ರಾಜಮಾರ್ಗ ಅಂಕಣ: ಭಾರತೀಯ ಸೋದರತೆಯ ಮಹಾ ಪರ್ವ - ರಕ್ಷಾ ಬಂಧನ - Vistara News

ಪ್ರಮುಖ ಸುದ್ದಿ

ರಾಜಮಾರ್ಗ ಅಂಕಣ: ಭಾರತೀಯ ಸೋದರತೆಯ ಮಹಾ ಪರ್ವ – ರಕ್ಷಾ ಬಂಧನ

ರಾಜಮಾರ್ಗ ಅಂಕಣ: ಹಲವು ನೂಲಿನ ದಾರಗಳನ್ನು ಒಂದೇ ಗಟ್ಟಿ ದಾರದ ಮೂಲಕ ಬಂಧಿಸುವುದೇ ರಕ್ಷೆ. ಅಂದರೆ ಜಾತಿ, ವರ್ಣಬೇಧಗಳನ್ನು ಮೆಟ್ಟಿ ನಿಂತು ಇಡೀ ಹಿಂದೂಸಮಾಜವು ಒಗ್ಗಟ್ಟಾಗಿ ನಿಲ್ಲಬೇಕು ಎನ್ನುವುದು ಈ ರಕ್ಷಾಬಂಧನ ಹಬ್ಬದ ಅಲ್ಟಿಮೇಟ್ ಸಂದೇಶ.

VISTARANEWS.COM


on

raksha bandhan 2024 ರಾಜಮಾರ್ಗ ಅಂಕಣ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಅದರ ಪೌರಾಣಿಕ, ಐತಿಹಾಸಿಕ ಮತ್ತು ಸಾಮಾಜಿಕ ಆಯಾಮ

:: ರಾಜೇಂದ್ರ ಭಟ್ ಕೆ.

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ನಾಡಿನ ಸಮಸ್ತ ಸೋದರ, ಸೋದರಿಯವರಿಗೆ ರಕ್ಷಾಬಂಧನ (Raksha bandhan) ಹಬ್ಬದ ಶುಭಾಶಯಗಳು. ಶ್ರಾವಣ ಪೌರ್ಣಮಿಯ ಈ ದಿನ ಪ್ರತಿಯೊಬ್ಬ ಸೋದರಿಯೂ ತನ್ನ ಸೋದರನಿಗೆ ರಕ್ಷೆ ಕಟ್ಟಿ ತನ್ನ ಮಾನ, ಪ್ರಾಣ ಮತ್ತು ಸ್ವಾಭಿಮಾನದ ರಕ್ಷಣೆ ಮಾಡು ಅಣ್ಣಾ ಎಂದು ವಿನಂತಿಸುವ ಹಬ್ಬವೇ ರಕ್ಷಾಬಂಧನ (Rakhi Festival 2024). ಅದನ್ನು ನಿಭಾಯಿಸಬೇಕಾದದ್ದು ಪ್ರತಿಯೊಬ್ಬ ಅಣ್ಣನ ಕರ್ತವ್ಯ.

ನಾವು ಆಚರಿಸುವ ಫಾದರ್ಸ್ ಡೇ, ಮದರ್ಸ್ ಡೇ, ಲವರ್ಸ್ ಡೇ ಇವೆಲ್ಲವೂ ಪಾಶ್ಚಾತ್ಯ ಅನುಕರಣೆಯಿಂದ ಬಂದ ಹಬ್ಬಗಳು. ಆದರೆ ರಕ್ಷಾಬಂಧನ (ಅಥವಾ ರಾಖೀ ಹಬ್ಬ) ಅಪ್ಪಟ ಭಾರತೀಯ ಸಂಸ್ಕೃತಿಯ ಹಬ್ಬ ಎಂಬ ಕಾರಣಕ್ಕೆ ಅದು ನಮಗೆ ಹೆಚ್ಚು ಆಪ್ತವಾಗಬೇಕು. ಇಲ್ಲಿ ಸೋದರತೆಯು ರಕ್ತ ಸಂಬಂಧವನ್ನು ಮೀರಿದ್ದು, ಜಾತಿ, ಮತ, ಭಾಷೆ, ರಾಷ್ಟ್ರಗಳ ಸೀಮೆಗಳನ್ನು ಮೀರಿದ್ದು ಎನ್ನುವುದು ನೂರಾರು ಬಾರಿ ಸಾಬೀತಾಗಿದೆ.

ಪುರಾಣಗಳ ಹಿನ್ನೆಲೆ

ಮಹಾಭಾರತದಲ್ಲಿ ಯಾವುದೋ ಸನ್ನಿವೇಶದಲ್ಲಿ ಯುದ್ಧ ಮಾಡುತ್ತಿರುವಾಗ ಕೃಷ್ಣ ದೇವರ ಬೆರಳಿಗೆ ಗಾಯವಾಗಿ ರಕ್ತ ಹರಿಯುತ್ತದೆ. ಆಗ ಸಮೀಪದಲ್ಲಿ ಇದ್ದ ದ್ರೌಪದಿ ಆತಂಕಗೊಂಡು ತನ್ನ ಕೇಸರಿ ಬಣ್ಣದ ಸೀರೆಯ ಸೆರಗನ್ನು ಹರಿದು ಅದನ್ನು ಕೃಷ್ಣ ದೇವರ ಬೆರಳಿಗೆ ಕಟ್ಟಿದ್ದೇ ರಕ್ಷೆ ಆಯಿತು. ಕೃಷ್ಣ ದ್ರೌಪದಿಯನ್ನು ಆ ಕ್ಷಣಕ್ಕೆ ಸೋದರಿಯಾಗಿ ತೆಗೆದುಕೊಳ್ಳುತ್ತಾನೆ. ಮುಂದೆ ಕೌರವನ ಆಸ್ಥಾನದಲ್ಲಿ ದ್ರೌಪದಿಯ ವಸ್ತ್ರಾಪಹರಣದ ಪ್ರಸಂಗ ಬಂದಾಗ ಅದೇ ಕೃಷ್ಣನು ದ್ರೌಪದಿಗೆ ಅಕ್ಷಯಾಂಬರವನ್ನು ನೀಡಿ ತನ್ನ
ಸೋದರತ್ವದ ಋಣವನ್ನು ತೀರಿಸಿದನು ಅನ್ನುವುದು ಮಹಾಭಾರತದ ಕಥೆ. ಹಾಗೆಯೇ ಮುಂದೆ ದ್ರೌಪದಿಯು ಆಸೆ ಪಟ್ಟಂತೆ ಕೃಷ್ಣನು ಕುರುಕ್ಷೇತ್ರದ ಯುದ್ಧವನ್ನು ಪೂರ್ತಿ ಮಾಡಿಕೊಟ್ಟದ್ದೂ ತನ್ನ ಸೋದರಿಯ ಮೇಲಿನ ಪ್ರೀತಿಯಿಂದ.

ಬಲಿ ಚಕ್ರವರ್ತಿಗೆ ಲಕ್ಷ್ಮಿದೇವಿಯು ರಕ್ಷೆ ಕಟ್ಟಿದ್ದು ಯಾಕೆ?

ಮಹಾಪರಾಕ್ರಮಿಯಾದ ದಾನವ ಬಲಿ ಚಕ್ರವರ್ತಿಗೆ ಲಕ್ಷ್ಮಿಯು ಕೇಸರಿ ಬಣ್ಣದ ನೂಲಿನ ದಾರವನ್ನು ಕಟ್ಟಿ ಕೈಮುಗಿದು ನಿಲ್ಲುತ್ತಾಳೆ. ಆಗ ಬಲಿಯು ಕರಗಿ ಏನಾಗಬೇಕು ತಂಗಿ? ಎಂದು ಕೇಳುತ್ತಾನೆ. ಆಗ ಲಕ್ಷ್ಮಿಯು ನನ್ನ ಗಂಡ ಮಹಾವಿಷ್ಣುವು ಶಾಪಗ್ರಸ್ತನಾಗಿ ನಿನ್ನ ದ್ವಾರಪಾಲಕ ಆಗಿದ್ದಾನೆ. ಆತನನ್ನು ಬಿಡುಗಡೆ ಮಾಡಿ ಅಣ್ಣ ಎನ್ನುತ್ತಾಳೆ. ಒಂದು ಕ್ಷಣವೂ ವಿಳಂಬ ಮಾಡದೆ ವಿಷ್ಣುವನ್ನು ಬಿಡುಗಡೆ ಮಾಡಿ ಲಕ್ಷ್ಮಿಯ ಜೊತೆಗೆ ವೈಕುಂಠಕ್ಕೆ ಕಳುಹಿಸಿಕೊಟ್ಟನು ಅನ್ನುವುದು ಇನ್ನೊಂದು ಉಲ್ಲೇಖ. ಇಂತಹ ನೂರಾರು ಉಲ್ಲೇಖಗಳು ನಮ್ಮ ಪುರಾಣಗಳಲ್ಲಿ ದೊರೆಯುತ್ತವೆ.

ರಕ್ಷೆಯ ಐತಿಹಾಸಿಕ ಹಿನ್ನೆಲೆ

ಭಾರತದ ಮೇಲೆ ಅಲೆಕ್ಸಾಂಡರ್ ದಂಡೆತ್ತಿ ಬಂದಾಗ ಅಳುಕಿದ್ದು ವಾಯುವ್ಯದ ದೊರೆ ಪುರೂರವನ ಬಲಿಷ್ಠ ಸೇನೆಯನ್ನು ನೋಡಿ. ಆಗ ಅಲೆಕ್ಸಾಂಡರನ ಪತ್ನಿ ರೋಕ್ಸಾನಾ ಪುರೂರವನ ಬಳಿಗೆ ಬಂದು ರಕ್ಷೆಯನ್ನು ಕಟ್ಟಿ ಪತಿಯ ಪ್ರಾಣ ಭಿಕ್ಷೆಯನ್ನು ಬೇಡಿದ್ದಳು. ಮುಂದೆ ಯುದ್ಧ ನಡೆದು ಅಲೆಕ್ಸಾಂಡರ್ ಸೋತು ಧರಾಶಾಯಿಯಾದಾಗ ಅದೇ ಪುರೂರವ ಆತನ ಪ್ರಾಣರಕ್ಷೆ ಮಾಡಿ ತನ್ನ ಸೋದರನ ಕರ್ತವ್ಯವನ್ನು ನಿಭಾಯಿಸಿದ್ದನು!

ಅದೇ ರೀತಿ ರಜಪೂತ ರಾಣಿ ಕರ್ಣಾವತಿಯು ತನ್ನ ಗಂಡನನ್ನು ಕಳೆದುಕೊಂಡರೂ ಧೃತಿಗೆಡದೆ ಮೇವಾಡವನ್ನು ಅಳುತ್ತಿದ್ದಳು. ಆಗ ಗುಜರಾತ್ ದೊರೆ ಬಹಾದ್ದೂರ್ ಶಾ ದುರಾಸೆಯಿಂದ ಮೇವಾಡದ ಮೇಲೆ ದಂಡೆತ್ತಿಕೊಂಡು ಬರುತ್ತಾನೆ. ಆಗ ಅಭಯವನ್ನು ಕೇಳಿ ರಾಣಿಯು ಪತ್ರವನ್ನು ಬರೆದು ರಕ್ಷೆ ಕಳುಹಿಸಿದ್ದು ಮೊಘಲ್ ದೊರೆ ಹುಮಾಯೂನನಿಗೆ. ಅದಕ್ಕೆ ಗೌರವ ಕೊಟ್ಟು ಹುಮಾಯೂನ್ ಆಕೆಯ ರಕ್ಷಣೆಗೆ ಓಡೋಡಿ ಬಂದ ಘಟನೆಯು ಇತಿಹಾಸದಲ್ಲಿ ಇದೆ.

Raksha Bandhan 2024

ಬಂಗಾಳವನ್ನು ಒಗ್ಗೂಡಿಸಿದ ರಕ್ಷೆ!

1905ರಲ್ಲಿ ಬ್ರಿಟಿಷರು ಬಲಿಷ್ಠ ಬಂಗಾಳ ಪ್ರಾಂತ್ಯವನ್ನು ಒಡೆದು ಭಾರತೀಯರ ಐಕ್ಯತೆಯನ್ನು ಒಡೆದರು. ಆಗ ಹಿಂದೂ ಮುಸಲ್ಮಾನರು ಬೀದಿಗೆ ಇಳಿದು ಪರಸ್ಪರ ರಕ್ತ ಚೆಲ್ಲುವ ಕೆಲಸ ಆರಂಭ ಆಯಿತು. ಆಗ ರಾಷ್ಟ್ರಕವಿ ರವೀಂದ್ರನಾಥ ಟ್ಯಾಗೋರರು ಶ್ರಾವಣ ಹುಣ್ಣಿಮೆಯಂದು ಹಿಂದೂ ಮುಸಲ್ಮಾನರು ಪರಸ್ಪರ ರಕ್ಷೆಯನ್ನು ಕಟ್ಟಿ ಸೋದರತೆಯ ಸಂದೇಶವನ್ನು ಸಾರಬೇಕು ಎಂದು ಕರೆನೀಡಿದರು. ಬ್ರಿಟಿಷ್ ಸರಕಾರ ಈ ಆಚರಣೆಯನ್ನು ತಡೆಯಲು ಶತಪ್ರಯತ್ನ ಮಾಡಿದರೂ ಇಡೀ ಬಂಗಾಳ ರಕ್ಷಾಬಂಧನದ ಹಬ್ಬ ಆಚರಣೆ ಮಾಡಿ ಐಕ್ಯತೆಯ ಸಂದೇಶವನ್ನು ಸಾರಿತು!

ಕೇಸರಿ ಬಣ್ಣವು ತ್ಯಾಗದ ಸಂಕೇತ, ರಕ್ಷೆಯು ಐಕ್ಯತೆಯ ಸಂಕೇತ

ಹಿಂದೂ ಧರ್ಮದ ನಂಬಿಕೆಗಳ ಪ್ರಕಾರ ಕೇಸರಿ ಬಣ್ಣವು ತ್ಯಾಗ ಮತ್ತು ಬಲಿದಾನದ ಸಂಕೇತ. ಹಿಂದೆ ಋಷಿಮುನಿಗಳು ಧರಿಸುತ್ತಿದದ್ದು ಕಾವಿ ( ಕೇಸರಿ) ಬಣ್ಣದ ದಿರಿಸು. ಅವರು ಮಾಡುತ್ತಿದ್ದ ಯಜ್ಞದ ಅಗ್ನಿಯ ಬಣ್ಣ ಕೇಸರಿ. ಸೂರ್ಯ ಬೆಳಿಗ್ಗೆ ಉದಯಿಸುವಾಗ, ಸಂಜೆ ಮುಳುಗುವಾಗ ಅದೇ ಕೇಸರಿ ಬಣ್ಣವನ್ನು ಪಡೆಯುತ್ತಾನೆ. ಇಲ್ಲಿನ ಮಣ್ಣಿನ ಬಣ್ಣವೂ ಕೇಸರಿ.

ಹಾಗೆಯೇ ಹಲವು ನೂಲಿನ ದಾರಗಳನ್ನು ಒಂದೇ ಗಟ್ಟಿ ದಾರದ ಮೂಲಕ ಬಂಧಿಸುವುದೇ ರಕ್ಷೆ. ಅಂದರೆ ಜಾತಿ, ವರ್ಣಬೇಧಗಳನ್ನು ಮೆಟ್ಟಿ ನಿಂತು ಇಡೀ ಹಿಂದೂಸಮಾಜವು ಒಗ್ಗಟ್ಟಾಗಿ ನಿಲ್ಲಬೇಕು ಎನ್ನುವುದು ಈ ರಕ್ಷಾಬಂಧನ ಹಬ್ಬದ ಅಲ್ಟಿಮೇಟ್ ಸಂದೇಶ.

ಬದಲಾದ ಸಾಮಾಜಿಕ ಘಟ್ಟದಲ್ಲಿ ರಕ್ಷೆ

ಸ್ತ್ರೀಯು ದುರ್ಬಲಳು ಅಥವಾ ಪರಾಧೀನಳು ಎಂದು ಭಾವಿಸಿದ ಕಾಲ ಒಂದಿತ್ತು. ಈಗ ಕಾಲವು ಸಂಪೂರ್ಣ ಬದಲಾವಣೆ ಆಗಿದೆ. ಈಗ ಸ್ತ್ರೀ ಸ್ವಯಂಭೂ ಶಕ್ತಿಸಂಪನ್ನೆಯಾಗಿ ಇರುವ ಈ ಆಧುನಿಕ ಕಾಲದಲ್ಲಿಯೂ ಆಕೆ ತನ್ನ ಮಾನ, ಪ್ರಾಣ, ಸ್ವಾಭಿಮಾನಗಳ ರಕ್ಷಣೆಗಾಗಿ ರಕ್ಷೆಯನ್ನು ಕಟ್ಟುತ್ತಾಳೆ ಎನ್ನುವುದಕ್ಕಿಂತ ಆ ರಕ್ಷೆಯು ಸೋದರರ ಪರಸ್ಪರ ಪ್ರೀತಿ, ನಂಬಿಕೆ, ವಿಶ್ವಾಸಗಳ ಪ್ರತೀಕವಾಗಿ ಬದಲಾಗಿದೆ. ಪ್ರತೀ ವರ್ಷವೂ ಈ ಹಬ್ಬ ಬಂದಾಗ ತನ್ನ ಅಣ್ಣನನ್ನು (ಇಲ್ಲಿ ಮತ್ತೆ ರಕ್ತಸಂಬಂಧ ಮೀರಿದ್ದು ಕೂಡ ಹೌದು) ಹುಡುಕಿಕೊಂಡು ಬಂದು ರಕ್ಷೆ ಕಟ್ಟಿ ,ಆರತಿ ಎತ್ತಿ, ಸಿಹಿ ತಿನ್ನಿಸಿ ಇಡೀ ವರ್ಷ ಅಣ್ಣಾ ಎಂದು ಬಾಯ್ತುಂಬ ಕರೆಯುವ ತಂಗಿಯರ ಸಂಭ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಹಾಗೆಯೇ ಅಂಚೆಯ ಮೂಲಕ ರಕ್ಷೆ ಕಳುಹಿಸಿಕೊಟ್ಟು ಕೂಡ ಅಣ್ಣನ ನೆನಪು ಮಾಡುವ ಸೋದರಿಯರು ಇದ್ದಾರೆ.

ಹಾಗೆಯೇ ಅವಳು ನನ್ನ ತಂಗಿ, ಇವಳು ನನ್ನ ತಂಗಿ ಕಣೋ ಎಂದು ಜಂಬದಲ್ಲಿ ಹೇಳಿಕೊಂಡು ಅಂಗೈ ತುಂಬಾ ಕೇಸರಿಯ ರಕ್ಷೆಗಳನ್ನು ಕಟ್ಟಿಕೊಂಡು ಸಂಭ್ರಮಿಸುವ ಅಣ್ಣಂದಿರಿಗೇನೂ ಕಡಿಮೆ ಇಲ್ಲ!

ಬದಲಾದ ಕಾಲಘಟ್ಟದಲ್ಲಿ ಕೂಡ ಈ ರಕ್ಷಾಬಂಧನದ ಹಬ್ಬವು ಹಿಂದೂ ಸಂಸ್ಕೃತಿಯನ್ನು ಜಾಗೃತಿ ಮಾಡುತ್ತದೆ ಎಂಬ ಕಾರಣಕ್ಕೆ ಪ್ರಾಮುಖ್ಯತೆ ಪಡೆಯುತ್ತದೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕನ್ನಡ ಚಿತ್ರರಂಗದ ಬಂಗಾರದ ಹುಡುಗ ರಿಶಬ್ ಶೆಟ್ಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಪ್ರಮುಖ ಸುದ್ದಿ

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

VISTARANEWS.COM


on

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್​ ವಿಧಾನಸಭೆಯಲ್ಲಿ ವಿಶ್ವಾಸ ಮತ ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡು ಅಸೆಂಬ್ಲಿಯಲ್ಲಿ ವಿಜಯ್​ ನೇತೃತ್ವದ ಟಿವಿಕೆಗೆ 144 ಸದಸ್ಯರ ಬೆಂಬಲ ಸಿಕ್ಕಿದೆ. 22 ಶಾಸಕರು ವಿಶ್ವಾಸ ಮತದ ವಿರುದ್ಧ ಮತ ಚಲಾಯಿಸಿದ್ದರು. ಐವರು ಶಾಸಕರು ಮತದಾನದಿಂದ ದೂರ ಉಳಿದಿದ್ದರು. ಎಐಡಿಎಂಕೆಯ ಒಂದು ಬಣ ಅಸೆಂಬ್ಲಿಯಲ್ಲಿ ಟಿವಿಕೆ ಪರ ಮತ ಚಲಾಯಿಸಿದೆ. ವಿರೋಧಪಕ್ಷ ಡಿಎಂಕೆ ಸಭಾತ್ಯಾಗ ಮಾಡಿತ್ತು. 108 ಸ್ಥಾನಗಳನ್ನು ಗೆಲ್ಲುವ ಮೂಲಕ ವಿಜಯ್ ನೇತೃತ್ವದ ಟಿವಿಕೆ ತಮಿಳುನಾಡಿನಲ್ಲಿ ಅತಿದೊಡ್ಡ ಪಕ್ಷವಾಗಿ ಹೊಮ್ಮಿತ್ತು. ವಿಜಯ್ ಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದ್ದರು.


ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ, 30 ಶಾಸಕರಿಂದ ಟಿವಿಕೆಗೆ ಮತ
ವಿಜಯ್ ವಿಶ್ವಾಸ ಮತ ಯಾಚನೆ ವೇಳೆ 30 ಎಐಎಡಿಎಂಕೆ ಶಾಸಕರು ಟಿವಿಕೆ ಪರ ಮತಚಲಾಯಿಸಿದ್ದು, ತಮಿಳುನಾಡಿನಲ್ಲಿ ಸಂಚಲನ ಮೂಡಿಸಿದೆ. ಇದರೊಂದಿಗೆ ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಡಿಎಂಕೆಯಲ್ಲಿ ಈಗ ಅತಿ ದೊಡ್ಡ ಆಂತರಿಕ ಸಂಘರ್ಷ ಏರ್ಪಟ್ಟಿದೆ. ತಮಿಳುನಾಡು ವಿಧಾನಸಭೆಯಲ್ಲಿ ಎಐಎಡಿಎಂಕೆ 47 ಶಾಸಕರನ್ನು ಹೊಂದಿದೆ. ಇದರಲ್ಲಿ 30 ಶಾಸಕರು ಟಿವಿಕೆ ಪರ ಮತ ಚಲಾಯಿಸಿದ್ದಾರೆ ಎನ್ನಲಾಗಿದೆ. ಪಕ್ಷದ ವಿಪ್​​ ಹೊರತಾಗಿಯೂ, ಈ ಶಾಸಕರು ವಿಜಯ್​​ಗೆ ಜೈ ಎಂದಿದ್ದಾರೆ. ವಿಜಯ್​ ಪರ ಮತ ಚಲಾಯಿಸಿದ ಎಐಎಡಿಎಂಕೆ ಶಾಸಕರು ಪಕ್ಷಾಂತರ ನಿಷೇಧ ಕಾಯಿದೆ ತೂಗು ಕತ್ತಿಯಿಂದ ಪಾರಾಗ್ತಾರಾ ಅನ್ನೋದು ಸದ್ಯದ ಕುತೂಹಲವಾಗಿದೆ.

Continue Reading

Latest

ಪ್ರಶ್ನೆ ಪತ್ರಿಕೆ ಸೋರಿಕೆ : ನೀಟ್‌ ಪರೀಕ್ಷೆ ರದ್ದು, ಮರುಪರೀಕ್ಷೆಗೆ ಆದೇಶ

VISTARANEWS.COM


on

ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ NTA 2026ನೇ ಸಾಲಿನ ನೀಟ್‌-ಯುಜಿ, ಪರೀಕ್ಷೆಯನ್ನು ರದ್ದುಗೊಳಿಸಿದೆ.
ಮೇ ಮೂರರಂದು ದೇಶಾದ್ಯಂತ ನೀಟ್‌ ಪರೀಕ್ಷೆ ನಡೆದಿತ್ತು. ರಾಜಾಸ್ಥಾನದಲ್ಲಿ ನೀಟ್‌ ಪ್ರಶ್ನೆ ಪತ್ರಿಕೆಗಳು ಲೀಕ್‌ ಆದ ಹಿನ್ನೆಲೆಯಲ್ಲಿ ಎನ್‌ಟಿಎ ಈ ಆದೇಶ ಹೊರಡಿಸಿದೆ. ಪ್ರಶ್ನೆ ಪತ್ರಿಕೆ ಲೀಕ್‌ ಆಗಿರುವುದನ್ನು ಎನ್‌ಟಿಎ ಸೇರಿ ವಿವಿಧ ಏಜೆನ್ಸಿಗಳು ದೃಢಪಡಿಸಿರುವ ಹಿನ್ನೆಲೆಯಲ್ಲಿ ಎನ್‌ಟಿಎ ನೀಟ್‌-ಯುಜಿ ಪರೀಕ್ಷೆಯನ್ನು ರದ್ದು ಪಡಿಸಿದೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ – ಎನ್‌ಟಿಎ ಮತ್ತೊಮ್ಮೆ ನೀಟ್‌ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದು, ಸದ್ಯದಲ್ಲೇ ಅದರ ದಿನಾಂಕ ಪ್ರಕಟಿಸಲಿದೆ. ಇದೇ ವೇಳೆ, ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರನ್ನು ಪತ್ತೆ ಹಚ್ಚಲು ಸರ್ಕಾರ ನಿರ್ಧರಿಸಿದೆ. ಹಾಗಾಗಿ, ಸಿಬಿಐ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸಲಿದೆ.
ಮೇ 3ರಂದು ದೇಶವ್ಯಾಪಿ ನಡೆದಿದ್ದ ನೀಟ್‌ ಪರೀಕ್ಷೆಯಲ್ಲಿ 22.79 ಲಕ್ಷ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಏನಿದು ಪ್ರಕರಣ?:
ಮೇ ಮೂರರ ನೀಟ್‌ ಪರೀಕ್ಷೆಯಲ್ಲಿ ರಾಜಾಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ವರದಿಗಳು ಹರಿದಾಡಿದ್ದವು. ರಾಜಸ್ಥಾನ ಸ್ಪೆಷಲ್‌ ಆಪರೇಷನ್‌ ಗ್ರೂಪ್‌ ಸಂಸ್ಥೆ ಈ ಪ್ರಕರಣದ ತನಿಖೆ ನಡೆಸುತ್ತಿದೆ. ತನಿಖೆ ವೇಳೆ ಅಸಲಿ ನೀಟ್‌ ಪರೀಕ್ಷೆಯ 120 ಪ್ರಶ್ನೆಗಳು ಸಲಹೆ ಪತ್ರಿಕೆ ಅಂದರೆ ಸಜೆಶನ್‌ ಪೇಪರ್‌ನ ಪ್ರಶ್ನೆಗಳ ಜೊತೆ ತಾಳೆಯಾಗಿದ್ದುದ್ದು ಬಹಿರಂಗವಾಗಿತ್ತು. ಹಾಗಾಗಿ, ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂಬ ಅನುಮಾನ ದೃಢಪಟ್ಟಿತ್ತು. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾದ ಕಾರಣ, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ, ಸಿಬಿಐ ತನಿಖೆಗೆ ಆದೇಶಿಸಿದೆ.

Continue Reading

Latest

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

VISTARANEWS.COM


on

ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ ಪದಗ್ರಹಣದ ಬಳಿಕ ತಮ್ಮ ಮೊದಲ ಭಾಷಣದಲ್ಲಿ ಜನತೆಗೆ ತಾನು ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುವುದಾಗಿ ಸ್ಪಷ್ಟಪಡಿಸಿದರು.

“ನಾನು ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇನೆ. ತಮಿಳುನಾಡಿನ 8 ಕೋಟಿ ಜನರೂ ನನ್ನವರೇ. ನಾನು ನಿಮ್ಮಲ್ಲೊಬ್ಬ., ನಿಮ್ಮ ಕುಟುಂಬದ ಸದಸ್ಯ, ನಿಮ್ಮ ಮನೆ ಮಗನಾಗಿ ಕೆಲಸ ಮಾಡುತ್ತೇನೆ” ಎಂದು ವಿಜಯ್‌ ಹೇಳಿದರು.

“ಇಲ್ಲಿರುವುದು ಒಂದೇ ಪವರ್‌ ಸೆಂಟರ್‌. ಆ ಕಡೆ ಒಂದು, ಈ ಕಡೆ ಒಂದು ಪವರ್‌ ಸೆಂಟರ್‌ ಇಲ್ಲ. ತಮಿಳುನಾಡಿನಲ್ಲಿ ಹೊಸ ಯುಗಾರಂಭ ಆಗಿದೆ” ಎಂದು ಅವರು ಘೋಷಿಸಿದರು.

ಹಿಂದೂ, ಕ್ರೈಸ್ತ ಹಾಗೂ ಮುಸ್ಲಿಂ ಸೇರಿದಂತೆ ಎಲ್ಲ ಧರ್ಮಗಳ ಜನರ ಹಿತ ಕಾಪಾಡುವುದಾಗಿ ಹೇಳಿದ ವಿಜಯ್‌, “ನಿಜವಾದ ಜಾತ್ಯಾತೀತ ಹಾಗೂ ಸಮಾಜವಾದಿ ಆಡಳಿತ ಆರಂಭವಾಗಿದೆ” ಎಂದು ತಿಳಿಸಿದರು.

ತಮ್ಮ ಸರ್ಕಾರ ರಚನೆಗೆ ಬೆಂಬಲ ನೀಡಿದ ಕಾಂಗ್ರೆಸ್‌, ವಿಸಿಕೆ ಹಾಗೂ ಎಡಪಕ್ಷಗಳಿಗೆ ಧನ್ಯವಾದ ಅರ್ಪಿಸಿದ ವಿಜಯ್‌, “ನನ್ನ ಸಹೋದರ ರಾಹುಲ್‌ ಗಾಂಧಿಗೆ ವಿಶೇಷ ಧನ್ಯವಾದ” ಎಂದರು.

“ನನ್ನ ಜನರ ಹಣ ಲೂಟಿ ಮಾಡಲು ನಾನು ಬಿಡುವುದಿಲ್ಲ” ಎಂದು ಭ್ರಷ್ಟಾಚಾರ ವಿರುದ್ಧ ಕಠಿಣ ನಿಲುವು ತಾಳುವುದಾಗಿ ಸಿಎಂ ವಿಜಯ್‌ ಸ್ಪಷ್ಟಪಡಿಸಿದರು.

Continue Reading

Latest

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

VISTARANEWS.COM


on

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಜೋಸೆಫ್‌ ವಿಜಯ್‌ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಚೆನ್ನೈನ ನೆಹರೂ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ದೇವರ ಹೆಸರಿನಲ್ಲಿ ವಿಜಯ್‌ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಮಾಡಿದರು.

ಟಿವಿಕೆ ಪಕ್ಷ ಕಾಂಗ್ರೆಸ್‌, ವಿಸಿಕೆ ಮತ್ತು ಎಡಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಿದೆ. ಸಚಿವ ಸಂಪುಟದಲ್ಲಿ ಎನ್‌. ಆನಂದ್‌, ಆಥವ್‌ ಅರ್ಜುನ್‌, ಡಾ. ಅರುಣ್‌ ರಾಜ್‌, ಕೆ.ಎ. ಸೆಂಗೋಟ್ಟಿಯ್ಯನ್‌, ಪಿ. ವೆಂಕಟರಮಣನ್‌, ಆರ್‌. ನಿರ್ಮಲ್‌ ಕುಮಾರ್‌, ಎ.ರಾಜ್‌ ಮೋಹನ್‌, ಟಿ.ಕೆ. ಪ್ರಭು, ಸೆಲ್ವಿ ಎಸ್‌. ಕೀರ್ತನಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಚಿತ್ರನಟಿ ತ್ರಿಶಾ, ವಿಜಯ್‌ ತಂದೆತಾಯಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ವಿಜಯ್‌ ಪದಗ್ರಹಣ ಸಮಾರಂಭಕ್ಕೆ ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು.

Continue Reading
Advertisement
ಪ್ರಮುಖ ಸುದ್ದಿ55 minutes ago

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

ಸಿನಿಮಾ1 hour ago

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

Latest22 hours ago

ನೀಟ್‌ ಪರೀಕ್ಷೆ ರದ್ದು: ಕೇಂದ್ರ ಸರ್ಕಾರವೇ ಹೊಣೆ- ಡಾ.ಎಂ.ಸಿ.ಸುಧಾಕರ್‌

Latest1 day ago

ಪ್ರಶ್ನೆ ಪತ್ರಿಕೆ ಸೋರಿಕೆ : ನೀಟ್‌ ಪರೀಕ್ಷೆ ರದ್ದು, ಮರುಪರೀಕ್ಷೆಗೆ ಆದೇಶ

Latest1 day ago

ಅಸ್ಸಾಂ ಸಿಎಂ ಆಗಿ ಹಿಮಂತ್‌ ಬಿಸ್ವಾ ಪದಗ್ರಹಣ

Latest2 days ago

ಸಿಎಂ ಆದ ಮರುದಿನವೇ ಮಾಜಿ ಸಿಎಂ ಸ್ಟಾಲಿನ್‌ ಭೇಟಿಯಾದ ವಿಜಯ್‌

Latest3 days ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ3 days ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest3 days ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest3 days ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌