Arun Yogiraj: ಇನ್ನೊಂದು ʼಬಾಲಕ ರಾಮʼ ಮೂರ್ತಿಯೊಂದಿಗೆ ಕಾಣಿಸಿಕೊಂಡ ಶಿಲ್ಪಿ ಅರುಣ್‌ ಯೋಗಿರಾಜ್‌, ಏನಿದರ ವಿಶೇಷ? - Vistara News

ಪ್ರಮುಖ ಸುದ್ದಿ

Arun Yogiraj: ಇನ್ನೊಂದು ʼಬಾಲಕ ರಾಮʼ ಮೂರ್ತಿಯೊಂದಿಗೆ ಕಾಣಿಸಿಕೊಂಡ ಶಿಲ್ಪಿ ಅರುಣ್‌ ಯೋಗಿರಾಜ್‌, ಏನಿದರ ವಿಶೇಷ?

ಮೈಸೂರು ಮೂಲದ ಕಲಾವಿದ ಅರುಣ್‌ ಯೋಗಿರಾಜ್‌ (Arun Yogiraj) ತಾವು ಅಯೋಧ್ಯೆಯಲ್ಲಿ ಬಿಡುವಿನ ವೇಳೆಯಲ್ಲಿ ʻಚಿಕ್ಕ ರಾಮಲಲ್ಲಾ ಮೂರ್ತಿ’ಯನ್ನು ಕೆತ್ತಿರುವುದಾಗಿ ಹಂಚಿಕೊಂಡಿದ್ದಾರೆ.

VISTARANEWS.COM


on

balak ram ayodhya arun yogiraj
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಯೋಧ್ಯೆ ರಾಮಮಂದಿರಕ್ಕಾಗಿ (Ayodhya Ram Mandir) ರಾಮಲಲ್ಲಾ (Ram Lalla) ವಿಗ್ರಹವನ್ನು ರಚಿಸಿದ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಅವರು ʼಬಾಲಕ ರಾಮʼ ದೇವರ (Balak ram) ಚಿಕಣಿ ರೂಪವನ್ನು ಕೂಡ ರಚಿಸಿದ್ದಾರೆ. ಈ ವಿಷಯವನ್ನು ಅವರು ಎಕ್ಸ್‌ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮೈಸೂರು ಮೂಲದ ಕಲಾವಿದ ಅರುಣ್‌ ಯೋಗಿರಾಜ್‌ (Arun Yogiraj) ತಾವು ಅಯೋಧ್ಯೆಯಲ್ಲಿ ಬಿಡುವಿನ ವೇಳೆಯಲ್ಲಿ ʻಚಿಕ್ಕ ರಾಮಲಲ್ಲಾ ಮೂರ್ತಿ’ಯನ್ನು ಕೆತ್ತಿರುವುದಾಗಿ ಹಂಚಿಕೊಂಡಿದ್ದಾರೆ. “ರಾಮ ಲಲ್ಲಾನ ಮುಖ್ಯ ಮೂರ್ತಿಯನ್ನು ಆಯ್ಕೆ ಮಾಡಿದ ನಂತರ ನಾನು ಅಯೋಧ್ಯೆಯಲ್ಲಿ ನನ್ನ ಬಿಡುವಿನ ವೇಳೆಯಲ್ಲಿ ಮತ್ತೊಂದು ಸಣ್ಣ ರಾಮ್ ಲಲ್ಲಾ ಮೂರ್ತಿಯನ್ನು ಕಲ್ಲಿನಲ್ಲಿ ಕೆತ್ತಿದ್ದೇನೆ” ಎಂದು ಯೋಗಿರಾಜ್ ಎಕ್ಸ್‌ನಲ್ಲಿ ಪ್ರಕಟಿಸಿದ್ದು, ಕೈಯಲ್ಲಿ ಅವರು ಈ ವಿಗ್ರಹವನ್ನು ಹಿಡಿದಿರುವ ಪೋಸ್ಟ್‌ ವೈರಲ್ ಆಗಿದೆ.

ಈ ಸಣ್ಣ ವಿಗ್ರಹವು ಮೂಲ ವಿಗ್ರಹದ ಕಪ್ಪು ಕಲ್ಲಿಗಿಂತ ಭಿನ್ನವಾದ, ತುಸು ಬಿಳುಪಾದ ಕಲ್ಲಿನಲ್ಲಿ ಕೆತ್ತಲ್ಪಟ್ಟಿದೆ. ಆದರೆ ʼಬಾಲಕ ರಾಮ’ನ ಶಿಲ್ಪದ ಪಡಿಯಚ್ಚಿನಂತಿದೆ. ಮೂಲ ಮೂರ್ತಿಯ ಎಲ್ಲ ಲಕ್ಷಣಗಳು ಇದರಲ್ಲೂ ಇವೆ. ಆದರೆ ಇದನ್ನು ಒಂದು ಕೈಯಲ್ಲಿ ಹಿಡಿದುಕೊಳ್ಳಬಹುದು.

ಕಳೆದ ತಿಂಗಳು ಅಯೋಧ್ಯೆಯ ದೇವಾಲಯದ ಗರ್ಭಗುಡಿಯೊಳಗೆ ಎಂಟು ಅಡಿ ಎತ್ತರದ ಚಿನ್ನ ಲೇಪಿತ ಅಮೃತಶಿಲೆಯ ಸಿಂಹಾಸನದ ಮೇಲೆ ಇರಿಸಲಾಗಿರುವ ಬಾಲಕ ರಾಮ ವಿಗ್ರಹದ ಕಣ್ಣುಗಳನ್ನು ಕೆತ್ತಲು ಬಳಸಿದ ವಿಶೇಷ ಉಪಕರಣಗಳ ಚಿತ್ರವನ್ನು ಅರುಣ್‌ ಯೋಗಿರಾಜ್‌ ಹಂಚಿಕೊಂಡಿದ್ದರು. “ನಾನು ಅಯೋಧ್ಯೆಯ ರಾಮ ಲಲ್ಲಾನ ದಿವ್ಯ ಕಣ್ಣುಗಳನ್ನು (ನೇತ್ರೋನ್ಮೀಲನ) ಕೆತ್ತಿದ ಚಿನ್ನದ ಉಳಿ ಹಾಗೂ ಬೆಳ್ಳಿಯ ಸುತ್ತಿಗೆ” ಎಂದು ಅವುಗಳ ಚಿತ್ರವನ್ನು ಹಂಚಿಕೊಳ್ಳುವಾಗ ಯೋಗಿರಾಜ್ ಬರೆದಿದ್ದರು,

ಅರುಣ್‌ ಯೋಗಿರಾಜ್ ಮೈಸೂರಿನವರು ಹಾಗೂ ತಮ್ಮ ಕುಟುಂಬದಲ್ಲಿ ಐದನೇ ತಲೆಮಾರಿನ ಶಿಲ್ಪಿ. ಮೈಸೂರು ವಿಶ್ವವಿದ್ಯಾನಿಲಯದಿಂದ ಎಂಬಿಎ ಪದವಿ ಪಡೆದಿದ್ದು, ಖಾಸಗಿ ಕಂಪನಿಯೊಂದರ ಮಾನವ ಸಂಪನ್ಮೂಲ ವಿಭಾಗದಲ್ಲಿ ಆರು ತಿಂಗಳ ಕಾಲ ಕೆಲಸ ಮಾಡಿ ಬಳಿಕ ಶಿಲ್ಪರಚನೆಗೆ ಮರಳಿದ್ದರು.

ಯೋಗಿರಾಜ್ ಅವರು ಈ ಹಿಂದೆ ಕೇದಾರನಾಥದಲ್ಲಿ ಪ್ರತಿಷ್ಠಾಪಿಸಲಾಗಿರುವ 12 ಅಡಿ ಎತ್ತರದ ಆದಿ ಶಂಕರಾಚಾರ್ಯರ ವಿಗ್ರಹ, ದೆಹಲಿಯ ಇಂಡಿಯಾ ಗೇಟ್ ಬಳಿ ಸ್ಥಾಪಿಸಲಾದ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಕೆತ್ತಿದ್ದರು. ಮೈಸೂರು ಜಿಲ್ಲೆಯ ಚುಂಚನಕಟ್ಟೆಯಲ್ಲಿ 21 ಅಡಿ ಎತ್ತರದ ಹನುಮಾನ್ ಪ್ರತಿಮೆ, 15 ಅಡಿ ಎತ್ತರದ ಡಾ.ಬಿ. ಆರ್ ಅಂಬೇಡ್ಕರ್ ಪ್ರತಿಮೆ, ಮೈಸೂರಿನಲ್ಲಿ ಸ್ವಾಮಿ ರಾಮಕೃಷ್ಣ ಪರಮಹಂಸರ ಬಿಳಿ ಅಮೃತಶಿಲಾ ಪ್ರತಿಮೆ, ಆರು ಅಡಿ ಎತ್ತರದ ಏಕಶಿಲಾ ನಂದಿ, ಆರು ಅಡಿ ಎತ್ತರದ ಬನಶಂಕರಿ ದೇವಿ ಹಾಗೂ ಮೈಸೂರು ರಾಜ ಜಯಚಾಮರಾಜೇಂದ್ರ ಒಡೆಯರ್ ಅವರ 4.5 ಅಡಿ ಎತ್ತರದ ಬಿಳಿ ಅಮೃತ ಶಿಲಾ ಪ್ರತಿಮೆ ಅವರು ಕೆತ್ತಿದ ವಿಗ್ರಹಗಳಲ್ಲಿ ಕೆಲವು.

ಮೈಸೂರು ವಿಶ್ವವಿದ್ಯಾನಿಲಯದ ಭೂ ವಿಜ್ಞಾನ ವಿಭಾಗದ ಯುಜಿಸಿ- ಎಮೆರಿಟಸ್ ಪ್ರಾಧ್ಯಾಪಕರ ಪ್ರಕಾರ, ಈಗ ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯನ್ನು ಅಲಂಕರಿಸಿರುವ, ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹದ ಮೂಲ ಶಿಲೆ ಮುನ್ನೂರು ಕೋಟಿ ವರ್ಷಗಳ ಹಿಂದಿನದಾಗಿದೆ.

ಇದನ್ನೂ ಓದಿ: Arun Yogiraj : ರಾಮ್‌ ಲಲ್ಲಾನ ಎಂದೂ ನೋಡದ ಚಿತ್ರ ತೋರಿಸಿದ ಶಿಲ್ಪಿ ಅರುಣ್‌ ಯೋಗಿರಾಜ್‌; ಎಷ್ಟು ಮುದ್ದಾಗಿದೆ ನೋಡಿ…

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Drought Relief: ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

Drought Relief: ಕರ್ನಾಟಕದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಆದರೆ, ಕೇಂದ್ರ ಸರ್ಕಾರ ಸಕಾಲಕ್ಕೆ ಬಿಡುಗಡೆ ಮಾಡದ ಕಾರಣ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿತ್ತು. ಅದರಂತೆ, ಕೇಂದ್ರ ಸರ್ಕಾರವು ಈಗ ಬರ ಪರಿಹಾರ ಘೋಷಣೆ ಮಾಡಿದೆ.

VISTARANEWS.COM


on

Drought Relief
Koo

ಬೆಂಗಳೂರು: ಕರ್ನಾಟಕಕ್ಕೆ ಕೇಂದ್ರ ಸರ್ಕಾರವು (Centra Government) ಕೊನೆಗೂ ಬರ ಪರಿಹಾರ (Drought Relief) ಬಿಡುಗಡೆ ಮಾಡಿದೆ. ರಾಜ್ಯಕ್ಕೆ ಒಟ್ಟು 3,454 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಇದರೊಂದಿಗೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದ ಕರ್ನಾಟಕ ಸರ್ಕಾರಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ. 18,171 ಕೋಟಿ ರೂ. ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಈಗ ಕೇಂದ್ರ ಸರ್ಕಾರವು ಪರಿಶೀಲನೆ ನಡೆಸಿ 3,454 ಕೋಟಿ ರೂ. ಬಿಡುಗಡೆ ಮಾಡಿದೆ.

ಕರ್ನಾಟಕದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಆದರೆ, ಕೇಂದ್ರ ಸರ್ಕಾರ ಸಕಾಲಕ್ಕೆ ಬಿಡುಗಡೆ ಮಾಡದ ಕಾರಣ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿತ್ತು. ಅದರಂತೆ, ಕೇಂದ್ರ ಸರ್ಕಾರವು ಈಗ ಬರ ಪರಿಹಾರ ಘೋಷಣೆ ಮಾಡಿದೆ. ಹಾಗೆಯೇ, ನೆರೆ ರಾಜ್ಯವಾದ ತಮಿಳುನಾಡಿಗೆ 275 ಕೋಟಿ ರೂ. ನೆರೆ ಪರಿಹಾರ ಬಿಡುಗಡೆ ಮಾಡಿದೆ.

ಬರ ಪರಿಹಾರ ನೀಡಲು ಒಂದು ವಾರ ಬೇಕು ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿತ್ತು. “ಒಂದು ವಾರದಲ್ಲಿ ಬರ ಪರಿಹಾರದ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಹಾಗಾಗಿ, ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯವು ಒಂದು ವಾರ ಸಮಯಾವಕಾಶ ನೀಡಬೇಕು” ಎಂದು ಅಟಾರ್ನಿ ಜನರಲ್‌ ಆರ್‌.ವೆಂಕಟರಮಣಿ ಅವರು ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಕೇಂದ್ರ ಸರ್ಕಾರದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು, ಏಪ್ರಿಲ್‌ 29ಕ್ಕೆ ವಿಚಾರಣೆ ಮುಂದೂಡಿತ್ತು. ಈಗ ವಿಚಾರಣೆಗೂ ಮೊದಲೇ ಬರ ಪರಿಹಾರ ಬಿಡುಗಡೆ ಮಾಡಿದೆ.

ಕರ್ನಾಟಕಕ್ಕೆ ಬರ ಪರಿಹಾರ ವಿತರಣೆ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ತೀವ್ರ ಜಟಾಪಟಿ ಉಂಟಾಗಿತ್ತು. ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಅನ್ಯಾಯ ಮಾಡಿತ್ತು. ತೆರಿಗೆ ಪಾಲು ನೀಡದ ಕೇಂದ್ರ ಸರ್ಕಾರವು ಬರ ಪರಿಹಾರವನ್ನೂ ನೀಡದೆ ಅನ್ಯಾಯ ಮಾಡುತ್ತಿದೆ. ಇನ್ನಾದರೂ ಬರ ಪರಿಹಾರ ನೀಡಬೇಕು ಎಂಬುದಾಗಿ ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಆಗ್ರಹಿಸಿತ್ತು. ಕೊನೆಗೆ ನಮಗೆ ಬರ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕು ಎಂಬುದಾಗಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು.

ಕೆಲ ದಿನಗಳ ಹಿಂದಷ್ಟೇ ಕರ್ನಾಟಕ ಸರ್ಕಾರದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ಕೇಂದ್ರ ಸರ್ಕಾರವು ಒಕ್ಕೂಟ ವ್ಯವಸ್ಥೆಯ ತತ್ವಗಳನ್ನು ಪಾಲಿಸಬೇಕು ಎಂದಿತ್ತು. “ಕೇಂದ್ರ ಸರ್ಕಾರವು ಒಕ್ಕೂಟ ವ್ಯವಸ್ಥೆಯ ತತ್ವಗಳನ್ನು ಪಾಲಿಸಬೇಕು. ಎರಡು ವಾರಗಳಲ್ಲಿ ಬರ ಪರಿಹಾರದ ಕುರಿತು ಉತ್ತರ ನೀಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಧ್ಯೆ ಎಂದಿಗೂ ಸ್ಪರ್ಧೆ ಇರಬಾರದು. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯ ಸರ್ಕಾರಗಳ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಬೇಕು. ಇತ್ತೀಚೆಗೆ ಹಲವು ರಾಜ್ಯ ಸರ್ಕಾರಗಳು ಪರಿಹಾರಕ್ಕಾಗಿ ನ್ಯಾಯಾಲಯದ ಮೊರೆ ಹೋಗುತ್ತಿವೆ. ಇಂತಹ ಬೆಳವಣಿಗೆಗಳು ಸರಿಯಲ್ಲ” ಎಂದು ತಿಳಿಸಿತ್ತು.

ಇದನ್ನೂ ಓದಿ: Drought Relief: ಬರ ಪರಿಹಾರ ನೀಡಲು ಕೇಂದ್ರ ಒಪ್ಪಿಗೆ; ನಮ್ಮ ಹೋರಾಟಕ್ಕೆ ಮೊದಲ ಹಂತದ ಜಯ ಎಂದ ಸಿಎಂ

Continue Reading

ಪ್ರಮುಖ ಸುದ್ದಿ

Public Exam: ಇನ್ನು ಮುಂದೆ ವರ್ಷಕ್ಕೆರಡು ಬಾರಿ ಬೋರ್ಡ್‌ ಪರೀಕ್ಷೆ ? ಪರಿಶೀಲನೆಗೆ ಸಿಬಿಎಸ್‌ಇಗೆ ಸೂಚನೆ

Public Exam: ಎಂಜಿನಿಯರಿಂಗ್ ಪ್ರವೇಶಕ್ಕೆ ನಡೆಯುವ ಜೆಇಇ ಪರೀಕ್ಷೆಯಂತೆ 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳು ವರ್ಷಕ್ಕೆ ಎರಡು ಬೋರ್ಡ್‌ ಪರೀಕ್ಷೆಗಳಿಗೆ ಹಾಜರಾಗುವ ಆಯ್ಕೆಯನ್ನು ಪಡೆಯುತ್ತಾರೆ. ಅವುಗಳಲ್ಲಿನ ಉತ್ತಮ ಅಂಕಗಳನ್ನು ಆಯ್ಕೆ ಮಾಡಲಾಗುತ್ತದೆ.

VISTARANEWS.COM


on

PU Board exam girl writing exam
Koo

ಹೊಸದಿಲ್ಲಿ: 2025–26ನೇ ಶೈಕ್ಷಣಿಕ ಸಾಲಿನಿಂದ ವರ್ಷಕ್ಕೆ ಎರಡು ಬಾರಿ ಪಬ್ಲಿಕ್‌ ಪರೀಕ್ಷೆಗಳನ್ನು (Public Exam, Board Exam) ನಡೆಸುವ ಸಾಧ್ಯತೆಗಳ ಕುರಿತು ಪರಿಶೀಲಿಸುವಂತೆ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಗೆ (ಸಿಬಿಎಸ್ಇ – CBSE) ಶಿಕ್ಷಣ ಸಚಿವಾಲಯ (Education ministry) ಸೂಚಿಸಿದೆ.

ಈ ಸಂಬಂಧ ಸಚಿವಾಲಯ ಮತ್ತು ಸಿಬಿಎಸ್ಇ ಮುಂದಿನ ತಿಂಗಳು ಶಾಲಾ ಮುಖ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲಿವೆ. ಈಗಾಗಲೇ ಸಿಬಿಎಸ್ಇ ಸೆಮಿಸ್ಟರ್ ಪದ್ಧತಿಯನ್ನು ಪರಿಚಯಿಸುವ ಯೋಜನೆಯನ್ನು ತಳ್ಳಿಹಾಕಿದೆ. ಪದವಿ ಪೂರ್ವ ತರಗತಿಗಳ ಪ್ರವೇಶದ ವೇಳಾಪಟ್ಟಿಯ ಮೇಲೆ ಪರಿಣಾಮ ಬೀರದಂತೆ ಮತ್ತೊಂದು ಬೋರ್ಡ್‌ ಪರೀಕ್ಷೆ ನಡೆಸುವುದಕ್ಕೆ ಪೂರಕವಾಗಿ ಶೈಕ್ಷಣಿಕ ಕ್ಯಾಲೆಂಡರ್ ರಚಿಸುವತ್ತ ಸಿಬಿಎಸ್ಇ ಕಾರ್ಯೋನ್ಮುಖವಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“2025–26ನೇ ಸಾಲಿನಿಂದ ವರ್ಷದ ಕೊನೆಯಲ್ಲಿ ಎರಡು ಆವೃತ್ತಿಗಳಲ್ಲಿ ಬೋರ್ಡ್‌ ಪರೀಕ್ಷೆ ನಡೆಸಲು ಯೋಜಿಸಲಾಗುತ್ತಿದೆ. ಇದರ ಕಾರ್ಯವಿಧಾನಗಳು ಹೇಗಿರಬೇಕು ಎಂಬುದು ಇನ್ನೂ ಅಂತಿಮವಾಗಿಲ್ಲ” ಎಂದು ಅವರು ಹೇಳಿದ್ದಾರೆ. ವರ್ಷಕ್ಕೆ ಎರಡು ಬೋರ್ಡ್‌ ಪರೀಕ್ಷೆಯನ್ನು 2024–25ನೇ ಸಾಲಿನಿಂದಲೇ ಪರಿಚಯಿಸುವ ಆರಂಭಿಕ ಯೋಜನೆಯನ್ನು ಶಿಕ್ಷಣ ಸಚಿವಾಲಯ ಹೊಂದಿತ್ತು. ಆದರೆ ಅದನ್ನು ಒಂದು ವರ್ಷ ಮುಂದೂಡಲಾಗಿದೆ ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷದ ಆಗಸ್ಟ್‌ನಲ್ಲಿ ಬಿಡುಗಡೆಯಾದ ಹೊಸ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು, ವಿದ್ಯಾರ್ಥಿಗಳಿಗೆ ವರ್ಷಕ್ಕೆ ಎರಡು ಬಾರಿ ಬೋರ್ಡ್‌ ಪರೀಕ್ಷೆ ಬರೆಯುವ ಆಯ್ಕೆ ಒದಗಿಸಬೇಕು ಎಂದು ಪ್ರಸ್ತಾಪಿಸಿದೆ. ಈ ನಿಟ್ಟಿನಲ್ಲಿ ಸಿಬಿಎಸ್ಇ ಕಾರ್ಯ ನಿರ್ವಹಿಸುತ್ತಿದೆ. ವಿದ್ಯಾರ್ಥಿಗಳನ್ನು ಪರೀಕ್ಷಾ ಒತ್ತಡದಿಂದ ಮುಕ್ತಗೊಳಿಸಲು ಮತ್ತು ವಿದ್ಯಾರ್ಥಿಗಳಿಗೆ ಗರಿಷ್ಠ ಪ್ರಯೋಜನ ದೊರೆಯುವಂತೆ ಮಾಡಲು ಅದು ಚಿಂತಿಸುತ್ತಿದೆ.

ಎರಡು ಪರೀಕ್ಷೆಗಳನ್ನು ನಡೆಸುವಲ್ಲಿ ಕೆಲವು ಲಾಜಿಸ್ಟಿಕ್ಸ್‌ ಸವಾಲುಗಳು ಎದುರಾಗಲಿವೆ. ಇದನ್ನು ಹೇಗೆ ಎದುರಿಸುವುದು ಹಾಗೂ ದೋಷರಹಿತವಾಗಿ ಪರೀಕ್ಷೆಗಳನ್ನು ನಡೆಸುವುದು ಹೇಗೆ ಎಂಬುದರ ಕುರಿತು ಮಂಡಳಿ ಪರಿಶೀಲನೆಯಲ್ಲಿ ತೊಡಗಿದೆ ಎಂದು ಅವರು ಹೇಳಿದ್ದಾರೆ.

ಕಳೆದ ಅಕ್ಟೋಬರ್‌ನಲ್ಲಿ ಈ ಕುರಿತು ಮಾಹಿತಿ ನೀಡಿದ್ದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, “ವರ್ಷಕ್ಕೆ ಎರಡು ಬಾರಿ ಬೋರ್ಡ್‌ ಪರೀಕ್ಷೆಗಳನ್ನು ನಡೆಸಲಾಗುವುದು. ಆದರೆ ಇದು ವಿದ್ಯಾರ್ಥಿಗಳಿಗೆ ಕಡ್ಡಾಯವಲ್ಲ. ಸಂಪೂರ್ಣ ಐಚ್ಛಿಕವಾದದ್ದು. ಎಂಜಿನಿಯರಿಂಗ್ ಪ್ರವೇಶಕ್ಕೆ ನಡೆಯುವ ಜೆಇಇ ಪರೀಕ್ಷೆಯಂತೆ 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳು ವರ್ಷಕ್ಕೆ ಎರಡು ಬೋರ್ಡ್‌ ಪರೀಕ್ಷೆಗಳಿಗೆ ಹಾಜರಾಗುವ ಆಯ್ಕೆಯನ್ನು ಪಡೆಯುತ್ತಾರೆ. ಅವುಗಳಲ್ಲಿನ ಉತ್ತಮ ಅಂಕಗಳನ್ನು ಆಯ್ಕೆ ಮಾಡಲಾಗುತ್ತದೆ” ಎಂದು ತಿಳಿಸಿದ್ದರು.

ಇದನ್ನೂ ಓದಿ: Board Exam Result: 93.5% ಫಲಿತಾಂಶ ನೋಡಿ ಮೂರ್ಛೆ ಹೋದ ವಿದ್ಯಾರ್ಥಿ! ಐಸಿಯುಗೆ ದಾಖಲು

Continue Reading

ಪ್ರಮುಖ ಸುದ್ದಿ

NOTA: ಅತಿ ಹೆಚ್ಚು `ನೋಟಾ’ ಬಿದ್ದರೆ ಹೊಸ ಚುನಾವಣೆ ಮಾಡಬಹುದೇ? ಸುಪ್ರೀಂ ಪ್ರಶ್ನೆ

NOTA: ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಧನಂಜಯ ವೈ ಚಂದ್ರಚೂಡ್ ನೇತೃತ್ವದ ಪೀಠವು, ದೇಶದಾದ್ಯಂತ ಮತದಾರರ ಜಾಗೃತಿ ಮೂಡಿಸಲು ಚುನಾವಣೆಗಳಲ್ಲಿ ನೋಟಾವನ್ನು “ಕಾಲ್ಪನಿಕ ಚುನಾವಣಾ ಅಭ್ಯರ್ಥಿ” ಎಂದು ಪರಿಗಣಿಸಬೇಕೆ ಎಂಬುದನ್ನು ಪರಿಶೀಲಿಸಲು ಸಹ ಒಪ್ಪಿಗೆ ನೀಡಿದೆ.

VISTARANEWS.COM


on

nota vote
Koo

ಹೊಸದಿಲ್ಲಿ: ʼನೋಟಾʼ (NOTA) ಆಯ್ಕೆಗೆ ಹೆಚ್ಚಿನ ಸಂಖ್ಯೆಯ ಮತಗಳು ಬಿದ್ದ ಕ್ಷೇತ್ರದಲ್ಲಿ ಹೊಸ ಚುನಾವಣೆ ನಡೆಸಬಹುದೇ ಎಂಬ ಪ್ರಶ್ನೆಯನ್ನು ಚುನಾವಣಾ ಆಯೋಗದ (Election commission of India) ಮುಂದೆ ಸುಪ್ರೀಂ ಕೋರ್ಟ್‌ (Supreme court) ಇಟ್ಟು ಉತ್ತರ ಬಯಸಿದೆ. ಮತದಾರರಿಗೆ (Voters) “ಮೇಲಿನ ಯಾವುದೂ ಅಲ್ಲ” (ನೋಟಾ) ಆಯ್ಕೆಯನ್ನು ನೀಡಿದ ಹನ್ನೊಂದು ವರ್ಷಗಳ ನಂತರ ಸುಪ್ರೀಂ ಕೋರ್ಟ್ ಶುಕ್ರವಾರ ಭಾರತೀಯ ಚುನಾವಣಾ ಆಯೋಗದಿಂದ (ECI) ಪ್ರತಿಕ್ರಿಯೆ ಕೇಳಿದೆ.

ನೋಟಾ ಬಟನ್ ಇವಿಎಂಗಳಲ್ಲಿ ಅಭ್ಯರ್ಥಿಗಳ ಪಟ್ಟಿಯ ಅತ್ಯಂತ ಕೆಳಭಾಗದಲ್ಲಿರುತ್ತದೆ. ಪ್ರಸ್ತುತ, ಒಂದು ಕ್ಷೇತ್ರದಲ್ಲಿ ನೋಟಾ ಹೆಚ್ಚು ಮತಗಳನ್ನು ಗಳಿಸಿದರೆ ಎರಡನೇ ಅತಿ ಹೆಚ್ಚು ಮತಗಳನ್ನು ಪಡೆದ ಅಭ್ಯರ್ಥಿಯನ್ನು ವಿಜೇತ ಎಂದು ಘೋಷಿಸಲಾಗುತ್ತದೆ.

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಧನಂಜಯ ವೈ ಚಂದ್ರಚೂಡ್ ನೇತೃತ್ವದ ಪೀಠವು, ದೇಶದಾದ್ಯಂತ ಮತದಾರರ ಜಾಗೃತಿ ಮೂಡಿಸಲು ಚುನಾವಣೆಗಳಲ್ಲಿ ನೋಟಾವನ್ನು “ಕಾಲ್ಪನಿಕ ಚುನಾವಣಾ ಅಭ್ಯರ್ಥಿ” ಎಂದು ಪರಿಗಣಿಸಬೇಕೆ ಎಂಬುದನ್ನು ಪರಿಶೀಲಿಸಲು ಸಹ ಒಪ್ಪಿಗೆ ನೀಡಿದೆ.

ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ, ನೋಟಾಗೆ ಗರಿಷ್ಠ ಮತಗಳನ್ನು ಪಡೆದ, ಮತದಾರರಿಂದ ತಿರಸ್ಕೃತಗೊಂಡ ಅಭ್ಯರ್ಥಿಗಳನ್ನು ಹೊಸ ಚುನಾವಣೆಯಲ್ಲಿ ಮತ್ತೆ ಕಣಕ್ಕಿಳಿಸಬಾರದು ಎಂಬ ಅರ್ಜಿದಾರರ ಮನವಿಗೆ ತನ್ನ ಅಸಮ್ಮತಿಯನ್ನು ವ್ಯಕ್ತಪಡಿಸಿತು.

“ನಾವು ಅದನ್ನು ಹೇಗೆ ಮಾಡಲು ಸಾಧ್ಯ? ಅದು ಶಾಸಕಾಂಗದ ಆಯ್ಕೆ. ನಾವು ಅಂತಹ ಆದೇಶ ನೀಡಲು ಸಾಧ್ಯವಿಲ್ಲ ಎಂದು ನಾವು ಭಾವಿಸುತ್ತೇವೆ” ಎಂದು ಈ ವಿಷಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿದಾರ ಶಿವ ಖೇರಾ ಪರ ಹಾಜರಿದ್ದ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಅವರಿಗೆ ನ್ಯಾಯಪೀಠ ಹೇಳಿದೆ. ಖೇರಾ ದೆಹಲಿ ಮೂಲದ ಸ್ಫೂರ್ತಿ ಭಾಷಣಕಾರ ಮತ್ತು ಲೇಖಕ.

2013ರಲ್ಲಿ ನೋಟಾವನ್ನು ಪರಿಚಯಿಸಿದ್ದು, ಪ್ರಜಾಪ್ರಭುತ್ವದಲ್ಲಿ ಮತದಾರರ ಆಯ್ಕೆಯನ್ನು ಉತ್ತಮಗೊಳಿಸುವ ಸುಪ್ರೀಂ ಕೋರ್ಟ್‌ನ ಉದ್ದೇಶವನ್ನು ಮುಂದುವರಿಸುವ ಗುರಿಯನ್ನು ಅರ್ಜಿಯು ಹೊಂದಿದೆ ಎಂದು ಶಂಕರನಾರಾಯಣನ್ ಒತ್ತಿ ಹೇಳಿದರು. “ಸೂರತ್‌ನಲ್ಲಿ ಮತ ಚಲಾಯಿಸದೇ ಒಬ್ಬ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಲಾಯಿತು. ಏಕೆಂದರೆ ಕಣದಲ್ಲಿ ಬೇರೆ ಅಭ್ಯರ್ಥಿ ಇರಲಿಲ್ಲ. ಮತದಾರರಿಗೆ ಆಯ್ಕೆ ಇರಲಿಲ್ಲ,” ಎಂದು ಅವರು ವಾದಿಸಿದರು.

ಮೇ 7ರಂದು ಮೂರನೆ ಹಂತದ ಮತದಾನ ನಡೆಯಲಿರುವ ಹದಿನೈದು ದಿನಗಳ ಮೊದಲು ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಅಭ್ಯರ್ಥಿ ಮುಖೇಶ್ ದಲಾಲ್ ಸೋಮವಾರ ಅವಿರೋಧವಾಗಿ ಆಯ್ಕೆಯಾದರು. ಖೇರಾ ಅವರ ಅರ್ಜಿಯನ್ನು ಪರಿಶೀಲಿಸಲು ಸಮ್ಮತಿಸಿದ ಪೀಠ, ಇಸಿಐಗೆ ನೋಟಿಸ್ ಜಾರಿ ಮಾಡಿದೆ.

ನೋಟಾ ಮತ ತಟಸ್ಥವಾದುದು. ಯಾವುದೇ ಸಂಖ್ಯಾ ಮೌಲ್ಯವನ್ನು ಹೊಂದಿಲ್ಲ. ನೋಟಾ ಆಯ್ಕೆಯ ಶೂನ್ಯ ಸಂಖ್ಯಾತ್ಮಕ ಮೌಲ್ಯದ ಹೊರತಾಗಿಯೂ, 2013ರ ಸುಪ್ರೀಂ ಕೋರ್ಟ್ ತೀರ್ಪು “ಇದು ರಾಜಕೀಯ ಪಕ್ಷಗಳನ್ನು ಸಮರ್ಥ ಅಭ್ಯರ್ಥಿಯನ್ನು ನಾಮನಿರ್ದೇಶನ ಮಾಡಲು ಒತ್ತಾಯಿಸುತ್ತದೆ” ಎಂದು ಹೇಳಿದೆ. 2013ರ ತೀರ್ಪು ಹೇಳುವಂತೆ, “ನೋಟಾ ಮತದಾನವು ಚುನಾವಣೆಯಲ್ಲಿ ವ್ಯವಸ್ಥಿತ ಬದಲಾವಣೆಗೆ ಕಾರಣವಾಗುತ್ತದೆ ಮತ್ತು ರಾಜಕೀಯ ಪಕ್ಷಗಳು ಶುದ್ಧ ಅಭ್ಯರ್ಥಿಗಳನ್ನು ಹಾಕಲು ಒತ್ತಾಯಿಸುತ್ತದೆ. ಮತದಾನದ ಹಕ್ಕು ಶಾಸನಬದ್ಧ ಹಕ್ಕಾಗಿದ್ದರೆ, ಅಭ್ಯರ್ಥಿಯನ್ನು ತಿರಸ್ಕರಿಸುವ ಹಕ್ಕು ಸಂವಿಧಾನದ ಅಡಿಯಲ್ಲಿ ಭಾಷಣ ಮತ್ತು ಅಭಿವ್ಯಕ್ತಿಯ ಮೂಲಭೂತ ಹಕ್ಕು,” ಎಂದಿದೆ.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ನೋಟಾ 6,50,000ಕ್ಕಿಂತ ಹೆಚ್ಚು ಮತಗಳನ್ನು ಪಡೆದಿದೆ. ಇದು ಒಟ್ಟು ಮತದ 1.06%. 17ನೇ ಲೋಕಸಭೆಗೆ ಸ್ಪರ್ಧಿಸಿದ 36 ಪಕ್ಷಗಳ ಪೈಕಿ ಹದಿನೈದು ರಾಜಕೀಯ ಪಕ್ಷಗಳು ನೋಟಾಕ್ಕಿಂತ ಕಡಿಮೆ ಮತಗಳನ್ನು ಪಡೆದಿವೆ. ಈ ಪಕ್ಷಗಳು ಬೆರಳೆಣಿಕೆಯಷ್ಟು ಸ್ಥಾನಗಳಲ್ಲಿ ಮಾತ್ರ ಸ್ಪರ್ಧಿಸಿವೆ.

2021ರಲ್ಲಿ, ಸುಪ್ರೀಂ ಕೋರ್ಟ್ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರ ಇದೇ ರೀತಿಯ ಅರ್ಜಿಯನ್ನು ಒಪ್ಪಿಕೊಂಡಿತ್ತು. “ಅಭ್ಯರ್ಥಿಗಳನ್ನು ತಿರಸ್ಕರಿಸುವ ಹಕ್ಕನ್ನು ಸಬಲೀಕರಣಗೊಳಿಸಲು” ಮತ್ತು “ರಾಜಕೀಯ ಪಕ್ಷಗಳು ಹೆಚ್ಚು ಉತ್ತಮ ಆಯ್ಕೆಯನ್ನು ನೀಡಲು ಪ್ರೋತ್ಸಾಹಿಸಲು” ಕೋರಿತು. ಉಪಾಧ್ಯಾಯ ಅವರ ಅರ್ಜಿಯು ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿದೆ.

ಇದನ್ನೂ ಓದಿ: Election Commission: ಥೀಮ್‌ ಸಾಂಗ್‌ನಲ್ಲಿ ‘ಜೈ ಭವಾನಿ’ ಪದ ಬಳಕೆ; ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣಕ್ಕೆ ನೋಟಿಸ್‌

Continue Reading

Lok Sabha Election 2024

Lok Sabha Election 2024: 2ನೇ ಹಂತದ ಮತದಾನ, ಎಲ್ಲಿ ಹೆಚ್ಚು, ಎಲ್ಲಿ ಕಡಿಮೆ?

Lok Sabha Election 2024: ಏಪ್ರಿಲ್​​ 26ರಂದು ಬೆಳಗ್ಗೆ 7 ಗಂಟೆಗೆ ಪ್ರಾರಂಭವಾದ ಲೋಕ ಸಭಾ ಚುನಾವಣೆಯ (Lok Sabha Election) ಎರಡನೇ ಹಂತದ ಮತದಾನವು ಶಾಂತಿಯುತವಾಗಿ ನಡೆಯಿತು. ಒಟ್ಟು 88 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು ಸಂಜೆ 7 ಗಂಟೆಯ ವೇಳೆಗೆ ಅಂದಾಜು 60.96% ಮತದಾನವನ್ನು ದಾಖಲಿಸಿದೆ ಎಂದು ಚುನಾವಣಾ ಆಯೋಗ ಹೇಳಿದೆ.

VISTARANEWS.COM


on

lok sabha election 2024 voting
Koo

ಹೊಸದಿಲ್ಲಿ: ನಿನ್ನೆ (ಏಪ್ರಿಲ್‌ 26) ಲೋಕಸಭೆ ಚುನಾವಣೆ (Lok Sabha Election 2024) ಎರಡನೇ ಹಂತದ ಮತದಾನ (voting) ನಡೆಯಿತು. ಇದರಲ್ಲಿ ಯಾವ ರಾಜ್ಯಗಳಲ್ಲಿ ಅತಿ ಹೆಚ್ಚು ಮತ್ತು ಯಾವ ರಾಜ್ಯಗಳಲ್ಲಿ ಅತಿ ಕಡಿಮೆ ಮತದಾನವಾಗಿದೆ ಎಂಬ ಮಾಹಿತಿ ಇಲ್ಲಿದೆ. ತ್ರಿಪುರಾದಲ್ಲಿ ಅತಿ ಹೆಚ್ಚು ಅಂದಾಜು 77.94% ಮತದಾನವಾಗಿದೆ.

ನಂತರ ಮಣಿಪುರ (76.46%), ಛತ್ತೀಸ್‌ಗಢ (72.51%), ಪಶ್ಚಿಮ ಬಂಗಾಳ (71.84%), ಅಸ್ಸಾಂ (70.68%), ಕರ್ನಾಟಕದಲ್ಲಿ 69.23%, J&K (67.22%), ಮತ್ತು ಕೇರಳ (64.99%) ಮತದಾನ ದಾಖಲಿಸಿವೆ. ಉತ್ತರ ಪ್ರದೇಶದಲ್ಲಿ ಅತಿ ಕಡಿಮೆ ಅಂದಾಜು ಮತದಾನವಾಗಿದೆ (53.02%). ರಾಜಸ್ಥಾನದಲ್ಲಿ 59.69%, ಮಧ್ಯಪ್ರದೇಶದಲ್ಲಿ 55.19%, ಮಹಾರಾಷ್ಟ್ರ 53.71% ಮತ್ತು ಬಿಹಾರ 53.60% ಮತದಾನವಾಗಿದೆ.

ಏಪ್ರಿಲ್​​ 26ರಂದು ಬೆಳಗ್ಗೆ 7 ಗಂಟೆಗೆ ಪ್ರಾರಂಭವಾದ ಲೋಕ ಸಭಾ ಚುನಾವಣೆಯ (Lok Sabha Election) ಎರಡನೇ ಹಂತದ ಮತದಾನವು ಶಾಂತಿಯುತವಾಗಿ ನಡೆಯಿತು. ಒಟ್ಟು 88 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು ಸಂಜೆ 7 ಗಂಟೆಯ ವೇಳೆಗೆ ಅಂದಾಜು 60.96% ಮತದಾನವನ್ನು ದಾಖಲಿಸಿದೆ ಎಂದು ಚುನಾವಣಾ ಆಯೋಗ ಹೇಳಿದೆ. 13 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ ಮತದಾರರು ಬಿಸಿ ಹವಾಮಾನ ಪರಿಸ್ಥಿತಿಗಳನ್ನು ಲೆಕ್ಕಿಸದೆ ತಮ್ಮ ಮತಗಟ್ಟೆಯಲ್ಲಿ ಉತ್ಸಾಹದಿಂದ ಮತ ಚಲಾಯಿಸಿದರು. ನವವಿವಾಹಿತರಿಂದ ಹಿಡಿದು ಹಿರಿಯ ನಾಗರಿಕರವರೆಗೆ, ಬುಡಕಟ್ಟು ಜನಾಂಗದವರಿಂದ ಐಟಿ ವೃತ್ತಿಪರರು, ಅಂಗವಿಕಲರು, ಮಹಿಳೆಯರು ಮತ್ತು ಯುವಕರು ಎಲ್ಲರೂ ತಮ್ಮ ಮತ ಚಲಾಯಿಸಿದರು. 2024ರ ಲೋಕಸಭಾ ಚುನಾವಣೆಗೆ 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ಪೂರ್ಣಗೊಂಡಿದೆ.

ತ್ರಿಪುರಾದ ಏಕೈಕ ಕ್ಷೇತ್ರದಲ್ಲಿ ಶೇ.77.93, ಛತ್ತೀಸ್ ಗಢದ ಮೂರು ಕ್ಷೇತ್ರಗಳಲ್ಲಿ ಶೇ.72.13 ಹಾಗೂ ಪಶ್ಚಿಮ ಬಂಗಾಳದ ಮೂರು ಕ್ಷೇತ್ರಗಳಲ್ಲಿ ಶೇ.71.84ರಷ್ಟು ಮತದಾನವಾಗಿದೆ. ಮಣಿಪುರದ 13 ಮತಗಟ್ಟೆಗಳಲ್ಲಿ ಶೇ.76.06ರಷ್ಟು ಮತದಾನವಾಗಿದ್ದರೆ, ಅಸ್ಸಾಂನ ಮತಗಟ್ಟೆಗಳಲ್ಲಿ ಸಂಜೆ 5 ಗಂಟೆಯವರೆಗೆ ಶೇ.70.66ರಷ್ಟು ಮತದಾನವಾಗಿದೆ. ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಶೇ.53.51ರಷ್ಟು ಮತದಾನವಾಗಿದೆ.

ಬಿಹಾರದಲ್ಲಿ ಮತದಾನದ ಶೇಕಡಾವಾರು ಮೊದಲ ಹಂತಕ್ಕಿಂತ ಹೆಚ್ಚಾಗಿದ್ದರೆ, ಇದು ಉತ್ತರ ಪ್ರದೇಶಕ್ಕಿಂತ 53.03% ಹೆಚ್ಚಾಗಿದೆ. ಉತ್ತರ ಪ್ರದೇಶದ ಎಂಟು ಲೋಕಸಭಾ ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ 52.74% ಮತದಾನ ದಾಖಲಾಗಿದೆ. ಎರಡನೇ ಹಂತದಲ್ಲಿ ಮತದಾನ ನಡೆದ ರಾಜಸ್ಥಾನದ 13 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ ಸರಾಸರಿ ಶೇಕಡಾ 59.19 ರಷ್ಟು ಮತದಾನವಾಗಿತ್ತು. ಕೆಲವು ಘಟನೆಗಳ ಹೊರತಾಗಿಯೂ, ಮತದಾನವು ಶಾಂತಿಯುತವಾಗಿ ನಡೆಯಿತು.

ಮಧ್ಯಪ್ರದೇಶದ ಆರು ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಕನಿಷ್ಠ 54.83% ಮತದಾನವಾಗಿದೆ. ಕರ್ನಾಟಕದ ಹದಿನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಎರಡನೇ ಹಂತದಲ್ಲಿ ಮತದಾನ ನಡೆದಿದೆ. ಕರ್ನಾಟಕ 69. 23 ಶೇಕಡಾ ಮತದಾನವಾಗಿದೆ.

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ನಿನ್ನೆ ನಡೆದಿತ್ತು. ಶುಕ್ರವಾರ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ನಾಗರಿಕರು ತಮ್ಮ ಹಕ್ಕನ್ನು ಚಲಾಯಿಸಿದ್ದರು. ದಕ್ಷಿಣ ಕರ್ನಾಟಕದ ಉಡುಪಿ – ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, ಹಾಸನ, ದಕ್ಷಿಣ ಕನ್ನಡ, ಮೈಸೂರು – ಕೊಡಗು, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ನಡೆದಿತ್ತು.

ಇದನ್ನೂ ಓದಿ: Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

Continue Reading
Advertisement
Dhanush Gowda Wedding With Sanjana Photos
ಕಿರುತೆರೆ3 mins ago

Dhanush Gowda:  ವೈವಾಹಿಕ ಜೀವನಕ್ಕೆ ಕಾಲಿಟ್ಟ ʻಗೀತಾʼ ಧಾರಾವಾಹಿ ನಟ

ಕರ್ನಾಟಕ15 mins ago

Parkinson’s disease: ಪಾರ್ಕಿನ್ಸನ್ ರೋಗಿಗಳಲ್ಲಿ ಡಿಬಿಎಸ್ ಚಿಕಿತ್ಸೆಗಾಗಿ ಹೊಸ ತಂತ್ರಜ್ಞಾನ- ಇದು ದೇಶದಲ್ಲೇ ಮೊದಲು

Drought Relief
ಕರ್ನಾಟಕ19 mins ago

Drought Relief: ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

IRCTC Jyotirlinga Yatra
ಪ್ರವಾಸ20 mins ago

IRCTC Jyotirlinga Yatra: ರೈಲ್ವೆ ಇಲಾಖೆಯಿಂದ ಏಳು ಜ್ಯೋತಿರ್ಲಿಂಗ ವೀಕ್ಷಣೆ ಪ್ರವಾಸ; ದರ ವಿವರ ಇಲ್ಲಿದೆ

Viral Video
ವೈರಲ್ ನ್ಯೂಸ್21 mins ago

Fact Check: ಓವೈಸಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಮಹಿಳೆ ಅಲ್ಲವೆ?

Road Accident in kalaburagi
ಕಲಬುರಗಿ22 mins ago

Road Accident : ಲಾರಿ- ಬೈಕ್‌ ಅಪಘಾತ; ಪತ್ನಿ ಕಣ್ಣೇದುರೇ ಒದ್ದಾಡಿ ಪ್ರಾಣಬಿಟ್ಟ ಪತಿ

food poisoning raichur news
ಕ್ರೈಂ24 mins ago

Food Poisoning: ಹಾಸ್ಟೆಲ್‌ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥ

Anupama Parameswaran Paradha next
ಟಾಲಿವುಡ್48 mins ago

Anupama Parameswaran: ಅನುಪಮಾ ಪರಮೇಶ್ವರನ್ ಹೊಸ ಸಿನಿಮಾ ಅನೌನ್ಸ್‌: ನಟಿಯ ಲುಕ್‌ಗೆ ಫ್ಯಾನ್ಸ್‌ ಫಿದಾ!

PU Board exam girl writing exam
ಪ್ರಮುಖ ಸುದ್ದಿ1 hour ago

Public Exam: ಇನ್ನು ಮುಂದೆ ವರ್ಷಕ್ಕೆರಡು ಬಾರಿ ಬೋರ್ಡ್‌ ಪರೀಕ್ಷೆ ? ಪರಿಶೀಲನೆಗೆ ಸಿಬಿಎಸ್‌ಇಗೆ ಸೂಚನೆ

ಕ್ರೈಂ2 hours ago

Child Welfare commission: ಅಕ್ರಮವಾಗಿ ಸಾಗಿಸುತ್ತಿದ್ದ 95 ಮುಸ್ಲಿಂ ಮಕ್ಕಳ ರಕ್ಷಣೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ23 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202424 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

ಟ್ರೆಂಡಿಂಗ್‌