ಜಗದ ಜನರ ಕೈಗಳಲ್ಲಿ ಮಿನುಗುವ ಮೊಬೈಲ್ ಫೋನುಗಳಲ್ಲೀಗ ಮೇಕ್ ಇನ್ ಇಂಡಿಯಾದ್ದೇ ಮೊಹರು! - Vistara News

ಪ್ರಮುಖ ಸುದ್ದಿ

ಜಗದ ಜನರ ಕೈಗಳಲ್ಲಿ ಮಿನುಗುವ ಮೊಬೈಲ್ ಫೋನುಗಳಲ್ಲೀಗ ಮೇಕ್ ಇನ್ ಇಂಡಿಯಾದ್ದೇ ಮೊಹರು!

Make in India: ಭಾರತದಲ್ಲಿ ಆ್ಯಪಲ್ ಫೋನುಗಳ ಉತ್ಪಾದನೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ. 2023-24ರ ಆರ್ಥಿಕ ವರ್ಷದಲ್ಲಿ ಬರೋಬ್ಬರಿ 15 ಬಿಲಿಯನ್ ಡಾಲರುಗಳ ಮೊತ್ತದ ಮೊಬೈಲ್ ಫೋನ್ ರಫ್ತು ವಹಿವಾಟು ನಡೆಸಿದೆ ಭಾರತ. ಇದರಲ್ಲಿ ಭಾರತಲ್ಲಿಯೇ ಉತ್ಪಾದಿಸುತ್ತಿರುವ ಆ್ಯಪಲ್ ಐಫೋನ್ ಬ್ರ್ಯಾಂಡಿನ ಕೊಡುಗೆಯೂ ದೊಡ್ಡದಿದೆ. ಈ ಪೈಕಿ 10 ಬಿಲಿಯನ್ ಡಾಲರುಗಳ ವಹಿವಾಟು ಆ್ಯಪಲ್‌ನಿಂದಲೇ ಬಂದಿದೆ ಎನ್ನುವುದು ವಿಶೇಷ. 2014ರಲ್ಲಿ ಕೇವಲ ಎರಡು ಮೊಬೈಲ್ ಫೋನ್ ಉತ್ಪಾದನಾ ಘಟಕಗಳು ಭಾರತದಲ್ಲಿದ್ದವು. ಈಗವು 200 ದಾಟಿವೆ.

VISTARANEWS.COM


on

Make In India
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

| ಚೈತನ್ಯ ಹೆಗಡೆ
ಭಾರತವು ಈ ಬಾರಿ ಪುಷ್ಕಳವಾದ ಆ್ಯಪಲ್ ಬೆಳೆ ತೆಗೆದಿದೆ. ಕಾಶ್ಮೀರದಲ್ಲೋ, ಹಿಮಾಚಲದಲ್ಲೋ ಬೆಳೆಯುವ ಸೇಬಿನ ಬಗ್ಗೆ ಮಾತನಾಡುತ್ತಿಲ್ಲ. ಬದಲಿಗೆ ಭಾರತದಲ್ಲಿ ತಯಾರಿಕೆ ಆಗುತ್ತಿರುವ ಆ್ಯಪಲ್ ಫೋನುಗಳ ಬಗೆಗಿನ ವಿದ್ಯಮಾನ ಇದು.

ಈ ವಿದ್ಯಮಾನವು ಎರಡು ಅಂಶಗಳನ್ನು ವಿಜೃಂಭಿಸುತ್ತಿದೆ. ಮೊದಲನೆಯದು, ಚೀನಾದ ಹೊರತಾಗಿಯೂ ಏಷ್ಯದಲ್ಲಿ ತನ್ನ ಪೂರೈಕೆ ಜಾಲ ಇರಬೇಕು ಎಂದು ಭಾರತದಲ್ಲಿ ತನ್ನ ಬೇರುಗಳನ್ನು ಗಟ್ಟಿಗೊಳಿಸಿದ್ದ ಆ್ಯಪಲ್ ಕಂಪನಿಯ ನಿರ್ಧಾರ ಸರಿ ಇದೆ ಎಂಬುದನ್ನು ಈ ವಿದ್ಯಮಾನ ಸಾರುವ ಮೂಲಕ, ಚೀನಾದಿಂದ ತಮ್ಮ ಉತ್ಪಾದಕ ಘಟಕಗಳನ್ನು ಹಂತ-ಹಂತವಾಗಿ ಬೇರೆಡೆಗೆ ಸ್ಥಳಾಂತರಿಸಲು ಬಯಸುತ್ತಿರುವ ಪಾಶ್ಚಾತ್ಯ ಕಂಪನಿಗಳಿಗೆ, ಭಾರತವೇ ಅದಕ್ಕೆ ಪ್ರಶಸ್ತ ಸ್ಥಳ ಎಂಬುದನ್ನು ಹೇಳುತ್ತಿದೆ. ಎರಡನೆಯದಾಗಿ, 2014ರಿಂದೀಚೆಗೆ ಮೊಬೈಲ್ ಫೋನ್ ಉತ್ಪಾದನೆಯಲ್ಲಿ ಭಾರತ ದಾಖಲಿಸುತ್ತಿರುವ ಅತಿದೊಡ್ಡ ಯಶೋಗಾಥೆಗೆ ಈ ವಿದ್ಯಮಾನವು ಮತ್ತಷ್ಟು ಮೆರಗು ತುಂಬಿದೆ.

2023-24ರ ಆರ್ಥಿಕ ವರ್ಷದಲ್ಲಿ ಬರೋಬ್ಬರಿ 15 ಬಿಲಿಯನ್ ಡಾಲರುಗಳ ಮೊತ್ತದ ಮೊಬೈಲ್ ಫೋನ್ ರಫ್ತು ವಹಿವಾಟು ನಡೆಸಿದೆ ಭಾರತ. ಇದರಲ್ಲಿ ಭಾರತಲ್ಲಿಯೇ ಉತ್ಪಾದಿಸುತ್ತಿರುವ ಆ್ಯಪಲ್ ಐಫೋನ್ ಬ್ರ್ಯಾಂಡಿನ ಕೊಡುಗೆಯೂ ದೊಡ್ಡದಿದೆ. ಈ ಪೈಕಿ 10 ಬಿಲಿಯನ್ ಡಾಲರುಗಳ ವಹಿವಾಟು ಆ್ಯಪಲ್‌ನಿಂದಲೇ ಬಂದಿದೆ.

2014ರಲ್ಲಿ ಕೇವಲ ಎರಡು ಮೊಬೈಲ್ ಫೋನ್ ಉತ್ಪಾದನಾ ಘಟಕಗಳು ಭಾರತದಲ್ಲಿದ್ದವು. ಈಗವು 200 ದಾಟಿವೆ. ಜಗತ್ತಿನ ಎರಡನೇ ದೊಡ್ಡ ಮೊಬೈಲ್ ಫೋನ್ ಉತ್ಪಾದಕ ರಾಷ್ಟ್ರವಾಗಿ ಭಾರತ ಗುರುತಿಸಿಕೊಂಡಿದೆ. ಇಂಡಿಯಾ ಸೆಲ್ಯುಲಾರ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಅಸೋಸಿಯೇಶನ್ (ಐಸಿಇಎ) ವರದಿಯ ಪ್ರಕಾರ ಭಾರತದ ಮೊಬೈಲ್ ಫೋನ್ ಉತ್ಪಾದನಾ ಸಾಮರ್ಥ್ಯ ಈ ಹತ್ತು ವರ್ಷಗಳಲ್ಲಿ 21 ಪಟ್ಟು ಹೆಚ್ಚಾಗಿದೆ. 2014-15ರಲ್ಲಿ 18,900 ಕೋಟಿ ರುಪಾಯಿಗಳ ಮೌಲ್ಯದ ಮೊಬೈಲ್ ಫೋನ್ ಗಳನ್ನು ಭಾರತ ಉತ್ಪಾದಿಸಿತ್ತು. 2023-24ರ ವಿತ್ತೀಯ ವರ್ಷದಲ್ಲಿ ಈ ಸಂಖ್ಯೆ ಎಲ್ಲಿಗೆ ಹೋಗಿ ಮುಟ್ಟಿದೆ ಗೊತ್ತೇ? ಬರೋಬ್ಬರಿ 4,10,000 ಕೋಟಿ ರೂ!

ಇವತ್ತಿಗೆ ಭಾರತದಲ್ಲಿ ಬಳಕೆಯಾಗುತ್ತಿರುವ ಮೊಬೈಲ್ ಫೋನುಗಳ ಪೈಕಿ ಶೇ. 97ರಷ್ಟು ಭಾರತದಲ್ಲೇ ತಯಾರಾದಂಥವುಗಳು. ಇವತ್ತು ಮೊಬೈಲ್ ಫೋನ್ ರಫ್ತು 15 ಬಿಲಿಯನ್ ಡಾಲರುಗಳ ಮೌಲ್ಯದ್ದಾಗಿ ಬೆಳೆಸಿರುವ ಭಾರತ 2014-15ರ ವೇಳೆಗೆ ರಫ್ತು ಮಾಡಿದ್ದ ಮೊಬೈಲ್ ಫೋನ್ ಮೌಲ್ಯ 1,556 ಕೋಟಿ ರೂ. ಮಾತ್ರ.

ನಿಮ್ಮ ಕೈಯಲ್ಲಿ ಹಿಡಿದಿರುವ ಮೊಬೈಲ್ ಫೋನ್ ವಿದೇಶಿ ಕಂಪನಿಯದ್ದೇ ಆಗಿರಬಹುದು. ಆ್ಯಪಲ್, ಸ್ಯಾಮ್ಸಂಗ್, ಒಪ್ಪೊ, ವಿವೊ, ಶಾಮಿ ಹೀಗೆ ಫೋನ್ ಯಾವುದೇ ಆಗಿದ್ದರೂ ಉತ್ಪಾದನೆ ಭಾರತದಲ್ಲೇ ಆಗಿರುತ್ತದೆ. ಈ ಹಂತದಲ್ಲಿ ಒಂದು ಪ್ರಶ್ನೆ ಹಲವರು ಕೇಳುವುದಿದೆ. ಇವೆಲ್ಲ ಏನೇ ಇದ್ದರೂ ಭಾರತದ್ದೇ ಒಂದು ಮೊಬೈಲ್ ಫೋನ್ ಉತ್ಪಾದನೆಯ ಬ್ರ್ಯಾಂಡ್‌ ಇಲ್ಲವಲ್ಲ ಎಂದು. ಅದು ಸೆಲ್ ಫೋನ್ ಉತ್ಪಾದನೆ ಇದ್ದಿರಬಹುದು, ಕಾರು ಇಲ್ಲವೇ ಮತ್ಯಾವುದೇ ತಂತ್ರಜ್ಞಾನ ಒಳಗೊಂಡ ಉತ್ಪಾದನೆಯೇ ಇದ್ದಿರಬಹುದು…ದೇಶವೊಂದು ಹಂತ-ಹಂತಗಳಲ್ಲಿ ಒಂದು ವಲಯವನ್ನು ತನ್ನದಾಗಿಸಿಕೊಳ್ಳುತ್ತದೆ. ಉದಾಹರಣೆಗೆ, ಮೊಬೈಲ್ ಉತ್ಪಾದನೆಯನ್ನೇ ತೆಗೆದುಕೊಂಡರೆ, ಆ ಕೌಶಲವನ್ನು ಅದಾಗಲೇ ಸಿದ್ಧಿಸಿಕೊಂಡಿರುವ ಕಂಪನಿಗಳು ಭಾರತದಲ್ಲೇ ಉತ್ಪಾದನೆ ಮಾಡುವಂತೆ ಮಾಡುವುದು ಮೊದಲ ಹೆಜ್ಜೆ. ಆ ಕಂಪನಿಗಳು ಇಲ್ಲಿ ಬಂದು ಉದ್ಯೋಗ ಸೃಷ್ಟಿಸುತ್ತವೆ. ಆ ಕೌಶಲಗಳನ್ನು ತಮ್ಮದಾಗಿಸಿಕೊಂಡ ಭಾರತೀಯ ಕೆಲಸಗಾರರ ಪ್ರತಿಭಾಪುಂಜವೊಂದು ಸಿದ್ಧಗೊಳ್ಳುತ್ತದೆ. ಮೊಬೈಲ್ ಫೋನ್ ಸಿದ್ಧಪಡಿಸಲು ಬೇಕಾಗುವ ಯಂತ್ರಗಳು ಭಾರತಕ್ಕೆ ಬರುತ್ತವೆ. ಅದಕ್ಕೆ ಬೇಕಾದ ಕಚ್ಚಾವಸ್ತುಗಳ ಪೂರೈಕೆ ಜಾಲವೊಂದು ಜಗತ್ತಿನ ನಾನಾ ಕಡೆಗಳಿಂದ ಭಾರತಕ್ಕೆ ಮುಖಮಾಡುತ್ತದೆ. ಹೀಗೆಲ್ಲ ಆದ ನಂತರದಲ್ಲಿ ಭಾರತೀಯ ಕಂಪನಿಗಳೇ ತಯಾರಿಕೆಗಳಲ್ಲಿ ಮುಂದೆ ಬರುವುದಕ್ಕೆ ಅನುಕೂಲಕರ ವಾತಾವರಣ ಹುಟ್ಟುತ್ತದೆ. ಚೀನಾದಂಥ ದೇಶಗಳು ಅಲ್ಲಿನ ಏಕೀಕೃತ ರಾಜಕೀಯ ವ್ಯವಸ್ಥೆ ರೂಪಿಸಿಕೊಂಡು ಈ ಪ್ರಕ್ರಿಯೆಯನ್ನು ವೇಗಗೊಳಿಸಿದ ಹಾಗೆ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತ್ವರಿತಗೊಳಿಸಲಾಗುವುದಿಲ್ಲ.

ಅದೇನೇ ಇರಲಿ. ಮೊಬೈಲ್ ಫೋನ್ ತಯಾರಿಕಾ ವಲಯವು ಭಾರತದಲ್ಲಿ ಬೃಹತ್ ಆಗಿ ಅಭಿವೃದ್ಧಿ ಹೊಂದಿದ ಪರಿಣಾಮವಾಗಿ ಅದು ಕನಿಷ್ಠ 10 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಿತು. ಆ್ಯಪಲ್ ಕಂಪನಿಯೊಂದೇ ಸುಮಾರು 1 ಲಕ್ಷ ಉದ್ಯೋಗಗಳನ್ನು ಭಾರತದಲ್ಲಿ ತನ್ನ ಉತ್ಪಾದನಾ ಚಟುವಟಿಕೆಯಿಂದ ಸೃಜಿಸಿತು.

ಇದನ್ನೂ ಓದಿ: Indian Navy Power: ಸೊಮಾಲಿಯಾದ ಕಡಲ್ಗಳ್ಳರನ್ನು ಬಗ್ಗುಬಡಿದು ಜಗತ್ತಿಗೆ ಸಂದೇಶ ನೀಡಿದೆ ಭಾರತದ ಕ್ಷಾತ್ರ!

2017ರಲ್ಲಿ ಕೇಂದ್ರ ಸರ್ಕಾರವು ಪೇಸ್ಡ್ ಮನುಫ್ಯಾಕ್ಟರಿಂಗ್ ಪ್ರೊಗ್ರಾಂ ಅಡಿಯಲ್ಲಿ ಮೊಬೈಲ್ ಫೋನಿಗೆ ಸಂಬಂಧಿಸಿದ ಹೆಡ್ಸೆಟ್, ಚಾರ್ಜರ್, ಸರ್ಕಿಟ್ ಬೋರ್ಡ್ ಇತ್ಯಾದಿಗಳಿಗೆ ದೇಸಿ ಉತ್ಪಾದನೆಗೆ ಪೂರಕವಾಗುವಂತೆ ಅವಕ್ಕೆ ಬೇಕಾದ ಕಚ್ಚಾವಸ್ತುಗಳ ಸುಂಕಗಳನ್ನು ಪರಿಷ್ಕರಿಸಿತು. ಭಾರತದಲ್ಲೇ ಮೊಬೈಲ್ ಫೋನ್ ತಯಾರಿಕೆ ಘಟಕಗಳನ್ನು ಇಟ್ಟುಕೊಳ್ಳುವುದು ಕಂಪನಿಗಳಿಗೆ ಆಕರ್ಷಕವಾಗುವಂತೆ ಮಾಡಲಾಯಿತು. ಮುಂದಿನ ಹಂತದಲ್ಲಿ, 2021-22ರಲ್ಲಿ ಮೊಬೈಲ್ ಫೋನ್ ಉತ್ಪಾದನೆಯಲ್ಲಿ ಪಿ ಎಲ್ ಐ ಸ್ಕೀಮ್, ಅಂದರೆ ಉತ್ಪಾದನೆ ಆಧರಿತ ಉತ್ತೇಜನ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಿತು. ಹೆಸರೇ ಹೇಳುವಂತೆ ಉತ್ಪಾದನೆ ಹೆಚ್ಚಿಸಿಕೊಂಡಷ್ಟೂ ಕಂಪನಿಗಳಿಗೆ ಇಲ್ಲಿ ಹಣಕಾಸು ಲಾಭಗಳು ದೊರೆಯುತ್ತವೆ. ಸ್ಯಾಮ್ಸಂಗ್, ವಿಸ್ತ್ರಾನ್, ಫಾಕ್ಸಕಾನ್ ಇತ್ಯಾದಿ ಕಂಪನಿಗಳು ಈ ಪಿ ಎಲ್ ಐ ಯೋಜನೆಯಡಿ ಬಂದಿವೆ. ಐದು ವರ್ಷಗಳ ಅವಧಿಯಲ್ಲಿ, ಮೊಬೈಲ್ ಫೋನುಗಳ ಉತ್ಪಾದನೆ ವಿಭಾಗಲ್ಲಿ ಇದರಿಂದ ಎರಡು ಲಕ್ಷ ನೇರ ಉದ್ಯೋಗಗಳು ಹಾಗೂ 6 ಲಕ್ಷ ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗುವ ಅಂದಾಜಿದೆ.

ಇದನ್ನೂ ಓದಿ: Pak Afghan Conflict: ಸಡಿಲವಾಯ್ತು ಆಫ್ಘಾನ್‌ನೊಂದಿಗಿನ ಪಾಕ್‌ ಸಖ್ಯ, ತಾಲಿಬಾನಿಗಳಿಗೂ ಈಗ ಭಾರತವೇ ಮುಖ್ಯ!

ಈ ವಿತ್ತೀಯ ವರ್ಷದಲ್ಲಿ ಆ್ಯಪಲ್ ಕಂಪನಿಯ ಚೀನಾ ಘಟಕದಿಂದ ಆಗುತ್ತಿರುವ ಸಾಗಣೆಯಲ್ಲಿ ಕುಸಿತ ಕಂಡಿದ್ದರೆ, ಭಾರತದಲ್ಲಿ ಮಾತ್ರ ಏರಿಕೆ ಕಂಡಿರುವುದು ಗಮನಾರ್ಹ. ಭಾರತದಲ್ಲಿ ಯಾವುದೇ ಕಂಪನಿಗೆ ಆಗುವ ಶ್ರೇಯೋವೃದ್ಧಿ ಅದು ಇಲ್ಲಿ ತನ್ನ ಹೂಡಿಕೆಯನ್ನು ಇನ್ನಷ್ಟು ಹೆಚ್ಚಿಸುವುದಕ್ಕೆ, ಆರ್ಥಿಕ ಚಟುವಟಿಕೆಯಲ್ಲಿ ಮತ್ತಷ್ಟು ತೊಡಗಿಕೊಳ್ಳುವುದಕ್ಕೆ ಕಾರಣವಾಗುತ್ತದೆ. ಉದಾಹರಣೆಗೆ, ಆ್ಯಪಲ್ ಅದಾಗಲೇ ತನ್ನ ಫೋನಿನಲ್ಲಿ ಬಳಸುವ ಕೆಮರಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಭಾರತದಲ್ಲೇ ರೂಪಿಸುವುದಕ್ಕೆ ಟಾಟಾದ ಟೈಟಾನ್ ಸಮೂಹ ಹಾಗೂ ಮುರುಗಪ್ಪ ಸಮೂಹಗಳೊಂದಿಗೆ ಮಾತುಕತೆಯಲ್ಲಿರುವುದಾಗಿ ವರದಿಯಾಗಿದೆ. ಮೊಬೈಲ್ ಫೋನ್ ವಹಿವಾಟು ಎಂದಷ್ಟೇ ಅಲ್ಲದೇ, ಭಾರತದಲ್ಲಿ ನವೀಕೃತ ಇಂಧನ ಮೂಲಗಳ ವಿಸ್ತರಣೆಗೆ ಸಹಕರಿಸಿ ಇಂಗಾಲ ವಿಸರ್ಜನೆ ತಗ್ಗಿಸಿದ ಶ್ರೇಯಸ್ಸು ಪಡೆಯುವುದಕ್ಕಾಗಿ ಆ್ಯಪಲ್ ಕಂಪನಿಯು ಕ್ಲೀನ್ ಮ್ಯಾಕ್ಸ್ ಎಂಬ ನವೀಕೃತ ಇಂಧನಕ್ಕೆ ಸಂಬಂಧಿಸಿದ ಉದ್ದಿಮೆ ಜತೆ ಕೈಜೋಡಿಸಿದೆ. ಭಾರತದಾದ್ಯಂತ 6 ಕೈಗಾರಿಕಾ ಘಟಕಗಳ ಮೇಲೆ ಸೌರಫಲಕಗಳನ್ನು ಅಳವಡಿಸಿ, 14.4 ಮೆಗಾವ್ಯಾಟ್ ಸೌರ ವಿದ್ಯುತ್ ಉತ್ಪಾದನೆ ಸಾಮರ್ಥ್ಯವನ್ನು ಈ ಪ್ರಯತ್ನ ಹುಟ್ಟು ಹಾಕಿದೆ.

ಮೊಬೈಲ್ ಫೋನುಗಳ ಉತ್ಪಾದನೆ ಮತ್ತು ವಹಿವಾಟುಗಳಲ್ಲಿ ಆಗುತ್ತಿರುವ ಈ ಅಭಿವೃದ್ಧಿ ಭಾರತದ ಒಟ್ಟಾರೆ ಎಲೆಕ್ಟ್ರಾನಿಕ್ ವಲಯಕ್ಕೆ ಹೊಸ ಸಾಮರ್ಥ್ಯ ಕೊಟ್ಟಿದೆ. ಮೊಬೈಲ್ ಫೋನುಗಳ ರಫ್ತಿನಲ್ಲಾಗಿರುವ ಹೆಚ್ಚಳವು ಒಟ್ಟಾರೆ ಭಾರತದ ಎಲೆಕ್ಟ್ರಾನಿಕ್ಸ್ ವಲಯದಲ್ಲೂ ಬಿಂಬಿಸಿದೆ. ಹಿಂದಿನ ವಿತ್ತೀಯ ವರ್ಷದಲ್ಲಿ 23.55 ಬಿಲಿಯನ್ ಡಾಲರುಗಳ ಮೌಲ್ಯದ ಎಲೆಕ್ಟ್ರಾನಿಕ್ಸ್ ರಫ್ತಾಗಿದ್ದರೆ ಈ ಬಾರಿ ಅದು 29.12 ಬಿಲಿಯನ್ ಡಾಲರುಗಳಿಗೆ ಹೆಚ್ಚಳವಾಗಿದೆ.

ಇದನ್ನೂ ಓದಿ: Narendra Modi: ಟ್ವಿಟರ್-ವಾಟ್ಸಾಪ್ ಹಳೇದಾಯ್ತು; ಈ ಬಾರಿ ಮೋದಿ ಚುನಾವಣೆ ಪ್ರಚಾರಕ್ಕೆ ʼಭಾಷಿಣಿʼಯ ಬಲ!

ಮೇಕ್ ಇನ್ ಇಂಡಿಯಾ ಕೆಲಸ ಮಾಡುತ್ತಿದೆಯಾ ಎಂದು ಕೇಳುವವರು ನೋಡಲೇಬೇಕಾದ ಯಶೋಗಾಥೆ ಭಾರತದ ಮೊಬೈಲ್ ಫೋನುಗಳ ಉತ್ಪಾದನೆಯದ್ದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Actor Darshan: ಕಳೆದ ವರ್ಷ ಮದುವೆಯಾಗಿದ್ದ ರೇಣುಕಾಸ್ವಾಮಿ ಪತ್ನಿ ಗರ್ಭಿಣಿ; ಸಾವಿನ ವಿಚಾರ ಆಕೆಗೆ ಗೊತ್ತೇ ಇಲ್ಲ!

Actor Darshan: Actor Darshan: ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಎಂಬುವರ ಮೇಲೆ ದರ್ಶನ್‌ ಸೇರಿ ಹಲವರು ಹಲ್ಲೆ ನಡೆಸಿದ್ದು, ಇದಾದ ಬಳಿಕ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಟ ದರ್ಶನ್‌ ಸೇರಿ ಹಲವರು ರೇಣುಕಾಸ್ವಾಮಿ ಅವರ ಮರ್ಮಾಂಗಕ್ಕೆ ಹೊಡೆದು, ಒದ್ದು ಹಲ್ಲೆ ನಡೆಸಿದ್ದರು. ಕೊಲೆ ಮಾಡಿದ ಆರೋಪಿಗಳ ಜತೆ ದರ್ಶನ್‌ ನಿರಂತರವಾಗಿ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಈಗ ಪೊಲೀಸರು ದರ್ಶನ್‌ ಅವರನ್ನು ಬಂಧಿಸಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ನಟ ದರ್ಶನ್ (Actor Darshan) ಗೆಳತಿ, ನಟಿಯೂ ಆದ ಪವಿತ್ರಾ ಗೌಡ (Pavithra Gowda) ಅವರ ಕುರಿತು ಅಶ್ಲೀಲವಾಗಿ ಪೋಸ್ಟ್‌ ಅಥವಾ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರಿಂದ 28 ವರ್ಷದ ಯುವಕ ರೇಣುಕಾಸ್ವಾಮಿ ಹತ್ಯೆಗೀಡಾಗಿದ್ದಾನೆ. ನಟ ದರ್ಶನ್‌ ಸೇರಿ ಹಲವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಪ್ರಕರಣದಲ್ಲಿ ದರ್ಶನ್‌, ಪವಿತ್ರಾ ಗೌಡ ಸೇರಿ ಹಲವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ, ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ, ಕಳೆದ ವರ್ಷವಷ್ಟೇ ಮದುವೆಯಾಗಿದ್ದ. ಈಗ ಆತನ ಹೆಂಡತಿ ಗರ್ಭಿಣಿಯಾಗಿದ್ದಾರೆ ಎಂಬ ವಿಚಾರ ತಿಳಿದುಬಂದಿದೆ.

ಹೌದು, ರೇಣುಕಾಸ್ವಾಮಿ ಹಾಗೂ ಸಹನಾ 2023ರ ಜೂನ್‌ 28ರಂದು ಮದುವೆಯಾಗಿದ್ದರು. ಇನ್ನೇನು ಕೆಲವೇ ದಿನಗಳಲ್ಲಿ ಇಬ್ಬರೂ ಮೊದಲ ವಿವಾಹ ವಾರ್ಷಿಕೋತ್ಸವ ಆಚರಿಸುವವರಿದ್ದರು. ಇದರ ಮಧ್ಯೆಯೇ ರೇಣುಕಾಸ್ವಾಮಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಸಹನಾ ಈಗ ಐದು ತಿಂಗಳ ಗರ್ಭಿಣಿಯಾಗಿದ್ದು, ಅವರಿಗೆ ರೇಣುಕಾಸ್ವಾಮಿ ಸಾವಿಗೀಡಾಗಿರುವ ವಿಚಾರವನ್ನು ಕುಟುಂಬಸ್ಥರು ಇನ್ನೂ ತಿಳಿಸಿಲ್ಲ. ಆಸ್ಪತ್ರೆಯಲ್ಲಿದ್ದಾನೆ, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದಷ್ಟೇ ಹೇಳಿದ್ದಾರೆ. ಪತಿಯ ಸಾವಿನ ವಿಚಾರ ತಿಳಿದರೆ, ಗರ್ಭವತಿಯಾಗಿರುವ ಸಹನಾಗೆ ಏನಾಗುತ್ತದೆಯೋ ಎಂಬ ಭಯದಿಂದ ಕುಟುಂಬಸ್ಥರು ಸಾವಿನ ವಿಚಾರ ತಿಳಿಸಿಲ್ಲ ಎಂದು ತಿಳಿದುಬಂದಿದೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಜೂನ್‌ 9ರ ಭಾನುವಾರ ರಾಜಕಾಲುವೆ ಬಳಿ ಶವ ಪತ್ತೆಯಾಗಿತ್ತು. ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಪೊಲೀಸರು ತನಿಖೆ ನಡೆಸಿದ್ದರು.

ದರ್ಶನ್‌ ಕೈವಾಡವೇನು?

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮತ್ತೊಂದಿಷ್ಟು ಮೂಲಗಳ ಪ್ರಕಾರ, ರೇಣುಕಾಸ್ವಾಮಿ ಮೇಲೆ ದರ್ಶನ್‌ ಅವರೇ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದಾದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಂತರ ಶವವನ್ನು ಚರಂಡಿ ಬಳಿ ಎಸೆಯಲಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ: Pavithra Gowda: ಕೊಲೆ ಕೇಸ್;‌ ದರ್ಶನ್‌ ಬಂಧನ ಬೆನ್ನಲ್ಲೇ ಗೆಳತಿ ಪವಿತ್ರಾ ಗೌಡ ಕೂಡ ಪೊಲೀಸ್‌ ವಶಕ್ಕೆ!

Continue Reading

ಕರ್ನಾಟಕ

Pavithra Gowda: ಕೊಲೆ ಕೇಸ್;‌ ದರ್ಶನ್‌ ಬಂಧನ ಬೆನ್ನಲ್ಲೇ ಗೆಳತಿ ಪವಿತ್ರಾ ಗೌಡ ಕೂಡ ಪೊಲೀಸ್‌ ವಶಕ್ಕೆ!

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಜೂನ್‌ 9ರ ಭಾನುವಾರ ರಾಜಕಾಲುವೆ ಬಳಿ ಶವ ಪತ್ತೆಯಾಗಿತ್ತು. ಕೊಲೆಯ ಹಿಂದೆ ಪವಿತ್ರಾ ಗೌಡ ಅವರ ಕೈವಾಡ ಇರುವ ಶಂಕೆಯ ಹಿನ್ನೆಲೆಯಲ್ಲಿ ನಟಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Pavithra Gowda
Koo

ಬೆಂಗಳೂರು: ರೇಣುಕಾಸ್ವಾಮಿ ಎಂಬ ಯುವಕನನ್ನು ಕೊಲೆ ಮಾಡಿದ ಆರೋಪದಲ್ಲಿ ಸ್ಯಾಂಡಲ್‌ವುಡ್‌ ಖ್ಯಾತ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಅವರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ನಟ ದರ್ಶನ್‌ ಅವರ ಗೆಳತಿಯೂ ಆದ ನಟಿ (Pavithra Gowda) ಅವರನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರೇಣುಕಾಸ್ವಾಮಿ ಹತ್ಯೆಯ ಹಿಂದೆ ಒಳಸಂಚು ರೂಪಿಸಿದ ಆರೋಪದಲ್ಲಿ ಬೆಂಗಳೂರಿನ ಅನ್ನಪೂರ್ಣೇಶ್ವರ ನಗರ ಠಾಣೆಯ ಪೊಲೀಸರು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈಗಾಗಲೇ ನಟ ದರ್ಶನ್‌ ಅವರನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿಯೇ ರೇಣುಕಾಸ್ವಾಮಿ ಎಂಬ ಯುವಕನನ್ನು ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹಾಗಾಗಿ, ಕೊಲೆಯ ಹಿಂದೆ ಪವಿತ್ರಾ ಗೌಡ ಅವರ ಕೈವಾಡ ಏನಿದೆ? ಇವರು ಮಾಡಿದ ಒಳಸಂಚು ಏನಿದೆ ಎಂಬುದರ ಕುರಿತು ಹೆಚ್ಚಿನ ತನಿಖೆ ನಡೆಸಲು ಪೊಲೀಸರು ನಟಿಯನ್ನು ವಶಪಡಿಸಿಕೊಂಡಿಸಿದ್ದಾರೆ ಎಂದು ತಿಳಿದುಬಂದಿದೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಜೂನ್‌ 9ರ ಭಾನುವಾರ ರಾಜಕಾಲುವೆ ಬಳಿ ಶವ ಪತ್ತೆಯಾಗಿತ್ತು. ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಪೊಲೀಸರು ತನಿಖೆ ನಡೆಸಿದ್ದರು.

ದರ್ಶನ್‌ ಕೈವಾಡವೇನು?

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮತ್ತೊಂದಿಷ್ಟು ಮೂಲಗಳ ಪ್ರಕಾರ, ರೇಣುಕಾಸ್ವಾಮಿ ಮೇಲೆ ದರ್ಶನ್‌ ಅವರೇ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದಾದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಂತರ ಶವವನ್ನು ಚರಂಡಿ ಬಳಿ ಎಸೆಯಲಾಗಿತ್ತು ಎನ್ನಲಾಗಿದೆ.

ಪ್ರಕರಣ ಭೇದಿಸಿದ್ದು ಹೇಗೆ?

ಅಪರಿಚಿತ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ತನಿಖೆ ಆರಂಭಿಸಿದ್ದರು. ಇದರ ಮಧ್ಯೆಯೇ, ಗಿರಿನಗರದ ಮೂವರು ಆರೋಪಿಗಳು ತಾವೇ ಕೊಲೆ ಮಾಡಿದ್ದಾಗಿ ಪೊಲೀಸರಿಗೆ ಶರಣಾಗಿದ್ದರು. ಹಣಕಾಸು ವಿಚಾರವಾಗಿ ಕೊಲೆ ಮಾಡಿರುವುದಾಗಿ ಅವರು ಒಪ್ಪಿಕೊಂಡಿದ್ದರು. ಅನುಮಾನಗೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿದಾಗ, ನಟ ದರ್ಶನ್‌ ಕೈವಾಡ ಇರುವುದು ಬಯಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳೇ ದರ್ಶನ್‌ ಹೆಸರು ಹೇಳಿದ ಕಾರಣ ನಟನನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Actor Darshan: ಹತ ರೇಣುಕಾಸ್ವಾಮಿ ಯಾರು? ಕೊಲೆ ಹಿಂದೆ ದರ್ಶನ್‌ ಕೈವಾಡವೇನು? ಇಲ್ಲಿದೆ ಶಾಕಿಂಗ್‌ ಮಾಹಿತಿ

Continue Reading

ಕರ್ನಾಟಕ

Actor Darshan: ಹತ ರೇಣುಕಾಸ್ವಾಮಿ ಯಾರು? ಕೊಲೆ ಹಿಂದೆ ದರ್ಶನ್‌ ಕೈವಾಡವೇನು? ಇಲ್ಲಿದೆ ಶಾಕಿಂಗ್‌ ಮಾಹಿತಿ

Actor Darshan: ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಎಂಬುವರ ಮೇಲೆ ಎರಡು ತಿಂಗಳ ಹಿಂದೆ ದರ್ಶನ್‌ ಸೇರಿ ಹಲವರು ಹಲ್ಲೆ ನಡೆಸಿದ್ದು, ಇದಾದ ಬಳಿಕ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಟ ದರ್ಶನ್‌ ಸೇರಿ ಹಲವರು ರೇಣುಕಾಸ್ವಾಮಿ ಅವರ ಮರ್ಮಾಂಗಕ್ಕೆ ಹೊಡೆದು, ಒದ್ದು ಹಲ್ಲೆ ನಡೆಸಿದ್ದರು. ಕೊಲೆ ಮಾಡಿದ ಆರೋಪಿಗಳ ಜತೆ ದರ್ಶನ್‌ ನಿರಂತರವಾಗಿ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಈಗ ಪೊಲೀಸರು ದರ್ಶನ್‌ ಅವರನ್ನು ಬಂಧಿಸಿದ್ದಾರೆ.

VISTARANEWS.COM


on

Actor Darshan
ಹತ ರೇಣುಕಾಸ್ವಾಮಿ ಹಾಗೂ ದರ್ಶನ್.
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ಖ್ಯಾತ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ‌ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರು ನಟಿ ಪವಿತ್ರಾ ಗೌಡ ಅವರಿಗೆ ಮೆಸೇಜ್‌ ಮಾಡಿದ್ದರು) ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಆರೋಪದಲ್ಲಿ ರೇಣುಕಾಸ್ವಾಮಿ (28) ಎಂಬ ಯುವಕನನ್ನು ಹತ್ಯೆಗೈದ ಆರೋಪದಲ್ಲಿ ದರ್ಶನ್‌ (Actor Darshan Arrested) ಅವರನ್ನು ಬಂಧಿಸಲಾಗಿದೆ. ಮೈಸೂರಿನಲ್ಲಿರುವ ನಟನ ಫಾರ್ಮ್‌ಹೌಸ್‌ನಲ್ಲಿ ದರ್ಶನ್‌ ಅವರನ್ನು ಬಂಧಿಸಿರುವ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ವಿಚಾರಣೆ ನಡೆಸಿದ್ದಾರೆ. ದರ್ಶನ್‌ ಅವರನ್ನು ವಶಪಡಿಸಿಕೊಂಡಿರುವ ಕುರಿತು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ್‌ ಅವರು ಮಾಹಿತಿ ನೀಡಿದ್ದಾರೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಜೂನ್‌ 9ರ ಭಾನುವಾರ ರಾಜಕಾಲುವೆ ಬಳಿ ಶವ ಪತ್ತೆಯಾಗಿತ್ತು. ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಪೊಲೀಸರು ತನಿಖೆ ನಡೆಸಿದ್ದರು.

ದರ್ಶನ್‌ ಕೈವಾಡವೇನು?

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮತ್ತೊಂದಿಷ್ಟು ಮೂಲಗಳ ಪ್ರಕಾರ, ರೇಣುಕಾಸ್ವಾಮಿ ಮೇಲೆ ದರ್ಶನ್‌ ಅವರೇ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದಾದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಂತರ ಶವವನ್ನು ಚರಂಡಿ ಬಳಿ ಎಸೆಯಲಾಗಿತ್ತು ಎನ್ನಲಾಗಿದೆ.

ಪ್ರಕರಣ ಭೇದಿಸಿದ್ದು ಹೇಗೆ?

ಅಪರಿಚಿತ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ತನಿಖೆ ಆರಂಭಿಸಿದ್ದರು. ಇದರ ಮಧ್ಯೆಯೇ, ಗಿರಿನಗರದ ಮೂವರು ಆರೋಪಿಗಳು ತಾವೇ ಕೊಲೆ ಮಾಡಿದ್ದಾಗಿ ಪೊಲೀಸರಿಗೆ ಶರಣಾಗಿದ್ದರು. ಹಣಕಾಸು ವಿಚಾರವಾಗಿ ಕೊಲೆ ಮಾಡಿರುವುದಾಗಿ ಅವರು ಒಪ್ಪಿಕೊಂಡಿದ್ದರು. ಅನುಮಾನಗೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿದಾಗ, ನಟ ದರ್ಶನ್‌ ಕೈವಾಡ ಇರುವುದು ಬಯಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳೇ ದರ್ಶನ್‌ ಹೆಸರು ಹೇಳಿದ ಕಾರಣ ನಟನನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ರೇಣುಕಾಸ್ವಾಮಿ ಯಾರು?

ಚಿತ್ರದುರ್ಗ ಮೂಲದವನಾದ ರೇಣುಕಾಸ್ವಾಮಿ ಎಂಬ 28 ವರ್ಷದ ಯುವಕನು ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಈತನು ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದರ್ಶನ್‌ ಹಾಗೂ ಅವರ ಆಪ್ತರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ದರ್ಶನ್‌ ಸೇರಿ 10 ಮಂದಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿಗೆ ಕಳೆದ ವರ್ಷವೇ ಸಹನಾ ಎಂಬ ಯುವತಿ ಜತೆ ಮದುವೆಯಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Actor Darshan: ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಬಂಧನ; ಏನಿದು ಪ್ರಕರಣ?

Continue Reading

ಪ್ರಮುಖ ಸುದ್ದಿ

Actor Darshan: ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಬಂಧನ; ಏನಿದು ಪ್ರಕರಣ?

Actor Darshan: ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಎಂಬುವರ ಮೇಲೆ ಎರಡು ತಿಂಗಳ ಹಿಂದೆ ದರ್ಶನ್‌ ಸೇರಿ ಹಲವರು ಹಲ್ಲೆ ನಡೆಸಿದ್ದು, ಇದಾದ ಬಳಿಕ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಟ ದರ್ಶನ್‌ ಸೇರಿ ಹಲವರು ರೇಣುಕಾಸ್ವಾಮಿ ಅವರ ಮರ್ಮಾಂಗಕ್ಕೆ ಹೊಡೆದು, ಒದ್ದು ಹಲ್ಲೆ ನಡೆಸಿದ್ದರು. ಕೊಲೆ ಮಾಡಿದ ಆರೋಪಿಗಳ ಜತೆ ದರ್ಶನ್‌ ನಿರಂತರವಾಗಿ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಈಗ ಪೊಲೀಸರು ದರ್ಶನ್‌ ಅವರನ್ನು ಬಂಧಿಸಿದ್ದಾರೆ.

VISTARANEWS.COM


on

Actor Darshan
Koo

ಮೈಸೂರು: ವ್ಯಕ್ತಿಯೊಬ್ಬರ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಟ್‌ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನಲ್ಲಿರುವ (Mysore) ದರ್ಶನ್‌ ಅವರ ತೋಟದ ಮನೆಯಲ್ಲಿ ಬೆಂಗಳೂರಿನ ಪೊಲೀಸರು ದರ್ಶನ್‌ ಅವರನ್ನು ಬಂಧಿಸಿದ್ದಾರೆ. ನಟನನ್ನು ಬಂಧಿಸಿರುವ (Actor Darshan Arrested) ಪೊಲೀಸರು ಬೆಂಗಳೂರಿಗೆ ಕರೆದುಕೊಂಡು ಬರುತ್ತಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಜತೆಗೆ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಎಂಬುವರ ಮೇಲೆ ಎರಡು ತಿಂಗಳ ಹಿಂದೆ ದರ್ಶನ್‌ ಸೇರಿ ಹಲವರು ಹಲ್ಲೆ ನಡೆಸಿದ್ದು, ಇದಾದ ಬಳಿಕ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಟ ದರ್ಶನ್‌ ಸೇರಿ ಹಲವರು ರೇಣುಕಾಸ್ವಾಮಿ ಅವರ ಮರ್ಮಾಂಗಕ್ಕೆ ಹೊಡೆದು, ಒದ್ದು ಹಲ್ಲೆ ನಡೆಸಿದ್ದರು. ಕೊಲೆ ಮಾಡಿದ ಆರೋಪಿಗಳ ಜತೆ ದರ್ಶನ್‌ ನಿರಂತರವಾಗಿ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಈಗ ಪೊಲೀಸರು ದರ್ಶನ್‌ ಅವರನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್‌ ಮಾಹಿತಿ ನೀಡಿದ್ದು, “ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ದರ್ಶನ್‌ ಅವರನ್ನು ಕರೆತರಲಾಗಿದೆ” ಎಂದು ತಿಳಿಸಿದ್ದಾರೆ.

ಹತ್ಯೆಗೀಡಾದ ಯುವಕ.

ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರು ನಟಿ ಪವಿತ್ರಾ ಗೌಡ ಅವರಿಗೆ ಮೆಸೇಜ್‌ ಮಾಡಿದ್ದರು. ಇದರಿಂದ ಕುಪಿತಗೊಂಡಿದ್ದ ದರ್ಶನ್‌ ಅವರು ಹಲವರೊಂದಿಗೆ ತೆರಳಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು ಎಂದು ತಿಳಿದುಬಂದಿತ್ತು. ಕೊಲೆ ಕುರಿತು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎರಡು ತಿಂಗಳ ಹಿಂದೆ ಹತ್ಯೆ ಮಾಡಲಾಗಿತ್ತು.

ಕೊಲೆ ಕೇಸ್‌ನಲ್ಲಿ ದಾಖಲಾಗಿದ್ದ ಎಫ್‌ಐಆರ್

ಬೆಂಗಳೂರಿನ ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ವ್ಯಕ್ತಿಯನ್ನು ಹತ್ಯೆ ಮಾಡಿ ರಾಜಕಾಲುವೆ ಬಳಿ ಬಿಸಾಡಲಾಗಿತ್ತು. ಶವವನ್ನು ನೋಡಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಶವ ರೇಣುಕಾಸ್ವಾಮಿ ಅವರದ್ದೇ ಎಂದು ಗುರುತಿಸಿದ್ದರು. ಇದಾದ ಬಳಿಕ ತನಿಖೆ ಕೈಗೊಂಡಿದ್ದರು. ತನಿಖೆ ನಡೆಸಿದ ಪೊಲೀಸರು ದರ್ಶನ್‌ ಅವರನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ದರ್ಶನ್‌ ಅವರ ಬೌನ್ಸರ್‌ಗಳನ್ನು ಕೂಡ ಬಂಧಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Actor Darshan: ಅರ್ಜುನನ ಸಮಾಧಿ ನಿರ್ಮಾಣ: ಅರಣ್ಯಾಧಿಕಾರಿಗಳ ವಿರುದ್ಧ ದರ್ಶನ್ ಅಭಿಮಾನಿಗಳಿಂದ ಆಕ್ರೋಶ!

Continue Reading
Advertisement
Champions Trophy 2025
ಕ್ರಿಕೆಟ್8 mins ago

Champions Trophy 2025: ಲಾಹೋರ್​ನಲ್ಲಿ ಭಾರತದ ಪಂದ್ಯ ಆಯೋಜನೆಗೆ ಸಿದ್ಧತೆ ಆರಂಭಿಸಿದ ಪಾಕ್​ ಕ್ರಿಕೆಟ್​ ಮಂಡಳಿ

Drowned in water
ದಕ್ಷಿಣ ಕನ್ನಡ18 mins ago

Drowned in water : ಅಪ್ಪಳಿಸಿ ಬಂದ ರಕ್ಕಸ ಅಲೆಗೆ ಕೊಚ್ಚಿ ಹೋದ ಮಹಿಳೆ ಸಾವು; ಮೂವರ ರಕ್ಷಣೆ

Actor Darshan
ಕರ್ನಾಟಕ19 mins ago

Actor Darshan: ಕಳೆದ ವರ್ಷ ಮದುವೆಯಾಗಿದ್ದ ರೇಣುಕಾಸ್ವಾಮಿ ಪತ್ನಿ ಗರ್ಭಿಣಿ; ಸಾವಿನ ವಿಚಾರ ಆಕೆಗೆ ಗೊತ್ತೇ ಇಲ್ಲ!

Actor Darshan
ಕರ್ನಾಟಕ25 mins ago

Actor Darshan: ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಅರೆಸ್ಟ್‌; ಪೊಲೀಸರು ಹೇಳಿದ್ದೇನು?

Pavithra Gowda
ಕರ್ನಾಟಕ40 mins ago

Pavithra Gowda: ಕೊಲೆ ಕೇಸ್;‌ ದರ್ಶನ್‌ ಬಂಧನ ಬೆನ್ನಲ್ಲೇ ಗೆಳತಿ ಪವಿತ್ರಾ ಗೌಡ ಕೂಡ ಪೊಲೀಸ್‌ ವಶಕ್ಕೆ!

black magic
ದಕ್ಷಿಣ ಕನ್ನಡ51 mins ago

Black Magic : 25 ಕುರಿ-ಮೇಕೆಗಳ ರುಂಡ ಕತ್ತರಿಸಿ ವ್ಯಕ್ತಿಗಳ ಫೋಟೊ ಇಟ್ಟು ಭಯಾನಕ ವಾಮಾಚಾರ!

Kamran Akmal
ಕ್ರಿಕೆಟ್57 mins ago

Kamran Akmal: ಜನಾಂಗೀಯ ನಿಂದನೆಗೆ ಜಾಡಿಸಿದ ಹರ್ಭಜನ್​ ಸಿಂಗ್​: ಕ್ಷಮೆಯಾಚಿಸಿದ ಕಮ್ರಾನ್ ಅಕ್ಮಲ್

Actor Darshan
ಕರ್ನಾಟಕ1 hour ago

Actor Darshan: ಹತ ರೇಣುಕಾಸ್ವಾಮಿ ಯಾರು? ಕೊಲೆ ಹಿಂದೆ ದರ್ಶನ್‌ ಕೈವಾಡವೇನು? ಇಲ್ಲಿದೆ ಶಾಕಿಂಗ್‌ ಮಾಹಿತಿ

Saptami Gowda
ಸಿನಿಮಾ1 hour ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Actor Darshan
ಸಿನಿಮಾ1 hour ago

Actor Darshan: ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದವನ ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ಯಾರು ಈ ಪವಿತ್ರಾ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Saptami Gowda
ಸಿನಿಮಾ1 hour ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ20 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

ಟ್ರೆಂಡಿಂಗ್‌