Site icon Vistara News

Prajwal Revanna Case : ವಿಡಿಯೋ ಹಂಚಿದ ಆರೋಪಿ ಚೇತನ್​ಗೆ ಎಸ್ಐಟಿ ನೋಟಿಸ್

Prajwal Revanna Case

ಬೆಂಗಳೂರು: ಪ್ರಜ್ವಲ್ ರೇವಣ್ಣಗೆ ಸೇರಿದ್ದು ಎನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೊ ಹಗರಣದ (Prajwal Revanna Case ) ಸಂಬಂಧ ತನಿಖೆ ನಡೆಸುತ್ತಿರುವ ಎಸ್​ಐಟಿ ಪೊಲೀಸರು ವಿಡಯೋ ಹಂಚಿದ ಸಂಬಂಧವಾಗಿ ಚೇತನ್ ಗೌಡ ಎಂಬಾತನಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಹಾಸನದ ಸೆನ್ ಪೋಲಿಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿದ್ದಾರೆ.

ಮಂಗಳವಾರ (ಮೇ 27ರಂದು) ನಾಳೆ ಯಾವುದೇ ಪರಿಸ್ಥಿತಿಯಲ್ಲಿ ಸಿಐಡಿ ಕಚೇರಿಗೆ ಹಾಜರಾಗಿ ವಿಚಾರಣೆಗೆ ಒಳಪಡಬೇಕು ಎಂದು ಎಸ್ಐಟಿ ತಿಳಿಸಿದೆ. ಪೆನ್ ಡ್ರೈವ್ ಪ್ರಕರಣ ಸದ್ದು ಮಾಡಿದಾಗ ಅದರಲ್ಲಿ ಕೇಳಿ ಬಂದ ಹೆಸರುಗಳಲ್ಲಿ ಒಂದು ಹೆಸರು ಚೇತನ್​. ಸದ್ಯ ಎಸ್ಐಟಿ ಯಿಂದ ಚೇತನ್ ಗೌಡಗೆ ನೋಟಿಸ್ ಜಾರಿ ಮಾಡಲಾಗಿದ್ದು ವಿಚಾರಣೆ ಬಳಿಕ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ.

ಇಬ್ಬರು ಚೇತನ್ ಈ ಪ್ರಕರಣದಲ್ಲಿ ಇದ್ದಾರೆ. ಒಬ್ಬ ಈಗಾಗಲೇ ಆರೆಸ್ಟ್ ಆಗಿದ್ದಾನೆ. ಆರೆಸ್ಟ್ ಆದವನು ಪ್ರೀತಂ ಗೌಡ ಆಪ್ತ. ಈಗ ನೋಟೀಸ್ ಬಂದಿರುವುದು ಇನ್ನೊಬ್ಬನಿಗೆ.

ನಾಳೆ ಚೇತನ್ ಗೌಡ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದ್ದು, ಬೆಳಗ್ಗೆ 11 ಗಂಟೆ ಮೊದಲು ಬರಲು ಸೂಚನೆ ನೀಡಲಾಗಿದೆ. ಹೀಗಾಗಿ ಚೇತನ್​ 10 ಗಂಟೆ ಸುಮಾರಿಗೆ ಸಿಐಡಿ ಕಚೇರಿಗೆ ಬರಲಿದ್ದಾರೆ. ಪೆನ್ ಡ್ರೈವ್ ಲೀಕ್ ವಿಚಾರವಾಗಿ ಚೇತನ್ ಗೌಡ ನನ್ನು ಎಸ್.ಐ.ಟಿ ವಿಚಾರಿಸುವ ಸಾಧ್ಯತೆ ಇದೆ.

ಪ್ರಜ್ವಲ್‌ ಬಂದ್ರೆ ಎಸ್‌ಐಟಿ ಮುಂದೆ ನಾನೂ ಹಾಜರಾಗುವೆ: ಆರೋಪಿ ನವೀನ್‌ ಗೌಡ

ಪ್ರಜ್ವಲ್‌ ರೇವಣ್ಣ ಅವರು ಬರಲಿ ವಿಚಾರಣೆ ಎದುರಿಸಲಿ. ಸಂತ್ರಸ್ತೆಯರಲ್ಲಿ ಜೆಡಿಎಸ್‌ ಕಾರ್ಯಕರ್ತರೆಯರೇ ಹೆಚ್ಚಾಗಿದ್ದಾರೆ. ಅವರಿಗೆಲ್ಲ ನ್ಯಾಯ ದೊರಕಬೇಕು. ಪ್ರಜ್ವಲ್‌ ಕೇಸ್‌ನಿಂದ (Prajwal Revanna Case) ಎಷ್ಟೋ ಜನ ಹೆಣ್ಣು ಮಕ್ಕಳು ತಲೆ ಎತ್ತಿ ಓಡಾಡಲು ಆಗುತ್ತಿಲ್ಲ. ಎಸ್‌ಐಟಿ ಮುಂದೆ ವಿಚಾರಣೆಗೆ ಅವರೂ ಬರಲಿ, ನಾನೂ ಹಾಜರಾಗುತ್ತೇನೆ ಎಂದು ಅಶ್ಲೀಲ ವಿಡಿಯೊ ವೈರಲ್‌ ಪ್ರಕರಣದ ಆರೋಪಿ, ತಲೆಮರೆಸಿಕೊಂಡಿರುವ ನವೀನ್‌ ಗೌಡ ಹೇಳಿದ್ದಾನೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಪ್ರತ್ಯಕ್ಷವಾದ ಬೆನ್ನಲ್ಲೇ ನಿರೀಕ್ಷಣಾ ಜಾಮೀನಿಗೆ ಭವಾನಿ ರೇವಣ್ಣ ಅರ್ಜಿ

ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಮೇ 31ರಂದು ಬೆಂಗಳೂರಿಗೆ ಆಗಮಿಸುತ್ತೇನೆ ಎಂದು ಹೇಳಿದ ಬೆನ್ನಲ್ಲೇ ನವೀನ್‌ ಗೌಡ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾನೆ.

ಅಶ್ಲೀಲ ವಿಡಿಯೊ ಆರೋಪದಲ್ಲಿ ಏ. 23ರಂದು ನನ್ನ ಮೇಲೆಯೂ ಎಫ್‌ಐಆರ್‌ ದಾಖಲಿಸಿದ್ದಾರೆ. ಹಾಸನದಲ್ಲಿ ಕಳೆದ 10 ವರ್ಷದಲ್ಲಿ ಎಷ್ಟು ಹೆಣ್ಣು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಹಾಗೂ ನಾಪತ್ತೆಯಾಗಿದ್ದಾರೆ ಎಂಬುವುದು ಮರು ತನಿಖೆಯಾಗಬೇಕಿದೆ. ಈ ಆತ್ಮಹತ್ಯೆಗಳಿಗೂ ಕೂಡ ಪ್ರಜ್ವಲ್‌ ರೇವಣ್ಣಗೆ ಸಂಬಂಧವಿದೆ. ಎಸ್‌ಐಟಿಯವರುವ ವಿಚಾರಣೆಗೆ ನನ್ನನ್ನು ಕರೆದಿಲ್ಲ. ಅವರು ಕರೆದರೆ ನಾನು ಹೋಗುತ್ತೇನೆ. ನಾನು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದಕ್ಕೆ ಕೇಸ್‌ ಹಾಕಿದ್ದಾರೆ ಹೇಳಿದ್ದಾನೆ.

ಅಶ್ಲೀಲ ವಿಡಿಯೊ ವಿಷಯ ಬಹಿರಂಗಪಡಿಸದಂತೆ ನನಗೂ ಪ್ರಜ್ವಲ್‌ ರೇವಣ್ಣ ಅವರು ಆಮಿಷ ಒಡ್ಡಿದ್ದರು. ಅವರ ಸಹಚರನನ್ನು ನನ್ನ ಭೇಟಿಯಾಗಲು ಕಳುಹಿಸಿದ್ದರು ಎಂದು ಆರೋಪಿಸಿದ್ದಾನೆ.

ನವೀನ್‌ ಗೌಡ ಯಾರು?

ನವೀನ್‌ ಗೌಡ ಕಾಂಗ್ರೆಸ್‌ ಕಾರ್ಯಕರ್ತರಾಗಿದ್ದು, ಶಾಸಕ ಜಮೀರ್‌ ಅಹಮ್ಮದ್‌ ಆಪ್ತರಲ್ಲೊಬ್ಬನಾಗಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ, ಈತ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೀಲ್‌ಗೂ ಆಪ್ತರಾಗಿದ್ದರು. ಚುನಾವಣೆ ವೇಳೆ ಶ್ರೇಯಸ್‌ ಪರವಾಗಿ ಪ್ರಚಾರವನ್ನೂ ಮಾಡಿದ್ದ. ಈತನೇ ಹಾಸನ ಜಿಲ್ಲಾದ್ಯಂತ ಪೆನ್‌ಡ್ರೈವ್‌ ಅನ್ನು ಹಂಚಿಕೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ನವೀನ್ ಗೌಡ ಮೇಲೆ ಏ.23ರಂದು ಹಾಸನ ಸೆನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ಬಳಿಕ ನವೀನ್ ಗೌಡ ನಾಪತ್ತೆಯಾಗಿದ್ದ. ಆದರೆ, ಭಾನುವಾರ ಫೇಸ್‌ಬುಕ್‌ನಲ್ಲಿ ದಿಢೀರನೆ ಪ್ರತ್ಯಕ್ಷ

Exit mobile version