Rohit Sharma : ಆಸ್ಟ್ರೇಲಿಯಾದ ವೇಗಿ ​ ಸ್ಟಾರ್ಕ್​ ಬೆಂಡೆತ್ತಿದ ರೋಹಿತ್​; ಒಂದೇ ಓವರ್​​ನಲ್ಲಿ 29 ರನ್​ - Vistara News

ಪ್ರಮುಖ ಸುದ್ದಿ

Rohit Sharma : ಆಸ್ಟ್ರೇಲಿಯಾದ ವೇಗಿ ​ ಸ್ಟಾರ್ಕ್​ ಬೆಂಡೆತ್ತಿದ ರೋಹಿತ್​; ಒಂದೇ ಓವರ್​​ನಲ್ಲಿ 29 ರನ್​

Rohit Sharma: ಪಂದ್ಯಾವಳಿಯಲ್ಲಿ ಕಡಿಮೆ ಸ್ಕೋರ್​ಗಳನ್ನು ಬಾರಿಸಿದ್ದ ರೋಹಿತ್ ಶರ್ಮಾ, ಬ್ಯಾಟ್​ ಮೂಲಕ ಅಬ್ಬರಿಸಿ ತಮ್ಮ ಟೀಕಾಕಾರರನ್ನು ಮೌನವಾಗಿಸಿದರು. ಡೇರೆನ್ ಸಾಮಿ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭದಿಂದಲೂ ಆಸ್ಟ್ರೇಲಿಯಾದ ಬೌಲರ್​ಗಳನ್ನು ಹಿಮ್ಮೆಟ್ಟಿಸಿದರು.

VISTARANEWS.COM


on

Rohit Sharma
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಸೇಂಟ್ ಲೂಸಿಯಾದ ಗ್ರೋಸ್ ಐಸ್ಲೆಟ್​​ನಲ್ಲಿರುವ ಡೇರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ತಂಡಗಳ ನಡುವಿನ ಪಂದ್ಯಾವಳಿಯ ಸೂಪರ್ 8 ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ರೋಹಿತ್​ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. 41 ಎಸೆತಕ್ಕೆ 92 ರನ್ ಬಾರಿಸಿ ಔಟಾದರು. ಈ ಮೂಲಕ ಅವರು ಮೊಟ್ಟ ಮೊದಲ ಟಿ2 ವಿಶ್ವ ಕಪ್​ ಶತಕದ ಅವಕಾಶ ನಷ್ಟ ಮಾಡಿಕೊಂಡರು.

ಪಂದ್ಯಾವಳಿಯಲ್ಲಿ ಕಡಿಮೆ ಸ್ಕೋರ್​ಗಳನ್ನು ಬಾರಿಸಿದ್ದ ರೋಹಿತ್ ಶರ್ಮಾ, ಬ್ಯಾಟ್​ ಮೂಲಕ ಅಬ್ಬರಿಸಿ ತಮ್ಮ ಟೀಕಾಕಾರರನ್ನು ಮೌನವಾಗಿಸಿದರು. ಡೇರೆನ್ ಸಾಮಿ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭದಿಂದಲೂ ಆಸ್ಟ್ರೇಲಿಯಾದ ಬೌಲರ್​ಗಳನ್ನು ಹಿಮ್ಮೆಟ್ಟಿಸಿದರು.

ರೋಹಿತ್ ಶರ್ಮಾ ಮೂರನೇ ಓವರ್​ ಎಸೆತ ಮಿಚೆಲ್ ಸ್ಟಾರ್ಕ್ ಅವರನ್ನು ಮೌನವಾಗಿಸಿದರು. ಒಂದೇ ಓವರ್​ನಲ್ಲಿ 29 ರನ್ ಬಾರಿಸಿದರು. ಭಾರತದ ನಾಯಕ ಕವರ್ ಏರಿಯಾ ಮೇಲೆ ಬೃಹತ್ ಸಿಕ್ಸರ್ ಬಾರಿಸಿದರು. ಎರಡನೇ ಎಸೆತದಲ್ಲಿ ರೋಹಿತ್ ಶರ್ಮಾ ಕೂಡ ಇದೇ ರೀತಿಯ ಶಾಟ್ ಬಾರಿಸಿದರು. ಎರಡು ಸಿಕ್ಸರ್​ಗಳ ನಂತರ ಒಂದು ಎಸೆತ ನಷ್ಟ ಮಾಡಿಕೊಂಡರು.

ರೋಹಿತ್ ಶರ್ಮಾ ಅಲ್ಲಿಗೆ ನಿಲ್ಲಲಿಲ್ಲ . ನಾಲ್ಕನೇ ಎಸೆತಕ್ಕೆ ಮತ್ತೊಂದು ಬೃಹತ್​ ಸಿಕ್ಸರ್ ಬಾರಿಸಿದರು. ಅದು 96 ಮೀಟರ್​ ಸಿಕ್ಸರ್. ಓವರ್ ನ ಕೊನೆಯ ಎಸೆತದಲ್ಲಿ ಮಿಚೆಲ್ ಸ್ಟಾರ್ಕ್ ಅವರು ಫುಲ್ ಟಾಸ್ ಎಸೆದರು. ರೋಹಿತ್ ಶರ್ಮಾ ಅವರು ಬೃಹತ್ ಸಿಕ್ಸರ್ ಗಾಗಿ ಥರ್ಡ್​ ಮ್ಯಾನ್ ಕಡೆ ಹಾರಿಸಿದರು. ಅಲ್ಲಿಗೆ ಒಂದೇ ಓವರ್​ನಲ್ಲಿ 29 ರನ್​ ಬಾರಿಸಿದರು.

205 ರನ್ ಬಾರಿಸಿದ ಭಾರತ

ಇಲ್ಲಿನ ಡ್ಯಾರೆನ್​ ಸಮಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಆರಂಭದಿಂದಲೇ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ 5 ವಿಕೆಟ್​ ನಷ್ಟಕ್ಕೆ 205 ರನ್ ಬಾರಿಸಿತು. ವಿರಾಟ್​ ಕೊಹ್ಲಿ ಶೂನ್ಯಕ್ಕೆ ಔಟಾಗಿರುವ ಹೊರತಾಗಿಯೂ ಭಾರತ ತಂಡ ದೊಡ್ಡ ಮೊತ್ತ ಪೇರಿಸಿದೆ.

ಇದನ್ನೂ ಓದಿ: Virat Kohli : ವಿರಾಟ್​​ ಕೊಹ್ಲಿ ಕತೆ ಮುಗೀತು… ಮತ್ತೆ ಶೂನ್ಯಕ್ಕೆ ಔಟಾದ ಸ್ಟಾರ್​ ಬ್ಯಾಟರ್​!

ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಆಘಾತ ಕೊಟ್ಟಿದ್ದು ವಿರಾಟ್ ಕೊಹ್ಲಿ. ಐದು ಎಸೆತಗಳನ್ನು ಎದುರಿಸಿದ ಅವರು ಶೂನ್ಯಕ್ಕೆ ಔಟಾಗಿ ಬೇಸರ ಮೂಡಿಸಿದರು. ಆದರೆ, ಇನ್ನೊಂದು ಬದಿಯಲ್ಲಿ ಅಬ್ಬರಿಸಿದ ರೋಹಿತ್ ಶರ್ಮಾ ರನ್ ಪೇರಿಸುತ್ತಲೇ ಹೋದರು. ಭಾರತ ಕೇವಲ 29 ಎಸೆತಗಳಲ್ಲಿ 50 ರನ್ ಬಾರಿಸಿದರೆ ಬಳಿಕ ರೋಹಿತ್ ಶರ್ಮಾ 19 ಎಸೆತಕ್ಕೆ ಅರ್ಧ ಶತಕ ಬಾರಿಸಿದರು. ಮೂರನೇ ಕ್ರಮಾಂಕದಲ್ಲಿ ಆಡಲು ಬಂದ ರಿಷಭ್​ ಪಂತ್​ 14 ಎಸೆತಕ್ಕೆ 15 ರನ್ ಬಾರಿಸಿದರು. ಆದರೆ, ನಂತರ ಆಡಲು ಬಂದ ಸೂರ್ಯಕುಮಾರ್​ ಯಾದವ್​ ರೋಹಿತ್ ಶರ್ಮಾಗೆ ಉತ್ತಮ ಬೆಂಬಲ ಕೊಟ್ಟರು. ಆದರೆ, ಅವರು 16 ಎಸೆತಕ್ಕೆ 36 ರನ್ ಬಾರಿಸಿ ಔಟಾದರು.

ಸೂರ್ಯ ಔಟಾಗುತ್ತಿದ್ದಂತೆ ಭಾರತದ ಸ್ಕೋರ್ ಗಳಿಕೆ ನಿಧಾನಗೊಂಡಿತು. ಆದಾಗ್ಯೂ ಶಿವಂ ದುಬೆ 1 ಸಿಕ್ಸರ್ ಹಾಗೂ 2 ಫೋರ್ ಸಮೇತ 28 ರನ್ ಬಾರಿಸಿದರು. ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ ಔಟಾಗದೇ 17 ಎಸೆತಕ್ಕೆ 27 ರನ್ ಬಾರಿಸಿದರು. ರವೀಂದ್ರೆ ಜಡೇಜಾ 5 ಎಸೆತಕ್ಕೆ 9 ರನ್ ಬಾರಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IND vs SA: ದಕ್ಷಿಣ ಆಫ್ರಿಕಾದ ಬೌಲಿಂಗ್​ ಶಕ್ತಿ ಭಾರತದ ಬ್ಯಾಟಿಂಗ್​ಗೆ ಲೆಕ್ಕಕ್ಕೇ ಇಲ್ಲ; ಮಾಜಿ ಆಟಗಾರನ ಭವಿಷ್ಯ

IND vs SA: ಟೂರ್ನಿಯಲ್ಲಿ ಭಾರತವು ಇಂಗ್ಲೆಂಡ್ ತಂಡವನ್ನು ಸೋಲಿಸಿ ಫೈನಲ್ ಗೆ ಪ್ರವೇಶಿಸಿದರೆ, ದಕ್ಷಿಣ ಆಫ್ರಿಕಾ ಅಫ್ಘಾನಿಸ್ತಾನವನ್ನು ಹೀನಾಯವಾಗಿ ಮಣಿಸಿತ್ತು. ಗಯಾನಾದಲ್ಲಿ ನಡೆದ ಸೆಮಿಫೈನಲ್​ನಲ್ಲಿ ಅಫ್ಘಾನಿಸ್ತಾನ 56 ರನ್​ಗಳಿಗೆ ಆಲೌಟ್ ಆಗಿದ್ದರೆ, ಭಾರತ ಇಂಗ್ಲೆಂಡ್ ವಿರುದ್ಧ ಪ್ರಾಬಲ್ಯ ಸಾಧಿಸಿ ಗೆದ್ದಿತು.

VISTARANEWS.COM


on

IND vs SA
Koo

ಬೆಂಗಳೂರು: ಬಾರ್ಬಡೋಸ್​​ನಲ್ಲಿ ಶನಿವಾರ ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ 20 ವಿಶ್ವಕಪ್ ಫೈನಲ್ ಪಂದ್ಯವು ಕ್ರಿಕೆಟ್​ ಜಗತ್ತಿನ ಗಮನ ಸೆಳೆದಿದೆ. ಎರಡು ಬಲಿಷ್ಠ ತಂಡಗಳ ನಡುವಿನ ಹಣಾಹಣಿಯಲ್ಲಿ ಗೆಲ್ಲುವ ಸಾಧ್ಯತೆ ಯಾರಿಗೆ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ. ಏತನ್ಮಧ್ಯೆ, ಈ ಪಂದ್ಯದ ಬಗ್ಗೆ ಭಾರತದ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, ದಕ್ಷಿಣ ಆಫ್ರಿಕಾದ ಪ್ರಬಲ ಬೌಲಿಂಗ್​ ಘಟಕವು ಭಾರತಕ್ಕೆ ಲೆಕ್ಕಕ್ಕೇ ಇಲ್ಲ ಎಂದು ಹೇಳಿದ್ದಾರೆ.

ಟೂರ್ನಿಯಲ್ಲಿ ಭಾರತವು ಇಂಗ್ಲೆಂಡ್ ತಂಡವನ್ನು ಸೋಲಿಸಿ ಫೈನಲ್ ಗೆ ಪ್ರವೇಶಿಸಿದರೆ, ದಕ್ಷಿಣ ಆಫ್ರಿಕಾ ಅಫ್ಘಾನಿಸ್ತಾನವನ್ನು ಹೀನಾಯವಾಗಿ ಮಣಿಸಿತ್ತು. ಗಯಾನಾದಲ್ಲಿ ನಡೆದ ಸೆಮಿಫೈನಲ್​ನಲ್ಲಿ ಅಫ್ಘಾನಿಸ್ತಾನ 56 ರನ್​ಗಳಿಗೆ ಆಲೌಟ್ ಆಗಿದ್ದರೆ, ಭಾರತ ಇಂಗ್ಲೆಂಡ್ ವಿರುದ್ಧ ಪ್ರಾಬಲ್ಯ ಸಾಧಿಸಿ ಗೆದ್ದಿತು.

ಟಿ 20 ವಿಶ್ವಕಪ್​ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಎರಡೂ ತಂಡಗಳು ಇಲ್ಲಿಯವರೆಗೆ ಅಜೇಯವಾಗಿವೆ. ದಕ್ಷಿಣ ಆಫ್ರಿಕಾ ಎಂಟು ಪಂದ್ಯಗಳನ್ನು ಗೆದ್ದಿದ್ದರೆ, ಮೆನ್ ಇನ್ ಬ್ಲೂ ಏಳು ಪಂದ್ಯಗಳನ್ನು ಗೆದ್ದಿದೆ. ಅದರಲ್ಲೂ ದಕ್ಷಿಣ ಆಫ್ರಿಕಾ ತಂಡ ತನ್ನ ಪ್ರಬಲ ಬೌಲಿಂಗ್ ವಿಭಾಗದ ನೆರವಿನಿಂದೇ ಗೆದ್ದಿದೆ. ಈ ಬಗ್ಗೆ ಮಾತನಾಡಿದ ಮಂಜ್ರೇಕರ್, ಭಾರತೀಯ ಬ್ಯಾಟರ್​ಗಳು ದಕ್ಷಿಣ ಆಫ್ರಿಕಾದ ಬೌಲರ್​ಗಳ ನಡುವಿನ ಪಂದ್ಯ ಇದು ಎಂದು ಹೇಳಿದ್ದಾರೆ.

ದಕ್ಷಿಣ ಆಫ್ರಿಕಾದ ಬೌಲಿಂಗ್ ದಾಳಿಯು ಗಮನ ಸೆಳೆದಿದೆ. ಆ್ಯನ್ರಿಚ್ ನೋರ್ಜೆ 13, ಕಗಿಸೊ ರಬಾಡ 12, ತಬ್ರೈಜ್ ಶಮ್ಸಿ 10 ಮತ್ತು ಕೇಶವ್ ಮಹಾರಾಜ್ 9 ವಿಕೆಟ್ ಪಡೆದಿದ್ದಾರೆ. ಭಾರತದಲ್ಲಿ ಅರ್ಶ್​​ದೀಪ್​ ಸಿಂಗ್ 15, ಜಸ್ಪ್ರೀತ್ ಬುಮ್ರಾ 13, ಕುಲದೀಪ್ ಯಾದವ್ 10, ಹಾರ್ದಿಕ್ ಪಾಂಡ್ಯ 7 ವಿಕೆಟ್​ಗಳನ್ನು ಉರುಳಿಸಿದ್ದಾರೆ.

ದಕ್ಷಿಣ ಆಫ್ರಿಕಾದ ಬೌಲಿಂಗ್ ದಾಳಿಯನ್ನು ಭಾರತ ಹಿಮ್ಮೆಟ್ಟಿಸಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಂಜಯ್ ಮಂಜ್ರೇಕರ್, “ಆಸ್ಟ್ರೇಲಿಯಾ ತುಂಬಾ ಉತ್ತಮವಾಗಿತ್ತು ಎಂದು ನಾನು ಭಾವಿಸುತ್ತೇನೆ. ಇಂಗ್ಲೆಂಡ್ ಬಹುಶಃ ಅಷ್ಟೊಂದು ಆಗಿರಲಿಲ್ಲ. ದಕ್ಷಿಣ ಆಫ್ರಿಕಾವು ಉತ್ತಮ ಬೌಲಿಂಗ್ ದಾಳಿಯನ್ನು ಹೊಂದಿದೆ. ಆದರೆ, ಭಾರತೀಯ ಬ್ಯಾಟಿಂಗ್​ ಕೂಡ ಉತ್ತಮವಾಗಿದೆ. ಏಕೆಂದರೆ ತಂಡಕ್ಕೆ ಸವಾಲನ್ನು ಮೀರಲು ಹಲವು ಆಟಗಾರರು ನೆರವಾಗಿದ್ದಾರೆ ಎಂದು ಹೇಳಿದ್ದಾರೆ.

ಭಾರತವು ವಿಭಿನ್ನ ಪಂದ್ಯಗಳಲ್ಲಿ ವಿಭಿನ್ನ ಮ್ಯಾಚ್ ವಿನ್ನರ್​ಗಳನ್ನು ಕಂಡುಕೊಂಡಿದೆ ಎಂದು ಮಂಜ್ರೇಕರ್ ಹೇಳಿದ್ದಾರೆ. ಈ ಪಂದ್ಯಾವಳಿಯಲ್ಲಿ ವಿರಾಟ್ ಕೊಹ್ಲಿ ವೈಫಲ್ಯದ ಹೊರತಾಗಿಯೂ. ರೋಹಿತ್ ಶರ್ಮಾ, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ ಮತ್ತು ಸೂರ್ಯಕುಮಾರ್ ಯಾದವ್ ತಂಡಕ್ಕೆ ನೆರವಾಗಿದ್ದಾರೆ. ರೋಹಿತ್ ಶರ್ಮಾ 248, ರಿಷಭ್ ಪಂತ್ 171 ರನ್ ಗಳಿಸಿದ್ದಾರೆ. ಪಾಂಡ್ಯ ಕೂಡ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಪ್ರಭಾವ ಬೀರಿದ್ದಾರೆ. ಯಾರದರೂ ಒಬ್ಬರು ಪರಿಸ್ಥಿತಿ ನಿಭಾಯಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ಭಾರತದ ಸ್ಪಿನ್ನರ್​ಗಳು ಕಾಡುತ್ತಾರೆ

ವ್ಯತಿರಿಕ್ತವಾಗಿ ದಕ್ಷಿಣ ಆಫ್ರಿಕಾದ ಬ್ಯಾಟಿಂಗ್ ಬಲವನ್ನು ಭಾರತೀಯ ಸ್ಪಿನ್ನರ್​ಗಳು ಕುಗ್ಗಿಸಲಿದ್ದಾರೆ ಎಂದು ಮಂಜ್ರೇಕರ್ ಅಭಿಪ್ರಾಯಪಟ್ಟರು. ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ಅವರು ಇಂಗ್ಲೆಂಡ್ ಬ್ಯಾಟರ್​ಗಳಿಗೆ ಮಾರಕವಾಗಿದ್ದರು. ದಕ್ಷಿಣ ಆಫ್ರಿಕಾದ ಬ್ಯಾಟರ್​ಗಳಿಗೆ ಅದೇ ಸವಾಲು ಇದೆ ಎಂದು ಹೇಳಿದ್ದಾರೆ.

ದಕ್ಷಿಣ ಆಫ್ರಿಕಾದ ಬ್ಯಾಟಿಂಗ್ ಪಂದ್ಯದ ಹಣೆಬರಹ ಮತ್ತು ಉಭಯ ತಂಡಗಳ ನಡುವಿನ ವ್ಯತ್ಯಾಸ ನಿರ್ಧರಿಸುವ ಪ್ರಮುಖ ವಿಷಯ ಎಂದು ಮಂಜ್ರೇಕರ್ ಹೇಳಿದರು.

Continue Reading

ದೇಶ

ಮಹಿಳೆಯರಿಗೆ ಬಂಪರ್‌; ಮಾಸಿಕ 1,500 ರೂ. ಜಮೆ, 3 ಅಡುಗೆ ಅನಿಲ ಸಿಲಿಂಡರ್‌ ಫ್ರೀ ಘೋಷಣೆ

ಅಜಿತ್‌ ಪವಾರ್‌ ಅವರು ಮಂಡಿಸಿದ ಬಜೆಟ್‌ನಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಇಳಿಕೆಯನ್ನೂ ಘೋಷಣೆ ಮಾಡಲಾಗಿದೆ. ಮುಂಬೈ ಪ್ರದೇಶದಲ್ಲಿ ಡೀಸೆಲ್ ಮೇಲಿನ ತೆರಿಗೆಯನ್ನು ಶೇಕಡಾ 24 ರಿಂದ 21 ಕ್ಕೆ ಇಳಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಶುಕ್ರವಾರ ಪ್ರಕಟಿಸಿದೆ. ಪೆಟ್ರೋಲ್ ಮೇಲಿನ ತೆರಿಗೆಯನ್ನು ಶೇಕಡಾ 26 ರಿಂದ 25 ಕ್ಕೆ ಇಳಿಸಲಾಗುವುದು ಎಂದಿದೆ. ಇದು ಮುಂಬೈ, ನವೀ ಮುಂಬೈ ಮತ್ತು ಥಾಣೆ ಸೇರಿದಂತೆ ಮುಂಬೈ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ 65 ಪೈಸೆ ಇಳಿಕೆಯಾಗಿದೆ ಹಾಗೂ ಡೀಸೆಲ್​ ಬೆಲೆ 2 ರೂಪಾಯಿ ಕಡಿಮೆಯಾಗಿದೆ.

VISTARANEWS.COM


on

Maharashtra Budget
Koo

ಮುಂಬೈ: ಮಹಾರಾಷ್ಟ್ರದಲ್ಲಿ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ (Maharashtra Assembly Election 2024) ನಡೆಯಲಿದ್ದು, ಇದಕ್ಕಾಗಿ ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ಬಂಪರ್‌ ಘೋಷಣೆ ಮಾಡಿದೆ. ಉಪ ಮುಖ್ಯಮಂತ್ರಿಯೂ ಆಗಿರುವ ಹಣಕಾಸು ಸಚಿವ ಅಜಿತ್‌ ಪವಾರ್‌ (Ajit Pawar) ಅವರು ಶುಕ್ರವಾರ (ಜೂನ್‌ 28) ಬಜೆಟ್‌ ಮಂಡಿಸಿದ್ದು (Maharashtra Budget), ಮಹಿಳೆಯರಿಗೆ ಬಂಪರ್‌ ಉಡುಗೊರೆ ಸೇರಿ ಹಲವು ಘೋಷಣೆಗಳನ್ನು ಮಾಡಿದ್ದಾರೆ. ಅದರಲ್ಲೂ, ಬಡ ಹೆಣ್ಣುಮಕ್ಕಳಿಗೆ ಮಾಸಿಕ 1,500 ರೂ. ಸಹಾಯಧನ ಹಾಗೂ ವರ್ಷಕ್ಕೆ 3 ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂಬುದಾಗಿ ಅವರು ಘೋಷಣೆ ಮಾಡಿದ್ದಾರೆ.

“ಮುಖ್ಯಮಂತ್ರಿ ಅನ್ನಪೂರ್ಣ ಯೋಜನೆ ಅಡಿಯಲ್ಲಿ ವರ್ಷಕ್ಕೆ ಮೂರು ಸಿಲಿಂಡರ್‌ಗಳನ್ನು ಬಡವರಿಗೆ ಉಚಿತವಾಗಿ ನೀಡಲಾಗುತ್ತದೆ. ಇನ್ನು, ಬಡ ಹೆಣ್ಣುಮಕ್ಕಳಿಗೆ ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್‌ ಯೋಜನೆ ಅನ್ವಯ 1,500 ರೂ. ಸಹಾಯಧನ ನೀಡಲಾಗುವುದು. ಇದಕ್ಕಾಗಿ ರಾಜ್ಯ ಸರ್ಕಾರವು ಬಜೆಟ್‌ನಲ್ಲಿ 46 ಸಾವಿರ ಕೋಟಿ ರೂ. ಮೀಸಲಿರಿಸಿದೆ. 21-60 ವರ್ಷದೊಳಗಿನ ಮಹಿಳೆಯರು ಮಾಸಿಕ 1,500 ರೂ. ಪಡೆಯಲಿದ್ದಾರೆ” ಎಂಬುದಾಗಿ ಅಜಿತ್‌ ಪವಾರ್‌ ತಿಳಿಸಿದರು.

ಮಹಿಳೆಯರಿಗೆ ರಾಜ್ಯ ಸರ್ಕಾರವು ಮತ್ತೊಂದು ಯೋಜನೆ ಘೋಷಣೆ ಮಾಡಿದೆ. ರಾಜ್ಯಾದ್ಯಂತ ಹೆಣ್ಣುಮಕ್ಕಳು 10 ಸಾವಿರ ಆಟೋಗಳನ್ನು ಖರೀದಿಸಲು ಅವರಿಗೆ 10 ಸಾವಿರ ರೂ. ಧನಸಹಾಯ ಮಾಡಲಾಗುವುದು. ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವವರಿಗೆ ಕ್ಷಿಪ್ರವಾಗಿ ಶಿಕ್ಷೆ ನೀಡಲು 100 ಕೋರ್ಟ್‌ಗಳ ನಿರ್ಮಾಣ ಮಾಡಲಾಗುವುದು. ಹೆಣ್ಣುಮಕ್ಕಳ ಶಿಕ್ಷಣ ಹಾಗೂ ಪರೀಕ್ಷಾ ಶುಲ್ಕವನ್ನು ಮನ್ನಾ ಮಾಡಲಾಗುವುದು. ಜುಲೈನಿಂದಲೇ ಎಲ್ಲ ಯೋಜನೆಗಳು ಜಾರಿಗೆ ಬರಲಿವೆ ಎಂಬುದಾಗಿ ಅವರು ಮಾಹಿತಿ ನೀಡಿದರು.

ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ

ಮುಂಬೈ ಪ್ರದೇಶದಲ್ಲಿ ಡೀಸೆಲ್ ಮೇಲಿನ ತೆರಿಗೆಯನ್ನು ಶೇಕಡಾ 24 ರಿಂದ 21 ಕ್ಕೆ ಇಳಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಶುಕ್ರವಾರ ಪ್ರಕಟಿಸಿದೆ. ಪೆಟ್ರೋಲ್ ಮೇಲಿನ ತೆರಿಗೆಯನ್ನು ಶೇಕಡಾ 26 ರಿಂದ 25 ಕ್ಕೆ ಇಳಿಸಲಾಗುವುದು ಎಂದಿದೆ. ಇದು ಮುಂಬೈ, ನವೀ ಮುಂಬೈ ಮತ್ತು ಥಾಣೆ ಸೇರಿದಂತೆ ಮುಂಬೈ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ 65 ಪೈಸೆ ಇಳಿಕೆಯಾಗಿದೆ ಹಾಗೂ ಡೀಸೆಲ್​ ಬೆಲೆ 2 ರೂಪಾಯಿ ಕಡಿಮೆಯಾಗಿದೆ. ಜೂನ್ 28 ರಂದು ಮುಂಬೈನಲ್ಲಿ ಪೆಟ್ರೋಲ್ 104.21 ರೂ.ಗೆ ತಲುಪಿದ್ದರೆ, ಡೀಸೆಲ್ ಬೆಲೆ ಲೀಟರ್​ಗೆ 92.15 ರೂಪಾಯಿ ಇದೆ. ಕರ್ನಾಟಕದಲ್ಲಿ 102. 86 ರೂಪಾಯಿ ಆದರೆ ಬೆಂಗಳೂರು 88. 94 ರೂಪಾಯಿ ನಡೆದಿದೆ.

ಇದನ್ನೂ ಓದಿ: ಹಾಲು, ಪೆಟ್ರೋಲ್‌ ಬೆಲೆ ಏರಿಸಿ, ಎಸಿ ಬಸ್‌ನಲ್ಲಿ ಪ್ರತಿಭಟನೆಗೆ ಹೊರಟ ಕಾಂಗ್ರೆಸ್‌ ಹಣದ ಮೂಲ ಏನು? ಬಿಜೆಪಿ ಪ್ರಶ್ನೆ

Continue Reading

ಪ್ರಮುಖ ಸುದ್ದಿ

Rahul Dravid : ವಿಶ್ವ ಕಪ್​ ಗೆದ್ದು ಬನ್ನಿ ಅಭಿಯಾನದ ವಿರುದ್ಧ ಸಿಟ್ಟಿಗೆದ್ದ ರಾಹುಲ್ ದ್ರಾವಿಡ್​

Rahul Dravid: ಮೆನ್ ಇನ್ ಬ್ಲೂ ಈ ವಿಶ್ವ ಕಪ್​ನ ಇದುವರೆಗಿನ ಪಂದ್ಯಗಳಲ್ಲಿ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಉತ್ತಮ ಫಾರ್ಮ್ ನಲ್ಲಿತ್ತು. ತಮ್ಮ ಕೊನೆಯ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಂತಹ ದೊಡ್ಡ ತಂಡಗಳನ್ನು ಸೋಲಿಸಿದೆ. ಹೀಗಾಗಿ ಫೈನಲ್ ಗೆ ಮುಂಚಿತವಾಗಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಮತ್ತೊಂದೆಡೆ, ದಕ್ಷಿಣ ಆಫ್ರಿಕಾ ಕೂಡ ಹಿಂದೆ ಬಿದ್ದಿಲ್ಲ. ದಕ್ಷಿಣ ಆಫ್ರಿಕಾ ಅದ್ಭುತ ಸ್ಥಿರತೆ ತೋರಿಸಿದೆ.

VISTARANEWS.COM


on

Rahyl Dravid
Koo

ಬೆಂಗಳೂರು: 2024ರ ಟಿ20 ವಿಶ್ವಕಪ್ ಟೂರ್ನಿಯನ್ನು ಭಾರತ ಗೆಲ್ಲಲಿದೆ ಎಂದು ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ (Rahul Dravid) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜೂನ್ 29 ರಂದು ಬಾರ್ಬಡೋಸ್​​ನ ಬ್ರಿಜ್​ಟೌನ್​ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆಯಲಿರುವ ಫೈನಲ್​ನಲ್ಲಿ ಭಾರತ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಈ ಪಂದ್ಯವನ್ನು ಭಾರತ ಗೆದ್ದು 13 ವರ್ಷಗಳ ಬಳಿಕ ಟ್ರೋಫಿ ಗೆಲ್ಲಲಿದೆ ಎಂಬುದಾಗಿ ದ್ರಾವಿಡ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೆನ್ ಇನ್ ಬ್ಲೂ ಈ ವಿಶ್ವ ಕಪ್​ನ ಇದುವರೆಗಿನ ಪಂದ್ಯಗಳಲ್ಲಿ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಉತ್ತಮ ಫಾರ್ಮ್ ನಲ್ಲಿತ್ತು. ತಮ್ಮ ಕೊನೆಯ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಂತಹ ದೊಡ್ಡ ತಂಡಗಳನ್ನು ಸೋಲಿಸಿದೆ. ಹೀಗಾಗಿ ಫೈನಲ್ ಗೆ ಮುಂಚಿತವಾಗಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಮತ್ತೊಂದೆಡೆ, ದಕ್ಷಿಣ ಆಫ್ರಿಕಾ ಕೂಡ ಹಿಂದೆ ಬಿದ್ದಿಲ್ಲ. ದಕ್ಷಿಣ ಆಫ್ರಿಕಾ ಅದ್ಭುತ ಸ್ಥಿರತೆ ತೋರಿಸಿದೆ. ಇಲ್ಲಿಯವರೆಗೆ ಆಡಿದ ಎಲ್ಲಾ ಎಂಟು ಪಂದ್ಯಗಳನ್ನು ಗೆದ್ದಿದೆ. ಅವರು ಈ ಪಂದ್ಯಾವಳಿಯಲ್ಲಿ ಒಂಬತ್ತನೇ ಗೆಲುವಿನ ಗುರಿ ಹೊಂದಿದ್ದಾರೆ. ಇದು ಐಸಿಸಿ ಟ್ರೋಫಿಗಾಗಿ ಅವರ ಬರವನ್ನು ಕೊನೆಗೊಳಿಸಬಹುದು.

2024ರ ಟಿ20 ವಿಶ್ವಕಪ್ ಗೆಲ್ಲುವ ಗುರಿ ಹೊಂದಿರುವ ರಾಹುಲ್ ದ್ರಾವಿಡ್

ರಾಹುಲ್ ದ್ರಾವಿಡ್ ಅವರು ಕ್ರಿಕೆಟಿಗರಾಗಿ ಮತ್ತು ತರಬೇತುದಾರರಾಗಿ ಭಾರತೀಯ ಕ್ರಿಕೆಟ್​ಗೆ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ. ದುರದೃಷ್ಟವಶಾತ್, ಅವರಿಗೆ ಖುಷಿ ಪಡಲು ಯಾವುದೇ ಐಸಿಸಿ ಟ್ರೋಫಿಗಳು ಇಲ್ಲ. ಕಳೆದ ವರ್ಷ ಭಾರತವು ಏಕದಿನ ವಿಶ್ವಕಪ್ 2023 ಫೈನಲ್ ತಲುಪಿದಾಗ ಅವರು ಒಂದು ಐಸಿಸಿ ಟ್ರೋಫಿಯನ್ನು ಗೆಲ್ಲುವ ಆಸೆ ಹುಟ್ಟಿತ್ತು. ಆದರೆ ಮೆನ್ ಇನ್ ಬ್ಲೂ ಫೈನಲ್ ಗೆಲ್ಲಲು ಸಾಧ್ಯವಾಗಲಿಲ್ಲ ಮತ್ತು ದ್ರಾವಿಡ್ ಮತ್ತೆ ನಿರಾಶೆಗೊಂಡಿದ್ದರು.

ಪ್ರಸ್ತುತ ನಡೆಯುತ್ತಿರುವ ಟಿ 20 ವಿಶ್ವಕಪ್ ಭಾರತದ ಮುಖ್ಯ ಕೋಚ್ ಆಗಿ ದ್ರಾವಿಡ್ ಅವರ ಕೊನೆಯ ಟೂರ್ನಿಯಾಗಿದೆ. ಹೀಗಾಗಿ #DoItForDravid ಎಂಬ ಅಭಿಯಾನ ನಡೆಯುತ್ತಿದೆ. ಟೂರ್ನಿಯ ಪ್ರಸಾರಕ ಸಂಸ್ಥೆ ಸ್ಟಾರ್ ಸ್ಪೋರ್ಟ್ಸ್​​ ಅದನ್ನು ಮಾಡಿದೆ. ಇದು ಸಾಮಾಜಿಕ ಮಾಧ್ಯಮದಲ್ಲಿ ಸಿಕ್ಕಾಪಟ್ಟೆ ಗಮನ ಸೆಳೆದಿದೆ. ಈ ಅಭಿಯಾನದ ಮೂಲಕ ಅಭಿಮಾನಿಗಳು ಭಾರತೀಯ ದಂತಕಥೆಗೆ ಐಸಿಸಿ ಟ್ರೋಫಿ ತಂದುಕೊಡುವಂತೆ ಒತ್ತಾಯಿಸುತ್ತಿದ್ದಾರೆ. ಈ ಅಭಿಯಾನದ ಬಗ್ಗೆ ದ್ರಾವಿಡ್ ಬೇಸರಗೊಂಡಿದ್ದಾರೆ. ತಕ್ಷಣ ಅದನ್ನು ನಿಲ್ಲಿಸುವಂತೆ ಕೋರಿದ್ದಾರೆ. ಇಂಥ ಅಭಿಯಾನಗಳು ನನ್ನ ನಂಬಿಕೆಗೆ ವಿರುದ್ಧ ಎಂಬುದಾಗಿಯೂ ಬೇಸರ ವ್ಯಕ್ತಪಡಿಸಿದ್ದಾರೆ. ನಾನು ಏನನ್ನೂ ಹೇಳಲು ಬಯಸುವುದಿಲ್ಲ. ಅದನ್ನು ಮಾಡಲು ಬಯಸುತ್ತೇನೆ. ಏಕೆಂದರೆ ವಿಶ್ವ ಕಪ್​ ನಡೆದೇ ನಡೆಯುತ್ತದೆ ಎಂದು ಹೇಳಿದ್ದಾರೆ.

ಇನ್ನೊಬ್ಬರಿಗಾಗಿ ಗೆಲ್ಲುವುದನ್ನು ನಾನು ನಿಜವಾಗಿಯೂ ನಂಬುವುದಿಲ್ಲ. ‘ನೀವು ಮೌಂಟ್ ಎವರೆಸ್ಟ್ ಅನ್ನು ಏಕೆ ಏರಲು ಬಯಸುತ್ತೀರಿ?’ ಎಂಬು ಅನಾಮಿಕರೊಬ್ಬರ ಪ್ರಶ್ನೆಗೆ ನೀಡುವ ಉತ್ತರ ಇಲ್ಲಿಗೂ ಹೊಂದಿಕೆಯಾಗುತ್ತದೆ. ‘ನಾನು ಮೌಂಟ್ ಎವರೆಸ್ಟ್ ಅನ್ನು ಏರಲು ಬಯಸುತ್ತೇನೆ ಏಕೆಂದರೆ ಅದು ಅಲ್ಲಿಯೇ ಇದೆ’. ಅಂತೆಯೇ ವಿಶ್ವ ಕಪ್ ನಡೆಯುತ್ತದೆ. ಹೀಗಾಗಿ ಟ್ರೋಫಿ ಗೆಲ್ಲಬೇಕು. ಇನ್ಯಾರಿಗಾಗಿಯೋ ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ: Team India : ಟೆಸ್ಟ್​​ ಕ್ರಿಕೆಟ್​ನ ಒಂದೇ ದಿನದಲ್ಲಿ ಗರಿಷ್ಠ ರನ್​; ದಾಖಲೆ ಬರೆದ ಭಾರತ ತಂಡ

“ನಾನು ಈ ವಿಶ್ವಕಪ್ ಗೆಲ್ಲಲು ಬಯಸುತ್ತೇನೆ ಏಕೆಂದರೆ ಅದು ನಡೆಯುತ್ತದೆ. ಇದು ಯಾರಿಗಾಗಿಯೂ ಅಲ್ಲ. ಗೆಲ್ಲುವ ಅವಕಾಶ ಮಾತ್ರ ಇದೆ. ನಾನು ಉತ್ತಮ ಕ್ರಿಕೆಟ್ ಆಡಲು ಬಯಸುತ್ತೇನೆ. ಯಾರಿಗಾದರೂ ಅದನ್ನು ಮಾಡುವುದು ಅಲ್ಲ. ಒಬ್ಬ ವ್ಯಕ್ತಿಯಾಗಿ ನಾನು ನಂಬುಚುದಕ್ಕೆ ಇದು ಸಂಪೂರ್ಣವಾಗಿ ವಿರುದ್ಧವಾಗಿದೆ. ನಾನು ಅದರ ಬಗ್ಗೆ ಮಾತನಾಡಲು ಮತ್ತು ಚರ್ಚಿಸಲು ಬಯಸುವುದಿಲ್ಲ “ಎಂದು ಭಾರತದ ಮುಖ್ಯ ಕೋಚ್ ಹೇಳಿದರು.

ಭಾರತಕ್ಕೆ 3ನೇ ಟಿ20 ವಿಶ್ವಕಪ್ ಫೈನಲ್

ಭಾರತವು ಟಿ 20 ವಿಶ್ವಕಪ್ ಪ್ರಶಸ್ತಿಯ ಉದ್ಘಾಟನಾ ಚಾಂಪಿಯನ್. ಅಂದಿನಿಂದ ಟ್ರೋಫಿಯನ್ನು ಎತ್ತಲು ಸಾಧ್ಯವಾಗಿಲ್ಲ. ಇದು ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಅವರ ಮೂರನೇ ಪ್ರವೇಶ. ಎರಡು ಪ್ರದರ್ಶನಗಳಲ್ಲಿ, ಮೆನ್ ಇನ್ ಬ್ಲೂ 2007 ರಲ್ಲಿ ವಿಜೇತರಾಗಿ ಮತ್ತು 2014 ರಲ್ಲಿ ರನ್ನರ್ ಅಪ್ ಆಗಿ ಕೊನೆಗೊಂಡಿತು. 2013 ರಿಂದ ಐಸಿಸಿ ಟ್ರೋಫಿಯ ಬರವನ್ನು ಅವರು ಕೊನೆಗೊಳಿಸಿದ್ದಾರೆ.

ಇದು ಪಂದ್ಯಾವಳಿಯ ಎರಡು ಅತ್ಯುತ್ತಮ ತಂಡಗಳ ನಡುವಿನ ರೋಮಾಂಚಕ ಫೈನಲ್ ಎಂದು ನಿರೀಕ್ಷಿಸಲಾಗಿದೆ. ಎರಡೂ ತಂಡಗಳು ಬಲವಾಗಿದೆ. ಫೈನಲ್ ನ ಒತ್ತಡವನ್ನು ನಿಭಾಯಿಸಬಲ್ಲ ತಂಡವು ಅಗ್ರಸ್ಥಾನವನ್ನು ಪಡೆಯುವ ಸಾಧ್ಯತೆಯಿದೆ.

Continue Reading

ಕ್ರೈಂ

Physical Abuse: ಕಲಬುರಗಿಯಲ್ಲಿ 13 ವರ್ಷದ ಬಾಲಕಿ ಲೈಂಗಿಕ ದೌರ್ಜನ್ಯ, ತೀವ್ರ ರಕ್ತಸ್ರಾವವಾಗಿ ಸಾವು!

Physical Abuse: ಬಾಲಕಿಯ ಮನೆಗೆ ಆರೋಪಿ ಹೋಗಿ ಹೆದರಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದರಿಂದ ತೀವ್ರ ರಕ್ತಸ್ರಾವವಾಗಿ ಬಾಲಕಿ ಮೃತಪಟ್ಟಿದ್ದಾಳೆ.

VISTARANEWS.COM


on

physical Abuse
Koo

ಕಲಬುರಗಿ: ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ 13 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮೃತಪಟ್ಟಿರುವ ಘಟನೆ (Physical Abuse) ಕಲಬುರಗಿ ನಗರದ ಸಬ್ ಅರ್ಬನ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲೈಂಗಿಕ ದೌರ್ಜನ್ಯದಿಂದ ತೀವ್ರ ರಕ್ತಸ್ರಾವವಾಗಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಜ್ಜಿ ಅಂಗಡಿ ವ್ಯಾಪಾರಿ ಸರ್ಫರಾಜ್ (30) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿಯ ಮನೆಗೆ ಹೋಗಿ ಹೆದರಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ ತೀವ್ರ ರಕ್ತ ಸ್ರಾವವಾಗಿ ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಅತ್ಯಾಚಾರಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ದಲಿತ ಸೇನೆ ಕಾರ್ಯಕರ್ತರು ರಸ್ತೆ ತಡೆ ನಡೆಸಿ, ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದಾರೆ.

ಇದನ್ನೂ ಓದಿ | vasavi condiments : ವಾಸವಿ ಕಾಂಡಿಮೆಂಟ್ಸ್‌ಗೆ ಬೀಗ; ನಿದ್ರೆ ಮಾತ್ರೆ ಸೇವಿಸಿ ಮಾಲಕಿ ಗೀತಾ ಆತ್ಮಹತ್ಯೆಗೆ ಯತ್ನ

ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

ಕಾರವಾರ/ಉಡುಪಿ: ಭಾರಿ ಮಳೆ ಎಫೆಕ್ಟ್‌ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಬೃಹತ್ ಮರ (Road Accident) ಬಿದ್ದಿದೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ನಗರಬಸ್ತಿಕೇರಿಯಲ್ಲಿ ಘಟನೆ ನಡೆದಿದೆ. ಅನಿಲಗೋಡ ಗ್ರಾಮದ ಸವಾರ ಬಾಬು ನಾಯ್ಕ(52), ಭಾಗೀರಥಿ ನಾಯ್ಕ ಎಂಬುವವರಿಗೆ ಸಣ್ಣಪುಟ್ಟ ಗಾಯವಾಗಿದೆ.

ಈ ದಂಪತಿ ಸಂಬಂಧಿಯೊಬ್ಬರ ಶವಸಂಸ್ಕಾರಕ್ಕೆ ಬೈಕ್‌ನಲ್ಲಿ ಹೋಗಿ ವಾಪಸ್ ಬರುತ್ತಿದ್ದರು. ಈ ವೇಳೆ ಏಕಾಏಕಿ ಬೃಹತ್‌ ಮರವು ಇವರಿಬ್ಬರ ಮೇಲೆ ಬಿದ್ದಿದೆ. ಬಿದ್ದ ರಭಸಕ್ಕೆ ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಸವಾರರನ್ನು ಕೂಡಲೇ ಸ್ಥಳೀಯರು ಹಾಗೂ ಭಟ್ಕಳದ ಬಿಜೆಪಿ ಮುಖಂಡರು ರಕ್ಷಿಸಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತಡರಾತ್ರಿ ಹೊತ್ತಿ ಉರಿದ ಕಾರು

Road Accident Car Fire

ತಡರಾತ್ರಿ ಕಾರೊಂದು ಧಗಧಗನೆ ಹೊತ್ತಿ ಉರಿದಿದೆ. ಉಡುಪಿಯ ಮಣಿಪಾಲದ ಬಬ್ಬುಸ್ವಾಮಿ ದೈವಸ್ಥಾನದ ಎದುರು ಘಟನೆ ನಡೆದಿದೆ. ರಸ್ತೆ ಬದಿ ನಿಲ್ಲಿಸಿದ್ದ ರಿಡ್ಜ್ ಕಾರು ಬೆಂಕಿಗಾಹುತಿ ಆಗಿದೆ. ಚಾಲಕ ಕಾರನ್ನು ರಸ್ತೆ ಬದಿ ನಿಲ್ಲಿಸಿ ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಆಗಿದೆ. ಕಾರಿನ ಬಾನೆಟ್‌ನಲ್ಲಿ ಹೊಗೆ ಕಂಡು ಕಾರು ಚಾಲಕ ಹೊರಬಂದಿದ್ದು, ಕ್ಷಣದಲ್ಲೇ ಹೊತ್ತಿ ಉರಿದಿದೆ. ಕಾರು ಮಾಲೀಕನ ಮಾಹಿತಿ ಮೇಲೆ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿಯ ಕೆನ್ನಾಲೆಗೆ ಕಾರು ಸಂಪೂರ್ಣ ಸುಟ್ಟುಹೋಗಿದೆ.

ಇದನ್ನೂ ಓದಿ: Haveri Accident: ಹಾವೇರಿ ಅಪಘಾತ ಪ್ರಕರಣ; ಭಾರತ ಅಂಧರ ಪುಟ್‌ಬಾಲ್ ತಂಡದ ಕ್ಯಾಪ್ಟನ್ ಕೂಡ ಸಾವು

Continue Reading
Advertisement
IND vs SA
ಪ್ರಮುಖ ಸುದ್ದಿ4 seconds ago

IND vs SA: ದಕ್ಷಿಣ ಆಫ್ರಿಕಾದ ಬೌಲಿಂಗ್​ ಶಕ್ತಿ ಭಾರತದ ಬ್ಯಾಟಿಂಗ್​ಗೆ ಲೆಕ್ಕಕ್ಕೇ ಇಲ್ಲ; ಮಾಜಿ ಆಟಗಾರನ ಭವಿಷ್ಯ

Rain News
ಕರ್ನಾಟಕ6 mins ago

Rain News: ಕಾರವಾರದಲ್ಲಿ ಭಾರಿ ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಸಾವು

Maharashtra Budget
ದೇಶ6 mins ago

ಮಹಿಳೆಯರಿಗೆ ಬಂಪರ್‌; ಮಾಸಿಕ 1,500 ರೂ. ಜಮೆ, 3 ಅಡುಗೆ ಅನಿಲ ಸಿಲಿಂಡರ್‌ ಫ್ರೀ ಘೋಷಣೆ

Rahyl Dravid
ಪ್ರಮುಖ ಸುದ್ದಿ31 mins ago

Rahul Dravid : ವಿಶ್ವ ಕಪ್​ ಗೆದ್ದು ಬನ್ನಿ ಅಭಿಯಾನದ ವಿರುದ್ಧ ಸಿಟ್ಟಿಗೆದ್ದ ರಾಹುಲ್ ದ್ರಾವಿಡ್​

Run4Research programme on June 30 in Bengaluru
ಕರ್ನಾಟಕ38 mins ago

Run4Research: ಬೆಂಗಳೂರಿನಲ್ಲಿ ಜೂ.30ರಂದು ʼರನ್4ರೀಸರ್ಚ್ʼ ಓಟ

MLA Dr N T Srinivas drives for crop insurance Awareness jatha in Kudligi
ವಿಜಯನಗರ40 mins ago

Vijayanagara News: ಕೂಡ್ಲಿಗಿಯಲ್ಲಿ ಬೆಳೆ ವಿಮೆ ಜಾಗೃತಿ ಜಾಥಾಕ್ಕೆ ಶಾಸಕ ಶ್ರೀನಿವಾಸ್ ಚಾಲನೆ

physical Abuse
ಕ್ರೈಂ41 mins ago

Physical Abuse: ಕಲಬುರಗಿಯಲ್ಲಿ 13 ವರ್ಷದ ಬಾಲಕಿ ಲೈಂಗಿಕ ದೌರ್ಜನ್ಯ, ತೀವ್ರ ರಕ್ತಸ್ರಾವವಾಗಿ ಸಾವು!

Viral Video
Latest43 mins ago

Viral Video: ಈ ಆರು ಯೂಟ್ಯೂಬರ್‌ಗಳು ಜೈಲು ಪಾಲಾಗಲು ಶಾರುಖ್‌ ಖಾನ್‌ ಕಾರಣವಂತೆ!

Sonakshi Sinha
Latest51 mins ago

Sonakshi Sinha: ಈಗಷ್ಟೇ ಮದುವೆಯಾಗಿರುವ ನಟಿ ಸೋನಾಕ್ಷಿ ಸಿನ್ಹಾ ಗರ್ಭಿಣಿ?

Snake
ಪ್ರಮುಖ ಸುದ್ದಿ51 mins ago

Snake: ಮಲಗಿದ್ದವನ ಚಡ್ಡಿಯೊಳಗೆ ನುಗ್ಗಿದ ನಾಗರಹಾವು; ಅದು ಹೊರಬರುವ ಮುನ್ನ ಮಾಡಿದ ಅನಾಹುತ ಏನು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ3 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ9 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು1 day ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌