Kisan Samman Nidhi: ರೈತರಿಗೆ ಗುಡ್‌ ನ್ಯೂಸ್;‌ ಕಿಸಾನ್‌ ಸಮ್ಮಾನ್‌ ನಿಧಿ 2 ಸಾವಿರ ರೂ. ಹೆಚ್ಚಳ, ಇನ್ನು ಸಿಗೋದು 8 ಸಾವಿರ ರೂ.! - Vistara News

ಪ್ರಮುಖ ಸುದ್ದಿ

Kisan Samman Nidhi: ರೈತರಿಗೆ ಗುಡ್‌ ನ್ಯೂಸ್;‌ ಕಿಸಾನ್‌ ಸಮ್ಮಾನ್‌ ನಿಧಿ 2 ಸಾವಿರ ರೂ. ಹೆಚ್ಚಳ, ಇನ್ನು ಸಿಗೋದು 8 ಸಾವಿರ ರೂ.!

Kisan Samman Nidhi: ರಾಜಸ್ಥಾನ ವಿಧಾನಸಭೆಗೆ ಚುನಾವಣೆ ನಡೆದ ವೇಳೆ ಬಿಜೆಪಿಯು ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕಿಸಾನ್‌ ಸಮ್ಮಾನ್‌ ನಿಧಿಯ ಮೊತ್ತವನ್ನು ಹೆಚ್ಚಿಸುವುದಾಗಿ ಭರವಸೆ ನೀಡಿತ್ತು. ಅದರಂತೆ, ರಾಜ್ಯ ಸರ್ಕಾರವೀಗ ಕಿಸಾನ್‌ ಸಮ್ಮಾನ್‌ ನಿಧಿಯನ್ನು ಹೆಚ್ಚಿಸಿದೆ. ಈ ಕುರಿತು ಮುಖ್ಯಮಂತ್ರಿ ಭಜನ್‌ಲಾಲ್‌ ಶರ್ಮಾ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮೂಲಕ ಮಾಹಿತಿ ನೀಡಿದ್ದಾರೆ.

VISTARANEWS.COM


on

Kisan Samman Nidhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೈಪುರ: ರಾಜಸ್ಥಾನದ ರೈತರಿಗೆ (Rajasthan Farmers) ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರದ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Scheme) ಅಡಿಯಲ್ಲಿ ವಾರ್ಷಿಕವಾಗಿ ರೈತರಿಗೆ ನೀಡುವ 6 ಸಾವಿರ ರೂಪಾಯಿಯನ್ನು ರಾಜ್ಯ ಸರ್ಕಾರವು 8 ಸಾವಿರ ರೂ.ಗೆ ಏರಿಕೆ ಮಾಡಿದೆ. ಕಿಸಾನ್‌ ಸಮ್ಮಾನ್‌ ನಿಧಿಗೆ ರಾಜ್ಯ ಸರ್ಕಾರವೂ 2 ಸಾವಿರ ರೂ. ಸೇರಿಸಿರುವ ಕಾರಣ ರಾಜ್ಯದ ರೈತರು ವರ್ಷಕ್ಕೆ 8 ಸಾವಿರ ರೂ. ಪಡೆಯಲಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಭಜನ್‌ಲಾಲ್‌ ಶರ್ಮಾ (Bhajanlal Sharma) ಘೋಷಣೆ ಮಾಡಿದ್ದಾರೆ.

“ಅನ್ನದಾತರ ಕಲ್ಯಾಣವೇ ನಮ್ಮ ಸರ್ಕಾರದ ಧ್ಯೇಯವಾಗಿದ್ದು, ರಾಜ್ಯ ಸರ್ಕಾರವು ಪಿಎಂ ಕಿಸಾನ್‌ ಸಮ್ಮಾನ್‌ ನಿಧಿಯ ಮೊತ್ತವನ್ನು 2 ಸಾವಿರ ರೂ. ಹೆಚ್ಚಿಸಿದೆ. ರೈತರ ಖಾತೆಗೆ ವಾರ್ಷಿಕ 6 ಸಾವಿರ ರೂ. ಬದಲು ಇನ್ನು 8 ಸಾವಿರ ರೂ. ಜಮೆಯಾಗಲಿದೆ” ಎಂದು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಭಜನ್‌ಲಾಲ್‌ ಶರ್ಮಾ ಪೋಸ್ಟ್‌ ಮಾಡಿದ್ದಾರೆ. ಕಳೆದ ನವೆಂಬರ್‌ನಲ್ಲಿ ರಾಜಸ್ಥಾನ ವಿಧಾನಸಭೆಗೆ ಚುನಾವಣೆ ನಡೆದ ವೇಳೆ ಬಿಜೆಪಿಯು ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕಿಸಾನ್‌ ಸಮ್ಮಾನ್‌ ನಿಧಿಯ ಮೊತ್ತವನ್ನು ಹೆಚ್ಚಿಸುವುದಾಗಿ ಭರವಸೆ ನೀಡಿತ್ತು. ಅದರಂತೆ, ರಾಜ್ಯ ಸರ್ಕಾರವೀಗ ಕಿಸಾನ್‌ ಸಮ್ಮಾನ್‌ ನಿಧಿಯನ್ನು ಹೆಚ್ಚಿಸಿದೆ.

ಅಷ್ಟೇ ಅಲ್ಲ, ರಾಜಸ್ಥಾನದಲ್ಲಿ ಕಳೆದ ಐದು ವರ್ಷದಲ್ಲಿ ನಡೆದ ನೇಮಕಾತಿಗಳ ಕುರಿತು ತನಿಖೆಗೂ ಮುಖ್ಯಮಂತ್ರಿ ಆದೇಶಿಸಿದ್ದಾರೆ. ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಕುರಿತು ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್‌ ಅವರು ಅಸಮಾಧಾನ ವ್ಯಕ್ತಪಡಿಸಿದ್ದರು. ನೇಮಕಾತಿ ಅಕ್ರಮ, ಭ್ರಷ್ಟಾಚಾರದ ಕುರಿತು ತನಿಖೆಯಾಗಬೇಕು ಎಂದು ಆಗ ಅಸ್ತಿತ್ವದಲ್ಲಿದ್ದ ತಮ್ಮದೇ ಸರ್ಕಾರಕ್ಕೆ ಆಗ್ರಹಿಸಿದ್ದರು.

3 ಕಂತುಗಳಲ್ಲಿ ಕೇಂದ್ರ ಸರ್ಕಾರ ಪಾವತಿ

ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಎಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ಈ ಯೋಜನೆ ನೆರವಾಗುತ್ತಿದೆ. ಕೇಂದ್ರ ಸರ್ಕಾರವು 17ನೇ ಕಂತಿನ ಹಣವನ್ನು ಬಿಡುಗಡೆ ಮಾಡಬೇಕಿದ್ದು, ಇದುವರೆಗೆ ದಿನಾಂಕ ನಿಗದಿ ಮಾಡಿಲ್ಲ.

ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವ ವಿಧಾನ

ಅಧಿಕೃತ ವೆಬ್‌ಸೈಟ್‌ www.pmkisan.gov.inಗೆ ಭೇಟಿ ನೀಡಿ.
ಆಗ ತೆರೆದುಕೊಳ್ಳುವ ಪುಟದಲ್ಲಿನ ‘Beneficiary list’ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ.
ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್‌ ಮತ್ತು ಗ್ರಾಮವನ್ನು ಆಯ್ಕೆ ಮಾಡಿ.
‘Get report’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.
ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌ 155261 ಮತ್ತು 011-24300606 ಅನ್ನು ಸಂಪರ್ಕಿಸಿ.

ಇದನ್ನೂ ಓದಿ: Money Guide: ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ಬಿಡುಗಡೆಗೆ ದಿನಗಣನೆ; ನಗದು ಜಮೆ ಯಾವಾಗ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs ENG Semi Final: ಇಂಗ್ಲೆಂಡ್​ ಮಣಿಸಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ

IND vs ENG Semi Final: ಈ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ 2022ರ ಟಿ20 ವಿಶ್ವಕಪ್‌ ಸೆಮಿಫೈನಲ್‌ ಸೋಲಿನ ಸೇಡನ್ನು ತೀರಿಸಿಕೊಂಡಿತು. ಅಂದು ಅಡಿಲೇಡ್‌ ಓವಲ್‌ನಲ್ಲಿ ನಡೆದಿದ್ದ ಸೆಮಿ ಪಂದ್ಯದಲ್ಲಿ ಇಂಗ್ಲೆಂಡ್‌ 10 ವಿಕೆಟ್‌ಗಳಿಂದ ಭರ್ಜರಿಯಾಗಿ ರೋಹಿತ್‌ ಪಡೆಯನ್ನು ಮಗುಚಿ ಫೈನಲ್​ ಪ್ರವೇಶಿಸಿತ್ತು.

VISTARANEWS.COM


on

IND vs ENG Semi Final
Koo

ಪ್ರೊವಿಡೆನ್ಸ್‌: ಅಕ್ಷರ್​ ಪಟೇಲ್​(23ಕ್ಕೆ 3), ಕುಲ್​ದೀಪ್​ ಯಾದವ್​(19ಕ್ಕೆ 3) ಜೋಡಿಯ ಸ್ಪಿನ್​ ದಾಳಿ ಹಾಗೂ ರೋಹಿತ್​ ಶರ್ಮ(57) ಅವರ ಅರ್ಧಶತಕದ ನೆರವಿನಿಂದ ಭಾರತ ತಂಡ ಐಸಿಸಿ ಟಿ20 ವಿಶ್ವಕಪ್​ ಟೂರ್ನಿಯ(IND vs ENG Semi Final) ಇಂಗ್ಲೆಂಡ್​ ವಿರುದ್ಧದ ಸೆಮಿಫೈನಲ್​ ಪಂದ್ಯದಲ್ಲಿ 68 ರನ್​ಗಳ ಗೆಲುವು ಸಾಧಿಸಿದೆ. ಈ ಮೂಲಕ ಟೂರ್ನಿಯಲ್ಲಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಸಾಧನೆ ಮಾಡಿದೆ. ಜತೆಗೆ 2022ರ ಸೆಮಿಫೈನಲ್​ ಪಂದ್ಯದ ಸೋಲಿನ ಸೇಡು ತೀರಿಸಿಕೊಂಡಿದೆ. ಶನಿವಾರ ಬಾರ್ಬಡೋಸ್​ನಲ್ಲಿ ನಡೆಯುವ ಫೈನಲ್​ ಪಂದ್ಯದಲ್ಲಿ ರೋಹಿತ್​ ಪಡೆ ದಕ್ಷಿಣ ಆಫ್ರಿಕಾದ ಸವಾಲು ಎದುರಿಸಲಿದೆ. ಕೂಟದ ಅಜೇಯ ತಂಡಗಳ ನಡುವಣ ಈ ಪ್ರಶಸ್ತಿ ಸಮರ ತೀವ್ರ ಕುತೂಹಲ, ರೋಮಾಂಚನ ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ.

ಇಲ್ಲಿನ ಪ್ರೊವಿಡೆನ್ಸ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಭಾರತ, ರೋಹಿತ್​ ಶರ್ಮ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 171 ರನ್​ ಬಾರಿಸಿ ಸವಾಲೊಡ್ಡಿತು. ಜವಾಬಿತ್ತ ಇಂಗ್ಲೆಂಡ್​ ನಾಟಕೀಯ ಕುಸಿತ ಕಂಡು 16.4 ಓವರ್​ಗಳಲ್ಲಿ 103 ರನ್​ಗೆ ಸರ್ವಪತನ ಕಂಡಿತು. ಈ ಸೋಲಿನಿಂದಿಗೆ ಹಾಲಿ ಚಾಂಪಿಯನ್​ ಆಗಿದ್ದ ಇಂಗ್ಲೆಂಡ್​ ಈಗ ಮಾಜಿ ಆಯಿತು.

ಅಕ್ಷರ್​-ಕುಲ್​ದೀಪ್​ ಸ್ಪಿನ್​ ಮೋಡಿ

ಸ್ಪರ್ಧಾತ್ಮಕ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್​ಗೆ ನಾಯಕ ಜಾಸ್​ ಬಟ್ಲರ್​ ಬಿರುಸಿನ ಬ್ಯಾಟಿಂಗ್​ ಮೂಲಕ ಉತ್ತಮ ಆರಂಭ ಒದಗಿಸಿದರು. ಒಂದು ಹಂತದಲ್ಲಿ ಅವರ ಬ್ಯಾಟಿಂಗ್ ನೋಡುವಾಗ 2022ರ ಟಿ20 ವಿಶ್ವಕಪ್​ ಸೆಮಿಫೈನಲ್​ ಪಂದ್ಯವೊಮ್ಮೆ ಕಣ್ಣ ಮುಂದೆ ಬಂದಿತು. ಅಬ್ಬರದ ಬ್ಯಾಟಿಂಗ್​ ಮೂಲಕ ಮುನ್ನುಗ್ಗುತ್ತಿದ್ದ ಇವರನ್ನು ಕೊನೆಗೂ ಎಡಗೈ ಸ್ಪಿನ್ನರ್​ ಅಕ್ಷರ್​ ಪಟೇಲ್​ ಕಟ್ಟಿಹಾಕಿದರು. ತಾನೆಸೆದ ಮೊದಲ ಓವರ್​ನ ಮೊದಲ ಎಸೆತದಲ್ಲೇ ವಿಕೆಟ್ ಎಗರಿಸಿ ಭಾರತಕ್ಕೆ ಆರಂಭಿಕ ಯಶಸ್ಸು ತಂದುಕೊಟ್ಟರು. ರಿವರ್ಸ್​ ಸ್ವೀಪ್​ ಮಾಡುವ ಯತ್ನದಲ್ಲಿ ಕೀಪರ್​ ರಿಷಭ್​ ಪಂತ್​ಗೆ ಕ್ಯಾಚ್​ ನೀಡಿ ವಿಕೆಟ್​ ಒಪ್ಪಿಸಿದರು. ಬಟ್ಲರ್​ 4 ಬೌಂಡರಿ ನೆರವಿನಿಂದ 23 ರನ್​ ಬಾರಿಸಿದರು.

2ನೇ ಓವರ್​ನಲ್ಲಿ ಅಕ್ಷರ್ ಮತ್ತೊಂದು ದೊಡ್ಡ ವಿಕೆಟ್​ ಬೇಟೆಯಾಡಿದರು.​ ಅಪಾಯಕಾರಿ ಬ್ಯಾಟರ್​ ಜಾನಿ ಬೇರ್​ಸ್ಟೋ ಅವರನ್ನು ಖಾತೆ ತೆರೆಯುವ ಮುನ್ನವೇ ಪೆವಿಲಿಯನ್​ಗೆ ಅಟ್ಟಿದರು. ಈ ವಿಕೆಟ್​ ಪತನಕ್ಕೂ ಮುನ್ನ ಜಸ್​ಪ್ರೀತ್​ ಬುಮ್ರಾ ತಮ್ಮ ಯಾರ್ಕರ್​ ದಾಳಿಯಿಂದ ಫಿಲ್​ ಸಾಲ್ಟ್ ಅವರನ್ನು ಕ್ಲೀನ್​ ಬೌಲ್ಟ್​ ಮಾಡಿದ್ದರು.​

35 ರನ್​ಗೆ ಮೂರು ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಇಂಗ್ಲೆಂಡ್​ಗೆ ಆ ಬಳಿಕ ಬಂದ ಬ್ಯಾಟರ್​ಗಳು ಕೂಡ ಆಸರೆಯಾಗುವಲ್ಲಿ ವಿಫಲರಾದರು. ಮೊಯಿನ್​ ಅಲಿ(8) ಕ್ರೀಸ್​ ಬಿಟ್ಟು ಸಿಕ್ಸರ್​ ಬಾರಿಸುವ ಯತ್ನದಲ್ಲಿ ರಿಷಭ್​ ಪಂತ್​ ಅವರ ಮಿಂಚಿನ ವೇಗದ ಸ್ಟಂಪ್​ ಬಲೆಗೆ ಬಿದ್ದರು. ಈ ವಿಕೆಟ್​ ಕೂಡ ಅಕ್ಷರ್​ ಪಾಲಾಯಿತು. ಆ ಬಳಿಕ ಆಡಲಿಳಿದ ಆಲ್​ರೌಂಡರ್​ ಸ್ಯಾಮ್​ ಕರನ್(2)​ ಅವರನ್ನು ಕುಲ್​ದೀಪ್​ ಯಾದವ್​ ತಮ್ಮ ಮೊದಲ ಓವರ್​ನಲ್ಲಿಯೇ ಎಲ್​ಬಿಡಬ್ಲ್ಯು ಬಲೆಗೆ ಬೀಳಿಸಿದರು. 5ನೇ ಕ್ರಮಾಂಕದಲ್ಲಿ ಕ್ರೀಸ್​ಗಿಳಿದ ಹ್ಯಾರಿ ಬ್ರೂಕ್​ ಸಣ್ಣ ಮಟ್ಟದ ಬ್ಯಾಟಿಂಗ್​ ಹೋರಾಟವನ್ನು ಸಂಘಟಿಸಿದರೂ ಕೂಡ 25 ರನ್​ಗೆ ಇವರ ವಿಕೆಟ್​ ಕೂಡ ಪತನಗೊಂಡಿತು. ಇಲ್ಲಿಗೆ ಇಂಗ್ಲೆಂಡ್​ ಸೋಲು ಕೂಡ ಖಚಿತಗೊಂಡಿತು. ಅಂತಿಮ ಹಂತದಲ್ಲಿ ವೇಗಿ ಜೋಫ್ರಾ ಆರ್ಚರ್​ 1 ಬೌಂಡರಿ ಮತ್ತು 2 ಸಿಕ್ಸರ್​ ಸಿಡಿಸಿ 21 ರನ್​ ಗಳಿಸುವ ಮೂಲಕ ತಂಡದ ಮೊತ್ತವನ್ನು 100 ಗಡಿ ದಾಟಿಸಿದರು. ಭಾರತ ಪರ ಕುಲ್​ದೀಪ್​ ಯಾದವ್​ ಮತ್ತು ಅಕ್ಷರ್​ ಪಟೇಲ್ ತಲಾ ಮೂರು ವಿಕೆಟ್​ ಕಿತ್ತರೆ, ಜಸ್​ಪ್ರೀತ್​ ಬುಮ್ರಾ 2 ವಿಕೆಟ್​ ಉರುಳಿಸಿದರು.

ಸೇಡು ತೀರಿಸಿಕೊಂಡ ಭಾರತ


ಈ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ 2022ರ ಟಿ20 ವಿಶ್ವಕಪ್‌ ಸೆಮಿಫೈನಲ್‌ ಸೋಲಿನ ಸೇಡನ್ನು ತೀರಿಸಿಕೊಂಡಿತು. ಅಂದು ಅಡಿಲೇಡ್‌ ಓವಲ್‌ನಲ್ಲಿ ನಡೆದಿದ್ದ ಸೆಮಿ ಪಂದ್ಯದಲ್ಲಿ ಇಂಗ್ಲೆಂಡ್‌ 10 ವಿಕೆಟ್‌ಗಳಿಂದ ಭರ್ಜರಿಯಾಗಿ ರೋಹಿತ್‌ ಪಡೆಯನ್ನು ಮಗುಚಿ ಫೈನಲ್​ ಪ್ರವೇಶಿಸಿತ್ತು. ಈ ಬಾರಿ ಭಾರತ ತಂಡ ಇಂಗ್ಲೆಂಡ್​ ಮಣಿಸಿ ಫೈನಲ್​ ಪ್ರವೇಶಿಸಿತು. ಅಲ್ಲಿಗೆ ಲೆಕ್ಕ ಚುಕ್ತಾ ಗೊಂಡಿತು.

ಇದನ್ನೂ ಓದಿ Rohit Sharma: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್

ಮಳೆಯಿಂದ ಟಾಸ್​ ಪ್ರಕ್ರಿಯೆ ಕೂಡ ವಿಳಂಬಗೊಂಡಿತು. ಪಂದ್ಯ ಆರಂಭವಾಗಿ ಭಾರತ 8 ಓವರ್​ಗೆ 2 ವಿಕೆಟ್​ ನಷ್ಟಕ್ಕೆ 65 ರನ್​ ಗಳಿಸಿದ್ದ ವೇಳೆ ಮತ್ತೆ ಮಳೆ ಸುರಿದು ಕೆಲ ಕಾಲ ಪಂದ್ಯ ಸ್ಥಗಿತಗೊಂಡಿತು. ಆದರೆ, ಈ ಪಂದ್ಯಕ್ಕೆ ಮೀಸಲು ದಿನ ಇರದ ಕಾರಣ ಹೆಚ್ಚುವರಿ 250 ನಿಮಿಷ ನೀಡಲಾಗಿತ್ತು. ಹೀಗಾಗಿ ಮಳೆ ನಿಂತ ಬಳಿಕ ಓವರ್​ ಕಡಿತವಿಲ್ಲದೇ ಪಂದ್ಯವನ್ನು ಮುಂದುವರಿಸಲಾಯಿತು.

ರೋಹಿತ್​-ಸೂರ್ಯ ಉತ್ತಮ ಜತೆಯಾಟ

ಮಳೆ ನಿಂತ ಬಳಿಕ ರೋಹಿತ್ ಶರ್ಮ ಜತೆ ಸೂರ್ಯಕುಮಾರ್​ ಕೂಡ ಬಿರುಸಿನ ಬ್ಯಾಟಿಂಗ್​ಗೆ ಒತ್ತುಕೊಟ್ಟರು. ಉಭಯ ಆಟಗಾರರು ಸೇರಿಕೊಂಡು ಮೂರನೇ ವಿಕೆಟ್ 73​ ಜತೆಯಾಟ ನಡೆಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. 5 ರನ್​ ಗಳಿಸಿದ್ದ ವೇಳೆ ಫಿಲ್ ಸಾಲ್ಟ್ ಅವರಿಂದ ಕ್ಯಾಚ್​ ಕೈಚೆಲ್ಲಿ ಜೀವದಾನ ಪಡೆದ ರೋಹಿತ್, ಇದರ ಸಂಪೂರ್ಣ ಲಾಭವೆತ್ತಿದರು. 33 ಎಸೆತಗಳಿಂದ ಅರ್ಧಶತಕ ಬಾರಿಸಿ ಮಿಂಚಿದರು. ಇದು ರೋಹಿತ್​ ಅವರ 32ನೇ ಅಂತಾರಾಷ್ಟ್ರೀಯ ಟಿ20 ಅರ್ಧಶತಕ. ಅಂತಿಮವಾಗಿ 6 ಬೌಂಡರಿ ಮತ್ತು 2 ಸಿಕ್ಸರ್​ ನೆರವಿನಿಂದ 57 ರನ್​ ಗಳಿಸಿ ಆದೀಲ್​ ರಶೀದ್​ ಓವರ್​ನಲ್ಲಿ ಕ್ಲೀನ್​ ಬೌಲ್ಡ್​ ಆದರು. ಈ ವಿಕೆಟ್​ ಪತನಗೊಂಡು 11 ರನ್​ ಅಂತರದಲ್ಲಿ ಸೂರ್ಯಕುಮಾರ್​ ವಿಕೆಟ್​ ಕೂಡ ಬಿತ್ತು. ಸೂರ್ಯಕುಮಾರ್​ 47(4 ಬೌಂಡರಿ, 2ಸಿಕ್ಸರ್​) ರನ್​ ಬಾರಿಸಿದರು.

ಉತ್ತಮ ಸ್ಥಿತಿಯಲ್ಲಿದ್ದ ಭಾರತ, ಸೂರ್ಯಕುಮಾರ್​ ಮತ್ತು ರೋಹಿತ್​ ವಿಕೆಟ್​ ಪತನದ ಬಳಿಕ ನಾಟಕೀಯ ಕುಸಿತ ಕಂಡಿತು. ಶಿವಂ ದುಬೆ(0) ಗೋಲ್ಡನ್​ ಡಕ್​ ಸಂಕಷ್ಟಕ್ಕೆ ಸಿಲುಕಿದರೆ, ಅಕ್ಷರ್​ ಪಟೇಲ್​ 10 ರನ್​ಗೆ ಆಟ ಮುಗಿಸಿದರು. ಅಂತಿಮವಾಗಿ ಜಡೇಜಾ ಅಜೇಯ 17(9 ಎಸೆತ, 2 ಬೌಂಡರಿ) ಮತ್ತು ಹಾರ್ದಿಕ್​ ಪಾಂಡ್ಯ 23(13 ಎಸೆತ, 2 ಸಿಕ್ಸರ್​, 1 ಬೌಂಡರಿ) ರನ್ ಬಾರಿಸಿದ ಪರಿಣಾಮ ತಂಡ 150ರ ಗಡಿ ದಾಟಿತು. ಇಂಗ್ಲೆಂಡ್​ ಪರ ಕ್ರಿಸ್​ ಜೋರ್ಡನ್​ 37 ರನ್​ ಬಿಟ್ಟುಕೊಟ್ಟು 3 ವಿಕೆಟ್​ ಉರುಳಿಸಿದರು.

ದಾಖಲೆ ಬರೆದ ರೋಹಿತ್​


ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್​ ಶರ್ಮ(Rohit Sharma) ಅವರು ಈ ಪಂದ್ಯದಲ್ಲಿ 4 ಬೌಂಡರಿ ಬಾರಿಸುತ್ತಿದ್ದಂತೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ದಾಖಲೆ ನಿರ್ಮಿಸಿಸಿದರು. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಮಾಜಿ ಆಟಗಾರ ಮಹೇಲ ಜಯವರ್ಧನೆ(111 ಬೌಂಡರಿ) ಹೆಸರಿನಲ್ಲಿತ್ತು. 37 ರನ್​ ಪೂರ್ತಿಗೊಳಿಸುತ್ತಿದ್ದಂತೆ ಭಾರತ ತಂಡದ ನಾಯಕನಾಗಿ ಎಲ್ಲ ಮಾದರಿಕ ಕ್ರಿಕೆಟ್​ ಸೇರಿ 5 ಸಾವಿರ ರನ್​ ಪೂರೈಸಿದರು. ಈ ಸಾಧನೆ ಮಾಡಿದ ಭಾರತದ 5ನೇ ನಾಯಕ ಎನಿಸಿಕೊಂಡರು. ವಿರಾಟ್​ ಕೊಹ್ಲಿ(12883) ಮೊದಲ ಸ್ಥಾನದಲ್ಲಿದ್ದಾರೆ. ಮಾಜಿ ನಾಯಕ ಮಹೇಂದ್ರ ಸಿಂಗ್​(11207) ದ್ವಿತೀಯ ಸ್ಥಾನಿಯಾಗಿದ್ದಾರೆ.  

ಕೊಹ್ಲಿ ಮತ್ತೆ ವಿಫಲ


ವಿರಾಟ್​ ಕೊಹ್ಲಿ(Virat Kohli) ಅವರ ಬ್ಯಾಟಿಂಗ್​ ವೈಫಲ್ಯ ಈ ಪಂದ್ಯದಲ್ಲಿಯೂ ಮುಂದುವರಿಯಿತು. 9 ಎಸೆತಕ್ಕೆ 9 ರನ್​ಗಳಿಸಿ ರೀಸ್‌ ಟೋಪ್ಲಿ ಎಸೆತಕ್ಕೆ ಕ್ಲೀನ್​ ಬೌಲ್ಟ್​ ಆದರು. ಈ ಮೂಲಕ ಟಿ20 ವಿಶ್ವಕಪ್​ ಸೆಮಿಫೈನಲ್​ ಪಂದ್ಯದಲ್ಲಿ ಇದೇ ಮೊದಲ ಬಾರಿಗೆ ಒಂದಂಕಿಗೆ ಸೀಮಿತರಾದರು. ಇದಕ್ಕೂ ಮುನ್ನ ಕೊಹ್ಲಿ ಆಡಿದ ಎಲ್ಲ ಸೆಮಿಫೈನಲ್​ ಪಂದ್ಯದಲ್ಲಿಯೂ ಅರ್ಧಶತಕ ಬಾರಿಸಿದ್ದರು. ರಿಷಭ್​ ಪಂತ್​ ಕೂಡ ಅವಸರದ ಆಟವಾಡಲು ಮುಂದಾಗಿ ಕೇವಲ 4 ರನ್​ಗೆ ವಿಕೆಟ್​ ಕೈಚೆಲ್ಲಿದರು.

Continue Reading

ದೇಶ

Abhyas Trial: ದೇಶದ ಕ್ಷಿಪಣಿ ವ್ಯವಸ್ಥೆಗೆ ಬಲ ತುಂಬುವ ‘ಅಭ್ಯಾಸ್’‌ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿ

Abhyas Trial: ಒಡಿಶಾದ ಚಾಂದಿಪುರದಲ್ಲಿರುವ ಸಮಗ್ರ ಪರೀಕ್ಷಾ ವಲಯದಲ್ಲಿ (ITR) ಗುರುವಾರ (ಜೂನ್‌ 27) ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿಯು ಸಂಸ್ಥೆಯು (DRDO) ಯಶಸ್ವಿಯಾಗಿ ಪರೀಕ್ಷೆ ನಡೆಸಿದೆ. ಅಭ್ಯಾಸ್‌ ಹೆಸರಿನ ಗುರಿಗಳನ್ನು ಡಿಆರ್‌ಡಿಒ ಅಭಿವೃದ್ಧಿಪಡಿಸಿದ್ದು, ಆರು ಗುರಿಗಳನ್ನು ಪರೀಕ್ಷೆ ಮಾಡಲಾಗಿದೆ. ಎಲ್ಲ ಪರೀಕ್ಷೆಗಳು ಕೂಡ ಯಶಸ್ವಿಯಾಗಿವೆ ಎಂಬುದಾಗಿ ಡಿಆರ್‌ಡಿಒ ತಿಳಿಸಿದೆ.

VISTARANEWS.COM


on

Abhyas Trial
Koo

ಭುವನೇಶ್ವರ: ಭಾರತದ ಕ್ಷಿಪಣಿ ವ್ಯವಸ್ಥೆಗೆ ಹೆಚ್ಚಿನ ಬಲವನ್ನು ತುಂಬುವ, ದೇಶದ ಸೇನೆಗೂ ಭಾರಿ ಪ್ರಮಾಣದಲ್ಲಿ ಸಹಕಾರಿಯಾಗುವ, ಯಾವುದೇ ತುರ್ತು ಸಂದರ್ಭದಲ್ಲಿ ಪ್ರತ್ಯುತ್ತರ ನೀಡುವಾಗ ನಿರ್ಣಾಯಕ ಪಾತ್ರ ನಿರ್ವಹಿಸುವ ಹೈ-ಸ್ಪೀಡ್‌ ಎಕ್ಸ್‌ಪೆಂಡೇಬಲ್‌ ಏರಿಯಲ್‌ ಟಾರ್ಗೆಟ್‌ (HEAT) ಆದ ‘ಅಭ್ಯಾಸ್’‌ ಪ್ರಯೋಗಾರ್ಥ ಪರೀಕ್ಷೆಯು (Abhyas Trial) ಯಶಸ್ವಿಯಾಗಿದೆ. ಒಡಿಶಾದ ಚಾಂದಿಪುರದಲ್ಲಿರುವ ಸಮಗ್ರ ಪರೀಕ್ಷಾ ವಲಯದಲ್ಲಿ (ITR) ಗುರುವಾರ (ಜೂನ್‌ 27) ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿಯು ಸಂಸ್ಥೆಯು (DRDO) ಯಶಸ್ವಿಯಾಗಿ ಪರೀಕ್ಷೆ ನಡೆಸಿದೆ.

ಅಭ್ಯಾಸ್‌ ಹೆಸರಿನ ಗುರಿಗಳನ್ನು ಡಿಆರ್‌ಡಿಒ ಅಭಿವೃದ್ಧಿಪಡಿಸಿದ್ದು, ಆರು ಗುರಿಗಳನ್ನು ಪರೀಕ್ಷೆ ಮಾಡಲಾಗಿದೆ. ಎಲ್ಲ ಪರೀಕ್ಷೆಗಳು ಕೂಡ ಯಶಸ್ವಿಯಾಗಿವೆ ಎಂಬುದಾಗಿ ಡಿಆರ್‌ಡಿಒ ತಿಳಿಸಿದೆ. ಅದರಲ್ಲೂ, ಕೇವಲ 30 ನಿಮಿಷಗಳಲ್ಲಿ ಸತತವಾಗಿ ಎರಡು ಗುರಿಗಳನ್ನು ಪರೀಕ್ಷೆ ಮಾಡಲಾಗಿದೆ. ಪ್ರಯೋಗದ ಸಮಯದಲ್ಲಿ ಬೂಸ್ಟರ್‌ನ ಸುರಕ್ಷಿತ ಬಿಡುಗಡೆ, ಲಾಂಚರ್‌ ಕ್ಲಿಯರೆನ್ಸ್‌ ಹಾಗೂ ಒತ್ತಡವನ್ನು ಸಹಿಸಿಕೊಳ್ಳುವ ಸಾಮರ್ಥ್ಯ ಇದೇ ಎಂಬುದನ್ನು ಡಿಆರ್‌ಡಿಒ ವಿಜ್ಞಾನಿಗಳು ಪರೀಕ್ಷೆ ವೇಳೆ ದೃಢಪಡಿಸಿಕೊಂಡರು.

ಕ್ಷಿಪಣಿಗಳಿಗೆ ಹೇಗೆ ಇವು ಸಹಕಾರಿ?

ಅಭ್ಯಾಸ್‌ ಗುರಿಗಳು ದೇಶದ ಕ್ಷಿಪಣಿ ವ್ಯವಸ್ಥೆಯನ್ನು ಬಲಪಡಿಸಲು, ಕ್ಷಿಪಣಿಗಳ ಸಾಮರ್ಥ್ಯವನ್ನು ಹೆಚ್ಚಿಸಲು ಸಹಕಾರಿಯಾಗಲಿವೆ. ಕ್ಷಿಪಣಿಗಳ ಪರೀಕ್ಷೆ ಹಾಗೂ ಅಭ್ಯಾಸಗಳ ವೇಳೆ ಗುರಿಗಳನ್ನು ಬಳಸಿ, ಅವುಗಳ ಸಮರ್ಥ ಕಾರ್ಯನಿರ್ವಹಣೆಯನ್ನು ಒರೆಗೆ ಹಚ್ಚುತ್ತವೆ. ಆಟೋ ಪೈಲಟ್‌ ಮೂಲಕ ಹಾರಾಡುವ, ಲ್ಯಾಪ್‌ ಆಧಾರಿತವಾಗಿ ಭೂಮಿಯಿಂದಲೇ ನಿಯಂತ್ರಣ ಮಾಡಬಹುದಾದ, ರೇಡಾರ್‌ ಗ್ರಹಿಕೆಗೆ ಸಿಗದಿರುವುದು ಸೇರಿ ಹಲವು ಅತ್ಯಾಧುನಿಕ ಸಾಮರ್ಥ್ಯವನ್ನು ಇವು ಹೊಂದಿವೆ.

ಡಿಆರ್‌ಡಿಒ ಯಶಸ್ವಿಯಾಗಿ ಪರೀಕ್ಷೆ ಮಾಡುತ್ತಲೇ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಅಭಿನಂದನೆ ಸಲ್ಲಿಸಿದರು. ಡಿಆರ್‌ಡಿಒ ವಿಜ್ಞಾನಿಗಳು, ಸಶಸ್ತ್ರ ಪಡೆಗಳ ಪ್ರಯತ್ನಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಅಭ್ಯಾಸ್‌ ಗುರಿಗಳನ್ನು ದೇಶೀಯವಾಗಿಯೇ ಅಭಿವೃದ್ಧಿಪಡಿಸಲಾಗಿದೆ. ಬೆಂಗಳೂರಿನಲ್ಲಿರುವ ಡಿಆರ್‌ಡಿಒದ ಏರೋನಾಟಿಕಲ್‌ ಡೆವಲಪ್‌ಎಸ್ಟಾಬ್ಲಿಶ್‌ಮೆಂಟ್‌ ಇವುಗಳ ವಿನ್ಯಾಸ ಮಾಡಿದೆ. ಪ್ರೊಡಕ್ಷನ್‌ ಏಜೆನ್ಸೀಸ್‌-ಹಿಂದುಸ್ಥಾನ ಏರೋನಾಟಿಕ್ಸ್‌ ಲಿಮಿಟೆಡ್‌, ಲಾರ್ಸೆನ್‌ & ಟರ್ಬೊ ಇವುಗಳನ್ನು ಅಭಿವೃದ್ಧಿಪಡಿಸಿವೆ.

ಇದನ್ನೂ ಓದಿ: SMART Missile: ನೌಕೆಗಳನ್ನು ಧ್ವಂಸ ಮಾಡುವ ಸ್ಮಾರ್ಟ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ; ರಕ್ಷಣಾ ಕ್ಷೇತ್ರಕ್ಕೆ ಆನೆ ಬಲ

Continue Reading

ಕರ್ನಾಟಕ

ಹಾಲು, ಪೆಟ್ರೋಲ್‌ ಬೆಲೆ ಏರಿಸಿ, ಎಸಿ ಬಸ್‌ನಲ್ಲಿ ಪ್ರತಿಭಟನೆಗೆ ಹೊರಟ ಕಾಂಗ್ರೆಸ್‌ ಹಣದ ಮೂಲ ಏನು? ಬಿಜೆಪಿ ಪ್ರಶ್ನೆ

ಕರ್ನಾಟಕದಲ್ಲಿ ನಂದಿನಿ ಹಾಲಿನ ಬೆಲೆಯನ್ನು 2 ರೂ., ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಿರುವ ಯುವ ಕಾಂಗ್ರೆಸ್‌ ನಾಯಕರು ದೆಹಲಿಗೆ ವಿಮಾನದಲ್ಲಿ ತೆರಳಿ ಪ್ರತಿಭಟನೆ ನಡೆಸಲು ಹಣವನ್ನು ಎಲ್ಲಿಂದ ತಂದಿದೆ ಎಂಬುದಾಗಿ ಬಿಜೆಪಿ ಪ್ರಶ್ನಿಸಿದೆ. ಕಾಂಗ್ರೆಸ್‌ ನಾಯಕರು ದೆಹಲಿಗೆ ಹೊರಟ ವಿಡಿಯೊವನ್ನು ಕೂಡ ಹಂಚಿಕೊಂಡಿದೆ.

VISTARANEWS.COM


on

Congress Protest
Koo

ಬೆಂಗಳೂರು/ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG) ಅಕ್ರಮ ನಡೆದಿರುವುದು ಹಾಗೂ ಸೇನೆಗೆ ಕಿರು ಅವಧಿಗೆ ನೇಮಕ ಮಾಡಿಕೊಳ್ಳುವ ಅಗ್ನಿಪಥ ಯೋಜನೆ ವಿರುದ್ಧ ದೆಹಲಿಯ ಜಂತರ್‌ ಮಂತರ್‌ನಲ್ಲಿ ಭಾರತೀಯ ಯುವ ಕಾಂಗ್ರೆಸ್‌ (IYC) ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಇನ್ನು, ಕರ್ನಾಟಕದಿಂದ (Karnataka) ಐಷಾರಾಮಿ ವಿಮಾನದಲ್ಲಿ ಯುವ ಕಾಂಗ್ರೆಸ್‌ (Congress) ನಾಯಕರು ದೆಹಲಿಗೆ ಹೋಗಿರುವುದನ್ನು ಬಿಜೆಪಿ (BJP) ಖಂಡಿಸಿದೆ. ಅಲ್ಲದೆ, ಹಣದ ಮೂಲಕ ಯಾವುದು ಎಂಬುದಾಗಿ ಪ್ರಶ್ನಿಸಿದೆ.

“ಐಷಾರಾಮಿ ಎಸಿ ಬಸ್‌ ಹಾಗೂ ಪ್ಲೈಟ್‌ ಮುಖಾಂತರ ಪ್ರಯಾಣ ಮಾಡಿ ಪ್ರತಿಭಟನೆ ಮಾಡುವ ಕರ್ನಾಟಕ ಕಾಂಗ್ರೆಸ್‌ನ ಯುವ ನಾಯಕರಿಗೆ ಹಣ ಎಲ್ಲಿಂದ ಬಂದಿದೆ? ಇದರ ಹಣದ ಮೂಲ ಎಲ್ಲಿ? ನಂದಿನಿ ಹಾಲಿನ ಹೆಚ್ಚುವರಿ 2 ರೂಪಾಯಿ, ಪೆಟ್ರೋಲ್‌ ಬೆಲೆಯ ಹೆಚ್ಚುವರಿ 4 ರೂಪಾಯಿಯನ್ನು ಸಿದ್ದರಾಮಯ್ಯ ಸರ್ಕಾರ ಸಂಗ್ರಹಿಸಿ ಕೊಟ್ಟಿದೆ ಎಂದು ದೆಹಲಿಗೆ ಹೋದ ನಲಪಾಡ್‌ ಗ್ಯಾಂಗ್‌ ಹೇಳುತ್ತಿದೆ. ಹೌದಾ ಸಿದ್ದರಾಮಯ್ಯನವರೇ?” ಎಂಬುದಾಗಿ ಬಿಜೆಪಿ ಪೋಸ್ಟ್‌ ಮಾಡಿದೆ. ಹಾಗೆಯೇ, ಯುವ ಕಾಂಗ್ರೆಸ್‌ ನಾಯಕರು ವಿಮಾನದಲ್ಲಿ ಹೊರಟ ವಿಡಿಯೊವನ್ನು ಕೂಡ ಹಂಚಿಕೊಂಡಿದೆ.

ರಾಜ್ಯದಲ್ಲಿ ಒಂದು ಲೀಟರ್‌ ಪೆಟ್ರೋಲ್‌ಗೆ 3 ರೂ. ಹಾಗೂ ಡೀಸೆಲ್‌ಗೆ 3.5 ರೂ. ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ವರ್ಷಕ್ಕೆ 3 ಸಾವಿರ ಕೋಟಿ ರೂ. ಹೆಚ್ಚುವರಿ ಆದಾಯ ಬರಲಿದೆ ಎಂದು ತಿಳಿದುಬಂದಿದೆ. ಇದಾದ ಕೆಲವೇ ದಿನಗಳಲ್ಲಿ ನಂದಿನಿ ಹಾಲಿನ ಬೆಲೆಯನ್ನೂ 2 ರೂಪಾಯಿ ಏರಿಕೆ ಮಾಡಿದ್ದು, ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಬಿಜೆಪಿ ನಾಯಕರು ಕೂಡ ರಾಜ್ಯ ಸರ್ಕಾರದ ತೀರ್ಮಾನವನ್ನು ಖಂಡಿಸಿದ ಪ್ರತಿಭಟನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ, ರಾಜ್ಯ ಯುವ ಕಾಂಗ್ರೆಸ್‌ ನಾಯಕರು ವಿಮಾನದಲ್ಲಿ ತೆರಳಿ, ದೆಹಲಿಯಲ್ಲಿ ಎ.ಸಿ ಬಸ್‌ನಲ್ಲಿ ಜಂತರ್‌ ಮಂತರ್‌ಗೆ ಹೋಗಿ ಪ್ರತಿಭಟನೆ ನಡೆಸಿದ್ದನ್ನು ಬಿಜೆಪಿ ಪ್ರಶ್ನಿಸಿದೆ.

ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಇದರಿಂದ ಒಂದು ಲೀಟರ್‌ ಡೀಸೆಲ್‌ಗೆ ರಾಜ್ಯದ ಜನ 89.20 ರೂ. ನೀಡಿದರೆ, ಲೀಟರ್‌ ಪೆಟ್ರೋಲ್‌ಗೆ 103 ಆಗಿದೆ. ಪೆಟ್ರೋಲ್‌ಗೆ ರಾಜ್ಯ ಸರ್ಕಾರವು ಇದುವರೆಗೆ ಶೇ.25.92ರಷ್ಟು ಮಾರಾಟ ತೆರಿಗೆ ವಿಧಿಸುತ್ತಿತ್ತು. ಈಗ ಶೇ.3.9ರಷ್ಟು ಹೆಚ್ಚಳ ಮಾಡಿದ್ದು, ಇನ್ನು ಮುಂದೆ ಒಟ್ಟು ಶೇ.29.84ರಷ್ಟು ತೆರಿಗೆ ವಸೂಲಿ ಮಾಡುತ್ತಿದೆ. ಇನ್ನು ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ಶೇ.4.1ರಷ್ಟು ಏರಿಕೆ ಮಾಡಲಾಗಿದ್ದು, ರಾಜ್ಯ ಸರ್ಕಾರ ಶೇ.18.44ರಷ್ಟು ತೆರಿಗೆ ವಸೂಲಿ ಮಾಡುತ್ತಿದೆ.

ಇದನ್ನೂ ಓದಿ: Milk Price: ನಂದಿನಿ ಹಾಲಿನ ಹೊಸ ದರ ಹೇಗಿದೆ; ಯಾವುದಕ್ಕೆ ಎಷ್ಟು ಹೆಚ್ಚಳ?

Continue Reading

ದೇಶ

NEET Aspirant: ನೀಟ್‌ ಅಕ್ರಮ ಬಯಲಾದ ಬೆನ್ನಲ್ಲೇ 17 ವರ್ಷದ NEET ಅಭ್ಯರ್ಥಿ ಆತ್ಮಹತ್ಯೆ; ಸಾವಿಗೆ ಯಾರು ಹೊಣೆ?

NEET Aspirant: 17 ವರ್ಷದ ಬಾಲಕನು ಕೋಟಾದಲ್ಲಿ ನೀಟ್‌ಗೆ ತಯಾರಿ ನಡೆಸುತ್ತಿದ್ದ. ಆತನು ಇತ್ತೀಚೆಗೆ ಒತ್ತಡಕ್ಕೆ ಸಿಲುಕಿದ್ದು, ತನ್ನ ಕೋಣೆಯಲ್ಲಿರುವ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮೃತನನ್ನು ಹರ್ಷಿತ್‌ ಕುಮಾರ್‌ ಅಗರ್ವಾಲ್‌ ಎಂಬುದಾಗಿ ಗುರುತಿಸಲಾಗಿದೆ. ಈತನು ಬಿಹಾರದವನಾಗಿದ್ದು, 12ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ.

VISTARANEWS.COM


on

NEET Aspirant
Koo

ಜೈಪುರ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ಕಳೆದ ಮೇ ತಿಂಗಳಲ್ಲಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG 2024) ಅಕ್ರಮ ನಡೆದಿರುವ, ಪ್ರಶ್ನೆ ಪತ್ರಿಕೆ ಸೋರಿಕೆಯಾದ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದೆ. ಪ್ರಕರಣದ ಕುರಿತು ತನಿಖೆ ನಡೆಸಲು ಸಿಬಿಐಗೆ ಹೊಣೆ ನೀಡಿದರೂ ಕೆಲ ರಾಜ್ಯಗಳು ನೀಟ್‌ ಪರೀಕ್ಷೆಯೇ ಬೇಡ ಎಂದು ಹೇಳುತ್ತಿವೆ. ಇದರ ಮಧ್ಯೆಯೇ, ರಾಜಸ್ಥಾನದ ಕೋಟಾದಲ್ಲಿ (Kota) ನೀಟ್‌ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 17 ವರ್ಷದ ಅಭ್ಯರ್ಥಿಯೊಬ್ಬ (NEET Aspirant) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

17 ವರ್ಷದ ಬಾಲಕನು ಕೋಟಾದಲ್ಲಿ ನೀಟ್‌ಗೆ ತಯಾರಿ ನಡೆಸುತ್ತಿದ್ದ. ಆತನು ಇತ್ತೀಚೆಗೆ ಒತ್ತಡಕ್ಕೆ ಸಿಲುಕಿದ್ದು, ತನ್ನ ಕೋಣೆಯಲ್ಲಿರುವ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮೃತನನ್ನು ಹರ್ಷಿತ್‌ ಕುಮಾರ್‌ ಅಗರ್ವಾಲ್‌ ಎಂಬುದಾಗಿ ಗುರುತಿಸಲಾಗಿದೆ. ಈತನು ಬಿಹಾರದವನಾಗಿದ್ದು, 12ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಛೋಟಾ ಚೌರಾಹಿನ್‌ ಡಬಾಬರಿ ಪ್ರದೇಶದಲ್ಲಿ ಈತನು ವಾಸಿಸುತ್ತಿದ್ದ. ಗುರುವಾರ (ಜೂನ್‌ 27) ಮಧ್ಯಾಹ್ನ 1 ಗಂಟೆ ಸುಮಾರಿಗೆ ಹಲವು ಸಹಪಾಠಿಗಳು ಬಾಗಿಲು ಬಡಿದಿದ್ದಾರೆ. ತುಂಬ ಹೊತ್ತಾದರೂ ಬಾಗಿಲು ತೆಗೆಯದ ಕಾರಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Kota Coaching Centre Room

ಪೊಲೀಸರು ಬಂದು ಬಾಗಿಲು ಮುರಿದು ಒಳಗೆ ತೆರಳಿದಾಗ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಆದಾಗ್ಯೂ, ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ. ಕೋಟಾದ ಕೋಚಿಂಗ್‌ ಸೆಂಟರ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ, ಜೆಇಇ, ನೀಟ್‌ಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಪ್ರತಿ ವರ್ಷ ಸುದ್ದಿಯಾಗುತ್ತಲೇ ಇರುತ್ತವೆ. ಪ್ರಸಕ್ತ ವರ್ಷದಲ್ಲಿಯೇ 12 ಅಭ್ಯರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2023ರಲ್ಲಿ 26 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದರಲ್ಲೂ, ಈಗ ನೀಟ್‌ ಅಕ್ರಮದ ಬಳಿಕ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಕುರಿತ ವರದಿಗಳು ಪೋಷಕರು, ರಾಜ್ಯ ಸರ್ಕಾರಗಳನ್ನು ಆತಂಕಕ್ಕೆ ದೂಡಿವೆ.

ನೀಟ್‌ ಅಕ್ರಮ; ಇಬ್ಬರ ಬಂಧನ

ಕಳೆದ ಮೇ ತಿಂಗಳಲ್ಲಿ ನಡೆದ ನೀಟ್‌ ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ. ಬಿಹಾರದ ಪಟನಾದವರಾದ ಮನೀಶ್‌ ಕುಮಾರ್‌ ಹಾಗೂ ಆಶುತೋಷ್‌ ಎಂಬುವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಮೊದಲು ಇಬ್ಬರೂ ಆರೋಪಿಗಳನ್ನು ವಿಚಾರಣೆಗೆ ಕರೆದ ಅಧಿಕಾರಿಗಳು, ನಂತರ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಮನೀಶ್‌ ಕುಮಾರ್‌ ಹಾಗೂ ಆಶುತೋಷ್‌ ಅವರು ವಿದ್ಯಾರ್ಥಿಗಳಿಗೆ ಖಾಲಿ ಇರುವ ಶಾಲೆಯೊಂದಕ್ಕೆ ತೆರಳಲು ವಾಹನದ ವ್ಯವಸ್ಥೆ ಮಾಡಿದ್ದರು. ಖಾಲಿ ಇರುವ ಶಾಲೆಯಲ್ಲಿ ಹಲವು ವಿದ್ಯಾರ್ಥಿಗಳಿಗೆ ಇವರು ಸೋರಿಕೆಯಾದ ಪ್ರಶ್ನೆಪತ್ರಿಕೆಯನ್ನು ಹಂಚಿದ್ದರು ಎಂದು ತಿಳಿದುಬಂದಿದೆ. ಕೆಲ ವಿದ್ಯಾರ್ಥಿಗಳಿಗೆ ಇವರೇ ತಮ್ಮ ಮನೆಯಲ್ಲಿ ಆಶ್ರಯ ಕೂಡ ನೀಡಿದ್ದರು ಎನ್ನಲಾಗಿದೆ.

ಇಬ್ಬರೂ ದುರುಳರು ಪಟನಾದಲ್ಲಿರುವ ಬಾಯ್ಸ್‌ ಹಾಸ್ಟೆಲ್‌ನಲ್ಲಿ ನೀಟ್‌ ಬರೆಯುವ ಅಭ್ಯರ್ಥಿಗಳು ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದರು. ಮೇ 5ರಂದು ನೀಟ್‌ ಪರೀಕ್ಷೆ ನಡೆದಿದ್ದು, ಮೇ 4ರಂದು ಅಭ್ಯರ್ಥಿಗಳು ಹಾಸ್ಟೆಲ್‌ನಲ್ಲಿದ್ದು ಸೋರಿಕೆಯಾಗಿದ್ದ ಪ್ರಶ್ನೆಗಳನ್ನು ಓದಿಕೊಂಡು, ಉತ್ತರ ಬರೆದು, ಅದನ್ನು ನೆನಪಿನಲ್ಲಿಟ್ಟುಕೊಳ್ಳಲು ಇವರು ಅನುಕೂಲ ಮಾಡಿಕೊಟ್ಟಿದ್ದರು ಎಂದು ತಿಳಿದುಬಂದಿದೆ. ಹಾಗಾಗಿ, ಇಬ್ಬರನ್ನೂ ಅಧಿಕಾರಿಗಳು ಬಂಧಿಸಿದ್ದಾರೆ.

ಇದನ್ನೂ ಓದಿ: NEET UG Retest: ನೀಟ್‌ ಮರುಪರೀಕ್ಷೆಗೆ ಅರ್ಧದಷ್ಟು ಅಭ್ಯರ್ಥಿಗಳು ಗೈರು; ಇವರ ಭವಿಷ್ಯದ ಗತಿ ಏನು?

Continue Reading
Advertisement
IND vs ENG Semi Final
ಕ್ರೀಡೆ1 hour ago

IND vs ENG Semi Final: ಇಂಗ್ಲೆಂಡ್​ ಮಣಿಸಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ

Abhyas Trial
ದೇಶ3 hours ago

Abhyas Trial: ದೇಶದ ಕ್ಷಿಪಣಿ ವ್ಯವಸ್ಥೆಗೆ ಬಲ ತುಂಬುವ ‘ಅಭ್ಯಾಸ್’‌ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿ

Congress Protest
ಕರ್ನಾಟಕ4 hours ago

ಹಾಲು, ಪೆಟ್ರೋಲ್‌ ಬೆಲೆ ಏರಿಸಿ, ಎಸಿ ಬಸ್‌ನಲ್ಲಿ ಪ್ರತಿಭಟನೆಗೆ ಹೊರಟ ಕಾಂಗ್ರೆಸ್‌ ಹಣದ ಮೂಲ ಏನು? ಬಿಜೆಪಿ ಪ್ರಶ್ನೆ

NEET Aspirant
ದೇಶ4 hours ago

NEET Aspirant: ನೀಟ್‌ ಅಕ್ರಮ ಬಯಲಾದ ಬೆನ್ನಲ್ಲೇ 17 ವರ್ಷದ NEET ಅಭ್ಯರ್ಥಿ ಆತ್ಮಹತ್ಯೆ; ಸಾವಿಗೆ ಯಾರು ಹೊಣೆ?

Tata Motors has taken the lead in the SUV market with Nexon Punch
ಕರ್ನಾಟಕ5 hours ago

Tata Motors: ನೆಕ್ಸಾನ್, ಪಂಚ್‌ ಮೂಲಕ ಎಸ್‌ಯುವಿ ಮಾರುಕಟ್ಟೆಯಲ್ಲಿ ಮುನ್ನಡೆ ಸಾಧಿಸಿದ ಟಾಟಾ ಮೋಟಾರ್ಸ್

Rohit Sharma
ಕ್ರೀಡೆ5 hours ago

Rohit Sharma: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್

virat kohli
ಕ್ರೀಡೆ5 hours ago

Virat Kohli: ಮೊದಲ ಬಾರಿಗೆ ಸೆಮಿಫೈನಲ್​ನಲ್ಲಿ ಸಿಂಗಲ್​ ಡಿಜಿಟ್​ಗೆ ಔಟ್​ ಆದ​ ಕೊಹ್ಲಿ; ಸಮಾಧಾನಪಡಿಸಿದ ಕೋಚ್​

DCM DK Shivakumar latest statement about CM change issue
ಪ್ರಮುಖ ಸುದ್ದಿ5 hours ago

DK Shivakumar: ಸಿಎಂ ಬದಲಾವಣೆ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಡಿ.ಕೆ. ಶಿವಕುಮಾರ್

roopantara Movie First Look Poster released
ಕರ್ನಾಟಕ5 hours ago

Kannada New Movie: ‘ರೂಪಾಂತರ’ಗೊಂಡ ರಾಜ್ ಬಿ. ಶೆಟ್ಟಿ! ಮತ್ತೊಂದು ವಿಭಿನ್ನ ಚಿತ್ರ

Hosur Airport
ಪ್ರಮುಖ ಸುದ್ದಿ5 hours ago

Hosur Airport: ಬೆಂಗಳೂರಿನಿಂದ ಕೇವಲ 40 ಕಿ.ಮೀ ದೂರದ ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ8 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ9 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು11 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ15 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ7 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 weeks ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌