ಬೆಂಗಳೂರು: ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ಇಂದು ಬೆಳಗಿನ ಜಾವ ಬೆಂಗಳೂರಿಗೆ ಆಗಮಿಸಿದರು.
ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ 1.20ರ ವೇಳೆಗೆ ಅಮಿತ್ ಶಾ ಆಗಮಿಸಿದರು. ಇಂದು ನಗರದಲ್ಲಿ ನಡೆಯಲಿರುವ ಕೆಲ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಂಗಳೂರಿನ ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಅಮಿತ್ ಶಾ ಅವರನ್ನು ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಡಾ. ಅಶ್ವತ್ಥ್ ನಾರಾಯಣ್, ವಿ ಸೋಮಣ್ಣ, ಎಸ್ ಟಿ ಸೋಮಶೇಖರ್, ಬೈರತಿ ಬಸವರಾಜ ಅವರು ಸ್ವಾಗತಿಸಿದರು.
ಕೇಂದ್ರ ಗೃಹ ಸಚಿವರು ಇಂದಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಧ್ಯಾಹ್ನದ ಬಳಿಕ ದೆಹಲಿಗೆ ತೆರಳಲಿದ್ದಾರೆ. ಅಮಿತ್ ಶಾ ಅವರ ದಿಢೀರ್ ಬೆಂಗಳೂರು ಭೇಟಿ ಕುತೂಹಲ ಮೂಡಿಸಿದೆ. ರಾಜ್ಯ ಬೆಜೆಪಿಯಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಸುಳ್ಯದ ಬೆಳ್ಳಾರೆಯಲ್ಲಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಬಳಿಕ ಪಕ್ಷದ ಕಾರ್ಯಕರ್ತರೇ ತಿರುಗಿ ಬಿದ್ದಿರುವ ಹಿನ್ನೆಲೆಯಲ್ಲಿ ಅಮಿತ್ ಶಾ ಭೇಟಿ ಗಮನ ಸೆಳೆದಿದೆ.
ಅಮಿತ್ ಶಾ ಭೇಟಿಯ ವೇಳಾಪಟ್ಟಿ
- ಬೆಳಗ್ಗೆ 11 ಗಂಟೆಗೆ ತಾಜ್ ವೆಸ್ಟ್ ಎಂಡ್ನಲ್ಲಿ ಹೋಟೆಲ್ನಲ್ಲಿ ನಡೆಯಲಿರುವ ಸಂಕಲ್ಪ್ ಸೇ ಸಿದ್ದಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
- ಮಧ್ಯಾಹ್ನ 2.10 ರಿಂದ 2.35ರವರೆಗೆ ಖಾಸಗಿ ಹೋಟೆಲ್ನಲ್ಲಿ ಚರ್ಚೆ, ಭೋಜನ
- 3.15ಕ್ಕೆ ಯಲಹಂಕದ ಕೆಎಂಎಫ್ ಮದರ್ ಡೇರಿಗೆ ಭೇಟಿ
- ಮಧ್ಯಾಹ್ನ 3:35ಕ್ಕೆ ಎಚ್ಎಎಲ್ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ