ವಿಸ್ತಾರ ಸಂಪಾದಕೀಯ: ಮೂಲ ಒಂದೇ, ಹಾಗಿದ್ದರೆ ಹಿಂದು- ಮುಸ್ಲಿಂ ಜಗಳವೇಕೆ? - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಮೂಲ ಒಂದೇ, ಹಾಗಿದ್ದರೆ ಹಿಂದು- ಮುಸ್ಲಿಂ ಜಗಳವೇಕೆ?

ಗುಲಾಂ ನಬಿ ಆಜಾದ್ ಅವರ ಹೇಳಿಕೆ ಇತರ ಮುಸ್ಲಿಂ ಮುಖಂಡರ ಮಾತುಗಳಲ್ಲೂ ಪ್ರತಿಧ್ವನಿಸಲಿ. ಈ ಮಾತಿನ ಅನುರಣನ ನಮ್ಮ ದೇಶದ ಎಲ್ಲರ ಮನಸ್ಸಿನ ಆಳಕ್ಕಿಳಿದರೆ ಆಗ ಶಾಂತಿ ಸಮಾಧಾನದ ಬದುಕು ಸಾಧ್ಯ.

VISTARANEWS.COM


on

communal Harmony
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಿಂದುತ್ವ ಹಾಗೂ ಇಸ್ಲಾಂ ಕುರಿತು ಡೆಮಾಕ್ರಸಿ ಪ್ರೊಗ್ರೆಸ್ಸಿವ್‌ ಆಜಾದ್‌ ಪಕ್ಷದ ಮುಖ್ಯಸ್ಥ, ಕಾಂಗ್ರೆಸ್‌ ಮಾಜಿ ನಾಯಕ ಗುಲಾಂ ನಬಿ ಆಜಾದ್ ಮಹತ್ವದ ಹೇಳಿಕೆ ನೀಡಿದ್ದಾರೆ. ಇಸ್ಲಾಂಗಿಂತ ಹಿಂದು ಧರ್ಮವು ಪುರಾತನ ಇತಿಹಾಸ ಹೊಂದಿದೆ. ಭಾರತದಲ್ಲಿರುವ ಮುಸ್ಲಿಮರು ಮೊದಲು ಹಿಂದುಗಳಾಗಿದ್ದರು. ಅವರನ್ನು ಮತಾಂತರಗೊಳಿಸಿ ಮುಸ್ಲಿಮರನ್ನಾಗಿ ಮಾಡಲಾಗಿದೆ. ಕಾಶ್ಮೀರದಲ್ಲಿರುವ ಮುಸ್ಲಿಮರೆಲ್ಲರೂ ಹಿಂದು ಧರ್ಮದಿಂದ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡವರು. ಭಾರತದಲ್ಲಿರುವ ಮುಸ್ಲಿಮರು ಹಿಂದುಗಳೇ ಆಗಿದ್ದರು. ಈಗಿನ ಮುಸ್ಲಿಮರೆಲ್ಲರೂ ಮೊದಲು ಹಿಂದುಗಳಾಗಿದ್ದರು. ಕಾಶ್ಮೀರದಲ್ಲೂ ಇದೇ ಆಗಿದೆ. ಕಾಶ್ಮೀರಿ ಪಂಡಿತರನ್ನು ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಅವರು ನೀಡಿದ ಹೇಳಿಕೆ ಈಗ ಚರ್ಚೆಗೆ ಗ್ರಾಸವಾಗಿದೆ. ಪರ-ವಿರೋಧ ಚರ್ಚೆಗಳು ಕೂಡ ಶುರುವಾಗಿವೆ.

ಗುಲಾಂ ನಬಿ ಆಜಾದ್‌ ಅವರ ಹೇಳಿಕೆಯ ಹಿಂದೆ ಗೂಢಾರ್ಥವೇನೂ ಇಲ್ಲ. ಇದು ಬಹಳ ಹಿಂದಿನಿಂದ ಹೆಚ್ಚಿನವರಿಗೆ ತಿಳಿದಿರುವ ಸಂಗತಿಯೇ ಆಗಿದೆ. ಇದನ್ನು ಹಿಂದೂ ಧರ್ಮದ ಮುಖಂಡರು, ರಾಷ್ಟ್ರೀಯತೆಯ ಪ್ರತಿಪಾದಕರು ಹೇಳುತ್ತಲೇ ಬಂದಿದ್ದಾರೆ. ಎಲ್ಲಿಯವರೆಗೆ ಎಂದರೆ, ಇಲ್ಲಿನ ಇಂದಿನ ಮುಸ್ಲಿಮರ ಮೂಲ ಹಿಂದೂ ಧರ್ಮವೇ ಆಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡರು ಕೂಡ ಹೇಳಿದ್ದುಂಟು. ಆದರೆ ಮುಖ್ಯವಾಹಿನಿ ರಾಜಕಾರಣದ ಮುಸ್ಲಿಂ ಮುಖಂಡರೊಬ್ಬರು ಈ ಮಾತನ್ನು ಹೇಳುತ್ತಿರುವುದು ಇದೇ ಮೊದಲು. ಕಾಂಗ್ರೆಸ್‌ ಮುಖಂಡರಾಗಿದ್ದಾಗ ಅವರು ಈ ಮಾತನ್ನು ಹೇಳುವ ಧೈರ್ಯ ಮಾಡಿರಲಿಲ್ಲ; ಈಗ ಕಾಂಗ್ರೆಸ್‌ ತೊರೆದ ಬಳಿಕ ಹೇಳಿದ್ದಾರೆ. ಇರಲಿ, ಈಗಲಾದರೂ ಧೈರ್ಯ ತೋರಿದ್ದಾರೆ ಎಂದು ಪ್ರಶಂಸಿಸೋಣ. ಗುಲಾಂ ಹೇಳಿಕೆ ಎರಡೂ ಸಮುದಾಯಗಳ ಕಣ್ಣು ತೆರೆಸುವಂತಿದೆ.

ಇಸ್ಲಾಂ ಕೇವಲ 1,500 ವರ್ಷಗಳ ಇತಿಹಾಸ ಹೊಂದಿದೆ. ಆದರೆ, ಹಿಂದುತ್ವವು ಇದಕ್ಕಿಂತ ತುಂಬ ಹಳೆಯದು. ಮೊಘಲರ ಅವಧಿಯಲ್ಲಿ 10-20 ಜನ ಮಾತ್ರ ಹೊರಗಿನಿಂದ ಕಾಶ್ಮೀರಕ್ಕೆ ಬಂದಿರಬಹುದು. ಕಾಶ್ಮೀರದಲ್ಲಿ 600 ವರ್ಷಗಳ ಹಿಂದೆ ಮುಸ್ಲಿಮರು ಇರಲಿಲ್ಲ. ಕಣಿವೆಯಲ್ಲಿ ಇದ್ದವರೆಲ್ಲ ಕಾಶ್ಮೀರಿ ಪಂಡಿತರೇ ಆಗಿದ್ದರು. ಅಂದರೆ, ಈಗಿರುವ ಮುಸ್ಲಿಮರು ಮೊದಲು ಕಾಶ್ಮೀರಿ ಪಂಡಿತರೇ ಆಗಿದ್ದರು. ಹಾಗಾಗಿ, ಇಲ್ಲಿನ ಮುಸ್ಲಿಮರ ಮೂಲ ಹಿಂದು ಧರ್ಮವೇ ಆಗಿತ್ತು. ಹಿಂದು ಧರ್ಮದ ಆಧಾರದ ಮೇಲೆಯೇ ಇಲ್ಲಿನ ಸಂಸ್ಕೃತಿ, ಆಚಾರ, ವಿಚಾರ ಇದೆ. ಹಾಗಾಗಿ, ನಮ್ಮ ಮೂಲ ಹಿಂದು ಧರ್ಮವೇ ಆಗಿದೆ ಎಂಬುದು ಗುಲಾಂ ನಬಿ ಆಜಾದ್‌ ಅವರ ಸ್ಪಷ್ಟ ಅಭಿಪ್ರಾಯವಾಗಿದೆ. ಇದಕ್ಕೆ ಪೂರಕವಾಗಿ ಇನ್ನೊಂದು ನಿದರ್ಶನ ನೀಡಬಹುದು. 300 ವರ್ಷಗಳ ಹಿಂದೆ ಭಾರತಕ್ಕೆ ಬಂದ ಬ್ರಿಟಿಷರ ಸಂಖ್ಯೆ ಕೇವಲ ಕೆಲವು ಸಾವಿರ. ಆದರೆ ನಂತರ ಅವರು ಇಲ್ಲಿನ ಪ್ರದೇಶಗಳನ್ನು ವಶಪಡಿಸಿಕೊಳ್ಳುತ್ತ ಹೋದಂತೆಲ್ಲ ತಮ್ಮ ಅಧಿಕಾರದ ವ್ಯಾಪ್ತಿಯನ್ನು ವಿಸ್ತರಿಸಿದರು. ಹಾಗಾಗಿ ಇಡೀ ಭಾರತ ಅವರ ಕೈವಶವಾಯಿತು. ಅದೇ ರೀತಿ ಇಸ್ಲಾಂನ ಕೆಲವೇ ಮಂದಿ ಭಾರತಕ್ಕೆ ಬಂದವರು ಇಲ್ಲಿ ತಮ್ಮ ಧರ್ಮವನ್ನು ವ್ಯಾಪಕಗೊಳಿಸಿದರು. ಬ್ರಿಟಿಷರಿಗೆ ಮುನ್ನ ಹಾಗೂ ಅವರ ಜತೆಗೆ ಬಂದ ಕ್ರೈಸ್ತ ಮಿಷನರಿಗಳು ಇಲ್ಲಿ ಅವರ ಧರ್ಮವನ್ನು ಹಬ್ಬಿಸಲು ಸಾಕಷ್ಟು ಪ್ರಯತ್ನಿಸಿದರು. ಇದಕ್ಕೆ ಭಾಗಶಃ ಯಶಸ್ಸಷ್ಟೇ ದೊರೆಯಿತು. ಇಸ್ಲಾಂ ಭಾರತದಲ್ಲಿ ಇಷ್ಟು ಹರಡಲು ಅದನ್ನು ಇಲ್ಲಿಗೆ ತಂದವರ ಆಕ್ರಮಣಕಾರಿ ಗುಣವೂ ಕಾರಣವಾಗಿತ್ತು. ಸಾವಿರಾರು ಹಿಂದೂಗಳನ್ನು ಮತಾಂತರಗೊಳಿಸಿ ಮುಸ್ಲಿಮರನ್ನಾಗಿಸಲಾಯಿತು.

ಇದನ್ನೂ ಓದಿ : ಇಸ್ಲಾಂಗಿಂತ ಹಿಂದುತ್ವ ಹಳೆಯದು, ಭಾರತದ ಮುಸ್ಲಿಮರು ಹಿಂದುಗಳಾಗಿದ್ದರು; ಗುಲಾಂ ನಬಿ ಆಜಾದ್‌ ಮತ್ತೇನು ಹೇಳಿದರು?

ಇದೆಲ್ಲಾ ಯಾವತ್ತೋ ಆಗಿ ಹೋದ ಮಾತು, ನಿಜ. ಇದಕ್ಕೆ ಸಾಕಷ್ಟು ದಾಖಲೆಗಳು, ಸಾಕ್ಷ್ಯಗಳೂ ಸಿಗುತ್ತವೆ. ಇದು ನಿಜವೆಂದು ಮತ್ತೆ ಮತ್ತೆ ಸಾಬೀತುಪಡಿಸುವ ಅಗತ್ಯವಿಲ್ಲ. ಆದರೆ ಇದನ್ನೇ ಮತ್ತೆ ಮತ್ತೆ ಹಿಡಿದು ಜಗ್ಗಾಡುವುದರಲ್ಲಿಯೂ ಅರ್ಥವಿಲ್ಲ. ಹಿಂದು ಧರ್ಮದ ನಂಬಿಕೆ, ಆಚರಣೆಗಳು ಬೇರೆ; ಮುಸ್ಲಿಮರು ನಂಬಿಕೆ, ಆಚರಣೆಗಳು ಬೇರೆ. ಆದರೆ ಸಹಬಾಳ್ವೆ ಸಾಧ್ಯವಿದೆ ಎಂದು ಶತಮಾನಗಳಿಂದ ಸಾಬೀತಾಗಿದೆ. ಹಿಂದೂ- ಇಸ್ಲಾಂಗಳು ಸೇರಿ ಸೃಷ್ಟಿಯಾಗಿರುವ ಸೂಫಿ ಬದುಕಿನ ಕ್ರಮವೂ ಭಾರತದಲ್ಲಿ ಇದೆ. ಇದು ಮುಸ್ಲಿಮರ ಏಕದೇವತಾರಾಧನೆಯನ್ನೇ ಮುಖ್ಯವಾಗಿ ಹೊಂದಿದ್ದರೂ ಹಿಂದೂ ಮೂಲದ ಹಾಡು ನೃತ್ಯ ಕುಣಿತಗಳನ್ನು ಪ್ರೀತಿಯಿಂದ ಒಳಗೊಂಡಿದೆ. ದೇಶದ ಎಲ್ಲ ಗ್ರಾಮಗಳಲ್ಲೂ ಹಿಂದೂ- ಮುಸ್ಲಿಮರು ಅಕ್ಕಪಕ್ಕದಲ್ಲಿ ವಾಸಿಸುತ್ತಿದ್ದಾರೆ. ಎಲ್ಲೋ ಕೆಲವೊಮ್ಮೆ ಕೆಲವು ದುಷ್ಟರಿಂದ ಶಾಂತಿ ಕದಡುವ ಕೃತ್ಯಗಳು ನಡೆಯುತ್ತವೆ. ತಪ್ಪು ಕಲ್ಪನೆ, ಪ್ರಚೋದನೆಗಳಿಂದ ಉಂಟಾಗುವ ಕೋಮುಗಲಭೆಗಳು ಕ್ಷೋಭೆಯನ್ನು ಉಂಟುಮಾಡುತ್ತವೆ. ಇಂಥ ಪ್ರಚೋದನೆಗಳಿಗೆ ಮನಸ್ಸು ಕೊಡದೆ ಒಟ್ಟಾಗಿ ಬದುಕುವ ಎಷ್ಟೋ ಸಮುದಾಯಗಳು, ಬಡಾವಣೆಗಳು ಇಂದಿಗೂ ತಮ್ಮ ಶಾಂತಿ ಸಮಾಧಾನ ಸಹಬಾಳ್ವೆಗಳನ್ನು ಕಾಪಾಡಿಕೊಂಡಿವೆ. ಇದು ನಮಗೆ ಮಾದರಿಯಾಗಿರಲಿ. ಹಿಂದೂ ಮುಸ್ಲಿಮರು ಸಹೋದರರು ಎಂದ ಮೇಲೆ ಸೋದರರ ನಡುವೆ ಬರಬಹುದಾದ ಸಣ್ಣಪುಟ್ಟ ಮನಸ್ತಾಪಗಳೂ ಉಂಟಾದರೆ ಅದು ಸಹಜ. ಆದರೆ ಅದನ್ನು ಆಗಗೊಡದಂತೆ ಬದುಕುವುದೇ ನಮ್ಮ ಆದ್ಯತೆಯಾಗಬೇಕು. ಗುಲಾಂ ಹೇಳಿಕೆ ಈ ನಿಟ್ಟಿನಲ್ಲಿ ಇತರ ಮುಸ್ಲಿಂ ಮುಖಂಡರ ಮಾತುಗಳಲ್ಲೂ ಪ್ರತಿಧ್ವನಿಸಲಿ. ಈ ಮಾತಿನ ಅನುರಣನ ನಮ್ಮ ದೇಶದ ಎಲ್ಲರ ಮನಸ್ಸಿನ ಆಳಕ್ಕಿಳಿದರೆ ಆಗ ಶಾಂತಿ ಸಮಾಧಾನದ ಬದುಕು ಸಾಧ್ಯ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: 10ನೇ ತರಗತಿ ಪಾಸಾದವರಿಗೆ ಗುಡ್‌ನ್ಯೂಸ್‌; SSCಯಿಂದ ಬರೋಬ್ಬರಿ 8,326 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Job Alert: ಭಾರತ ಸರ್ಕಾರದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 8,326 ಎಂಟಿಎಸ್‌, ಹವಾಲ್ದಾರ್‌ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನ ಜುಲೈ 31. ಮಲ್ಟಿ ಟಾಸ್ಕಿಂಗ್‌ (ನಾನ್‌ ಟಿಕ್ನಿಕಲ್‌) ಸ್ಟಾಫ್‌ (ಎಂಟಿಎಸ್‌) – 4,887 ಮತ್ತು ಸಿಬಿಐಸಿ ಮತ್ತು ಸಿಬಿಎನ್‌ನಲ್ಲಿ ಹವಾಲ್ದಾರ್‌ – 3,439 ಹುದ್ದೆಗಳಿವೆ.

VISTARANEWS.COM


on

Job Alert
Koo

ನವದೆಹಲಿ: ಎಸ್ಸೆಸ್ಸೆಲ್ಸಿ ಮುಗಿಸಿ ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದೀರಾ? ಹಾಗಾದರೆ ಸುವರ್ಣಾವಕಾಶವೊಂದು ನಿಮ್ಮನ್ನು ಹುಡುಕಿಕೊಂಡು ಬಂದಿದೆ. ಭಾರತ ಸರ್ಕಾರದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SSC Recruitment 2024). ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 8,326 ಎಂಟಿಎಸ್‌, ಹವಾಲ್ದಾರ್‌ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನ ಜುಲೈ 31 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮಲ್ಟಿ ಟಾಸ್ಕಿಂಗ್‌ (ನಾನ್‌ ಟಿಕ್ನಿಕಲ್‌) ಸ್ಟಾಫ್‌ (ಎಂಟಿಎಸ್‌) – 4,887 ಮತ್ತು ಸಿಬಿಐಸಿ ಮತ್ತು ಸಿಬಿಎನ್‌ನಲ್ಲಿ ಹವಾಲ್ದಾರ್‌ – 3,439 ಹುದ್ದೆಗಳಿವೆ. SSC Recruitment 2024 ಅಧಿಸೂಚನೆ ಪ್ರಕಾರ ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿ, ವಿಶ್ವವಿದ್ಯಾನಿಯಯದಿಂದ ಎಸ್ಸೆಸ್ಸೆಲ್ಸಿ / 10ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಮಲ್ಟಿ ಟಾಸ್ಕಿಂಗ್‌ (ನಾನ್‌ ಟಿಕ್ನಿಕಲ್‌) ಸ್ಟಾಫ್‌ (ಎಂಟಿಎಸ್‌) ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಇನ್ನು ಹವಾಲ್ದಾರ್‌ ಹುದ್ದೆಗೆ 18-27 ವಯಸ್ಸಿನವರು ಅಪ್ಲೈ ಮಾಡಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗಕ್ಕೆ 3 ವರ್ಷ, ಎಸ್‌ಸಿ / ಎಸ್‌ಟಿ ವಿಭಾಗಕ್ಕೆ 5 ವರ್ಷ, ಪಿಡಬ್ಲ್ಯುಬಿಡಿ (ಸಾಮಾನ್ಯ) ವಿಭಾಗಕ್ಕೆ 10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ) ವಿಭಾಗಕ್ಕೆ 1೦ ವರ್ಷ, ಪಿಡಬ್ಲ್ಯುಬಿಡಿ (ಎಸ್‌ಸಿ / ಎಸ್‌ಟಿ) ವಿಭಾಗಕ್ಕೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಹಿಳೆ / ಇಎಸ್‌ಎಂ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಸಾಮಾನ್ಯ / ಒಬಿಸಿ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ 100 ರೂ. ಅರ್ಜಿ ಶುಲ್ಕ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಲಿಖಿತ ಪರೀಕ್ಷೆ, ಪ್ರಾಥಮಿಕ ಅರ್ಹತಾ ಪರೀಕ್ಷೆ (Preliminary Eligibility Test), ಫಿಸಿಕಲ್‌ ಸ್ಟ್ಯಾಂಡರ್ಡ್‌ ಟೆಸ್ಟ್‌ (Physical Standard Test) ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 18,000 ರೂ. – 22,000 ರೂ. ಮಾಸಿಕ ವೇತನ ದೊರೆಯಲಿದೆ. ಕರ್ನಾಟಕದಲ್ಲಿ ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ ಮುಂತಾದೆಡೆ ಪರೀಕ್ಷಾ ಕೇಂದ್ರಗಳಿವೆ.

SSC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://ssc.gov.in/login).
  • ವೈಯಕ್ತಿಕ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಪಾರಂ ಡೌನ್‌ಲೋಡ್‌ ಮಾಡಿ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ಮಾಹಿತಿಗಾಗಿ Help Desk (SSC-HQ) 1800 309 3063, SSC (KKR), Bengaluru 080 25502520, 09483862020 ನಂಬರ್‌ಗೆ ಕರೆ ಮಾಡಿ. ಅಥವಾ ಅಧಿಕೃತ ವೆಬ್‌ಸೈಟ್‌ ssc.gov.inಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಬರೋಬ್ಬರಿ 17,727 ಹುದ್ದೆಗಳ ಭರ್ತಿಗೆ ಮುಂದಾದ SSC; ಇಂದೇ ಅಪ್ಲೈ ಮಾಡಿ

Continue Reading

ಕರ್ನಾಟಕ

ಕರ್ನಾಟಕ ತೋಟದಪ್ಪನ ಛತ್ರ ಅಲ್ಲ; ಕನ್ನಡಿಗರಿಗೆ ಉದ್ಯೋಗಕ್ಕೆ ಆಗ್ರಹಿಸಿ ಜು.1ರಂದು ಕರವೇ ಬೃಹತ್‌ ಪ್ರತಿಭಟನೆ!

ಕರ್ನಾಟಕ ರಕ್ಷಣಾ ವೇದಿಕೆಯಿಂದ ʼಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ’ ಎಂಬ ಘೋಷಣೆಯೊಂದಿಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜುಲೈ 1 ರಂದು ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದು, ಸಾವಿರಾರು ಕರವೇ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ.

VISTARANEWS.COM


on

Rakshana Vedike
Koo

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆಯಿಂದ (Karnataka Rakshana Vedike) ʼಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ’ ಎಂಬ ಘೋಷಣೆಯೊಂದಿಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜುಲೈ 1ರಂದು ಬೃಹತ್ ಧರಣಿ ಸತ್ಯಾಗ್ರಹ (KaRaVe Protest) ನಡೆಸಲಿದ್ದು, ಸಾವಿರಾರು ಕರವೇ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ (Bengaluru News) ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕಕ್ಕೆ ಹೊರರಾಜ್ಯಗಳಿಂದ ಅವ್ಯಾಹತವಾಗಿ ವಲಸೆ ನಡೆಯುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಇದು ತೀವ್ರ ಸ್ವರೂಪ ಪಡೆದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಮಹಾನಗರಗಳು ವಲಸಿಗರ ಹಾವಳಿಯಿಂದ ಸಂಪೂರ್ಣ ಬದಲಾಗುತ್ತಿವೆ. ಕನ್ನಡಿಗರ ಉದ್ಯೋಗಗಳನ್ನು ಹೊರರಾಜ್ಯದವರು ಕಿತ್ತುಕೊಳ್ಳುತ್ತಿದ್ದಾರೆ. ಕನ್ನಡಿಗರು ತಮ್ಮ ನೆಲದಲ್ಲೇ ನಿರುದ್ಯೋಗಿಗಳಾಗುವ ಸ್ಥಿತಿ ನಿರ್ಮಾಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಕ್ಷಣಾ ವೇದಿಕೆ ದೊಡ್ಡ ಪ್ರಮಾಣದ ಚಳವಳಿಗೆ ಸಜ್ಜಾಗಿದೆ. ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಸಮಗ್ರ ಕಾಯ್ದೆ ರೂಪಿಸಲು ಆಗ್ರಹಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಹಕ್ಕೊತ್ತಾಯಗಳು

ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946 ಅನ್ವಯ ರಾಜ್ಯ ಸರ್ಕಾರ ಬಲಿಷ್ಠವಾದ ಕಾನೂನು ರೂಪಿಸಿ, ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸಬೇಕು. ಎಲ್ಲ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ.100 ರಷ್ಟು ಹುದ್ದೆಗಳು ಕನ್ನಡಿಗರಿಗೆ ಮೀಸಲಿಡಬೇಕು.

ಎಲ್ಲ ಖಾಸಗಿ ಸಂಸ್ಥೆಗಳ ಇತರ ಹುದ್ದೆಗಳಲ್ಲಿ ಶೇ. 80ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು. ಹದಿನೈದು ವರ್ಷ ಕಾಲ ಕರ್ನಾಟಕದಲ್ಲಿ ನೆಲೆಸಿದವರನ್ನು ಕನ್ನಡಿಗರೆಂದು ಪರಿಗಣಿಸುವ ನಿಯಮವಿದೆ. ಇವರಿಗೆ ಕಡ್ಡಾಯವಾಗಿ ಕನ್ನಡ ಬರವಣಿಗೆಯ ಪರೀಕ್ಷೆಯನ್ನು ನೀಡಿ, ಅದರಲ್ಲಿ ಉತ್ತೀರ್ಣರಾದವರನ್ನು ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು.

ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ನೀಡಿರುವ ಮಾನ್ಯತೆ ರದ್ದುಗೊಳಿಸಿ, ಅವುಗಳಿಗೆ ಭೂಮಿ ನೀಡಲಾಗಿದ್ದರೆ ಹಿಂದಕ್ಕೆ ಪಡೆಯುವ ಮತ್ತು ಆ ಸಂಸ್ಥೆಗಳಿಗೆ ನೀಡಿರುವ ಎಲ್ಲ ಸವಲತ್ತುಗಳನ್ನು ಹಿಂದಕ್ಕೆ ಪಡೆಯುವ ನಿಯಮವನ್ನು ರೂಪಿಸಬೇಕು. ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ದಂಡ ವಿಧಿಸಬೇಕು ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಬೇಕು. ರಾಜ್ಯ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ 100 ಪ್ರತಿಶತ ಮೀಸಲಾತಿ ನೀಡಬೇಕು.

ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಗ್ರೂಪ್ ‘ಸಿ’ ಮತ್ತು ಗ್ರೂಪ್ ‘ಡಿ’ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇಕಡಾ 100 ಮೀಸಲಾತಿ ನೀಡಬೇಕು. ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಿಗೆ ಹೊರತಾದ ಉಳಿದೆಲ್ಲ ಹುದ್ದೆಗಳಲ್ಲೂ ಶೇ. 90ರಷ್ಟು ಮೀಸಲಾತಿ ನೀಡಬೇಕು.

ರಾಜ್ಯ, ಕೇಂದ್ರ ಸರ್ಕಾರದ ಇಲಾಖೆಗಳು, ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಅವಕಾಶವನ್ನು ಉದ್ದೇಶಿತ ಕಾನೂನಿನಲ್ಲಿ ಅಳವಡಿಸಬೇಕು.

ರಾಜ್ಯ ಸರ್ಕಾರ ರೂಪಿಸುವ ಕಾನೂನನ್ನು ಸಮರ್ಪಕವಾಗಿ ಜಾರಿಗೆ ತರಲು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡಬೇಕು. ಮುಂದೆ ಕಾನೂನು ಸಮಸ್ಯೆಗಳು ಎದುರಾದರೆ ಅದನ್ನು ಎದುರಿಸಲು ಸಮರ್ಥ ವಕೀಲರ ತಂಡವನ್ನು ಸಿದ್ಧಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: letter to President: ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ: ನ್ಯಾಯ ಕೊಡಿಸಲು ರಾಷ್ಟ್ರಪತಿಗಳಿಗೆ ಕರವೇ ನಾರಾಯಣಗೌಡ ಮನವಿ

Continue Reading

Latest

Viral Video: ನಡುರಸ್ತೆಯಲ್ಲಿ ಬಟ್ಟೆ ಕಳಚಿ ಬೆತ್ತಲೆಯಾಗಿ ನಡೆದ ಮಹಿಳೆ; ಪುರುಷರು ಕಕ್ಕಾಬಿಕ್ಕಿ!

Viral Video ಫ್ಯಾಷನ್ ಎನ್ನುವುದು ಎಷ್ಟರ ಮಟ್ಟಿಗೆ ನಮ್ಮನ್ನು ಆವರಿಸಿದೆ ಎಂದರೆ ಇಂದು ಏನೇ ಮಾಡಿದರೂ ಸರಿ ಎನ್ನುವ ಮಟ್ಟಿಗೆ ಆಗಿದೆ. ಮೈ ತುಂಬಾ ಬಟ್ಟೆ ಧರಿಸುವುದು ನಮ್ಮ ಸಂಪ್ರದಾಯ ಆದರೆ ಈಗ ತುಂಡುಡುಗೆ ಧರಿಸಿಕೊಂಡು ಹೋಗುವುದೇ ಫ್ಯಾಷನ್ ಆಗಿದೆ. ಆದರೆ ಇಲ್ಲೊಬ್ಬಳು ಮಹಿಳೆ ನಡುರಸ್ತೆಯಲ್ಲಿ ಮೈ ಮೇಲೆ ಬಟ್ಟೆ ಇಲ್ಲದೇ ನಡೆದುಕೊಂಡು ಹೋಗಿದ್ದಾಳೆ. ಇವಳು ಹೀಗ್ಯಾಕೆ ಮಾಡಿದ್ದಾಳೆ ಎಂಬುದಕ್ಕೆ ಕಾರಣ ಗೊತ್ತಿಲ್ಲ, ಇನ್ನು ಈ ಮಹಿಳೆ ಯಾರೂ ಎಂಬುದು ಕೂಡ ತಿಳಿದಿಲ್ಲ.

VISTARANEWS.COM


on

Viral Video
Koo

ಗಾಜಿಯಾಬಾದ್ : ಹೆಣ್ಣಾಗಲಿ, ಗಂಡಾಗಲಿ ಅಗತ್ಯ ಇರುವಷ್ಟಾದರೂ ಬಟ್ಟೆ ತೊಟ್ಟುಕೊಂಡರೆ ಚೆನ್ನ. ಆದರೆ ಈಗ ಬಟ್ಟೆ ಬಗ್ಗೆ ಮಾತನಾಡುವ ಹಾಗೇ ಇಲ್ಲ. ಫ್ಯಾಷನ್‌ ನೆಪವೊಡ್ಡಿ ತಮ್ಮಿಷ್ಟದ ಬಟ್ಟೆ ಧರಿಸಿಕೊಂಡು ಓಡಾಡುವುದು ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಇಲ್ಲೊಬ್ಬ ಮಹಿಳೆ ನಡುರಸ್ತೆಯಲ್ಲಿ ನಗ್ನವಾಗಿ ಓಡಾಡಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊ ವೈರಲ್ (Viral Video )ಆಗಿದೆ.

ವಿಡಿಯೊದಲ್ಲಿ ಗಾಜಿಯಾಬಾದ್‌ನ ಮೋಹನ್ ನಗರದ ಚೌರಾಹಾದ ಜನನಿಬಿಡ ರಸ್ತೆಯಲ್ಲಿ ಮಹಿಳೆ ನಗ್ನವಾಗಿ ನಡೆದುಕೊಂಡು ಹೋಗುವುದು ಕಂಡುಬಂದಿದೆ. ಆದರೆ ಮಹಿಳೆಯನ್ನು ಈ ಸ್ಥಿತಿಯಲ್ಲಿ ಕಂಡು ಪುರುಷರು ಬಿಡಿ ಮಹಿಳೆಯರು ಕೂಡ ಸುಮ್ಮನೆ ನೋಡಿ ಹೋದರೇ ವಿನಃ ಆಕೆಯನ್ನು ತಡೆಯಲು ಅಥವಾ ಅವಳಿಗೆ ಬಟ್ಟೆಗಳನ್ನು ನೀಡಲು ಯಾರೂ ಪ್ರಯತ್ನಿಸುತ್ತಿಲ್ಲ ಎಂಬುವುದನ್ನು ಕಾಣಬಹುದು. ಆದರೆ ಮಹಿಳೆಯ ಗುರುತು ತಿಳಿದುಬಂದಿಲ್ಲ. ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪೊಲೀಸ್ ಅಧಿಕಾರಿಗಳು ಘಟನೆಯ ಬಗ್ಗೆ ತಿಳಿದು ಮಹಿಳೆಯನ್ನು ಗುರುತಿಸಲು ಮತ್ತು ಅವಳು ಎಲ್ಲಿಗೆ ಹೋದಳು ಎಂಬುದನ್ನು ಪತ್ತೆ ಹಚ್ಚಲು ವಿಡಿಯೊ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ವರದಿಗಳ ಪ್ರಕಾರ, ಈ ವೀಡಿಯೊವನ್ನು ಜೂನ್ 25 ರಂದು ರೆಕಾರ್ಡ್ ಮಾಡಲಾಗಿದ್ದು, 10 ಸೆಕೆಂಡುಗಳ ಈ ವಿಡಿಯೊದಲ್ಲಿ ವಾಹನಗಳು ಮತ್ತು ಪಾದಚಾರಿಗಳು ಹಾದುಹೋಗುವ ಭಾರಿ ದಟ್ಟಣೆಯ ಸ್ಥಳದಲ್ಲಿ ಮಹಿಳೆಯನ್ನು ಸೆರೆಹಿಡಿಯಲಾಗಿದೆ. ಮಹಿಳೆಯ ಗುರುತನ್ನು ಬಹಿರಂಗಪಡಿಸಲಾಗಿಲ್ಲ. ಅವಳು ಈ ಸ್ಥಿತಿಯಲ್ಲಿ ಏಕೆ ಇದ್ದಳು ಅಥವಾ ಅವಳು ಹೇಗೆ ರಸ್ತೆಗೆ ಬಂದಳು ಎಂಬುದು ಸ್ಪಷ್ಟವಾಗಿಲ್ಲ. ಈ ಘಟನೆಯು ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಆಕ್ರೋಶ ಮತ್ತು ಟೀಕೆಗಳನ್ನು ಹುಟ್ಟುಹಾಕಿದೆ. ಪೊಲೀಸ್ ಬೂತ್ ಸಮೀಪದಲ್ಲಿದ್ದರೂ, ಕೂಡ ಬುಧವಾರ ರಾತ್ರಿ ವಿಡಿಯೊ ಆನ್ ಲೈನ್ ನಲ್ಲಿ ಕಾಣಿಸಿಕೊಳ್ಳುವವರೆಗೂ ಅಧಿಕಾರಿಗಳಿಗೆ ತಿಳಿದಿರಲಿಲ್ಲ ಎನ್ನಲಾಗಿದೆ.

ಈ ವರ್ಷದ ಆರಂಭದಲ್ಲಿ, ದೆಹಲಿಯಲ್ಲಿ ಪ್ರಯಾಣಿಕರಿಂದ ತುಂಬಿದ್ದ ಬಸ್‌ನಲ್ಲಿ ಬಿಕಿನಿ ಧರಿಸಿದ ಮಹಿಳೆಯೊಬ್ಬರು ಪ್ರಯಾಣ ಮಾಡುತ್ತಿರುವ ವಿಡಿಯೊ ಕೂಡ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಈ ಮಹಿಳೆಯನ್ನು ನೋಡಿ ಪ್ರಯಾಣಿಕರಿಂದ ವಿಭಿನ್ನ ಪ್ರತಿಕ್ರಿಯೆ ಕಂಡುಬಂದಿತ್ತು, ಕೆಲವರು ಆಶ್ಚರ್ಯದಿಂದ ನೋಡಿದರು ಮತ್ತು ಕೆಲವರು ಅಸಡ್ಡೆ ತೋರಿದರು.

ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಉಡುಪನ್ನು ಸಾರ್ವಜನಿಕ ಬಸ್‌ಗಳಲ್ಲಿ ಪ್ರಯಾಣಿಸಲು ಸೂಕ್ತವಲ್ಲ ಎಂದು ಹಲವರು ಟೀಕೆ ಮಾಡಿದರೆ, ಕೆಲವರು ಇದರಲ್ಲಿ ತಪ್ಪೇನು ಎಂದು ಆಕೆಗೆ ಬೆಂಬಲ ನೀಡಿದ್ದಾರೆ.

Continue Reading

ವಿದೇಶ

Shabbar Zaidi: ಮಸೀದಿಗಳ ಧ್ವನಿವರ್ಧಕದ ಬಗ್ಗೆ ಪಾಕಿಸ್ತಾನದಲ್ಲೇ ಕೇಳಿ ಬಂತು ಅಪಸ್ವರ; ಮೊಹಮ್ಮದ್ ಶಬ್ಬರ್ ಜೈದಿ ಹೇಳಿದ್ದೇನು?

Shabbar Zaidi: ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಸ್ಥಾಪಿಸುವ ವಿಚಾರದ ಬಗ್ಗೆ ಪಾಕಿಸ್ತಾನದ ಫೆಡರಲ್ ಬೋರ್ಡ್ ಆಫ್ ರೆವೆನ್ಯೂ ಮಾಜಿ ಅಧ್ಯಕ್ಷ ಸೈಯದ್ ಮೊಹಮ್ಮದ್ ಶಬ್ಬರ್ ಜೈದಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸದ್ಯ ಸೈಯದ್ ಮೊಹಮ್ಮದ್ ಶಬ್ಬರ್ ಜೈದಿ ಅವರ ಈ ವಿಡಿಯೊ ಪಾಕಿಸ್ತಾನದಲ್ಲಿ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ನೆಟ್ಟಿಗರು ಬಗ್ಗೆ ವಿಧ ವಿಧವಾಗಿ ಕಮೆಂಟ್ ಮಾಡುತ್ತಿದ್ದಾರೆ.

VISTARANEWS.COM


on

Shabbar Zaidi
Koo

ಇಸ್ಲಾಮಾಬಾದ್‌: ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಸ್ಥಾಪಿಸುವ ವಿಚಾರದ ಬಗ್ಗೆ ಭಾರತ ಮಾತ್ರವಲ್ಲದೆ ಪಾಕಿಸ್ತಾನದಲ್ಲಿಯೂ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಪಾಕಿಸ್ತಾನದ ಫೆಡರಲ್ ಬೋರ್ಡ್ ಆಫ್ ರೆವೆನ್ಯೂ (Federal Board of Revenue) ಮಾಜಿ ಅಧ್ಯಕ್ಷ ಸೈಯದ್ ಮೊಹಮ್ಮದ್ ಶಬ್ಬರ್ ಜೈದಿ (Syed Mohammad Shabbar Zaidi) ಅವರು ಮಾತನಾಡಿರುವ ವಿಡಿಯೋ ಈಗ ವೈರಲ್ ಆಗುತ್ತಿದೆ. ಅವರು ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಸ್ಥಾಪಿಸುವುದು ಅನಗತ್ಯ ಎಂದು ಹೇಳಿದ್ದಾರೆ (Viral Video).

ಪಾಕಿಸ್ತಾನದ ಯೂಟ್ಯೂಬರ್ ಜತೆ ಮಾತನಾಡಿದ ಜೈದಿ, ʼʼನೀವು ಇತರರಿಗೆ ತೊಂದರೆ ನೀಡಿ ಅಜಾನ್ ಅನ್ನು ಜೋರಾಗಿ ಕೂಗುವುದು ಸರಿಯಲ್ಲ. ಅಲ್ಲಾಹನೊಂದಿಗಿನ ಜತೆಗಿನ ಸಂಬಂಧದ ಮಧ್ಯೆ ಇತರರಿಗೆ ನೋವು ನೀಡುವುದೇಕೆ? ನಾನು ಬರುತ್ತಿದ್ದಾಗ ಎಷ್ಟು ದೊಡ್ಡ ಅಜಾನ್ ಶಬ್ದ ಕೇಳಿಸಿಕೊಂಡಿತ್ತೆಂದರೆ ಅದು ನನ್ನ ತಲೆಗೆ ಅಪ್ಪಳಿಸಿತು. ನನಗೆ ಅದು ಇಷ್ಟವಿಲ್ಲ. ಏನು ನಡೆಯುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ. ಅಷ್ಟಕ್ಕೂ, ಇಷ್ಟು ದೊಡ್ಡ ಧ್ವನಿವರ್ಧಕಗಳನ್ನು ಏಕೆ ಸ್ಥಾಪಿಸಲಾಗುತ್ತಿದೆ?ʼʼ ಎಂದು ಅವರು ಪ್ರಶ್ನಿಸಿದ್ದಾರೆ.

ತೀವ್ರ ಚರ್ಚೆ

ಸದ್ಯ ಸೈಯದ್ ಮೊಹಮ್ಮದ್ ಶಬ್ಬರ್ ಜೈದಿ ಅವರ ಈ ವಿಡಿಯೊ ಪಾಕಿಸ್ತಾನದಲ್ಲಿ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ನೆಟ್ಟಿಗರು ಬಗ್ಗೆ ವಿಧ ವಿಧವಾಗಿ ಕಮೆಂಟ್ ಮಾಡುತ್ತಿದ್ದಾರೆ. ಜೈದಿ ಇಂತಹ ಹೇಳಿಕೆಗಳನ್ನು ನೀಡುತ್ತಿರುವುದು ಇದು ಮೊದಲ ಸಲವೇನಲ್ಲ. ಅವರ ಆಗಾಗ ಪಾಕಿಸ್ತಾನದ ಜನರನ್ನು ಧಾರ್ಮಿಕ ನಡೆಯನ್ನು ಟೀಕಿಸುತ್ತ ಬಂದಿದ್ದಾರೆ. ಪಾಕಿಸ್ತಾನದಲ್ಲಿ ಧರ್ಮಗುರುಗಳ ಕೈಯಲ್ಲಿರುವ ಅಧಿಕಾರವು ಹಾನಿಕಾರಕವೆಂದು ಸಾಬೀತಾಗಿದೆ ಎಂದು ಜೈದಿ ಇತ್ತೀಚೆಗೆ ಹೇಳಿಕೆ ನೀಡಿದ್ದರು.

ಭಾರತದ ಕುರಿತು ಮೆಚ್ಚುಗೆ

ಇದೇ ವೇಳೆ ಜೈದಿ ಅವರು ಭಾರತವನ್ನು ಹೊಗಳಿದ್ದಾರೆ. ಇಲ್ಲಿನ ವ್ಯವಸ್ಥೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಪಾಕಿಸ್ತಾನದೊಂದಿಗೆ ಹೋಲಿಸಿ ಭಾರತವನ್ನು ಶ್ಲಾಘಿಸಿದ್ದಾರೆ. ಮನಮೋಹನ್ ಸಿಂಗ್ ಅವರಂತಹ ನಾಯಕ ಪಾಕಿಸ್ತಾನಕ್ಕೆ ಇಲ್ಲ ಎಂದು ಜೈದಿ ಹೇಳಿದ್ದಾರೆ. ʼʼಅಂತಹವರು ಇಲ್ಲಿದ್ದರೆ ಇಂದು ಪಾಕಿಸ್ತಾನ ಇನ್ನಷ್ಟು ಬಲಿಷ್ಠವಾಗುತ್ತಿತ್ತು. ಆರ್ಥಿಕವಾಗಿ ದರಢವಾಗುತ್ತಿತ್ತು. 1992ರಲ್ಲಿ ಭಾರತ ಮತ್ತು ಪಾಕಿಸ್ತಾನದ ಪರಿಸ್ಥಿತಿ ಒಂದೇ ಆಗಿತ್ತು. ಭಾರತ ಇಂದು ಯಶಸ್ಸಿನ ಉತ್ತುಂಗಕ್ಕೇರಿದೆ. ಆದರೆ ಪಾಕಿಸ್ತಾನ ಇನ್ನೂ ಹಿಂದೆ ಇದೆ. ಅದಕ್ಕೆ ಕಾರಣ ಭಾರತದಲ್ಲಿ ಮನಮೋಹನ್ ಸಿಂಗ್ ಅವರಂತಹವರು ಇದ್ದರುʼʼ ಎಂದು ಮಾಜಿ ಪ್ರಧಾನಿಯ ಕುರಿತು ಹೊಗಳಿಕೆಯ ಮಾತುಗಳನ್ನು ಆಡಿದ್ದಾರೆ.

ಕಾಶ್ಮೀರವನ್ನು ಮರೆತು ಬಿಡಿ

ಜತೆಗೆ ಅವರು ಪಾಕಿಸ್ತಾನವು ಕಾಶ್ಮೀರವನ್ನು ಮರೆತು ಬಿಡಿವುದು ಒಳಿತು ಎಂದು ಸಲಹೆ ನೀಡಿದ್ದಾರೆ. “ಪಾಕಿಸ್ತಾನವು ಕಾಶ್ಮೀರ, ಇಸ್ಲಾಂ ಇತ್ಯಾದಿಗಳನ್ನು ಮರೆತು ಭಾರತದ ಮುಂದೆ ಮಂಡಿಯೂರಿ ನಿಲ್ಲಬೇಕು. ನಾವು ಭಾರತಕ್ಕೆ ಸಮಾನರಲ್ಲ. ಪಾಕಿಸ್ತಾನ ಸೇನೆಗೆ ತನ್ನ ಸೈನಿಕರನ್ನು ರಕ್ಷಿಸಲು ಸಾಧ್ಯವಾಗುತ್ತಿಲ್ಲʼʼ ಎಂದೂ ಅವರು ಹೇಳಿದ್ದಾರೆ.

ಜೈದಿ ಅವರು 2019ರ ಮೇಯಿಂದ 2020ರ ಏಪ್ರಿಲ್‌ವರೆಗೆ ಪಾಕಿಸ್ತಾನದ ಫೆಡರಲ್ ಬೋರ್ಡ್ ಆಫ್ ರೆವೆನ್ಯೂನ 26 ನೇ ಅಧ್ಯಕ್ಷರಾಗಿದ್ದರು. ಅವರು Panama Leaks – A Blessing in Disguise – Offshore Assets of Pakistani Citizens, A Journey for Clarity and Pakistan: Not a Failed State ಮುಂತಾದ ಪುಸ್ತಕ ಬರೆದಿದ್ದಾರೆ.

ಇದನ್ನೂ ಓದಿ: Hardeep Singh Nijjar: ಪಾಕಿಸ್ತಾನಕ್ಕೂ ಭೇಟಿ ಕೊಟ್ಟಿದ್ದನಂತೆ ನಿಜ್ಜರ್‌; ಖಲಿಸ್ತಾನಿ ಉಗ್ರನ ಬಗ್ಗೆ ಮತ್ತಷ್ಟು ಭೀಕರ ಸಂಗತಿ ಬಯಲು

Continue Reading
Advertisement
Road Accident
ಕ್ರೈಂ1 min ago

Road Accident : ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್‌ಗೆ ಗುದ್ದಿ ಹಳ್ಳಕ್ಕೆ ಜಿಗಿದ ಕೆಎಸ್‌ಆರ್‌ಟಿಸಿ; ಶಿರಾಡಿಘಾಟ್‌ನಲ್ಲಿ ಸರಣಿ ಅಪಘಾತ

Job Alert
ಉದ್ಯೋಗ27 mins ago

Job Alert: 10ನೇ ತರಗತಿ ಪಾಸಾದವರಿಗೆ ಗುಡ್‌ನ್ಯೂಸ್‌; SSCಯಿಂದ ಬರೋಬ್ಬರಿ 8,326 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

OTT Release
Latest32 mins ago

OTT Release : ಒಟಿಟಿಯಲ್ಲಿ ಈ ವಾರ ಬಿಡುಗಡೆಯಾಗಲಿರುವ ಹೊಸ ಚಲನಚಿತ್ರಗಳು, ವೆಬ್ ಸರಣಿಗಳ ಪಟ್ಟಿ ಹೀಗಿವೆ

Chinnamma song from Krishnam Pranaya Sakhi is at 3rd position in All India YouTube trending list
ಕರ್ನಾಟಕ37 mins ago

Kannada New Movie: “ಯೂಟ್ಯೂಬ್ ಟ್ರೆಂಡಿಂಗ್” ಪಟ್ಟಿಯ 3ನೇ ಸ್ಥಾನದಲ್ಲಿ “ಕೃಷ್ಣಂ ಪ್ರಣಯ ಸಖಿ” ಚಿತ್ರದ “ಚಿನ್ನಮ್ಮ” ಹಾಡು!

Kanguva vs Alia Bhatt Kanguva finally set a date
ಕಾಲಿವುಡ್38 mins ago

Kanguva vs Alia Bhatt: ಕಂಗುವ- ಮಾರ್ಟಿನ್‌ ಜತೆ ಆಲಿಯಾ ಭಟ್‌ ಸಿನಿಮಾ ಕೂಡ ಕ್ಲ್ಯಾಶ್‌!

DCET 2024
ಬೆಂಗಳೂರು46 mins ago

DCET 2024 : ಡಿಸಿಇಟಿ ಫಲಿತಾಂಶ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

vinay Kulkarni
ಕರ್ನಾಟಕ47 mins ago

Vinay Kulkarni: ವಿನಯ್‌ ಕುಲಕರ್ಣಿಗೆ ಧಾರವಾಡ ಜಿಲ್ಲೆ ಪ್ರವೇಶ ಮತ್ತೆ ನಿರಾಕರಿಸಿದ ಕೋರ್ಟ್‌

Sania Mirza
ಕ್ರೀಡೆ1 hour ago

Sania Mirza: ಶಮಿ ಜತೆ ಮದುವೆ ಟಾಕ್​ ಬೆನ್ನಲ್ಲೇ ಇನ್​ಸ್ಟಾಗ್ರಾಮ್​ನಲ್ಲಿ ‘YES’ ಎಂದು ಬರೆದುಕೊಂಡ ಸಾನಿಯಾ ಮಿರ್ಜಾ

Mohamed Muizzu
ವಿದೇಶ1 hour ago

Mohamed Muizzu: ಮಾಲ್ಡೀವ್ಸ್‌ ಅಧ್ಯಕ್ಷನ ವಿರುದ್ಧ ವಾಮಾಚಾರ; ಸಚಿವೆ ಅರೆಸ್ಟ್‌

Rakshana Vedike
ಕರ್ನಾಟಕ1 hour ago

ಕರ್ನಾಟಕ ತೋಟದಪ್ಪನ ಛತ್ರ ಅಲ್ಲ; ಕನ್ನಡಿಗರಿಗೆ ಉದ್ಯೋಗಕ್ಕೆ ಆಗ್ರಹಿಸಿ ಜು.1ರಂದು ಕರವೇ ಬೃಹತ್‌ ಪ್ರತಿಭಟನೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ5 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ22 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌