Viral Video: ಇನ್‌ಸ್ಟಾಗ್ರಾಂನಲ್ಲಿಯೇ ಗಂಡನಿಗೆ ಡಿವೋರ್ಸ್‌‌ ನೀಡಿದ ದುಬೈ ರಾಜಕುಮಾರಿ! ಏನು ಬರೆದಿದ್ದಾಳೆ ನೋಡಿ! - Vistara News

ಪ್ರಮುಖ ಸುದ್ದಿ

Viral Video: ಇನ್‌ಸ್ಟಾಗ್ರಾಂನಲ್ಲಿಯೇ ಗಂಡನಿಗೆ ಡಿವೋರ್ಸ್‌‌ ನೀಡಿದ ದುಬೈ ರಾಜಕುಮಾರಿ! ಏನು ಬರೆದಿದ್ದಾಳೆ ನೋಡಿ!

Viral Video: ಮದುವೆ ಅನ್ನುವ ಮೂರು ಅಕ್ಷರಕ್ಕೆ ಈಗ ಬೆಲೆಯೇ ಇಲ್ಲದ ಹಾಗೇ ಆಗಿದೆ. ಇನ್ಸ್ಟಾಗ್ರಾಂನಲ್ಲಿ ರೀಲ್ಸ್, ಫೋಟೊ ಅಪ್ಲೋಡ್ ಆಗುತ್ತಿತ್ತು. ಈಗ ಡಿವೋರ್ಸ್ ಕೂಡ ಇನ್ಸ್ಟಾಗ್ರಾಂನಲ್ಲಿಯೇ ನೀಡುವಂತಹ ಪರಿಸ್ಥಿತಿ ಬಂದಿದೆ. ದುಬೈ ರಾಜಕುಮಾರಿ ಶೇಖಾ ಮಹ್ರಾ ಕಳೆದ ವರ್ಷ ಮೇ ತಿಂಗಳಲ್ಲಿ ಶೇಖ್ ಮಾನಾ ಅವರನ್ನು ವಿವಾಹವಾದರು. ಇದೀಗ ರಾಜಕುಮಾರಿ ಶೇಖಾ ಮಹ್ರಾ ಇನ್ಸ್ಟಾಗ್ರಾಂನಲ್ಲಿ ಆಘಾತಕಾರಿ ಪೋಸ್ಟ್ ಹಾಕಿದ್ದು, ಅದರಲ್ಲಿ ತಮ್ಮ ಪತಿಗೆ ಡಿವೋರ್ಸ್ ನೀಡುವುದಾಗಿ ಘೋಷಿಸಿದ್ದಾರೆ. ಶೇಖಾ ಮಹ್ರಾ ಮತ್ತು ಅವರ ಪತಿ ಈ ವರ್ಷದ ಮೇ ತಿಂಗಳಲ್ಲಿ ತಮ್ಮ ಮೊದಲ ಮಗುವನ್ನು ಸ್ವಾಗತಿಸಿದರು. ತಮ್ಮ ಮೊದಲ ಮಗುವನ್ನು ಸ್ವಾಗತಿಸಿದ ಎರಡು ತಿಂಗಳ ನಂತರ ಪತಿಯಿಂದ ಡಿವೋರ್ಸ್ ಕೇಳಿದ್ದು, ಅವರ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದುಬೈ : ಸೋಶಿಯಲ್ ಮೀಡಿಯಾಗಳನ್ನು ನಾವು ಹೆಚ್ಚಾಗಿ ಮನೋರಂಜನೆಗಾಗಿ, ಪ್ರತಿದಿನ ನಡೆಯುವ ಸುದ್ದಿಗಳನ್ನು ತಿಳಿದುಕೊಳ್ಳಲು ಬಳಸುತ್ತೇವೆ. ಪ್ರಪಂಚದ ಹಲವೆಡೆ ನಡೆಯುವಂತಹ ಘಟನೆಗಳನ್ನು ನಾವು ಸೋಶಿಯಲ್ ಮೀಡಿಯಾಗಳ ಸಹಾಯದಿಂದ ಮನೆಯಲ್ಲೇ ಕುಳಿತು ತಿಳಿಯಬಹುದು. ಆದರೆ ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾಗಳನ್ನು ಪತಿ ಪತ್ನಿಯರು ಡಿವೋರ್ಸ್ ನೀಡಲು ಬಳಸುತ್ತಿದ್ದಾರೆ ಎಂದು ಕೇಳಿದರೆ ಎಲ್ಲರಿಗೂ ಆಶ್ವರ್ಯವಾಗುವುದಂತು ಖಂಡಿತ. ಅಂತಹದೊಂದು ಘಟನೆ ಇದೀಗ ದುಬೈನಲ್ಲಿ ನಡೆದಿದೆ. ದುಬೈ ರಾಜಕುಮಾರಿ ಶೇಖಾ ಮಹ್ರಾ ಅವರು ತಮ್ಮ ಪತಿಗೆ ಇನ್‍ಸ್ಟಾಗ್ರಾಂನಲ್ಲಿ ಡಿವೋರ್ಸ್ ನೀಡಿದ್ದು, ಇದು ಸಖತ್ ವೈರಲ್ (Viral Video) ಆಗಿದೆ.

ದುಬೈ ಆಡಳಿತಗಾರನ ಮಗಳಾದ ದುಬೈ ರಾಜಕುಮಾರಿ ಶೇಖಾ ಮಹ್ರಾ ಕಳೆದ ವರ್ಷ ಮೇ ತಿಂಗಳಲ್ಲಿ ಶೇಖ್ ಮಾನಾ ಅವರನ್ನು ವಿವಾಹವಾದರು. ಇದೀಗ ರಾಜಕುಮಾರಿ ಶೇಖಾ ಮಹ್ರಾ ಇನ್‍ಸ್ಟಾಗ್ರಾಂನಲ್ಲಿ ಆಘಾತಕಾರಿ ಪೋಸ್ಟ್ ಹಾಕಿದ್ದು, ಅದರಲ್ಲಿ ತಮ್ಮ ಪತಿಗೆ ಡಿವೋರ್ಸ್ ನೀಡುವುದಾಗಿ ಘೋಷಿಸಿದ್ದಾರೆ. ಶೇಖಾ ಮಹ್ರಾ ಮತ್ತು ಅವರ ಪತಿ ಈ ವರ್ಷದ ಮೇ ತಿಂಗಳಲ್ಲಿ ತಮ್ಮ ಮೊದಲ ಮಗುವನ್ನು ಸ್ವಾಗತಿಸಿದರು. ತಮ್ಮ ಮೊದಲ ಮಗುವನ್ನು ಸ್ವಾಗತಿಸಿದ ಎರಡು ತಿಂಗಳ ನಂತರ ಪತಿಯಿಂದ ಡಿವೋರ್ಸ್ ಕೇಳಿದ್ದು, ಅವರ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ.

ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ, ತಮ್ಮ ಪತಿ ಬೇರೆ ಸಂಗಾತಿಯೊಂದಿಗೆ ಸಂಬಂಧ ಹೊಂದಿರುವ ಕಾರಣ ಪತಿಗೆ ಡಿವೋರ್ಸ್ ನೀಡುತ್ತಿರುವುದಾಗಿ ತಿಳಿಸಿ “ನಾನು ನಿಮಗೆ ವಿಚ್ಛೇದನ ನೀಡುತ್ತೇನೆ” ಎಂದು ಮೂರು ಬಾರಿ ಬರೆದು ಮಂಗಳವಾರ ಪೋಸ್ಟ್ ಮಾಡಿದ್ದಾರೆ. ಹಾಗೇ ಅವರು ತಮ್ಮ ಪತಿಯೊಂದಿಗಿನ ಫೋಟೋಗಳನ್ನು ಇನ್‍ಸ್ಟಾಗ್ರಾಂನಿಂದ ಡಿಲೀಟ್ ಮಾಡಿದ್ದಾರೆ.

ಶೇಖಾ ಮಹ್ರಾ ಕಳೆದ ವರ್ಷ ಮೇ ತಿಂಗಳಲ್ಲಿ ಎಮಿರೇಟ್ಸ್ ಉದ್ಯಮಿ ಶೇಖ್ ಮನ ಬಿನ್ ಮೊಹಮ್ಮದ್ ಬಿನ್ ರಶೀದ್ ಬಿನ್ ಮಾನಾ ಅಲ್ ಮಕ್ತೌಮ್ ಅವರನ್ನು ವಿವಾಹವಾದರು. ಒಂದು ವರ್ಷದ ನಂತರ, ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. 20ರ ಹರೆಯದ ಶೇಖ್ ಮಾನಾ ಅನೇಕ ಬ್ಯುಸಿನೆಸ್‍ಗಳನ್ನು ಹೊಂದಿದ್ದಾರೆ. ಈ ವರ್ಷದ ಮೇ ತಿಂಗಳಲ್ಲಿ, ದುಬೈ ರಾಜಕುಮಾರಿ ಹೆರಿಗೆಯಾದ ಕೆಲವೇ ಕ್ಷಣಗಳಲ್ಲಿ ಆಸ್ಪತ್ರೆಯಿಂದ ಫೋಟೋಗಳನ್ನು ಬಿಡುಗಡೆ ಮಾಡಿದ್ದರು. ತಮ್ಮ ಮಗಳನ್ನು ಜಗತ್ತಿಗೆ ಕರೆತಂದ ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿಗೆ ಧನ್ಯವಾದ ಅರ್ಪಿಸಿದ್ದರು.

ಹಾಗೇ ತನ್ನ ಪತಿ ಹಾಗೂ ಮಗಳ ಜೊತೆಗಿನ ಪೋಟೊವನ್ನು ಪೋಸ್ಟ್ ಮಾಡಿದ್ದರು. ಈ ಹಿಂದೆ ಅವರು ಗರ್ಭಿಣಿಯಾಗಿದ್ದಾಗ “ನಾವು ಮೂವರು” ಎಂದು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದರು. ಆದರೆ ಜೂನ್‍ನಲ್ಲಿ ಅವರು ಇನ್‍ಸ್ಟಾಗ್ರಾಂ ಪೋಸ್ಟ್‌ನಲ್ಲಿ ಪತಿಯಿಲ್ಲದೆ ತಮ್ಮ ಮಗುವಿನೊಂದಿಗೆ ಇರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅದಕ್ಕೆ “ನಾವಿಬ್ಬರೇ” ಎಂದು ಶೇಖಾ ಮಹ್ರಾ ಶೀರ್ಷಿಕೆಯಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಕಿಮೋಥೆರಪಿ ಅನುಭವ ಹಂಚಿಕೊಂಡಿದ್ದಾರೆ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವ ಖ್ಯಾತ ಬಾಲಿವುಡ್‌ ನಟಿ

ಶೇಖಾ ಮಹ್ರಾ ಅವರ ತಂದೆ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಯುಎಇಯ ಉಪಾಧ್ಯಕ್ಷ, ಪ್ರಧಾನಿ ಮತ್ತು ರಕ್ಷಣಾ ಸಚಿವರಾಗಿದ್ದಾರೆ. ಇವರಿಗೆ 26 ಮಂದಿ ಮಕ್ಕಳಿದ್ದು, ಅವರಲ್ಲಿ ಶೇಖಾ ಮಹ್ರಾ ಕೂಡ ಒಬ್ಬರು. ಆಕೆಯ ತಾಯಿ ಜೊಯಿ ಗ್ರಿಗೊರಾಕೋಸ್ ಗ್ರೀಸ್ ಮೂಲದವರಾಗಿದ್ದಾರೆ. ಆದರೆ ಶೇಖಾ ಮಹ್ರಾ ತಂದೆ, ಆಕೆಯ ತಾಯಿಗೆ ವಿಚ್ಛೇದನ ನೀಡಿದ್ದರು..

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karnataka Assembly Live: ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ 7 ದಿನ ಬಂದ್: ವಿಧಾನಸಭೆಯಲ್ಲಿ ಘೋಷಣೆ, ವಿಸ್ತಾರ್‌ ನ್ಯೂಸ್‌ ಬಿಗ್‌ ಇಂಪ್ಯಾಕ್ಟ್

Karnataka Assembly Live: ವಿಧಾನಸಭೆ ಕಲಾಪದ ಆರಂಭದ ಹೊತ್ತಿಗೆ ಸ್ವತಃ ಸ್ಪೀಕರ್‌ ಯು.ಟಿ ಖಾದರ್‌ ಅವರು ಈ ವಿಚಾರ ಎತ್ತಿದರು. ಈ ಬಗ್ಗೆ ಸರ್ಕಾರದ ನಿಲುವನ್ನು ತಿಳಿಸುವಂತೆ ಸೂಚಿಸಿದರು. ಸದಸ್ಯರು ಪಕ್ಷಾತೀತವಾಗಿ ಮಾಲ್‌ ನಡೆಯನ್ನು ತೀವ್ರವಾಗಿ ಖಂಡಿಸಿದರು.

VISTARANEWS.COM


on

gt world mall karnataka assembly live
Koo

ಬೆಂಗಳೂರು: ಪಂಚೆ ಧರಿಸಿ ಬಂದ ಹಾವೇರಿಯ ರೈತರಿಗೆ ಒಳಬಿಡದ ರಾಜಧಾನಿಯ ಜಿಟಿ ವರ್ಲ್ಡ್‌ ಮಾಲ್‌ (GT World Mall) ಮೇಲೆ ಶಿಸ್ತು ಕ್ರಮವಾಗಿ ಮಾಲ್‌ ಅನ್ನು 7 ದಿನಗಳ ಕಾಲ ಮುಚ್ಚಲು ಸೂಚನೆ ನೀಡುವುದಾಗಿ ವಿಧಾನಸಭೆ‌ ಕಲಾಪದಲ್ಲಿ (Karnataka Assembly Live) ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ (Byrathi Suresh) ಘೋಷಿಸಿದ್ದಾರೆ.

ಇಂದು ಆರಂಭವಾದ ಮೂರನೇ ದಿನದ ವಿಧಾನಸಭೆ ಕಲಾಪ (Karnataka Assembly Live) ಆರಂಭದಲ್ಲೇ ಈ ವಿಷಯ ಪ್ರಸ್ತಾಪವಾಯಿತು. ಹಲವರು ಸದಸ್ಯರು ರೈತರಿಗೆ ಅವಮಾನ ಆದ ವಿಷಯವನ್ನು ಪ್ರಸ್ತಾಪಿಸಿದರು. ವಿಸ್ತಾರ ನ್ಯೂಸ್‌ ನಿನ್ನೆ ಇಡೀ ದಿನ ಈ ಘಟನೆಯನ್ನು ಪ್ರಸಾರ ಮಾಡಿದ್ದಲ್ಲದೆ, ರೈತರನ್ನು ಮರಳಿ ಜಿಟಿ ಮಾಲ್‌ಗೆ ಕರೆದೊಯ್ದು ಪ್ರವೇಶ ಕೊಡಿಸಿತ್ತು. ಈ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು. ಕನ್ನಡ ಹಾಗೂ ರೈತಪರ ಸಂಘಟನೆಗಳು ಈ ವಿಚಾರದಲ್ಲಿ ವಿಸ್ತಾರ ನ್ಯೂಸ್‌ನೊಂದಿಗೆ ಕೈಜೋಡಿಸಿದ್ದವು. ನಂತರ ಸಚಿವ ಸಂತೋಷ್‌ ಲಾಡ್‌ ಕೂಡ ಈ ವಿಚಾರದಲ್ಲಿ ಮಾಲ್‌ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು.

ವಿಧಾನಸಭೆ ಕಲಾಪದ ಆರಂಭದ ಹೊತ್ತಿಗೆ ಸ್ವತಃ ಸ್ಪೀಕರ್‌ ಯು.ಟಿ ಖಾದರ್‌ ಅವರು ಈ ವಿಚಾರ ಎತ್ತಿದರು. ಈ ಬಗ್ಗೆ ಸರ್ಕಾರದ ನಿಲುವನ್ನು ತಿಳಿಸುವಂತೆ ಸೂಚಿಸಿದರು. ಸದಸ್ಯರು ಪಕ್ಷಾತೀತವಾಗಿ ಮಾಲ್‌ ನಡೆಯನ್ನು ತೀವ್ರವಾಗಿ ಖಂಡಿಸಿದರು. ಇದಕ್ಕೆ ಉತ್ತರಿಸಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ಇದೆ. 7 ದಿನಗಳ ವರೆಗೆ ಬಂದ್‌ ಮಾಡಿಸಬಹುದು. ಎಚ್ಚರಿಕೆ ನೀಡಿ ಏಳು ದಿನಗಳ ಕಾಲ ಮಾಲ್ ಬಂದ್ ಮಾಡಿಸಲಾಗುವುದು ಎಂದು ತಿಳಿಸಿದರು.

ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಹೇಳಿಕೆ ನೀಡಿ, ಬೆಂಗಳೂರಿನ ಕ್ಲಬ್‌ಗಳ ಒಳಗೆ ಕೂಡ ಸಾಕಷ್ಟು ಷರತ್ತುಗಳಿವೆ ಎಂದು ಪ್ರಸ್ತಾವಿಸಿದರು. ಬೌರಿಂಗ್ ಕ್ಲಬ್, ಸೆಂಚುರಿ ಕ್ಲಬ್‌ನಲ್ಲಿ ಚಪ್ಪಲಿ ಹಾಕಿಕೊಂಡು ಹೋಗುವ ಹಾಗಿಲ್ಲ. ಟೀ ಶರ್ಟ್ ಕೂಡ ಹಾಕಿಕೊಂಡು ಹೋಗುವ ಹಾಗಿಲ್ಲ. ಅವರ ಮೇಲೆ ಕ್ರಮ ಆಗಬೇಕು ಎಂದು ಒತ್ತಾಯಿಸಿದರು. ಅಂತಹ ಕ್ಲಬ್‌ಗೆ ನೀವು ಯಾಕೆ ಹೋಗ್ತೀರಾ ಅಂತ ಸುರೇಶ್‌ ಕುಮಾರ್‌ ಅವರು ಅಶೋಕ್ ಪಟ್ಟಣ್‌ ಕಾಲೆಳೆದರು.

ಏನಿದು ಪ್ರಕರಣ?

ಮಂಗಳವಾರ ಸಂಜೆ ಘಟನೆ ನಡೆದಿತ್ತು. ಹಾವೇರಿಯ ರೈತ ಫಕೀರಪ್ಪ ಅವರು ಪಂಚೆ ಧರಿಸಿ, ಮಗನ ಸಮೇತ ಸಿನಿಮಾ ನೋಡಲು ಬಂದಿದ್ದರು. ʼಪಂಚೆ ಧರಿಸಿ ಮಾಲ್ ಒಳಗೆ ಬರುವಂತಿಲ್ಲʼ ಎಂದು ಸೆಕ್ಯುರಿಟಿ ತಡೆದಿದ್ದರು. ಇದನ್ನು ರೈತರ ಮಗ ಪ್ರಶ್ನಿಸಿದ್ದರು. ನಂತರ ʼವಿಸ್ತಾರ ನ್ಯೂಸ್‌ʼ ಈ ವಿಚಾರವನ್ನು ಎತ್ತಿಕೊಂಡು ನಿನ್ನೆ ಇಡೀ ದಿನ ಕವರೇಜ್‌ ಮಾಡಿತ್ತು. ಪಂಚೆಯ ಹೆಸರಿನಲ್ಲಿ ರೈತರಿಗೆ ಆಗುತ್ತಿರುವ ಅವಮಾನದ ವಿರುದ್ಧ ಸಿಡಿದೆದ್ದು ಪ್ರಶ್ನೆ ಮಾಡಿತ್ತು.

ಬಳಿಕ ಇದನ್ನು ಕನ್ನಡ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಕೈಗೆತ್ತಿಕೊಂಡಿದ್ದವು. ಮಾಲ್‌ ಮುಂದೆ ತೀವ್ರ ಹೋರಾಟ ಹಾಗೂ ಪ್ರತಿಭಟನೆ ನಡೆದಿತ್ತು. ʼವಿಸ್ತಾರ ನ್ಯೂಸ್‌ʼ ಈ ಬಗ್ಗೆ ಕಾರ್ಯಕ್ರಮ ಮಾಡಿದ್ದಲ್ಲದೆ, ಅದೇ ರೈತರನ್ನು ಕರೆದೊಯ್ದು ಮಾಲ್‌ಗೆ ಪ್ರವೇಶ ಕೊಡಿಸಿತ್ತು. ಈ ಸಂದರ್ಭದಲ್ಲಿ ಮಾಲ್‌ನ ಮುಖ್ಯಸ್ಥರು ಸ್ಥಳದಲ್ಲಿ ಹಾಜರಿದ್ದು, ತಮ್ಮ ಸಿಬ್ಬಂದಿಯಿಂದ ಆದ ಅವಮಾನಕ್ಕೆ ಕ್ಷಮೆ ಕೇಳಿದ್ದರು. ರೈತ ಫಕೀರಪ್ಪಗೆ ಹಾರ ಹಾಕಿ ಸನ್ಮಾನ ಮಾಡಿದ್ದರು. ರೈತ- ಕನ್ನಡ ಸಂಘಟನೆಗಳ ಕಾರ್ಯಕರ್ತರು ಪಂಚೆ ಧರಿಸಿ ಮಾಲ್‌ಗೆ ಪ್ರವೇಶಿಸಿದ್ದರು.

ರೈತರಿಗೆ ಪ್ರವೇಶ ನಿರಾಕರಣೆ ಮಾಡಿದ ಜಿ‌ಟಿ ಮಾಲ್ ಕ್ರಮವನ್ನು ಕೃಷಿ ಸಚಿವ ಚೆಲುವರಾಯಸ್ವಾಮಿ ಖಂಡಿಸಿದ್ದು, ಈ ವಿಚಾರದಲ್ಲಿ ಸೂಕ್ತ ನಿಯಮ ರೂಪಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಹೇಳಿದ್ದಾರೆ. ʼನಾವು ಇದನ್ನ ಖಂಡಿಸುತ್ತೇವೆ. ಕೆಲ ವರ್ಷಗಳ ಹಿಂದೆ ಪಂಚೆ ಕಟ್ಟಿಕೊಂಡು ಹೋದರೆ ಕ್ಲಬ್‌ಗಳಲ್ಲಿ ಬಿಡುತ್ತಿರಲಿಲ್ಲ. ಶೂ ಇಲ್ಲದೇ ಪಂಚೆ ಹಾಕಿಕೊಂಡು ಕ್ಲಬ್‌ಗೆ ಹೋಗಬಹುದು ಅಂತ ನಮ್ಮ ಸರ್ಕಾರ ನಿರ್ಧಾರ ಮಾಡಿತ್ತು. ಇದನ್ನು ನಾವು ಅಂದು ಅಧಿವೇಶನದಲ್ಲಿ ಚರ್ಚೆ ಮಾಡಿದ್ದೆವು. ಈಗಲೂ ಇದಕ್ಕೆ ಸರ್ಕಾರ ನಿಯಮ ತರಬೇಕುʼ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: GT World Mall: ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ ಮುಂದೆ ಪಂಚೆ ಉಟ್ಟು ಪ್ರತಿಭಟನೆ, ಕ್ಷಮೆ ಕೇಳಿದ ಮಾಲೀಕ

Continue Reading

ಕ್ರೀಡೆ

Olympic Medals: ಒಲಿಂಪಿಕ್ಸ್​ ವಿಜೇತರಿಗೆ ನೀಡುವ ಚಿನ್ನದ ಪದಕ ಚಿನ್ನದ್ದಲ್ಲ!

Olympic Medals: ಒಲಿಂಪಿಕ್ ಚಾಂಪಿಯನ್‌ಗಳು ತಮ್ಮ ಬಾಯಿಯಲ್ಲಿ ಚಿನ್ನದ ಪದಕವನ್ನು ಕಚ್ಚುವುದು ಈಗ ಶುದ್ಧತೆಯನ್ನು ಪರಿಶೀಲಿಸುವುದಕ್ಕಾಗಿ ಅಲ್ಲ. ಯಾಕೆಂದರೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) 1912 ರಲ್ಲಿ ಶುದ್ಧ ಚಿನ್ನದ ಪದಕಗಳನ್ನು ನೀಡುವುದನ್ನು ನಿಲ್ಲಿಸಿತ್ತು. ಆದರೆ ಅದರ ಅಭ್ಯಾಸ ಕ್ರಮ ಇನ್ನೂ ಮುಂದುವರಿದಿದೆ.

VISTARANEWS.COM


on

Olympic Medals
Koo

ಬೆಂಗಳೂರು: ಇದುವರೆಗಿನ ಒಲಿಂಪಿಕ್ಸ್(Olympic)​ ಇತಿಹಾಸದಲ್ಲೇ(olympic history) ಅಮೆರಿಕದ ಖ್ಯಾತ ಈಜು ದಂತಕಥೆ ಮೈಕೆಲ್ ಫೆಲ್ಪ್ಸ್ ಅತ್ಯಧಿಕ ಪದಕ ಗೆದ್ದ ಸಾಧಕ. ‘ಚಿನ್ನದ ಮೀನು’ ಎಂದೇ ಖ್ಯಾತಿಗಳಿಸಿರುವ ಇವರು ಸರ್ವಾಧಿಕ 23 ಚಿನ್ನದ ಪದಕ ಗೆದ್ದಿದ್ದಾರೆ. ಅಚ್ಚರಿ ಎಂದರೆ ಇವರು ಗೆದ್ದಿರುವ ಪದಕಗಳು ಚಿನ್ನದ್ದಲ್ಲ. ಹಾಗಿದ್ದರೆ ಚಿನ್ನ ಗೆದ್ದ(Olympic Medals) ಸಾಧಕರಿಗೆ ಯಾವ ಪದಕ ನೀಡಲಾಗುತ್ತದೆ ಎನ್ನುವ ಕುತೂಹಲಕ್ಕೆ ಉತ್ತರ ಇಲ್ಲಿದೆ.

ಹೌದು, ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದ ಸಾಧಕರಿಗೆ ನಿಜವಾದ ಚಿನ್ನದ ಪದಕ ನೀಡಲಾಗುವುದಿಲ್ಲ. ಲೇಪನ ಮಾಡಿದ ಪದಕವನ್ನಷ್ಟೇ ನೀಡಲಾಗುತ್ತದೆ. ಪೂರ್ತಿ ಚಿನ್ನದಿಂದಲೇ ತಯಾರಿಸಿದ ಪದಕಗಳನ್ನು 1912ರ ಸ್ವೀಡನ್‌ನ ಸ್ಟಾಕ್‌ಹೊಮ್ಲಿಯಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಕೊನೆಯ ಬಾರಿಗೆ ನೀಡಲಾಗಿತ್ತು. ಆ ಬಳಿಕ ಬಂಗಾರದ ಪದಕಗಳು ಚಿನ್ನದ ಲೇಪನವನ್ನಷ್ಟೆ (ಕನಿಷ್ಠ 6 ಗ್ರಾಂ) ಹೊಂದಿರುತ್ತವೆ ಮತ್ತು ಶೇಕಡ 93 ಬೆಳ್ಳಿಯೇ ತುಂಬಿರುತ್ತದೆ. ಹೀಗಾಗಿ ಒಲಿಂಪಿಕ್ಸ್‌ನ ಚಿನ್ನ ಮತ್ತು ಬೆಳ್ಳಿ ಪದಕಗಳ ನಡುವೆ ಹೆಚ್ಚಿನ ವ್ಯತ್ಯಾಸವಿಲ್ಲ.

ಇದನ್ನೂ ಓದಿ Paris Olympics: ಪ್ಯಾರಿಸ್‌ ಒಲಿಂಪಿಕ್ಸ್​ ಭದ್ರತಾ ಕಾರ್ಯದಲ್ಲಿ ಭಾರತದ ಶ್ವಾನದಳ; ಬೆಂಗಳೂರಿನಲ್ಲಿ ತರಬೇತಿ

ಬೆಳ್ಳಿ ಪದಕ ನೀಡಲಾಗಿತ್ತು


1896ರ ಮೊದಲ ಒಲಿಂಪಿಕ್ಸ್​ನಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ಬೆಳ್ಳಿ ಪದಕವನ್ನೇ ನೀಡಲಾಗಿತ್ತು. 2ನೇ ಸ್ಥಾನ ಪಡೆದವರು ಕಂಚಿನ ಪದಕ ಗಳಿಸಿದ್ದರು. 1900ರ ಒಲಿಂಪಿಕ್ಸ್‌ ವಿಜೇತರಿಗೆ ಪದಕಗಳ ಬದಲಾಗಿ ಟ್ರೋಫಿಗಳನ್ನು ನೀಡಲಾಗಿತ್ತು. 1904ರ ಒಲಿಂಪಿಕ್ಸ್‌ನಿಂದ ಚಿನ್ನ, ಬೆಳ್ಳಿ, ಕಂಚಿನ ಪದಕ ನೀಡುವ ಸಂಪ್ರದಾಯ ಹುಟ್ಟಿಕೊಂಡಿತು. ಪ್ರತಿ ಪದಕ ಕನಿಷ್ಠ 7.7 ಎಂ.ಎಂ. ದಪ್ಪ ಮತ್ತು 85 ಎಂ.ಎಂ. ಸುತ್ತಳತೆ ಹೊಂದಿರಬೇಕೆಂದು ಐಒಸಿ ನಿಯಮ.


ಕ್ರೀಡಾಪಟುಗಳು ಪದಕ ಕಚ್ಚುವುದು ಏಕೆ?


ಒಲಂಪಿಕ್ಸ್‌ನಲ್ಲಿ (Olympic) ಪದಕ ವಿಜೇತ ( winners ) ಕ್ರೀಡಾಪಟುಗಳು ಪದಕವನ್ನು ಕಚ್ಚಿ (Medal Biting) ಫೋಟೋಗೆ ಪೋಸ್ ಕೊಡುವುದನ್ನು ನೋಡಿರುತ್ತೇವೆ. ಇವರು ಯಾಕೆ ಹೀಗೆ ಮಾಡುತ್ತಾರೆ ಎನ್ನುವ ಪ್ರಶ್ನೆಯಂತೂ ಒಂದಲ್ಲಾ ಒಂದು ಬಾರಿ ನಮ್ಮ ಮನದಲ್ಲಿ ಮೂಡಿರುತ್ತದೆ. ಒಲಿಂಪಿಕ್ ಪದಕ ವಿಜೇತರು ಪದಕ ಕಚ್ಚಲು ಕಾರಣವಿದೆ ಮಾತ್ರವಲ್ಲ ಇದಕ್ಕೆ ದೊಡ್ಡ ಇತಿಹಾಸವೇ ಇದೆ.

ಇದನ್ನೂ ಓದಿ The Olympic Games: 72ರ ಇಳಿ ವಯಸ್ಸಿನಲ್ಲೂ ಒಲಿಂಪಿಕ್ಸ್​ ಪದಕ ಗೆದ್ದಿದ್ದ ಶೂಟರ್‌; ಯಾರಿವರು?


ಒಲಿಂಪಿಕ್ಸ್ ನ ಆರಂಭಿಕ ದಿನಗಳು. ಬೆಲೆಬಾಳುವ ಚಿನ್ನವನ್ನು ಕರೆನ್ಸಿಯ ರೂಪದಲ್ಲಿ ಬಳಸಲು ಪ್ರಾರಂಭಿಸಲಾಯಿತು. ಚಿನ್ನದ ಪರಿಶುದ್ಧತೆಯನ್ನು ಪರಿಶೀಲಿಸಲು ವ್ಯಾಪಾರಿಗಳು ಚಿನ್ನದ ನಾಣ್ಯಗಳನ್ನು ಕಚ್ಚಿ ನೋಡುತ್ತಿದ್ದರು ಎಂದು ಇತಿಹಾಸ ಹೇಳುತ್ತದೆ. ಚಿನ್ನವು ಮೃದುವಾದ ಲೋಹವಾಗಿದೆ. ಇದರ ಮೇಲೆ ಸ್ವಲ್ಪ ಒತ್ತಡ ಬಿದ್ದರೂ ಗುರುತು ಬೀಳುತ್ತದೆ. ಹೀಗಾಗಿ ಒಲಿಂಪಿಕ್ಸ್‌ನಲ್ಲಿ ಪದಕ ವಿಜೇತ ಕ್ರೀಡಾಪಟುಗಳು ತಮಗೆ ಸಿಗುವ ಚಿನ್ನದ ಪದಕವನ್ನು ಪರಿಶೀಲಿಸಲು ಹೀಗೆ ಮಾಡುತ್ತಿದ್ದರು. ಕ್ರಮೇಣ ಇದೊಂದು ಅಭ್ಯಾಸದ ಭಾಗವಾಯಿತು.

ಇದನ್ನೂ ಓದಿ Olympic Games History: ಒಲಿಂಪಿಕ್ಸ್​ನಲ್ಲಿ ಗ್ರೀಸ್​ ದೇಶಕ್ಕೆ ವಿಶೇಷ ಮಾನ್ಯತೆ ನೀಡುವುದೇಕೆ?

ಒಲಿಂಪಿಕ್ ಚಾಂಪಿಯನ್‌ಗಳು ತಮ್ಮ ಬಾಯಿಯಲ್ಲಿ ಚಿನ್ನದ ಪದಕವನ್ನು ಕಚ್ಚುವುದು ಈಗ ಶುದ್ಧತೆಯನ್ನು ಪರಿಶೀಲಿಸುವುದಕ್ಕಾಗಿ ಅಲ್ಲ. ಯಾಕೆಂದರೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) 1912 ರಲ್ಲಿ ಶುದ್ಧ ಚಿನ್ನದ ಪದಕಗಳನ್ನು ನೀಡುವುದನ್ನು ನಿಲ್ಲಿಸಿತ್ತು. ಆದರೆ ಅದರ ಅಭ್ಯಾಸ ಕ್ರಮ ಇನ್ನೂ ಮುಂದುವರಿದಿದೆ.

Continue Reading

ದೇಶ

Pralhad Joshi: ಉಚಿತ ಅಕ್ಕಿ ವಿತರಣೆಯ ಪಿಎಂ ಗರೀಬ್ ಕಲ್ಯಾಣ್‌ ಅನ್ನ ಯೋಜನೆ 2029ರ ವರೆಗೆ ವಿಸ್ತರಣೆ: ಪ್ರಲ್ಹಾದ ಜೋಶಿ

Pralhad Joshi: ಜನ ಸಾಮಾನ್ಯರಿಗೆ ಕೇಂದ್ರ ಸರ್ಕಾರ ಮತ್ತೊಂಡು ಗುಡ್‌ನ್ಯೂಸ್‌ ನೀಡಿದೆ. ಉಚಿತ ಅಕ್ಕಿ ವಿತರಣೆಯ ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು 2029ರವರೆಗೂ ವಿಸ್ತರಿಸಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ದೇಶದಲ್ಲಿ 80 ಕೋಟಿಗೂ ಅಧಿಕ ಜನರಿಗೆ ಉಚಿತ ಪಡಿತರ ದೊರಕಿದ್ದು, ಈ ಯೋಜನೆಯನ್ನು 2029ರವರೆಗೂ ಮುಂದುವರಿಸಲಾಗಿದೆ ಎಂದು ಹೇಳಿದ್ದಾರೆ.

VISTARANEWS.COM


on

Pralhad Joshi
Koo

ನವದೆಹಲಿ: ಕೇಂದ್ರ ಸರ್ಕಾರ ಉಚಿತ ಅಕ್ಕಿ ವಿತರಣೆಯ ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ (PM Garib Kalyan Anna Yojana)ಯನ್ನು 2029ರವರೆಗೂ ವಿಸ್ತರಿಸಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ (Pralhad Joshi) ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ದೇಶದಲ್ಲಿ 80 ಕೋಟಿಗೂ ಅಧಿಕ ಜನರಿಗೆ ಉಚಿತ ಪಡಿತರ ದೊರಕಿದ್ದು, ಈ ಯೋಜನೆಯನ್ನು 2029ರವರೆಗೂ ಮುಂದುವರಿಸಲಾಗಿದೆ ಎಂದು ಹೇಳಿದ್ದಾರೆ. ಎನ್ಎಎಫ್ಇಡಿ, ಎನ್ ಸಿಸಿಎಫ್ ಹಾಗೂ ಕೇಂದ್ರೀಯ ಭಂಡಾರಗಳಲ್ಲಿ ಭಾರತ್ ಅಕ್ಕಿ ಕೆಜಿಗೆ 29 ರೂ. ಬೆಲೆಯಲ್ಲಿ 5 ಮತ್ತು 10 ಕೇಜಿ ಚೀಲಗಳಲ್ಲಿ ದೊರೆಯುತ್ತಿದೆ ಎಂದಿದ್ದಾರೆ.

ಅತಿ ಅಗ್ಗದ ಬೆಲೆಗೆ ಗೋಧಿ ಹಿಟ್ಟು

ಇನ್ನು ಭಾರತ್ ಆಟ್ಟಾ ಉಪಕ್ರಮದಲ್ಲಿ ಅತಿ ಅಗ್ಗದ ಬೆಲೆ 27.5 ರೂ. ಕೆಜಿಗೆ ಗೋಧಿ ಹಿಟ್ಟು ಪೂರೈಸಲಾಗುತ್ತಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ. ಭಾರತ್ ದಾಲ್ ಉಪಕ್ರಮದಡಿಯಲ್ಲಿ ಕಡಲೆ ಮತ್ತು ಹೆಸರುಬೇಳೆ ಕಡಿಮೆ ದರದಲ್ಲಿ ದೊರೆಯುವಂತಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಮಯೋಚಿತ ಉಪಕ್ರಮಗಳಿಂದಾಗಿ ದೇಶದ ಹಣದುಬ್ಬರ ಮತ್ತು ಜನಸಾಮಾನ್ಯರಿಗೆ ಹೊರೆಯಾಗದಂತೆ ಆಗಿದೆ ಎಂದು ಅವರು ಹೇಳಿದ್ದಾರೆ.

2019-20ರಲ್ಲಿ ಕೋವಿಡ್‌ ಸೋಂಕು ತೀವ್ರ ಪ್ರಮಾಣದಲ್ಲಿ ಆವರಿಸಿದಾಗ ದೇಶಾದ್ಯಂತ ಗರೀಬ್‌ ಕಲ್ಯಾಣ ಅನ್ನ ಯೋಜನೆಯನ್ನು ಘೋಷಿಸಲಾಗಿತ್ತು. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ ಬಡತನ ರೇಖೆಗಿಂದ ಕೆಳಗಿರುವ ಜನರಿಗೆ ಉಚಿತ ಆಹಾರ ಧಾನ್ಯ ನೀಡಲು ಈ ಯೋಜನೆ ರೂಪಿಸಲಾಗಿತ್ತು. ಅಂದಿನಿಂದ ಕುಟುಂಬದ ಪ್ರತಿ ಸದಸ್ಯರಿಗೆ ತಲಾ ಐದು ಕೆಜಿ ಪಡಿತರವನ್ನು ಉಚಿತವಾಗಿ ನೀಡಲಾಗುತ್ತಿದೆ.

ಇದನ್ನೂ ಓದಿ: Bharat Dal : 60 ರೂ.ಗೆ ಮೋದಿಯ ಭಾರತ್​ ದಾಲ್​; ಖರೀದಿ ಮಾಡುವುದು ಹೇಗೆ?

ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಅವರು ಮೊದಲ ಸಚಿವ ಸಂಪುಟ ಸಭೆಯಲ್ಲೇ ದೇಶದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸಿಕೊಡುವ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದರು. ಪ್ರಧಾನಮಂತ್ರಿ ಆವಾಸ್‌ ಯೋಜನೆ (Pradhan Mantri Awas Yojana-PMAY) ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ತೀರ್ಮಾನಿಸಲಾಗಿತ್ತು. ಇದೀಗ ಅನ್ನ ಯೋಜನೆ ಮುಂದುವರಿಸುವ ಮೂಲಕ ಕೇಂದ್ರ ಸರ್ಕಾರ ಬಡವರ ನೆರವಿಗೆ ಧಾವಿಸಿದೆ.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬಡವರು ಸ್ವಂತ ಮನೆ ಕನಸನ್ನು ನನಸು ಮಾಡುವ ದಿಸೆಯಲ್ಲಿ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಆವಾಸ್‌ ಯೋಜನೆ ಜಾರಿಗೆ ತಂದಿದೆ. ಯೋಜನೆ ಅಡಿಯಲ್ಲಿ ಫಲಾನುಭವಿಗಳು ಬಯಲು ಪ್ರದೇಶದಲ್ಲಿ ಮನೆ ನಿರ್ಮಿಸಿಕೊಳ್ಳಲು 1.20 ಲಕ್ಷ ರೂ. ನೀಡಲಾಗುತ್ತದೆ. ಇನ್ನು ಗುಡ್ಡಗಾಡು ಪ್ರದೇಶದಲ್ಲಿ ಮನೆ ನಿರ್ಮಿಸಿಕೊಳ್ಳಲು 1.30 ಲಕ್ಷ ರೂ. ಸಹಾಯಧನ ನೀಡಲಾಗುತ್ತದೆ. ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರವು ಸುಮಾರು 4.21 ಕೋಟಿ ಮನೆಗಳನ್ನು ನಿರ್ಮಿಸಿಕೊಟ್ಟಿದೆ.

Continue Reading

ಪ್ರಮುಖ ಸುದ್ದಿ

Karnataka Jobs Reservation: ಉರಿವ ಮನೆಯಿಂದ ಗಳ ಹಿರಿದ ಆಂಧ್ರಪ್ರದೇಶ; ʼನಮ್ಮಲ್ಲಿಗೇ ಬನ್ನಿʼ ಎಂದು ಖಾಸಗಿ ಉದ್ಯಮಗಳಿಗೆ ಭಿಕ್ಷಾಪಾತ್ರೆ ಒಡ್ಡಿದ ಸಚಿವ

Karnataka Jobs Reservation: ಕರ್ನಾಟಕ ಸರಕಾರದ ನಿಲುವಿನ ಕುರಿತು ಆಕ್ರೋಶ ವ್ಯಕ್ತಪಡಿಸಿದ ನಾಸ್ಕಾಂ ಸಂಘಟನೆಯ ಟ್ವೀಟ್‌ ಅನ್ನು ಶೇರ್‌ ಮಾಡಿರುವ ಆಂಧ್ರಪ್ರದೇಶ ಮಾನವ ಸಂಪನ್ಮೂಲ ಇಲಾಖೆ ಸಚಿವ ಲೋಕೇಶ್‌ ನಾರಾ, ʼನಮ್ಮಲ್ಲಿಗೆ ಬನ್ನಿʼ ಎಂದು ಖಾಸಗಿ ಕಂಪನಿಗಳಿಗೆ ಕರೆ ನೀಡಿದ್ದಾರೆ.

VISTARANEWS.COM


on

Karnataka Jobs Reservation
Koo

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಖಾಸಗಿ ಉದ್ಯಮಗಳಲ್ಲಿ ಮೀಸಲು (Karnataka Jobs Reservation) ಕಡ್ಡಾಯ ಮಾಡುವ ಕುರಿತು ರಾಜ್ಯ ಸರ್ಕಾರದ (Karnataka Government) ನಿಲುವಿನಿಂದಾಗಿ ಸೃಷ್ಟಿಯಾದ ಗೊಂದಲದ ನಡುವೆ, ʼಉರಿಯುವ ಮನೆಯಲ್ಲಿ ಗಳ ಹಿರಿದರುʼ ಎಂಬಂತೆ ಲಾಭ ಮಾಡಿಕೊಳ್ಳಲು ಆಂಧ್ರಪ್ರದೇಶ (Andhra Pradesh) ಮುಂದಾಗಿದೆ.

ಕರ್ನಾಟಕ ಸರಕಾರದ ನಿಲುವಿನ ಕುರಿತು ಆಕ್ರೋಶ ವ್ಯಕ್ತಪಡಿಸಿದ ನಾಸ್ಕಾಂ ಸಂಘಟನೆಯ ಟ್ವೀಟ್‌ ಅನ್ನು ಶೇರ್‌ ಮಾಡಿರುವ ಆಂಧ್ರಪ್ರದೇಶ ಮಾನವ ಸಂಪನ್ಮೂಲ ಇಲಾಖೆ ಸಚಿವ ಲೋಕೇಶ್‌ ನಾರಾ, ʼನಮ್ಮಲ್ಲಿಗೆ ಬನ್ನಿʼ ಎಂದು ಖಾಸಗಿ ಕಂಪನಿಗಳಿಗೆ ಕರೆ ನೀಡಿದ್ದಾರೆ.

“ನಿಮ್ಮ ನಿರಾಶೆಯನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ವೈಜಾಗ್‌ನಲ್ಲಿರುವ ನಮ್ಮ IT, IT ಸೇವೆಗಳು, AI ಮತ್ತು ಡೇಟಾ ಸೆಂಟರ್ ಕ್ಲಸ್ಟರ್‌ಗೆ ನಿಮ್ಮ ವ್ಯವಹಾರಗಳನ್ನು ವಿಸ್ತರಿಸಲು ಅಥವಾ ಸ್ಥಳಾಂತರಿಸಲು ನಾವು ನಿಮ್ಮನ್ನು ಸ್ವಾಗತಿಸುತ್ತೇವೆ. ನಾವು ನಿಮಗೆ ಅತ್ಯುತ್ತಮ ದರ್ಜೆಯ ಸೌಲಭ್ಯಗಳು, ತಡೆರಹಿತ ವಿದ್ಯುತ್, ಮೂಲಸೌಕರ್ಯ ಮತ್ತು ನಿಮ್ಮ ಐಟಿ ಉದ್ಯಮಕ್ಕೆ ಸರ್ಕಾರದಿಂದ ಯಾವುದೇ ನಿರ್ಬಂಧಗಳಿಲ್ಲದೆ ಅತ್ಯಂತ ಸೂಕ್ತವಾದ ಕೌಶಲ್ಯಭರಿತ ಪ್ರತಿಭೆಗಳನ್ನು ನೀಡುತ್ತೇವೆ. ಆಂಧ್ರಪ್ರದೇಶ ನಿಮ್ಮನ್ನು ಸ್ವಾಗತಿಸಲು ಸಿದ್ಧವಾಗಿದೆ. ದಯವಿಟ್ಟು ಸಂಪರ್ಕದಲ್ಲಿರಿ!” ಎಂದು ನಾರಾ ಟ್ವೀಟ್‌ ಮಾಡಿದ್ದಾರೆ.

“ಕರ್ನಾಟಕದ ಜಿಡಿಪಿಗೆ ಖಾಸಗಿ ಉದ್ಯಮ ವಲಯ 25% ಕೊಡುಗೆ ನೀಡುತ್ತಿದೆ. ಆದರೆ ಕೌಶಲ್ಯಭರಿತ ಉದ್ಯೋಗಿಗಳ ಕೊರತೆಯಿದೆ. ಇಂಥ ಕಾನೂನು ತಂದರೆ ಉದ್ಯಮ ನಡೆಸುವುದು ಕಷ್ಟವಾಗಲಿದ್ದು, ಉದ್ಯಮಿಗಳು ಬೇರೆ ಕಡೆ ಸ್ಥಳಾಂತರಿಸುವ ಬಗ್ಗೆ ಚಿಂತನೆ ನಡೆಸಬೇಕಾಗುತ್ತದೆ” ಎಂದು ಔದ್ಯಮಿಕ ಒಕ್ಕೂಟ ನಾಸ್ಕಾಮ್‌ (NASSCOM) ಎಚ್ಚರಿಕೆ ನೀಡಿತ್ತು.

ಸರ್ಕಾರದ ನಿಲುವಿಗೆ ಬಿವೈ ವಿಜಯೇಂದ್ರ ಖಂಡನೆ

ಖಾಸಗಿ ಉದ್ಯಮದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಒದಗಿಸುವ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡಿಗರಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಮೀಸಲು ಬಗ್ಗೆ ವಿಧೇಯಕ ತಡೆಹಿಡಿದ ಸರಕಾರದ ಕ್ರಮವನ್ನು ಅವರು ಟೀಕಿಸಿದ್ದಾರೆ. ಈ ಬಗ್ಗೆ ಅವರು ʼಎಕ್ಸ್‌ʼನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ?” ಎಂದು ಅವರು ಪ್ರಶ್ನಿಸಿದ್ದಾರೆ. “ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ದಿಢೀರ್ ತಡೆಹಿಡಿದು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಅಪಮಾನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah)ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುವೆ” ಎಂದಿದ್ದಾರೆ.

“ಈ ನೆಲದಲ್ಲಿ ಬದುಕು ಮಾಡುತ್ತ ಕನ್ನಡ ಕಲಿತವರೆಲ್ಲ ಕನ್ನಡಿಗರೇ ಎಂದು ಪರಿಗಣಿಸಿ ಈ ನೆಲದ ಮಕ್ಕಳ ಉದ್ಯೋಗದ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಕನ್ನಡಪರ ಹೋರಾಟಗಾರರ ಬಹುದಿನಗಳ ಹೋರಾಟದ ಬೇಡಿಕೆಗೆ ನಿನ್ನೆಯಷ್ಟೇ ‘ಅಸ್ತು ‘ಎಂದು ಹೆಜ್ಜೆ ಇಟ್ಟಿದ್ದ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’ ಹೊಡೆದಿರುವುದೇಕೆ? ಮುಖ್ಯಮಂತ್ರಿಗಳು ಈ ಕುರಿತು ತಮ್ಮ X ಖಾತೆಯಲ್ಲಿ ಮೂರು ಬಾರಿ ‘ಯೂ ಟರ್ನ್ ಹೊಡೆದು’ ಕೊನೆಗೂ ವಿಧೇಯಕ ಸದ್ಯಕ್ಕೆ ಮಂಡಿಸುತ್ತಿಲ್ಲ ಎನ್ನುವ ಅಂಜುಬುರುಕ ನಿರ್ಧಾರದ ಹಿಂದೆ ನಾಡಿನ ಆತ್ಮ ಗೌರವ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡತನವನ್ನು ಹಿಮ್ಮೆಟ್ಟಿಸುವ ಕರ್ನಾಟಕ ವಿರೋಧಿ ಶಕ್ತಿಗಳ ಲಾಬಿ ಮೇಲುಗೈ ಸಾಧಿಸಿರುವಂತಿದೆ”

“ಇಂಡಿ ಕೂಟದಲ್ಲಿ ಯಾವಾಗ ಬಿರುಕು ಮೂಡುತ್ತದೋ ಎಂಬ ಭೀತಿಯಲ್ಲಿರುವ ದೆಹಲಿಯ ದೊಡ್ಡ ‘ಕೈ’ ಮುಖ್ಯಮಂತ್ರಿಗಳ ಕೈ ಕಟ್ಟಿಹಾಕಿರಲೇಬೇಕು, ಇಲ್ಲದಿದ್ದರೇ ಕನ್ನಡಿಗರ ಬದುಕು ಹಸನಾಗಿಸುವ ವಿಧೇಯಕವನ್ನು ಬದಿಗೆ ಸರಿಸುವ ಪಲಾಯನವಾದಿ ನಿರ್ಧಾರ ಕೈಗೊಳ್ಳಲು ಹೇಗೆ ಸಾಧ್ಯ? ಸದ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳನ್ನು ಮುತ್ತಿರುವ ಮಹರ್ಷಿ ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣಗಳಿಂದ ತತ್ತರಿಸಿರುವ ಕಾಂಗ್ರೆಸ್ ತನ್ನ ಮುಖ ಮುಚ್ಚಿಕೊಳ್ಳಲು ಹಗರಣದ ಚರ್ಚೆ ಹಾಗೂ ತನಿಖೆಯನ್ನು ದಿಕ್ಕು ತಪ್ಪಿಸಲು ಹಾಗೂ ಜನರ ಗಮನ ವಿಚಲಿತಗೊಳಿಸುವ ಕುತಂತ್ರದಿಂದ ಕನ್ನಡ ಪರ ವಿಧೇಯಕವನ್ನು ತಡೆಹಿಡಿದು ಗುರಾಣಿ ಮಾಡಿಕೊಳ್ಳುವ ಹುನ್ನಾರ ನಡೆಸಿದ್ದರೆ ರಾಜ್ಯದ ಜನತೆ ಕಾಂಗ್ರೆಸ್ಸಿಗರನ್ನು ಎಂದಿಗೂ ಕ್ಷಮಿಸರು.”

“ವಿಧೇಯಕದ ಕುರಿತು ಮಾಧ್ಯಮಗಳಲ್ಲಿ ಹೆಮ್ಮೆಯಿಂದ ಬೀಗಿದ್ದ ಸಚಿವರುಗಳು ಹಾಗೂ ಕಾಂಗ್ರೆಸ್ ಮುಖಂಡರು ಕೆಲವೇ ಸಮಯದ ಅಂತರದಲ್ಲಿ ನಾಡ ಜನರ ಬಗೆಗಿನ ಐತಿಹಾಸಿಕ ವಿಧೇಯಕ ಹಿಂತೆಗೆದುಕೊಂಡ ಬಗ್ಗೆ ಸಮಸ್ತ ಕನ್ನಡ ಜನತೆಯ ಮುಂದೆ ತಲೆ ಎತ್ತಿ ಮಾತನಾಡುವ ನೈತಿಕತೆ ಕಳೆದುಕೊಂಡಿದ್ದಾರೆ. ಅರ್ಹತೆ ಇದ್ದರೂ ಉದ್ಯೋಗಾವಕಾಶಗಳಿಂದ ವಂಚಿತರಾಗಿ ಹತಾಶೆಗೊಳಗಾಗಿದ್ದ ಗ್ರಾಮೀಣ ಭಾಗದ ಲಕ್ಷಾಂತರ ನಿರುದ್ಯೋಗಿಗಳಿಗೆ ಭರವಸೆಯ ಬೆಳಕು ಮೂಡಿಸಿದ್ದ ಕನ್ನಡಿಗರ ಉದ್ಯೋಗ ಮೀಸಲಾತಿಯ ವಿಧೇಯಕ ಪ್ರಸಕ್ತ ಅಧಿವೇಶನದಲ್ಲೇ ಸರ್ಕಾರ ಮಂಡಿಸಲಿ, ಇಲ್ಲವೇ ಕನ್ನಡಿಗರ ಆಕ್ರೋಶ ಎದುರಿಸಲು ಸಿದ್ದವಾಗಲಿ” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: Karnataka Jobs Reservation : ಕನ್ನಡಿಗರಿಗೆ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮೀಸಲಾತಿ ಮಸೂದೆಗೆ ತಾತ್ಕಾಲಿಕ ತಡೆ; ಉದ್ಯಮಿಗಳ ಒತ್ತಡ?

Continue Reading
Advertisement
Gold Rate Today
ಚಿನ್ನದ ದರ1 min ago

Gold Rate Today: ಚಿನ್ನದ ಬೆಲೆಯಲ್ಲಿ ತುಸು ಇಳಿಕೆ; ಇಂದಿನ ದರ ಚೆಕ್‌ ಮಾಡಿ

Kannada New Movie prakarana tanikha hantadalli ide
ಸ್ಯಾಂಡಲ್ ವುಡ್16 mins ago

Kannada New Movie: ‘ಪ್ರಕರಣ ತನಿಖಾ ಹಂತದಲ್ಲಿದೆ’ ಮೋಷನ್ ಪೋಸ್ಟರ್ ಬಿಡುಗಡೆ

gt world mall karnataka assembly live
ಪ್ರಮುಖ ಸುದ್ದಿ27 mins ago

Karnataka Assembly Live: ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ 7 ದಿನ ಬಂದ್: ವಿಧಾನಸಭೆಯಲ್ಲಿ ಘೋಷಣೆ, ವಿಸ್ತಾರ್‌ ನ್ಯೂಸ್‌ ಬಿಗ್‌ ಇಂಪ್ಯಾಕ್ಟ್

Olympic Medals
ಕ್ರೀಡೆ32 mins ago

Olympic Medals: ಒಲಿಂಪಿಕ್ಸ್​ ವಿಜೇತರಿಗೆ ನೀಡುವ ಚಿನ್ನದ ಪದಕ ಚಿನ್ನದ್ದಲ್ಲ!

Jaahnavi Kandula
ವಿದೇಶ32 mins ago

Jaahnavi Kandula: ಅಮೆರಿಕದಲ್ಲಿ ಭಾರತದ ವಿದ್ಯಾರ್ಥಿನಿಗೆ ಕಾರು ಗುದ್ದಿಸಿ ನಕ್ಕ ಪೊಲೀಸ್ ವಜಾ

Illicit relationship
ತುಮಕೂರು34 mins ago

Illicit relationship : ಪರ ಪುರುಷನೊಂದಿಗೆ ಓಡಿ ಹೋದ ಪತ್ನಿ; ಮರ್ಯಾದೆಗೆ ಅಂಜಿ ಪತಿ ಆತ್ಮಹತ್ಯೆ

Bigg Boss Kannada 11 Starting Date And Contestants List
ಬಿಗ್ ಬಾಸ್43 mins ago

Bigg Boss Kannada: ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಯಾವಾಗಿನಿಂದ ಶುರು? ಸ್ಪರ್ಧಿಗಳು ಇವರೇನಾ?

Pralhad Joshi
ದೇಶ1 hour ago

Pralhad Joshi: ಉಚಿತ ಅಕ್ಕಿ ವಿತರಣೆಯ ಪಿಎಂ ಗರೀಬ್ ಕಲ್ಯಾಣ್‌ ಅನ್ನ ಯೋಜನೆ 2029ರ ವರೆಗೆ ವಿಸ್ತರಣೆ: ಪ್ರಲ್ಹಾದ ಜೋಶಿ

Kannada New Movie life of mradula song out
ಸ್ಯಾಂಡಲ್ ವುಡ್1 hour ago

Kannada New Movie: ಹೊಸಬರ ತಂಡ ಸಿದ್ದಪಡಿಸಿರುವ ಹೊಸತನದ ಸಿನಿಮಾ; ಲೈಫ್ ಆಫ್ ಮೃದುಲ ಹಾಡು ಬಿಡುಗಡೆ!

road Accident
ರಾಯಚೂರು1 hour ago

Road Accident : ಪಾದಚಾರಿ ಬಲಿ ಪಡೆದು ಎಸ್ಕೇಪ್‌ ಆದ ಬಸ್‌ ಚಾಲಕ; ಬಾಲಕಿಗೆ ಗುದ್ದಿ ಪ್ರಾಣ ಕಸಿದ ಲಾರಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ5 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌