Sandeshkhali Violence: ಸಂದೇಶ್‌ಖಾಲಿ ಹಿಂಸಾಚಾರ; ಟಿಎಂಸಿ ನಾಯಕ ನಾಪತ್ತೆ, ಸಿಪಿಎಂ ಮಾಜಿ ನಾಯಕನ ಸೆರೆ - Vistara News

ಪ್ರಮುಖ ಸುದ್ದಿ

Sandeshkhali Violence: ಸಂದೇಶ್‌ಖಾಲಿ ಹಿಂಸಾಚಾರ; ಟಿಎಂಸಿ ನಾಯಕ ನಾಪತ್ತೆ, ಸಿಪಿಎಂ ಮಾಜಿ ನಾಯಕನ ಸೆರೆ

ಬಹುಕೋಟಿ ಪಡಿತರ ಹಗರಣ ಹಾಗೂ ಸಂದೇಶ್‌ಖಾಲಿ ಹಿಂಸಾಚಾರಕ್ಕೆ (Sandeshkhali Violence) ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆಗಳು ಹುಡುಕುತ್ತಿರುವ ತೃಣಮೂಲ ಕಾಂಗ್ರೆಸ್‌ನ ನಾಯಕ ಶೇಖ್ ಷಹಜಹಾನ್‌ ಪರಾರಿಯಾಗಿದ್ದು, ಇನ್ನೂ ಸಿಕ್ಕಿಲ್ಲ.

VISTARANEWS.COM


on

Sandeshkhali Violence
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಉತ್ತರ ಪರಗಣ ಜಿಲ್ಲೆಯ ಸಂದೇಶ್‌ಖಾಲಿ ಗ್ರಾಮದಲ್ಲಿ ನಡೆದ ಹಿಂಸಾಚಾರಕ್ಕೆ (Sandeshkhali Violence) ಸಂಬಂಧಿಸಿ ಸಿಪಿಐಎಂ(CPIM)ನ ಮಾಜಿ ಶಾಸಕನೊಬ್ಬನನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಇನ್ನೊಬ್ಬ ತೃಣಮೂಲ ಕಾಂಗ್ರೆಸ್‌ (TMC) ನಾಯಕ ನಾಪತ್ತೆಯಾಗಿದ್ದಾನೆ. ಇದೀಗ ಈ ಪ್ರಕರಣ ರಾಷ್ಟ್ರೀಯ ವ್ಯಾಪಕತೆ ಪಡೆಯುತ್ತಿದೆ.

ಉತ್ತಮ್‌ ಸರ್ದಾರ್‌ ಎಂಬಾತನನ್ನು ಬಂಧಿಸಲಾಗಿದೆ. ಈತನ ಬಂಧನ ವಿರೋಧಿಸಿ ಸಿಪಿಎಂ ಬಂದ್‌ ಕರೆ ನೀಡಿದೆ. ಬಹುಕೋಟಿ ಪಡಿತರ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆಗಳು ಹುಡುಕುತ್ತಿರುವ ತೃಣಮೂಲ ಕಾಂಗ್ರೆಸ್‌ನ ನಾಯಕ ಶೇಖ್ ಷಹಜಹಾನ್‌ ಪರಾರಿಯಾಗಿದ್ದು, ಆತನ ನಿಕಟವರ್ತಿ ಶಿಬಾಪ್ರಸಾದ್ ಅಲಿಯಾಸ್‌ ಶಿಬು ಹಜ್ರಾ ಎಂಬಾತ ಕೂಡ ಪೊಲೀಸರಿಗೆ ಬೇಕಾಗಿದ್ದಾನೆ.

ಏನಿದು ಪ್ರಕರಣ?

ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿಯು ಕಳೆದ ಬುಧವಾರದಿಂದ ಹಿಂಸಾಚಾರದಲ್ಲಿ ಮುಳುಗಿದೆ. ತೃಣಮೂಲ ನಾಯಕ ಷಹಜಹಾನ್‌ನ ಇಬ್ಬರು ನಿಕಟ ಸಹಚರರು ಹಿಂಸಾಚಾರವನ್ನು ಪ್ರಚೋದಿಸಿದ್ದಕ್ಕಾಗಿ ಪೊಲೀಸರಿಗೆ ಬೇಕಾಗಿದ್ದಾರೆ. ಇದೇ ಪ್ರದೇಶದಲ್ಲಿರುವ ಷಹಜಹಾನ್ ಮನೆಗೆ ಜನವರಿ 5ರಂದು ಇಡಿ ಅಧಿಕಾರಿಗಳು ಭೇಟಿ ನೀಡಿದ್ದರು.

ಈ ಸಂದರ್ಭದಲ್ಲಿ ಅಧಿಕಾರಿಗಳ ಮೇಲೆ ಷಹಜಹಾನ್‌ ಬೆಂಬಲಿಗರು ಹಾಗೂ ಕೆಲವು ಗ್ರಾಮಸ್ಥರು ಸೇರಿ ದಾಳಿ ನಡೆಸಿದ್ದರು. ಆಗ ಮೂವರು ಅಧಿಕಾರಿಗಳು ಗಾಯಗೊಂಡಿದ್ದಾರೆ. ಅಂದಿನಿಂದ ಇಡಿ, ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ರಾಜ್ಯ ಪೊಲೀಸರು ಪರಾರಿಯಾಗಿರುವ ಷಹಜಹಾನ್‌ನನ್ನು ಹುಡುಕಾಡುತ್ತಿದ್ದು, ಆತನನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ.

ಷಹಜಹಾನ್ ತಲೆಮರೆಸಿಕೊಂಡ ಒಂದು ತಿಂಗಳ ನಂತರ, ಫೆಬ್ರವರಿ 8ರಂದು, ಸಂದೇಶಖಾಲಿಯಲ್ಲಿ ಮಹಿಳೆಯರು ಪೊರಕೆ ಮತ್ತು ಬಡಿಗೆಗಳೊಂದಿಗೆ ಬೀದಿಗಿಳಿದರು. ಆತನ ಇಬ್ಬರು ಸಹಾಯಕರಾದ ಶಿಬಾ ಪ್ರಸಾದ್ ಹಜ್ರಾ ಮತ್ತು ಉತ್ತಮ್ ಸರ್ದಾರ್ ಅವರನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದರು.

ಮರುದಿನ, ಪ್ರತಿಭಟನಾಕಾರರು ಹಜ್ರಾಗೆ ಸೇರಿದ ಆಸ್ತಿಗಳ ಮೇಲೆ ದಾಳಿ ಮಾಡಿ ಅವರ ಕೋಳಿ ಫಾರಂಗೆ ಬೆಂಕಿ ಹಚ್ಚಿದರು. ಟಿಎಂಸಿ ನಾಯಕ ಕಬಳಿಸಿರುವ ಜಮೀನಿನಲ್ಲಿ ಕೋಳಿ ಫಾರಂ ಸ್ಥಾಪಿಸಲಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಷಹಜಹಾನ್ ಮತ್ತು ಆತನ ಸಹಾಯಕರು ವರ್ಷಗಟ್ಟಲೆ ತಮ್ಮ ಮೇಲೆ ಹಲ್ಲೆ, ಲೈಂಗಿಕ ದೌರ್ಜನ್ಯ ನಡೆಸಿ ಶೋಷಣೆ ಮಾಡಿದ್ದಾರೆ ಎಂದು ಸ್ಥಳೀಯ ಮಹಿಳೆಯರು ಆರೋಪಿಸಿದ್ದಾರೆ. ಪೊಲೀಸರು ಸಂದೇಶಖಾಲಿಯ ವಿವಿಧ ಪ್ರದೇಶಗಳಲ್ಲಿ ಸೆಕ್ಷನ್ 144 ಜಾರಿಗೊಳಿಸಿದ್ದಲ್ಲದೆ, 16 ಪಂಚಾಯತ್‌ಗಳಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಿದರು.

ಸಂದೇಶಖಾಲಿಯಲ್ಲಿ ಕ್ರೋಧವಶರಾಗಿರುವ ಗ್ರಾಮಸ್ಥರನ್ನು ಸಮಾಧಾನಪಡಿಸುವ ಪ್ರಯತ್ನದಲ್ಲಿ, ಆಡಳಿತ ಟಿಎಂಸಿ ಪಕ್ಷವು ಉತ್ತಮ್ ಸರ್ದಾರ್‌ನನ್ನು ಪಕ್ಷದಿಂದ ಅಮಾನತುಗೊಳಿಸಿದೆ. ಆದರೆ ಹಜ್ರಾ ವಿರುದ್ಧ ಯಾವುದೇ ಆರೋಪಗಳು ಸಾಬೀತಾಗಿಲ್ಲ ಎಂದು ಪಕ್ಷ ಹೇಳಿದೆ. ಪ್ರತಿಪಕ್ಷಗಳ ಟೀಕೆಗೆ ಗುರಿಯಾದ ಸರ್ದಾರ್‌ನನ್ನು ಅಮಾನತುಗೊಳಿಸಿದ ಕೂಡಲೇ ಬಂಧಿಸಲಾಗಿದೆ.

ಭಾನುವಾರ ಸ್ಥಳೀಯ ಮಹಿಳೆಯರ ಆರೋಪದ ಮೇಲೆ ಸಂದೇಶಖಾಲಿಯ ಮಾಜಿ ಸಿಪಿಐ(ಎಂ) ಶಾಸಕ ನಿರಪಾದ ಸರ್ದಾರ್ ಮತ್ತು ಸ್ಥಳೀಯ ಬಿಜೆಪಿ ಮುಖಂಡ ವಿಕಾಸ್ ಸಿಂಗ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಸಿಪಿಐ(ಎಂ)ನ ಮಾಜಿ ಶಾಸಕರ ಕುಟುಂಬ ಸದಸ್ಯರು ಯಾವುದೇ ಮುನ್ಸೂಚನೆ ನೀಡದೆ ಬಂಧಿಸಲಾಗಿದೆ ಎಂದು ಹೇಳಿದರೆ, ಸಿಂಗ್ ಅವರ ಸಂಬಂಧಿಕರು ಅವರು ನಿರಪರಾಧಿ ಎಂದು ಹೇಳಿದ್ದಾರೆ.

ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಸೋಮವಾರ ಈ ವಿಷಯದ ಬಗ್ಗೆ ಮೌನ ಮುರಿದಿದ್ದಾರೆ. “ಯಾರು ಬೇಕಾದರೂ ಸಂದೇಶಖಾಲಿಗೆ ಹೋಗಬಹುದು. ಅದರಲ್ಲಿ ನಮಗೆ ಯಾವುದೇ ಸಮಸ್ಯೆಗಳಿಲ್ಲ. ನಾವು ಈಗಾಗಲೇ ರಾಜ್ಯ ಮಹಿಳಾ ಆಯೋಗದ ತಂಡವನ್ನು ಸಂದೇಶಖಾಲಿಗೆ ಕಳುಹಿಸಿದ್ದೇವೆ ಮತ್ತು ಅನೇಕ ಬಂಧನಗಳನ್ನು ಮಾಡಲಾಗಿದೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ಹಿಂಸಾಚಾರದಲ್ಲಿ ಭಾಗಿಯಾದವರೆಲ್ಲರನ್ನೂ ಬಂಧಿಸಲಾಗುವುದು” ಎಂದು ಅವರು ಹೇಳಿದರು.

ಸಂದೇಶಖಾಲಿಯ ಹಾಲಿ ಶಾಸಕ, ಟಿಎಂಸಿಯ ಸುಕುಮಾರ್ ಮಹಾತಾ ಅವರು ಸ್ಥಳೀಯ ಮಹಿಳೆಯರ ಆರೋಪಗಳನ್ನು ನಿರಾಕರಿಸಿದ್ದಾರೆ. ಸ್ಥಳೀಯ ಪೊಲೀಸರು ಕೂಡ ಆರೋಪಗಳು “ಆಧಾರರಹಿತ” ಎಂದು ಹೇಳಿದ್ದಾರೆ.

ಟಿಎಂಸಿ ಕಳೆದ ಎರಡು ಚುನಾವಣೆಗಳಲ್ಲಿ ಸಂದೇಶಖಾಲಿ ವಿಧಾನಸಭಾ ಕ್ಷೇತ್ರದಿಂದ ಮತ್ತು ಕಳೆದ ಮೂರು ಚುನಾವಣೆಯಲ್ಲಿ ಬಸಿರ್ಹತ್ ಲೋಕಸಭಾ ಕ್ಷೇತ್ರದಿಂದ ಗೆದ್ದಿದೆ. ಸುತ್ತಮುತ್ತಲಿನ ಪ್ರದೇಶಗಳಿಗೆ ಅಶಾಂತಿ ಹರಡುವುದನ್ನು ತಡೆಯಲು ಪಕ್ಷವು ಈಗ ಹಾನಿ ನಿಯಂತ್ರಣ ಕ್ರಮಗಳಿಗೆ ಮುಂದಾಗಿದೆ. ಬಿಜೆಪಿ ಮತ್ತು ಸಿಪಿಐ(ಎಂ) ಎರಡೂ ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗಿವೆ. ಬಿಜೆಪಿ ಮತ್ತು ಸಿಪಿಐ(ಎಂ) ನಿಯೋಗಗಳು ಸಂದೇಶಖಾಲಿ ಪ್ರವೇಶಿಸಲು ಯತ್ನಿಸಿವೆ. ಅವರನ್ನು ಪೊಲೀಸರು ತಡೆದಿದ್ದಾರೆ.

ಸಂದೇಶ್‌ಖಾಲಿ ಬಾಂಗ್ಲಾದೇಶದ ಗಡಿಗೆ ಸಮೀಪದಲ್ಲಿದೆ. ಬಾಂಗ್ಲಾದಿಂದ ನಡೆಯುವ ಅಕ್ರಮ ವಲಸೆಗೆ ಸ್ಥಳೀಯರ ವಿರೋಧವಿದೆ. ಬಿಜೆಪಿಯು ಇದನ್ನು ಎತ್ತಿಕೊಂಡಿದೆ. “ಸಂದೇಶಖಾಲಿಯಲ್ಲಿ, 67% ಜನಸಂಖ್ಯೆಯು ಪರಿಶಿಷ್ಟ ಪಂಗಡ ಅಥವಾ ಪರಿಶಿಷ್ಟ ಜಾತಿಯವರದು. ಅವರಿಗೆ ಸ್ಥಳೀಯ ಮುಸ್ಲಿಂ ಟಿಎಂಸಿ ಮುಖಂಡರು ಚಿತ್ರಹಿಂಸೆ ನೀಡಿದ್ದಾರೆ. ಷಹಜಹಾನ್ ಗಲಾಟೆಯ ನಂತರ, ಹಿಂದೂ ಸಮುದಾಯ ಪ್ರತಿಭಟಿಸಿದೆ” ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: Sadhus Assaulted: ಪಶ್ಚಿಮ ಬಂಗಾಳದಲ್ಲಿ ಸಾಧುಗಳ ಮೇಲೆ ಗುಂಪು ಹಲ್ಲೆ; ʼಮಮತಾ ಆಡಳಿತದಲ್ಲಿ ಹಿಂದೂ ಆಗಿರುವುದೇ ಅಪರಾಧ’ ಎಂದು ಬಿಜೆಪಿ ಆಕ್ರೋಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Lok Sabha Election 2024: ಬೂತ್‌ವಾರು ಮತದಾನ ವಿವರ ನೀಡಬೇಕಿಲ್ಲ: ಸುಪ್ರೀಂ ಕೋರ್ಟ್‌

Lok Sabha Election 2024: ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಬೂತ್‌ವಾರು ಮತದಾನಗೊಂಡ ಸಂಪೂರ್ಣ ಮತದಾರರ ಸಂಖ್ಯೆಯನ್ನು ತಕ್ಷಣ ಪ್ರಕಟಿಸುವಂತೆ ಲಾಭರಹಿತ ಸಂಸ್ಥೆ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮನವಿ ಮಾಡಿತ್ತು. ಇದನ್ನು ಪೀಠ ಮುಂದೂಡಿದೆ.

VISTARANEWS.COM


on

lok sabha election 2024 supreme court
Koo

ಬೆಂಗಳೂರು: ಈ ಲೋಕಸಭೆ ಚುನಾವಣೆ (Lok Sabha Election 2024) ವೇಳೆಯೇ ಮತದಾನ ಮುಗಿದ ತಕ್ಷಣವೇ ಬೂತ್‌ವಾರು ಮತದಾನ (Boothwise voting) ಪ್ರಮಾಣದ ಅಂಕಿ ಅಂಶಗಳನ್ನು ಬಹಿರಂಗಪಡಿಸುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ (ECI) ಯಾವುದೇ ನಿರ್ದೇಶನಗಳನ್ನು ನೀಡಲು ಸುಪ್ರೀಂ ಕೋರ್ಟ್ (Supreme court) ನಿರಾಕರಿಸಿದೆ.

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಬೂತ್‌ವಾರು ಮತದಾನಗೊಂಡ ಸಂಪೂರ್ಣ ಮತದಾರರ ಸಂಖ್ಯೆಯನ್ನು ತಕ್ಷಣ ಪ್ರಕಟಿಸುವಂತೆ ಲಾಭರಹಿತ ಸಂಸ್ಥೆ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮನವಿ ಮಾಡಿತ್ತು. ಇದನ್ನು ಪೀಠ ಮುಂದೂಡಿದೆ. ಪಶ್ಚಿಮ ಬಂಗಾಳದ ಕೃಷ್ಣನಗರ ಕ್ಷೇತ್ರದ ಅಭ್ಯರ್ಥಿಯಾಗಿರುವ ತೃಣಮೂಲ ಕಾಂಗ್ರೆಸ್‌ನ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರ ಇದೇ ರೀತಿಯ ಅರ್ಜಿಯನ್ನು ಎಡಿಆರ್‌ನ ಮನವಿಯೊಂದಿಗೆ ಪಟ್ಟಿ ಮಾಡಲಾಗಿದೆ.

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗವನ್ನು ಹೆಚ್ಚು ಒತ್ತಡಕ್ಕೊಳಪಡಿಸಬೇಕಿಲ್ಲ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಸತೀಶ್ ಚಂದ್ರ ಶರ್ಮಾ ಅವರ ರಜಾಕಾಲದ ಪೀಠವು, ಸಕ್ರಿಯ ಚುನಾವಣಾ ಅವಧಿಯಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ ನ್ಯಾಯಾಂಗ ಹಸ್ತಕ್ಷೇಪದ ಸಂಭಾವ್ಯ ದುಷ್ಪರಿಣಾಮಗಳನ್ನು ಎತ್ತಿ ತೋರಿಸಿದೆ. ಅಂತಹ ಕ್ರಮಗಳು ನಡೆಯುತ್ತಿರುವ ಈಗ ನಡೆಯುತ್ತಿರುವ ಮತದಾನದ ಕಾರ್ಯವಿಧಾನಗಳನ್ನು ಅಡ್ಡಿಪಡಿಸಬಹುದು ಎಂದು ಪೀಠ ಒತ್ತಿ ಹೇಳಿದೆ.

“ಈಗಾಗಲೇ ನಡೆಯುತ್ತಿರುವ ಮತದಾನವನ್ನು ನಾವು ಅಡ್ಡಿಪಡಿಸಲು ಸಾಧ್ಯವಿಲ್ಲ. ಚುನಾವಣೆಗಳ ನಡುವೆ ನಾವು ಆಯೋಗದ ಬಗ್ಗೆ ಸ್ವಲ್ಪ ಹಗುರವಾಗಿರಬೇಕು. ನಾವು ಪ್ರಕ್ರಿಯೆಯನ್ನು ಅಡ್ಡಿಪಡಿಸಲು ಸಾಧ್ಯವಿಲ್ಲ. ನಮಗೆ ಅಧಿಕಾರದಲ್ಲಿ ಸ್ವಲ್ಪ ವಿಶ್ವಾಸವಿರಲಿ” ಎಂದು ಪೀಠವು ಹೇಳಿದೆ.

ಇಸಿಐ ಪರ ಹಾಜರಿದ್ದ ಹಿರಿಯ ವಕೀಲ ಮಣಿಂದರ್ ಸಿಂಗ್ ಅವರ ಮಂಡನೆ ಗಮನಿಸಿದ ಪೀಠವು, ಚುನಾವಣಾ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾದ ನಂತರ ಮನವಿಯನ್ನು ಸಲ್ಲಿಸಲಾಗಿದ್ದು, ಇದು ವಿವೇಕಯುತವಲ್ಲ ಎಂದು ಹೇಳಿದೆ. “ಇದು ಏಳು ಹಂತಗಳಲ್ಲಿ ನಡೆಯುವ ಚುನಾವಣೆ. ನಾಳೆ ಆರನೇ ಹಂತ. ನೀವು ಕೇಳುತ್ತಿರುವ ಈ ನಿರ್ದಿಷ್ಟ ಪ್ರಕ್ರಿಯೆಗೆ ಮಾನವಶಕ್ತಿ ಮತ್ತು ಹೆಚ್ಚಿನ ಅನುಸರಣೆಯ ಅಗತ್ಯವಿರುತ್ತದೆ” ಎಂದು ಪೀಠವು ಎಡಿಆರ್ ಪರವಾಗಿ ಹಾಜರಾದ ಹಿರಿಯ ವಕೀಲ ದುಶ್ಯಂತ್ ದವೆ ಮತ್ತು ಮೊಯಿತ್ರಾವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರಿಗೆ ತಿಳಿಸಿದೆ.

ತನ್ನ ಆದೇಶದಲ್ಲಿ, ಎಡಿಆರ್‌ನ 2019ರ ಅರ್ಜಿಯು ಪ್ರಸ್ತುತ ಪರಿಗಣನೆಯಲ್ಲಿರುವ ಮಧ್ಯಂತರ ಅರ್ಜಿಯಂತೆಯೇ ಅಂತಿಮ ಪರಿಹಾರವನ್ನು ಕೇಳಿದೆ ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ. “ಅರ್ಜಿಯಲ್ಲಿ ಅಂತಿಮ ಪರಿಹಾರವಾಗಿ ನೀವು ಪ್ರಾರ್ಥಿಸಿದ ಮಧ್ಯಂತರ ಪರಿಹಾರವನ್ನು ಕೇಳಲು ಹೇಗೆ ಸಾಧ್ಯ? ನೀವು 2019ರಲ್ಲಿ ಈ ಅರ್ಜಿಯನ್ನು ಸಲ್ಲಿಸಿದ್ದೀರಿ. ಇದನ್ನು ಮೊದಲೇ ಪಟ್ಟಿ ಮಾಡಲು ನೀವು ಯಾವ ಕ್ರಮಗಳನ್ನು ತೆಗೆದುಕೊಂಡಿದ್ದೀರಿ? ಚುನಾವಣೆ ಪ್ರಕ್ರಿಯೆ ಆರಂಭವಾದ ನಂತರವೇ ನೀವು ಅದನ್ನು ಏಕೆ ಸಲ್ಲಿಸಿದ್ದೀರಿ?” ಎಂದು ಪೀಠವು ಪ್ರಶ್ನಿಸಿತು.

ಎಡಿಆರ್‌ನ ಮನವಿಗೆ ಪ್ರತಿಕ್ರಿಯೆಯಾಗಿ ಆಯೋಗ ಅಫಿಡವಿಟ್‌ ಸಲ್ಲಿಸಿತ್ತು. ಚುನಾವಣಾ ಪ್ರಕ್ರಿಯೆಯ ಈ ಹಂತದಲ್ಲಿ ಇಂತಹ ವಿನಂತಿಯನ್ನು ನಿರ್ವಹಿಸಲು ಅಸಾಧ್ಯ. ಇದು ಚುನಾವಣೆಯ ಕ್ರಮಬದ್ಧ ನಡಾವಳಿಗೆ ಅಡ್ಡಿಪಡಿಸುತ್ತದೆ ಎಂದು ಇಸಿಐ ಹೇಳಿದೆ.

ಇದನ್ನೂ ಓದಿ: Lok Sabha Election 2024: ವಿವಿಪ್ಯಾಟ್‌ ಯಂತ್ರವನ್ನೇ ನೆಲಕ್ಕೆಸೆದು ಪುಡಿ ಪುಡಿ ಮಾಡಿದ ಶಾಸಕ; ವಿಡಿಯೋ ವೈರಲ್‌

Continue Reading

ಪ್ರಮುಖ ಸುದ್ದಿ

Sandalwood Movie : ಸಿಂಹಗುಹೆಯಲ್ಲಿ ವಿಡಿಯೋ ಪೆನ್ ಡ್ರೈವ್ ಸದ್ದು!

Sandalwood Movie : ಸಸ್ಪೆನ್ಸ್, ಕ್ರೈಂ, ಮರ್ಡರ್ ಮಿಸ್ಟ್ರಿ ಕಥೆ ಇರುವ ನಮ್ಮ ಚಿತ್ರದಲ್ಲಿ ಹೊರಗಡೆ ನಡೆಯುತ್ತಿರುವ ವಿಚಾರಗಳೇ ಇರಬಹುದು ಎನಿಸಿದರೂ ಅದು ಕಾಕತಾಳೀಯ. ವರ್ಷದ ಹಿಂದೆಯೇ ನಮ್ಮ ಚಿತ್ರ ಸೆನ್ಸಾರ್​ ಆಗಿತ್ತು. ಹೀರೋ‌ನೇ ಅಂಥಾ ವಿಡಿಯೋ‌ ಮಾಡ್ತಾನಾ;? ಯಾರು ಯಾಕೆ ಮಾಡ್ತಾನೆ ಅನ್ನೋದೇ ಸಸ್ಪೆನ್ಸ್ ಎಂದು ನಿರ್ದೇಶಕ ಎಸ್‌ಜಿಆರ್ ಹೇಳಿದ್ದಾರೆ.

VISTARANEWS.COM


on

Sandalwood Movie
Koo

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನೇ ಹೋಲುವ ಝಲಕ್ ಒಳಗೊಂಡ ಸಿಂಹಗುಹೆ ಚಿತ್ರದ (Sandalwood Movie) ಟೀಸರ್ ಇದೀಗ ಭಾರೀ ಸದ್ದು ಮಾಡುತ್ತಿದೆ. ಅಶ್ಲೀಲ ವಿಡಿಯೋ ಪ್ರಕರಣ, ಪೆನ್ ಡ್ರೈವ್ ನಂಥ ವಿಚಾರಗಳೂ ಈ ಟೀಸರ್ ನಲ್ಲಿದೆ. ಈಗಾಗಲೇ ಬಿಡುಗಡೆಯಾದ ಈ ಟೀಸರ್ ಹಲವಾರು ಪ್ರಶ್ನೆ ಹಾಗು ಕುತೂಹಲ ಹುಟ್ಟು ಹಾಕಿದೆ. ಸಮರ್ಥ, ತಾಜಾ ಚಿತ್ರಗಳ ನಂತರ ಎಸ್‌.ಜಿ.ಆರ್. ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಸಿಂಹಗುಹೆ ಚಿತ್ರದ ಟೀಸರ್ ಸದ್ಯ ಒಂದಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ನಿರ್ದೇಶಕ ಎಸ್‌ಜಿಆರ್ ಮಾತನಾಡಿ, ಸಸ್ಪೆನ್ಸ್, ಕ್ರೈಂ, ಮರ್ಡರ್ ಮಿಸ್ಟ್ರಿ ಕಥೆ ಇರುವ ನಮ್ಮ ಚಿತ್ರದಲ್ಲಿ ಹೊರಗಡೆ ನಡೆಯುತ್ತಿರುವ ವಿಚಾರಗಳೇ ಇರಬಹುದು ಎನಿಸಿದರೂ ಅದು ಕಾಕತಾಳೀಯ. ವರ್ಷದ ಹಿಂದೆಯೇ ನಮ್ಮ ಚಿತ್ರ ಸೆನ್ಸಾರ್​ ಆಗಿತ್ತು. ಹೀರೋ‌ನೇ ಅಂಥಾ ವಿಡಿಯೋ‌ ಮಾಡ್ತಾನಾ;? ಯಾರು ಯಾಕೆ ಮಾಡ್ತಾನೆ ಅನ್ನೋದೇ ಸಸ್ಪೆನ್ಸ್.

ಇನ್ನು ಅನೇಕ ವಿಚಾರಗಳು ಚಿತ್ರದಲ್ಲಿವೆ. ಸಮಾಜದಲ್ಲಿ ಹೇಗಿರಬೇಕು, ಹೇಗಿರಬಾರದು ಅಂತ ಮೆಸೇಜ್ ಹೇಳಿದ್ದೇವೆ. ಮೊಬೈಲ್ ನಿಂದ ಏನೇನಾಗುತ್ತೆ ಅನ್ನೋದೂ ಚಿತ್ರದಲ್ಲಿದೆ.ಹಾಸನ, ಸಕಲೇಶಪುರ, ಮೂಡಿಗೆರೆ ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಿದ್ದೇವೆ. ಚಿತ್ರವೀಗ ಬಿಡುಗಡೆಗೆ ರೆಡಿ ಇದ್ದು, ಜೂನ್ ವೇಳೆಗೆ ರಿಲೀಸ್ ಮಾಡುವ ಪ್ಲಾನಿದೆ ಎಂದು ಹೇಳಿದರು.

ಸಹ ನಿರ್ಮಾಪಕ ಕೃಷ್ಣ ಮಾತನಾಡಿ, ಡೈರೆಕ್ಟರ್ ಬಂದು ಒಂಟಿ ಮನೆಯಲ್ಲಿ ಈ ಥರ ನಡೆಯುತ್ತೆ ಅಂತ ಹೇಳಿದರು. ಕಥೆ ಇಂಟರೆಸ್ಟಿಂಗ್ ಆಗಿದೆ ಅಂತ ನಿರ್ಮಾಣಕ್ಕೆ ಮುಂದಾದೆವು ಎಂದರು.

ಇದನ್ನೂ ಓದಿ: A: Film by Upendra : ರೀ ರಿಲೀಸ್ ನಲ್ಲೂ ದಾಖಲೆ ನಿರ್ಮಿಸಿದ ಉಪೇಂದ್ರ ನಿರ್ದೇಶನದ “A”

ಸಂಗೀತ ನಿರ್ದೇಶಕ ಸತೀಶ್ ಆರ್ಯನ್ ಮಾತನಾಡಿ, ನಾನು ಚಿತ್ರದ ಸಾಂಗ್, ಆರ್.ಆರ್. ಮಾಡಿದ್ದೇನೆ. ನಾನೂ ಸಹ 2 ಹಾಡುಗಳನ್ನು ಹಾಡಿದ್ದೇನೆ. ಈಗಾಗಲೇ ರಿಲೀಸ್ ಆಗಿರುವ ಸಾಂಗ್ ವೈರಲ್ ಆಗಿದೆ‌ ಎಂದರು.

ನಟಿ ಅನುರಾಧಾ ಮಾತನಾಡಿ, ಈವರೆಗೆ ಸಣ್ಣಪುಟ್ಟ ರೋಲ್ ಮಾಡಿಕೊಂಡಿದ್ದೆ. ಇದೇ ಫಸ್ಟ್ ಟೈಂ ಸೆಕೆಂಡ್ ಲೀಡ್ ಮಾಡಿದ್ದೇನೆ. ಹಳ್ಳಿ ಹುಡುಗಿ ನಾಯಕನ ಲವರ್ ಪಾತ್ರ ಎಂದರು. ನಾಯಕ ರವಿ ಶಿರೂರ್ ಅವರು ಅಭಿನಯದೊಂದಿಗೆ ನಿರ್ಮಾಣದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ನಿವಿಶ್ಕಾ ಪಾಟೀಲ್ ಚಿತ್ರದ ನಾಯಕಿಯಾಗಿದ್ದಾರೆ. ಎ.ಸಿ. ಮಹೇಂದರ್ ಅವರ ಛಾಯಾಗ್ರಹಣ, ಶಿವನಂಜೇಗೌಡ ಅವರ ಸಾಹಿತ್ಯ, ಸೈ ರಮೇಶ್ ಅವರ ಕೊರಿಯೋಗ್ರಫಿ ಈ ಚಿತ್ರಕ್ಕಿದೆ,

Continue Reading

ಕರ್ನಾಟಕ

Bank fraud: ಕಾರವಾರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಹಗರಣ! 54 ಸಾವಿರ ಕೋಟಿ ರೂ. ಗುಳುಂ; ಮ್ಯಾನೇಜರ್ ಸಾವಿಂದ ಹೊರಬಂತು ಅವ್ಯವಹಾರ!

Bank fraud: ಕಾರವಾರದ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಮ್ಯಾನೇಜರ್‌ನಿಂದ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಸಂಗತಿ ವರ್ಷಗಳ ಬಳಿಕ ಗೊತ್ತಾಗಿದೆ. ಅದೂ ಆ ಮ್ಯಾನೇಜರ್ ಮೃತಪಟ್ಟಿದ್ದರಿಂದ ಈ ಅವ್ಯವಹಾರ ಬೆಳಕಿಗೆ ಬಂದಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರದ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಈ ಅವ್ಯವಹಾರ ನಡೆದಿದೆ ಎನ್ನಲಾಗಿದ್ದು, ಗುರುದಾಸ್ ಬಾಂದೇಕರ್ ಎನ್ನುವ ಮ್ಯಾನೇಜರ್ ಈ ಕೃತ್ಯ ಎಸೆಗಿದ್ದಾರೆಂದು ತಿಳಿದುಬಂದಿದೆ.

VISTARANEWS.COM


on

Bank fraud Scam in Urban Co operative Bank of Karwar
Koo

ಕಾರವಾರ: ಬೆಂಗಳೂರಿನ ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಸೇರಿದಂತೆ ಹಲವಾರು ಕಡೆ ಸಹಕಾರಿ ಬ್ಯಾಂಕ್‌ಗಳ ಹಗರಣ (Bank fraud) ನಡೆದು ಗ್ರಾಹಕರು ಪರದಾಡುತ್ತಿರುವ ಹೊತ್ತಿನಲ್ಲಿಯೇ ಈಗ ಕಾರವಾರದ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ (Karwar Urban Co operative Bank) ಅವ್ಯವಹಾರ ನಡೆದಿದೆ ಎಂಬ ಸಂಗತಿ ಗೊತ್ತಾಗಿದೆ. ಆದರೆ, ಗ್ರಾಹಕರು ಯಾವುದೇ ರೀತಿಯಲ್ಲಿ ಭಯ ಪಡುವುದು ಬೇಡ. ನಿಮ್ಮ ಹಣ ಸುರಕ್ಷಿತವಾಗಿದೆ ಎಂದು ಆಡಳಿತ ಮಂಡಳಿ ಸ್ಪಷ್ಟೀಕರಣ ನೀಡಿದೆ.

ಬ್ಯಾಂಕ್ ಮ್ಯಾನೇಜರ್‌ನಿಂದ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಸಂಗತಿ ವರ್ಷಗಳ ಬಳಿಕ ಗೊತ್ತಾಗಿದೆ. ಅದೂ ಆ ಮ್ಯಾನೇಜರ್ ಮೃತಪಟ್ಟಿದ್ದರಿಂದ ಈ ಅವ್ಯವಹಾರ ಬೆಳಕಿಗೆ ಬಂದಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರದ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಈ ಅವ್ಯವಹಾರ ನಡೆದಿದೆ ಎನ್ನಲಾಗಿದ್ದು, ಗುರುದಾಸ್ ಬಾಂದೇಕರ್ ಎನ್ನುವ ಮ್ಯಾನೇಜರ್ ಈ ಕೃತ್ಯ ಎಸೆಗಿದ್ದಾರೆಂದು ಗೊತ್ತಾಗಿದೆ.

54 ಕೋಟಿ ರೂಪಾಯಿ ಅವ್ಯವಹಾರ

ಸುಮಾರು 54 ಕೋಟಿ ರೂಪಾಯಿ ಅವ್ಯವಹಾರವನ್ನು ಈ ಮ್ಯಾನೇಜರ್ ಗುರುದಾಸ್ ಬಾಂದೇಕರ್ ಮಾಡಿದ್ದಾರೆನ್ನಲಾಗಿದೆ. ವರ್ಷದ ಹಿಂದೆ ಇವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ತಮ್ಮ ಸಂಬಂಧಿ ಹಾಗೂ ಪರಿಚಯಸ್ಥರ ಅಕೌಂಟ್‌ಗೆ ಹಣ ವರ್ಗಾವಣೆ ಮಾಡಿಕೊಂಡು ಅವ್ಯವಹಾರ ಮಾಡಿದ್ದಾರೆ ಎಂದು ಈಗ ತಿಳಿದುಬಂದಿದೆ.

ಪ್ರತಿ ವರ್ಷ ‌ಆಡಿಟ್‌ನಲ್ಲೂ ಗುರುದಾಸ್ ವ‌ಂಚನೆ ಮಾಡಿದ್ದರು. ಈಗ ಮ್ಯಾನೇಜರ್ ಮೃತಪಟ್ಟಿದ್ದರಿಂದ ಆಡಳಿತ ಮಂಡಳಿಗೆ ದೊಡ್ಡ ತಲೆನೋವಾಗಿದೆ. ಆಡಿಟ್ ಮಾಡಿಸುವ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ. ಕಾರವಾರ ನಗರ ಠಾಣೆಯಲ್ಲಿ ಈ ಸಂಬಂಧ ಬ್ಯಾಂಕ್ ಆಡಳಿತ ಮಂಡಳಿ ದೂರು ನೀಡಿದೆ.

ಬ್ಯಾಂಕ್‌ ದಿವಾಳಿ ಆಗಿಲ್ಲವೆಂದ ಆಡಳಿತ ಮಂಡಳಿ

ಈ ನಡುವೆ ಅವ್ಯವಹಾರದ ಸುದ್ದಿ ಎಲ್ಲೆಡೆ ಹರಡಿದ್ದರಿಂದ ಗ್ರಾಹಕರು ಆತಂಕಗೊಂಡಿದ್ದಾರೆ. ಬ್ಯಾಂಕ್ ದಿವಾಳಿಯಾಗಿದೆ ಎಂದು ತಮ್ಮ ಖಾತೆಯಲ್ಲಿಟ್ಟಿದ್ದ ಹಣವನ್ನು ವಾಪಸ್ ಪಡೆಯಬೇಕು ಎಂದು ಗ್ರಾಹಕರು ಮುಗಿಬಿದ್ದಿದ್ದಾರೆ. ಆದರೆ, ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ಆಡಳಿತ ಮಂಡಳಿಯು, ಗ್ರಾಹಕರ ಹಣಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದೆ.

ಗುರು ರಾಘವೇಂದ್ರ, ವಸಿಷ್ಠ ಸಹಕಾರ ಬ್ಯಾಂಕ್‌ಗಳ ಹಗರಣ ಎಸ್‌ಐಟಿ ಹೆಗಲಿಗೆ; ಶೀಘ್ರ ಕ್ರಮವೆಂದ ಡಿಕೆಶಿ

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಹಗರಣದ (Bank fraud) ತನಿಖೆ ಹೊಣೆಯನ್ನು ಎಸ್‌ಐಟಿಗೆ (SIT Investigation) ವಹಿಸುವಂತೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಬಳಿ ಚರ್ಚೆ ನಡೆಸುತ್ತೇನೆ ಎಂದು ಕಳೆದ ಏಪ್ರಿಲ್‌ 25ರಂದು ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ಭರವಸೆ ನೀಡಿದ್ದರು. ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಠೇವಣಿದಾರರು ಗುರುವಾರ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಮನವಿ ಮಾಡಿದ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಈ ಭರವಸೆ ನೀಡಿದ್ದರು.

ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬೆಂಗಳೂರಿಗೆ ಪ್ರಿಯಾಂಕಾ ಗಾಂಧಿ (Priyanka Gandhi) ಆಗಮಿಸಿದ್ದ ವೇಳೆ ಅವರನ್ನು ಭೇಟಿ ಮಾಡಿದ್ದ ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಠೇವಣಿದಾರರು ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದರು. ಈ ಬ್ಯಾಂಕ್‌ಗಳಲ್ಲಿ ಲಕ್ಷಾಂತರ ರೂಪಾಯಿಯನ್ನು ಹೂಡಿಕೆ ಮಾಡಿದ್ದೇವೆ. ಈಗ ಹಗರಣದಿಂದಾಗಿ ನಮಗೆ ನಯಾ ಪೈಸೆ ಸಿಗುತ್ತಿಲ್ಲ. ಇದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ಕಷ್ಟಪಟ್ಟು ನಾವು ದುಡಿದಿದ್ದ ಹಣವನ್ನೆಲ್ಲ ಈ ಸಂಸ್ಥೆಯಲ್ಲಿ ಹೂಡಿಕೆ ಮಾಡಿಟ್ಟಿದ್ದೇವೆ. ಇದರಿಂದ ನಮಗೆ ತೀವ್ರ ಸಮಸ್ಯೆಯಾಗುತ್ತಿದೆ. ಈವರೆಗೆ ಯಾವ ಸರ್ಕಾರಗಳೂ ಈ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿಲ್ಲ. ನಮಗೆ ದಿಕ್ಕೇ ತೋಚದಂತಾಗಿದೆ. ಹೀಗಾಗಿ ಕೂಡಲೇ ಕ್ರಮವಹಿಸುವಂತೆ ಮನವಿ ಮಾಡಿದ್ದರು. ‌

ಎಸ್‌ಐಟಿ ತನಿಖೆಯ ಭರವಸೆ ನೀಡಿದ್ದ ಪ್ರಿಯಾಂಕಾ ಗಾಂಧಿ

ಠೇವಣಿದಾರರ ಮನವಿ ಸ್ವೀಕಾರ ಮಾಡಿದ್ದ ಪ್ರಿಯಾಂಕಾ ಗಾಂದಿ, ರಾಜ್ಯ ಸರ್ಕಾರದಿಂದ ಎಸ್‌ಐಟಿ ತನಿಖೆ ನಡೆಸುವ ಸಂಬಂಧ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ ಎಂದು ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ ಈಗ ಠೇವಣಿದಾರರು ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ತಮಗೆ ಸಾಕಷ್ಟು ಅನ್ಯಾಯ ಆಗಿದೆ. ಕೋಟಿ ಕೋಟಿ ಕಳೆದುಕೊಂಡಿದ್ದೇವೆ. ನ್ಯಾಯ ಕೇಳೋಕೆ ಹೋದರೆ ಯಾವುದೇ ಪರಿಹಾರ ಇಲ್ಲ. ಮೂರು ವರ್ಷದಿಂದ ಒಂದು ದೂರು ಕೂಡ ದಾಖಲಾಗಿಲ್ಲ. ಕಾಂಗ್ರೆಸ್‌ ಮುಖಂಡ ಶಂಕರ್ ಗುಹಾ ಅವರು ಬಂದ ಮೇಲೆ ದೂರು ದಾಖಲಾಗಿದೆ ಎಂದು ಅಳಲು ತೋಡಿಕೊಂಡಿದ್ದರು.

ಸಿಎಂಗೆ ಪತ್ರ ಬರೆಯಲು ಮುಂದಾದ ಡಿ.ಕೆ. ಶಿವಕುಮಾರ್

ಮನವಿ ಸ್ವೀಕರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಈ ಸಂಬಂಧ ಮಾತನಾಡುತ್ತೇನೆ. ಶೀಘ್ರವೇ ಎಸ್‌ಐಟಿ ರಚನೆ ಮಾಡಲು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೆ, ಕೂಡಲೇ ಈ ಸಂಬಂಧ ಸಿಎಂಗೆ ಪತ್ರವನ್ನು ಸಿದ್ಧಪಡಿಸಲು ಸಿಬ್ಬಂದಿಗೆ ಸೂಚನೆ ನೀಡಿದ್ದರು.

ಗುರು ರಾಘವೇಂದ್ರ ಬ್ಯಾಂಕ್ ಹಗರಣದ​ ಹಿನ್ನೆಲೆ

ಚಾಲ್ತಿಯಲ್ಲಿರುವ ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿದ ಆರೋಪ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಮೇಲಿದೆ. ಹೆಚ್ಚಿನ ಬಡ್ಡಿ ಆಸೆಗೆ ಸಾವಿರಾರು ಗ್ರಾಹಕರು ಈ ಸಂಸ್ಥೆಯಲ್ಲಿ ನೂರಾರು ಕೋಟಿ ರೂ. ಠೇವಣಿ ಇಟ್ಟಿದ್ದರು. ಆದರೆ ಬ್ಯಾಂಕ್​​ ಸುಳ್ಳು ಸಾಲಗಾರರ ಖಾತೆ ತೆರೆದು ಈ ಹಣವನ್ನು ಲಾಂಡರಿಂಗ್​ ಮಾಡಿದೆ.

ಇದನ್ನೂ ಓದಿ: Couples Fight: ಗಂಡ-ಹೆಂಡಿರ ಜಗಳ ಪೊಲೀಸ್ ಸ್ಟೇಷನ್ ಗ್ಲಾಸ್ ಪೀಸ್ ಪೀಸ್ ಆಗುವ ತನಕ!

ಫೆಬ್ರವರಿ 2022 ರಲ್ಲಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಅಧಿಕಾರಿಯೊಬ್ಬರನ್ನು ಮನಿ ಲಾಂಡರಿಂಗ್ ಆರೋಪದ ಮೇಲೆ ಇಡಿ ಬಂಧಿಸಿತು. ಈವರೆಗೆ ಸಂಸ್ಥೆಯ ಅಧ್ಯಕ್ಷ ಸೇರಿ 4 ಮಂದಿಯನ್ನು ಬಂಧಿಸಲಾಗಿದೆ. ಬ್ಯಾಂಕ್‌​ನಿಂದ ವಂಚನೆಗೆ ಒಳಗಾದವರಲ್ಲಿ ಹಿರಿಯ ನಾಗರಿಕರೇ ಹೆಚ್ಚಿನವರಾಗಿದ್ದಾರೆ. ಹಿರಿಯ ನಾಗರಿಕರು ತಮ್ಮ ಉಳಿತಾಯ ಹಾಗೂ ನಿವೃತ್ತಿ ವೇತನದ ಹಣವನ್ನು ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆಗಾಗಿ ಗುರು ರಾಘವೇಂದ್ರ ಸಹಕಾರ ಬ್ಯಾಂಕ್​ನಲ್ಲಿ ಠೇವಣಿ ಇಟ್ಟಿದ್ದರು.

ಗುರು ರಾಘವೇಂದ್ರ ಬ್ಯಾಂಕ್‌ ಹಾಗೂ ಗುರು ಸಾರ್ವಭೌಮ ಬ್ಯಾಂಕ್‌ನಲ್ಲಿ 1,500 ಕೋಟಿ ರೂ. ಅಕ್ರಮ, ವಸಿಷ್ಠ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ 450 ರಿಂದ 500 ಕೋಟಿ ವಂಚನೆ ನಡೆದಿರುವ ಆರೋಪವಿದೆ.

Continue Reading

ಶಿಕ್ಷಣ

COMEDK UGET Result 2024: ಕಾಮೆಡ್‌ ಕೆ ಫಲಿತಾಂಶ ಪ್ರಕಟ; ಬೆಂಗಳೂರಿನ ಬಾಲಸತ್ಯ ಸರವಣನ್ ಫಸ್ಟ್‌ ರ‍್ಯಾಂಕ್‌

COMEDK UGET Result 2024 : ಯುಜಿ ಪ್ರವೇಶಕ್ಕಾಗಿ ಮೇ 12ರಂದು ನಡೆದಿದ್ದ ಕಾಮೆಡ್ ಕೆ ಫಲಿತಾಂಶ ಮೇ 24ರಂದು ಪ್ರಕಟಗೊಂಡಿದೆ. ಮೊದಲ ನಾಲ್ಕು ಸ್ಥಾನದಲ್ಲಿ ಕರ್ನಾಟಕದವರೇ ಇದ್ದು, ಮೊದಲ 10 ರ‍್ಯಾಂಕ್‌ ಪಡೆದವರಲ್ಲಿ 8 ಅಭ್ಯರ್ಥಿಗಳು ಕರ್ನಾಟಕದವರೇ ಆಗಿದ್ದಾರೆ. ಅಭ್ಯರ್ಥಿಗಳು ಪರೀಕ್ಷಾ ಫಲಿತಾಂಶವನ್ನು ಕಾಮೆಡ್‌ ಕೆ ಅಧಿಕೃತ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ.

VISTARANEWS.COM


on

By

COMEDK UGET Result 2024 Out
ಫಸ್ಟ್‌ ರ‍್ಯಾಂಕ್‌ ಪಡೆದ ಬಾಲಸತ್ಯ ಸರವಣನ್ ಹಾಗೂ ಎರಡನೇ ರ‍್ಯಾಂಕ್‌ ದೇವಾಂಶ್ ತ್ರಿಪಾಠಿ
Koo

ಬೆಂಗಳೂರು: ಕಾಮೆಡ್‌ ಕೆ ನಡೆಸಿದ್ದ ಯುಜಿಇಟಿ ಪರೀಕ್ಷೆ ಫಲಿತಾಂಶ ಮೇ 24ರ ಶುಕ್ರವಾರ ಮಧ್ಯಾಹ್ನ ಪ್ರಕಟಗೊಂಡಿದೆ. ಬೆಂಗಳೂರಿನ ಬಾಲಸತ್ಯ ಸರವಣನ್ ಪ್ರಥಮ ಸ್ಥಾನ ಗಳಿಸಿದ್ದಾರೆ. ಅಭ್ಯರ್ಥಿಗಳು ಪರೀಕ್ಷಾ ಫಲಿತಾಂಶವನ್ನು ಕಾಮೆಡ್‌ಕೆ www.comedk.org ಅಧಿಕೃತ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ. ರ‍್ಯಾಂಕ್‌ ಮತ್ತು ಸ್ಕೋರ್ ಕಾರ್ಡ್‌ಗಳನ್ನು 24ರ ಮಧ್ಯಾಹ್ನ 3 ಗಂಟೆಯಿಂದ ಅಭ್ಯರ್ಥಿಗಳಿಗೆ ಲಭ್ಯವಿರುತ್ತವೆ. ಮೊದಲ 10 ರ‍್ಯಾಂಕ್‌ ಪಡೆದವರಲ್ಲಿ 8 ಅಭ್ಯರ್ಥಿಗಳು ಕರ್ನಾಟಕದವರೇ ಆಗಿದ್ದಾರೆ.

ಕರ್ನಾಟಕದ 150 ಖಾಸಗಿ ಎಂಜಿನಿಯರಿಂಗ್ ಕಾಲೇಜು, ದೇಶದ ಕೆಲವು ಕಡೆ ಇರುವ 40 ಖಾಸಗಿ ವಿವಿಗಳಲ್ಲಿನ ಸುಮಾರು 22 ಸಾವಿರ ಎಂಜಿನಿಯರಿಂಗ್ ಸೀಟುಗಳ ಪ್ರವೇಶಾತಿಗಾಗಿ ಈ ಅರ್ಹತಾ ಪರೀಕ್ಷೆಯನ್ನು ನಡೆಸಲಾಗಿತ್ತು. ದೇಶದ 1,03,799 (ಶೇಕಡಾ 87.96) ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ವಿದ್ಯಾರ್ಥಿಗಳು ತಮ್ಮ ಶ್ರೇಯಾಂಕದ ಪಟ್ಟಿಯನ್ನು ಪರಿಶೀಲಿಸಿಕೊಂಡು ಸ್ಕೋರ್‌ ಕಾರ್ಡ್‌ ಅನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

2024ನೇ ಸಾಲಿನ ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕಾಗಿ ಮೇ 12 ರಂದು ಪರೀಕ್ಷೆ ನಡೆದಿತ್ತು. ಕಾಮೆಡ್‌ ಕೆ ಕೀ ಉತ್ತರಗಳನ್ನು ಮೇ 21ರಂದು ಬಿಡುಗಡೆ ಮಾಡಿತ್ತು. ದೇಶಾದ್ಯಾಂತ 191 ನಗರಗಳಲ್ಲಿರುವ 264 ಪರೀಕ್ಷಾ ಕೇಂದ್ರಗಳಲ್ಲಿ ಮೂರು ಸೆಷನ್‌ಗಳಲ್ಲಿ ಆನ್‌ಲೈನ್‌ನಲ್ಲಿ ಪರೀಕ್ಷೆ ನಡೆಸಲಾಗಿತ್ತು. ಎಂಜಿನಿಯರಿಂಗ್ ಯುಜಿ ಸೀಟುಗಳನ್ನು ಕೋರಿ 1,18,005 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಸುಮಾರು 1,03,799 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. 35,124 ಮಂದಿ ಕರ್ನಾಟಕದವರು ಮತ್ತು 68,675 ಕರ್ನಾಟಕೇತರ ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು.

COMEDK UGET Result 2024

COMEDK UGET ಫಲಿತಾಂಶ 2024 ಪರಿಶೀಲನೆ ಹೇಗೆ?

ಹಂತ 1: ಕಾಮೆಡ್‌ಕೆ ಪರೀಕ್ಷಾ ಪೋರ್ಟಲ್‌ಗೆ ಭೇಟಿ ನೀಡಿ.

ಹಂತ 2: COMEDK UGET 2024 ಫಲಿತಾಂಶದ ಲಾಗಿನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಹಂತ 3: ನಿಮ್ಮ ಲಾಗಿನ್ ರುಜುವಾತುಗಳನ್ನು ನಮೂದಿಸಿ – ಅಪ್ಲಿಕೇಶನ್ ಸಂಖ್ಯೆ ಅಥವಾ ಬಳಕೆದಾರ ID ಮತ್ತು ಪಾಸ್‌ವರ್ಡ್ ಮತ್ತು ನಂತರ ಸಲ್ಲಿಸು ಮೇಲೆ ಕ್ಲಿಕ್ ಮಾಡಿ.

ಹಂತ 4: COMEDK UGET ಫಲಿತಾಂಶ 2024 ಪರದೆಯ ಮೇಲೆ ಕಾಣಿಸುತ್ತದೆ.

ಹಂತ 5: ಕೀ ಉತ್ತರವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿ.

ಇಂದಿನಿಂದಲೇ ಕೌನ್ಸೆಲಿಂಗ್‌ ನೋಂದಣಿ ಆರಂಭ

ಕೌನ್ಸೆಲಿಂಗ್ ನೋಂದಣಿ ಮತ್ತು ಡಾಕ್ಯುಮೆಂಟ್ ಅಪ್ಲೋಡ್ ಮೇ 24 ರ ಸಂಜೆ 4 ರಿಂದ ಪ್ರಾರಂಭವಾಗುತ್ತದೆ. ಅಭ್ಯರ್ಥಿಗಳ ಶೇಕಡವಾರು ಅಂಕ ಹಾಗೂ ರ‍್ಯಾಂಕ್‌ ಆಧಾರದ ಮೇಲೆ ಶಾರ್ಟ್‌ ಲಿಸ್ಟ್‌ ಮಾಡಿ ಕೌನ್ಸಿಲಿಂಗ್‌ ನಡೆಸುವುದಾಗಿ ಕಾಮೆಡ್‌ಕೆ ತಿಳಿಸಿದೆ. ಕರ್ನಾಟಕದಲ್ಲಿರುವ 150 ಖಾಸಗಿ ಎಂಜಿನಿಯರಿಂಗ್ ಕಾಲೇಜು ಮತ್ತು ದೇಶದ ವಿವಿಧ ಕಡೆ ಇರುವ 40 ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಯಾವ ಕಡೆಯಲ್ಲಾದರೂ ಪ್ರವೇಶ ಪಡೆಯಬೇಕೆಂದರೆ ಇಲ್ಲಿ ನೋಂದಣಿಯನ್ನು ಮಾಡಿಕೊಂಡಿರಬೇಕು.

ಟಾಪ್‌ 10 ರ‍್ಯಾಂಕ್‌ ಪಡೆದವರು

1) ಬಾಲಸತ್ಯ ಸರವಣನ್- ಕರ್ನಾಟಕ
2) ದೇವಾಂಶ್ ತ್ರಿಪಾಠಿ – ಕರ್ನಾಟಕ
3) ಸನಾ ತಬಸ್ಸುಮ್ – ಕರ್ನಾಟಕ
4) ಪ್ರಕೇತ್ ಗೋಯೆಲ್- ಕರ್ನಾಟಕ
5)ಮಾನಸ್ ಸಿಂಗ್ ರಜಪೂತ- ಹಿಮಾಚಲ ಪ್ರದೇಶ
6)ಗಾನಿಪಿಸೆಟ್ಟಿ ನಿಸ್ಚಲ್- ಆಂಧ್ರಪ್ರದೇಶ
7)ನಿಕೇತ್ ಪ್ರಕಾಶ್ ಅಚಂತಾ- ಕರ್ನಾಟಕ
8) ನೇಹಾ ಪ್ರಭು -ಕರ್ನಾಟಕ
9)ಜಗದೀಶ್ ರೆಡ್ಡಿ ಮಾರ್ಲ -ಕರ್ನಾಟಕ
10) ಈಶ್ವರ್ ಚಂದ್ರ ರೆಡ್ಡಿ ಮುಲ್ಕಾ- ಕರ್ನಾಟಕ

COMEDK UGET Result 2024 Comed K on May 24  Published Result

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
road Accident
ತುಮಕೂರು53 seconds ago

Road Accident: ಬೈಕ್‌ಗಳ ಅಪಘಾತ; ಮಗನ ಕಣ್ಣೆದುರೇ ರಕ್ತಕಾರಿ ತಾಯಿ ಮೃತ್ಯು; ಮೂವರು ಗಂಭೀರ

lok sabha election 2024 supreme court
ಪ್ರಮುಖ ಸುದ್ದಿ4 mins ago

Lok Sabha Election 2024: ಬೂತ್‌ವಾರು ಮತದಾನ ವಿವರ ನೀಡಬೇಕಿಲ್ಲ: ಸುಪ್ರೀಂ ಕೋರ್ಟ್‌

meghana Goankar
ಸಿನಿಮಾ10 mins ago

Meghana Gaonkar : ಮೇಘನಾ ಗಾಂವ್ಕರ್​ಗೆ ಖುಷಿಗೆ ʼದಿ ಜಡ್ಜ್‌ಮೆಂಟ್‌ʼ ಕಾರಣ, ಯಾಕೆ ಗೊತ್ತಾ?

Hardik Pandya & Natasa Stankovic
ಕ್ರೀಡೆ22 mins ago

Hardik Pandya & Natasa Stankovic: ಹಾರ್ದಿಕ್​ ಪಾಂಡ್ಯಗೆ ಕೈ ಕೊಟ್ಟರೇ ಪತ್ನಿ ನತಾಶಾ!

Sandalwood Movie
ಪ್ರಮುಖ ಸುದ್ದಿ29 mins ago

Sandalwood Movie : ಸಿಂಹಗುಹೆಯಲ್ಲಿ ವಿಡಿಯೋ ಪೆನ್ ಡ್ರೈವ್ ಸದ್ದು!

Bank fraud Scam in Urban Co operative Bank of Karwar
ಕರ್ನಾಟಕ57 mins ago

Bank fraud: ಕಾರವಾರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಹಗರಣ! 54 ಸಾವಿರ ಕೋಟಿ ರೂ. ಗುಳುಂ; ಮ್ಯಾನೇಜರ್ ಸಾವಿಂದ ಹೊರಬಂತು ಅವ್ಯವಹಾರ!

RR vs SRH
ಕ್ರೀಡೆ1 hour ago

RR vs SRH: ಹೈದರಾಬಾದ್-ರಾಜಸ್ಥಾನ್ ನಡುವಣ ಇಂದಿನ ಕ್ವಾಲಿಫೈಯರ್​ ಪಂದ್ಯಕ್ಕೆ ಮಳೆ ಕಾಟ ಇದೆಯೇ?

COMEDK UGET Result 2024 Out
ಶಿಕ್ಷಣ1 hour ago

COMEDK UGET Result 2024: ಕಾಮೆಡ್‌ ಕೆ ಫಲಿತಾಂಶ ಪ್ರಕಟ; ಬೆಂಗಳೂರಿನ ಬಾಲಸತ್ಯ ಸರವಣನ್ ಫಸ್ಟ್‌ ರ‍್ಯಾಂಕ್‌

Rotary June Run
ಪ್ರಮುಖ ಸುದ್ದಿ2 hours ago

Rotary June Run: ರೋಟರಿಯಿಂದ ಬೆಂಗಳೂರಿನಲ್ಲಿ ಜೂನ್​ 9ರಂದು ಮ್ಯಾರಥಾನ್​; ವಿಸ್ತಾರ ನ್ಯೂಸ್‌ ಸಹಯೋಗ

Flight Turbulence
ವಿದೇಶ3 hours ago

Flight Turbulence: ನೀವಿದ್ದ ವಿಮಾನ ಪ್ರಕ್ಷುಬ್ಧತೆಗೊಳಗಾದರೆ ಏನು ಮಾಡುತ್ತೀರಿ? ಇಲ್ಲಿದೆ ಪೈಲಟ್‌ಗಳ ಸಲಹೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ1 day ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌