಬೆನ್ನಿಗೆ ನಿಂತಿದೆ.

VISTARANEWS.COM


on

CM Siddaramaiah and high court
Koo

ಬೆಂಗಳೂರು: ಮುಡಾ ಹಗರಣಕ್ಕೆ (MUDA Scam, MUDA case) ಸಂಬಂಧಿಸಿ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಪ್ರಾಸಿಕ್ಯೂಶನ್‌ಗೆ (Prosecution) ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Governir Thawar Chand Gehlot) ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಇಂದು ದೂರುದಾರರು ಅಧಿಕೃತವಾಗಿ ಹೈಕೋರ್ಟ್‌ಗೆ (High Court) ತೆರಳಿ ರಾಜ್ಯಪಾಲರ ಆದೇಶದ ಪ್ರತಿಯನ್ನು ನೀಡಲಿದ್ದಾರೆ. ಇತ್ತ ಸಿಎಂ ಕೂಡ ಘಟಾನುಘಟಿ ವಕೀಲರನ್ನು ಮುಂದಿಟ್ಟುಕೊಂಡು ಕಾನೂನು ಸಮರಕ್ಕೆ ಸಜ್ಜಾಗಿದ್ದು, ಇಂದೇ ಹೈ ವೋಲ್ಟೇಜ್‌ ಲೀಗಲ್‌ ಫೈಟ್‌ ಆರಂಭವಾಗಲಿದೆ.

ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಶನ್‌ಗೆ ಕೊಟ್ಟ ನಡೆಯನ್ನು ಹೈಕೋರ್ಟ್‌ ಮುಂದೆ ಸಿಎಂ ಪ್ರಶ್ನೆ ಮಾಡಲಿದ್ದಾರೆ. ಸಿಎಂ ಸಲ್ಲಿಕೆ ಮಾಡಲಿರುವ ಅರ್ಜಿಯಲ್ಲಿ 20 ಅಂಶಗಳನ್ನು ಪ್ರಸ್ತಾಪ ಮಾಡಿದ್ದಾರೆ.

1) ರಾಜ್ಯಪಾಲರು ಕಾನೂನು ಹಾಗೂ ಸಂವಿಧಾನದ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದಾರೆ.

2) ಎಸ್ಓಪಿ ನಿಯಮ ಪಾಲನೆ ಮಾಡಿಲ್ಲ. ಎಸ್ಓಪಿ ಬಗ್ಗೆ ರಾಜ್ಯಪಾಲರಿಗೆ ಅರಿವಿಲ್ಲ. ಕೇಂದ್ರ ಸರ್ಕಾರ ಮಾಡಿರುವ ಹೊಸ ಕಾನೂನಿನ ವಿರುದ್ಧ ನಡೆದುಕೊಂಡಿದ್ದಾರೆ.

3) ಈ ಪ್ರಕರಣದಲ್ಲಿ ನನ್ನ ಪಾತ್ರವೇ ಇಲ್ಲ.

4) ಇದೊಂದು ಸಿವಿಲ್ ಮೊಕದ್ದಮೆಯೇ ಹೊರತು ಕ್ರೈಮ್ ಅಲ್ಲ

5) ಮುಡಾದಲ್ಲಿ ಪಡೆದ ನಿವೇಶನಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ

6) ಅದು ನನ್ನ ಪತ್ನಿಗೆ ಅವರ ಸಹೋದರರಿಂದ ಬಂದ ಗಿಫ್ಟ್

7) ನನ್ನ ಪತ್ನಿಯ ಆಸ್ತಿಯನ್ನು ಮುಡಾ ಅಧಿಕಾರಿಗಳು ಅಕ್ರಮವಾಗಿ ಸ್ವಾಧೀನ ಮಾಡಿದ್ದಾರೆ

8) ಅದಕ್ಕೆ ಮುಡಾದವರು 14 ನಿವೇಶನಗಳನ್ನ ಪರ್ಯಾಯವಾಗಿ ನೀಡಿದ್ದಾರೆ

9) ಇದು ಎಲ್ಲ ಪ್ರಕ್ರಿಯೆ ನಡೆದಿರುವುದು ಬಿಜೆಪಿ ಸರ್ಕಾರದ ಅವಧಿಯಲ್ಲಿ

10) ಇಂತಹ ಆರೋಪ ಬಂದ ತಕ್ಷಣ ಒನ್ ಮ್ಯಾನ್ ಕಮಿಷನ್ ನೇಮಕ ಮಾಡಿದ್ದೇವೆ. ಕಮಿಷನ್ ತನಿಖೆ ಮಾಡ್ತಿದೆ

11) ನ್ಯಾಯಾಂಗ ತನಿಖೆಯ ಸಮಿತಿ ಮಾಹಿತಿ ಸಹ ರಾಜ್ಯಪಾಲರು ಪಡೆದಿಲ್ಲ

12) ದೂರುದಾರರ ಬಗ್ಗೆ ಹಲವು ಅನುಮಾನಗಳಿವೆ

13) ಪ್ರದೀಪ್ ಜೆಡಿಎಸ್ ವಕ್ತಾರ

14) ಅಬ್ರಹಾಂ ಈ ಹಿಂದೆ ಹಲವು ದೂರುಗಳನ್ನು ಕೊಟ್ರೂ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಿಲ್ಲ. ಒಬ್ಬ ಅಧಿಕಾರಿಯನ್ನು ಬ್ಲಾಕ್‌ ಮೇಲ್ ಮಾಡಿದ ಪ್ರಕರಣದಲ್ಲಿ ಆರೋಪಿ ಆಗಿದ್ದಾರೆ.

15) ಇದೊಂದು ರಾಜಕೀಯ ಪ್ರೇರಿತ ಪ್ರಕರಣ

16) ರಾಜ್ಯ ಸರ್ಕಾರವನ್ನ ಬುಡಮೇಲು ಮಾಡುವ ಹುನ್ನಾರ

17) ದೆಹಲಿ ಸೇರಿದಂತೆ ಇತರೆ ರಾಜ್ಯಗಳಲ್ಲಿ ರಾಜ್ಯಪಾಲರ ಅಧಿಕಾರ ದುರುಪಯೋಗ ಪಡಿಸಿಕೊಂಡು ಸರ್ಕಾರಗಳನ್ನ ಅಭದ್ರ ಮಾಡಿ ಇಲ್ಲಿಯೂ ಅದನ್ನೇ ಮಾಡುವ ಕೆಲಸ ಮಾಡ್ತಿದ್ದಾರೆ

18) ನನ್ನ ವಿರುದ್ಧ ಮಾಜಿ ಪಿಎಂ ಎಚ್‌ಡಿ ದೇವೇಗೌಡ, ಕುಮಾರಸ್ವಾಮಿ ಹಾಗೂ ಬಿಎಸ್‌ವೈ ಸೇರಿದಂತೆ ಬಿಜೆಪಿಯ ಕೇಂದ್ರ ನಾಯಕರು ನನ್ನ ವಿರುದ್ಧ ಮಾಡ್ತಿರುವ ಷಡ್ಯಂತ್ರ

19) ಈ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲದಿದ್ದರೂ ನನ್ನ ವಿರುದ್ಧ ಪ್ರಾಸಿಕ್ಯೂಶನ್‌ಗೆ ಕೊಟ್ಟ ರಾಜ್ಯಪಾಲರ ಆದೇಶ ಸರಿಯಲ್ಲ

20) ಹೀಗಾಗಿ ಪ್ರಾಸಿಕ್ಯೂಶನ್‌ಗೆ ಕೊಟ್ಟ ಕ್ರಮ ಸರಿಯಿಲ್ಲ ಎಂದು ಆದೇಶ ಮಾಡಬೇಕೆಂದು ಮನವಿ.

ಘಟಾನುಘಟಿ ನ್ಯಾಯವಾದಿಗಳು

ಅಭಿಷೇಕ್ ಮನು ಸಿಂಗ್ವಿ ಹಾಗೂ ಕಪಿಲ್ ಸಿಬಲ್ ಟೀಮ್‌ ಸಿದ್ದರಾಮಯ್ಯ ಬೆನ್ನಿಗೆ ನಿಂತಿದೆ. ಈಗಾಗಲೇ ಹೈಕೋರ್ಟ್‌ಗೆ ಸಲ್ಲಿಸಬೇಕಿರುವ ಅರ್ಜಿ ತಯಾರು ಮಾಡಿರುವ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ನೆರವಿನೊಂದಿಗೆ ಹೈಕೋರ್ಟ್‌ನಲ್ಲಿ ವಾದ ಮಂಡನೆಗೆ ತಯಾರಿ ಶುರು ಮಾಡಲಾಗಿದೆ. ಇಂದು ಅರ್ಜಿ ದಾಖಲು ಮಾಡಿ ತ್ವರಿತ ವಿಚಾರಣೆಗೆ ಸಿಎಂ ಪರ ವಕೀಲರು ಒತ್ತಾಯ ಮಾಡಲಿದ್ದಾರೆ.

ದೆಹಲಿಯಿಂದ ಅಭಿಷೇಕ್ ಮನುಸಿಂಗ್ವಿ ಹಾಗೂ ಕಪಿಲ್ ಸಿಬಲ್ ಬಂದ ತಕ್ಷಣ ಅರ್ಜಿ ಪರಿಶೀಲನೆ ಮಾಡಿ ಕೋರ್ಟ್ ಮೊರೆ ಹೋಗಲಿದ್ದಾರೆ. 20, 21ನೇ ತಾರೀಕು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ತೀರ್ಪು ಇರೋದರಿಂದ ಅದಕ್ಕೂ ಮೊದಲೇ ಅರ್ಜಿ ವಿಚಾರಣೆ ಮಾಡುವಂತೆ ಮನವಿ ಮಾಡುವ, ಜನಪ್ರತಿನಿಧಿಗಳ ನ್ಯಾಯಾಲಯದ ವಿಚಾರಣೆಗೆ ತಡೆ ಕೊಡುವಂತೆಯೂ ಮನವಿ ಮಾಡುವ ಸಾಧ್ಯತೆ ಇದೆ.

ಕಾಂಗ್ರೆಸ್ ನಾಯಕರಿಗೆ ಕಾನೂನು ಸಂಕಷ್ಟ ಬಂದಾಗಲೆಲ್ಲ ಕಪಿಲ್ ಸಿಬಲ್ ಹಾಗೂ ಅಭಿಷೇಕ್ ಮನುಸಿಂಗ್ವಿ ಎಂಟ್ರಿ ಕೊಡುತ್ತಿದ್ದು, ಡಿಕೆ ಶಿವಕುಮಾರ್ ಪ್ರಕರಣಗಳಲ್ಲೂ ವಕಾಲತ್ತು ವಹಿಸಿದ್ದರು. ಸುಪ್ರೀಂ ಕೋರ್ಟ್‌ನಲ್ಲಿ ಇವರು ಹೆಸರಾಂತ ವಕೀಲರುಗಳಾಗಿದ್ದಾರೆ.

ಅಂದು ಯಡಿಯೂರಪ್ಪ ಇಂದು ಸಿದ್ದರಾಮಯ್ಯ

2010-11ರಲ್ಲಿ ಯಡಿಯೂರಪ್ಪ ವಿರುದ್ಧವೂ ಆರು ಪಿಸಿಆರ್‌ಗಳು ದಾಖಲಾಗಿದ್ದವು. ಬಾಲರಾಜು ಎಂಬವರಿಂದ ದಾಖಲಾಗಿದ್ದ ಪ್ರಕರಣಗಳಲ್ಲಿ ರಾಜ್ಯಪಾಲರ ಅನುಮತಿ ಪಡೆದು ದೂರು ದಾಖಲು ಮಾಡಲಾಗಿತ್ತು. ರಾಜ್ಯಪಾಲರ ಅನುಮತಿ ಪ್ರಶ್ನೆ ಮಾಡಿ ಯಡಿಯೂರಪ್ಪ ಹೈಕೋರ್ಟ್ ಮೊರೆ ಹೋಗಿದ್ದರು. ರಾಜ್ಯಪಾಲರ ನಿರ್ಧಾರ ಕಾನೂನು ಬಾಹಿರ ಎಂದು ವಾದ ಮಂಡಿಸಿದ್ದರು. ಕೆಳ ನ್ಯಾಯಾಲಯದ ವಿಚಾರಣೆಗೆ ತಡೆ ಪಡೆದಿದ್ದರು. ಬಳಿಕ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿ ರಾಜ್ಯಪಾಲರ ಪ್ರಾಸಿಕ್ಯೂಶನ್ ನೀಡಿದ್ದು ಸರಿ ಇದೆ ಎಂದು ಹೈಕೋರ್ಟ್ ಹೇಳಿತ್ತು. ಲೋಕಾಯುಕ್ತ ಕೋರ್ಟ್‌ನಲ್ಲಿ ವಿಚಾರಣೆ ನಡೆದು ಯಡಿಯೂರಪ್ಪ ಜೈಲಿಗೆ ಹೋಗಿದ್ದರು.

ಈಗ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿರುವ ಮುಡಾ ಪ್ರಕರಣದಲ್ಲಿ, ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಪರ ತೀರ್ಪು ಬಂದರೆ ಸದ್ಯಕ್ಕೆ ಸುರಕ್ಷಿತರಾಗುತ್ತಾರೆ. ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದ್ರೆ ಸಿಎಂ ಸ್ಥಾನಕ್ಕೂ ಕುತ್ತು ಬರಬಹುದು. ಆರೋಪಿಯನ್ನು ವಶಕ್ಕೆ ಪಡೆಯುವುದು ಅಗತ್ಯವಿದೆ ಎಂದು ತನಿಖಾಧಿಕಾರಿ ವಾದ ಮಂಡಿಸಿದರೆ ಬಂಧನಕ್ಕೂ ಕೋರ್ಟ್ ಸೂಚಿಸಬಹುದು. ಬಂಧನದ ಪ್ರಕ್ರಿಯೆ ಕೊನೆಯ ಆಯ್ಕೆಯಾಗಿದೆ.

ಇದನ್ನೂ ಓದಿ: CM Siddaramaiah: ಆ.23ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ; ಕಾನೂನು ಹೋರಾಟಕ್ಕೆ ಹೈ ‌ಕಮಾಂಡ್ ಬೆಂಬಲ ಕೋರಲು ಭೇಟಿ

Continue Reading

ವೈರಲ್ ನ್ಯೂಸ್

Fake Garlic: ಎಚ್ಚರ..ಎಚ್ಚರ.. ಮಾರ್ಕೆಟ್‌ಗೆ ಲಗ್ಗೆ ಇಟ್ಟಿದೆ ಸಿಮೆಂಟ್‌ ಬೆಳ್ಳುಳ್ಳಿ! ವಿಡಿಯೋ ನೋಡಿದ್ರೆ ಶಾಕ್‌ ಆಗೋದು ಗ್ಯಾರಂಟಿ

Fake Garlic: ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸಿಮೆಂಟ್‌ನಿಂದ ತಯಾರಿಸಿದ ನಕಲಿ ಬೆಳ್ಳುಳ್ಳಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಬಹಳ ಸದ್ದು ಮಾಡುತ್ತಿದೆ. ಅಗತ್ಯ ಅಡುಗೆಮನೆಯ ಮುಖ್ಯ ವಸ್ತುಗಳ ಬೆಲೆಗಳು ಗಗನಕ್ಕೇರುವುದರೊಂದಿಗೆ, ಕೆಲವು ಮಾರಾಟಗಾರರು ಪರಿಸ್ಥಿತಿಯ ಲಾಭವನ್ನು ಪಡೆಯಲು ಮುಂದಾಗಿದ್ದು, ಗ್ರಾಹಕರಿಗೆ ಕೊಂಚವೂ ಅನುಮಾನವೇ ಬರದಂತೆ ಸಿಮೆಂಟ್‌ ಬೆಳ್ಳುಳ್ಳಿಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ.

VISTARANEWS.COM


on

Fake Garlic
Koo

ಮುಂಬೈ: ದುಡ್ಡಿನಾಸೆ ಮನುಷ್ಯನಿಂದ ಎಂಥಹ ನೀಜ ಕೆಲಸನ್ನಾದರೂ ಮಾಡಿಸುತ್ತೆ. ಎಲ್ಲಿವರೆಗೆ ಅಂದ್ರೆ ತಿನ್ನೋ ಅನ್ನವನ್ನೂ ವಿಷ ಮಾಡಿಬಿಡುತ್ತೆ. ಈ ಹಿಂದೆ ಪ್ಲಾಸ್ಟಿಕ್‌ ಅಕ್ಕಿ(Plastic Rice), ಪ್ಲಾಸ್ಟಿಕ್‌ ಮೊಟ್ಟೆಗಳು(Plastic egg) ಮಾರುಕಟ್ಟೆಯಿಂದ ಸಾರಾ ಸಲೀಸಾಗಿ ಜನರ ಹೊಟ್ಟೆ ಸೇರುತ್ತಿರುವ ಬಗ್ಗೆ ಭಾರೀ ಸುದ್ದಿಯಾಗಿತ್ತು. ಈಗಲೂ ಈ ದಂಧೆ ನಡೆಯುತ್ತಲೇ ಇದೆ. ಅದು ಒಂದು ಕಡೆಯಾದ್ರೆ ಇಲ್ಲೊಂದು ಕಡೆ ಫೇಕ್‌ ಬೆಳ್ಳುಳ್ಳಿಗಳು(Fake Garlic) ಮಾರ್ಕೆಟ್‌ಗೆ ಲಗ್ಗೆ ಇಟ್ಟಿವೆ ಎಂದರೆ ನಂಬಲೇಬೇಕು(Viral Video).

ಹೌದು…ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸಿಮೆಂಟ್‌ನಿಂದ ತಯಾರಿಸಿದ ನಕಲಿ ಬೆಳ್ಳುಳ್ಳಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಬಹಳ ಸದ್ದು ಮಾಡುತ್ತಿದೆ. ಅಗತ್ಯ ಅಡುಗೆಮನೆಯ ಮುಖ್ಯ ವಸ್ತುಗಳ ಬೆಲೆಗಳು ಗಗನಕ್ಕೇರುವುದರೊಂದಿಗೆ, ಕೆಲವು ಮಾರಾಟಗಾರರು ಪರಿಸ್ಥಿತಿಯ ಲಾಭವನ್ನು ಪಡೆಯಲು ಮುಂದಾಗಿದ್ದು, ಗ್ರಾಹಕರಿಗೆ ಕೊಂಚವೂ ಅನುಮಾನವೇ ಬರದಂತೆ ಸಿಮೆಂಟ್‌ ಬೆಳ್ಳುಳ್ಳಿಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ.

ಅಕೋಲಾದ ಬಜೋರಿಯಾ ನಗರದಲ್ಲಿ ನೆಲೆಸಿರುವ ನಿವೃತ್ತ ಪೊಲೀಸ್ ಅಧಿಕಾರಿ ಸುಭಾಷ್ ಪಾಟೀಲ್ ಅವರ ಪತ್ನಿ ಕೃತಕ ಬೆಳ್ಳುಳ್ಳಿ ಮಾರಾಟ ಮಾಡುವ ಬೀದಿ ಬದಿ ವ್ಯಾಪಾರಿಯಿಂದ ವಂಚನೆಗೊಳಗಾಗಿದ್ದು, ಅವರು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಾಗ ಈ ವಂಚನೆ ಬೆಳಕಿಗೆ ಬಂದಿದೆ.

ಇನ್ನು ಸಿಮೆಂಟ್​ ಬೆಳ್ಳುಳ್ಳಿಯನ್ನು ಬೇರ್ಪಡಿಸಲು ಪ್ರಯತ್ನಿಸಿದಾಗ ನಕಲಿ ಎಂದು ಬಯಲಾಗಿದೆ. ಚಾಕುವಿನಿಂದ ಕತ್ತರಿಸಿದಾಗ ಅದು ಸಿಮೆಂಟ್​ನಿಂದ ಮಾಡಿದ ಬೆಳ್ಳುಳ್ಳಿ ಎಂದು ಬೆಳಕಿಗೆ ಬಂದಿದೆ. ಅಕೋಲಾದಲ್ಲಿ ಬೆಳ್ಳುಳ್ಳಿ ನಕಲಿ ಮಾರಾಟಗಾರರು ಜನರನ್ನು ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ. ಅಕೋಲಾ ನಗರದ ಹೆಚ್ಚಿನ ಭಾಗಗಳಲ್ಲಿ, ಈ ವ್ಯಾಪಾರಿಗಳು ಪ್ರತಿದಿನ ತರಕಾರಿಗಳನ್ನು ಮಾರಾಟ ಮಾಡಲು ಬರುತ್ತಾರೆ, ಅವರಲ್ಲಿ ಕೆಲವರು ನಕಲಿ ಬೆಳ್ಳುಳ್ಳಿಯನ್ನು ಮಾರಾಟ ಮಾಡುತ್ತಿರುವುದು ಇದೀಗ ಬೆಳಕಿಗೆ ಬಂದಿದೆ.

ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ನಕಲಿ ಮೊಟ್ಟೆ, ನಕಲಿ ಅಕ್ಕಿಗಳ ಮಾರಾಟ ಹೆಚ್ಚಾಗಿದೆ. ನಕಲಿ ಮೊಟ್ಟೆ ಹಾವಳಿ ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲೇ ಅತಿ ಹೆಚ್ಚು. ಇಲ್ಲೇ ಅದನ್ನು ಮೊಟ್ಟೆ ಉತ್ಪಾದಿಸಲಾಗುತ್ತಿದೆ. ಆದರೆ ಇದರ ಗರಿಷ್ಠ ಬಳಕೆ ಕರ್ನಾಟಕದಲ್ಲಿದೆ. ವರದಿಯ ಪ್ರಕಾರ ಬೆಂಗಳೂರಿನಲ್ಲಿ ದಿನಕ್ಕೆ 75 ಲಕ್ಷ ಮೊಟ್ಟೆಗಳಿಗೆ ಬೇಡಿಕೆ ಇದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮೊಟ್ಟೆ ಬೇಡಿಕೆಯಿಂದ ನಕಲಿ ಮೊಟ್ಟೆಗಳ ವ್ಯಾಪಾರ ಹೆಚ್ಚುತ್ತಿದೆ.

ಇದನ್ನೂ ಓದಿ:Plastic rice | ಶಾಲಾ ಮಕ್ಕಳ ಬಿಸಿಯೂಟದ ಅಕ್ಕಿ ಜತೆ ಮಿಕ್ಸ್‌ ಆಗಿದೆಯಾ ಪ್ಲಾಸ್ಟಿಕ್‌ ರೈಸ್‌: ತೇಲುವ ಮಣಿಗಳು ಏನಿವು?

Continue Reading

Latest

Raksha Bandhan 2024: ಇಂದು ರಕ್ಷಾ ಬಂಧನ; ಈ ಹಬ್ಬದ ವಿಶೇಷವೇನು?

ರಕ್ಷಾ ಬಂಧವನ್ನು ‘ರಾಖಿ ಹಬ್ಬ’, ‘ಅಣ್ಣ ತಂಗಿ’ ಹಬ್ಬ ಎಂದು ಕರೆಯುತ್ತಾರೆ. ರಕ್ಷಾಬಂಧನವು (Raksha Bandhan 2024) ಭಾರತದಲ್ಲಿ ಒಂದು ವಿಶೇಷ ಹಬ್ಬ. ಇದು ಸಹೋದರ ಸಹೋದರಿಯರ ನಡುವಿನ ಬಂಧವನ್ನು ಗಟ್ಟಿಗೊಳಿಸುವಂತಹ ಹಬ್ಬವಾಗಿದೆ. ಈ ಬಾರಿ ರಕ್ಷಾಬಂಧನವನ್ನು ಸೋಮವಾರ, ಆಗಸ್ಟ್ 19ರಂದು ಆಚರಿಸಲಾಗುತ್ತದೆ. ಹಾಗಾಗಿ ಈ ಹಬ್ಬದ ಮುಹೂರ್ತ, ಮಹತ್ವ, ಹಿನ್ನಲೆ ಹಾಗೂ ಆಚರಣೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ.

VISTARANEWS.COM


on

Raksha Bandhan 2024
Koo


ಶ್ರಾವಣ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯ ದಿನವನ್ನು ನೂಲು ಹುಣ್ಣಿಮೆ ಎಂದು ಕರೆಯಲಾಗುತ್ತದೆ. ಈ ದಿನ ರಕ್ಷಾಬಂಧನವನ್ನು ಆಚರಿಸುತ್ತಾರೆ. ಈ ರಕ್ಷಾ ಬಂಧವನ್ನು ‘ರಾಖಿ ಹಬ್ಬ’, ‘ಅಣ್ಣ ತಂಗಿ’ ಹಬ್ಬ ಎಂದೂ ಕರೆಯುತ್ತಾರೆ. ರಕ್ಷಾಬಂಧನವು ಭಾರತದಲ್ಲಿ ಒಂದು ವಿಶೇಷ ಹಬ್ಬವಾಗಿದ್ದು, ಇದು ಸಹೋದರ ಸಹೋದರಿಯರ ನಡುವಿನ ಬಂಧವನ್ನು ಗಟ್ಟಿಗೊಳಿಸುವಂತಹ ಹಬ್ಬವಾಗಿದೆ. ಈ ಬಾರಿ ರಕ್ಷಾಬಂಧನವನ್ನು (Raksha Bandhan 2024) ಸೋಮವಾರ, ಆಗಸ್ಟ್ 19ರಂದು ಆಚರಿಸಲಾಗುತ್ತದೆ. ಹಾಗಾಗಿ ಈ ಹಬ್ಬದ ಮುಹೂರ್ತ, ಮಹತ್ವ, ಹಿನ್ನೆಲೆ ಹಾಗೂ ಆಚರಣೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ.

Raksha Bandhan 2024
Raksha Bandhan 2024

ರಾಖಿ ಕಟ್ಟಲು ಶುಭ ಮುಹೂರ್ತ ಯಾವುದು?

ಸಮಯ ಬಹಳ ಮುಖ್ಯವಾಗುತ್ತದೆ. ಈ ಬಾರಿ ರಾಖಿ ಮುಹೂರ್ತವು ಬೆಳಗ್ಗೆ 5.50ಕ್ಕೆ ಪ್ರಾರಂಭವಾಗಿ ಸಂಜೆ 6:58ವರೆಗೆ ಇರುತ್ತದೆ. ದೇವರ ಆಶೀರ್ವಾದ ಪಡೆಯಲು ಮತ್ತು ನಿಮ್ಮ ಇಷ್ಟಾರ್ಥಗಳು ಈಡೇರಲು ಈ ಸಮಯದಲ್ಲಿ ರಾಖಿ ಕಟ್ಟುವಂತೆ ಪಂಡಿತರು ಸಲಹೆ ನೀಡಿದ್ದಾರೆ.

Raksha Bandhan 2024
Raksha Bandhan 2024

ರಾಖಿ ಹಬ್ಬದ ಹಿನ್ನೆಲೆ ಏನು?

ರಕ್ಷಾ ಬಂಧನವನ್ನು ಪುರಾತನ ಕಾಲದಿಂದಲೂ ಆಚರಿಸುತ್ತ ಬರಲಾಗಿದೆ. ಇದಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಈ ಹಬ್ಬವು ಭಾರತೀಯ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿದೆ. ಅದರೊಂದಿಗೆ ಅನೇಕ ದಂತಕಥೆಗಳನ್ನು ಹೊಂದಿದೆ.

Raksha Bandhan 2024
Raksha Bandhan 2024

ರಕ್ಷಾ ಬಂಧನಕ್ಕೆ ಸಂಬಂಧಿಸಿದ ಒಂದು ಜನಪ್ರಿಯ ಕಥೆ ಮಹಾಭಾರತದ ಕೃಷ್ಣ-ದ್ರೌಪದಿಯಿಂದ ಬಂದಿದೆ ಎನ್ನಲಾಗಿದೆ. ಶ್ರೀಕೃಷ್ಣನು ಕಬ್ಬಿನ ತುಂಡನ್ನು ಕತ್ತರಿಸುವಾಗ ಅವನ ಬೆರಳಿಗೆ ಗಾಯವಾಯಿತು. ಆಗ ಪಾಂಡವರ ಪತ್ನಿ ದ್ರೌಪದಿ ತನ್ನ ಸೀರೆಯ ತುಂಡನ್ನು ಹರಿದು ಆತನನ್ನು ರಕ್ಷಿಸಲು ಬೆರಳಿಗೆ ಸುತ್ತಿದಳು. ಆಗ ಕೃಷ್ಣನು ಅವಳಲ್ಲಿ ಸಹೋದರ ಪ್ರೇಮವನ್ನು ಕಂಡು ಅಗತ್ಯದ ಸಮಯದಲ್ಲಿ ಅವಳನ್ನು ಕಾಪಾಡುವುದಾಗಿ ಪ್ರತಿಜ್ಞೆ ಮಾಡಿದನು. ಅದರಂತೆ ರಕ್ಷಾ ಬಂಧನವನ್ನು ಅಣ್ಣ-ತಂಗಿ ಹಬ್ಬವೆಂದು ರಾಖಿ ಕಟ್ಟುವ ಮೂಲಕ ಆಚರಿಸಲಾಗುತ್ತದೆ.

Raksha Bandhan 2024
Raksha Bandhan 2024

ಹಾಗೇ ಇನ್ನೊಂದು ಇತಿಹಾಸದ ಕಥೆಯಲ್ಲಿ ಚಿತ್ತೋರಿನ ರಾಣಿ ಕರ್ಣಾವತಿ ಆಕ್ರಮಣಕಾರರ ವಿರುದ್ಧ ಸಹಾಯವನ್ನು ಕೋರಿ ಚಕ್ರವರ್ತಿ ಹುಮಾಯೂನ್‌ಗೆ ರಾಖಿಯನ್ನು ಕಳುಹಿಸಿದಳು. ಆಗ ಹುಮಾಯೂನ್ ತಕ್ಷಣವೇ ಅವಳ ಸಹಾಯಕ್ಕೆ ಬಂದನು ಎನ್ನಲಾಗಿದೆ. ರಾಖಿ ಮೂಲಕ ಅವರ ನಡುವೆ ಸಹೋದರ ಸಹೋದರಿಯ ಸಂಬಂಧ ಬೆಳೆಯಿತು ಎನ್ನಲಾಗಿದೆ.

Raksha Bandhan 2024
Raksha Bandhan 2024

ರಾಖಿ ಹಬ್ಬದ ಆಚರಣೆ

ರಕ್ಷಾ ಬಂಧನ ಸಹೋದರ-ಸಹೋದರಿಯರ ಪ್ರೀತಿಯ ಹಬ್ಬ. ಈ ದಿನ ಸಹೋದರಿಯರು ತಮ್ಮ ಸಹೋದರ ಒಳ್ಳೆಯದಾಗಲೆಂದು ಹಾರೈಸುತ್ತ ಅವರಿಗೆ ಆರತಿ ಬೆಳಗಿ ಕುಂಕುಮ ಹಚ್ಚಿ ಸಿಹಿ ತಿನ್ನಿಸಿ ಅವರ ಕೈಯ ಮಣಿಕಟ್ಟಿನ ಮೇಲೆ ತಮ್ಮ ಪ್ರೀತಿ ಮತ್ತು ಸ್ನೇಹದ ಸಂಕೇತವಾದ ರಾಖಿಯನ್ನು ಕಟ್ಟಿ ದೀರ್ಘಾಯುಷ್ಯವನ್ನು ಹಾರೈಸಿ ಆಶೀರ್ವಾದ ಪಡೆಯುತ್ತಾರೆ. ಇದಕ್ಕೆ ಪ್ರತಿಯಾಗಿ ಸಹೋದರ ಸಹೋದರಿಯನ್ನು ರಕ್ಷಿಸುವ ಭರವಸೆ ನೀಡುತ್ತಾರೆ. ಅಲ್ಲದೇ ಸಹೋದರರು ತಮ್ಮ ಸಹೋದರಿಯರಿಗೆ ಅವರ ಪ್ರೀತಿಯ ಸಂಕೇತವಾಗಿ ಅವರಿಗಿಷ್ಟವಾದ ಉಡುಗೊರೆಗಳನ್ನು ನೀಡುವುದು ಸಾಮಾನ್ಯವಾಗಿದೆ. ಕೊನೆಗೆ ಕುಟುಂಬಗಳೊಂದಿಗೆ ಹಬ್ಬದ ಊಟವನ್ನು ಸವಿಯುತ್ತಾರೆ. ಆದರೆ ಕೆಲವೊಮ್ಮೆ ದೂರ ದೂರ ಇರುವ ಸಹೋದರ ಸಹೋದರಿಯರು ಭೇಟಿ ಆಗಲು ಸಾಧ್ಯವಾಗದಿದ್ದಾಗ ಅವರಿಗೆ ರಾಖಿಯನ್ನು ಕಳುಹಿಸಿಕೊಡುತ್ತಾರೆ.

ರಾಖಿ ಹಬ್ಬದ ಮಹತ್ವ ಏನು?

ರಕ್ಷಾಬಂಧನವು ಸಹೋದರ ಸಹೋದರಿಯರ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವ ಹಬ್ಬವಾಗಿದೆ. ಇದು ಒಡಹುಟ್ಟಿದವರ ನಡುವೆ ಪ್ರೀತಿ ಮತ್ತು ಬೆಂಬಲವನ್ನು ಹೆಚ್ಚಿಸುತ್ತದೆ. ಸಹೋದರಿಯರು ತಮ್ಮ ಸಹೋದರರ ಸಮೃದ್ಧಿ ಮತ್ತು ಸಂತೋಷಕ್ಕಾಗಿ ಪ್ರಾರ್ಥಿಸಿದರೆ ಸಹೋದರರು ಸಹೋದರಿಯರನ್ನು ರಕ್ಷಿಸುವ ಪ್ರತಿಜ್ಞೆ ಮಾಡುತ್ತಾರೆ. ರಕ್ಷಾಬಂಧನ ಯುಗಯುಗಾಂತರಗಳಿಂದ ಬಂದಿರುವ ಒಂದು ಸಾಂಪ್ರದಾಯಿಕ ಹಬ್ಬವಾಗಿದೆ. ಇದು ಕುಟುಂಬದ ನಡುವೆ ಪ್ರೀತಿ, ಒಗ್ಗಟ್ಟು ಮತ್ತು ಸಾಮರಸ್ಯವನ್ನು ಮೂಡಿಸುತ್ತದೆ.

ಇದನ್ನೂ ಓದಿ: ಅಪಹರಣಕಾರನಿಂದ ಪುಟ್ಟ ಮಗುವನ್ನು ರಕ್ಷಿಸಿದ ಸಾಕು ನಾಯಿ! ನಾಯಿಯ ಸಾಹಸದ ವಿಡಿಯೊ ನೋಡಿ

ಒಟ್ಟಾರೆ ಈ ವರ್ಷದಲ್ಲಿ ಬರುವ ಈ ರಕ್ಷಾಬಂಧನವನ್ನು ನಿಮ್ಮ ಸಹೋದರ ಸಹೋದರಿಯರ ಜೊತೆ ವಿಜೃಂಭಣೆಯಿಂದ ಆಚರಿಸಿ ನಿಮ್ಮ ನಡುವಿನ ಸಂಬಂಧವನ್ನು ಗಟ್ಟಿಗೊಳಿಸಿ. ನಿಮ್ಮ ಸಹೋದರ-ಸಹೋದರಿ ಪ್ರೇಮ ದೀರ್ಘಕಾಲದವರೆಗೆ ಒಳ್ಳೆ ರೀತಿಯಲ್ಲಿ ಇರಲೆಂದು ದೇವರಲ್ಲಿ ಪ್ರಾರ್ಥಿಸಿ.

Continue Reading
Advertisement
physical abuse hsr layout
ಕ್ರೈಂ33 mins ago

Physical Abuse: ಪಾರ್ಟಿ ಮುಗಿಸಿ ಲಿಫ್ಟ್‌ ಕೇಳಿದ ಯುವತಿಯ ಮೇಲೆರಗಿದ ಕಾಮುಕನ ಬಂಧನ; ಸಂತ್ರಸ್ತೆಯ ಜೀವ ಉಳಿಸಿದ SOS ಬಟನ್!

ಬಾಲಿವುಡ್39 mins ago

Deepika Padukone: ತುಂಬು ಗರ್ಭಿಣಿ ದೀಪಿಕಾ ಪಡುಕೋಣೆ ಮುಂಬೈನಲ್ಲಿ ಸುತ್ತಾಟ; ವಿಡಿಯೊ ವೈರಲ್‌!

Viral Video
ವೈರಲ್ ನ್ಯೂಸ್60 mins ago

Viral Video: ದೇವಸ್ಥಾನದಿಂದ ಬರ್ತಿದ್ದ ಪುರೋಹಿತರ ಮೇಲೆ ಚಾಕು, ದೊಣ್ಣೆಯಿಂದ ಡೆಡ್ಲಿ ಅಟ್ಯಾಕ್‌! ವಿಡಿಯೋ ಇದೆ

CM Siddaramaiah and high court
ಪ್ರಮುಖ ಸುದ್ದಿ1 hour ago

CM Siddaramaiah: ಇಂದು ಕಟಕಟೆ ಏರಲಿದೆ ಮುಡಾ ಪ್ರಕರಣ; 20 ಅಂಶಗಳೊಂದಿಗೆ ಸಿದ್ದರಾಮಯ್ಯ ಹೈಕೋರ್ಟ್‌ಗೆ; ಇಂದು ಏನೇನಾಗಲಿದೆ?

Vinay Rajkumar Pepe Trailer Shreelesh SNair out
ಸ್ಯಾಂಡಲ್ ವುಡ್1 hour ago

Vinay Rajkumar: ಪೆಪೆ ಟ್ರೈಲರ್ ಔಟ್‌; ವಿನಯ್‌ ರಾಜ್‌ಕುಮಾರ್ ಸಿನಿಮಾ ಹಿಟ್‌ ಗ್ಯಾರಂಟಿ ಅಂದ್ರು ಫ್ಯಾನ್ಸ್‌!

Fake Garlic
ವೈರಲ್ ನ್ಯೂಸ್2 hours ago

Fake Garlic: ಎಚ್ಚರ..ಎಚ್ಚರ.. ಮಾರ್ಕೆಟ್‌ಗೆ ಲಗ್ಗೆ ಇಟ್ಟಿದೆ ಸಿಮೆಂಟ್‌ ಬೆಳ್ಳುಳ್ಳಿ! ವಿಡಿಯೋ ನೋಡಿದ್ರೆ ಶಾಕ್‌ ಆಗೋದು ಗ್ಯಾರಂಟಿ

kolar teacher murder case
ಕ್ರೈಂ2 hours ago

Murder Case: ಗಂಡನ ಫೈನಾನ್ಸ್‌ ವ್ಯವಹಾರಕ್ಕಾಗಿ ಹೆಂಡತಿಯ ಹತ್ಯೆ; ಕೊಲೆ ಮಾಡಿ ತಿರುಪತಿಯಲ್ಲಿ ತಲೆಮರೆಸಿಕೊಂಡವರ ಸೆರೆ

Kidnap Case
ಬೆಂಗಳೂರು2 hours ago

Kidnap case: ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರು ಹೇಳಿ ವಿದ್ಯಾರ್ಥಿಯ ಕಿಡ್ನಾಪ್!

Woman Using an Asthma Inhaler
ಆರೋಗ್ಯ3 hours ago

Myths About Asthma: ಇವು ಅಸ್ತಮಾ ಕುರಿತು ಇರುವ 9 ಸುಳ್ಳುಗಳು!

food poison bangalore
ಬೆಂಗಳೂರು3 hours ago

Food Poison: ಊಟ ಮಾಡುವಾಗ ಇಲಿ ವಿಷ ಸಿಂಪಡಣೆ, ವಿದ್ಯಾರ್ಥಿಗಳು ಅಸ್ವಸ್ಥ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌