Site icon Vistara News

Union Budget 2024 : ಕೇಂದ್ರ ಬಜೆಟ್​ ಬಳಿಕ ಯಾವುದೆಲ್ಲ ಅಗ್ಗ, ಯಾವುದೆಲ್ಲ ದುಬಾರಿ?

Union Budget 2024

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ (ಜುಲೈ 23ರಂದು) 2024-2025ನೇ ಸಾಲಿನ ಕೇಂದ್ರ ಬಜೆಟ್ (Union Budget 2024) ಮಂಡಿಸಿದ್ದಾರೆ. ಇದರ ನಂತರ, ಹಲವಾರು ವಸ್ತುಗಳು ಗ್ರಾಹಕರಿಗೆ ಅಗ್ಗ ಮತ್ತು ದುಬಾರಿಯಾಗಿವೆ. ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರದ ಬಜೆಟ್ ಭಾರತದ ಆರ್ಥಿಕ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಿದೆ. ಮೂಲಸೌಕರ್ಯ ಅಭಿವೃದ್ಧಿಯಿಂದ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳವರೆಗೆ ಎಲ್ಲದರ ಮೇಲೂ ಪರಿಣಾಮ ಬೀರುತ್ತದೆ.

ಮೊಬೈಲ್ ಫೋನ್ ಬೆಲೆಗಳು, ಚಿನ್ನ, ಬೆಳ್ಳಿ ಮತ್ತು ತಾಮ್ರದ ಬೆಲೆಗಳನ್ನು ಕಡಿಮೆ ಮಾಡಲು ಕಾರಣವಾಗುವ ಕ್ರಮಗಳನ್ನು ಹಣಕಾಸು ಸಚಿವರು ಘೋಷಿಸಿದ್ದಾರೆ. ಈ ಕೆಳಗೆ ಅಗ್ಗ ಮತ್ತ ದುಬಾರಿಯಾಗಿರುವ ವಸ್ತುಗಳ ವಿವರ ಇಲ್ಲಿ ನೀಡಲಾಗಿದೆ.

ಬಜೆಟ್​ ಬಳಿಕ ಬೆಲೆ ಇಳಿಕೆಯಾಗುವ ವಸ್ತುಗಳ ಪಟ್ಟಿ ಇಲ್ಲಿದೆ

ದುಬಾರಿಯಾದ ವಸ್ತುಗಳ ಪಟ್ಟಿ ಇಲ್ಲಿದೆ

ಹಣಕಾಸು ಸಚಿವರ ಇನ್ನಷ್ಟು ಯೋಜನೆಗಳ ಮಾಹಿತಿ ಇಲ್ಲಿದೆ

ಇದನ್ನೂ ಓದಿ: Union Budget 2024 : ಹೊಸ ಉದ್ದಿಮೆಗಳಿಗೆ ನೀಡುವ ಮುದ್ರಾ ಸಾಲದ ಮೊತ್ತ 10ರಿಂದ 20 ಲಕ್ಷ ರೂಪಾಯಿಗೆ ಏರಿಕೆ

ಕೇಂದ್ರ ಬಜೆಟ್​​ನಲ್ಲಿ ಕೃಷಿ ಕ್ಷೇತ್ರಕ್ಕ ಭರ್ಜರಿ ಕೊಡುಗೆ; ಯಾರಿಗೆ ಎಷ್ಟು? ಇಲ್ಲಿದೆ ಮಾಹಿತಿ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಮಂಡಿಸಿದ ಕೇಂದ್ರ ಬಜೆಟ್​ನಲ್ಲಿ (Union Budget 2024) ಕೃಷಿ ಕ್ಷೇತ್ರಕ್ಕೆ ಬಂಪರ್ ಕೊಡುಗೆ ಕೊಟ್ಟಿದ್ದಾರೆ. ಗ್ರಾಮೀಣ ಪ್ರದೇಶದ ಕೃಷಿಕರು ಹಾಗೂ ಕೃಷಿ ಕ್ಷೇತ್ರವನ್ನು ನಂಬಿಕೊಂಡಿರುವ ಕೋಟ್ಯಂತರ ನಾಗರಿಕರ ಒಳಿತಿಗಾಗಿ ಅವರು ದೊಡ್ಡ ಪ್ರಮಾಣದ ಕೊಡುಗೆಗಳನ್ನು ಘೋಷಿಸಿದ್ದಾರೆ. ಅವುಗಳ ವಿವರ ಇಲ್ಲಿದೆ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೃಷಿ ಮತ್ತು ಸಂಬಂಧಿತ ವಲಯಗಳಿಗೆ 1.52 ಲಕ್ಷ ಕೋಟಿ ರೂಪಾಯಿ ಘೋಷಿಸಿದ್ದಾರೆ. ಮುಂದಿನ ವರ್ಷಗಳಲ್ಲಿ ದೇಶಾದ್ಯಂತ 10,000 ಜೈವಿಕ ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಬಜೆಟ್​ನಲ್ಲಿ ಭರವಸೆ ನೀಡಿದ್ದಾರೆ. ಮುಂದಿನ ಎರಡು ವರ್ಷಗಳಲ್ಲಿ, 1 ಕೋಟಿ ರೈತರನ್ನು ಬ್ರ್ಯಾಂಡಿಂಗ್ ಮತ್ತು ಪ್ರಮಾಣೀಕರಣ ನೀಡುವ ಮೂಲಕ ನೈಸರ್ಗಿಕ ಕೃಷಿಗೆ ಪ್ರೇರಣೆ ನೀಡಲಾಗುವುದು ಎಂದು ಅವರು ಬಜೆಟ್​ನಲ್ಲಿ ಹೇಳಿದ್ದಾರೆ.
ತರಕಾರಿ ಬೆಳೆಗಳನ್ನು ಜೀವನಾಧಾರವಾಗಿ ಮಾಡಿಕೊಂಡಿರುವ ರೈತರಿಗೆ ಅನುಕೂಲಕ ಮಾಡಿಕೊಡುವ ನಿಟ್ಟಿನಲ್ಲಿ
ತರಕಾರಿ ಉತ್ಪಾದನೆ ಮತ್ತು ಪೂರೈಕೆ ಸರಪಳಿ ನಿರ್ಮಿಸುವ ಯೋಜನೆ ಪ್ರಕಟಿಸಿದ್ದಾರೆ. ಅದೇ ರೀತಿ ಮಾರುಕಟ್ಟೆಗೆಳ ಕೇಂದ್ರಗಳ ಹತ್ತಿರ ದೊಡ್ಡ ಕ್ಲಸ್ಟರ್​ಗಳನ್ನು ನಿರ್ಮಿಸುವ ಭರವಸೆಯನ್ನು ಕೊಟ್ಟಿದ್ದಾರೆ.

ಮೀನು ಸಾಕಣದಾರರ ಅಭಿವೃದ್ಧಿಗಾಗಿ ಸಿಗಡಿ ಸಂತಾನೋತ್ಪತ್ತಿ ಕೇಂದ್ರಗಳಿಗೆ ಆರ್ಥಿಕ ನೆರವು ನೀಡಲಾಗುವುದ ಎಂದು ಹಣಕಾಸು ಸಚಿವರು ಭರವಸೆ ಕೊಟ್ಟಿದ್ದಾರೆ. ಅದೇ ರೀತಿ ನಬಾರ್ಡ್ ಮೂಲಕ ಸಿಗಡಿಗಳ ರಫ್ತಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

Exit mobile version