Kangana Ranaut : ಕ್ವೀನ್​ಗೆ ಪ್ರತಿಸ್ಪರ್ಧಿ ಕಿಂಗ್​​ ; ಮಂಡಿಯಲ್ಲಿ ಕಂಗನಾ ವಿರುದ್ಧ ವಿಕ್ರಮಾದಿತ್ಯ ಸಿಂಗ್ - Vistara News

ಪ್ರಮುಖ ಸುದ್ದಿ

Kangana Ranaut : ಕ್ವೀನ್​ಗೆ ಪ್ರತಿಸ್ಪರ್ಧಿ ಕಿಂಗ್​​ ; ಮಂಡಿಯಲ್ಲಿ ಕಂಗನಾ ವಿರುದ್ಧ ವಿಕ್ರಮಾದಿತ್ಯ ಸಿಂಗ್

Kangana Ranaut: ಹೆಸರು ಘೋಷಿಸುವ ಮೊದಲೇ, ಕಂಗನಾ ರಣಾವತ್​​ ವಿಕ್ರಮಾದಿತ್ಯ ಅವರನ್ನು ‘ಛೋಟಾ ಪಪ್ಪು’ ಎಂದು ಕರೆದಿದ್ದರು. ಈ ಮೂಲಕ ಮಂಡಿಯ ಜಿದ್ದು ಶುರುವಾಗಿತ್ತು. ಅದಕ್ಕೆ ಪ್ರತಿಕ್ರಿಯಿಸಿದ ವಿಕ್ರಮಾದಿತ್ಯ, ನಟಿ ಗೆ ಸ್ವಲ್ಪ “ಒಳ್ಳೆಯ ಬುದ್ಧಿ” ನೀಡುವಂತೆ ಭಗವಾನ್ ರಾಮನನ್ನು ಪ್ರಾರ್ಥಿಸುವುದಾಗಿ ಹೇಳಿದ್ದರು.

VISTARANEWS.COM


on

Kangana Ranaut
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಧರ್ಮಶಾಲಾ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ದಂಗೆ ಎದ್ದು ಬಳಿಕ ಸಮಾಧಾನ ಮಾಡಿಕೊಂಡಿದ್ದ ಶಾಸಕ ವಿಕ್ರಮಾದಿತ್ಯ ಸಿಂಗ್ ಅವರು ಹಿಮಾಚಲ ಪ್ರದೇಶದ ಮಂಡಿಯಲ್ಲಿ ಬಿಜೆಪಿಯ ಕಂಗನಾ ರಣಾವತ್ (Kangana Ranaut)​ ವಿರುದ್ಧ ಸ್ಪರ್ಧಿಸಲಿದ್ದಾರೆ. 2024 ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಶನಿವಾರ 16 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದು ಅದರಲ್ಲಿ ಸಿಂಗ್ ಹೆಸರು ಪ್ರಕಟಿಸಲಾಗಿದೆ. ಹಿಮಾಚಲ ಪ್ರದೇಶದ (himachal pradesh) ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ (Veerabhadra Singh) ಅವರ ಪುತ್ರ 35 ವರ್ಷದ ವಿಕ್ರಮಾದಿತ್ಯ ಸಿಂಗ್ ಅವರು ತಮ್ಮ ತಾಯಿ ಹಾಲಿ ಸಂಸದೆ ಪ್ರತಿಭಾ ಸಿಂಗ್ ಅವರ ಬದಲಿಗೆ ಈ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಸಿಂಗ್​​ ರಾಜಮನೆತನದವರಾಗಿರುವ ಕಾರಣ ಇದನ್ನು ಕಿಂಗ್​ ವರ್ಸಸ್​ ಕ್ವೀನ್ ಎಂದೇ ಕರೆಯಲಾಗಿದೆ.

ಹಾಲಿ ಸಂಸದೆ ಕಿರಣ್ ಖೇರ್ ಬದಲಿಗೆ ಟಿಕೆಟ್​ ಪಡೆದಿದ್ದ ಬಿಜೆಪಿಯ ಸಂಜಯ್ ಟಂಡನ್ ವಿರುದ್ಧ ಮನೀಶ್ ತಿವಾರಿ ಚಂಡೀಗಢದಿಂದ ಸ್ಪರ್ಧಿಸಲಿದ್ದಾರೆ.

ಮಹೇಸಾನಾದಿಂದ ರಾಮ್ಜಿ ಠಾಕೂರ್, ಅಹಮದಾಬಾದ್ ಪೂರ್ವದಿಂದ ಹಿಮ್ಮತ್​​ಸಿನ್ಹ ಪಟೇಲ್, ರಾಜ್​ಕೋಟ್​ನಿಂದ ಪರೇಶ್ಭಾಯ್ ಧನಾನಿ, ನವಸಾರಿಯಿಂದ ನೈಶಾದ್ ದೇಸಾಯಿ, ಶಿಮ್ಲಾದಿಂದ ವಿನೋದ್ ಸುಲ್ತಾನ್ಪುರಿ, ಕಿಯೋಂಜಾರ್​​ನಿಂದ ಮೋಹನ್ ಹೆಂಬ್ರಮ್, ಬಾಲಸೋರ್​ನಿಂದ ಶ್ರೀಕಾಂತ್ ಕುಮಾರ್ ಜೆನಾ, ಭದ್ರಾಕ್​​ನಿಂದ ಅನಂತ್ ಪ್ರಸಾದ್ ಸೇಥಿ, ಜಜ್ಪುರದಿಂದ ಅಂಚಲ್ ದಾಸ್, ಧೆಂಕನಲ್ನಿಂದ ಸಶ್ಮಿತಾ ಬೆಹೆರಾ, ಕೇಂದ್ರಪಾರಾದಿಂದ ಸಿದ್ಧಾರ್ಥ್ ಸ್ವರೂಪ್ ದಾಸ್ ಅವರ ಹೆಸರುಗಳನ್ನು ಶನಿವಾರ ಘೋಷಿಸಲಾಗಿದೆ.

ಮಂಡಿಯಿಂದ ವಿಕ್ರಮಾದಿತ್ಯ ಸಿಂಗ್ ವರ್ಸಸ್ ಕಂಗನಾ ರಣಾವತ್​

ಹೆಸರು ಘೋಷಿಸುವ ಮೊದಲೇ, ಕಂಗನಾ ರಣಾವತ್​​ ವಿಕ್ರಮಾದಿತ್ಯ ಅವರನ್ನು ‘ಛೋಟಾ ಪಪ್ಪು’ ಎಂದು ಕರೆದಿದ್ದರು. ಈ ಮೂಲಕ ಮಂಡಿಯ ಜಿದ್ದು ಶುರುವಾಗಿತ್ತು. ಅದಕ್ಕೆ ಪ್ರತಿಕ್ರಿಯಿಸಿದ ವಿಕ್ರಮಾದಿತ್ಯ, ನಟಿ ಗೆ ಸ್ವಲ್ಪ “ಒಳ್ಳೆಯ ಬುದ್ಧಿ” ನೀಡುವಂತೆ ಭಗವಾನ್ ರಾಮನನ್ನು ಪ್ರಾರ್ಥಿಸುವುದಾಗಿ ಹೇಳಿದ್ದರು.

ಇದನ್ನೂ ಓದಿ: Job Alert: ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ; ವಿವಿಧ ಹುದ್ದೆಗಳಿಗೆ ಏ. 25ರೊಳಗೆ ಅರ್ಜಿ ಸಲ್ಲಿಸಿ

“ನಾವು ನಮ್ಮ ಅಕ್ಕ ಕಂಗನಾ ರಣಾವತ್​​ ಅವರನ್ನು ಗೌರವಿಸುತ್ತೇವೆ. ಇಂದು ಅವರು ಮನಾಲಿಯ ಜನರನ್ನುದ್ದೇಶಿಸಿ ಮಾತನಾಡುತ್ತಿದ್ದರು. ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕರ ವಿರುದ್ಧ ಮಾತನಾಡುವ ಬದಲು, ಕೆಲವು ತಿಂಗಳ ಹಿಂದೆ ಮನಾಲಿಯಲ್ಲಿ ಸಂಭವಿಸಿದ ಶತಮಾನದ ಅತಿದೊಡ್ಡ ವಿಪತ್ತಿನ ಸಮಸ್ಯೆಗಳ ಬಗ್ಗೆ ಅವರು ಕೈಗೆತ್ತಿಕೊಂಡು ಮಾತನಾಡಿದ್ದರೆ ಚೆನ್ನಾಗಿರುತ್ತಿತ್ತು” ಎಂದು ವಿಕ್ರಮಾದಿತ್ಯ ಹೇಳಿದ್ದರು.

ಇದಕ್ಕೂ ಮೊದಲು, ವಿಕ್ರಮಾದಿತ್ಯ ಕಂಗನಾ ಅವರನ್ನು ವಿವಾದದ ರಾಣಿ ಎಂದು ಕರೆದಿದ್ದರು. ಅವರಿಗೆ ಹಿಮಾಚಲದ ಬಗ್ಗೆ ಏನೂ ತಿಳಿದಿಲ್ಲ ಎಂದು ಹೇಳಿದ್ದರು. ಇದು ನಿಮ್ಮ ತಂದೆ ಅಥವಾ ಅಜ್ಜನ ಎಸ್ಟೇಟ್ ಅಲ್ಲ, ನೀವು ನನ್ನನ್ನು ಬೆದರಿಸಿ ವಾಪಸ್ ಕಳುಹಿಲು ಸಾಧ್ಯವಿಲ್ಲ. . ಇದು ಪ್ರಧಾನಿ ನರೇಂದ್ರ ಮೋದಿಯವರ ಹೊಸ ಭಾರತ. ಚಹಾ ಮಾರಾಟ ಮಾಡುತ್ತಿದ್ದ ಸಣ್ಣ, ಬಡ ಹುಡುಗ ಜನರ ಅತಿದೊಡ್ಡ ನಾಯಕ ಮತ್ತು “ಪ್ರಧಾನ ಸೇವಕ” ಎಂದು ಪ್ರತ್ಯುತ್ತರ ಕೊಟ್ಟಿದ್ದರು.

ವಿಕ್ರಮಾದಿತ್ಯ ಸಿಂಗ್ ಈಗ ರಾಂಪುರ ಎಂದು ಕರೆಯಲ್ಪಡುವ ಹಿಂದಿನ ಭೂಶರ್ ಎಸ್ಟೇಟ್ಸ್​​​ ವಂಶಸ್ಥರಾಗಿದ್ದಾರೆ. ಅವರ ತಂದೆಯ ಮರಣದ ನಂತರ ಅವನನ್ನು ಹಿಂದಿನ ರಾಜಪ್ರಭುತ್ವದ ರಾಜ್ಯದ ರಾಜನಾಗಿ ಕಿರೀಟಧಾರಣೆ ಮಾಡಲಾಗಿತ್ತು.

ಹಿಮಾಚಲ ಪ್ರದೇಶದಲ್ಲಿ ನಾಲ್ಕು ಲೋಕಸಭಾ ಕ್ಷೇತ್ರಗಳಿವೆ. ಕಾಂಗ್ರೆಸ್ ಶಾಸಕರ ಅನರ್ಹತೆಯಿಂದಾಗಿ ತೆರವಾಗಿರುವ ಹಿಮಾಚಲ ಪ್ರದೇಶದ ಆರು ವಿಧಾನಸಭಾ ಸ್ಥಾನಗಳು ಸೇರಿದಂತೆ ಈ ನಾಲ್ಕು ಸ್ಥಾನಗಳಿಗೆ ಜೂನ್ 1 ರಂದು ಮತದಾನ ನಡೆಯಲಿದೆ. 2019 ರಲ್ಲಿ ಬಿಜೆಪಿ ಎಲ್ಲಾ ನಾಲ್ಕು ಸ್ಥಾನಗಳನ್ನು ಗೆದ್ದಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Gratuity: ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್;‌ ಗ್ರಾಚ್ಯುಟಿ, ಶಿಕ್ಷಣ ಭತ್ಯೆ ಶೀಘ್ರವೇ 25% ಹೆಚ್ಚಳ!

Gratuity: ಎರಡು ತಿಂಗಳ ಹಿಂದಷ್ಟೇ ನೌಕರರ ತುಟ್ಟಿ ಭತ್ಯೆಯನ್ನು ಶೇ.4ರಷ್ಟು ಏರಿಕೆ ಮಾಡಿದ್ದ ಕೇಂದ್ರ ಸರ್ಕಾರವೀಗ ನೌಕರರ ಗ್ರಾಚ್ಯುಟಿ, ಮಕ್ಕಳ ಶಿಕ್ಷಣ ಭತ್ಯೆಯನ್ನೂ ಶೇ.25ರಷ್ಟು ಏರಿಕೆ ಮಾಡಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಇದರಿಂದ ಲಕ್ಷಾಂತರ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ ಎಂದು ತಿಳಿದುಬಂದಿದೆ.

VISTARANEWS.COM


on

Gratuity
Koo

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರವು (Central Government) ಮತ್ತೊಂದು ಗುಡ್‌ ನ್ಯೂಸ್‌ ನೀಡಲು ಸಜ್ಜಾಗಿದೆ. ಕಳೆದ ಜನವರಿಯಲ್ಲಿಯೇ ನೌಕರರ ತುಟ್ಟಿಭತ್ಯೆಯನ್ನು ಶೇ.4ರಷ್ಟು ಹೆಚ್ಚಿಸಿದ್ದ ಕೇಂದ್ರ ಸರ್ಕಾರವು ಶೀಘ್ರದಲ್ಲಿಯೇ ನೌಕರರ ಮಕ್ಕಳ ಶಿಕ್ಷಣ ಭತ್ಯೆ, ಹಾಸ್ಟೆಲ್‌ ಸಬ್ಸಿಸಿ, ನಿವೃತ್ತಿ ಗ್ರಾಚ್ಯುಟಿ (Gratuity) ಹಾಗೂ ಸಾವಿನ ಗ್ರಾಚ್ಯುಟಿಯನ್ನು ಶೇ.25ರಷ್ಟು ಏರಿಕೆ ಮಾಡಲಿದೆ ಎಂದು ತಿಳಿದುಬಂದಿದೆ. ಇದರಿಂದ ಲಕ್ಷಾಂತರ ನೌಕರರು (Government Employees) ಸೌಲಭ್ಯಗಳನ್ನು ಪಡೆಯಲಿದ್ದಾರೆ. ಏಳನೇ ವೇತನ ಆಯೋಗದ ಶಿಫಾರಸಿನ ಅನ್ವಯ ಏರಿಕೆ ಮಾಡಲಿದೆ ಎಂದು ತಿಳಿದುಬಂದಿದೆ.

ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳವಾಗುತ್ತಲೇ ಅವರ ಮಕ್ಕಳ ಶಿಕ್ಷಣ ಭತ್ಯೆ ಹಾಗೂ ಹಾಸ್ಟೆಲ್‌ ಸಬ್ಸಿಡಿ ಕೂಡ ಜಾಸ್ತಿಯಾಗುತ್ತದೆ. ಅದರಂತೆ, ಕೇಂದ್ರ ಸರ್ಕಾರವು ಶೀಘ್ರದಲ್ಲೇ ಈ ಕುರಿತು ಆದೇಶ ಹೊರಡಿಸಲಿದೆ ಎಂದು ತಿಳಿದುಬಂದಿದೆ. ಹೊಸ ಆದೇಶದ ಬಳಿಕ ರಿಟೈರ್‌ಮೆಂಟ್‌ ಗ್ರಾಚ್ಯುಟಿ ಮೊತ್ತವು ಶೇ.25ರಷ್ಟು ಅಂದರೆ, 20 ಲಕ್ಷ ರೂ.ನಿಂದ 25 ಲಕ್ಷ ರೂ.ಗೆ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.

Cash

ಕೇಂದ್ರ ಸರ್ಕಾರಿ ನೌಕರರಿಗೆ ಕೆಲ ತಿಂಗಳ ಹಿಂದಷ್ಟೇ ಕೇಂದ್ರ ಸರ್ಕಾರವು ಬಂಪರ್‌ ಕೊಡುಗೆ ನೀಡಿತ್ತು. ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.4ರಷ್ಟು ಏರಿಕೆ ಮಾಡಿತ್ತು. ಇದರೊಂದಿಗೆ ನೌಕರರಿಗೆ ನೀಡುತ್ತಿರುವ ತುಟ್ಟಿಭತ್ಯೆಯು ಶೇ.50ರಷ್ಟು ಆಗಿದೆ. ತುಟ್ಟಿ ಭತ್ಯೆಯ ಜತೆಗೆ ಕೇಂದ್ರ ಸರ್ಕಾರವು ಮನೆ ಬಾಡಿಗೆ ಅಲೋವನ್ಸ್‌ (HRA) ಕೂಡ ಏರಿಕೆ ಮಾಡಿತ್ತು. ಇದರೊಂದಿಗೆ ಕೇಂದ್ರ ಸರ್ಕಾರಕ್ಕೆ ವಾರ್ಷಿಕ 12,868 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಖರ್ಚುವಾಗಲಿದೆ. 2024ರ ಜನವರಿ 1ರಿಂದಲೇ ತುಟ್ಟಿಭತ್ಯೆ ಹೆಚ್ಚಳವು ಅನ್ವಯವಾಗಿದೆ.

ಏರುತ್ತಿರುವ ಬೆಲೆಗಳನ್ನು ಸರಿದೂಗಿಸಲು ಸರ್ಕಾರವು ತನ್ನ ಉದ್ಯೋಗಿಗಳಿಗೆ ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ ನೀಡುತ್ತದೆ. ಇತ್ತೀಚಿನ ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿ ಇದನ್ನು ಲೆಕ್ಕಹಾಕಲಾಗುತ್ತದೆ. ಇದು ಸುಮಾರು 47.58 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 69.76 ಲಕ್ಷ ಪಿಂಚಣಿದಾರರಿಗೆ ಪ್ರಯೋಜನ ನೀಡುತ್ತದೆ. ಈ ಹೆಚ್ಚಳವು 7ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿದ ಅಂಗೀಕೃತ ಸೂತ್ರಕ್ಕೆ ಅನುಗುಣವಾಗಿದೆ ಎಂದು ತಿಳಿದುಬಂದಿತ್ತು.

2023ರ ಮಾರ್ಚ್‌ನಲ್ಲೂ ಕೇಂದ್ರ ಸರ್ಕಾರವು ನೌಕರರು ಹಾಗೂ ಪಿಂಚಣಿದಾರರಿಗೆ ನೀಡುವ ತುಟ್ಟಿಭತ್ಯೆಯನ್ನು ಶೇ.4ರಷ್ಟು ಹೆಚ್ಚಿಸಿತ್ತು. ಇದರಿಂದ ನೌಕರರಿಗೆ ಸಿಗುವ ತುಟ್ಟಿಭತ್ಯೆಯು ಶೇ.38ರಿಂದ ಶೇ.42ಕ್ಕೆ ಏರಿಕೆಯಾಗಿತ್ತು. ಅಲ್ಲದೆ, ಕಳೆದ ವರ್ಷದ ಜುಲೈನಲ್ಲಿ ನೌಕರರು ಹಾಗೂ ಪಿಂಚಣಿದಾರರಿಗೆ ನೀಡುವ ತುಟ್ಟಿಭತ್ಯೆಯನ್ನು ಶೇ.42ರಿಂದ ಶೇ.46ಕ್ಕೆ ಏರಿಕೆ ಮಾಡಲಾಗಿತ್ತು.

ಇದನ್ನೂ ಓದಿ: LPG Price Cut: ತಿಂಗಳ ಆರಂಭದಲ್ಲೇ ಗುಡ್‌ನ್ಯೂಸ್‌; ಎಲ್‌ಪಿಜಿ ಬೆಲೆ 19 ರೂ. ಇಳಿಕೆ

Continue Reading

ಹಾಸನ

Prajwal Revanna Case‌: ಗನ್‌ ಪಾಯಿಂಟ್‌ನಲ್ಲಿ ಜೆಡಿಎಸ್‌ ನಾಯಕಿ ಮೇಲೆ ಪ್ರಜ್ವಲ್‌ರಿಂದ ರೇಪ್‌? ಎಫ್‌ಐಆರ್‌ನಲ್ಲಿದೆ ಇಂಚಿಂಚು ಡಿಟೇಲ್ಸ್!

Prajwal Revanna Case‌: ಜೆಡಿಎಸ್‌ ನಾಯಕಿ ತಮ್ಮ ಮೇಲೆ ಯಾವಾಗ ಅತ್ಯಾಚಾರ ನಡೆದಿದೆ ಎಂಬ ಸಂಗತಿಯನ್ನೂ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. 2021ರಲ್ಲಿ ಬಿಸಿಎಂ ಹಾಸ್ಟೆಲ್ ವಿಚಾರದ ಬಗ್ಗೆ ಸಂಸದ ಪ್ರಜ್ವಲ್‌ ರೇವಣ್ಣ ಅವರ ಬಳಿ ಮಾತನಾಡಲು ಹೋದಾಗ ತಮ್ಮ ಮೇಲೆರಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ವೇಳೆ ತಾವು ನಿರಾಕರಣೆ ಮಾಡಿದಾಗ ಗನ್‌ ಹಿಡಿದು ಹೆದರಿಸಿ ಬಲಾತ್ಕಾರ ಮಾಡಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದಾರೆ. ಹಾಸನದಲ್ಲಿರುವ ಸಂಸದರ ಬಂಗಲೆಯ ಮಹಡಿ ರೂಮ್‌ನಲ್ಲೇ ರೇಪ್ ಮಾಡಲಾಗಿದೆ ಎಂದು ಮಹಿಳೆ ಆರೋಪ ಮಾಡಿದ್ದಾರೆ.

VISTARANEWS.COM


on

Prajwal Revanna Case I was raped at gunpoint JDS women leader files complaint against Prajwal
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ದಾಖಲಾಗಿರುವ ರೇಪ್ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಈ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣ ನೇರವಾಗಿ ಸಿಕ್ಕಿಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಕೊಟ್ಟ ದೂರಿನಲ್ಲಿ ಭಯಾನಕ ಸತ್ಯಗಳು ಹೊರಬಂದಿದ್ದು, ಗನ್‌ ಪಾಯಿಂಟ್‌ನಲ್ಲಿ ಜೆಡಿಎಸ್‌ ನಾಯಕಿ ಮೇಲೆಯೇ ಪ್ರಜ್ವಲ್ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಈಗ ಕೇಳಿಬಂದಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಈಗ ಜೆಡಿಎಸ್‌ ನಾಯಕಿ, ಸಂತ್ರಸ್ತೆ ದೂರಿನಲ್ಲಿ ತನಗಾದ ಅನ್ಯಾಯವನ್ನು ಹಾಗೂ ಅತ್ಯಾಚಾರದ ಸಂಗತಿಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದು, ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

2021ರಲ್ಲಿ ಬಿಸಿಎಂ ಹಾಸ್ಟೆಲ್ ವಿಚಾರದ ಮಾತಿಗೆ ಹೋದಾಗ ರೇಪ್‌?

ಜೆಡಿಎಸ್‌ ನಾಯಕಿ ತಮ್ಮ ಮೇಲೆ ಯಾವಾಗ ಅತ್ಯಾಚಾರ ನಡೆದಿದೆ ಎಂಬ ಸಂಗತಿಯನ್ನೂ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. 2021ರಲ್ಲಿ ಬಿಸಿಎಂ ಹಾಸ್ಟೆಲ್ ವಿಚಾರದ ಬಗ್ಗೆ ಸಂಸದ ಪ್ರಜ್ವಲ್‌ ರೇವಣ್ಣ ಅವರ ಬಳಿ ಮಾತನಾಡಲು ಹೋದಾಗ ತಮ್ಮ ಮೇಲೆರಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ವೇಳೆ ತಾವು ನಿರಾಕರಣೆ ಮಾಡಿದಾಗ ಗನ್‌ ಹಿಡಿದು ಹೆದರಿಸಿ ಬಲಾತ್ಕಾರ ಮಾಡಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದಾರೆ. ಹಾಸನದಲ್ಲಿರುವ ಸಂಸದರ ಬಂಗಲೆಯ ಮಹಡಿ ರೂಮ್‌ನಲ್ಲೇ ರೇಪ್ ಮಾಡಲಾಗಿದೆ ಎಂದು ಮಹಿಳೆ ಆರೋಪ ಮಾಡಿದ್ದಾರೆ.

ಗಂಡನ ಬಗ್ಗೆ ಬೆದರಿಸಿ ಬಲಾತ್ಕಾರ

ದೈಹಿಕ ಸಂಪರ್ಕ ಬೆಳೆಸಲು ಪ್ರಜ್ವಲ್‌ ಮುಂದಾಗುತ್ತಿದ್ದಂತೆ ನಾನು ನಿರಾಕರಣೆ ಮಾಡಿದೆ. ಆಗ “ನಿನ್ನ ಗಂಡನನ್ನು ನಾನು ಬಿಡಲ್ಲ” ಎಂದು ಹೆದರಿಸಿ ದೌರ್ಜನ್ಯ ನಡೆಸಿದರು ಎಂದು ಎಸ್‌ಐಟಿಗೆ ಸಂತ್ರಸ್ತೆ ನೀಡಿದ್ದ ದೂರು ಆಧಾರದಲ್ಲಿ ಸಿಐಡಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಐಪಿಸಿ ಸೆಕ್ಷನ್‌ 376 (2) (ಎನ್‌) ಹಾಗೂ ಐಟಿ ಆ್ಯಕ್ಟ್‌ನಲ್ಲಿ ಎಫ್ಐಆರ್ ಅನ್ನು ದಾಖಲು ಮಾಡಲಾಗಿದೆ. ಹೇಗೆಲ್ಲ ದೌರ್ಜನ್ಯ, ದಬ್ಬಾಳಿಕೆ, ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Prajwal Revanna Case: ರೇವಣ್ಣ ಮೇಲಿನ ಮತ್ತೊಂದು ಕೇಸ್‌ ಎಸ್‌ಐಟಿಗೆ ವರ್ಗ; ಭವಾನಿಗೂ ನೋಟಿಸ್‌!

ರೇಪ್‌ ಮತ್ತು ಚಿತ್ರೀಕರಣ ಆರೋಪ

ತಮ್ಮ ಮೇಲೆ ಬಲಾತ್ಕಾರ ಮಾಡಿದ್ದಲ್ಲದೆ, ಅದನ್ನು ಚಿತ್ರೀಕರಣ ಮಾಡಿಕೊಂಡಿದ್ದಾರೆ. ಈ ವಿಚಾರದ ಬಗ್ಗೆ ಬಾಯಿ ಬಿಟ್ಟರೆ ಸೋಷಿಯಲ್‌ ಮೀಡಿಯಾದಲ್ಲಿ ನಿನ್ನ ವಿಡಿಯೊವನ್ನು ಬಿಡುತ್ತೇನೆ ಎಂಧು ಬೆದರಿಕೆ ಒಡ್ಡಿದ್ದಾರೆ. ನಾನು ಕರೆದಾಗೆಲ್ಲ ನೀನು ಬರಬೇಕು. ಇಲ್ಲದಿದ್ದರೆ ನನ್ನ ಬಳಿ ಇರುವ ವಿಡಿಯೊವನ್ನು ಹರಿಬಿಡುತ್ತೇನೆ ಎಂದು ಬೆದರಿಸಿ ಕಳುಹಿಸಿದ್ದಾರೆ. ಇಷ್ಟೇ ಅಲ್ಲದೆ, ಪದೇ ಪದೆ ವಿಡಿಯೊ ಕಾಲ್‌ ಮಾಡಿ ಬೆತ್ತಲೆಯಾಗು ತಾನು ನೋಡಬೇಕು ಎಂದು ಕಿರುಕುಳ ಕೊಟ್ಟು ನಗ್ನತೆಯನ್ನು ನೋಡುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ‌ಅಲ್ಲದೆ, ಪದೇ ಪದೆ ತಮಗೆ ಬ್ಲ್ಯಾಕ್‌ಮೇಲ್‌ ಮಾಡಿ ಬಲಾತ್ಕಾರ ಮಾಡುತ್ತಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Continue Reading

ಮಳೆ

Bengaluru Rains : ಬೆಂಗಳೂರಲ್ಲಿ ಶುರುವಾಯ್ತು ಮಳೆಗಾಲ; ಕವಿದ ಕಾರ್ಮೋಡ, ಭಯಂಕರ ವರ್ಷಧಾರೆ

Bengaluru Rains : ಮಳೆಯಿಲ್ಲದೆ ಸೊರಗಿದ್ದ ಬೆಂಗಳೂರಿಗರಿಗೆ ವರುಣ ಅಂತೂ ಪ್ರವೇಶಿಸಿದ್ದಾನೆ. ನಿನ್ನೆ ಸಂಜೆ ಗುರುವಾರದಿಂದ ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಮಳೆಯಾಗಿದ್ದು, ಶುಕ್ರವಾರ ಮಧ್ಯಾಹ್ನವೇ ಕಾರ್ಮೋಡ (Karnataka weather Forecast) ಕವಿದಿತ್ತು. ನೋಡನೋಡುತ್ತಿದ್ದಂತೆ ವರ್ಷಧಾರೆಗೆ ಸಿಟಿ ಜನರು ಖುಷ್‌ ಆದರು..

VISTARANEWS.COM


on

By

Bengaluru Rains
Koo

ಬೆಂಗಳೂರು: ಬಿಸಿಲ ಬೇಗೆಯಿಂದ ತತ್ತರಿಸಿದ್ದ ಬೆಂಗಳೂರು ಜನರಿಗೆ ಶುಕ್ರವಾರದಂದು ಮಳೆಯು (Bengaluru Rains) ಧರೆಗಿಳಿದು ಬಂದಿತ್ತು. ಶುಕ್ರವಾರ ಬೆಳಗ್ಗೆ ರಣ ಬಿಸಿಲು, ಧಗೆಯಿಂದ ಜನರು ಕಂಗಲಾಗಿದ್ದರು. ಮಧ್ಯಾಹ್ನದ ಊಟ ಮುಗಿಸಿ ಹೊರಗೆ ಬಂದವರಿಗೆ ಕಾರ್ಮೋಡ ಕವಿದಿತ್ತು. ನೋಡನೋಡುತ್ತಿದ್ದ ಗುಡುಗು, ಸಿಡಿಲು ಸಹಿತ ಭರ್ಜರಿ ಮಳೆ ಸುರಿದಿದೆ.

ಶಿವಾಜಿನಗರ, ಮಲ್ಲೇಶ್ವರಂ, ವಿಧಾನಸೌಧ, ರಾಜಾಜಿನಗರ, ರೇಸ್ ಕೋರ್ಸ್, ಮೆಜೆಸ್ಟಿಕ್, ಮಹಾರಾಣಿ ಕಾಲೇಜು, ಸಿಐಡಿ ಆಫೀಸ್, ಪ್ಯಾಲೇಸ್ ರಸ್ತೆಯಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಮಧ್ಯಾಹ್ನ ಮೂರು ಗಂಟೆ ಸಮಯವು ರಾತ್ರಿಯಂತೆ ಕತ್ತಲೆ ಆವರಿಸಿತ್ತು. ದಿಢೀರ್ ಮಳೆಗೆ ದ್ವಿಚಕ್ರ ವಾಹನ ಸವಾರರು ಸೇತುವೆ ಕೆಳಗೆ ಹಾಗೂ ಬಸ್‌ ನಿಲ್ದಾಣದಲ್ಲಿ ಆಶ್ರಯ ಪಡೆದರು.

ಆಲಿಕಲ್ಲು ಸಹಿತ ಮಳೆಯಾರ್ಭಟ

ಇನ್ನೂ ರಾಜ್ಯ ಗಡಿ ಡೆಂಕಣಿಕೋಟೆ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ತಮಿಳುನಾಡಿನ ಡೆಂಕಣಿಕೋಟೆ, ಹೊಸೂರು, ಸೂಲಗಿರಿ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಆನೇಕಲ್, ಎಲೆಕ್ಟ್ರಾನಿಕ್ ಸಿಟಿ, ಚಂದಾಪುರ, ಅತ್ತಿಬೆಲೆ, ಹೆಬ್ಬಗೋಡಿ ಸೇರಿದಂತೆ ಜೋರು ಮಳೆಯಾಗುತ್ತಿದೆ.

Bengaluru rains

ಬ್ಯಾರಿಕೇಟ್‌ ಹಾಕಿ ಅಂಡರ್‌ಪಾಸ್‌ ಕ್ಲೋಸ್‌

ಅರ್ಧ ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಯಿಂದಾಗಿ ಬೆಂಗಳೂರಿನ ರಸ್ತೆಗಳು ನದಿಯಂತಾಗಿತ್ತು. ವಿಧಾನಸೌಧ ಪಕ್ಕದಲ್ಲಿರುವ ಎಂ.ಎಸ್ ಬಿಲ್ಡಿಂಗ್ ಸುತ್ತಮುತ್ತಲಿನ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಎಂಎಸ್‌ ಬಿಲ್ಡಿಂಗ್‌ ಸಮೀಪವೇ ಇರುವ ಅಂಡರ್ ಪಾಸ್‌ಗಳಿಗೆ ಬ್ಯಾರಿಕೇಟ್ ಹಾಕಿ ಕ್ಲೋಸ್ ಮಾಡಲಾಗಿದೆ.

ಧರೆಗೆ ಬಿದ್ದ ಮರಗಳು

ಮಳೆಯಿಂದ ಬೆಂಗಳೂರು ನಗರದಲ್ಲಿ ಮೂರು ಕಡೆ ಬೃಹತ್ ಗಾತ್ರದ ಮರ ಧರೆಗೆ ಬಿದ್ದಿದೆ. ಕೆ.ಆರ್.ಪುರಂನ ಕಸ್ತೂರಿ ನಗರ, ಆರ್‌ಟಿ ನಗರದಲ್ಲಿ ಮಳೆಗೆ ಮರ ಬಿದ್ದಿದೆ. ಇನ್ನೂ ನಾರಾಯಣಪುರದಲ್ಲಿ ಮರ ಬಿದ್ದು, ಕಾರು, ಬೈಕ್ ಜಖಂಗೊಂಡಿದೆ. ಸದ್ಯ ರಸ್ತೆಗೆ ಬಿದ್ದಿದ ಮರವನ್ನು ಬಿಬಿಎಂಪಿ ಸಿಬ್ಬಂದಿ ತೆರವು ಮಾಡಿದ್ದಾರೆ. ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣದ ಎಟಿಎಂ (ATM) ಕೊಠಡಿಗೆ ನೀರು ನುಗ್ಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉದ್ಯೋಗ

Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳಿಗೆ ಇಂದೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಜೂನ್‌ 1. ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ (Motor Vehicle Inspector)​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (KPSC Recruitment 2024). ಈ ಹಿಂದೆ ಅರ್ಜಿ ಸಲ್ಲಿಕೆಗೆ ಮೇ 21 ಕೊನೆಯ ದಿನಾಂಕ ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಹೊರಡಿಸಿದೆ. ಆಸಕ್ತರು ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಜೂನ್‌ 1 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

ವಯೋಮಿತಿ ಮತ್ತು ಅರ್ಜಿ ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1ರ ಅಭ್ಯರ್ಥಿಗಳಿಗೆ 5 ವರ್ಷ, ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 3 ವರ್ಷ ಮತ್ತು ಪಿಡಬ್ಲ್ಯುಡಿ / ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1/ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಮಾಜಿ ಯೋಧರು ಅರ್ಜಿ ಶುಲ್ಕವಾಗಿ 50 ರೂ., ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 300 ರೂ., ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ. ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 33,450 ರೂ. – 62,600 ರೂ. ಮಾಸಿಕ ವೇತನ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌: 080-30574957 / 30574901ಕ್ಕೆ ಕರೆ ಮಾಡಿ.

ಉಳಿಕೆ ವೃಂದದ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಹೈದರಾಬಾದ್‌-ಕರ್ನಾಟಕ ವೃಂದದ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ದಿನಾಂಕ ವಿಸ್ತರಣೆಯ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನಿಮ್ಮ ಮೊಬೈಲ್‌ ನಂಬರ್‌ ಮತ್ತು ಇಮೇಲ್‌ ಐಡಿ ನಮೂದಿಸಿ ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ / ರಿಕ್ವೆಸ್ಟ್‌ ನಂಬರ್‌ ತೆಗೆದಿಡಿ.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

Continue Reading
Advertisement
Gratuity
ದೇಶ29 seconds ago

Gratuity: ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್;‌ ಗ್ರಾಚ್ಯುಟಿ, ಶಿಕ್ಷಣ ಭತ್ಯೆ ಶೀಘ್ರವೇ 25% ಹೆಚ್ಚಳ!

Prajwal Revanna Case I was raped at gunpoint JDS women leader files complaint against Prajwal
ಹಾಸನ2 mins ago

Prajwal Revanna Case‌: ಗನ್‌ ಪಾಯಿಂಟ್‌ನಲ್ಲಿ ಜೆಡಿಎಸ್‌ ನಾಯಕಿ ಮೇಲೆ ಪ್ರಜ್ವಲ್‌ರಿಂದ ರೇಪ್‌? ಎಫ್‌ಐಆರ್‌ನಲ್ಲಿದೆ ಇಂಚಿಂಚು ಡಿಟೇಲ್ಸ್!

icc men's test team rankings
ಕ್ರೀಡೆ16 mins ago

ICC Men’s Test Team Rankings: ಅಗ್ರಸ್ಥಾನದಿಂದ ಕುಸಿತ ಕಂಡ ಭಾರತ; ವಿಶ್ವ ಚಾಂಪಿಯನ್​ ಆಸೀಸ್​ ನಂ.1

Bengaluru Rains
ಮಳೆ20 mins ago

Bengaluru Rains : ಬೆಂಗಳೂರಲ್ಲಿ ಶುರುವಾಯ್ತು ಮಳೆಗಾಲ; ಕವಿದ ಕಾರ್ಮೋಡ, ಭಯಂಕರ ವರ್ಷಧಾರೆ

Press Freedom Day
Latest27 mins ago

Press Freedom Day: ಇಂದು ಪತ್ರಿಕಾ ಸ್ವಾತಂತ್ರ್ಯ ದಿನ; ಏನಿದರ ಮಹತ್ವ?

Job Alert
ಉದ್ಯೋಗ35 mins ago

Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳಿಗೆ ಇಂದೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Prajwal Revanna Case Another case against Revanna transferred to SIT Notice to Bhavani
ಕ್ರೈಂ1 hour ago

Prajwal Revanna Case: ರೇವಣ್ಣ ಮೇಲಿನ ಮತ್ತೊಂದು ಕೇಸ್‌ ಎಸ್‌ಐಟಿಗೆ ವರ್ಗ; ಭವಾನಿಗೂ ನೋಟಿಸ್‌!

Narendra Modi
Lok Sabha Election 20241 hour ago

Narendra Modi: ಅಮೇಥಿ ಬದಲು ರಾಯ್‌ ಬರೇಲಿಯಿಂದ ರಾಹುಲ್‌ ಗಾಂಧಿ ಸ್ಪರ್ಧೆ; ಓಡಬೇಡಿ ಎಂದು ವ್ಯಂಗ್ಯವಾಡಿದ ಮೋದಿ

Helicopter Crash
ದೇಶ2 hours ago

Helicopter Crash: ಶಿವಸೇನೆ ನಾಯಕಿ ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್‌ ಪತನ;ವಿಡಿಯೋ ವೈರಲ್‌

Murder case
ಕ್ರೈಂ2 hours ago

Murder case : ಹುಬ್ಬಳ್ಳಿ, ಬೆಂಗಳೂರಲ್ಲಿ ಅಪರಿಚಿತ ಶವ ಪತ್ತೆ; ಹಂತಕರ ಬೆನ್ನಿಗೆ ಬಿದ್ದ ಖಾಕಿ ಪಡೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ10 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ20 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌