ಸಂಪಾದಕೀಯ: ಉತ್ತರ ಕನ್ನಡಕ್ಕೆ ಅಗತ್ಯವಾಗಿ ಬೇಕು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ - Vistara News

ಪ್ರಮುಖ ಸುದ್ದಿ

ಸಂಪಾದಕೀಯ: ಉತ್ತರ ಕನ್ನಡಕ್ಕೆ ಅಗತ್ಯವಾಗಿ ಬೇಕು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ

ಸೂಪರ್‌ ಸ್ಪೆಷಾಲಿಟಿ ಅಥವಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಿ ಎಂದು ಉತ್ತರ ಕನ್ನಡ ಜಿಲ್ಲೆಯ ಜನ ಹಲವು ವರ್ಷಗಳಿಂದ ಆಗ್ರಹಿಸುತ್ತ ಬಂದಿದ್ದಾರೆ. ಇಂಥದೊಂದು ಆಸ್ಪತ್ರೆಯ ಅವಶ್ಯಕತೆ ಉತ್ತರ ಕನ್ನಡ ಜಿಲ್ಲೆಗಿದೆ. ರಾಜ್ಯ ಸರ್ಕಾರ ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು.

VISTARANEWS.COM


on

Hospital
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ (Super Speciality Hospital) ಬೇಕು ಎನ್ನುವುದು ಹಲವು ವರ್ಷಗಳ ಬೇಡಿಕೆ. ಈ ಬಗ್ಗೆ ಜಿಲ್ಲೆಯ ಜನ ನಿರಂತರವಾಗಿ ದನಿ ಎತ್ತುತ್ತಿದ್ದಾರೆ, ಪ್ರತಿಭಟನೆ-ಅಭಿಯಾನ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರ ಸ್ಪಷ್ಟ ಭರವಸೆ ನೀಡಿತ್ತು. ಜಿಲ್ಲೆಯ ಎಲ್ಲ ಪ್ರದೇಶಗಳಿಗೂ ಕೇಂದ್ರವಾಗುವಂತೆ ಕುಮಟಾದಲ್ಲಿ ಅತ್ಯಾಧುನಿಕ ಆಸ್ಪತ್ರೆ ಸ್ಥಾಪಿಸುವ ನಿಟ್ಟಿನಲ್ಲಿ ಆಗಿನ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಕುಮಟಾದಲ್ಲಿ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆಯನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಬಜೆಟ್‌ ಭಾಷಣದಲ್ಲಿ ಪ್ರಕಟಿಸಿದ್ದರು. ಆದರೆ ಈಗ ಸಿದ್ದರಾಮಯ್ಯ ಸರ್ಕಾರ ಹೊಸ ಆಸ್ಪತ್ರೆ ಸ್ಥಾಪನೆಯ ಪ್ರಸ್ತಾಪ ಕೈಬಿಟ್ಟಿದೆ. ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಉತ್ತರ ಕನ್ನಡಕ್ಕೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಯ ಘೋಷಣೆ ಆಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಜಿಲ್ಲೆಯ ಜನರಿಗೆ ಭಾರಿ ನಿರಾಸೆಯಾಗಿದೆ. ಈಗ ಕಾರವಾರದಲ್ಲಿರುವ ಸರ್ಕಾರಿ ಮೆಡಿಕಲ್‌ ಕಾಲೇಜು ಆಸ್ಪತ್ರೆಯ ಹಾಸಿಗೆಗಳನ್ನು ಹೆಚ್ಚಿಸುವ ಘೋಷಣೆ ಮಾತ್ರ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆ ಕರಾವಳಿ, ಬಯಲುಸೀಮೆ, ಗುಡ್ಡಗಾಡು ಪ್ರದೇಶಗಳನ್ನು ಒಳಗೊಂಡಂತೆ ವಿಶಿಷ್ಟ ಭೌಗೋಳಿಕ ಚಹರೆಯನ್ನು ಹೊಂದಿದೆ. ಜಿಲ್ಲೆಯ ಜನ ಅಪಘಾತ, ತುರ್ತು ಚಿಕಿತ್ಸೆ ಇತ್ಯಾದಿ ಸಂದರ್ಭಗಳಲ್ಲಿ ಸುಮಾರು 350 ಕಿ.ಮೀ ದೂರದ ಮಂಗಳೂರು ಅಥವಾ ಉಡುಪಿಯ ಸುಸಜ್ಜಿತ ಆಸ್ಪತ್ರೆಗಳನ್ನೇ ಆಶ್ರಯಿಸಬೇಕಾಗಿದೆ. ಇದರಿಂದಾಗಿ ಸಾವು ನೋವಿನ ಪ್ರಮಾಣ ಹೆಚ್ಚುತ್ತಿದೆ. ಮುಖ್ಯವಾಗಿ ಕಾರವಾರ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನವೂ ಹತ್ತಾರು ಅಪಘಾತಗಳು ಸಂಭವಿಸುತ್ತವೆ. ರಸ್ತೆ ಅಗಲೀಕರಣದ ಅವೈಜ್ಞಾನಿಕ ಕಾಮಗಾರಿಯಿಂದಲೂ ಅಪಘಾತಗಳ ಪ್ರಮಾಣ ಹೆಚ್ಚುತ್ತಿದೆ. ವಾಹನ ಸವಾರರು ತಮ್ಮದಲ್ಲದ ತಪ್ಪಿಗೆ ನಿತ್ಯವೂ ಅಪಘಾತಗಳಿಗೆ ಒಳಗಾಗುತ್ತಿದ್ದಾರೆ. ಆದರೆ ಸ್ಥಳೀಯವಾಗಿ ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೃದಯಾಘಾತ, ಹಾವು ಕಡಿತದಂಥ ತುರ್ತು ಸಂದರ್ಭದಲ್ಲೂ ಜಿಲ್ಲೆಯ ಜನ ನೆರೆಯ ಜಿಲ್ಲೆಯ ಬಹುದೂರದ ಆಸ್ಪತ್ರೆಗೆ ಹೋಗುವಷ್ಟರಲ್ಲಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಆದಷ್ಟು ಬೇಗ ಸಕಲ ಚಿಕಿತ್ಸೆ ಸೌಲಭ್ಯ ಇರುವ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಿ ಎನ್ನುವುದು ಉತ್ತರ ಕನ್ನಡ ಜಿಲ್ಲೆಯ ಜನರ ಒಕ್ಕೊರಲ ಆಗ್ರಹವಾಗಿದೆ.

ಮಲ್ಟಿ ಸ್ಪೆಷಾಲಿಟಿ ಅಥವಾ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸಬೇಕು ಎಂದು ಒತ್ತಾಯಿಸಿ ಉತ್ತರ ಕನ್ನಡದ ಜನ ನಾನಾ ಸಂಘಟನೆಗಳ ಆಶ್ರಯದಲ್ಲಿ ಈಗಾಗಲೇ ತೀವ್ರ ಹೋರಾಟವನ್ನೂ ನಡೆಸಿದ್ದಾರೆ. 2019ರಿಂದಲೂ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಪ್ರಧಾನಿ, ಮುಖ್ಯಮಂತ್ರಿಗಳ ಮಟ್ಟದಲ್ಲಿ ಗಮನ ಸೆಳೆಯಲು ಅಭಿಯಾನಗಳನ್ನು ನಡೆಸಿದ್ದರು. ಎಲ್ಲ ಪಕ್ಷಗಳ ಮುಖಂಡರೂ ಈ ನ್ಯಾಯಯುತ ಬೇಡಿಕೆಯನ್ನು ಬೆಂಬಲಿಸಿದ್ದರು. ಟ್ವಿಟರ್‌, ಫೇಸ್‌ಬುಕ್‌ ಇತ್ಯಾದಿ ಜಾಲತಾಣಗಳಲ್ಲಿ ಅಭಿಯಾನದ ಜತೆಗೆ ಬೆಂಗಳೂರಿನಲ್ಲಿಯೂ 2022 ಜುಲೈ 30ರಂದು ಬೃಹತ್‌ ಪ್ರತಿಭಟನೆ ನಡೆದಿತ್ತು. ಅಕ್ಟೋಬರ್‌ ವೇಳೆಗೆ ಸರ್ಕಾರ ಬೇಡಿಕೆ ಈಡೇರಿಸುವ ಭರವಸೆ ನೀಡಿತ್ತು.

ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ಚಂದ್ರಯಾನ 3, ಮನುಕುಲದ ಇನ್ನೊಂದು ಮಹಾ ಜಿಗಿತ

ಕಾರವಾರದಲ್ಲಿ ಈಗಿರುವ ಮೆಡಿಕಲ್‌ ಕಾಲೇಜು ಆಸ್ಪತ್ರೆಯಲ್ಲಿನ ಹಾಸಿಗೆ ಹೆಚ್ಚಿಸಿದ ಮಾತ್ರಕ್ಕೆ ಜಿಲ್ಲೆಯ ಜನರ ಸಮಸ್ಯೆ ಪರಿಹಾರ ಆಗುವುದಿಲ್ಲ, ಬೇಡಿಕೆ ಈಡೇರಿದಂತೆ ಆಗುವುದಿಲ್ಲ. ಏಕೆಂದರೆ ಕಾರವಾರ ಜಿಲ್ಲೆಯ ಕೇಂದ್ರ ಭಾಗದಲ್ಲಿಲ್ಲ. ಜಿಲ್ಲೆಯ ಭೌಗೋಳಿಕ ವ್ಯಾಪ್ತಿಯನ್ನು ಗಮನಿಸಿದಾಗ ಕುಮಟಾವನ್ನು ಹೃದಯಭಾಗವೆಂದು ಪರಿಗಣಿಸಬಹುದಾಗಿದೆ. ಹಾಗಾಗಿ ಕುಮಟಾ ಸುತ್ತಮುತ್ತ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಿದರೆ ಜಿಲ್ಲೆಯ ಎಲ್ಲ ಭಾಗದ ಜನರಿಗೆ ಹೆಚ್ಚು ಉಪಯುಕ್ತವಾಗುತ್ತದೆ. ಸಿದ್ದರಾಮಯ್ಯ ಅವರ ಕಾಂಗ್ರೆಸ್‌ ಸರ್ಕಾರ ಆದಷ್ಟು ಬೇಗ ಉತ್ತರ ಕನ್ನಡ ಜಿಲ್ಲೆಯ ಜನರ ಈ ಬೇಡಿಕೆಯನ್ನು ಈಡೇರಿಸಬೇಕು. ಸಕಾಲಿಕ ತುರ್ತು ಚಿಕಿತ್ಸೆ ಸಿಗದೆ ಆಗುತ್ತಿರುವ ಜಿಲ್ಲೆಯ ಜನರ ಪ್ರಾಣ ಹಾನಿಯನ್ನು ತಪ್ಪಿಸಬೇಕು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Google: 10 ಲಕ್ಷ ಕೋಟಿ ರೂ. ಮೌಲ್ಯದ ಪಿಂಚಣಿ ಡೇಟಾ ಡಿಲೀಟ್‌ ಮಾಡಿ Sorry ಎಂದ ಗೂಗಲ್; ಮುಂದೇನು?

Google: ಲಕ್ಷಾಂತರ ಜನರ ಡೇಟಾವನ್ನು ಗೂಗಲ್‌ ಕ್ಲೌಡ್‌ನಿಂದ ಅಳಿಸಿಹಾಕಿದ ಬಳಿಕ ಗೂಗಲ್‌ ಸಂಸ್ಥೆ ಕ್ಷಮೆಯಿರಲಿ ಎಂದಷ್ಟೇ ಹೇಳುವ ಮೂಲಕ ಕೈ ತೊಳೆದುಕೊಂಡಿದೆ. ಮಾಹಿತಿ ಡಿಲೀಟ್‌ ಆದ ಕಾರಣ ಯುನಿಸೂಪರ್‌ ಸಂಸ್ಥೆಯು ಕೂಡ ವಿಷಾದ ವ್ಯಕ್ತಪಡಿಸಿದೆ. ಆದರೆ, ಲಕ್ಷಾಂತರ ಜನರ ಲಕ್ಷಾಂತರ ಕೋಟಿ ರೂ. ಮಾಹಿತಿ ಡಿಲೀಟ್‌ ಆದ ಕಾರಣ ಅವರೆಲ್ಲ ಆತಂಕಕ್ಕೀಡಾಗಿದ್ದಾರೆ.

VISTARANEWS.COM


on

Google
Koo

ವಾಷಿಂಗ್ಟನ್:‌ ಇದೇನಿದ್ದರೂ ಡಿಜಿಟಲ್‌ (Digital) ಯುಗ. ಎಲ್ಲ ಮಾಹಿತಿಯೂ ಈಗ ಕಂಪ್ಯೂಟರ್‌ನಲ್ಲಿ, ಗೂಗಲ್‌ ಕ್ಲೌಡ್‌ ಸೇರಿ ಹಲವು ಮಾದರಿಯಲ್ಲಿ ಸಂಗ್ರಹಿಸಲಾಗುತ್ತದೆ. ಬ್ಯಾಂಕಿಂಗ್‌ನಿಂದ ಹಿಡಿದು ಎಲ್ಲ ಕ್ಷೇತ್ರಗಳ ಮಾಹಿತಿಯೂ ಆನ್‌ಲೈನ್‌ನಲ್ಲೇ ಸಂಗ್ರಹಿಸಲಾಗುತ್ತದೆ. ಆದರೆ, ಈ ಮಾಹಿತಿ ಡಿಲೀಟ್‌ ಮಾಡಿದರೆ, ಯಾರಾದರೂ ಡಿಲೀಟ್‌ ಮಾಡಿದರೆ ಆಗುವ ಅನಾಹುತಗಳು ಅಷ್ಟಿಷ್ಟಲ್ಲ. ಇದಕ್ಕೆ ನಿದರ್ಶನ ಎಂಬಂತೆ, ಗೂಗಲ್‌ (Google) ಸಂಸ್ಥೆಯು ಗೂಗಲ್‌ ಕ್ಲೌಡ್‌ನಲ್ಲಿ (Google Cloud) ಸುಮಾರು 10.43 ಲಕ್ಷ ಕೋಟಿ ರೂ. ಮೌಲ್ಯದ ಪಿಂಚಣಿ ಡೇಟಾವನ್ನು ಅಚಾತುರ್ಯವಾಗಿ ಡಿಲೀಟ್‌ ಮಾಡಿದೆ.

ಆಸ್ಟ್ರೇಲಿಯಾದ ನಿವೃತ್ತಿದಾರರಿಗೆ ಪಿಂಚಣಿ ಒದಗಿಸುವ ಯುನಿಸೂಪರ್‌ (UniSuper) ಎಂಬ ಸಂಸ್ಥೆಯ 6.2 ಲಕ್ಷ ಜನರ ಮಾಹಿತಿಯನ್ನು ಗೂಗಲ್‌ ಡಿಲೀಟ್‌ ಮಾಡಿದೆ. ಯುನಿಸೂಪರ್‌ ಸಂಸ್ಥೆಯು ಡೇಟಾ ಸಂಗ್ರಹಕ್ಕಾಗಿ ಗೂಗಲ್‌ ಕ್ಲೌಡ್‌ ಜತೆ ಒಪ್ಪಂದ ಮಾಡಿಕೊಂಡಿತ್ತು. ಆದರೆ, ಗೂಗಲ್‌ ಸಂಸ್ಥೆಯು ಅಚಾತುರ್ಯದಿಂದ 6.2 ಲಕ್ಷ ಜನರ ಡೇಟಾವನ್ನು ಡಿಲೀಟ್‌ ಮಾಡಿದೆ. ಕಳೆದ ಒಂದು ವಾರದಿಂದ ಯುನಿಸೂಪರ್‌ ಸದಸ್ಯರು ತಮ್ಮ ಪಿಂಚಣಿ ಮಾಹಿತಿಯನ್ನು ಪರಿಶೀಲಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಅವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Sorry ಎಂದ ಗೂಗಲ್‌

ಲಕ್ಷಾಂತರ ಜನರ ಡೇಟಾವನ್ನು ಗೂಗಲ್‌ ಕ್ಲೌಡ್‌ನಿಂದ ಅಳಿಸಿಹಾಕಿದ ಬಳಿಕ ಗೂಗಲ್‌ ಸಂಸ್ಥೆ ಕ್ಷಮೆಯಿರಲಿ ಎಂದಷ್ಟೇ ಹೇಳುವ ಮೂಲಕ ಕೈ ತೊಳೆದುಕೊಂಡಿದೆ. ಮಾಹಿತಿ ಡಿಲೀಟ್‌ ಆದ ಕಾರಣ ಯುನಿಸೂಪರ್‌ ಸಂಸ್ಥೆಯು ಕೂಡ ವಿಷಾದ ವ್ಯಕ್ತಪಡಿಸಿದೆ. ಆದರೆ, ಲಕ್ಷಾಂತರ ಜನರ ಲಕ್ಷಾಂತರ ಕೋಟಿ ರೂ. ಮಾಹಿತಿ ಡಿಲೀಟ್‌ ಆದ ಕಾರಣ ಅವರೆಲ್ಲ ಆತಂಕಕ್ಕೀಡಾಗಿದ್ದಾರೆ. ಇದಕ್ಕೆ ಪರಿಹಾರ ಕಂಡುಕೊಳ್ಳಿ ಎಂಬುದಾಗಿ ಸಂಸ್ಥೆಯನ್ನು ಆಗ್ರಹಿಸಿದ್ದಾರೆ. ಇದರ ಬೆನ್ನಲ್ಲೇ, ಗೂಗಲ್‌ ಜತೆಗಿನ ಒಪ್ಪಂದವನ್ನು ಯುನಿಸೂಪರ್‌ ರದ್ದುಗೊಳಿಸಿದೆ.

ಬ್ಯಾಕಪ್‌ಗಾಗಿ ಹರಸಾಹಸ

6 ಲಕ್ಷಕ್ಕೂ ಅಧಿಕ ಮಾಹಿತಿಯನ್ನು ಮರು ಸಂಗ್ರಹಿಸಲು (ಬ್ಯಾಕಪ್‌) ಯುನಿಸೂಪರ್‌ ಹರಸಾಹಸ ಮಾಡುತ್ತಿದೆ. ಡಿಲೀಟ್‌ ಆಗಿರುವ ಎಲ್ಲ ಮಾಹಿತಿಯನ್ನು ಬ್ಯಾಕಪ್‌ ಮಾಡಿಕೊಳ್ಳಲು ಬೇರೊಂದು ಕಂಪನಿ ಜತೆ ಒಪ್ಪಂದ ಮಾಡಿಕೊಂಡಿದೆ. ಆದರೆ, ಮಾಹಿತಿಯು ತಾತ್ಕಾಲಿಕವಾಗಿ ಡಿಲೀಟ್‌ ಆಗಿದೆಯೋ, ಇಲ್ಲವೋ? ಅದನ್ನು ಬ್ಯಾಕಪ್‌ ಮಾಡುವುದು ಸುಲಭವೋ, ಇಲ್ಲವೋ ಎಂಬ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮಾಹಿತಿ ಲಭ್ಯವಾಗುವವರೆಗೂ ಗ್ರಾಹಕರು ಹಾಗೂ ಕಂಪನಿಗೆ ಆತಂಕ ತಪ್ಪಿದ್ದಲ್ಲ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Google Layoff: ಮತ್ತಷ್ಟು ಉದ್ಯೋಗ ಕಡಿತಗೊಳಿಸಿದ ಗೂಗಲ್‌; ಕಾರಣವೇನು?

Continue Reading

ಕ್ರೈಂ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಈ ಬಗ್ಗೆ ಜರ್ಮನಿ ಮ್ಯೂನಿಕ್ ಏರ್‌ಪೋರ್ಟ್‌ನಿಂದ ವಿಸ್ತಾರ ನ್ಯೂಸ್‌ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಬೆಂಗಳೂರಿಗೆ ಬರುವ ಫ್ಲೈಟ್‌ನಲ್ಲಿ ಪ್ರಜ್ವಲ್‌ ಹತ್ತಿಲ್ಲ ಎಂಬ ಸಂಗತಿ ಗೊತ್ತಾಗಿದೆ. ಎಲ್ಲ ಪ್ರಯಾಣಿಕರಿಗೆ ಫ್ಲೈಟ್‌ ಹತ್ತಲು ಬೋರ್ಡಿಂಗ್‌ ಕ್ಲೋಸ್‌ ಆಗಿತ್ತು. 3.35ಕ್ಕೆ ಲುಫ್ತಾನ್ಸಾ ಏರ್‌ಲೈನ್ಸ್ LH764 ಟೇಕ್‌ ಆಫ್‌ ಆಗಿದೆ. ಈ ನಡುವೆ ಇನ್ನು ಸಿಬಿಐ ಮೂಲಕ ಇಂಟರ್‌ಪೋಲ್‌ನಿಂದ ಬ್ಲೂ ಕಾರ್ನರ್ ನೋಟಿಸ್‌ ಕೂಡಾ ಜಾರಿ ಮಾಡಲಾಗಿದ್ದು, ಕಾನೂನಿಗೆ ಡೋಂಟ್‌ ಕೇರ್ ಎಂದು ಪ್ರಜ್ವಲ್ ಹೇಳುತ್ತಿದ್ದಾರಾ ಎಂಬ ಅನುಮಾನ ಮೂಡಿದೆ.

VISTARANEWS.COM


on

Prajwal Revanna Case Prajwal never boarded a flight from Germany
Koo

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ (Prajwal Revanna Case) ಎಸ್‌ಐಟಿ ಮೋಸ್ಟ್ ವಾಂಟೆಡ್‌ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ, ಇಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಎಂಬುದು ಸುಳ್ಳಾಗಿದೆ. ಅವರು ಜರ್ಮನಿ ಮ್ಯೂನಿಕ್ ಏರ್‌ಪೋರ್ಟ್‌ನ ಲಾಂಜ್‌ನಲ್ಲಿಯೇ ಕಾಣಿಸಿಕೊಂಡಿಲ್ಲ ಎಂಬ ಸಂಗತಿ ಗೊತ್ತಾಗಿದೆ. ಅಲ್ಲದೆ, ಫ್ಲೈಟ್‌ ಟೇಕ್‌ ಆಫ್‌ ಆಗಿದ್ದರೂ ಅವರು ಅವರು ಅತ್ತ ಸುಳಿದಿಲ್ಲ. ಹೀಗಾಗಿ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ಟಿಕೆಟ್‌ ಮಾಡಿಸಿಯೂ ಅವರು ವಿಮಾನವನ್ನು ಹತ್ತಿಲ್ಲ ಎಂಬ ಸಂಗತಿ ಗೊತ್ತಾಗಿದೆ.

ಈ ಬಗ್ಗೆ ಜರ್ಮನಿ ಮ್ಯೂನಿಕ್ ಏರ್‌ಪೋರ್ಟ್‌ನಿಂದ ವಿಸ್ತಾರ ನ್ಯೂಸ್‌ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಬೆಂಗಳೂರಿಗೆ ಬರುವ ಫ್ಲೈಟ್‌ನಲ್ಲಿ ಪ್ರಜ್ವಲ್‌ ಹತ್ತಿಲ್ಲ ಎಂಬ ಸಂಗತಿ ಗೊತ್ತಾಗಿದೆ. ಎಲ್ಲ ಪ್ರಯಾಣಿಕರಿಗೆ ಫ್ಲೈಟ್‌ ಹತ್ತಲು ಬೋರ್ಡಿಂಗ್‌ ಕ್ಲೋಸ್‌ ಆಗಿತ್ತು. 3.35ಕ್ಕೆ ಲುಫ್ತಾನ್ಸಾ ಏರ್‌ಲೈನ್ಸ್ LH764 ಟೇಕ್‌ ಆಫ್‌ ಆಗಿದೆ. ಇದರ ಬ್ಯುಸಿನೆಸ್ ಕ್ಲಾಸ್ ಫ್ಲೈಟ್ ಟಿಕೆಟ್‌ಗೆ
ಸುಮಾರು 3 ಲಕ್ಷ ರೂಪಾಯಿ ಮೌಲ್ಯದ್ದಾಗಿದೆ. ಇಷ್ಟಾದರೂ ಪ್ರಜ್ವಲ್ ಅಲ್ಲಿಂದ ಹೊರಟೇ ಇಲ್ಲ ಎಂದು ತಿಳಿದುಬಂದಿದೆ.

ಬುಕ್ ಮಾಡಿದ್ದ ಲುಫ್ತಾನ್ಸಾ ಫ್ಲೈಟ್‌ ಹತ್ತದ ಪ್ರಜ್ವಲ್ ರೇವಣ್ಣ!

ಲುಫ್ತಾನ್ಸಾ ಏರ್‌ಲೈನ್ಸ್ ಫ್ಲೈಟ್ LH764 ರಲ್ಲಿ ಬ್ಯುಸಿನೆಸ್ ಕ್ಲಾಸ್ ಕ್ಯಾಟಗರಿ 6ಜಿ ಸೀಟ್‌ ಅನ್ನು ಪ್ರಜ್ವಲ್‌ ರೇವಣ್ಣ ಬುಕ್ ಮಾಡಿದ್ದರು. ಈ ನಿರೀಕ್ಷೆಯಲ್ಲಿ ಎಸ್‌ಐಟಿ ಅಧಿಕಾರಿಗಳ ತಂಡ ಸಹ ಇದ್ದವು. ಆದರೆ, ಎಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ಕಳ್ಳಾಟ ಆಡಲು ಶುರು ಮಾಡಿದರೋ, ಅದೀಗ ಎಸ್‌ಐಟಿ ತಂಡವನ್ನು ಗರಂ ಆಗಿಸಿದೆ. ಒಂದು ಕಡೆ ಕಾನೂನಿಗೆ ತಲೆಬಾಗುತ್ತೇನೆ ಎಂದು ಪ್ರಜ್ವಲ್ ಅಪ್ಪ ಎಚ್.ಡಿ. ರೇವಣ್ಣ ಹೇಳುತ್ತಾರೆ. ಆದರೆ, ಇನ್ನೊಂದು ಕಡೆ ಕಾನೂನಿಗೆ ಡೋಂಟ್‌ ಕೇರ್ ಎಂದು ಪ್ರಜ್ವಲ್ ಹೇಳುತ್ತಿದ್ದಾರಾ ಎಂಬ ಅನುಮಾನ ಮೂಡಿದೆ. ಇನ್ನು ಸಿಬಿಐ ಮೂಲಕ ಇಂಟರ್‌ಪೋಲ್‌ನಿಂದ ಬ್ಲೂ ಕಾರ್ನರ್ ನೋಟಿಸ್‌ ಕೂಡಾ ಜಾರಿ ಮಾಡಲಾಗಿದೆ.

ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಪ್ರಜ್ವಲ್‌ ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಇಂದೇ ವಾಪಸ್‌ ಬರಲಿದ್ದಾರೆ ಎಂಬ ಮಹತ್ವದ ಮಾಹಿತಿ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿತ್ತು.

ಹೌದು, ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಮರಳುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಜರ್ಮನಿಯಲ್ಲಿರುವ ಪ್ರಜ್ವಲ್‌, ಲುಫ್ತಾನ್ಸಾ ಏರ್‌ಲೈನ್ಸ್‌ ಮೂಲಕ ಪ್ರಜ್ವಲ್‌ ಭಾರತಕ್ಕೆ ಹಿಂತಿರುಗಲಿದ್ದಾರೆ. ಜರ್ಮನಿಯಲ್ಲಿ ಬುಧವಾರ (ಮೇ 15) ಬೆಳಗ್ಗೆ 11.20 ರಿಂದ 11.50ರೊಳಗೆ ಬೋರ್ಡಿಂಗ್‌ ಆಗಲಿದ್ದು, ಅವರಿಗಾಗಿ ಸೀಟ್‌ ನಂಬರ್‌ 6ಜಿ ಬುಕ್‌ ಮಾಡಲಾಗಿದೆ. LH0764 ವಿಮಾನದಲ್ಲಿ ಸಂಸದ ಆಗಮಿಸಲಿದ್ದಾರೆ ಎಂದು ಹೇಳಲಾಗಿತ್ತು.

ಹರಿಯಾಣದ ಅಕಲ್‌ ಟ್ರಾವೆಲ್ಸ್‌ನಿಂದ ಪ್ರಜ್ವಲ್‌ಗೆ ಟಿಕೆಟ್‌ ಬುಕ್‌ ಮಾಡಲಾಗಿದೆ. ಜರ್ಮನಿಯ ಮ್ಯೂನಿಚ್‌ನಲ್ಲಿ ಇಂದು ಬೆಳಗ್ಗೆ 12.05ಕ್ಕೆ ಫ್ಲೈಟ್‌ ಟೇಕಾಫ್‌ ಆಗಲಿದ್ದು, ರಾತ್ರಿ 12.30ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಬಂದ ಕೂಡಲೇ ಅವರನ್ನು ವಶಕ್ಕೆ ಪಡೆಯಲು ಎಸ್‌ಐಟಿ ಸಜ್ಜಾಗಿದ್ದು, ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯನ್ನು ಆಯೋಜಿಸಲಾಗಿತ್ತು. ಆದರೆ, ಟಿಕೆಟ್‌ ಬುಕ್‌ ಮಾಡಿದ್ದ ಪ್ರಜ್ವಲ್‌ ಮಾತ್ರ ಇತ್ತ ಸುಳಿಯಲೇ ಇಲ್ಲ.

ಇದನ್ನೂ ಓದಿ | HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ಗೆ ಲುಕ್‌ ಔಟ್‌ ನೋಟಿಸ್‌ ಹಾಗೂ ಬ್ಲೂ ಕಾರ್ನರ್‌ ನೋಟಿಸ್‌ ಜಾರಿ ಮಾಡಲಾಗಿತ್ತು. ತಂದೆಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ನ್ಯಾಯಾಲಯದ ಮುಂದೆ ಶರಣಾಗುವ ಸಾಧ್ಯತೆ ಇದ್ದು, ಬಹುತೇಕ ಈ ವಾರದಲ್ಲೇ ವಿದೇಶದಿಂದ ಆಗಮಿಸಬಹುದು ಎನ್ನಲಾಗಿತ್ತು.

ಎಸ್ಐಟಿ ಮುಂದೆ ಬುಧವಾರ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದ್ದು, ಪ್ರಜ್ವಲ್‌ ರೇವಣ್ಣ ಬುಧವಾರ ಸಂಜೆ ಬೆಂಗಳೂರಿಗೆ ಬಂದು ಗುರುವಾರ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ. ರೇವಣ್ಣಗೆ ಜಾಮೀನು ಸಿಕ್ಕ ಬಳಿಕ ನ್ಯಾಯಾಲಯದ ಮುಂದೆ ಹಾಜರಾಗುವಂತೆ ರೇವಣ್ಣ ಕುಟುಂಬದ ವಕೀಲರು ಸಲಹೆ ನೀಡಿದ್ದರಿಂದ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುತ್ತಿದ್ದಾರೆ ಎಂದೇ ಭಾವಿಸಲಾಗಿತ್ತು.

Continue Reading

ಉದ್ಯೋಗ

Job Alert: ಐಐಎಂಬಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

Job Alert: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್- ಸೈಬರ್ ​​ಸೆಕ್ಯುರಿಟಿ & ಕಾಂಪ್ಲಿಯೆನ್ಸ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನಾಳೆ (ಮೇ 16) ಕೊನೆಯ ದಿನ. ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಮಂಡಳಿಯಿಂದ ಇನ್ಫಾರ್ಮೇಶನ್ ಟೆಕ್ನಾಲಜಿ, ಕಂಪ್ಯೂಟರ್ ಸೈನ್ಸ್​​ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು (Indian Institute of Management Bengaluru) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ (IIMB Recruitment 2024). ಅನೇಕ ಮ್ಯಾನೇಜರ್- ಸೈಬರ್ ​​ಸೆಕ್ಯುರಿಟಿ & ಕಾಂಪ್ಲಿಯೆನ್ಸ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ನಾಳೆ (ಮೇ 16) ಕೊನೆಯ ದಿನ (Job alert).

ವಿದ್ಯಾರ್ಹತೆ

ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಮಂಡಳಿಯಿಂದ ಇನ್ಫಾರ್ಮೇಶನ್ ಟೆಕ್ನಾಲಜಿ, ಕಂಪ್ಯೂಟರ್ ಸೈನ್ಸ್​​ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಅಲ್ಲದೆ ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯಗಳನ್ನು ಹೊಂದಿರಬೇಕು. ಸೈಬರ್ ಸೆಕ್ಯುರಿಟಿ ಮ್ಯಾನೇಜ್‌ಮೆಂಟ್‌ ಕ್ಷೇತ್ರದಲ್ಲಿ 8 ವರ್ಷಗಳ ಅನುಭವ ಹೊಂದಿರುವುದು ಕಡ್ಡಾಯ. ಸೈಬರ್ ಸೆಕ್ಯುರಿಟಿ ಕಾರ್ಯಕ್ರಮಗಳನ್ನು ಅಭಿವೃದ್ಧಿಪಡಿಸುವ ಮತ್ತು ಕಾರ್ಯಗತಗೊಳಿಸುವ ಅನುಭವ ಇರಬೇಕು.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 13,20,000 ರೂ. – 14,50,000 ರೂ. ವಾರ್ಷಿಕ ವೇತನ ದೊರೆಯಲಿದೆ.

IIMB Recruitment 2024 ಅಧಿಚೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಇಮೇಲ್‌ ಐಡಿ, ಫೋನ್‌ ನಂಬರ್‌ ನೀಡಿ ಹೆಸರು ನೋಂದಾಯಿಸಿ.
  • ಸರಿಯಾದ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ ಮತ್ತು ಫೋಟೊ ಅಪ್‌ಲೋಡ್‌ ಮಾಡಿ.
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಎಲ್ಲ ಮಾಹಿತಿ ಸರಿಯಾಗಿದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಗಮನಿಸಿ, ಅಪೂರ್ಣ ಅರ್ಜಿಯನ್ನು ರಿಜೆಕ್ಟ್‌ ಆಗಲಿದೆ. ಹೀಗಾಗಿ ಸರಿಯಾಗಿ ಮಾಹಿತಿ ನೀಡಿ ಅಪ್ಲಿಕೇಷನ್‌ ಭರ್ತಿ ಮಾಡಿ.

ಇದನ್ನೂ ಓದಿ: Job Alert: ಎಚ್ಎ‌ಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Continue Reading

ದೇಶ

ಮೋದಿ ಬಲಿಷ್ಠ ನಾಯಕ, ಮತ್ತೆ ಪ್ರಧಾನಿಯಾಗೋದು ನಿಶ್ಚಿತ ಎಂದ ಪಾಕ್‌ ಮೂಲದ ಉದ್ಯಮಿ

ನರೇಂದ್ರ ಮೋದಿ ಅವರಲ್ಲಿ ಹುಟ್ಟಿನಿಂದಲೇ ನಾಯಕತ್ವದ ಗುಣಗಳಿವೆ. ಅವರು ರಾಜಕೀಯ ಹಿತಾಸಕ್ತಿ ನೋಡದೆ, ಅತಿ ಕೆಟ್ಟ ಸಂದರ್ಭದಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು. ಮುಂದಿನ ದಿನಗಳಲ್ಲಿ, ಮೋದಿ ಅವರು ಪಾಕಿಸ್ತಾನದ ಜತೆ ಮಾತುಕತೆ ನಡೆಸಿ, ಮತ್ತೆ ವ್ಯಾಪಾರ ಶುರು ಮಾಡಲಿದ್ದಾರೆ ಎಂಬ ನಂಬಿಕೆ ಇದೆ ಎಂದು ಸಾಜಿದ್‌ ತರಾರ್‌ ಹೇಳಿದ್ದಾರೆ.

VISTARANEWS.COM


on

Narendra Modi
Koo

ವಾಷಿಂಗ್ಟನ್:‌ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಅಭಿಮಾನಿಗಳಿದ್ದಾರೆ, ಅವರ ನಾಯಕತ್ವವನ್ನು ಮುಕ್ತ ಕಂಠದಿಂದ ಹೊಗಳುವವರಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಪಾಕಿಸ್ತಾನ ಮೂಲದ, ಅಮೆರಿಕದಲ್ಲಿ ನೆಲೆಸಿರುವ ಉದ್ಯಮಿ ಸಾಜಿದ್‌ ತರಾರ್‌ (Sajid Tarar) ಅವರು ನರೇಂದ್ರ ಮೋದಿ ಅವರನ್ನು ಹೊಗಳಿದ್ದಾರೆ. “ನರೇಂದ್ರ ಮೋದಿ ಬಲಿಷ್ಠ ನಾಯಕರಾಗಿದ್ದಾರೆ. ಅವರು ಹುಟ್ಟಿನಿಂದಲೇ ನಾಯಕತ್ವ ಗುಣಗಳನ್ನು ಹೊಂದಿದ್ದಾರೆ” ಎಂದು ಉದ್ಯಮಿ ಹೇಳಿದ್ದಾರೆ.

“ನರೇಂದ್ರ ಮೋದಿ ಅದ್ಭುತ ನಾಯಕರಾಗಿರುವ ಕಾರಣದಿಂದಾಗಿಯೇ ಭಾರತ ಅಷ್ಟೊಂದು ಉತ್ತಮವಾಗಿ ಏಳಿಗೆ ಹೊಂದಿದೆ. ಅವರಲ್ಲಿ ಹುಟ್ಟಿನಿಂದಲೇ ನಾಯಕತ್ವದ ಗುಣಗಳಿವೆ. ಅವರು ರಾಜಕೀಯ ಹಿತಾಸಕ್ತಿ ನೋಡದೆ, ಅತಿ ಕೆಟ್ಟ ಸಂದರ್ಭದಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು. ಮುಂದಿನ ದಿನಗಳಲ್ಲಿ, ಮೋದಿ ಅವರು ಪಾಕಿಸ್ತಾನದ ಜತೆ ಮಾತುಕತೆ ನಡೆಸಿ, ಮತ್ತೆ ವ್ಯಾಪಾರ ಶುರು ಮಾಡಲಿದ್ದಾರೆ ಎಂಬ ನಂಬಿಕೆ ಇದೆ” ಎಂದು ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದ ವೇಳೆ ಅವರು ಹೇಳಿದ್ದಾರೆ.

“ನರೇಂದ್ರ ಮೋದಿ ಅವರ ನಾಯಕತ್ವವು ಭಾರತಕ್ಕೆ ಮಾತ್ರವಲ್ಲ, ವಿಶ್ವಕ್ಕೇ ಪ್ರಮುಖವಾಗಿದೆ. ಇದೇ ಕಾರಣಕ್ಕಾಗಿಯೇ ಅವರು ಮೂರನೇ ಬಾರಿ ಪ್ರಧಾನಿಯಾಗುವುದು ಖಚಿತವಾಗಿದೆ. ಅವರು ಮತ್ತೆ ಪ್ರಧಾನಿಯಾಗುತ್ತಾರೆ ಎಂಬುದು ಜಗತ್ತಿಗೇ ಗೊತ್ತಿದೆ. ಪಾಕಿಸ್ತಾನದಿಂದ ಭಾರತಕ್ಕೂ ಅನುಕೂಲವಿದೆ. ಪಾಕಿಸ್ತಾನಕ್ಕೂ ಭಾರತದಿಂದ ಅನುಕೂಲವಿದೆ. ಮುಂದಿನ ದಿನಗಳಲ್ಲಿ ಎರಡೂ ದೇಶಗಳ ನಡುವಿ ಸಂಬಂಧ ಸುಧಾರಿಸುವ ವಿಶ್ವಾಸವಿದೆ” ಎಂದು ಹೇಳಿದರು. ಪಾಕಿಸ್ತಾನದವರಾದ ಸಾಜಿದ್‌ ತರಾರ್‌, 1990ರ ದಶಕದಲ್ಲಿ ಅಮೆರಿಕಕ್ಕೆ ತೆರಳಿ, ಅಲ್ಲಿಯೇ ನೆಲೆಸಿದ್ದಾರೆ.

ಅಂತಾರಾಷ್ಟ್ರಿಯ ಖ್ಯಾತಿಯ ಆಫ್ರಿಕನ್​-ಅಮೆರಿಕನ್​ ಗಾಯಕಿ ಮೇರಿ ಮಿಲ್​​ಬೆನ್ ಅವರು ಕೂಡ ನರೇಂದ್ರ ಮೋದಿ ಅವರ ಅಭಿಮಾನಿಯಾಗಿದ್ದಾರೆ. ಆಗಾಗ ಅವರು ಮೋದಿ ಅವರನ್ನು ಹೊಗಳುತ್ತಲೇ ಇರುತ್ತಾರೆ. ಭಾರತ ತನ್ನ ದೇಶದ ನಾಯಕನ ಮೇಲೆ ಆತ್ಮವಿಶ್ವಾಸ ಹೊಂದಿದೆ. ಮಣಿಪುರದ ಮಾತೆಯರು, ಪುತ್ರಿಯರು ಹಾಗೂ ಮಹಿಳೆಯರಿಗೆ ನ್ಯಾಯ ಸಿಗುತ್ತದೆ. ನಿಮ್ಮ ಸ್ವಾತಂತ್ರ್ಯಕ್ಕಾಗಿ ನರೇಂದ್ರ ಮೋದಿ ಅವರು ಎಂದಿಗೂ ಹೋರಾಡುತ್ತಾರೆ. ನರೇಂದ್ರ ಮೋದಿ ಅವರೇ ನಿಮ್ಮ ಮೇಲೆ ವಿಶ್ವಾಸ ಇದೆ. ನಿಮಗಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಕೆಲ ತಿಂಗಳ ಹಿಂದಷ್ಟೇ ಮೇರಿ ಮಿಲ್​​ಬೆನ್ ಹೇಳಿದ್ದರು.

ಇದನ್ನೂ ಓದಿ: Narendra Modi: ಹತ್ತು ವರ್ಷ ಪ್ರಧಾನಿಯಾಗಿರುವ ನರೇಂದ್ರ ಮೋದಿ ಆಸ್ತಿ ಎಷ್ಟಿದೆ? ಪ್ರಮಾಣಪತ್ರದಲ್ಲಿದೆ ಮಾಹಿತಿ

Continue Reading
Advertisement
Kannada New Movie swapna mantapa shooting compleated
ಸ್ಯಾಂಡಲ್ ವುಡ್9 mins ago

Kannada New Movie: ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’ ಚಿತ್ರೀಕರಣ ಮುಕ್ತಾಯ

ಫ್ಯಾಷನ್9 mins ago

Star saree fashion: ಯುವತಿಯರನ್ನು ಸೆಳೆಯುತ್ತಿದೆ ನಟಿ ಭಾವನಾ ರಾವ್‌ ಸ್ಯಾಟೀನ್‌ ಸಿಲ್ಕ್‌ ಸೀರೆ

Google
ವಿದೇಶ23 mins ago

Google: 10 ಲಕ್ಷ ಕೋಟಿ ರೂ. ಮೌಲ್ಯದ ಪಿಂಚಣಿ ಡೇಟಾ ಡಿಲೀಟ್‌ ಮಾಡಿ Sorry ಎಂದ ಗೂಗಲ್; ಮುಂದೇನು?

Crazy MS Dhoni fan
ಕ್ರಿಕೆಟ್23 mins ago

Crazy MS Dhoni fan: 2100 ಕಿ.ಮೀ ದೂರ ಸೈಕಲ್​ ತುಳಿದು ದಿಲ್ಲಿಯಿಂದ ಚೆನ್ನೈಗೆ ಬಂದ ಧೋನಿ ಅಭಿಮಾನಿ; 23 ದಿನಗಳಲ್ಲಿ ಮಿಷನ್​ ಕಂಪ್ಲೀಟ್​

Money Guide
ಮನಿ-ಗೈಡ್24 mins ago

Money Guide: ಪ್ಯಾನ್‌ ಕಾರ್ಡ್‌ ಕಳೆದುಹೋದರೆ ಚಿಂತೆ ಬೇಡ; ಮನೆಯಲ್ಲೇ ಕೂತು ಡುಬ್ಲಿಕೇಟ್‌ ಪಡೆಯುವ ವಿಧಾನ ಇಲ್ಲಿದೆ

Prajwal Revanna Case Prajwal never boarded a flight from Germany
ಕ್ರೈಂ28 mins ago

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

B C Mylarappa
ಕರ್ನಾಟಕ30 mins ago

B C Mylarappa: ಅಕ್ರಮ ಭೂ ವ್ಯವಹಾರ; ಪ್ರೊ. ಮೈಲಾರಪ್ಪ ಅಮಾನತಿಗೆ ಉನ್ನತ ಶಿಕ್ಷಣ ಇಲಾಖೆ ಸೂಚನೆ

Job Alert
ಉದ್ಯೋಗ31 mins ago

Job Alert: ಐಐಎಂಬಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

House of the Dragon season 2 new trailer hints at a bloody
ಸಿನಿಮಾ44 mins ago

House of the Dragon: ‘ಹೌಸ್ ಆಫ್ ದಿ ಡ್ರ್ಯಾಗನ್’ ಸೀಸನ್ 2 ಟ್ರೈಲರ್‌ ಔಟ್‌!

Google Update
ತಂತ್ರಜ್ಞಾನ45 mins ago

Google Update: ಕೃತಕ ಬುದ್ಧಿಮತ್ತೆ, ವಂಚನೆ ತಡೆಯಲು ಅಲರ್ಟ್‌; ಗೂಗಲ್‌ ಹೊಸ ಘೋಷಣೆಗಳು ಏನೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ9 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ12 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ21 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202424 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌