Site icon Vistara News

BJP MP : ಯುಪಿ ಬಿಜೆಪಿ ಸಂಸದನ ಅಶ್ಲೀಲ ವಿಡಿಯೋ ವೈರಲ್; ಪ್ರಕರಣ ದಾಖಲು

MP Upendra Singh Rawat

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿ ಸಂಸದ (BJP MP) ಉಪೇಂದ್ರ ಸಿಂಗ್ ರಾವತ್ ಅವರಿಗೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ವರಿಷ್ಠರು ಟಿಕೆಟ್​ ನೀಡಿದ್ದಾರೆ. ಇದಾಗಿ ಒಂದೇ ದಿನದಲ್ಲಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊವೊಂದು (Forged Obscene Video) ಬಹಿರಂಗಗೊಂಡಿದೆ. ಅದು ನಕಲಿ ಎಂದು ಹೇಳಲಾಗುತ್ತಿರುವ ಹೊರತಾಗಿಯೂ ಸೋಶಿಯಲ್ ಮಿಡಿಯಾಗಳಲ್ಲಿ ವೈರಲ್ ಆಗಿದೆ.

ಸಂಸದರ ಕಾರ್ಯದರ್ಶಿ ದಿನೇಶ್ ಚಂದ್ರ ರಾವತ್ ಇದು ನಕಲಿ ಮತ್ತು ದುರುದ್ದೇಶಪೂರಿತ ಎಂದು ಹೇಳಿದ್ದಾರೆ. ಅವರು ನೀಡಿದ ದೂರಿನ ಆಧಾರದ ಮೇಲೆ ಕಿಡಿಗೇಡಿಗಳ ಆರೋಪಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಕೊಟ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಆದಿತ್ಯ ತ್ರಿಪಾಠಿ ತಿಳಿಸಿದ್ದಾರೆ.

ಸಂಸದರಿಗೆ ಮತ್ತೆ ಟಿಕೆಟ್​ ದೊರಕಿದ ನಂತರ ಅವರ ವರ್ಚಸ್ಸಿಗೆ ಮಸಿ ಬಳಿಯಲು ಕೆಲವರು ಅವರ ಆಕ್ಷೇಪಾರ್ಹ ವೀಡಿಯೊವನ್ನು ಬಿಡುಗಡೆ ಮಾಡಿದ್ದಾರೆ ಎಂದು ಎಫ್ಐಆರ್​​ನಲ್ಲಿ ಆರೋಪಿಸಲಾಗಿದೆ.

ಆನ್ ಲೈನ್ ನಲ್ಲಿ ಪ್ರಸಾರವಾದ ವೀಡಿಯೊದಲ್ಲಿ ವ್ಯಕ್ತಿಯೊಬ್ಬ ಮಹಿಳೆಯೊಂದಿಗೆ ಏಕಾಂತದಲ್ಲಿ ಇರುವುದು ಕಂಡು ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ವೀಡಿಯೊದಲ್ಲಿ ಕಂಡುಬರುವ ವ್ಯಕ್ತಿ ಉಪೇಂದ್ರ ಸಿಂಗ್ ರಾವತ್ ಎಂದು ಹೇಳಲಾಗುತ್ತಿದೆ.

“ನಾನು ಬಾರಾಬಂಕಿಯಿಂದ ಪಕ್ಷದ ಟಿಕೆಟ್ ಪಡೆದ ಕೂಡಲೇ, ನನ್ನ ವಿರೋಧಿಗಳು ಈ ಕೃತ್ಯವನ್ನು ಮಾಡಿದ್ದಾರೆ” ಎಂದು ಸಂಸದರು ವಿಡಿಯೊ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಿ ಶಿಕ್ಷಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : Narendra Modi : ಪ್ರಧಾನಿ ಮೋದಿಯ 10 ದಿನಗಳ ‘ಭಾರತ ದರ್ಶನ’ ಪ್ರವಾಸದ ಮಾಹಿತಿ ಇಲ್ಲಿದೆ

2019 ರ ಲೋಕಸಭಾ ಚುನಾವಣೆಯಲ್ಲಿ, ಬಿಜೆಪಿ ಆಗಿನ ಹಾಲಿ ಸಂಸದ ಪ್ರಿಯಾಂಕಾ ಸಿಂಗ್ ರಾವತ್ ಅವರಿಗೆ ಟಿಕೆಟ್ ನಿರಾಕರಿಸಿತ್ತು ಮತ್ತು ಉಪೇಂದ್ರ ಸಿಂಗ್ ರಾವತ್ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಮಾಡಿತ್ತು. ಈ ಬಾರಿಯೂ ಮತ್ತೆ ಅವರಿಗೆ ಟಿಕೆಟ್ ಸಿಕ್ಕಿದೆ.

ಈ ಬಾರಿ ಟಿಕೆಟ್ ಕೊಡದ ಮೋದಿ ಬಗ್ಗೆ ಸಾಧ್ವಿ ಪ್ರಜ್ಞಾ ಠಾಕೂರ್ ಹೇಳಿದ್ದೇನು?

ಭೋಪಾಲ್: ಹಿಂದೂ ಫೈರ್ ಬ್ರಾಂಡ್​ ಹಾಗೂ ಭಾರತೀಯ ಜನತಾ ಪಕ್ಷದ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ (Sadhvi Pragya Singh Thakur) ಅವರಿಗೆ ಈ ಬಾರಿ ಬಿಜೆಪಿಯಿಂದ (BJP candidate list) ಟಿಕೆಟ್​ ಸಿಕ್ಕಿಲ್ಲ. ಬಿಜೆಪಿಯ ಮೊದಲ ಪಟ್ಟಿಯಲ್ಲಿ ಇದು ಅಚ್ಚರಿಯ ಬೆಳವಣಿಗೆ ಈ ಬಗ್ಗೆ ಸಾಧ್ವಿ ಪ್ರತಿಕ್ರಿಯೆ ನೀಡಿದ್ದು, ತಾವು ಈ ಹಿಂದೆ ನೀಡಿರುವ ಹೇಳಿಕೆಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಅಸಮಾಧಾನವನ್ನುಂಟು ಮಾಡಿರಬಹುದು ಎಂದು ಒಪ್ಪಿಕೊಂಡಿದ್ದಾರೆ. ನಾನು ಬಳಸಿದ ಪದಗಳಿಗಾಗಿ “ಕ್ಷಮಿಸುವುದಿಲ್ಲ” ಎಂದು ಪ್ರಧಾನಿ ಹಿಂದೆಯೇ ಹೇಳಿದ್ದರು ಎಂಬುದಾಗಿ ಅವರು ಒಪ್ಪಿಕೊಂಡಿದ್ದಾರೆ.

“ನಾನು ಮೊದಲು ಟಿಕೆಟ್ ಕೇಳಿರಲಿಲ್ಲ, ಮತ್ತು ನಾನು ಈಗಲೂ ಟಿಕೆಟ್ ಬಯಸುತ್ತಿಲ್ಲ. ನನ್ನ ಹಿಂದಿನ ಹೇಳಿಕೆಗಳಲ್ಲಿ ಕೆಲವು ಪದಗಳ ಬಳಕೆಯು ಪ್ರಧಾನಿ ಮೋದಿಯವರಿಗೆ ಬೇಸರ ಉಂಟುಮಾಡಿರಬಹುದು. ಅವರು ನನ್ನನ್ನು ಕ್ಷಮಿಸುವುದಿಲ್ಲ ಎಂದು ಆಗಲೇ ಹೇಳಿದ್ದರು. ನಾನು ಈಗಾಗಲೇ ಅವರಿಗೆ ಕ್ಷಮೆಯಾಚಿಸಿದ್ದೇನೆ” ಎಂದು ಪ್ರಜ್ಞಾ ಸಿಂಗ್ ಠಾಕೂರ್ ಭಾನುವಾರ ಹೇಳಿದ್ದಾರೆ.

ಸೆಪ್ಟೆಂಬರ್ 2008 ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಪ್ರಜ್ಞಾ ಸಿಂಗ್ ಠಾಕೂರ್ ಅವರ ಕ್ಷೇತ್ರಕ್ಕೆ ಬಿಜೆಪಿ ಮಾಜಿ ಮೇಯರ್ ಅಲೋಕ್ ಶರ್ಮಾ ಅವರಿಗೆ ಟಿಕೆಟ್ ನೀಡಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ, ಪ್ರಜ್ಞಾ ಸಿಂಗ್ ಠಾಕೂರ್ ಅವರು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರನ್ನು 3,64,822 ಮತಗಳ ಅಂತರದಿಂದ ಸೋಲಿಸುವ ಮೂಲಕ ‘ದೈತ್ಯ ಸಂಹಾರಿ’ ಎಂದು ಖ್ಯಾತಿ

Exit mobile version