ರಾಜಮಾರ್ಗ ಅಂಕಣ: ಆತನ ಬದುಕು ಆತನ ಸಿನೆಮಾ ಕಥೆಗಳಿಗಿಂತ ರೋಚಕ! - Vistara News

ಪ್ರಮುಖ ಸುದ್ದಿ

ರಾಜಮಾರ್ಗ ಅಂಕಣ: ಆತನ ಬದುಕು ಆತನ ಸಿನೆಮಾ ಕಥೆಗಳಿಗಿಂತ ರೋಚಕ!

ರಾಜಮಾರ್ಗ ಅಂಕಣ: ಕಳೆದ 30 ವರ್ಷಗಳಿಂದ ತಮಿಳು, ತೆಲುಗು, ಮಲಯಾಳಂ ಭಾಷೆಗಳ ನೂರಾರು ಸಿನೆಮಾಗಳಲ್ಲಿ ಅಭಿನಯಿಸಿರುವ ಆತನಿಗೆ ಈಗ 58 ವರ್ಷ ತುಂಬಿದೆ! ಆತನ ಯಶಸ್ಸಿನ ಗ್ರಾಫ್ ಇಂದಿಗೂ ಏರುಗತಿಯಲ್ಲಿ ಇದೆ. ಆತನಷ್ಟು ವೈವಿಧ್ಯಮಯ ಪಾತ್ರಗಳನ್ನು ಭಾರತದ ಬೇರೆ ಯಾವ ನಟನೂ ಮಾಡಿಲ್ಲ ಎನ್ನುವುದು ವಿಕ್ರಮ್ ಹೆಚ್ಚುಗಾರಿಕೆ!

VISTARANEWS.COM


on

vikram ರಾಜಮಾರ್ಗ ಅಂಕಣ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ತಮಿಳು ಸೂಪರ್ ಸ್ಟಾರ್ ಚೀಯಾನ್ ವಿಕ್ರಮ್ ಬದುಕೇ ಒಂದು ಹೋರಾಟ!

Rajendra-Bhat-Raja-Marga-Main-logo

:: ರಾಜೇಂದ್ರ ಭಟ್ ಕೆ.

ರಾಜಮಾರ್ಗ ಅಂಕಣ: ಈ ತಮಿಳು ಸಿನೆಮಾ ನಟನ (Tamil Cinema Actor) ಬದುಕೇ ಒಂದು ಅದ್ಭುತವಾದ ಹೋರಾಟ. ತನ್ನ ಪ್ರತಿಭೆಯ ಮೇಲೆ ನಂಬಿಕೆ ಇಟ್ಟುಕೊಂಡು ಸತತವಾದ ಸೋಲು, ಹತಾಶೆ, ನೋವು, ಸವಾಲುಗಳು ಎಲ್ಲವನ್ನೂ ಗೆದ್ದುಬಂದಿರುವ ಚಿಯಾನ್ ವಿಕ್ರಮ್ (chiyaan vikram) ಅವರ ಬದುಕಿನಿಂದ ನಾವು ಕಲಿಯುವುದು ಬೆಟ್ಟದಷ್ಟು ಇದೆ!

ಆತನಿಗೆ ಹೆತ್ತವರು ಇಟ್ಟ ಉದ್ದವಾದ ಹೆಸರು ಜಾನ್ ಕೆನ್ನೆಡಿ ವಿನೋದ್ ರಾಜ್ ಎಂದು! ಆತನ ತಂದೆ ವಿಕ್ಟರ್ ಕೂಡ ಸಿನೆಮಾ ನಟ ಆಗುವ ಹುಚ್ಚನ್ನು ತಲೆಗೇರಿಸಿಕೊಂಡು ಮನೆ ಬಿಟ್ಟು ಓಡಿ ಹೋದವರು. ಅದರಿಂದಾಗಿ ಈ ಮಗನಿಗೂ ಚಿಕ್ಕಂದಿನಿಂದ ಹೀರೋ ಆಗುವ ಕನಸು! ‘ಓದಿನ ಕಡೆ ಹೆಚ್ಚು ಗಮನ ಕೊಡು’ ಎಂದು ಅಪ್ಪ ಎಷ್ಟೇ ಬೈದರೂ ಸಿನೆಮಾದ ಹುಚ್ಚು ಬಿಡಲಿಲ್ಲ.

ಸೇಲಂ ಕಾಲೇಜಿನಲ್ಲಿ ಓದುವಾಗ ಅಸಂಗತ ನಾಟಕಗಳನ್ನು ಮಾಡಿ ಹುಡುಗ ಹಲವಾರು ಬಹುಮಾನ ಗೆದ್ದಿದ್ದ ವಿಕ್ರಂ. ಇಂಗ್ಲಿಷ್ ಸಾಹಿತ್ಯದಲ್ಲಿ ಪದವಿ, MBA ಮುಗಿಸಿದರೂ ಕೂಡ ಅವನ ಮನಸ್ಸು ಬೆಳ್ಳಿ ಪರದೆಯ ಕಡೆಗೆ ಇತ್ತು. ಆದರೆ ಅವನ ದುರದೃಷ್ಟವು ಅವನಿಗಿಂತ ಮುಂದೆ ಇತ್ತು!

ಬದುಕಿನ ಗತಿಯನ್ನೇ ಬದಲಿಸಿದ ಬೈಕ್ ಅಪಘಾತ!

ಒಮ್ಮೆ ನಾಟಕವನ್ನು ಮುಗಿಸಿ ರಾತ್ರಿ ಬೈಕಲ್ಲಿ ಮನೆಗೆ ಬರುತ್ತಿದ್ದಾಗ ಭೀಕರವಾದ ಅಪಘಾತ. ಲಾರಿ ಬಂದು ಡಿಕ್ಕಿ ಹೊಡೆದು ಅವನ ಬೈಕನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗಿತ್ತು! ದೇಹದಲ್ಲಿ ನೂರಾರು ಗಾಯಗಳು. ಬಲಗಾಲು ಪೂರ್ತಿ ಹುಡಿ ಹುಡಿ ಆಗಿತ್ತು! ವೈದ್ಯರು ಕಾಲು ಕತ್ತರಿಸಲೇ ಬೇಕು, ಇಲ್ಲವಾದರೆ ಜೀವಕ್ಕೆ ಅಪಾಯ ಅಂದರು!

ಆದರೆ ಅರೆಪ್ರಜ್ಞೆಯ ಕೋಮಾ ಅವಸ್ಥೆಯಲ್ಲಿ ಕೂಡ ಆತ ಚೀರಿ ಹೇಳಿದ್ದ ‘ನನಗೆ ಹೀರೋ ಆಗಲೇ ಬೇಕು. ಎಷ್ಟು ನೋವು ಬೇಕಾದರೂ ಸಹಿಸಿಕೊಳ್ಳಲು ನಾನು ರೆಡಿ. ಆದರೆ ಕಾಲು ಕತ್ತರಿಸುವುದು ಬೇಡ!’

ಅವನ ಕೆಟ್ಟ ಹಟದ ಮುಂದೆ ವೈದ್ಯಕೀಯ ವಿಜ್ಞಾನವೇ ಸೋತಿತು!

ಆತನ ದೇಹದಾದ್ಯಂತ 23 ಸಂಕೀರ್ಣ ಶಸ್ತ್ರಚಿಕಿತ್ಸೆಗಳು ನಡೆದವು. ಅಸಾಧ್ಯವಾದ ನೋವು ಸಹಿಸಿಕೊಂಡು ಆತ ಮೂರು ವರ್ಷ ಆಸ್ಪತ್ರೆಯ ಹಾಸಿಗೆಯಲ್ಲಿ ಶವದ ಹಾಗೆ ಬಿದ್ದುಕೊಂಡಿದ್ದ!

ನಂತರ ಒಂದು ವರ್ಷ ಕ್ಲಚಸ್ ಹಿಡಿದುಕೊಂಡು ನಡೆಯಲು ಅಭ್ಯಾಸ ಮಾಡಿದ್ದ! ನಂತರ ಗೋಡೆ ಹಿಡಿದು ನಡೆಯುವ ಅಭ್ಯಾಸ. ಸ್ವಂತ ಕಾಲಿನ ಮೇಲೆ ನಿಂತು ನಡೆಯಲು ಆತನಿಗೆ ನಾಲ್ಕು ವರ್ಷಗಳೇ ಬೇಕಾದವು! ಹೀಗೆ ನಾಲ್ಕು ವರ್ಷಗಳ ಕಾಲ ಜಿದ್ದಿಗೆ ಬಿದ್ದು ಕಾಲು ಉಳಿಸಿಕೊಂಡು ಆತ ಮತ್ತೆ ಸಿನೆಮಾದ ಕಡೆಗೆ ಮುಖ ಮಾಡಿದ್ದ. ಆತನ ಸಂಕಲ್ಪ ಶಕ್ತಿಯ ಮುಂದೆ ದುರದೃಷ್ಟವು ಕೂಡ ಸೋತಿತ್ತು!

ಅಪ್ನಾ ಟೈಮ್ ಆಯೆಗಾ…

ಮುಂದೆ ಬರೋಬ್ಬರಿ ಹತ್ತು ವರ್ಷಗಳ ಕಾಲ ಆತ ಸೂಕ್ತ ಪಾತ್ರಕ್ಕಾಗಿ ಕಾದು ಕೂತ. ಸಣ್ಣ ಪುಟ್ಟ ಪಾತ್ರಗಳು, ಪೋಷಕ ಪಾತ್ರಗಳು, ಧಾರಾವಾಹಿಗಳು ಎಲ್ಲವನ್ನೂ ಮಾಡಿದ. ಜಾಹೀರಾತುಗಳನ್ನು ಕೂಡ ಮಾಡಬೇಕಾಯಿತು. ತುಂಬಾ ನಿರೀಕ್ಷೆ ಇರಿಸಿದ್ದ ಎನ್ ಕಾದಲ್ ಕಣ್ಮಣಿ ಮತ್ತು ಮೀರಾ ಎಂಬ ಎರಡು ಸಿನೆಮಾಗಳು ಸೋತು ಹೋದವು. ಖಾಲಿ ಕಿಸೆ ಮತ್ತು ಹಸಿವಿನ ತೀವ್ರತೆಗಳು ಆತನಿಂದ ಡಬ್ಬಿಂಗ್ ಕೆಲಸವನ್ನು ಮಾಡಿಸಿತು! ಆದರೂ ಬೇಸರ ಮಾಡಿಕೊಳ್ಳದೆ ತಾಳ್ಮೆಯಿಂದ ಕಾದು ಕೂತ! ಮಾಡೆಲಿಂಗ್ ಕೂಡ ಮಾಡಿದ.

1999ರ ಹೊತ್ತಿಗೆ ತಮಿಳಲ್ಲಿ ‘ಸೇತು’ ಎಂಬ ಕಡಿಮೆ ಬಜೆಟಿನ ಸಿನೆಮಾ ಆರಂಭವಾಯಿತು. ವಿಕ್ರಮ್ ಆ ಸಿನೆಮಾದಲ್ಲಿ ಭಾರೀ ಸವಾಲಿನ ಪಾತ್ರವನ್ನು ಮಾಡಬೇಕಾಗಿತ್ತು. ಶೂಟಿಂಗ್ ಎರಡು ವರ್ಷಗಳಷ್ಟು ದೀರ್ಘ ಕಾಲ ನಡೆಯಿತು. ವಿಕ್ರಮ್ ತನ್ನ ಪಾತ್ರಕ್ಕಾಗಿ ತಲೆಯನ್ನು ನುಣ್ಣನೆ ಬೋಳಿಸಿಕೊಂಡ. ಉದ್ದುದ್ದ ಉಗುರುಗಳನ್ನು ಬಿಟ್ಟ. ಕೇವಲ ಬೀಟ್ರೂಟ್ ರಸ, ಒಂದು ಚಪಾತಿ, ಮೊಟ್ಟೆಯ ಬಿಳಿ ತಿರುಳು ತಿಂದು ದೇಹದ ತೂಕವನ್ನು ಹದಿನಾರು ಕೆಜಿಯಷ್ಟು ಇಳಿಸಿಕೊಂಡ! ಎರಡು ವರ್ಷ ಬೇರೆ ಯಾವ ಸಿನೆಮಾ ಕೂಡ ಒಪ್ಪಿಕೊಳ್ಳದೆ ಆ ಪಾತ್ರದಲ್ಲಿ ಮುಳುಗಿಬಿಟ್ಟ! ಸೇತು ಸಿನೆಮಾ ಸೂಪರ್ ಹಿಟ್ ಆಯ್ತು! ಅಲ್ಲಿಂದ ಮುಂದೆ ವಿಕ್ರಮ್ ಸೂಪರ್ ಸ್ಟಾರ್ ಆದ! ಜನ ಅವನನ್ನು ಚಿಯಾನ್ (ಸೇತು ಸಿನೆಮಾದಲ್ಲಿ ವಿಕ್ರಂ ಮಾಡಿದ ಪಾತ್ರದ ಅಡ್ಡ ಹೆಸರದು) ವಿಕ್ರಮ್ ಎಂದೇ ಪ್ರೀತಿಯಿಂದ ಕರೆಯತೊಡಗಿದರು. ಮುಂದೆ ಸೇತು ಸಿನೆಮಾವು ಭಾರತದ ಹಲವು ಭಾಷೆಗೆ ರೀಮೇಕ್ ಆಯಿತು. (ಕನ್ನಡದಲ್ಲಿ ಸುದೀಪ್ ಅಭಿನಯದ ಹುಚ್ಚ ಸಿನೆಮಾ).

ವಿಕ್ರಂ ಮಾಡಿದ ಪಾತ್ರಗಳು ಒಂದರ ಹಾಗೆ ಇನ್ನೊಂದಿಲ್ಲ.

ಮುಂದೆ ಸಾಲಾಗಿ ಕಠಿಣ ಸವಾಲಿನ ಪಾತ್ರಗಳು! ಹುಚ್ಚ, ತಲೆ ಹಿಡುಕ, ರೌಡಿ, ಡಾನ್, ಬುದ್ದಿಮಾಂದ್ಯ, ಕುಡುಕ, ಪೋಲಿಸ್, ಪಿಂಪ್, ವಕೀಲ, ಸೀರಿಯಲ್ ಕಿಲ್ಲರ್, ವೃದ್ಧ, ಪತ್ತೇದಾರ, ಆದಿವಾಸಿ, ಕಾಲೇಜ್ ಲವರ್, ಮಾಡೆಲ್ ಮೊದಲಾದ ಸಂಕೀರ್ಣವಾದ ಪಾತ್ರಗಳನ್ನು ಗೆಲ್ಲಿಸಿದ ಚಿಯಾನ್!

ಕಳೆದ 30 ವರ್ಷಗಳಿಂದ ತಮಿಳು, ತೆಲುಗು, ಮಲಯಾಳಂ ಭಾಷೆಗಳ ನೂರಾರು ಸಿನೆಮಾಗಳಲ್ಲಿ ಅಭಿನಯಿಸಿರುವ ಆತನಿಗೆ ಈಗ 58 ವರ್ಷ ತುಂಬಿದೆ! ಆತನ ಯಶಸ್ಸಿನ ಗ್ರಾಫ್ ಇಂದಿಗೂ ಏರುಗತಿಯಲ್ಲಿ ಇದೆ. ಆತನಷ್ಟು ವೈವಿಧ್ಯಮಯ ಪಾತ್ರಗಳನ್ನು ಭಾರತದ ಬೇರೆ ಯಾವ ನಟನೂ ಮಾಡಿಲ್ಲ ಎನ್ನುವುದು ವಿಕ್ರಮ್ ಹೆಚ್ಚುಗಾರಿಕೆ!

ಆತನ ಸಿನೆಮಾಗಳನ್ನು ಬೇರೆ ಭಾಷೆಗೆ ರಿಮೇಕ್ ಮಾಡುವ ಸಾಹಸವನ್ನು ಯಾರೂ ಮಾಡುವುದಿಲ್ಲ. ಮಾಡಿದರೂ ಸಕ್ಸೆಸ್ ಆದ ಉದಾಹರಣೆ ಕಡಿಮೆ. ಯಾಕೆಂದರೆ ವಿಕ್ರಮ್ ಪ್ರತೀ ಒಂದು ಪಾತ್ರಕ್ಕೂ ಬೇರೆ ಬೇರೆ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಾನೆ. ಅವನ ಬಾಡಿ ಲಾಂಗ್ವೇಜ್, ಡೈಲಾಗ್ ಡೆಲಿವರಿ, ನಡಿಗೆ, ನಗು, ಹಾವಭಾವ ಬೇರೆ ಬೇರೆ ಪಾತ್ರಕ್ಕೆ ಬೇರೆ ಬೇರೆ ರೀತಿ ಆಗಿರುತ್ತದೆ. ವಿಕ್ರಮ್ ಅಭಿನಯವನ್ನು ಯಾರಿಂದಲೂ ಕಾಪಿ ಮಾಡಲು ಸಾಧ್ಯವೇ ಇಲ್ಲ!

ಆತನ ಪಿತಾಮಗನ್, ಐ, ದಿಲ್, ಜೆಮಿನಿ, ಅರುಲ್, ಸಾಮಿ, ಆನಿಯನ್, ರಾವಣ್, ಕಿಂಗ್, ಧೂಳ್, ಕಾಸಿ, ಕಾಂತಾ, ಪೊನ್ನಿಯನ್ ಸೆಲ್ವಂ, ಕೋಬ್ರಾ, ತಿರುಮಗಲ್……..ಮೊದಲಾದ ಸಿನೆಮಾಗಳನ್ನು ನೋಡಿದರೆ ವಿಕ್ರಮ್ ಎಷ್ಟು ಅದ್ಭುತ ನಟ ಎಂಬ ಅರಿವಾಗುತ್ತದೆ. ಆತನಿಗೆ ಏಳು ಬಾರಿ ಫಿಲ್ಮ್ ಫೇರ್ ಪ್ರಶಸ್ತಿಗಳು, ಮೂರು ಬಾರಿ ರಾಜ್ಯಪ್ರಶಸ್ತಿ, ಪಿತಾಮಗನ್ ಸಿನೆಮಾಕ್ಕೆ ರಾಷ್ಟ್ರ ಪ್ರಶಸ್ತಿ, ತಮಿಳುನಾಡಿನಲ್ಲಿ ಮಹಾನ್ ಕಲಾವಿದರಿಗೆ ಮಾತ್ರ ನೀಡುವ ಕಲೈಮಾಮಣಿ ಪ್ರಶಸ್ತಿ, ಎಲ್ಲವೂ ಈಗಾಗಲೇ ದೊರೆತಿವೆ!

ತಾನೇ ಸ್ಥಾಪನೆ ಮಾಡಿರುವ ವಿಕ್ರಮ್ ಫೌಂಡೇಶನಿನ ಮೂಲಕ ಆತ ನಡೆಸುವ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆಗಳು, ಉಚಿತ ಹೃದಯದ ಸರ್ಜರಿಗಳು, ಹಲವು ವಿಶೇಷ ಮಕ್ಕಳ ಶಾಲೆ, ನೇತ್ರದಾನ ಸಂಕಲ್ಪ ಶಿಬಿರಗಳು…….ಇವುಗಳ ಬಗ್ಗೆ ಬರೆಯುತ್ತ ಹೋದಂತೆ ವಿಕ್ರಮ್ ನನಗೆ ವಿಶ್ವಮಾನವರಾಗಿ ಕಾಣುತ್ತಾರೆ.

ವಿಕ್ರಮ್ ಬಹುಮುಖಿ ಪ್ರತಿಭೆಯ ‘ತಂಗಲಾನ್ ‘ ಬಂದಿದೆ.

ವಿಕ್ರಮ್ ಅಭಿನಯಿಸಿದ ತಂಗಲಾನ್ ಸಿನೆಮಾ ಈ ವಾರ ಜಗತ್ತಿನಾದ್ಯಂತ ಬಿಡುಗಡೆ ಆಗಿದ್ದು ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆಯುತ್ತಿದೆ. ಆದರೆ ವಿಕ್ರಮ್ ಅಭಿನಯವು ಮತ್ತೆ ಅದ್ಭುತವಾಗಿ ಮೂಡಿಬಂದಿದೆ. ಆ ಸಿನೆಮಾವನ್ನು ಒಮ್ಮೆ ನೋಡಿ ವಿಕ್ರಮ್ ಪ್ರತಿಭೆಗೆ ಜೈ ಎಂದು ಹೇಳೋಣ ಅಲ್ಲವೇ?

ಆತನ ಬದುಕಿನ ಕಥೆಯು ಆತನ ಸಿನೆಮಾಗಳ ಕಥೆಗಿಂತ ಹೆಚ್ಚು ರೋಚಕವಾಗಿದೆ ಎಂದು ನನಗೆ ಅನಿಸುತ್ತದೆ!

ಇದನ್ನೂ ಓದಿ: ರಾಜಮಾರ್ಗ ಅಂಕಣ: ಹೇಗಿದ್ದವನು ಹೇಗಾಗಿ ಹೋದ ಕ್ರಿಕೆಟರ್ ವಿನೋದ್ ಕಾಂಬ್ಳಿ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

VISTARANEWS.COM


on

ಅಬುಧಾಬಿ: ಆರು ದಿನಗಳ ವಿದೇಶ ಪ್ರವಾಸದಲ್ಲಿ ಪ್ರಧಾನಿ ಮೊದಲು ಯುಎಇಗೆ ಭೇಟಿ ನೀಡಿದ್ದಾರೆ. ಯುರೋಪ್ ಭೇಟಿಗೂ ಮುನ್ನ ಅಬುಧಾಬಿಗೆ ಭೇಟಿ ನೀಡಿದ್ದು, ಭಾರತ-ಯುಎಇ ನಡುವಿನ ನಿಕಟ ಸಂಬಂಧಕ್ಕೆ ಸಾಕ್ಷಿ ಎನ್ನಲಾಗುತ್ತಿದೆ.
ಅಬುಧಾಬಿಯಲ್ಲಿ ಪ್ರಧಾನಿ ಮೋದಿ ಮತ್ತು ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ರಕ್ಷಣೆ, ವ್ಯಾಪಾರ, ಹೂಡಿಕೆ, ಇಂಧನ ಭದ್ರತೆ ಕುರಿತು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಮೋದಿ ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸಲು ಎಲ್ಲಾ ಅಗತ್ಯ ನೆರವು ನೀಡುವ ಭರವಸೆ ನೀಡಿದರು. ಇದೇ ವೇಳೆ ಅವರು, ಯುಎಇ ಮೇಲಿನ ಇರಾನ್ ದಾಳಿಯನ್ನು ಖಂಡಿಸಿದರು.
ಪ್ರಧಾನಿ ಮೋದಿಯವರ ಭೇಟಿಯನ್ನು ಯುಎಇ ಮುಕ್ತಕಂಠದಿಂದ ಹೊಗಳಿದೆ. ‘ಭಾರತದ ಪ್ರಧಾನಿ ನಮ್ಮ ನಿಜವಾದ ಆಸ್ತಿ’ ಎಂದು ಯುಎಇ ಅಂತಾರಾಷ್ಟ್ರೀಯ ಸಹಕಾರ ಸಚಿವೆ ರೀಮ್ ಅಲ್ ಹಶಿಮಿ ಬಣ್ಣಿಸಿದ್ದಾರೆ.
ಪ್ರಧಾನಿ ಮೋದಿ ಯುಎಇಗೆ ಆಗಮಿಸುತ್ತಿದ್ದಂತೆಯೇ ಭವ್ಯ ಸ್ವಾಗತ ನೀಡಲಾಯಿತು. ಮೋದಿ ಅವರಿದ್ದ ವಿಶೇಷ ವಿಮಾನಕ್ಕೆ ಗಗನಮಾರ್ಗದಲ್ಲೇ ಯುಎಇಯ ಎಫ್‌-16 ಯುದ್ಧ ವಿಮಾನಗಳು ಗೌರವ ರಕ್ಷೆ ನೀಡಿದ್ದವು.
ಯುಎಇ ಬಳಿಕ ಮೋದಿ ನೆದರ್‌ಲ್ಯಾಂಡ್‌, ಸ್ವೀಡನ್, ನಾರ್ವೆ ಮತ್ತು ಇಟಲಿ ದೇಶಗಳಿಗೆ ತೆರಳಲಿದ್ದಾರೆ.

Continue Reading

Latest

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

VISTARANEWS.COM


on

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ದೀದಿ ಭದ್ರಕೋಟೆಯನ್ನು ಧೂಳೀಪಟಗೈದು ಅಧಿಕಾರಕ್ಕೇರಿದ ಸುವೇಂದು ಅಧಿಕಾರಿ ಮುಖ್ಯಮಂತ್ರಿ ಪಟ್ಟಕ್ಕೇರುತ್ತಿದ್ದಂತೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಆರೋಗ್ಯವಂತ ಜಾನುವಾರುಗಳ ಹತ್ಯೆ ಮಾಡಿದರೆ ಶಿಕ್ಷೆ ನೀಡಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಪಶುವೈದ್ಯರು ನೀಡುವ ಫಿಟ್‌ನೆಸ್‌‍ ಪ್ರಮಾಣಪತ್ರವಿಲ್ಲದೆ ಹಸು, ಹೋರಿ, ಎಮ್ಮೆ ಮತ್ತು ಕರು ಸೇರಿ ಯಾವುದೇ ಪ್ರಾಣಿಯನ್ನು ಹತ್ಯೆ ಮಾಡುವಂತಿಲ್ಲ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಹಸು 14 ವರ್ಷ ಮೇಲ್ಪಟ್ಟಿದ್ದು, ಕೆಲಸ ಮಾಡಲು ಅಥವಾ ಸಂತಾನೋತ್ಪತ್ತಿ ಮಾಡಲು ಯೋಗ್ಯವಿಲ್ಲದಿದ್ದರೆ ಅಥವಾ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿದ್ದು, ಶಾಶ್ವತವಾಗಿ ಗುಣಪಡಿಸಲು ಸಾಧ್ಯವಾಗದಿದ್ದರೆ ಮಾತ್ರ ಸ್ಥಳೀಯ ನಾಗರಿಕ ಅಧಿಕಾರಿಗಳು ಅಥವಾ ಪಶುವೈದ್ಯರು ಜಂಟಿಯಾಗಿ ಪ್ರಮಾಣ ಪತ್ರವನ್ನು ನೀಡಬಹುದಾಗಿದೆ.
ನಿಯಮಗಳನ್ನು ಜಾರಿಗೊಳಿಸಲು ಅಧಿಕಾರಿಗಳು ನಡೆಸುವ ಯಾವುದೇ ಪರಿಶೀಲನೆಯನ್ನು ವ್ಯಕ್ತಿಗಳು ತಡೆಯುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಯಾವುದೇ ರೀತಿಯ ಕಾನೂನು ಉಲ್ಲಂಘನೆಗಳಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 1 ಸಾವಿರ ರೂಪಾಯಿವರೆಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Continue Reading

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading

Latest

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

VISTARANEWS.COM


on

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಇಂದು ಈ ಕುರಿತು ಅಧಿಕೃತ ಘೋಷಣೆ ಮಾಡಿದೆ. ವಿ.ಡಿ. ಸತೀಶನ್‌ ಜೊತೆಗೆ ಕೆ.ಸಿ.ವೇಣುಗೋಪಾಲ್‌, ರಮೇಶ್‌ ಚೆನ್ನಿತಲ ಅವರು ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿದ್ದರು.
ಮೇ 4 ರಂದು ಕೇರಳಂ ವಿಧಾನಸಭಾ ಚುನಾವಣಾ ಫಲಿತಾಂಶ ಘೋಷಣೆಯಾದ್ರೂ ಸಿಎಂ ಸ್ಥಾನಕ್ಕೆ ಭಾರಿ ಪೈಪೋಟಿ ಇದ್ದ ಕಾರಣ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿತ್ತು.
ಇದೀಗ ಕೇರಳ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರ ಹೆಸರು ಘೋಷಣೆಯಾಗ್ತಿದ್ದಂತೆ ಅವರ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ವಿ.ಡಿ.ಸತೀಶನ್‌ ಪರವೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದೇ ಪರವೂರು ವಿಧಾನಸಭಾ ಕ್ಷೇತ್ರದಿಂದ ಸತೀಶನ್‌ 6 ಬಾರಿ ಗೆಲುವು ಸಾಧಿಸಿದ್ದಾರೆ. 2021 ರಲ್ಲಿ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

Continue Reading
Advertisement
Latest11 minutes ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest5 hours ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest5 hours ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest23 hours ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest23 hours ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ24 hours ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest1 day ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest1 day ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest1 day ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest2 days ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌