Union Budget 2024 : ಕೇಂದ್ರ ಬಜೆಟ್​ನಲ್ಲಿ ಕರ್ನಾಟಕಕ್ಕೆ 'ಚೊಂಬು' ಎಂದ ಡಿಸಿಎಂ ಡಿ.ಕೆ. ಶಿವಕುಮಾರ್​ - Vistara News

ಪ್ರಮುಖ ಸುದ್ದಿ

Union Budget 2024 : ಕೇಂದ್ರ ಬಜೆಟ್​ನಲ್ಲಿ ಕರ್ನಾಟಕಕ್ಕೆ ‘ಚೊಂಬು’ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್​

Union Budget 2024 : ಕೇಂದ್ರ ಸರ್ಕಾರ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ. ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಬೆಂಗಳೂರಿನವರಾಗಿದ್ದು, ಕರ್ನಾಟಕಕ್ಕೆ ಏನನ್ನೂ ಕೊಟ್ಟಿಲ್ಲ. ತಮ್ಮ ಸರ್ಕಾರವನ್ನು ಉಳಿಸುವ ಸಲುವಾಗಿ ಅವರು ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಭರಪೂರ ಅನುದಾನ ನೀಡಿದ್ದಾರೆ.

VISTARANEWS.COM


on

Union Budget 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಬಜೆಟ್​ನಲ್ಲಿ (Union Budget 2024) ಕರ್ನಾಟಕದ ಜನತೆಗೆ ‘ಚೊಂಬು’ ಕೊಟ್ಟಿದ್ದಾರೆ ಎಂಬುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆರೋಪಿಸಿದ್ದಾರೆ. ಬಜೆಟ್​ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಅವರು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದ ಆಯ್ಕೆಯಾಗಿರುವ ಹೊರತಾಗಿಯೂ ತಮ್ಮ ರಾಜ್ಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ. ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಬೆಂಗಳೂರಿನವರಾಗಿದ್ದು, ಕರ್ನಾಟಕಕ್ಕೆ ಏನನ್ನೂ ಕೊಟ್ಟಿಲ್ಲ. ತಮ್ಮ ಸರ್ಕಾರವನ್ನು ಉಳಿಸುವ ಸಲುವಾಗಿ ಅವರು ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಭರಪೂರ ಅನುದಾನ ನೀಡಿದ್ದಾರೆ. ಅವರು ತಮ್ಮ ಮೈತ್ರಿಯ ಬಗ್ಗೆ ಮಾತ್ರ ಕಾಳಜಿ ವಹಿಸಿದ್ದಾರೆ. ಹೀಗಾಗಿ ಇಂಡಿಯಾ ಮೈತ್ರಿಕೂಟ ಇರುವ ರಾಜ್ಯಗಳಿಗೆ ಅನ್ಯವಾಯವಾಗಿದೆ” ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪ್ರತಿಕ್ರಿಯಿಸಿ, ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳದ ಜನರ ಬಗ್ಗೆ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದೆ. ಇದರ ಜೆತಗೆ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಶಿವಸೇನೆ (ಯುಬಿಟಿ) ಸೇರಿದಂತೆ ಹಲವಾರು ವಿರೋಧ ಪಕ್ಷಗಳು ಬಜೆಟ್ ಅನ್ನು ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರದ ‘ಕುರ್ಚಿ ಉಳಿಸುವ ಕಸರತ್ತು’ ಎಂದು ಹೇಳಿದ್ದಾರೆ.

ಜೆಟ್ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು ಈ ಕಲ್ಪನೆಯನ್ನು ಕಾಂಗ್ರೆಸ್ ಪ್ರಣಾಳಿಕೆಯ ನಕಲು ಎಂದು ಹೇಳಿದ್ದಾರೆ, ಚುನಾವಣಾ ಫಲಿತಾಂಶದ ನಂತರ ಹಣಕಾಸು ಸಚಿವರು ಕಾಂಗ್ರೆಸ್​ನ ಲೋಕಸಭಾ ಪ್ರಣಾಳಿಕೆಯನ್ನು ಓದಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯ 30ನೇ ಪುಟದಲ್ಲಿ ವಿವರಿಸಿರುವ ಉದ್ಯೋಗ-ಸಂಬಂಧಿತ ಪ್ರೋತ್ಸಾಹ ಧನವನ್ನು ಅಳವಡಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಟಿಎಂಸಿ ಹೇಳಿದ್ದೇನು?

ಪಶ್ಚಿಮ ಬಂಗಾಳದ ಪ್ರತಿವರ್ಷ ಪ್ರವಾಹವನ್ನು ಎದುರಿಸುತ್ತಿದ್ದರೂ ಪಶ್ಚಿಮ ಬಂಗಾಳಕ್ಕೆ ಪ್ರವಾಹ ಪರಿಹಾರ ಕಾರ್ಯಕ್ರಮವನ್ನು ಘೋಷಿಸಿಲ್ಲ. ಟಿಎಂಸಿ ಸಂಸದ ಸಾಕೇತ್ ಗೋಖಲೆ ಮಾತನಾಡಿ ಕೇಂದ್ರವು ಉದ್ದೇಶಪೂರ್ವಕವಾಗಿ ಬಂಗಾಳದ ಜನರನ್ನು ನಿರ್ಲಕ್ಷಿಸುತ್ತಿದೆ ಮತ್ತು ಹೊರಹಾಕುತ್ತಿದೆ ಎಂದು ಆರೋಪಿಸಿದರು.

ಟಿಎಂಸಿ ಸಂಸದ ಶತ್ರುಘ್ನ ಸಿನ್ಹಾ, ಮಾತನಾಡಿ, ಬಿಹಾರಕ್ಕೆ ನೆರವು ಅಗತ್ಯವಿತ್ತು. ಅದಕ್ಕೆ ಬೇಡಿಕೆಯೂ ಇತ್ತು.
ಆಂಧ್ರಪ್ರದೇಶಕ್ಕೂ ನೀಡಿರುವುದು ಸರಿಯಾಗಿದೆ. ಆದರೆ ತೆಲಂಗಾಣ, ಪಂಜಾಬ್ ಮತ್ತು ಪಶ್ಚಿಮ ಬಂಗಾಳಕ್ಕೆ ನೀವು ಏನು ಕೊಟ್ಟಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಪಂಜಾಬ್ ನಾಯಕರ ಪ್ರತಿಭಟನೆ

ಕೇಂದ್ರ ಬಜೆಟ್ 2024 ರಲ್ಲಿ ಕೇಂದ್ರ ಸರ್ಕಾರವು ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿ ಪಂಜಾಬ್​​ ನಾಯಕರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ಪಂಜಾಬ್ ಕುರಿತು ತಾರತಮ್ಯ ನಿಲ್ಲಿಸಬೇಕು ಎಂದು ಆರೋಪಿಸಿದರು.

ಬಿಹಾರ, ಆಂಧ್ರ ದೊಡ್ಡ ಫಲಾನುಭವಿ

ನಿರ್ಮಲಾ ಸೀತಾರಾಮನ್ ಅವರು 2024-25ರ ಬಜೆಟ್​​ನಲ್ಲಿ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಕ್ರಮವಾಗಿ 26,000 ಕೋಟಿ ಮತ್ತು 15,000 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳನ್ನು ಘೋಷಿಸಿದ್ದಾರೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಬಿಹಾರ ಮುಖ್ಯಮಂತ್ರಿ ನೇತೃತ್ವದ ಜನತಾದಳ (ಯುನೈಟೆಡ್) ಕೇಂದ್ರದಲ್ಲಿ ಬಿಜೆಪಿಯ ಪ್ರಮುಖ ಮಿತ್ರಪಕ್ಷಗಳಾಗಿವೆ. ಆಂಧ್ರಪ್ರದೇಶ ಮತ್ತು ಬಿಹಾರದ ರಾಜಕೀಯ ಪಕ್ಷಗಳು 2014 ರಿಂದ ರಾಜ್ಯದ ಅಭಿವೃದ್ಧಿಗಾಗಿ ವಿಶೇಷ ಸ್ಥಾನಮಾನ ನೀಡುವಂತೆ ಒತ್ತಾಯಿಸುತ್ತಿವೆ.

ಇದನ್ನೂ ಓದಿ: Union Budget 2024 : ಬಜೆಟ್​ನಲ್ಲಿ ದೊಡ್ಡ ಮೊತ್ತ ಮೀಸಲಾಗಿರುವುದು ಸಾಲದ ಬಡ್ಡಿ ಕಟ್ಟಲು!

ಹಿಮಾಚಲ, ಅಸ್ಸಾಂ, ಉತ್ತರಾಖಂಡಕ್ಕೆ ಪ್ರವಾಹ ಪರಿಹಾರ

ಹಲವಾರು ರಾಜ್ಯಗಳಲ್ಲಿ ಪ್ರವಾಹ ನಿಯಂತ್ರಣ ಕ್ರಮಗಳು ಮತ್ತು ನೀರಾವರಿ ಯೋಜನೆಗಳನ್ನು ಹೆಚ್ಚಿಸಲು. ಸಚಿವೆ ನಿರ್ಮಲಾ ಸೀತಾರಾಮನ್ 11,500 ಕೋಟಿ ರೂ.ಗಳ ಸಮಗ್ರ ಆರ್ಥಿಕ ಬೆಂಬಲ ಯೋಜನೆ ಘೋಷಿಸಿದ್ದಾರೆ. ಬಿಹಾರವು ಆಗಾಗ್ಗೆ ಪ್ರವಾಹದಿಂದ ಬಳಲುತ್ತಿದೆ. ಪ್ರತಿ ವರ್ಷ ಪ್ರವಾಹದಿಂದ ತತ್ತರಿಸುವ ಅಸ್ಸಾಂ, ಪ್ರವಾಹ ನಿರ್ವಹಣೆ ಮತ್ತು ಸಂಬಂಧಿತ ಯೋಜನೆಗಳಿಗೆ ನೆರವು ಪಡೆಯಲಿದೆ ಎಂದು ಹೇಳಿದ್ದಾರೆ.

ಕಂಗಾನಾ ಏನಂದರು?

ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿರುವ ಹಿಮಾಚಲ ಪ್ರದೇಶಕ್ಕೆ ಆರ್ಥಿಕ ನೆರವು ನೀಡಿರುವುದನ್ನು ಶ್ಲಾಘಿಸಿದ ಮಂಡಿ ಸಂಸದೆ ಕಂಗನಾ ರಣಾವತ್​​ , “ಹಿಮಾಚಲ ಪ್ರದೇಶಕ್ಕೆ ಪರಿಹಾರ ನಿಧಿಯ ಭರವಸೆ ನೀಡಲಾಗಿದೆ. ಬಜೆಟ್ ಬಗ್ಗೆ ನಮಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Assembly Session 2024: ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌; ಶೀಘ್ರವೇ ಗೌರವಧನ ಹೆಚ್ಚಳ!

Assembly Session 2024: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಅಂಗನವಾಡಿ ಕೇಂದ್ರಗಳ ಕಟ್ಟಡಗಳ ಬಾಡಿಗೆ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪ್ರಸಕ್ತ ಸಾಲಿನ ಬಾಡಿಗೆ ಪಾವತಿಗೆ ಅನುದಾನದ ಕೊರತೆ ಇಲ್ಲ ಎಂದೂ ಅವರು ಹೇಳಿದ್ದಾರೆ.

VISTARANEWS.COM


on

Anganwadi workers honorarium to be increased soon says Minister Lakshmi Hebbalkar
Koo

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Assembly Session 2024) ತಿಳಿಸಿದರು.

ಪ್ರಶ್ನೋತ್ತರ ಕಲಾಪದ ವೇಳೆ ಬುಧವಾರ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರಳ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಅನುದಾನ ಮಾತ್ರವಲ್ಲ, ಅಂಗನವಾಡಿ ಕೇಂದ್ರಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಕೂಡಲೇ ಭರ್ತಿ ಮಾಡಬೇಕೆಂದು ಪ್ರತಿಪಕ್ಷ ನಾಯಕರು ಧ್ವನಿಗೂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನೇಮಕಾತಿ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದರು.

ಇದನ್ನೂ ಓದಿ: Assembly Session 2024: ಗ್ರೇಟರ್ ಬೆಂಗಳೂರು; ಪ್ರತಿಪಕ್ಷ ನಾಯಕರ ಅಭಿಪ್ರಾಯ ಪಡೆಯದೇ ತೀರ್ಮಾನಿಸುವ ಮೂರ್ಖ ನಾನಲ್ಲ ಎಂದ ಶಿವಕುಮಾರ್

2017ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳ ಮಾಡಿದ್ದರು. ಆದಾದ ಮೇಲೆ ಗೌರವ ಧನ ಹೆಚ್ಚಳವನ್ನೇ ಮಾಡಿಲ್ಲ, ಈಗ ಗೌರವ ಧನ ಹೆಚ್ಚಳದ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸದನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಅಂಗನವಾಡಿ ಕೇಂದ್ರಗಳ ಬಾಡಿಗೆ ಹೆಚ್ಚಳಕ್ಕೆ ಕ್ರಮ

ಅಂಗನವಾಡಿ ಕೇಂದ್ರಗಳ ಕಟ್ಟಡಗಳ ಬಾಡಿಗೆ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪ್ರಸಕ್ತ ಸಾಲಿನ ಬಾಡಿಗೆ ಪಾವತಿಗೆ ಅನುದಾನದ ಕೊರತೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಬುಧವಾರ ಪ್ರಶ್ನೋತ್ತರ ಕಲಾಪದಲ್ಲಿ ಬಸವನಗುಡಿ ಕ್ಷೇತ್ರದ ಶಾಸಕ ಎಲ್.ಎ. ರವಿ ಸುಬ್ರಹ್ಮಣ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ 2024-25ನೇ ಸಾಲಿನ ಡಿಸೆಂಬರ್ ತಿಂಗಳವರೆಗೆ ಅಂಗನವಾಡಿ ಕೇಂದ್ರಗಳ ಬಾಡಿಗೆ ಮೊತ್ತವನ್ನು ಪಾವತಿಸಲಾಗಿದೆ ಎಂದರು.

ಅಂಗನವಾಡಿ ಕೇಂದ್ರಗಳ ಮಕ್ಕಳು, ಇತರೆ ಫಲಾನುಭವಿಗಳು ಇಲಾಖೆಯ ಯಾವುದೇ ಸೇವೆಗಳಿಂದ ವಂಚಿತರಾಗದಂತೆ ಕ್ರಮ ವಹಿಸಲಾಗಿದೆ. ಸ್ವಂತ ಕಟ್ಟಡಗಳಿಲ್ಲದ ಪ್ರದೇಶದಲ್ಲಿ ಅಂಗನವಾಡಿಗಳನ್ನು ಬಿಬಿಎಂಪಿ, ಇನ್ನಿತರ ಸರ್ಕಾರಿ ಕಟ್ಟಡಗಳಲ್ಲಿ ನಡೆಸಲಾಗುತ್ತಿದೆ; ಕೆಲವೆಡೆ ಉತ್ತಮ ಮೂಲ ಸೌಕರ್ಯವುಳ್ಳ ಬಾಡಿಗೆ ಕಟ್ಟಡಗಳಲ್ಲೂ ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿವೆ ಎಂದು ಸಚಿವರು ಸದನಕ್ಕೆ ತಿಳಿಸಿದರು.

ಇದನ್ನೂ ಓದಿ: India’s July 25 Schedule At Paris Olympics: ನಾಳೆಯಿಂದ ಭಾರತದ ಒಲಿಂಪಿಕ್ಸ್​ ಸ್ಪರ್ಧೆ ಆರಂಭ; ವೇಳಾಪಟ್ಟಿ ಹೀಗಿದೆ

ರಾಜ್ಯದಲ್ಲಿ 20,266 ಲಿಂಗತ್ವ ಅಲ್ಪಸಂಖ್ಯಾತರು

ರಾಜ್ಯದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಪ್ರಮಾಣದ ಬಗ್ಗೆ ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರು ಕೇಳಿದ ಉಪ ಪ್ರಶ್ನೆಗೆ ಉತ್ತರಿಸಿದ ಸಚಿವರು, 2011ರ ಜನಗಣತಿಯ ಪ್ರಕಾರ, ರಾಜ್ಯದಲ್ಲಿ 20,266 ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ. ಇನ್ನು 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಸಮುದಾಯ ಆಧಾರಿತ ಸಂಸ್ಥೆಗಳಿಂದ ಪಡೆದ ಅಂಕಿ ಅಂಶಗಳ ಪ್ರಕಾರ 43,752 ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.

Continue Reading

ಕರ್ನಾಟಕ

Parashuram D : ವಿಸ್ತಾರ ಮೀಡಿಯಾದ ನೂತನ ಜಿ.ಎಮ್ ಆಗಿ ಪರಶುರಾಮ ಡಿ

Parashuram D: ವಿಸ್ತಾರ ಮೀಡಿಯಾದಲ್ಲಿ ಸಿಒಒ (ಚೀಫ್‌ ಆಪರೇಷನಲ್‌ ಆಫೀಸರ್‌) ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪರಶುರಾಮ್‌ ಡಿ ಅವರಿಗೆ ಜಿ.ಎಮ್‌ ಆಗಿ ಪದೋನ್ನತಿ ನೀಡಲಾಗಿದೆ. ಮಾಧ್ಯಮ ಕ್ಷೇತ್ರದಲ್ಲಿ ಸುಮಾರು ಎರಡು ದಶಕಗಳ ಅನುಭವ ಹೊಂದಿರುವ ಪರಶುರಾಮ್ ಡಿ ಅವರು ನುರಿತ ತಂತ್ರಜ್ಞರ ತಂಡದ ಮುಖ್ಯಸ್ಥರಾಗಿ ಅನೇಕ ಸಂಸ್ಥೆಗಳನ್ನು ಕಟ್ಟಿ ಬೆಳೆಸುವಲ್ಲಿ ಅಮೂಲ್ಯ ಕೊಡುಗೆ ನೀಡಿದ್ದಾರೆ. ಈ ಮೂಲಕ ಮಾಧ್ಯಮ ರಂಗದಲ್ಲಿ ಹೆಸರುವಾಸಿಯಾಗಿದ್ದಾರೆ. ನಾಡಿನಾದ್ಯಂತ ಪ್ರಸಿದ್ಧಿ ಪಡೆಯುತ್ತಿರುವ ʼವಿಸ್ತಾರ ನ್ಯೂಸ್‌ʼ ಚಾನೆಲ್ ಆರಂಭಿಕ ಕಾರ್ಯದಿಂದ ಹಿಡಿದು ಇಲ್ಲಿಯವರೆಗೆ ಪ್ರತಿ ಹೆಜ್ಜೆಯಲ್ಲಿಯೂ ಪರಿಶ್ರಮ ವಹಿಸಿದ್ದಾರೆ.

VISTARANEWS.COM


on

Parashuram D
Koo


ಬೆಂಗಳೂರು: ವಿಸ್ತಾರ ಮೀಡಿಯಾದ ನೂತನ ಜಿ ಎಮ್‌ (ಆಪರೇಷನ್‌) ಆಗಿ ಪರಶುರಾಮ್ ಡಿ (Parashuram D) ಅವರನ್ನು ನೇಮಕ ಮಾಡಲಾಗಿದೆ. ಪರಶುರಾಮ್‌ ಅವರು ಈಗ ವಿಸ್ತಾರ ಮೀಡಿಯಾದಲ್ಲಿ ಸಿಒಒ (ಚೀಫ್‌ ಆಪರೇಷನಲ್‌ ಆಫೀಸರ್‌) ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಮಾಧ್ಯಮ ಕ್ಷೇತ್ರದಲ್ಲಿ ಸುಮಾರು ಎರಡು ದಶಕಗಳ ಅನುಭವ ಹೊಂದಿರುವ ಪರಶುರಾಮ್ ಡಿ ಅವರು ನುರಿತ ತಂತ್ರಜ್ಞರ ತಂಡದ ಮುಖ್ಯಸ್ಥರಾಗಿ ಅನೇಕ ಸಂಸ್ಥೆಗಳನ್ನು ಕಟ್ಟಿ ಬೆಳೆಸುವಲ್ಲಿ ಅಮೂಲ್ಯ ಕೊಡುಗೆ ನೀಡಿದ್ದಾರೆ. ಈ ಮೂಲಕ ಮಾಧ್ಯಮ ರಂಗದಲ್ಲಿ ಹೆಸರುವಾಸಿಯಾಗಿದ್ದಾರೆ.

ಟೆಲಿವಿಷನ್ ಲೋಕದಲ್ಲಿನ ಎಲ್ಲಾ ಬಗೆಯ ವಿಡಿಯೊ – ಆಡಿಯೊ ಪ್ರೊಡಕ್ಷನ್ ಮತ್ತು ಬ್ರಾಡ್ಕಾಸ್ಟ್ ವಿಭಾಗದಲ್ಲಿ ಭಾರತದಲ್ಲಿಯೇ ಅತ್ಯುತ್ತಮ ತಂತ್ರಜ್ಞರೆಂದು ಗುರುತಿಸಲ್ಪಡುವ ಕೆಲವೇ ಕೆಲವು ಮಂದಿಯಲ್ಲಿ ಪರಶುರಾಮ್ ಅವರೂ ಒಬ್ಬರು ಎಂಬುದು ಹೆಮ್ಮೆಯ ಸಂಗತಿ. ಅವರ ಕಾರ್ಯವ್ಯಾಪ್ತಿ ಅಷ್ಟಕ್ಕೇ ನಿಲ್ಲದೇ ಇನ್ನೂ ಮುಂದಕ್ಕೆ ಹೋಗಿ, ಟಿವಿ ಮಾಧ್ಯಮ ಸಂಸ್ಥೆಗಳನ್ನು ಕಟ್ಟುವಲ್ಲಿಯೂ ಮುಂದುವರಿದಿದೆ. ಆರಂಭದ ಕಾರ್ಯಯೋಜನೆ ರೂಪಿಸುವ ಹಂತದಿಂದ ಹಿಡಿದು, ನಿರ್ಮಾಣ ಕಾರ್ಯ, ಲೋಕಾರ್ಪಣೆವರೆಗಿನ ಎಲ್ಲಾ ಹಂತದಲ್ಲೂ ದಕ್ಷತೆಯಿಂದ ಕಾರ್ಯನಿರ್ವಹಿಸಿ ಅದಕ್ಕೆ ಬೇಕಾಗಿರುವ ನುರಿತ ತಂತ್ರಜ್ಞರ ತಂಡವನ್ನು ಕಟ್ಟಿ ಮುನ್ನಡೆಸುವ ಅದಮ್ಯ ಸಾಮರ್ಥ್ಯವನ್ನು ಇವರು ಬೆಳೆಸಿಕೊಂಡಿದ್ದಾರೆ. ಇದಕ್ಕೆ ಸಾಕ್ಷಿ ʼವಿಸ್ತಾರ ನ್ಯೂಸ್‌ʼ ಕನ್ನಡ ವಾಹಿನಿ.

ಈ ಟಿವಿಯಿಂದ ಬಿಗ್‌ ಬಾಸ್‌ವರೆಗೆ

ಪರಶುರಾಮ್‌ ಅವರು ಕನ್ನಡದ ಹೆಸರಾಂತ ಚಾನೆಲ್ ಎನಿಸಿಕೊಂಡ ʼಈ ಟಿವಿʼ ಕನ್ನಡ ವಾಹಿನಿಯ ತಾಂತ್ರಿಕ ವಿಭಾಗದಲ್ಲಿ ಕೆಲಸವನ್ನು ಪ್ರಾರಂಭಿಸಿದ್ದರು. ಕಿರುತೆರೆಯ ಮಾಧ್ಯಮ ಲೋಕದಲ್ಲಿ ಹೊಸ ಹೊಸ ಜವಾಬ್ದಾರಿಯನ್ನು, ಸಾಹಸವನ್ನು ಕೈಗೊಳ್ಳುತ್ತಾ ಟೆಕ್ನಿಕಲ್ ವಿಚಾರದಲ್ಲಿ ಹೆಚ್ಚು ಆಳವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಮುಂದೆ ʼಸಮಯʼ ಮತ್ತು ʼಜನಶ್ರೀʼ ನ್ಯೂಸ್ ಚಾನೆಲ್‌ನಲ್ಲಿ ತಮ್ಮ ಕ್ರಿಯೇಟಿವಿಟಿಯಿಂದ ಮಾಧ್ಯಮ ಲೋಕದಲ್ಲಿ ಸಾಕಷ್ಟು ಹೆಸರನ್ನು ಸಂಪಾದಿಸಿದರು. ಇಂದು ನಾಡಿನಾದ್ಯಂತ ಮನೆ ಮಾತಾಗಿರುವ ರಿಯಾಲಿಟಿ ಶೋ ʼಬಿಗ್ ಬಾಸ್ʼ ಕನ್ನಡದ ಆನ್ ಲೈನ್ ತಾಂತ್ರಿಕ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿ ‘ಎಂಡಮೋಲ್’ ಕಂಪನಿಯಿಂದ ವಿಶೇಷ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಲೇಟೆಸ್ಟ್​ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್​ ಓದಿ

ಈಗಿನ ʼರಿಪಬ್ಲಿಕ್ ಕನ್ನಡʼ ಚಾನೆಲ್ ಆಗಿ ಪರಿವರ್ತನೆಯಾಗಿರುವ ಅಂದಿನ ʼದಿಗ್ವಿಜಯ ನ್ಯೂಸ್ʼ ಚಾನೆಲ್‌ನಲ್ಲಿ “ಪ್ರೊಡಕ್ಷನ್ ಹೆಡ್” ಆಗಿ ತಮ್ಮದೇ ಆದ ಕ್ರಿಯಾಶೀಲ ತಂಡವನ್ನು ರಚಿಸಿಕೊಂಡು ದಿಗ್ವಿಜಯ ಚಾನೆಲ್ ಅನ್ನು ಕ್ರಿಯೇಟಿವ್ ಆಗಿ ಮುನ್ನಡೆಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಅಡ್ವರ್ಟೈಸಿಂಗ್ ಮತ್ತು ಬ್ರಾಂಡಿಂಗ್ ಛಾಪು

ತಮ್ಮದೇ ಆದ “ಅಧಿತಿ ಲಿಂಕ್ ಮೀಡಿಯಾ” ಎಂಬ ಸಂಸ್ಥೆಯ ಮೂಲಕ ಅಡ್ವರ್ಟೈಸಿಂಗ್ ಮತ್ತು ಬ್ರಾಂಡಿಂಗ್ ಲೋಕದಲ್ಲಿ ಹೊಸ ಛಾಪನ್ನೇ ಇವರು ಮೂಡಿಸಿ ಅಮೆಜಾನ್ ಪ್ರೈಮ್ ಮತ್ತು ಸ್ಪೈಸ್ ಕಂಪನಿಯೊಂದಿಗೆ ಚಲನಚಿತ್ರಗಳ ಪ್ರಮೋಷನ್ ವಿಭಾಗದಲ್ಲಿ ಹಾಗೂ ಮೈತ್ರಿ ಮೂವೀಸ್, ಗೀತಾ ಪಿಕ್ಚರ್ಸ್‌ನಂತಹ ತೆಲುಗಿನ ದೊಡ್ಡ, ದೊಡ್ಡ ಸಂಸ್ಥೆಯೊಂದಿಗೆ ಪ್ರಚಾರ ವಿಭಾಗದಲ್ಲಿ ಪಾಲುದಾರರಾಗಿ ಯಶಸ್ವಿಯಾಗಿದ್ದಾರೆ. ಅಲ್ಲದೇ ಟೈಮ್ಸ್ ಗ್ರೂಪ್‌ನ ಇವೆಂಟ್ಸ್‌ಗಳನ್ನು ಸಮರ್ಥವಾಗಿ ತಮ್ಮ ಅಧಿತಿ ಲಿಂಕ್ ಮೀಡಿಯಾದ ಮೂಲಕ ನಿಭಾಯಿಸಿದ್ದಾರೆ. ತಮ್ಮದೇ ಆದ ಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿ ಆಡಳಿತಾತ್ಮಕ ವಿಚಾರದಲ್ಲಿ ಹೆಚ್ಚಿನ ಅನುಭವವನ್ನು ಹೊಂದಿದ್ದಾರೆ.

ʼವಿಸ್ತಾರ ನ್ಯೂಸ್‌ʼ ಹಿಂದಿನ ಶಕ್ತಿ:

ನಾಡಿನಾದ್ಯಂತ ಪ್ರಸಿದ್ಧಿ ಪಡೆಯುತ್ತಿರುವ ʼವಿಸ್ತಾರ ನ್ಯೂಸ್‌ʼ ಚಾನೆಲ್ ಆರಂಭದ ಮೊದಲ ಸದಸ್ಯರಾಗಿ, ಚಾನೆಲ್ ಪ್ರಾರಂಭಿಸಬೇಕೆಂಬ ಮೊದಲ ಹೆಜ್ಜೆಯಿಂದ ಹಿಡಿದು ಇಲ್ಲಿಯವರೆಗೆ ಪ್ರತಿ ಹೆಜ್ಜೆಯಲ್ಲಿಯೂ ಪರಿಶ್ರಮ ವಹಿಸಿದ್ದಾರೆ. ಪೂರ್ವ ತಯಾರಿಯಿಂದ ಹಿಡಿದು ಚಾನೆಲ್ ಲೋಕಾರ್ಪಣೆಯವರೆಗೆ ಆಡಳಿತ ಮಂಡಳಿ ಹಾಗೂ ಸಹೋದ್ಯೋಗಿಗಳ ಜೊತೆಗಿದ್ದು ಅವರು ಪಟ್ಟ ಕಠಿಣ ಪರಿಶ್ರಮ ಹಾಗೂ ಅವರ ನಿಷ್ಠೆ, ಪ್ರಾಮಾಣಿಕತೆ, ಬದ್ಧತೆಯ ಫಲವಾಗಿ ಈಗ ಸಂಸ್ಥೆಯ ಉನ್ನತವಾದ ಜವಾಬ್ದಾರಿಯನ್ನು ನಿರ್ವಹಿಸುವ ಹಂತಕ್ಕೆ ತಲುಪಿದ್ದಾರೆ.

ಶುಭ ಹಾರೈಕೆ:

ಮಾಧ್ಯಮ ಲೋಕದಲ್ಲಿನ ಎಲ್ಲಾ ಹಂತದ ಅವರ ಒಟ್ಟೂ ಅನುಭವಕ್ಕೆ ವಿಸ್ತಾರ ಮೀಡಿಯಾ ಸಂಸ್ಥೆಯನ್ನು ಬಹಳ ಎತ್ತರಕ್ಕೆ ಕೊಂಡೊಯ್ಯುವ ಶಕ್ತಿ ಇದೆ. ಅವರ ಹಾಗೂ ಇಡೀ ವಿಸ್ತಾರ ತಂಡದ ಪರಿಶ್ರಮ ಜೊತೆಗೂಡಿ ವಿಸ್ತಾರ ಮೀಡಿಯಾ ಸಂಸ್ಥೆ ದೇಶದಲ್ಲಿಯೇ ಗುರುತಿಸಿಕೊಳ್ಳುವಂತಹ ಹೆಮ್ಮೆಯ ಸಂಸ್ಥೆಯಾಗಿ ರೂಪುಗೊಳ್ಳಲಿದೆ ಎಂಬ ವಿಶ್ವಾಸ ನಮಗಿದೆ. ಪರಶುರಾಮ್‌ ಡಿ ಅವರಿಗೆ ಶುಭ ಹಾರೈಸುತ್ತೇವೆ ಎಂದು ವಿಸ್ತಾರ ಮೀಡಿಯಾ ಪ್ರೈ. ಲಿ.ನ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

Latest

Train Tragedy: ರೈಲ್ವೆ ಹಳಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ತಂದೆ!

Train Tragedy: ಅಪ್ಪನ ಪ್ರೀತಿ ಅಗಾಧವಾದದ್ದು. ತನ್ನ ಮಕ್ಕಳಿಗೆ ತುಸುವೇ ನೋವಾದರೂ ಅಪ್ಪನಿಗೆ ಸಹಿಸುವುದಕ್ಕೆ ಆಗುವುದಿಲ್ಲ. ಅದರಲ್ಲೂ ತನ್ನ ಕಣ್ಣೆದುರೇ ಕಂದಮ್ಮಗಳು ಸಾವಿನ ದವಡೆಯಲ್ಲಿದ್ದಾರೆ ಯಾವ ತಂದೆ ಕೈ ಕಟ್ಟಿ ಕುಳಿತುಕೊಳ್ಳುತ್ತಾನೆ? ಸಿಡ್ನಿಯಲ್ಲಿ ಕೆಲಸ ಮಾಡುತ್ತಿದ್ದ ಆನಂದ್ ರನ್ವಾಲ್ ಎಂಬುವವರು ಪತ್ನಿ ಮತ್ತು ಅವಳಿ ಹೆಣ್ಣುಮಕ್ಕಳೊಂದಿಗೆ ರೈಲು ನಿಲ್ದಾಣದಲ್ಲಿದ್ದಾಗ ಅವರ ಫ್ಯಾಮಿಲಿ ಲಿಫ್ಟ್‌ನಿಂದ ಇಳಿದು ಬರುವಾಗ ಅವರ ಅವಳಿ ಹೆಣ್ಣು ಮಕ್ಕಳಿದ್ದ ಪ್ರ್ಯಾಮ್ ಆಕಸ್ಮಿಕವಾಗಿ ರೈಲ್ವೆ ಹಳಿಗೆ ಬಿದ್ದಿದೆ. ಆಗ ಮಕ್ಕಳನ್ನು ರಕ್ಷಿಸಲು ಹೋದ ಆನಂದ್‌ ಜೀವ ಕಳೆದುಕೊಂಡಿದ್ದಾರೆ.

VISTARANEWS.COM


on

Train Tragedy
Koo


ತಂದೆ ತನ್ನ ಮಕ್ಕಳಿಗಾಗಿ ಏನು ಬೇಕಾದರೂ ಮಾಡುತ್ತಾರೆ. ಮಕ್ಕಳಿಗಾಗಿ ತಮ್ಮ ಜೀವವನ್ನೂ ಲೆಕ್ಕಿಸುವುದಿಲ್ಲ ಎಂಬುದಕ್ಕೆ ಆಸ್ಟ್ರೇಲಿಯಾದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಆಸ್ಟ್ರೇಲಿಯಾದಲ್ಲಿ ಇನ್ಫೋಸಿಸ್ ಟೆಕ್ಕಿಯೊಬ್ಬರು ರೈಲ್ವೆ ಹಳಿಯ (Train Tragedy) ಮೇಲೆ ಬಿದ್ದ ತನ್ನ ಅವಳಿ ಹೆಣ್ಣುಮಕ್ಕಳನ್ನು ರಕ್ಷಿಸಲು ಪ್ರಯತ್ನಿಸುವಾಗ ದುರಂತಮಯವಾಗಿ ಸಾವನ್ನಪ್ಪಿದ್ದಾರೆ.

Train Tragedy

40 ವರ್ಷದ ಆನಂದ್ ರನ್ವಾಲ್ ಸಾವನಪ್ಪಿದವರು. ಇವರು ಇನ್ಫೋಸಿಸ್ ಐಟಿ ಉದ್ಯೋಗಿಯಾಗಿದ್ದು, ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಕೆಲಸ ಮಾಡುತ್ತಿದ್ದರು. ಆನಂದ್ ತಮ್ಮ ಪತ್ನಿ ಮತ್ತು ಅವಳಿ ಹೆಣ್ಣುಮಕ್ಕಳೊಂದಿಗೆ ಕಾರ್ಲ್ಟನ್ ನಿಲ್ದಾಣದಲ್ಲಿ ಲಿಫ್ಟ್ ನಿಂದ ಇಳಿದು ಬರುವಾಗ ಅವರ ಅವಳಿ ಹೆಣ್ಣು ಮಕ್ಕಳಿದ್ದ ಪ್ರ್ಯಾಮ್ ಆಕಸ್ಮಿಕವಾಗಿ ರೈಲ್ವೆ ಹಳಿಗೆ ಬಿದ್ದಿದೆ. ಆಗ ಆನಂದ್ ಹೆಣ್ಣುಮಕ್ಕಳನ್ನು ಉಳಿಸಲು ಪ್ಲಾಟ್ ಫಾರ್ಮ್‌ನಿಂದ ರೈಲ್ವೆ ಹಳಿಯ ಮೇಲೆ ಹಾರಿದ್ದಾರೆ.

ಆ ವೇಳೆ ರೈಲು ಹಾದುಹೋಗುತ್ತಿದ್ದ ಆನಂದ್ ಮತ್ತು ಅವರ ಒಬ್ಬ ಮಗಳು ರೈಲಿಗೆ ಸಿಲುಕಿ ಸಾವನಪ್ಪಿದ್ದಾರೆ. ಆದರೆ ಅವರು ಈ ಹೋರಾಟದಲ್ಲಿ ತಮ್ಮ ಒಬ್ಬ ಮಗಳ ಜೀವ ರಕ್ಷಿಸಿದ್ದಾರೆ. ಆನಂದ್ ಅವರ ಪತ್ನಿ ಮತ್ತು ಮಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರಿಗೆ ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಲಾಗಿದೆ ಎಂಬುದಾಗಿ ತಿಳಿದುಬಂದಿದೆ.

Train Tragedy

ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದರಲ್ಲಿ ಕುಟುಂಬವು ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ತೋರಿಸುತ್ತದೆ, ಅವರು ಲಿಫ್ಟ್ ಮೂಲಕ ಪ್ಲಾಟ್‌ಫಾರ್ಮ್‌ಗೆ ಬಂದಿದ್ದರು ಮತ್ತು ಕ್ಷಣಾರ್ಧದಲ್ಲಿ ಅವರು ಪ್ರ್ಯಾಮ್ ಅನ್ನು ಬಿಟ್ಟುಬಿಟ್ಟರು. ಇದರಿಂದ ಅದು ಉರುಳುತ್ತಾ ಹೋಗಿ ಹಳಿಗಳ ಮೇಲೆ ಬಿದ್ದಿದೆ. ಆಗ ಆನಂದ್ ಅವರ ಪತ್ನಿ ಕಿರುಚಿದಾಗ ಆನಂದ್ ರೈಲು ಹಳಿಗಳ ಮೇಲೆ ಮಕ್ಕಳನ್ನು ರಕ್ಷಿಸಲು ಹಾರಿದ್ದಾರೆ. ಆ ವೇಳೆ ಈ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ: ರಿಮಾಂಡ್‌ ಹೋಮ್‌ನಿಂದಲೇ ಮಧ್ಯರಾತ್ರಿ 17 ವರ್ಷದ ಬಾಲಕಿಯ ಅಪಹರಣ! ವಿಡಿಯೊದಲ್ಲಿ ಕೃತ್ಯ ಸೆರೆ

ಆನಂದ್ ಮತ್ತು ಅವರ ಕುಟುಂಬವು 2023ರ ಕೊನೆಯಲ್ಲಿ ಸಿಡ್ನಿಗೆ ಸ್ಥಳಾಂತರಗೊಂಡಿತ್ತು. ಅವರು ಸಿಡ್ನಿಯ ಕೊಗರಾ ಉಪನಗರದಲ್ಲಿ ವಾಸಿಸುತ್ತಿದ್ದರು. ಇತ್ತೀಚೆಗೆ, ಆನಂದ್ ಅವರ ಪೋಷಕರು (ವಿಸ್ತಾರ ನ್ಯೂಸ್‌) ಸಿಡ್ನಿಯಲ್ಲಿದ್ದ ಅವರ ಮನೆಗೆ ಭೇಟಿ ನೀಡಿದ್ದರು ಎನ್ನಲಾಗಿದೆ. ವರದಿಗಳ ಪ್ರಕಾರ, ತನ್ನ ತಾಯಿ ಮತ್ತು ತಂದೆಯನ್ನು ತಮ್ಮ ಜೊತೆ ಆಸ್ಟ್ರೇಲಿಯಾದಲ್ಲಿ ಇಟ್ಟುಕೊಳ್ಳುವ ಹಂಬಲ ಆನಂದವರಿಗಿತ್ತು ಎಂದು ಅವರ ಸ್ನೇಹಿತರೊಬ್ಬರು ತಿಳಿಸಿದ್ದಾರೆ.

ಆದರೆ ವಿಧಿ ಅದಕ್ಕೂ ಅವಕಾಶ ಮಾಡಿಕೊಡಲಿಲ್ಲ. ಅವರ ಹಠಾತ್ ನಿಧನದಿಂದ ಅವರ ಸ್ನೇಹಿತರು ಆಘಾತಕ್ಕೊಳಗಾಗಿದ್ದಾರೆ. ಅವರು ಇನ್ನಿಲ್ಲ ಎಂಬ ವಿಚಾರ ಅವರ ಕುಟುಂಬಕ್ಕೆ ಜೀರ್ಣಿಸಿಕೊಳ್ಳಲು ಕಷ್ಟವಾಗುತ್ತಿದೆ ಎಂದವರು ಪ್ರತಿಕ್ರಿಯಿಸಿದ್ದಾರೆ.

Continue Reading

Latest

Viral Video: ಮೃಗಾಲಯದ ಸಿಬ್ಬಂದಿ ಮೇಲೆ ಸಿಂಹದ ದಾಳಿ; ತಡೆದು ನಿಲ್ಲಿಸಿದ ಸಿಂಹಿಣಿ!

Viral Video: ಈ ವಿಡಿಯೊದಲ್ಲಿ ಸಿಂಹದೊಂದಿಗೆ ಆಟವಾಡುತ್ತಿದ್ದಾಗ ಮೃಗಾಲಯ ಸಿಬ್ಬಂದಿಯೊಬ್ಬರ ಮೇಲೆ ಸಿಂಹವು ಆಕ್ರಮಣಕಾರಿಯಾಗಿ ದಾಳಿ ಮಾಡಲು ಮುಂದಾಗಿದೆ. ಇದರಿಂದ ಆತ ಅಪಾಯಕಾರಿ ಪರಿಸ್ಥಿತಿಯಲ್ಲಿರುವುದನ್ನು ಕಂಡು ಮತ್ತೊಬ್ಬ ಸಿಬ್ಬಂದಿ ಸಿಂಹವನ್ನು ತಡೆಯಲು ಮುಂದಾಗುತ್ತಾನೆ. ಆದರೆ ಅವನಿಗೆ ಅದನ್ನು ತಡೆಯಲು ಸಾಧ್ಯವಾಗಲಿಲ್ಲ, ಆಗ ಸ್ವಲ್ಪ ದೂರದಲ್ಲಿದ್ದ ಸಿಂಹಿಣಿಯು ನಿಂತು ತನ್ನ ಸಂಗಾತಿಯನ್ನು ನೋಡುತ್ತಿರುತ್ತದೆ. ನಂತರ ಘಟನೆ ಕೈಮೀರಿ ಹೋಗಬಹುದು ಎಂದು ತೋರಿದಾಗ, ಸಿಂಹಿಣಿ ಈ ತುರ್ತುಸ್ಥಿತಿಯನ್ನು ನಿಯಂತ್ರಿಸಲು ಹೋರಾಟಕ್ಕೆ ಇಳಿಯುತ್ತದೆ. ಇದು ಕುತೂಹಲ ಮೂಡಿಸಿದೆ.

VISTARANEWS.COM


on

Viral Video
Koo


ಬೆಂಗಳೂರು: ನೀವು ಸಾಮಾನ್ಯವಾಗಿ ಯಾರಾದರೂ ದಂಪತಿಯನ್ನು ನೋಡಿದಾಗ ಅಲ್ಲಿ ಪತಿ ಕೋಪಗೊಂಡು ಆಕ್ರಮಣಕಾರಿಯಾಗಿ ವರ್ತಿಸಿದರೆ ಆಗ ಆತನ ಪತ್ನಿ ಆತನನ್ನು ತಡೆದು ಸಮಾಧಾನಪಡಿಸುತ್ತಾಳೆ! ಈ ಗುಣ ಮನುಷ್ಯರಲ್ಲಿ ಮಾತ್ರವಲ್ಲ ಪ್ರಾಣಿಗಳಲ್ಲೂ ಕಾಣಸಿಗುತ್ತದೆ. ಇದಕ್ಕೆ ವಿದೇಶದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದ್ದು, ನೋಡುಗರಲ್ಲಿ ಆಶ್ವರ್ಯವನ್ನುಂಟುಮಾಡಿದೆ.

ಸಿಂಹವು ಮೃಗಾಲಯದ ಸಿಬ್ಬಂದಿಯ ಮೇಲೆ ದಾಳಿ ಮಾಡಿದಾಗ ಒಂದು ಸಿಂಹಿಣಿಯು ಮಧ್ಯ ಪ್ರವೇಶ ಮಾಡಿ ಸಿಂಹವನ್ನು ತಡೆದಿದೆ. ಇತ್ತೀಚೆಗೆ ಸಿಂಹ – ಸಿಂಹಿಣಿಯ ಈ ವಿಡಿಯೊವನ್ನು “ನೇಚರ್ ಈಸ್ ಅಮೇಜಿಂಗ್” ಎಂಬ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಈ ವಿಡಿಯೊ ವೈರಲ್ ಆಗಿದೆ. ಈ ವಿಡಿಯೊದಲ್ಲಿ, ಸಿಂಹದೊಂದಿಗೆ ಆಟವಾಡುತ್ತಿದ್ದಾಗ ಮೃಗಾಲಯ ಸಿಬ್ಬಂದಿಯೊಬ್ಬರ ಮೇಲೆ ಸಿಂಹವು ಆಕ್ರಮಣಕಾರಿಯಾಗಿ ದಾಳಿ ಮಾಡಲು ಮುಂದಾಗಿದೆ. ಇದರಿಂದ ಆತ ಅಪಾಯಕಾರಿ ಪರಿಸ್ಥಿತಿಯಲ್ಲಿರುವುದನ್ನು ಕಂಡು ಮತ್ತೊಬ್ಬ ಸಿಬ್ಬಂದಿ ಸಿಂಹವನ್ನು ತಡೆಯಲು ಮುಂದಾಗುತ್ತಾನೆ. ಆದರೆ ಅವನಿಗೆ ಅದನ್ನು ತಡೆಯಲು ಸಾಧ್ಯವಾಗಲಿಲ್ಲ, ಆಗ ಸ್ವಲ್ಪ ದೂರದಲ್ಲಿದ್ದ ಸಿಂಹಿಣಿಯು ನಿಂತು ತನ್ನ ಸಂಗಾತಿಯನ್ನು ನೋಡುತ್ತಿರುತ್ತದೆ. ನಂತರ ಘಟನೆ ಕೈಮೀರಿ ಹೋಗಬಹುದು ಎಂದು ತೋರಿದಾಗ, ಸಿಂಹಿಣಿ ಈ ತುರ್ತುಸ್ಥಿತಿಯನ್ನು ನಿಯಂತ್ರಿಸಲು ಹೋರಾಟಕ್ಕೆ ಇಳಿಯುತ್ತದೆ. ಅದು ಆಕ್ರಮಣಕಾರಿ ಸಿಂಹದ ಬಳಿಗೆ ಬಂದು ಅದನ್ನು ತಡೆಯುತ್ತದೆ. ಇದರಿಂದ ಮೃಗಾಲಯದಲ್ಲಿ ನಡೆಯಲಿದ್ದ ಅಪಾಯಕಾರಿ ಘಟನೆಯನ್ನು ಸಿಂಹಿಣಿ ತಡೆದು ತನ್ನ ಪಾಲಕನನ್ನು ರಕ್ಷಿಸಿದೆ.

ಈ ವಿಡಿಯೊ ಸಿಂಹಿಣಿಯ ಅದ್ಭುತ ಪ್ರವೃತ್ತಿಯನ್ನು ತೋರಿಸುತ್ತದೆ. ಸಿಂಹಿಣಿಯ ಈ ಪ್ರವೃತ್ತಿ ಅನೇಕರಲ್ಲಿ ಆಶ್ಚರ್ಯವನ್ನುಂಟುಮಾಡಿದೆ. ಅಲ್ಲದೇ ಇದು ಅಪಾಯಕಾರಿ ಪರಿಸ್ಥಿತಿಯಲ್ಲೂ ತನ್ನ ಪಾಲಕನನ್ನು ಮತ್ತೊಂದು ಪ್ರಾಣಿಯಿಂದ ರಕ್ಷಿಸಿದ್ದನ್ನು ಕಂಡು ಪ್ರಕೃತಿ ಪ್ರಿಯರು ಮತ್ತು ಪ್ರಾಣಿ ಪ್ರೇಮಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಹಾಗೂ ಈ ಸಿಂಹಿಣಿಯ ವೀರೋಚಿತ ಕಾರ್ಯವನ್ನು ಹೊಗಳಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸಿಂಹಿಣಿ ಪ್ರದರ್ಶಿಸಿದ ಧೈರ್ಯ ಮತ್ತು ಈ ಘಟನೆಯ ಬಗ್ಗೆ ವೀಕ್ಷಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 10,000 ಶೂ, ಚಪ್ಪಲಿ ಕದ್ದ ಖತರ್‌ನಾಕ್‌ ಕಳ್ಳರ ಬಂಧನ!

ಈ ಘಟನೆಯು ಮೃಗಾಲಯದ ಸುರಕ್ಷತಾ ವ್ಯವಸ್ಥೆಗಳು ಮತ್ತು ಇಂತಹ ಕ್ರೂರ ಪ್ರಾಣಿಗಳನ್ನು ನಿರ್ವಹಿಸುವಲ್ಲಿ ಮೃಗಾಲಯಪಾಲಕರಿಗೆ ನೀಡಲಾಗುವ ತರಬೇತಿಯ ಬಗ್ಗೆ ಅನೇಕರು ಪ್ರಶ್ನೆ ಮಾಡಿದ್ದಾರೆ.

Continue Reading
Advertisement
King Chopper
ದೇಶ23 mins ago

Sea King Chopper: ಸಾವಿನ ದವಡೆಯಲ್ಲಿದ್ದ ಚೀನಾ ನಾವಿಕನನ್ನು ರಕ್ಷಿಸಿದ ಭಾರತೀಯ ನೌಕಾಪಡೆ; ಮಾನವೀಯತೆಗೆ ಮೆಚ್ಚುಗೆ

ahoratri dharani until the guilts are punished says Opposition party Leader R Ashok
ಕರ್ನಾಟಕ24 mins ago

R Ashok: ಹಗರಣಕೋರರಿಗೆ ಶಿಕ್ಷೆಯಾಗುವವರೆಗೂ ಅಹೋರಾತ್ರಿ ಧರಣಿ; ಆರ್. ಅಶೋಕ್‌ ಘೋಷಣೆ

Traffic Restrictions
ಬೆಂಗಳೂರು36 mins ago

Traffic Restrictions: ವೈಟ್ ಟಾಪಿಂಗ್ ಕಾಮಗಾರಿ; ನಾಳೆಯಿಂದ ರಾಜಾಜಿನಗರದ ಈ ಮಾರ್ಗದಲ್ಲಿ ಸಂಚಾರ ನಿಷೇಧ

Mohammed Shami
ಕ್ರೀಡೆ39 mins ago

Mohammed Shami: 19ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಮೊಹಮ್ಮದ್ ಶಮಿ; ತಡೆದು ನಿಲ್ಲಿಸಿದ್ದು ಯಾರು?

KP Poorchandra Tejaswi samagra kruthi Jagattu 14 samputagalu Lokarpane On July 29 in Bengaluru
ಬೆಂಗಳೂರು39 mins ago

Book Release: ಜು.29ರಂದು ಬೆಂಗಳೂರಿನಲ್ಲಿ 14 ಸಂಪುಟಗಳ ಪೂರ್ಣಚಂದ್ರ ತೇಜಸ್ವಿ ಕೃತಿ ಲೋಕಾರ್ಪಣೆ

Asteria Aerospace has introduced a SkyDeck platform that helps in various fields including agriculture
ದೇಶ43 mins ago

SkyDeck: ಕೃಷಿ ಮತ್ತಿತರ ಕ್ಷೇತ್ರಗಳಿಗೆ ನೆರವಾಗುವ ʼಸ್ಕೈಡೆಕ್ʼ ಪ್ಲಾಟ್‌ಫಾರ್ಮ್! ಏನಿದು?

Health Tips Kannada
ಆರೋಗ್ಯ1 hour ago

Health Tips Kannada: ನಿಂತ ಮಳೆ ನೀರಿನಿಂದ ಈ 7 ರೋಗಗಳು ಬರುತ್ತವೆ ಎನ್ನುವುದು ನಿಮಗೆ ಗೊತ್ತೆ?

Dog attack
ದೇಶ2 hours ago

Dog Attack: ವಕೀಲನ ಮೇಲೆ ಶ್ವಾನ ದಾಳಿ; ಖಾಸಗಿ ಅಂಗಕ್ಕೆ ಕಚ್ಚಿದ ಪಿಟ್‌ ಬುಲ್‌

Paris Olympics
ಕ್ರೀಡೆ2 hours ago

Paris Olympics: ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿದ್ದಾರೆ ಭಾರತದ 24 ಸೈನಿಕರು

Supreme Court
ದೇಶ2 hours ago

Supreme Court: ರೈತರು, ಸರ್ಕಾರದ ಮಧ್ಯೆ ‘ತಟಸ್ಥ ಅಂಪೈರ್’‌ ಬೇಕು; ಸುಪ್ರೀಂ ಕೋರ್ಟ್‌ ಮಹತ್ವದ ಸಲಹೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ15 hours ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ1 day ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ1 day ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ1 day ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ4 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ5 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ5 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ6 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ6 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

ಟ್ರೆಂಡಿಂಗ್‌