Electric Scooters : ದೊಡ್ಡ ಬೂಟ್​ ಸ್ಪೇಸ್ ಇರುವಂಥ 5 ಎಲೆಕ್ಟ್ರಿಕ್​ ಸ್ಕೂಟರ್​ಗಳು ಇವು - Vistara News

ಪ್ರಮುಖ ಸುದ್ದಿ

Electric Scooters : ದೊಡ್ಡ ಬೂಟ್​ ಸ್ಪೇಸ್ ಇರುವಂಥ 5 ಎಲೆಕ್ಟ್ರಿಕ್​ ಸ್ಕೂಟರ್​ಗಳು ಇವು

Electric Scooters : ಭಾರತೀಯ ಮಾರುಕಟ್ಟೆಯಲ್ಲಿರುವ ಐದು ಎಲೆಕ್ಟ್ರಿಕ್ ಸ್ಕೂಟರ್​ಗಳ ಬೂಟ್ ಸ್ಪೇಸ್​​ಗಳ ಮಾಹಿತಿ ನೀಡಲಾಗಿದೆ. ನಿಮಗೆ ಯಾವುದು ಇಷ್ಟವಾಯಿತು ಎಂಬುದನ್ನು ತಿಳಿಸಿ. ಹೋಲಿಕೆಗೊಂದು ಮಾಹಿತಿ, ನಾವು ರಸ್ತೆಯಲ್ಲಿ ಹೆಚ್ಚಾಗಿ ನೋಡುವ ಹೋಂಡಾ ಆ್ಯಕ್ಟಿವಾ ಎಲೆಕ್ಟ್ರಿಕ್​ ಸ್ಕೂಟರ್​ 18 ಲೀಟರ್ ಬೂಟ್​ ಸ್ಪೇಸ್ ಹೊಂದಿದೆ.

VISTARANEWS.COM


on

Electric Scooters
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಕೂಟರ್​​ಗಳು ಅತ್ಯಂತ ಅಗತ್ಯ ವಸ್ತುಗಳಲ್ಲಿ ಒಂದಾಗಿದೆ. ಅದು ಪ್ರಾಯೋಗಿಕ ಅದು ಹೆಚ್ಚು ಉಪಯೋಗಕಾರಿ. ಯಾಕೆಂದರೆ ಸ್ಕೂಟರ್​​ಗಳಲ್ಲಿ ಹೆಚ್ಚು ಬೂಟ್​ ಸ್ಪೇಸ್​ ಹೊಂದಿದೆ. ಅದರಲ್ಲೂ ಎಲೆಕ್ಟ್ರಿಕ್​ ಸ್ಕೂಟರ್​ಗಳು ಹೆಚ್ಚು ಉಪಯೋಗಕಾರಿ. ಜತೆಗೆ ಹೈಟೆಕ್​ ಫೀಚರ್​ಗಳೂ ಇವೆ. ಇಂದಿನ ಕೆಲವು ಎಲೆಕ್ಟ್ರಿಕ್ ಸ್ಕೂಟರ್ ಗಳಲ್ಲಿನ ಬೂಟ್​ ಸ್ಪೇಸ್​ ಎಷ್ಟು ದೊಡ್ಡದಾಗಿದೆ ಎಂದರೆ ನಿಮಗೆ ಒಂದು ಕಲ್ಪನೆ ಮಾಡಲೂ ಸಾಧ್ಯವಿಲ್ಲದಷ್ಟು ದೊಡ್ಡದಾಗಿದೆ. ಹೀಗಾಗಿ ಭಾರತೀಯ ಮಾರುಕಟ್ಟೆಯಲ್ಲಿರುವ ಐದು ಎಲೆಕ್ಟ್ರಿಕ್ ಸ್ಕೂಟರ್​ಗಳ ಬೂಟ್ ಸ್ಪೇಸ್​​ಗಳ ಮಾಹಿತಿ ನೀಡಲಾಗಿದೆ. ನಿಮಗೆ ಯಾವುದು ಇಷ್ಟವಾಯಿತು ಎಂಬುದನ್ನು ತಿಳಿಸಿ. ಹೋಲಿಕೆಗೊಂದು ಮಾಹಿತಿ, ನಾವು ರಸ್ತೆಯಲ್ಲಿ ಹೆಚ್ಚಾಗಿ ನೋಡುವ ಹೋಂಡಾ ಆ್ಯಕ್ಟಿವಾ ಎಲೆಕ್ಟ್ರಿಕ್​ ಸ್ಕೂಟರ್​ 18 ಲೀಟರ್ ಬೂಟ್​ ಸ್ಪೇಸ್ ಹೊಂದಿದೆ.

ರಿವರ್ ಇಂಡಿ -​ 43 ಲೀಟರ್

ರಿವರ್​ ಇಂ ಡಿ ಕಂಪನಿಯ ​ ಸ್ಕೂಟರ್ 43 ಲೀಟರ್ ಬೂಟ್​ ಸ್ಪೇಸ್​ ಹೊಂದಿದೆ. ಇದರ ಬೂಟ್​ ಸ್ಪೇಸ್​ ನೋಡಿದರೆ ಇದಕ್ಕೆ ಯಾವುದೇ ಪರ್ಯಾಯ ಇಲ್ಲ. ಇದು ಯಾವುದೇ ಭಾರತೀಯ ಎಲೆಕ್ಟ್ರಿಕ್ ಸ್ಕೂಟರ್ ಪೈಕಿ ಅತಿದೊಡ್ಡ ಶೇಖರಣಾ ಸ್ಥಳವಾಗಿದೆ. ಪ್ರಾಯೋಗಿವಾಗಿ ಇಂಡಿ ಸ್ಕೂಟರ್​ನಲ್ಲಿ ಒಂದು ಜೋಡಿ ಪ್ಯಾನಿಯರ್ ಗಳು ಮತ್ತು ಅಕ್ಸಸರಿ ಹಾಗೂ ಟಾಪ್ ಬಾಕ್ಸ್ ನೀಡಲಾಗುತ್ತದೆ. ಇದು ಅದರ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.

ಅಥೆರ್ ರಿಶ್ತಾ- 34 ಲೀಟರ್

ರಿಶ್ತಾ ಮತ್ತು ಜೆನ್ 2 ಓಲಾ ಮಾದರಿಗಳು ಒಂದೇ ರೀತಿಯ ಬೂಟ್​ ಸ್ಪೇಸ್​ ಹೊಂದಿದೆ. ಆದರೆ, ಓಲಾದಲ್ಲಿ ಅದರ ಬೂಟ್​ ಸ್ಪೇಸ್​ ಆಳವಿಲ್ಲದ ಕಾರಣ ಅಥೆರ್ ಒಂದು ಹೆಜ್ಜೆ ಮುಂದಕ್ಕೆ ನಿಲ್ಲುತ್ತದೆ. ಅಥೆರ್ ರಿಜ್ಟಾದ ಆಳವಾದ ಶೇಖರಣಾ ಸಾಮರ್ಥ್ಯ ಹೊಂದಿದೆ. ಅಥೆರ್ ಬೂಟ್ ನ ಸ್ವಲ್ಪ ದೂರದಲ್ಲಿ ಒಂದು ಸಣ್ಣ ಕ್ಯೂಬಿಯನ್ನು ನೀಡಿದೆ. ಅಲ್ಲಿ ನೀವು ನಿಮ್ಮ ಸ್ಮಾರ್ಟ್ ಫೋನ್, ವ್ಯಾಲೆಟ್ ಮುಂತಾದ ನಿಕ್-ನಾಕ್ ಗಳನ್ನು ಇಟ್ಟುಕೊಳ್ಳಬಹುದು.

ಇದನ್ನೂ ಓದಿ: Jawa Yezdi : ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್ ನ ಜಾವಾ 42 ಬಾಬರ್ ರೆಡ್ ಶೀನ್‌ ಬಿಡುಗಡೆ

ಜೆನ್ 2 ಓಲಾ ಎಸ್ 1 ವೇರಿಯೆಂಟ್​- 34 ಲೀಟರ್

ಜೆನ್ 2 ಪ್ಲಾಟ್ ಫಾರ್ಮ್ ಗೆ ಸ್ಥಳಾಂತರಗೊಳ್ಳುವುದರೊಂದಿಗೆ, ಓಲಾದ ಎಲ್ಲಾ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ 34 ಲೀಟರ್ ಬೂಟ್ ಸಾಮರ್ಥ್ಯ ನೀಡಲಾಗಿದೆ. ವಾಸ್ತವವಾಗಿ 36 ಲೀಟರ್ ಬೂಟ್ ಸಾಮರ್ಥ್ಯ ಹೊಂದಿದ್ದ ಜೆನ್ 1 ಓಲಾ ಮಾದರಿಗಳಿಗಿಂತ ಸ್ವಲ್ಪ ಕಡಿಮೆ ಎನಿಸಿದೆ. ಏನೇ ಇರಲಿ ಓಲಾ ಎಲೆಕ್ಟ್ರಿಕ್ ಗಳು ಮಾರುಕಟ್ಟೆಯಲ್ಲಿ ದೊಡ್ಡ ಬೂಟ್ ನೀಡಿದ ಮೊದಲ ಎಲೆಕ್ಟ್ರಿಕ್ ಸ್ಕೂಟರ್​​.

ಟಿವಿಎಸ್ ಐಕ್ಯೂಬ್ 32 ಲೀಟರ್

ಐಕ್ಯೂಬ್ ಮೊದಲ ಬಾರಿಗೆ ಬಿಡುಗಡೆಯಾದಾಗ ಮಾರಾಟದಲ್ಲಿದ್ದ ಎರಡು ರೂಪಾಂತರಗಳು ಕೇವಲ 17 ಲೀಟರ್ ಅಂಡರ್ ಸೀಟ್ ಸ್ಟೋರೇಜ್ ಸ್ಥಳ ಹೊಂದಿದ್ದವು. ಟಿವಿಎಸ್ ಈಗ ಜನಪ್ರಿಯ ಇ-ಸ್ಕೂಟರ್ ನ ಎಲ್ಲಾ ರೂಪಾಂತರಗಳ (ಬೇಸ್ ಐಕ್ಯೂಬ್ 2.2 ಕಿಲೋವ್ಯಾಟ್ ಹೊರತುಪಡಿಸಿ) ಬೂಟ್ 32 ಲೀಟರ್ ಗಳಿಗೆ ಹೆಚ್ಚಿಸಿದೆ. ಬೇಸ್ ಐಕ್ಯೂಬ್ 2.2 30 ಲೀಟರ್ ನಲ್ಲಿ ವೇರಿಯೆಂಟ್​ನಲ್ಲಿ 30 ಲೀಟರ್ ಬೂಟ್​ ಸ್ಪೇಸ್​ ನೀಡಲಾಗಿದೆ.

ಸಿಂಪಲ್ ಒನ್ 30 ಲೀಟರ್

ಸಿಂಪಲ್ ಒನ್ ಸ್ಕೂಟರ್​ 30 ಲೀಟರ್ ಬೂಟ್ ಸ್ಪೇಸ್​ ಐದು ಸ್ಕೂಟರ್​ಗಳ ಪಟ್ಟಿಯಲ್ಲಿ ಅತ್ಯಂತ ಚಿಕ್ಕದು. ಸಿಂಪಲ್ ಒನ್​ ಸ್ಕೂಟರ್ ಹೆಚ್ಚು ಜನಪ್ರಿಯವಾಗಿಲ್ಲ ಎಂಬುದು ಮೊದಲ ಮಾತು. ಅದರೆ, ಅದರ ಬೂಟ್​ ಸ್ಪೇಸ್​​ ಸ್ಪರ್ಧಾತ್ಮಕವಾಗಿದೆ. ಇಂಡಿ ಹೊರತುಪಡಿಸಿ ಟಿವಿಎಸ್​, ಅಥೆರ್ ಹಾಗೂ ಓಲಾ ಸ್ಕೂಟರ್​ಗಳು ನಾನಾ ರೀತಿಯಲ್ಲಿ ಜನಪ್ರಿಯವಾಗಿದೆ. ಆದಾಗ್ಯೂ ಸಿಂಪನ್​ ಒನ್​ ಸ್ಪರ್ಧಾತ್ಮಕ ರೀತಿಯಲ್ಲೇ ಬೂಟ್​ ಸ್ಪೇಸ್​ ನೀಡುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Death News: “ಕಾಂಗ್ರೆಸ್‌ ಶವಯಾತ್ರೆ….” ಭಾಷಣ ಮುಗಿಸಿ ಬಿಜೆಪಿ ನಾಯಕ ಭಾನುಪ್ರಕಾಶ್ ಸ್ಥಳದಲ್ಲೇ ನಿಧನ

Death News: ಶಿವಮೊಗ್ಗದ ಗೋಪಿ ಸರ್ಕಲ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್‌, ಭಾಷಣ ಮುಗಿಸಿದ ಕೂಡಲೇ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದರು.

VISTARANEWS.COM


on

death news bhanuprakash petrol diesel price hike
Koo

ಶಿವಮೊಗ್ಗ: ಪೆಟ್ರೋಲ್- ಡಿಸೇಲ್ ಬೆಲೆ ಏರಿಕೆ (Petrol Diesel Price hike) ಪ್ರತಿಭಟಿಸಿ ಬಿಜೆಪಿ (BJP protest) ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗಿಯಾದ ಬಿಜೆಪಿ ನಾಯಕ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ ಭಾನುಪ್ರಕಾಶ್‌ (MB Bhanuprakash) ಅವರು ಭಾಷಣ ಮುಗಿಸಿದ ತಕ್ಷಣವೇ ಹೃದಯಾಘಾತಕ್ಕೊಳಗಾಗಿ (Heart Attack) ಮೃತಪಟ್ಟಿದ್ದಾರೆ (Death News).

ಬಿಜೆಪಿ ಪ್ರತಿಭಟನೆಯಲ್ಲಿ ಅವರು ʼಕಾಂಗ್ರೆಸ್‌ನ ಶವಯಾತ್ರೆ ಮಾಡಬೇಕುʼ ಎಂದು ನೀಡಿದ ಭಾಷಣ ಇದೀಗ ವೈರಲ್‌ (Viral speech) ಆಗುತ್ತಿದೆ. ಶಿವಮೊಗ್ಗದ ಗೋಪಿ ಸರ್ಕಲ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್‌, ಭಾಷಣ ಮುಗಿಸಿದ ಕೂಡಲೇ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದರು. ಕೂಡಲೇ ಅವರನ್ನು ಶಿವಮೊಗ್ಗದ ಮ್ಯಾಕ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಭಾನುಪ್ರಕಾಶ್‌ ಅವರು ಕೊನೆಯುಸಿರು ಎಳೆದರು.

“ಕಾಂಗ್ರೆಸ್ ಶವಯಾತ್ರೆ ಮಾಡಲು ನೀವು ಇಲ್ಲಿಗೆ ಬರಬೇಕು ಎಂದು ಹೇಳಿದರು. ಯಾವಾಗ, ಎಷ್ಟು ಹೊತ್ತಿಗೆ, ಯಾಕೆ ಡಾಕ್ಟರ್ ಬಳಿ ತೋರಿಸಿಲ್ಲವೆ, ಸಂಬಂಧಿಕರಿಗೆ ತಿಳಿಸಿದ್ದೀರಾ ಎಂದು ಕೇಳಿದೆ. ಶವಯಾತ್ರೆಗೆ ಕಾಂಗ್ರೆಸ್ ಪರವಾಗಿ ಸಿದ್ದು, ಡಿಕೆಶಿ ಬರುತ್ತಾರೆ ಎಂದರು. ಸರ್ಕಾರ ಆರಿಸಿ ಬರಲಿಕ್ಕೆ ಬೇಕಾಗಿ ಭರವಸೆ ಕೊಡುವ ಗ್ಯಾರಂಟಿ ನೀಡಿದರು. ಅದನ್ನು ನಾವು ಸ್ವಾಗತಿಸಿದ್ದೇವೆ. ಅದನ್ನು ಮಾಡಬಾರದು ಎಂದಿದ್ದರೆ ನಾವು ಬಡವರ ವಿರೋಧಿಗಳಾಗುತ್ತಿದ್ದೆವು. ನಾವು ಬಡವರ ಪರ, ನಾವೆಲ್ಲ ದೀನ ದಲಿತರ ಪರವಾಗಿಯೆ ಇದ್ದೆವು. ಆದರೆ ಬರೀ ಬಾಯಿಮಾತಿನಲ್ಲಿ ಹೇಳದೆ ನಾವು ಅದನ್ನು ಮಾಡುತ್ತಾ ಬಂದಿದ್ದೇವೆ” ಎಂದು ಭಾನುಪ್ರಕಾಶ್‌ ಭಾಷಣದಲ್ಲಿ ಹೇಳಿದ್ದರು.

“ಕಾಂಗ್ರೆಸ್‌ ಸರಕಾರ ತುಘ್ಲಕ್‌ ಸರಕಾರದಂತಾಗಿದೆ. ಸಾವಿರಾರು ಜನ ಸತ್ತರೂ ಆತ ತಲೆ ಕೆಡಿಸಿಕೊಳ್ಳುತ್ತಿರಲಿಲ್ಲ. ಬೆಲೆ ಏರಿಕೆ, ಹಿಂದೂಗಳ ದಮನ ಆಗುತ್ತಿದ್ದರೂ ಕಾಂಗ್ರೆಸ್‌ ಸರಕಾರ ತಲೆ ಕೆಡಿಸಿಕೊಳ್ಳುತ್ತಿಲ್ಲ. ಇಂಧನ ಬೆಲೆ‌ ಹೆಚ್ಚುತ್ತಾ ಹೋದಂತೆ ಎಲ್ಲ ವಸ್ತುಗಳ ಬೆಲೆ ಹೆಚ್ಚುತ್ತಾ ಹೋಗುತ್ತದೆ. ಸರಕಾರದಲ್ಲಿನ ವ್ಯಕ್ತಿಗಳ ಬೆಲೆ, ಯೋಗ್ಯತೆ ಇಳಿಯುತ್ತದೆ. ನಾವು ಪ್ರತಿಭಟನೆ ಮೂಲಕ ಕಾಂಗ್ರೆಸ್‌ಗೆ ಕೊನೆಯ ಮೊಳೆ ಹೊಡೆಯುವ ಎಚ್ಚರಿಕೆ ನೀಡುತ್ತಿದ್ದೇನೆ. ಇವತ್ತು ನಡೆದಿರುವುದು ಸಾಂಕೇತಿಕ ಪ್ರತಿಭಟನೆ ಮಾತ್ರ. ನಿಮ್ಮ ಭ್ರಷ್ಟ ಆಡಳಿತ ತೊಲಗಿಸುವ ತನಕ ನಾವು ವಿಶ್ರಮಿಸುವುದಿಲ್ಲ” ಎಂದು ಭಾನುಪ್ರಕಾಶ್‌ ಭಾಷಣ ಮುಗಿಸಿದರು.

ತದನಂತರ ಅವರು ಅಸ್ವಸ್ಥರಾದರು. ಕೂಡಲೇ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಭಾನುಪ್ರಕಾಶ್ ಅವರ ಮೃತದೇಹವನ್ನು ಶಿವಮೊಗ್ಗ ತಾಲೂಕಿನ ಮತ್ತೂರು ಗ್ರಾಮದ ಸ್ವಗೃಹಕ್ಕೆ ಕೊಂಡೊಯ್ಯಲಾಗಿದೆ.

ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಸಿದ (Petrol Diesel Price Hike) ರಾಜ್ಯ ಸರಕಾರದ (Karnataka Govt) ಕ್ರಮವನ್ನು ಖಂಡಿಸಿದ ಪ್ರತಿಪಕ್ಷ ಬಿಜೆಪಿ (BJP protest) ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ (Freedom park) ಬಿಜೆಪಿಯ ರಾಜ್ಯ ಪದಾಧಿಕಾರಿಗಳು ಹಾಗೂ ಇತರ ನಾಯಕರು ಪ್ರತಿಭಟಿಸಿ ಭಾಷಣ ಮಾಡಿದರು. ಪ್ರತಿಭಟನೆ ಮಾಡಿ ಸಿಎಂ ಸಿದ್ದರಾಮ‌ಯ್ಯ (CM Siddarmaiah) ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಆರ್.‌ ಅಶೋಕ್‌ (R Ashok) ಸೇರಿದಂತೆ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದರು.

ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಬಳಿಕ ಎತ್ತಿನಗಾಡಿ ಮೂಲಕ ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಗೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ. ಅಶೋಕ್ ಮತ್ತು ಇತರ ಕಾರ್ಯಕರ್ತರನ್ನು ಪೊಲೀಸರು ತಡೆದರು. ʼʼಪೆಟ್ರೋಲ್ ರೇಟ್‌ ಹೆಚ್ಚಾಗಿದೆ. ಬಸ್‌ವರೆಗೂ ಎತ್ತಿನಗಾಡಿ ಬಿಡಿ” ಎಂದು ಅಶೋಕ್ ಆಗ್ರಹಿಸಿದರು. ಪೊಲೀಸರು ಮತ್ತು ಅಶೋಕ್ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಬಸ್‌ವರೆಗೂ ಎತ್ತಿನ ಗಾಡಿ ಬಿಟ್ಟು ನಂತರ ಅವರನ್ನು ಬಂಧಿಸಿದ ಪೊಲೀಸರು, ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಕರೆದೊಯ್ದರು.

ವಿಭಿನ್ನ ರೀತಿಯ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಚಟ್ಟ ಕಟ್ಟಿ ರಾಜ್ಯ ಸರ್ಕಾರದ ಹೆಣದ ಮೆರವಣಿಗೆ ಮಾಡಿದರು. ʼಐದು ಗ್ಯಾರಂಟಿಗಳ ಗೋವಿಂದ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೋವಿಂದʼ ಎಂದು ಚಟ್ಟ ಹಿಡಿದು ಮೆರವಣಿಗೆ ಮಾಡಿದರು.

ಇದನ್ನೂ ಓದಿ: Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

Continue Reading

ದೇಶ

Kisan Samman Nidhi: ರೈತರಿಗೆ ಗುಡ್‌ನ್ಯೂಸ್‌; ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ನಾಳೆ ನಿಮ್ಮ ಅಕೌಂಟ್‌ಗೆ; ಹೀಗೆ ಪರಿಶೀಲಿಸಿ

Kisan Samman Nidhi: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ 17ನೇ ಕಂತಿನ ಹಣ ನಾಳೆ (ಜೂನ್‌ 18) ಬಿಡುಗಡೆಯಾಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ವಾರಣಾಸಿಗೆ ಭೇಟಿ ನೀಡಲಿದ್ದು, ಈ ವೇಳೆ ಸುಮಾರು 9.3 ಕೋಟಿ ರೈತರ ಖಾತೆಗಳಿಗೆ 20,000 ರೂ. ಬಿಡುಗಡೆ ಮಾಡಲಿದ್ದಾರೆ. ಫೆಬ್ರವರಿ 28ರಂದು ಫಲಾನುಭವಿ ಕೃಷಿಕರ ಖಾತೆಗೆ ಕಿಸಾನ್‌ ಸಮ್ಮಾನ್‌ ಯೋಜನೆಯ 16ನೇ ಕಂತು ಬಿಡುಗಡೆ ಮಾಡಲಾಗಿತ್ತು.

VISTARANEWS.COM


on

Kisan Samman Nidhi
Koo

ನವದೆಹಲಿ: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Yojana)ಯ 17ನೇ ಕಂತಿನ ಹಣ ನಾಳೆ (ಜೂನ್‌ 18) ಬಿಡುಗಡೆಯಾಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ನಾಳೆ ವಾರಣಾಸಿಗೆ ಭೇಟಿ ನೀಡಲಿದ್ದು, ಈ ವೇಳೆ ಸುಮಾರು 9.3 ಕೋಟಿ ರೈತರ ಖಾತೆಗಳಿಗೆ 20,000 ರೂ. ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಸರ್ಕಾರ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು 2೦19ರಲ್ಲಿ ಜಾರಿಗೆ ತಂದಿದೆ (Kisan Samman Nidhi).

3 ಕಂತುಗಳಲ್ಲಿ ಪಾವತಿ

ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಇ-ಕೆವೈಸಿ ಕಡ್ಡಾಯ

ಕಿಸಾನ್‌ ಸಮ್ಮಾನ್‌ ನಿಧಿಯ ಕಂತನ್ನು ಪಡೆಯಲು ಫಲಾನುಭವಿ ರೈತರು ಇ-ಕೆವೈಸಿ ಪೂರ್ಣಗೊಳಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಇ-ಕೆವೈಸಿ ಮಾಡದ ರೈತರಿಗೆ ಖಾತೆಗೆ ಹಣ ಬಿಡುಗಡೆಯಾಗುವುದಿಲ್ಲ. ಒಟಿಪಿ ಆಧಾರಿತ ಇ-ಕೆವೈಸಿಯನ್ನು ಆನ್‌ಲೈನ್‌ ಮತ್ತು ಆಫ್‌ಲೈನ್‌ ಮೂಲಕ ಮಾಡಬಹುದು.

ಹೀಗೆ ಚೆಕ್‌ ಮಾಡಿ

ನೀವು ಈ ಯೋಜನೆಯ ಫಲಾನುಭವಿಯಾಗಿದ್ದರೆ, ಹಣ ನಿಮ್ಮ ಖಾತೆಗೆ ಜಮೆ ಆಗಿದೆಯೇ ಎನ್ನುವುದನ್ನು ಆನ್‌ಲೈನ್‌ ಮೂಲಕ ನಿಮಗೇ ಪರಿಶೀಲಿಸಲು ಸಾಧ್ಯವಿದೆ. ಅದಕ್ಕಾಗಿ ಮಾಡಬೇಕಾದುದು ಇಷ್ಟೆ.

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  • ಆಗ ಓಪನ್‌ ಆಗುವ ಪೇಜ್‌ನ ಬಲ ಬದಿಯಲ್ಲಿರುವ ‘Know Your Status’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ
  • ರಿಜಿಸ್ಟ್ರೇಷನ್‌ ನಂಬರ್‌ ನಮೂದಿಸಿ, ಕ್ಯಾಪ್ಚ ಕೋಡ್‌ ಭರ್ತಿ ಮಾಡಿ ‘Get Data’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ
  • ಈಗ ಫಲಾನುಭವಿಯ ವಿವರ, ಹಣ ಜಮೆಯಾದ ಮಾಹಿತಿ ಸ್ಕ್ರೀನ್‌ ಮೇಲೆ ಮೂಡುತ್ತದೆ.

ಹೆಸರು ನೋಂದಾಯಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  •  ‘New Farmer Registration’ ಆಯ್ಕೆ ಮೇಲೆ ಕಲಿಕ್‌ ಮಾಡಿ ಮತ್ತು ಆಧಾರ್‌ ಕಾರ್ಡ್‌ ನಂಬರ್‌ ನಮೂದಿಸಿ ಕ್ಯಾಪ್ಚ ಕೋಡ್‌ ಭರ್ತಿ ಮಾಡಿ
  • ಅಗತ್ಯ ಮಾಹಿತಿ ತುಂಬಿ ‘Yes’ ಬಟನ್‌ ಕ್ಲಿಕ್‌ ಮಾಡಿ
  • ಅರ್ಜಿ ಫಾರಂ ತುಂಬಿ, ಸೇವ್‌ ಮಾಡಿ ಭವಿಷ್ಯದ ಅಗತ್ಯಗಳಿಗಾಗಿ ಪ್ರಿಂಟ್‌ ಔಟ್‌ ತೆಗೆದಿಡಿ.

ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ www.pmkisan.gov.inಗೆ ಭೇಟಿ ನೀಡಿ
  • ಆಗ ತೆರೆದುಕೊಳ್ಳುವ ಪುಟದಲ್ಲಿನ ‘Beneficiary list’ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ
  • ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್‌ ಮತ್ತು ಗ್ರಾಮವನ್ನು ಆಯ್ಕೆ ಮಾಡಿ
  • ‘Get report’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌ 155261 ಮತ್ತು 011-24300606 ಅನ್ನು ಸಂಪರ್ಕಿಸಿ.

ಇದನ್ನೂ ಓದಿ: Real Estate: ಹಲವರಿಗೆ ಮನೆ ಇಲ್ಲ, ಇದ್ದವರು ಬಳಸುತ್ತಿಲ್ಲ! ದೇಶದಲ್ಲಿ 1 ಕೋಟಿಗೂ ಹೆಚ್ಚು ಫ್ಲ್ಯಾಟ್ ಗಳು ಖಾಲಿ ಬಿದ್ದಿವೆ!

Continue Reading

ಪ್ರಮುಖ ಸುದ್ದಿ

Petrol Diesel Price Hike: ಪೆಟ್ರೋಲ್‌ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವ್ಯಾಪಕ ಪ್ರತಿಭಟನೆ; ಎತ್ತಿನಗಾಡಿ, ಹೆಣ ಮೆರವಣಿಗೆ

Petrol Diesel Price Hike: ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಬಳಿಕ ಎತ್ತಿನಗಾಡಿ ಮೂಲಕ ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಗೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ. ಅಶೋಕ್ ಮತ್ತು ಇತರ ಕಾರ್ಯಕರ್ತರನ್ನು ಪೊಲೀಸರು ತಡೆದರು.

VISTARANEWS.COM


on

petrol diesel price hike bjp protest
Koo

ಬೆಂಗಳೂರು: ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಸಿದ (Petrol Diesel Price Hike) ರಾಜ್ಯ ಸರಕಾರದ (Karnataka Govt) ಕ್ರಮವನ್ನು ಖಂಡಿಸಿದ ಪ್ರತಿಪಕ್ಷ ಬಿಜೆಪಿ (BJP protest) ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ (Freedom park) ಬಿಜೆಪಿಯ ರಾಜ್ಯ ಪದಾಧಿಕಾರಿಗಳು ಹಾಗೂ ಇತರ ನಾಯಕರು ಪ್ರತಿಭಟಿಸಿ ಭಾಷಣ ಮಾಡಿದರು. ಪ್ರತಿಭಟನೆ ಮಾಡಿ ಸಿಎಂ ಸಿದ್ದರಾಮ‌ಯ್ಯ (CM Siddarmaiah) ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಆರ್.‌ ಅಶೋಕ್‌ (R Ashok) ಸೇರಿದಂತೆ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದರು.

ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಬಳಿಕ ಎತ್ತಿನಗಾಡಿ ಮೂಲಕ ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಗೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ. ಅಶೋಕ್ ಮತ್ತು ಇತರ ಕಾರ್ಯಕರ್ತರನ್ನು ಪೊಲೀಸರು ತಡೆದರು. ʼʼಪೆಟ್ರೋಲ್ ರೇಟ್‌ ಹೆಚ್ಚಾಗಿದೆ. ಬಸ್‌ವರೆಗೂ ಎತ್ತಿನಗಾಡಿ ಬಿಡಿ” ಎಂದು ಅಶೋಕ್ ಆಗ್ರಹಿಸಿದರು. ಪೊಲೀಸರು ಮತ್ತು ಅಶೋಕ್ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಬಸ್‌ವರೆಗೂ ಎತ್ತಿನ ಗಾಡಿ ಬಿಟ್ಟು ನಂತರ ಅವರನ್ನು ಬಂಧಿಸಿದ ಪೊಲೀಸರು, ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಕರೆದೊಯ್ದರು.

ವಿಭಿನ್ನ ರೀತಿಯ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಚಟ್ಟ ಕಟ್ಟಿ ರಾಜ್ಯ ಸರ್ಕಾರದ ಹೆಣದ ಮೆರವಣಿಗೆ ಮಾಡಿದರು. ʼಐದು ಗ್ಯಾರಂಟಿಗಳ ಗೋವಿಂದ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೋವಿಂದʼ ಎಂದು ಚಟ್ಟ ಹಿಡಿದು ಮೆರವಣಿಗೆ ಮಾಡಿದರು.

ಢೋಂಗಿ ಮುಖ್ಯಮಂತ್ರಿ ಸಿದ್ದರಾಮಯ್ಯ: ಆರ್.‌ ಅಶೋಕ್

“ಸಿದ್ದರಾಮಯ್ಯ ಅವರಿಗೆ ಎರಡು ನಾಲಿಗೆ.‌ ಅಂದು ಒಂದು ರೂಪಾಯಿ ಪೆಟ್ರೋಲ್ ಬೆಲೆ ಏರಿಸಿದ್ದಕ್ಕೆ, ನಿಮಗೆ ಮಾನ ಮರ್ಯಾದೆ ಇದೆಯಾ ಅಂತ ಸಿದ್ದರಾಮಯ್ಯ ಹೇಳಿದ್ರು. ಸಿದ್ದರಾಮಯ್ಯ ಈಗ ಮೂರುವರೆ ರೂಪಾಯಿ ಏರಿಸಿದ್ದೀರಿ, ನಿಮಗೆ ಮಾನಮರ್ಯಾದೆ ಇದೆಯಾ?” ಎಂದು ಅಶೋಕ್‌ ಹರಿಹಾಯ್ದರು.

“ಮೊನ್ನೆ ಒಂದು ವಿಕೆಟ್ ಬಿದ್ದಿದೆ. 187 ಕೋಟಿ ಹಣ ನುಂಗಿ, ನಾಗೇಂದ್ರ ಔಟ್ ಆಗಿದ್ದಾನೆ. ನೆಕ್ಸ್ಟ್ ವಿಕೆಟ್ ಸಿದ್ದರಾಮಯ್ಯ. ನಾಗೇಂದ್ರ ಪಾಪದವನು, ಜೇನು ಕಿತ್ತ ಅಷ್ಟೇ. ನಾಗೇಂದ್ರ ಪಾಲು ಬರೀ 20%, 80% ಸಿದ್ದರಾಮಯ್ಯ ಪಾಲಾಗಿದೆ. ನಿಗಮದ ದಲಿತರ ಹಣ, ಬಾರ್‌ಗೆ ಹೋಗಿದೆ. ತರಕಾರಿ ಅಂಗಡಿಗೆ ಕೊಡಬೇಕಾದ್ದು, ವೈನ್ ಸ್ಟೋರಿಗೆ ಹೋಯ್ತು. ಅಮಾಯಕ ಅಧಿಕಾರಿ ಒಬ್ಬ ಸತ್ತೋದ. ನಿಷ್ಠಾವಂತ ಅಧಿಕಾರಿಗಳಿಗೆ ಇಲ್ಲಿ ಭದ್ರತೆ ಇಲ್ಲ. ಪೆಟ್ರೋಲ್ ಬೆಲೆ ಹೆಚ್ಚಾದ್ರೆ ಸೆಮೆಂಟ್ ಬೆಲೆ ಹೆಚ್ಚಾಗುತ್ತೆ ಅಂದ್ರು. ಮೂರುವರೆ ರೂಪಾಯಿ ಹೆಚ್ಚು ಮಾಡಿದ್ರಿ, ಈಗ ಏನು ಬೆಲೆ ಹೆಚ್ಚಾಗುತ್ತೆ ಹೇಳಿ?” ಎಂದು ಅಶೋಕ್‌ ಆಕ್ಷೇಪಿಸಿದರು.

“ಪೆಟ್ರೋಲ್ ಬೆಲೆ ಹೆಚ್ಚು ಮಾಡಿದ್ದಾರೆ. ನಾಳೆ ಇಂದ ಕಾಫಿ ಕುಡಿಯಲು ಹೋದ್ರೆ ಬೆಲೆ ಹೆಚ್ಚಾಗಿರುತ್ತೆ. ಈ ಸರ್ಕಾರ ಎಣ್ಣೇನು ನಮ್ಮದು, ಬಾರು ನಮ್ದು, ಚೇರು ನಮ್ಮದು,‌ ದುಡ್ಡು ಮಾತ್ರ ನಿಮ್ಮದು ಅಂತ ಬರ್ತಾರೆ. ಟೀಚರ್‌ಗಳಿಗೆ ಒಂದು ವರ್ಷದಿಂದ ಸಂಬಳ‌ ಕೊಟ್ಟಿಲ್ಲ. ಪಾಟ್ ಹೋಲ್ ಬಗ್ಗೆ ನಮಗೆ ಹೇಳಿದ್ರು, ಈಗ ಎಲ್ಲಿ ನೋಡಿದ್ರೂ ಗುಂಡಿ ಇದೆ. ಡಿಕೆ‌ ಶಿವಕುಮಾರ್ ಅವರೇ ಬ್ರಾಂಡ್ ಬೆಂಗಳೂರು ಅಂದ್ರಿ, ಬರೀ ಗುಂಡಿ ಬೆಂಗಳೂರು ಆಗಿದೆ. ನೀರು ಕುಡಿದು ಆರು ಜನ ಸತ್ತಿದ್ದಾರೆ. ಕಿಡ್ನಿ ಸರಿ ಇಲ್ಲ ಅಂತ ಹೇಳಿದ್ದಾರೆ. ಶಾಲೆ ಆರಂಭವಾಗಿ ಇಷ್ಟು ದಿನ ಆದ್ರೂ ಪಠ್ಯ ಪುಸ್ತಕ ಕೊಟ್ಟಿಲ್ಲ. ಕಳ್ಳ ಕಾಂಗ್ರೆಸ್‌ನವರು, ದರೋಡೆಕೋರರು. ಆಲಿಬಾಬ ಮತ್ತು 40 ಕಳ್ಳರ ಥರ ಈ ಕಾಂಗ್ರೆಸ್ ಸರ್ಕಾರ” ಎಂದು ಟೀಕಿಸಿದರು.

ಮುಂದಿನ ವಾರ ರಸ್ತೆ ತಡೆ: ವಿಜಯೇಂದ್ರ

“ಜನವಿರೋಧಿ ಸರ್ಕಾರ, ರಾಜ್ಯದಲ್ಲಿರೋ ಜನವಿರೋಧಿ ಸಿಎಂ ವಿರುದ್ಧ ಬಿಜೆಪಿ ಪ್ರತಿಭಟನೆ ಕೈಗೆತ್ತಿಕೊಂಡಿದೆ. ಬೆಂಗಳೂರು ಮಹಾನಗರದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ಜನವಿರೋಧಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾಗಿದೆ. ರಾಜ್ಯ ಸರ್ಕಾರದ ಆತುರದ ನಿರ್ಧಾರ, ಅವಿವೇಕದ ನಿರ್ಧಾರ ವಿರೋಧಿಸಿ ಹೋರಾಟ ತೆಗೆದುಕೊಂಡಿದೆ. ಏಕಾಏಕಿ ಪೆಟ್ರೋಲ್, ಡೀಸೆಲ್ ತೆರಿಗೆ ಹೆಚ್ಚಳ ಆಗಿದೆ. ಲೋಕಸಭಾ ಚುನಾವಣೆ ಮೊದಲು, ಕಾಂಗ್ರೆಸ್ ಪಕ್ಷದ ಶಾಸಕರು ಹೇಳಿಕೆ ನೀಡಿದ್ರು. ಲೋಕಸಭಾ ಚುನಾವಣೆ ಸಂಧರ್ಭದಲ್ಲಿ ಕಾಂಗ್ರೆಸ್ ಪಕ್ಷ 18-20 ಸ್ಥಾನ ಗೆಲ್ಲದಿದ್ರೆ ಗ್ಯಾರಂಟಿ ನಿಲ್ಲಿಸೋದಾಗಿ ಹೇಳಿದ್ರು. ಲೋಕಸಭಾ ಚುನಾವಣೆ ಆಯ್ತು. 18-20 ಸ್ಥಾನ ಗೆಲ್ಲುವ ನಿರೀಕ್ಷೆ ಇದ್ದ ಸಿಎಂ, ಡಿಸಿಎಂಗೆ ಮುಖಭಂಗ ಆಯ್ತು. ಗ್ಯಾರಂಟಿ ನಿಲ್ಲಿಸಿದ್ರೆ ಜನ ದಂಗೆ ಏಳ್ತಾರೆ ಅಂತ ಗೊತ್ತಾಯಿತು. ಹಾಗೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ರು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕಿಸಿದರು.

ವಿಪಕ್ಷ ನಾಯಕರಾಗಿದ್ದಾಗ ಸಿದ್ದರಾಮಯ್ಯ ಅವರಿಗಿದ್ದ ಜನಪರ ಕಾಳಜಿ, ಸಿಎಂ‌ ಆದ ಮೇಲೆ ಎಲ್ಲಿ ಹೋಯ್ತು? ನೀವು ಅಧಿಕಾರಕ್ಕೆ ಬಂದ ಮೇಲೆ ಒಂದೇ ಒಂದು ರೂಪಾಯಿ ಅಭಿವೃದ್ಧಿ ಕಾರ್ಯ ಆಗಿಲ್ಲ. ಬೊಮ್ಮಾಯಿ ಅವರು ಸಿಎಂ ಸ್ಥಾನದಿಂದ ಕೆಳಗೆ ಇಳಿಯುವಾಗ ರೆವಿನ್ಯೂ ಪ್ಲಸ್ ಇತ್ತು. ಕಾಂಗ್ರೆಸ್ ಬಂದ ಒಂದೇ ವರ್ಷದಲ್ಲಿ ದಿವಾಳಿ ಅಂಚಿಗೆ ಬಂದಿದೆ. ನಿಮ್ಮನ್ನು ಅಧಿಕಾರದಿಂದ ಕೆಳಗಿಳಿಸೋ ತಾಕತ್ತು ರಾಜ್ಯದ ಜನರಿಗಿದೆ. ನಮ್ಮ‌ ಪಕ್ಷದ‌ ಮುಖಂಡರು, ಕಾರ್ಯಕರ್ತರು ಕುಳಿತು ತೀರ್ಮಾನ ಮಾಡಿದ್ದೇವೆ. ಮುಂದಿನ ಗುರುವಾರ ರಾಜ್ಯಾದ್ಯಂತ ರಸ್ತೆ ತಡೆ ನಡೆಸಲಿದ್ದೇವೆ. ಜೆಡಿಎಸ್‌, ವ್ಯಾಪಾರಸ್ಥರು, ಸಂಘಟನೆಗಳ ಬೆಂಬಲ ಪಡೆಯಲಿದ್ದೇವೆ. ರಾಜ್ಯದ ಜನರು ಇವರಿಗೆ ತಕ್ಕ ಪಾಠ ಕಲಿಸಬೇಲಿದೆ” ಎಂದು ಅವರು ಆಕ್ರೋಶಿಸಿದರು.

ಮಂಗಳೂರು, ಉಡುಪಿ, ಹುಬ್ಬಳ್ಳಿ, ಬೆಳಗಾವಿ, ಮೈಸೂರು ಸೇರಿದಂತೆ ಎಲ್ಲ ಪ್ರಮುಖ ನಗರಗಳಲ್ಲಿಯೂ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಸೇರಿ ತೈಲ ಬೆಲೆ ಏರಿಕೆಯನ್ನು ವಿರೋಧಿಸಿ ಪ್ರತಿಭಟಿಸಿದರು. ಹಲವು ಕಡೆ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದರು.

ಇದನ್ನೂ ಓದಿ: Water Price Hike : ತೈಲ ದರ ಬಳಿಕ ಕುಡಿಯುವ ನೀರು ದುಬಾರಿ! ನೀರಿನ ದರ ಏರಿಕೆಗೆ ಜಲಮಂಡಳಿ ಪ್ರಸ್ತಾವನೆ!

Continue Reading

ಪ್ರಮುಖ ಸುದ್ದಿ

Viral Video: ಬಕ್ರೀದ್ ಬಲಿ ಕೊಡುವ ಮೇಕೆಯ ಮೈಮೇಲೆ ʼರಾಮʼ ನಾಮ; ಹಿಂದೂಗಳನ್ನು ಕೆಣಕಿದ ವ್ಯಕ್ತಿ ಅರೆಸ್ಟ್

Viral Video: ದೇಶದಲ್ಲಿ ಸಾಮರಸ್ಯ ಕದಡುವ ಘಟನೆ ಆಗಾಗ ನಡೆಯುತ್ತಲೇ ಇರುತ್ತವೆ. ಅದರಲ್ಲೂ ಈ ಧಾರ್ಮಿಕ ಹಬ್ಬಗಳು ಬಂದಾಗ ಏನಾದರೊಂದು ಘಟನೆ ಮಾಡಿ ನೆಮ್ಮದಿ ಹಾಳು ಮಾಡುತ್ತಿರುತ್ತಾರೆ. ಬಕ್ರೀದ್ ಹಬ್ಬದ ಹಿನ್ನೆಲೆ ಮಟನ್ ಅಂಗಡಿ ಮಾಲೀಕನೊಬ್ಬ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವಂತಹ ಕೆಲಸ ಮಾಡಿದ್ದಾನೆ. ಬಿಳಿ ಬಣ್ಣದ ಮೇಕೆಯ ಮೈ ಮೇಲೆ ಹಳದಿ ಬಣ್ಣದಲ್ಲಿ ರಾಮ್ ಎಂದು ಬರೆದು ಮಾಂಸದ ಅಂಗಡಿಯ ಹೊರಗೆ ಆ ಮೇಕೆಯನ್ನು ಕಟ್ಟಿಹಾಕಿದ್ದಾನೆ. ಇದು ಹಿಂದೂಗಳ ಕಣ್ಣಿಗೆ ಬಿದ್ದು ಕೋಲಾಹಲಕ್ಕೆ ಕಾರಣವಾಗಿದೆ ಇದಕ್ಕೆ ಸಂಬಂಧಿಸಿದ ವಿಡಿಯೊ ಈ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

VISTARANEWS.COM


on

Viral Video
Koo

ಮುಂಬೈ : ಮುಸ್ಲಿಮರಿಗೆ ಬಕ್ರೀದ್ ಹಬ್ಬ ತುಂಬಾ ವಿಶೇಷವಾದದ್ದು. ಹಾಗಾಗಿ ಈ ದಿನ ಅವರ ಸಂಪ್ರದಾಯದಂತೆ ಮೇಕೆಗಳನ್ನು ಬಲಿಕೊಡಲಾಗುತ್ತದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರಗಳೂ ಕೂಡ ಇತರರ ಭಾವನೆಗಳಿಗೆ ಧಕ್ಕೆಯುಂಟುಮಾಡುವ ಯಾವುದೇ ದುರ್ಘಟನೆಗಳು ನಡೆಯಬಾರದೆಂದು ಮುಸ್ಲಿಂರಿಗೆ ಹಾಗೂ ಆಡಳಿತ ಅಧಿಕಾರಿಗೂ ಸೂಚಿಸಿದೆ. ಆದರೂ ಇದರ ನಡುವೆ ಮಟನ್ ಅಂಗಡಿ ಮಾಲೀಕನೊಬ್ಬ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವಂತಹ ಕೆಲಸ ಮಾಡಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೊ ವೈರಲ್
(Viral Video )ಆಗಿದೆ.

ಮುಂಬೈನ ಬೆಲಾಪುರದ ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್ ನಲ್ಲಿರುವ ಗುಡ್ ಲಕ್ ಮಟನ್ ಅಂಗಡಿ ಮಾಲೀಕ ಮಹಮ್ಮದ್ ಶಾಫಿ ಎಂಬುವವನು ಬಲಿದಾನದ ಬಿಳಿ ಬಣ್ಣದ ಮೇಕೆಯ ಮೈ ಮೇಲೆ ಹಳದಿ ಬಣ್ಣದಲ್ಲಿ ರಾಮ್ ಎಂದು ಬರೆದು ಮಾಂಸದ ಅಂಗಡಿಯ ಹೊರಗೆ ಆ ಮೇಕೆಯನ್ನು ಕಟ್ಟಿಹಾಕಿದ್ದ. ಇದು ಹಿಂದೂಗಳ ಕಣ್ಣಿಗೆ ಬಿದ್ದು ಕೋಲಾಹಲಕ್ಕೆ ಕಾರಣವಾಗಿದೆ. ಜೂನ್ 15ರಂದು ಈ ಘಟನೆ ನಡೆದಿದ್ದು, ರಾಮ ಎನ್ನುವುದು ಹಿಂದೂಗಳ ದೇವರಾದ ಕಾರಣ ಹಿಂದೂ ಸಂಘಟನೆಯ ಕೆಲವು ಜನರು ಅಲ್ಲಿಗೆ ಬಂದು ಗಲಾಟೆ ಮಾಡಿದ್ದಾರೆ. ಹಾಗೇ ಈ ದೃಶ್ಯವನ್ನು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ವಿಡಿಯೊದಲ್ಲಿ ಹಿಂದೂಗಳು ಅಂಗಡಿಗೆ ನುಗ್ಗಿ ಮಾಲೀಕನ ಜೊತೆ ಗಲಾಟೆ ನಡೆಸಿದ್ದು, ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ನಿಭಾಯಿಸಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಹಾಗೂ ಆತನ ಅಂಗಡಿಯನ್ನು ಮುಚ್ಚಲಾಗಿದೆ. ಸೋಶಿಯಲ್ ಮೀಡಿಯಾದ ಬಳಕೆದಾರರು, ಹಿಂದೂ ಸಂಘಟನೆಗಳು ಸೇರಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:  ಬಕ್ರೀದ್ ಹಿನ್ನೆಲೆಯಲ್ಲಿ ಮಾರಾಟಕ್ಕಿಟ್ಟಿದ್ದ ಈ ಮೇಕೆಯ ಬೆಲೆ 69 ಲಕ್ಷ ರೂ!

ಹಿಂದುತ್ವ ನೈಟ್ ಎಂಬ ಬಳಕೆದಾರರು ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್ ನಲ್ಲಿ ತಮ್ಮ ಕೋಪವನ್ನು ಹೊರಹಾಕಿದ್ದಾರೆ. “ಇದು ಅತಿರೇಕವಾಗಿದೆ. ಗುಡ್ ಲಕ್ ಮಟನ್ ಸ್ಟೋರ್ ಮಾರಾಟ ಮಾಡುವ ಮೇಕೆಯ ಮೇಲೆ ರಾಮ್ ಹೆಸರನ್ನು ಬರೆಯಲಾಗಿದೆ. ಬಕ್ರೀದ್ ದಿನದಂದು ಈ ಮೇಕೆಯನ್ನು ಬಹಿರಂಗವಾಗಿ ಕೊಲ್ಲುವುದರ ಮೂಲಕ ಹಿಂದೂ ಸಮುದಾಯವನ್ನು ಉದ್ದೇಶಪೂರ್ವಕವಾಗಿ ಪ್ರಚೋದಿಸುತ್ತಿದ್ದಾರೆ. ಈ ಮೂಲಕ ಅವರು ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿದ್ದಕ್ಕಾಗಿ ಕಠಿಣ ಕ್ರಮ ಕೈಗೊಳ್ಳುವಂತೆ ಮುಂಬೈ ಪೊಲೀಸರಲ್ಲಿ ವಿನಂತಿಸುತ್ತೇವೆ” ಎಂದು ಪೋಸ್ಟ್ ಮಾಡಿದ್ದಾರೆ.

Continue Reading
Advertisement
Amy Jackson shares a glimpse of her Paris bachelorette
ಸಿನಿಮಾ11 mins ago

Amy Jackson: ಮದುವೆಗೂ ಮುನ್ನ ತಾಯಿಯಾಗಿದ್ದ ಆ್ಯಮಿ ಜಾಕ್ಸನ್‌ ಮತ್ತೆ ಸಪ್ತಪದಿ ತುಳಿಯಲು ರೆಡಿ!

PGCET 2024
ಶಿಕ್ಷಣ15 mins ago

PGCET 2024: ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ; ಶುಲ್ಕ ಪಾವತಿಗೂ ಅವಕಾಶ

Euro 2024
ಕ್ರೀಡೆ20 mins ago

Euro 2024: ಇಂದು ರೊಮೇನಿಯಾ-ಉಕ್ರೇನ್ ನಡುವೆ ಕಾಲ್ಚೆಂಡಿನ ಕಾದಾಟ; ಯಾರಿಗೆ ಒಲಿಯಲಿದೆ ಗೆಲುವಿನ ಲಕ್​?

death news bhanuprakash petrol diesel price hike
ಪ್ರಮುಖ ಸುದ್ದಿ27 mins ago

Death News: “ಕಾಂಗ್ರೆಸ್‌ ಶವಯಾತ್ರೆ….” ಭಾಷಣ ಮುಗಿಸಿ ಬಿಜೆಪಿ ನಾಯಕ ಭಾನುಪ್ರಕಾಶ್ ಸ್ಥಳದಲ್ಲೇ ನಿಧನ

Petrol Diesel Price Hike
ಕರ್ನಾಟಕ36 mins ago

Petrol Diesel Price Hike: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಸುವುದು ದ್ರೋಹ: ಬೊಮ್ಮಾಯಿ ಆಕ್ರೋಶ

Hunters Arrest
ಕ್ರೈಂ1 hour ago

Hunters Arrest : ಶಿವಮೊಗ್ಗದಲ್ಲಿ ಕಾಡುಕೋಣಗಳು ಬಲಿ; ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿ ಬೇಟೆಗಾರರು ಸೆರೆ

Petrol Diesel Price Hike
ಕರ್ನಾಟಕ1 hour ago

Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

Kisan Samman Nidhi
ದೇಶ2 hours ago

Kisan Samman Nidhi: ರೈತರಿಗೆ ಗುಡ್‌ನ್ಯೂಸ್‌; ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ನಾಳೆ ನಿಮ್ಮ ಅಕೌಂಟ್‌ಗೆ; ಹೀಗೆ ಪರಿಶೀಲಿಸಿ

petrol diesel price hike bjp protest
ಪ್ರಮುಖ ಸುದ್ದಿ2 hours ago

Petrol Diesel Price Hike: ಪೆಟ್ರೋಲ್‌ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವ್ಯಾಪಕ ಪ್ರತಿಭಟನೆ; ಎತ್ತಿನಗಾಡಿ, ಹೆಣ ಮೆರವಣಿಗೆ

Actor Darshan tagadu word umapathy counter now
ಕ್ರೈಂ2 hours ago

Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bakrid 2024
ಬೆಂಗಳೂರು3 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ21 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ22 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

ಟ್ರೆಂಡಿಂಗ್‌