Site icon Vistara News

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Exit mobile version