T20 World Cup 2024 : ಒಂದೇ ಒಂದು ಸೋಲು ಕಾಣದೆ ವಿಶ್ವ ಕಪ್ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ ತಂಡ - Vistara News

ಪ್ರಮುಖ ಸುದ್ದಿ

T20 World Cup 2024 : ಒಂದೇ ಒಂದು ಸೋಲು ಕಾಣದೆ ವಿಶ್ವ ಕಪ್ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ ತಂಡ

T20 World Cup 2024 :

VISTARANEWS.COM


on

T20 World Cup 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವೆಸ್ಟ್​ಇಂಡೀಸ್​ನ ಬಾರ್ಬಡೋಸ್​ನಲ್ಲಿ ಜೂನ್ 29 ರಂದು ನಡೆದ ಐಸಿಸಿ ಪುರುಷರ ವಿಶ್ವಕಪ್ 2024 ರ (T20 World Cup 2024) ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಏಡೆನ್ ಮಾರ್ಕ್ರಮ್ ನೇತೃತ್ವದ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳಿಂದ ಸೋಲಿಸಿ ಚಾಂಪಿಯನ್ ಆಯಿತು. ಇದರೊಂದಿಗೆ ಭಾರತವು 13 ವರ್ಷಗಳ ವಿಶ್ವ ಕಪ್ ಹಾಗೂ 17 ವರ್ಷಗಳ ಟಿ20 ವಿಶ್ವ ಕಪ್​ ಕೊರತೆಯನ್ನು ನೀಗಿಸಿತು. ಅಂದ ಹಾಗೆ ಭಾರತ ತಂಡ ಈ ಬಾರಿಯ ಟ್ರೋಫಿಯನ್ನು ಅಜೇಯವಾಗಿ ಗೆದ್ದಿದೆ. ಟೂರ್ನಿಯುದ್ದಕ್ಕೂ ಪಂದ್ಯಾವಳಿಯುದ್ದಕ್ಕೂ ಎಲ್ಲಾ ಪಂದ್ಯಗಳನ್ನು ಗೆದ್ದು ಟ್ರೋಫಿ ಗೆದ್ದ ಮೊದಲ ತಂಡ ಎಂಬ ಇತಿಹಾಸ ಬರೆದಿದೆ.

ಗುಂಪು ಹಂತದಲ್ಲಿ ಭಾರತ ಆಡಿದ ಎಲ್ಲಾ ಮೂರು ಪಂದ್ಯಗಳನ್ನು ಗೆದ್ದು ಅಜೇಯವಾಗಿ ಉಳಿದಿತ್ತು. ಒಂದು ಪಂದ್ಯ ಮಳೆಯಿಂದಾಗಿ ಕೊಚ್ಚಿಹೋಗಿತ್ತು. ಗಯಾನಾದಲ್ಲಿ ನಡೆದ ಸೆಮಿಫೈನಲ್​​ನಲ್ಲಿ ಗೆಲ್ಲುವ ಮೊದಲು ಭಾರತವು ಸೂಪರ್ ಎಂಟರ ಹಂತದ ಎಲ್ಲಾ ಪಂದ್ಯಗಳನ್ನು ಗೆದ್ದಿತ್ತು. ಸೆಮಿಯಲ್ಲಿ ಇಂಗ್ಲೆಂಡ್ ಅನ್ನು 68 ರನ್​ಗಳಿಂದ ಸೋಲಿಸಿತ್ತು.

ಇದನ್ನೂ ಓದಿ:T20 World Cup 2024 : ಕಣ್ಣೀರ ಧಾರೆ; ಟ್ರೋಫಿ ಗೆದ್ದ ಖುಷಿಗೆ ಕಣ್ಣೀರು ಸುರಿಸಿದ ಪಾಂಡ್ಯ, ರೋಹಿತ್, ಕೊಹ್ಲಿ, ಸಿರಾಜ್​ 

ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಆಡಿದ ತಂಡವು ರನ್​ ಗುರಿಯನ್ನು ಗುರಿಯನ್ನು ರಕ್ಷಿಸಿ ಗೆದ್ದಿರುವುದು ಇದು ಮೂರನೇ ಬಾರಿ. 2007ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ಈ ಸಾಧನೆ ಮಾಡಿದ್ದರೆ, 2012ರಲ್ಲಿ ವೆಸ್ಟ್ ಇಂಡೀಸ್ ಈ ಸಾಧನೆ ಮಾಡಿತ್ತು.

ಭಾರತ-ದಕ್ಷಿಣ ಆಫ್ರಿಕಾ ಫೈನಲ್ ಪಂದ್ಯ ಹೀಗಿತ್ತು

ಮೊದಲು ಬ್ಯಾಟಿಂಗ್ ಮಾಡಿದ ಭಾರತ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿ ದಕ್ಷಿಣ ಆಫ್ರಿಕಾಕ್ಕೆ 177 ರನ್ ಗಳ ಗುರಿ ನೀಡಿತು. ಇದು ಟಿ20 ವಿಶ್ವಕಪ್ ಫೈನಲ್ನಲ್ಲಿ ದಾಖಲಾದ ಗರಿಷ್ಠ ಮೊತ್ತವಾಗಿದೆ. ಭಾರತದ ಪರ ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 76 ರನ್ ಗಳಿಸಿದರು, ಇದು ಟಿ 20 ವಿಶ್ವಕಪ್ ಫೈನಲ್​​​ನಲ್ಲಿ ಗರಿಷ್ಠ ಆಟಗಾರರೊಬ್ಬರ ವೈಯಕ್ತಿಕ ಸ್ಕೋರ್ ಆಗಿದೆ.

177 ರನ್​ಗಳ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ಭಾರತದ ಪರ ಹಾರ್ದಿಕ್ ಪಾಂಡ್ಯ 3, ಜಸ್ಪ್ರೀತ್ ಬುಮ್ರಾ ಹಾಗೂ ಅರ್ಷ್ದೀಪ್ ಸಿಂಗ್ ತಲಾ 2, ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು.

15 ವಿಕೆಟ್ ಕಬಳಿಸಿದ ಜಸ್ಪ್ರೀತ್ ಬುಮ್ರಾ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. 2024 ರ ಟಿ 20 ವಿಶ್ವಕಪ್​​ನಲ್ಲಿ ಬೌಲಿಂಗ್ ಎಕಾನಮಿ 4.17 ಆಗಿತ್ತು/ ಇದು ಟಿ 20 ವಿಶ್ವಕಪ್ ಪಂದ್ಯಾವಳಿಗಳಲ್ಲಿ ಇದುವರೆಗಿನ ಅತ್ಯುತ್ತಮ ಸಾಧನೆಯಅಗಿದೆ.

ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ

‘ಪ್ಲೇಯರ್ ಆಫ್ ದಿ ಮ್ಯಾಚ್’ ಪ್ರಶಸ್ತಿ ಪಡೆದ ನಂತರ ಭಾರತದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಟಿ 20 ಐ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. “ಇದು ನನ್ನ ಕೊನೆಯ ಟಿ 20 ವಿಶ್ವಕಪ್, ಇದನ್ನು ನಾವು ಸಾಧಿಸಲು ಬಯಸಿದ್ದೆವು. ಒಂದು ದಿನ ನೀವು ರನ್ ಗಳಿಸಲು ಸಾಧ್ಯವಿಲ್ಲ ಎಂದು ನಿಮಗೆ ಅನಿಸುತ್ತದೆ. ಮತ್ತೊಂದು ದಿನ ಸಂಭವಿಸುತ್ತದೆ. ದೇವರು ದೊಡ್ಡವನು. ಇದು ಭಾರತಕ್ಕಾಗಿ ಆಡುವ ನನ್ನ ಕೊನೆಯ ಟಿ 20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆವು, “ಎಂದು ಕೊಹ್ಲಿ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಅಂಕಣ

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್ ಫೈನಲ್; ಒಂದು ಪಂದ್ಯ – ಹಲವು ಪಾಠ

ರಾಜಮಾರ್ಗ ಅಂಕಣ: ತಾಳ್ಮೆಯಿಂದ ನರಗಳನ್ನು ಬಿಗಿ ಹಿಡಿದು ಆಡಿದರೆ ಯಾವ ಪಂದ್ಯವನ್ನೂ ಗೆಲ್ಲಲು ಸಾಧ್ಯ ಎನ್ನುವುದು ಕ್ರಿಕೆಟ್ ಕಲಿಸಿದ ಜೀವನದ ಪಾಠ. ಕ್ಲಾಸೆನ್ ಮತ್ತು ಕ್ಲಿಂಟನ್ ಡಿಕಾಕ್ ಅವರು ಕ್ರೀಸಿನಲ್ಲಿ ಗಟ್ಟಿ ನಿಂತು ಆಡುತ್ತಿದ್ದಾಗ ದಕ್ಷಿಣ ಆಫ್ರಿಕಾ ಗೆದ್ದೇ ಬಿಟ್ಟಿತು ಎಂದು ಭಾವಿಸಿಕೊಂಡು ಟಿವಿ ಆಫ್ ಮಾಡಿ ಮಲಗಿದವರಿಗೆ ಇದು Life Time Lesson!

VISTARANEWS.COM


on

ರಾಜಮಾರ್ಗ ಅಂಕಣ virat kohli rohit sharma
Koo

ಚಾಂಪಿಯನ್ ಆಟಗಾರರು ಮತ್ತು ಟೀಮ್ ಇಂಡಿಯಾ ಗೆಲುವು

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಭಾವುಕ ಕ್ಷಣಗಳನ್ನು ಭಾರತದ ಕೋಟಿ ಕೋಟಿ ಕ್ರಿಕೆಟ್ (Cricket) ಅಭಿಮಾನಿಗಳು ಮರೆಯಲು ಸಾಧ್ಯವೇ ಇಲ್ಲ.

ಸೂರ್ಯಕುಮಾರ್ (Suryakumar yadav) ಹಿಡಿದ ಅದ್ಭುತವಾದ ಕ್ಯಾಚ್, ವಿರಾಟ್ ಕೊಹ್ಲಿಯ ಹೀರೋಯಿಕ್ ಇನ್ನಿಂಗ್ಸ್, ಬುಮ್ರಾ, ಹಾರ್ದಿಕ್, ಆರ್ಷದೀಪ್ ಬೌಲಿಂಗ್‌ನಲ್ಲಿ ತೋರಿದ ಮ್ಯಾಜಿಕ್, ರೋಹಿತ್ ಶರ್ಮಾ (Rohit Sharma) ತೋರಿಸಿದ ತಾಳ್ಮೆ, ಅಕ್ಷರ್ ಪಟೇಲ್ ಆಲ್ರೌಂಡ್ ಆಟ……ಇದ್ಯಾವುದೂ ನಮಗೆ ಮರೆತು ಹೋಗೋದಿಲ್ಲ.

ಭರವಸೆ ನಮ್ಮನ್ನು ಗೆಲ್ಲಿಸಿತು

ಚಾಂಪಿಯನ್ ಆಟಗಾರರ ಮೇಲೆ ಟೀಮ್ ಇಂಡಿಯಾ ಮತ್ತು ಕೋಚ್ ರಾಹುಲ್ ದ್ರಾವಿಡ್ ಇಟ್ಟ ಭರವಸೆ ನಿಜ ಆಗಿದೆ. ವಿಶ್ವಕಪ್ಪಿನ ಹಿಂದಿನ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಸತತವಾಗಿ ವೈಫಲ್ಯ ಕಂಡಾಗ ಆತನಿಗೆ ವಿಶ್ರಾಂತಿ ಕೊಡಿ, ಆತನಿಗೆ ಓಪನಿಂಗ್ ಸ್ಲಾಟ್ ಬೇಡವೇ ಬೇಡ, ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗಿಗೆ ಇಳಿಸಿ ಎಂದೆಲ್ಲ ಟ್ರೋಲ್ ಮಾಡಿದವರಿಗೆ ಈ ಬಾರಿ ಸರಿಯಾದ ಉತ್ತರ ದೊರೆತಿದೆ. ಚಾಂಪಿಯನ್ ಆಟಗಾರ ಯಾವತ್ತೂ ದೊಡ್ಡ ಮ್ಯಾಚಲ್ಲಿ ಮಿಂಚು ಹರಿಸುತ್ತಾನೆ.

ಚಾಂಪಿಯನ್, ನಿನ್ನ ಆಟ ಆಡುತ್ತಾ ಹೋಗು!

ಆತ ಸತತವಾಗಿ ಸೋತು ಅಳುತ್ತಾ ಕೂತಾಗ ರಾಹುಲ್ ದ್ರಾವಿಡ್ ಹೇಳಿದ ಮಾತನೊಮ್ಮೆ ಸೂಕ್ಷ್ಮವಾಗಿ ಗಮನಿಸಿ.
‘ಚಾಂಪಿಯನ್, ನಿನ್ನ ಆಟ ಆಡುತ್ತಾ ಹೋಗು. ನಮಗೆ ನಂಬಿಕೆ ಇದೆ’ ಎಂದು. ಆತನ ಬ್ಯಾಟಿಂಗ್ ಕ್ರಮಾಂಕವನ್ನು ಕೂಡ ಬದಲಾವಣೆ ಮಾಡದೆ ಆತನ ನೆರವಿಗೆ ನಿಂತವರು ಟೀಮ್ ಮ್ಯಾನೇಜ್ಮೆಂಟ್ ಮತ್ತು ಟೀಮ್ ಕೋಚ್ ರಾಹುಲ್ ದ್ರಾವಿಡ್. ಚಾಂಪಿಯನ್ ವಿರಾಟ್ ಕೊಹ್ಲಿ ಇಂದು ಆವರ
ನಂಬಿಕೆಯನ್ನು ಉಳಿಸಿಕೊಂಡಿದ್ದಾರೆ.

ಹಾರ್ದಿಕ ಪಾಂಡ್ಯನನ್ನು ಟ್ರೋಲ್ ಮಾಡಿದವರಿಗೆ ಈ ಗೆಲುವು ಅರ್ಪಣೆ!

ಅದೇ ರೀತಿ ನಮ್ಮ ಹಾರ್ದಿಕ್ ಪಾಂಡ್ಯನ ಬಗ್ಗೆ ಗಮನಿಸಿ. ಈ ಬಾರಿಯ ಐಪಿಎಲ್ ಪಂದ್ಯಗಳಲ್ಲಿ ಆತನು ಸತತವಾಗಿ ಬೈಗುಳ ತಿಂದ ಆಟಗಾರ. ಆತ ವಿಶ್ವಕಪ್ ತಂಡಕ್ಕೆ ಆಯ್ಕೆ ಆದಾಗ ಎಷ್ಟೊಂದು ಜನರು ರೊಚ್ಚಿಗೆದ್ದು ಬೈದವರಿದ್ದರು! ಆತನ ಖಾಸಗಿ ಜೀವನದ ಮೇಲೆ ಕೆಸರು ಎರಚುವ ಕೆಲಸ ಕೂಡ ಆಗಿತ್ತು. ಅಂತವನ ಕೈಗೆ ಪಂದ್ಯದ 20ನೇ ಓವರು ಕೊಡುವುದೆಂದರೆ? ಟೀಮ್ ಇಂಡಿಯಾ ಮತ್ತು ಕೋಚ್ ರಾಹುಲ್ ದ್ರಾವಿಡ್ ಆತನ ಮೇಲಿಟ್ಟ ನಂಬಿಕೆಗೆ ಆತನು ಎಷ್ಟೊಂದು ಅದ್ಭುತವಾಗಿ ಉತ್ತರ ಕೊಟ್ಟು ಬಿಟ್ಟ ನೋಡಿ. ಚಾಂಪಿಯನ್ ಎಂದಿಗೂ ಚಾಂಪಿಯನ್ ಆಗಿರುತ್ತಾನೆ.

ರೋಹಿತ್ ಶರ್ಮಾ ನಾಯಕತ್ವವನ್ನು ಪ್ರಶ್ನೆ ಮಾಡಿದವರಿಗೆ, ಆತ ಸ್ವಾರ್ಥಿ ಎಂದು ಟೀಕೆ ಮಾಡಿವರಿಗೆ ಇಲ್ಲಿ ಸರಿಯಾದ ಉತ್ತರ ದೊರೆತಿದೆ. ಟೀಮ್ ಆಡಳಿತ ಯುವ ಆಟಗಾರರ ಮೇಲೆ ತೋರಿದ ಕಾಳಜಿಯಿಂದ ಶಿವಂ ದುಬೆ, ಆಕ್ಷರ್ ಪಟೇಲ್ ಮೊದಲಾದ ಯಂಗಸ್ಟರ್ಸ್ ಒಳ್ಳೆ ಆಟಗಾರರಾಗಿ ಮಿಂಚಲು ಸಾಧ್ಯವಾಯಿತು. ಅವರಿಗೆ ಖಚಿತವಾಗಿ ಒಳ್ಳೆಯ ಭವಿಷ್ಯವಿದೆ.

ಒಂದು ಪಂದ್ಯ – ಹಲವು ಪಾಠ!

ಭಾರತ ಟಿ 20 ವಿಶ್ವಕಪ್ಪನ್ನು ಅರ್ಹವಾಗಿ ಗೆದ್ದು ಬೀಗಿತು, ವಿರಾಟ್ ಕೊಹ್ಲಿ (Virat Kohli) ಮತ್ತು ರಾಹುಲ್ ದ್ರಾವಿಡ್ (Rahul Dravid) ಅವರಿಗೆ ಗೆಲುವಿನ ವಿದಾಯ ನೀಡಿತು, ರೋಹಿತ್ ಶರ್ಮಾ ತನ್ನ ಮೊದಲ ಐಸಿಸಿ ಟ್ರೋಫಿ ಲಿಫ್ಟ್ ಮಾಡಿದರು ಅನ್ನುವುದು ಮುಂದಿನ ಇತಿಹಾಸದ ಭಾಗ. ತಾಳ್ಮೆಯಿಂದ ನರಗಳನ್ನು ಬಿಗಿ ಹಿಡಿದು ಆಡಿದರೆ ಯಾವ ಪಂದ್ಯವನ್ನೂ ಗೆಲ್ಲಲು ಸಾಧ್ಯ ಎನ್ನುವುದು ಕ್ರಿಕೆಟ್ ಕಲಿಸಿದ ಜೀವನದ ಪಾಠ.

ಕ್ಲಾಸೆನ್ ಮತ್ತು ಕ್ಲಿಂಟನ್ ಡಿಕಾಕ್ ಅವರು ಕ್ರೀಸಿನಲ್ಲಿ ಗಟ್ಟಿ ನಿಂತು ಆಡುತ್ತಿದ್ದಾಗ ದಕ್ಷಿಣ ಆಫ್ರಿಕಾ ಗೆದ್ದೇ ಬಿಟ್ಟಿತು ಎಂದು ಭಾವಿಸಿಕೊಂಡು ಟಿವಿ ಆಫ್ ಮಾಡಿ ಮಲಗಿದವರಿಗೆ ಇದು Life Time Lesson!

ಐಪಿಎಲ್ ಪಂದ್ಯಗಳ ಉದ್ದಕ್ಕೂ ಬಾಸುಂಡೆ ಬರುವ ಹಾಗೆ ಹೊಡೆಸಿಕೊಂಡಿದ್ದ ಭಾರತದ ಬೌಲರಗಳಿಗೆ ಈ ವಿಶ್ವಕಪ್ ಸ್ಟಾರ್ ವ್ಯಾಲ್ಯೂ ಕೊಟ್ಟಿತು ಅನ್ನುವುದು ಭರತವಾಕ್ಯ.

ಕಂಗ್ರಾಚ್ಯುಲೇಶನ್ ರೋಹಿತ್ ಆಂಡ್ ಹುಡುಗರು!

ಇದನ್ನೂ ಓದಿ: ರಾಜಮಾರ್ಗ ಅಂಕಣ: ಮುಖವೇ ಇಲ್ಲದ ಆಕೆಗೆ ತನ್ನ ಹೆಸರೇ ಮರೆತು ಹೋಗಿತ್ತು!

Continue Reading

ಭವಿಷ್ಯ

Dina Bhavishya : ಈ ರಾಶಿಯವರಿಗೆ ದಿಢೀರ್ ಧನಾಗಮನದಿಂದ ಸಂತೋಷ ಇಮ್ಮಡಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ಏಕಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

dina Bhavishya
Koo

ಚಂದ್ರನು ವೃಷಭ ರಾಶಿಯಿಂದ ಮಂಗಳವಾರ ಬೆಳಗ್ಗೆ 11:50ಕ್ಕೆ ಮಿಥುನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ವೃಷಭ ರಾಶಿಯವರು ಆಂತರಿಕ ಭಯ ನಿಮ್ಮ ಸಂತೋಷವನ್ನು ಹಾಳುಗೆಡವಬಹುದು. ನಕಾರಾತ್ಮಕ ಆಲೋಚನೆಗಳನ್ನು ಮಾಡದಿರಿ, ಆಗ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ದಿನ ಕೊನೆಯ ಭಾಗದಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವ ಸಾಧ್ಯತೆ ಇದೆ. ಸಿಂಹ ರಾಶಿಯವರು ನಿಮ್ಮ ಸಭ್ಯ ನಡವಳಿಕೆ ಇತರರಿಂದ ಮೆಚ್ಚುಗೆ ಪಡೆಯುತ್ತದೆ. ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (2-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ಏಕಾದಶಿ 08:41 ವಾರ: ಮಂಗಳವಾರ
ನಕ್ಷತ್ರ: ಕೃತಿಕಾ 28:38 ಯೋಗ: ಧೃತಿ 11:15
ಕರಣ: ಬಾಲವ 08:41 ಅಮೃತಕಾಲ: ಮಧ್ಯರಾತ್ರಿ 02:20 ರಿಂದ 03:53ರವರೆಗೆ
ದಿನದ ವಿಶೇಷ: ಸರ‍್ವಮೇಕಾದಶಿ

ಸೂರ್ಯೋದಯ : 05:58   ಸೂರ್ಯಾಸ್ತ : 06:50

ರಾಹುಕಾಲ: ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30

ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕೆಲವು ನಿರ್ಧಾರಗಳು ಹತಾಶೆ ಮತ್ತು ಮಾನಸಿಕ ಪ್ರಕ್ಷುಬ್ಧತೆಗೆ ಕಾರಣವಾಗುತ್ತದೆ. ಆಪ್ತರಿಂದ ಸಹಾಯವನ್ನು ಕೋರುವಿರಿ. ಒತ್ತಡದ ಕೆಲಸದಿಂದಾಗಿ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಸದೃಢ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಆಂತರಿಕ ಭಯ ನಿಮ್ಮ ಸಂತೋಷವನ್ನು ಹಾಳುಗೆಡವಬಹುದು. ನಕಾರಾತ್ಮಕ ಆಲೋಚನೆಗಳನ್ನು ಮಾಡದಿರಿ, ಆಗ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ದಿನ ಕೊನೆಯ ಭಾಗದಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವ ಸಾಧ್ಯತೆ ಇದೆ. ಆರೋಗ್ಯ ಕೊಂಚಮಟ್ಟಿಗೆ ಹದಗೆಡುತ್ತದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಬೇರೆಯವರ ಮಾತನ್ನು ಕೇಳಿಕೊಂಡು ನಿಮ್ಮನ್ನು ಪ್ರೀತಿಯಿಂದ ಕಾಣುವ ವ್ಯಕ್ತಿಗಳನ್ನು ದ್ವೇಷಿಸುವುದು ಬೇಡ. ಇತರರ ಸಮಸ್ಯೆಗಳನ್ನು ಪರಿಹರಿಸಲು ನೀವು ಮಧ್ಯ ಪ್ರವೇಶ ಮಾಡುವ ಸಾಧ್ಯತೆ ಇದೆ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಾವಶ್ಯಕ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅನಿವಾರ್ಯ ಪ್ರಸಂಗಗಳು ನಿಮಗೆ ಕೋಪವನ್ನು ತರಿಸುವ ಸಾಧ್ಯತೆ ಇದೆ. ಭಾವನೆಗಳನ್ನು ನಿಯಂತ್ರಣಕ್ಕೆ ತೆಗೆದುಕೊಂಡರೆ ಉತ್ತಮ. ಕಠಿಣ ಪರಿಶ್ರಮ ನಿಮಗೆ ಫಲ ನೀಡಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಉದ್ಯೋಗದ ಸ್ಥಳದಲ್ಲಿ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಸಿಂಹ: ನಿಮ್ಮ ಸಭ್ಯ ನಡವಳಿಕೆ ಇತರರಿಂದ ಮೆಚ್ಚುಗೆ ಪಡೆಯುತ್ತದೆ. ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ. ದಿನದ ಆರಂಭದಲ್ಲಿ ಇಂದು ನೀವು ಯಾವುದೇ ಆರ್ಥಿಕ ನಷ್ಟವನ್ನು ಹೊಂದಬಹುದು.ಇದರಿಂದ ನಿಮ್ಮ ಪೂರ್ತಿ ದಿನ ಹದಗೆಡಬಹುದು. ಇತರರಿಗೆ ಪ್ರತಿಫಲಗಳು ತರುವ ನಿಮ್ಮ ಸಾಮರ್ಥ್ಯ ಪ್ರತಿಫಲ ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆ ಅವಕಾಶ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಒತ್ತಡದಿಂದ ವಿಮುಕ್ತಿ ಹೊಂದಿ, ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ದೀರ್ಘಕಾಲದ ದೃಷ್ಟಿಕೋನದಿಂದ ಮಾಡಿದ ಹೂಡಿಕೆಯಿಂದ ಲಾಭ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಸಂಪೂರ್ಣ ಸಹಕಾರ ಸಿಗಲಿದೆ. ಉದ್ಯೋಗಿಗಳಿಗೆ ಅದೃಷ್ಟ ಖುಲಾಯಿಸಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ದಿಢೀರ್ ಧನಾಗಮನದಿಂದ ಸಂತೋಷ ಇಮ್ಮಡಿಯಾಗಲಿದೆ. ಅನೇಕ ಸಮಸ್ಯೆಗಳು ಇಂದು ಪರಿಹಾರವಾಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಬಹಳ ದಿನಗಳಿಂದ ಕಂಡ ಕನಸು ನನಸಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ : ಇಂದು ಪ್ರಮುಖ ನಿರ್ಧಾರಗಳಿಂದಾಗಿ ಮಾನಸಿಕವಾಗಿ ನೀವು ಬಳಲುವ ಸಾಧ್ಯತೆ ಇದೆ. ಅನಾವಶ್ಯಕ ಖರ್ಚು ಮಾಡಿ ಕೊರಗುವ ಸಾಧ್ಯತೆ ಇದೆ. ಆದಷ್ಟು ನಿಯಂತ್ರಣದಲ್ಲಿರಿ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭಫಲ, ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

Horoscope Today

ಧನಸ್ಸು: ಆರೋಗ್ಯದ ಆರೈಕೆ ಇಂದು ಅಗತ್ಯವಿದೆ. ಆಪ್ತರೊಂದಿಗೆ ಸೇರಿಕೊಂಡು ಮಾಡುವ ವ್ಯಾಪಾರ ನಷ್ಟ ತಂದಿತು, ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ನಿಮ್ಮ ಆಂತರಿಕ ಶಕ್ತಿ ದಿನದ ಕೆಲಸವನ್ನು ಉತ್ತಮಗೊಳಿಸುವಲ್ಲಿ, ನಿಮ್ಮನ್ನು ಬೆಂಬಲಿಸುತ್ತದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮಕರ: ಆಹಾರ ಕ್ರಮದ ವ್ಯತ್ಯಾಸದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಲಿದೆ. ಆದಷ್ಟು ಆಹಾರ ನಿಯಂತ್ರಣ ಮಾಡಿ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ದಿಢೀರ್ ಪ್ರಯಾಣ ಬೆಳೆಸಬೇಕಾಗಬಹುದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ನಿಮ್ಮ ಸಾಧನೆಗೆ ಇಂದು ಪ್ರೋತ್ಸಾಹ ಸಿಗಲಿದೆ. ಅನೇಕ ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ. ವ್ಯಾಪಾರದ ಉದ್ದೇಶಕ್ಕಾಗಿ ಕೈಕೊಂಡ ಪ್ರಯಾಣ ಲಾಭವನ್ನು ತಂದುಕೊಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ, ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆವರಿಸಬಹುದು. ಆದಷ್ಟು ಸಕಾರಾತ್ಮಕವಾಗಿ ಆಲೋಚಿಸಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ನಿಮ್ಮ ಸಹೋದ್ಯೋಗಿಗಳು ನಿಮ್ಮನ್ನು ಟೀಕಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

T20 World Cup 2024: ಟಿ-20 ಸ್ವಯಂವರದ ಮಂಟಪದಲ್ಲಿ ವಿಶ್ವಸುಂದರಿಗೆ ಮಾಲೆ ತೊಡಿಸಿದ ರೋಹಿತ್ ಬಳಗ

T20 World Cup 2024: ಐಸಿಸಿ ಟಿ-20 ಕ್ರಿಕೆಟ್ ಸ್ವಯಂವರದ ಅವಿಸ್ಮರಣೀಯ ದೃಶ್ಯಗಳನ್ನು ನೋಡಲು ಕ್ರಿಕೆಟ್ ಜಗತ್ತು ಕಾತರದಿಂದ ಕಾಯುತ್ತಿತ್ತು. ಇತ್ತ ಭಾರತದ ಪ್ರತಿಯೊಬ್ಬ ಅಭಿಮಾನಿಯ ಹೃದಯಬಡಿತದಲ್ಲೂ ಏರುಪೇರು ನಡೆದೇ ಇತ್ತು. ಅದೊಂದು ಮಹೋನ್ನತ ಕ್ಷಣಕ್ಕೆ ಸಾಕ್ಷಿಯಾಗಿತ್ತು ಕೆರೆಬಿಯನ್ ನಾಡಿನ ಬಾರ್ಬೊಡಸ್‍ನ ಕೆನ್ಸಿಂಗ್ಟನ್ ಓವಲ್ ಅಂಗಣ.

VISTARANEWS.COM


on

T20 World Cup 2024
Koo

ಸನತ್ ರೈ, ಬೆಂಗಳೂರು

2024ರ ಜೂನ್ 29. ಭಾರತೀಯ ಕಾಲಮಾನ ರಾತ್ರಿ 8 ಗಂಟೆ., ಟಿ-20 ವಿಶ್ವಕಪ್ ಟೂರ್ನಿಯ (T20 World Cup 2024) ಅಶ್ವಮೇಧ ಯಾಗದ ಕೊನೆಯ ಪರ್ವ. ವಿಜಯಲಕ್ಷ್ಮಿ ಸ್ವಯಂವರದ ತಹತಹಿಕೆ ಭಾರತೀಯ ಮಕ್ಕಳ ಹೃದಯದ ಭಾವಕೋಶದಲ್ಲಿ ಅವ್ಯಾಹತವಾಗಿ ಪುಟಿಯುತ್ತಲೇ ಇತ್ತು.. ಸತತ ಗೆಲುವಿನ ನಾಗಾಲೋಟದಲ್ಲಿದ್ದ ವಿಶ್ವದ ಬಲಿಷ್ಠ ಎರಡು ತಂಡಗಳು ಅಂತಿಮ ಹಂತದ ಸಿದ್ಧತೆ ಮಾಡಿಕೊಂಡಿದ್ದವು. ನಾಲ್ಕನೇ ಬಾರಿ ಚಂಚಲೆ ಚೆಲುವೆಯನ್ನು ಒಲಿಸಿಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದರು ಭಾರತದ ರೋಹಿತ್ ಶರ್ಮಾ ಹುಡುಗರು.

ಇನ್ನೊಂದೆಡೆ ಐಸಿಸಿ ಅಖಾಡದಲ್ಲಿ ಯಾವತ್ತೂ ಭಗ್ನ ಪ್ರೇಮಿಗಳಾಗಿದ್ದ ದಕ್ಷಿಣ ಆಫ್ರಿಕಾ ಹುಡುಗರು ಇದೇ ಮೊದಲ ಬಾರಿ ವಿಶ್ವ ಸುಂದರಿಯ ಸ್ವಯಂವರದ ಮಂಟಪದ ಕೊನೆಯ ಮೆಟ್ಟಿಲು ಹತ್ತಿ ನಿಂತಿದ್ದರು. ಐಸಿಸಿ ಟಿ-20 ಕ್ರಿಕೆಟ್ ಸ್ವಯಂವರದ ಅವಿಸ್ಮರಣೀಯ ದೃಶ್ಯಗಳನ್ನು ನೋಡಲು ಕ್ರಿಕೆಟ್ ಜಗತ್ತು ಕಾತರದಿಂದ ಕಾಯುತ್ತಿತ್ತು. ಇತ್ತ ಭಾರತದ ಪ್ರತಿಯೊಬ್ಬ ಅಭಿಮಾನಿಯ ಹೃದಯಬಡಿತದಲ್ಲೂ ಏರುಪೇರು ನಡೆದೇ ಇತ್ತು. ಅದೊಂದು ಮಹೋನ್ನತ ಕ್ಷಣಕ್ಕೆ ಸಾಕ್ಷಿಯಾಗಿತ್ತು ಕೆರೆಬಿಯನ್ ನಾಡಿನ ಬಾರ್ಬೊಡಸ್‍ನ ಕೆನ್ಸಿಂಗ್ಟನ್ ಓವಲ್ ಅಂಗಣ.

ಹೌದು, ಈ ಬಾರಿ ಟಿ-20 ವಿಶ್ವಕಪ್ ಟ್ರೋಫಿಗೆ ಗೆಲುವಿನ ಮಾಲೆ ಹಾಕಿ ಭಾರತಾಂಬೆಯ ಪಾದದಡಿಯಲ್ಲಿಡಲು ರೋಹಿತ್ ಹುಡುಗರು ಭೀಷ್ಮ ಶಪಥ ಮಾಡಿದ್ದರು. ಸಮರ್ಥ ನಾಯಕ ರೋಹಿತ್, ಗುರು ದ್ರಾವಿಡಾಚಾರ್ಯರಿಗೆ ಗೆಲುವೊಂದೇ ಉಡುಗೊರೆ ಅನ್ನುವುದು ತಂಡದ ಎಲ್ಲಾ ಆಟಗಾರರ ಅಂಬೋಣವಾಗಿತ್ತು.

ಹತ್ತು ವರ್ಷಗಳ ಹಿಂದೆ ಸ್ವಯಂವರ ಮಂಟಪದಿಂದ ಹೊರದಬ್ಬಿದ್ದ ಚಂಚಲ ಚೆಲುವೆ, ಎರಡು ಬಾರಿ ಮದರಂಗಿ ಶಾಸ್ತ್ರದ ವೇಳೆಯಲ್ಲೇ ಕೈಕೊಟ್ಟಿದ್ದಳು (ಸೆಮಿಫೈನಲ್ ನಿರ್ಣಾಯಕ ಘಟ್ಟದಲ್ಲಿ). ಆದ್ರೆ ಈ ಬಾರಿ ಗುರು ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ರೋಹಿತ್ ಹುಡುಗರು ಪಕ್ಕಾ ರಣತಂತ್ರ ಹಣೆದು ಅಂತಿಮ ಅಂಕಣಕ್ಕೆ ಕಂಕಣ ಕಟ್ಟಿಕೊಂಡು ಇಳಿದಿದ್ದರು.

ಬ್ಯಾಟಿಂಗ್ ಆಯ್ಕೆ

ಮಹತ್ವದ ಟಾಸ್ ಗೆದ್ದ ರೋಹಿತ್ ಹಿಂದು ಮುಂದು ಯೋಚನೆ ಮಾಡದೇ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ್ರು. ಯಾಕಂದ್ರೆ ಬ್ಯಾಟಿಂಗ್ ಶಕ್ತಿ ಮತ್ತು ಬೌಲಿಂಗ್ ಯುಕ್ತಿಯ ಮೇಲೆ ರೋಹಿತ್ ಅಪಾರ ನಂಬಿಕೆಯನ್ನಿಟ್ಟುಕೊಂಡಿದ್ದರು. ಮಿನುಗು ತಾರೆಯಂತೆ ಹೊಳೆಯುವ ಚೆಂದುಳ್ಳಿ ಚೆಲುವೆಯ ಕೊರಳಿಗೆ ಮಾಲೆ ಹಾಕಲು ಗುರು ದ್ರಾವಿಡ್ ಕೊಟ್ಟ ದಾರದಲ್ಲಿ ಪುಷ್ಪಮಾಲೆಗಳ ಪೋಣಿಸಲು ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಶುರು ಮಾಡಿದ್ರು.

ಆರಂಭದಲ್ಲೇ ವಿರಾಟ್ ಕೊಹ್ಲಿ ಮಲ್ಲಿಗೆಯ ಕಂಪನ್ನು ಪಸರಿಸಿದ್ರು. ಒಂದರೆಗಳಿಗೆಯೂ ಮೈಮರೆಯಲಿಲ್ಲ. ತಾಳ್ಮೆ, ಏಕಾಗ್ರತೆಯೊಂದಿಗೆ ಘಮಘಮಿಸುವ ಬ್ಯಾಟಿಂಗ್ ವೈಖರಿಗೆ ಅಭಿಮಾನಿಗಳು ಕೂಡ ಮೈಮರೆತು ಕುಣಿದಾಡಿದರು. ಆದ್ರೆ ದುರದೃಷ್ಟವಶಾತ್ ಗುಲಾಬಿ ಹೂವಿನಂತೆ ಆಕರ್ಷಿಸುವ ರೋಹಿತ್ ಬ್ಯಾಟಿಂಗ್ ಅಂತಿಮ ಹಣಾಹಣಿಯಲ್ಲಿ ಹೆಚ್ಚು ಸುವಾಸನೆ ಬೀರಲಿಲ್ಲ. ಕೇಶವ್ ಮಹಾರಾಜ್ ಎಂಬ ಹರಿಣಪಾಳೆಯದ ಪತಂಗವೊಂದು ಗುಲಾಬಿಯ ಮಕರಂದವನ್ನು ಹೀರುತ್ತಿದ್ದಂತೆ ರೋಹಿತ್ ಪೋಣಿಸುವಿಕೆ ಮುಗಿದಂತಾಯ್ತು. ಹಿಟ್ ಮ್ಯಾನ್, ಗೆಲುವಿನ ಮಾಲೆಗೆ 9 (ರನ್) ಗುಲಾಬಿ ಪೋಣಿಸಿ ಪೆವಿಲಿಯನ್‍ನತ್ತ ಹೆಜ್ಜೆ ಹಾಕಿದಾಗ ಇಡೀ ಓವಲ್ ಅಂಗಳ ಒಂದು ಕ್ಷಣ ಸ್ತಬ್ದಗೊಂಡಿತ್ತು. ಮರು ಕ್ಷಣದಲ್ಲೇ (ಕೇಶವ್ ಮಹಾರಾಜ್) ಪತಂಗದ ಚೆಲ್ಲಾಟಕ್ಕೆ ಶೂನ್ಯ ಸುತ್ತಿದ ರಿಷಬ್ ಪಂತ್ ಸುಗಂಧ ರಾಜನಂತೆ ಬ್ಯಾಟಿಂಗ್‍ನಲ್ಲಿ ಪರಿಮಳ ಬೀರಲಿಲ್ಲ. ಹಿಂದೆಯೇ ಕೇವಲ 3 (ರನ್) ಸೂರ್ಯಕಾಂತಿಗಳಷ್ಟೇ ಮಾಲೆಗೆ ಪೋಣಿಸಿದ ಸೂರ್ಯಕುಮಾರ್ ಬಂದ ದಾರಿಗೆ ಸುಂಕವಿಲ್ಲದೆ ಹಿಂತಿರುಗಿದ್ರು. ಜೇನುನೋಣದಂತೆ ದಾಳಿ ಮಾಡಿದ ರಬಾಡ ಸ್ಕೈ ವಿಕೆಟ್ ಉರುಳಿಸಿ ಟೀಮ್ ಇಂಡಿಯಾದ ಅಭಿಮಾನಿಗಳ ಹೃದಯವನ್ನು ಘಾಸಿ ಮಾಡಿದ್ದರು. ಹೀಗೆ, ದುಂಬಿ, ಪತಂಗ, ಜೇಣುನೋಣದ ಆಕ್ರಮಣಕ್ಕೆ ಟೀಮ್ ಇಂಡಿಯಾದ ಗೆಲುವಿನ ಮಾಲೆಗೆ ಹೂ ಪೋಣಿಸುವ ಕಾರ್ಯ ನಿಧಾನವಾಗಿ ಸಾಗುತ್ತಿತ್ತು.

ಇದನ್ನೂ ಓದಿ: Afghanistan cricket : ನಮಗೂ ಒಂದು ತಂಡ ರಚಿಸಿ ಎಂದು ಐಸಿಸಿಗೆ ಪತ್ರ ಬರೆದ ಅಫಘಾನಿಸ್ತಾನದ ಮಹಿಳಾ ಕ್ರಿಕೆಟಿಗರು

ಆದ್ರೂ ಮಲ್ಲಿಗೆಯ ಕಂಪಿನಂತೆ ಬ್ಯಾಟ್ ಬೀಸುತ್ತಿದ್ದ ಕೊಹ್ಲಿಗೆ ಅಕ್ಸರ್ ಪಟೇಲ್ ಸಾಥ್ ನೀಡಿದ್ರು. ಲಯ ಪಡೆದುಕೊಂಡ ವಿರಾಟ್ ಕೊಹ್ಲಿ ಗೆಲುವಿನ ಹಾರಕ್ಕೆ ಮಲ್ಲಿಗೆಯನ್ನು ಪೋಣಿಸಿಕೊಂಡು ಹೋದ್ರೆ, ಇತ್ತ ಅಕ್ಸರ್ ಪಟೇಲ್ ಹೆಚ್ಚು ಸುವಾಸನೆ ಇಲ್ಲದ ಕನಕಾಂಬರ ಹೂವಿನಂತೆ ಯಾರು ಕೂಡ ಊಹೆ ಮಾಡದ ರೀತಿಯಲ್ಲಿ ಬ್ಯಾಟ್ ಬೀಸಿದ್ರು. ವಿರಾಟನ ಮಲ್ಲಿಗೆಯ ಜೊತೆಗೆ ಅಕ್ಸರ್ ಪಟೇಲ್ ಕನಕಾಂಬರವನ್ನು ಪೋಣಿಸಿ ಗೆಲುವಿನ ಹಾರದ ಅಲಂಕಾರವನ್ನು ಹೆಚ್ಚಿಸಿದ್ರು. ಆದ್ರೆ 47 (ರನ್) ಕನಕಾಂಬರ ಹೂಗಳನ್ನು ಗೆಲುವಿನ ಹಾರಕ್ಕೆ ಸೇರಿಸಿ ಮರಳಿ ಪೆವಿಲಿಯನ್ ಸೇರಿಕೊಂಡ್ರು.

ಇನ್ನೊಂದೆಡೆ ವಿರಾಟನ ಮಲ್ಲಿಗೆಯ ಸುವಾಸನೆ ಜೊತೆ ಸೇವಂತಿ ಹೂವಿನಂತೆ ಘಮ್ಮಂತ ಪಸರಿಸಿದ್ದು ಶಿವಂ ದುಬೆ. ಅದರಲ್ಲೂ ಕಿಂಗ್ ಕೊಹ್ಲಿ, ಬೆಳಂದಿಗಳ ಚಂದಿರನ ಬೆಳಕಿನಲ್ಲಿ ಫಳಫಳನೆ ಹೊಳೆವ ಮಲ್ಲಿಗೆಯಂತೆ ಕಂಗೊಳಿಸುತ್ತಿದ್ದರು. ಅಷ್ಟರಲ್ಲೇ ಜಾನ್ಸೆನ್ ಎಂಬ ದುಂಬಿ ಮಲ್ಲಿಗೆ ಪೋಣಿಸುತ್ತಿದ್ದ ವಿರಾಟನ ಏಕಾಗ್ರತೆಗೆ ಭಂಗವನ್ನುಂಟು ಮಾಡಿತು. ಅಷ್ಟೊತ್ತಿಗಾಗಲೇ 76 (ರನ್) ಮಲ್ಲಿಗೆ ಹೂಗಳು ಭಾರತದ ಗೆಲುವಿನ ಹಾರದಲ್ಲಿ ಸೇರಿಕೊಂಡಿದ್ದವು.

ಬಳಿಕ ಸೇವಂತಿಯ (ಶಿವಂ ದುಬೆ) ಜೊತೆ ಹಾರ್ದಿಕ್ ಪಾಂಡ್ಯ ಎಂಬ ಕೆಂಡ ಸಂಪಿಗೆಯೂ ಸ್ವಯಂವರ ಮಾಲೆಗೆ ಇನ್ನಷ್ಟು ಮೆರಗು ನೀಡಿತು. 27 ಸೇವಂತಿ ಹೂ ಪೋಣಿಸಿ ಹೂ ಮಾಲೆಗೆ ಶೃಂಗಾರ ಹೆಚ್ಚಿಸಿದ ಶಿವಂ ದುಬೆಗೆ ಮಕರಂದ ಹೀರುವ ಚತುರ ಸನ್ ಬರ್ಡ ಹಕ್ಕಿಯಂತೆ ಆನ್ರಿಚ್ ನೋರ್ಟೆಜೆ ಕುಟುಕಿದ್ರು.
ಅಂತಿಮವಾಗಿ ಪಾಂಡ್ಯ ಅವರ 5* (ರನ್) ಕೆಂಡ ಸಂಪಿಗೆಯ ಜೊತೆ ಸುಂದರ ಮಾಲೆಗೆ ಕೇವಲ 2 ಜಾಜಿ ಮಲ್ಲಿಗೆ ಹೂ ಪೋಣಿಸಿದ ರವೀಂದ್ರ ಜಡೇಜಾಗೂ ಸನ್‍ಬರ್ಡ ನೊರ್ಟೆಜೆ ಅಡ್ಡಿಯನ್ನುಂಟು ಮಾಡಿದ್ರು. ಅಷ್ಟರಲ್ಲಾಗಲೇ ರೋಹಿತ್ ಹುಡುಗರು 176 ಮಾರುದ್ದದ ಹೂಮಾಲೆಯನ್ನು ತಯಾರಿಸಿ ಇಟ್ಟಿದ್ದರು.
*
ಮುಂದಿನ ಪಾರಿ ನೀಲಿ ಜೆರ್ಸಿ ಹುಡುಗರ ಬೌಲಿಂಗ್ ಪಡೆಯದ್ದಾಗಿತ್ತು. ತಮ್ಮ ಪಾಲಿನ ಪುಷ್ಪಗಳನ್ನು ಸುಮಮಾಲೆಗೆ ಪೋಣಿಸಲು ಬುಮ್ರಾ ನೇತೃತ್ವದ ಬೌಲಿಂಗ್ ಸೈನಿಕರು ಸಿದ್ಧರಾಗಿದ್ದರು.

ವಿಶ್ವ ಕ್ರಿಕೆಟ್ ಬೌಲಿಂಗ್ ನ ನಾಯಕ ಶಿರೋಮಣಿ ಜಸ್ಪ್ರಿತ್ ಬೂಮ್ರಾ ಎರಡು (ವಿಕೆಟ್) ಗೊಂಚಲು ಚೆಂಡು ಹೂಗಳನ್ನು ಕಿತ್ತುಕೊಂಡು ಕೈ ಜಾರುತ್ತಿದ್ದ ವಿಜಯ ಮಾಲೆಗೆ ಮೆರಗು ನೀಡಿದ್ರು. ಇನ್ನೊಂದೆಡೆ ಅರ್ಶಾದೀಪ್ ಸಿಂಗ್ ಕೂಡ ಎರಡು (ವಿಕೆಟ್) ಗೊಂಚಲು ತುಳಸಿದಳಗಳನ್ನು ಪೋಣಿಸಿ ಗೆಲುವಿನ ಮಾಲೆಯ ಅಂದವನ್ನು ಹೆಚ್ಚಿಸಿದ್ರು. ಹಾಗೇ ಕುಲದೀಪ್ ಯಾದವ್ ಮೂರು (ಕ್ಯಾಚ್) ಗಂಟು ಪಾರಿಜಾತ ಹೂಗಳನ್ನು ಗೆಲುವಿನ ಹಾರಕ್ಕೆ ಪೋಣಿಸಿ ಸುವಾಸನೆಯನ್ನು ಇಮ್ಮಡಿಗೊಳಿಸಿದ್ರು. ಮತ್ತೊಂದೆಡೆ ಬ್ಯಾಟಿಂಗ್ ನಲ್ಲಿ ಶೂನ್ಯ ಸುತ್ತಿದ್ದ ರಿಷಬ್ ಪಂತ್ ಕೂಡ ಎರಡು (ಕ್ಯಾಚ್) ಸುಗಂಧರಾಜ ಹೂ ಸೇರಿಸಿ ಪರಿಮಳ ಹೆಚ್ಚಿಸಿದ್ರು. ಜೊತೆಗೆ ಅಕ್ಸರ್ ಪಟೇಲ್ 1 (ವಿಕೆಟ್) ಗಂಟು ಕನಕಾಂಬರ ಹೂ ಪೋಣಿಸಿ ದೃಷ್ಟಿ ಬೊಟ್ಟು ಇಟ್ರು. ಮಗದೊಂದು ಕಡೆ ಕಳೆಗುಂದಿದ್ದ ಸೂರ್ಯಕಾಂತಿ ಪುಷ್ಪ, ಉಗ್ರ ಸೂರ್ಯನ ಪ್ರಖರತೆಗೆ ನಾಚಿನೀರಾಗಿ ಹೋಯ್ತು. ಸೂರ್ಯನ ತೇಜೋಪುಂಜದ ಪ್ರಭಾವಳಿಗೆ ಸೂರ್ಯಕಾಂತಿ ಕೂಡ ಸದ್ದಿಲ್ಲದೆ ಬಂದು ಗೆಲುವಿನ ಹಾರ ಸೇರಿಕೊಂಡಿತ್ತು.

ಸೂರ್ಯಕುಮಾರ್ ಕ್ಯಾಚ್​

ಗೆಲುವಿನ ಹಾರ ಕಟ್ಟುವಲ್ಲಿ ಲಯ ತಪ್ಪಿದ್ದ ರೋಹಿತ್ ಹುಡುಗರನ್ನು ಸುಗ್ಗಿಯ ಸಂಕ್ರಾಂತಿ ಮಾಡುವಂತೆ ಮಾಡಿದ್ದು ಕೂಡ ಸೂರ್ಯನೇ. ಚಿಗರೆಯಂತೆ ಜಿಗಿದು ಸಮಯ ಪ್ರಜ್ಞೆಯಿಂದ ಸೂರ್ಯಕಾಂತಿಯನ್ನು (ಕ್ಯಾಚ್) ಹಿಡಿದು ಅಂದವಾದ ಮಾಲೆಗೆ ಹೊಳಪು ನೀಡಿದ್ರು. ಹೂವಿನ ಮಾಲೆಯ ಅಂದವನ್ನು ಹೆಚ್ಚಿಸಲು ಪಾಂಡ್ಯ ಮತ್ತೆ ಮೂರು (ವಿಕೆಟ್) ಕೆಂಡಸಂಪಿಗೆಯನ್ನು ಸೇರಿಸಿದ್ರು. ಕೊನೆಗೆ ಗೆಲುವಿನ ಮಾಲೆಗೆ ದಾರ ಕೊಟ್ಟಿದ್ದ ಗುರು ರಾಹುಲ್ ದ್ರಾವಿಡ್ ಆಚಾರ್ಯ ಬ್ರಹ್ಮಕಮಲವನ್ನು ಪೋಣಿಸಿ ಫಿನಿಶಿಂಗ್ ಟಚ್ ನೀಡಿಬಿಟ್ಟರು.

ಅಂತಿಮವಾಗಿ ಬಗೆ ಬಗೆಯ ಅಂದ ಚೆಂದದ ಸುಂದರ ಹೂ ಮಾಲೆಯನ್ನು ಚಂಚಲ ಚೆಲುವೆಯ ಕೊರಳಿಗೆ ಟೀಮ್ ಇಂಡಿಯಾ ಹುಡುಗರು ಹಾಕಿ ನಲಿದರು. ವೈಯ್ಯಾರದಿಂದ ಬೀಗುತ್ತಿದ್ದ ಐಸಿಸಿ ಟಿ-20ಯ ಪಟ್ಟದರಸಿಯನ್ನು ಒಲಿಸಿಕೊಂಡಾಗಿನ ಕ್ಷಣ ಇತಿಹಾಸ ಪುಟಗಳಲ್ಲಿ ಶಾಶ್ವತವಾಗಿ ನೆನಪಿನಲ್ಲಿರುತ್ತದೆ.

ಗೆಲುವಿನ ಸಂಭ್ರಮ.. ಸಡಗರ.. ಕಣ್ಣೀರು, ಭಾವುಕ, ಆನಂದಭಾಷ್ಪ, ಉತ್ಸಾಹ, ಉನ್ಮಾದ, ವಿದಾಯ, ಹತಾಶೆ, ಸೋಲು, ಬೇಸರ.. ಅಬ್ಬಾಬ್ಬಾ.. ಬಣ್ಣಿಸಲು ಪದಗಳಿಲ್ಲ

Continue Reading

ಪ್ರಮುಖ ಸುದ್ದಿ

GST Collection : ಜೂನ್​ನಲ್ಲಿ 1.74 ಲಕ್ಷ ಕೋಟಿ ರೂಪಾಯಿ ಜಿಎಸ್​ಟಿ ಸಂಗ್ರಹ, ಶೇಕಡಾ 8 ಏರಿಕೆ

VISTARANEWS.COM


on

GST Collection
Koo

ನವದೆಹಲಿ: 2024-25ನೇ ಹಣಕಾಸು ವರ್ಷದ ಜೂನ್​​ನಲ್ಲಿ ಒಟ್ಟು ಜಿಎಸ್ಟಿ ಸಂಗ್ರಹವು (GST Collection) 1.74 ಲಕ್ಷ ಕೋಟಿ ರೂಪಾಯಿ ಆಗಿದ್ದು ಶೇಕಡಾ 8 ರಷ್ಟು ಏರಿಕೆಯಾಗಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ. ಆದಾಗ್ಯೂ, ಮಾಸಿಕ ಜಿಎಸ್ಟಿ ಸಂಗ್ರಹದ ದತ್ತಾಂಶದ ಅಧಿಕೃತ ಬಿಡುಗಡೆಯನ್ನು ಸರ್ಕಾರ ನಿಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಹಣಕಾಸು ವರ್ಷದ ಮೂರು ತಿಂಗಳಲ್ಲಿ (ಏಪ್ರಿಲ್-ಜೂನ್) ಒಟ್ಟು ಸರಕು ಮತ್ತು ಸೇವಾ ತೆರಿಗೆ (ಜಿಎಸ್​ಟಿ​) ಸಂಗ್ರಹವು 5.57 ಲಕ್ಷ ಕೋಟಿ ರೂ.ಗಳಷ್ಟಿದೆ ಎಂದು ಮೂಲಗಳು ತಿಳಿಸಿವೆ.

ಜೂನ್​​ನ ಸಂಗ್ರಹವು ಮೇ 2024 ರಲ್ಲಿ ಸಂಗ್ರಹಿಸಿದ 1.73 ಲಕ್ಷ ಕೋಟಿ ರೂ.ಗಿಂತ ಹೆಚ್ಚಾಗಿದೆ. ಇದು ಜೂನ್ 2023 ರಲ್ಲಿ ಸಂಗ್ರಹಿಸಿದ 1.61 ಲಕ್ಷ ಕೋಟಿ ರೂ.ಗಿಂತ ಶೇಕಡಾ 8 ರಷ್ಟು ಹೆಚ್ಚಾಗಿದೆ. ಕೇಂದ್ರ ಜಿಎಸ್ಟಿ (ಸಿಜಿಎಸ್​ಟಿ) ಗೆ 39,586 ಕೋಟಿ ರೂ., ರಾಜ್ಯ ಜಿಎಸ್ಟಿ (ಎಸ್ಜಿಎಸ್ಟಿ) ಗೆ 33,548 ಕೋಟಿ ರೂ. ಜಿಎಸ್ಟಿ ಸಂಗ್ರಹವು ಏಪ್ರಿಲ್​​ನಲ್ಲಿ ದಾಖಲೆಯ ಗರಿಷ್ಠ 2.10 ಲಕ್ಷ ಕೋಟಿ ರೂ.ಗೆ ತಲುಪಿತ್ತು.

ತೆರಿಗೆ ಸಂಗ್ರಹಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ಹೇಳಿಕೆ ಬಿಡುಗಡೆ ಮಾಡುವುದಿಲ್ಲ ಎಂದು ಮೂಲಗಳು ತಿಳಿಸಿವೆ. ತೆರಿಗೆ ಪಾಲುದಾರ ಸೌರಭ್ ಅಗರ್ವಾಲ್ ಮಾತನಾಡಿ, ಈ ದೃಢ ಕಾರ್ಯಕ್ಷಮತೆಯು ಉತ್ಸಾಹಭರಿತ ಆರ್ಥಿಕತೆಯನ್ನು ಪ್ರತಿಬಿಂಬಿಸುತ್ತದೆ. ಸಮಯೋಚಿತ ಲೆಕ್ಕಪರಿಶೋಧನೆ, ಪರಿಶೀಲನಾ ಕ್ರಮಗಳು ಮತ್ತು ಇಲಾಖೆಯ ಪರಿಣಾಮಕಾರಿ ಜಾರಿ ಇವೆಲ್ಲವೂ ಈ ಜಿಎಸ್​ಟಿ ಸಂಗ್ರಹ ಹೆಚ್ಚಳಕ್ಕೆ ಕಾರಣವಾಗಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Maharashtra Politics : ವಿಧಾನ ಪರಿಷತ್​ನಲ್ಲಿ ಬಿಜೆಪಿಯನ್ನು ಸೋಲಿಸಿದ ಉದ್ಧವ್​ ಠಾಕ್ರೆಯ ಶಿವಸೇನೆ

“ಸಂಗ್ರಹದಲ್ಲಿನ ಗಮನಾರ್ಹ ಏರಿಕೆಯು ಜಿಎಸ್ಟಿ ಸುಧಾರಣೆಗಳ ಮುಂದಿನ ನಿರೀಕ್ಷೆಗಳನ್ನು ಹೆಚ್ಚಿಸುತ್ತದೆ. ಈ ಸುಧಾರಣೆಗಳು ಬಂಡವಾಳದ ಅಡೆತಡೆಗಳನ್ನು ಪರಿಹರಿಸಬಹುದು. ತೆರಿಗೆ ದರಗಳನ್ನು ಸುಗಮಗೊಳಿಸಬಹುದು, ನಿರ್ಬಂಧಗಳನ್ನು ಸರಾಗಗೊಳಿಸಬಹುದು. ಅಸ್ತಿತ್ವದಲ್ಲಿರುವ ಸವಾಲುಗಳನ್ನು ನಿಭಾಯಿಸಲು ಪರಿಹಾರಗಳನ್ನು ಜಾರಿಗೆ ತರಬಹುದು ಎಂದು ಅಗರ್ವಾಲ್ ಹೇಳಿದ್ದಾರೆ.

Continue Reading
Advertisement
ರಾಜಮಾರ್ಗ ಅಂಕಣ virat kohli rohit sharma
ಅಂಕಣ12 mins ago

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್ ಫೈನಲ್; ಒಂದು ಪಂದ್ಯ – ಹಲವು ಪಾಠ

niranjana ನನ್ನ ದೇಶ ನನ್ನ ದನಿ ಅಂಕಣ
ಅಂಕಣ26 mins ago

ನನ್ನ ದೇಶ ನನ್ನ ದನಿ: ಜಗತ್ತಿನ ಇತಿಹಾಸ ಕನ್ನಡದಲ್ಲಿ ತರಲು ಆಸೆಪಟ್ಟಿದ್ದ ನಿರಂಜನ

dengue fever hassan girl death
ಕ್ರೈಂ42 mins ago

Dengue fever: ಮಾರಕ ಡೆಂಗ್ಯು ಜ್ವರಕ್ಕೆ ಬಾಲಕಿ ಬಲಿ

ITR Filing
ಮನಿ-ಗೈಡ್1 hour ago

ITR Filing: ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ಮೊದಲು ಈ ಸಂಗತಿ ತಿಳಿದಿರಲೇಬೇಕು!

karnataka weather Forecast
ಮಳೆ1 hour ago

Karnataka Weather : ರಾಜ್ಯದ ಇಲ್ಲೆಲ್ಲ ವಿಪರೀತ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

Mosquito Repellents
ಆರೋಗ್ಯ2 hours ago

Mosquito Repellents: ರಾಸಾಯನಿಕದ ಅಪಾಯ ಏಕೆ? ಸೊಳ್ಳೆ ಓಡಿಸಲು ಇಲ್ಲಿವೆ 10 ನೈಸರ್ಗಿಕ ವಿಧಾನಗಳು!

Karnataka Tour
ಪ್ರವಾಸ2 hours ago

Karnataka Tour: ಮಳೆಗಾಲದಲ್ಲಿ ಭೇಟಿ ನೀಡಬಹುದಾದ ಕರ್ನಾಟಕದ 15 ರಮಣೀಯ ತಾಣಗಳು

dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ದಿಢೀರ್ ಧನಾಗಮನದಿಂದ ಸಂತೋಷ ಇಮ್ಮಡಿ

T20 World Cup 2024
ಪ್ರಮುಖ ಸುದ್ದಿ8 hours ago

T20 World Cup 2024: ಟಿ-20 ಸ್ವಯಂವರದ ಮಂಟಪದಲ್ಲಿ ವಿಶ್ವಸುಂದರಿಗೆ ಮಾಲೆ ತೊಡಿಸಿದ ರೋಹಿತ್ ಬಳಗ

GST Collection
ಪ್ರಮುಖ ಸುದ್ದಿ8 hours ago

GST Collection : ಜೂನ್​ನಲ್ಲಿ 1.74 ಲಕ್ಷ ಕೋಟಿ ರೂಪಾಯಿ ಜಿಎಸ್​ಟಿ ಸಂಗ್ರಹ, ಶೇಕಡಾ 8 ಏರಿಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ14 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌