Vistara Health | ಆರೋಗ್ಯ ಜಾಗೃತಿಗಾಗಿ ವಿಸ್ತಾರ ಹೆಲ್ತ್‌ ಚಾನೆಲ್:‌ ಹರಿಪ್ರಕಾಶ್‌ ಕೋಣೆಮನೆ - Vistara News

ಪ್ರಮುಖ ಸುದ್ದಿ

Vistara Health | ಆರೋಗ್ಯ ಜಾಗೃತಿಗಾಗಿ ವಿಸ್ತಾರ ಹೆಲ್ತ್‌ ಚಾನೆಲ್:‌ ಹರಿಪ್ರಕಾಶ್‌ ಕೋಣೆಮನೆ

ಆರೋಗ್ಯ ಕಾಪಾಡಿಕೊಳ್ಳಲು ಉತ್ತಮ ಆಹಾರ, ವ್ಯಾಯಾಮದಿಂದ ಮನೆಮದ್ದಿನವರೆಗೆ ಎಲ್ಲ ವಿಚಾರಗಳನ್ನೂ ಜನತೆಗೆ ತಿಳಿಸಿಕೊಡುವ ಸ್ನೇಹಿತನ ಸ್ಥಾನದಲ್ಲಿ ವಿಸ್ತಾರ ಹೆಲ್ತ್‌ ಯೂಟ್ಯೂಬ್‌ ಚಾನೆಲ್‌ ನಿಲ್ಲಲಿದೆ.

VISTARANEWS.COM


on

health plus
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆರೋಗ್ಯವಂತ ಪ್ರಜೆಗಳಿಂದ ಆರೋಗ್ಯವಂತ ಸಮಾಜ, ಅದರಿಂದ ಆರೋಗ್ಯಯುತ ದೇಶ ನಿರ್ಮಾಣವಾಗುತ್ತದೆ. ಈ ಕುರಿತು ಸಮಾಜದಲ್ಲಿ ವಿಶ್ವಾಸಾರ್ಹ ಜಾಗೃತಿ ಮೂಡಿಸಲು ʻವಿಸ್ತಾರ ಹೆಲ್ತ್‌ʼ ಯೂಟ್ಯೂಬ್‌ ಚಾನೆಲ್‌ ಶ್ರಮಿಸಲಿದೆ ಎಂದು ವಿಸ್ತಾರ ನ್ಯೂಸ್‌ ಮೀಡಿಯಾದ ಸಿಇಒ ಹಾಗೂ ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ ಹೇಳಿದರು.

ಬುಧವಾರ (ಆ.24) ನಡೆದ ʻವಿಸ್ತಾರ ಹೆಲ್ತ್‌ʼ ಯೂಟ್ಯೂಬ್‌ ಚಾನೆಲ್‌ ಅನಾವರಣ ಸಂದರ್ಭದಲ್ಲಿ ಅವರು ಈ ಬಗ್ಗೆ ಪ್ರಾಸ್ತಾವಿಕವಾಗಿ ಮಾಹಿತಿ ನೀಡಿದರು. ಉತ್ತಮ ಬದುಕಿಗೆ ಒಳ್ಳೆಯ ಮನಸ್ಥಿತಿ, ಆರೋಗ್ಯಕರ ಆಹಾರ ಎಲ್ಲವೂ ಬೇಕು. ಆರೋಗ್ಯ ಕಾಪಾಡಿಕೊಳ್ಳಲು ಉತ್ತಮ ಆಹಾರ, ವ್ಯಾಯಾಮದಿಂದ ಹಿಡಿದು ಮನೆಮದ್ದಿನವರೆಗೆ ಎಲ್ಲ ವಿಚಾರಗಳನ್ನೂ ಜನತೆಗೆ ತಿಳಿಸಿಕೊಡಬೇಕಾಗಿದೆ. ಅನಾರೋಗ್ಯವನ್ನು ತಡೆಯುವುದು ಹೇಗೆ, ಆರೋಗ್ಯವನ್ನು ಉಳಿಸಿ ಬೆಳೆಸಿಕೊಳ್ಳುವುದು ಹೇಗೆ, ಯಾವ ಕಾಯಿಲೆ ಬಂದಾಗ ಯಾರ ಬಳಿ ಹೋಗಬೇಕು, ಆಸ್ಪತ್ರೆಯಿಂದ ಹೊರ ಬರುವಾಗ ಸಾಲದ ಸುಳಿಯಲ್ಲಿ ಸಿಲುಕಿಕೊಂಡು ಮುಂದಿನ ಬದುಕನ್ನು ಕಳೆದುಕೊಳ್ಳದಂತೆ ನೋಡಿಕೊಳ್ಳುವುದು ಹೇಗೆ- ಎಂಬಿತ್ಯಾದಿ ಎಲ್ಲ ವಿಚಾರಗಳಲ್ಲೂ ವಿಸ್ತಾರ ಹೆಲ್ತ್‌ ಯೂಟ್ಯೂಬ್‌ ಚಾನೆಲ್‌ ಜಾಗೃತಿ ಮೂಡಿಸಲಿದೆ ಎಂದರು.

ಇದು ವಿಸ್ತಾರ ನ್ಯೂಸ್‌ ಮೀಡಿಯಾದ ಮೂರನೆಯ ಪ್ರಯತ್ನವಾಗಿದೆ. ಲೋಗೊ ಅನಾವರಣ, ಹಣಕಾಸು ಶಿಕ್ಷಣ ನೀಡುವ ಮನಿ ಪ್ಲಸ್‌ ಯೂಟ್ಯೂಬ್‌ ಚಾನೆಲ್‌ ನಂತರ ಹೆಲ್ತ್‌ ವಾಹಿನಿ ಬರುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾದರಿಯಾಗಿರುವ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ.ಸಿ.ಎನ್‌.ಮಂಜುನಾಥ್‌ ಅವರು ಇದನ್ನು ಲೋಕಾರ್ಪಣೆ ಮಾಡುತ್ತಿರುವುದು ಅರ್ಥಪೂರ್ಣವಾಗಿದೆ. ಅವರು ಆರೋಗ್ಯ ವಲಯದಲ್ಲಿ ದೇಶಕ್ಕೇ ಮಾದರಿಯಾದ ಸೇವೆ ಸಲ್ಲಿಸಿದ್ದಾರೆ. ಸಣ್ಣ ಹಳ್ಳಿಯಲ್ಲಿ ಹುಟ್ಟಿ ಬೆಳೆದ ಅವರು ಉನ್ನತ ಖಾಸಗಿ ಸಂಸ್ಥೆಗಳು ಸೆಲ್ಯೂಟ್‌ ಹೊಡೆಯುವಂತೆ ಜಯದೇವವನ್ನು ಕಟ್ಟಿದ್ದಾರೆ. ಆರೋಗ್ಯವೇ ಸಂಪತ್ತು ಎಂಬುದನ್ನು ಪ್ರಾಯೋಗಿಕವಾಗಿ ಮಾಡಿ ತೋರಿಸಿದ್ದಾರೆ ಎಂದರು.

ಅನೇಕ ಸುದ್ದಿಸಂಸ್ಥೆಗಳ ನಡುವೆ ವಿಸ್ತಾರ ತನ್ನದೇ ವಿಶೇಷತೆ, ಗುರಿ ಹೊಂದಿದೆ. ಸಮಾಜಕ್ಕೆ ಉತ್ತಮ, ಅವಶ್ಯಕ ಸೇವೆ ನೀಡುವುದು, ಸಮಾಜದಲ್ಲಿ ಬದಲಾವಣೆ ತರುವುದು, ಆತ್ಮವಿಶ್ವಾಸ- ಹುಮ್ಮಸ್ಸು ಮೂಡಿಸುವುದು, ಸಾಧನೆಯ ಪ್ರೇರಣೆ ಒದಗಿಸುವುದು ನಮ್ಮ ಆಶಯವಾಗಿದೆ ಎಂದು ಅವರು ವಿವರಿಸಿದರು.

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ.ಸಿ.ಎನ್‌.ಮಂಜುನಾಥ್‌ ಅವರು ಚಾನೆಲ್‌ ಲೋಕಾರ್ಪಣೆ ಮಾಡಿದರು. ಸಂಸ್ಥೆಯ ಚೇರ್ಮನ್‌ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಚ್.ವಿ.ಧರ್ಮೇಶ್‌, ವಿಸ್ತಾರ ನ್ಯೂಸ್‌ನ ಎಕ್ಸಿಕ್ಯೂಟಿವ್‌ ಎಡಿಟರ್‌ ಶರತ್‌ ಎಂ.ಎಸ್. ಅವರು ಉಪಸ್ಥಿತರಿದ್ದರು.

ಇದನ್ನೂ ಓದಿ | Vistara Health | ವಿಸ್ತಾರ ಹೆಲ್ತ್ ಯುಟ್ಯೂಬ್ ಚಾನೆಲ್ ಪರಿಸರ ವೈದ್ಯ ಆಗಲಿ: ಡಾ. ಸಿ.ಎನ್ ಮಂಜುನಾಥ್ ಹಾರೈಕೆ

ಇದನ್ನೂ ಓದಿ | Vistara Money+| ವಿಸ್ತಾರ ಮೀಡಿಯಾದಿಂದ ಹಣಕಾಸು ಕುರಿತ ಯೂಟ್ಯೂಬ್‌ ಚಾನೆಲ್‌ ಲೋಕಾರ್ಪಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಅಂಕಣ

ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

ರಾಜಮಾರ್ಗ ಅಂಕಣ (Rajamarga column): ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

VISTARANEWS.COM


on

arijit singh rajamarga column 2
Koo

ದ ಮ್ಯೂಸಿಕಲ್ ಲೆಜೆಂಡ್, ಜೇನು ದನಿಯ ಸರದಾರ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ (Rajamaraga Column): ಏಪ್ರಿಲ್ 25 ಬಂತು ಅಂದರೆ ಅದು ದೇಶದ ಯುವ ಸಂಗೀತ ಪ್ರೇಮಿಗಳಿಗೆ ಬಹಳ ದೊಡ್ಡ ಹಬ್ಬ. ಏಕೆಂದರೆ ಅದು ಅವರ ಹೃದಯದ ಬಡಿತವೇ ಆಗಿರುವ ಅರ್ಜಿತ್ ಸಿಂಗ್‌ (Arijit singh)) ಹುಟ್ಟಿದ ಹಬ್ಬ (Birthday)!

ಆತನ ವ್ಯಕ್ತಿತ್ವ, ಆತನ ಹಾಡುಗಳು, ಆತನ ಸ್ವರ ವೈವಿಧ್ಯ ಎಲ್ಲವೂ ಆತನ ಕೋಟಿ ಕೋಟಿ ಅಭಿಮಾನಿಗಳಿಗೆ ಹುಚ್ಚು ಹಿಡಿಸಿ ಬಿಟ್ಟಿವೆ. ಅದರಿಂದಾಗಿ ಇಂದು ಆತನಿಗೆ ದೇಶದಲ್ಲಿ ಸ್ಪರ್ಧಿಗಳೇ ಇಲ್ಲ ಎನ್ನುವುದನ್ನು ಅವನ ಸ್ಪರ್ಧಿಗಳೇ ಒಪ್ಪಿಕೊಂಡು ಬಿಟ್ಟಿದ್ದಾರೆ! ನಾನು ಇಂದು ಯಾವ ಕಾಲೇಜಿಗೆ ಹೋದರೂ ಅರ್ಜಿತ್ ಧ್ವನಿಯನ್ನು ಅನುಕರಣೆ ಮಾಡಿ ಹಾಡಲು ತೀವ್ರ ಪ್ರಯತ್ನ ಮಾಡುವ ಯುವಕ, ಯುವತಿಯರು ಇದ್ದಾರೆ. 2015ರಿಂದ ಆತನ ಜನಪ್ರಿಯತೆಯ ಗ್ರಾಫ್ ಕೆಳಗೆ ಬಂದದ್ದೇ ಇಲ್ಲ. ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

ಆತನದ್ದು ಬಂಗಾಳದ ಸಂಗೀತದ ಹಿನ್ನೆಲೆಯ ಕುಟುಂಬ

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಒಂದು ಸಣ್ಣ ಹಳ್ಳಿಯಿಂದ ಬಂದವರು ಅರ್ಜಿತ್. ಅವನ ಅಜ್ಜಿ, ಅವನ ಅತ್ತೆ ಎಲ್ಲರೂ ಚೆನ್ನಾಗಿ ಹಾಡುತ್ತಿದ್ದರು. ಸಹಜವಾಗಿ ಹುಡುಗನಲ್ಲಿ ಸಂಗೀತದ ಆಸಕ್ತಿ ಮೂಡಿತ್ತು. ಒಂಬತ್ತನೇ ವರ್ಷಕ್ಕೆ ರಾಜೇಂದ್ರ ಪ್ರಸಾದ್ ಹಜಾರಿ ಎಂಬ ಶಾಸ್ತ್ರೀಯ ಸಂಗೀತದ ಗುರುವಿನಿಂದ ಸಂಗೀತದ ಕಲಿಕೆ ಆರಂಭವಾಯಿತು. ಬಂಗಾಳದಲ್ಲಿ ರಬೀಂದ್ರ ಸಂಗೀತದ ಪ್ರಭಾವದಿಂದ ಯಾರೂ ಹೊರಬರಲು ಸಾಧ್ಯವಿಲ್ಲ. ಅದರ ಜೊತೆಗೆ ವಿಶ್ವದ ಶ್ರೇಷ್ಠ ಸಂಗೀತಗಾರರಾದ ಮೊಜಾರ್ಟ್ ಮತ್ತು ಬೀತೊವೆನ್ ಅವರ ಹಾಡುಗಳನ್ನು ಕೇಳುತ್ತಾ ಅರ್ಜಿತ್ ಬೆಳೆದರು. ಅದರ ಜೊತೆಗೆ ಕಿಶೋರ್ ಕುಮಾರ್, ಮನ್ನಾಡೆ, ಹೇಮಂತ್ ಕುಮಾರ್ ಅವರ ಹಾಡುಗಳನ್ನು ಕೇಳುತ್ತಾ ಆರ್ಜಿತ್ ತನ್ನದೇ ಸಿಗ್ನೇಚರ್ ಧ್ವನಿಯನ್ನು ಸಂಪಾದನೆ ಮಾಡಿಕೊಂಡರು. ಸೂಫಿ ಹಾಡುಗಳು, ಗಜಲ್, ಪಾಪ್ ಹಾಡುಗಳು, ಶಾಸ್ತ್ರೀಯ ಹಾಡುಗಳು, ಭಜನ್, ಜಾನಪದ ಹಾಡುಗಳು….ಹೀಗೆ ಎಲ್ಲ ವಿಧವಾದ ಹಾಡುಗಳನ್ನು ಅದ್ಭುತವಾಗಿ ಹಾಡಲು ಕಲಿತರು.

ರಿಯಾಲಿಟಿ ಶೋದಲ್ಲಿ ಸೋಲು!

ಅರ್ಜಿತ್ ತನ್ನ 18ನೆಯ ವಯಸ್ಸಿನಲ್ಲಿ FAME GURUKUL ಎಂಬ ಟಿವಿ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದರು. ಚೆಂದವಾಗಿ ಹಾಡಿದರು ಕೂಡ. ಆದರೆ ಆಡಿಯೆನ್ಸ್ ಪೋಲ್ ಇದ್ದ ಕಾರಣ ಅದರಲ್ಲಿ ಸೋತರು. ಆದರೆ ಆತನ ಧ್ವನಿಯ ಮಾಧುರ್ಯವನ್ನು ಗುರುತಿಸಿದ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಅವರು ತನ್ನ ಮುಂದಿನ ಸಿನೆಮಾ ಸಾವರಿಯಾದಲ್ಲಿ ಒಂದು ಹಾಡನ್ನು ಆತನಿಂದ ಹಾಡಿಸಿದರು.

ಆದರೆ ಆ ಹಾಡು ಸಿನೆಮಾ ಎಡಿಟ್ ಆಗುವಾಗ ಬಿಟ್ಟು ಹೋಯಿತು! ಮುಂದೆ TIPS ಸಂಗೀತ ಕಂಪೆನಿ ಆತನೊಂದಿಗೆ ಒಪ್ಪಂದ ಮಾಡಿಕೊಂಡು ಹಲವು ಆಲ್ಬಂ ಸಾಂಗ್ಸ್ ರೆಕಾರ್ಡ್ ಮಾಡಿಕೊಂಡಿತು. ಆದರೆ ಅದ್ಯಾವುದೂ ಬಿಡುಗಡೆ ಆಗಲಿಲ್ಲ! ಆತನಲ್ಲಿ ಅಪ್ಪಟ ಪ್ರತಿಭೆ ಇದ್ದರೂ ದುರದೃಷ್ಟವು ಆತನಿಗಿಂತ ಮುಂದೆ ಇತ್ತು! ಆದರೆ ಈ ಸೋಲುಗಳ ನಡುವೆ ಅರ್ಜಿತ್ ಸಂಗೀತವನ್ನು ಬಿಟ್ಟು ಹೋಗಿಲ್ಲ ಅನ್ನೋದು ಅದ್ಭುತ!

ಮುಂದೆ ಇನ್ನೊಂದು ಟಿವಿ ರಿಯಾಲಿಟಿ ಶೋ (10ಕೆ 10ಲೆ ಗಯೇ ದಿಲ್)ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗೆದ್ದಾಗ ಆತನ ಬದುಕಿನಲ್ಲಿ ದೊಡ್ಡ ತಿರುವು ಉಂಟಾಯಿತು. ಆಗ ದೊರೆತ ಹತ್ತು ಲಕ್ಷ ರೂಪಾಯಿ ಬಹುಮಾನದ ಮೊತ್ತವನ್ನು ತಂದು ಮುಂಬೈಯಲ್ಲಿ ಒಂದು ಸ್ಟುಡಿಯೋ ಸ್ಥಾಪನೆ ಮಾಡಿದರು. ಒಂದು ಪುಟ್ಟ ಬಾಡಿಗೆ ಮನೆಯಲ್ಲಿ ವಾಸ, ಒಂದು ಹೊತ್ತಿನ ಊಟವೂ ಕಷ್ಟ ಆಗಿದ್ದ ದಿನಗಳು ಅವು! ಅರ್ಜಿತ್ ಒಂದು ದೊಡ್ಡ ಬ್ರೇಕ್ ಥ್ರೂ ಕಾಯುತ್ತ ಕೂತಿದ್ದರು. ಈ ಅವಧಿಯಲ್ಲಿ ನೂರಾರು ಜಿಂಗಲ್, ಜಾಹೀರಾತುಗಳ ಸಂಗೀತವನ್ನು ಕಂಪೋಸ್ ಮಾಡಿ ಸ್ವತಃ ಹಾಡಿದರು.

arijit singh rajamarga column 2

2011ರಲ್ಲಿ ಅರ್ಜಿತ್ ಭಾಗ್ಯದ ಬಾಗಿಲು ತೆರೆಯಿತು!

ಆ ವರ್ಷ ಬಿಡುಗಡೆ ಆದ ಮರ್ಡರ್ 2 ಸಿನೆಮಾದ ‘ಫೀರ್ ಮೊಹಬ್ಬತೆ ‘ ಹಾಡು ಸೂಪರ್ ಹಿಟ್ ಆಯಿತು. ಬಾಲಿವುಡ್ ಆತನ ಟಿಪಿಕಲ್ ಧ್ವನಿಗೆ ಮಾರುಹೋಯಿತು. ಮುಂದೆ ರಬಟಾ ( ಏಜೆಂಟ್ ವಿನೋದ್), ಉಸ್ಕಾ ಹೀ ಬನಾನಾ (ಎವಿಲ್ ರಿರ್ಟರ್ನ್) ಲಾಲ್ ಇಷ್ಕ್ ಮತ್ತು ಗೋಲಿಯೋನ್ ಕಿ ರಾಸ ಲೀಲಾ (ರಾಮ್ ಲೀಲಾ) ಮೊದಲಾದ ಹಾಡುಗಳು ಭಾರೀ ಹಿಟ್ ಆದವು. ಮನವಾ ಲಾಗೇ ಮತ್ತು ಮಸ್ತ್ ಮಗನ್ ಹಾಡುಗಳು ಇಡೀ ಬಾಲಿವುಡ್ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದವು. ಪದ್ಮಾವತ್ ಸಿನೆಮಾದ ‘ಬಿನ್ ತೆ ದಿಲ್ ‘ ಹಾಡಿಗೆ ರಾಷ್ಟ್ರಪ್ರಶಸ್ತಿಯು ಒಲಿದು ಬಂತು. 7 ಫಿಲಂಫೇರ್ ಪ್ರಶಸ್ತಿಗಳು ಬಂದವು. ಹಿಂದೀ, ತೆಲುಗು, ತಮಿಳು, ಬಂಗಾಳಿ ಸಿನೆಮಾಗಳಲ್ಲಿ ಅರ್ಜಿತ್ ಅವರಿಗೆ ಭಾರೀ ಡಿಮಾಂಡ್ ಕ್ರಿಯೇಟ್ ಆಯಿತು. ಭಾರೀ ದೊಡ್ಡ ಫ್ಯಾನ್ ಬೇಸ್ ಡೆವಲಪ್ ಆಯಿತು. ಇಂದು ಅರ್ಜಿತ್ ತನ್ನ ಸಂಗೀತದ ಪ್ರತಿಭೆಯಿಂದ ಭಾರೀ ಎತ್ತರಕ್ಕೆ ಬೆಳೆದಿದ್ದಾರೆ.

ಜವಾನ್, ಡುಮ್ಕಿ, ಅನಿಮಲ್ ಮೊದಲಾದ ಇತ್ತೀಚಿನ ಸೂಪರ್ ಹಿಟ್ ಸಿನಿಮಾಗಳಲ್ಲಿ ಆರ್ಜಿತ್ ಹಾಡಿದ ಹಾಡುಗಳು ಇವೆ. ಆತ ಹಾಡಿದ ಎಲ್ಲ ಹಾಡುಗಳೂ ಸೂಪರ್ ಹಿಟ್ ಆಗಿವೆ.

ಸ್ಟುಡಿಯೋ ಹಾಡುಗಳು ಮತ್ತು ಸ್ಟೇಜ್ ಕಾರ್ಯಕ್ರಮಗಳು

ಹಿನ್ನೆಲೆ ಹಾಡುಗಳು ಮತ್ತು ಆಲ್ಬಂ ಹಾಡುಗಳನ್ನು ಸ್ಟುಡಿಯೋ ಒಳಗೆ ಹಾಡುವ ಟ್ಯಾಲೆಂಟ್ ಒಂದೆಡೆ. ಸ್ಟೇಜ್ ಮೇಲೆ ಲಕ್ಷಾಂತರ ಮಂದಿ ಹುಚ್ಚು ಅಭಿಮಾನಿಗಳ ಮುಂದೆ ಗಿಟಾರ್ ಹಿಡಿದುಕೊಂಡು ಹಾಡುವ ಟ್ಯಾಲೆಂಟ್ ಇನ್ನೊಂದೆಡೆ. ಆರ್ಜಿತ್ ಎರಡೂ ಕಡೆಯಲ್ಲಿ ಗೆದ್ದಿದ್ದಾರೆ. ದೇಶ ವಿದೇಶಗಳ ನೂರಾರು ವೇದಿಕೆಗಳಲ್ಲಿ ಅವರ ಲೈವ್ ಸ್ಟೇಜ್ ಶೋಗಳಿಗೆ ಅಭಿಮಾನಿಗಳು ಕಿಕ್ಕಿರಿದು ಸೇರುತ್ತಾರೆ. ಆರ್ಜಿತ್ ಮತ್ತು ಶ್ರೇಯಾ ಘೋಷಾಲ್ ಸಂಗೀತದ ಶೋಗಳಿಗೆ ಇಂದು ಭಾರೀ ಡಿಮಾಂಡ್ ಇದೆ!

ಲೆಟ್ ದೇರ್ ಬಿ ಲೈಟ್ ಎಂಬ NGO ಸ್ಥಾಪನೆ ಮಾಡಿ ಆರ್ಜಿತ್ ತನ್ನ ಸಂಪಾದನೆಯ ಬಹು ದೊಡ್ಡ ಭಾಗವನ್ನು ಚಾರಿಟಿ ಉದ್ದೇಶಕ್ಕೆ ಖರ್ಚು ಮಾಡುತ್ತಿರುವುದು ನಿಜಕ್ಕೂ ಅಭಿನಂದನೀಯ. ಆರ್ಜಿತ್ ಇಂದು ಭಾರತದ ನಂಬರ್ ಒನ್ ಹಿನ್ನೆಲೆ ಗಾಯಕ ಎಂದು ಸೋನು ನಿಗಮ್ ಸಾಕಷ್ಟು ವೇದಿಕೆಯಲ್ಲಿ ಹೇಳಿದ್ದಾರೆ. ಅವರಿಬ್ಬರೂ ಒಳ್ಳೆಯ ಗೆಳೆಯರು ಎಂದು ಕೂಡ ಸಾಬೀತಾಗಿದೆ.

ಅಂತಹ ಅನನ್ಯ ಪ್ರತಿಭೆ, ಜೇನು ದನಿಯ ಸರದಾರ ಅರ್ಜಿತ್ ಸಿಂಗ್ ಅವರಿಗೆ ಇಂದು ನೆನಪಲ್ಲಿ ಹುಟ್ಟುಹಬ್ಬದ ಶುಭಾಶಯ ಹೇಳಿ ಆಯ್ತಾ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ರೈಲ್ವೇ ಇಲಾಖೆಯ ಸುಧಾರಣೆ ಕ್ರಮಗಳು ಪ್ರಶಂಸಾರ್ಹ

ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ಇಲಾಖೆಗಳಲ್ಲೂ ಬದಲಾವಣೆ, ಹೊಸತನ ತರುತ್ತಿದ್ದಾರೆ. ಹೆದ್ದಾರಿ ಸಾರಿಗೆಯಲ್ಲಿ ನಿತಿನ್‌ ಗಡ್ಕರಿ ಅವರ ನೇತೃತ್ವದಲ್ಲಿ ಆಗಿರುವ ಸಾಧನೆಯೇ ಇದಕ್ಕೆ ಸಾಕ್ಷಿ. ಇದೇ ರೀತಿ ರೈಲ್ವೆಯಲ್ಲೂ ಆಗಬೇಕಿದೆ.

VISTARANEWS.COM


on

Modi
Koo

ಮುಂದಿನ 5 ವರ್ಷಗಳಲ್ಲಿ ದೇಶದ ಪ್ರತಿಯೊಬ್ಬ ಪ್ರಯಾಣಿಕರಿಗೂ (Railway Ticket) ಕನ್ಫರ್ಮ್ಡ್‌ ಟಿಕೆಟ್‌ (Confirmed Tickets) ಸಿಗಲಿವೆ. ಇದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗ್ಯಾರಂಟಿ- ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ. ದೇಶಾದ್ಯಂತ ರೈಲುಗಳನ್ನು ಹೆಚ್ಚಿಸಿ, ಪ್ರತಿಯೊಬ್ಬ ಪ್ರಯಾಣಿಕರಿಗೆ ಕನ್ಫರ್ಮ್ಡ್‌ ಟಿಕೆಟ್‌ ಸಿಗುವಂತೆ ಮಾಡಲಾಗುತ್ತದೆ. ಇದರಿಂದ ಪ್ರಯಾಣಿಕರು ವೇಟಿಂಗ್‌ ಲಿಸ್ಟ್‌ ನೋಡುತ್ತ ಕಾಯುವುದು ತಪ್ಪುತ್ತದೆ. ಎಲ್ಲರಿಗೂ ಸುಲಭವಾಗಿ ರೈಲು ಟಿಕೆಟ್‌ ಕೊಡುವಂತೆ ಮಾಡುವುದು ನಮ್ಮ ಆದ್ಯತೆ ಎಂದಿದ್ದಾರೆ ಸಚಿವರು. ಇದು ದೇಶದ ರೈಲ್ವೇ ವ್ಯವಸ್ಥೆಯ ಸುಧಾರಣೆಗಳಲ್ಲಿ ಒಂದು ವಿಚಾರ ಮಾತ್ರ.

ಕಳೆದ 10 ವರ್ಷಗಳಲ್ಲಿ ದೇಶದ ರೈಲ್ವೇ ವ್ಯವಸ್ಥೆಯನ್ನು ಸಾಕಷ್ಟು ಆಧುನೀಕರಣಗೊಳಿಸಲಾಗಿದೆ. ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ವಂದೇ ಭಾರತ್‌ನಂತಹ ಅತ್ಯಾಧುನಿಕ ರೈಲುಗಳನ್ನು ಪರಿಚಯಿಸಲಾಗಿದೆ. ದೇಶಾದ್ಯಂತ ರೈಲ್ವೆ ಪ್ರಯಾಣಿಕರಿಗೆ ಹೊಸ ಸೌಲಭ್ಯ, ಮೂಲ ಸೌಕರ್ಯಗಳನ್ನು ಒದಗಿಸಲು ಕೇಂದ್ರ ಪ್ರಯತ್ನಪಡುತ್ತಿದೆ. ಅದೇ ರೀತಿ ಪ್ರಯಾಣಿಕರು ಸುಲಭವಾಗಿ ಹಾಗೂ ಕ್ಷಿಪ್ರವಾಗಿ ರೈಲು ಟಿಕೆಟ್‌ಗಳನ್ನು ಪಡೆಯುವಂತೆ ಮಾಡುವುದು ಮೊದಲ ಆದ್ಯತೆ. ಇದಕ್ಕಾಗಿ ಇನ್ನಷ್ಟು ರೈಲುಗಳ ಓಡಾಟ, ದೇಶಾದ್ಯಂತ ರೈಲುಗಳ ವಿಸ್ತರಣೆ, ರೈಲ್ವೆ ಲೇನ್‌ಗಳನ್ನು ವಿಸ್ತರಿಸುವುದು ಕೇಂದ್ರ ಸರ್ಕಾರದ ಗುರಿಯಾಗಿದೆ. 2014ರಿಂದ 2024ರ ಅವಧಿಯಲ್ಲಿ ದೇಶಾದ್ಯಂತ 31 ಸಾವಿರ ಹೊಸ ಟ್ರ್ಯಾಕ್‌ಗಳನ್ನು ಅಳವಡಿಸಲಾಗಿದೆ. 2004ರಿಂದ 2014ರ ಅವಧಿಯಲ್ಲಿ 5 ಸಾವಿರ ಕಿಲೋಮೀಟರ್‌ ರೈಲು ಮಾರ್ಗ ವಿದ್ಯುದ್ದೀಕರಣವಾಗಿದ್ದರೆ, 2014ರಿಂದೀಚೆಗೆ ವಿದ್ಯುದ್ದೀಕರಣದ ಪ್ರಮಾಣವು 44 ಸಾವಿರ ಕಿಲೋಮೀಟರ್‌ಗೆ ಏರಿಕೆಯಾಗಿದೆ. ಕಳೆದ 10 ವರ್ಷದಲ್ಲಿ 54 ಸಾವಿರ ಬೋಗಿಗಳನ್ನು ತಯಾರಿಸಲಾಗಿದೆ.

ಕಳೆದ ಫೆಬ್ರವರಿಯಲ್ಲಿ ಪ್ರಧಾನಿ ಮೋದಿಯವರು 41 ಸಾವಿರ ಕೋಟಿ ರೂ. ವೆಚ್ಚದ 2000 ರೈಲ್ವೆ ಪ್ರಾಜೆಕ್ಟ್‌ಗಳನ್ನು ದೇಶಾದ್ಯಂತ ಲೋಕಾರ್ಪಣೆ ಮಾಡಿದ್ದರು. ಈ ಮೊದಲು ರೈಲ್ವೆ ಇಲಾಖೆ ಎಂದರೆ ನಷ್ಟ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಅದೇ ರೈಲ್ವೆಯು ಪರಿವರ್ತನೆಯ ಬಹುದೊಡ್ಡ ಶಕ್ತಿಯಾಗಿ ಬದಲಾಗಿದೆ. ಬುಲೆಟ್‌ ರೈಲು ಯೋಜನೆಯ ಕಾಮಗಾರಿ ಭರದಿಂದ ಸಾಗುತ್ತಿದ್ದು, ಬುಲೆಟ್‌ ರೈಲು ಯೋಜನೆಯು ಸಂಪರ್ಕ ಕ್ರಾಂತಿ ಜತೆಗೆ ಆರ್ಥಿಕ ಚಟುವಟಿಕೆಗಳ ಉತ್ತೇಜನಕ್ಕೆ ಸಹಕಾರಿಯಾಗಲಿದೆ. ಬುಲೆಟ್‌ ರೈಲು ಸಂಚರಿಸುವ ಮುಂಬೈ, ವಾಪಿ, ಬರೋಡಾ, ಸೂರತ್‌, ಆನಂದ್‌ ಹಾಗೂ ಅಹಮದಾಬಾದ್‌ ನಗರಗಳು ಆರ್ಥಿಕ ನಗರಗಳಾಗಿ ಬದಲಾಗಲಿವೆ. ಈ ನಗರಗಳಲ್ಲಿ ಪ್ರತ್ಯೇಕ ಆರ್ಥಿಕತೆಯೇ ಸೃಷ್ಟಿಯಾಗಲಿದೆ ಎಂದು ಸಚಿವ ಅಶ್ವಿನಿ ವೈಷ್ಣವ್‌ ಹೇಳಿದ್ದರು. ಮೊದಲ ಬುಲೆಟ್‌ ರೈಲು ಯೋಜನೆಗೆ 1.08 ಲಕ್ಷ ಕೋಟಿ ರೂ. ವ್ಯಯಿಸಲಾಗುತ್ತಿದೆ. ಇದಕ್ಕೆ ಜಪಾನ್‌ ಸರ್ಕಾರ ಕೇವಲ 0.1ರ ಬಡ್ಡಿದರದಲ್ಲಿ ಸಾಲ ನೀಡಿದೆ.

ಸಣ್ಣಪುಟ್ಟ ಸಂಗತಿಗಳಲ್ಲೂ ರೈಲ್ವೇ ಇಲಾಖೆ ಸುಧಾರಣೆ ತರುತ್ತಿದೆ. ಉದಾಹರಣೆಗೆ, ಐಆರ್‌ಟಿಸಿ (Indian Railway Catering and Tourism Corporation) ವೆಬ್‌ಸೈಟ್‌ನಿಂದ ಕಾಯ್ದಿರಿಸಿದ ಆರ್‌ಎಸಿ (Reservation Against Cancellation) ಟಿಕೆಟ್‌ಗಳನ್ನು ರದ್ದುಗೊಳಿಸಲು ಕನಿಷ್ಠ ಶುಲ್ಕವನ್ನು (60 ರೂ. ಮಾತ್ರ) ವಿಧಿಸಲು ರೈಲ್ವೇ ಇಲಾಖೆ ನಿರ್ಧರಿಸಿದೆ. ಅಂದರೆ ಈ ಮೊದಲಿನ ಅನಿಯಂತ್ರಿತ ಶುಲ್ಕ ಇನ್ನು ಇರುವುದಿಲ್ಲ. ಕಳೆದ ಮೂರು ವರ್ಷಗಳಲ್ಲಿ ರೈಲ್ವೇಯು ವೈಟಿಂಗ್‌ ಟಿಕೆಟ್‌ಗಳ ರದ್ದತಿಯಿಂದ ಬರೋಬ್ಬರಿ 1,230 ಕೋಟಿ ರೂ. ಆದಾಯ ಗಳಿಸಿದೆ. ಈ ಹಣದುಬ್ಬರದ ಕಾಲದಲ್ಲೂ ಕನಿಷ್ಠ ಪ್ರಯಾಣಿಕ ಹಾಗೂ ಸರಕು ಸಾಗಣೆ ಶುಲ್ಕವನ್ನು ರೈಲ್ವೇಯು ಹೊಂದಿರುವುದರಿಂದ, ಸಾರ್ವಜನಿಕ ಸೇವೆಯ ಮಾಧ್ಯಮವೂ ಆಗಿದೆ. ಹೀಗಾಗಿ ರೈಲ್ವೆಯಲ್ಲಿ ಆಗುವ ಸುಧಾರಣೆಯು ಇನ್ನೊಂದು ರೀತಿಯಲ್ಲಿ ಬಡ- ಮಧ್ಯಮ- ಕೆಳವರ್ಗದ ಜನತೆಗೆ ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಸೌಲಭ್ಯವನ್ನು ನೀಡುವ ಉಪಕ್ರಮವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ಇಲಾಖೆಗಳಲ್ಲೂ ಬದಲಾವಣೆ, ಹೊಸತನ ತರುತ್ತಿದ್ದಾರೆ. ಹೆದ್ದಾರಿ ಸಾರಿಗೆಯಲ್ಲಿ ನಿತಿನ್‌ ಗಡ್ಕರಿ ಅವರ ನೇತೃತ್ವದಲ್ಲಿ ಆಗಿರುವ ಸಾಧನೆಯೇ ಇದಕ್ಕೆ ಸಾಕ್ಷಿ. ಇದೇ ರೀತಿ ರೈಲ್ವೆಯಲ್ಲೂ ಆಗಬೇಕಿದೆ.

ಇದನ್ನೂ ಓದಿ: Railway Ticket: ಎಲ್ಲರಿಗೂ ರೈಲ್ವೆ ಟಿಕೆಟ್‌, ವೇಟಿಂಗ್‌ ಮಾತೇ ಇಲ್ಲ; ಕೇಂದ್ರ ಮಹತ್ವದ ಘೋಷಣೆ!

Continue Reading

ಭವಿಷ್ಯ

Dina Bhavishya : ಇಂದು ಈ ನಾಲ್ಕು ರಾಶಿಯವರಿಗೆ 4 ಲಕ್ಕಿ ನಂಬರ್!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ಪಾಡ್ಯ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your daily horoscope predictions for April 25 2024
Koo

ಚಂದ್ರನು ಗುರುವಾರ ರಾತ್ರಿ ವೃಶ್ಚಿಕ ರಾಶಿಯಿಂದ ಧನು ರಾಶಿಯನ್ನು ಪ್ರವೇಶ ಮಾಡಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ವೃಶ್ಚಿಕ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮಿಥುನ ರಾಶಿಯವರಿಗೆ ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸ್ನೇಹಿತರು, ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ ಲಭ್ಯವಾಗುವುದಲ್ಲದೆ, ಉಡುಗೊರೆ ಸಿಗುವ ಸಾಧ್ಯತೆ ಇದೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಸೌಜನ್ಯದಿಂದ ವರ್ತಿಸಿ. ಯಾವುದೇ ಆತುರದ ಮಾತುಗಳನ್ನು ಆಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (25-04-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ಪಾಡ್ಯ 06:45 ವಾರ: ಗುರುವಾರ
ನಕ್ಷತ್ರ: ವಿಶಾಖ 26:22 ಯೋಗ: ವ್ಯತಿಪಾತ 28:51
ಕರಣ: ಕೌಲವ 06:45 ಅಮೃತಕಾಲ: ಸಂಜೆ 04:58 ರಿಂದ 06:41
ದಿನದ ವಿಶೇಷ: ವರದಹಳ್ಳಿ ಶ್ರೀಧರಸ್ವಾಮಿ ಆರಾಧನೆ, ಹಂಪೆ ಚಕ್ರತೀರ್ಥ ಕೋದಂಡರಾಮ ರಥೋತ್ಸವ

ಸೂರ್ಯೋದಯ : 06:02   ಸೂರ್ಯಾಸ್ತ : 06:34

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ
9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ನಿಮ್ಮ ಹಾಸ್ಯದ ಪ್ರವೃತ್ತಿ ಇತರರನ್ನು ಆಕರ್ಷಿಸುತ್ತದೆ. ಸ್ನೇಹಿತರೊಂದಿಗೆ ಸಮಯವನ್ನು ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ ನಿಮ್ಮದಾಲಿದೆ.
ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸ್ನೇಹಿತರು, ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ ಲಭ್ಯವಾಗುವುದಲ್ಲದೆ, ಉಡುಗೊರೆ ಸಿಗುವ ಸಾಧ್ಯತೆ ಇದೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಸೌಜನ್ಯದಿಂದ ವರ್ತಿಸಿ. ಯಾವುದೇ ಆತುರದ ಮಾತುಗಳನ್ನು ಆಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ನ್ಯಾಯಾಲಯದಲ್ಲಿರುವ ವ್ಯಾಜ್ಯ ಪ್ರಕರಣಗಳು ನಿಮಗೆ ವಿಜಯವನ್ನು ತಂದುಕೊಡಲಿದೆ. ಒತ್ತಡದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರಲಿದೆ. ಸಂಗಾತಿಯ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ಮಾನಸಿಕ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ. ಬದಲಾಗಿ ಕ್ಷೇತ್ರ ದರ್ಶನ ಮಾಡಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವುದು ಸೂಕ್ತ. ಆರೋಗ್ಯ ಮಧ್ಯಮ ಪ್ರಮಾಣದಲ್ಲಿರಲಿದೆ. ವ್ಯಾಪಾರ ವ್ಯವಹಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯ ಚಟುವಟಿಕೆಯ ಮಧ್ಯೆಯೂ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಭೂ ಸಂಬಂಧಿ, ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣಲಿದ್ದೀರಿ. ಹೀಗಾಗಿ ನಿಮಗೆ ಹೆಚ್ಚಿನ ಲಾಭವಾಗಲಿದೆ. ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡಲಿದ್ದೀರಿ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಿರಿಯರ ಮಾರ್ಗದರ್ಶನ ಸಿಗಲಿದೆ, ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದಲ್ಲಿ ಅನೇಕ ಬದಲಾವಣೆಗಳನ್ನು ಕಾಣುವ ಸಾಧ್ಯತೆ ಇದೆ. ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ನಿಮಗಲ್ಲದವರ ಕುರಿತು ಅನಗತ್ಯವಾಗಿ ಚರ್ಚೆ ಮಾಡಿ, ಕುಟುಂಬದ ಸ್ವಾಸ್ಥ್ಯವನ್ನು ಕೆಡಿಸಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡುವ ಸಾಧ್ಯತೆ ಇದೆ. ಆಲಸ್ಯತನದಿಂದ ಕಾರ್ಯ ಮುಂದೂಡುವುದು ಬೇಡ. ಅಮೂಲ್ಯ ವಸ್ತುಗಳ ಕುರಿತಾಗಿ ಜಾಗ್ರತೆ ಇರಲಿ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸುವುದು ಅಗತ್ಯ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅತಿಯಾದ ಒತ್ತಡ ಉಂಟುಮಾಡುವ ವಿಚಾರಗಳಿಂದ ದೂರ ಇರಿ. ಕುಟುಂಬದ ಆಪ್ತರಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದ ವ್ಯತ್ಯಾಸದಿಂದ ದಿನದ ಮಟ್ಟಿಗೆ ಖರ್ಚು ಮಾಡುವ ಸಾಧ್ಯತೆ ಉಂಟು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ನಿಮ್ಮ ಹಾಸ್ಯ ಪ್ರವೃತ್ತಿಯು ಅನೇಕ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಡಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಕುಟುಂಬದವರು ನಿಮ್ಮ ಬಗ್ಗೆ ಹೆಚ್ಚು ಕಾಳಜಿ ವಹಹಿಸುತ್ತಾರೆ. ಆರೋಗ್ಯ‌ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ನಿಮ್ಮ ಮುಂಗೋಪವೇ ನಿಮಗೆ ಅಪಾಯವನ್ನು ತಂದೀತು ಎಚ್ಚರ. ಅತಿಯಾದ ಉತ್ಸಾಹದ ಭರದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಬೇಡ. ಇದರಿಂದ ಅನುಕೂಲಕ್ಕಿಂತ ಉಪದ್ರವೇ ಹೆಚ್ಚು. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮೀನ: ಆಹಾರ ಕ್ರಮದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಹೀಗಾಗಿ ಆಹಾರದ ವಿಚಾರದಲ್ಲಿ ಜಾಗ್ರತೆ ವಹಿಸಿ. ಸಂಗಾತಿಯ ಮಾತುಗಳು ಹಿತವೆನಿಸಿದರೂ ಅವರ ಮಾತುಗಳಿಗೆ ಮನ್ನಣೆ ಸಿಗುವುದಿಲ್ಲ.ಆರೋಗ್ಯ ಹಾಗೂ ಹಣಕಾಸಿನ ವಿಷಯದಲ್ಲಿ ಸಾಮಾನ್ಯ ಪ್ರಗತಿಯನ್ನು ಕಾಣಲಿದ್ದೀರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ದೇಶ

ಪ್ರಧಾನಿ ವಿರುದ್ಧ ಪಿತೂರಿ ನಡೆಸುವುದು ದೇಶದ್ರೋಹ; ದೆಹಲಿ ಹೈಕೋರ್ಟ್ ಮಹತ್ವದ ಆದೇಶ

ವಕೀಲ ಜೈ ಅನಂತ್‌ ದೇಹದ್ರಾಯಿ ವಿರುದ್ಧ ಬಿಜು ಜನತಾ ದಳ (BJD) ಸಂಸದ ಪಿನಾಕಿ ಮಿಶ್ರಾ ಅವರು ದಾಖಲಿಸಿದ ಮಾನನಷ್ಟ ಮೊಕದ್ದಮೆಯ ವಿಚಾರಣೆ ವೇಳೆ ದೆಹಲಿ ಹೈಕೋರ್ಟ್‌ ಮಹತ್ವದ ಪ್ರಸ್ತಾಪ ಮಾಡಿದೆ. ದೇಶದ ಪ್ರಧಾನಿ ವಿರುದ್ಧ ಪಿತೂರಿ ನಡೆಸುವುದು ದೇಶದ್ರೋಹಕ್ಕೆ ಸಮನಾಗಿದೆ. ಇದು ಗಂಭೀರ ಅಪರಾಧ ಪ್ರಕರಣವಾಗಿದೆ ಎಂದು ಕೋರ್ಟ್‌ ತಿಳಿಸಿದೆ.

VISTARANEWS.COM


on

PM
Koo

ನವದೆಹಲಿ: “ಭಾರತದ ಪ್ರಧಾನಿ (Prime Minister) ವಿರುದ್ಧ ಪಿತೂರಿ ನಡೆಸುವುದು ದೇಶದ್ರೋಹಕ್ಕೆ (Treason) ಸಮನಾಗಿದೆ” ಎಂದು ದೆಹಲಿ ಹೈಕೋರ್ಟ್‌ (Delhi High Court) ಮೌಖಿಕವಾಗಿ ಉಲ್ಲೇಖಿಸಿದೆ. ವಕೀಲ ಜೈ ಅನಂತ್‌ ದೇಹದ್ರಾಯಿ ಅವರ ವಿರುದ್ಧ ಹಿರಿಯ ವಕೀಲರೂ ಆಗಿರುವ ಬಿಜು ಜನತಾ ದಳ (BJD) ಸಂಸದ ಪಿನಾಕಿ ಮಿಶ್ರಾ (Pinaki Mishra) ಅವರು ದಾಖಲಿಸಿದ ಮಾನನಷ್ಟ ಮೊಕದ್ದಮೆಯ ವಿಚಾರಣೆ ವೇಳೆ ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಜಸ್ಮೀತ್‌ ಸಿಂಗ್‌ ಅವರು ಈ ರೀತಿ ಹೇಳಿದ್ದಾರೆ.

“ದೇಶದ ಪ್ರಧಾನಿ ವಿರುದ್ಧ ಷಡ್ಯಂತ್ರ ಮಾಡುವುದು ದೇಶದ್ರೋಹಕ್ಕೆ ಸಮನಾಗಿದೆ. ಇದು ಐಪಿಸಿ ಅಡಿಯಲ್ಲಿ ಗಂಭೀರ ಅಪರಾಧ ಎನಿಸಲಿದೆ” ಎಂದು ಹೈಕೋರ್ಟ್‌ ತಿಳಿಸಿತು. “ದೇಶದ ಪ್ರಧಾನಿ ಬಗ್ಗೆ ಪಿತೂರಿ ನಡೆಸುತ್ತಿದ್ದಾರೆ ಎಂದು ಯಾರೂ ಕೂಡ ಬೇಜವಾಬ್ದಾರಿ ಹೇಳಿಕೆ ನೀಡಬಾರದು. ಪ್ರಧಾನಿ ವಿರುದ್ಧ ಪಿತೂರಿ ನಡೆಸಲಾಗಿದೆ ಎಂಬ ಆರೋಪವು ಜವಾಬ್ದಾರಿತನದಿಂದಲೂ, ಸಮಂಜಸ ಕಾರಣಗಳಿಂದಲೂ ಕೂಡಿರಬೇಕು” ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.

ಜೈ ಅನಂತ್‌ ದೇಹದ್ರಾಯಿ ಅವರ ಪರ ವಾದ ಮಂಡಿಸಿದ ವಕೀಲರು, “ಪಿನಾಕಿ ಮಿಶ್ರಾ ಅವರು ಪ್ರಧಾನಿ ಅವರನ್ನು ಗುರಿಯಾಗಿಸಿ ಪಿತೂರಿ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು. ಆಗ ನ್ಯಾಯಾಲಯವು, “ನೀವು ನಿಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಿದರೆ ಪರವಾಗಿಲ್ಲ. ಆದರೆ, ಪಿನಾಕಿ ಮಿಶ್ರಾ ಅವರು ದೇಶದ ಪ್ರಧಾನಿ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂಬುದು ಗಂಭೀರ ಆರೋಪವಾಗಿದೆ. ಇದು ದೇಶದ ಪ್ರಮುಖ ಹುದ್ದೆಯ ಮೇಲೆ ಪರಿಣಾಮ ಬೀರುತ್ತದೆ. ಈ ರೀತಿ ಆರೋಪ ಮಾಡುವ ಮುನ್ನ ಯೋಚಿಸಬೇಕು” ಎಂದು ಸ್ಪಷ್ಟಪಡಿಸಿತು.

“ಪಿನಾಕಿ ಮಿಶ್ರಾ ಅವರು ದೇಶದ ರಾಜಕಾರಣಿಯಾಗಿದ್ದಾರೆ. ಅವರು ವಕೀಲರು ಕೂಡ ಆಗಿದ್ದಾರೆ. ಅವರ ವಿರುದ್ಧ ಇಂತಹ ಆರೋಪ ಮಾಡಲು ಯಾವ ಸಾಕ್ಷ್ಯಾಧಾರಗಳಿವೆ? ಸುಖಾಸುಮ್ಮನೆ ಆರೋಪ ಮಾಡುವುದು ಸಮಂಜಸವಲ್ಲ. ಹೀಗೆಯೇ ಆರೋಪಿಸಿದರೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ” ಎಂದು ನ್ಯಾಯಾಲಯವು ಖಡಕ್‌ ಎಚ್ಚರಿಕೆ ನೀಡಿತು. “ಪಿನಾಕಿ ಮಿಶ್ರಾ ಅವರು ಪ್ರಧಾನಿ ವಿರುದ್ಧ ಹೇಗೆ ಪಿತೂರಿ ನಡೆಸಿದ್ದಾರೆ ಎಂಬುದರ ಕುರಿತು ಸಾಕ್ಷ್ಯಾಧಾರ ಒದಗಿಸಲಾಗುವುದು” ಎಂದು ದೇಹದ್ರಾಯ್‌ ಪರ ವಕೀಲರು ತಿಳಿಸಿದಾಗ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಮುಂದೂಡಿತು.

ಇದನ್ನೂ ಓದಿ: PM Narendra Modi: ಪ್ರಧಾನಿ ಮೋದಿಗೆ ‘ಪ್ರಾಮಿಸ್ಡ್ ನೇಷನ್’ ಪುಸ್ತಕ ಅರ್ಪಣೆ

Continue Reading
Advertisement
arijit singh rajamarga column 2
ಅಂಕಣ4 mins ago

ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Karnataka Weather
ಕರ್ನಾಟಕ31 mins ago

Karnataka Weather: ಇಂದು ಮೈಸೂರು, ಕೊಡಗು ಸೇರಿ ವಿವಿಧೆಡೆ ಮಳೆ; ಮುಂದಿನ 5 ದಿನ ತಾಪಮಾನದಲ್ಲಿ ಭಾರಿ ಏರಿಕೆ!

Modi
ಪ್ರಮುಖ ಸುದ್ದಿ60 mins ago

ವಿಸ್ತಾರ ಸಂಪಾದಕೀಯ: ರೈಲ್ವೇ ಇಲಾಖೆಯ ಸುಧಾರಣೆ ಕ್ರಮಗಳು ಪ್ರಶಂಸಾರ್ಹ

Baking Soda
ಆರೋಗ್ಯ1 hour ago

Baking Soda: ಅಡುಗೆ ಸೋಡಾ ನಿಜಕ್ಕೂ ಆರೋಗ್ಯಕ್ಕೆ ಕೆಟ್ಟದ್ದಾ?

World Malaria Day
ಆರೋಗ್ಯ2 hours ago

World Malaria Day: ಭಾರತದಲ್ಲಿ ಮಲೇರಿಯಾಗೆ ಪ್ರತಿವರ್ಷ 20 ಸಾವಿರ ಬಲಿ; ಸೊಳ್ಳೆಗಳು ಭಾರಿ ಡೇಂಜರ್‌!

dina bhavishya read your daily horoscope predictions for April 25 2024
ಭವಿಷ್ಯ6 hours ago

Dina Bhavishya : ಇಂದು ಈ ನಾಲ್ಕು ರಾಶಿಯವರಿಗೆ 4 ಲಕ್ಕಿ ನಂಬರ್!

PM
ದೇಶ7 hours ago

ಪ್ರಧಾನಿ ವಿರುದ್ಧ ಪಿತೂರಿ ನಡೆಸುವುದು ದೇಶದ್ರೋಹ; ದೆಹಲಿ ಹೈಕೋರ್ಟ್ ಮಹತ್ವದ ಆದೇಶ

Union Minister Pralhad Joshi Statement in Unakal
ಹುಬ್ಬಳ್ಳಿ7 hours ago

Lok Sabha Election 2024: ಹಿಂದೂ ಧರ್ಮದ ಉಳಿವಿಗಾಗಿ ಮತ್ತೆ ಮೋದಿ ಬೆಂಬಲಿಸಿ: ಪ್ರಲ್ಹಾದ್‌ ಜೋಶಿ

DC vs GT
ಕ್ರೀಡೆ8 hours ago

DC vS GT: ಗುಜರಾತ್​ ವಿರುದ್ಧ ಡೆಲ್ಲಿಗೆ ರೋಚಕ ಗೆಲುವು ; ಪ್ಲೇ ಆಫ್​ ರೇಸ್ ಜೀವಂತ

PUBG Love
ದೇಶ8 hours ago

PUBG Love: ಪಬ್ಜಿ ಆಡುವಾಗ ಸಿಕ್ಕ ಮುಸ್ಲಿಂ ಯುವಕನ ಜತೆ ಹಿಂದು ಯುವತಿ ಮದುವೆ; ಈಗ ಬಾಳೇ ನರಕ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ5 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20245 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌