Valentines week 2023: ಪ್ರೀತಿ ಎಂಬ ಮಾಯೆ: ಪ್ರೀತಿ ಕಲಿಸುವ ಐದು ಗುಣಗಳಿವು! - Vistara News

ಪ್ರಮುಖ ಸುದ್ದಿ

Valentines week 2023: ಪ್ರೀತಿ ಎಂಬ ಮಾಯೆ: ಪ್ರೀತಿ ಕಲಿಸುವ ಐದು ಗುಣಗಳಿವು!

ನಮಗೇ ಗೊತ್ತಿಲ್ಲದ ಹಾಗೆ ಪ್ರೀತಿಸುವವರನ್ನು ಕಾಳಜಿ ಮಾಡಲಾರಂಭಿಸುತ್ತೇವೆ. ಅವರು ಸದಾ ಖುಷಿಯಾಗಿರಲಿ ಎಂದು ಬಯಸುತ್ತೇವೆ. ಅವರ ತಪ್ಪುಗಳು ನಮ್ಮ ಪ್ರೀತಿಯ ಮುಂದೆ ಸಣ್ಣದೆನಿಸಿ, ಅವನ್ನೆಲ್ಲ ಮಾಫಿ ಮಾಡುತ್ತೇವೆ. ಸಿಟ್ಟು ಬಂದರೂ ಕ್ಷಣಾರ್ಧದಲ್ಲಿ ಮಾಯವಾಗುತ್ತದೆ.

VISTARANEWS.COM


on

Valentines Week Dresscode
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ರೀತಿಯಲ್ಲಿ ಬೀಳುವುದು ಯಾರಿಗೆ ಬೇಕಿಲ್ಲ ಹೇಳಿ. ಪ್ರೀತಿಯಲ್ಲಿ ಬಿದ್ದಾಗಲೇ ಅದರ ಸುಖದುಃಖಗಳು ಅರಿವಿಗೆ ಬರುವುದು. ಹೃದಯದ ಮಾತಿಗೆ ಜಗತ್ತನ್ನೇ ಬದಲಾಯಿಸುವ ಶಕ್ತಿ ಇದೆ ಎಂದು ಅರಿವಾಗುವುದು. ಹೃದಯ ಮೆದುವಾಗಿ, ಅದರ ತುಂಬ ಪ್ರೀತಿ, ಪ್ರೇಮ, ಕರುಣೆ, ದಯೆ, ಮಮತೆ, ತ್ಯಾಗವೇ ತುಂಬಿಕೊಂಡಿದೆಯೆಂದು ಅರಿವಾಗುವುದು. ಹೃದಯ ಇಷ್ಟು ಕೋಮಲವಾಗಿದೆ ಎಂದು ಅನಿಸಬೇಕಿದ್ದರೆ ಪ್ರೀತಿಯಲ್ಲಿ ಬೀಳಲೇಬೇಕು. ಫೆಬ್ರವರಿ ಬಂದ ಕೂಡಲೇ ಹಾಗೆ ಪ್ರೀತಿಯಲ್ಲಿರುವ ಜೀವಗಳಿಗೆಲ್ಲ ಹಬ್ಬ.

ಪ್ರೀತಿಗೆ ಎಂಥಾ ತಾಕತ್ತಿದೆ ಎಂದರೆ, ಇದು ನಮ್ಮೊಳಗಿನ, ನಮ್ಮಲ್ಲಿ ನಮಗೇ ಗೊತ್ತಾಗದ ಹಾಗೆ ಅಡಗಿ ಕುಳಿತಿರುವ ನಮ್ಮ ಒಳ್ಳೆಯ ಗುಣಗಳನ್ನೆಲ್ಲ ಹೆಕ್ಕಿ ಹೊರಗೆ ತಂದು ನಮ್ಮ ಮುಂದೆಯೇ ಹರವಿ ನಮಗೇ ಆಶ್ಚರ್ಯವಾಗುವಂತೆ ಮಾಡುತ್ತದೆ. ಪ್ರೀತಿಯ ಜೊತೆ ಜೊತೆಗೇ ಪ್ರೀತಿಪಾತ್ರರಿಗೆ ವ್ಯಕ್ತಪಡಿಸಬಹುದಾದ ಎಲ್ಲ ಭಾವನೆಗಳೂ ಮತ್ತಷ್ಟು ಚಿಗುರುತ್ತವೆ. ನಮಗೇ ಗೊತ್ತಿಲ್ಲದ ಹಾಗೆ ಪ್ರೀತಿಸುವವರನ್ನು ಕಾಳಜಿ ಮಾಡಲಾರಂಭಿಸುತ್ತೇವೆ. ಅವರು ಸದಾ ಖುಷಿಯಾಗಿರಲಿ ಎಂದು ಬಯಸುತ್ತೇವೆ. ಅವರಿಂದ ಯಾವ ನಿರೀಕ್ಷೆ ಇಲ್ಲದಿದ್ದರೂ ಅವರಿಗೆ ಸಹಾ ಮಾಡಿ ಖುಷಿ ಪಡುತ್ತೇವೆ. ಅವರ ತಪ್ಪುಗಳು ನಮ್ಮ ಪ್ರೀತಿಯ ಮುಂದೆ ಸಣ್ಣದೆನಿಸಿ, ಅವನ್ನೆಲ್ಲ ಮಾಫಿ ಮಾಡುತ್ತೇವೆ. ಸಿಟ್ಟು ಬಂದರೂ ಕ್ಷಣಾರ್ಧದಲ್ಲಿ ಮಾಯವಾಗುತ್ತದೆ. ಹೀಗೆ ಪ್ರೀತಿಯ ಜೊತೆಜೊತೆಗೇ ಬರುವ ಭಾವನೆಗಳು ಅನೇಕ. ಪ್ರೀತಿ ಕಲಿಸುವ ಬದುಕಿಗೆ ಅಗತ್ಯವಾದ ಐದು ಗುಣಗಳು ಯಾವುವು ಎಂಬುದನ್ನಿಲ್ಲಿ ನೋಡೋಣ.

Love Story

೧. ತ್ಯಾಗ: ʻಪ್ರೀತಿ ಮಧುರ, ತ್ಯಾಗ ಅಮರʼ ಎಂಬ ನಾಣ್ಣುಡಿಯಿದೆ. ಇದು ಸತ್ಯ. ಯಾಕೆಂದರೆ, ತ್ಯಾಗ ಪ್ರೀತಿಯ ಅತ್ಯುನ್ನತ ಸ್ಥಾನ. ಇದರ ಶಕ್ತಿ ಪ್ರೀತಿಯಲ್ಲಿದ್ದಾಗ ದೊಡ್ಡದು. ನಮ್ಮದ ಆಸೆ, ಆಸಕ್ತಿಗಳನ್ನು ಬದಿಗಿಟ್ಟು ನಮ್ಮದಕ್ಕಿಂತ ಬೇರೆಯವರ ಆಸೆಗಳನ್ನು ಮುಂದಿಡುವುದೂ ತ್ಯಾಗವೇ. ಅದರಲ್ಲೊಂದು ಸುಖವಿದೆ. ಪ್ರೀತಿಸುವವರಿಗಷ್ಟೇ ಗೊತ್ತು ಈ ತ್ಯಾಗದ ರುಚಿ. ಈ ತ್ಯಾಗದಿಂದ ತನಗೇನೋ ಮುಂದೆ ದಕ್ಕೀತು ಎಂಬ ಕಿಂಚಿತ್‌ ಆಸೆಯೂ ಇಲ್ಲದ ಈ ಭಾವನೆ ಅಮೂಲ್ಯವಾದದ್ದು.

೨. ನಿರೀಕ್ಷೆಯಿಲ್ಲದ ಪ್ರೀತಿ: ಪ್ರೀತಿಸಿದ ವ್ಯಕ್ತಿಯಿಂದ ನಿರೀಕ್ಷೆ ಮಾಡುವುದು ತಪ್ಪಲ್ಲ. ಅದು ಮಾನವ ಸಹಜ ಗುಣ. ನಾವು ಪ್ರೀತಿಸಿದವರು ನಮ್ಮನ್ನೂ ಹಾಗೆಯೇ ಪ್ರೀತಿಸಲಿ ಎಂದುಕೊಳ್ಳುವುದು ಕೂಡಾ ಪ್ರೀತಿಯಲ್ಲಿ ಇರುವಂಥದ್ದೇ. ಆದರೂ, ಅವರು ನಮ್ಮನ್ನು ಪ್ರೀತಿಸಲಿ ಎಂಬುದೂ ಸೇರಿದಂತೆ, ಯಾವ ಬಗೆಯ ನಿರೀಕ್ಷೆಯನ್ನೂ ಇಟ್ಟುಕೊಳ್ಳದೆ ಪ್ರೀತಿಸುವುದು ಪ್ರೀತಿಯ ಅತ್ಯುನ್ನತ ಸ್ಥಿತಿ. ಅಂಥವರ ಪ್ರೀತಿ ಎಲ್ಲಕ್ಕಿಂತ ದೊಡ್ಡದು.

ಇದನ್ನೂ ಓದಿ: Valentine’s Day 2023 : ವಾಲೈಂಟೈನ್ಸ್ ಡೇ ಸ್ಪೆಷಲ್‌ ರೋಸ್‌‌ಗಳು, ಇವುಗಳ ಸಂಕೇತಗಳೇನು?

೩. ಕ್ಷಮೆ: ಕ್ಷಮೆ ಎಂಬುದು ಪ್ರೀತಿ ಹಾಗೂ ವೈವಾಹಿಕ ಸಂಬಂಧವನ್ನು ಗಟ್ಟಿಯಾಗಿ ಉಳಿಸುವ ಕೀಲಿಕೈಗಳಲ್ಲಿ ಒಂದು. ಕೋಪ, ಸಿಟ್ಟಿನಲ್ಲಿ ಮಾಡಿದ ತಪ್ಪುಗಳು, ಪ್ರೀತಿಸುವವರನ್ನು ನೋಯಿಸಿದ ಕ್ಷಣಗಳು ಇದ್ದೇ ಇದ್ದರೂ, ಪ್ರೀತಿಸುತ್ತಿದ್ದೇವೆ ಹಾಗೂ ಮುಂದೆಯೂ ಹೀಗೇ ಪ್ರೀತಿಸುವೆವು ಎಂಬ ಭಾವನೆಯಿಂದ ಕ್ಷಮಿಸುವುದು ಎಲ್ಲ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸುತ್ತದೆ. ಯಾಕೆಂದರೆ, ಪ್ರೀತಿಸುವ ಜೀವ ಕ್ಷಮೆ ಪ್ರೀತಿಪಾತ್ರರ ತಪ್ಪುಗಳನ್ನು ಕ್ಷಮಿಸುವ ದೊಡ್ಡ ಗುಣ ಹೊಂದಿದೆ.

love letter

೪. ಸಹಾನುಭೂತಿ: ಪ್ರೀತಿಯಲ್ಲಿ ಒಬ್ಬರ ಬಗೆಗೆ ಮತ್ತೊಬ್ಬರಿಗೆ ಕಾಳಜಿ ಇರುತ್ತದೆ. ಪ್ರೀತಿಸುವ ವ್ಯಕ್ತಿ ಕಷ್ಟದಲ್ಲಿದ್ದಾಗ, ಸಮಸ್ಯೆಯಲ್ಲಿ ಸಿಕ್ಕಿ ಹಾಕಿಕೊಂಡಾಗ, ದುಃಖದಲ್ಲಿದ್ದಾಗ ಸಹಾಯ ಮಾಡುವುದು ಹಾಗೂ ಜೊತೆಗಿರುವುದು ಸಹಾನುಭೂತಿ. ಇದಕ್ಕೊಂದು ಅತ್ಯುನ್ನತ ಮಟ್ಟದ ಅರ್ಥ ಮಾಡಿಕೊಳ್ಳುವಿಕೆ ಬೇಕಾಗುತ್ತದೆ. ಮತ್ತೊಂದು ಜೀವಕ್ಕೆ ಸಹಾನುಭೂತಿ ತೋರಿಸುವುದು ಸುಲಭವಲ್ಲ, ಅದು ಪ್ರೀತಿ ಇದ್ದಲ್ಲಿ ಮಾತ್ರ ಸಾಧ್ಯವಾಗುತ್ತದೆ.

೫. ಸೇವೆ: ತಮಗೇನೂ ಬೇಕೆಂದು ಅಂದುಕೊಳ್ಳದೆ, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಇನ್ನೊಬ್ಬರಿಗೆ ಸಹಾಯ ಮಾಡುವ ಗುಣ ಬಹಳಷ್ಟು ಕಡಿಮೆ ಮಂದಿಯಲ್ಲಿರುತ್ತದೆ. ಇನ್ನೊಬ್ಬರಿಗೆ ಅವರ ಕೆಲಸಗಳಲ್ಲಿ ಸಹಾಯ ಮಾಡುವುದು, ಮಾಡಿಕೊಡುವುದು ಸೇವೆಯ ಮುಖಗಳೇ. 

ಇದನ್ನೂ ಓದಿ: Valentines week : ಮನಸ್ಸನ್ನು ಹಗುರಾಗಿಸುವ ಹಗ್‌ ಡೇ; ಏನಿದರ ಮಹತ್ವ? ಆಚರಣೆ ಹೇಗೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Bagalkot Lok Sabha Constituency: ಬಿಜೆಪಿಯ ಭದ್ರಕೋಟೆ ಭೇದಿಸುವರೇ ಸಂಯುಕ್ತಾ ಪಾಟೀಲ್?

Bagalkot Lok Sabha Constituency: ಬಿಜೆಪಿಯ ಪಿ.ಸಿ. ಗದ್ದಿಗೌಡರ್‌ ಅವರು 2004ರಿಂದಲೂ ಬಾಗಲಕೋಟೆಯ ಸಂಸದರಾಗಿದ್ದಾರೆ. ಇವರು ಈಗ ಸತತ ಐದನೇ ಬಾರಿಗೆ ಗೆಲುವು ಸಾಧಿಸುವ ಉತ್ಸಾಹದಲ್ಲಿದ್ದಾರೆ. ಇನ್ನು, ಸಂಯುಕ್ತಾ ಪಾಟೀಲ್‌ ಅವರು ಯುವ ನಾಯಕಿಯಾಗಿದ್ದು, ತಂದೆ ಶಿವಾನಂದ್‌ ಪಾಟೀಲ್‌ ಅವರ ಬಲದಿಂದ ಗೆಲುವು ಸಾಧಿಸುವ ಛಲದೊಂದಿಗೆ ಮುನ್ನುಗ್ಗಿದ್ದಾರೆ. ಇಲ್ಲಿ ಅನುಭವ ವರ್ಸಸ್‌ ಉತ್ಸಾಹ ಎಂಬಂತಾಗಿದೆ.

VISTARANEWS.COM


on

Bagalkot Lok Sabha Constituency
Koo

ಬಾಗಲಕೋಟೆ: 2004ರಿಂದಲೂ ಬಾಗಲಕೋಟೆ ಲೋಕಸಭೇ ಕ್ಷೇತ್ರವು (Bagalkot Lok Sabha Constituency) ಬಿಜೆಪಿಯ ಭದ್ರಕೋಟೆಯಾಗಿದ್ದು, ಸತತ ಐದನೇ ಬಾರಿಗೆ ಗೆಲ್ಲುವ ಉತ್ಸಾಹದೊಂದಿಗೆ ಬಿಜೆಪಿಯ ಪಿ.ಸಿ.ಗದ್ದಿಗೌಡರ್‌ (PC Gaddigoudar) ಕಣಕ್ಕಿಳಿದಿದ್ದಾರೆ. ಇನ್ನು, ಕಾಂಗ್ರೆಸ್‌ನಿಂದ ಯುವ ನಾಯಕಿ, ಸಚಿವ ಶಿವಾನಂದ್‌ ಪಾಟೀಲ್‌ ಅವರ ಪುತ್ರಿ ಸಂಯುಕ್ತಾ ಪಾಟೀಲ್‌ (Samyukta Patil) ಅವರು ಸ್ಪರ್ಧಿಸಿದ್ದು, ಅನುಭವಿ ವರ್ಸಸ್‌ ಯುವ ನಾಯಕಿ ನಡುವಿನ ಸಮರಕ್ಕೆ ಕ್ಷೇತ್ರ ಸಾಕ್ಷಿಯಾಗಿದೆ. ಹಾಗಾಗಿ, ಸಹಜವಾಗಿಯೇ ಫಲಿತಾಂಶದ ಮೇಲೆ ಎಲ್ಲರ ಗಮನವಿದೆ.

ಪಿ.ಸಿ.ಗದ್ದಿಗೌಡರ್‌ ಅವರು 2004ರಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿಯ ಪತಾಕೆ ಹಾರಿಸಿದ್ದು, ಅದಾದ ನಂತರ ಅವರು ತಿರುಗಿ ನೋಡಿಲ್ಲ. ಕ್ಷೇತ್ರದ ಜನರ ಜತೆ ಒಡನಾಟ, ಅಭಿವೃದ್ಧಿ ಯೋಜನೆಗಳು, ಸರಳತೆಯಿಂದ ಮನೆಮಾತಾಗಿರುವ ಇವರಿಗೆ ನರೇಂದ್ರ ಮೋದಿ ಅವರ ಅಲೆಯ ಕೃಪಾಕಟಾಕ್ಷವೂ ಇದೆ. ಅದರಲ್ಲೂ, ಸಂಯುಕ್ತಾ ಪಾಟೀಲ್‌ ಅವರು ಹೊರಗಿನವರು ಎಂಬ ಭಾವನೆ ಜನರಲ್ಲಿರುವುದು ಕೂಡ ಗದ್ದಿಗೌಡರ್‌ ಅವರಿಗೆ ನೆರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮತ್ತೊಂದೆಡೆ, ಸಂಯುಕ್ತಾ ಪಾಟೀಲ್‌ ಅವರು ಬಾಗಲಕೋಟೆ ಕ್ಷೇತ್ರದ ಆಡಳಿತ ವಿರೋಧಿ ಅಲೆ, ತಂದೆ ಶಿವಾನಂದ್‌ ಪಾಟೀಲರ ಬಲವಿದೆ. ಪ್ರಚಾರದ ವೇಳೆ ಯುವಕರು, ಅದರಲ್ಲೂ, ಯುವತಿಯರನ್ನು ಸೆಳೆಯುವಲ್ಲಿ ಸಂಯುಕ್ತಾ ಪಾಟೀಲ್‌ ಅವರು ಯಶಸ್ವಿಯಾಗಿದ್ದಾರೆ. ಹೊರಗಿನವಳು ಎಂಬ ಮನೋಭಾವವನ್ನು ತೊಡೆದುಹಾಕಿ, ನಾನೂ ನಿಮ್ಮ ಮನೆಮಗಳು ಎಂಬ ಭಾವನೆಯು ಜನರಲ್ಲಿ ಮೂಡುವಂತೆ ಮಾಡಿದ್ದಾರೆ. ಆ ಮೂಲಕ, ಬಾಗಲಕೋಟೆಯಲ್ಲಿ ಸಂಯುಕ್ತಾ ಪಾಟೀಲ್‌ ಅವರು ಪಿ.ಸಿ.ಗದ್ದಿಗೌಡರ್‌ ಅವರಿಗೆ ತೀವ್ರ ಪೈಪೋಟಿ ನೀಡಿದ್ದಾರೆ.

2019, 2014ರ ಫಲಿತಾಂಶ ಏನಾಗಿತ್ತು?

2019ರ ಲೋಕಸಭೆ ಚುನಾವಣೆಯಲ್ಲಿ ಪಿ.ಸಿ.ಗದ್ದಿಗೌಡರ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ವೀಣಾ ಕಾಶಪ್ಪನವರ್‌ ಅವರ ವಿರುದ್ಧ 1.68 ಲಕ್ಷ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದರು. 2014ರ ಲೋಕಸಭೆ ಚುನಾವಣೆಯಲ್ಲೂ ನರೇಂದ್ರ ಮೋದಿ ಅವರ ಅಲೆಯನ್ನು ಸದ್ಬಳಕೆ ಮಾಡಿಕೊಂಡಿದ್ದ ಪಿ.ಸಿ.ಗದ್ದಿಗೌಡರ್‌ ಅವರು ಕಾಂಗ್ರೆಸ್‌ನ ಅಜಯ್‌ ಕುಮಾರ್‌ ಸರನಾಯ್ಕ ಅವರ ವಿರುದ್ಧ 1 ಲಕ್ಷಕ್ಕೂ ಅಧಿಕ ಮತಗಳಿಂದ ಜಯಭೇರಿ ಬಾರಿಸಿದ್ದರು.

ಇದನ್ನೂ ಓದಿ: Dakshina Kannada Lok Sabha Constituency : ದಕ್ಷಿಣ ಕನ್ನಡದಲ್ಲಿ ವಿಜಯ ಅಭಿಯಾನ ಮುಂದುವರಿಸಲು ಬಿಜೆಪಿ ಕಾತರ

Continue Reading

ಪ್ರಮುಖ ಸುದ್ದಿ

Bangalore Rain: ರಾಜಕಾಲುವೆ ಒತ್ತುವರಿ; ಮುಲಾಜಿಲ್ಲದೆ ತೆರವು ಮಾಡಲು ಡಿಕೆಶಿ ಸೂಚನೆ

Bangalore Rain: ಬೆಂಗಳೂರಿನಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ ಹಾಗೂ ಅಗ್ನಿಶಾಮಕ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು. ಮಳೆ ಹಾನಿ ನಿರ್ವಹಣೆಗೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಸೂಚಿಸಿದ್ದಾರೆ.

VISTARANEWS.COM


on

Bangalore Rain
Koo

ಬೆಂಗಳೂರು: ರಾಜಧಾನಿಯಲ್ಲಿ ಮಳೆ ಅವಾಂತರ (Bangalore Rain) ಹಿನ್ನೆಲೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಡಿಸಿಎಂ, ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ ಹಾಗೂ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಒಗ್ಗೂಡಿ ಮಳೆ ಹಾನಿ ನಿರ್ವಹಣೆ ಮಾಡಬೇಕು. ರಾಜಕಾಲುವೆ ಸರ್ಕಾರದ ಜಾಗ, ಒತ್ತುವರಿಯಾಗಿದ್ದರೆ ಮುಲಾಜಿಲ್ಲದೆ ತೆರವು ಮಾಡಿ ಎಂದು ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಸೂಚಿಸಿದ್ದಾರೆ.

ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು, ಬೆಂಗಳೂರಿನಲ್ಲಿ 133 ವರ್ಷದ ನಂತರ ಭಾರಿ ಮಳೆಯಾಗಿದೆ. 261 ವಿದ್ಯುತ್ ಕಂಬಗಳು ಉರುಳಿದ್ದು, ಮೂವರಿಗೆ ಗಾಯಗಳಾಗಿವೆ. ನೆಲಕ್ಕುರುಳಿದ 96 ಮರಗಳನ್ನು ತೆರವು ಮಾಡಿದ್ದು, ನಾನೇ ಖುದ್ದು ಪರಿಶೀಲನೆ ಮಾಡಿದ್ದೇನೆ. ಮಳೆ ಹಾನಿ ಬಗ್ಗೆ 695 ದೂರುಗಳು ಬಂದಿವೆ. ಬಿಬಿಎಂಪಿ, ಜಲಮಂಡಳಿ, ಬೆಸ್ಕಾಂ ಎಲ್ಲರೂ ಒಟ್ಟಾಗಿ ಮಳೆ ಹಾನಿ ನಿರ್ವಹಣೆ ಮಾಡಬೇಕು ಎಂದು ಸೂಚಿಸಲಾಗಿದೆ. ರಾಜಕಾಲುವೆ ಒತ್ತುವರಿಯಾಗಿದ್ದರೆ ಮುಲಾಜಿಲ್ಲದೆ ತೆರವು ಮಾಡಲು ಅಧಿಕಾರಿಗಳಿಗೆ ಹೇಳಿರುವುದಾಗಿ ತಿಳಿಸಿದ್ದಾರೆ.

ಹಳೆಯ ಕಟ್ಟಡಗಳು ಬೀಳದಂತೆ ನೋಡಿಕೊಳ್ಳಬೇಕು. ಶಿಥಿಲಾವಸ್ಥೆ ಇರುವ ಕಟ್ಟಡಗಳನ್ನು ತೆರವು ಮಾಡಬೇಕು. ಒಣಗಿರುವ ಮರಗಳನ್ನು ಸಹ ಗುರುತಿಸಿ ತೆಗೆದು ಹಾಕಬೇಕು. ಪ್ರತಿ ವಾರ್ಟ್‌ನಲ್ಲಿ ಮೋಟಾರ್ ಪಂಪ್‌ ಇಟ್ಟುಕೊಂಡು ನೀರು ತೆರವು ಮಾಡಬೇಕು. ಇದಕ್ಕೆ ದೊಡ್ಡ ಟೀಂ ಮಾಡಿ ಅಂತ ಹೇಳಿದ್ದೇನೆ. ವಿಶೇಷವಾಗಿ ಮಹದೇವಪುರ ವ್ಯಾಪ್ತಿಯಲ್ಲಿ ಸಮಸ್ಯೆ ಇದೆ. ಎನ್‌ಡಿಆರ್‌ಎಫ್‌ ಟೀಂ ಜತೆ ಟಚ್‌ನಲ್ಲಿ ಇರಬೇಕು. ಇನ್ನು ಮುಂದಿನ 24 ಗಂಟೆಗಳಲ್ಲಿ ದೊಡ್ಡ ಮಟ್ಟದ ಮಳೆ ಆಗುವ ಸಂಭವ ಇದೆ ಹೀಗಾಗಿ ಎಲ್ಲರೂ 24/7 ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಯಾವುದೇ ಕಾರಣಕ್ಕೂ ಆಸ್ತಿ ಪಾಸ್ತಿ ಹಾನಿ, ಪ್ರಾಣಾಪಾಯ ಆಗಬಾರದು. ಮೆಟ್ರೋ ಹಳಿ ಮೇಲೆ ಮರ ಬಿದ್ದು ಹೋಗಿತ್ತು, ಈಗ ಸರಿಯಾಗಿದೆ. ಹೀಗಾಗಿ 1533 ಸಂಖ್ಯೆಗೆ ಕರೆ ಮಾಡಿ ಜನರು ಸಮಸ್ಯೆ ಹೇಳಿಕೊಳ್ಳಬಹುದು ಎಂದು ತಿಳಿಸಿದರು.

ಇದನ್ನೂ ಓದಿ | Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

‌ಬಿಬಿಎಂಪಿ ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿ, ಕಾರ್ಪೊರೇಟರ್ ಏನು ಕೆಲಸ ಮಾಡುತ್ತಾರೆ. ಜನ ಸೇವೆ ಅಂದಾಗ ಎಲ್ಲರೂ ಕೆಲಸ ಮಾಡುತ್ತಾರೆ. ಪ್ರಜಾಪ್ರಭುತ್ವದಲ್ಲಿ ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೂ ಜನಪ್ರತಿನಿಧಿ ಬೇಕು. ಪಾರ್ಲಿಮೆಂಟ್ ಚುನಾವಣೆ ಮುಗಿಯಲಿ, ಎಲ್ಲ ರೆಡಿ‌ ಮಾಡೋಣ, ಚುನಾವಣೆಗೆ ಶುಭ ಮುಹೂರ್ತ ಫಿಕ್ಸ್ ಮಾಡೋಣ ಎಂದು ಹೇಳಿದರು.

ಮಳೆ ಹಾನಿ ಬಗ್ಗೆ ಬೆಸ್ಕಾಂಗೆ ದೂರುಗಳ ಸುರಿಮಳೆ; 133 ವರ್ಷಗಳ ರೆಕಾರ್ಡ್ ಬ್ರೇಕ್ ಮಾಡಿದ ನೆನ್ನೆಯ ಮಳೆ!

Bangalore Rain

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ತಡರಾತ್ರಿ ಸುರಿದ ಧಾರಾಕಾರ ಮಳೆಯು (Bangalore Rain) ಸಾಕಷ್ಟು ಅವಾಂತರ ಸೃಷ್ಟಿಸಿದೆ. ಹೀಗಾಗಿ ಬೆಸ್ಕಾಂ ಹೆಲ್ಪ್ ಲೈನ್‌ 1912ಗೆ ದೂರುಗಳ ಸುರಿಮಳೆಯೇ ಬಂದಿದ್ದು, ವಿದ್ಯುತ್‌ ಕಂಬಗಳು ಉರುಳಿರುವುದು, ಮರಗಳು ಬಿದ್ದಿರುವುದು, ವಿದ್ಯುತ್‌ ಕಡಿತ ಸೇರಿ ಹಲವು ಸಮಸ್ಯೆಗಳ ಬಗ್ಗೆ ಬರೋಬ್ಬರಿ 8745 ದೂರುಗಳು ದಾಖಲಾಗಿವೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ಭಾನುವಾರ (ಜೂ.2) ಸುರಿದ ಮಳೆಯು (Heavy Rain) 133 ವರ್ಷಗಳ ರೆಕಾರ್ಡ್ ಬ್ರೇಕ್ ಮಾಡಿರುವುದು ಕಂಡುಬಂದಿದೆ.

ಧಾರಕಾರ ಮಳೆ ಹಿನ್ನೆಲೆಯಲ್ಲಿ ಅತಿ ಹೆಚ್ಚಿನ ದೂರುಗಳು ಬಂದಿದ್ದು, ಬೆಸ್ಕಾಂ ವ್ಯಾಪ್ತಿಯಲ್ಲಿ 74 ವಿದ್ಯುತ್ ಕಂಬಗಳು ಧರೆಗುರುಳಿದ್ದು, 102 ವಿದ್ಯುತ್ ಕಂಬಗಳ ಮೇಲೆ ಮರಗಳು ಬಿದ್ದಿವೆ. ಇನ್ನು 9 ಟ್ರಾನ್ಸ್‌ಫಾರ್ಮರ್‌ಗಳಿಗೆ ಮಳೆಯಿಂದ ಹಾನಿಯಾಗಿದೆ. ಭಾರಿ ಮಳೆಗೆ ಬೆಸ್ಕಾಂ ತತ್ತರಿಸಿದ್ದು, ತಡರಾತ್ರಿ ಸುರಿದ ಮಳೆಯಿಂದ ಬೆಸ್ಕಾಂಗೆ ಕೋಟ್ಯಂತರ ರೂ. ನಷ್ಟವಾಗಿದೆ.

ಬೆಂಗಳೂರಿನಲ್ಲಿ ಭಾನುವಾರ 111.2 ಮಿ.ಮೀ ಮಳೆ

ಬೆಂಗಳೂರಿನಲ್ಲಿ ಭಾನುವಾರ ಸಂಜೆ ಸುರಿದ ಮಳೆಯು 133 ವರ್ಷಗಳ ದಾಖಲೆಯನ್ನು ಮುರಿದಿದೆ. ರಾಜಧಾನಿಯಲ್ಲಿ ಮೇ 2ರಂದು 111.2 ಮಿ.ಮೀ ಮಳೆ ಸುರಿದಿದ್ದು, ಜೂನ್ ತಿಂಗಳಲ್ಲಿ ಆದ ದಾಖಲೆಯ ಮಳೆ ಇದಾಗಿದೆ. 1891 ಜೂನ್ 16 ರಂದು 101.6 ಮಿ.ಮೀ ಮಳೆಯಾಗಿತ್ತು. ಆದರೆ, ನೆನ್ನೆ ಸುರಿದ ಜೂನ್ ತಿಂಗಳ ಮಳೆ 133 ವರ್ಷಗಳ ದಾಖಲೆ ಮುರಿದಿದೆ ಎಂದು ವಿಸ್ತಾರನ್ಯೂಸ್‌ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: Karnataka Weather : ಬೆಂಗಳೂರಿಗೆ ಆವರಿಸಿದ ಮುಂಗಾರು; ಹಲವೆಡೆ ಇಂದು ಗಾಳಿಯೊಂದಿಗೆ ಭಯಂಕರ ಮಳೆ

1891 ಜೂನ್ 16 ರಂದು 101.6 ಮಿ.ಮೀ ಮಳೆಯಾಗಿತ್ತು. 2013 ಜೂನ್ 1 ರಂದು 100 ಮಿ.ಮೀ ಮಳೆ ಹಾಗೂ 2009 ಜೂನ್ 11 ರಂದು 89.6 ಮಿ.ಮೀ ಮಳೆಯಾಗಿತ್ತು.

Continue Reading

ಧಾರವಾಡ

Dharwad Lok Sabha Constituency: ಜೋಶಿ vs ಅಸೂಟಿ; ಯಾವ ಅಭ್ಯರ್ಥಿಗೆ ಧಾರವಾಡ ಪೇಡಾ?

Dharwad Lok Sabha Constituency: ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಪ್ರಲ್ಹಾದ್‌ ಜೋಶಿ ಅವರು ಸತತ ನಾಲ್ಕು ಬಾರಿ ಗೆಲುವು ಸಾಧಿಸಿ, ಐದನೇ ಬಾರಿಗೆ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ. ಇವರಿಗೆ ಹೊಸಮುಖವಾದ ವಿನೋದ್ ಅಸೂಟಿ ಅವರು ಕಾಂಗ್ರೆಸ್‌ನಿಂದ ಸ್ಪರ್ಧೆಯೊಡ್ಡಿದ್ದಾರೆ. ತೀವ್ರ ಪೈಪೋಟಿ, ಪ್ರತಿಷ್ಠೆಯ ಕಣವಾದಲ್ಲಿ ಧಾರವಾಡದಲ್ಲಿ ಯಾರು ಗೆಲುವು ಸಾಧಿಸಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ.

VISTARANEWS.COM


on

Dharwad Lok Sabha Constituency
Koo

ಧಾರವಾಡ: ಪೇಡಾಗಳಿಗೆ ಹೆಸರುವಾಸಿಯಾಗಿರುವ ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ (Dharwad Lok Sabha Constituency) ಸತತ ನಾಲ್ಕು ಚುನಾವಣೆಗಳಲ್ಲಿ ಗೆಲುವು ಸಾಧಿಸಿ, ಐದನೇ ಬಾರಿಗೆ ಗೆದ್ದು ದಾಖಲೆ ಸೃಷ್ಟಿಸಲು ಹಂಬಲಿಸುತ್ತಿರುವ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಅವರಿಗೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ವಿನೋದ್‌ ಅಸೂಟಿ (Vinod Asooti) ಅವರು ಸವಾಲೊಡ್ಡಿದ್ದಾರೆ. ಹಾಗಾಗಿ, ಈ ಬಾರಿ ಧಾರವಾಡ ಕ್ಷೇತ್ರದಲ್ಲಿ ಜಿದ್ದಾಜಿದ್ದಿನ ಕದನ ಏರ್ಪಟ್ಟಿದ್ದು, ವಿಜಯದ ಮಾಲೆ ಯಾರ ಕೊರಳಿಗೆ ಎಂಬ ಕುತೂಹಲ ಹೆಚ್ಚಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಲೆ, ಧಾರವಾಡ ಕ್ಷೇತ್ರದಲ್ಲಿ ಪ್ರಬಲ ಸಮುದಾಯಗಳ ಬೆಂಬಲ, ಕೇಂದ್ರ ಸಚಿವರಾಗಿ ಕ್ಷೇತ್ರಕ್ಕೆ ತಂದಿರುವ ಅಭಿವೃದ್ಧಿ ಯೋಜನೆಗಳು, ವಂದೇ ಭಾರತ್‌ ರೈಲು ಸೇರಿ ಹಲವು ಮೂಲ ಸೌಕರ್ಯಗಳು ಪ್ರಲ್ಹಾದ್‌ ಜೋಶಿ ಅವರಿಗೆ ವರದಾನವಾಗುವ ಲಕ್ಷಣಗಳಿವೆ. ಕಳೆದ ನಾಲ್ಕು ಬಾರಿ ಗೆದ್ದು, ಕ್ಷೇತ್ರದ ಜನರ ಬೆಂಬಲ, ವಿಶ್ವಾಸ ಗಳಿಸಿರುವ ಪ್ರಲ್ಹಾದ್‌ ಜೋಶಿ ಅವರು ಸತತ ಐದನೇ ಬಾರಿಗೆ ಜಯಿಸುವ ವಿಶ್ವಾಸದಲ್ಲಿದ್ದಾರೆ. ‌

Pralhad Joshi

ಗದಗ ಜಿಲ್ಲೆ ಶಿರಹಟ್ಟಿಯ ಭಾವೈಕ್ಯ ಪೀಠದ ದಿಂಗಾಲೇಶ್ವರ ಸ್ವಾಮೀಜಿ ಅವರ ವಿರೋಧದಿಂದಾಗಿ ಪ್ರಲ್ಹಾದ್‌ ಜೋಶಿ ಅವರಿಗೆ ತುಸು ಹಿನ್ನಡೆಯುಂಟಾಗಿತ್ತು. ಪಕ್ಷೇತರರಾಗಿ ದಿಂಗಾಲೇಶ್ವರ ಸ್ವಾಮೀಜಿ ಅವರು ಕಣಕ್ಕೂ ಇಳಿದಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಅವರು ಚುನಾವಣೆಯಿಂದ ಹಿಂದೆ ಸರಿದರೂ ಅವರ ಬೆಂಬಲವು ಕಾಂಗ್ರೆಸ್‌ ಅಭ್ಯರ್ಥಿಗಿದೆ. ಇದು ಜೋಶಿ ಅವರಿಗೆ ಹಿನ್ನಡೆ ತಂದರೂ ಅಚ್ಚರಿ ಇಲ್ಲ ಎನ್ನಲಾಗುತ್ತಿದೆ.

ಖಾತೆ ತೆರೆಯುವರೇ ವಿನೋದ್?

2018ರಲ್ಲಿ ನವಲಗುಂದ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದ ವಿನೋದ್ ಅಸೂಟಿಯವರು ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಈ ಬಾರಿ ಕಾಂಗ್ರೆಸ್‌ ಲಿಂಗಾಯತರ ಬದಲು ಕುರುಬ ಸಮುದಾಯದ ವಿನೋದ್ ಅಸೂಟಿ ಅವರಿಗೆ ಟಿಕೆಟ್‌ ನೀಡಿದೆ. ಇದು ಕ್ಷೇತ್ರದಲ್ಲಿ ಹಿಂದುಳಿದವರ ಮತ ಸೆಳೆಯಲು ಕಾರಣವಾಗಲಿದೆ ಎಂಬುದು ಪಕ್ಷದ ರಣತಂತ್ರವಾಗಿದೆ. ಗ್ಯಾರಂಟಿ ಯೋಜನೆಗಳಂತೂ ಸಕಾರಾತ್ಮಕ ಪ್ರಭಾವವನ್ನೇ ಬೀರಿವೆ.

2019, 2014ರ ಫಲಿತಾಂಶ ಏನಾಗಿತ್ತು?

2019ರ ಲೋಕಸಭೆ ಚುನಾವಣೆಯಲ್ಲಿ ಪ್ರಲ್ಹಾದ್‌ ಜೋಶಿ ಅವರು ಕಾಂಗ್ರೆಸ್‌ನ ವಿನಯ್‌ ಕುಲಕರ್ಣಿ ಅವರ ವಿರುದ್ಧ 2.05 ಲಕ್ಷ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದರು. 2014ರ ಸಾರ್ವತ್ರಿಕ ಚುನಾವಣೆಯಲ್ಲೂ ಪ್ರಲ್ಹಾದ್‌ ಜೋಶಿ ಅವರೇ ಜಯಿಸಿದ್ದರು. ಇವರು ವಿನಯ್‌ ಕುಲಕರ್ಣಿ ಅವರ ವಿರುದ್ಧ 1 ಲಕ್ಷಕ್ಕೂ ಅಧಿಕ ಮತಗಳ ಅಂತರಗಿಂದ ಜಯಭೇರಿ ಬಾರಿಸುವ ಮೂಲಕ ಕ್ಷೇತ್ರದಲ್ಲಿ ಬಿಜೆಪಿ ಹಿಡಿತವನ್ನು ಮತ್ತಷ್ಟು ಬಿಗಿಗೊಳಿಸಿದ್ದರು. ನರೇಂದ್ರ ಮೋದಿ ಅವರ ಅಲೆಯೂ ಪ್ರಲ್ಹಾದ್‌ ಜೋಶಿ ಅವರಿಗೆ ವರದಾನವಾಗಿತ್ತು.

ಇದನ್ನೂ ಓದಿ: Haveri Lok Sabha Constituency: ಹಾವೇರಿಯಲ್ಲಿ ಅನುಭವಿ vs ಉತ್ಸಾಹಿ; ಯಾರಿಗೆ ಜಯದ ಮಾಲೆ?

Continue Reading

ವಿಜಯಪುರ

Vijaypur Lok Sabha Constituency: ವಿಜಯಪುರದಲ್ಲಿ ಅಧಿಕಾರದ ‘ಗೋಲ ಗುಮ್ಮಟ’ ಯಾರಿಗೆ?

Vijaypur Lok Sabha Constituency: ಪರಿಶಿಷ್ಟ ಜಾತಿಗೆ ಮೀಸಲಾಗಿರುವ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ನಾಲ್ಕನೇ ಬಾರಿಗೆ ವಿಜಯ ಪತಾಕೆ ಹಾರಿಸಲು ರಮೇಶ್‌ ಜಿಗಜಿಣಗಿ ಸಜ್ಜಾಗಿದ್ದಾರೆ. ಇವರಿಗೆ ಪ್ರಬಲ ಬಲಗೈ ಸಮಾಜದ ಮುಖಂಡ ಪ್ರೊ. ರಾಜು ಆಲಗೂರ ಅವರು ಸೆಡ್ಡು ಹೊಡೆದಿದ್ದು, ಗೆಲುವು ಯಾರಿಗೆ ಸಿಗಲಿದೆ ಎಂಬುದಕ್ಕೆ ಇನ್ನೂ ಕೆಲವು ಗಂಟೆ ಕಾಯಲಬೇಕಿದೆ. ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ನೇರ ಪೈಪೋಟಿ ಏರ್ಪಟ್ಟಿತ್ತು.

VISTARANEWS.COM


on

Vijaypur Lok Sabha Constituency
Koo

ವಿಜಯಪುರ: ಗುಮ್ಮಟಗಳಿಗೆ ಪ್ರಸಿದ್ಧವಾದ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ನೇರ ಪೈಪೋಟಿ ಎದುರಾಗಿದೆ. ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಕ್ಷೇತ್ರದಲ್ಲಿ (Vijaypur Lok Sabha Constituency) ಬಿಜೆಪಿಯಿಂದ ಸತತ ನಾಲ್ಕನೇ ಬಾರಿಗೆ ರಮೇಶ್‌ ಜಿಗಜಿಣಗಿ (Ramesh Jigajinagi) ಕಣಕ್ಕಿಳಿದಿದ್ದರೆ, ಪ್ರಯೋಗಕ್ಕೆ ಮುಂದಾಗಿರುವ ಕಾಂಗ್ರೆಸ್‌, ಬಲಗೈ ಸಮಾಜದ ಪ್ರೊ.ರಾಜು ಆಲಗೂರ (Raju Algur) ಅವರನ್ನು ಕಣಕ್ಕಿಳಿಸಿದೆ. ಹಾಗಾಗಿ, ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಯಾರು ಗೆಲುವಿನ ಮಾಲೆಗೆ ಕೊರಳೊಡ್ಡಲಿದ್ದಾರೆ ಎಂಬ ಕುತೂಹಲ ಜಾಸ್ತಿಯಾಗಿದೆ.

ಜಿಗಜಿಣಗಿಗೆ ತೀವ್ರ ಪೈಪೋಟಿ

ರಮೇಶ್‌ ಜಿಗಜಿಣಗಿ ಅವರು ಕಳೆದ ಮೂರು ಚುನಾವಣೆಗಳಲ್ಲಿ ಗೆಲುವು ಸಾಧಿಸಿ ವಿಜಯಪುರ ಕ್ಷೇತ್ರದ ಜನರ ನಾಡಿಮಿಡಿತವನ್ನು ಅರಿತಿದ್ದಾರೆ. ಸುಮಾರು 1 ಲಕ್ಷ ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಕ್ಷೇತ್ರಕ್ಕೆ ತಂದಿದ್ದೇನೆ ಎಂಬುದಾಗಿ ಹೇಳುತ್ತ ಪ್ರಚಾರ ಮಾಡಿರುವ ಅವರಿಗೆ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯದವರ ಮತಗಳ ಬೆಂಬಲ ಇದೆ. ನರೇಂದ್ರ ಮೋದಿ ಅವರ ಅಲೆ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರೊಂದಿಗಿನ ಮುನಿಸು ಶಮನವಾಗಿರುವುದು ರಮೇಶ್‌ ಜಿಗಜಿಣಗಿ ಅವರಿಗೆ ಪ್ಲಸ್‌ ಪಾಯಿಂಟ್‌ ಆಗಿದೆ.

Mp Ramesh Jigajinagi

ಆದರೆ, ಸತತ ಮೂರು ಬಾರಿ ಇವರೇ ಸಂಸದರಾಗಿದ್ದು, ಕ್ಷೇತ್ರದ ಪರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಿಲ್ಲ ಎಂಬ ಕೊರಗು ಜನರಲ್ಲಿದೆ. ಆಡಳಿತ ವಿರೋಧಿ ಅಲೆಯೂ ತುಸು ಹೆಚ್ಚೇ ಇದೆ. ಅವರು ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳಿ ಅನುಕಂಪ ಗಿಟ್ಟಿಸಿಕೊಳ್ಳಲು ಮುಂದಾಗಿದ್ದು ಕೂಡ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಕಳೆದ ಬಾರಿಗಿಂತ ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಬಲಿಷ್ಠವಾಗಿರುವುದೂ ಜಿಗಜಿಣಗಿ ಅವರಿಗೆ ಹಿನ್ನಡೆ ತರಲಿದೆ ಎಂದೇ ಹೇಳಲಾಗುತ್ತಿದೆ.

ಫಲ ಕೊಡುವುದೇ ಕಾಂಗ್ರೆಸ್‌ ಪ್ರಯೋಗ?

ಕಳೆದ ಮೂರು ಚುನಾವಣೆಗಳಲ್ಲೂ ಬಂಜಾರ ಸಮುದಾಯದ ಅಭ್ಯರ್ಥಿಗೆ ಟಿಕೆಟ್‌ ನೀಡಿದ್ದ ಕಾಂಗ್ರೆಸ್‌ ಈ ಬಾರಿ ಬಲಗೈ ಸಮಾಜದ ಪ್ರೊ. ರಾಜು ಆಲಗೂರ ಅವರಿಗೆ ಟಿಕೆಟ್‌ ನೀಡುವ ಮೂಲಕ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಕ್ಷೇತ್ರದಲ್ಲಿರುವ ಆಡಳಿತ ವಿರೋಧಿ ಅಲೆಯನ್ನು ಸಮರ್ಥವಾಗಿ ಬಳಸಿಕೊಂಡಿರುವ ರಾಜು ಆಲಗೂರ ಅವರಿಗೆ ಸಚಿವ ಎಂ.ಬಿ.ಪಾಟೀಲ್‌ ಅವರ ಬೆಂಬಲ, ಸಹಕಾರ ಇದೆ. ಗ್ಯಾರಂಟಿ ಯೋಜನೆಗಳನ್ನೂ ಕ್ಷೇತ್ರದ ಜನ ಮೆಚ್ಚಿಕೊಂಡಿದ್ದಾರೆ. ಹಾಗಾಗಿ, ಚುನಾವಣೆ ಫಲಿತಾಂಶವು ಹೆಚ್ಚಿನ ಕುತೂಹಲ ಕೆರಳಿಸಿದೆ.

2019, 2014ರ ಫಲಿತಾಂಶ

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ರಮೇಶ್‌ ಜಿಗಜಿಣಗಿ ಅವರು ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಇವರು ತಮ್ಮ ಪ್ರತಿಸ್ಪರ್ಧಿ ಸುನೀತಾ ದೇವಾನಂದ ಚೌಹಾಣ್‌ ಅವರ ವಿರುದ್ಧ 2.58 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. 2014ರ ಲೋಕಸಭೆ ಚುನಾವಣೆಯು ತೀವ್ರ ಜಿದ್ದಾಜಿದ್ದಿನಿಂದ ಕೂಡಿತ್ತು. ಆದರೂ, ರಮೇಶ್‌ ಜಿಗಜಿಣಗಿ ಅವರು ಕಾಂಗ್ರೆಸ್‌ನ ಪ್ರಕಾಶ್‌ ರಾಥೋಡ್‌ ಅವರ ವಿರುದ್ಧ 69 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ: Lok Sabha Election 2024: ಮೈಸೂರು ಕ್ಷೇತ್ರದಲ್ಲಿ ಗೆಲುವು ಯಾರಿಗೆ? ಶ್ವಾನದಿಂದ ಅಚ್ಚರಿಯ ಭವಿಷ್ಯ!

Continue Reading
Advertisement
Bagalkot Lok Sabha Constituency
ಪ್ರಮುಖ ಸುದ್ದಿ11 mins ago

Bagalkot Lok Sabha Constituency: ಬಿಜೆಪಿಯ ಭದ್ರಕೋಟೆ ಭೇದಿಸುವರೇ ಸಂಯುಕ್ತಾ ಪಾಟೀಲ್?

karnataka weather Forecast Putur rain
ಮಳೆ28 mins ago

Karnataka Weather : ತೊಯ್ದು ತೊಪ್ಪೆಯಾದ ಪುತ್ತೂರು; ನಾಳೆ ಮಳೆ ಅಬ್ಬರ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

IND vs PAK
ಕ್ರಿಕೆಟ್45 mins ago

IND vs PAK: ಭಾರತ ವಿರುದ್ಧ ಶಾಂತ ಚಿತ್ತರಾಗಿ ಆಡುವ ಉಪಾಯ ಮಾಡಿದ ಕುತಂತ್ರಿ ಪಾಕ್​

Bangalore Rain
ಪ್ರಮುಖ ಸುದ್ದಿ53 mins ago

Bangalore Rain: ರಾಜಕಾಲುವೆ ಒತ್ತುವರಿ; ಮುಲಾಜಿಲ್ಲದೆ ತೆರವು ಮಾಡಲು ಡಿಕೆಶಿ ಸೂಚನೆ

Stock Market
ವಾಣಿಜ್ಯ1 hour ago

Stock Market: ಮತ್ತೊಮ್ಮೆ ಮೋದಿ ಸರ್ಕಾರದ ನಿರೀಕ್ಷೆ; ಸೆನ್ಸೆಕ್ಸ್ 2,600 ಪಾಯಿಂಟ್ಸ್‌ ಏರಿಕೆ

Dharwad Lok Sabha Constituency
ಧಾರವಾಡ1 hour ago

Dharwad Lok Sabha Constituency: ಜೋಶಿ vs ಅಸೂಟಿ; ಯಾವ ಅಭ್ಯರ್ಥಿಗೆ ಧಾರವಾಡ ಪೇಡಾ?

Anant Ambani Radhika Merchant Pre Wedding
ಫ್ಯಾಷನ್1 hour ago

Anant Ambani Radhika Merchant Pre Wedding: ಅಂಬಾನಿ ಫ್ಯಾಮಿಲಿಯ ಕ್ರ್ಯೂಸ್ ಟೂರ್‌ನಲ್ಲಿ ಸ್ಟಾರ್‌ಗಳ ಮಕ್ಕಳ ಲುಕ್‌ ಹೇಗಿದೆ ನೋಡಿ!

Vijaypur Lok Sabha Constituency
ವಿಜಯಪುರ2 hours ago

Vijaypur Lok Sabha Constituency: ವಿಜಯಪುರದಲ್ಲಿ ಅಧಿಕಾರದ ‘ಗೋಲ ಗುಮ್ಮಟ’ ಯಾರಿಗೆ?

IND vs PAK
ಕ್ರಿಕೆಟ್2 hours ago

IND vs PAK: ಸ್ನೈಪರ್ ಗನ್​ ಕಣ್ಗಾವಲಿನಲ್ಲಿ ಭಾರತ-ಪಾಕ್ ಟಿ20​ ವಿಶ್ವಕಪ್​ ಪಂದ್ಯ

Lok Sabha Election Result 2024
ದೇಶ2 hours ago

Lok Sabha Election Result 2024: ನಾಳೆ ಲೋಕಸಭೆ ಚುನಾವಣೆ ಫಲಿತಾಂಶ; ಯಾರಿಗೆ ಅಧಿಕಾರ? ನಿಮ್ಮ ಅಭಿಪ್ರಾಯ ತಿಳಿಸಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌