Uttara Kannada landslide: ಈಶ್ವರ ಮಲ್ಪೆ ತಂಡಕ್ಕೂ ಸಿಗಲಿಲ್ಲ ಲಾರಿ ಸುಳಿವು; ಅರ್ಜುನನೂ ಕಣ್ಮರೆ - Vistara News

ಪ್ರಮುಖ ಸುದ್ದಿ

Uttara Kannada landslide: ಈಶ್ವರ ಮಲ್ಪೆ ತಂಡಕ್ಕೂ ಸಿಗಲಿಲ್ಲ ಲಾರಿ ಸುಳಿವು; ಅರ್ಜುನನೂ ಕಣ್ಮರೆ

Uttara Kannada landslide: ನೌಕಾಪಡೆ, ಸೇನೆ ಹಾಗೂ ದೆಹಲಿ ತಂಡ ನೀಡಿದ್ದ 4 ಜಾಗಗಳಲ್ಲಿ 3 ಜಾಗದಲ್ಲಿ ಮಲ್ಪೆಯ ಮುಳುಗುತಜ್ಞ ಈಶ್ವರ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ. NDRF, SDRF, ಸ್ಥಳೀಯ ಮೀನುಗಾರರ ಸಹಾಯದಿಂದ ಕಾರ್ಯಾಚರಣೆ ನಡೆದಿದೆ. ಇನ್ನೊಂದು ಜಾಗದ ಪರಿಶೀಲನೆ ಬಾಕಿ ಇದೆ.

VISTARANEWS.COM


on

Uttara Kannada landslide
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಉತ್ತರ ಕನ್ನಡದ ಅಂಕೋಲಾ ಶಿರೂರು ಗುಡ್ಡಕುಸಿತ (Uttara Kannada landslide, Shiruru Landslide) ಪ್ರಕರಣದಲ್ಲಿ ಜಲಸಮಾಧಿಯಾಗಿರುವ ಲಾರಿ ಹಾಗೂ ಅದರ ಚಾಲಕ ಅರ್ಜುನ ಶೋಧ ಕಾರ್ಯ (Search Operation) ನಿನ್ನೆ ವಿಫಲಗೊಂಡಿದೆ. ಮುಳುಗುತಜ್ಞ ಈಶ್ವರ ಮಲ್ಪೆ ತಂಡಕ್ಕೂ ಇವರ ಪತ್ತೆ ಹಿಡಿಯುವುದು ಸಾಧ್ಯವಾಗಿಲ್ಲ.

ಮುಳುಗುತಜ್ಞರ ಕಾರ್ಯಾಚರಣೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ನಿನ್ನೆ ಸಂಜೆ ಮಾಹಿತಿ ನೀಡಿದ್ದಾರೆ. ನೌಕಾಪಡೆ, ಸೇನೆ ಹಾಗೂ ದೆಹಲಿ ತಂಡ ನೀಡಿದ್ದ 4 ಜಾಗಗಳಲ್ಲಿ 3 ಜಾಗದಲ್ಲಿ ಮಲ್ಪೆಯ ಮುಳುಗುತಜ್ಞ ಈಶ್ವರ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ. NDRF, SDRF, ಸ್ಥಳೀಯ ಮೀನುಗಾರರ ಸಹಾಯದಿಂದ ಕಾರ್ಯಾಚರಣೆ ನಡೆದಿದೆ. ಇನ್ನೊಂದು ಜಾಗದ ಪರಿಶೀಲನೆ ಬಾಕಿ ಇದೆ. ಸಂಜೆಯಾದ ಹಿನ್ನಲೆ‌ ನಾಳೆ ಉಳಿದ ಒಂದು ಪ್ರದೇಶದ ಪರಿಶೀಲನೆ ನಡೆಯಲಿದೆ ಎಂದಿದ್ದಾರೆ.

ಮೂರು ಜಾಗಗಳಲ್ಲಿ ಪರಿಶೀಲಿಸಿದಾಗ ಕಲ್ಲು, ಮಣ್ಣು, ಮರದ ತುಂಡು ಹೆಚ್ಚಾಗಿ ಪತ್ತೆಯಾಗಿದೆ. ಇವುಗಳನ್ನ ತೆರವುಗೊಳಿಸಿ ಆಳದಲ್ಲಿ ಪರಿಶೀಲನೆ ನಡೆಸಬೇಕಿದೆ. ನೀರಿನ ಹರಿವು 10 ನಾಟ್ಸ್‌ಗಿಂತ ಹೆಚ್ಚಾಗಿದ್ದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ನಾಳೆ ಒಮ್ಮೆ ಕೊನೆಯ ಪ್ರಯತ್ನವನ್ನ ಮಾಡುತ್ತೇವೆ. ಇದುವರೆಗೆ ಪರಿಶೀಲಿಸಿದ ಜಾಗದಲ್ಲಿ ಯಾವುದೇ ಮೆಟಲ್ ಡಿಟೆಕ್ಟ್ ಆಗಿಲ್ಲ. ನಾಳೆ ಪ್ರಮುಖ ಒಂದು ಸ್ಥಳದ ಪರಿಶೀಲನೆ ಇದೆ. ಇದರೊಂದಿಗೆ ನೌಕಾಪಡೆ, ಸೇನೆಯವರು ಸೋನಾರ್ ಡಿಟೆಕ್ಷನ್ ಕೂಡಾ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಕಲ್ಲು, ಮಣ್ಣು ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಲಾರಿ ಇದೆ ಎನ್ನಲಾದ ಸ್ಥಳದಲ್ಲಿ ಬೃಹತ್ ಗಾತ್ರದ ಬಂಡೆಗಲ್ಲು ಕಂಡುಬಂದಿದೆ. ಬಂಡೆಗಲ್ಲಿನ ಕೆಳಗೆ ಲಾರಿ ಇರುವ ಸಾಧ್ಯತೆ ಇದೆ. ಈ ಕುರಿತು ಮತ್ತೊಮ್ಮೆ ಸಭೆ ನಡೆಸಿ ನಾಳೆ ಕಾರ್ಯಾಚರಣೆ ಮುಂದುವರೆಸುತ್ತೇವೆ. ನಾವು ಇದುವರೆಗೂ ಇನ್ನೂ ಮೂವರು ನಾಪತ್ತೆಯಾಗಿದ್ದಾರೆ ಎಂದೇ ಶೋಧ ನಡೆಸುತ್ತಿದ್ದೇವೆ. ಯಾರೂ ಸಹ ಮೃತಪಟ್ಟಿದ್ದಾರೆ ಎಂದು ನಾವು ಪರಿಗಣನೆ ಮಾಡಿಲ್ಲ. ಸಾಧ್ಯವಾದ ಎಲ್ಲ ಕಡೆ ಕಣ್ಮರೆಯಾಗಿರುವವರಿಗೆ ಶೋಧ ನಡೆಸಲಾಗುತ್ತಿದೆ. ಸಾರ್ವಜನಿಕರು ಸಹ ಯಾವುದೇ ಮಾಹಿತಿ ಸಿಕ್ಕಲ್ಲಿ ಜಿಲ್ಲಾಡಳಿತಕ್ಕೆ ತಿಳಿಸಿ ಎಂದು ಶಿರೂರಿನಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ಹೇಳಿಕೆ ನೀಡಿದ್ದಾರೆ.

ಈಶ್ವರ ಮಲ್ಪೆ ತಂಡದ ಸದಸ್ಯನಿಗೆ ಗಾಯ

ಕಾರ್ಯಾಚರಣೆಗೆ ಆಗಮಿಸಿದ ಮುಳುಗು ತಜ್ಞ ಈಶ್ವರ ಮಲ್ಪೆ ತಂಡದ ಓರ್ವ ಸದಸ್ಯನಿಗೆ ಗಾಯವಾಗಿದೆ. ಈಶ್ವರ ಮಲ್ಪೆ ತಂಡದ ದೀಪು ಎನ್ನುವವರು ಸ್ಥಳದಲ್ಲಿ ಡೈವಿಂಗ್ ಕಾರ್ಯಾಚರಣೆ ಮಾಡುವ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಗಾಯಾಳುವನ್ನು ಆಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಈಶ್ವರ ಮಲ್ಪೆ ಯಾರು?

ಮೂಲತಃ ಈಶ್ವರ್ ಮಲ್ಪೆ ಆಂಬ್ಯುಲೆನ್ಸ್ ಡ್ರೈವರ್ ಆಗಿದ್ದು, ಸಾಕಷ್ಟು ಜನರ ಪ್ರಾಣ ಉಳಿಸಿದ್ದಾರೆ. ನದಿಯ ಆಳಕ್ಕೆ ಇಳಿದು ನಾಪತ್ತೆಯಾದ ಮೃತದೇಹಗಳನ್ನು ಪತ್ತೆ ಹಚ್ಚುವ ಸಾಹಸಿ ಇವರು. ಅದೆಷ್ಟೇ ಆಳವಿರಲಿ, ಅಪಾಯಕಾರಿ ಸ್ಥಳವಿರಲಿ ಅಲ್ಲಿಗೆ ಇಳಿದು ಮೃತದೇಹಗಳನ್ನು ತೆಗೆದಿದ್ದಾರೆ. ಎಂಥದ್ದೇ ಪರಿಸ್ಥಿತಿ ಇದ್ದರೂ ಕರೆ ಬಂದ ತಕ್ಷಣ ಓಡಿ ಬರುತ್ತಾರೆ. ಕಳೆದ ವರ್ಷ ಜುಲೈ 23ರಂದು ಅರಿಶಿನ ಗುಂಡಿ ಜಲಪಾತದಲ್ಲಿ ಭದ್ರಾವತಿ ಮೂಲದ ಶರತ್ ಎಂಬಾತ ಕಾಲು ಜಾರಿ ನೀರಿಗೆ ಬಿದ್ದು ಸೌಪರ್ಣಿಕಾ ನದಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದ. ಮರದ ಬೇರಿಗೆ ಸಿಲುಕಿ ದೇಹ ಅಲ್ಲಿಯೇ ಇತ್ತು. ಆರು ದಿನಗಳ ಬಳಿಕ ಆ ಮೃತದೇಹವನ್ನು ಈಶ್ವರ್ ಮಲ್ಪೆ ಹೊರಕ್ಕೆ ತೆಗೆದಿದ್ದರು.

ಇದನ್ನೂ ಓದಿ: Uttara Kannada Landslide: ಶಿರೂರು ಗುಡ್ಡಕುಸಿತ; ಅರ್ಜುನ್‌ ಶೋಧಕ್ಕೆ ಸಿಎಂ ಸಿದ್ದರಾಮಯ್ಯಗೆ ಪಿಣರಾಯಿ ಮೊರೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Olympic Games Paris: ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಸ್ಪರ್ಧೆಗಳ ವಿವರ

Olympic Games Paris: ವನಿತೆಯರ 10 ಮೀ. ಏರ್‌ ಪಿಸ್ತೂಲ್‌ ಫೈನಲ್‌ ಸ್ಪರ್ಧೆಯಲ್ಲಿ ಭಾರತದ ಮನು ಭಾಕರ್‌ ಕಣಕ್ಕಿಳಿಯಲಿದ್ದಾರೆ.

VISTARANEWS.COM


on

Koo

ಪ್ಯಾರಿಸ್​: ಒಲಿಂಪಿಕ್ಸ್​ನಲ್ಲಿ(Olympic Games Paris) ಶನಿವಾರ ಭಾರತಕ್ಕೆ ಮಿಶ್ರ ಫಲಿತಾಂಶ ಲಭಿಸಿತ್ತು. ಇಂದು(ಭಾನುವಾರ) ಹಲವು ಸ್ಪರ್ಧೆಗಳಲ್ಲಿ ಭಾರತದ ಕ್ರೀಡಾಪಟುಗಳು ಪದಕ ನಿರೀಕ್ಷೆಯೊಂದಿಗೆ ಕಣಕ್ಕಿಳಿಯಲಿದ್ದಾರೆ. ಇಂದಿನ ಸ್ಪರ್ಧೆಯ ವೇಳಾಪಟ್ಟಿ ಹೀಗಿದೆ.

ಬ್ಯಾಡ್ಮಿಂಟನ್‌ (ಆರಂಭ: ಮಧ್ಯಾಹ್ನ 12.45)

ಪುರುಷರ ಸಿಂಗಲ್ಸ್‌ ಗ್ರೂಪ್‌ ಹಂತ: ಎಚ್‌.ಎಸ್‌. ಪ್ರಣಯ್‌, ಲಕ್ಷ್ಯ ಸೇನ್‌.

ಮಹಿಳಾ ಸಿಂಗಲ್ಸ್‌ ಗ್ರೂಪ್‌ ಹಂತ: ಪಿ.ವಿ. ಸಿಂಧು.

ಪುರುಷರ ಡಬಲ್ಸ್‌ ಗ್ರೂಪ್‌ ಹಂತ: ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌.

ಮಹಿಳಾ ಡಬಲ್ಸ್‌ ಗ್ರೂಪ್‌ ಹಂತ: ತನಿಷಾ ಕ್ರಾಸ್ಟೊ-ಅಶ್ವಿ‌ನಿ ಪೊನ್ನಪ್ಪ.

ಶೂಟಿಂಗ್‌ (ಮಧ್ಯಾಹ್ನ12.45)

ಮಹಿಳೆಯರ 10 ಮೀ. ಏರ್‌ ಪಿಸ್ತೂಲ್‌ ಅರ್ಹತಾ ಸುತ್ತು: ಇಳವೆನಿಲ್‌ ವಲರಿವನ್‌, ರಮಿತಾ ಜಿಂದಲ್‌.

ಪುರುಷರ 10 ಮೀ. ಏರ್‌ ಪಿಸ್ತೂಲ್‌ ಫೈನಲ್‌
ಪುರುಷರ 10 ಮೀ. ಏರ್‌ ರೈಫ‌ಲ್‌ ಅರ್ಹತಾ ಸುತ್ತು:
ಸಂದೀಪ್‌ ಸಿಂಗ್‌, ಅರ್ಜುನ್‌ ಬಬುಟ.(ಮಧ್ಯಾಹ್ನ 2.45)

ವನಿತೆಯರ 10 ಮೀ. ಏರ್‌ ಪಿಸ್ತೂಲ್‌ ಫೈನಲ್‌: ಮನು ಭಾಕರ್‌ (ಮಧ್ಯಾಹ್ನ, 3.30)

ಆರ್ಚರಿ

ಮಹಿಳೆಯರ ತಂಡ ಸ್ಪರ್ಧೆ, 16ರ ಸುತ್ತು: ದೀಪಿಕಾ ಕುಮಾರಿ, ಅಂಕಿತಾ ಭಕತ್‌, ಭಜನ್‌ ಕೌರ್‌. (ಮಧ್ಯಾಹ್ನ 1.00)

ಮಹಿಳಾ ತಂಡದ ಕಂಚಿನ ಸ್ಪರ್ಧೆ.(ರಾತ್ರಿ 8.18)

ಮಹಿಳಾ ತಂಡದ ಚಿನ್ನದ ಸ್ಪರ್ಧೆ.(ರಾತ್ರಿ 8.41)

ರೋಯಿಂಗ್​


ಪುರುಷರ ಸಿಂಗಲ್‌ ಸ್ಕಲ್ಸ್‌ ರೆಪಿಶಾಜ್‌ ಸುತ್ತು: ಬಲ್ರಾಜ್‌ ಪನ್ವರ್‌.(ಮಧ್ಯಾಹ್ನ 1.06)

ಟೇಬಲ್‌ ಟೆನಿಸ್

ಪುರುಷರ ಸಿಂಗಲ್ಸ್‌: ಶರತ್‌ ಕಮಲ್‌, ಹರ್ಮೀತ್‌ ದೇಸಾಯಿ.

ಮಹಿಳಾ ಸಿಂಗಲ್ಸ್‌: ಮಣಿಕಾ ಬಾತ್ರಾ, ಶ್ರೀಜಾ ಅಕುಲಾ.(ಮಧ್ಯಾಹ್ನ 1.30)

ಬಾಕ್ಸಿಂಗ್‌


ಪುರುಷರ 51 ಕೆಜಿ, 32ರ ಸುತ್ತು: ಅಮಿತ್‌ ಪಂಘಲ್‌.(ಮಧ್ಯಾಹ್ನ 2.30)

ಪುರುಷರ 71 ಕೆಜಿ, 32ರ ಸುತ್ತು: ನಿಶಾಂತ್‌ ದೇವ್‌.(ಮಧ್ಯಾಹ್ನ 3.02)

ಮಹಿಳೆಯರ 50 ಕೆಜಿ, 32ರ ಸುತ್ತು: ನಿಖತ್‌ ಜರೀನ್‌ (ಸಂಜೆ 4.06)

ಈಜು


ಪುರುಷರ 100 ಮೀ. ಬ್ಯಾಕ್‌ಸ್ಟ್ರೋಕ್‌ ಹೀಟ್ಸ್‌: ಶ್ರಿಹರಿ ನಟರಾಜ್‌.

ವನಿತೆಯರ 200 ಮೀ. ಫ್ರೀಸ್ಟೈಲ್‌ ಹೀಟ್ಸ್‌: ಧಿನಿಧಿ ದೇಸಿಂಗೂ. (ಮಧ್ಯಾಹ್ನ 2.30)

ಪುರುಷರ 100 ಮೀ. ಬ್ಯಾಕ್‌ಸ್ಟ್ರೋಕ್‌ ಸೆಮಿಫೈನಲ್‌. (ತಡರಾತ್ರಿ 1.02)

ಮಹಿಳೆಯರ 200 ಮೀ. ಫ್ರೀಸ್ಟೈಲ್‌ ಸೆಮಿಫೈನಲ್‌.(ತಡರಾತ್ರಿ 1.20.)

ಟೆನಿಸ್‌

ಪುರುಷರ ಸಿಂಗಲ್ಸ್‌ ಮೊದಲ ಸುತ್ತು: ಸುಮಿತ್‌ ನಾಗಲ್‌.

ಪುರುಷರ ಡಬಲ್ಸ್‌: ರೋಹನ್‌ ಬೋಪಣ್ಣ-ಶ್ರೀರಾಮ್‌ ಬಾಲಾಜಿ(ಮಧ್ಯಾಹ್ನ 3.30)

Continue Reading

ದೇಶ

New Governors: ನೂತನ ರಾಜ್ಯಪಾಲರನ್ನು ನೇಮಿಸಿದ ರಾಷ್ಟ್ರಪತಿ; ಮೈಸೂರಿನ ವಿಜಯ ಶಂಕರ್ ಮೇಘಾಲಯ ಗವರ್ನರ್‌

New Governors: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 6 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ. ಈ ಪೈಕಿ ಮೇಘಾಲಯದ ರಾಜ್ಯಪಾಲರಾಗಿ ಮೈಸೂರಿನ ಮಾಜಿ ಸಂಸದ, ಮಾಜಿ ಸಚಿವ ಸಿ.ಎಚ್.ವಿಜಯ ಶಂಕರ್ ನೇಮಕವಾಗಿದ್ದಾರೆ. ಹೊಸ ರಾಜ್ಯಪಾಲರ ಪಟ್ಟಿ ಇಲ್ಲಿದೆ.

VISTARANEWS.COM


on

New Governors
Koo

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು 6 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ (New Governors). ಜತೆಗೆ ಮೂವರು ರಾಜ್ಯಪಾಲರನ್ನು ಬೇರೆಡೆಗೆ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಈ ಪೈಕಿ ಮೇಘಾಲಯದ ರಾಜ್ಯಪಾಲರಾಗಿ ಮೈಸೂರಿನ ಮಾಜಿ ಸಂಸದ, ಮಾಜಿ ಸಚಿವ ಸಿ.ಎಚ್.ವಿಜಯ ಶಂಕರ್ ನೇಮಕವಾಗಿದ್ದಾರೆ. ಇನ್ನು ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಅಸ್ಸಾಂ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದ್ದು, ಅವರಿಗೆ ಮಣಿಪುರದ ಹೆಚ್ಚುವರಿ ಉಸ್ತುವಾರಿ ನೀಡಲಾಗಿದೆ. ಬನ್ವಾರಿಲಾಲ್ ಪುರೋಹಿತ್ ಅವರ ಬದಲಿಗೆ ಗುಲಾಬ್ ಚಂದ್ ಕಟಾರಿಯಾ ಅವರನ್ನು ಪಂಜಾಬ್ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ ಎಂದು ರಾಷ್ಟ್ರಪತಿ ಭವನ ಪ್ರಕಟಿಸಿದೆ.

ಇನ್ನು ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢದ ಆಡಳಿತಾಧಿಕಾರಿಯಾಗಿ ಗುಲಾಬ್ ಚಂದ್ ಕಟಾರಿಯಾ ಅವರನ್ನೇ ನೇಮಕ ಮಾಡಲಾಗಿದೆ. ಪಂಜಾಬ್ ರಾಜ್ಯಪಾಲ ಮತ್ತು ಚಂಡೀಗಢದ ಆಡಳಿತಾಧಿಕಾರಿ ಹುದ್ದೆಗೆ ಬನ್ವಾರಿಲಾಲ್ ಪುರೋಹಿತ್ ಅವರು ಫೆಬ್ರವರಿಯಲ್ಲಿ ರಾಜೀನಾಮೆ ನೀಡಿದ್ದು, ರಾಷ್ಟ್ರಪದಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ. 83 ವರ್ಷದ ಬನ್ವಾರಿಲಾಲ್ ಪುರೋಹಿತ್ ತಮ್ಮ ರಾಜೀನಾಮೆ ಪತ್ರದಲ್ಲಿ, “ವೈಯಕ್ತಿಕ ಕಾರಣಗಳು ಮತ್ತು ಇತರ ಕೆಲವು ಬದ್ಧತೆಗಳಿಂದಾಗಿ ನಾನು ಕೇಂದ್ರಾಡಳಿತ ಪ್ರದೇಶ ಚಂಡೀಗಢದ ರಾಜ್ಯಪಾಲ ಮತ್ತು ಆಡಳಿತಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆʼʼ ಎಂದು ತಿಳಿಸಿದ್ದರು.

ಸಿಕ್ಕಿಂ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಅಸ್ಸಾಂ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ ಮತ್ತು ಹೆಚ್ಚುವರಿಯಾಗಿ ಮಣಿಪುರದ ಜವಾಬ್ದಾರಿಯನ್ನು ಸಹ ನೀಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಅನುಸೂಯಾ ಉಕ್ಯೆ ಅವರು ಕಳೆದ ವರ್ಷ ಫೆಬ್ರವರಿಯಿಂದ ಮಣಿಪುರದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಬಿಜೆಪಿ ಹಿರಿಯ ನಾಯಕ ಓಂ ಪ್ರಕಾಶ್ ಮಾಥುರ್ ಅವರನ್ನು ಸಿಕ್ಕಿಂನ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ತೆಲಂಗಾಣದ ಹೆಚ್ಚುವರಿ ಜವಾಬ್ದಾರಿಯನ್ನು ಹೊಂದಿದ್ದ ಜಾರ್ಖಂಡ್ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಮಹಾರಾಷ್ಟ್ರದ ಜಬಾಬ್ದಾರಿ ನೀಡಲಾಗಿದೆ. ಕೇಂದ್ರದ ಮಾಜಿ ಕಾರ್ಮಿಕ ಮತ್ತು ಉದ್ಯೋಗ ಸಚಿವ ಸಂತೋಷ್ ಕುಮಾರ್ ಗಂಗ್ವಾರ್ ಅವರನ್ನು ಜಾರ್ಖಂಡ್ ರಾಜ್ಯಪಾಲರನ್ನಾಗಿ ನಿಯುಕ್ತಿಗೊಳಿಸಲಾಗಿದೆ.

ತ್ರಿಪುರಾದ ಮಾಜಿ ಉಪಮುಖ್ಯಮಂತ್ರಿ ಜಿಷ್ಣು ದೇವ್ ವರ್ಮಾ ಅವರನ್ನು ತೆಲಂಗಾಣದ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವಿಶ್ವಾಸಾರ್ಹ ಸಹಾಯಕರಲ್ಲಿ ಒಬ್ಬರಾದ ಮಾಜಿ ಐಎಎಸ್ ಅಧಿಕಾರಿ ಕೆ.ಕೈಲಾಶ್‌ನಾಥನ್‌ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲಾಗಿದೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಮುಖ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಕೈಲಾಶ್‌ನಾಥನ್‌ ಜೂನ್ 30ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಮಹಾರಾಷ್ಟ್ರದ ಬಿಜೆಪಿಯ ಹಿರಿಯ ನಾಯಕ ಹರಿಭಾವು ಕಿಸಾನ್ ರಾವ್ ಬಾಗ್ಡೆ ಅವರನ್ನು ರಾಜಸ್ಥಾನದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಅಸ್ಸಾಂನ ಮಾಜಿ ಲೋಕಸಭಾ ಸದಸ್ಯ ರಾಮನ್ ದೇಕಾ ಅವರನ್ನು ಛತ್ತೀಸ್ ಗಢದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

ರಾಜ್ಯ ಹೊಸ ರಾಜ್ಯಪಾಲರು
ಮೇಘಾಲಯಸಿ.ಎಚ್.ವಿಜಯ ಶಂಕರ್
ರಾಜಸ್ಥಾನಹರಿಭಾವು ಕಿಸಾನ್ ರಾವ್ ಬಾಗ್ಡೆ
ತೆಲಂಗಾಣಜಿಷ್ಣು ದೇವ್ ವರ್ಮಾ
ಸಿಕ್ಕಿಂಓಂ ಪ್ರಕಾಶ್ ಮಾಥುರ್
ಜಾರ್ಖಂಡ್ಸಂತೋಷ್ ಕುಮಾರ್ ಗಂಗ್ವಾರ್
ಛತ್ತೀಸ್‌ಗಢರಾಮನ್ ದೇಕಾ
ಮಹಾರಾಷ್ಟ್ರಸಿ.ಪಿ. ರಾಧಾಕೃಷ್ಣನ್
ಪಂಜಾಬ್ಗುಲಾಬ್ ಚಂದ್ ಕಟಾರಿಯಾ
ಅಸ್ಸಾಂ, ಮಣಿಪುರಲಕ್ಷ್ಮಣ್ ಪ್ರಸಾದ್ ಆಚಾರ್ಯ

ಇದನ್ನೂ ಓದಿ: Delhi Floods: ದೆಹಲಿಯಲ್ಲಿ ಭಾರಿ ಮಳೆ; ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿ ಇಬ್ಬರು ವಿದ್ಯಾರ್ಥಿನಿಯರ ಸಾವು!

Continue Reading

ಪ್ರಮುಖ ಸುದ್ದಿ

Karnataka Rain News: ತುಂಬಿ ಬರಿಯುತ್ತಿರುವ ಕೃಷ್ಣಾ, ಘಟಪ್ರಭಾ; ಸೇತುವೆ ಮುಳುಗಡೆ, ನಡುಗಡ್ಡೆಯಿಂದ ಗರ್ಭಿಣಿಯರ ಸ್ಥಳಾಂತರ

Karnataka Rain News: ಕೃಷ್ಣಾ ನದಿಯಲ್ಲಿ ಮತ್ತೊಮ್ಮೆ ಪ್ರವಾಹದ ಪರಿಸ್ಥಿತಿ ಉದ್ಭವವಾಗಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಸುಕ್ಷೇತ್ರ ವೀರಭದ್ರ ದೇವಾಲಯ ಜಲಾವೃತಗೊಂಡಿದೆ. ರಾತ್ರಿ 11 ಗಂಟೆಗೆ ದೇವಸ್ಥಾ ಪ್ರಾಂಗಣದಲ್ಲಿ ಕೃಷ್ಣೆಯ ನೀರು ತುಂಬಿಕೊಂಡಿದೆ.

VISTARANEWS.COM


on

karnataka rain news yadgir
Koo

ಚಿಕ್ಕೋಡಿ: ಉತ್ತರ ಕರ್ನಾಟಕದಲ್ಲಿ (Uttara Karnataka) ಹೆಚ್ಚಿರುವ ಮಳೆಯ (Karnataka Rain News) ಪರಿಣಾಮ ಕೃಷ್ಣಾ (Krishna River) ಹಾಗೂ ಘಟಪ್ರಭಾ ನದಿಗಳಲ್ಲಿ (Ghataprabha river) ಪ್ರವಾಹ ಪರಿಸ್ಥಿತಿ (Flood situation) ಉಂಟಾಗಿದೆ. ಸೇತುವೆಗಳು ಮುಳುಗಿ ರಸ್ತೆಗಳು ಜಲಾವೃತಗೊಂಡು ಹಲವಾರು ನಡುಗಡ್ಡೆಗಳು ಸಂಪರ್ಕ ಕಳೆದುಕೊಂಡಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಹಲವು ನಡುಗಡ್ಡೆಗಳಿಂದ ಗರ್ಭಿಣಿಯರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.

ಕೃಷ್ಣಾ ನದಿಯಲ್ಲಿ ಮತ್ತೊಮ್ಮೆ ಪ್ರವಾಹದ ಪರಿಸ್ಥಿತಿ ಉದ್ಭವವಾಗಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಸುಕ್ಷೇತ್ರ ವೀರಭದ್ರ ದೇವಾಲಯ ಜಲಾವೃತಗೊಂಡಿದೆ. ರಾತ್ರಿ 11 ಗಂಟೆಗೆ ದೇವಸ್ಥಾ ಪ್ರಾಂಗಣದಲ್ಲಿ ಕೃಷ್ಣೆಯ ನೀರು ತುಂಬಿಕೊಂಡಿದೆ. ವೀರಭದ್ರ ಶಿವಲಿಂಗ ಜಲಾವೃತವಾಗಿದ್ದು, ಮೊಳಕಾಲು ಆಳದ ನೀರಿನಲ್ಲಿ ವೀರಭದ್ರ ದೇವರಿಗೆ ಮಂಗಳಾರತಿ ಮಾಡಲಾಯಿತು.

ಮಹಾರಾಷ್ಟ್ರ ಕರ್ನಾಟಕ ಗಡಿಯಲ್ಲಿ ಇರುವ ಸುಕ್ಷೇತ್ರಕ್ಕೆ ದಿನನಿತ್ಯ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆಯುತ್ತಾರೆ. ಕೃಷ್ಣಾ ನದಿಯ ನೀರು ತುಂಬಿರುವುದರಿಂದ ದೂರದಿಂದಲೇ ದರ್ಶನ ಪಡೆಯುತ್ತಿದ್ದಾರೆ.

ಗರ್ಭಿಣಿಯರ ಸ್ಥಳಾಂತರ

ಯಾದಗಿರಿ: ಕೃಷ್ಣಾ ನದಿಯ ಪ್ರವಾಹಕ್ಕೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೃಷ್ಣಾ ನದಿಯ ಮಧ್ಯ ಭಾಗದಲ್ಲಿರುವ ನೀಲಕಂಠರಾಯನ ಗಡ್ಡಿ ನಡುಗಡ್ಡೆಯಾಗಿದೆ. ನಡುಗಡ್ಡೆಯಲ್ಲಿದ್ದ ಗರ್ಭಿಣಿಯರನ್ನು ಆಚೆ ಸಂಬಂಧಿಕರ ಮನೆಗೆ ಸ್ಥಳಾಂತರಿಸಲಾಗಿದೆ.

ತಹಶೀಲ್ದಾರ ವಿಜಯಕುಮಾರ್ ಭೇಟಿ ನೀಡಿ ಗರ್ಭಿಣಿಯರ ಆರೋಗ್ಯ ತಪಾಸಣೆ ಮಾಡಿಸಿ ನಂತರ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ನಡುಗಡ್ಡೆಗೆ ತೆರಳಲು ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾದ ಸೇತುವೆ ಇದೆ. ಆದರೆ ಕೃಷ್ಣಾ ನದಿಗೆ ಹೆಚ್ಚು ನೀರು ಬಿಟ್ಟರೆ ಸೇತುವೆ ಮುಳುಗಡೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸಿ ಮೂವರು ಗರ್ಭಿಣಿಯರನ್ನು ಸ್ಥಳಾಂತರಿಸಲಾಗಿದೆ.

9 ವರ್ಷದ ಹಿಂದೆ ಹೀಗೆಯೇ ಕೃಷ್ಣಾ ನದಿ ಪ್ರವಾಹ ಬಂದಿದ್ದಾಗ, ಗರ್ಭಿಣಿಯಾಗಿದ್ದ ಇದೇ ಗ್ರಾಮದ ಯಲ್ಲವ್ವ ಎಂಬಾಕೆ ನದಿ ಪ್ರವಾಹ ಈಜಿ ದಡ ಸೇರಿದ್ದರು. ಮತ್ತೆ ಇಂತಹ ಘಟನೆ ಮರುಕಳಿಸದಂತೆ ಈಗಾಗಲೇ ಮುಂಜಾಗ್ರತೆ ವಹಿಸಿ ಗರ್ಭಿಣಿಯರ ಸ್ಥಳಾಂತರ ಮಾಡಿದೆ ಜಿಲ್ಲಾಡಳಿತ.

ಬಾಗಲಕೋಟೆ: ಘಟಪ್ರಭಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಹಿಡಕಲ್ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಘಟಪ್ರಭಾ ನದಿ ತುಂಬಿ ಹರಿಯುತ್ತಿದ್ದು, ಮುಧೋಳ ಬಳಿಯ ಯಾದವಾಡ ಸೇತುವೆ ಮುಳುಗಡೆಯಾಗಿದೆ.

ಸೇತುವೆ ಮೇಲೆ 2 ಅಡಿ ನೀರಿನ ಹರಿವಿದ್ದು, ಅದೇ ನೀರಲ್ಲೇ ವಾಹನಗಳು ಸಂಚರಿಸುತ್ತಿವೆ. ಇದು ಮುಧೋಳ ನಗರದಿಂದ ಗೋಕಾಕ ತಾಲ್ಲೂಕಿಗೆ ಸಂಪರ್ಕಿಸುವ ರಸ್ತೆಯಾಗಿದ್ದು, ಬ್ರಿಡ್ಜ್ ಮೇಲೆ ಹೆಚ್ಚಿನ ನೀರು ಬಂದಲ್ಲಿ ಯಾದವಾಡ, ಉತ್ತೂರು, ಚನ್ನಾಳ, ಮಿರ್ಜಿ, ರಂಜಣಗಿ, ಒಂಟಗೋಡಿ, ರೂಗಿ, ಹಲಕಿ, ನಿಂಗಾಪುರ, ಮೆಟಗುಡ್ಡ ಗ್ರಾಮ ಸಂಪರ್ಕ ಕಡಿತವಾಗಲಿವೆ.

ಮಟನ್‌ ಮಾರ್ಕೆಟ್‌ಗೆ ಘಟಪ್ರಭಾ ನೀರು

ಬೆಳಗಾವಿ: ಗೋಕಾಕದ ಮಟನ್ ಮಾರ್ಕೇಟ್‌ಗೆ ಘಟಪ್ರಭಾ ನದಿ ನೀರು ನುಗ್ಗಿದ್ದು, ಈ ಹಿನ್ನೆಲೆ ಗಾಡಿಯಲ್ಲಿಟ್ಟು ಮಟನ್ ಮಾರಾಟ ಮಾಡುತ್ತಿದ್ದ ವ್ಯಾಪಾರಸ್ಥರಿಗೆ ನಗರಸಭೆ ಸಿಬ್ಬಂದಿ ಆಕ್ಷೇಪ ವ್ಯಕ್ತಪಡಿಸಿದ ಕಾರಣ ನಗರಸಭೆ ಸಿಬ್ಬಂದಿ ಹಾಗೂ ವ್ಯಾಪಾರಸ್ಥರ ನಡುವೆ ವಾಗ್ವಾದ ಘಟಿಸಿತು.

ನೀರು ಬಂದಿರುವ ಪಕ್ಕದ ಜಾಗದಲ್ಲಿಯೇ ವ್ಯಾಪಾರಸ್ಥರು ಮಟನ್ ಮಾರಾಟ ಮಾಡುತ್ತಿದ್ದಾರೆ. ಬೇರೆ ಕಡೆ ಮಾರಾಟ ಮಾಡಿ ನೀರು ಬಂದಿರುವ ಕಡೆ ಬೇಡ ಎಂದು ನಗರಸಭೆ ಸಿಬ್ಬಂದಿ ಹೇಳಿದ್ದು, ನಮಗೆ ಬೇರೆ ಕಡೆ ಜಾಗವನ್ನಾದರೂ ತೋರಿಸಿ ಎಂದು ವ್ಯಾಪಾರಸ್ಥರು ಪಟ್ಟು ಹಿಡಿದರು.

ಇದನ್ನೂ ಓದಿ: Karnataka Rain News: ಎಡಕುಮೇರಿಯಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ, ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌

Continue Reading

ಅಂಕಣ

ಧವಳ ಧಾರಿಣಿ ಅಂಕಣ: ಕಿಷ್ಕಿಂಧಾ ಕಾಂಡ ಭಾಗ 2: ದೀಪದ ಬುಡದಲ್ಲಿ ಕತ್ತಲೆ

ಧವಳ ಧಾರಿಣಿ ಅಂಕಣ: ಸುಗ್ರೀವನಿಗೆ ಸಮಗ್ರ ಭೂಮಂಡಲದ ಪರಿಚಯ ಹೇಗಾಯಿತು ಎನ್ನುವ ಕುತೂಹಲ ರಾಮನಿಗೆ ಇತ್ತು. “ಕಥಂ ಭವಾನ್ವಿಜಾನೀತೇ ಸರ್ವಂ ವೈ ಮಣ್ಡಲಂ ಭುವಃ” ಇಡೀ ಭೂಮಂಡಲದ ಪರಿಚಯ ನಿನಗೆ ಹೇಗಾಯಿತು ಎಂದು ಕೇಳಿದಾಗ ಸುಗ್ರೀವ ರಾಮನಲ್ಲಿ ತನ್ನ ಭೂಮಂಡಲದ ಯಾತ್ರೆಯ ಕಥೆಯನ್ನು ಹಂಚಿಕೊಂಡ.

VISTARANEWS.COM


on

vali sugreeva ಧವಳ ಧಾರಿಣಿ
Koo

ವಾಲಿಯ ಪರಾಕ್ರಮಕ್ಕೆ ಋಷ್ಯಮೂಕ ಎರವಾಗದ ಬಗೆ

dhavala dharini by Narayana yaji

ಧವಳ ಧಾರಿಣಿ ಅಂಕಣ: ವಾನರೇನ್ದ್ರೋ ಮಹಾವೀರ್ಯಸ್ತೇಜೋವಾನಮಿತಪ್ರಭಃ
ಸತ್ಯಸನ್ಧೋ ವಿನೀತಶ್ಚ ಧೃತಿಮಾನ್ಮತಿಮಾನ್ಮಹಾನ್৷৷ಅ.72.13৷৷

ವಾನರೇಂದ್ರನಾದ ಅವನು (ಸುಗ್ರೀವನು), ಮಹಾವೀರ್ಯನು, ತೇಜಸ್ಸುಳ್ಳವನು, ಅಮಿತವಾದ ಕಾಂತಿಯುಳ್ಳವನು, ಸತ್ಯಸಂಧನು, ವಿನಯಶೀಲನು, ಧರ್ಯವಂತನು, ಬುದ್ಧಿವಂತನು, ಮಹಾತ್ಮನು, ಕಾರ್ಯದಕ್ಷನು, ವಾಗ್ಮಿಯು, ಮಹಾಬಲಿಷ್ಠನು ಮತ್ತು ಅತಿಶಯವಾದ ಪರಾಕ್ರಮವುಳ್ಳವನು.

ಮಹಾಕಾವ್ಯವನ್ನು ಖಂಡವಾಗಿ ಓದುವುದರಿಂದ ಅಥವಾ ಅದರ ಯಾವುದೋ ಒಂದು ಭಾಗದ ಕಥೆ ಜನಪ್ರಿಯವಾಗಿರುವುದರಿಂದ ಅದರಲ್ಲಿ ಬರುವ ಪಾತ್ರದ ಗುಣಗಳನ್ನೇ ಆ ಪಾತ್ರದ ನಿಜವಾದ ಗುಣಾವಗುಣಗಳೆಂದು ಜನಮಾನಸದಲ್ಲಿ ಬಿಂಬಿತವಾಗಿಬಿಡುತ್ತದೆ. ರಾಮಾಯಣದಲ್ಲಿ (Ramayana) ಬಹುಚರ್ಚಿವಾಗುವ ಸಂಗತಿ ಎಂದರೆ ವಾಲಿವಧಾ (Vali Vadha) ಪ್ರಕರಣ. ಇಲ್ಲಿ ಬರುವ ಮೂರು ಮುಖ್ಯಪಾತ್ರಗಳಲ್ಲಿ ಮೊದಲನೆಯದು ವಾಲಿ, ಎರಡನೆಯದು ಹನುಮಂತ (Hanuman) ನಂತರ ಸುಗ್ರೀವ (Sugreeva). ಈ ಮೂರೂ ಪಾತ್ರಗಳೂ ರಾಮನಲ್ಲಿ ಮುಖಾಮುಖಿಯಾಗುತ್ತವೆ. ಹನುಮಂತ ರಾಮನ ದಾಸನಾಗಿ ತನ್ನ ಜೀವನವನ್ನು ಸವೆಸಿದರೆ ಸುಗ್ರೀವ ರಾಮನಿಗೆ ಸ್ನೇಹಿತನಾಗಿ ಕಿಷ್ಕಿಂಧಾ ರಾಜ್ಯವನ್ನೂ, ಪತ್ನಿಯನ್ನೂ ಅಣ್ಣನಿಂದ ಪಡೆದುಕೊಳ್ಳುತ್ತಾನೆ. ಈ ಇಬ್ಬರ ನಡುವೆ ವಾಲಿ ರಾಮನಲ್ಲಿ ಕೇಳುವ ಪ್ರಶ್ನೆಗಳು ಅದಕ್ಕೆ ರಾಮ ಕೊಡುವ ಉತ್ತರಗಳು ನಿರಂತರವಾಗಿ ರಾಮನ ವ್ಯಕ್ತಿತ್ವಕ್ಕೆ ಸವಾಲುಗಳನ್ನು ಎಸೆಯುತ್ತಲೇ ಬಂದಿವೆ. ಇದಕ್ಕೆ ಕಾರಣ ಮಹಾಕಾವ್ಯಕ್ಕಿಂತ, ಅದನ್ನು ಆಧರಿಸಿ ಬರೆದ ರೂಪಕಗಳಾದ ನಾಟಕ, ಯಕ್ಷಗಾನ ಮೊದಲಾದವುಗಳು. ಭಟ್ಟತೌತನದ್ದೆಂದು ನಂಬಲಾದ ಒಂದು ಶ್ಲೋಕದಲ್ಲಿ ಕಾವ್ಯ ಮತ್ತು ನಾಟಕಗಳ ಕುರಿತು ಹೀಗೆ ಹೇಳಲಾಗಿದೆ.

ಅನುಭಾವವಿಭಾವಾನಾಂ ವರ್ಣನಾ ಕಾವ್ಯಮುಚ್ಯತೇ I
ತೇಷಾಮೇವ ಪ್ರಯೋಗಸ್ತು ನಾಟ್ಯಂ ಗೀತಾದಿರಂಜಿತಂ II

ಅನುಭಾವ ವಿಭಾವಗಳ ವರ್ಣನೆಗೆ ಕಾವ್ಯವೆಂದು ಹೆಸರು; ಇವುಗಳನ್ನೇ ಗಾನಾದಿಗಳಿಂದ ರಂಜನೆಗೊಳಿಸಿ ಆಡಿ ತೋರಿಸಿದರೆ ನಾಟ್ಯವಾಗುತ್ತದೆ. (ಕೃಪೆ:- ತೀನಂಶ್ರೀಯವರ ಭಾರತೀಯ ಕಾವ್ಯಮೀಮಾಂಸೆಯಿಂದ).

ಇಲ್ಲಿ ರಂಜನೆಗಾಗಿ ನಾಟಕಕಾರ ಕಾವ್ಯವನ್ನು ತನಗೆ ಬೇಕಾದ ರೀತಿಯಲ್ಲಿ ಬದಲಾವಣೆಯನ್ನು ಮಾಡಿಕೊಂಡರೆ ಅದು ನಾಟ್ಯವಾಗಿ ರಂಗದಮೇಲೆ ಬಂದಾಗ ಆ ಪಾತ್ರಗಳು ಮೂಲ ಕಾವ್ಯದ ಮೂಸೆಯಲ್ಲಿ ಇದ್ದಂತೆ ಮೂಡಿಬಂದವುಗಳು ಎಂದು ಅಂದುಕೊಳ್ಳುತ್ತೇವೆ.

ಅಪಾರೇ ಕಾವ್ಯಸಂಸಾರೆ ಕವಿರೇವ ಪ್ರಜಾಪತಿಃ
ಯಥಾಸ್ಮೈ ರೋಚತೇ ವಿಶ್ವಂ ತಥೇದಂ ಪರಿವರ್ತತೇ II

ಕಾವ್ಯವೇ ಇರಲಿ ನಾಟಕ ರೂಪಕಗಳೇ ಇರಲಿ, ಇಲ್ಲಿ ಕವಿಯೇ ಸೃಷ್ಟಿಕರ್ತ. ತನಗೆ ಹೇಗೆ ರುಚಿಸುವುದೋ ಹಾಗೇ ವಿಶ್ವವನ್ನು ರೂಪಾಂತರಗೊಳಿಸುತ್ತಾನೆ ಎಂದು ಆನಂದವರ್ಧನ ತನ್ನ ಧ್ವನ್ಯಾಲೋಕದಲ್ಲಿ ಹೇಳುವುದನ್ನು ಗಮನಿಸಬಹುದು. ಈ ರೂಪಾಂತರಗೊಳಿಸಿದುದರ ಪರಿಣಾಮವೇ ಮಹಾಕಾವ್ಯಗಳ ಪ್ರತಿನಾಯಕಪಾತ್ರಗಳು ಉದಾತ್ತೀಕರಣಗೊಂಡು ನಾಯಕ ಪಾತ್ರಗಳು ಅವುಗಳ ಎದುರು ಮಂಕಾಗಿಹೋಗಿದೆ. ಅಂತಹ ಪಾತ್ರಗಳಲ್ಲಿ ಸುಗ್ರೀವನೂ ಓರ್ವ.

ಮೇಲೆ ಹೇಳಿದ “ಹನ್ನೆರಡು ಗುಣಗಳು ಸುಗ್ರೀವನಲ್ಲಿ ಇದೆ ಹಾಗಾಗಿ ನೀನು ಆತನೊಡನೆ ಸ್ನೇಹವನ್ನು ಮಾಡು’ ಎಂದು ರಾಮನಿಗೆ ಹೇಳುವುದು ಕಬಂಧನೆನ್ನುವ ರಾಕ್ಷಸ. ಕಬಂಧ ಸುಗ್ರೀವನ ಗುಣಗಳ ಕುರಿತು ಹೇಳುವಾಗ ಬಹಳ ಮುಖ್ಯವಾದ ಸಂಗತಿಯೊಂದನ್ನು ತಿಳಿಸುವುದು “ಎಲ್ಲಿಯವರೆಗೆ ಸೂರ್ಯನ ಬೆಳಕು ಪ್ರಸರಿರುವುದೋ ಅಲ್ಲಿಯವರೆಗೂ ಈ ಭೂಮಂಡಲದಲ್ಲಿ ಸುಗ್ರೀವನಿಗೆ ತಿಳಿಯದ ಸಂಗತಿಗಳು ಯಾವುದೋ ಇಲ್ಲ. ಪತ್ನಿವಿಯೋಗದಿಂದ ದುಃಖಪಡುತ್ತಿರುವ ನಿನ್ನ ಈ ಶೋಕವನ್ನು ಪರಿಹರಿಸಲು ಅವನೇ ಸಮರ್ಥನು. ಸುಂದರಿಯಾದ ಸೀತೆಯು ಮೇರುಪರ್ವತದ ತುತ್ತತುದಿಯಲ್ಲಿರಲಿ, ಪಾತಾಳದಲ್ಲಿಯೇ ಆಶ್ರಯ ಪಡೆದಿರಲಿ, ಯಾವದಿಕ್ಕಿನಲ್ಲಿಯೇ ಇರಲಿ, ಮಹಾಕಾಯರಾದ ವಾನರನ್ನು ಎಲ್ಲದಿಕ್ಕುಗಳಿಗೂ ಕಳುಹಿಸಿ ಸೀತೆಯನ್ನು ಹುಡುಕಿಸಿಕೊಡಬಲ್ಲ. ರಾವಣನ ಅರಮನೆಯಲ್ಲಿ ನಿನ್ನ ಮೈಥಿಲಿ ಇರಲಿ, ಅಲ್ಲಿಯೂ ಆತ ಸೀತೆಯನು ಹುಡುಕಿಸಬಲ್ಲ. ಅಗತ್ಯಬಿದ್ದರೆ ರಾಕ್ಷಸರನ್ನು ಸಂಹರಿಸಬಲ್ಲ” ಎನ್ನುವ ಮಾತುಗಳು ಸುಗ್ರೀವನ ನಿಪುಣತೆಯನ್ನು ತಿಳಿಸುತ್ತದೆ. ಇಲ್ಲಿ ಬರುವ ಒಂದು ವಾಕ್ಯ “ಸುಗ್ರೀವನಿಗೆ ಸೂರ್ಯನ ಕಿರಣಬೀಳುವ ಎಲ್ಲಾ ಪ್ರದೇಶಗಳ ಪರಿಚಯವಿದೆ” ಎನ್ನುವ ಮಾತಿನ ಹಿಂದೆ ಒಂದು ಘಟನೆಯ ಹಿನ್ನೆಲೆಯಿದೆ. ಅದು ವಾಲಿ ಮತು ಸುಗ್ರೀವರ ಪ್ರಸಿದ್ಧವಾದ ಜಗಳ.

ವಾನರರು ಎಂದರೆ ಮಂಗಗಳು ಎನ್ನುವುದಕ್ಕಿಂತ ಮುಖ್ಯವಾಗಿ ಅವರೊಂದು ಜನಾಂಗವಾಗಿರಬಹುದು ಎನ್ನುವ ವಿವರಣೆ ಕೆಲವುಕಡೆ ಇದೆ. ವಾಲ್ಮೀಕಿರಾಮಾಯಣದಲ್ಲಿ ಇದಕ್ಕೆ ಪುಷ್ಟಿಕೊಡುವ ಕೆಲಶ್ಲೋಕಗಳು ಇದೆ. ಆದರೂ ಹೆಚ್ಚಿನ ಕಡೆಯಲ್ಲಿ ಅವರನ್ನು ವಾನರರು, ಕಪಿಗಳು ಎಂದೆಲ್ಲ ವರ್ಣಿಸಿರುವುದರಿಂದ ಅವರು ಯಾವುದೋ ಒಂದು ಬುಡಕಟ್ಟು ಜನಾಂಗವೆನ್ನುವದನ್ನು ಸಿದ್ಢಪಡಿಸಲು ಸಾಕಾಗುವುದಿಲ್ಲ. ಹಾಗಂತ ಅಲ್ಲವೆಂದು ಹೇಳುವಂತೆಯೂ ಇಲ್ಲ. ವಾನರರ ಹಿನ್ನೆಲೆಯನ್ನು ಗಮನಿಸುವಾಗ ವಾಲಿ ಮತ್ತು ಸುಗ್ರೀವ ಇವರೆಲ್ಲರೂ ಬ್ರಹ್ಮನಿಗೆ ನೇರ ಸಂಬಂಧವುಳ್ಳವರು. ಅವರ ತಂದೆ ಋಕ್ಷರಜಸ್ ಎನ್ನುವಾತ. ಬ್ರಹ್ಮನೊಮ್ಮೆ ಮೇರುಪರ್ವತದಲ್ಲಿ ತಪಸ್ಸನ್ನು ಆಚರಿಸುವಾಗ ಆತನ ಕಣ್ಣಿನಿಂದ ಬಿದ್ದ ಒಂದು ಹನಿ ವಾನರರೂಪದ ಪುರಷಾಕಾರ ತಾಳಿತು. ಅಲ್ಲಿಯೇ ಆತ ವೇದಗಳನ್ನು ಕಲಿತ. ಒಂದು ದಿವಸ ಆತ ಮೇರು ಪರ್ವತದಲ್ಲಿ ತಿರುಗಾಡುತ್ತಿರುವಾಗ ಸರೋವರವೊಂದರಲ್ಲಿ ತನ್ನ ಪ್ರತಿಬಿಂಬವನ್ನು ನೋಡಿ, ಯಾರೋ ಬೇರೆಯವನೆಂದು ಭಾವಿಸಿ ಅವನನ್ನುಹಿಡಿಯಲು ಸರೋವರದೊಳಗೆ ಧುಮುಕಿದ. ಅಲ್ಲಿಂದ ಮೇಲೆ ಬರುವಾಗ ಆತ ಸುಂದರಿಯಾದ ಸ್ತ್ರೀರೂಪವನ್ನು ತಾಳಿದ್ದ. ಸಂಜೆಯಾಗುತ್ತಿತ್ತು. ಅಸ್ತಮಿಸುತ್ತಿರುವ ಸೂರ್ಯ ಮತ್ತು ಬ್ರಹ್ಮನ ಸಂದರ್ಶನಕ್ಕಾಗಿ ಹೋಗುತ್ತಿರುವ ಇಂದ್ರ ಇಬ್ಬರೂ ಆತನನ್ನು ನೋಡಿ ಮೋಹಗೊಂಡರು. ಇಂದ್ರನ ತೇಜಸ್ಸು ಆತನ ಬಾಲದ ಮೇಲೆಯೂ, ಸೂರ್ಯನ ತೇಜಸ್ಸು ಕುತ್ತಿಗೆಯ ಮೇಲೂ ಬಿತ್ತು. ಅದರ ಪರಿಣಾಮ ಬಾಲದಿಂದ ವಾಲಿ, ಗ್ರೀವ-ಕುತ್ತಿಗೆಯಿಂದ ಸುಗ್ರೀವ ಜನಿಸಿದರು. ಮಾರನೆಯ ದಿನ ಬೆಳಗಾಗುತ್ತಿರುವಂತೆ ಋಕ್ಷರಜಸ್ ಪುನಃ ಗಂಡಸಾದ. ಆತನ ಅವಸ್ಥೆಯನ್ನು ಗಮನಿಸಿದ ಬ್ರಹ್ಮ, ಋಕ್ಷರಜಸ್ಸನಿಗೆ ಅಲ್ಲಿಂದ ಕಿಷ್ಕಿಂಧೆಗೆ ಹೋಗಿ ರಾಜ್ಯಭಾರಮಾಡುವಂತೆ ಅಪ್ಪಣೆಯಿತ್ತ.

ಆತ ತನ್ನ ಮಕ್ಕಳಾದ ವಾಲಿ ಸುಗ್ರೀವರೊಂದಿಗೆ ಕಿಷ್ಕಿಂಧೆಗೆ ಬಂದು ವಾನರರ ಸಾಮ್ರಾಜ್ಯವನ್ನು ಸ್ಥಾಪಿಸಿದ. ಕೆಲಕಾಲದ ನಂತರ ವಾಲಿಗೆ ಪಟ್ಟವನ್ನು, ಸುಗ್ರೀವನಿಗೆ ಯುವರಾಜ ಪಟ್ಟವನ್ನು ಕಟ್ಟಿ ತಪಸ್ಸಿಗೆ ತೆರಳಿದ. ವಾಲಿ ಕಿಷ್ಕಿಂಧೆಯಲ್ಲಿ ರಾಜನಾದ ಮೇಲೆ ಚದುರಿಹೋಗಿದ್ದ ವಾನರರನ್ನೆಲ್ಲಾ ಒಂದುಗೂಡಿಸಿ ಬಲಿಷ್ಠವಾದ ಸಾಮ್ರಾಜ್ಯವನ್ನು ಕಟ್ಟಿದ. ವಾನರರ ಆಚಾರಗಳೆಲ್ಲವೂ ಮನುಷ್ಯರ ನಡವಳಿಕೆಯಂತೆಯೇ ಇದ್ದವು. ಪಟ್ಟಾಭಿಷೇಕ, ಪಾಣಿಗ್ರಹಣಪೂರ್ವಕ ವಿವಾಹ, ಕುಟುಂಬಪದ್ಧತಿ, ರಾಜನೀತಿ ಇವೆಲ್ಲದರಲ್ಲಿಯೂ ಅವರ ಆಚಾರಗಳು ಅಗಸ್ತ್ಯರಿಂದ ಪ್ರಭಾವಿತರಾಗಿರಬಹುದು ಎನಿಸುತ್ತದೆ. ಸುಗ್ರೀವ ಅನೇಕ ಸಾರಿ ಅಗಸ್ತ್ಯರ ಆಶ್ರಮದ ವಿಷಯವನ್ನು ಪ್ರಸ್ತಾಪಿಸುತ್ತಾನೆ. ಸೀತಾನ್ವೇಷಣೆಗೆ ವಾನರರನ್ನು ಕಳಿಸುವಾಗ ಅಗಸ್ತ್ಯರ ಆಶ್ರಮದ ಸಮೀಪ ಯಾವಕಾರಣಕ್ಕೂ ಅಪಮಾನಕ್ಕೆ ಕಾರಣವಾಗಬಹುದಾದ ಕಾರ್ಯವನ್ನು ಎಸಗಬೇಡಿ ಎನ್ನುತ್ತಾನೆ. ಅವರ ಆಶ್ರಮದೆಡೆಗೆ ರಾಕ್ಷಸರು ಅಪ್ಪಿತಪ್ಪಿಯೂ ಕಾಲಿಡಿಸುತ್ತಿರಲಿಲ್ಲ. ಮುನಿಗಳು ರಾಕ್ಷಸರನ್ನು ಜನಸ್ಥಾನದಿಂದ ನಿಗ್ರಹಿಸಲು ವಾನರರನ್ನು ಉಪಯೋಗಿಸಕೊಳ್ಳಬೇಕೆಂದಿದ್ದರೇನೋ; ಆದರೆ ವಾಲಿ ಮತ್ತು ರಾವಣರ ಗೆಳೆತನದಿಂದಾಗಿ ಕಾರ್ಯಸಾಧ್ಯವಾಗದೇ ಹೋಗಿರಬೇಕು. ಈ ಹಂತದಲ್ಲಿಯೇ ಅಗಸ್ತ್ಯರು ಮತ್ತು ವಾನರರಿಗೆ ಸಂಪರ್ಕ ದೂರವಾಯಿತು. ಪರಿಣಾಮ ವಾನರರಿಗೆ ಅರ್ಷೇಯ ಮತ್ತು ಬುಡಕಟ್ಟು ಎರಡೂ ಸೇರಿದ ಅನುಕೂಲಕರ ಮಿಶ್ರ ಪದ್ಧತಿಗಳ ಆಚರಣೆ ರೂಢಿಗೆಬಂತು ಎನ್ನಬಹುದು.

ವಾನರರ ಸಾಮ್ರಾಜ್ಯವೆನ್ನುವುದು ಕೇವಲ ಕಿಷ್ಕಿಂಧೆಗೆ ಮಾತ್ರ ಸೀಮಿತವಾಗಿತ್ತೇ ಎನ್ನುವ ಪ್ರಶ್ನೆಗೆ ಉತ್ತರ ರಾಮಾಯಣದಲ್ಲಿಯೇ ಸಿಗುತ್ತದೆ. ವಾನರರ ಸಾಮ್ರಾಜ್ಯ ಮಹೇಂದ್ರಪರ್ವತ, ಹಿಮವತ್ಪರ್ವತ, ಕೈಲಾಸ ಪರ್ವತ, ವಿಂಧ್ಯಪರ್ವತ ಮತ್ತು ಬಿಳಿಯ ಬಣ್ಣದ ಶಿಖರಗಳಿರುವ ಮಂದರ ಪರ್ವತ ಇಲ್ಲೆಲ್ಲ ಹಂಚಿಹೋಗಿತ್ತು. ಇವುಗಳಲ್ಲಿ ಮಂದರ ಪರ್ವತ ಯಾವುದಾಗಿತ್ತು ಎನ್ನುವುದು ಸಿಗುತ್ತಿಲ್ಲ. (ಇಂಡೋನೇಷ್ಯಾದ ಬಾಲಿ ದ್ವೀಪದಲ್ಲಿರುವವರು ತಮ್ಮದು ವಾಲಿ ಹುಟ್ಟಿದ ಪ್ರದೇಶ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ. ಅಲ್ಲಿನ ದ್ವೀಪಗಳು ಪರ್ವತ ಮತ್ತು ದಿಣ್ಣೆಗಳಿಂದ ತುಂಬಿದೆ. ಉಲುವಾಟು ದೇವಾಲಯದಲ್ಲಿ ಪ್ರತಿನಿತ್ಯ ರಾಮಾಯಣ ನೃತ್ಯ ನಡೆಯುತ್ತದೆ. ಇಲ್ಲಿ ವಿಷಯಾಂತರವಾಗುವುದರಿಂದ ಆ ಕುರಿತು ಹೆಚ್ಚು ವಿವರಿಸುವುದಿಲ್ಲ). ಈ ಪ್ರದೇಶದ ವಾನರರ ಪ್ರಬೇಧಗಳ ವಿಷಯ ಕಿಷ್ಕಿಂಧಾ ಕಾಂಡದ್ದುದ್ದಕ್ಕೂ ಅಲ್ಲಲ್ಲಿ ವಿವರಿಸಿದೆ. ಅವರೆಲ್ಲರೂ ಕಾಮರೂಪಿಗಳಾಗಿದ್ದರು. ಮಹಾಬಲಿಷ್ಠರಾಗಿದ್ದರು. ಪರ್ವತಗಳಲ್ಲಿ ವಾಸಿಸುತ್ತಿದ್ದರು ಮತ್ತು ಅವರ್ಯಾರೂ ಮಂಸಾಹಾರಿಗಳಾಗಿರಲಿಲ್ಲ. ಅವರ ಭಾಷೆಗಳು ಸಂಸ್ಕೃತವನ್ನು ಹೋಲುತ್ತಿರುವ ಪ್ರಾಕೃತವಾಗಿತ್ತು. ಆದರೆ ವಾನರ ಮತ್ತು ಋಕ್ಷಪ್ರಮುಖರಿಗೆ ಗೀರ್ವಾಣ ಭಾಷೆ ಚನ್ನಾಗಿ ಬರುತ್ತಿತ್ತು ಎನ್ನುವುದು ಬಲುಮಹತ್ವವಾದ ಸಂಗತಿ.

ಹನುಮಂತ ಅಶೋಕವನದಲ್ಲಿ ಸೀತೆಯೊಡನೆ ತಾನು “ವಾಚಂ ಚೋದಾಹರಿಷ್ಯಾಮಿ ಮಾನಿಷೀಮಿಹ ಸಂಸ್ಕೃತಾಂ- ಸೀತೆಯಲ್ಲಿ ತಾನು ಮನುಷ್ಯರಾಡುವ ಸಂಸ್ಕೃತದಲ್ಲಿಯೇ ಮಾತಾಡುತ್ತೇನೆ, ದ್ವಿಜರಾಡುವ ಸಂಸ್ಕೃತದಲ್ಲಿ ಮಾತನ್ನಾಡಿಸಿದರೆ ಆಕೆ ತನ್ನನ್ನು ರಾವಣನೆಂದೇ ತಿಳಿದು ಭಯಪಡುತ್ತಾಳೆ” ಎನ್ನುತ್ತಾನೆ. ಈ ಎಲ್ಲದರೆ ಅರ್ಥ ವಾನರರೆಂದರೆ ಬುಡಕಟ್ಟು ಜನಾಂಗವೆನ್ನುವುದನ್ನು ಪುಷ್ಟೀಕರಿಸುತ್ತದೆ. ಇನ್ನು ಬಾಲಗಳ ವಿಷಯಕ್ಕೆ ಬಂದರೆ ಯುದ್ಧಕಾಂಡದಲ್ಲಿ ಕೆಂಪು, ಹಳದಿ, ಬಿಳಿ, ಮಿಶವರ್ಣದವು ಮೊದಲಾದ ಬಾಲಗಳಿರುವ ವಿಷಯ ಬರುತ್ತದೆ. ಕೆಲವು ವಾನರರು ಗೋಲಾಂಗುಲ- ಹಸುವಿನ ಬಾಲದ ಪುಚ್ಛವನ್ನು ಹೊಂದಿದವು, ಮತ್ತೆ ಕೆಲವು ಕಪಿಗಳು ಎಂದಿದೆ. ರಾಮ ಯುದ್ಧಕಾಂಡದಲ್ಲಿ ಇನ್ನು ನೀವು ಮನುಷ್ಯರೂಪದಲ್ಲಿ ಕಾಣಿಸಿಕೊಳ್ಳದೇ ವಾನರರ ಚಿನ್ಹೆ, ಲಕ್ಷಣದಲ್ಲೇ ಇರತಕ್ಕದ್ದು ಎನ್ನುತ್ತಾನೆ. ಸುಗ್ರೀವ ತನ್ನವರೆಲ್ಲರನ್ನೂ ಕಾಮರೂಪಿಗಳು ಎಂದು ಮೊದಲೇ ವರ್ಣಿಸಿದ್ದಾನೆ.

ವಿಶೇಷವೆಂದರೆ ವಾನರರ ಸ್ತ್ರೀಯರಿಗೆ ಬಾಲವಿರಲಿಲ್ಲ. ತಾರೆಯ ಸೌಂದರ್ಯದ ಕುರಿತು “ತಾರಾ ತಾರಾಧಿಪ ನಿಭಾನನಾ- ತಾರಾಧಿಪನಾದ ಚಂದ್ರನ ಕಾಂತಿಗೆ ಸಮಾನವಾದ ಮುಖಕಾಂತಿಯಿಂದ ಬೆಳಗುತ್ತಿದ್ದ ತಾರೆಯು” ಎಂದು ವರ್ಣಿಸಲಾಗಿದೆ. ಈ ಎಲ್ಲ ಹಿನ್ನೆಲೆಯಲ್ಲಿ ಗೋಲಾಂಗೂಲವಾಗಲೀ, ಬಣ್ಣಬಣ್ಣದ ಬಾಲಗಳ ಪುಚ್ಛಗಳು ಅವರ ಚಿನ್ಹೆಗಳು ಎಂದು ದೇವದತ್ತ ಪಟ್ಟನಾಯಕ ಮೊದಲಾದ ವಿದ್ವಾಂಸರು ತರ್ಕಿಸುತ್ತಾರೆ. ವಿಕಾಸವಾದದ ಹಾದಿಯಲ್ಲಿ ಗಮನಿಸುವಾಗ ವಿಕಸನವಾದ ಅಂಗಗಳು ಮತ್ತೆ ಪೂರ್ವ ಸ್ವರೂಪಕ್ಕೆ ತಿರುಗುವುದಿಲ್ಲ. ಹಾಗಾಗಿ ಮಾತನ್ನಾಡಬಲ್ಲ ಮಂಗಗಳು ಮತ್ತೆ ಮಂಗನ ಭಾಷೆಯನ್ನು ಮಾತಾಡುವುದಿಲ್ಲ. ಈ ಎಲ್ಲ ಕಾರಣಗಳಿಂದ ಇನ್ನು ಋಕ್ಷ ಎಂದರೆ ಕರಡಿ. ವಾಲಿ ಸುಗ್ರೀವರ ತಂದೆ ತಾಯಿಯಾದ ಋಕ್ಷ ಕರಡಿಯಾಗಿ ಆತನ ಮಕ್ಕಳು ಮಂಗಗಳ ಜಾತಿಗೆ ಸೇರಿದವು ಎನ್ನುವುದು ಅಸಾಧ್ಯವೂ ಹೌದು. ಈ ಎಲ್ಲ ಹಿನ್ನೆಲೆಯಲ್ಲಿ ವಾಲಿ ಸುಗ್ರೀವ ಎನ್ನುವ ಸಹೋದರರ ವಿಷಯದಲ್ಲಿ ಹೋಲಿಸಿದಾಗ ಇವರು ವನದಲ್ಲಿರುವ ನರರು ಅಥವಾ Humanoid ಜಾತಿಯ ಪಳೆಯುಳಿಕೆಗಳು ಸಿಕ್ಕಿರುವುದರಿಂದ ಆ ಜಾತಿಗೆ ಸೇರಿರಬಹುದೆನ್ನುವುದು ಸೂಕ್ತ (Morphologically -similar to human but not identical).

ಪ್ರಪಂಚದಲ್ಲೆಲ್ಲ ಹರಡಿದ್ದ ವಾನರ ಸಾಮ್ರಾಜ್ಯವನ್ನು ವಾಲಿ ಮತ್ತು ಸುಗ್ರೀವರು ಕಿಷ್ಕೆಂಧೆಯಿಂದ ನಿಯಂತ್ರಿಸುತ್ತಿದ್ದರು. ವಾಲಿ ಮಹಾ ಪರಾಕ್ರಮಿಯಾಗಿದ್ದ. ತನ್ನ ತಮ್ಮನಾದ ಸುಗ್ರೀವನಲ್ಲಿ ಅಮಿತವಾದ ಪ್ರೀತಿಯೂ ಆತನಿಗೆ ಇತ್ತು. ತಾನೇ ಮುಂದೆ ನಿಂತು ತಾರನ ಮಗಳಾದ ರುಮೆಯನ್ನು ಸುಗ್ರೀವನಿಗೆ ಮದುವೆ ಮಾಡಿಸಿದ್ದನು. ಸಾಹಸಿಯಾಗಿದ್ದರೂ ಆತ ಅನ್ಯಾಕ್ರಮಣವನ್ನು ಮಾಡುತ್ತಿರಲಿಲ್ಲ. ವಾಲಿಯ ದೊಡ್ಡದಾದ ದೌರ್ಬಲ್ಯವೆಂದರೆ ಹೆಣ್ಣಿನ ಮೋಹ. ಒಮ್ಮೆ ಮಾಯಾವಿ ಎನ್ನುವ ರಾಕ್ಷಸನಿಗೂ ಮತ್ತು ವಾಲಿಗೂ ಹೆಣ್ಣಿನ ವಿಷಯದಲ್ಲಿ ಮಹಾವೈರವುಂಟಾಯಿತು.

ಮಾಯಾವೀ ನಾಮ ತೇಜಸ್ವೀ ಪೂರ್ವಜೋ ದುನ್ದುಭೇಃ ಸುತಃ.
ತೇನ ತಸ್ಯ ಮಹದ್ವೈರಂ ಸ್ತ್ರೀಕೃತಂ ವಿಶ್ಶ್ರುತಂ ಪುರಾ IIಕಿ. 9-4II

ದುಂದುಭೀರಾಕ್ಷಸನ ಅಣ್ಣನಾದ ಮಯಾಸುರನ ಮಗನಾದ ಮಾಯಾವಿ ಎನ್ನುವವ ಮಹಾಬಲಿಷ್ಠನಾಗಿದ್ದನು. ಅವನಿಗೂ ವಾಲಿಗೂ ಹೆಂಗಸೊಬ್ಬಳ ವಿಷಯದಲ್ಲಿ ಮಹಾವೈರವುಂಟಾಯಿತು. ಹೀಗೆ ಜಗಳಕ್ಕೆ ಕಾರಣವಾದ ಹೆಂಗಸು ಯಾರೆನ್ನುವ ವಿವರ ರಾಮಾಯಣದಲ್ಲಿಲ್ಲ. ಇದು ವಾಲಿಗಿರುವ ಸ್ತ್ರೀಯರ ಮೇಲಿರುವ ದೌರ್ಬಲ್ಯವನ್ನು ಸ್ಪಷ್ಟವಾಗಿ ತಿಳಿಸುತ್ತದೆ. ಈ ವೈರ ಪ್ರಕರಣ ಎಲ್ಲಿಯೋ ಬೇರೆಕಡೆ ಆಗಿರಬೇಕು, ಅದರಲ್ಲಿ ವಾಲಿ ಮಾಯಾವಿ ಕಣ್ಣುಹಾಕಿದ್ದ ಹೆಂಗಸನ್ನು ತಾನು ಅನುಭವಿಸಿರಬೇಕು. ಆ ಸೇಡನ್ನು ತೀರಿಸಿಕೊಳ್ಳಲು ಮಾಯಾವಿ ರಾತ್ರಿಕಾಲದಲ್ಲಿ ಕಿಷ್ಕಿಂಧಾ ಪಟ್ಟಣಕ್ಕೆ ಬಂದು ವಾಲಿಯನ್ನು ಯುದ್ಧಕ್ಕೆ ಆಹ್ವಾನಿಸಿದ. ವಾಲಿ ಹುಂಬತನದಿಂದ ಆತನೊಡನೆ ಯುದ್ಧಕ್ಕೆ ಧಾವಿಸಿದ. ಅವನನ್ನು ನೋಡಿ ಭಯಗೊಂಡು ಮಾಯಾವಿ ಪಲಾಯನ ಮಾಡಿ ಬಹುದೂರಕ್ಕೆ ಓಡಿದರೆ ಆತನನ್ನು ಅಟ್ಟಿಸಿಕೊಂಡು ವಾಲಿಯೂ ಅವನನ್ನು ಅನುಸರಿಸಿ ಸುಗ್ರೀವನೂ ಧಾವಿಸಿದರು.

ರಾಕ್ಷಸ ಬಹುದೂರಕ್ಕೆ ಓಡುತ್ತಾ ಹೋಗಿ ಪರ್ವತದ ಗುಹೆಯೊಂದನ್ನು ಹೊಕ್ಕ. ಅದು ಮಾಯಾವಿಯ ಪಟ್ಟಣವಾಗಿತ್ತು. ವಾಲಿ ಆತನನ್ನು ಕೊಲ್ಲುತ್ತೇನೆ ಎಂದು ಗುಹೆಯನ್ನು ಹೊಕ್ಕಿರುವುದು ಮತ್ತು ಹೊರಗಡೆ ಗುಹಾದ್ವಾರವನ್ನು ಕಾಯಲು ಸುಗ್ರೀವನನ್ನು ನಿಲ್ಲಿಸಿದ ಕಥೆ ಎಲ್ಲರಿಗೂ ಗೊತ್ತು. ಒಂದು ವರ್ಷವಾದರೂ ವಾಲಿ ಬರದೇ ಇರುವುದನ್ನು ಗಮನಿಸಿದ ಸುಗ್ರೀವ ಕಳವಳಗೊಂಡ. ಇದ್ದಕ್ಕಿದ್ದಂತೆ ರಕ್ತ ನೊರೆನೊರೆಯಾಗಿ ಹೊರಬಂದಾಗ ಅದು ವಾಲಿಯೇ ಇರಬೇಕು ಎಂದುಕೊಂಡ ಸುಗ್ರೀವ ಗುಹಾದ್ವಾರಕ್ಕೆ ದೊಡ್ಡದಾದ ಬಂಡೆಯನ್ನು ಮುಚ್ಚಿ, ಅಣ್ಣ ತೀರಿಕೊಂಡ ಎಂದು ಆತನಿಗೆ ತರ್ಪಣವನ್ನೂ ಬಿಟ್ಟು ಕಿಷ್ಕಿಂಧೆಗೆ ಮರಳಿ ಸುಮ್ಮನಿದ್ದ. ಮಂತ್ರಿಗಳು ಪ್ರಯತ್ನಪೂರ್ವಕವಾಗಿ ಈ ವಿಷಯತಿಳಿದುಕೊಂಡರು. ಸುಗ್ರೀವನನ್ನೇ ರಾಜನನ್ನಾಗಿ ಅಭಿಷೇಕಮಾಡಿದರು. ತಾರೆ ಮತ್ತು ರುಮೆಯ ಸಹಿತ ಸುಗ್ರೀವ ರಾಜನಾಗಿ ಆಳತೊಡಗಿದ. ವಾಲಿ ಪುನಃ ಬಂದರೆ ಈ ದೃಶ್ಯವನ್ನು ನೋಡಿ ಇದೆಲ್ಲ ಸುಗ್ರೀವನಿಗೆ ರಾಜ್ಯದ ಆಸೆಗಾಗಿ ಮಾಡಿದ ಬಂಡಾಯವೆಂದು ಅಂದುಕೊಂಡವನೇ ಆತನನ್ನು ಕೊಲ್ಲಲೆಂದು ಮೈಮೇಲೆ ಏರಿಬಂದ.

ಸುಗ್ರೀವನಲ್ಲಿ ಈ ಲೇಖನದ ಮೊದಲು ತಿಳಿಸಿದ ಗುಣಗಳಿರುವಂತೆಯೇ ವಾನರಸಹಜವಾದ ಅವಸರದ ಗುಣಗಳೂ ಇದ್ದವು. ಅದರಿಂದಲೇ ಆತ ತೊಂದರೆಗೆ ಸಿಕ್ಕುಬಿದ್ದಿದ್ದು ಎನ್ನುವುದನ್ನು ಅಲ್ಲಗಳೆಯುವಂತಿಲ್ಲ. ಮಂಗೋಪಿಯಾದ ವಾಲಿಗೆ ಇಷ್ಟೇ ಸಾಕಾಯಿತು. ಆತ ಸುಗ್ರೀವನನ್ನು ಕೊಂದೇ ತೀರುತ್ತೇನೆ ಎಂದು ಅಟ್ಟಿಸಿಕೊಂಡು ಹೋದ. ಆತನ ಪತ್ನಿಯಾದ ರುಮೆಯನ್ನು ಬಲತ್ಕಾರದಿಂದ ಇಟ್ಟುಕೊಂಡ. ಜೀವ ಉಳಿಸಿಕೊಳ್ಳಲು ಸುಗ್ರೀವ ಓಡುವುದೂ, ವಾಲಿ ಆತನನ್ನು ಮುಗಿಸಿಯೇ ಬೀಡುವೆನೆಂದು ಬೆನ್ನಟ್ಟಿ ಬರುವುದೂ ನಡೆದಾಗ ಸುಗ್ರೀವ ಆಕಾಶಕ್ಕೆ ಹಾರಿದ. ಭೂಮಿ ಆತನಿಗೆ,

ಆದರ್ಶತಲಸಙ್ಕಾಶಾ ತತೋ ವೈ ಪೃಥಿವೀ ಮಯಾ.
ಅಲಾತಚಕ್ರಪ್ರತಿಮಾ ದೃಷ್ಟಾ ಗೋಷ್ಪದವತ್ತದಾ৷৷ಕಿ.46.13৷৷

ಅಲಾತಚಕ್ರದಂತೆ (ಬೆಂಕಿಹಚ್ಚಿದ ಕೊಳ್ಳಿಯನ್ನು ತಿರುಗಿಸಿದಾಗ ಕಾಣುವ ಚಕ್ರದಂತೆ) ಗೋಪಾದದಷ್ಟು ಚಿಕ್ಕದಾಗಿ ಕಂಡಿತು ಎನ್ನುತ್ತಾನೆ. ಅಂತರಿಕ್ಷದಿಂದ ಭೂಮಿಯನ್ನು ನೋಡಿದಾಗ ಭೂಮಿಕಾಣಿಸುವ ಬಗೆಯನ್ನು ಇಲ್ಲಿ ವರ್ಣಿಸಲಾಗಿದೆ. ಆತನ ಜೊತೆಯಲ್ಲಿ ಹನುಮಂತನೂ ಇದ್ದ. ಹೀಗೆ ವಾಲಿಯ ಭಯದಲ್ಲಿ ಅವರು ಪ್ರಪಂಚವನ್ನೆಲ್ಲಾ ಸುತ್ತಿ ಸುತ್ತಿ ಸಾಗುತ್ತಿರುವಾಗ ಬದುಕುವ ಸಾಧ್ಯತೆಯನ್ನೇ ಬಿಟ್ಟ. ಹೀಗೆ ಢಾವಿಸುವಾಗ ಇಡೀ ಭೂಮಂಡಲವನ್ನೇ ಅನೇಕ ಸಾರೆ ಪೂರ್ವದಿಂದ ಪಶ್ಚಿಮಕ್ಕೂ ಉತ್ತರದಿಂದ ದಕ್ಷಿಣಕ್ಕೂ, ಹಿಮಾಲಯದಿಂದ ಉತ್ತರಕುರು ಪ್ರದೇಶಕ್ಕೂ, ಹೀಗೆ ಭೂಮಿಯ ಎಲ್ಲಿಯಾದರೂ ತನಗೆ ಆಶ್ರಯಸಿಗುವುದೋ ಎಂದು ಹುಡುಕಾಡಿದ. ಅಲ್ಲಿಗೂ ಅವನನ್ನು ಕೊಲ್ಲಲು ವಾಲಿ ಘರ್ಜಿಸುತ್ತಾ ಬಂದಾಗ ಬದುಕುವ ಆಸೆಯನ್ನೇ ಬಿಟ್ಟ. ಪ್ರಾಣರಕ್ಷಣೆಗಾಗಿ ಭೂಮಂಡಲದ ಎಲ್ಲಾ ಸ್ಥಳವನ್ನೂ ಅಲೆದಿದ್ದ. ಅಂತಹ ಹೊತ್ತಿನಲ್ಲಿ ಹನುಮಂತ ಆತನಿಗೆ ಋಷ್ಯಮೂಕ ಪರ್ವತದ ಕಥೆಯನ್ನು ಹೇಳಿ ಅಲ್ಲಿಗೆ ವಾಲಿ ಬರುವುದಿಲ್ಲ: ಮತಂಗ ಮುನಿಗಳು ವಾಲಿ ಅಥವಾ ಆತನ ಮಂತ್ರಿಗಳೇನಾದರೂ ಋಷ್ಯಮೂಕ ಪರ್ವತಕ್ಕೆ ಬಂದರೆ ಆತನ ತಲೆಯು ನೂರು ಹೋಳಾಗಲಿ ಎನ್ನುವ ಶಾಪಕೊಟ್ಟ ವಿಷಯವನ್ನು ತಿಳಿಸಿದ. ಆ ಪ್ರದೇಶಕ್ಕೆ ವಾಲಿ ಬರಲಾರದ ಕಾರಣ ಅಲ್ಲಿ ಮಾತ್ರ ಸುರಕ್ಷಿತವಾಗಿ ಇರಬಹುದು ಎಂದು ಹೇಳಿದಾಗ, ಲಗುಬಗೆಯಿಂದ ಮತಂಗಮಹರ್ಷಿಗಳ ಆಶ್ರಮಮಂಡಲದಲ್ಲಿ ಉಳಿದುಕೊಂಡ.

ಸುಗ್ರೀವನಿಗೆ ಸಮಗ್ರ ಭೂಮಂಡಲದ ಪರಿಚಯ ಹೇಗಾಯಿತು ಎನ್ನುವ ಕುತೂಹಲ ರಾಮನಿಗೆ ಇತ್ತು. “ಕಥಂ ಭವಾನ್ವಿಜಾನೀತೇ ಸರ್ವಂ ವೈ ಮಣ್ಡಲಂ ಭುವಃ” ಇಡೀ ಭೂಮಂಡಲದ ಪರಿಚಯ ನಿನಗೆ ಹೇಗಾಯಿತು ಎಂದು ಕೇಳಿದಾಗ ಸುಗ್ರೀವ ರಾಮನಲ್ಲಿ ತನ್ನ ಭೂಮಂಡಲದ ಯಾತ್ರೆಯ ಕಥೆಯನ್ನು ಹಂಚಿಕೊಂಡ. ಪ್ರಚಲಿತದಲ್ಲಿರುವಂತೆ ಆತ ಸೂರ್ಯನಲ್ಲಿ ಆಶ್ರಯ ಕೋರಿ ಆತನ ಬೆನ್ನ ಹಿಂದೆ ಅಡಗಿಕೊಂಡಿದ್ದ ಎನ್ನುವುದು ಮೂಲ ರಾಮಾಯಣದಲ್ಲಿ ಇಲ್ಲ.

ಮುಂದಿನ ಭಾಗದಲ್ಲಿ ಕಿಷ್ಕಿಂಧಾಕಾಂಡದ ಇನ್ನಷ್ಟು ರೋಚಕ ವಿಷಯಗಳನ್ನು ಗಮನಿಸೋಣ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಕಿಷ್ಕಿಂಧಾ ಕಾಂಡದಲ್ಲಿನ ರಾಜನೀತಿಯ ವಿಲಕ್ಷಣ ಘಟನೆ

Continue Reading
Advertisement
ಪ್ರಮುಖ ಸುದ್ದಿ13 mins ago

Olympic Games Paris: ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಸ್ಪರ್ಧೆಗಳ ವಿವರ

Bigg Boss Marathi 5 premiere ritesh deshmukh co star shubhankar tawde
ಬಿಗ್ ಬಾಸ್17 mins ago

Bigg Boss Marathi 5: ಶುರುವಾಯ್ತು ಮರಾಠಿ ಬಿಗ್​ಬಾಸ್ 5; ಈ ಬಾರಿ ರಿತೇಶ್ ದೇಶ್​ಮುಖ್ ನಿರೂಪಕ!

New Governors
ದೇಶ52 mins ago

New Governors: ನೂತನ ರಾಜ್ಯಪಾಲರನ್ನು ನೇಮಿಸಿದ ರಾಷ್ಟ್ರಪತಿ; ಮೈಸೂರಿನ ವಿಜಯ ಶಂಕರ್ ಮೇಘಾಲಯ ಗವರ್ನರ್‌

karnataka rain news yadgir
ಪ್ರಮುಖ ಸುದ್ದಿ58 mins ago

Karnataka Rain News: ತುಂಬಿ ಬರಿಯುತ್ತಿರುವ ಕೃಷ್ಣಾ, ಘಟಪ್ರಭಾ; ಸೇತುವೆ ಮುಳುಗಡೆ, ನಡುಗಡ್ಡೆಯಿಂದ ಗರ್ಭಿಣಿಯರ ಸ್ಥಳಾಂತರ

vali sugreeva ಧವಳ ಧಾರಿಣಿ
ಅಂಕಣ2 hours ago

ಧವಳ ಧಾರಿಣಿ ಅಂಕಣ: ಕಿಷ್ಕಿಂಧಾ ಕಾಂಡ ಭಾಗ 2: ದೀಪದ ಬುಡದಲ್ಲಿ ಕತ್ತಲೆ

beml factory kgf
ಕೋಲಾರ2 hours ago

BEML Factory: ಬೆಮೆಲ್‌ ಕಾರ್ಖಾನೆ ನೇಮಕಾತಿಯಲ್ಲಿ ಸ್ಥಳೀಯರಿಗೆ ಅನ್ಯಾಯ ವಿರೋಧಿಸಿ ಸಾವಿರಾರು ಕಾರ್ಮಿಕರಿಂದ ಮುಷ್ಕರ

ರಾಜಮಾರ್ಗ ಅಂಕಣ n narasimhaiah
ಅಂಕಣ2 hours ago

ರಾಜಮಾರ್ಗ ಅಂಕಣ: ನಾಲ್ಕನೇ ತರಗತಿ ಮಾತ್ರ ಓದಿದ ಎನ್ ನರಸಿಂಹಯ್ಯ 550 ಪತ್ತೇದಾರಿ ಕಾದಂಬರಿ ಬರೆದರು!

Uttara Kannada landslide
ಪ್ರಮುಖ ಸುದ್ದಿ2 hours ago

Uttara Kannada landslide: ಈಶ್ವರ ಮಲ್ಪೆ ತಂಡಕ್ಕೂ ಸಿಗಲಿಲ್ಲ ಲಾರಿ ಸುಳಿವು; ಅರ್ಜುನನೂ ಕಣ್ಮರೆ

Weight lose
ಆರೋಗ್ಯ2 hours ago

Weight Lose: ಏನೇ ಸರ್ಕಸ್‌ ಮಾಡಿದರೂ ತೂಕ ಇಳಿಯದೇ? ಹಾಗಿದ್ದರೆ ಕಾರಣ ಇದಾಗಿರಬಹುದು!

World Hepatitis Day
ಆರೋಗ್ಯ3 hours ago

World Hepatitis Day: ಏನಿದು ಹೆಪಟೈಟಿಸ್‌? ಇದು ಏಕೆ ಅಪಾಯಕಾರಿ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ14 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ19 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ20 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 days ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ3 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್3 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ3 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌