ರಾಜಮಾರ್ಗ ಅಂಕಣ: ಭಾರತೀಯ ಸೋದರತೆಯ ಮಹಾ ಪರ್ವ - ರಕ್ಷಾ ಬಂಧನ - Vistara News

ಪ್ರಮುಖ ಸುದ್ದಿ

ರಾಜಮಾರ್ಗ ಅಂಕಣ: ಭಾರತೀಯ ಸೋದರತೆಯ ಮಹಾ ಪರ್ವ – ರಕ್ಷಾ ಬಂಧನ

ರಾಜಮಾರ್ಗ ಅಂಕಣ: ಹಲವು ನೂಲಿನ ದಾರಗಳನ್ನು ಒಂದೇ ಗಟ್ಟಿ ದಾರದ ಮೂಲಕ ಬಂಧಿಸುವುದೇ ರಕ್ಷೆ. ಅಂದರೆ ಜಾತಿ, ವರ್ಣಬೇಧಗಳನ್ನು ಮೆಟ್ಟಿ ನಿಂತು ಇಡೀ ಹಿಂದೂಸಮಾಜವು ಒಗ್ಗಟ್ಟಾಗಿ ನಿಲ್ಲಬೇಕು ಎನ್ನುವುದು ಈ ರಕ್ಷಾಬಂಧನ ಹಬ್ಬದ ಅಲ್ಟಿಮೇಟ್ ಸಂದೇಶ.

VISTARANEWS.COM


on

raksha bandhan 2024 ರಾಜಮಾರ್ಗ ಅಂಕಣ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಅದರ ಪೌರಾಣಿಕ, ಐತಿಹಾಸಿಕ ಮತ್ತು ಸಾಮಾಜಿಕ ಆಯಾಮ

:: ರಾಜೇಂದ್ರ ಭಟ್ ಕೆ.

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ನಾಡಿನ ಸಮಸ್ತ ಸೋದರ, ಸೋದರಿಯವರಿಗೆ ರಕ್ಷಾಬಂಧನ (Raksha bandhan) ಹಬ್ಬದ ಶುಭಾಶಯಗಳು. ಶ್ರಾವಣ ಪೌರ್ಣಮಿಯ ಈ ದಿನ ಪ್ರತಿಯೊಬ್ಬ ಸೋದರಿಯೂ ತನ್ನ ಸೋದರನಿಗೆ ರಕ್ಷೆ ಕಟ್ಟಿ ತನ್ನ ಮಾನ, ಪ್ರಾಣ ಮತ್ತು ಸ್ವಾಭಿಮಾನದ ರಕ್ಷಣೆ ಮಾಡು ಅಣ್ಣಾ ಎಂದು ವಿನಂತಿಸುವ ಹಬ್ಬವೇ ರಕ್ಷಾಬಂಧನ (Rakhi Festival 2024). ಅದನ್ನು ನಿಭಾಯಿಸಬೇಕಾದದ್ದು ಪ್ರತಿಯೊಬ್ಬ ಅಣ್ಣನ ಕರ್ತವ್ಯ.

ನಾವು ಆಚರಿಸುವ ಫಾದರ್ಸ್ ಡೇ, ಮದರ್ಸ್ ಡೇ, ಲವರ್ಸ್ ಡೇ ಇವೆಲ್ಲವೂ ಪಾಶ್ಚಾತ್ಯ ಅನುಕರಣೆಯಿಂದ ಬಂದ ಹಬ್ಬಗಳು. ಆದರೆ ರಕ್ಷಾಬಂಧನ (ಅಥವಾ ರಾಖೀ ಹಬ್ಬ) ಅಪ್ಪಟ ಭಾರತೀಯ ಸಂಸ್ಕೃತಿಯ ಹಬ್ಬ ಎಂಬ ಕಾರಣಕ್ಕೆ ಅದು ನಮಗೆ ಹೆಚ್ಚು ಆಪ್ತವಾಗಬೇಕು. ಇಲ್ಲಿ ಸೋದರತೆಯು ರಕ್ತ ಸಂಬಂಧವನ್ನು ಮೀರಿದ್ದು, ಜಾತಿ, ಮತ, ಭಾಷೆ, ರಾಷ್ಟ್ರಗಳ ಸೀಮೆಗಳನ್ನು ಮೀರಿದ್ದು ಎನ್ನುವುದು ನೂರಾರು ಬಾರಿ ಸಾಬೀತಾಗಿದೆ.

ಪುರಾಣಗಳ ಹಿನ್ನೆಲೆ

ಮಹಾಭಾರತದಲ್ಲಿ ಯಾವುದೋ ಸನ್ನಿವೇಶದಲ್ಲಿ ಯುದ್ಧ ಮಾಡುತ್ತಿರುವಾಗ ಕೃಷ್ಣ ದೇವರ ಬೆರಳಿಗೆ ಗಾಯವಾಗಿ ರಕ್ತ ಹರಿಯುತ್ತದೆ. ಆಗ ಸಮೀಪದಲ್ಲಿ ಇದ್ದ ದ್ರೌಪದಿ ಆತಂಕಗೊಂಡು ತನ್ನ ಕೇಸರಿ ಬಣ್ಣದ ಸೀರೆಯ ಸೆರಗನ್ನು ಹರಿದು ಅದನ್ನು ಕೃಷ್ಣ ದೇವರ ಬೆರಳಿಗೆ ಕಟ್ಟಿದ್ದೇ ರಕ್ಷೆ ಆಯಿತು. ಕೃಷ್ಣ ದ್ರೌಪದಿಯನ್ನು ಆ ಕ್ಷಣಕ್ಕೆ ಸೋದರಿಯಾಗಿ ತೆಗೆದುಕೊಳ್ಳುತ್ತಾನೆ. ಮುಂದೆ ಕೌರವನ ಆಸ್ಥಾನದಲ್ಲಿ ದ್ರೌಪದಿಯ ವಸ್ತ್ರಾಪಹರಣದ ಪ್ರಸಂಗ ಬಂದಾಗ ಅದೇ ಕೃಷ್ಣನು ದ್ರೌಪದಿಗೆ ಅಕ್ಷಯಾಂಬರವನ್ನು ನೀಡಿ ತನ್ನ
ಸೋದರತ್ವದ ಋಣವನ್ನು ತೀರಿಸಿದನು ಅನ್ನುವುದು ಮಹಾಭಾರತದ ಕಥೆ. ಹಾಗೆಯೇ ಮುಂದೆ ದ್ರೌಪದಿಯು ಆಸೆ ಪಟ್ಟಂತೆ ಕೃಷ್ಣನು ಕುರುಕ್ಷೇತ್ರದ ಯುದ್ಧವನ್ನು ಪೂರ್ತಿ ಮಾಡಿಕೊಟ್ಟದ್ದೂ ತನ್ನ ಸೋದರಿಯ ಮೇಲಿನ ಪ್ರೀತಿಯಿಂದ.

ಬಲಿ ಚಕ್ರವರ್ತಿಗೆ ಲಕ್ಷ್ಮಿದೇವಿಯು ರಕ್ಷೆ ಕಟ್ಟಿದ್ದು ಯಾಕೆ?

ಮಹಾಪರಾಕ್ರಮಿಯಾದ ದಾನವ ಬಲಿ ಚಕ್ರವರ್ತಿಗೆ ಲಕ್ಷ್ಮಿಯು ಕೇಸರಿ ಬಣ್ಣದ ನೂಲಿನ ದಾರವನ್ನು ಕಟ್ಟಿ ಕೈಮುಗಿದು ನಿಲ್ಲುತ್ತಾಳೆ. ಆಗ ಬಲಿಯು ಕರಗಿ ಏನಾಗಬೇಕು ತಂಗಿ? ಎಂದು ಕೇಳುತ್ತಾನೆ. ಆಗ ಲಕ್ಷ್ಮಿಯು ನನ್ನ ಗಂಡ ಮಹಾವಿಷ್ಣುವು ಶಾಪಗ್ರಸ್ತನಾಗಿ ನಿನ್ನ ದ್ವಾರಪಾಲಕ ಆಗಿದ್ದಾನೆ. ಆತನನ್ನು ಬಿಡುಗಡೆ ಮಾಡಿ ಅಣ್ಣ ಎನ್ನುತ್ತಾಳೆ. ಒಂದು ಕ್ಷಣವೂ ವಿಳಂಬ ಮಾಡದೆ ವಿಷ್ಣುವನ್ನು ಬಿಡುಗಡೆ ಮಾಡಿ ಲಕ್ಷ್ಮಿಯ ಜೊತೆಗೆ ವೈಕುಂಠಕ್ಕೆ ಕಳುಹಿಸಿಕೊಟ್ಟನು ಅನ್ನುವುದು ಇನ್ನೊಂದು ಉಲ್ಲೇಖ. ಇಂತಹ ನೂರಾರು ಉಲ್ಲೇಖಗಳು ನಮ್ಮ ಪುರಾಣಗಳಲ್ಲಿ ದೊರೆಯುತ್ತವೆ.

ರಕ್ಷೆಯ ಐತಿಹಾಸಿಕ ಹಿನ್ನೆಲೆ

ಭಾರತದ ಮೇಲೆ ಅಲೆಕ್ಸಾಂಡರ್ ದಂಡೆತ್ತಿ ಬಂದಾಗ ಅಳುಕಿದ್ದು ವಾಯುವ್ಯದ ದೊರೆ ಪುರೂರವನ ಬಲಿಷ್ಠ ಸೇನೆಯನ್ನು ನೋಡಿ. ಆಗ ಅಲೆಕ್ಸಾಂಡರನ ಪತ್ನಿ ರೋಕ್ಸಾನಾ ಪುರೂರವನ ಬಳಿಗೆ ಬಂದು ರಕ್ಷೆಯನ್ನು ಕಟ್ಟಿ ಪತಿಯ ಪ್ರಾಣ ಭಿಕ್ಷೆಯನ್ನು ಬೇಡಿದ್ದಳು. ಮುಂದೆ ಯುದ್ಧ ನಡೆದು ಅಲೆಕ್ಸಾಂಡರ್ ಸೋತು ಧರಾಶಾಯಿಯಾದಾಗ ಅದೇ ಪುರೂರವ ಆತನ ಪ್ರಾಣರಕ್ಷೆ ಮಾಡಿ ತನ್ನ ಸೋದರನ ಕರ್ತವ್ಯವನ್ನು ನಿಭಾಯಿಸಿದ್ದನು!

ಅದೇ ರೀತಿ ರಜಪೂತ ರಾಣಿ ಕರ್ಣಾವತಿಯು ತನ್ನ ಗಂಡನನ್ನು ಕಳೆದುಕೊಂಡರೂ ಧೃತಿಗೆಡದೆ ಮೇವಾಡವನ್ನು ಅಳುತ್ತಿದ್ದಳು. ಆಗ ಗುಜರಾತ್ ದೊರೆ ಬಹಾದ್ದೂರ್ ಶಾ ದುರಾಸೆಯಿಂದ ಮೇವಾಡದ ಮೇಲೆ ದಂಡೆತ್ತಿಕೊಂಡು ಬರುತ್ತಾನೆ. ಆಗ ಅಭಯವನ್ನು ಕೇಳಿ ರಾಣಿಯು ಪತ್ರವನ್ನು ಬರೆದು ರಕ್ಷೆ ಕಳುಹಿಸಿದ್ದು ಮೊಘಲ್ ದೊರೆ ಹುಮಾಯೂನನಿಗೆ. ಅದಕ್ಕೆ ಗೌರವ ಕೊಟ್ಟು ಹುಮಾಯೂನ್ ಆಕೆಯ ರಕ್ಷಣೆಗೆ ಓಡೋಡಿ ಬಂದ ಘಟನೆಯು ಇತಿಹಾಸದಲ್ಲಿ ಇದೆ.

Raksha Bandhan 2024

ಬಂಗಾಳವನ್ನು ಒಗ್ಗೂಡಿಸಿದ ರಕ್ಷೆ!

1905ರಲ್ಲಿ ಬ್ರಿಟಿಷರು ಬಲಿಷ್ಠ ಬಂಗಾಳ ಪ್ರಾಂತ್ಯವನ್ನು ಒಡೆದು ಭಾರತೀಯರ ಐಕ್ಯತೆಯನ್ನು ಒಡೆದರು. ಆಗ ಹಿಂದೂ ಮುಸಲ್ಮಾನರು ಬೀದಿಗೆ ಇಳಿದು ಪರಸ್ಪರ ರಕ್ತ ಚೆಲ್ಲುವ ಕೆಲಸ ಆರಂಭ ಆಯಿತು. ಆಗ ರಾಷ್ಟ್ರಕವಿ ರವೀಂದ್ರನಾಥ ಟ್ಯಾಗೋರರು ಶ್ರಾವಣ ಹುಣ್ಣಿಮೆಯಂದು ಹಿಂದೂ ಮುಸಲ್ಮಾನರು ಪರಸ್ಪರ ರಕ್ಷೆಯನ್ನು ಕಟ್ಟಿ ಸೋದರತೆಯ ಸಂದೇಶವನ್ನು ಸಾರಬೇಕು ಎಂದು ಕರೆನೀಡಿದರು. ಬ್ರಿಟಿಷ್ ಸರಕಾರ ಈ ಆಚರಣೆಯನ್ನು ತಡೆಯಲು ಶತಪ್ರಯತ್ನ ಮಾಡಿದರೂ ಇಡೀ ಬಂಗಾಳ ರಕ್ಷಾಬಂಧನದ ಹಬ್ಬ ಆಚರಣೆ ಮಾಡಿ ಐಕ್ಯತೆಯ ಸಂದೇಶವನ್ನು ಸಾರಿತು!

ಕೇಸರಿ ಬಣ್ಣವು ತ್ಯಾಗದ ಸಂಕೇತ, ರಕ್ಷೆಯು ಐಕ್ಯತೆಯ ಸಂಕೇತ

ಹಿಂದೂ ಧರ್ಮದ ನಂಬಿಕೆಗಳ ಪ್ರಕಾರ ಕೇಸರಿ ಬಣ್ಣವು ತ್ಯಾಗ ಮತ್ತು ಬಲಿದಾನದ ಸಂಕೇತ. ಹಿಂದೆ ಋಷಿಮುನಿಗಳು ಧರಿಸುತ್ತಿದದ್ದು ಕಾವಿ ( ಕೇಸರಿ) ಬಣ್ಣದ ದಿರಿಸು. ಅವರು ಮಾಡುತ್ತಿದ್ದ ಯಜ್ಞದ ಅಗ್ನಿಯ ಬಣ್ಣ ಕೇಸರಿ. ಸೂರ್ಯ ಬೆಳಿಗ್ಗೆ ಉದಯಿಸುವಾಗ, ಸಂಜೆ ಮುಳುಗುವಾಗ ಅದೇ ಕೇಸರಿ ಬಣ್ಣವನ್ನು ಪಡೆಯುತ್ತಾನೆ. ಇಲ್ಲಿನ ಮಣ್ಣಿನ ಬಣ್ಣವೂ ಕೇಸರಿ.

ಹಾಗೆಯೇ ಹಲವು ನೂಲಿನ ದಾರಗಳನ್ನು ಒಂದೇ ಗಟ್ಟಿ ದಾರದ ಮೂಲಕ ಬಂಧಿಸುವುದೇ ರಕ್ಷೆ. ಅಂದರೆ ಜಾತಿ, ವರ್ಣಬೇಧಗಳನ್ನು ಮೆಟ್ಟಿ ನಿಂತು ಇಡೀ ಹಿಂದೂಸಮಾಜವು ಒಗ್ಗಟ್ಟಾಗಿ ನಿಲ್ಲಬೇಕು ಎನ್ನುವುದು ಈ ರಕ್ಷಾಬಂಧನ ಹಬ್ಬದ ಅಲ್ಟಿಮೇಟ್ ಸಂದೇಶ.

ಬದಲಾದ ಸಾಮಾಜಿಕ ಘಟ್ಟದಲ್ಲಿ ರಕ್ಷೆ

ಸ್ತ್ರೀಯು ದುರ್ಬಲಳು ಅಥವಾ ಪರಾಧೀನಳು ಎಂದು ಭಾವಿಸಿದ ಕಾಲ ಒಂದಿತ್ತು. ಈಗ ಕಾಲವು ಸಂಪೂರ್ಣ ಬದಲಾವಣೆ ಆಗಿದೆ. ಈಗ ಸ್ತ್ರೀ ಸ್ವಯಂಭೂ ಶಕ್ತಿಸಂಪನ್ನೆಯಾಗಿ ಇರುವ ಈ ಆಧುನಿಕ ಕಾಲದಲ್ಲಿಯೂ ಆಕೆ ತನ್ನ ಮಾನ, ಪ್ರಾಣ, ಸ್ವಾಭಿಮಾನಗಳ ರಕ್ಷಣೆಗಾಗಿ ರಕ್ಷೆಯನ್ನು ಕಟ್ಟುತ್ತಾಳೆ ಎನ್ನುವುದಕ್ಕಿಂತ ಆ ರಕ್ಷೆಯು ಸೋದರರ ಪರಸ್ಪರ ಪ್ರೀತಿ, ನಂಬಿಕೆ, ವಿಶ್ವಾಸಗಳ ಪ್ರತೀಕವಾಗಿ ಬದಲಾಗಿದೆ. ಪ್ರತೀ ವರ್ಷವೂ ಈ ಹಬ್ಬ ಬಂದಾಗ ತನ್ನ ಅಣ್ಣನನ್ನು (ಇಲ್ಲಿ ಮತ್ತೆ ರಕ್ತಸಂಬಂಧ ಮೀರಿದ್ದು ಕೂಡ ಹೌದು) ಹುಡುಕಿಕೊಂಡು ಬಂದು ರಕ್ಷೆ ಕಟ್ಟಿ ,ಆರತಿ ಎತ್ತಿ, ಸಿಹಿ ತಿನ್ನಿಸಿ ಇಡೀ ವರ್ಷ ಅಣ್ಣಾ ಎಂದು ಬಾಯ್ತುಂಬ ಕರೆಯುವ ತಂಗಿಯರ ಸಂಭ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಹಾಗೆಯೇ ಅಂಚೆಯ ಮೂಲಕ ರಕ್ಷೆ ಕಳುಹಿಸಿಕೊಟ್ಟು ಕೂಡ ಅಣ್ಣನ ನೆನಪು ಮಾಡುವ ಸೋದರಿಯರು ಇದ್ದಾರೆ.

ಹಾಗೆಯೇ ಅವಳು ನನ್ನ ತಂಗಿ, ಇವಳು ನನ್ನ ತಂಗಿ ಕಣೋ ಎಂದು ಜಂಬದಲ್ಲಿ ಹೇಳಿಕೊಂಡು ಅಂಗೈ ತುಂಬಾ ಕೇಸರಿಯ ರಕ್ಷೆಗಳನ್ನು ಕಟ್ಟಿಕೊಂಡು ಸಂಭ್ರಮಿಸುವ ಅಣ್ಣಂದಿರಿಗೇನೂ ಕಡಿಮೆ ಇಲ್ಲ!

ಬದಲಾದ ಕಾಲಘಟ್ಟದಲ್ಲಿ ಕೂಡ ಈ ರಕ್ಷಾಬಂಧನದ ಹಬ್ಬವು ಹಿಂದೂ ಸಂಸ್ಕೃತಿಯನ್ನು ಜಾಗೃತಿ ಮಾಡುತ್ತದೆ ಎಂಬ ಕಾರಣಕ್ಕೆ ಪ್ರಾಮುಖ್ಯತೆ ಪಡೆಯುತ್ತದೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕನ್ನಡ ಚಿತ್ರರಂಗದ ಬಂಗಾರದ ಹುಡುಗ ರಿಶಬ್ ಶೆಟ್ಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

VISTARANEWS.COM


on

ಅಬುಧಾಬಿ: ಆರು ದಿನಗಳ ವಿದೇಶ ಪ್ರವಾಸದಲ್ಲಿ ಪ್ರಧಾನಿ ಮೊದಲು ಯುಎಇಗೆ ಭೇಟಿ ನೀಡಿದ್ದಾರೆ. ಯುರೋಪ್ ಭೇಟಿಗೂ ಮುನ್ನ ಅಬುಧಾಬಿಗೆ ಭೇಟಿ ನೀಡಿದ್ದು, ಭಾರತ-ಯುಎಇ ನಡುವಿನ ನಿಕಟ ಸಂಬಂಧಕ್ಕೆ ಸಾಕ್ಷಿ ಎನ್ನಲಾಗುತ್ತಿದೆ.
ಅಬುಧಾಬಿಯಲ್ಲಿ ಪ್ರಧಾನಿ ಮೋದಿ ಮತ್ತು ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ರಕ್ಷಣೆ, ವ್ಯಾಪಾರ, ಹೂಡಿಕೆ, ಇಂಧನ ಭದ್ರತೆ ಕುರಿತು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಮೋದಿ ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸಲು ಎಲ್ಲಾ ಅಗತ್ಯ ನೆರವು ನೀಡುವ ಭರವಸೆ ನೀಡಿದರು. ಇದೇ ವೇಳೆ ಅವರು, ಯುಎಇ ಮೇಲಿನ ಇರಾನ್ ದಾಳಿಯನ್ನು ಖಂಡಿಸಿದರು.
ಪ್ರಧಾನಿ ಮೋದಿಯವರ ಭೇಟಿಯನ್ನು ಯುಎಇ ಮುಕ್ತಕಂಠದಿಂದ ಹೊಗಳಿದೆ. ‘ಭಾರತದ ಪ್ರಧಾನಿ ನಮ್ಮ ನಿಜವಾದ ಆಸ್ತಿ’ ಎಂದು ಯುಎಇ ಅಂತಾರಾಷ್ಟ್ರೀಯ ಸಹಕಾರ ಸಚಿವೆ ರೀಮ್ ಅಲ್ ಹಶಿಮಿ ಬಣ್ಣಿಸಿದ್ದಾರೆ.
ಪ್ರಧಾನಿ ಮೋದಿ ಯುಎಇಗೆ ಆಗಮಿಸುತ್ತಿದ್ದಂತೆಯೇ ಭವ್ಯ ಸ್ವಾಗತ ನೀಡಲಾಯಿತು. ಮೋದಿ ಅವರಿದ್ದ ವಿಶೇಷ ವಿಮಾನಕ್ಕೆ ಗಗನಮಾರ್ಗದಲ್ಲೇ ಯುಎಇಯ ಎಫ್‌-16 ಯುದ್ಧ ವಿಮಾನಗಳು ಗೌರವ ರಕ್ಷೆ ನೀಡಿದ್ದವು.
ಯುಎಇ ಬಳಿಕ ಮೋದಿ ನೆದರ್‌ಲ್ಯಾಂಡ್‌, ಸ್ವೀಡನ್, ನಾರ್ವೆ ಮತ್ತು ಇಟಲಿ ದೇಶಗಳಿಗೆ ತೆರಳಲಿದ್ದಾರೆ.

Continue Reading

Latest

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

VISTARANEWS.COM


on

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ದೀದಿ ಭದ್ರಕೋಟೆಯನ್ನು ಧೂಳೀಪಟಗೈದು ಅಧಿಕಾರಕ್ಕೇರಿದ ಸುವೇಂದು ಅಧಿಕಾರಿ ಮುಖ್ಯಮಂತ್ರಿ ಪಟ್ಟಕ್ಕೇರುತ್ತಿದ್ದಂತೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಆರೋಗ್ಯವಂತ ಜಾನುವಾರುಗಳ ಹತ್ಯೆ ಮಾಡಿದರೆ ಶಿಕ್ಷೆ ನೀಡಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಪಶುವೈದ್ಯರು ನೀಡುವ ಫಿಟ್‌ನೆಸ್‌‍ ಪ್ರಮಾಣಪತ್ರವಿಲ್ಲದೆ ಹಸು, ಹೋರಿ, ಎಮ್ಮೆ ಮತ್ತು ಕರು ಸೇರಿ ಯಾವುದೇ ಪ್ರಾಣಿಯನ್ನು ಹತ್ಯೆ ಮಾಡುವಂತಿಲ್ಲ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಹಸು 14 ವರ್ಷ ಮೇಲ್ಪಟ್ಟಿದ್ದು, ಕೆಲಸ ಮಾಡಲು ಅಥವಾ ಸಂತಾನೋತ್ಪತ್ತಿ ಮಾಡಲು ಯೋಗ್ಯವಿಲ್ಲದಿದ್ದರೆ ಅಥವಾ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿದ್ದು, ಶಾಶ್ವತವಾಗಿ ಗುಣಪಡಿಸಲು ಸಾಧ್ಯವಾಗದಿದ್ದರೆ ಮಾತ್ರ ಸ್ಥಳೀಯ ನಾಗರಿಕ ಅಧಿಕಾರಿಗಳು ಅಥವಾ ಪಶುವೈದ್ಯರು ಜಂಟಿಯಾಗಿ ಪ್ರಮಾಣ ಪತ್ರವನ್ನು ನೀಡಬಹುದಾಗಿದೆ.
ನಿಯಮಗಳನ್ನು ಜಾರಿಗೊಳಿಸಲು ಅಧಿಕಾರಿಗಳು ನಡೆಸುವ ಯಾವುದೇ ಪರಿಶೀಲನೆಯನ್ನು ವ್ಯಕ್ತಿಗಳು ತಡೆಯುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಯಾವುದೇ ರೀತಿಯ ಕಾನೂನು ಉಲ್ಲಂಘನೆಗಳಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 1 ಸಾವಿರ ರೂಪಾಯಿವರೆಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Continue Reading

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading

Latest

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

VISTARANEWS.COM


on

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಇಂದು ಈ ಕುರಿತು ಅಧಿಕೃತ ಘೋಷಣೆ ಮಾಡಿದೆ. ವಿ.ಡಿ. ಸತೀಶನ್‌ ಜೊತೆಗೆ ಕೆ.ಸಿ.ವೇಣುಗೋಪಾಲ್‌, ರಮೇಶ್‌ ಚೆನ್ನಿತಲ ಅವರು ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿದ್ದರು.
ಮೇ 4 ರಂದು ಕೇರಳಂ ವಿಧಾನಸಭಾ ಚುನಾವಣಾ ಫಲಿತಾಂಶ ಘೋಷಣೆಯಾದ್ರೂ ಸಿಎಂ ಸ್ಥಾನಕ್ಕೆ ಭಾರಿ ಪೈಪೋಟಿ ಇದ್ದ ಕಾರಣ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿತ್ತು.
ಇದೀಗ ಕೇರಳ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರ ಹೆಸರು ಘೋಷಣೆಯಾಗ್ತಿದ್ದಂತೆ ಅವರ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ವಿ.ಡಿ.ಸತೀಶನ್‌ ಪರವೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದೇ ಪರವೂರು ವಿಧಾನಸಭಾ ಕ್ಷೇತ್ರದಿಂದ ಸತೀಶನ್‌ 6 ಬಾರಿ ಗೆಲುವು ಸಾಧಿಸಿದ್ದಾರೆ. 2021 ರಲ್ಲಿ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

Continue Reading
Advertisement
Latest1 hour ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest6 hours ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest6 hours ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest24 hours ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest1 day ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ1 day ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest1 day ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest1 day ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest1 day ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest2 days ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌