AAP Office: ಕೇಜ್ರಿವಾಲ್‌ಗೆ ಮತ್ತೊಂದು ಶಾಕ್;‌ ಆಪ್‌ ಕಚೇರಿ ತೆರವಿಗೆ ಸುಪ್ರೀಂ ಆದೇಶ - Vistara News

ಪ್ರಮುಖ ಸುದ್ದಿ

AAP Office: ಕೇಜ್ರಿವಾಲ್‌ಗೆ ಮತ್ತೊಂದು ಶಾಕ್;‌ ಆಪ್‌ ಕಚೇರಿ ತೆರವಿಗೆ ಸುಪ್ರೀಂ ಆದೇಶ

AAP Office: ಆಮ್‌ ಅದ್ಮಿ ಪಕ್ಷದ ಕಚೇರಿಯನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟ್‌ ಜೂನ್‌ 15ರ ಗಡುವು ನೀಡಿದೆ. ಹಾಗಾದರೆ, ಏನಿದು ಪ್ರಕರಣ? ಮುಂದೆ ಓದಿ…

VISTARANEWS.COM


on

Supreme Court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಇದುವರೆಗೆ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಎಂಟು ಬಾರಿ ಸಮನ್ಸ್‌ ನೀಡಿದ್ದಾರೆ. ಇದರ ಬೆನ್ನಲ್ಲೇ, ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದೆಹಲಿಯಲ್ಲಿರುವ ಆಮ್‌ ಆದ್ಮಿ ಪಕ್ಷದ (Aam Admy Party) ಕಚೇರಿಯನ್ನು ಜೂನ್‌ 15ರೊಳಗೆ ಸ್ಥಳಾಂತರಿಸಬೇಕು ಎಂದು ಸುಪ್ರೀಂ ಕೋರ್ಟ್‌ (Supreme Court) ಗಡುವು ನೀಡಿದೆ.

“ದೆಹಲಿಯ ರೋಸ್‌ ಅವೆನ್ಯೂ ಪ್ರದೇಶದಲ್ಲಿರುವ ಆಮ್‌ ಆದ್ಮಿ ಪಕ್ಷದ ಕಚೇರಿಯನ್ನು 2024ರ ಜೂನ್‌ 15ರೊಳಗೆ ಸ್ಥಳಾಂತರ ಮಾಡಬೇಕು. ಆಮ್‌ ಆದ್ಮಿ ಪಕ್ಷದ ಕಚೇರಿ ಇರುವ ಜಾಗವನ್ನು ದೆಹಲಿ ಹೈಕೋರ್ಟ್‌ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ವಿಸ್ತರಣೆಗಾಗಿ ನೀಡಿದೆ. ಹಾಗಾಗಿ, ಆಮ್‌ ಆದ್ಮಿ ಪಕ್ಷವು ಕಚೇರಿಯನ್ನು ಸ್ಥಳಾಂತರಿಸಬೇಕು” ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠವು ಆದೇಶ ಹೊರಡಿಸಿತು. ಲೋಕಸಭೆ ಚುನಾವಣೆ ಹೊತ್ತಿನಲ್ಲೇ ಆಪ್‌ಗೆ ಕೋರ್ಟ್‌ ಸೂಚನೆಯಿಂದ ಹಿನ್ನಡೆಯಾಗಿದೆ ಎಂದೇ ಹೇಳಲಾಗುತ್ತಿದೆ.

ಆಮ್‌ ಆದ್ಮಿ ಪಕ್ಷದ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ, “ಚುನಾವಣೆ ಸಂದರ್ಭದಲ್ಲಿ ಪಕ್ಷದ ಕಚೇರಿ ಸ್ಥಳಾಂತರಗೊಳಿಸಿ ಎಂದರೆ ಕಷ್ಟವಾಗುತ್ತದೆ. ಇದಕ್ಕೆ 2-3 ತಿಂಗಳಾದರೂ ಬೇಕಾಗುತ್ತದೆ. ದೇಶದ ಆರು ರಾಷ್ಟ್ರೀಯ ಪಕ್ಷಗಳಲ್ಲಿ ಆಮ್‌ ಆದ್ಮಿ ಪಾರ್ಟಿಯೂ ಒಂದಾಗಿದೆ. ನಮ್ಮದು ರಾಷ್ಟ್ರೀಯ ಪಕ್ಷ ಎಂಬುದಾಗಿ ಘೋಷಿಸಲಾಗಿದೆ. ಆದರೆ, ನಮಗೆ ಏನೂ ಸಿಕ್ಕಿಲ್ಲ.‌ ಎಲ್ಲ ಪಕ್ಷಗಳ ಕಚೇರಿಗಳು ಉತ್ತಮ ಸ್ಥಳಗಳಲ್ಲಿ ಇವೆ. ನಮಗೆ ಮಾತ್ರ ಬದರ್‌ಪುರದಲ್ಲಿ ಪಕ್ಷದ ಕಚೇರಿಗಾಗಿ ಜಾಗ ನೀಡಲಾಗಿದೆ” ಎಂದು ತಿಳಿಸಿದರು.

ಇದನ್ನೂ ಓದಿ: Arvind Kejriwal: ಅರವಿಂದ್‌ ಕೇಜ್ರಿವಾಲ್‌ ಉದ್ದೇಶಪೂರ್ವಕವಾಗಿ ಸಮನ್ಸ್‌ಗೆ ಉತ್ತರಿಸಿಲ್ಲ; ಕೋರ್ಟ್‌ಗೆ ವಿಶೇಷ ಅರ್ಜಿ ಸಲ್ಲಿಸಿದ ಇ.ಡಿ

ಅಭಿಷೇಕ್‌ ಮನು ಸಿಂಘ್ವಿ ವಾದ ಆಲಿಸಿದ ನ್ಯಾಯಾಲಯವು, ಜೂನ್‌ 15ರ ಗಡುವು ನೀಡಿತು. ಹಾಗೆಯೇ, ಆಮ್‌ ಆದ್ಮಿ ಪಕ್ಷದ ಕಚೇರಿಯ ಜಾಗಕ್ಕಾಗಿ ಭೂಮಿ ಹಾಗೂ ಅಭಿವೃದ್ಧಿ ಕಚೇರಿಗೆ ಅರ್ಜಿ ಸಲ್ಲಿಸಿ ಎಂದು ಕೋರ್ಟ್‌ ಸೂಚಿಸಿತು. ಈಗ ಗಡುವಿಗೂ ಮೊದಲು ಪಕ್ಷ ಕಚೇರಿಯನ್ನು ಸ್ಥಳಾಂತರ ಮಾಡುವ ಅನಿವಾರ್ಯತೆಗೆ ಆಪ್‌ ಸಿಲುಕಿದೆ. ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಈಗಾಗಲೇ ಆಮ್‌ ಆದ್ಮಿ ಪಕ್ಷದ ಸಚಿವರನ್ನು ಬಂಧಿಸಲಾಗಿದೆ. ಅರವಿಂದ್‌ ಕೇಜ್ರಿವಾಲ್‌ ಅವರಿಗೂ ಎಂಟು ಸಮನ್ಸ್‌ ನೀಡಲಾಗಿದ್ದು, ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆಗೆ ಹಾಜರಾಗುತ್ತೇನೆ ಎಂಬುದಾಗಿ ದೆಹಲಿ ಮುಖ್ಯಮಂತ್ರಿ ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IPL 2024 : ನಾಯಕರಾಗಿ ನೀವೇನು ಮಾಡಿದ್ರಿ? ಪಾಂಡ್ಯನನ್ನು ಟೀಕಿಸಿದ್ದ ವಿಲಿಯರ್ಸ್​ಗೆ ತಿರುಗೇಟು ಕೊಟ್ಟ ಗಂಭೀರ್​

IPL 2024: ಕೋಲ್ಕತಾ ನೈಟ್ ರೈಡರ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಅವರು ಇದೀಗ ಆಲ್​ರೌಂಡರ್​ ಪಾಂಡ್ಯ ಬೆಂಬಲಕ್ಕೆ ನಿಂತಿದ್ದಾರೆ. ಅವರು ಎಬಿ ಡಿವಿಲಿಯರ್ಸ್ ಮತ್ತು ಪೀಟರ್ಸನ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರಿಬ್ಬರ ಹೇಳಿಕೆಗಳು ಸರಿಯಲ್ಲ ಎಂದು ಹೇಳಿದ್ದಾರೆ. ಆ ರೀತಿ ಹೇಳುವುದಕ್ಕೆ ನಾಯಕರಾಗಿ ಅವರಿಬ್ಬರ ಟ್ರ್ಯಾಕ್ ರೆಕಾರ್ಡ್ ಎಷ್ಟಿದೆ ಎಂಬುದನ್ನು ಪ್ರಶ್ನಿಸಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ (IPL 2024) ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಹಾರ್ದಿಕ್ ಪಾಂಡ್ಯ (Hardik Pandya) ವಿಫಲಗೊಂಡಿದ್ದಾರೆ. ಪ್ಲೇ ಆಫ್ ರೇಸ್ ನಿಂದ ಹೊರಗುಳಿದ ಮೊದಲ ತಂಡ ಎಂಬ ಕುಖ್ಯಾತಿಗೆ ಮುಂಬಯಿ ತಂಡ ಪಾತ್ರವಾಗಿದೆ. ಹಾರ್ದಿಕ್ ಪಾಂಡ್ಯ ನಾಯಕನಾ ಬಳಿಕದಿಂದ ಅವರು ಸಾಕಷ್ಟು ಅವಮಾನಗಳನ್ನು ಎದುರಿಸಿದ್ದಾರೆ. ಅಭಿಮಾನಿಗಳ ಕೀಟಲೆಗಳ ಜತೆಗೆ ಅನೇಕ ಹಿರಿಯ ಆಟಗಾರರ ಮೂದಲಿಕೆಗಳನ್ನೂ ಕೇಳುವಂತಾಗಿದೆ. ಇಂಗ್ಲೆಂಡ್​ನ ಮಾಜಿ ಆಟಗಾರ ಕೆವಿನ್ ಪೀಟರ್ಸನ್ ಮತ್ತು ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಹಾರ್ದಿಕ್ ನಾಯಕತ್ವದ ಶೈಲಿಯನ್ನು ಸತತವಾಗಿ ಪ್ರಶ್ನಿಸಿದ್ದರು. ತಮ್ಮ ತಂಡದ ವೈಫಲ್ಯಕ್ಕೆ ಹಾರ್ದಿಕ್ ಕಾರಣ ಎಂದು ಇಬ್ಬರೂ ಷರಾ ಬರೆದಿದ್ದರು.

ಕೋಲ್ಕತಾ ನೈಟ್ ರೈಡರ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಅವರು ಇದೀಗ ಆಲ್​ರೌಂಡರ್​ ಪಾಂಡ್ಯ ಬೆಂಬಲಕ್ಕೆ ನಿಂತಿದ್ದಾರೆ. ಅವರು ಎಬಿ ಡಿವಿಲಿಯರ್ಸ್ ಮತ್ತು ಪೀಟರ್ಸನ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರಿಬ್ಬರ ಹೇಳಿಕೆಗಳು ಸರಿಯಲ್ಲ ಎಂದು ಹೇಳಿದ್ದಾರೆ. ಆ ರೀತಿ ಹೇಳುವುದಕ್ಕೆ ನಾಯಕರಾಗಿ ಅವರಿಬ್ಬರ ಟ್ರ್ಯಾಕ್ ರೆಕಾರ್ಡ್ ಎಷ್ಟಿದೆ ಎಂಬುದನ್ನು ಪ್ರಶ್ನಿಸಿದ್ದಾರೆ.

ಈ ಇಬ್ಬರು ನಾಯಕರಾಗಿದ್ದ ವೇಳೆ ಅವರು ಉತ್ತಮ ಪ್ರದರ್ಶನ ನೀಡಿರಲಿಲ್ಲ. ಕೆವಿನ್ ಪೀಟರ್ಸನ್ ಮತ್ತು ಎಬಿ ಡಿವಿಲಿಯರ್ಸ್ ನಾಯಕರಾಗಿ ಗಮನಾರ್ಹವಾಗಿ ಏನನ್ನೂ ಸಾಧಿಸಿಲ್ಲ. ನೀವು ಅವರ ದಾಖಲೆಗಳನ್ನು ಮೊದಲು ನೋಡಿಕೊಳ್ಳಿ. ಅದು ಚೆನ್ನಾಗಿದ್ದರೆ ಉಳಿದವರ ದಾಖಲೆಗಳನ್ನು ವಿಮರ್ಶೆ ಮಾಡುವುದು ಸೂಕ್ತ ಎಂದು ಗಂಭೀರ್ ಟೀಕಿಸಿದ್ದಾರೆ.

ಇದನ್ನೂ ಓದಿ: Team India New Head Coach: ಭಾರತ ತಂಡಕ್ಕೆ ಆಸೀಸ್ ಮಾಜಿ​ ಆಟಗಾರ ಕೋಚ್​ ಆಗುವುದು ನಿಶ್ಚಿತ

ಐಪಿಎಲ್​​ನಲ್ಲಿ ಎಬಿ ಡಿವಿಲಿಯರ್ಸ್ ಎಂದಿಗೂ ನಾಯಕತ್ವ ವಹಿಸಿಲ್ಲ. ಎಬಿಡಿ ಸಾಧನೆ ಎಂದರೆ ಸ್ವಂತ ಸ್ಕೋರ್​ಗಳು. ಅದನ್ನು ಹೊರತುಪಡಿಸಿ ಅವರು ಏನನ್ನೂ ಸಾಧಿಸಿದ್ದಾರೆ ಎಂದು ನಾನು ಭಾವಿಸುವುದಿಲ್ಲ ಎಂದು ಗಂಭೀರ್​ ಹೇಳಿದ್ದಾರೆ.

ಹಾರ್ದಿಕ್ ಪಾಂಡ್ಯ ಐಪಿಎಲ್ ವಿಜೇತ ನಾಯಕ. ಆದ್ದರಿಂದ ನೀವು ಕಿತ್ತಳೆಯನ್ನು ಕಿತ್ತಳೆಗೆ ಹೋಲಿಸಬೇಕು ಮತ್ತು ಕಿತ್ತಳೆಯನ್ನು ಸೇಬುಗಳಿಗೆ ಹೋಲಿಸಬಾರದು ಎಂದು ಗೌತಮ್ ಗಂಭೀರ್ ಹೇಳಿಕೆ ನೀಡಿದ್ದಾರೆ.

Continue Reading

Lok Sabha Election 2024

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

CM Siddaramaiah: ಚುನಾವಣಾ ಫಲಿತಾಂಶದ ನಂತರ ರಾಜ್ಯದ ಕಾಂಗ್ರೆಸ್ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಮೊದಲು ತಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡುವುದು ಒಳ್ಳೆಯದು ಎಂದು ಸಲಹೆ ನೀಡಿರುವ ಸಿಎಂ ಸಿದ್ದರಾಮಯ್ಯ, ತಮ್ಮ ಸರ್ಕಾರ ಐದು ವರ್ಷ ಸುಭದ್ರವಾಗಿರಲಿದೆ. ಈ ಬಗ್ಗೆ ಬಿಜೆಪಿ ನಾಯಕರಿಗೆ ಚಿಂತೆ ಬೇಡ. ಆದರೆ, ಚುನಾವಣೆ ಬಳಿಕ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಸ್ಫೋಟಗೊಳ್ಳಲಿದೆ. ಅಲ್ಲದೆ, ಚುನಾವಣಾ ಸೋಲನ್ನು ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಹಾಗೂ ಅವರ ಮಕ್ಕಳ ತಲೆಗೆ ಕಟ್ಟುವ ಎಲ್ಲ ಪ್ರಯತ್ನಗಳು ನಡೆದಿವೆ ಎಂದು ಆರೋಪ ಮಾಡಿದ್ದಾರೆ.

VISTARANEWS.COM


on

CM Siddaramaiah says Our government is stable for 5 years BJP will disintegrate
Koo

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ ಎಂಬ ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ (Maharashtra CM Eknath Shinde) ಹೇಳಿಕೆಯು ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ತಿರುಗೇಟು ನೀಡಿದ್ದು, ತಮ್ಮ ಸರ್ಕಾರ ಐದು ವರ್ಷ ಸುಭದ್ರವಾಗಿರಲಿದೆ. ಈ ಬಗ್ಗೆ ಬಿಜೆಪಿ ನಾಯಕರಿಗೆ ಚಿಂತೆ ಬೇಡ. ಆದರೆ, ಚುನಾವಣೆ ಬಳಿಕ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಸ್ಫೋಟಗೊಳ್ಳಲಿದೆ. ಅಲ್ಲದೆ, ಚುನಾವಣಾ ಸೋಲನ್ನು ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ (BS Yediyurappa) ಹಾಗೂ ಅವರ ಮಕ್ಕಳ ತಲೆಗೆ ಕಟ್ಟುವ ಎಲ್ಲ ಪ್ರಯತ್ನಗಳು ನಡೆದಿವೆ ಎಂದು ಹೇಳಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ನೀಡಿರುವ ಸಿಎಂ ಸಿದ್ದರಾಮಯ್ಯ, ಚುನಾವಣಾ ಫಲಿತಾಂಶದ ನಂತರ ರಾಜ್ಯದ ಕಾಂಗ್ರೆಸ್ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಮೊದಲು ತಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡುವುದು ಒಳ್ಳೆಯದು ಎಂಬ ಸಲಹೆಯನ್ನೂ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಪೋಸ್ಟ್‌ನಲ್ಲೇನಿದೆ?

“ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಚಿಂತೆ ಮಾಡುವುದು ಬಿಡಿ. ಅದು ಸುಭದ್ರವಾಗಿ ಐದು ವರ್ಷ ಪೂರ್ಣಗೊಳಿಸಲಿದೆ. ನಿಮ್ಮ ಪಕ್ಷದ ಬಗ್ಗೆ ಯೋಚನೆ ಮಾಡಿ. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತ ಅತೃಪ್ತ ನಾಯಕರೆಲ್ಲ ತಮಗೆ ಆಗಿರುವ ಅನ್ಯಾಯದ ವಿರುದ್ಧ ಸೇಡಿಗಾಗಿ ತಹತಹಿಸುತ್ತಿದ್ದಾರೆ. ಚುನಾವಣಾ ಫಲಿತಾಂಶ ಹೊರಬಿದ್ದ ಕೂಡಲೇ ಈ ಸೇಡಿನ ಜ್ವಾಲೆ ಧಗಧಗಿಸಿದರೆ ಆಶ್ಚರ್ಯ ಇಲ್ಲ.

ವಿಜಯೇಂದ್ರ ತಲೆದಂಡಕ್ಕೆ ವ್ಯೂಹ ರಚನೆ

ರಾಜ್ಯ ಬಿಜೆಪಿಯ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ ಭರದಿಂದ ನಡೆಯುತ್ತಿದೆ. ಇದಕ್ಕೆ ಆರ್.ಎಸ್.ಎಸ್ ನ ಒಂದು ಬಣದ ಆಶೀರ್ವಾದ ಕೂಡಾ ಇದೆ ಎಂದು ಹೇಳಲಾಗುತ್ತಿದೆ.

ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ನಾಯಕರು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸಿಲ್ಲ. ಈ ಚುನಾವಣೆಯಲ್ಲಿ ಬಿ.ಎಸ್. ಯಡಿಯೂರಪ್ಪ ಮತ್ತು ಮಕ್ಕಳು ಪಕ್ಷವನ್ನು ಗೆಲುವಿನ ಹಾದಿಯಲ್ಲಿ ಮುನ್ನಡೆಸದಿದ್ದರೆ ತಾವೆಲ್ಲ ಶಾಶ್ವತವಾಗಿ ಮೂಲೆ ಸೇರುವುದು ಖಚಿತ ಎನ್ನುವ ಆತಂಕದಲ್ಲಿದ್ದಾರೆ. ಇದರಿಂದಾಗಿ ಲೋಕಸಭಾ ಚುನಾವಣೆಯ ನಂತರ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ ಆಗಲಿದೆ.

ಇದನ್ನೂ ಓದಿ: HD Revanna Released: ಜೈಲಿಂದ ಬಿಡುಗಡೆಯಾದ ಎಚ್.ಡಿ. ರೇವಣ್ಣ; ನೇರವಾಗಿ ದೇವೇಗೌಡರ ಮನೆಗೆ ದೌಡು

ಹತಾಶೆಯಿಂದ ಮಾತನಾಡಿರುವ ಶಿಂಧೆ

ಚುನಾವಣಾ ಫಲಿತಾಂಶದ ನಂತರ ರಾಜ್ಯದ ಕಾಂಗ್ರೆಸ್ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಮೊದಲು ತಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡುವುದು ಒಳ್ಳೆಯದು. ಈ ಪಕ್ಷದ್ರೋಹಿ ಶಿಂಧೆ ಅವರ ಪಕ್ಷ ಈ ಚುನಾವಣೆಯಲ್ಲಿ ಧೂಳೀಪಟವಾಗಲಿರುವುದು ಮಾತ್ರವಲ್ಲ ಮಹಾರಾಷ್ಟ್ರದ ರಾಜಕೀಯದಲ್ಲಿ ಅವರು ಮೂಲೆ ಸೇರುವುದು ಖಚಿತ. ಈ ಹತಾಶೆಯಿಂದ ಏನೋ ಬಡಬಡಿಸಿದ್ದಾರೆ. ಅವರ ಮಾತನ್ನು ಗಂಭೀರವಾಗಿ ಸ್ವೀಕರಿಸುವ ಅಗತ್ಯ ಇಲ್ಲ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Hebbal flyover: ಬಿಡಿಎ ಕಾಮಗಾರಿ; ಹೆಬ್ಬಾಳ ಮೇಲ್ಸೇತುವೆಗೆ ಕೆ.ಆರ್.ಪುರಂನಿಂದ ಬರುವ ವಾಹನಗಳಿಗೆ ನಿರ್ಬಂಧ

Hebbal flyover: ಮೇ 14ರಿಂದ ಹೆಬ್ಬಾಳ ಫ್ಲೈ ಓವರ್‌ನ ಕೆ.ಆರ್. ಪುರಂ ಅಪ್ ರ‍್ಯಾಂಪ್ ಮುಚ್ಚುತ್ತಿರುವುದರಿಂದ ಕೆ.ಆರ್‌.ಪುರಂ., ನಾಗವಾರ ಕಡೆಯಿಂದ ಹೆಬ್ಬಾಳ ಮೇಲ್ಸೇತುವೆ ಕಡೆಗೆ ಬರುವ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ಮೇಲ್ಸೇತುವೆ ಮೇಲೆ ನಿರ್ಬಂಧಿಸಲಾಗಿದೆ.

VISTARANEWS.COM


on

Hebbal Flyover
Koo

ಬೆಂಗಳೂರು: ಬಿಡಿಎ ಕಾಮಗಾರಿ ಹಿನ್ನೆಲೆಯಲ್ಲಿ ನಗರದ ಹೆಬ್ಬಾಳ ಮೇಲ್ಸೇತುವೆಯ ಕೆ.ಆರ್.ಪುರಂ ಅಪ್ ರ‍್ಯಾಂಪ್ ಮುಚ್ಚಲಾಗಿದ್ದು, ನಾಗವಾರ ಕಡೆಯಿಂದ ಹೆಬ್ಬಾಳ ಮೇಲ್ಸೇತುವೆ ಕಡೆಗೆ ಬರುವ ಎಲ್ಲಾ ವಾಹನಗಳಿಗೆ ಫ್ಲೈ ಓವರ್ (Hebbal flyover) ಮೇಲೆ ಸಂಚಾರ ನಿರ್ಬಂಧಿಸಲಾಗಿದೆ. ಏಪ್ರಿಲ್ 17ರಿಂದ ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ ಎಲ್ಲಾ ವಾಹನಗಳಿಗೆ ನಿರ್ಬಂಧ ಇತ್ತು. ಈಗ ಎಲ್ಲಾ ರೀತಿಯ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಈ ಮಾರ್ಗದ ವಾಹನಗಳಿಗೆ ಪರ್ಯಾಯ ಮಾರ್ಗ ನಿಗದಿ ಮಾಡಲಾಗಿದೆ.

ಹೆಬ್ಬಾಳ ಮೇಲ್ಸೇತುವೆಗೆ ಎರಡು ಹೊಸ ಟ್ರ್ಯಾಕ್‌ಗಳನ್ನು ಸೇರಿಸಲು ಬಿ.ಡಿ.ಎ ಕಾಮಗಾರಿ ಆರಂಭಿಸಿರುವುದರಿಂದ ಈಗಾಗಲೇ ಏ.17ರಿಂದ ಕೆ.ಆರ್.ಪುರ ಲೂಪ್ ಸೇರುವ ಟ್ರ್ಯಾಕ್‌ನಲ್ಲಿ ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಇದೀಗ ಮೇ 14ರಿಂದ ಕೆ.ಆರ್.ಪುರಂ ಕಡೆಯಿಂದ ಬರುವ ಲೂಪ್ ಹೆಬ್ಬಾಳ ಫ್ಲೈ ಓವರ್‌ನ ಮುಖ್ಯ ಟ್ರ್ಯಾಕ್‌ಗೆ ಸೇರಿಸುವ ಎರಡು ಲಿಂಕ್ ಸ್ಪ್ಯಾನ್‌ಗಳನ್ನು ತೆಗೆದುಹಾಕುತ್ತಿರುವುದರಿಂದ ರ‍್ಯಾಂಪ್ ಮತ್ತು ಮುಖ್ಯ ಟ್ರ್ಯಾಕ್‌ಗೆ ಸಂಪರ್ಕ ಕಡಿತವಾಗಲಿದೆ. ಹೀಗಾಗಿ ಯಾವುದೇ ರೀತಿಯ ವಾಹನ ಸಂಚಾರ ಸಾಧ್ಯವಿರದ ಹಿನ್ನೆಲೆಯಲ್ಲಿ, ಕಾಮಗಾರಿ ಮುಕ್ತಾಯವಾಗುವವರೆಗೆ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಸಂಚಾರ ವಿಭಾಗದಿಂದ ಈ ಕೆಳಕಂಡ ಮಾರ್ಪಾಡುಗಳನ್ನು ಮಾಡಲಾಗಿದೆ.

ಇದನ್ನೂ ಓದಿ | Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಮೇ 14ರಿಂದ ಹೆಬ್ಬಾಳ ಫ್ಲೈ ಓವರ್‌ನ ಕೆ.ಆರ್. ಪುರಂ ಅಪ್ ರ‍್ಯಾಂಪ್ ಮುಚ್ಚುತ್ತಿರುವುದರಿಂದ ಕೆ.ಆರ್‌.ಪುರಂ., ನಾಗವಾರ ಕಡೆಯಿಂದ ಹೆಬ್ಬಾಳ ಮೇಲ್ಸೇತುವೆ ಕಡೆಗೆ ಬರುವ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ಮೇಲ್ಸೇತುವೆ ಮೇಲೆ ನಿರ್ಬಂಧಿಸಲಾಗಿದೆ.

ನಿರ್ಬಂಧಿಸಲಾದ ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

  1. ನಾಗವಾರ(ಔಟರ್‌ರಿಂಗ್ ರಸ್ತೆ) ಕಡೆಯಿಂದ ನಗರದ ಒಳಗೆ ಮೇಖ್ರಿ ಸರ್ಕಲ್ ಮುಖಾಂತರ ಸಂಚರಿಸುವ ವಾಹನಗಳು ಹೆಬ್ಬಾಳ ಸರ್ಕಲ್‌ನಲ್ಲಿ ಫ್ಲೈ ಓವರ್ ಕೆಳಗಿನಿಂದ ಬಲ ತಿರುವು ಪಡೆದು ಕೊಡಿಗೇಹಳ್ಳಿ ಜಂಕ್ಷನ್ ಬಳಿ ಯೂ ಟರ್ನ್ ಪಡೆದು ಸರ್ವಿಸ್ ರಸ್ತೆಯಿಂದ ಹೆಬ್ಬಾಳ ಫ್ಲೈ ಓವರ್‌ನ ರ‍್ಯಾಂಪ್ ಮುಖೇನ ನಗರದ ಕಡೆಗೆ ಚಲಿಸಬಹುದಾಗಿರುತ್ತದೆ.
  2. ಕೆ.ಆರ್. ಪುರಂ, ನಾಗವಾರ ಕಡೆಯಿಂದ ನಗರದ ಕಡೆಗೆ ಬರುವ ವಾಹನಗಳು ಈ ಕೆಳಕಂಡ ರಸ್ತೆಗಳ ಮೂಲಕ ನಗರ ಪ್ರವೇಶಿಸಬಹುದಾಗಿದೆ.
    ಐ.ಒ.ಸಿ. ಮುಕುಂದ ಥಿಯೇಟರ್ ರಸ್ತೆ,
    ಲಿಂಗರಾಜಪುರ ಮೇಲ್ಸೇತುವೆ ಮಾರ್ಗ,
    ನಾಗವಾರ ಟ್ಯಾನರಿ ರಸ್ತೆ ಮಾರ್ಗವಾಗಿ
  3. ಹೆಗಡೆನಗರ-ಥಣಿಸಂದ್ರ ಕಡೆಯಿಂದ ಬರುವ ವಾಹನಗಳು ಜಿ.ಕೆ.ವಿಕೆ-ಜಕ್ಕೂರು ರಸ್ತೆ ಮೂಲಕ ನಗರ ಪ್ರವೇಶಿಸಬಹುದಾಗಿದೆ.
  4. ಕೆ.ಆ‌ರ್.ಪುರಂ ಕಡೆಯಿಂದ ಹೆಬ್ಬಾಳ ಮಾರ್ಗವಾಗಿ ಯಶವಂತಪುರ ಕಡೆಗೆ ಚಲಿಸುವ ವಾಹನಗಳು ಹೆಬ್ಬಾಳ ಫ್ಲೈ ಓವರ್ ಕೆಳಗಡೆ ನೇರವಾಗಿ ಬಿ.ಇ.ಎಲ್. ಸರ್ಕಲ್ ತಲುಪಿ ಎಡತಿರುವು ಪಡೆದು ಸದಾಶಿವನಗರ ಜಂಕ್ಷನ್‌ನಲ್ಲಿ ಬಲತಿರುವು ಪಡೆದು ಐ.ಐ.ಎಸ್.ಸಿ. ಮುಖಾಂತರ ಚಲಿಸಬಹುದಾಗಿದೆ.
  5. ಕೆ.ಆ‌ರ್.ಪುರಂ, ಹೆಣ್ಣೂರು, ಎಚ್.ಆರ್.ಬಿ.ಆರ್. ಲೇಔಟ್, ಕೆ.ಜಿ.ಹಳ್ಳಿ, ಬಾಣಸವಾಡಿ ಕಡೆಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆ ಸಂಚರಿಸುವ ವಾಹನಗಳು ಹೆಣ್ಣೂರು-ಬಾಗಲೂರು ರಸ್ತೆಯ ಮುಖಾಂತರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಬಹುದಾಗಿದೆ.

Continue Reading

ರಾಜಕೀಯ

HD Kumaraswamy: ಎಚ್‌ಡಿಕೆ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಿಕೊಳ್ಳಲಿ: ಡಿಕೆ ಶಿವಕುಮಾರ್ ತಿರುಗೇಟು

HD Kumaraswamy: ಬೇರೆಯವರಿಂದ ಮಾತನಾಡಿಸುವ, ಪ್ರತಿಭಟನೆ ಮಾಡಿಸುವ, ಬೇರೆಯವರ ಮೇಲೆ ಅನಗತ್ಯ ಆರೋಪ ಮಾಡುವ ಅಗತ್ಯ ನನಗಿಲ್ಲ. ನಾನು ಚುನಾವಣಾ ಪ್ರಚಾರದಲ್ಲಿ ನಿರತನಾಗಿದ್ದೇನೆ. ನಾನು ರಾಜಕೀಯ ಪಕ್ಷದ ಅಧ್ಯಕ್ಷ. ಈ ಪ್ರಕರಣದಲ್ಲಿ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ. ಈಗ ಆ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ. ಕುಮಾರಸ್ವಾಮಿ ಅವರಿಗೆ ಯಾರನ್ನು ಹಿಡಿದು ಬಡಿದು ಒಳಗೆ ಹಾಕಬೇಕು ಅನ್ನಿಸುತ್ತದೋ ಅವರನ್ನು ಒಳಗೆ ಹಾಕಿಸಲಿ. ತಿಮಿಂಗಿಲಗಳನ್ನು ಅವರೇ ನುಂಗಿಕೊಳ್ಳಲಿ ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

VISTARANEWS.COM


on

DK Shivakumar hits back at HD Kumaraswamy
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜಕೀಯ ನಾಯಕರ ವಾಕ್ಸಮರ ಜೋರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಯ ಕಿಡ್ನ್ಯಾಪ್‌ ಆರೋಪದ ಮೇಲೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಬಂಧಿಸಿರುವುದು ರಾಜಕೀಯ ಪಿತೂರಿಯಿಂದ ಕೂಡಿದೆ. ಇದರ ಹಿಂದೆ ದೊಡ್ಡ ತಿಮಿಂಗಿಲವೇ ಇದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಡಿಕೆಶಿ ವಿರುದ್ಧ ಪರೋಕ್ಷ ಚಾಟಿ ಬೀಸಿದ್ದರು. ಇದಕ್ಕೆ ಈಗ ತಿರುಗೇಟು ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar), ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿಯಲಿ, ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ ಎಂದು ಹೇಳಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಕುಮಾರಸ್ವಾಮಿ ಅವರಿಗೆ ಯಾರನ್ನು ಹಿಡಿದು ಬಡಿದು ಒಳಗೆ ಹಾಕಬೇಕು ಅನ್ನಿಸುತ್ತದೋ ಅವರನ್ನು ಒಳಗೆ ಹಾಕಿಸಲಿ. ತಿಮಿಂಗಿಲಗಳನ್ನು ಅವರೇ ನುಂಗಿಕೊಳ್ಳಲಿ. ನಾನು ನಿರ್ದೇಶಕನೂ ಅಲ್ಲ, ನಿರ್ಮಾಪಕನೂ ಅಲ್ಲ. ನಾನು ಕೇವಲ ಪ್ರದರ್ಶಕ ಅಷ್ಟೇ ಎಂದು ಮಾರ್ಮಿಕವಾಗಿ ಹೇಳಿದರು.

ನನ್ನ ಹಸ್ತಕ್ಷೇಪವಿದ್ದರೆ ಬೆಲೆ ತೆರಲು ಸಿದ್ಧ

ಶಾಸಕರು, ಸಚಿವರಿಂದ ಮಾತನಾಡಿಸುತ್ತಿರುವವರು ಯಾರು ಎಂದು ಎಚ್‌.ಡಿ. ಕುಮಾರಸ್ವಾಮಿ ಅವರ ಪರೋಕ್ಷ ಆರೋಪದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಬೇರೆಯವರಿಂದ ಮಾತನಾಡಿಸುವ, ಪ್ರತಿಭಟನೆ ಮಾಡಿಸುವ, ಬೇರೆಯವರ ಮೇಲೆ ಅನಗತ್ಯ ಆರೋಪ ಮಾಡುವ ಅಗತ್ಯ ನನಗಿಲ್ಲ. ನಾನು ಚುನಾವಣಾ ಪ್ರಚಾರದಲ್ಲಿ ನಿರತನಾಗಿದ್ದೇನೆ. ನಾನು ರಾಜಕೀಯ ಪಕ್ಷದ ಅಧ್ಯಕ್ಷ. ಈ ಪ್ರಕರಣದಲ್ಲಿ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ. ಈಗ ಆ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದು ಹೇಳಿದರು.

ರೇವಣ್ಣ ಸ್ಥಿತಿ ನೋಡಿ ಬೇಸರವಾಗುತ್ತದೆ

ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ರೇವಣ್ಣ ಅವರನ್ನು ಬಂಧಿಸಲಾಗಿದೆ ಎಂಬ ಆರೋಪದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಎಚ್‌.ಡಿ. ರೇವಣ್ಣ ಅವರ ಪರಿಸ್ಥಿತಿ ನೋಡಿ ನನಗೂ ಬೇಸರವಾಗುತ್ತಿದೆ. ಅವರದು ದೊಡ್ಡ ಕುಟುಂಬ, ಈ ರೀತಿ ಆಗಬಾರದು ಎಂದು ಬಯಸುತ್ತೇನೆ. ಅವರು ನನಗೆ ಏನಾದರೂ ಬಯಸಲಿ. ಆದರೆ, ನಾನು ಮಾತ್ರ ಅವರಿಗೆ ಕೆಟ್ಟದ್ದು ಬಯಸುವುದಿಲ್ಲ. ನಾನು ಪ್ರಕೃತಿ ನಿಯಮ, ನ್ಯಾಯದ ಮೇಲೆ ನಂಬಿಕೆ ಇಟ್ಟವನು. ನಾನು ರಾಜಕೀಯ ಷಡ್ಯಂತ್ರಕ್ಕೆ ಗುರಿ ಆಗಿದ್ದವನೇ. ಜತೆಗೆ ಅದರ ನೋವು ಅನುಭವಿಸಿದವನೇ. ಆ ವೇಳೆಯಲ್ಲಿ ನಾನು ಎಷ್ಟು ಗಟ್ಟಿಯಾಗಿ, ಧೈರ್ಯವಾಗಿ, ಆತ್ಮವಿಶ್ವಾಸದಿಂದ ಇದ್ದೆ ಎಂಬುದು ನನಗೆ ಮಾತ್ರ ಗೊತ್ತಿದೆ. ದೇವರು ನನಗೆ ಎಲ್ಲ ರೀತಿಯ ರಕ್ಷಣೆ ನೀಡಿದ್ದು, ನಾನು ಬೇರೆಯವರಿಗೆ ಕೆಟ್ಟದು ಬಯಸುವುದಿಲ್ಲ. ಆದರೆ, ನನ್ನ ಬ್ರದರ್ ಕುಮಾರಣ್ಣನಿಗೆ ವಿಧಾನಸಭೆಯಲ್ಲಿ ಉತ್ತರ ನೀಡುತ್ತೇನೆ ಎಂದು ಹೇಳಿದರು.

ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ (HD Revanna Bail) ಅವರಿಗೆ ಜಾಮೀನು ಸಿಕ್ಕಿದೆ ನಿಜ. ಆದರೆ, ಇದಕ್ಕೆ ನಾನು ಸಂತೋಷ ಪಡಲಾರೆ. ಪಟಾಕಿ ಸಿಡಿಸಿ ಸಂಭ್ರಮಿಸುವ ಸಮಯವೂ ಇದಲ್ಲ ಎಂದು ಕಾರ್ಯಕರ್ತರಿಗೆ ಹೇಳಬಯಸುತ್ತೇನೆ. ತಪ್ಪಿತಸ್ಥರಿಗೆ ಶಿಕ್ಷೆ ಆದಾಗ ಸಂಭ್ರಮ ಪಡಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್‌.ಡಿ. ಕುಮಾರಸ್ವಾಮಿ, ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ವಿಡಿಯೊ ಲೀಕ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಸರಿಯಾದ ತನಿಖೆಯನ್ನು ನಡೆಸುತ್ತಿಲ್ಲ. ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ ಅವರು ಕೂಡ ಎಸ್‌ಐಟಿಯಿಂದ ಆರೋಪ ಎದುರಿಸಬೇಕಾಯಿತು. ಅವರಿಗೆ ನಿನ್ನೆ (ಸೋಮವಾರ – ಮೇ 13) ಜಾಮೀನು ಸಿಕ್ಕಿದೆ. ಅದಕ್ಕೆ ನಾನು ಸಂತೋಷವನ್ನು ಪಡುವುದಿಲ್ಲ. ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆದಾಗ ಸಂಭ್ರಮವನ್ನು ಪಡೋಣ. ಈಗ ನಡೆದಿರುವುದು ರಾಜ್ಯವೇ ತಲೆ ತಗ್ಗಿಸುವ ವಿಚಾರವಾಗಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಎಸ್‌ಐಟಿ ಅಧಿಕಾರಿಗಳ ಕಾರ್ಯವೈಖರಿ ಹೇಗಿದೆ? ಎಸ್‌ಐಟಿ ಅಧಿಕಾರಿಗಳೇ ನಿಮಗೂ ಅಕ್ಕ – ತಂಗಿ, ತಂದೆ – ತಾಯಿ ಇರುತ್ತಾರೆ. ಚುನಾವಣೆ ಹಿನ್ನೆಲೆಯಲ್ಲಿ ಯಾರು ಪೆನ್ ಡ್ರೈವ್ ಹಂಚಿದರೋ ಅವರನ್ನು ಇದುವರೆಗೂ ಮುಟ್ಟಿಲ್ಲ. ಹಾಸನ ಜಿಲ್ಲಾದ್ಯಂತ ಪೆನ್‌ ಡ್ರೈವ್‌ ಅನ್ನು ರಿಲೀಸ್‌ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್‌ನ ನವೀನ್‌ ಗೌಡ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕುತ್ತಾನೆ. ಆದರೆ, ಇಲ್ಲಿಯವರೆಗೆ ಆತನನ್ನು ಮುಟ್ಟಿಲ್ಲ. ಈ ಘಟನೆಗೆ ಕಾರಣವಾದ ವ್ಯಕ್ತಿಯನ್ನೂ ಹಿಡಿಯಲಿಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದರು.

ಸರ್ಕಾರದ ಜವಾಬ್ದಾರಿ ಅದು

ಬಿಜೆಪಿಯ ಮಾಜಿ ಶಾಸಕರೊಬ್ಬರ ಎಡಬಲಗಳನ್ನು ಹಿಡಿಯಲಾಗಿದೆ. ಇನ್ನೊಂದು ವಾರದಲ್ಲಿ ಮುಖ್ಯ ವಾದವರನ್ನು ಹಿಡಿಯಲಾಗುತ್ತೆ ಅಂದಿದ್ದಾರೆ. ಹಾಗಾದರೆ ಎಸ್ಐಟಿ ತನಿಖೆ ಹೇಗೆ ಸೋರಿಕೆ ಆಗ್ತಾ ಇದೆ? ಎಫ್‌ಐಆರ್ ಆಗಿರುವ ಒಬ್ಬ ವ್ಯಕ್ತಿಯನ್ನೂ ಹಿಡಿಯಲಿಲ್ಲ. ಖಾಸಗಿ ಚಾನಲ್‌ನಲ್ಲಿ ಒಂದೂವರೆ ಗಂಟೆಗಳ ಕಾಲ ಸಂದರ್ಶನ ಕೊಡುತ್ತಾರೆ. ನವೀನ್ ಗೌಡ ನಮ್ಮ ಪಕ್ಷದ ಶಾಸಕರಿಗೆ ಪೆನ್ ಡ್ರೈವ್ ಕೊಟ್ಟಿದ್ದೇನೆ ಎಂದು ಹೇಳುತ್ತಾನೆ. ಕೆಲವೇ ಕ್ಷಣಗಳಲ್ಲಿ ಪೆನ್ ಡ್ರೈವ್ ಬರುತ್ತದೆ ಅಂತಾ ಪೋಸ್ಟ್ ಮಾಡುತ್ತೇನೆ ಎಂದು ಹೇಳಿಕೆ ಕೊಟ್ಟಿದ್ದ ಆತನನ್ನು ಹಿಡಿದಿರಾ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ವಿಡಿಯೊದಲ್ಲಿ ಬಂದಂತಹ ಮಹಿಳೆಯರ ಕುಟುಂಬಗಳ ಬಗ್ಗೆ ಸರ್ಕಾರಕ್ಕೆ ಅನುಕಂಪ‌ ಇದೆಯಾ? ಇದರಲ್ಲಿ ಯಾವುದನ್ನೂ ವಹಿಸಿಕೊಳ್ಳುವ ಪ್ರಶ್ನೆ ಇಲ್ಲ. ಈಗಿನ ಮಾಹಿತಿ ತಂತ್ರಜ್ಞಾನದಲ್ಲಿ ಅಪರಾಧಿ, ನಿರಪರಾಧಿ ಆಗುತ್ತಾನೆ, ನಿರಪರಾಧಿ ಅಪರಾಧಿ ಆಗುತ್ತಾನೆ. ಸರ್ಕಾರಕ್ಕೆ ಬದ್ಧತೆ ಇದ್ದರೆ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸಲಿ. ನನ್ನ ಮೇಲೂ ಕಾಂಗ್ರೆಸ್‌ನವರು ಅಪಪ್ರಚಾರ ಮಾಡುತ್ತಿದ್ದಾರೆ. ಎಚ್.ಡಿ. ರೇವಣ್ಣ ಅವರ ಕುಟುಂಬವನ್ನು ಮುಗಿಸಲು ನಾನು ಪ್ರಯತ್ನ ಪಡುತ್ತಿರುವುದಾಗಿ ಸುಳ್ಳು ಹೇಳುತ್ತಿದ್ದಾರೆ.

ನಾನು ನ್ಯಾಯದ ಪರ, ಮಹಿಳೆಯರ ಪರ ಇದ್ದೇನೆ. ಈ ವಿಡಿಯೊದಲ್ಲಿ ಆ ವ್ಯಕ್ತಿಯ ಯಾವುದೇ ಚಿತ್ರಣ ಇಲ್ಲ ಅಂತ ಪತ್ರಿಕೆಯೊಂದು ಬರೆದಿದೆ. ಅಲ್ಲಿಗೆ ಈ ಪ್ರಕರಣ ಎಲ್ಲಿಗೆ ಹೋಗುತ್ತದೆ? ಎಂದು ಎಚ್.ಡಿ. ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.

ಹೆದರಿಸಿ ದೂರು ಪಡೆಯಲು ಯತ್ನ

ಎಚ್.ಡಿ. ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತವಾಗಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ಈ ರೀತಿ ಮಾಡಿದ್ದಾರೆ. ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಈಗ ಕೇಸ್ ಹಾಕಿ ಬಂಧನ ಮಾಡಿದ್ದು ಏಕೆ? ಒಂದು ತಿಂಗಳಿನಿಂದ ಏನೇನೆಲ್ಲ ಬೆಳವಣಿಗೆ ಆಯಿತು? ದೊಡ್ಡ ತಿಮಿಂಗಲದ ಆಡಿಯೊ ಬಿಟ್ಟರು ಎಂದು ದೇವರಾಜೇಗೌಡ ಅವರ ಬಂಧನ ಮಾಡಿದ್ದಾರಾ? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಪರೋಕ್ಷವಾಗಿ ಆಕ್ರೋಶವನ್ನು ಹೊರಹಾಕಿದರು. ಅಲ್ಲದೆ, ದೊಡ್ಡ ತಿಮಿಂಗಿಲವು ಸರ್ಕಾರದಲ್ಲಿದೆ. ಆ ದೊಡ್ಡ ತಿಮಿಂಗಲವನ್ನು ಹಿಡಿಯಲಾಗದೇ ಇದ್ದರೆ ಸಣ್ಣ ತಿಮಿಂಗಲಗಳನ್ನು ಹಿಡಿಯಲಾಗುತ್ತದೆಯೇ? ಈ ಸರ್ಕಾರದಲ್ಲಿ ಹಲವಾರು ತಪ್ಪುಗಳು ನಡೆದಿವೆ. ಎಚ್.ಡಿ. ರೇವಣ್ಣ ಪ್ರಕರಣದಲ್ಲಿ ನಮ್ಮ ಕುಟುಂಬವನ್ನು ಟಾರ್ಗೆಟ್‌ ಮಾಡಲಾಗಿದೆ ಎಂದು ಕಿಡಿಕಾರಿದರು.

ಸಂತ್ರಸ್ತೆಯರಿಗೆ ನ್ಯಾಯ ಸಿಗುವಂತೆ ಆಗಬೇಕು. ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಒಂದು ಮಹಿಳೆ ದೂರು ಕೊಟ್ಟಿದ್ದು, ಆ ಹೆಣ್ಣುಮಕ್ಕಳಿಗೆ ಹೆದರಿಸಿ‌ ದೂರು ಪಡೆಯಲು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಇದೆಲ್ಲ ಕೆಲವೇ ದಿನಗಳಲ್ಲಿ ಹೊರಗೆ ಬರಲಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಗೃಹ ಸಚಿವರಿಗೆ ನೇರ ಪ್ರಶ್ನೆ

ಈ ಪ್ರಕರಣದ ಬಗ್ಗೆ ಬೇಕಾಬಿಟ್ಟಿ ಹೇಳಿಕೆ ಕೊಟ್ಟರೆ ಅಂಥವರನ್ನು ವಿಚಾರಣೆಗೆ ಕರೆಸಬೇಕಾಗುತ್ತದೆ ಎಂಬ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ಗೆ ತಿರುಗೇಟು ನೀಡಿರುವ ಎಚ್.ಡಿ. ಕುಮಾರಸ್ವಾಮಿ, ಈ ಪ್ರಕರಣದ ಬಗ್ಗೆ, ವಿಡಿಯೊ ಬಗ್ಗೆ ಹೇಳಿಕೆ ನೀಡಿದ್ದ ನವೀನ್‌ ಗೌಡ ಸೇರಿ ಉಳಿದವರ ಮೇಲೆ ಯಾವ ಕ್ರಮವನ್ನು ತೆಗೆದುಕೊಂಡಿದ್ದೀರಿ? ವಿದೇಶಕ್ಕೆ ಹೋಗಿರುವ ಪ್ರಜ್ವಲ್ ಅವರನ್ನು ಏಕೆ ಕರೆಸಿಲ್ಲ? ಎಂದು ಪ್ರಶ್ನೆ ಮಾಡಿದರು.

ಪ್ರಜ್ವಲ್‌ ರೇವಣ್ಣ ನನಗೆ ಅಣ್ಣನ ಮಗನೇ ಇರಬಹುದು. ಆದರೆ, ಅವನು ಹೋಗುವಾಗ ನನ್ನನ್ನು ಕೇಳಿ ಹೋಗುತ್ತಿದ್ದನಾ? ಬೆಳೆದ ಮಕ್ಕಳು ನಮ್ಮನ್ನು ಕೇಳಿ ಹೋಗ್ತಾರಾ.? ಎಂದು ಎಚ್.ಡಿ. ಕುಮಾರಸ್ವಾಮಿ ಕೇಳಿದರು.

ಇದನ್ನೂ ಓದಿ: HD Revanna Bail: ರೇವಣ್ಣಗೆ ಜಾಮೀನು; ನಾಳೆ 11 ದಿನದ ವನವಾಸದಿಂದ ಮುಕ್ತಿ; ಬೇಲ್‌ ಸಿಗಲು ಕಾರಣವೇನು?

ಇನ್ನೆರಡು ದಿನದಲ್ಲಿ ಪರಿಷತ್‌ ಅಭ್ಯರ್ಥಿ ಆಯ್ಕೆ

ಪರಿಷತ್ ಚುನಾವಣೆಗೆ ಸಂಬಂಧಪಟ್ಟಂತೆ ಮೈತ್ರಿ ಒಪ್ಪಂದದ ಪ್ರಕಾರ ಜೆಡಿಎಸ್‌ಗೆ ಇನ್ನೊಂದು ಸೀಟ್‌ ಅನ್ನು ಬಿಟ್ಟುಕೊಡಲಾಗಿದೆ. ಅದಕ್ಕೆ ಸೂಕ್ತ ಅಭ್ಯರ್ಥಿಯ ಆಯ್ಕೆ ಆಗಬೇಕಿದೆ. ಇನ್ನೆರಡು ದಿನಗಳಲ್ಲಿ ಸಭೆ ಕರೆದು ಈ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

Continue Reading
Advertisement
kodagu News Woman gives birth to baby in ambulance
ಕೊಡಗು3 mins ago

kodagu News : ಒಮ್ಮಿಂದೊಮ್ಮೆಗೇ ಜೋರಾಯಿತು ನೋವು; ಆಂಬ್ಯುಲೆನ್ಸ್‌ನಲ್ಲೇ ಹೆರಿಗೆ ಮಾಡಿಸಿದ ಸಾಫ್ಟ್‌ ನರ್ಸ್‌

IPL 2024
ಪ್ರಮುಖ ಸುದ್ದಿ4 mins ago

IPL 2024 : ನಾಯಕರಾಗಿ ನೀವೇನು ಮಾಡಿದ್ರಿ? ಪಾಂಡ್ಯನನ್ನು ಟೀಕಿಸಿದ್ದ ವಿಲಿಯರ್ಸ್​ಗೆ ತಿರುಗೇಟು ಕೊಟ್ಟ ಗಂಭೀರ್​

Milk Products
ಆಹಾರ/ಅಡುಗೆ5 mins ago

Milk Products: ಹಾಲು, ಹಾಲಿನ ಉತ್ಪನ್ನ ಸೇವಿಸಿದರೆ ಲಾಭವೋ ನಷ್ಟವೋ?

Prajwal Revanna Case
ಕರ್ನಾಟಕ11 mins ago

Prajwal Revanna Case: ಅಶ್ಲೀಲ ವಿಡಿಯೊ ಪ್ರಕರಣ; ಲಿಖಿತ್ ಗೌಡ, ಚೇತನ್‌ಗೆ ಜಾಮೀನು ನಿರಾಕರಣೆ

Image-Fantastic Dragon Jewellery!
ಫ್ಯಾಷನ್35 mins ago

Fashion Trend: ಜೆನ್‌ ಜಿ ಹುಡುಗ-ಹುಡುಗಿಯರ ಆವರಿಸಿದ ಚಿತ್ರ-ವಿಚಿತ್ರ ಡ್ರಾಗನ್‌ ಜ್ಯುವೆಲರಿಗಳು!

Silicon City Hospital doctors successful surgery on girl suffering from Arterio Venus malpermation
ಬೆಂಗಳೂರು40 mins ago

Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

CM Siddaramaiah says Our government is stable for 5 years BJP will disintegrate
Lok Sabha Election 202446 mins ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

Team India New Head Coach
ಕ್ರೀಡೆ49 mins ago

Team India New Head Coach: ಭಾರತ ತಂಡಕ್ಕೆ ಆಸೀಸ್ ಮಾಜಿ​ ಆಟಗಾರ ಕೋಚ್​ ಆಗುವುದು ನಿಶ್ಚಿತ

Money Guide
ಮನಿ-ಗೈಡ್1 hour ago

Money Guide: ಎಫ್‌ಡಿಯಲ್ಲಿ ಹೂಡಿಕೆ ಮಾಡುವ ಮುನ್ನ ವಿವಿಧ ಬ್ಯಾಂಕ್‌ಗಳ ಬಡ್ಡಿದರ ಪರಿಶೀಲಿಸಿ

Hebbal Flyover
ಪ್ರಮುಖ ಸುದ್ದಿ1 hour ago

Hebbal flyover: ಬಿಡಿಎ ಕಾಮಗಾರಿ; ಹೆಬ್ಬಾಳ ಮೇಲ್ಸೇತುವೆಗೆ ಕೆ.ಆರ್.ಪುರಂನಿಂದ ಬರುವ ವಾಹನಗಳಿಗೆ ನಿರ್ಬಂಧ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

CM Siddaramaiah says Our government is stable for 5 years BJP will disintegrate
Lok Sabha Election 202446 mins ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20244 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ5 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು6 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ13 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ23 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ23 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ23 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ24 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ1 day ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌