Vistara News Launch | ಶ್ರೀನಿವಾಸ್‌ ಹೆಬ್ಬಾರ್‌ ಅವರ ಸಾಮಾಜಿಕ ಕಾರ್ಯ ಯುವ ಸಮುದಾಯಕ್ಕೆ ಮಾದರಿ Vistara News

ಪ್ರಮುಖ ಸುದ್ದಿ

Vistara News Launch | ಶ್ರೀನಿವಾಸ್‌ ಹೆಬ್ಬಾರ್‌ ಅವರ ಸಾಮಾಜಿಕ ಕಾರ್ಯ ಯುವ ಸಮುದಾಯಕ್ಕೆ ಮಾದರಿ

ಶಿರಸಿಯಲ್ಲಿ ಭಾನುವಾರ ವಿಸ್ತಾರ ನ್ಯೂಸ್ ಚಾನೆಲ್​ನ (Vistara News Launch) ಅನಾವರಣ ಹಾಗೂ ವಿಸ್ತಾರ ಕನ್ನಡ ಸಂಭ್ರಮ ಕಾರ್ಯಕ್ರಮ ನಡೆಯಿತು.

VISTARANEWS.COM


on

Vistara news Launch
ದೀಪ ಬೆಳಗಿಸಿದ ಗಣ್ಯರು ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿರಸಿ: ಕಷ್ಟಪಟ್ಟು ದುಡಿದು ಗಳಿಸಿದ ಹಣವನ್ನು ಬೇರೆಯವರಿಗೆ ಗೊತ್ತಾಗದಂತೆ ಜನರಿಗಾಗಿ ಸದ್ವಿನಿಯೋಗ ಮಾಡುವಂತಹ ಜನರು ಇಂದಿನ ಸಮಾಜಕ್ಕೆ ಅಗತ್ಯ ಎಂದು ಕರ್ನಾಟಕ ಪಂಚಾಯತ್ ರಾಜ್ ಉಪಾಧ್ಯಕ್ಷ ಪ್ರಮೋದ ಹೆಗಡೆ ಹೇಳಿದರು.

ನಗರದ ತೋಟಗಾರ ಕಲ್ಯಾಣ‌ ಮಂಟಪದಲ್ಲಿ ಭಾನುವಾರ (ನವೆಂಬರ್‌ ೧೩) ನಡೆದ ವಿಸ್ತಾರ ಕನ್ನಡ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. “ವಿಸ್ತಾರ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರಾದ ಶ್ರೀನಿವಾಸ್‌ ಹೆಬ್ಬಾರ್‌ ಅವರು ಧಾರ್ಮಿಕ, ಶಿಕ್ಷಣ, ಮಾಧ್ಯಮ ಕ್ಷೇತ್ರದ ಮೂಲಕ‌ ಸಮಾಜಕ್ಕೆ ನೀಡಿದ ಕೊಡುಗೆ ದೊಡ್ಡ‌ದು. ನೀರಿಲ್ಲದ ಹಲವು ಕೆರೆಗಳಲ್ಲಿ ಜೀವ ಜಲ ಉಕ್ಕುವಂತೆ ಮಾಡಿದ ಅವರು ಇಂದಿನ ಯುವ ಸಮುದಾಯಕ್ಕೆ ಮಾದರಿ,” ಎಂದರು.

ಟಿಎಸ್ಎಸ್ ಕಾರ್ಯಾಧ್ಯಕ್ಷ‌ ರಾಮಕೃಷ್ಣ ಹೆಗಡೆ‌ ಕಡವೆ‌ ಮಾತನಾಡಿ “ಏನೇ ಬರೆದರೂ ಸತ್ಯ ಬರೆಯಬೇಕು. ಸತ್ಯವನ್ನಾದರೂ ಸಮಾಜಕ್ಕೆ ಕೆಡುಕಾಗದಂತೆ ಬರೆಯಬೇಕು. ಮಾಧ್ಯಮ ಬಿತ್ತರಿಸುವ ವಿಷಯದ ಮೇಲೆ ಸಮಾಜ ನಿಂತಿರುತ್ತದೆ,” ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ವಿಸ್ತಾರ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಹಾಗೂ ಜೀವ ಜಲ‌ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ‌ ಹೆಬ್ಬಾರ್ ಅವರು ಮಾತನಾಡಿ “ನಿಖರ ಹಾಗೂ ಜನಪರದ‌ ಆಶಯದೊಂದಿಗೆ ವಿಸ್ತಾರ ನ್ಯೂಸ್ ಆರಂಭಿಸಲಾಗಿದೆ. ಜನರ ಹಿತವೇ ನಮ್ಮ‌ ಮೊದಲ ಕನಸು,”ಎಂದರು.

ನೆಮ್ಮದಿ ರುದ್ರ ಭೂಮಿಯ ಹರಿಕಾರರಾದ ವೈಶಾಲಿ ವಿ ಪಿ ಹೆಗಡೆ ಮಾತನಾಡಿ “ನಾವು ನೆಮ್ಮದಿ ರುದ್ರ ಭೂಮಿಯ ಅಭಿವೃದ್ಧಿಗಾಗಿ ವ್ಯಯ ಮಾಡಿದ ಸಮಯ ನಮಗೆ ಯಶಸ್ಸು ತಂದುಕೊಟ್ಟಿದೆ. ನಮ್ಮ ರುದ್ರಭೂಮಿ ರಾಜ್ಯದ ಪ್ರತಿಷ್ಠಿತ ರುದ್ರಭೂಮಿಯಲ್ಲೊಂದಾಗಿದೆ,” ಎಂದು ಹೇಳಿದರು.

“ಸಾಂಸ್ಕೃತಿಕ ನಗರಿ ಶಿರಸಿಯಲ್ಲಿ ರಂಗಮಂದಿರ ಇಲ್ಲದಿರುವುದು ಬೇಸರದ ಸಂಗತಿ. ರಂಗಮಂದಿರದ ನಿರ್ಮಾಣಕ್ಕಾಗಿ ಪ್ರಯತ್ನಗಳು ನಡೆಯುತ್ತಿದ್ದು ಸದ್ಯದಲ್ಲಿಯೇ ಕೈಗೂಡುವ ನಿರೀಕ್ಷೆಯಿದೆ,” ಎಂದರು.

ಪತ್ರಕರ್ತ ಅಶೋಕ ಹಾಸ್ಯಗಾರ ಮಾತನಾಡಿ “ಮಾಧ್ಯಮ ಕ್ಷೇತ್ರದಲ್ಲಿ ಪ್ರಾಮಾಣಿಕರಾಗಿ, ನಿಖರವಾಗಿ ಬರೆದರೆ ಅಪಾಯವನ್ನೂ ಎದುರಿಸಬೇಕಾಗುತ್ತದೆ. ಸರಕಾರ ಬದಲಾದರೂ ಸಮಾಜ ಬದಲಾಗುವುದಿಲ್ಲ. ಹೀಗಾಗಿ ಮಾಧ್ಯಮಕ್ಕೆ ಜನರ ಹಿತವೇ ಮುಖ್ಯ,” ಎಂದರು.

ವಿಸ್ತಾರ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ಚೇರ್ಮೆನ್‌, ಎಂಡಿ ಎಚ್.ವಿ. ಧರ್ಮೇಶ್‌, ಉದ್ಯಮಿ ಭೀಮಣ್ಣ ಟಿ ನಾಯ್ಕ, ರಾಜಧಾನಿ ಸೌಹಾರ್ದದ ಕಿರಣ ಚಿತ್ರಕಾರ, ಜಿಲ್ಲಾ ಪತ್ರಿಕಾ ಸಂಘದ ಅಧ್ಯಕ್ಷ ಜಿ. ಸುಬ್ರಾಯ ಭಟ್ಟ‌ ಬಕ್ಕಳ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಾಧಕರಾದ ಹಿರಿಯ‌ ಸಮಾಜ ಸೇವಕ ಕಾಶಿನಾಥ‌ ಮೂಡಿ, ರಾಘವೇಂದ್ರ ಮಠದ ಅಧ್ಯಕ್ಷ ಡಿ.ಡಿ. ಮಾಡಗೇರಿ, ರುದ್ರಭೂಮಿ‌ ಹರಿಕಾರರಾದ ವೈಶಾಲಿ ವಿ.ಪಿ. ಹೆಗಡೆ, ಹಿರಿಯ ಪತ್ರಕರ್ತ ಅಶೋಕ ಹಾಸ್ಯಗಾರ, ನಗರಸಭೆ ಸದಸ್ಯ ಕಿರಣ್ ಶೆಟ್ಟರ್ ಅವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.

ವಿದ್ಯಾನಿಧಿ ಡಾ. ವಿದ್ಯಾಭೂಷಣ ಹಾಗೂ ಕು.ಮೇಧಾ ವಿದ್ಯಾಭೂಷಣ ಅವರಿಂದ ಗಾಯನ ಕಾಯಕ್ರಮ ನಡೆಯಿತು.

ಇದನ್ನೂ ಓದಿ | Vistara News Launch | ಸುದ್ದಿ ಮಾಧ್ಯಮಗಳು ಜನಪರವಾಗಿರಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆಶಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

ಸುರಂಗದಿಂದ ರಕ್ಷಿಸಲಾದ ಕಾರ್ಮಿಕರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ!

Uttarkashi Tunnel Rescue: ಉತ್ತರಕಾಶಿಯ ನಿರ್ಮಾಣ ಹಂತದಲ್ಲಿದ್ದ ಸುರಂಗವು ನವೆಂಬರ್ 12ರಂದು ಕುಸಿದಿತ್ತು. ಈ ವೇಳೆ ಸಿಲುಗಿತ್ತ 41 ಕಾರ್ಮಿಕರನ್ನು ಮಂಗಳವಾರ ರಕ್ಷಣೆ ಮಾಡಲಾಗಿದೆ.

VISTARANEWS.COM


on

PM Narendra Modi phone call to workers, who rescued from collapsed tunnel
Koo

ನವದೆಹಲಿ: 17 ದಿನಗಳ ಕಾರ್ಯಾಚರಣೆ (Uttarkashi Tunnel Rescue) ಬಳಿಕ ಕುಸಿದ ಸುರಂಗದಲ್ಲಿದ್ದ 41 ಕಾರ್ಮಿಕರನ್ನು ಯಶಸ್ವಿಯಾಗಿ ಮಂಗಳವಾರ ಹೊರ ತರಲಾಯಿತು(Trapped Workers Rescued). ರಕ್ಷಣೆ ಮಾಡಲಾದ ಕಾರ್ಮಿಕರಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಒಂದೇ ಕೋಣೆಯಲ್ಲಿದ್ದ ಎಲ್ಲ ಕಾರ್ಮಿಕರಿಗೆ ಪ್ರಧಾನಿ ದೂರವಾಣಿ ಕರೆ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ, ಪ್ರಧಾನಿ ಮೋದಿ ಅವರು ರಕ್ಷಣಾ ಕಾರ್ಯಾಚರಣೆಯ ತಂಡಗಳನ್ನು (Rescue Teams) ಹೊಗಳಿದ್ದಾರೆ.

ಇದಕ್ಕೂ ಮೊದಲು ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ, ಉತ್ತರಕಾಶಿಯಲ್ಲಿ ನಮ್ಮ ಕಾರ್ಮಿಕ ಬಂಧುಗಳ ರಕ್ಷಣಾ ಕಾರ್ಯಾಚರಣೆಯ ಯಶಸ್ಸು ಎಲ್ಲರನ್ನೂ ಭಾವುಕರನ್ನಾಗಿಸುತ್ತಿದೆ. ನಿಮ್ಮ ಧೈರ್ಯ ಮತ್ತು ತಾಳ್ಮೆ ಎಲ್ಲರಿಗೂ ಸ್ಪೂರ್ತಿದಾಯಕವಾಗಿದೆ ಎಂದು ಸುರಂಗದಲ್ಲಿ ಸಿಕ್ಕಿಬಿದ್ದ ಸ್ನೇಹಿತರಿಗೆ ನಾನು ಹೇಳುವುದು ಏನೆಂದರೆ, ನಾನು ನಿಮ್ಮೆಲ್ಲರಿಗೂ ಒಳ್ಳೆಯ ಮತ್ತು ಉತ್ತಮ ಆರೋಗ್ಯವನ್ನು ಬಯಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಹೇಳಿದ್ದಾರೆ.

ದೀರ್ಘಾವಧಿಯ ಕಾಯುವಿಕೆಯ ನಂತರ ನಮ್ಮ ಈ ಸ್ನೇಹಿತರು ಈಗ ತಮ್ಮ ಪ್ರೀತಿಪಾತ್ರರನ್ನು ಭೇಟಿಯಾಗುತ್ತಾರೆ ಎಂಬುದು ತುಂಬಾ ತೃಪ್ತಿಯ ವಿಷಯ. ಈ ಸವಾಲಿನ ಸಮಯದಲ್ಲಿ ಈ ಎಲ್ಲಾ ಕುಟುಂಬಗಳು ತೋರಿದ ತಾಳ್ಮೆ ಮತ್ತು ಧೈರ್ಯವನ್ನು ಸಾಕಷ್ಟು ಪ್ರಶಂಸಿಸಲಾಗುವುದಿಲ್ಲ. ಈ ರಕ್ಷಣಾ ಕಾರ್ಯಾಚರಣೆಗೆ ಸಂಬಂಧಿಸಿದ ಎಲ್ಲ ಜನರ ಆತ್ಮಕ್ಕೆ ನಾನು ನಮಸ್ಕರಿಸುತ್ತೇನೆ. ಅವರ ಶೌರ್ಯ ಮತ್ತು ಸ್ಥೈರ್ಯ ನಮ್ಮ ಕಾರ್ಮಿಕ ಬಂಧುಗಳಿಗೆ ಹೊಸ ಬದುಕನ್ನು ನೀಡಿದೆ. ಈ ಕಾರ್ಯಾಚರಣೆಯಲ್ಲಿ ತೊಡಗಿರುವ ಪ್ರತಿಯೊಬ್ಬರೂ ಮಾನವೀಯತೆ ಮತ್ತು ತಂಡದ ಕೆಲಸಗಳ ಅದ್ಭುತ ಉದಾಹರಣೆಯನ್ನು ಹೊಂದಿದ್ದಾರೆ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ.

ಕೇಂದ್ರ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆಗಳ ಸಿಬ್ಬಂದಿ, ಪೊಲೀಸರು, ನುರಿತ ರಕ್ಷಣಾ ಸಿಬ್ಬಂದಿ, ವಿದೇಶಿ ತಂಡಗಳು, ಅತ್ಯಾಧುನಿಕ ಯಂತ್ರಗಳು, ಡ್ರಿಲ್ಲಿಂಗ್‌ ಮಷೀನ್‌ಗಳನ್ನು ಬಳಸಿ ಸತತವಾಗಿ ಕಾರ್ಯಾಚರಣೆ ಕೈಗೊಂಡರೂ ಹಲವು ಅಡೆತಡೆಗಳು ಎದುರಾದವು. ಆದರೆ, ಇದೆಲ್ಲವನ್ನೂ ಮೀರಿ ಕೈಗೊಂಡ ಕಾರ್ಯಾಚರಣೆ ಯಶಸ್ವಿಯಾಗಿದೆ. 41 ಹಾಸಿಗೆಗಳು ಇರುವ ತಾತ್ಕಾಲಿಕ ಆಸ್ಪತ್ರೆಯನ್ನು ನಿರ್ಮಿಸಲಾಗಿದ್ದು, ಆಂಬುಲೆನ್ಸ್‌ ಮೂಲಕ ಎಲ್ಲ ಕಾರ್ಮಿಕರನ್ನು ಕರೆದೊಯ್ಯಲಾಗಿದೆ.

ಏನಿದು ಸುರಂಗ ಕುಸಿತ ಪ್ರಕರಣ?

ಉತ್ತರಕಾಶಿ ಜಿಲ್ಲೆಯ ಸಿಲ್‌ಕ್ಯಾರ ಹಾಗೂ ದಂಡಲ್‌ಗಾಂವ್‌ಗೆ ಸಂಪರ್ಕ ಕಲ್ಪಿಸಲು ಚಾರ್‌ ಧಾಮ್‌ ರಸ್ತೆ ಯೋಜನೆ ಅಡಿಯಲ್ಲಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದೆ. 4.5 ಕಿಲೋ ಮೀಟರ್‌ ದೂರದ ಸುರಂಗ ನಿರ್ಮಾಣದ ವೇಳೆ ಸುಮಾರು 150 ಮೀಟರ್‌ ಉದ್ದದ ಸುರಂಗ ಕುಸಿದಿತ್ತು. ನವೆಂಬರ್‌ 12ರಂದು ಜಾವ 4 ಗಂಟೆ ಸುಮಾರಿಗೆ ಸುರಂಗ ಕುಸಿದಿದ್ದು, ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿತ್ತು. ಇಷ್ಟಾದರೂ ಕ್ಷಿಪ್ರವಾಗಿ ಕಾರ್ಮಿಕರನ್ನು ರಕ್ಷಣೆ ಮಾಡಲು ಆಗಿರಲಿಲ್ಲ.

ಉತ್ತರಕಾಶಿಯಿಂದ ಯಮುನೋತ್ರಿಗೆ 26 ಕಿಲೋಮೀಟರ್‌ ಸಂಚರಿಸುವುದನ್ನು ಕಡಿಮೆಗೊಳಿಸಲು ಸುರಂಗ ನಿರ್ಮಿಸಲಾಗುತ್ತಿದೆ. ಸುರಂಗ ಕುಸಿಯುತ್ತಲೇ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರು ಒಳಗೆ ಸಿಲುಕಿದ್ದರು. ಏಕಾಏಕಿ ಸುರಂಗ ಕುಸಿದ ಕಾರಣ ಒಬ್ಬ ಕಾರ್ಮಿಕರೂ ಹೊರಗೆ ಬರಲು ಸಾಧ್ಯವಾಗಿರಲಿಲ್ಲ. ಉತ್ತರಾಖಂಡ ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ. ಭೂಕುಸಿತ, ಡ್ರಿಲ್ಲಿಂಗ್‌ ಯಂತ್ರಗಳು ಕೈಕೊಟ್ಟಿರುವುದು ಸೇರಿ ಹಲವು ಕಾರಣಗಳಿಂದಾಗಿ ಕಾರ್ಮಿಕರ ರಕ್ಷಣೆಯು ಕಷ್ಟವಾಗಿತ್ತು. ವಿದೇಶಿ ತಜ್ಞರನ್ನೂ ಜನರ ರಕ್ಷಣೆಗೆ ಕರೆಸಲಾಗಿತ್ತು. ಈಗ ಕೊನೆಗೆ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ.

ಈ ಸುದ್ದಿಯನ್ನೂ ಓದಿ: ಹೊರ ಬಂದರು ಸುರಂಗದಲ್ಲಿ ಸಿಲುಕಿದ್ದ ಎಲ್ಲ 41 ಕಾರ್ಮಿಕರು! ಫಲಿಸಿತು ಭಾರತೀಯರ ಪ್ರಾರ್ಥನೆ

Continue Reading

ದೇಶ

ಬದುಕುಳಿದು ಬಂದ ಕಾರ್ಮಿಕರಿಗೆ 1 ಲಕ್ಷ ಪರಿಹಾರ ಎಂದ ಉತ್ತರಾಖಂಡ ಸಿಎಂ ಧಾಮಿ

Uttarkashi Tunnel Rescue: ನವೆಂಬರ್ 12ರಂದು ಕುಸಿದ ಸುರಂಗ ಮಾರ್ಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು, 17 ದಿನಗಳ ಬಳಿಕ ರಕ್ಷಣೆ ಮಾಡಲಾಗಿದೆ.

VISTARANEWS.COM


on

Uttarakhand CM announces rs 1 lakh rupees to trapped labourers Who rescued after 17 days
Koo

ನವದೆಹಲಿ: ಕಾರ್ಮಿಕರನ್ನು ರಕ್ಷಣೆ ಮಾಡಿ, ಅವರನ್ನು ಅವರ ಮನೆಗೆ ತಲುಪಿಸುವ ಟಾಸ್ಕ್ ಅನ್ನು ಪ್ರಧಾನಿ ನರೇಂದ್ರ ಮೋದಿ(PM Narendra Modi) ನನಗೆ ನೀಡಿದ್ದರು ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ ಸಿಂಗ್ ಧಾಮಿ (Uttarakhand CM Pushkar Singh Dhami) ಅವರು ಹೇಳಿದ್ದಾರೆ. ಕುಸಿದ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ಯಶಸ್ವಿ ರಕ್ಷಣಾ ಕಾರ್ಯಾಚರಣೆಯ (Uttarkashi Tunnel Rescue) ಬಳಿಕ ಸುದ್ದಿಗೋಷ್ಠಿ ಮಾತನಾಡಿದ ಸಿಎಂ ಧಾಮಿ ಅವರು, ರಕ್ಷಿಸಲಾಗಿರುವ ಎಲ್ಲ ಕಾರ್ಮಿಕರನ್ನು 24 ಗಂಟೆಗಳ ಕಾಲ ಆಸ್ಪತ್ರೆಯಲ್ಲಿ ನಿಗಾವಹಿಸಲಾಗುವುದು ಎಂದು ತಿಳಿಸಿದ್ದಾರೆ(Rescue Operation).

ರಕ್ಷಣಾ ಕಾರ್ಯಾಚರಣೆಯ ಕುರಿತಂತೆ ಕೇಂದ್ರ ಹೆದ್ದಾರಿ ಇಲಾಖೆ ಸಚಿವ ನಿತಿನ್ ಗಡ್ಕರಿ, ಸಚಿವರಾದ ವಿ ಕೆ ಸಿಂಗ್ ಸೇರಿದಂತೆ ಪ್ರಧಾನಿ ಕಾರ್ಯಾಲಯವು ನಿರಂತರವಾಗಿ ನಿಗಾ ವಹಿಸಿತ್ತು. ಕಾರ್ಯಾಚರಣೆಗಾಗಿ ಇಂದೋರ್‌, ಹೈದ್ರಾಬಾದ್‌ಗಳಿಂದ ಯಂತ್ರಗಳನ್ನು ತರಸಲಾಗಿತ್ತು. ದೆಹಲಿ ಸೇರಿದಂತೆ ಬೇರೆಕಡೆಯಿಂದ ಬಂದ ಎಲ್ಲಾ ಕಾರ್ಮಿಕರಿಗೆ ಧನ್ಯವಾದ ಎಂದು ಹೇಳಿ ಪುಷ್ಕರ ಸಿಂಗ್ ಧಾಮಿ ಹೇಳಿದರು.

ಕಾರ್ಯಾಚರಣೆಯ ಆರಂಭದಲ್ಲಿ ಆರಂಭಿಕ ಹಂತದಲ್ಲಿ ನಮಗೆ ತುಂಬಾ ಭಯವಾಗಿತ್ತು. ಯಾವಾಗ ಕಾರ್ಮಿಕರ ಜೊತೆ ಮಾತುಕತೆ ಮಾಡಿದ್ವೋ ಆಗ ನಮಗೆ ಭರವಸೆ ಬಂತು, ಮೊದಲು ಚಿಕ್ಕವರನ್ನ ಕರೆತರಲು ನಿರ್ಧಾರ ಮಾಡಿದ್ವಿ ನಂತರ ದೊಡ್ಡವರು ಟೀಂ ಲೀಡ್ ಮಾಡೊ ಐದು ಜನ ಬರಲು ನಿರ್ಧಾರ ಮಾಡಿದ್ರು. ಮೊದಲು ನನಗೆ ರಕ್ಷಣಾ ಕಾರ್ಯಾಚರಣೆ ನಿಂತಾಗ ಕರೆ ಬಂದಾಗ ಭಯವಾಗಿತ್ತು. ಸದ್ಯ ಈ ಎಲ್ಲರನ್ನ 24 ಗಂಟೆ ನಿಗಾದಲ್ಲಿ ಇಡಲಾಗುವುದು ಎಂದು ಸಿಎಂ ಧಾಮಿ ತಿಳಿಸಿದರು.

ಹೊರ ಬಂದ ಯಾವ ಕಾರ್ಮಿಕರು ಸಹ ತೊಂದರೆಯಲ್ಲಿಲ್ಲ, ಎಲ್ಲರು ಆರಾಮಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ದೇಶ ಮತ್ತು ವಿದೇಶದ ಹಲವಾರು ಜನ ಕಾರ್ಯದಲ್ಲಿ ಭಾಗಿಯಾಗಿದ್ದರು ಎಂದು ಧಾಮಿ ಹೇಳಿದರು.

ಮಂದಿರ ನಿರ್ಮಾಣಕ್ಕೆ ನಾವು ತೀರ್ಮಾನ ಮಾಡಿದ್ದೆವೆ. ದೆಹಲಿ ಮತ್ತು ಗೋರಕ್ ಪುರ್ ನಿಂದ ಬಂದಿರೊ ಕಾರ್ಮಿಕರಿಂದ ರ್ಯಾಟ್ ಮೈನಿಂಗ್ ರೀತಿಯಲ್ಲಿ ರಕ್ಷಣಾ ಕಾರ್ಯಾಚರಣೆ ಆಗಿದೆ. ದೀವಾಪಳಿಯ ಮಾರನೆ ದಿನದಿಂದ ನಾನು ನಿರಂತರವಾಗಿ ಇಲ್ಲೆ ಇದ್ದೆ. ಇಲ್ಲಿಂದಲೆ ನಾನು ರಾಜ್ಯದ ಇತರ ಕೆಲಸ ಮಾಡಿದ್ದೇನೆ ಎಂದು ಅವರು ತಿಳಿಸಿದರು.

ಕಾರ್ಮಿಕರಿಗೆ ತಲಾ 1 ಲಕ್ಷ ಪರಿಹಾರ

ರಾಜ್ಯ ಸರ್ಕಾರದಿಂದ ಎಲ್ಲಾ ಕಾರ್ಮಿಕರಿಗೆ ತಲಾ ಒಂದು ಲಕ್ಷ ಘೋಷಣೆ. ನಾಳೆ ಚೆಕ್ ಮೂಲಕ ಪರಿಹಾರ ನೀಡಲಾಗುವುದು. ಎಲ್ಲರಿಗೂ 15 ದಿನ ಅಥವಾ ಒಂದು ತಿಂಗಳು ಮನೆಗೆ ಹೋಗಲು ಅವಕಾಶ ನೀಡಲಾಗುವುದು. ರಕ್ಷಣಾ ಕಾರ್ಯಾಚರಣೆಯ ವೆಚ್ಚ ಎಷ್ಟೆ ಆದ್ರು ನಾವು ನೀಡಲು ತೀರ್ಮಾನಿಸಿದ್ವಿ. ಪ್ರಧಾನಿ ಮೋದಿ ಈ ಬಗ್ಗೆ ಸೂಚನೆ ನೀಡಿದ್ದರು. ನಮಗೆ ಕಾರ್ಮಿಕರ ಜೀವ ಮುಖ್ಯವಾಗಿತ್ತು ಎಂದು ಧಾಮಿ ಅವರು ತಿಳಿಸಿದರು.

ಈ ಸುದ್ದಿಯನ್ನೂ ಓದಿ: ಹೊರ ಬಂದರು ಸುರಂಗದಲ್ಲಿ ಸಿಲುಕಿದ್ದ ಎಲ್ಲ 41 ಕಾರ್ಮಿಕರು! ಫಲಿಸಿತು ಭಾರತೀಯರ ಪ್ರಾರ್ಥನೆ

Continue Reading

ಕ್ರಿಕೆಟ್

Ind vs Aus : ಮ್ಯಾಕ್ಸ್​ವೆಲ್​ ಸ್ಫೋಟಕ ಶತಕ; 3ನೇ ಪಂದ್ಯದಲ್ಲಿ ಭಾರತಕ್ಕೆ ಸೋಲು

ind vs aus : ಭಾರತ ತಂಡ ಇನ್ನೂ ಎರಡು ಪಂದ್ಯಗಳು ಬಾಕಿ ಇರುವಂತೆಯೇ ಸರಣಿಯನ್ನು ಕೈವಶಪಡಿಸಿಕೊಂಡು ಬೀಗಿದೆ.

VISTARANEWS.COM


on

Maxwell
Koo

ಗುವಾಹಟಿ: ಮ್ಯಾಕ್ಸ್​ವೆಲ್​ (105, 48 ಎಸೆತ, 8 ಫೋರ್​, 8 ಸಿಕ್ಸರ್​) ಬಾರಿಸಿದ ಅಬ್ಬರದ ಶತಕದ ನೆರವು ಪಡೆದ ಆಸ್ಟ್ರೇಲಿಯಾ (Ind vs Aus) ತಂಡ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ವಿರುದ್ಧ 5 ವಿಕೆಟ್​ಗಳ ವಿರೋಚಿತ ಗೆಲುವು ತನ್ನದಾಗಿಸಿಕೊಂಡಿತು. ಈ ಮೂಲಕ ಪ್ರವಾಸಿ ತಂಡವು ಸರಣಿ ಭಾರತದ ಕೈವಶವಾಗುವುದನ್ನು ತಡೆಯಿತು. ಭಾರತ ತಂಡ ಸರಣಿಯಲ್ಲಿ 2-1 ಮುನ್ನಡೆಯನ್ನು ಪಡೆದುಕೊಂಡಿದೆ. ಏತನ್ಮಧ್ಯೆ, ಭಾರತ ತಂಡದ ಋತುರಾಜ್ ಗಾಯಕ್ವಾಡ್​ ಬಾರಿಸಿದ ಟಿ20 ಚೊಚ್ಚಲ ಶತಕವು ವ್ಯರ್ಥವಾಯಿತು.

ಇಲ್ಲಿನ ಬರ್ಸಪಾರ ಕ್ರಿಕೆಟ್​ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನ ಪಡೆಯಿತು. ಅಂತೆಯೇ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ ಕಳೆದುಕೊಂಡು 222 ರನ್ ಬಾರಿಸಿತು. ದೊಡ್ಡ ಗುರಿಯನ್ನು ಪಡೆದ ಆಸ್ಟ್ರೇಲಿಯಾ ತಂಡ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಕೊನೇ ಎಸೆತದಲ್ಲಿ ಫೋರ್ ಬಾರಿಸುವ ಮೂಲಕ 225 ರನ್ ಬಾರಿಸಿ ಗೆಲುವು ಸಾಧಿಸಿತು. ಆಸ್ಟ್ರೇಲಿಯಾ ತಂಡಕ್ಕೆ ಕೊನೇ ಓವರ್​ನಲ್ಲಿ 21 ರನ್ ಬೇಕಾಗಿತ್ತು. ಆದರೆ, ಬೌಲರ್ ಪ್ರಸಿದ್ಧ್​ ಕೃಷ್ಣ 23 ರನ್ ಸೋರಿಕೆ ಮಾಡಿದರು. ಮ್ಯಾಕ್ಸ್​ವೆಲ್​ ನಿರಾಯಸವಾಗಿ ಆಡಿ ತಂಡಕ್ಕೆ ಗೆಲುವು ತಂದುಕೊಟ್ಟರು.

ಮ್ಯಾಕ್ಸ್​ವೆಲ್ ಶತಕ

ದೊಡ್ಡ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ಭಾರತ ಮೊದಲ ವಿಕೆಟ್​ಗೆ 47 ರನ್ ಬಾರಿಸಿತು. 66 ರನ್​ಗೆ 2 ವಿಕೆಟ್​ ಕಳೆದುಕೊಂಡಿತು. ಆದರೆ, ಆ ಬಳಿಕ ಆಡಲು ಬಂದ ಮ್ಯಾಕ್ಸ್​ವೆಲ್​ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. 47 ಎಸೆತಗಳಲ್ಲಿ ಶತಕ ಬಾರಿಸಿದ ಅವರು ಭಾರತದ ವಿಜಯ ಕಸಿದುಕೊಂಡರು.

ಭಾರತದ ಉತ್ತಮ ಬ್ಯಾಟಿಂಗ್​

ಮೊದಲು ಬ್ಯಾಟ್ ಮಾಡಿದ ಭಾರತ 14 ರನ್​ಗಳಿಗೆ ಮೊದಲ ವಿಕೆಟ್​ ಕಳೆದುಕೊಂಡಿತು. ಹಿಂದಿನ ಪಂದ್ಯದಲ್ಲಿ ಅರ್ಧ ಶತಕ ಬಾರಿಸಿದ್ದ ಯಶಸ್ವಿ ಜೈಸ್ವಾಲ್​ 6 ರನ್​ಗೆ ಔಟಾದರು. ಆದರೆ, ಮತ್ತೊಂದು ಬದಿಯಲ್ಲಿ ಗಟ್ಟಿಯಾಗಿ ನಿಂತಿದ್ದ ಋತುರಾಜ್ ಇನಿಂಗ್ಸ್​ ಕಟ್ಟಲು ಮುಂದುವರಿಸಿದರು. ಕಳೆದ ಪಂದ್ಯದಲ್ಲಿ ಸ್ಫೋಟಕ ಅರ್ಧ ಶತಕ ಬಾರಿಸಿ ಮಿಂಚಿದ್ದ ಇಶಾನ್ ಕಿಶನ್ ಈ ಪಂದ್ಯದಲ್ಲಿ ಚಾಪು ಮೂಡಿಸಲು ವಿಫಲರಾದರು. ಅವರು ಶೂನ್ಯಕ್ಕೆ ಔಟಾಗುವ ಮೂಲಕ ಭಾರತಕ್ಕೆ ಆಘಾತ ಎದುರಾಯಿತು. 24 ರನ್​ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಬಿತ್ತು. ಆ ಬಲಿಕ ಕ್ರೀಸ್​ಗೆ ಬಂದ ನಾಯಕ ಸೂರ್ಯಕುಮಾರ್ ಯಾದವ್ ಜವಾಬ್ದಾರಿಯುತವಾಗಿ ಆಡಿದರು. ಅವರು 29 ಎಸೆತಗಳಲ್ಲಿ 39 ರನ್ ಬಾರಿಸಿದರು. ಆದರೆ, 11ನೇ ಓವರ್​ನಲ್ಲಿ ಅವರು ವಿಕೆಟ್​ ಒಪ್ಪಿಸಿದಾಗ ತಂಡದ ಮೊತ್ತ 81 ಆಗಿತ್ತು. ಬಳಿಕ ಜತೆಯಾದ ತಿಲಕ್ ವರ್ಮಾ ಹಾಗೂ ಋತುರಾಜ್ ಶತಕದ ಜತೆಯಾಟವಾಡಿದರು.

ಋತುರಾಜ್​ ಚೊಚ್ಚಲ ಟಿ20 ಶತಕ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯ ಮೂರನೇ ಹಣಾಹಣಿಯಲ್ಲಿ ಭಾರತದ ಆರಂಭಿಕ ಬ್ಯಾಟರ್​ ಋತುರಾಜ್ ಗಾಯಕ್ವಾಡ್ ಅಜೇಯ ಶತಕ ಬಾರಿಸಿದ್ದಾರೆ. ಇದು ಟಿ20 ಮಾದರಿಯಲ್ಲಿ ಅವರ ಮೊಟ್ಟ ಮೊದಲ ಶತಕವಾಗಿದೆ. ಗಾಯಕ್ವಾಡ್ ಕೇವಲ 57 ಎಸೆತಗಳಲ್ಲಿ 13 ಬೌಂಡರಿ ಮತ್ತು 7 ಸಿಕ್ಸರ್ ಸೇರಿದಂತೆ 123 ರನ್ ಗಳಿಸಿದರು. ಬಲಗೈ ಬ್ಯಾಟರ್​ 215.8 ಸ್ಟ್ರೈಕ್​ರೇಟ್​ನಲ್ಲಿ ಬ್ಯಾಟ್ ಬೀಸಿದರು. ಅವರ ಅಬ್ಬರದ ಬ್ಯಾಟಿಂಗ್​ನಿಂದಾಗಿ ಮೆನ್​ ಇನ್ ಬ್ಲೂ ನಿಗದಿತ 20 ಓವರ್​ಗಳಲ್ಲಿ 222 ರನ್ ಗಳಿಸಿತು. ಮೊದಲ 21 ಎಸೆತಗಳಿಗೆ 21 ರನ್ ಬಾರಿಸಿದ್ದ ಋತುರಾಜ್​ ಬಳಿಕ 36 ಎಸೆತಗಳಿಗೆ 102 ರನ್ ಬಾರಿಸಿ ಅಜೇಯರಾಗಿ ಉಳಿದರು.

ಭಾರತ ತಂಡದ ಪಾಲಿಗೆ ಇದು ನೆನಪಿಡಬೇಕಾದ ಇನ್ನಿಂಗ್ಸ್ ಆಗಿದೆ. ಟಿ20ಐನಲ್ಲಿ ಭಾರತ ಮೂರನೇ ಬಾರಿ 200+ ರನ್ ಗಳಿಸಿದ ಸಾಧನೆಯನ್ನೂ ಮಾಡಿದೆ. ಇದು ಭಾರತ ತಂಡ ಪಾಲಿಗೆ ವಿಶೇಷ ಸಾಧನೆಯಾಗಿದೆ.

ಮುಂದಿನ ನಾಯಕ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3ನೇ ಟಿ20 ಪಂದ್ಯದಲ್ಲಿ ಶತಕ ಬಾರಿಸಿದ ಋತುರಾಜ್ ಗಾಯಕ್ವಾಡ್ ಅವರನ್ನು ಮುಂದಿನ ನಾಯಕನನ್ನಾಗಿ ಆಯ್ಕೆ ಮಾಡಬೇಕು ಎಂದು ಅಭಿಮಾನಿಗಳು ಹೇಳಿದ್ದಾರೆ. ಆರಂಭಿಕ ಆಟಗಾರ ಎರಡನೇ ಪಂದ್ಯದಲ್ಲಿ ಅರ್ಧಶತಕವನ್ನು ಗಳಿಸಿದ್ದರು ಮತ್ತು ಈಗ ದೊಡ್ಡ ಇನಿಂಗ್ಸ್ ಮೂಲಕ ಮೂರನೇ ಪಂದ್ಯದಲ್ಲಿ ಭಾರತವನ್ನು 200 ರನ್ ಗಡಿ ದಾಟುವಂತೆ ಮಾಡಿದ್ದಾರೆ.

Ind vs Aus : ತಿಲಕ್ ವರ್ಮಾಗೆ ಇದು ಕೊನೇ ಚಾನ್ಸ್​?

ಬಲಗೈ ಆರಂಭಿಕ ಬ್ಯಾಟ್ಸ್ಮನ್ 57 ಎಸೆತಗಳಲ್ಲಿ 123 ರನ್ ಗಳಿಸುವ ಮೂಲಕ ಭಾರತವನ್ನು 10.2 ಓವರ್​ಗಳಲ್ಲಿ 3 ವಿಕೆಟ್​ಗೆ 81 ರನ್​ ಗಳಿಸಿದ್ದ ಭಾರತ ತಂಡವನ್ನು 20 ಓವರ್​ಗಳಲ್ಲಿ 3 ವಿಕೆಟ್ಗೆ 222 ರನ್​ನತ್ತ ಕೊಂಡೊಯ್ದಿದ್ದರು. ಐದನೇ ವಿಕೆಟ್ ಜೊತೆಯಾಟದಲ್ಲಿ ತಿಲಕ್ ವರ್ಮಾ ಕೇವಲ 31 ರನ್ ಗಳಿಸಿದರು. ಈ ವೇಳೆ ಋತುರಾಜ್ ಪಂದ್ಯದ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸಿದರು. ಆರಂಭಿಕ ಆಟಗಾರ ತಂಡದ 55% ರನ್ ಗಳಿಸಿದರು. ಉಳಿದವರು ಇತರ ಸೇರಿದಂತೆ 63 ಎಸೆತಗಳಲ್ಲಿ ಕೇವಲ 99 ರನ್ ಗಳಿಸಿದರು.

Continue Reading

ದೇಶ

ಸುರಂಗದಿಂದ 41 ಕಾರ್ಮಿಕರ ರಕ್ಷಣೆ; ಮುಂದೇನಾಗುತ್ತದೆ ಎಂಬುದರ ಕಂಪ್ಲೀಟ್‌ ಮಾಹಿತಿ ಇಲ್ಲಿದೆ

ಸುಮಾರು 17 ದಿನಗಳ ಸತತ ಕಾರ್ಯಾಚರಣೆ ಬಳಿಕ ಉತ್ತರಾಖಂಡ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಎಲ್ಲ ಕಾರ್ಮಿಕರನ್ನು ಹೊರಗೆ ಕರೆತರಲಾಗಿದ್ದು, ಮುಂದಿನ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

Uttarkashi Tunnel Rescue and Makeshift hospital
Koo

ಡೆಹ್ರಾಡೂನ್‌: ಉತ್ತರಾಖಂಡದ ಉತ್ತರಕಾಶಿ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ. ಸುಮಾರು 17 ದಿನ ನೂರಾರು ಸಿಬ್ಬಂದಿಯ ಫಲವಾಗಿ ಎಲ್ಲ ಕಾರ್ಮಿಕರನ್ನು ಸುರಂಗದ ಅವಶೇಷಗಳಿಂದ ರಕ್ಷಣೆ ಮಾಡಲಾಗಿದೆ. ಈಗಾಗಲೇ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ, ಕೇಂದ್ರ ಸಚಿವ ಜನರಲ್‌ ವಿ.ಕೆ. ಸಿಂಗ್‌ ಅವರು ಸ್ಥಳಕ್ಕೆ ಆಗಮಿಸಿದ್ದು, ಕಾರ್ಮಿಕರ ಆರೋಗ್ಯ ವಿಚಾರಿಸಿದ್ದಾರೆ. ಇನ್ನು, 41 ಕಾರ್ಮಿಕರನ್ನು ಸುರಂಗದಿಂದ ಹೊರತೆಗೆದರೂ ಕಾರ್ಮಿಕರ ಹಿತದೃಷ್ಟಿಯಿಂದಾಗಿ ಹಲವು ಪ್ರಕ್ರಿಯೆಗಳನ್ನು ಕೈಗೊಳ್ಳಲಾಗುತ್ತದೆ.

ಆರೋಗ್ಯ ತಪಾಸಣೆ

ಸುರಂಗ ಕುಸಿದು 12 ದಿನಗಳು ಕಳೆದಿದ್ದು, ಇಷ್ಟೂ ದಿನಗಳನ್ನು ಕಾರ್ಮಿಕರು ಸುರಂಗದ ಒಳಗಡೆಯೇ ಕಳೆದಿದ್ದಾರೆ. ಅವರು ಮಾನಸಿಕವಾಗಿ, ದೈಹಿಕವಾಗಿ ಕುಗ್ಗಿ ಹೋಗಿದ್ದಾರೆ. ಹಾಗಾಗಿ, ಸುರಂಗದಿಂದ 41 ಕಾರ್ಮಿಕರನ್ನು ಹೊರಗೆ ಕರೆತರುತ್ತಲೇ ವೈದ್ಯರ ತಂಡವು ಅವರ ಆರೋಗ್ಯ ತಪಾಸಣೆ ನಡೆಸಿದೆ. ಇದಾದ ಬಳಿಕ ಅವರನ್ನು ಚಿನ್ಯಾಲಿಸೌರ್‌ನಲ್ಲಿರುವ 41 ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನೆ ಮಾಡಲಾಗುತ್ತದೆ. ಅಲ್ಲಿಯೂ ಕಾರ್ಮಿಕರ ಆರೋಗ್ಯ ತಪಾಸಣೆ, ಅವರಿಗೆ ಮಾನಸಿಕವಾಗ ಸ್ಥೈರ್ಯ ತುಂಬುವುದು, ಆರೋಗ್ಯದ ಸ್ಥಿತಿಯ ಆಧಾರದ ಮೇಲೆ ಅವರಿಗೆ ಆಹಾರ, ಪಾನೀಯ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

ನುರಿತ ವೈದ್ಯರಿಂದ ಕೌನ್ಸೆಲಿಂಗ್‌

ಸುರಂಗದಲ್ಲಿ ಸಿಲುಕಿದ ಎಲ್ಲ ಕಾರ್ಮಿಕರು 17 ದಿನಗಳಲ್ಲಿ ಕುಗ್ಗಿ ಹೋಗಿದ್ದಾರೆ. ಅವರು ಮಾನಸಿಕವಾಗಿ ಸ್ಥೈರ್ಯ ಕಳೆದುಕೊಂಡಿದ್ದಾರೆ. ಹಾಗಾಗಿ, ಅವರು ಮತ್ತೆ ಸಾಮಾನ್ಯ ಸ್ಥಿತಿಗೆ ಮರಳಲು ನುರಿತ ವೈದ್ಯರು ಅವರೊಂದಿಗೆ ಆಪ್ತ ಸಮಾಲೋಚನೆ ನಡೆಸಲಿದ್ದಾರೆ. ಆ ಮೂಲಕ ಅವರಲ್ಲಿ ಧೈರ್ಯ ತುಂಬುತ್ತಾರೆ ಎಂದು ಮೂಲಗಳು ತಿಳಿಸಿವೆ. ಹಾಗೊಂದು ವೇಳೆ ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದರೆ ರಿಷಿಕೇಶದಲ್ಲಿರುವ ಏಮ್ಸ್‌ಗೂ ಕರೆದೊಯ್ಯಲು ಸಕಲ ವ್ಯವಸ್ಥೆ ಮಾಡಲಾಗಿದೆ. ಚಿನೂಕ್‌ ಹೆಲಿಕಾಪ್ಟರ್‌ ಕೂಡ ನೆರವಿಗೆ ಸಜ್ಜಾಗಿದೆ.

ಇದನ್ನೂ ಓದಿ: ಲೈಫ್‌ಲೈನ್ ಪೈಪ್ ಅಳವಡಿಕೆ, ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರಿಗೆ ಆಹಾರ ರವಾನೆ

ಕುಟುಂಬಸ್ಥರ ಜತೆ ಮಾತುಕತೆ

ಕುಟುಂಬಸ್ಥರ ಸಂಪರ್ಕವೇ ಇಲ್ಲದೆ ಕಾರ್ಮಿಕರು 17 ದಿನ ಕಳೆದಿದ್ದಾರೆ. ಇತ್ತ ಕುಟುಂಬಸ್ಥರು ಕೂಡ ಇವರ ಆಗಮನಕ್ಕಾಗಿ ಕಾಯುತ್ತಿದ್ದಾರೆ. ಹಾಗಾಗಿ, ವೈದ್ಯಕೀಯ ತಪಾಸಣೆ ಬಳಿಕ ಸುರಂಗದಲ್ಲಿ ಸಿಲುಕಿದ್ದವರ ಜತೆ ಅವರ ಕುಟುಂಬಸ್ಥರು ಮಾತುಕತೆ ನಡೆಸಲಿದ್ದಾರೆ. ಅವರು ಕೂಡ ಕಾರ್ಮಿಕರಿಗೆ ಧೈರ್ಯ ತುಂಬಲಿದ್ದಾರೆ. ಎಲ್ಲ ನೋವಿನಿಂದ ಅವರು ಹೊರಬರಲು ಇದು ನೆರವಾಗಲಿದೆ ಎಂದು ವೈದ್ಯಕೀಯ ಮೂಲಗಳಿಂದ ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
PM Narendra Modi phone call to workers, who rescued from collapsed tunnel
ದೇಶ42 mins ago

ಸುರಂಗದಿಂದ ರಕ್ಷಿಸಲಾದ ಕಾರ್ಮಿಕರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ!

mantralaya mutt
ಕರ್ನಾಟಕ1 hour ago

ಮಂತ್ರಾಲಯ ಮಠಕ್ಕೆ ಭಕ್ತರೊಬ್ಬರಿಂದ ಹೆಲಿಕಾಪ್ಟರ್‌ ಕೊಡುಗೆ

Uttarakhand CM announces rs 1 lakh rupees to trapped labourers Who rescued after 17 days
ದೇಶ2 hours ago

ಬದುಕುಳಿದು ಬಂದ ಕಾರ್ಮಿಕರಿಗೆ 1 ಲಕ್ಷ ಪರಿಹಾರ ಎಂದ ಉತ್ತರಾಖಂಡ ಸಿಎಂ ಧಾಮಿ

Maxwell
ಕ್ರಿಕೆಟ್2 hours ago

Ind vs Aus : ಮ್ಯಾಕ್ಸ್​ವೆಲ್​ ಸ್ಫೋಟಕ ಶತಕ; 3ನೇ ಪಂದ್ಯದಲ್ಲಿ ಭಾರತಕ್ಕೆ ಸೋಲು

Siddaramaiah
ಕರ್ನಾಟಕ2 hours ago

ಕಾರ್ಮಿಕರಿಗೆ ಮರುಹುಟ್ಟು ನೀಡಿದ ರಕ್ಷಣಾ ಸಿಬ್ಬಂದಿಗೆ ಸಿದ್ದರಾಮಯ್ಯ ಧನ್ಯವಾದ

Uttarkashi Tunnel Rescue and Makeshift hospital
ದೇಶ3 hours ago

ಸುರಂಗದಿಂದ 41 ಕಾರ್ಮಿಕರ ರಕ್ಷಣೆ; ಮುಂದೇನಾಗುತ್ತದೆ ಎಂಬುದರ ಕಂಪ್ಲೀಟ್‌ ಮಾಹಿತಿ ಇಲ್ಲಿದೆ

Top 10 news
ಕರ್ನಾಟಕ3 hours ago

VISTARA TOP 10 NEWS: ಸುರಂಗದಲ್ಲಿ ಸಿಲುಕಿದ್ದ ಎಲ್ಲ ಕಾರ್ಮಿಕರ ರಕ್ಷಣೆ, ಮಕ್ಕಳ ಮಾರಾಟ ಬೃಹತ್​ ಜಾಲ ಪತ್ತೆ ಮತ್ತಿತರ ದಿನದ ಪ್ರಮುಖ ಸುದ್ದಿಗಳು

Uttarakhand Tunnel Collapse
EXPLAINER3 hours ago

150 ಮೀಟರ್‌ ಸುರಂಗ ಕುಸಿತ, 57 ಮೀಟರ್‌ ಕೊರೆತ! 41 ಕಾರ್ಮಿಕರನ್ನು ರಕ್ಷಿಸಿದ್ದು ಹೇಗೆ?

Uttarkashi Tunnel rescue success makes us emotional says PM Narendra Modi
ದೇಶ4 hours ago

ಕಾರ್ಮಿಕರ ರಕ್ಷಣೆಯ ಯಶಸ್ಸು ನಮ್ಮನ್ನೆಲ್ಲ ಭಾವುಕರನ್ನಾಗಿಸಿದೆ ಎಂದ ಪ್ರಧಾನಿ ಮೋದಿ

Ruturaj Gaikwad
ಕ್ರಿಕೆಟ್4 hours ago

Ruturaj Gaikwad : ಆಸ್ಟ್ರೇಲಿಯಾ ವಿರುದ್ಧ ಶತಕ ಬಾರಿಸಿ ವಿಶೇಷ ಸಾಧನೆ ಮಾಡಿದ ಋತುರಾಜ್​

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ20 hours ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ1 day ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ1 day ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ1 day ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ1 day ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ1 day ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ1 day ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ2 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ2 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

BY Vijayendra and HD Kumarswamy
ಕರ್ನಾಟಕ2 days ago

BJP JDS Alliance: ಎಚ್‌ಡಿಕೆ-ವಿಜಯೇಂದ್ರ ಭೇಟಿ; 28ಕ್ಕೆ 28 ಸ್ಥಾನ ಗೆಲ್ಲುವ ಪಣ!

ಟ್ರೆಂಡಿಂಗ್‌