UPSC Coaching : ನೈತಿಕತೆಯ ಪಾಲನೆ ವಿಚಾರದಲ್ಲಿ ಶ್ರೀರಾಮನಿಗಿಂತ ಅಕ್ಬರನೇ ಶ್ರೇಷ್ಠ ಎಂದ ಯುಪಿಎಸ್​ಸಿ ಬೋಧಕಿ ಶುಭ್ರಾ ರಂಜನ್; ಕೇಸ್​ ದಾಖಲಾದ ಬಳಿಕ ಕ್ಷಮೆ ಕೋರಿಕೆ - Vistara News

ಪ್ರಮುಖ ಸುದ್ದಿ

UPSC Coaching : ನೈತಿಕತೆಯ ಪಾಲನೆ ವಿಚಾರದಲ್ಲಿ ಶ್ರೀರಾಮನಿಗಿಂತ ಅಕ್ಬರನೇ ಶ್ರೇಷ್ಠ ಎಂದ ಯುಪಿಎಸ್​ಸಿ ಬೋಧಕಿ ಶುಭ್ರಾ ರಂಜನ್; ಕೇಸ್​ ದಾಖಲಾದ ಬಳಿಕ ಕ್ಷಮೆ ಕೋರಿಕೆ

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಮೊಘಲ್ ಚಕ್ರವರ್ತಿ ಅಕ್ಬರ್ ಅವರನ್ನು ಹಿಂದೂ ದೇವರಾದ ರಾಮನಿಗೆ ಹೋಲಿಕೆ ಮಾಡಿದ್ದಲ್ಲದೆ, ನೈತಿಕತೆ ಪಾಲನೆ ವಿಚಾರದಲ್ಲಿ ರಾಮನಿಗಿಂತ (Lord Rama) ಅಕ್ಬರನೇ ಶ್ರೇಷ್ಠ ಎಂದು ಹೇಳಿರುವ ಯುಪಿಎಸ್​​ಸಿ ಟ್ಯುಟೋರಿಯಲ್ (UPSC Coaching) ಒಂದು ವಿವಾದ ಹುಟ್ಟು ಹಾಕಿದೆ. ಬಳಿಕ ಬೋಧನೆ ಮಾಡಿರುವ ಶಿಕ್ಷಕಿ ಶುಭ್ರಾ ರಂಜನ್ (Shubhra Ranjan) ಕ್ಷಮೆ ಕೋರಿ ಸ್ಪಷ್ಟನೆ ನೀಡಿದ್ದಾರೆ. ವೈರಲ್ ಆದ ವಿಡಿಯೊದಲ್ಲಿ ರಂಜನ್ ಅವರು ಶ್ರೀರಾಮ ” ತನ್ನ ಅಪರಿಮಿತ ಶಕ್ತಿಯನ್ನು ಪ್ರದರ್ಶಿಸುವುದಿಲ್ಲ” ಎಂದು ಹೇಳಿದ್ದರು. ಇದು ನೆಟ್ಟಿಗರನ್ನು ಕೆರಳಿಸಿತ್ತು. ಶೈಕ್ಷಣಿಕ ಬೋಧನೆ ವೇಳೆ ಐತಿಹಾಸಿಕ ಮತ್ತು ಧಾರ್ಮಿಕ ವ್ಯಕ್ತಿಗಳ ನಡುವೆ ಹೋಲಿಕೆ ಮಾಡಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಬೆಳವಣಿಕೆ ಬಳಿಕ ಶುಭ್ರಾ ರಂಜನ್ ಕ್ಷಮೆಯಾಚಿಸಿದ್ದಾರೆ. ಯಾರ ಭಾವನೆಯನ್ನೂ ನೋಯಿಸುವ ಉದ್ದೇಶ ಹೊಂದಿಲ್ಲ ಎಂದು ಹೇಳಿದ್ದಾರೆ. “ಯಾರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಲ್ಲ. ಅದು ಆಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ” ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಅವರು ಉಪನ್ಯಾಸದ ಒಂದು ಭಾಗವನ್ನು ಮಾತ್ರ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗುತ್ತಿದೆ. ಅದು ವಿಡಿಯೋ ತರಗತಿಯ ಚರ್ಚೆಯ ಒಂದು ಸಣ್ಣ ಭಾಗ ಮಾತ್ರ ಎಂದು ಹೇಳಿದ್ದಾರೆ.

ಶ್ರೀ ರಾಮನ ರಾಜ್ಯವು ಆದರ್ಶ ರಾಜ್ಯ ಎಂದು ತಿಳಿಸಲು ನಾನು ಉದ್ದೇಶಿಸಿದ್ದೆ. ಸಂಪೂರ್ಣ ವೀಡಿಯೊ ಉಪನ್ಯಾಸವನ್ನು ನೋಡುವುದರಿಂದ ಅರ್ಥಮಾಡಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ. ಈ ಚರ್ಚೆಯು ತುಲನಾತ್ಮಕ ಅಧ್ಯಯನದ ಭಾಗವಾಗಿದೆ.. ಅನಪೇಕ್ಷಿತ ತಪ್ಪು ವ್ಯಾಖ್ಯಾನ ಅಲ್ಲ ಎಂದು ಹೇಳಿದ್ದಾರೆ.

ಶುಭ್ರಾ ರಂಜನ್ ಹೇಳಿದ್ದೇನು?

ರಾಮನ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದ ಶುಭ್ರಾ ರಂಜನ್. ಹಿಂದೂ ದೇವರ ಶಕ್ತಿಯನ್ನು “ಸಂಪ್ರದಾಯಗಳಿಂದ ನಿರ್ಬಂಧಿಸಲಾಗಿದೆ” ಎಂದು ಹೇಳಿದ್ದರು. ಅಲ್ಲದೆ, ಚಕ್ರವರ್ತಿ ಅಕ್ಬರನನ್ನು ಹೋಲಿಕೆ ಮಾಡುತ್ತಾ ‘ಯಾರ ಅಧಿಕಾರವು ಸಂಪ್ರದಾಯಕ್ಕೆ ಮೀರಿದೆ ಅಥವಾ ಸೀಮಿತವಾಗಿದೆ?’ ಎಂದು ಹೇಳುವಂತೆ ವಿದ್ಯಾರ್ಥಿಗಳನ್ನು ಕೇಳಿದ್ದಾರೆ. ಬಳಿಕ ಅವರೇ “ಅಕ್ಬರ್” ಎಂದು ಉತ್ತರಿಸಿದ್ದಾರೆ. ಅಲ್ಲದೆ, ರಾಮ ಧರ್ಮವೊಂದರ ಅಡಿಯಲ್ಲಿ ನೈತಿಕತೆಯನ್ನು ಪಾಲನೆ ಮಾಡಿದರೆ, ಅಕ್ಬರ್​ ತನ್ನದೇ ಆದ ನೈತಿಕತೆ ಹೊಂದಿದ್ದ ಎಂದು ಹೇಳಿದ್ದಾರೆ.

ಅಕ್ಬರ್ ತನ್ನದೇ ಆದ ಧರ್ಮ ಮತ್ತು ತನ್ನದೇ ಆದ ನೈತಿಕತೆ ಸ್ಥಾಪಿಸುವ ಗುರಿ ಹೊಂದಿದ್ದ ಎಂದು ರಂಜನ್ ವಿಡಿಯೊ ಕ್ಲಾಸ್​ನಲ್ಲಿ ವಿವರಿಸಿದ್ದಾರೆ. ರಂಜನ್ 1582 ರಲ್ಲಿ ಮೊಘಲ್ ಚಕ್ರವರ್ತಿ ಅಕ್ಬರ್ ಪ್ರತಿಪಾದಿಸಿದ ಸರ್ವ ಧರ್ಮ- ‘ದೀನ್-ಇ ಇಲಾಹಿ’. ಯನ್ನು ಉಲ್ಲೇಖಿಸುತ್ತಾರೆ. ಮುಂದುವರಿದ ಅವರು “ರಾಮ ನೈತಿಕತೆಯನ್ನು ವ್ಯಾಖ್ಯಾನಿಸುತ್ತಿಲ್ಲ” ಎಂದು ಮೊಘಲ್ ಚಕ್ರವರ್ತಿಗೆ ಹೋಲಿಸುತ್ತಾರೆ.

ಇದನ್ನು ಓದಿ: Income Tax : ವಿದೇಶ ಪ್ರಯಾಣಕ್ಕೆಹೊರಟವರೇ ಇಲ್ಲಿ ಕೇಳಿ; ಆದಾಯ ತೆರಿಗೆ ಕ್ಲಿಯರೆನ್ಸ್ ಪ್ರಮಾಣಪತ್ರ ಎಲ್ಲರಿಗೂ ಕಡ್ಡಾಯವಲ್ಲ ಎಂದಿದೆ ಕೇಂದ್ರ ಸರ್ಕಾರ

ಭಾರತದಲ್ಲಿ ವಿವಿಧ ಕಾಲಘಟ್ಟಗಳಲ್ಲಿ ರಾಜಪ್ರಭುತ್ವದ ವ್ಯವಸ್ಥೆಯು ಹೇಗೆ ವಿಕಸನಗೊಂಡಿದೆ ಎಂಬುದನ್ನು ವಿವರಿಸಲು ಶುಭ್ರಾ ರಂಜನ್ ಹೋಲಿಕೆಗಳನ್ನು ಬಳಸುತ್ತಾರೆ. ಭಾರತದಲ್ಲಿ ರಾಜಪ್ರಭುತ್ವವು ‘ಸಂಪೂರ್ಣ’ ಅಲ್ಲ ಎಂಬುದಾಗಿಯೂ ಅವರು ಹೇಳಿದ್ದಾರೆ.

“ರಾಜ ಕೂಡ ಧರ್ಮದ ಅಡಿಯಲ್ಲಿದ್ದ. ರಾಜಧರ್ಮ ಎತ್ತಿಹಿಡಿದಿದ್ದನು ” ಎಂದು ರಂಜನ್ ಹೇಳಿದ್ದಾರೆ.

ನೆಟ್ಟಿಗರು ಹೇಗೆ ಪ್ರತಿಕ್ರಿಯಿಸಿದ್ದಾರೆ?

ಎಕ್ಸ್ ಬಳಕೆದಾರರೊಬ್ಬರು ಸೈಬರ್ ಪೊಲೀಸ್ ಪೋರ್ಟಲ್​ನಲ್ಲಿ ದೂರು ದಾಖಲಿಸಿದ್ದು, ಶುಭ್ರಾ ರಂಜನ್ ಅವರು “ಧರ್ಮನಿಂದನೆ ಮತ್ತು ಹಿಂದೂ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಎಕ್ಸ್ ಬಳಕೆದಾರರು ರಂಜನ್ ಅವರನ್ನು ಟೀಕಿಸಿದ್ದು, ಭಗವಾನ್ ರಾಮನನ್ನು ಅಕ್ಬರ್​ಗೆ ಹೋಲಿಸುವ ಮೂಲಕ ಯುಪಿಎಸ್​ಸಿ ಆಕಾಂಕ್ಷಿಗಳ ಮನಸ್ಸನ್ನು ಭ್ರಷ್ಟಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ .

ಕೆಲವು ನೆಟ್ಟಿಗರು ಶುಭ್ರಾ ಅವರನ್ನು ಬೆಂಬಲಿಸಿದ್ದಾರೆ. “ಅಕ್ಬರ್ ತನ್ನದೇ ಆದ ನೈತಿಕತೆ ವ್ಯಾಖ್ಯಾನಿಸುತ್ತಿದ್ದ. ಶ್ರೀ ರಾಮನು ನಿಜವಾಗಿ ನೈತಿಕತೆ ಅನುಸರಿಸುತ್ತಿದ್ದ. ಹೀಗಿರುವಾರ ಶ್ರೀ ರಾಮನನ್ನು ರಾಜನೆಂದು ವಿಶ್ಲೇಷಿಸುವುದರಲ್ಲಿ ಏನು ಸಮಸ್ಯೆ?” ಎಂದು ಪ್ರಶ್ನಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

HD Kumaraswamy: ಸುದ್ದಿಗೋಷ್ಠಿ ನಡೆಸುವಾಗಲೇ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ!

HD Kumaraswamy: ಬೆಂಗಳೂರಿನ ಜೆಡಿಎಸ್‌ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾಗಿದೆ. ಈ ವೇಳೆ ಬಟ್ಟೆಯಿಂದ ಮೂಗನ್ನು ಒರೆಸಿಕೊಂಡರೂ ರಕ್ತಸ್ರಾವ ನಿಲ್ಲದ ಹಿನ್ನೆಲೆಯಲ್ಲಿ ಅವರನ್ನು ಪುತ್ರ ನಿಖಿಲ್‌ ಕುಮಾರಸ್ವಾಮಿ ಜಯನಗರ ಅಪೋಲೋ ಆಸ್ಪತ್ರೆಗೆ ಕರೆದೊಯ್ದರು.

VISTARANEWS.COM


on

HD Kumaraswamy
Koo

ಬೆಂಗಳೂರು: ಸುದ್ದಿಗೋಷ್ಠಿ ನಡೆಸುವಾಗಲೇ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವ ಆಗಿರುವ ಘಟನೆ ಭಾನುವಾರ ನಡೆದಿದೆ. ಮುಡಾ ನಿವೇಶನ ಹಗರಣ ವಿರೋಧಿಸಿ ಆ.3ರಂದು ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಜೆಡಿಎಸ್‌ ಕಚೇರಿಯಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಸಮನ್ವಯ ಸಭೆ ಏರ್ಪಡಿಸಲಾಗುತ್ತು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಅವರ ಮೂಗಿನಿಂದ ರಕ್ತಸ್ರಾವವಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಮೂಗಿನಿಂದ ರಕ್ತಸ್ರಾವವಾಗಿದೆ. ಈ ವೇಳೆ ಬಟ್ಟೆಯಿಂದ ಮೂಗನ್ನು ಎಚ್‌ಡಿಕೆ ಒರೆಸಿಕೊಂಡರು. ಅದರೂ ರಕ್ತಸ್ರಾವ ನಿಲ್ಲಲಿಲ್ಲ. ಮತ್ತೆ ಮೂಗಿನಿಂದ ರಕ್ತಸ್ರಾವ ಹೆಚ್ಚಾದ ಹಿನ್ನೆಲೆ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ತಂದೆಯನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಕರೆದೊಯ್ದರು. ಮೂಗಿನಿಂದ ರಕ್ತಸ್ರಾವ ಹಿನ್ನೆಲೆಯಲ್ಲಿ ಬಿಳಿ ಶರ್ಟ್ ರಕ್ತಮಯವಾಗಿದೆ.

ಇದನ್ನೂ ಓದಿ | Dog Meat Controversy: ಬೆಂಗಳೂರಿನಲ್ಲಿ ಸಿಕ್ಕಿರೋದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ: ಗೃಹ ಸಚಿವ ಪರಮೇಶ್ವರ್‌

Continue Reading

ಕರ್ನಾಟಕ

KRS Dam: ಕೆಆರ್‌ಎಸ್, ಕಬಿನಿ ಜಲಾಶಯ ಭರ್ತಿ ಹಿನ್ನೆಲೆ ನಾಳೆ ಸಿಎಂ ಬಾಗಿನ ಅರ್ಪಣೆ

KRS Dam: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯದಲ್ಲಿ ಸೋಮವಾರ ಬೆಳಗ್ಗೆ ಹಾಗೂ ಮೈಸೂರು ಜಿಲ್ಲೆಯ ಎಚ್‌.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯದಲ್ಲಿ ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ.

VISTARANEWS.COM


on

KRS Dam
Koo

ಮಂಡ್ಯ/ಮೈಸೂರು: ರಾಜ್ಯ ಉತ್ತಮ ಮಳೆಯಿಂದ ಕೃಷ್ಣರಾಜಸಾಗರ (ಕೆಆರ್‌ಎಸ್) ಹಾಗೂ ಕಬಿನಿ ಜಲಾಶಯ ಭರ್ತಿ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಎರಡೂ ಜಲಾಶಯಗಳಿಗೆ (KRS Dam) ಜುಲೈ 29ರಂದು ಸಿಎಂ ಸಿದ್ದರಾಮಯ್ಯ ಅವರು ತೆರಳಿ ಬಾಗಿನ ಅರ್ಪಿಸಲಿದ್ದಾರೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ 3ನೇ ಬಾರಿಗೆ ಬಾಗಿನ ಅರ್ಪಿಸುತ್ತಿದ್ದಾರೆ. ಸೋಮವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿ ಮಂತ್ರಿಮಂಡಲದ ಅನೇಕರು ಭಾಗಿಯಾಗಲಿದ್ದಾರೆ. ಮೈಸೂರಿನಿಂದ ಕೆಆರ್‌ಎಸ್‌ಗೆ ಸಿಎಂ ತೆರಳಲಿದ್ದು, ಪೂಜೆ ಮುಗಿಸಿ ಮಧ್ಯಾಹ್ನ 1.30ಕ್ಕೆ ನಿರ್ಗಮಿಸಲಿದ್ದಾರೆ. ಕೆಆರ್‌ಎಸ್ ಬಾಗಿನ ಕಾರ್ಯಕ್ರಮ‌ ಮುಗಿದ ನಂತರ ಕಬಿನಿ ಡ್ಯಾಂ ತೆರಳಿ ಬಾಗಿನ ಅರ್ಪಿಸಲಿದ್ದಾರೆ. ಈ ಹಿಂದೆ 2013, 2014ರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ್ದರು.

ನಾಳೆ ಮಧ್ಯಾಹ್ನ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ

ಮೈಸೂರು: ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲೆಯ ಎಚ್‌.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೆ ಜುಲೈ 29ರಂದು ಮಧ್ಯಾಹ್ನ ಬಾಗಿನ ಅರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್, ಸಣ್ಣ ನೀರಾವರಿ ಸಚಿವ ಬೋಸರಾಜು, ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್, ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸೇರಿ ಹಲವು ಪ್ರಮುಖರು ಭಾಗಿಯಾಗಲಿದ್ದಾರೆ.

ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
karnataka Rain

ಕೊಡಗು: ಕೊಡಗು ಜಿಲ್ಲೆಯಾದ್ಯಂತ ವರುಣನ (Karnataka Rain) ಆರ್ಭಟ ಕೊಂಚ ತಗ್ಗಿದೆ. ಮಳೆ ಕಡಿಮೆಯಾದರೂ ಮಳೆಯ ಅನಾಹುತ ನಿಂತಿಲ್ಲ. ಮಾದಪುರ ಟೌನ್ ಸಮೀಪ ಗುಡ್ಡ ಕುಸಿದಿದೆ. ಗುಡ್ಡ ಕುಸಿದ ಜಾಗದಲ್ಲೆ ಭೂಮಿ ಬಿರುಕು ಬಿಟ್ಟಿದೆ. ಮಳೆ ಹೆಚ್ಚಾದಲ್ಲಿ ಮತ್ತಷ್ಟು ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಮಡಿಕೇರಿ ಮಾದಪುರ ಸೋಮವಾರಪೇಟೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಇದಾಗಿದೆ. ಗುಡ್ಡ ಕುಸಿದರೆ ಮಡಿಕೇರಿ – ಮಾದಾಪುರ ಸೋಮವಾರಪೇಟೆ ರಸ್ತೆ ಬಂದ್ ಆಗುವ ಸಾಧ್ಯತೆ ಇದೆ. ಸದ್ಯ ಆತಂಕದಲ್ಲೇ ವಾಹನ ಸವಾರರು ಓಡಾಡುತ್ತಿದ್ದಾರೆ.

ಉಕ್ಕಿ ಹರಿಯುವ ನೀರಿಗೆ ಜಿಗಿದು ಯುವಕರ ಈಜಾಟ

ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ನದಿ ಸೇರಿದಂತೆ ಕಾಲುವೆಗಳಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಇತ್ತ ಬಾಲಕರು ಜೀವದ ಹಂಗು ತೊರೆದು, ಕಾಲುವೆಗಳಿಗೆ ಜಿಗಿಯುತ್ತಿದ್ದಾರೆ. ರಕ್ಷಣಾ ಕವಚಗಳು ಇಲ್ಲದೆ ಕಾಲುವೆಗಳಿಗೆ ಮೇಲಿಂದ ಜಿಗಿದು ಆಟವಾಡುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಜಲಾಶಯದ ಬಳಿ ಇರುವ ಕಾಲುವೆಗಳಲ್ಲಿ ಜಿಗಿದು ಈಜಾಡುತ್ತಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಳೆಯ ನಡುವೆ ಆತಂಕದ ಹುಟ್ಟಿಸಿದ ಕಾಳಿಂಗ

ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇದರ ನಡುವೆ ಕಾಳಿಂಗ ಸರ್ಪವೊಂದು ಪ್ರತ್ಯಕ್ಷಗೊಂಡು ಆತಂಕದ ಹುಟ್ಟಿಸಿತ್ತು. 13 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸೆರೆಹಿಡಿಯಲಾಗಿದೆ. ಕಳಸದ ಸಂಸೆ ಗ್ರಾ.ಪಂ ವ್ಯಾಪ್ತಿಯ ಪಾತಿಗುಡ್ಡದಲ್ಲಿ‌ ಘಟನೆ ನಡೆದಿದೆ. ಕಾಳಿಂಗ ಸರ್ಪ ಓಡಾಟದಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿತ್ತು. ಉರಗತಜ್ಞ ರಿಜ್ವಾನ್ ಹಾಗೂ ಅರಣ್ಯ ಸಿಬ್ಬಂದಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಕಾಳಿಂಗ ಸರ್ಪ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

ವಿಜಯನಗರದಲ್ಲಿ ಐತಿಹಾಸಿಕ ಹಂಪಿಯ ನಾನಾ ಸ್ಮಾರಕಗಳು ಮುಳುಗಡೆ

ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಐತಿಹಾಸಿಕ ಹಂಪಿಯ ನಾನಾ ಸ್ಮಾರಕಗಳು ಮುಳುಗಡೆಯಾಗಿದೆ. ವಿಜಯನಗರದ ಕೋದಂಡರಾಮ ದೇಗುಲದ ಅರ್ಧಕ್ಕೆ ನೀರು ಹರಿದು ಬಂದಿದೆ. ಸೀತೆ ಸೆರಗು, ಸುಗ್ರೀವ ಗುಹೆಯ ಬಳಿಯೂ ಜಲಾವೃತಗೊಂಡಿದೆ. ನದಿ ಪಾತ್ರಕ್ಕೆ ತೆರಳದಂತೆ ಸ್ಥಳೀಯ ಆಡಳಿತ ಎಚ್ಚರಿಕೆ ನೀಡಿದೆ. ಕಳೆದ ಎರಡು ದಿನಗಳ ಹಿಂದೆಯೇ ಸ್ನಾನಘಟ್ಟಗಳು, ಪುರಂದರ ದಾಸರ ಮಂಟಪಗಳು ಮುಳುಗಿದೆ.

ಇದನ್ನೂ ಓದಿ: Assault Case : ಠಾಣೆಗೆ ಬಂದ ಮಹಿಳೆಗೆ ಜಾಡಿಸಿ ಒದ್ದ ಖಡಕಲಾಟ ಪಿಎಸ್‌ಐ!

ಇತ್ತ ತುಂಗಭದ್ರಾ ನದಿಯ ನೀರು ತುಂಬಿ ಐತಿಹಾಸಿಕ ಮದಲಘಟ್ಟ ಆಂಜನೇಯ ದೇಗುಲದ ಬಳಿ ಹರಿದಿದೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮದಲಘಟ್ಟ ಆಂಜನೇಯ ಸ್ವಾಮಿ ದೇಗುಲದಲ್ಲಿ ಇನ್ನೂ ಸ್ವಲ್ಪ ನೀರು ಹೆಚ್ಚಾದರೆ ಜಲಾವೃತ ಆಗುವ ಸಾಧ್ಯತೆ ಇದೆ.

Continue Reading

ಪ್ರಮುಖ ಸುದ್ದಿ

Manu Bhaker : ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಐತಿಹಾಸಿಕ ಪದಕ ಗೆದ್ದ ಮನು ಭಾಕರ್ ಗೆ ಪ್ರಧಾನಿ ಮೋದಿ ಅಭಿನಂದನೆ

Manu Bhaker : ಇದೊಂದು ಐತಿಹಾಸಿಕ ಪದಕ. ಪ್ಯಾರಿಸ್​ ಒಲಿಂಪಿಕ್ಸ್​​ನಲ್ಲಿ ಭಾರತಕ್ಕಾಗಿ ಮೊದಲ ಪದಕ ಗೆದ್ದಿದ್ದಕ್ಕೆ ಅಭಿನಂದನೆಗಳು. ಕಂಚಿನ ಪದಕಕ್ಕೆ ಶುಭಾಶಯಗಳು. ಈ ಯಶಸ್ಸು ಇನ್ನೂ ವಿಶೇಷವಾಗಿದೆ. ಏಕೆಂದರೆ ಅವರು ಭಾರತಕ್ಕಾಗಿ ಶೂಟಿಂಗ್​​​ನಲ್ಲಿ ಪದಕ ಗೆದ್ದ ಮೊದಲ ಮಹಿಳೆಯಾಗಿದ್ದಾರೆ ಎಂಬುದು ನಂಬಲಾಗದ ಸಾಧನೆ ” ಎಂದು ಪಿಎಂ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

VISTARANEWS.COM


on

Manu Bhaker
Koo

ನವದೆಹಲಿ: 2024 ರ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಭಾರತದ ಮೆಡಲ್​ಗಳ ಖಾತೆ ತೆರೆದ ಹರಿಯಾಣದ ಮನು ಭಾಕರ್ (Manu Bhaker) ಅವರನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಭಿನಂದಿಸಿದ್ದಾರೆ. ಒಲಿಂಪಿಕ್ ಕ್ರೀಡಾಕೂಟದಲ್ಲಿ ಶೂಟಿಂಗ್ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ 22 ವರ್ಷದ ಮನು ಭಾಕರ್ ಪಾತ್ರರಾಗಿದ್ದಾರೆ. ಅಭಿನವ್ ಬಿಂದ್ರಾ, ರಾಜ್ಯವರ್ಧನ್ ಸಿಂಗ್ ರಾಥೋಡ್, ವಿಜಯ್ ಕುಮಾರ್ ಮತ್ತು ಗಗನ್ ನಾರಂಗ್ ನಂತರ ಶೂಟಿಂಗ್​​ನಲ್ಲಿ ಒಲಿಂಪಿಕ್ ಪದಕ ಗೆದ್ದ ಐದನೇ ಶೂಟರ್ ಅವರಾಗಿದ್ದಾರೆ.

ಇದೊಂದು ಐತಿಹಾಸಿಕ ಪದಕ. ಪ್ಯಾರಿಸ್​ ಒಲಿಂಪಿಕ್ಸ್​​ನಲ್ಲಿ ಭಾರತಕ್ಕಾಗಿ ಮೊದಲ ಪದಕ ಗೆದ್ದಿದ್ದಕ್ಕೆ ಅಭಿನಂದನೆಗಳು. ಕಂಚಿನ ಪದಕಕ್ಕೆ ಶುಭಾಶಯಗಳು. ಈ ಯಶಸ್ಸು ಇನ್ನೂ ವಿಶೇಷವಾಗಿದೆ. ಏಕೆಂದರೆ ಅವರು ಭಾರತಕ್ಕಾಗಿ ಶೂಟಿಂಗ್​​​ನಲ್ಲಿ ಪದಕ ಗೆದ್ದ ಮೊದಲ ಮಹಿಳೆಯಾಗಿದ್ದಾರೆ ಎಂಬುದು ನಂಬಲಾಗದ ಸಾಧನೆ ” ಎಂದು ಪಿಎಂ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಕೂಡ ಹರಿಯಾಣದ ಮಗಳಿಂದ ಇಡೀ ದೇಶ ನಿರೀಕ್ಷಿಸುತ್ತಿದ್ದ ಪದಕದ ಭರವಸೆ ಈಡೇರಿದೆ ಎಂದು ಹೇಳಿದ್ದಾರೆ.

ದೇಶದ ಹೆಮ್ಮೆಯ ಮಹಿಳಾ ಶೂಟರ್ ಮನು ಭಾಕರ್ ಪ್ಯಾರಿಸ್​ನಲ್ಲಿ ತಮ್ಮ ಶಕ್ತಿ ತೋರಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ 10 ಮೀಟರ್ ಮಹಿಳಾ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮನು ಭಾಕರ್ ದೇಶಕ್ಕೆ ಕಂಚಿನ ಪದಕ ಗೆದ್ದಿದ್ದಾರೆ ಎಂದು ಸೈನಿ ಪೋಸ್ಟ್ ಮಾಡಿದ್ದಾರೆ.

ಇಂದು, 22 ವರ್ಷದ ಮನು ಭಾಕರ್ ಇಡೀ ದೇಶ ಮತ್ತು ಹರಿಯಾಣ ರಾಜ್ಯವು ಹೆಮ್ಮೆಪಡುವಂತಹ ಸಾಧನೆಯನ್ನು ಮಾಡಿದ್ದಾರೆ. ಪ್ರತಿಯೊಬ್ಬ ಹರ್ಯಾಣ ಜನ ಎದೆ ಉಬ್ಬಿಸಿಕೊಂಡು ನಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ. ಕೇಂದ್ರ ಸಚಿವ ಕಿರಣ್ ರಿಜಿಜು ಕೂಡ ಎಕ್ಸ್ ಗೆ ತೆರಳಿ ಮಹಿಳಾ ಅಥ್ಲೀಟ್ ಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.

“ಒಲಿಂಪಿಕ್ಸ್ನಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳಾ ಶೂಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಶೂಟಿಂಗ್​​ನಲ್ಲಿ 12 ವರ್ಷಗಳ ಪದಕಗಳ ಬರವನ್ನು ಕೊನೆಗೊಳಿಸಿದ್ದಾರೆ. ಈ ಸಾಧನೆಯೊಂದಿಗೆ ಮನು ಭಾಕರ್​ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Paris Olympics Boxing: 16ರ ಸುತ್ತಿಗೇರಿದ​ ಬಾಕ್ಸರ್​​ ನಿಖತ್ ಜರೀನ್; ಮುಂದಿನ ಪಂದ್ಯದಲ್ಲಿ ಕಠಿಣ ಸವಾಲು

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಕೂಡ ಮನು ಭಾಕರ್ ಅವರನ್ನು ಅಭಿನಂದಿಸಿದ್ದಾರೆ ಮತ್ತು “ಭಾರತಕ್ಕೆ ಮೊದಲ ಪದಕ ಪಡೆದ ಮನು ಭಾಕರ್ ಅವರಿಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.

Continue Reading

ಪ್ರಮುಖ ಸುದ್ದಿ

Income Tax : ವಿದೇಶ ಪ್ರಯಾಣಕ್ಕೆಹೊರಟವರೇ ಇಲ್ಲಿ ಕೇಳಿ; ಆದಾಯ ತೆರಿಗೆ ಕ್ಲಿಯರೆನ್ಸ್ ಪ್ರಮಾಣಪತ್ರ ಎಲ್ಲರಿಗೂ ಕಡ್ಡಾಯವಲ್ಲ ಎಂದಿದೆ ಕೇಂದ್ರ ಸರ್ಕಾರ

Income Tax : ಆದಾಯ ತೆರಿಗೆ ಕಾಯ್ದೆ, 1961 ರ ಸೆಕ್ಷನ್ 230 ರ ಪ್ರಕಾರ, ಪ್ರತಿಯೊಬ್ಬ ವ್ಯಕ್ತಿಯು ತೆರಿಗೆ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು ಪಡೆಯುವುದನ್ನು ಕಡ್ಡಾಯಗೊಳಿಸುವುದಿಲ್ಲ. “ಅಸ್ತಿತ್ವದಲ್ಲಿರುವ ಕೆಲವು ವ್ಯಕ್ತಿಗಳಿಗೆ ಅನ್ವಯವಾಗುತ್ತದೆ. ಪ್ರಮಾಣಪತ್ರ ಅಗತ್ಯವಿದ್ದರೆ ತೆರಿಗೆ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು ಪಡೆಯಬೇಕಾಗುತ್ತದೆ ಎಂದು ಹೇಳಿದೆ. ಆದಾಯ ತೆರಿಗೆ ಇಲಾಖೆಯ 2004ರ ಅಧಿಸೂಚನೆಯು ತೆರಿಗೆ ಕ್ಲಿಯರೆನ್ಸ್ ಪ್ರಮಾಣಪತ್ರ ಭಾರತೀಯ ನಿವಾಸಿಗಳಿಗೆ ಮಾತ್ರ ಕಡ್ಡಾಯ ಎಂದು ಹೇಳಿದೆ.

VISTARANEWS.COM


on

Income tax
Koo

ನವದೆಹಲಿ: ಹಣಕಾಸು ಅಕ್ರಮಗಳ ಆರೋಪ ಹೊತ್ತವರು ಅಥವಾ ದೊಡ್ಡ ಪ್ರಮಾಣದಲ್ಲಿ ಆದಾಯ ತೆರಿಗೆ ಬಾಕಿ ಉಳಿಸಿಕೊಂಡವರು (Income Tax) ವಿದೇಶಕ್ಕೆ ತೆರಳುವಾಗ ಮಾತ್ರ ತೆರಿಗೆ ಕ್ಲಿಯರೆನ್ಸ್ ಪ್ರಮಾಣಪತ್ರಗಳು ಕಡ್ಡಾಯವಾಗಿರುತ್ತವೆ ಎಂದು ಕೇಂದ್ರ ಸರ್ಕಾರ ಭಾನುವಾರ ಸ್ಪಷ್ಟಪಡಿಸಿದೆ. ಸಾಗರೋತ್ತರ ಪ್ರಯಾಣಿಕರಿಗೆ ಇನ್​ಕಮ್ ಟ್ಯಾಕ್ಸ್​​ ಕ್ಲಿಯರೆನ್ಸ್ ಸರ್ಟಿಫಿಕೇಟ್​ ಕಡ್ಡಾಯಗೊಳಿಸುವ ಬಜೆಟ್ 2024ರ ಪ್ರಸ್ತಾಪವು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ಹುಟ್ಟುಹಾಕಿದ ನಂತರ ಈ ಸ್ಪಷ್ಟೀಕರಣ ಹೊರಟಿದೆ.

ಬಜೆಟ್​ನಲ್ಲಿ ಮಂಡಿಸಲಾಗಿದ್ದ ಹಣಕಾಸು ಮಸೂದೆ 2024ರಲ್ಲಿ, ಕಪ್ಪು ಹಣ ಕಾಯ್ದೆ, 2015 ರ ಉಲ್ಲೇಖವನ್ನು ಕಾಯ್ದೆಗಳ ಪಟ್ಟಿಗೆ ಸೇರಿಸಲು ಪ್ರಸ್ತಾಪಿಸಲಾಗಿತ್ತು. ಈ ಕಾಯ್ದೆಯು ಹಣಕಾಸಿನ ಹೊಣೆಗಾರಿಕೆಗಳನ್ನು ತೆರವುಗೊಳಿಸಬೇಕು ಮತ್ತು ತೆರಿಗೆ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು ಪಡೆಯಬೇಕು ಎಂದು ಹೇಳುತ್ತದೆ. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿದ್ದವು. ಹೀಗಾಗಿ ಪ್ರಸ್ತಾವಿತ ತಿದ್ದುಪಡಿ ಎಲ್ಲರಿಗೂ ಸಂಬಂಧಿಸಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ತಿದ್ದುಪಡಿಯಡಿ ಭಾರತದ ಎಲ್ಲ ನಾಗರಿಕರು ವಿದೇಶ ಪ್ರವಾಸಕ್ಕೆ ತೆರಳುವಾಗ ತೆರಿಗೆ ಕ್ಲಿಯರೆನ್ಸ್ ಪ್ರಮಾಣಪತ್ರ ಪಡೆಯುವ ಅಗತ್ಯವಿಲ್ಲ ಎಂದು ಸಚಿವಾಲಯ ತಿಳಿಸಿದೆ.

ಆದಾಯ ತೆರಿಗೆ ಕಾಯ್ದೆ, 1961 ಹೀಗೆ ಹೇಳುತ್ತದೆ

ಆದಾಯ ತೆರಿಗೆ ಕಾಯ್ದೆ, 1961 ರ ಸೆಕ್ಷನ್ 230 ರ ಪ್ರಕಾರ, ಪ್ರತಿಯೊಬ್ಬ ವ್ಯಕ್ತಿಯು ತೆರಿಗೆ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು ಪಡೆಯುವುದನ್ನು ಕಡ್ಡಾಯಗೊಳಿಸುವುದಿಲ್ಲ. “ಅಸ್ತಿತ್ವದಲ್ಲಿರುವ ಕೆಲವು ವ್ಯಕ್ತಿಗಳಿಗೆ ಅನ್ವಯವಾಗುತ್ತದೆ. ಪ್ರಮಾಣಪತ್ರ ಅಗತ್ಯವಿದ್ದರೆ ತೆರಿಗೆ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು ಪಡೆಯಬೇಕಾಗುತ್ತದೆ ಎಂದು ಹೇಳಿದೆ. ಆದಾಯ ತೆರಿಗೆ ಇಲಾಖೆಯ 2004ರ ಅಧಿಸೂಚನೆಯು ತೆರಿಗೆ ಕ್ಲಿಯರೆನ್ಸ್ ಪ್ರಮಾಣಪತ್ರ ಭಾರತೀಯ ನಿವಾಸಿಗಳಿಗೆ ಮಾತ್ರ ಕಡ್ಡಾಯ ಎಂದು ಹೇಳಿದೆ.

ತೆರಿಗೆ ಕ್ಲಿಯರೆನ್ಸ್ ಪ್ರಮಾಣಪತ್ರ ಯಾರಿಗೆ ಬೇಕು?

ವ್ಯಕ್ತಿಯು ಗಂಭೀರ ಹಣಕಾಸಿನ ಅಕ್ರಮದ ಬಗ್ಗೆ ಶಂಕೆಗೆ ಒಳಗಾದರೆ ಮತ್ತು ಆದಾಯ ತೆರಿಗೆ ಕಾಯ್ದೆ ಅಥವಾ ತೆರಿಗೆ ಕಾಯ್ದೆಯಡಿ ತನಿಖೆಗಳಿಗೆ ಅವರು ಉಪಸ್ಥಿತಿ ನಿರ್ಣಾಯಕವಾಗಿದ್ದರೆ ಮತ್ತು ಅವರ ವಿರುದ್ಧ ಟ್ಯಾಕ್ಸ್​ ಡಿಮ್ಯಾಂಡ್​ ಎತ್ತುವ ಸಅದ್ಯತೆಗಳು ಇದ್ದರೆ ಅವರು ಪ್ರಮಾಣಪತ್ರವನ್ನು ಪಡೆಯಬೇಕಾಗುತ್ತದೆ.

ನೇರ ತೆರಿಗೆ ಬಾಕಿ ಇಟ್ಟುಕೊಂಡವರು : ವ್ಯಕ್ತಿಯು 10 ಲಕ್ಷ ರೂ.ಗಿಂತ ಹೆಚ್ಚಿನ ನೇರ ತೆರಿಗೆ ಬಾಕಿ ಇಟ್ಟಿದ್ದರೆ, ತೆರಿಗೆ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು ಪಡೆಯಬೇಕು.

ಇದನ್ನೂ ಓದಿ: Paris Olympics Shooting: ಪ್ಯಾರಿಸ್​ ಒಲಿಂಪಿಕ್ಸ್ ಭಾರತಕ್ಕೆ​ ಒಲಿಯಿತು ಮೊದಲ ಪದಕ; ಕಂಚು ಗೆದ್ದ ಶೂಟರ್​ ಮನು ಭಾಕರ್

ತೆರಿಗೆ ಬಾಕಿ ಉಳಿಸಲು ಕಾರಣಗಳನ್ನು ದಾಖಲಿಸಿದ ನಂತರವೇ ತೆರಿಗೆ ಕ್ಲಿಯರೆನ್ಸ್ ಪ್ರಮಾಣಪತ್ರ ಪಡೆಯಲು ವ್ಯಕ್ತಿಯನ್ನು ಕೇಳಬಹುದು ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ. ಆದಾಯ ತೆರಿಗೆಯ ಪ್ರಧಾನ ಮುಖ್ಯ ಆಯುಕ್ತರು ಅಥವಾ ಆದಾಯ ತೆರಿಗೆಯ ಮುಖ್ಯ ಆಯುಕ್ತರ ಅನುಮೋದನೆಯೂ ಅವರಿಗೆ ಅಗತ್ಯವಾಗಿರುತ್ತದೆ.

ಪ್ರಮಾಣಪತ್ರವನ್ನು ನೀಡುವ ಆದಾಯ ತೆರಿಗೆ ಅಧಿಕಾರಿಗಳು ಆದಾಯ ತೆರಿಗೆ ಕಾಯ್ದೆ, ಅಥವಾ ಸಂಪತ್ತು-ತೆರಿಗೆ ಕಾಯ್ದೆ, 1957, ಅಥವಾ ಉಡುಗೊರೆ-ತೆರಿಗೆ ಕಾಯ್ದೆ, 1958 ಅಥವಾ ವೆಚ್ಚ-ತೆರಿಗೆ ಕಾಯ್ದೆ, 1987 ರ ಅಡಿಯಲ್ಲಿ ಸಂಬಂಧಪಟ್ಟ ವ್ಯಕ್ತಿಗೆ ಯಾವುದೇ ಎಂಬುದನ್ನು ಖಚಿತಪಡಿಸಬೇಕು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

Continue Reading
Advertisement
HD Kumaraswamy
ಪ್ರಮುಖ ಸುದ್ದಿ6 mins ago

HD Kumaraswamy: ಸುದ್ದಿಗೋಷ್ಠಿ ನಡೆಸುವಾಗಲೇ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ!

Tungabhadra Dam
ಕೊಪ್ಪಳ37 mins ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Decline of Vultures
ಆರೋಗ್ಯ52 mins ago

Indian Vultures : ಹದ್ದುಗಳೇ ಜೀವರಕ್ಷಕ; ಭಾರತದಲ್ಲಿ ರಣಹದ್ದುಗಳ ಸಂಖ್ಯೆ ಕುಸಿತದಿಂದ 5 ಲಕ್ಷ ಮಂದಿ ಸಾವು ಎಂದಿದೆ ಅಧ್ಯಯನ ವರದಿ

KRS Dam
ಕರ್ನಾಟಕ58 mins ago

KRS Dam: ಕೆಆರ್‌ಎಸ್, ಕಬಿನಿ ಜಲಾಶಯ ಭರ್ತಿ ಹಿನ್ನೆಲೆ ನಾಳೆ ಸಿಎಂ ಬಾಗಿನ ಅರ್ಪಣೆ

Sugar Vs Jaggery In Tea
ಆರೋಗ್ಯ1 hour ago

Sugar Vs Jaggery In Tea: ಸಕ್ಕರೆ ಬದಲು ಬೆಲ್ಲ ಹಾಕಿ ಚಹಾ ಕುಡಿದರೆ ಆರೋಗ್ಯಕ್ಕೆ ನಿಜಕ್ಕೂ ಲಾಭ ಇದೆಯೆ?

Manu Bhaker
ಪ್ರಮುಖ ಸುದ್ದಿ1 hour ago

Manu Bhaker : ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಐತಿಹಾಸಿಕ ಪದಕ ಗೆದ್ದ ಮನು ಭಾಕರ್ ಗೆ ಪ್ರಧಾನಿ ಮೋದಿ ಅಭಿನಂದನೆ

theft case
ಚಿತ್ರದುರ್ಗ2 hours ago

Theft Case : ಹಂದಿ ಕಳವು ವೇಳೆ ಪೊಲೀಸರಿಗೆ ಕಲ್ಲು ತೂರಿ ಎಸ್ಕೇಪ್‌ ಆಗಿದ್ದ ಆಂಧ್ರ ಗ್ಯಾಂಗ್‌ನ ಸದಸ್ಯ ಅರೆಸ್ಟ್‌

Paris Olympics boxing
ಕ್ರೀಡೆ2 hours ago

Paris Olympics Boxing: 16ರ ಸುತ್ತಿಗೇರಿದ​ ಬಾಕ್ಸರ್​​ ನಿಖತ್ ಜರೀನ್; ಮುಂದಿನ ಪಂದ್ಯದಲ್ಲಿ ಕಠಿಣ ಸವಾಲು

Unveiling of IPT 12 Cricket Trophy, Jersey by N1 Cricket Academy
ಕ್ರಿಕೆಟ್2 hours ago

IPT 12: ಎನ್ 1 ಕ್ರಿಕೆಟ್ ಅಕಾಡೆಮಿಯ ವತಿಯಿಂದ ʻIPT 12ʼ ಕ್ರಿಕೆಟ್ ಟ್ರೋಫಿ, ಜೆರ್ಸಿ ಅನಾವರಣ

Bengaluru South District
ಕರ್ನಾಟಕ2 hours ago

Bengaluru South District: ರಾಮನಗರ ಮರು ನಾಮಕರಣಕ್ಕೆ ಹಿಂದು ಜನಜಾಗೃತಿ ಸಮಿತಿ ತೀವ್ರ ವಿರೋಧ; ಉಗ್ರ ಪ್ರತಿಭಟನೆ ಎಚ್ಚರಿಕೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Tungabhadra Dam
ಕೊಪ್ಪಳ37 mins ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ5 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ6 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ1 day ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ1 day ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ1 day ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಟ್ರೆಂಡಿಂಗ್‌