Siddeshwar Swamiji | ಕೂಡಲಸಂಗಮದಲ್ಲಿ ಸಿದ್ದೇಶ್ವರ ಶ್ರೀಗಳ ಚಿತಾಭಸ್ಮ ವಿಸರ್ಜನೆ ಇಂದು - Vistara News

ಪ್ರಮುಖ ಸುದ್ದಿ

Siddeshwar Swamiji | ಕೂಡಲಸಂಗಮದಲ್ಲಿ ಸಿದ್ದೇಶ್ವರ ಶ್ರೀಗಳ ಚಿತಾಭಸ್ಮ ವಿಸರ್ಜನೆ ಇಂದು

ಕೂಡಲಸಂಗಮದ ತ್ರಿವೇಣಿ ಸಂಗಮದಲ್ಲಿ ಸಿದ್ದೇಶ್ವರ ಸ್ವಾಮೀಜಿಯವರ ಚಿತಾಭಸ್ಮ ವಿಸರ್ಜನೆಯ (Siddeshwar Swamiji ) ಬಳಿಕ ಗೋಕರ್ಣದಲ್ಲೂ ಶ್ರೀಗಳ ಚಿತಾಭಸ್ಮ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ.

VISTARANEWS.COM


on

siddeswara
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾಗಲಕೋಟ: ತ್ರಿವೇಣಿ ಸಂಗಮ ಕೂಡಲಸಂಗಮದಲ್ಲಿ ಇಂದು ಸಿದ್ದೇಶ್ವರ ಸ್ವಾಮೀಜಿಯವರ (Siddeshwar Swamiji) ಚಿತಾಭಸ್ಮ ವಿಸರ್ಜನೆಗೆ ಸಿದ್ದತೆ ನಡೆದಿದೆ.

ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಚಿತಾಭಸ್ಮ ವಿಸರ್ಜನೆಗೆ ಬೋಟ್ ವ್ಯವಸ್ಥೆ ಮಾಡಲಾಗಿದೆ. ಕೂಡಲಸಂಗಮವು ಕೃಷ್ಣ, ಘಟಪ್ರಭಾ ಮತ್ತು ಮಲಪ್ರಭಾ ನದಿಗಳ ಸಂಗಮ ಕ್ಷೇತ್ರವಾಗಿದೆ. ಬಸವಣ್ಣನವರ ಐಕ್ಯ ಕ್ಷೇತ್ರವಾಗಿಯೂ ಪ್ರಸಿದ್ಧಿ ಗಳಿಸಿದೆ. ಐಕ್ಯಮಂಟಪದ ಹತ್ತಿರ ಚಿತಾಭಸ್ಮ ವಿಸರ್ಜನೆಗೆ ಸಿದ್ದತೆ ನಡೆದಿದೆ.

ನದಿ ದಡದಲ್ಲಿ ಸಿದ್ದೇಶ್ವರ ಭಾವಚಿತ್ರವನ್ನು ಅಲಂಕರಿಸಲಾಗಿದೆ. ಸ್ವಾಮೀಜಿಯವರ ಆಶಯದಂತೆ ನದಿಯಲ್ಲಿ ಚಿತಾಭಸ್ಮ ವಿಸರ್ಜನೆ ಮಾಡಲಾಗುತ್ತಿದೆ. ನೂರಕ್ಕೂ ಅಧಿಕ ಮಠಾಧೀಶರು, ಹತ್ತು ಸಾವಿರಕ್ಕೂ ಅಧಿಕ ಭಕ್ತರು ಭಾಗವಹಿಸಲಿದ್ದಾರೆ. ವಿಜಯಪುರ ಜ್ಞಾನಯೋಗಾಶ್ರಮದಿಂದ ಚಿತಾಭಸ್ಮವನ್ನು ತರಲಾಗುವುದು.

ಜ. 2 ರಂದು ಸಂಜೆ ಸಿದ್ದೇಶ್ವರ ಸ್ವಾಮೀಜಿಯವರು ಇಹಲೋಕದ ಪಯಣವನ್ನು ಮುಕ್ತಾಯಗೊಳಿಸಿದ್ದರು. ಭಾನುವಾರ ಬೆಳಗ್ಗೆ ಕೂಡಲಸಂಗಮ ಕ್ಷೇತ್ರದ ತ್ರಿವೇಣಿ ಸಂಗಮದಲ್ಲಿ ಚಿತಾಭಸ್ಮ ವಿಸರ್ಜನೆಯ ಬಳಿಕ, ಗೋಕರ್ಣದಲ್ಲೂ ಚಿತಾಭಸ್ಮ ವಿಸರ್ಜನೆ ನಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Boat Capsizes: ದೋಣಿ ಮುಳುಗಿ ಇಬ್ಬರು ಜಲಸಮಾಧಿ; ಏಳು ಮಂದಿ ನಾಪತ್ತೆ

Boat Capsizes: ಒಡಿಶಾದ ಜಾರ್ಸುಗುಡ ಜಿಲ್ಲೆಯ ಮಹಾನದಿ ನದಿಯಲ್ಲಿ ಶುಕ್ರವಾರ (ಏಪ್ರಿಲ್‌ 19) ದುರಂತವೊಂದು ಸಂಭವಿಸಿದೆ. ದೋಣಿ ಮಗುಚಿದ ಪರಿಣಾಮ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ನಾಪತ್ತೆಯಾಗಿದ್ದಾರೆ. ಸುಮಾರು 50 ಪ್ರಯಾಣಿಕರನ್ನು ಹೊತ್ತ ದೋಣಿ ಪಥರ್ಸೇನಿ ಕುಡಾದಿಂದ ಬಾರ್ಗರ್ ಜಿಲ್ಲೆಯ ಬಂಜಿಪಲ್ಲಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಘಟನೆ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಮೃತರ ಕುಟುಂಬಕ್ಕೆ 4 ಲಕ್ಷ ರೂ.ಗಳ ಪರಿಹಾರ ಮೊತ್ತವನ್ನು ಘೋಷಿಸಿದ್ದಾರೆ.

VISTARANEWS.COM


on

Boat Capsizes
Koo

ಭುವನೇಶ್ವರ:‌ ಒಡಿಶಾದ ಜಾರ್ಸುಗುಡ ಜಿಲ್ಲೆಯ ಮಹಾನದಿ ನದಿ (Mahanadi River)ಯಲ್ಲಿ ಶುಕ್ರವಾರ (ಏಪ್ರಿಲ್‌ 19) ದುರಂತವೊಂದು ಸಂಭವಿಸಿದೆ. ದೋಣಿ ಮಗುಚಿ ಬಿದ್ದ (Boat Capsizes) ಪರಿಣಾಮ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಮಾರು 50 ಪ್ರಯಾಣಿಕರನ್ನು ಹೊತ್ತ ದೋಣಿ ಪಥರ್ಸೇನಿ ಕುಡಾದಿಂದ ಬಾರ್ಗರ್ ಜಿಲ್ಲೆಯ ಬಂಜಿಪಲ್ಲಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಜಾರ್ಸುಗುಡ ಜಿಲ್ಲೆಯ ರೆಂಗಲಿ ಪೊಲೀಸ್ ಠಾಣೆಯ ಶಾರದಾ ಘಾಟ್ ತಲುಪುತ್ತಿದ್ದಾಗ ದೋಣಿ ಮಗುಚಿ ಬಿದ್ದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸ್ಥಳೀಯ ಮೀನುಗಾರರು 35 ಪ್ರಯಾಣಿಕರನ್ನು ರಕ್ಷಿಸಿ ದಡಕ್ಕೆ ಕರೆ ತಂದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ನಂತರ ಪೊಲೀಸರು ಮತ್ತು ಅಗ್ನಿಶಾಮಕ ಸೇವೆಗಳ ಸಿಬ್ಬಂದಿ ಇನ್ನೂ ಏಳು ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಇತರ ಏಳು ಪ್ರಯಾಣಿಕರು ಇನ್ನೂ ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪರಿಹಾರ ಘೋಷಣೆ

ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಮೃತರ ಕುಟುಂಬಕ್ಕೆ 4 ಲಕ್ಷ ರೂ.ಗಳ ಪರಿಹಾರ ಮೊತ್ತವನ್ನು ಘೋಷಿಸಿದ್ದಾರೆ. ಜತೆಗೆ ಐದು ಡೈವರ್‌ಗಳನ್ನು ರಕ್ಷಣಾ ಕಾರ್ಯಾಚರಣೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಜಮ್ಮು-ಕಾಶ್ಮೀರದ ಜೇಲಂ ನದಿಯಲ್ಲಿ ದೋಣಿಯೊಂದು ಮುಳುಗಿ, ನಾಲ್ವರು ಶಾಲಾ ಮಕ್ಕಳು ಜಲಸಮಾಧಿಯಾಗಿದ್ದರು. ಈ ಘಟನೆ ಹಸಿಯಾಗಿರುವಾಗಲೇ ಇಂದೂ ಅಂತಹದ್ದೇ ದುರಂತ ಸಂಭವಿಸಿದೆ. ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಜೇಲಂ ನದಿಯು ಉಕ್ಕಿ ಹರಿಯುತ್ತಿತ್ತು. ಶಾಲಾ ಮಕ್ಕಳು ಸೇರಿ ಹಲವರು ಇದ್ದ ದೋಣಿಯು ತುಂಬಿದ ನದಿಯಲ್ಲಿ ಶ್ರೀನಗರದ ಗಂಡ್ಬಾಲ್‌ನಿಂದ ಬಟ್ವಾರದವರೆಗೆ ಚಲಿಸುತ್ತಿತ್ತು. ಇದೇ ವೇಳೆ ದೋಣಿ ಮಗುಚಿತ್ತು.

ಇದನ್ನೂ ಓದಿ: ಹಡಗು ಮುಳುಗಿ 94 ಜನರ ದುರ್ಮರಣ, 26 ಮಂದಿ ನಾಪತ್ತೆ; ಕಾಲರಾ ಭೀತಿ ತೆಗೆಯಿತು ಪ್ರಾಣ!

Continue Reading

ಕರ್ನಾಟಕ

Neha Murder Case: ನನ್ನ ಮಗನಿಗೆ ಶಿಕ್ಷೆ ಆಗಬೇಕು; ಯಾರೂ ಇಂಥ ಕೃತ್ಯ ಎಸಗಬೇಡಿ ಎಂದು ಫಯಾಜ್‌ ತಂದೆ ಕಣ್ಣೀರು

Neha Murder Case: ಹುಬ್ಬಳ್ಳಿಯ ಕಾರ್ಪೊರೇಟರ್‌ ಪುತ್ರಿ ಕೊಲೆ ಪ್ರಕರಣದ ಬಗ್ಗೆ ಆರೋಪಿ ಫಯಾಜ್‌ ತಂದೆ ಬಾಬಾ ಸಾಹೇಬ್‌ ಸುಬಾನಿ ಪ್ರತಿಕ್ರಿಯಿಸಿದ್ದು, ಮಗನ ತಪ್ಪಿನಿಂದ ಊರಿಗೇ ಕೆಟ್ಟ ಹೆಸರು ಬಂದಿದೆ. ನನ್ನ ಮಗ ಫಯಾಜ್‌ಗೆ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ.

VISTARANEWS.COM


on

Neha Murder Case
Koo

ಹುಬ್ಬಳ್ಳಿ: ಹುಬ್ಬಳ್ಳಿಯ ಕಾರ್ಪೊರೇಟರ್‌ ಪುತ್ರಿ ಕೊಲೆ ಪ್ರಕರಣ (Neha Murder Case) ದೇಶಾದ್ಯಂತ ಸದ್ದು ಮಾಡುತ್ತಿದೆ. ಪ್ರಕರಣ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಗಳು ಕೇಳಿಬರುತ್ತಿವೆ. ಈ ನಡುವೆ ಘಟನೆ ಬಗ್ಗೆ ಆರೋಪಿ ಫಯಾಜ್‌ ತಂದೆ ಬಾಬಾ ಸಾಹೇಬ್‌ ಸುಬಾನಿ ಪ್ರತಿಕ್ರಿಯಿಸಿದ್ದು, ಮಗನ ತಪ್ಪಿನಿಂದ ಊರಿಗೇ ಕೆಟ್ಟ ಹೆಸರು ಬಂದಿದೆ. ನನ್ನ ಮಗ ಫಯಾಜ್‌ಗೆ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ.

ವಿಸ್ತಾರ ನ್ಯೂಸ್‌ ಜತೆ ಮಾತನಾಡಿರುವ ಬಾಬಾ ಸಾಹೇಬ್‌ ಸುಬಾನಿ, ನನ್ನ ಮಗ ಮಾಡಿದ ತಪ್ಪಿಗೆ ನಾನು ಮುನವಳ್ಳಿ ಹಾಗೂ ರಾಜ್ಯದ ಜನರ ಬಳಿ ಕ್ಷಮೆ ಕೇಳುತ್ತೇನೆ. ನಮ್ಮನ್ನು ಮುನವಳ್ಳಿ ಜನ ಬೆಳೆಸಿದ್ದಾರೆ. ಅವರ ಋಣ ತೀರಿಸಲು ಸಾಧ್ಯವಿಲ್ಲ. ಹೀಗಾಗಿ ನಮ್ಮೂರಿನ ಜನ ನನ್ನನ್ನು ಕ್ಷಮಿಸಬೇಕು. ದಯವಿಟ್ಟು ಯಾವುದೇ ಯುವಕರು, ನನ್ನ ಮಗನ ರೀತಿಯಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮಾಡಬಾರದು ಎಂದು ಹೇಳುತ್ತಾ ಕಣ್ಣೀರಿಟ್ಟಿದ್ದಾರೆ.

ನಾನು ಯಾವತ್ತೂ ಯಾರಿಗೂ ಕೆಟ್ಟದ್ದು ಮಾಡಿಲ್ಲ, ಈಗ ನನ್ನ ಮಗ ದೇಶದ ಮುಂದೆ ತಲೆ ತಗ್ಗಿಸುವ ಕೆಲಸ ಮಾಡಿಬಿಟ್ಟಿದ್ದಾನೆ. ಹೀಗಾಗಿ ನನ್ನನ್ನು ಮುನವಳ್ಳಿ ಗ್ರಾಮದ ಜನರು ಕ್ಷಮಿಸಬೇಕು ಎಂದು ಕಣ್ಣೀರು ಹಾಕಿರುವ ಅವರು, ನಾನು ಸಾಯೋವರೆಗೆ ಮುನವಳ್ಳಿ ಜನರ ಸೇವೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಯಾರೂ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ಮಾಡುತ್ತಾರೋ ಅಂತಹವರಿಗೆ ಮುಂದಿನ ದಿನಗಳಲ್ಲಿ ಯಾರೂ ಅಂಥ ಕೃತ್ಯ ಮಾಡಬಾರದು, ಆ ರೀತಿಯ ಶಿಕ್ಷೆ ಆಗಬೇಕು. ಇಂತಹ ಘಟನೆಗಳಿಂದ ನಾಳಿನ ದಿನ ಹೆಣ್ಣುಮಕ್ಕಳನ್ನು ಶಾಲೆಗೆ ಕಳುಹಿಸಲು ಜನ ಭಯಪಡುತ್ತಾರೆ. ಹೀಗಾಗಿ ನನ್ನ ಜನ್ಮಭೂಮಿ ಮುನವಳ್ಳಿ, ಅವರಿಗಾಗಿ ನಾನು ಬದುಕುತ್ತೇನೆ ಎಂದು ಹೇಳಿದ್ದಾರೆ.

ವರ್ಷದ ಹಿಂದೆ ನೇಹಾ ಅವರ ತಂದೆ ನನಗೂ ಎರಡು ಬಾರಿ ಫೋನ್‌ ಮಾಡಿದ್ದರು. ನನ್ನ ಮಗಳಿಗೆ ನಿಮ್ಮ ಮಗ ಕಿರುಕುಳ ನೀಡುತ್ತಿದ್ದಾನೆ ಎಂದು ಹೇಳಿದ್ದರು. ಅವರ ತುಂಬಾ ಒಳ್ಳೆಯವರು. ನಾವಿಬ್ಬರೂ ಪ್ರೀತಿ ಮಾಡುತ್ತಿದ್ದೇವೆ ಎಂದು ಮಗ ಹೇಳಿದ್ದ. ಆದರೆ, ನಾನು ಮಾಡಲ್ಲ ಎಂದಿದ್ದೆ. ಹೀಗಾಗಿ ಅವನು ಜಗಳ ಮಾಡಿದ್ದ. ಈಗ ಅವನು ನನ್ನ ಬಳಿ ಮಾತನಾಡಲ್ಲ. ನಮ್ಮ ದಾಂಪತ್ಯ ಜೀವನ ಸರಿಯಿಲ್ಲದ ಕಾರಣ ಅವರ ತಾಯಿ ಜತೆ ಅವನು ಪ್ರತ್ಯೇಕವಾಗಿ ವಾಸವಾಗಿದ್ದ ಎಂದು ಹೇಳಿದರು.

ಇದನ್ನೂ ಓದಿ | Neha Murder Case: ನೇಹಾ ಕೊಲೆಗಾರ ಫಯಾಜ್‌ಗೆ 14 ದಿನ ನ್ಯಾಯಾಂಗ ಬಂಧನ; ʼಲವ್‌ ಜಿಹಾದ್‌ ಕೊಲೆʼ ವಿರೋಧಿಸಿ ಮೂರು ದಿನ ಮುನವಳ್ಳಿ ಬಂದ್

ನಾನು ಸೈನಿಕನಾಗಿ ದೇಶ ಸೇವೆ ಸಲ್ಲಿಸಬೇಕು ಅಂದುಕೊಂಡಿದ್ದೆ. ಆದರೆ, ನಮ್ಮ ತಾಯಿ ಬೇಡ ಅಂದಿದ್ದರು. ಹೀಗಾಗಿ ನನ್ನ ಮಗನನ್ನು ಸೇನೆಗೆ ಸೇರಿಸಬೇಕು ಅಂದುಕೊಂಡಿದ್ದೆ. ಆದರೆ ಅವನು ಈ ರೀತಿಯ ಕೆಲಸ ಮಾಡಿದ್ದಾನೆ ಎಂದು ತಿಳಿಸಿದರು.

Continue Reading

ಪ್ರಮುಖ ಸುದ್ದಿ

IPL 2024 : ಇಂಪ್ಯಾಕ್ಟ್​ ಪ್ಲೇಯರ್ ನಿಯಮಕ್ಕೆ ಆಕ್ಷೇಪ ಎತ್ತಿದ ರಿಕಿ ಪಾಂಟಿಂಗ್​

IPL 2024: ಸ್ಪೆಷಲಿಸ್ಟ್ ಬ್ಯಾಟರ್​ ಅನ್ನು 8 ನೇ ಕ್ರಮಾಂಕದವರೆಗೆ ಆಡಿಸಬಹುದು. ಆದರೆ ತರಬೇತುದಾರ ಮತ್ತು ಆಟಗಾರರಿಗೆ ಇಂಪ್ಯಾಕ್ಟ್​​ ಪ್ಲೇಯರ್​ ಬಹುಶಃ ಸೂಕ್ತವಲ್ಲ ಎಂದು ನಾನು ಭಾವಿಸುತ್ತೇನೆ. ಈ ವಿಧಾನವನ್ನು ಜನರನ್ನು ರಂಜಿಸಲು ಮಾಡಲಾಗುತ್ತಿದೆ ನಿಮಗೆ ತಿಳಿದಿದೆ ಎಂದು ನಾನು ಭಾವಿಸುತ್ತೇನೆ”ಎಂದು ಪಾಂಟಿಂಗ್ ವಿವರಿಸಿದರು.

VISTARANEWS.COM


on

IPL 2024
Koo

ನವದೆಹಲಿ: ಐಪಿಎಲ್​ 2024ರಲ್ಲಿ (IPL 2024) ಜಾರಿಯಾಗಿರುವ ಇಂಪ್ಯಾಕ್ಟ್ ಪ್ಲೇಯರ್ ನಿಯಮವು ಆಲ್ರೌಂಡರ್​ಗಳ ಬೆಳವಣಿಗೆಗೆ ಅಡ್ಡಿಯಾಗಬಹುದು ಎಂದು ಡೆಲ್ಲಿ ಕ್ಯಾಪಿಟಲ್ಸ್ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಶುಕ್ರವಾರ ಹೇಳಿದ್ದಾರೆ. ಅಲ್ಲದೆ ಇದರ ಪರಿಣಾಮ ಅಭಿಮಾನಿಗಳೇ ಅರಿತುಕೊಳ್ಳಬಹುದು ಎಂದು ಹೇಳಿದ್ದಾರೆ.

ಪಾಂಟಿಂಗ್ ಆರಂಭದಿಂದಲೂ ಇಂಪ್ಯಾಕ್ಟ್ ಪ್ಲೇಯರ್​ ವ್ಯವಸ್ಥೆಯ ಪ್ರತಿಪಾದಕರಾಗಿರಲಿಲ್ಲ. ಇತ್ತೀಚಿನ ಯೂಟ್ಯೂಬ್ ಪಾಡ್​ಕಾಸ್ಟ್​​ನಲ್ಲಿ ರೋಹಿತ್ ಶರ್ಮಾ ಅವರು “ನಿಯಮದ ಅಭಿಮಾನಿಯಲ್ಲ” ಎಂದು ಹೇಳಿದ್ದರು. ಅಲ್ಲಿ.ದ ನಂತರ ಈ ಚರ್ಚೆಯು ವೇಗ ಪಡೆದುಕೊಂಡಿದೆ. ಏಕೆಂದರೆ ಇದು ಭಾರತೀಯ ಆಲ್​ರೌಂಡರ್​ಗಳ ಅಭಿವೃದ್ಧಿಗೆ ಧಕ್ಕೆ ತರುತ್ತದೆ ಎಂದು ಪಾಟಿಂಗ್ ಹೇಳಿದ್ದಾರೆ. . “ನೋಡಿ, ರೋಹಿತ್ ಶರ್ಮಾ ಅವರಿಂದ ಕೆಲವು ನಿಜವಾಗಿಯೂ ಆಸಕ್ತಿದಾಯಕ ನೀಡಿದ್ದಾರೆ ಎಂದು ನಾನು ಭಾವಿಸುತ್ತೇನೆ. ಈ ಇಂಪ್ಯಾಕ್ಟ್ ಪ್ಲೇಯರ್ ಆಲ್ರೌಂಡರ್​ಗಳನ್ನು ಆಟದಿಂದ ಸ್ವಲ್ಪ ಹೊರಗಿಡುತ್ತಿದೆ” ಎಂದು ಪಾಂಟಿಂಗ್ ಹೇಳಿದ್ದಾರೆ.

ಸ್ಪೆಷಲಿಸ್ಟ್ ಬ್ಯಾಟರ್​ ಅನ್ನು 8 ನೇ ಕ್ರಮಾಂಕದವರೆಗೆ ಆಡಿಸಬಹುದು. ಆದರೆ ತರಬೇತುದಾರ ಮತ್ತು ಆಟಗಾರರಿಗೆ ಇಂಪ್ಯಾಕ್ಟ್​​ ಪ್ಲೇಯರ್​ ಬಹುಶಃ ಸೂಕ್ತವಲ್ಲ ಎಂದು ನಾನು ಭಾವಿಸುತ್ತೇನೆ. ಈ ವಿಧಾನವನ್ನು ಜನರನ್ನು ರಂಜಿಸಲು ಮಾಡಲಾಗುತ್ತಿದೆ ನಿಮಗೆ ತಿಳಿದಿದೆ ಎಂದು ನಾನು ಭಾವಿಸುತ್ತೇನೆ”ಎಂದು ಪಾಂಟಿಂಗ್ ವಿವರಿಸಿದರು.

ಟಿ20 ಆಟವು ಮನರಂಜನಾ ಪ್ಯಾಕೇಜ್ ಆಗಿದೆ. ಪ್ರಭಾವಶಾಲಿ ಆಟಗಾರನ ಬಗ್ಗೆ ಪ್ರೇಕ್ಷಕರು ಏನು ಯೋಚಿಸುತ್ತಾರೆ ಎಂದು ಕೇಳುವುದು ಉತ್ತಮ. ಏಕೆಂದರೆ ತಂಡಗಳು ಬಹಳಷ್ಟು ಪಂದ್ಯಗಳಲ್ಲಿ 220 ರಿಂದ 250 ರವರೆಗೆ ಗಳಿಸುತ್ತಿವೆ ಎಂಬ ಅಂಶವನ್ನು ಪ್ರತಿಯೊಬ್ಬರೂ ಇಷ್ಟಪಡುತ್ತಾರೆ. ಆದರೆ ಆಟಗಾರರ ಬೆಳವಣಿಗೆಗೆ ಅಡ್ಡಿಯಾಗಲಿದೆ ಎಂದು ಹೇಳಿದರು. ಪ್ರೇಕ್ಷಕರು ಅದನ್ನು ಹೆಚ್ಚು ಇಷ್ಟಪಡದಿದ್ದರೆ. ಹಳೆಯ ಮಾದರಿಗೆ ಹಿಂದಿರುಗಬೇಕ ಎಂದು ಹೇಳಿದ್ದಾರೆ.

ವಾರ್ನರ್ ಶೇ.85ರಿಂದ 90ರಷ್ಟು ಫಿಟ್

ಬೆರಳಿನ ಗಾಯದಿಂದಾಗಿ ಕಳೆದ ಪಂದ್ಯದಿಂದ ಹೊರಗುಳಿದಿದ್ದ ಡೇವಿಡ್ ವಾರ್ನರ್, ನೆಟ್ಸ್​​ನಲ್ಲಿ ಬ್ಯಾಟಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಥ್ರೋಡೌನ್​ಗಳನ್ಉ ಎದುರಿಸುವಾಗ ಸಿಕ್ಸರ್​ಗಳನ್ನು ಬಾರಿಸಿದ್ದಾರೆ. ಪಾಂಟಿಂಗ್ ಅವರು ಸುಮಾರು 85 ರಿಂದ 90% ಫಿಟ್ ಆಗಿದ್ದಾರೆ ಎಂದು ಪಾಂಟಿಂಗ್ ಹೇಳಿದ್ದಾರೆ.

ಇದನ್ನೂ ಓದಿ: IPL 2024 : ಪಾಂಡ್ಯ ಅಂದ್ರೆ ಡೋಂಟ್​ ಕೇರ್​, ರೋಹಿತ್​ಗೆ ಫುಲ್​ ರೆಸ್ಪೆಕ್ಟ್​; ಯುವ ಬೌಲರ್​ನ ನಡೆ ಫುಲ್ ವೈರಲ್​

“ಡೇವಿಡ್ ಆಟದ ದಿನದಂದು ಫಿಟ್ನೆಸ್ ಪರೀಕ್ಷೆಯನ್ನು ಮಾಡಿದ್ದಾರೆ. ಒಂದೆರಡು ದಿನಗಳ ಹಿಂದೆ ಅವನಿಗೆ ಬಹುಶಃ 85 ಅಥವಾ 90% ಆಗಿದ್ದಾರೆ. ಇನ್ನೂ ಹೆಚ್ಚಿನ ಸುಧಾರಣೆಯಾಗಲಿದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಪಾಂಟಿಂಗ್ ಹೇಳಿದ್ದಾರೆ.

Continue Reading

ಶಿಕ್ಷಣ

CET 2024 Exam: ಸಿಇಟಿ ಪರೀಕ್ಷೆಯ 2ನೇ ದಿನವೂ 26 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ! ಏ.27ರೊಳಗೆ ಆಕ್ಷೇಪಣೆ ಸಲ್ಲಿಸಲು KEA ಸೂಚನೆ

CET 2024 Exam: ಗುರುವಾರ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ ಸಂಬಂಧ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ದೂರು ನೀಡಿದ್ದಾರೆ. ಅಲ್ಲದೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಇಎ, ಗ್ರೇಸ್ ಮಾರ್ಕ್ಸ್ ಬಗ್ಗೆ ಬುಧವಾರ (ಏಪ್ರಿಲ್‌ 24) ಚರ್ಚಿಸಿ ತಜ್ಞರ ಸಮಿತಿಯನ್ನು ರಚನೆ ಮಾಡುವುದಾಗಿ ಹೇಳಿದೆ. ಈಗ ಎರಡನೇ ದಿನವೂ ಇದೇ ಗೊಂದಲವಾಗಿದೆ. ಹೀಗಾಗಿ ಈ ಎರಡೂ ಸಮಸ್ಯೆಗಳ ಬಗ್ಗೆ ಬುಧವಾರ ಚರ್ಚೆ ನಡೆಸಲಾಗುತ್ತದೆ.

VISTARANEWS.COM


on

Day 2 of CET 2024 Exam 26 out of syllabus question KEA asks to raise objections by April 27
Koo

ಬೆಂಗಳೂರು: ಎಂಜಿನಿಯರಿಂಗ್, ಕೃಷಿ ಸೇರಿದಂತೆ ಹಲವು ವೃತ್ತಿಪರ ಕೋರ್ಸ್‌ಗಳಿಗೆ ಗುರುವಾರ ನಡೆದಿದ್ದ ಮೊದಲ ದಿನದ ಸಿಇಟಿ-2024 ಪರೀಕ್ಷೆಯಲ್ಲಿ (CET 2024 exam) ಗಣಿತ ಹಾಗೂ ಜೀವಶಾಸ್ತ್ರದ ವಿಷಯದಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಲಾಗಿತ್ತು. ಈಗ ಎರಡನೇ ದಿನದ ಪರೀಕ್ಷೆಯಲ್ಲಿಯೂ ಈ ಸಮಸ್ಯೆ ಪುನರಾವರ್ತನೆಯಾಗಿದೆ. ಭೌತಶಾಸ್ತ್ರದಲ್ಲಿ 8 ಹಾಗೂ ರಸಾಯನಶಾಸ್ತ್ರ ವಿಷಯದಲ್ಲಿ 18 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳನ್ನು ಕೇಳಲಾಗಿದೆ. ಇದು ವಿದ್ಯಾರ್ಥಿಗಳ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಗುರುವಾರ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ ಸಂಬಂಧ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ದೂರು ನೀಡಿದ್ದಾರೆ. ಅಲ್ಲದೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಇಎ, ಗ್ರೇಸ್ ಮಾರ್ಕ್ಸ್ ಬಗ್ಗೆ ಬುಧವಾರ (ಏಪ್ರಿಲ್‌ 24) ಚರ್ಚಿಸಿ ತಜ್ಞರ ಸಮಿತಿಯನ್ನು ರಚನೆ ಮಾಡುವುದಾಗಿ ಹೇಳಿದೆ. ಈಗ ಎರಡನೇ ದಿನವೂ ಇದೇ ಗೊಂದಲವಾಗಿದೆ. ಹೀಗಾಗಿ ಈ ಎರಡೂ ಸಮಸ್ಯೆಗಳ ಬಗ್ಗೆ ಬುಧವಾರ ಚರ್ಚೆ ನಡೆಸಲಾಗುತ್ತದೆ.

ಏಪ್ರಿಲ್‌ 27ರವರೆಗೆ ಆಕ್ಷೇಪಣೆ ಸಲ್ಲಿಕೆಗೆ KEA ಅವಕಾಶ

ಈ ಬಾರಿ ಸಿಇಟಿಯಲ್ಲಿ ನೋಂದಣಿ ಮಾಡಿಕೊಂಡಿದ್ದ 3,49,637 ವಿದ್ಯಾರ್ಥಿಗಳ ಪೈಕಿ ಶೇ.92ರಷ್ಟು ಮಂದಿ ಪರೀಕ್ಷೆ ಬರೆದಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಅಲ್ಲದೆ, ಈಗ ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗಳ ಬಗ್ಗೆ‌ ಆಕ್ಷೇಪಣೆಗಳು ಇದ್ದರೆ, ಇದೇ ಏಪ್ರಿಲ್ 27ರೊಳಗೆ ‌ದೂರು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಪ್ರಶ್ನೆಪತ್ರಿಕೆಯಲ್ಲಿನ ಯಾವುದೇ ಪ್ರಶ್ನೆಗಳ ಬಗ್ಗೆ ಆಕ್ಷೇಪಣೆಗಳು ಇದ್ದರೆ, ವಿಷಯ, ವರ್ಷನ್‌ ಕೋಡ್, ಪ್ರಶ್ನೆ ಸಂಖ್ಯೆಗಳನ್ನು ನಮೂದಿಸಿ keaugcet24@gmail.com ಗೆ ಇ – ಮೇಲ್‌ ಮೂಲಕ ಸಂಜೆ 5.30ರ ಒಳಗೆ ದೂರು ಸಲ್ಲಿಸಲು ಕೆಇಎ ಸೂಚಿಸಿದೆ. ಇದಕ್ಕೆ ತಜ್ಞರ ಸಮಿತಿಯು ಪರಿಶೀಲಿಸಿ ಸೂಕ್ತ ಪರಿಹಾರವನ್ನು ನೀಡಲಿದೆ ಎಂದು ಕೆಇಎ ಸ್ಪಷ್ಟಪಡಿಸಿದೆ.

ಗಣಿತ, ಜೀವಶಾಸ್ತ್ರದ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ ವಿರುದ್ಧ ದೂರು

ಜೀವಶಾಸ್ತ್ರದ 11 ಪ್ರಶ್ನೆಗಳು ಹಾಗೂ ಗಣಿತದ 9 ಪ್ರಶ್ನೆಗಳು ಔಟ್ ಆಫ್ ಸಿಲೆಬಸ್ ಕೇಳಲಾಗಿದೆ ಎಂದು ವಿದ್ಯಾರ್ಥಿಗಳು ಕೆಇಎಗೆ ದೂರು ನೀಡಿದ್ದಾರೆ. ಇವುಗಳಿಗೆ ಗ್ರೇಸ್ ಮಾರ್ಕ್ಸ್ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಪಠ್ಯಪುಸ್ತಕದಲ್ಲಿ ಇಲ್ಲದ ಪ್ರಶ್ನೆಗಳು ಬಂದಿವೆ. ಒಟ್ಟು 14 ಮಾರ್ಕ್ಸ್ ಔಟ್ ಆಫ್ ಸಿಲೆಬಸ್ ಬಂದಿದೆ ಎಂದು ಗುರುವಾರ ವಿದ್ಯಾರ್ಥಿಗಳು ಆರೋಪ ಮಾಡಿದ್ದರು. ಈಗ 11 ಮಾರ್ಕ್ಸ್ ಬಗ್ಗೆ ದೂರಿದ್ದಾರೆ.

ಕೆಇಎ ಹೇಳೋದೇನು?

ಗ್ರೇಸ್ ಮಾರ್ಕ್ಸ್ ನೀಡುವ ಬಗ್ಗೆ ಕೆಇಎ ಈವರೆಗೆ ಯಾವುದೇ ತೀರ್ಮಾನವನ್ನು ತೆಗೆದುಕೊಂಡಿಲ್ಲ. ಗ್ರೇಸ್ ಮಾರ್ಕ್ಸ್ ಬಗ್ಗೆ ಬುಧವಾರ ಚರ್ಚಿಸಿ ತಜ್ಞರ ಸಮಿತಿಯನ್ನು ರಚನೆ ಮಾಡಲಾಗುವುದು. ನಂತರ ಗ್ರೇಸ್ ಮಾರ್ಕ್ಸ್ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ವಿಸ್ತಾರ ನ್ಯೂಸ್‌ಗೆ ಕೆಇಎ ಮಂಡಳಿ ಮಾಹಿತಿ ನೀಡಿದೆ. ಈ ಸಮಿತಿ ರಚನೆಯಾದ ಬಳಿಕ ಅಧ್ಯಯನ ಮಾಡಿ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ನಿರ್ಧಾರವನ್ನು ಕೈಗೊಳ್ಳಲಾಗುವುದು.

ದಾಖಲೆ ಸಂಖ್ಯೆಯಲ್ಲಿ ಸಿಇಟಿ ಬರೆದಿರುವ ವಿದ್ಯಾರ್ಥಿಗಳು

ಈ ವರ್ಷ ಸಿಇಟಿ ಪರೀಕ್ಷೆಗೆ ದಾಖಲೆಯ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಕಳೆದ ವರ್ಷಕ್ಕಿಂತ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಸಿಇಟಿ ಪರೀಕ್ಷೆಯನ್ನು ಬರೆದಿದ್ದಾರೆ. ಈ ಹಿಂದೆ ಯಾವತ್ತೂ ಇಷ್ಟು ಪ್ರಮಾಣದಲ್ಲಿ ವಿದ್ಯಾರ್ಥಿಗಳು ನೋಂದಣಿ ಮಾಡಿರಲಿಲ್ಲ. ರಾಜ್ಯದಲ್ಲಿ 737 ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಲ್ಲಿ 167 ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆಯನ್ನು ನಡೆಸಲಾಗಿದೆ.

ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಭೇಟಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ಗುರುವಾರ ಮಲ್ಲೇಶ್ವರಂ ಪಿಯು ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಶುಕ್ರವಾರ ನಡೆಯುವ ಪರೀಕ್ಷೆಗೂ ಬಿಗಿ ಭದ್ರತೆ ಇರಲಿದೆ ಎಂದು ಹೇಳಿದ್ದರು.

ಸಿಇಟಿಗೆ ಹೆಚ್ಚು ಅಂಕಗಳ ಪಟ್ಟಿ ಪರಿಗಣನೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುಡ್‌ನ್ಯೂಸ್‌ ನೀಡಿದೆ. ದ್ವಿತೀಯ ಪಿಯುಸಿಯ ಮೂರು ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳು ಯಾವುದರಲ್ಲಿ ಹೆಚ್ಚು ಅಂಕ ಪಡೆದಿರುತ್ತಾರೋ ಅದನ್ನೇ ಸಿಇಟಿ (CET 2024)ಗೆ ಪರಿಗಣಿಸಲು ಕೆಇಎ ಸಮ್ಮತಿ ಸೂಚಿಸಿದೆ. ಇದರಿಂದ ನೂರಾರು ವಿದ್ಯಾರ್ಥಿಗಳು ನಿರಾಳವಾಗಿದ್ದಾರೆ. ಎಂಜಿನಿಯರ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕೆಇಎ ಪ್ರತಿವರ್ಷ ಸಿಇಟಿ ನಡೆಸುತ್ತದೆ.

ಸಿಇಟಿ ಜತೆಗೆ ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕವನ್ನೂ ರ‍್ಯಾಂಕಿಂಗ್​ಗೆ ಪರಿಗಣಿಸಲಾಗುತ್ತದೆ. ಇದುವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲಾದರೆ ಪೂರಕ ಪರೀಕ್ಷೆ ಬರೆದು ತೇರ್ಗಡೆಯಾಗಬೇಕಿತ್ತು. ಮುಖ್ಯ ಪರೀಕ್ಷೆ ಮತ್ತು ಪೂರಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಕ್ರೋಡೀಕರಿಸಿ ಅಂಕಪಟ್ಟಿ ನೀಡಲಾಗುತ್ತಿತ್ತು.

ನಿಯಮದಲ್ಲಿ ಬದಲಾವಣೆ

ಈ ಬಾರಿ ಈ ನಿಯಮದಲ್ಲಿ ಕೊಂಚ ಬದಲಾವಣೆ ತರಲಾಗಿದೆ. ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಮೂರು ಪರೀಕ್ಷೆಗಳನ್ನು ಪರಿಚಯಿಸಲಾಗಿದೆ. ಒಂದು ವೇಳೆ ಕಡಿಮೆ ಅಂಕ ಬಂದಿದ್ದರೆ ಅದನ್ನು ಉತ್ತಮಪಡಿಸಿಕೊಳ್ಳಲು ವಿದ್ಯಾರ್ಥಿಗಳು ಇನ್ನು ಉಳಿದ ಎರಡು ಪರೀಕ್ಷೆಗಳನ್ನೂ ಬರೆಯಬಹುದು. ಹೆಚ್ಚು ಅಂಕ ಬಂದಿರುವುದನ್ನೇ ಪರಿಗಣಿಸಿ ಅಂತಿಮ ಅಂಕಪಟ್ಟಿ ನೀಡಲಾಗುತ್ತದೆ.

ಇದನ್ನೂ ಓದಿ: Neha Murder Case: ಐಸಿಸ್‌ ಮಾದರಿಯಲ್ಲಿ ನೇಹಾಗೆ ಚಾಕು ಇರಿತ; ಲವ್‌ ಜಿಹಾದ್‌ ಫಲಿಸದ್ದಕ್ಕೆ ಕೃತ್ಯ: ಪ್ರಮೋದ್‌ ಮುತಾಲಿಕ್

ಇದೀಗ ಆ ಹೆಚ್ಚುವರಿ ಅಂಕವನ್ನೇ ಸಿಇಟಿ ರ‍್ಯಾಂಕಿಂಗ್‌ಗೂ ಪರಿಣಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್‌.ರಮ್ಯಾ ಮಾತನಾಡಿ, ʼʼಹೆಚ್ಚು ಅಂಕ ಬಂದಿರುವ ಅಂತಿಮ ಅಂಕ ಪಟ್ಟಿಯನ್ನು ಸಿಇಟಿ ಅಂಕಗಳ ಜತೆ ರ‍್ಯಾಂಕಿಂಗ್‌ ಪಟ್ಟಿ ಸಿದ್ಧಪಡಿಸಲು ಪರೀಕ್ಷಾ ಪ್ರಾಧಿಕಾರ ಪರಿಗಣಿಸಲಿದೆʼʼ ಎಂದು ತಿಳಿಸಿದ್ದಾರೆ.

Continue Reading
Advertisement
Actor Darshan
ಕರ್ನಾಟಕ53 seconds ago

Actor Darshan: ನಟ ದರ್ಶನ್‌ ಇದ್ದ ಪ್ರಚಾರ ವಾಹನಕ್ಕೆ ವಿದ್ಯುತ್‌ ಸ್ಪರ್ಶ; ತಪ್ಪಿದ ಭಾರೀ ಅನಾಹುತ!

Boat Capsizes
ದೇಶ14 mins ago

Boat Capsizes: ದೋಣಿ ಮುಳುಗಿ ಇಬ್ಬರು ಜಲಸಮಾಧಿ; ಏಳು ಮಂದಿ ನಾಪತ್ತೆ

Chikkaballapur Lok Sabha Constituency NDA candidate Dr K Sudhakar election campaign
ಚಿಕ್ಕಬಳ್ಳಾಪುರ22 mins ago

Lok Sabha Election: ಯಲಹಂಕದಲ್ಲಿ ಡಾ.ಕೆ.ಸುಧಾಕರ್ ಗೆ 1 ಲಕ್ಷ ಮತಗಳ ಲೀಡ್ ಕೊಡಿಸುತ್ತೇನೆ: ಎಸ್ ಆರ್ ವಿಶ್ವನಾಥ್ ಪ್ರತಿಜ್ಞೆ

Chikkaballapur Lok Sabha Constituency Congress candidate Raksha Ramaiah election campaign in Yalahanka
ಬೆಂಗಳೂರು43 mins ago

Lok Sabha Election 2024: ಬಿಜೆಪಿ ಆಡಳಿತದಲ್ಲಿ ಶೇ. 5ರಷ್ಟೂ ಉದ್ಯೋಗ ಸೃಷ್ಟಿಯಾಗಿಲ್ಲ: ರಕ್ಷಾ ರಾಮಯ್ಯ

kaalnadige Jatha programme in Uttara kannada
ಉತ್ತರ ಕನ್ನಡ1 hour ago

Lok Sabha Election 2024: ಉ.ಕ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಮತದಾನದ ಗುರಿ; ಡಿಸಿ

Bangalore Rural Lok Sabha Constituency Congress candidate D K Suresh Election campaign
ಬೆಂಗಳೂರು ಗ್ರಾಮಾಂತರ1 hour ago

Lok Sabha Election 2024: ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿ: ಡಿ.ಕೆ. ಸುರೇಶ್

Neha Murder Case
ಕರ್ನಾಟಕ1 hour ago

Neha Murder Case: ನನ್ನ ಮಗನಿಗೆ ಶಿಕ್ಷೆ ಆಗಬೇಕು; ಯಾರೂ ಇಂಥ ಕೃತ್ಯ ಎಸಗಬೇಡಿ ಎಂದು ಫಯಾಜ್‌ ತಂದೆ ಕಣ್ಣೀರು

IPL 2024
ಪ್ರಮುಖ ಸುದ್ದಿ1 hour ago

IPL 2024 : ಇಂಪ್ಯಾಕ್ಟ್​ ಪ್ಲೇಯರ್ ನಿಯಮಕ್ಕೆ ಆಕ್ಷೇಪ ಎತ್ತಿದ ರಿಕಿ ಪಾಂಟಿಂಗ್​

Lok Sabha Election 2024
Lok Sabha Election 20241 hour ago

Lok Sabha Election 2024: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ; ಕಾರಣ ಇದು

Day 2 of CET 2024 Exam 26 out of syllabus question KEA asks to raise objections by April 27
ಶಿಕ್ಷಣ2 hours ago

CET 2024 Exam: ಸಿಇಟಿ ಪರೀಕ್ಷೆಯ 2ನೇ ದಿನವೂ 26 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ! ಏ.27ರೊಳಗೆ ಆಕ್ಷೇಪಣೆ ಸಲ್ಲಿಸಲು KEA ಸೂಚನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ7 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ18 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌