Site icon Vistara News

Swamji Murder : ಆಸ್ತಿ, ಅಧಿಕಾರಕ್ಕಾಗಿ ಗಲಾಟೆ; ಸ್ವಾಮೀಜಿಯೊಬ್ಬರನ್ನು ಕೊಲೆ ಮಾಡಿದ ಸ್ವಾಮೀಜಿಗಳ ಗುಂಪು

Swamji Murder

ಕೋಲಾರ: ಆಸ್ತಿ ಮತ್ತು ಅಧಿಕಾರಕ್ಕಾಗಿ ಸ್ವಾಮೀಜಿಗಳ ನಡುವೆ ನಡೆಯುತ್ತಿದ್ದ ಗಲಾಟೆಯೊಂದು ಸ್ವಾಮೀಜಿಯೊಬ್ಬರ ಕೊಲೆಯಲ್ಲಿ (Swamji Murder) ಅಂತ್ಯಗೊಂಡಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಆನಂದ ಮಾರ್ಗ ಆಶ್ರಮದಲ್ಲಿ ಶನಿವಾರ ಈ ಘಟನೆ ನಡೆದಿದೆ. 65 ವರ್ಷದ ಚಿನ್ಮಯಾನಂದ ಸ್ವಾಮೀಜಿ ಮೃತಪಟ್ಟವರು. ಅವರನ್ನು ಸ್ವಾಮೀಜಿಗಳ ಗುಂಪೊಂದು ಬೆನ್ನಟ್ಟಿ ದೊಣ್ಣೆ ಹಾಗೂ ಬಡಿಗೆಗಳಿಂದ ಹೊಡೆದು ಕೊಲೆ ಮಾಡಿದೆ.

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಸಂತೆ ಕ್ರಾಸ್ ಬಳಿ ಇರುವ ಆನಂದ ಮಾರ್ಗ ಪಾಲಿಟೆಕ್ನಿಕ್ ಕಾಲೇಜಿನ ಬಳಿ ಕೊಲೆನಡೆದಿದೆ. ಧರ್ಮಪ್ರಾಣಾನಂದ ಸ್ವಾಮಿ, ಪ್ರಸನ್ನೇಶ್ವರನಂದ ಸ್ವಾಮಿ ಹಾಗೂ ಅರುಣ್ ಕುಮಾರ್ ಕೊಲೆ ಆರೋಪಿಗಳು. ಘಟನೆ ಬಳಿಕ ಅವರು ಪರಾರಿಯಾಗಿದ್ದಾರೆ. ಆಶ್ರಮದ ಆಸ್ತಿ ಹಾಗೂ ಅಧಿಕಾರಕ್ಕಾಗಿ ಕೊಲೆಯಾದ ಸ್ವಾಮೀಜಿ ಹಾಗೂ ಕೊಲೆ ಮಾಡಿರುವ ಗುಂಪಿನ ನಡುವೆ ಸುಮಾರು ಹಲವು ವರ್ಷಗಳಿಂದ ಗಲಾಟೆ ನಡೆಯುತ್ತಿದೆ. ಕಳೆದ ಹತ್ತು ವರ್ಷಗಳ ಹಿಂದೆ ಮೃತ ಸ್ವಾಮೀಜಿಯ ಮೇಲೆ ಗುಂಡಿನ ದಾಳಿಯೂ ನಡೆದಿತ್ತು. ಈ ವೇಳೆ ಅವರು ಪಾರಾಗಿದ್ದಾರೆ. ಶನಿವಾರ ಅವರು ಒಪ್ಪರೇ ಇರುವ ಸಮಯದಲ್ಲಿ ದಾಳಿ ಮಾಡಿದ ಆರೋಪಿಗಳು ಗಂಭೀರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮೆರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ಇದನ್ನೂ ಓದಿ: Actor Darshan: ನಾನು ದರ್ಶನ್ ಸೇಫ್ ಮಾಡ್ತಿರೋದು ಸುಳ್ಳು; ಬಿಜೆಪಿ ಶಾಸಕ ಸತೀಶ್ ರೆಡ್ಡಿ !

ಹಾವೇರಿಯಲ್ಲಿ ದೊಣ್ಣೆಯಿಂದ ಹೊಡೆದು ಪತ್ನಿಯನ್ನೇ ಕೊಂದ ವೃದ್ಧ

ಹಾವೇರಿ: ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಮಾತಿದೆ. ಆದರೆ ಈ ಮಾತಿಗೆ ತದ್ವಿರುದ್ಧ ಎಂಬಂತೆ ಸಣ್ಣದಾಗಿ ಶುರುವಾದ ಜಗಳವು ವಿಕೋಪಕ್ಕೆ ತಿರುಗಿದ್ದು, ವೃದ್ಧರೊಬ್ಬರು ತಮ್ಮ ಪತ್ನಿಯನ್ನು ದೊಣ್ಣೆಯಿಂದ ಹೊಡೆದು (Murder case) ಕೊಂದಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶಿವಪುರದಲ್ಲಿ ಘಟನೆ ನಡೆದಿದೆ.

ಪತಿ-ಪತ್ನಿ ಜಗಳವು ಕೊಲೆಯಲ್ಲಿ ಅಂತ್ಯವಾಗಿದೆ. ನಾಗವ್ವ (58) ಪತಿಯಿಂದಲೇ ಕೊಲೆಯಾದವರು. ಶೇಖಪ್ಪ (60) ಪತ್ನಿಯನ್ನೇ ಕೊಂದ ಆರೋಪಿಯಾಗಿದ್ದಾರೆ. ಕಳೆದ ರಾತ್ರಿ ನಾಗವ್ವ ಹಾಗೂ ಶೇಖಪ್ಪ ನಡುವೆ ಜಗಳ ನಡೆದಿತ್ತು. ಜಗಳ ವಿಕೋಪಕ್ಕೆ ತಿರುಗಿದ್ದು ಸಿಟ್ಟಿನಲ್ಲಿ ಶೇಖಪ್ಪ ಮನೆಯಲ್ಲಿದ್ದ ದೊಣ್ಣೆಯಿಂದ ನಾಗವ್ವಳ ತಲೆಗೆ ಹೊಡೆದಿದ್ದಾರೆ. ಒಂದೇ ಏಟಿಗೆ ಕುಸಿದು ಬಿದ್ದ ನಾಗವ್ವ ತೀವ್ರ ರಕ್ತಸ್ರಾವವಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಹಾನಗಲ್ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಹಾನಗಲ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಆರೋಪಿ ಶೇಖಪ್ಪನನ್ನು ಪೊಲೀಸರು ಬಂಧಿಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ತಂದೆಯನ್ನೇ ಕೊಂದ ಅಪ್ರಾಪ್ತ ಮಗ

ಮಗನೊಬ್ಬ ತನ್ನ ತಂದೆಗೆ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಹೊಳೆಹೊನ್ನೂರಿನ ಅರಬಿಳಚಿ ಗ್ರಾಮದಲ್ಲಿ ನಡೆದಿದೆ. ಸುಕ್ ರಾಜ್(53) ಕೊಲೆಯಾದವರು.

ಸುಕ್‌ ರಾಜ್‌ ಟ್ರ್ಯಾಕ್ಟರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಸುಕ್‌ ರಾಜ್‌ ತಮ್ಮ ಪತ್ನಿ ಜತೆಗೆ ಜಗಳವಾಡಿದ್ದರು. ಜಗಳ ವಿಚಾರಕ್ಕೆ ಸಿಟ್ಟಾ ಮಗ ತಂದೆಗೆ ಚಾಕುವಿನಿಂದ ಇರಿದು ಕೊಂದಿದ್ದಾನೆ. ಗಾಂಜಾ ಸೇವಿಸಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Exit mobile version