ವಿಸ್ತಾರ ಸಂಪಾದಕೀಯ: ಈ ವರ್ಷ ಭಾರತ ಜಗತ್ತಿನ ಪ್ರಬಲ ಆರ್ಥಿಕ ಶಕ್ತಿ, ಐಎಂಎಫ್ ಭವಿಷ್ಯ ಆಶಾದಾಯಕ - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಈ ವರ್ಷ ಭಾರತ ಜಗತ್ತಿನ ಪ್ರಬಲ ಆರ್ಥಿಕ ಶಕ್ತಿ, ಐಎಂಎಫ್ ಭವಿಷ್ಯ ಆಶಾದಾಯಕ

ವಿತ್ತೀಯ ಕೊರತೆ ಹಾಗೂ ಹಣದುಬ್ಬರಗಳು ನಿಯಂತ್ರಣ ಮಟ್ಟದಲ್ಲಿವೆ. ಈ ಎಲ್ಲದರ ಹಿನ್ನೆಲೆಯಲ್ಲಿ, ಈ ಬಾರಿಯ ಕೇಂದ್ರ ಬಜೆಟ್ ಜನಪರ ಮತ್ತು ಜನಸ್ನೇಹಿ ಆಗುವ ನಿರೀಕ್ಷೆ ಇದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಈ ವರ್ಷ ಜಾಗತಿಕ ಆರ್ಥಿಕ ಪ್ರಗತಿ ಕುಸಿಯಲಿದೆ. ಆದರೆ ಭಾರತ ವಿಶ್ವದ ಪ್ರಬಲ ಆರ್ಥಿಕ ಶಕ್ತಿಯಾಗಿ (Indian Economy) ಬೆಳೆಯಲಿದೆ ಎಂದು ವಿಶ್ವ ಹಣಕಾಸು ಸಂಸ್ಥೆ (ಐಎಂಎಫ್‌) ಹೇಳಿದೆ. 2023ರಲ್ಲಿ ವಿಶ್ವದ ಶೇ. 50ರಷ್ಟು ಆರ್ಥಿಕತೆಯು ಭಾರತ ಮತ್ತು ಚೀನಾದ ಪಾಲಾಗಲಿದೆ ಎಂದೂ ಐಎಂಎಫ್ ಹೇಳಿದೆ. ಜಾಗತಿಕ ಆರ್ಥಿಕತೆಯಲ್ಲಿ ಅಮೆರಿಕ ಮತ್ತು ಯುರೋಪಿನ ದೇಶಗಳ ಪಾಲು ಕೇವಲ ಶೇ.10 ಇರಲಿದೆ ಎಂದೂ ಅದು ಉಲ್ಲೇಖಿಸಿರುವುದು ಗಮನಾರ್ಹ. 2022ರಲ್ಲಿ ಶೇಕಡಾ 6.8 ಇದ್ದ ಭಾರತದ ಆರ್ಥಿಕ ಬೆಳವಣಿಗೆ 2023ರಲ್ಲಿ 6.1ಕ್ಕೆ ಕುಸಿಯಲಿದ್ದರೂ, 2024ರ ಆರ್ಥಿಕ ವರ್ಷದಲ್ಲಿ ಮತ್ತೆ ಶೇಕಡಾ 6.8ಕ್ಕೆ ಬೆಳೆಯುವ ನಿರೀಕ್ಷೆಯಿದೆ ಎಂದಿದೆ. ಇದೊಂದು ಕುತೂಹಲಕರ ಮತ್ತು ಭರವಸೆದಾಯಕ ವರದಿ.

ಇದಕ್ಕೆ ಪೂರಕವಾಗಿ, ಈ ವರ್ಷದ ಬಜೆಟ್‌ಗೆ ಮುಂಚಿತವಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಆರ್ಥಿಕ ಸಮೀಕ್ಷೆಯಲ್ಲೂ ಹಲವಾರು ಆಶಾದಾಯಕ ಅಂಶಗಳಿವೆ. ದೇಶದ ಈ ವರ್ಷದ ನೈಜ ಜಿಡಿಪಿ ಬೆಳವಣಿಗೆ ದರ ಶೇ.7 ಇರಲಿದೆ ಎಂದು ಆರ್ಥಿಕ ಸಮೀಕ್ಷೆಯಲ್ಲಿ ನಿರೀಕ್ಷಿಸಲಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಎಂಎಸ್‌ಎಂಇ ವಲಯದ ಬೆಳವಣಿಗೆ 30.5%ದಷ್ಟು ಏರಿದೆ. ಇದೊಂದು ಬಹಳ ಭರವಸೆಯ ವಲಯ. ಹಾಗೆಯೇ ಸರ್ಕಾರಿ ವೆಚ್ಚಗಳು 63.4%ದಷ್ಟು ಇರುವುದು ಆರ್ಥಿಕತೆ ಬೆಳವಣಿಗೆ ಪ್ರಮುಖ ಚಾಲಕ ಶಕ್ತಿಗಳಲ್ಲಿ ಒಂದು. ವಲಸೆ ಕಾರ್ಮಿಕರ ಮರಳುವಿಕೆಯು ನಿರ್ಮಾಣ ವಲಯವನ್ನು ಹುರಿದುಂಬಿಸಿದೆ. ರಫ್ತುಗಳು ದಾಖಲೆ ಪ್ರಮಾಣದಲ್ಲಿ ಹೆಚ್ಚಿದೆ. ಖಾಸಗಿ ವಲಯದ ಹೂಡಿಕೆ ಹಾಗೂ ತೊಡಗಿಸುವಿಕೆಗಳು ಭರವಸೆದಾಯಕವಾಗಿವೆ. ವಿತ್ತೀಯ ಕೊರತೆ ಹಾಗೂ ಹಣದುಬ್ಬರಗಳು ನಿಯಂತ್ರಣದ ಮಟ್ಟದಲ್ಲಿವೆ. ಈ ಎಲ್ಲದರ ಹಿನ್ನೆಲೆಯಲ್ಲಿ, ಈ ಬಾರಿಯ ಕೇಂದ್ರ ಬಜೆಟ್ ಜನಪರ ಮತ್ತು ಜನಸ್ನೇಹಿ ಆಗುವ ನಿರೀಕ್ಷೆ ಇದೆ.

ಐಎಂಎಫ್‌ ವರದಿ ಹಾಗೂ ಆರ್ಥಿಕ ಸಮೀಕ್ಷೆಗಳು ಮುಂದಿಟ್ಟಿರುವ ದೇಶದ ಆರ್ಥಿಕ ಚಿತ್ರಣ ಭರವಸೆದಾಯಕವಾಗಿರಲು ಹಲವು ಕಾರಣಗಳಿರಬಹುದು. ಕೊರೊನಾದಿಂದ ಮುಕ್ತವಾದ ಬಳಿಕ ದೇಶದ ಮಾರುಕಟ್ಟೆಯಲ್ಲಿ ಚಲನಶೀಲತೆ ಮರಳಿದೆ. ಪಟ್ಟಣ ಹಾಗೂ ಗ್ರಾಮೀಣ ಉದ್ಯೋಗ ಮಾರುಕಟ್ಟೆಯಲ್ಲಿ ಉದ್ಯೋಗಗಳು ಮರಳಿರುವುದರಿಂದ, ಗ್ರಾಹಕ ಮಾರುಕಟ್ಟೆಯಲ್ಲಿ ಗ್ರಾಹಕನಿಗೆ ವೆಚ್ಚ ಮಾಡುವ ಧೈರ್ಯವೂ ಹೆಚ್ಚಿದೆ. ಕಳೆದ ಡಿಸೆಂಬರ್‌ನಲ್ಲಿ ದೇಶದ ಜಿಎಸ್‌ಟಿ ಆದಾಯ 1.49 ಲಕ್ಷ ಕೋಟಿ ರೂಪಾಯಿಗಳಾಗಿದ್ದು, ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ.15ರಷ್ಟು ಅಧಿಕವಾಗಿದೆ. ರಫ್ತು ಕಳೆದ ವರ್ಷಕ್ಕಿಂತ ಶೇ.16ರಷ್ಟು ಹೆಚ್ಚಿದ್ದು, ಜಗತ್ತಿನ 7ನೇ ಅತಿ ದೊಡ್ಡ ರಫ್ತುದಾರ ಎನಿಸಿದೆ. ವಿದೇಶಿ ವಿನಿಮಯ ಮೀಸಲು ಮೊತ್ತ (563 ಶತಕೋಟಿ ಡಾಲರ್)‌ ಸುರಕ್ಷಿತವಾಗಿದೆ.

ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ಭಾರತ್ ಜೋಡೋ ಮೂಲಕ ಕಾಂಗ್ರೆಸ್ ಬಲಪಡಿಸುವ ರಾಹುಲ್ ಗಾಂಧಿ ಪ್ರಯತ್ನ ಪ್ರಶಂಸಾರ್ಹ

ಇದರ ಜತೆಗೆ, ವಿಶ್ವಸಂಸ್ಥೆಯ ಇತ್ತೀಚಿನ ಜಾಗತಿಕ ಜನಸಂಖ್ಯಾ ವರದಿ (WPR) ವರದಿ ಹೇಳಿರುವ ಪ್ರಕಾರ, ಇಷ್ಟರಲ್ಲೇ ಭಾರತದ ಜನಸಂಖ್ಯೆ ಚೀನಾವನ್ನೂ ಮೀರಿಸಿ ಮುಂದಡಿಯಿಡಲಿದೆ. ಚೀನಾದ ಜನಸಂಖ್ಯೆಯ ಹೆಚ್ಚಿನ ಪ್ರಮಾಣ 40 ವರ್ಷ ಮೀರುತ್ತಿದ್ದರೆ, ಭಾರತದ ಶೇ.50 ಮಂದಿ 30 ವರ್ಷಕ್ಕಿಂತ ಕೆಳಗಿನವರು ಹಾಗೂ ಅದೇ ಕಾರಣಕ್ಕಾಗಿ ಇವರು ಮುಂದಿನ ಮೂರು ದಶಕಗಳ ಕಾಲ ದುಡಿಯುವವರಾಗಿರುತ್ತಾರೆ. ಭಾರತದ ಫಲವತ್ತತೆ ದರವೂ ಚೀನಾಕ್ಕಿಂತ ಮುಂದಿದೆ ಹಾಗೂ ಮುಂದಿನ ದಶಕದಲ್ಲಿ ಅದು ಚೀನಾವನ್ನೂ ಅಭಿವೃದ್ಧಿಯಲ್ಲಿ ಹಿಂದಿಕ್ಕಲಿದೆ. ಇದೇ ಕಾರಣದಿಂದ ಮುಂದಿನ ದಶಕಗಳು ಭಾರತದ್ದಾಗಿದ್ದು, ಇಲ್ಲಿನ ದುಡಿಯುವ ಕೈಗಳು ಜಗತ್ತಿನ ಪಾಲಿಗೆ ಭರವಸೆಯ ಕಿರಣಗಳಾಗಿ ಹೊಮ್ಮಲಿವೆ. ಈ ಹಿಂದೆ ಎರಡು ಬಾರಿ ಜಾಗತಿಕ ಆರ್ಥಿಕ ಹಿಂಜರಿತ ಉಂಟಾದಾಗಲೂ ಭಾರತಕ್ಕೆ ಅದರ ಬಿಸಿ ತಟ್ಟಿರಲಿಲ್ಲ. ಈ ಬಾರಿ ವಿಶ್ವದ ಹಲವು ದೇಶಗಳು ಆರ್ಥಿಕ ಹಿಂಜರಿತದಿಂದ ತತ್ತರಿಸುತ್ತಿದ್ದರೂ ಭಾರತ ಯಥಾಸ್ಥಿತಿಯಲ್ಲಿದೆ ಎಂಬುದು ಮಹತ್ವದ ಅಂಶ. ಮುಂದಿನ ವರ್ಷ ಆರ್ಥಿಕ ಕುಸಿತ ಉಂಟಾಗಲಿದೆ ಎಂಬ ಆತಂಕದಿಂದ ಹಲವಾರು ದೊಡ್ಡ ಬಹುರಾಷ್ಟ್ರೀಯ ಕಂಪನಿಗಳು ಈಗಾಗಲೇ ಉದ್ಯೋಗ ಕಡಿತ ಮಾಡಿವೆ. ಆದರೆ ಭಾರತದಲ್ಲಿ ಅಂಥ ಕಳವಳಕ್ಕೆ ಕಾರಣವಿಲ್ಲ ಎಂದು ತಿಳಿಸುವ ಮೂಲಕ ಐಎಂಎಫ್‌ ಹೊಸ ಭರವಸೆಯನ್ನೇ ಸೃಷ್ಟಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Valmiki Corporation Scam: ಸಾಕ್ಷ್ಯ ನಾಶ ಆರೋಪ; ಮೇ 24ರಂದು ನಾನು ಕಚೇರಿಗೆ ಹೋಗಿಯೇ ಇಲ್ಲ ಎಂದ ಸಚಿವ ಶರಣ ಪ್ರಕಾಶ್ ಪಾಟೀಲ್

ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಕಚೇರಿಯಲ್ಲಿ ಸಾಕ್ಷ್ಯ ನಾಶ ಕುರಿತು ಸಭೆ ನಡೆದಿದೆ ಎಂದು ವಾಲ್ಮೀಕಿ ನಿಗಮ ಅಕ್ರಮ ಪ್ರಕರಣದ 8ನೇ ಆರೋಪಿ, ಲೆಕ್ಕಾಧಿಕಾರಿ ಪರಶುರಾಮ್​ ಆರೋಪಿಸಿದ್ದಾರೆ. ಇದನ್ನು ಸಚಿವ ಶರಣ ಪ್ರಕಾಶ್ ಪಾಟೀಲ್ ತಳ್ಳಿ ಹಾಕಿದ್ದಾರೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ನಿಗಮ ಅಕ್ರಮ ಪ್ರಕರಣದಲ್ಲಿ (Valmiki Corporation Scam) ಮತ್ತೊಬ್ಬ ಸಚಿವರ ಹೆಸರು ಕೇಳಿಬಂದಿದೆ. ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಕಚೇರಿಯಲ್ಲಿ ಸಾಕ್ಷ್ಯ ನಾಶ ಕುರಿತು ಚರ್ಚೆ ನಡೆದಿದೆ ಎಂದು ಪ್ರಕರಣದ 8ನೇ ಆರೋಪಿ, ಲೆಕ್ಕಾಧಿಕಾರಿ ಪರಶುರಾಮ್​ ಆರೋಪಿಸಿದ್ದಾರೆ. ಆದರೆ, ತಮ್ಮ ಮೇಲಿನ ಆರೋಪಗಳನ್ನು ಸಚಿವ ಶರಣ ಪ್ರಕಾಶ್ ಪಾಟೀಲ್ ಅಲ್ಲಗಳೆದಿದ್ದು, ನನ್ನ ಕಚೇರಿಯಲ್ಲಿ ಯಾವುದೇ ಸಭೆ ನಡೆದಿಲ್ಲ, ಅಂದು ನಾನು ಕಚೇರಿಗೆ ಹೋಗಿಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ವಾಲ್ಮೀಕಿ ನಿಗಮ 187 ಕೋಟಿ ಅವ್ಯವಹಾರ ಪ್ರಕರಣದಲ್ಲಿ ಪ್ರಕರಣದ ಎಂಟನೇ ಆರೋಪಿ ಪರಶುರಾಮ್‌, ನ್ಯಾಯಾಲಯಕ್ಕೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಸಚಿವ ಶರಣ ಪ್ರಕಾಶ್ ಪಾಟೀಲ್ ಕಚೇರಿಯಲ್ಲಿ ಸಾಕ್ಷ್ಯ ನಾಶ ಮಾಡಿದ ಆರೋಪ ಮಾಡಿದ್ದಾರೆ.

ಏನಿದು ಆರೋಪ?

ಸಚಿವ ಶರಣ ಪ್ರಕಾಶ್ ಪಾಟೀಲ್ ಕಚೇರಿಯಲ್ಲಿ ಮೇ 24 ರಂದು ಬೆಳಗ್ಗೆ 10 ಗಂಟೆಯಿಂದ 3 ಗಂಟೆಯವರೆಗೂ ಸಭೆ ನಡೆಸಿದ್ದಾರೆ. ಅಲ್ಲಿ ಸಾಕ್ಷ್ಯ ನಾಶ ಕುರಿತು ಚರ್ಚೆ ಆಗಿದೆ. ಸಭೆಯಲ್ಲಿ ಶರಣ ಪ್ರಕಾಶ್ ಪಾಟೀಲ್, ನಾಗೇಂದ್ರ, ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಭಾಗವಹಿಸಿದ್ದರು. ಹೀಗಾಗಿ ಕೊಠಡಿಯ ಸಿಸಿಟಿವಿ ಫುಟೇಜ್‌ಗಳನ್ನು ತರಿಸಿಕೊಂಡು ಸಾಕ್ಷ್ಯಗಳನ್ನು ರಕ್ಷಣೆ ಮಾಡಲು ತನಿಖಾಧಿಕಾರಿಗೆ ನಿರ್ದೇಶನ ನೀಡಬೇಕು ಹಾಗೂ ಜತೆಗೆ ತಾನು ದದ್ದಲ್ ಜತೆ ವಾಟ್ಸ್ಆ್ಯಪ್‌ ಚಾಟ್ ಮಾಡಿರುವುದನ್ನು ಸಹ ರಕ್ಷಣೆ ಮಾಡಬೇಕು ಎಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಆರೋಪಿ ಮನವಿ ಮಾಡಿದ್ದಾರೆ.

ಸಭೆ ನಡೆದ ದಿನ ನಾನು ಕಚೇರಿಗೆ ಹೋಗಿಯೇ ಇಲ್ಲ ಎಂದ ಸಚಿವ

ವೈದ್ಯಕೀಯ ಶಿಕ್ಷಣ ಸಚಿವರ ಕಚೇರಿಯಲ್ಲಿ ಬಂಧಿತ ಆರೋಪಿ ಪರಶುರಾಮ್ ಸಭೆ ನಡೆಸಿದ್ದಾರೆಂಬ ಎಂಬ ಆರೋಪ ಬಗ್ಗೆ ಬೆಂಗಳೂರಿನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಪ್ರತಿಕ್ರಿಯಿಸಿ, ಇದರ ಬಗ್ಗೆ ತನಿಖೆ ನಡೆಸಲಿ. ಮೇ 24ರಂದು ನಾನು ಕಚೇರಿಗೆ ಹೋಗಿಯೇ ಇರಲಿಲ್ಲ. ವಿಕಾಸ ಸೌಧದಲ್ಲಿ ತಮಗೆ ಹಂಚಿಕೆಯಾಗಿರುವ ಕೊಠಡಿ ಸರ್ಕಾರದ ಕಚೇರಿ. ಅಲ್ಲಿಗೆ ಸಾಕಷ್ಟು ಜನ ಬರುತ್ತಾರೆ, ಹೋಗುತ್ತಾರೆ. ಬಂಧಿತ ಪರಶುರಾಮ್ ವೈದ್ಯಕೀಯ ಶಿಕ್ಷಣ ಸಚಿವರು ಅಂತ ಹೇಳಿಲ್ಲ. ಸಚಿವರ ಕಚೇರಿಯಲ್ಲಿ ಅಂತ ಹೇಳಿದ್ದಾರೆ. ಅಂದು ನಾನು ಕಚೇರಿಗೆ ಹೋಗಿಲ್ಲ. ನಮ್ಮ ಕಚೇರಿಯಲ್ಲಿ ಸಭೆ ಆಗಿರುವುದು ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Valmiki Corporation Scam: ವಾಲ್ಮೀಕಿಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣ; ನಿಗಮ, ಮಂಡಳಿಗಳಿಗೆ ಪತ್ರ ಬರೆದ ಹಣಕಾಸು ಇಲಾಖೆ

ಮಾಧ್ಯಮಗಳಲ್ಲಿ ವರದಿ ಬಂದ ಬಳಿಕ ಕಚೇರಿ ಸಿಬ್ಬಂದಿಯನ್ನು ಕೇಳಿದೆ. ಆ ರೀತಿ ಯಾವುದೇ ಸಭೆ ಆಗಿಲ್ಲ ಅಂತ ಹೇಳಿದ್ದಾರೆ. ಶಾಸಕರು ಬರುತ್ತಾರೆ, ಹೋಗುತ್ತಾರೆ ಅಂತ ಸಿಬ್ಬಂದಿ ಹೇಳಿದ್ದಾರೆ. ಇದಕ್ಕೂ ನನಗೂ ಸಂಬಂಧ ಇಲ್ಲ. ಬೇಕಾದರೆ ಸಿಸಿಟಿವಿ ಫುಟೇಜ್ ಪರಿಶೀಲಿಸಲಿ, ನನ್ನ ಕಚೇರಿಯಲ್ಲಿ ಸಭೆ ಆಗಿದ್ದರೆ ತನಿಖೆ ನಡೆಯಲಿ. ತನಿಖೆಯಲ್ಲಿ ಸತ್ಯಾಸತ್ಯತೆ ಹೊರ ಬರಲಿದೆ. ನಾನು ಪ್ರಾಮಾಕವಾಗಿ ಕೆಲಸ ಮಾಡುವವನು ಎಂದು ಹೇಳಿದ್ದಾರೆ.

ತನಿಖೆಯಿಂದ ನಿಜಾಂಶ ಹೊರಬರಲಿದೆ ಎಂದ‌ ಶಾಸಕ ದದ್ದಲ್

ವಾಲ್ಮೀಕಿ ನಿಗಮ ಪ್ರಕರಣ ಬಗ್ಗೆ ಎಸ್ಐಟಿ ತನಿಖೆ ನಡೆಯುತ್ತಿದೆ. ಬಹುತೇಕ ಎಲ್ಲ ಅರೋಪಿಗಳನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಯಾರದ್ದೇ ಹೆಸರು ಕೇಳಿಬಂದರೂ ತನಿಖೆ ನಡೆಸುತ್ತಾರೆ. ನಮ್ಮ ಪಾತ್ರ ಇದ್ದರೂ ಕರೆಯುತ್ತಾರೆ. ಸತ್ಯಾಂಶವನ್ನು ಯಾರೂ ಮುಚ್ಚಿಡಲು ಸಾಧ್ಯವಿಲ್ಲ. ಈಗಾಗಲೇ ಸಿಬಿಐ ಎಫ್ಐ‌ಆರ್ ಮಾಡಿಕೊಂಡಿದೆ. ಎರಡು ಸಂಸ್ಥೆಗಳ ತನಿಖೆಯಿಂದ ನಿಜಾಂಶ ಹೊರಬರಲಿದೆ ಎಂದು ಶಾಸಕ ಬಸನಗೌಡ ದದ್ದಲ್‌ ಹೇಳಿದರು.

ಇದನ್ನೂ ಓದಿ | ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣದಲ್ಲಿ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಹೆಸರು; ಡಾ. ಜಿ.ಪರಮೇಶ್ವರ್‌ ಹೇಳಿದ್ದೇನು?

ಆರೋಪದಂತೆ ಸಭೆ ಆಗಿದ್ದು ನಿಜವೇ ಎಂಬ ಪ್ರಶ್ನಗೆ ಉತ್ತರಿಸಿ, ಆರೋಪಿ ಎಸ್ಐಟಿಗೆ ಏನು ಹೇಳಿಕೆ ಕೊಟ್ಟಿದ್ದಾರೆ, ಅದರಲ್ಲಿ ಸತ್ಯಾಂಶ ಇದ್ದರೆ ಕರೆಯುತ್ತಾರೆ. ನನ್ನನ್ನು ಈವರೆಗೂ ತನಿಖೆಗೆ ಕರೆದಿಲ್ಲ. ನಾನು ಪರಿಶಿಷ್ಟ ಪಂಗಡದಲ್ಲಿ ಹುಟ್ಟಿದ್ದವನು. ಇಂತಹ ದುಸ್ಸಾಹಸಗಳಿಗೆ ಕೈ ಹಾಕಲು ಸಾಧ್ಯವಿಲ್ಲ. ಎಲ್ಲವೂ ಇನ್ನೊಂದು ವಾರದೊಳಗೆ ಅಥವಾ ಐದಾರು ದಿನಗಳಲ್ಲಿ ಹೊರ ಬರಲಿದೆ. ನೀತಿ ಸಂಹಿತೆ ಜಾರಿ ಇದ್ದ ಕಾರಣ ನಾನು ಕಚೇರಿಗೆ ಹೋಗಿಲ್ಲ. ಸಭೆಗಳನ್ನು ಮಾಡಿಲ್ಲ ಎಂದು ತಿಳಿಸಿದರು.

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣ; ನಿಗಮ, ಮಂಡಳಿಗಳಿಗೆ ಪತ್ರ ಬರೆದ ಹಣಕಾಸು ಇಲಾಖೆ

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ (Valmiki Corporation Scam) ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ರಾಜ್ಯದ ಮತ್ತಷ್ಟು ನಿಗಮ ಮತ್ತು ಮಂಡಳಿಗಳ ಮೇಲೆ ಅನುಮಾನ ಮೂಡಿದೆ. ರಾಜ್ಯ ಸರ್ಕಾರದ ಆದೇಶ ಉಲ್ಲಂಘಿಸಿ ಸುಮಾರು 1 ಸಾವಿರ ಕೋಟಿ ರೂ. ಖಾಸಗಿ ಬ್ಯಾಂಕ್‌ಗಳಲ್ಲಿ ಜಮೆ ಮಾಡಲಾಗಿದ್ದು, ನಿಗಮ, ಮಂಡಳಿಗಳ ಈ ಬ್ಯಾಂಕ್ ಖಾತೆಗಳನ್ನ ತಕ್ಷಣದಿಂದಲೇ ಸ್ಥಗಿತಗೊಳಿಸಲು ಹಣಕಾಸು ಇಲಾಖೆ ಪತ್ರ ಬರೆದಿದೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ (Valmiki Corporation Scam) ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ರಾಜ್ಯದ ಮತ್ತಷ್ಟು ನಿಗಮ ಮತ್ತು ಮಂಡಳಿಗಳ ಮೇಲೆ ಅನುಮಾನ ಮೂಡಿದೆ. ರಾಜ್ಯ ಸರ್ಕಾರದ ಆದೇಶ ಉಲ್ಲಂಘಿಸಿ ಸುಮಾರು 1 ಸಾವಿರ ಕೋಟಿ ರೂ. ಖಾಸಗಿ ಬ್ಯಾಂಕ್‌ಗಳಲ್ಲಿ ಜಮೆ ಮಾಡಲಾಗಿದ್ದು, ನಿಗಮ, ಮಂಡಳಿಗಳ ಈ ಬ್ಯಾಂಕ್ ಖಾತೆಗಳನ್ನ ತಕ್ಷಣದಿಂದಲೇ ಸ್ಥಗಿತಗೊಳಿಸಲು ಹಣಕಾಸು ಇಲಾಖೆ ಪತ್ರ ಬರೆದಿದೆ.

ಎಲ್ಲ ಬ್ಯಾಂಕ್‌ಗಳಿಗೆ ಪತ್ರ ಬರೆದು ಖಾತೆಗಳ ಬಗ್ಗೆ ಹೆಚ್ಚಿನ ವಿವರ ಕೇಳಿದೆ. ರಾಜ್ಯದ 25 ನಿಗಮ ಹಾಗೂ ಮಂಡಳಿಗಳಿಂದ 1 ಸಾವಿರ ಕೋಟಿಗೂ ಅಧಿಕ ಹಣ ಖಾಸಗಿ ಬ್ಯಾಂಕ್‌ನಲ್ಲಿ ಜಮೆ ಮಾಡಲಾಗಿದ್ದು, ಈ ಪೈಕಿ ಒಂದೇ ನಿಗಮ 10 ಖಾಸಗಿ ಬ್ಯಾಂಕುಗಳಲ್ಲಿ ಖಾತೆ ಹೊಂದಿರುವುದು ಬೆಳಕಿಗೆ ಬಂದಿದೆ. ಈ ಎಲ್ಲ ಕಾರಣಗಳಿಂದ ಕ್ರಮಕ್ಕೆ ಮುಂದಾದ ಅಧಿಕಾರಿಗಳು ಈ ಖಾತೆಗಳನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ಸೂಚಿಸಿದ್ದಾರೆ.

ನಿಯಮ ಏನು ಹೇಳುತ್ತದೆ?

ಎಲ್ಲ ನಿಗಮ ಹಾಗೂ ಮಂಡಳಿಗಳು ಸರ್ಕಾರದ ಖಜಾನೆಯಲ್ಲಿಯೇ ಖಾತೆಗಳನ್ನ ತೆರೆದು ಹಣವನ್ನು ಅಲ್ಲಿಯೇ ಜಮೆ ಮಾಡಬೇಕೆಂಬ ಆದೇಶವಿದೆ. ಆದರೂ ಸರ್ಕಾರದ ಆದೇಶ ಉಲ್ಲಂಘಿಸಿ ಖಾಸಗಿ ಬ್ಯಾಂಕ್‌ಗಳಲ್ಲಿ ಸಾವಿರಾರು ಕೋಟಿ ರೂ. ಜಮೆ ಮಾಡಲಾಗಿದೆ. ಸದ್ಯ ಯಾವ ಬ್ಯಾಂಕ್‌ನಲ್ಲಿ ಎಷ್ಟು ಹಣ ಜಮೆ ಮಾಡಲಾಗಿದೆ ಎಂಬ ಮಾಹಿತಿಯನ್ನು ಹಣಕಾಸು ಇಲಾಖೆ ಕೇಳಿದೆ. ಈಗಾಗಲೇ ಎಲ್ಲ ಇಲಾಖೆಗೆ ಪತ್ರ ಬರೆದು ಮಾಹಿತಿ ಸಂಗ್ರಹ ನಡೆಸುತ್ತಿದೆ.

ಏನಿದು ಪ್ರಕರಣ?

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು. 88 ಕೋಟಿ ರೂ. ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆಯುತ್ತಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ. ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ: Valmiki Corporation Scam: ವಾಲ್ಮೀಕಿ ನಿಗಮ ಹಗರಣ; ವರ್ಗಾವಣೆಯಾದ ಹಣ ಹಿಂಪಡೆಯಲು ಸರ್ಕಾರ ಕಸರತ್ತು

Continue Reading

ಕರ್ನಾಟಕ

NDA 3.0: ರಾಜ್ಯಕ್ಕೆ ಸಿಗಲಿದ್ಯಾ 2+1 ಸಚಿವ ಸ್ಥಾನ? ರೇಸ್‌ನಲ್ಲಿ ಯಾರೆಲ್ಲ ಇದ್ದಾರೆ?

NDA 3.0: ಲೋಕಸಭಾ ಚುನಾವಣೆಯಲ್ಲಿ 292 ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಬಿಜೆಪಿ ನೇತೃತ್ವದ ಎನ್‌ಡಿಎ ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆಗೆ ಏರಿದೆ. ಈಗಾಗಲೇ ಎನ್‌ಡಿಎ ಮಿತ್ರಪಕ್ಷಗಳು ಬೆಂಬಲ ಸೂಚಿಸಿದ್ದು, ಸರ್ಕಾರ ರಚನೆಗೆ ಸಿದ್ಧತೆ ಆರಂಭಿಸಿವೆ (NDA 3.0). ನಾಳೆ (ಜೂನ್‌ 9) ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮಧ್ಯೆ ಕರ್ನಾಟಕದಿಂದ ಯಾರಿಗೆ ಕೇಂದ್ರ ಸಚಿವ ಸ್ಥಾನದ ಭಾಗ್ಯ ಒಲಿಯಲಿದೆ ಎಂಬ ಚರ್ಚೆ ಜೋರಾಗಿದೆ.

VISTARANEWS.COM


on

NDA 3.0
Koo

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ 292 ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಬಿಜೆಪಿ ನೇತೃತ್ವದ ಎನ್‌ಡಿಎ (National Democratic Alliance) ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆಗೆ ಏರಿದೆ. ಈಗಾಗಲೇ ಎನ್‌ಡಿಎ ಮಿತ್ರಪಕ್ಷಗಳು ಬೆಂಬಲ ಸೂಚಿಸಿದ್ದು, ಸರ್ಕಾರ ರಚನೆಗೆ ಸಿದ್ಧತೆ ಆರಂಭಿಸಿವೆ (NDA 3.0). ನಾಳೆ (ಜೂನ್‌ 9) ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮಧ್ಯೆ ಕರ್ನಾಟಕದಿಂದ ಯಾರಿಗೆ ಕೇಂದ್ರ ಸಚಿವ ಸ್ಥಾನದ ಭಾಗ್ಯ ಒಲಿಯಲಿದೆ ಎಂಬ ಚರ್ಚೆ ಜೋರಾಗಿದೆ.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜಯಗಳಿಸಿರುವ ಜೆಡಿಎಸ್‌ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೇಂದ್ರ ಕ್ಯಾಬಿನೆಟ್ ಮಂತ್ರಿ ಹುದ್ದೆ ಬಹುತೇಕ ಖಚಿತಗೊಂಡಿದೆ ಎನ್ನಲಾಗಿದ್ದು, ಬಿಜೆಪಿಯಿಂದ ಯಾರಿಗೆ ಮಂತ್ರಿ ಸ್ಥಾನ ಸಿಗಲಿದೆ ಎಂಬ ಕುತೂಹಲ ಹೆಚ್ಚಿದೆ.

ಮೂವರಿಗೆ ಸಚಿವ ಸ್ಥಾನ?

ಕುಮಾರಸ್ವಾಮಿ ಸೇರಿದಂತೆ ಬಿಜೆಪಿಯ ಇಬ್ಬರು ಸಂಸದರಿಗೆ ಸಚಿವ ಸ್ಥಾನ ನೀಡಿದಲ್ಲಿ ರಾಜ್ಯದ ಮೂವರಿಗೆ ಮಂತ್ರಿ ಪಟ್ಟ ಸಿಕ್ಕಂತಾಗಲಿದೆ. ಈಗಿನ ಸನ್ನಿವೇಶದಲ್ಲಿ ಮೂರಕ್ಕಿಂತ ಹೆಚ್ಚು ಸಚಿವ ಸ್ಥಾನ ರಾಜ್ಯಕ್ಕೆ ಸಿಗುವುದು ಕಷ್ಟ ಎನ್ನುವ ಮಾತೂ ಕೇಳಿ ಬಂದಿದೆ. ಮುಂಬರುವ ಚುನಾವಣಾ ರಾಜ್ಯದ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಹೈ ಕಮಾಂಡ್, ಮಹಾರಾಷ್ಟ್ರ, ಹರಿಯಾಣ ಸಂಸದರಿಗೆ ಹೆಚ್ಚಿನ ಸಚಿವ ಸ್ಥಾನ ನೀಡಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಜತೆಗೆ ಮಿತ್ರ ಪಕ್ಷಗಳಿಗೂ ಆದ್ಯತೆ ನೀಡಬೇಕಿದೆ.

ಪ್ರಲ್ಹಾದ್ ಜೋಶಿಗೆ ಮತ್ತೆ ಅವಕಾಶ?

ರಾಜ್ಯದಲ್ಲಿ ಬ್ರಾಹ್ಮಣ, ಲಿಂಗಾಯತ, ಒಕ್ಕಲಿಗ, ದಲಿತ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಲು ಎನ್‌ಡಿಎ ಬಯಸಿದೆ ಎನ್ನಲಾಗಿದೆ. ಪ್ರಹ್ಲಾದ ಜೋಶಿ (Prahlad Joshi) ಅವರು ಎನ್‌ಡಿಎ ಮೂರನೆಯ ಅವಧಿಯಲ್ಲೂ ಸಚಿವರಾಗುವುದು ಬಹುತೇಕ ಖಚಿತವಾಗಿದೆ. ಹಿಂದಿ ಹಾಗೂ ಇಂಗ್ಲಿಷ್‌ನಲ್ಲಿ ನಿರರ್ಗಳತೆ ಹೊಂದಿರುವ ಪ್ರಹ್ಲಾದ್‌ ಜೋಶಿ, ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಪ್ರಭಾವ ಹೊಂದಿದ್ದಾರೆ. ನಾಲ್ಕನೇ ಬಾರಿಗೆ ಹುಬ್ಬಳ್ಳಿ- ಧಾರವಾಡದ ಸಂಸದರಾಗಿ ಆಯ್ಕೆಯಾಗಿರುವ ಜೋಶಿ, ಬ್ರಾಹ್ಮಣ ಕೋಟಾವನ್ನು ತುಂಬಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೆದ್ದ ʼಹೃದಯವಂತʼ ಡಾಕ್ಟರ್ ಸಿ.ಎನ್‌. ಮಂಜುನಾಥ್‌ (Dr CN Manjunath) ಅವರೂ ಸಚಿವ ಸ್ಥಾನ ಪಡೆಯಬಲ್ಲವರ ಯಾದಿಯಲ್ಲಿ ಇದ್ದಾರೆ ಎನ್ನಲಾಗಿದೆ. ಮಂಜುನಾಥ್‌ ಅವರ ಹಿರಿತನ, ಆರೋಗ್ಯ ಕ್ಷೇತ್ರದ ಅನುಭವ ಸರಕಾರದಲ್ಲಿ ನೆರವಾಗಲಿದೆ ಎಂಬ ಮುಂದಾಲೋಚನೆ. ಜತೆಗೆ ಹಲವು ಬಾರಿಯ ಸಂಸದರಾಗಿರುವ, ಕಾಂಗ್ರೆಸ್‌ನ ಹೆಬ್ಬಂಡೆ ಡಿ.ಕೆ ಸುರೇಶ್‌ (DK Suresh) ಅವರನ್ನು ದೊಡ್ಡ ಅಂತರದಲ್ಲಿ ಸೋಲಿಸಿ ಮಣ್ಣು ಮುಕ್ಕಿಸಿ ಕಾಂಗ್ರೆಸ್‌ಗೆ ದೊಡ್ಡ ಹೊಡೆತ ನೀಡಿದ ಹೆಗ್ಗಳಿಕೆ ಜತೆಗಿದೆ.

ಸದ್ಯ ಕರ್ನಾಟಕಕ್ಕೆ 2+1+1 ಫಾರ್ಮುಲಾ ಅನುಸರಿಸಲು ಬಿಜೆಪಿ ಹೈ ಕಮಾಂಡ್ ಚಿಂತನೆ ಎನ್ನಲಾಗಿದ್ದು, ಬಿಜೆಪಿಯಿಂದ 2 ಸಚಿವರು, ಜೆಡಿಎಸ್‌ಗೆ 1 ಹಾಗೂ 1 ರಾಜ್ಯ ಸಚಿವರನ್ನಾಗಿ ಮಾಡಲೂ ಬಿಜೆಪಿ ಚಿಂತನೆ ನಡೆಸಿದೆ ಎನ್ನುವ ಮಾತೂ ಕೇಳಿ ಬಂದಿದೆ.

ಇದನ್ನೂ ಓದಿ: Shivamogga News: ಸೊರಬದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತ ಆರೋಪ

Continue Reading

ಪ್ರಮುಖ ಸುದ್ದಿ

Rishabh Pant : ಸಂಜು ಸ್ಯಾಮ್ಸನ್​ ಜತೆಗಿನ ಒಳ ಜಗಳದ ಬಗ್ಗೆ ಸ್ಪಷ್ಟನೆ ನೀಡಿದ ರಿಷಭ್ ಪಂತ್​

Rishabh Pant: ಡೆಲ್ಲಿ ಕ್ಯಾಪಿಟಲ್ಸ್ ಪರ ಲೀಗ್​​ನಲ್ಲಿ ಕೆಲವು ಅದ್ಭುತ ಇನ್ನಿಂಗ್ಸ್​ಗಳನ್ನು ಆಡಿದ ರಿಷಭ್ ಪಂತ್ ಅವರು ಆಡಿದ 13 ಪಂದ್ಯಗಳಲ್ಲಿ 40 ಸರಾಸರಿ ಮತ್ತು 155 ಸ್ಟ್ರೈಕ್ ರೇಟ್​ನಲ್ಲಿ 446 ರನ್ ಗಳಿಸಿದ್ದಾರೆ. ಅವರು ಪಂದ್ಯಾವಳಿಯಲ್ಲಿ ತಮ್ಮ ತಂಡದ ಪರ ಅತಿ ಹೆಚ್ಚು ರನ್ ಗಳಿಸಿದವರಾಗಿದ್ದಾರೆ.

VISTARANEWS.COM


on

Rishabh Pant
Koo

ನವದೆಹಲಿ: 2024 ರ ಟಿ 20 ವಿಶ್ವಕಪ್​ನ್ಲಲಿ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಮುಂಚಿತವಾಗಿ ಭಾರತದ ವಿಕೆಟ್ ಕೀಪರ್ ಬ್ಯಾಟರ್​ ರಿಷಭ್ ಪಂತ್ ಸಂಜು ಸ್ಯಾಮ್ಸನ್ ಅವರೊಂದಿಗಿನ ಸಂಬಂಧದ ಕುರಿತು ಮಾತನಾಡಿದ್ದಾರೆ. ತಮ್ಮ ನಡುವೆ ಯಾವುದೇ ಜಗಳವಿಲ್ಲ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ. ಸಂಜು ಅವರೊಂದಿಗೆ ಉತ್ತಮ ಸ್ನೇಹ ಹೊಂದಿದ್ದು,ತ ತಾವಿಬ್ಬರೂ ಪರಸ್ಪರ ತುಂಬಾ ಗೌರವಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್ 2024 ರ ಟಿ 20 ವಿಶ್ವಕಪ್​​ಗಾಗಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರಲ್ಲಿ ಆಯಾ ಫ್ರಾಂಚೈಸಿಗಳಿಗಾಗಿ ಅವರ ಅದ್ವಿತೀಯ ಪ್ರದರ್ಶನದ ಆಧಾರದ ಮೇಲೆ ಇವರಿಬ್ಬರು ತಂಡಕ್ಕೆ ಆಯ್ಕೆಯಾದರು.

ಡೆಲ್ಲಿ ಕ್ಯಾಪಿಟಲ್ಸ್ ಪರ ಲೀಗ್​​ನಲ್ಲಿ ಕೆಲವು ಅದ್ಭುತ ಇನ್ನಿಂಗ್ಸ್​ಗಳನ್ನು ಆಡಿದ ರಿಷಭ್ ಪಂತ್ ಅವರು ಆಡಿದ 13 ಪಂದ್ಯಗಳಲ್ಲಿ 40 ಸರಾಸರಿ ಮತ್ತು 155 ಸ್ಟ್ರೈಕ್ ರೇಟ್​ನಲ್ಲಿ 446 ರನ್ ಗಳಿಸಿದ್ದರು. ಅವರು ಪಂದ್ಯಾವಳಿಯಲ್ಲಿ ತಮ್ಮ ತಂಡದ ಪರ ಅತಿ ಹೆಚ್ಚು ರನ್ ಗಳಿಸಿದವರಾಗಿದ್ದಾರೆ. ಮತ್ತೊಂದೆಡೆ, ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಸುಮಾರು 153 ಸ್ಟ್ರೈಕ್ ರೇಟ್​ನಲ್ಲಿ 531 ರನ್ ಗಳಿಸಿದ್ದಾರೆ. ಅವರು 5 ಅರ್ಧ ಶತಕಗಳನ್ನು ಸಹ ಬಾರಿಸಿದ್ದಾರೆ. ಅವರು ಪಂದ್ಯಾವಳಿಯನ್ನು 5 ನೇ ಪ್ರಮುಖ ಸ್ಕೋರರ್ ಆಗಿ ಕೊನೆಗೊಳಿಸಿದರು. ಅವರು ತಮ್ಮ ತಂಡವನ್ನು ಪ್ಲೇಆಫ್​ಗೆ ಮುನ್ನಡೆಸಿದ್ದರು.

ಐಪಿಎಲ್ ಸಮಯದಲ್ಲಿ ವಿಶ್ವಕಪ್​ಗಾಗಿ ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್ ನಡುವೆ ಸ್ಪರ್ಧೆ ಇತ್ತು ಎಂದು ಹೇಳುವುದು ನ್ಯಾಯಯುತವಾಗಿದೆ. ಕೆಎಲ್ ರಾಹುಲ್, ಜಿತೇಶ್ ಶರ್ಮಾ ಮತ್ತು ಇಶಾನ್ ಕಿಶನ್ ಅವರೊಂದಿಗೆ ಸ್ಪರ್ಧೆಯಲ್ಲಿದ್ದರು.

ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್ ಇಬ್ಬರೂ ಇತರರಿಗಿಂತ ಭಿನ್ನವಾಗಿ ಕಾಣುತ್ತಿದ್ದರು. ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಯಿತು. ಭಾರತೀಯ ತಂಡದಲ್ಲಿ ತಮ್ಮ ಸ್ಥಾನದಿಂದಾಗಿ ಇವರಿಬ್ಬರು ಪರಸ್ಪರ ಉತ್ತಮವಾಗಿ ಆಡುತ್ತಿಲ್ಲ ಎಂಬ ಬಗ್ಗೆ ವರ್ಷಗಳಿಂದ ಸಾಕಷ್ಟು ಮಾತುಕತೆಗಳು ನಡೆದಿವೆ.

ಆದರೆ ಇದೀಗ ರಿಷಭ್ ಪಂತ್ ಸ್ಪಷ್ಟನೆ ನೀಡಿದ್ದಾರೆ. ಸಂಜು ಸ್ಯಾಮ್ಸನ್ ಆರಾಮವಾಗಿದ್ದಾರೆ ಮತ್ತು ಅವರು ಉತ್ತಮ ಸಂಬಂಧ ಹಂಚಿಕೊಂಡಿದ್ದಾರೆ ಎಂದು ಕೀಪರ್-ಬ್ಯಾಟರ್​ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಅವರ ಬಗ್ಗೆ ಸಾಕಷ್ಟು ಮಾತುಕತೆಗಳು ನಡೆದಿವೆ ಆದರೆ ಅವರು ಅವುಗಳ ಬಗ್ಗೆ ಗಮನ ಹರಿಸುವುದಿಲ್ಲ ಮತ್ತು ಪರಸ್ಪರ ಮೆಚ್ಚಿಕೊಳ್ಳುತ್ತೇವೆ ಎಂದು ಅವರು ಒಪ್ಪಿಕೊಂಡರು.

ಇದನ್ನೂ ಓದಿ: T20 World Cup : ಪಾಕಿಸ್ತಾನ ತಂಡದ ಅಮೆರಿಕ ವಿರುದ್ಧ ಸೋತಿದ್ದು ಐಎಮ್​ಎಫ್​ ನೀಡುವ 80 ಕೋಟಿ ಸಾಲಕ್ಕಾಗಿ!

ನಾವು ಉತ್ತಮ ಸ್ನೇಹವನ್ನು ಹೊಂದಿದ್ದೇವೆ, ಸಂಜು ಶಾಂತವಾಗಿದ್ದಾರೆ. ಏಕೆಂದರೆ ಸಾಮಾಜಿಕ ಮಾಧ್ಯಮದಲ್ಲಿ ಬಹಳಷ್ಟು ವಿಷಯಗಳು ನಡೆಯುತ್ತವೆ ಎಂದು ನಿಮಗೆ ತಿಳಿದಿದೆ ಆದರೆ ವೈಯಕ್ತಿಕವಾಗಿ ನಾವು ಈ ವಿಷಯಗಳ ಬಗ್ಗೆ ಗಮನ ಹರಿಸುವುದಿಲ್ಲ ಮತ್ತು ನಾವು ತಂಡದ ಸದಸ್ಯರಾಗಿದ್ದೇವೆ. ನಾವು ಒಬ್ಬರನ್ನೊಬ್ಬರು ತುಂಬಾ ಮೆಚ್ಚುತ್ತೇವೆ ಮತ್ತು ಗೌರವಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಪಾಕಿಸ್ತಾನ ವಿರುದ್ಧ ಅಗತ್ಯ ಪ್ರಯತ್ನ

ಪ್ರಸ್ತುತ ನಡೆಯುತ್ತಿರುವ ಟಿ 20 ವಿಶ್ವಕಪ್ 2024 ರಲ್ಲಿ ಸಂಜು ಸ್ಯಾಮ್ಸನ್​ಗಿಂತ ರಿಷಭ್ ಪಂತ್​ಗೆ ಭಾರತೀಯ ಆಡುವ ಬಳಗದಲ್ಲಿ ಅವಕಾಶ ನೀಡಲಾಗಿದೆ. ಕೀಪರ್-ಬ್ಯಾಟರ್​ಗೆ 3 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಹೇಳಲಾಗಿದೆ. ಅವರು ಪಂದ್ಯಾವಳಿಯಲ್ಲಿ ಇಲ್ಲಿಯವರೆಗೆ ತಂಡಕ್ಕಾಗಿ ಅದ್ಭುತವಾಗಿ ಕಾರ್ಯನಿರ್ವಹಿಸಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ರಿಷಭ್ ಪಂತ್ ಅರ್ಧಶತಕ ಬಾರಿಸುವ ಮೂಲಕ ಪಂದ್ಯಾವಳಿಯನ್ನು ಉತ್ತಮವಾಗಿ ಪ್ರಾರಂಭಿಸಿದ್ದರು. ಮುಂದೆ, ಅವರು ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ತಂಡಕ್ಕಾಗಿ ಉತ್ತಮವಾಗಿ ಆಡಿದ್ದರು. ಪಿಚ್ ಬ್ಯಾಟಿಂಗ್ ಮಾಡಲು ಕಠಿಣವಾಗಿದ್ದರೂ, ಅವರು ಅಜೇಯ 36 ರನ್ ಗಳಿಸಿ ತಮ್ಮ ತಂಡವನ್ನು ಗೆಲ್ಲಿಸಿದ್ದರು.

ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರಲ್ಲಿ ರಿಷಭ್ ಪಂತ್ ಉತ್ತಮ ಫಾರ್ಮ್​ನಲ್ಲಿದ್ದಾರೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅವರು ತಮ್ಮ ತಂಡಕ್ಕೆ ಪ್ರಮುಖ ಪಾತ್ರ ವಹಿಸಲಿದ್ದಾರೆ. ನ್ಯೂಯಾರ್ಕ್​ನ ನಸ್ಸಾವು ಕೌಂಟಿ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ಜೂನ್ 9 ರಂದು ನಡೆಯಲಿರುವ ಪಂದ್ಯದಲ್ಲಿ ತಂಡ ಅವರ ಮೇಲೆ ಬಹಳಷ್ಟು ಅವಲಂಬಿತವಾಗಿರುತ್ತದೆ.

Continue Reading
Advertisement
Pakistan
ವಿದೇಶ1 second ago

Pakistan: ಇಡೀ ಜಗತ್ತೇ ಮೋದಿಗೆ ಅಭಿನಂದಿಸಿದರೂ ಪಾಕಿಸ್ತಾನ ಮಾತ್ರ ಇನ್ನೂ Congratulations ಎಂದಿಲ್ಲ!

Valmiki Corporation Scam
ಪ್ರಮುಖ ಸುದ್ದಿ36 seconds ago

Valmiki Corporation Scam: ಸಾಕ್ಷ್ಯ ನಾಶ ಆರೋಪ; ಮೇ 24ರಂದು ನಾನು ಕಚೇರಿಗೆ ಹೋಗಿಯೇ ಇಲ್ಲ ಎಂದ ಸಚಿವ ಶರಣ ಪ್ರಕಾಶ್ ಪಾಟೀಲ್

Gold Rate Today
ಚಿನ್ನದ ದರ29 mins ago

Gold Rate Today: ಆಭರಣ ಖರೀದಿಗೆ ಇದು ಸಕಾಲ; ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

MM Hills
ಚಾಮರಾಜನಗರ34 mins ago

MM Hills : ಮಲೆಮಹದೇಶ್ವರ ಬೆಟ್ಟದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ; ಒಬ್ಬರು ಸಾವು, ಮೂವರು ಗಂಭೀರ

Viral News
ದೇಶ50 mins ago

Viral News: ಅಯ್ಯೋ..ಇದೆಂಥಾ ಹುಚ್ಚಾಟ! ಬಿಜೆಪಿ ಗೆಲ್ಲಲ್ಲಿ ಎಂದು ಬೆರಳನ್ನೇ ಕತ್ತರಿಸಿಕೊಂಡ ಭೂಪ

Chandan Shetty Dhruva Sarja Talk With Niveditha Gowda
ಸ್ಯಾಂಡಲ್ ವುಡ್1 hour ago

Chandan Shetty: ಚಂದನ್-ನಿವೇದಿತಾ ಸಂಬಂಧ ಸರಿ ಮಾಡ್ತಾರಾ ಧ್ರುವ ಸರ್ಜಾ? ಪ್ರಥಮ್ ಕೊಟ್ಟಿದ್ದಾರೆ ಕ್ಲೂ!

Electric shock
ಬೆಂಗಳೂರು1 hour ago

Electric shock : ಫ್ಯಾನ್‌ ಸ್ವಿಚ್‌ ಆನ್‌ ಮಾಡುವಾಗ ಕರೆಂಟ್‌ ಶಾಕ್‌; ವಿದ್ಯುತ್‌ ಕಂಬದಲ್ಲಿ ನೇತಾಡಿದ ಲೈನ್‌ಮ್ಯಾನ್‌ ಡೆಡ್‌ ಬಾಡಿ

Modi 3.0 Cabinet
Lok Sabha Election 20241 hour ago

Modi 3.0 Cabinet: ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಯಾರಿಗೆಲ್ಲ ಸಚಿವ ಸ್ಥಾನ? ಇವರೇ ನೋಡಿ ಸಂಭಾವ್ಯ ಮಿನಿಸ್ಟರ್‌ಗಳು

Kannada New Movie Ramesh Suresh Movie June 21st release
ಸ್ಯಾಂಡಲ್ ವುಡ್2 hours ago

Kannada New Movie: ʻರಮೇಶ್ ಸುರೇಶ್‌ʼ ಸಿನಿಮಾದಲ್ಲಿ ಇಬ್ಬರು ನಿರ್ದೇಶಕರು, ಇಬ್ಬರು ನಾಯಕರು ; ಜೂನ್ 21ರಂದು ತೆರೆಗೆ!

Road Accident in shivamogga
ಕ್ರೈಂ2 hours ago

Road Accident : ಮುಖಾಮುಖಿಯಾಗಿ ಬಂದ ಕಾರುಗಳು ಪೀಸ್‌ ಪೀಸ್‌; ಚಾಲಕ ಸ್ಪಾಟ್‌ ಡೆತ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ19 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ20 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು7 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌