Wayanad Landslide: ವೈನಾಡ್‌ ಭೂಕುಸಿತದಲ್ಲಿ 13 ಕನ್ನಡಿಗರು ನಾಪತ್ತೆ; ನಾಲ್ವರ ಶವ ಪತ್ತೆ, ಇನ್ನುಳಿದವರಿಗಾಗಿ ಶೋಧ - Vistara News

ಪ್ರಮುಖ ಸುದ್ದಿ

Wayanad Landslide: ವೈನಾಡ್‌ ಭೂಕುಸಿತದಲ್ಲಿ 13 ಕನ್ನಡಿಗರು ನಾಪತ್ತೆ; ನಾಲ್ವರ ಶವ ಪತ್ತೆ, ಇನ್ನುಳಿದವರಿಗಾಗಿ ಶೋಧ

Wayanad Landslide: ವೈನಾಡಿನಲ್ಲಿ ಕರ್ನಾಟಕ‌ ಮೂಲದ ನಾಪತ್ತೆಯಾದವರಿಗಾಗಿ ಅಧಿಕಾರಿಗಳು ಸ್ಥಳದಲ್ಲೇ ಇದ್ದು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಗುಂಡ್ಲುಪೇಟೆ ತಹಸೀಲ್ದಾರ್ ರಮೇಶ್ ಬಾಬು ನೇತೃತ್ವದಲ್ಲಿ ನಾಪತ್ತೆಯಾದವರ ಪತ್ತೆಗಾಗಿ ಶೋಧ ನಡೆದಿದೆ.

VISTARANEWS.COM


on

wayanad lanslide
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಚಾಮರಾಜನಗರ: ಕೇರಳದ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತ (wayanad landslide, kerala landslide) ಪ್ರಕರಣದಲ್ಲಿ ಕರ್ನಾಟಕದ (Karnataka) ಹತ್ತಾರು ಮಂದಿ ಕಣ್ಮರೆ (missing) ಆಗಿದ್ದಾರೆ. ಒಟ್ಟು 13 ಮಂದಿ ನಾಪತ್ತೆಯಾಗಿದ್ದಾರೆ ಎಂಬ ಅಂದಾಜು ಲೆಕ್ಕ ಇದುವರೆಗೆ ಸಿಕ್ಕಿದೆ. ಇವರಲ್ಲಿ ನಾಲ್ಕು ಮಂದಿಯ ಶವ ಸಿಕ್ಕಿದ್ದು, ಇನ್ನುಳಿದವರಿಗಾಗಿ ತೀವ್ರ ಶೋಧ (Rescue operation) ನಡೆಯುತ್ತಿದೆ.

ವೈನಾಡಿನಲ್ಲಿ ಕರ್ನಾಟಕ‌ ಮೂಲದ ನಾಪತ್ತೆಯಾದವರಿಗಾಗಿ ಅಧಿಕಾರಿಗಳು ಸ್ಥಳದಲ್ಲೇ ಇದ್ದು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಗುಂಡ್ಲುಪೇಟೆ ತಹಸೀಲ್ದಾರ್ ರಮೇಶ್ ಬಾಬು ನೇತೃತ್ವದಲ್ಲಿ ನಾಪತ್ತೆಯಾದವರ ಪತ್ತೆಗಾಗಿ ಶೋಧ ನಡೆದಿದೆ. ಈವರೆಗೆ ಗೊತ್ತಾಗಿರುವ, ನಾಪತ್ತೆಯಾಗಿರುವ ರಾಜ್ಯದ 10 ಮಂದಿಯ ಹೆಸರುಗಳು ಹೀಗಿವೆ:

ಗುರುಮಲ್ಲನ್(10)
ಸಾವಿತ್ರಿ (54)
ಸಬಿತಾ (43)
ಶಿವಣ್ಣನ್ (50)
ಅಪ್ಪಣ್ಣನ್(39)
ಅಶ್ವಿನ್ (13)
ಜೀತು (11)
ದಿವ್ಯಾ (35)
ರತ್ನಾ(48)

ಈವರೆಗೆ ರಾಜೇಂದ್ರ (50), ರತ್ನಮ್ಮ(45), ಪುಟ್ಟಸಿದ್ದಶೆಟ್ಟಿ (62), ರಾಣಿ (50) ಎಂಬವರ ಶವರಗಳನ್ನು ರಕ್ಷಣಾ ಪಡೆಗಳು ಹೊರತೆಗೆದಿವೆ.

ಚಾಮರಾಜನಗರ ಮೂಲದ ಇಬ್ಬರ ಸಾವು ಧೃಡ

ಮೆಪ್ಪಾಡಿಯಲ್ಲಿ ವಾಸವಿದ್ದ ಚಾಮರಾಜನಗರದ ಪುಟ್ಟ ಸಿದ್ದಿ(62) ಹಾಗು ರಾಣಿ ಎಂಬವರ ತಾಯಿ ಸಾವಿಗೀಡಾಗಿದ್ದಾರೆ. ಚಾಮರಾಜನಗರ ತಾಲೋಕು ಇರಸವಾಡಿ ಮೂಲದ ರಾಜನ್ ಹಾಗು ರಜನಿ ನಾಪತ್ತೆಯಾಗಿದ್ದಾರೆ. ಕಳೆದ ಮೂವತ್ತು ವರ್ಷಗಳಿಂದ ಕೇರಳದ ಚೂರಲ್ಲಾದಲ್ಲಿ ವಾಸವಿದ್ದ ರಾಜನ್ ಹಾಗು ರಜನಿ(55) ವಾಸವಿದ್ದರು. ರಾಜನ್, ರಜನಿಗಾಗಿ ಶೋಧಕಾರ್ಯ ನಡೆದಿದೆ.

ಚಾಮರಾಜನಗರ ಜಿಲ್ಲೆಯ ರಾಜೇಂದ್ರ(50), ರತ್ನಮ್ಮ(45), ಪುಟ್ಟಸಿದ್ದಶೆಟ್ಟಿ(62), ರಾಣಿ(50) ಇವರ ಶವಗಳು ದೊರೆತಿವೆ. ತ್ರಯಂಬಕಪುರದ ಸ್ವಾಮಿಶೆಟ್ಟಿ ಎಂಬವರಿಗೆ ಗಾಯಗಳಾಗಿವೆ. ರಾಜೇಂದ್ರ, ರತ್ನಮ್ಮ ಚಾಮರಾಜನಗರ ತಾಲೂಕಿನ ಇರಸವಾಡಿ ಗ್ರಾಮದವರು. ಇಬ್ಬರ ಶವ ಇನ್ನೂ ಪತ್ತೆಯಾಗಿಲ್ಲ. ವೈನಾಡು ಜಿಲ್ಲೆಯ ಮೆಪ್ಪಾಡಿಯ ವೈತ್ರಿ ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಗುಂಡ್ಲುಪೇಟೆ ತಹಸೀಲ್ದಾರ್ ರಮೇಶ್‌ ಬಾಬು ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆದಿದ್ದು, ತಹಸೀಲ್ದಾರ್ ನೇತೃತ್ವದ ತಂಡ ಮೃತರ ಕುಟುಂಬಸ್ಥರೊಂದಿಗೆ ಸಂಪರ್ಕದಲ್ಲಿದೆ.

ಮಂಡ್ಯದ ಕುಟುಂಬಕ್ಕೆ ಸಂಕಷ್ಟ

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಝಾನ್ಸಿ, ಝಾನ್ಸಿ ಪುತ್ರ ನಿಹಾಲ್, ಅತ್ತೆ ಲೀಲಾವತಿ ನಾಪತ್ತೆಯಾಗಿದ್ದಾರೆ. ಮೈಸೂರಿನ ಸರಗೂರಿನ ಅನಿಲ್ ಕುಮಾರ್ ಎಂಬುವವರಿಗೆ ಝಾನ್ಸಿರಾಣಿಯನ್ನು ಕುಟುಂಬ ಮದುವೆ ಮಾಡಿಕೊಟ್ಟಿತ್ತು. ಕೇರಳದ ಮುಂಡಕೈಯಲ್ಲಿ ಅನಿಲ್, ಪತ್ನಿ ಝಾನ್ಸಿ, ಪುತ್ರ ನಿಹಾಲ್ ಹಾಗೂ ತಂದೆ-ತಾಯಿ ನೆಲೆಸಿದ್ದರು. ಮುಂಡಕೈ ಗುಡ್ಡ ಕುಸಿತದಲ್ಲಿ ಅನಿಲ್ ತಾಯಿ ಲೀಲಾವತಿ(55), ಪುತ್ರ ನಿಹಾಲ್(2.5). ನಾಪತ್ತೆಯಾಗಿದ್ದು, ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಅನಿಲ್ ಹಾಗೂ ಅವರ ಪತ್ನಿ ಝಾನ್ಸಿ, ತಂದೆ ದೇವರಾಜು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರೂ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಮೂವರಿಗೆ ಕೇರಳದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕುಟುಂಬಸ್ಥರನ್ನು ಕಾಣಲು ಝಾನ್ಸಿರಾಣಿ ಕುಟುಂಬಸ್ಥರು ಕೇರಳಕ್ಕೆ ತೆರಳಿದ್ದಾರೆ.

ಹನಿಮೂನ್‌ಗೆ ಬಂದವರು ಹೆಣವಾದರು

ಬೆಂಗಳೂರಿನಿಂದ ಹನಿಮೂನ್‌ಗೆ ಬಂದಿದ್ದ 4 ಪೈಕಿ ಇಬ್ಬರು ನಾಪತ್ತೆಯಾಗಿದ್ದಾರೆ. ಒರಿಸ್ಸಾ ಮೂಲದ ಎರಡು ನವ ಜೋಡಿಗಳು ಬಂದು ತಂಗಿದ್ದ ರೆಸಾರ್ಟ್‌ ಇವರು ಮಲಗಿದ್ದಲ್ಲೇ ಕೊಚ್ಚಿ ಹೋಗಿದೆ. ರೆಸಾರ್ಟ್‌ನಿಂದ 300 ಮೀಟರ್ ದೂರದಲ್ಲಿ ಕಾರಿನಲ್ಲಿ ಮಲಗಿದ್ದ ಹಾವೇರಿ ಮೂಲದ ಡ್ರೈವರ್ ಮಂಜುನಾಥ್ ಪಾರಾಗಿದ್ದಾರೆ. ಇವರು ದುರಂತದಲ್ಲಿ ಬದುಕುಳಿದಿದ್ದೇ ಅಚ್ಚರಿ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಮಂಜುನಾಥ್ ಮಾಹಿತಿ ನೀಡಿದ್ದಾರೆ.

ಕಾರಿನಲ್ಲಿ ಮಲಗಿದ್ದಕ್ಕೆ ಪ್ರಾಣ ಉಳಿಯಿತು. ರೆಸಾರ್ಟ್‌ನಲ್ಲಿ ಮಲಗಿದ್ರೆ ನಾನು ಬದುಕುತ್ತಿರಲಿಲ್ಲ. ಎತ್ತರದ ಪ್ರದೇಶದಲ್ಲಿ ಕಾರ್ ನಿಲ್ಲಿಸಿದ್ದರಿಂದ ಬಚಾವ್ ಆಗಿದ್ದೇನೆ. ನನ್ನ ಕಾರು ಕೂಡ ಅಲ್ಲೇ ಇದೆ ಎಂದು ಕೇರಳದ ವಯನಾಡಿನಲ್ಲಿ ಕ್ಯಾಬ್ ಡ್ರೈವರ್ ಮಂಜುನಾಥ್ ಹೇಳಿಕೆ ನೀಡಿದ್ದಾರೆ.

ಜಿಲ್ಲಾಡಳಿತ ಸಹಾಯವಾಣಿ

ಸಂತ್ರಸ್ತರಿಗಾಗಿ ಮೈಸೂರು ಜಿಲ್ಲಾಡಳಿತ ಸಹಾಯವಾಣಿ ತೆರೆದಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಕೊಠಡಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. 0821-2423800 ಅಥವಾ 1077 ದೂರವಾಣಿಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Wayanad Landslide Explainer: ಪ್ರಕೃತಿ ಮೇಲೆ ಮಾನವನ ವಿಕೃತಿ; ವಯನಾಡು ಭೂಕುಸಿತಕ್ಕೆ ಇಲ್ಲಿದೆ ಕಾರಣಗಳ ಪಟ್ಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಆಗಸ್ಟ್‌ 31ರ ಒಳಗೆ GBA ಚುನಾವಣೆ ನಡೆಸಿ- ಸುಪ್ರೀಂ ಕೋರ್ಟ್‌

VISTARANEWS.COM


on

ಆಗಸ್ಟ್‌ 31ರ ಒಳಗೆ ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದೆ. ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗದ ಮನವಿಯನ್ನು ಪರಿಗಣಿಸಿದ ಸುಪ್ರೀಂಕೋರ್ಟ್‌, ಆಗಸ್ಟ್‌ 31ರವರೆಗೆ ಕಾಲಾವಕಾಶ ನೀಡಿದೆ. ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಇನ್ನೂ ಮೂರು ತಿಂಗಳ ಗಡುವು ವಿಸ್ತರಣೆ ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು.

ಈ ಹಿಂದೆ ಜೂನ್‌ 30ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿತ್ತು. ಆದರೆ ಇದೀಗ ಸರ್ಕಾರದ ಮನವಿ ಮೇರೆಗೆ ಚುನಾವಣಾ ಗಡುವನ್ನು ಆಗಸ್ಟ್‌ ಅಂತ್ಯದವರೆಗೆ ವಿಸ್ತರಿಸಲಾಗಿದೆ.

ಸೆಪ್ಟೆಂಬರ್‌ ಅಂತ್ಯದವರೆಗೆ ಕಾಲಾವಕಾಶ ನೀಡಬೇಕೆಂದು ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗದ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದವು. ಮನವಿಯನ್ನು ಆಲಿಸಿದ ಸಿಜೆಐ ಅವರನ್ನು ಒಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳಲ್ಲಿ, ರಾಜ್ಯದಲ್ಲಿ ಚುನಾವಣಾ ಸಿಬ್ಬಂದಿ ವರ್ಗ ಜನಗಣತಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ, ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಗಳಲ್ಲಿ ನಿರತರಾಗಿದ್ದಾರೆ. ಹೀಗಾಗಿ ಜಿಬಿಎ ಚುನಾವಣೆ ನಡೆಸಲು ಮೂರು ತಿಂಗಳ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದವು.

Continue Reading

Latest

ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ ಬಂದ್‌

VISTARANEWS.COM


on

ಇ-ಫಾರ್ಮಸಿ ಹಾಗೂ ಆನ್‌ಲೈನ್‌ ಮೂಲಕ ಔಷಧ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ಗಳು ಬಂದ್‌ ಆಗಿವೆ. ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಕರೆ ಮೇರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಮೆಡಿಕಲ್‌ ಸ್ಟೋರ್‌ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಆನ್‌ಲೈನ್‌ ಔಷಧ ವ್ಯಾಪಾರಕ್ಕೆ ಕಟ್ಟುನಿಟ್ಟಾದ ನಿಯಮ ಜಾರಿಗೊಳಿಸಬೇಕು, ಕಾರ್ಪೊರೇಟ್‌ ಸಂಸ್ಥೆಗಳ ಭಾರಿ ರಿಯಾಯಿತಿ ದರ ಸಮರಕ್ಕೆ ಬ್ರೇಕ್‌ ಹಾಕಬೇಕು ಹಾಗೂ ಎಲ್ಲಾ ವ್ಯಾಪಾರಿಗಳಿಗೆ ಸಮಾನ ಮುಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು ಎಂಬ ಬೇಡಿಕೆಗಳನ್ನು ಅಖಿಲ ಭಾರತ ಕೆಮಿಸ್ಟ್‌ ಮತ್ತು ಡ್ರಗ್ಗಿಸ್ಟ್‌ ಸಂಘ ಮುಂದಿಟ್ಟಿದೆ.

ಈ ಬಂದ್‌ನಿಂದ ಅನೇಕ ಕಡೆಗಳಲ್ಲಿ ಔಷಧ ಖರೀದಿಗೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ತುರ್ತು ಸೇವೆಗಳಿಗಾಗಿ ಕೆಲವು ಮೆಡಿಕಲ್‌ ಸ್ಟೋರ್‌ಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ.

Continue Reading

Latest

ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ ಬಂದ್‌

VISTARANEWS.COM


on

ಆನ್‌ಲೈನ್‌ನಲ್ಲಿ ಔಷಧ ಮಾರಾಟವನ್ನು ವಿರೋಧಿಸಿ ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳ ಬಂದ್‌ಗೆ ಕರೆ ನೀಡಲಾಗಿದೆ. ದೇಶದಾದ್ಯಂತ ಸುಮಾರು 9 ಲಕ್ಷ ಔಷಧ ಅಂಗಡಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.
ಕರ್ನಾಟಕದಲ್ಲೂ ಸುಮಾರು 26 ಸಾವಿರಕ್ಕೂ ಹೆಚ್ಚು ಮೆಡಿಕಲ್ ಶಾಪ್‌ಗಳು ಬಂದ್ ಆಗುವ ಸಾಧ್ಯತೆ ಇದ್ದು, ಗ್ರಾಹಕರು ಅಗತ್ಯ ಔಷಧಿಗಳನ್ನು ಮುಂಚಿತವಾಗಿ ಖರೀದಿಸಿಕೊಳ್ಳುವಂತೆ ಸಂಘಟನೆಗಳು ಮನವಿ ಮಾಡಿವೆ.

ಇ-ಫಾರ್ಮಸಿ ವೇದಿಕೆಗಳ ಮೂಲಕ ಭಾರಿ ರಿಯಾಯಿತಿಯಲ್ಲಿ ಔಷಧ ಮಾರಾಟವಾಗುತ್ತಿರುವುದು ಸಣ್ಣ ಹಾಗೂ ಮಧ್ಯಮ ಮಟ್ಟದ ಮೆಡಿಕಲ್ ಅಂಗಡಿಗಳಿಗೆ ಹೊಡೆತ ನೀಡುತ್ತಿದೆ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ. ಜೊತೆಗೆ ಆನ್‌ಲೈನ್ ಮೂಲಕ ನಿಯಂತ್ರಣವಿಲ್ಲದೆ ಔಷಧ ವಿತರಣೆ ನಡೆಯುತ್ತಿರುವುದರಿಂದ ರೋಗಿಗಳ ಆರೋಗ್ಯಕ್ಕೂ ಅಪಾಯ ಉಂಟಾಗಬಹುದು ಎಂದು ಎಚ್ಚರಿಸಿದ್ದಾರೆ.
ಆನ್‌ಲೈನ್ ಮೂಲಕ ಔಷಧ ಖರೀದಿ ವ್ಯವಸ್ಥೆಯನ್ನು ನಿಯಂತ್ರಿಸುವುದು ಹಾಗೂ ಇ-ಫಾರ್ಮಸಿ ಕಂಪನಿಗಳ ವಿರುದ್ಧ ಕಠಿಣ ನಿಯಮ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ.

Continue Reading

Latest

ಸಾರಿಗೆ ಮಷ್ಕರಕ್ಕೆ ಹೈಕೋರ್ಟ್‌ ಬ್ರೇಕ್‌

VISTARANEWS.COM


on

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್‌ ನಿರ್ಬಂಧ ವಿಧಿಸಿದೆ. ಸಾರಿಗೆ ನೌಕರರು ಮುಷ್ಕರವನ್ನು ನಡೆಸಬಾರದು ಎಂದು ಸಾರಿಗೆ ಸಂಘಟನೆಗಳಿಗೆ ಹೈಕೋರ್ಟ್‌ ಸೂಚನೆ ನೀಡಿದ್ದು, ಸರ್ಕಾರವು ಕೂಡಲೇ ಸಂಘಟನೆಗಳೊಂದಿಗೆ ಮಾತುಕತೆ ನಡೆಸಬೇಕು ಎಂದು ನಿರ್ದೇಶಿಸಿದೆ.

ಮೇ.20 ರಿಂದ ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದರು. ಮುಷ್ಕರಕ್ಕೆ ನಿರ್ಬಂಧ ವಿಧಿಸಿರುವ ಹೈಕೋರ್ಟ್‌, ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಸೂಚಿಸಿದೆ. ಇದೇ ವೇಳೆ ಸಾರಿಗೆ ಸಚಿವರೊಂದಿಗೆ ಸಂಘಟನೆಗಳು ಮಾತುಕತೆ ನಡೆಸುವಂತೆ ಸಲಹೆ ನೀಡಿದೆ.

ಈ ಸಂಬಂಧ ಸಾರಿಗೆ ಸಂಘಟನೆಗಳು, ರಾಜ್ಯ ಸರ್ಕಾರ ಹಾಗೂ ಸಾರಿಗೆ ಸಚಿವರಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಸಾರ್ವಜನಿಕರ ಸಂಚಾರಕ್ಕೆ ಯಾವುದೇ ಅಡಚಣೆ ಆಗದಂತೆ ತಕ್ಷಣ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಲಾಗಿದೆ.

Continue Reading
Advertisement
galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌