T20 World Cup 2024 : ವೆಸ್ಟ್​ ಇಂಡೀಸ್​ನಲ್ಲಿ ಅಪಾಯಕಾರಿ ಚಂಡಮಾರುತದಲ್ಲಿ ಸಿಲುಕಿಕೊಂಡ ಚಾಂಪಿಯನ್ ಭಾರತ ತಂಡ - Vistara News

ಪ್ರಮುಖ ಸುದ್ದಿ

T20 World Cup 2024 : ವೆಸ್ಟ್​ ಇಂಡೀಸ್​ನಲ್ಲಿ ಅಪಾಯಕಾರಿ ಚಂಡಮಾರುತದಲ್ಲಿ ಸಿಲುಕಿಕೊಂಡ ಚಾಂಪಿಯನ್ ಭಾರತ ತಂಡ

T20 World Cup 2024: ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ಭಾನುವಾರ ಬೆಳಿಗ್ಗೆ ಗ್ರೇಡ್​ 3 ಚಂಡಮಾರುತವಾಗಿ ಪರಿವರ್ತನೆಗೊಂಡಿದೆ ಭಾನುವಾರ ಬೆಳಿಗ್ಗೆಯೇ ಗಾಳಿಯು ಗಂಟೆಗೆ 120 ಕಿಲೋಮೀಟರ್​ನಷ್ಟಿತ್ತು. ಚಂಡಮಾರುತವು ಕ್ಷಣದಿಂದ ಕ್ಷಣಕ್ಕೆ ಬಲಗೊಳ್ಳುತ್ತಿದೆ.

VISTARANEWS.COM


on

T20 World Cup 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದ್ವೀಪಗಳ ರಾಷ್ಟ್ರ ವೆಸ್ಟ್​​ ಇಂಡೀಸ್​ ಗೆ ಅತ್ಯಂತ ಅಪಾಯಕಾರಿ ಬೆರಿಲ್ ಚಂಡಮಾರುತ ಅಪ್ಪಳಿಸುತ್ತಿದೆ. ಹೀಗಾಗಿ ಟೀಮ್ ಇಂಡಿಯಾ ಸದಸ್ಯರು ಹಲವಾರು ದಿನಗಳವರೆಗೆ ಬಾರ್ಬಡೋಸ್​ನಲ್ಲಿ ಸಿಲುಕಿ ಹಾಕಿಕೊಳ್ಳಬಹುದು. ಶನಿವಾರ (ಜೂನ್ 29) ನಡೆದ ವಿಶ್ವ ಕಪ್​ ಫೈನಲ್​​ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ರೋಹಿತ್ ಶರ್ಮಾ ಮತ್ತು ಅವರ ಬಳಗವು ಐಸಿಸಿ ಟಿ 20 ವಿಶ್ವಕಪ್ 2024 ಅನ್ನು (T20 World Cup 2024) ಗೆದ್ದುಕೊಂಡಿತ್ತು. ಅವರೆಲ್ಲರೂ ತಕ್ಷಣವೇ ಭಾರತಕ್ಕೆ ಮರಳಿ ಸಂಭ್ರಮಾಚರಣೆ ಮಾಡಬೇಕಾಗಿತ್ತು. ಆದರೆ, ಅಪಾಯಕಾರಿ ಚಂಡ ಮಾರುತ ಅವರ ಆಸೆಗೆ ತಣ್ಣೀರು ಎರಚಿದೆ. ಅವರು ತಡವಾಗಿ ಭಾರತ ಸೇರಬೇಕಾಗಿದೆ.

ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ಭಾನುವಾರ ಬೆಳಿಗ್ಗೆ ಗ್ರೇಡ್​ 3 ಚಂಡಮಾರುತವಾಗಿ ಪರಿವರ್ತನೆಗೊಂಡಿದೆ ಭಾನುವಾರ ಬೆಳಿಗ್ಗೆಯೇ ಮಾರುತದ ಗಂಟೆಗೆ 120 ಕಿಲೋಮೀಟರ್​ನಷ್ಟಿತ್ತು. ಚಂಡಮಾರುತವು ಕ್ಷಣದಿಂದ ಕ್ಷಣಕ್ಕೆ ಬಲಗೊಳ್ಳುತ್ತಿದೆ.

ಪೋರ್ಟೊ ರಿಕೊದ ಆಗ್ನೇಯ ಮತ್ತು ವೆನೆಜುವೆಲಾದ ಉತ್ತರಕ್ಕೆ ವಿಂಡ್ವರ್ಡ್ ದ್ವೀಪಗಳಿಗೆ ಬೆರಿಲ್ ಚಂಡಮಾರುತ ಅಪ್ಪಳಿಸಲಿದೆ ನಿರೀಕ್ಷೆಯಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ರಾತ್ರಿ 8:30 ರ ಹೊತ್ತಿಗೆ ಬೆರಿಲ್ ಬಾರ್ಬಡೋಸ್​​ನ ಪೂರ್ವ-ಆಗ್ನೇಯಕ್ಕೆ ಸುಮಾರು 355 ಮೈಲಿ ದೂರದಲ್ಲಿ ಸಾಗಲಿದೆ. ಮುಂಬರುವ ಗಂಟೆಗಳಲ್ಲಿ ಪರಿಸ್ಥಿತಿ ತೀವ್ರವಾಗಬಹುದು ಎಂದು ವರದಿಯಾಗಿದೆ.

ಕಠಿಣ ಪರಿಸ್ಥಿತಿಯಲ್ಲಿ ಟೀಮ್ ಇಂಡಿಯಾ ಸದಸ್ಯರು ದ್ವೀಪವನ್ನು ತೊರೆಯಲು ಸಾಧ್ಯವಾಗದು. ಭಾನುವಾರ, ಆಜ್ ತಕ್​ನ ವಿಕ್ರಾಂತ್ ಗುಪ್ತಾ ಪರಿಸ್ಥಿತಿಯ ಬಗ್ಗೆ ವಿವರಣೆ ನೀಡಿದ್ದಾರೆ. ಎಲ್ಲರೂ ಸದ್ಯಕ್ಕೆ ಬಾರ್ಬಡೋಸ್​ನಲ್ಲಿ ಸಿಲುಕಿದ್ದಾರೆ ಎಂದು ಹೇಳಿದ್ದಾರೆ.

ವಿಮಾನಗಳ ಹಾರಾಟ ರದ್ದು

ಈಗಾಗಲೇ ವಿಮಾನಗಳನ್ನು ರದ್ದುಪಡಿಸಲಾಗಿದೆ. ವಿಮಾನ ನಿಲ್ದಾಣವನ್ನು ಶೀಘ್ರದಲ್ಲೇ ಮುಚ್ಚಲಾಗುವುದು ಎಂದು ಮೂಲಗಳು ತಿಳಿಸಿವೆ. ಭಾರತೀಯ ತಂಡವು ದ್ವೀಪದಲ್ಲಿ ಸಿಲುಕಿಕೊಳ್ಳುತ್ತದೆ ಮತ್ತು ಪರಿಸ್ಥಿತಿ ಸುಧಾರಿಸಿದ ನಂತರವೇ ಹೊರಡಲು ಸಾಧ್ಯವಾಗುತ್ತದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Rohit Sharma : ತಲೆ ಪಕ್ಕದಲ್ಲೇ ಟ್ರೋಫಿ ಇಟ್ಟುಕೊಂಡು ನಿದ್ದೆ ಮಾಡಿದ ರೋಹಿತ್ ಶರ್ಮಾ

“ಬೆರಿಲ್ ಚಂಡಮಾರುತವು ಇಂದು ರಾತ್ರಿ ಅಥವಾ ಸೋಮವಾರ ಮುಂಜಾನೆ ಬಾರ್ಬಡೋಸ್​ಗೆ ಅಪ್ಪಳಿಸಲಿದೆ. ಭೂಕುಸಿತವು ತೀವ್ರವಾಗಿರಲಿದೆ. ಬಾರ್ಬಡೋಸ್ ವಿಮಾನ ನಿಲ್ದಾಣವನ್ನು ಮುಚ್ಚಲಾಗುವುದು ಮತ್ತು ವಿಮಾನಗಳನ್ನು ರದ್ದುಗೊಳಿಸಲಾಗುತ್ತಿದೆ. ಚಂಡಮಾರುತ ಕಡಿಮೆಯಾಗಿ ವಿಮಾನ ನಿಲ್ದಾಣ ಪುನರಾರಂಭವಾಗುವವರೆಗೂ ಭಾರತ ತಂಡವೂ ಇಲ್ಲಿ ಸಿಲುಕಿಕೊಳ್ಳಲಿದೆ. ನಾವೂ ಇಲ್ಲಿ ಸಿಲುಕಿಕೊಂಡಿದ್ದೇವೆ. ಎಲ್ಲಾ ಹೊರಹೋಗುವ ವಿಮಾನಗಳನ್ನು ರದ್ದುಗೊಳಿಸಲಾಗುತ್ತಿದೆ” ಎಂದು ಗುಪ್ತಾ ವಿವರಿಸಿದ್ದಾರೆ.

ಟೀಂ ಇಂಡಿಯಾಗೆ ಐತಿಹಾಸಿಕ ಗೆಲುವು

ದಕ್ಷಿಣ ಆಫ್ರಿಕಾವನ್ನು 7 ರನ್ ಗಳಿಂದ ಮಣಿಸಿದ ಭಾರತ 2007ರ ಬಳಿಕ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ನಂತರ ಎರಡು ಬಾರಿ ಪಂದ್ಯಾವಳಿಯನ್ನು ಗೆದ್ದ ಮೂರನೇ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಯಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ವಿರಾಟ್ ಕೊಹ್ಲಿ 76 ರನ್ ಗಳಿಸಿದರೆ, ಅಕ್ಷರ್ ಪಟೇಲ್ 47 ರನ್ ಗಳಿಸಿದರು. ಅಂತಿಮವಾಗಿ ದಕ್ಷಿಣ ಆಫ್ರಿಕಾ 169 ರನ್​ಗೆ ಹೋರಾಟ ಮುಗಿಸಿತು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

R Ashok: ಲೂಟಿಯಾದ ದಲಿತರ ಹಣವನ್ನು ಸಿದ್ದರಾಮಯ್ಯ ಜೇಬಿನಿಂದ ಕೊಡ್ತಾರಾ? ಆರ್‌. ಅಶೋಕ್‌ ಪ್ರಶ್ನೆ

R Ashok: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿರುವ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌, ಮುಖ್ಯಮಂತ್ರಿ ರಾಜೀನಾಮೆ ನೀಡದಿದ್ದಲ್ಲಿ ಬಿಜೆಪಿಯಿಂದ ಇನ್ನಷ್ಟು ತೀವ್ರ ಹೋರಾಟ ನಡೆಸಲಾಗುವುದು ಎಂದು ಅವರು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Valmiki Development Corporation Scam Opposition party leader R Ashok has demanded that CM Siddaramaiah should resign
Koo

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಾದ ಕೋಟ್ಯಂತರ ರೂಪಾಯಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇರವಾಗಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok), ನೈತಿಕತೆಯ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ರಾಜೀನಾಮೆ ನೀಡದಿದ್ದಲ್ಲಿ ಬಿಜೆಪಿಯಿಂದ ಇನ್ನಷ್ಟು ತೀವ್ರ ಹೋರಾಟ ನಡೆಸಲಾಗುವುದು ಎಂದು ಅವರು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಈ ಹಗರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಸಣ್ಣ ನೆಪ ಮಾತ್ರ. ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇರ ಪಾತ್ರವಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿಯ ಗಮನಕ್ಕೆ ಬಾರದೆ 187 ಕೋಟಿ ರೂ. ಮೊತ್ತದ ಹಗರಣ ನಡೆಯಲು ಸಾಧ್ಯವೇ ಇಲ್ಲ. ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಲೋಕಸಭಾ ಚುನಾವಣೆಗಾಗಿ ರಾಹುಲ್‌ ಗಾಂಧಿ ಬಳಗಕ್ಕೆ ಈ ಹಣ ತಲುಪಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಕಾಂಗ್ರೆಸ್‌ನ ದುರದೃಷ್ಟವೆಂಬಂತೆ ಪ್ರಾಮಾಣಿಕ ಅಧಿಕಾರಿಯ ಆತ್ಮಹತ್ಯೆಯಿಂದಾಗಿ ಹಗರಣ ಹೊರಬಂದಿದೆ. ಈಗ ಇದನ್ನು ಮುಚ್ಚಿಹಾಕಲು ಎಲ್ಲ ಬಗೆಯ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಆರ್‌.ಅಶೋಕ್‌ ಆರೋಪಿಸಿದ್ದಾರೆ.

ಇದನ್ನೂ ಓದಿ: Yuva Sambhrama 2024: ಬೆಂಗಳೂರಿನಲ್ಲಿ ಜು.12ರಿಂದ 3 ದಿನ ಯುವ ಸಂಭ್ರಮ

ಸಿಎಂ ಸಿದ್ದರಾಮಯ್ಯ ಈ ಹಗರಣ ಮಾಡಿಯೇ ತಮ್ಮ ಸ್ಥಾನ ಭದ್ರ ಮಾಡಿಕೊಳ್ಳಲು ನೋಡಿದ್ದರು. ಹೈಕಮಾಂಡ್‌ಗೆ ಕಪ್ಪ ಸಲ್ಲಿಸದೇ ಇದ್ದಲ್ಲಿ ಸಿಎಂ ಸ್ಥಾನ ಕಳೆದುಕೊಂಡು ಅದನ್ನು ಡಿ.ಕೆ. ಶಿವಕುಮಾರ್‌ಗೆ ಬಿಟ್ಟುಕೊಡಬೇಕಾಗಿತ್ತು. ಅದನ್ನು ತಪ್ಪಿಸಲು ದಲಿತರ ಹಣವನ್ನು ದುರ್ಬಳಕೆ ಮಾಡಿದ್ದಾರೆ. ಸಚಿವ ಬಿ.ನಾಗೇಂದ್ರ ಅವರಿಂದ ರಾಜೀನಾಮೆ ಪಡೆದು ತಮ್ಮ ತಲೆಯನ್ನು ಉಳಿಸಿಕೊಂಡಿದ್ದಾರೆ ಎಂದು ದೂರಿದ್ದಾರೆ.

ದಲಿತರ ಹಣ ಯಾರು ಕೊಡುತ್ತಾರೆ?

ದಲಿತರಿಗೆ ಸೇರಿದ ಒಟ್ಟು 187 ಕೋಟಿ ರೂಪಾಯಿಯನ್ನು ಬೇನಾಮಿ ಐಟಿ ಕಂಪನಿಗಳ ಖಾತೆಗೆ ವರ್ಗಾಯಿಸಲಾಗಿದೆ. ಈವರೆಗೆ ಆರೋಪಿಗಳಿಂದ 14 ಕೋಟಿ ರೂ, ಬ್ಯಾಂಕ್‌ ಖಾತೆಗಳಿಂದ 10 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ. ಉಳಿದ ಹಣವನ್ನು ಸಿಎಂ ಸಿದ್ದರಾಮಯ್ಯ ತಮ್ಮ ಜೇಬಿನಿಂದ ಕೊಡುತ್ತಾರಾ ಅಥವಾ ಕೆಪಿಸಿಸಿ ಬ್ಯಾಂಕ್‌ ಖಾತೆಯಿಂದ ಪಡೆಯಲಾಗುವುದೇ ಎಂಬ ಬಗ್ಗೆ ಮಾಹಿತಿ ಇಲ್ಲ. ನಷ್ಟವಾದ ಈ ಹಣ ದಲಿತರಿಗೆ ಸೇರಿದ್ದು, ಇದನ್ನು ವಾಪಸ್‌ ಪಡೆಯಲು ಏನು ಮಾಡುತ್ತಾರೆ ಎಂದು ಸರ್ಕಾರ ಸ್ಪಷ್ಟ ಮಾಹಿತಿ ನೀಡಬೇಕಿದೆ ಎಂದು ಆರ್‌.ಅಶೋಕ ಒತ್ತಾಯಿಸಿದ್ದಾರೆ.

ಬಾಕಿ ಹಣ ಎಲ್ಲಿ ಹೋಯಿತು? ಅಂದರೆ ಅದನ್ನು ಗುಳುಂ ಮಾಡಲಾಗಿದೆಯೇ? ನಿಗಮದ ಹಣ ಪಕ್ಕದ ತೆಲಂಗಾಣ ರಾಜ್ಯದ ಚಿನ್ನಾಭರಣ ಅಂಗಡಿಗಳು, ಮದ್ಯದ ಅಂಗಡಿಗಳು ಸೇರಿದಂತೆ ನೂರಾರು ಖಾತೆಗಳಿಗೆ ವರ್ಗಾವಣೆ ಆಗಿದೆ. ಅದು ಸಹ ಮಾರ್ಚ್ ತಿಂಗಳ ಅಂತ್ಯದಲ್ಲಿ ನಡೆದಿದೆ. ಅಂತರರಾಜ್ಯ ವಹಿವಾಟು ಆಗಿರುವ ಇಷ್ಟೊಂದು ದೊಡ್ಡ ಬಹುಕೋಟಿ ಹಗರಣವನ್ನು ಸಿಬಿಐಗೆ ಕೊಡಲು ಹಿಂದೇಟು ಯಾಕೆ? ಈ ಹಗರಣಕ್ಕೂ ತೆಲಂಗಾಣ ಚುನಾವಣೆಗೂ ಇರುವ ನಂಟು ಹೊರಬರಬಹುದು ಎಂಬ ಭಯವೇ? ಎಂದು ಅವರು ಮುಖ್ಯಮಂತ್ರಿಯವರನ್ನು ಪ್ರಶ್ನೆ ಮಾಡಿದ್ದಾರೆ.

ವಿಶೇಷ ತನಿಖಾ ದಳ ಯಾರು ಯಾರನ್ನೋ ವಿಚಾರಣೆ ಮಾಡುತ್ತಿದೆ. ಆದರೆ ಈವರೆಗೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಕೂರಿಸಿ ವಿಚಾರಣೆ ನಡೆಸಿಲ್ಲ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿಗಳ ಬಳಿ ಪೊಲೀಸರು ಯಾವುದೇ ಪ್ರಶ್ನೆಗಳನ್ನು ಕೇಳಿಲ್ಲ. ಹಣಕಾಸು ಇಲಾಖೆಯ ಗಮನಕ್ಕೆ ಬಾರದೆ ಇದು ನಡೆದಿಲ್ಲ ಎಂದಾದ ಮೇಲೆ ಸಿದ್ದರಾಮಯ್ಯ ಯಾಕೆ ಈ ಬಗ್ಗೆ ಮಾತನಾಡುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Super Computers : ಜಾಗತಿಕ ನಾಯಕತ್ವಕ್ಕಾಗಿ ಭಾರತದಲ್ಲೇ ತಯಾರಾಗುತ್ತಿದೆ ಸೂಪರ್ ಕಂಪ್ಯೂಟರ್​

ಸಿಎಂ ನಿವಾಸಕ್ಕೆ ಮುತ್ತಿಗೆ

ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಲಿಪಶು ಮಾಡಿ ದೊಡ್ಡ ತಲೆಗಳನ್ನು ರಕ್ಷಿಸಲಾಗುತ್ತಿದೆ. ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗುವವರೆಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಜುಲೈ 3 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ನಾನು ಕಾರ್ಯಕರ್ತರೊಂದಿಗೆ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದೇವೆ. ಬುಧವಾರ ಬೆಳಗ್ಗೆ 9.30ಕ್ಕೆ ಕುಮಾರಕೃಪಾ ಅತಿಥಿ ಗೃಹದಿಂದ ಮೆರವಣಿಗೆಯಲ್ಲಿ ಹೊರಟು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಆರ್‌.ಅಶೋಕ್‌ ತಿಳಿಸಿದ್ದಾರೆ.

Continue Reading

ದೇಶ

Narendra Modi: ನೀಟ್‌ ಅಕ್ರಮ ಕುರಿತು ಸಂಸತ್‌ನಲ್ಲಿ ಮೋದಿ ಪ್ರಸ್ತಾಪ; ವಿದ್ಯಾರ್ಥಿಗಳಿಗೆ ಅವರು ಹೇಳಿದ್ದಿಷ್ಟು

Narendra Modi: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಗಂಭೀರ ವಿಷಯವಾಗಿದೆ. ಇದು ನಮಗೂ ಆತಂಕ ತಂದಿದೆ. ಆದರೆ, ದೇಶದ ಯುವಕ-ಯುವತಿಯರಿಗೆ ನಮ್ಮ ಸರ್ಕಾರ ಒಂದು ಭರವಸೆ ನೀಡುತ್ತದೆ. ಯಾವುದೇ ಕಾರಣಕ್ಕೂ ನಿಮ್ಮ ಭವಿಷ್ಯಕ್ಕೆ ತೊಂದರೆಯಾಗಲು ನಾವು ಬಿಡುವುದಿಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್‌ನಲ್ಲಿ ಸ್ಪಷ್ಟಪಡಿಸಿದರು.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಹತ್ತಾರು ವಿಷಯಗಳನ್ನು ಪ್ರಸ್ತಾಪಿಸಿದರು. ಇದೇ ವೇಳೆ ನೀಟ್‌ ಅಕ್ರಮದ (NEET 2024) ಕುರಿತು ಕೂಡ ಮಾತನಾಡಿದ ಅವರು, “ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು. ನೀಟ್‌ ಪರೀಕ್ಷಾ ಕುರಿತು ಪ್ರತಿಪಕ್ಷಗಳು ಸಂಸತ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ನರೇಂದ್ರ ಮೋದಿ ಅವರು ನೀಟ್‌ ಕುರಿತು ಮಾತನಾಡಿದರು.

“ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಗಂಭೀರ ವಿಷಯವಾಗಿದೆ. ಇದು ನಮಗೂ ಆತಂಕ ತಂದಿದೆ. ಆದರೆ, ದೇಶದ ಯುವಕ-ಯುವತಿಯರಿಗೆ ನಮ್ಮ ಸರ್ಕಾರ ಒಂದು ಭರವಸೆ ನೀಡುತ್ತದೆ. ಯಾವುದೇ ಕಾರಣಕ್ಕೂ ನಿಮ್ಮ ಭವಿಷ್ಯಕ್ಕೆ ತೊಂದರೆಯಾಗಲು ನಾವು ಬಿಡುವುದಿಲ್ಲ. ನೀಟ್‌ ವಿಷಯದಲ್ಲಿ ಅಕ್ರಮ ಎಸಗಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದೆ. ಇದಕ್ಕಾಗಿ ಮುಂದಿನ ದಿನಗಳಲ್ಲೂ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಈಗಾಗಲೇ ಹಲವು ಕ್ರಮ ತೆಗೆದುಕೊಳ್ಳಲಾಗಿದೆ. ಹಾಗಾಗಿ, ದೇಶದ ಯುವಕ-ಯುವತಿಯರು ಯೋಚಿಸಬೇಕಾದ ಅವಶ್ಯಕತೆ ಇಲ್ಲ” ಎಂದು ಹೇಳಿದರು.

ಲೋಕಸಭೆ ಚುನಾವಣೆ ಗೆಲುವಿನ ಕುರಿತು ಕೂಡ ನರೇಂದ್ರ ಮೋದಿ ಮಾತನಾಡಿದರು. “ದೇಶದಲ್ಲಿ ಮೂರನೇ ಬಾರಿಗೆ ಆಡಳಿತಕ್ಕೆ ಬರುವುದು ಸುಲಭವಲ್ಲ. ಜನರ ಪರವಾದ ಆಡಳಿತವನ್ನೇ ತಪಸ್ಸಿನ ರೀತಿ ಮಾಡಿದ ಕಾರಣದಿಂದಾಗಿ ನಮಗೆ ದೇಶದ ಜನ ಮೂರನೇ ಬಾರಿಗೆ ಅವಕಾಶ ನೀಡಿದ್ದಾರೆ. ಕಳೆದ 60 ವರ್ಷಗಳಲ್ಲಿಯೇ ದೇಶದ ಜನರು ಯಾರನ್ನೂ ಮೂರನೇ ಬಾರಿಗೆ ಆಯ್ಕೆ ಮಾಡಿಲ್ಲ. ನಮ್ಮ ಮೇಲಿನ ಭರವಸೆ, ನಂಬಿಕೆಯಿಂದಲೇ ಮೂರನೇ ಬಾರಿಗೆ ಗೆಲ್ಲಿಸಿದ್ದಾರೆ” ಎಂದು ಹೇಳಿದರು.

ದೇಶದ ಜನರು ಕಾಂಗ್ರೆಸ್‌ಗೆ ಒಂದು ಜನಾದೇಶ ನೀಡಿದ್ದಾರೆ. ನೀವು ಪ್ರತಿಪಕ್ಷದಲ್ಲಿಯೇ ಕುಳಿತುಕೊಳ್ಳಿ, ಹೀಗೆಯೇ ಗಲಾಟೆ ಮಾಡಿ, ಕಿರುಚುತ್ತಲೇ ಇರಿ ಎಂಬುದು ಜನರ ಆದೇಶವಾಗಿದೆ. ಕಾಂಗ್ರೆಸ್‌ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸತತ ಮೂರನೇ ಅವಧಿಗೆ ಕಾಂಗ್ರೆಸ್‌ 100 ಸೀಟುಗಳನ್ನು ಕೂಡ ಗೆಲ್ಲುವಲ್ಲಿ ವಿಫಲವಾಗಿದೆ. ಕಾಂಗ್ರೆಸ್‌ನ ಇತಿಹಾಸದಲ್ಲಿಯೇ ಇದು ಮೂರನೇ ಅತಿ ದೊಡ್ಡ ಸೋಲಾಗಿದೆ. ಮೂರನೇ ಕಳಪೆ ಪ್ರದರ್ಶನವಾಗಿದೆ.

“ಮುಂದಿನ 5 ವರ್ಷಗಳಲ್ಲಿ ನಾವು ನಮ್ಮ ಹಿಂದಿನ ಎಲ್ಲ ರೆಕಾರ್ಡ್‌ಗಳನ್ನು ಮುರಿಯುತ್ತೇವೆ. ಇನ್ನೂ ಮೂರು ಕೋಟಿ ಬಡವರಿಗೆ ಸುಸಜ್ಜಿತವಾದ ಮನೆಗಳನ್ನು ನಿರ್ಮಿಸಿಕೊಡುತ್ತೇವೆ. ದೇಶದ ಬಡವರು, ರೈತರು, ಹೆಣ್ಣುಮಕ್ಕಳ ಸಬಲೀಕರಣಕ್ಕಾಗಿ ದುಡಿಯುತ್ತೇವೆ. ವಿಕಸಿತ ಭಾರತಕ್ಕೆ ಭದ್ರ ಬುನಾದಿಯನ್ನು ಹಾಕಿಕೊಡುತ್ತೇವೆ. ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್ ತತ್ವದಲ್ಲಿ ಆಡಳಿತ ನಡೆಸುತ್ತೇವೆ” ಎಂದು ತಿಳಿಸಿದರು.

ಇದನ್ನೂ ಓದಿ: Narendra Modi: ಅಂಬೇಡ್ಕರ್‌ರನ್ನು ಷಡ್ಯಂತ್ರದಿಂದ ಸೋಲಿಸಿದ ನೆಹರೂ; ಕಾಂಗ್ರೆಸ್‌ನಿಂದ ದಲಿತರ ಶೋಷಣೆ ಎಂದ ಮೋದಿ

Continue Reading

ಪ್ರಮುಖ ಸುದ್ದಿ

Narendra Modi: ಸಂಸತ್ತಲ್ಲಿ ಹಿಂದುಗಳಿಗೆ ಅವಮಾನ, ದೇವರಿಗೆ ಅಪಮಾನ, ಇದನ್ನು ಹಿಂದುಗಳು ಮರೆಯಲಾರರು ಎಂದ ಮೋದಿ

Narendra Modi: ಹಿಂದುಗಳ ಕುರಿತು ರಾಹುಲ್‌ ಗಾಂಧಿ ಅವರು ಸುಳ್ಳುಗಳನ್ನು ಹರಡಿಸುತ್ತಿದ್ದಾರೆ. ಹಿಂದುಗಳು ಹಿಂಸಾವಾದಿಗಳು ಎಂದು ಹೇಳುವ ಮೂಲಕ ಪ್ರಚೋದನೆ ನೀಡುತ್ತಿದೆ. ಇದು ಕಾಂಗ್ರೆಸ್‌ ಹಾಗೂ ಕಾಂಗ್ರೆಸ್‌ ನಾಯಕನ ಸಂಸ್ಕೃತಿ, ಇದು ನಿಮ್ಮ ವ್ಯಕ್ತಿತ್ವ, ಇವು ನಿಮ್ಮ ಕೆಟ್ಟ ವಿಚಾರಗಳು, ಹಿಂದುಗಳ ಮೇಲೆ ನೀವು ಹೊಂದಿರುವ ದ್ವೇಷ, ನಿಮ್ಮ ಚಟುವಟಿಕೆಗಳು ಹಿಂದುಗಳ ವಿರೋಧಿಯಾಗಿವೆ ಎಂದು ಸಂಸತ್‌ನಲ್ಲಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದರು.

VISTARANEWS.COM


on

Narendra Modi
Koo

ನವದೆಹಲಿ: ಹಿಂದುಗಳು ಹಾಗೂ ಹಿಂದುತ್ವದ ಕುರಿತು ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಸಂಸತ್‌ನಲ್ಲಿ ಮಾಡಿದ ಆರೋಪಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಲೋಕಸಭೆಯಲ್ಲಿ (Lok Sabha) ತಿರುಗೇಟು ನೀಡಿದರು. “ಹಿಂದುತ್ವವನ್ನು, ಹಿಂದುಗಳನ್ನು ಅವಮಾನಿಸುವುದೇ ಕಾಂಗ್ರೆಸ್‌ ಉದ್ದೇಶವಾಗಿದೆ. ಇದೇ ಕಾರಣಕ್ಕಾಗಿ ಕಾಂಗ್ರೆಸ್‌ ನಾಯಕರೊಬ್ಬರು ಸಂಸತ್‌ನಲ್ಲಿ ಹಿಂದುಗಳ ಕುರಿತು ಮಾತನಾಡಿದ್ದಾರೆ. ಇದನ್ನು ಇಡೀ ದೇಶವೇ ನೋಡಿದೆ” ಎಂದು ಟೀಕಿಸಿದರು.

“ಸ್ವಾಮಿ ವಿವೇಕಾನಂದರು ಯಾವ ಧರ್ಮದ ಕುರಿತು ಅಭಿಮಾನದಿಂದ ಹೇಳಿದ್ದರೋ, ಯಾವ ಧರ್ಮದ ಮಹತ್ವ, ಸಹಿಷ್ಣುತೆಯನ್ನು ಜಗತ್ತಿಗೇ ತಿಳಿಸಿದ್ದರೋ, ಅದೇ ಧರ್ಮದವರು ನಾವು. ಹಿಂದು ಧರ್ಮವು ಎಂದಿಗೂ ದ್ವೇಷ, ಹಿಂಸೆಯನ್ನು ಪ್ರಚೋದಿಸಿಲ್ಲ. ಬಿಜೆಪಿಯು ಇಂತಹ ಧರ್ಮದಲ್ಲಿ ನಂಬಿಕೆ ಇರಿಸಿದ್ದು, ರಾಜಕೀಯ ಕಾರಣಕ್ಕಾಗಿ ಕಾಂಗ್ರೆಸ್‌ ಹಿಂದುಗಳನ್ನು ಅವಮಾನಿಸುತ್ತಿದೆ. ಹಿಂದುಗಳು ಕಾಂಗ್ರೆಸ್‌ನ ಈ ಷಡ್ಯಂತ್ರವನ್ನು ತಿಳಿಯಬೇಕು. ದೇಶದಲ್ಲಿ ಹಿಂದುಗಳು ಕಾಂಗ್ರೆಸ್‌ ಬಗ್ಗೆ ಎಚ್ಚರದಿಂದ ಇರಬೇಕು” ಎಂದು ಹೇಳಿದರು.

“ಹಿಂದುಗಳ ಕುರಿತು ರಾಹುಲ್‌ ಗಾಂಧಿ ಅವರು ಸುಳ್ಳುಗಳನ್ನು ಹರಡಿಸುತ್ತಿದ್ದಾರೆ. ಹಿಂದುಗಳು ಹಿಂಸಾವಾದಿಗಳು ಎಂದು ಹೇಳುವ ಮೂಲಕ ಪ್ರಚೋದನೆ ನೀಡುತ್ತಿದೆ. ಇದು ಕಾಂಗ್ರೆಸ್‌ ಹಾಗೂ ಕಾಂಗ್ರೆಸ್‌ ನಾಯಕನ ಸಂಸ್ಕೃತಿ, ಇದು ನಿಮ್ಮ ವ್ಯಕ್ತಿತ್ವ, ಇವು ನಿಮ್ಮ ಕೆಟ್ಟ ವಿಚಾರಗಳು, ಹಿಂದುಗಳ ಮೇಲೆ ನೀವು ಹೊಂದಿರುವ ದ್ವೇಷ, ನಿಮ್ಮ ಚಟುವಟಿಕೆಗಳು ಹಿಂದುಗಳ ವಿರೋಧಿಯಾಗಿವೆ. ಇದನ್ನು ಹಿಂದುಗಳು ಗಮನಿಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ರಾಹುಲ್‌ ಗಾಂಧಿ ಹೇಳಿದ್ದೇನು?

“ಹಿಂದೂ ಧರ್ಮ ಹಾಗೂ ನಮ್ಮ ಅನೇಕ ಹಿಂದೂ ಮಹಾಪುರುಷರು ಅಹಿಂಸೆಯನ್ನು ಪ್ರತಿಪಾದಿಸುತ್ತಾರೆ. ಜೀಸಸ್‌ ಕ್ರೈಸ್ಟ್‌ ಕೂಡ ಅಹಿಂಸೆಯನ್ನೇ ಪ್ರತಿಪಾದಿಸುತ್ತಾನೆ. ಸ್ವತಃ ಕೈಯಲ್ಲಿ ತ್ರಿಶೂಲ ಹಿಡಿದಿರುವ ಮಹಾಶಿವನೂ ಅಹಿಂಸೆಯನ್ನೇ ಹೇಳುತ್ತಾನೆ. ಆದರೆ ದಿನದ 24 ಗಂಟೆ ಹಿಂದೂಗಳೆಂದು ಹೇಳುತ್ತಾ ತಿರುಗಾಡುವವರು ಹಿಂಸೆ, ಶತ್ರುತ್ವ, ಅಸತ್ಯವನ್ನೇ ಹೇಳುತ್ತಿದ್ದಾರೆ. ನೀವು ಹಿಂದೂಗಳೇ ಅಲ್ಲ” ಎಂದು ರಾಹುಲ್‌ ಗಾಂಧಿ ಸಂಸತ್‌ನಲ್ಲಿ ಹೇಳಿದ್ದರು.

ಇದನ್ನೂ ಓದಿ: Narendra Modi: ರಾಹುಲ್‌ ಗಾಂಧಿಯನ್ನು ‘ಬಾಲ ಬುದ್ಧಿಯವನು’‌ ಎಂದ ಮೋದಿ; ಅವರು ಹೇಳಿದ ‘ಸೈಕಲ್‌ ಕತೆ’ಯೂ ಇಲ್ಲಿದೆ!

Continue Reading

ಪ್ರಮುಖ ಸುದ್ದಿ

NEET PG exam : ಮೋಸ ತಡೆಯಲು ಕ್ರಮ; ನೀಟ್ ಪರೀಕ್ಷೆ ಆರಂಭಕ್ಕೆ ಕೆಲವೇ ಗಂಟೆಗಳ ಮೊದಲು ಪ್ರಶ್ನೆ ಪತ್ರಿಕೆ ತಯಾರಿ!

NEET PG exam:

VISTARANEWS.COM


on

NEET PG exam
Koo

ಬೆಂಗಳೂರು: ನೀಟ್ ಪಿಜಿ ಪರೀಕ್ಷೆಯ ಬಗ್ಗೆ ಚರ್ಚಿಸಲು ಗೃಹ ಸಚಿವಾಲಯದ ಐ 4 ಸಿ ವಿಭಾಗದಲ್ಲಿ ಸೈಬರ್ ಸೆಲ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆದಿದ್ದು, ಪರೀಕ್ಷಾ ಮೋಸ ತಪ್ಪಿಸಲು ಆರಂಭಕ್ಕೆ ಕೆಲವೇ ಗಂಟೆಗಳ ಮೊದಲು ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸುವ ನಿರ್ಧಾರಕ್ಕೆ ಬರಲಾಗಿದೆ. ವಿವಿಧ ಸರ್ಕಾರಿ ಸಂಸ್ಥೆಗಳು ಸಂಭಾವ್ಯ ಲೋಪದೋಷಗಳನ್ನು ಮೌಲ್ಯಮಾಪನ ಮಾಡಲಾಗುತ್ತಿದ್ದು ಆಗಿರುವ ಅಕ್ರಮಗಳ ಕುರಿತ ತನಿಖೆ ಬಹುತೇಕ ಪೂರ್ಣಗೊಂಡಿದೆ. ಸಭೆಯ ಮೂಲಗಳ ಪ್ರಕಾರ ಪರೀಕ್ಷೆ ಒಂದು ತಿಂಗಳೊಳಗೆ ನಡೆಸುವ ಸಾಧ್ಯತೆಯಿದೆ.

ನೀಟ್ ಪಿಜಿ ಪರೀಕ್ಷೆಯ ಪರಿಷ್ಕೃತ ದಿನಾಂಕವನ್ನು ಈ ವಾರದ ಅಂತ್ಯದ ವೇಳೆಗೆ ಘೋಷಿಸುವ ನಿರೀಕ್ಷೆಯಿದೆ, ಪರೀಕ್ಷೆಗಳನ್ನು ಆಗಸ್ಟ್​​ನಲ್ಲಿ ನಡೆಸುವ ಸಾಧ್ಯತೆಯಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ಇಸ್ರೋದ ಮಾಜಿ ಅಧಿಕಾರಿ ಡಾ.ರಾಧಾಕೃಷ್ಣನ್ ನೇತೃತ್ವದ ತಜ್ಞರ ಸಮಿತಿಗೆ ಪರೀಕ್ಷೆ ನಡೆಸುವ ಹೊಣೆಗಾರಿಕೆ ವಹಿಸಲಾಗಿದೆ. ನೀಟ್ ಪಿಜಿ ನಡೆಸುವ ಜವಾಬ್ದಾರಿಯನ್ನು ಹೊಂದಿರುವ ರಾಷ್ಟ್ರೀಯ ಪರೀಕ್ಷಾ ಮಂಡಳಿ (ಎನ್​ಟಿಎ ) ಪ್ರಸ್ತುತ ಹೊಸ ದಿನಾಂಕಗಳನ್ನು ಅಂತಿಮಗೊಳಿಸುವ ಮೊದಲು ಈ ಪರಿಶೀಲನಾ ಸಮಿತಿಯ ಅನುಮೋದನೆಗಾಗಿ ಕಾಯುತ್ತಿದೆ.

ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ಪರೀಕ್ಷೆಯ ಸಮಗ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ನಂತರ ಜೂನ್ 23 ರಂದು ನಿಗದಿಯಾಗಿದ್ದ ನೀಟ್ ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿತ್ತು.

ನೀಟ್ ಪಿಜಿ ಪರೀಕ್ಷೆ 2024 ರ ಹೊಸ ಮಾಹಿತಿಗಳೇನು?

ಗೃಹ ಸಚಿವಾಲಯದ ಐ 4 ಸಿ ವಿಭಾಗದಲ್ಲಿ ಮಹತ್ವದ ಸಭೆ ನಡೆದಿದೆ ಸೈಬರ್ ಸೆಲ್​​ನ ಅಧಿಕಾರಿಗಳನ್ನು ಒಳಗೊಂಡಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು. ಭದ್ರತೆ ಖಚಿತಪಡಿಸಿಕೊಳ್ಳಲು ಪರೀಕ್ಷೆಗೆ ಕೆಲವೇ ಗಂಟೆಗಳ ಮೊದಲು ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಅಂತಿಮಗೊಳಿಸಲಾಗುವುದು ಮೊದಲ ನಿರ್ಧಾರವಾಗಿದೆ.

ಇದನ್ನೂ ಓದಿ: Super Computers : ಜಾಗತಿಕ ನಾಯಕತ್ವಕ್ಕಾಗಿ ಭಾರತದಲ್ಲೇ ತಯಾರಾಗುತ್ತಿದೆ ಸೂಪರ್ ಕಂಪ್ಯೂಟರ್​

ಯಾವುದೇ ಸಂಭಾವ್ಯ ಲೋಪದೋಷಗಳು ಅಥವಾ ನ್ಯೂನತೆಗಳನ್ನು ಗುರುತಿಸಲು ಮತ್ತು ಪರಿಹರಿಸಲು ಸರ್ಕಾರ ವಿವಿಧ ಏಜೆನ್ಸಿಗಳೊಂದಿಗೆ ಕೆಲಸ ಮಾಡುತ್ತಿದೆ. ಗೃಹ ಸಚಿವಾಲಯ, ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು ಆರೋಗ್ಯ ಸಚಿವಾಲಯವು ಇಡೀ ಪ್ರಕ್ರಿಯೆಯ ಸಮಗ್ರ ಮೌಲ್ಯಮಾಪನ ನಡೆಸಲಿದೆ.

ಹಿಂದಿನ ಅಕ್ರಮಗಳ ಕುರಿತ ತನಿಖೆ ಅಂತಿಮ ಹಂತದಲ್ಲಿದೆ, ಅದರ ವರದಿ ಶೀಘ್ರದಲ್ಲೇ ಸಲ್ಲಿಕೆಯಾಗಲಿದೆ.

Continue Reading
Advertisement
K Annamalai
ರಾಜಕೀಯ5 mins ago

K Annamalai: ಕೆ ಅಣ್ಣಾಮಲೈ ಯುಕೆ ಫೆಲೋಶಿಪ್‌ಗೆ ಆಯ್ಕೆ; ಬಿಜೆಪಿ ರಾಜ್ಯಾಧ್ಯಕ್ಷತೆಗೆ ರಾಜೀನಾಮೆ?

karnataka weather Forecast
ಮಳೆ8 mins ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

Snake Bites
ವೈರಲ್ ನ್ಯೂಸ್12 mins ago

Viral News: ಒಂದು ತಿಂಗಳಲ್ಲಿ ಐದು ಬಾರಿ ಹಾವು ಕಡಿತ; ಪವಾಡ ರೀತಿಯಲ್ಲಿ ವ್ಯಕ್ತಿ ಬಜಾವ್‌!

Uttar Pradesh Stampede
ದೇಶ41 mins ago

Uttar Pradesh stampede: ಹತ್ರಾಸ್‌ ಕಾಲ್ತುಳಿತ ದುರ್ಘಟನೆ; ಸಾವಿನ ಸಂಖ್ಯೆ 60ಕ್ಕೆ ಏರಿಕೆ

Valmiki Development Corporation Scam Opposition party leader R Ashok has demanded that CM Siddaramaiah should resign
ಕರ್ನಾಟಕ47 mins ago

R Ashok: ಲೂಟಿಯಾದ ದಲಿತರ ಹಣವನ್ನು ಸಿದ್ದರಾಮಯ್ಯ ಜೇಬಿನಿಂದ ಕೊಡ್ತಾರಾ? ಆರ್‌. ಅಶೋಕ್‌ ಪ್ರಶ್ನೆ

Actor Darshan
ಸಿನಿಮಾ48 mins ago

Actor Darshan: ದರ್ಶನ್ ಭೇಟಿ ಮಾಡಿದ ಪವಿತ್ರಾ ಗೌಡ ಆಪ್ತೆ; ನಟ ಧನ್ವೀರ್‌ಗೆ ಸಿಗದ ಅವಕಾಶ!

Narendra Modi
ದೇಶ50 mins ago

Narendra Modi: ನೀಟ್‌ ಅಕ್ರಮ ಕುರಿತು ಸಂಸತ್‌ನಲ್ಲಿ ಮೋದಿ ಪ್ರಸ್ತಾಪ; ವಿದ್ಯಾರ್ಥಿಗಳಿಗೆ ಅವರು ಹೇಳಿದ್ದಿಷ್ಟು

New Trend
ಫ್ಯಾಷನ್51 mins ago

New Trend: ಕೋಟ್‌ ರಹಿತ ಪ್ಯಾಂಟ್ ಸೂಟ್ಸ್ ಇದೀಗ ಹೊಸ ಟ್ರೆಂಡ್!

Quick start for online ticketing for trekking says minister Eshwar Khandre
ಕರ್ನಾಟಕ51 mins ago

Eshwar Khandre: ಚಾರಣಪಥಗಳ ಆನ್‌ಲೈನ್ ಟಿಕೆಟ್‌ಗೆ ಶೀಘ್ರ ಚಾಲನೆ; ಸಚಿವ ಈಶ್ವರ ಖಂಡ್ರೆ

Narendra Modi
ಪ್ರಮುಖ ಸುದ್ದಿ1 hour ago

Narendra Modi: ಸಂಸತ್ತಲ್ಲಿ ಹಿಂದುಗಳಿಗೆ ಅವಮಾನ, ದೇವರಿಗೆ ಅಪಮಾನ, ಇದನ್ನು ಹಿಂದುಗಳು ಮರೆಯಲಾರರು ಎಂದ ಮೋದಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ8 mins ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ1 day ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌