Union Budget 2024 : ಕೇಂದ್ರ ಬಜೆಟ್​​ನಲ್ಲಿ ಕೃಷಿ ಕ್ಷೇತ್ರಕ್ಕ ಭರ್ಜರಿ ಕೊಡುಗೆ; ಯಾರಿಗೆ ಎಷ್ಟು? ಇಲ್ಲಿದೆ ಮಾಹಿತಿ - Vistara News

ಪ್ರಮುಖ ಸುದ್ದಿ

Union Budget 2024 : ಕೇಂದ್ರ ಬಜೆಟ್​​ನಲ್ಲಿ ಕೃಷಿ ಕ್ಷೇತ್ರಕ್ಕ ಭರ್ಜರಿ ಕೊಡುಗೆ; ಯಾರಿಗೆ ಎಷ್ಟು? ಇಲ್ಲಿದೆ ಮಾಹಿತಿ

Union Budget 2024: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೃಷಿ ಮತ್ತು ಸಂಬಂಧಿತ ವಲಯಗಳಿಗೆ 1.52 ಲಕ್ಷ ಕೋಟಿ ರೂಪಾಯಿ ಘೋಷಿಸಿದ್ದಾರೆ. ಮುಂದಿನ ವರ್ಷಗಳಲ್ಲಿ ದೇಶಾದ್ಯಂತ 10,000 ಜೈವಿಕ ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಬಜೆಟ್​ನಲ್ಲಿ ಭರವಸೆ ನೀಡಿದ್ದಾರೆ.

VISTARANEWS.COM


on

Union Budget 2024:
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಮಂಡಿಸಿದ ಕೇಂದ್ರ ಬಜೆಟ್​ನಲ್ಲಿ (Union Budget 2024) ಕೃಷಿ ಕ್ಷೇತ್ರಕ್ಕೆ ಬಂಪರ್ ಕೊಡುಗೆ ಕೊಟ್ಟಿದ್ದಾರೆ. ಗ್ರಾಮೀಣ ಪ್ರದೇಶದ ಕೃಷಿಕರು ಹಾಗೂ ಕೃಷಿ ಕ್ಷೇತ್ರವನ್ನು ನಂಬಿಕೊಂಡಿರುವ ಕೋಟ್ಯಂತರ ನಾಗರಿಕರ ಒಳಿತಿಗಾಗಿ ಅವರು ದೊಡ್ಡ ಪ್ರಮಾಣದ ಕೊಡುಗೆಗಳನ್ನು ಘೋಷಿಸಿದ್ದಾರೆ. ಅವುಗಳ ವಿವರ ಇಲ್ಲಿದೆ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೃಷಿ ಮತ್ತು ಸಂಬಂಧಿತ ವಲಯಗಳಿಗೆ 1.52 ಲಕ್ಷ ಕೋಟಿ ರೂಪಾಯಿ ಘೋಷಿಸಿದ್ದಾರೆ. ಮುಂದಿನ ವರ್ಷಗಳಲ್ಲಿ ದೇಶಾದ್ಯಂತ 10,000 ಜೈವಿಕ ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಬಜೆಟ್​ನಲ್ಲಿ ಭರವಸೆ ನೀಡಿದ್ದಾರೆ. ಮುಂದಿನ ಎರಡು ವರ್ಷಗಳಲ್ಲಿ, 1 ಕೋಟಿ ರೈತರನ್ನು ಬ್ರ್ಯಾಂಡಿಂಗ್ ಮತ್ತು ಪ್ರಮಾಣೀಕರಣ ನೀಡುವ ಮೂಲಕ ನೈಸರ್ಗಿಕ ಕೃಷಿಗೆ ಪ್ರೇರಣೆ ನೀಡಲಾಗುವುದು ಎಂದು ಅವರು ಬಜೆಟ್​ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: Union Budget 2024: ಬಜೆಟ್‌ ಮಂಡನೆಗೂ ಮುನ್ನ ನಿರ್ಮಲಾ ಸೀತಾರಾಮನ್‌ಗೆ ಮೊಸರು ಸಕ್ಕರೆ ತಿನ್ನಿಸಿದ ರಾಷ್ಟ್ರಪತಿ

ತರಕಾರಿ ಬೆಳೆಗಳನ್ನು ಜೀವನಾಧಾರವಾಗಿ ಮಾಡಿಕೊಂಡಿರುವ ರೈತರಿಗೆ ಅನುಕೂಲಕ ಮಾಡಿಕೊಡುವ ನಿಟ್ಟಿನಲ್ಲಿ
ತರಕಾರಿ ಉತ್ಪಾದನೆ ಮತ್ತು ಪೂರೈಕೆ ಸರಪಳಿ ನಿರ್ಮಿಸುವ ಯೋಜನೆ ಪ್ರಕಟಿಸಿದ್ದಾರೆ. ಅದೇ ರೀತಿ ಮಾರುಕಟ್ಟೆಗೆಳ ಕೇಂದ್ರಗಳ ಹತ್ತಿರ ದೊಡ್ಡ ಕ್ಲಸ್ಟರ್​ಗಳನ್ನು ನಿರ್ಮಿಸುವ ಭರವಸೆಯನ್ನು ಕೊಟ್ಟಿದ್ದಾರೆ.

ಮೀನು ಸಾಕಣದಾರರ ಅಭಿವೃದ್ಧಿಗಾಗಿ ಸಿಗಡಿ ಸಂತಾನೋತ್ಪತ್ತಿ ಕೇಂದ್ರಗಳಿಗೆ ಆರ್ಥಿಕ ನೆರವು ನೀಡಲಾಗುವುದ ಎಂದು ಹಣಕಾಸು ಸಚಿವರು ಭರವಸೆ ಕೊಟ್ಟಿದ್ದಾರೆ. ಅದೇ ರೀತಿ ನಬಾರ್ಡ್ ಮೂಲಕ ಸಿಗಡಿಗಳ ರಫ್ತಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಹೇಳದಿ್ದಾರೆ.

ದೇಶದ 5 ರಾಜ್ಯಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆ ಮಾಡುವುದಾಗಿ ಬಜೆಟ್​ನಲ್ಲಿ ಘೋಷಿಸಲಾಗಿದೆ. 32 ಬೆಳೆಗಳ 109 ತಳಿಗಳನ್ನು ಬಿಡುಗಡೆ ಮಾಡುವುದು ಕೂಡು ಬಜೆಟ್​ನಲ್ಲಿ ಕೃಷಿಗೆ ಕೊಟ್ಟಿರುವ ನೆರವಾಗಿದೆ. ಅದೆ ರೀತಿ
ಬೇಳೆಕಾಳುಗಳು ಮತ್ತು ಎಣ್ಣೆ ಬೀಜಗಳಲ್ಲಿ ಸ್ವಾವಲಂಬನೆ ಖಚಿತಪಡಿಸಿಕೊಳ್ಳಲು 6 ಕೋಟಿ ರೈತರು ಮತ್ತು ಅವರ ಭೂಮಿಯನ್ನು ರೈತ ಮತ್ತು ಭೂ ನೋಂದಣಿಗೆ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಅವರು ಈ ಬಜೆಟ್​ನಲ್ಲಿ ಖಾತರಿ ನೀಡಿದ್ದಾರೆ.

4.1 ಕೋಟಿ ಉದ್ಯೋಗ, ಹೊಸ ನೌಕರರಿಗೆ ತಿಂಗಳ ಸಂಬಳ ಕೊಡುಗೆ

ಕೇಂದ್ರದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಬಳಿಕ ಎನ್‌ಡಿಎ ಸರ್ಕಾರದ ಬಜೆಟ್‌ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Niramala Sitharaman) ಅವರು ಮಂಡಿಸುತ್ತಿದ್ದಾರೆ. ಬಜೆಟ್‌ ಮಂಡನೆ (Union Budget 2024) ಆರಂಭಿಸುತ್ತಲೇ ದೇಶದ ಜನರಿಗೆ ನಿರ್ಮಲಾ ಸೀತಾರಾಮನ್‌ ಅವರು ಬಂಪರ್‌ ಘೋಷಣೆ ಮಾಡಿದ್ದಾರೆ. ದೇಶದ 4.1 ಕೋಟಿ ಜನರಿಗೆ ಉದ್ಯೋಗ ನೀಡುವ ದಿಸೆಯಲ್ಲಿ ಕೇಂದ್ರ ಸರ್ಕಾರವು ಆದ್ಯತೆ ನೀಡಲು ತೀರ್ಮಾನಿಸಲಾಗಿದ್ದು, 2 ಲಕ್ಷ ಕೋಟಿ ರೂ. ಪ್ಯಾಕೇಜ್‌ ಕೂಡ ಘೋಷಣೆ ಮಾಡಿದ್ದಾರೆ. ಇದು ಮೋದಿ ಸರ್ಕಾರದ ಮಹತ್ವದ ಘೋಷಣೆ ಎನಿಸಿದೆ.

ದೇಶದ 9 ವಲಯಗಳಿಗೆ ಆದ್ಯತೆ ನೀಡಲಾಗುತ್ತಿದೆ. ರೈತರು, ಮಹಿಳೆಯರು ಹಾಗೂ ಯುವಕರಿಗೆ ಉದ್ಯೋಗ ನೀಡುವ ದಿಸೆಯಲ್ಲಿ ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದೆ. ಪ್ರಮುಖ ಯೋಜನೆಗಳ ಮೂಲಕ ದೇಶದ ಕೋಟ್ಯಂತರ ಜನರಿಗೆ ಉದ್ಯೋಗ ನೀಡುವುದು ನಮ್ಮ ಆದ್ಯತೆ ನೀಡಲಾಗಿದೆ. ಯುವಕ-ಯುವತಿಯರಿಗೆ ಉದ್ಯೋಗ ನೀಡುವ ಜತೆಗೆ 1 ಕೋಟಿ ರೈತರು ಸಾವಯವ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಆದ್ಯತೆ ನೀಡುವಂತೆ ಮಾಡಲಾಗುತ್ತದೆ ಎಂಬುದಾಗಿ ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ.

ಮೊದಲ ಬಾರಿಗೆ ಉದ್ಯೋಗಕ್ಕೆ ಸೇರಿದವರಿಗೆ ಒಂದು ತಿಂಗಳ ವೇತನವನ್ನು ನೀಡುವ ಯೋಜನೆಯನ್ನು ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದ್ದಾರೆ. ಅಂದರೆ, ಮೊದಲ ಬಾರಿಗೆ ಉದ್ಯೋಗಕ್ಕೆ ಸೇರಿದವರಿಗೆ ಕೇಂದ್ರ ಸರ್ಕಾರವು ಒಂದು ತಿಂಗಳ ಸಂಬಳವಾಗಿ 15 ಸಾವಿರ ರೂ. ನೀಡುತ್ತದೆ. ಇದರಿಂದ 2.1 ಕೋಟಿ ಯುವಕರಿಗೆ ಅನುಕೂಲವಾಗಲಿದೆ ಎಂದು ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ. ಇಪಿಎಫ್‌ಒಗೆ ನೋಂದಣಿ ಮಾಡಿಕೊಳ್ಳುತ್ತಲೇ ಒಂದು ತಿಂಗಳ ಸಂಬಳವನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಉದ್ಯೋಗಿಗಳಿಗೆ ಅನುಕೂಲವಾಗಲಿ ಎಂದು ಮೊದಲ ಬಾರಿ ಕೆಲಸಕ್ಕೆ ಸೇರಿದವರಿಗೆ ಪ್ರೋತ್ಸಾಹಧನ ನೀಡಲಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Parashuram D : ವಿಸ್ತಾರ ಮೀಡಿಯಾದ ನೂತನ ಜಿ.ಎಮ್ ಆಗಿ ಪರಶುರಾಮ ಡಿ

Parashuram D: ವಿಸ್ತಾರ ಮೀಡಿಯಾದಲ್ಲಿ ಸಿಒಒ (ಚೀಫ್‌ ಆಪರೇಷನಲ್‌ ಆಫೀಸರ್‌) ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪರಶುರಾಮ್‌ ಡಿ ಅವರಿಗೆ ಜಿ.ಎಮ್‌ ಆಗಿ ಪದೋನ್ನತಿ ನೀಡಲಾಗಿದೆ. ಮಾಧ್ಯಮ ಕ್ಷೇತ್ರದಲ್ಲಿ ಸುಮಾರು ಎರಡು ದಶಕಗಳ ಅನುಭವ ಹೊಂದಿರುವ ಪರಶುರಾಮ್ ಡಿ ಅವರು ನುರಿತ ತಂತ್ರಜ್ಞರ ತಂಡದ ಮುಖ್ಯಸ್ಥರಾಗಿ ಅನೇಕ ಸಂಸ್ಥೆಗಳನ್ನು ಕಟ್ಟಿ ಬೆಳೆಸುವಲ್ಲಿ ಅಮೂಲ್ಯ ಕೊಡುಗೆ ನೀಡಿದ್ದಾರೆ. ಈ ಮೂಲಕ ಮಾಧ್ಯಮ ರಂಗದಲ್ಲಿ ಹೆಸರುವಾಸಿಯಾಗಿದ್ದಾರೆ. ನಾಡಿನಾದ್ಯಂತ ಪ್ರಸಿದ್ಧಿ ಪಡೆಯುತ್ತಿರುವ ʼವಿಸ್ತಾರ ನ್ಯೂಸ್‌ʼ ಚಾನೆಲ್ ಆರಂಭಿಕ ಕಾರ್ಯದಿಂದ ಹಿಡಿದು ಇಲ್ಲಿಯವರೆಗೆ ಪ್ರತಿ ಹೆಜ್ಜೆಯಲ್ಲಿಯೂ ಪರಿಶ್ರಮ ವಹಿಸಿದ್ದಾರೆ.

VISTARANEWS.COM


on

Parashuram D
Koo


ಬೆಂಗಳೂರು: ವಿಸ್ತಾರ ಮೀಡಿಯಾದ ನೂತನ ಜಿ ಎಮ್‌ (ಆಪರೇಷನ್‌) ಆಗಿ ಪರಶುರಾಮ್ ಡಿ (Parashuram D) ಅವರನ್ನು ನೇಮಕ ಮಾಡಲಾಗಿದೆ. ಪರಶುರಾಮ್‌ ಅವರು ಈಗ ವಿಸ್ತಾರ ಮೀಡಿಯಾದಲ್ಲಿ ಸಿಒಒ (ಚೀಫ್‌ ಆಪರೇಷನಲ್‌ ಆಫೀಸರ್‌) ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಮಾಧ್ಯಮ ಕ್ಷೇತ್ರದಲ್ಲಿ ಸುಮಾರು ಎರಡು ದಶಕಗಳ ಅನುಭವ ಹೊಂದಿರುವ ಪರಶುರಾಮ್ ಡಿ ಅವರು ನುರಿತ ತಂತ್ರಜ್ಞರ ತಂಡದ ಮುಖ್ಯಸ್ಥರಾಗಿ ಅನೇಕ ಸಂಸ್ಥೆಗಳನ್ನು ಕಟ್ಟಿ ಬೆಳೆಸುವಲ್ಲಿ ಅಮೂಲ್ಯ ಕೊಡುಗೆ ನೀಡಿದ್ದಾರೆ. ಈ ಮೂಲಕ ಮಾಧ್ಯಮ ರಂಗದಲ್ಲಿ ಹೆಸರುವಾಸಿಯಾಗಿದ್ದಾರೆ.

ಟೆಲಿವಿಷನ್ ಲೋಕದಲ್ಲಿನ ಎಲ್ಲಾ ಬಗೆಯ ವಿಡಿಯೊ – ಆಡಿಯೊ ಪ್ರೊಡಕ್ಷನ್ ಮತ್ತು ಬ್ರಾಡ್ಕಾಸ್ಟ್ ವಿಭಾಗದಲ್ಲಿ ಭಾರತದಲ್ಲಿಯೇ ಅತ್ಯುತ್ತಮ ತಂತ್ರಜ್ಞರೆಂದು ಗುರುತಿಸಲ್ಪಡುವ ಕೆಲವೇ ಕೆಲವು ಮಂದಿಯಲ್ಲಿ ಪರಶುರಾಮ್ ಅವರೂ ಒಬ್ಬರು ಎಂಬುದು ಹೆಮ್ಮೆಯ ಸಂಗತಿ. ಅವರ ಕಾರ್ಯವ್ಯಾಪ್ತಿ ಅಷ್ಟಕ್ಕೇ ನಿಲ್ಲದೇ ಇನ್ನೂ ಮುಂದಕ್ಕೆ ಹೋಗಿ, ಟಿವಿ ಮಾಧ್ಯಮ ಸಂಸ್ಥೆಗಳನ್ನು ಕಟ್ಟುವಲ್ಲಿಯೂ ಮುಂದುವರಿದಿದೆ. ಆರಂಭದ ಕಾರ್ಯಯೋಜನೆ ರೂಪಿಸುವ ಹಂತದಿಂದ ಹಿಡಿದು, ನಿರ್ಮಾಣ ಕಾರ್ಯ, ಲೋಕಾರ್ಪಣೆವರೆಗಿನ ಎಲ್ಲಾ ಹಂತದಲ್ಲೂ ದಕ್ಷತೆಯಿಂದ ಕಾರ್ಯನಿರ್ವಹಿಸಿ ಅದಕ್ಕೆ ಬೇಕಾಗಿರುವ ನುರಿತ ತಂತ್ರಜ್ಞರ ತಂಡವನ್ನು ಕಟ್ಟಿ ಮುನ್ನಡೆಸುವ ಅದಮ್ಯ ಸಾಮರ್ಥ್ಯವನ್ನು ಇವರು ಬೆಳೆಸಿಕೊಂಡಿದ್ದಾರೆ. ಇದಕ್ಕೆ ಸಾಕ್ಷಿ ʼವಿಸ್ತಾರ ನ್ಯೂಸ್‌ʼ ಕನ್ನಡ ವಾಹಿನಿ.

ಈ ಟಿವಿಯಿಂದ ಬಿಗ್‌ ಬಾಸ್‌ವರೆಗೆ

ಪರಶುರಾಮ್‌ ಅವರು ಕನ್ನಡದ ಹೆಸರಾಂತ ಚಾನೆಲ್ ಎನಿಸಿಕೊಂಡ ʼಈ ಟಿವಿʼ ಕನ್ನಡ ವಾಹಿನಿಯ ತಾಂತ್ರಿಕ ವಿಭಾಗದಲ್ಲಿ ಕೆಲಸವನ್ನು ಪ್ರಾರಂಭಿಸಿದ್ದರು. ಕಿರುತೆರೆಯ ಮಾಧ್ಯಮ ಲೋಕದಲ್ಲಿ ಹೊಸ ಹೊಸ ಜವಾಬ್ದಾರಿಯನ್ನು, ಸಾಹಸವನ್ನು ಕೈಗೊಳ್ಳುತ್ತಾ ಟೆಕ್ನಿಕಲ್ ವಿಚಾರದಲ್ಲಿ ಹೆಚ್ಚು ಆಳವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಮುಂದೆ ʼಸಮಯʼ ಮತ್ತು ʼಜನಶ್ರೀʼ ನ್ಯೂಸ್ ಚಾನೆಲ್‌ನಲ್ಲಿ ತಮ್ಮ ಕ್ರಿಯೇಟಿವಿಟಿಯಿಂದ ಮಾಧ್ಯಮ ಲೋಕದಲ್ಲಿ ಸಾಕಷ್ಟು ಹೆಸರನ್ನು ಸಂಪಾದಿಸಿದರು. ಇಂದು ನಾಡಿನಾದ್ಯಂತ ಮನೆ ಮಾತಾಗಿರುವ ರಿಯಾಲಿಟಿ ಶೋ ʼಬಿಗ್ ಬಾಸ್ʼ ಕನ್ನಡದ ಆನ್ ಲೈನ್ ತಾಂತ್ರಿಕ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿ ‘ಎಂಡಮೋಲ್’ ಕಂಪನಿಯಿಂದ ವಿಶೇಷ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಲೇಟೆಸ್ಟ್​ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್​ ಓದಿ

ಈಗಿನ ʼರಿಪಬ್ಲಿಕ್ ಕನ್ನಡʼ ಚಾನೆಲ್ ಆಗಿ ಪರಿವರ್ತನೆಯಾಗಿರುವ ಅಂದಿನ ʼದಿಗ್ವಿಜಯ ನ್ಯೂಸ್ʼ ಚಾನೆಲ್‌ನಲ್ಲಿ “ಪ್ರೊಡಕ್ಷನ್ ಹೆಡ್” ಆಗಿ ತಮ್ಮದೇ ಆದ ಕ್ರಿಯಾಶೀಲ ತಂಡವನ್ನು ರಚಿಸಿಕೊಂಡು ದಿಗ್ವಿಜಯ ಚಾನೆಲ್ ಅನ್ನು ಕ್ರಿಯೇಟಿವ್ ಆಗಿ ಮುನ್ನಡೆಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಅಡ್ವರ್ಟೈಸಿಂಗ್ ಮತ್ತು ಬ್ರಾಂಡಿಂಗ್ ಛಾಪು

ತಮ್ಮದೇ ಆದ “ಅಧಿತಿ ಲಿಂಕ್ ಮೀಡಿಯಾ” ಎಂಬ ಸಂಸ್ಥೆಯ ಮೂಲಕ ಅಡ್ವರ್ಟೈಸಿಂಗ್ ಮತ್ತು ಬ್ರಾಂಡಿಂಗ್ ಲೋಕದಲ್ಲಿ ಹೊಸ ಛಾಪನ್ನೇ ಇವರು ಮೂಡಿಸಿ ಅಮೆಜಾನ್ ಪ್ರೈಮ್ ಮತ್ತು ಸ್ಪೈಸ್ ಕಂಪನಿಯೊಂದಿಗೆ ಚಲನಚಿತ್ರಗಳ ಪ್ರಮೋಷನ್ ವಿಭಾಗದಲ್ಲಿ ಹಾಗೂ ಮೈತ್ರಿ ಮೂವೀಸ್, ಗೀತಾ ಪಿಕ್ಚರ್ಸ್‌ನಂತಹ ತೆಲುಗಿನ ದೊಡ್ಡ, ದೊಡ್ಡ ಸಂಸ್ಥೆಯೊಂದಿಗೆ ಪ್ರಚಾರ ವಿಭಾಗದಲ್ಲಿ ಪಾಲುದಾರರಾಗಿ ಯಶಸ್ವಿಯಾಗಿದ್ದಾರೆ. ಅಲ್ಲದೇ ಟೈಮ್ಸ್ ಗ್ರೂಪ್‌ನ ಇವೆಂಟ್ಸ್‌ಗಳನ್ನು ಸಮರ್ಥವಾಗಿ ತಮ್ಮ ಅಧಿತಿ ಲಿಂಕ್ ಮೀಡಿಯಾದ ಮೂಲಕ ನಿಭಾಯಿಸಿದ್ದಾರೆ. ತಮ್ಮದೇ ಆದ ಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿ ಆಡಳಿತಾತ್ಮಕ ವಿಚಾರದಲ್ಲಿ ಹೆಚ್ಚಿನ ಅನುಭವವನ್ನು ಹೊಂದಿದ್ದಾರೆ.

ʼವಿಸ್ತಾರ ನ್ಯೂಸ್‌ʼ ಹಿಂದಿನ ಶಕ್ತಿ:

ನಾಡಿನಾದ್ಯಂತ ಪ್ರಸಿದ್ಧಿ ಪಡೆಯುತ್ತಿರುವ ʼವಿಸ್ತಾರ ನ್ಯೂಸ್‌ʼ ಚಾನೆಲ್ ಆರಂಭದ ಮೊದಲ ಸದಸ್ಯರಾಗಿ, ಚಾನೆಲ್ ಪ್ರಾರಂಭಿಸಬೇಕೆಂಬ ಮೊದಲ ಹೆಜ್ಜೆಯಿಂದ ಹಿಡಿದು ಇಲ್ಲಿಯವರೆಗೆ ಪ್ರತಿ ಹೆಜ್ಜೆಯಲ್ಲಿಯೂ ಪರಿಶ್ರಮ ವಹಿಸಿದ್ದಾರೆ. ಪೂರ್ವ ತಯಾರಿಯಿಂದ ಹಿಡಿದು ಚಾನೆಲ್ ಲೋಕಾರ್ಪಣೆಯವರೆಗೆ ಆಡಳಿತ ಮಂಡಳಿ ಹಾಗೂ ಸಹೋದ್ಯೋಗಿಗಳ ಜೊತೆಗಿದ್ದು ಅವರು ಪಟ್ಟ ಕಠಿಣ ಪರಿಶ್ರಮ ಹಾಗೂ ಅವರ ನಿಷ್ಠೆ, ಪ್ರಾಮಾಣಿಕತೆ, ಬದ್ಧತೆಯ ಫಲವಾಗಿ ಈಗ ಸಂಸ್ಥೆಯ ಉನ್ನತವಾದ ಜವಾಬ್ದಾರಿಯನ್ನು ನಿರ್ವಹಿಸುವ ಹಂತಕ್ಕೆ ತಲುಪಿದ್ದಾರೆ.

ಶುಭ ಹಾರೈಕೆ:

ಮಾಧ್ಯಮ ಲೋಕದಲ್ಲಿನ ಎಲ್ಲಾ ಹಂತದ ಅವರ ಒಟ್ಟೂ ಅನುಭವಕ್ಕೆ ವಿಸ್ತಾರ ಮೀಡಿಯಾ ಸಂಸ್ಥೆಯನ್ನು ಬಹಳ ಎತ್ತರಕ್ಕೆ ಕೊಂಡೊಯ್ಯುವ ಶಕ್ತಿ ಇದೆ. ಅವರ ಹಾಗೂ ಇಡೀ ವಿಸ್ತಾರ ತಂಡದ ಪರಿಶ್ರಮ ಜೊತೆಗೂಡಿ ವಿಸ್ತಾರ ಮೀಡಿಯಾ ಸಂಸ್ಥೆ ದೇಶದಲ್ಲಿಯೇ ಗುರುತಿಸಿಕೊಳ್ಳುವಂತಹ ಹೆಮ್ಮೆಯ ಸಂಸ್ಥೆಯಾಗಿ ರೂಪುಗೊಳ್ಳಲಿದೆ ಎಂಬ ವಿಶ್ವಾಸ ನಮಗಿದೆ. ಪರಶುರಾಮ್‌ ಡಿ ಅವರಿಗೆ ಶುಭ ಹಾರೈಸುತ್ತೇವೆ ಎಂದು ವಿಸ್ತಾರ ಮೀಡಿಯಾ ಪ್ರೈ. ಲಿ.ನ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

Latest

Train Tragedy: ರೈಲ್ವೆ ಹಳಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ತಂದೆ!

Train Tragedy: ಅಪ್ಪನ ಪ್ರೀತಿ ಅಗಾಧವಾದದ್ದು. ತನ್ನ ಮಕ್ಕಳಿಗೆ ತುಸುವೇ ನೋವಾದರೂ ಅಪ್ಪನಿಗೆ ಸಹಿಸುವುದಕ್ಕೆ ಆಗುವುದಿಲ್ಲ. ಅದರಲ್ಲೂ ತನ್ನ ಕಣ್ಣೆದುರೇ ಕಂದಮ್ಮಗಳು ಸಾವಿನ ದವಡೆಯಲ್ಲಿದ್ದಾರೆ ಯಾವ ತಂದೆ ಕೈ ಕಟ್ಟಿ ಕುಳಿತುಕೊಳ್ಳುತ್ತಾನೆ? ಸಿಡ್ನಿಯಲ್ಲಿ ಕೆಲಸ ಮಾಡುತ್ತಿದ್ದ ಆನಂದ್ ರನ್ವಾಲ್ ಎಂಬುವವರು ಪತ್ನಿ ಮತ್ತು ಅವಳಿ ಹೆಣ್ಣುಮಕ್ಕಳೊಂದಿಗೆ ರೈಲು ನಿಲ್ದಾಣದಲ್ಲಿದ್ದಾಗ ಅವರ ಫ್ಯಾಮಿಲಿ ಲಿಫ್ಟ್‌ನಿಂದ ಇಳಿದು ಬರುವಾಗ ಅವರ ಅವಳಿ ಹೆಣ್ಣು ಮಕ್ಕಳಿದ್ದ ಪ್ರ್ಯಾಮ್ ಆಕಸ್ಮಿಕವಾಗಿ ರೈಲ್ವೆ ಹಳಿಗೆ ಬಿದ್ದಿದೆ. ಆಗ ಮಕ್ಕಳನ್ನು ರಕ್ಷಿಸಲು ಹೋದ ಆನಂದ್‌ ಜೀವ ಕಳೆದುಕೊಂಡಿದ್ದಾರೆ.

VISTARANEWS.COM


on

Train Tragedy
Koo


ತಂದೆ ತನ್ನ ಮಕ್ಕಳಿಗಾಗಿ ಏನು ಬೇಕಾದರೂ ಮಾಡುತ್ತಾರೆ. ಮಕ್ಕಳಿಗಾಗಿ ತಮ್ಮ ಜೀವವನ್ನೂ ಲೆಕ್ಕಿಸುವುದಿಲ್ಲ ಎಂಬುದಕ್ಕೆ ಆಸ್ಟ್ರೇಲಿಯಾದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಆಸ್ಟ್ರೇಲಿಯಾದಲ್ಲಿ ಇನ್ಫೋಸಿಸ್ ಟೆಕ್ಕಿಯೊಬ್ಬರು ರೈಲ್ವೆ ಹಳಿಯ (Train Tragedy) ಮೇಲೆ ಬಿದ್ದ ತನ್ನ ಅವಳಿ ಹೆಣ್ಣುಮಕ್ಕಳನ್ನು ರಕ್ಷಿಸಲು ಪ್ರಯತ್ನಿಸುವಾಗ ದುರಂತಮಯವಾಗಿ ಸಾವನ್ನಪ್ಪಿದ್ದಾರೆ.

Train Tragedy

40 ವರ್ಷದ ಆನಂದ್ ರನ್ವಾಲ್ ಸಾವನಪ್ಪಿದವರು. ಇವರು ಇನ್ಫೋಸಿಸ್ ಐಟಿ ಉದ್ಯೋಗಿಯಾಗಿದ್ದು, ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಕೆಲಸ ಮಾಡುತ್ತಿದ್ದರು. ಆನಂದ್ ತಮ್ಮ ಪತ್ನಿ ಮತ್ತು ಅವಳಿ ಹೆಣ್ಣುಮಕ್ಕಳೊಂದಿಗೆ ಕಾರ್ಲ್ಟನ್ ನಿಲ್ದಾಣದಲ್ಲಿ ಲಿಫ್ಟ್ ನಿಂದ ಇಳಿದು ಬರುವಾಗ ಅವರ ಅವಳಿ ಹೆಣ್ಣು ಮಕ್ಕಳಿದ್ದ ಪ್ರ್ಯಾಮ್ ಆಕಸ್ಮಿಕವಾಗಿ ರೈಲ್ವೆ ಹಳಿಗೆ ಬಿದ್ದಿದೆ. ಆಗ ಆನಂದ್ ಹೆಣ್ಣುಮಕ್ಕಳನ್ನು ಉಳಿಸಲು ಪ್ಲಾಟ್ ಫಾರ್ಮ್‌ನಿಂದ ರೈಲ್ವೆ ಹಳಿಯ ಮೇಲೆ ಹಾರಿದ್ದಾರೆ.

ಆ ವೇಳೆ ರೈಲು ಹಾದುಹೋಗುತ್ತಿದ್ದ ಆನಂದ್ ಮತ್ತು ಅವರ ಒಬ್ಬ ಮಗಳು ರೈಲಿಗೆ ಸಿಲುಕಿ ಸಾವನಪ್ಪಿದ್ದಾರೆ. ಆದರೆ ಅವರು ಈ ಹೋರಾಟದಲ್ಲಿ ತಮ್ಮ ಒಬ್ಬ ಮಗಳ ಜೀವ ರಕ್ಷಿಸಿದ್ದಾರೆ. ಆನಂದ್ ಅವರ ಪತ್ನಿ ಮತ್ತು ಮಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರಿಗೆ ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಲಾಗಿದೆ ಎಂಬುದಾಗಿ ತಿಳಿದುಬಂದಿದೆ.

Train Tragedy

ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದರಲ್ಲಿ ಕುಟುಂಬವು ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ತೋರಿಸುತ್ತದೆ, ಅವರು ಲಿಫ್ಟ್ ಮೂಲಕ ಪ್ಲಾಟ್‌ಫಾರ್ಮ್‌ಗೆ ಬಂದಿದ್ದರು ಮತ್ತು ಕ್ಷಣಾರ್ಧದಲ್ಲಿ ಅವರು ಪ್ರ್ಯಾಮ್ ಅನ್ನು ಬಿಟ್ಟುಬಿಟ್ಟರು. ಇದರಿಂದ ಅದು ಉರುಳುತ್ತಾ ಹೋಗಿ ಹಳಿಗಳ ಮೇಲೆ ಬಿದ್ದಿದೆ. ಆಗ ಆನಂದ್ ಅವರ ಪತ್ನಿ ಕಿರುಚಿದಾಗ ಆನಂದ್ ರೈಲು ಹಳಿಗಳ ಮೇಲೆ ಮಕ್ಕಳನ್ನು ರಕ್ಷಿಸಲು ಹಾರಿದ್ದಾರೆ. ಆ ವೇಳೆ ಈ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ: ರಿಮಾಂಡ್‌ ಹೋಮ್‌ನಿಂದಲೇ ಮಧ್ಯರಾತ್ರಿ 17 ವರ್ಷದ ಬಾಲಕಿಯ ಅಪಹರಣ! ವಿಡಿಯೊದಲ್ಲಿ ಕೃತ್ಯ ಸೆರೆ

ಆನಂದ್ ಮತ್ತು ಅವರ ಕುಟುಂಬವು 2023ರ ಕೊನೆಯಲ್ಲಿ ಸಿಡ್ನಿಗೆ ಸ್ಥಳಾಂತರಗೊಂಡಿತ್ತು. ಅವರು ಸಿಡ್ನಿಯ ಕೊಗರಾ ಉಪನಗರದಲ್ಲಿ ವಾಸಿಸುತ್ತಿದ್ದರು. ಇತ್ತೀಚೆಗೆ, ಆನಂದ್ ಅವರ ಪೋಷಕರು (ವಿಸ್ತಾರ ನ್ಯೂಸ್‌) ಸಿಡ್ನಿಯಲ್ಲಿದ್ದ ಅವರ ಮನೆಗೆ ಭೇಟಿ ನೀಡಿದ್ದರು ಎನ್ನಲಾಗಿದೆ. ವರದಿಗಳ ಪ್ರಕಾರ, ತನ್ನ ತಾಯಿ ಮತ್ತು ತಂದೆಯನ್ನು ತಮ್ಮ ಜೊತೆ ಆಸ್ಟ್ರೇಲಿಯಾದಲ್ಲಿ ಇಟ್ಟುಕೊಳ್ಳುವ ಹಂಬಲ ಆನಂದವರಿಗಿತ್ತು ಎಂದು ಅವರ ಸ್ನೇಹಿತರೊಬ್ಬರು ತಿಳಿಸಿದ್ದಾರೆ.

ಆದರೆ ವಿಧಿ ಅದಕ್ಕೂ ಅವಕಾಶ ಮಾಡಿಕೊಡಲಿಲ್ಲ. ಅವರ ಹಠಾತ್ ನಿಧನದಿಂದ ಅವರ ಸ್ನೇಹಿತರು ಆಘಾತಕ್ಕೊಳಗಾಗಿದ್ದಾರೆ. ಅವರು ಇನ್ನಿಲ್ಲ ಎಂಬ ವಿಚಾರ ಅವರ ಕುಟುಂಬಕ್ಕೆ ಜೀರ್ಣಿಸಿಕೊಳ್ಳಲು ಕಷ್ಟವಾಗುತ್ತಿದೆ ಎಂದವರು ಪ್ರತಿಕ್ರಿಯಿಸಿದ್ದಾರೆ.

Continue Reading

Latest

Viral Video: ಮೃಗಾಲಯದ ಸಿಬ್ಬಂದಿ ಮೇಲೆ ಸಿಂಹದ ದಾಳಿ; ತಡೆದು ನಿಲ್ಲಿಸಿದ ಸಿಂಹಿಣಿ!

Viral Video: ಈ ವಿಡಿಯೊದಲ್ಲಿ ಸಿಂಹದೊಂದಿಗೆ ಆಟವಾಡುತ್ತಿದ್ದಾಗ ಮೃಗಾಲಯ ಸಿಬ್ಬಂದಿಯೊಬ್ಬರ ಮೇಲೆ ಸಿಂಹವು ಆಕ್ರಮಣಕಾರಿಯಾಗಿ ದಾಳಿ ಮಾಡಲು ಮುಂದಾಗಿದೆ. ಇದರಿಂದ ಆತ ಅಪಾಯಕಾರಿ ಪರಿಸ್ಥಿತಿಯಲ್ಲಿರುವುದನ್ನು ಕಂಡು ಮತ್ತೊಬ್ಬ ಸಿಬ್ಬಂದಿ ಸಿಂಹವನ್ನು ತಡೆಯಲು ಮುಂದಾಗುತ್ತಾನೆ. ಆದರೆ ಅವನಿಗೆ ಅದನ್ನು ತಡೆಯಲು ಸಾಧ್ಯವಾಗಲಿಲ್ಲ, ಆಗ ಸ್ವಲ್ಪ ದೂರದಲ್ಲಿದ್ದ ಸಿಂಹಿಣಿಯು ನಿಂತು ತನ್ನ ಸಂಗಾತಿಯನ್ನು ನೋಡುತ್ತಿರುತ್ತದೆ. ನಂತರ ಘಟನೆ ಕೈಮೀರಿ ಹೋಗಬಹುದು ಎಂದು ತೋರಿದಾಗ, ಸಿಂಹಿಣಿ ಈ ತುರ್ತುಸ್ಥಿತಿಯನ್ನು ನಿಯಂತ್ರಿಸಲು ಹೋರಾಟಕ್ಕೆ ಇಳಿಯುತ್ತದೆ. ಇದು ಕುತೂಹಲ ಮೂಡಿಸಿದೆ.

VISTARANEWS.COM


on

Viral Video
Koo


ಬೆಂಗಳೂರು: ನೀವು ಸಾಮಾನ್ಯವಾಗಿ ಯಾರಾದರೂ ದಂಪತಿಯನ್ನು ನೋಡಿದಾಗ ಅಲ್ಲಿ ಪತಿ ಕೋಪಗೊಂಡು ಆಕ್ರಮಣಕಾರಿಯಾಗಿ ವರ್ತಿಸಿದರೆ ಆಗ ಆತನ ಪತ್ನಿ ಆತನನ್ನು ತಡೆದು ಸಮಾಧಾನಪಡಿಸುತ್ತಾಳೆ! ಈ ಗುಣ ಮನುಷ್ಯರಲ್ಲಿ ಮಾತ್ರವಲ್ಲ ಪ್ರಾಣಿಗಳಲ್ಲೂ ಕಾಣಸಿಗುತ್ತದೆ. ಇದಕ್ಕೆ ವಿದೇಶದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದ್ದು, ನೋಡುಗರಲ್ಲಿ ಆಶ್ವರ್ಯವನ್ನುಂಟುಮಾಡಿದೆ.

ಸಿಂಹವು ಮೃಗಾಲಯದ ಸಿಬ್ಬಂದಿಯ ಮೇಲೆ ದಾಳಿ ಮಾಡಿದಾಗ ಒಂದು ಸಿಂಹಿಣಿಯು ಮಧ್ಯ ಪ್ರವೇಶ ಮಾಡಿ ಸಿಂಹವನ್ನು ತಡೆದಿದೆ. ಇತ್ತೀಚೆಗೆ ಸಿಂಹ – ಸಿಂಹಿಣಿಯ ಈ ವಿಡಿಯೊವನ್ನು “ನೇಚರ್ ಈಸ್ ಅಮೇಜಿಂಗ್” ಎಂಬ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಈ ವಿಡಿಯೊ ವೈರಲ್ ಆಗಿದೆ. ಈ ವಿಡಿಯೊದಲ್ಲಿ, ಸಿಂಹದೊಂದಿಗೆ ಆಟವಾಡುತ್ತಿದ್ದಾಗ ಮೃಗಾಲಯ ಸಿಬ್ಬಂದಿಯೊಬ್ಬರ ಮೇಲೆ ಸಿಂಹವು ಆಕ್ರಮಣಕಾರಿಯಾಗಿ ದಾಳಿ ಮಾಡಲು ಮುಂದಾಗಿದೆ. ಇದರಿಂದ ಆತ ಅಪಾಯಕಾರಿ ಪರಿಸ್ಥಿತಿಯಲ್ಲಿರುವುದನ್ನು ಕಂಡು ಮತ್ತೊಬ್ಬ ಸಿಬ್ಬಂದಿ ಸಿಂಹವನ್ನು ತಡೆಯಲು ಮುಂದಾಗುತ್ತಾನೆ. ಆದರೆ ಅವನಿಗೆ ಅದನ್ನು ತಡೆಯಲು ಸಾಧ್ಯವಾಗಲಿಲ್ಲ, ಆಗ ಸ್ವಲ್ಪ ದೂರದಲ್ಲಿದ್ದ ಸಿಂಹಿಣಿಯು ನಿಂತು ತನ್ನ ಸಂಗಾತಿಯನ್ನು ನೋಡುತ್ತಿರುತ್ತದೆ. ನಂತರ ಘಟನೆ ಕೈಮೀರಿ ಹೋಗಬಹುದು ಎಂದು ತೋರಿದಾಗ, ಸಿಂಹಿಣಿ ಈ ತುರ್ತುಸ್ಥಿತಿಯನ್ನು ನಿಯಂತ್ರಿಸಲು ಹೋರಾಟಕ್ಕೆ ಇಳಿಯುತ್ತದೆ. ಅದು ಆಕ್ರಮಣಕಾರಿ ಸಿಂಹದ ಬಳಿಗೆ ಬಂದು ಅದನ್ನು ತಡೆಯುತ್ತದೆ. ಇದರಿಂದ ಮೃಗಾಲಯದಲ್ಲಿ ನಡೆಯಲಿದ್ದ ಅಪಾಯಕಾರಿ ಘಟನೆಯನ್ನು ಸಿಂಹಿಣಿ ತಡೆದು ತನ್ನ ಪಾಲಕನನ್ನು ರಕ್ಷಿಸಿದೆ.

ಈ ವಿಡಿಯೊ ಸಿಂಹಿಣಿಯ ಅದ್ಭುತ ಪ್ರವೃತ್ತಿಯನ್ನು ತೋರಿಸುತ್ತದೆ. ಸಿಂಹಿಣಿಯ ಈ ಪ್ರವೃತ್ತಿ ಅನೇಕರಲ್ಲಿ ಆಶ್ಚರ್ಯವನ್ನುಂಟುಮಾಡಿದೆ. ಅಲ್ಲದೇ ಇದು ಅಪಾಯಕಾರಿ ಪರಿಸ್ಥಿತಿಯಲ್ಲೂ ತನ್ನ ಪಾಲಕನನ್ನು ಮತ್ತೊಂದು ಪ್ರಾಣಿಯಿಂದ ರಕ್ಷಿಸಿದ್ದನ್ನು ಕಂಡು ಪ್ರಕೃತಿ ಪ್ರಿಯರು ಮತ್ತು ಪ್ರಾಣಿ ಪ್ರೇಮಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಹಾಗೂ ಈ ಸಿಂಹಿಣಿಯ ವೀರೋಚಿತ ಕಾರ್ಯವನ್ನು ಹೊಗಳಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸಿಂಹಿಣಿ ಪ್ರದರ್ಶಿಸಿದ ಧೈರ್ಯ ಮತ್ತು ಈ ಘಟನೆಯ ಬಗ್ಗೆ ವೀಕ್ಷಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 10,000 ಶೂ, ಚಪ್ಪಲಿ ಕದ್ದ ಖತರ್‌ನಾಕ್‌ ಕಳ್ಳರ ಬಂಧನ!

ಈ ಘಟನೆಯು ಮೃಗಾಲಯದ ಸುರಕ್ಷತಾ ವ್ಯವಸ್ಥೆಗಳು ಮತ್ತು ಇಂತಹ ಕ್ರೂರ ಪ್ರಾಣಿಗಳನ್ನು ನಿರ್ವಹಿಸುವಲ್ಲಿ ಮೃಗಾಲಯಪಾಲಕರಿಗೆ ನೀಡಲಾಗುವ ತರಬೇತಿಯ ಬಗ್ಗೆ ಅನೇಕರು ಪ್ರಶ್ನೆ ಮಾಡಿದ್ದಾರೆ.

Continue Reading

ಕರ್ನಾಟಕ

CM Siddaramaiah: ರೈತರು, ರಾಜ್ಯಕ್ಕೆ ಕೇಂದ್ರ ಪಂಗನಾಮ; ತಿಂಡಿ ತಿನ್ನುತ್ತಲೇ ಬಜೆಟ್‌ ಬಗ್ಗೆ ಸಿದ್ದರಾಮಯ್ಯ ಆಕ್ರೋಶ

CM Siddaramaiah: ಕೇಂದ್ರದ ಬಜೆಟ್‌ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಕೈಗಾರಿಕೆ, ರೈಲ್ವೆ ಸೇರಿ ಯಾವುದೇ ಕ್ಷೇತ್ರಗಳಿಗೂ ಹೆಚ್ಚಿನ ಅನುದಾನ ಕೊಟ್ಟಿಲ್ಲ. ರಾಯಚೂರಿನಲ್ಲಿ ಒಂದು ಏಮ್ಸ್‌ ನಿರ್ಮಿಸಿ ಎಂದು ಬಹಳ ವರ್ಷಗಳಿಂದ ಕೇಳುತ್ತಿದ್ದೇವೆ. ಆದರೆ, ಬಜೆಟ್‌ನಲ್ಲಿ ಕರ್ನಾಟಕಕ್ಕೆ ಏನೂ ಕೊಟ್ಟಿಲ್ಲ” ಎಂಬುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಮಧ್ಯಮ ವರ್ಗದವರ

VISTARANEWS.COM


on

CM Siddaramaiah
Koo

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಬಜೆಟ್‌ (Union Budget 2024) ಮಂಡನೆ ಮಾಡಿದ್ದು, ಬಜೆಟ್‌ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಸುದ್ದಿಗೋಷ್ಠಿ ನಡೆಸಿ, ಕೇಂದ್ರದ ಬಜೆಟ್‌ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಆಂಧ್ರಪ್ರದೇಶ ಹಾಗೂ ಬಿಹಾರ ಹೊರತುಪಡಿಸಿ ಬೇರೆ ರಾಜ್ಯಗಳಿಗೆ ಬಜೆಟ್‌ನಿಂದ ಯಾವುದೇ ಅನುಕೂಲ ಆಗಿಲ್ಲ. ಕರ್ನಾಟಕಕ್ಕಂತೂ ಭಾರಿ ಅನ್ಯಾಯವಾಗಿದೆ” ಎಂಬುದಾಗಿ ಹೇಳಿದರು. ಸುದ್ದಿಗೋಷ್ಠಿ ನಡೆಸುವಾಗ ಅವರು ತಿಂಡಿ ತಿನ್ನುತ್ತಲೇ ಸುದ್ದಿಗಾರರೊಂದಿಗೆ ಮಾತನಾಡಿದರು. ಕೊನೆಗೆ ಸುದ್ದಿಗಾರರಿಗೂ ತಿಂಡಿ ತಿನ್ನಿ ಎಂದರು.

“ಕೇಂದ್ರದ ಬಜೆಟ್‌ನಿಂದ ಕರ್ನಾಟಕಕ್ಕೆ ಯಾವುದೇ ರೀತಿಯಿಂದ ಅನುಕೂಲವಾಗಿಲ್ಲ. ಕೈಗಾರಿಕೆ, ರೈಲ್ವೆ ಸೇರಿ ಯಾವುದೇ ಕ್ಷೇತ್ರಗಳಿಗೂ ಹೆಚ್ಚಿನ ಅನುದಾನ ಕೊಟ್ಟಿಲ್ಲ. ರಾಯಚೂರಿನಲ್ಲಿ ಒಂದು ಏಮ್ಸ್‌ ನಿರ್ಮಿಸಿ ಎಂದು ಬಹಳ ವರ್ಷಗಳಿಂದ ಕೇಳುತ್ತಿದ್ದೇವೆ. ಆದರೆ, ಬಜೆಟ್‌ನಲ್ಲಿ ಕರ್ನಾಟಕಕ್ಕೆ ಏನೂ ಕೊಟ್ಟಿಲ್ಲ. ಒಟ್ಟಿನಲ್ಲಿ ಈ ಬಜೆಟ್‌ ನಿರಾಶಾದಾಯಕ, ನೀರಸವಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ರೈತರಿಗೆ ಭಾರಿ ಅನ್ಯಾಯವಾಗಿದೆ. ಅವರಿಗೆ ಕೇಂದ್ರ ಸರ್ಕಾರ ಪಂಗನಾಮ ಹಾಕಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ಕೊಡುತ್ತೇವೆ ಎಂಬುದಾಗಿ ನಿರ್ಮಲಾ ಸೀತಾರಾಮನ್‌ ಅವರು ಹೇಳಿದ್ದರು. ಈ ಬಜೆಟ್‌ನಲ್ಲಾದರೂ ನಮಗೆ 5,300 ಕೋಟಿ ರೂ. ಕೊಡಿ ಎಂಬುದಾಗಿ ಮನವಿ ಮಾಡಿದ್ದೆವು. ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆ, ಬೆಂಗಳೂರು ನಗರಾಭಿವೃದ್ಧಿ ಯೋಜನೆ, 15ನೇ ಹಣಕಾಸು ಆಯೋಗದ ಶಿಫಾರಸುಗಳ ಜಾರಿ ಸೇರಿ ಹಲವು ಬೇಡಿಕೆಗಳನ್ನು ಇಡಲಾಗಿತ್ತು. ಒಟ್ಟು 11,495 ಕೋಟಿ ರೂ. ಕೊಡಿ ಎಂದು ಕೇಳಿದ್ದೆವು. ಆದರೆ, ಕೇಂದ್ರ ಸರ್ಕಾರವು ಯಾವುದೇ ರೀತಿಯ ಹಣ ಬಿಡುಗಡೆ ಮಾಡಿಲ್ಲ” ಎಂದು ಹೇಳಿದರು.

ಬಿಹಾರ, ಆಂಧ್ರಕ್ಕೆ ಮಾತ್ರ ಬಜೆಟ್‌ನಿಂದ ಅನುಕೂಲ

“ಬಿಹಾರ ಹಾಗೂ ಆಂಧ್ರಪ್ರದೇಶವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಬಜೆಟ್‌ ಮಂಡಿಸಿದೆ. ಆದರೆ, ಕರ್ನಾಟಕಕ್ಕೆ ಬಜೆಟ್‌ನಿಂದ ಯಾವುದೇ ಪ್ರಯೋಜನವಾಗಿಲ್ಲ. ನಿರ್ಮಲಾ ಸೀತಾರಾಮನ್‌ ಅವರು ಕರೆದ ಸಭೆಯಲ್ಲಿ ನಾವು ನೀಡಿದ ಬೇಡಿಕೆಗಳನ್ನು ಈಡೇರಿಸಿಲ್ಲ. ಬಜೆಟ್‌ಗೂ ಮುನ್ನ ಅವರೇ ಕರೆದ ಸಭೆಯಲ್ಲಿ ಕರ್ನಾಟಕಕ್ಕೆ ಏನು ಬೇಕು, ಬೇಡಿಕೆಗಳು ಏನು ಎಂಬುದನ್ನು ತಿಳಿಸಿದ್ದೆವು. ಆದರೆ, ಒಂದೇ ಒಂದು ಬೇಡಿಕೆಯನ್ನು ಅವರು ಈಡೇರಿಸಿಲ್ಲ” ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

“ಬಿಜೆಪಿಗೆ ಕೇಂದ್ರದಲ್ಲಿ ಅಧಿಕಾರ ಕಳೆದುಕೊಳ್ಳುವ ಭೀತಿ ಇದೆ. ರಾಜಕೀಯ ಅಸ್ತಿತ್ವಕ್ಕಾಗಿ ಅದು ಹೋರಾಡುತ್ತಿದೆ. ಇದೇ ಕಾರಣಕ್ಕಾಗಿ, ಹೆಚ್ಚಿನ ಯೋಜನೆ, ಹಣವನ್ನು ಆಂಧ್ರಪ್ರದೇಶ ಹಾಗೂ ಬಿಹಾರಕ್ಕೆ ನೀಡಲಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಇಂತಹ ನಡೆ ಅನುಸರಿಸುವುದು ಮಾರಕವಾಗಿದೆ. ನಮಗೆ ಕೇಂದ್ರ ಸರ್ಕಾರದ ಬಜೆಟ್‌ ಮೇಲೆ ವಿಶ್ವಾಸವೇ ಹೊರಟು ಹೋಗಿದೆ” ಎಂದು ಹೇಳಿದರು.

ಇದನ್ನೂ ಓದಿ: Union Budget 2024 : ಬಜೆಟ್​ನಲ್ಲಿ ದೊಡ್ಡ ಮೊತ್ತ ಮೀಸಲಾಗಿರುವುದು ಸಾಲದ ಬಡ್ಡಿ ಕಟ್ಟಲು!

Continue Reading
Advertisement
BJP Protest
ಕರ್ನಾಟಕ2 hours ago

BJP Protest: ಸದನದಲ್ಲಿ ಬಿಜೆಪಿ, ಜೆಡಿಎಸ್ ಅಹೋರಾತ್ರಿ ಧರಣಿ: ಅಲ್ಲೇ ಭಜನೆ, ಊಟ, ನಿದ್ದೆ; ಫೋಟೊ, ವಿಡಿಯೊ ಇಲ್ಲಿವೆ

Nitish Kumar
ದೇಶ2 hours ago

Nitish Kumar: ನೀನೂ ಹೆಣ್ಣು; ವಿಧಾನಸಭೆಯಲ್ಲೇ ಆರ್‌ಜೆಡಿ ಶಾಸಕಿಗೆ ನಿತೀಶ್‌ ಕುಮಾರ್‌ ಗದರಿದ್ದೇಕೆ?

Paris Olympics
ಕ್ರೀಡೆ3 hours ago

Paris Olympics: ಕೊಕೊ ಗಾಫ್ ಅಮೆರಿಕದ ಧ್ವಜಧಾರಿ; ಈ ಗೌರವ ಪಡೆದ ಅತಿ ಕಿರಿಯ ಕ್ರೀಡಾಪಟು

Anekal
ಕ್ರೈಂ4 hours ago

ಆನೇಕಲ್‌ನಲ್ಲಿ ಪುರಸಭೆ ಸದಸ್ಯನ ಬರ್ಬರ ಹತ್ಯೆ; ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಿ ಕೊಲೆ

Hardik Pandya
ಕ್ರೀಡೆ4 hours ago

Hardik Pandya: ವಿಚ್ಛೇದನ ನೀಡಿ ಒಂದು ವಾರ ಕಳೆಯುವ ಮುನ್ನವೇ ಮಾಜಿ ಪತ್ನಿಯ ಪೋಸ್ಟ್​ಗೆ ಲೈಕ್ಸ್​, ಕಮೆಂಟ್​ ಮಾಡಿದ ಹಾರ್ದಿಕ್​ ಪಾಂಡ್ಯ

King Chopper
ದೇಶ4 hours ago

Sea King Chopper: ಸಾವಿನ ದವಡೆಯಲ್ಲಿದ್ದ ಚೀನಾ ನಾವಿಕನನ್ನು ರಕ್ಷಿಸಿದ ಭಾರತೀಯ ನೌಕಾಪಡೆ; ಮಾನವೀಯತೆಗೆ ಮೆಚ್ಚುಗೆ

ahoratri dharani until the guilts are punished says Opposition party Leader R Ashok
ಕರ್ನಾಟಕ4 hours ago

R Ashok: ಹಗರಣಕೋರರಿಗೆ ಶಿಕ್ಷೆಯಾಗುವವರೆಗೂ ಅಹೋರಾತ್ರಿ ಧರಣಿ; ಆರ್. ಅಶೋಕ್‌ ಘೋಷಣೆ

Traffic Restrictions
ಬೆಂಗಳೂರು4 hours ago

Traffic Restrictions: ವೈಟ್ ಟಾಪಿಂಗ್ ಕಾಮಗಾರಿ; ನಾಳೆಯಿಂದ ರಾಜಾಜಿನಗರದ ಈ ಮಾರ್ಗದಲ್ಲಿ ಸಂಚಾರ ನಿಷೇಧ

Mohammed Shami
ಕ್ರೀಡೆ5 hours ago

Mohammed Shami: 19ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಮೊಹಮ್ಮದ್ ಶಮಿ; ತಡೆದು ನಿಲ್ಲಿಸಿದ್ದು ಯಾರು?

KP Poorchandra Tejaswi samagra kruthi Jagattu 14 samputagalu Lokarpane On July 29 in Bengaluru
ಬೆಂಗಳೂರು5 hours ago

Book Release: ಜು.29ರಂದು ಬೆಂಗಳೂರಿನಲ್ಲಿ 14 ಸಂಪುಟಗಳ ಪೂರ್ಣಚಂದ್ರ ತೇಜಸ್ವಿ ಕೃತಿ ಲೋಕಾರ್ಪಣೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ19 hours ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ1 day ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ1 day ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ2 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ5 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ6 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ6 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ6 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ6 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

ಟ್ರೆಂಡಿಂಗ್‌