Wayanad Landslide: ಮೇಪ್ಪಾಡಿಯಲ್ಲಿ ಸಾಲು ಶವಗಳಿಗೆ ಪುಷ್ಪಾರ್ಚನೆಯ ಭಾವನಮನ - Vistara News

ಪ್ರಮುಖ ಸುದ್ದಿ

Wayanad Landslide: ಮೇಪ್ಪಾಡಿಯಲ್ಲಿ ಸಾಲು ಶವಗಳಿಗೆ ಪುಷ್ಪಾರ್ಚನೆಯ ಭಾವನಮನ

Wayanad Landslide: ಮೇಪ್ಪಾಡಿಯಲ್ಲಿ ನಾಶವಾಗಿಹೋದ ಭೂಕುಸಿತದ ಸ್ಥಳದಿಂದ ಎತ್ತಿ ತೆಗೆಯಲಾದವರ ದೇಹಗಳನ್ನು ಅಂತಿಮ ಸಂಸ್ಕಾರಕ್ಕೆ ಸಾಲಾಗಿ ಕೊಂಡೊಯ್ಯಲಾಗುತ್ತಿದ್ದು, ಮೃತಪಟ್ಟವರ ಶವಗಳಿಗೆ ಸ್ಥಳೀಯರು ರಸ್ತೆಯಲ್ಲಿ ಸಾಲಾಗಿ ನಿಂತು ಪುಷ್ಪಾರ್ಚನೆ ಮಾಡಿದರು.

VISTARANEWS.COM


on

wayanad landslide pushpa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಾಮರಾಜನಗರ: ವೈನಾಡ್‌ ಭೂಕುಸಿತದ (Wayanad Landslide, Kerala Landslide) ದಾರುಣ ದುರಂತದಲ್ಲಿ ಮೃತಪಟ್ಟವರ ಶವಗಳನ್ನು ಪುಷ್ಪಾರ್ಚನೆಯ ಮೂಲಕ ಮೇಪ್ಪಾಡಿಯ ಗ್ರಾಮಸ್ಥರು ಕಳಿಸಿಕೊಟ್ಟಿದ್ದಾರೆ. ತಮ್ಮ ಊರಿನಲ್ಲಿ ನಡೆದ ಈ ದುರಂತಕ್ಕೆ ಸ್ಥಳೀಯರು ಮನಮಿಡಿಯುವ ರೀತಿಯಲ್ಲಿ ಸ್ಪಂದಿಸಿದ್ದಾರೆ.

ಮೇಪ್ಪಾಡಿಯಲ್ಲಿ ನಾಶವಾಗಿಹೋದ ಭೂಕುಸಿತದ ಸ್ಥಳದಿಂದ ಎತ್ತಿ ತೆಗೆಯಲಾದವರ ದೇಹಗಳನ್ನು ಅಂತಿಮ ಸಂಸ್ಕಾರಕ್ಕೆ ಸಾಲಾಗಿ ಕೊಂಡೊಯ್ಯಲಾಗುತ್ತಿದ್ದು, ಮೃತಪಟ್ಟವರ ಶವಗಳಿಗೆ ಸ್ಥಳೀಯರು ರಸ್ತೆಯಲ್ಲಿ ಸಾಲಾಗಿ ನಿಂತು ಪುಷ್ಪಾರ್ಚನೆ ಮಾಡಿದರು. ಸಾಲು ಸಾಲು ಆಂಬ್ಯುಲೆನ್ಸ್‌ಗಳಲ್ಲಿ ಸಾಗಿ ಬಂದ ಶವಗಳಿಗೆ ನೂರಾರು ಮಂದಿ ಮೇಪ್ಪಾಡಿ ವೃತ್ತದಲ್ಲಿ ಸಾಲಾಗಿ ನಿಂತು ಪುಷ್ಪಾರ್ಚನೆಗೈದು ನಮಿಸಿದರು. ಕಳೆದೆರಡು ದಿನಗಳಿಂದ ಇಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗಳಲ್ಲೂ ರಕ್ಷಣಾ ಪಡೆಗಳ ಜೊತೆಗೆ ಸ್ಥಳೀಯರು ಕೈಜೋಡಿಸಿದ್ದಾರೆ.

ಮೆಪ್ಪಾಡಿಯ ಸರ್ಕಾರಿ ಜಾಗದಲ್ಲಿ ಅಂತ್ಯಕ್ರಿಯೆ ಮೃತರ ಸಾಮೂಹಿಕ ಅಂತ್ಯಕ್ರಿಯೆ ನಿನ್ನೆ ನಡೆಯಿತು. ಇನ್ನೂ ಕೆಲವರ ಹೆಣಗಳ ಸಿಗುತ್ತಿದ್ದು, ಇಂದು ಕೂಡ ಅದು ಮುಂದುವರಿದಿದೆ. ಗ್ಯಾಸ್ ಬರ್ನರ್, ಸೌದೆಗಳನ್ನು ಬಳಸಿಕೊಂಡು ಅಂತ್ಯ ಸಂಸ್ಕಾರ ನಡೆಯುತ್ತಿದ್ದು, ಈವರೆಗೂ ಸುಮಾರು 26 ಮೃತದೇಹಗಳ ಅಂತ್ಯ ಸಂಸ್ಕಾರ ಮಾಡಲಾಗಿದೆ. ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಿ ಚಿತಾ ಭಸ್ಮ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಇದೇ ಮಾದರಿಯಲ್ಲಿ ಮುಸ್ಲಿಂ, ಕ್ರಿಶ್ಚಿಯನ್ ಮೃತ ದೇಹಗಳ ಅಂತ್ಯಕ್ರಿಯೆಗೂ ವಯನಾಡು ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.

ಹಲವರ ಶವಗಳ ಗುರುತು ಸಿಗುತ್ತಿಲ್ಲ. ಮುಖ ಮೈಕೈಗಳು ಬಂಡೆಗಳು ಮಣ್ಣಿನಡಿ ಸಿಲುಕಿ ಜಜ್ಜಿಹೋಗಿ ವಿರೂಪಗೊಂಡಿವೆ. ಹೀಗಾಗಿ ಅವುಗಳ ಫೋಟೋ ದಾಖಲೆ ತೆಗೆದಿಟ್ಟುಕೊಂಡು ಅಂತ್ಯಸಂಸ್ಕಾರ ನಡೆಸಲಾಗುತ್ತಿದೆ.

5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ (Wayanad Landslide) ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಅವರು ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ, ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ. ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ. ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ | Wayanad Landslide: ಮಂಡ್ಯದ 9 ಜನರ ಕುಟುಂಬ ಭೂಕುಸಿತದಲ್ಲಿ ಸಂಪೂರ್ಣ ಕಣ್ಮರೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Parliament Session: ಸಂಸತ್ ಅಧಿವೇಶನದಲ್ಲಿ ಪ್ರತಿಧ್ವನಿಸಲಿದೆ ವಯನಾಡು ದುರಂತ; ಕ್ಷಣ ಕ್ಷಣದ ಮಾಹಿತಿಗಾಗಿ Live ನೋಡಿ

Parliament Session: ಸಂಸತ್‌ನಲ್ಲಿ ಬಜೆಟ್‌ ಅಧಿವೇಶನ ನಡೆಯುತ್ತಿದ್ದು, ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದಕ್ಕೆ ರಾಜ್ಯಸಭೆ ಮತ್ಯಯ ಲೋಕಸಭೆ ಸಾಕ್ಷಿಯಾಗುತ್ತಿದೆ. ಇಂದು ಕೂಡ ಉಭಯ ಸದನಗಳಲ್ಲಿ ಕಾವೇರಿದ ಚರ್ಚೆ ನಡೆಯುವ ಸಾಧ್ಯತೆ ಇದೆ. ಜುಲೈ 23ರಂದು ಮಂಡಿಸಲಾದ 2024-25ರ ಕೇಂದ್ರ ಬಜೆಟ್ ಮತ್ತು ಕೇರಳದ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತದ ಬಗ್ಗೆ ಇಂದು ಸಂಸದರು ಧ್ವನಿ ಎತ್ತಲಿದ್ದಾರೆ.

VISTARANEWS.COM


on

Parliament Session
Koo

ನವದೆಹಲಿ: ಸಂಸತ್‌ನಲ್ಲಿ ಬಜೆಟ್‌ ಅಧಿವೇಶನ (Parliament Session) ನಡೆಯುತ್ತಿದ್ದು, ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದಕ್ಕೆ ರಾಜ್ಯಸಭೆ ಮತ್ಯಯ ಲೋಕಸಭೆ ಸಾಕ್ಷಿಯಾಗುತ್ತಿದೆ. ಇಂದು ಕೂಡ ಉಭಯ ಸದನಗಳಲ್ಲಿ ಕಾವೇರಿದ ಚರ್ಚೆ ನಡೆಯುವ ಸಾಧ್ಯತೆ ಇದೆ. ಜುಲೈ 23ರಂದು ಮಂಡಿಸಲಾದ 2024-25ರ ಕೇಂದ್ರ ಬಜೆಟ್ ಮತ್ತು ಕೇರಳದ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತದ ಬಗ್ಗೆ ಇಂದು ಸಂಸದರು ಧ್ವನಿ ಎತ್ತಲಿದ್ದಾರೆ.

18ನೇ ಲೋಕಸಭೆಯ ಮೊದಲ ಬಜೆಟ್ ಅಧಿವೇಶನದ ಜುಲೈ 22ರಂದು ಸಂಸತ್ತಿನಲ್ಲಿ ಪ್ರಾರಂಭವಾಗಿದ್ದು, ಆಗಸ್ಟ್ 12ರವರೆಗೆ ನಡೆಯಲಿದೆ. ಅಧಿವೇಶನ ಆರಂಭವಾದಾಗಿನಿಂದ ಪ್ರತಿಪಕ್ಷಗಳು ವಿವಿಧ ವಿಷಯಗಳನ್ನು ಪ್ರಸ್ತಾವಿಸಿ ಕೋಲಾಹಲ ಎಬ್ಬಿಸುತ್ತಿವೆ. ಬಜೆಟ್‌ನಲ್ಲಿ ರಾಜ್ಯಗಳಿಗೆ ಅನ್ಯಾಯವಾಗಿದೆ ಎಂದು ವಾದಿಸಿರುವ ಪ್ರತಿಪಕ್ಷಗಳು ನೀಟ್‌ ಹಗರಣ, ದೆಹಲಿ ಕೋಚಿಂಗ್‌ ಸೆಂಟರ್‌ನಲ್ಲಿ ವಿದ್ಯಾರ್ಥಿಗಳ ಸಾವಿನ ಪ್ರಕರಣಗಳನ್ನು ಮುಂದಿಟ್ಟು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.

ವಯನಾಡು ದುರಂತದ ಚರ್ಚೆ

ಇಂದು ಉಭಯ ಸದನಗಳಲ್ಲಿ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತದ ಬಗ್ಗೆ ವ್ಯಾಪಕ ಚರ್ಚೆ ನಡೆಯುವ ಸಾಧ್ಯತೆ ಇದೆ. ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ ವಿಚಾರ ಬುಧವಾರ ಸಂಸತ್‌ನಲ್ಲೂ ಪ್ರತಿಧ್ವನಿಸಿತ್ತು. ಭೀಕರ ದುರ್ಘಟನೆ ಬಗ್ಗೆ ಸಂತಾಪ ಸೂಚಿಸಿದ ಕೇಂದ್ರ ಗೃಹಸಚಿವ ಅಮಿತ್‌ ಶಾ ಈ ವಿಚಾರದಲ್ಲಿ ರಾಜಕೀಯ ಬೇಡ ಎಂದು ಮನವಿ ಮಾಡಿದ್ದರು. ರಾಜ್ಯಸಭೆಯಲ್ಲಿ ಮಾತನಾಡಿದ ಶಾ, ಗುಡ್ಡಗಾಡು ಜಿಲ್ಲೆಗೆ ಭೂಕುಸಿತ ಸಂಭವಿಸುವ ಒಂದು ವಾರದ ಮೊದಲು ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರಕ್ಕೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿತ್ತು ಎಂದು ಹೇಳಿದ್ದರು. ಭಾರೀ ಮಳೆಯಾಗುವ ಮುನ್ಸೂಚನೆಯ ನಂತರ ಕೇಂದ್ರವು ಒಂಬತ್ತು ಎನ್‌ಡಿಆರ್‌ಎಫ್ ತಂಡಗಳನ್ನು ಕೇರಳಕ್ಕೆ ಕಳುಹಿಸಿತ್ತು ಎಂದಿದ್ದರು.

ʼʼಜುಲೈ 23ರಂದು ನನ್ನ ನಿರ್ದೇಶನದ ಮೇರೆಗೆ, ಭೂಕುಸಿತಗಳು ಸಂಭವಿಸಬಹುದು ಎಂದು ಪರಿಗಣಿಸಿ 9 ಎನ್‌ಡಿಆರ್‌ಎಫ್‌ ತಂಡಗಳನ್ನು ಕೇರಳಕ್ಕೆ ಕಳುಹಿಸಲಾಯಿತು. ಕೇರಳ ಸರ್ಕಾರ ಏನು ಮಾಡಿದೆ? ಜನರನ್ನು ಸ್ಥಳಾಂತರಿಸಲಾಗಿದೆಯೇ? ಅವರು ಸ್ಥಳಾಂತರಗೊಂಡರೆ ಹೇಗೆ ಸತ್ತರು? ಪೂರ್ವ ಎಚ್ಚರಿಕೆಯ ಯೋಜನೆಯು 2016ರಲ್ಲಿ ಪ್ರಾರಂಭವಾಯಿತು ಮತ್ತು 2023ರ ಹೊತ್ತಿಗೆ ಭಾರತವು ಅತ್ಯಾಧುನಿಕ ಮುನ್ನೆಚ್ಚರಿಕೆ ವ್ಯವಸ್ಥೆಯನ್ನು ಹೊಂದಿತ್ತು. ಇದೀಗ ಪ್ರಕೃತಿ ವಿಕೋಪಗಳನ್ನು 7 ದಿನಗಳ ಮುಂಚಿತವಾಗಿ ಊಹಿಸಲು ಸಾಮರ್ಥ್ಯವಿರುವ ಕೇವಲ 4 ದೇಶಗಳಲ್ಲಿ ಭಾರತವು ಒಂದುʼʼ ಎಂದು ಅವರು ಹೇಳಿದ್ದರು. ಇದು ಭಾರಿ ಚರ್ಚೆಗೆ ಕಾರಣವಾಗಿದೆ.

ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ

ವಯನಾಡು ದುರಂತದ ಬಗ್ಗೆ ಲೋಕಸಭೆಯಲ್ಲಿ ಮಾತನಾಡಿದ ಬೆಂಗಳೂರು ಸಂಸದ ಪೇಜಸ್ವಿ ಸೂರ್ಯ ವಯನಾಡಿನ ಮಾಜಿ ಸಂಸದ ರಾಹುಲ್‌ ಗಾಂಧ ವಿರುದ್ಧ ವಾಗ್ದಾಳಿ ನಡೆಸಿದ್ದರು. “ರಾಹುಲ್ ಗಾಂಧಿ ವಯನಾಡು ಸಂಸದರಾಗಿದ್ದಾಗಿನಿಂದ ಕಳೆದ 1,800 ದಿನಗಳಲ್ಲಿ ಅವರು ಸಂಸತ್ತಿನಲ್ಲಿ ಒಮ್ಮೆಯೂ ಭೂಕುಸಿತ ಮತ್ತು ಪ್ರವಾಹದ ವಿಷಯವನ್ನು ಎತ್ತಲಿಲ್ಲ” ಎಂದು ಹೇಳಿದ್ದರು.

ʼʼಕೇರಳ ವಿಪತ್ತು ನಿರ್ವಹಣಾ ಮಂಡಳಿಯ ಶಿಫಾರಸುಗಳ ಹೊರತಾಗಿಯೂ ವಯನಾಡಿನಲ್ಲಿ ಅಕ್ರಮ ಒತ್ತುವರಿಯನ್ನು ತೆಗೆದುಹಾಕಲಾಗಿಲ್ಲ. ಕೇರಳದ ಅರಣ್ಯ ಸಚಿವರು ಕೂಡ, ವಿವಿಧ ಧಾರ್ಮಿಕ ಸಂಘಟನೆಗಳ ಒತ್ತಡದಿಂದಾಗಿ ಅಕ್ರಮ ಒತ್ತುವರಿಯನ್ನು ತೆಗೆದುಹಾಕಲು ಅವರಿಗೆ ಸಾಧ್ಯವಾಗುತ್ತಿಲ್ಲ ಎನ್ನುವುದನ್ನು ವಿಧಾನಸಭೆಯಲ್ಲಿ ಒಪ್ಪಿಕೊಳ್ಳುತ್ತಾರೆʼʼ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದರು. ಈ ವಿಚಾರ ಇಂದು ಉಭಯ ಸದನಗಳನ್ನು ಪ್ರತಿಧ್ವನಿಸಲಿದೆ.

ಇದನ್ನೂ ಓದಿ: Parliament Session: RSS ಬಗ್ಗೆ ದೋಷಾರೋಪಣೆ ಸಲ್ಲದು; ಜಗದೀಪ್ ಧನ್‌ಕರ್ ಹೇಳಿಕೆ- ಪ್ರತಿಪಕ್ಷಗಳು ವಾಕ್‌ಔಟ್‌!

Continue Reading

ಪ್ರಮುಖ ಸುದ್ದಿ

Kaveri River Flood: ಕಾವೇರಿ ನದಿಯಲ್ಲಿ ಪ್ರವಾಹ, 9 ಗ್ರಾಮಗಳ ಜನ ಸ್ಥಳಾಂತರ

Kaveri River Flood: ದಾಸನಪುರ, ಹರಳೆ, ಅಗ್ರಹಾರ, ಹಳೆ ಹಂಪಾಪುರ, ಹೊಸ ಹಂಪಾಪುರ, ಮುಳ್ಳೂರು, ಹಳೆಅಣಗಳ್ಳಿ, ಯಡಕುರಿಯ, ಧನಗೆರೆ, ಸರಗೂರು ಗ್ರಾಮಗಳು ಜಲಾವೃತವಾಗಿವೆ. ಈ 9 ಗ್ರಾಮಗಳಿಗೆ ತೆರಳದಂತೆ ಬ್ಯಾರಿಕೇಡ್ ಅಳವಡಿಸಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ದಾಸನಪುರ, ಹಳೇ ಅಣಗಳ್ಳಿ ಗ್ರಾಮಸ್ಥರನ್ನು ಕೊಳ್ಳೇಗಾಲದ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.

VISTARANEWS.COM


on

Kaveri River Flood
Koo

ಚಾಮರಾಜನಗರ: ಕೃಷ್ಣರಾಜಸಾಗರ ಅಣೆಕಟ್ಟು (KRS Dam) ಹಾಗು ಕಬಿನಿ‌ ಜಲಾಶಯಗಳಿಂದ (Kabini Dam) ಅಧಿಕ ನೀರು ಬಿಡುಗಡೆ (Water release) ಮಾಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ ಪ್ರವಾಹ ಪರಿಸ್ಥಿತಿ (Flood Situation in Kaveri River) ಉಂಟಾಗಿದ್ದು, ಚಾಮರಾಜನಗರ (Chamarajanagar) ಜಿಲ್ಲೆ ಕೊಳ್ಳೇಗಾಲ ತಾಲೂಕಿನ 9 ಗ್ರಾಮಗಳು ಜಲಾವೃತವಾಗಿವೆ.

ದಾಸನಪುರ, ಹರಳೆ, ಅಗ್ರಹಾರ, ಹಳೆ ಹಂಪಾಪುರ, ಹೊಸ ಹಂಪಾಪುರ, ಮುಳ್ಳೂರು, ಹಳೆಅಣಗಳ್ಳಿ, ಯಡಕುರಿಯ, ಧನಗೆರೆ, ಸರಗೂರು ಗ್ರಾಮಗಳು ಜಲಾವೃತವಾಗಿವೆ. ಈ 9 ಗ್ರಾಮಗಳಿಗೆ ತೆರಳದಂತೆ ಬ್ಯಾರಿಕೇಡ್ ಅಳವಡಿಸಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ದಾಸನಪುರ, ಹಳೇ ಅಣಗಳ್ಳಿ ಗ್ರಾಮಸ್ಥರನ್ನು ಕೊಳ್ಳೇಗಾಲದ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.

ಇಲ್ಲಿನ ಮನೆ, ಜಮೀನುಗಳಿಗೆ ನೀರು ನುಗ್ಗಿದೆ. 9 ಗ್ರಾಮಗಳಲ್ಲಿ ಇಂದು ಶಾಲಾಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹಾಗು ಇತರ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಗ್ರಾಮಸ್ಥರು ನೀರಿನ ಬಳಿ ಹೋಗದಂತೆ ಎಚ್ಚರಿಕೆ ವಹಿಸಲು ಸಿಬ್ಬಂದಿ ನಿಯೋಜಿಸಲಾಗಿದೆ. ಸಂಭವನೀಯ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿದ್ದು, ದೋಣಿಗಳು ಸೇರಿದಂತೆ ರಕ್ಷಣಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಹೆಚ್ಚಿದ ಕಬಿನಿ ಜಲಾಶಯ ಒಳಹರಿವು

ಕೇರಳದ ವೈನಾಡಿನಲ್ಲಿ ಮಳೆ ಆರ್ಭಟ ಮುಂದುವರಿದ ಪರಿಣಾಮ ಕಬಿನಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಹೆಚ್‌ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಜಲಾಶಯದ ಒಳ ಹರಿವು ಹೆಚ್ಚಿದ್ದು, ಇದರಿಂದ ಹೊರ ಹರಿವಿನಲ್ಲೂ ಹೆಚ್ಚಳವಾಗಿದೆ. ಜಲಾಶಯದ ಗರಿಷ್ಟ ನೀರಿನ ಮಟ್ಟ 2284 ಅಡಿ ಹಾಗೂ ಇಂದಿನ ನೀರಿನ ಮಟ್ಟ 2281.59 ಅಡಿ. ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಉಂಟಾಗಿದ್ದು, ನದಿ ಪಾತ್ರದ ಜನತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಕಬಿನಿ, ಕೆಆರ್‌ಎಸ್ ಜಲಾಶಯದಿಂದ ಭಾರಿ ಪ್ರಮಾಣದ ನೀರು ನದಿಗೆ ಬಿಟ್ಟ ಹಿನ್ನೆಲೆಯಲ್ಲಿ ತಲಕಾಡಿನ ಹೆಮ್ಮಿಗೆ ಸೇತುವೆ ಹಾಗೂ ಸುತ್ತೂರು ಸೇತುವೆಗಳು ಮುಳುಗಡೆಯಾಗಿವೆ. ಮೈಸೂರು ಜಿಲ್ಲೆ ತಿರುಮಕೂಡಲು ನರಸೀಪುರ ತಾಲ್ಲೂಕಿನ ಹೆಮ್ಮಿಗೆ ಸೇತುವೆ ಮುಳುಗಡೆಯಿಂದ ತಿ. ನರಸೀಪುರ- ತಲಕಾಡು ಸಂಚಾರ ಬಂದ್ ಆಗಿದೆ. ಸೇತುವೆ ಮೇಲೆ ಎರಡು ಅಡಿಗಳಷ್ಟು ನೀರು ಹರಿಯುತ್ತಿದೆ. ಒಂದೇ ವಾರದ ಅಂತರದಲ್ಲಿ ಎರಡು ಬಾರಿ ಸೇತುವೆ ಮುಳುಗಡೆಯಾಗಿದೆ. ಸೇತುವೆಯ ಎರಡು ಭಾಗದಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ. ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ಮೈಸೂರು ತಾಲ್ಲೂಕಿನ ವರುಣ ಕ್ಷೇತ್ರ ವ್ಯಾಪ್ತಿಯ ಸುತ್ತೂರು ಸೇತುವೆ ಮುಳುಗಡೆಯಿಂದ ಮೈಸೂರು ಸುತ್ತೂರು ಮಾರ್ಗದ ಸಂಚಾರ ಬಂದ್ ಆಗಿದೆ. ಸುತ್ತೂರು ಸೇರಿದಂತೆ ಅನೇಕ ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಒಂದೇ ವಾರದಲ್ಲಿ ಎರಡು ಬಾರಿ ಸುತ್ತೂರು ಸೇತುವೆ ಮುಳುಗಡೆಯಾಗಿದ್ದು, ಸೇತುವೆ ಅಕ್ಕ ಪಕ್ಕದ ತೆಂಗಿನ ತೋಟಕ್ಕೂ ನೀರು ನುಗ್ಗಿದೆ.

ಇದನ್ನೂ ಓದಿ: KRS Dam: ಸಂಪ್ರದಾಯಕ್ಕೆ ಎಳ್ಳು ನೀರು; ಕಾವೇರಿಗೆ ಬಾಗಿನ ಕಾರ್ಯಕ್ರಮದಲ್ಲಿ ಬಾಡೂಟ!

Continue Reading

ದೇಶ

ಪಾಕಿಸ್ತಾನದ ಮತ್ತೊಂದು ಕುತಂತ್ರ ಬಯಲು: ಪಿಒಕೆಯಲ್ಲಿ ಸಮವಸ್ತ್ರದ ಬದಲು ಪಠಾಣಿ ಸೂಟ್ ಧರಿಸಿ ಬೇಹುಗಾರಿಕೆಗೆ ಮುಂದಾದ ಪಾಕ್‌ ಸೇನೆ

Pakistani Army: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನ ಸೇನಾ ಸಿಬ್ಬಂದಿ ತಮ್ಮ ಪ್ರಮಾಣಿತ ಮಿಲಿಟರಿ ಸಮವಸ್ತ್ರದ ಬದಲು ಸ್ಥಳೀಯ ಉಡುಪಾದ ಪಠಾಣಿ ಸೂಟ್ ಧರಿಸಿರುವುದು ಕಂಡುಬಂದಿದೆ. ಮೂಲಗಳ ಪ್ರಕಾರ ಪಿಒಕೆಯಲ್ಲಿ ಬೀಡುಬಿಟ್ಟಿರುವ ಪಾಕಿಸ್ತಾನಿ ಸೇನಾ ಸಿಬ್ಬಂದಿ ತಮ್ಮ ಮಿಲಿಟರಿ ಸಮವಸ್ತ್ರದ ಬದಲು ಸಾಂಪ್ರದಾಯಿಕ ಸ್ಥಳೀಯ ಉಡುಗೆಯಾದ ಪಠಾಣಿ ಸೂಟ್‌ಗಳನ್ನು ಧರಿಸಲು ಪ್ರಾರಂಭಿಸಿದ್ದಾರೆ. ಗುರುತುಗಳನ್ನು ಮರೆ ಮಾಚುವ ಮತ್ತು ಸ್ಥಳೀಯರೊಂದಿಗೆ ಬೆರೆಯುವ ಉದ್ದೇಶದಿಂದ ಈ ಕ್ರಮಕ್ಕೆ ಮುಂದಾಗಿದ್ದಾರೆ. ಈ ಹಿನ್ನಲೆಯಲ್ಲಿ ಭಾರತೀಯ ಸೇನೆ ಇನ್ನಷ್ಟು ಮುನ್ನೆಚ್ಚರಿಕೆ ವಹಿಸಿದೆ.

VISTARANEWS.COM


on

Pakistani Army
Koo

ಶ್ರೀನಗರ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (Pakistan-occupied Kashmir) ಪಾಕಿಸ್ತಾನ ಸೇನಾ ಸಿಬ್ಬಂದಿ (Pakistani Army) ತಮ್ಮ ಪ್ರಮಾಣಿತ ಮಿಲಿಟರಿ ಸಮವಸ್ತ್ರದ ಬದಲು ಸ್ಥಳೀಯ ಉಡುಪಾದ ಪಠಾಣಿ ಸೂಟ್ ಧರಿಸಿರುವುದು ಕಂಡುಬಂದಿದೆ. ನಿಯಂತ್ರಣ ರೇಖೆಯಲ್ಲಿ (Line of Control) ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನದ ಚಟುವಟಿಕೆ ಹೆಚ್ಚಿರುವ ಮಧ್ಯೆಯೇ ಈ ಬೆಳವಣಿಗೆ ನಡೆದಿರುವುದು ಸಂದೇಹಕ್ಕೆ ಎಡೆಮಾಡಿ ಕೊಟ್ಟಿದೆ. ಈ ಹಿನ್ನಲೆಯಲ್ಲಿ ಭಾರತೀಯ ಸೇನೆ (Indian Army) ಇನ್ನಷ್ಟು ಮುನ್ನೆಚ್ಚರಿಕೆ ವಹಿಸಿದೆ.

ಈ ಹಿಂದೆ ಪಾಕಿಸ್ತಾನ ಸೇನೆಯು ಪಠಾಣಿ ಸೂಟ್ ಧರಿಸಿದ ಭಯೋತ್ಪಾದಕರಿಗೆ ಫಾರ್ವರ್ಡ್ ಪೋಸ್ಟ್‌ಗಳಿಗೆ ಮಾರ್ಗದರ್ಶನ ನೀಡುತ್ತಿರುವುದು ಮತ್ತು ಒಳನುಸುಳುವಿಕೆ ಮಾರ್ಗಗಳನ್ನು ತೋರಿಸುತ್ತಿರುವುದು ಕಂಡುಬಂದಿತ್ತು. ಪಿಒಕೆಯ ಕೋಟ್ಲಿ ಮತ್ತು ಸಮೀಪದ ಪ್ರದೇಶಗಳಲ್ಲಿನ ದೃಶ್ಯ ಸೆರೆಯಾಗಿದ್ದವು.

ಪಠಾಣಿ ಸೂಟ್‌ನಲ್ಲಿ ಪಾಕಿಸ್ತಾನ ಸೇನೆ

ಮೂಲಗಳ ಪ್ರಕಾರ ಪಿಒಕೆಯಲ್ಲಿ ಬೀಡುಬಿಟ್ಟಿರುವ ಪಾಕಿಸ್ತಾನಿ ಸೇನಾ ಸಿಬ್ಬಂದಿ ತಮ್ಮ ಮಿಲಿಟರಿ ಸಮವಸ್ತ್ರದ ಬದಲು ಸಾಂಪ್ರದಾಯಿಕ ಸ್ಥಳೀಯ ಉಡುಗೆಯಾದ ಪಠಾಣಿ ಸೂಟ್‌ಗಳನ್ನು ಧರಿಸಲು ಪ್ರಾರಂಭಿಸಿದ್ದಾರೆ. ಗುರುತುಗಳನ್ನು ಮರೆ ಮಾಚುವ ಮತ್ತು ಸ್ಥಳೀಯರೊಂದಿಗೆ ಬೆರೆಯುವ ಉದ್ದೇಶದಿಂದ ಈ ಕ್ರಮಕ್ಕೆ ಮುಂದಾಗಿದ್ದಾರೆ. ಉಡುಪುಗಳಲ್ಲಿನ ಬದಲಾವಣೆಯು ಈ ಪ್ರದೇಶದಲ್ಲಿನ ಬೇಹುಗಾರಿಕೆಯನ್ನು ಸುಲಭಗೊಳಿಸುತ್ತದೆ ಎನ್ನಲಾಗಿದೆ. ಸಾಮಾನ್ಯರಂತೆ ಬೆರೆತು ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಲು ಪಾಕಿಸ್ತಾನ ಸೇನೆ ಈ ಕುತಂತ್ರ ಅನುಸರಿಸುತ್ತಿದೆ ಎಂದು ಮೂಲಗಳು ಎಚ್ಚರಿಸಿವೆ.

ಈ ಪ್ರದೇಶದಲ್ಲಿ ಬೇಹುಗಾರಿಕೆ ನಡೆಸಲು ಪಾಕಿಸ್ತಾನದ ಸೇನೆ ಪಠಾಣಿ ಸೂಟ್ ಧರಿಸಿದ ತನ್ನ ಸಿಬ್ಬಂದಿಯ ನಾಲ್ಕರಿಂದ ಐದು ಗುಂಪುಗಳನ್ನು ನಿಯೋಜಿಸುತ್ತಿದೆ. ಅವರು ನಿರಂತರವಾಗಿ ವಿಶ್ವಸಂಸ್ಥೆಯ ನಿಯೋಗಗಳನ್ನು ಈ ಪ್ರದೇಶಕ್ಕೆ ಕರೆತರುತ್ತಿದ್ದಾರೆ. ಮುಂದೆ ಸಂಭವಿಸಬಹುದಾದ ಘಟನೆಗಳ ಮೂಲಕ ಅಂತಾರಾಷ್ಟ್ರೀಯ ಗಮನವನ್ನು ಸೆಳೆಯುವ ಗುರಿಯನ್ನು ಈ ಕ್ರಮ ಹೊಂದಿದೆ ಎನ್ನಲಾಗಿದೆ.

ಕುತಂತ್ರ ಬಯಲು

ʼʼಗೊಂದಲವನ್ನು ಸೃಷ್ಟಿಸುವುದು ಈ ಕಾರ್ಯತಂತ್ರದ ಉದ್ದೇಶ. ಗಡಿ ದಾಟಿ ಒಳ ನುಸುಳಿದ ಪಠಾಣ್‌ ಸೂಟ್‌ ಉಡುಪು ಧರಿಸಿದ ಪಾಕ್‌ ಸೇನೆಯನ್ನು ಭಾರತೀಯ ಸೈನಿಕರು ಕೊಂದರೆ, ಭಾರತೀಯ ಸೇನೆಯು ನಾಗರಿಕರನ್ನು ಕೊಲ್ಲುತ್ತಿದೆ ಎಂದು ಆರೋಪಿಸಬಹುದು ಎನ್ನುವುದು ಪಾಕಿಸ್ತಾನದ ಯೋಜನೆ. ಈ ಮೂಲಕ ಹೇಡಿ ಪಾಕಿಸ್ತಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಸಿಲುಕಿಸಲು ಪ್ರಯತ್ನಿಸುತ್ತದೆ. ವಿಶ್ವಸಂಸ್ಥೆಯಂತಹ ಅಂತಾರಾಷ್ಟ್ರೀಯ ಸಂಸ್ಥೆಗಳಲ್ಲಿ ನಾಗರಿಕರ ವಿರುದ್ಧ ಅನ್ಯಾಯದ ಎಸಗಲಾಗುತ್ತಿದೆ ಎನ್ನುವುದನ್ನು ಈ ಮೂಲಕ ರೂಪಿಸಲು ಪಾಕ್‌ ಮುಂದಾಗಿದೆʼʼ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪಾಕಿಸ್ತಾನ ಪಡೆಗಳು ಜಾನುವಾರುಗಳನ್ನು ಗಡಿಗೆ ಹತ್ತಿರ ತರುತ್ತಿವೆ ಎಂಬ ಬಗ್ಗೆಯೂ ವರದಿಗಳು ಬರುತ್ತಿದೆ. ಇದು ಕೂಡ ಅವರ ನಿಜವಾದ ಚಟುವಟಿಕೆಗಳನ್ನು ಮರೆಮಾಚುವ ಉದ್ದೇಶ ಹೊಂದಿದೆ. ಈ ಮೂಲಕ ಸ್ಥಳೀಯರೊಂದಿಗೆ ಬೆರೆಯಲು ಮುಂದಾಗುತ್ತಿದೆ. ಹೀಗಾಗಿ ಭಾರತೀಯ ಸೇನೆಯೂ ಈ ಬೆಳವಣಿಗೆಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಈ ಪರಿಸ್ಥಿತಿಯಿಂದ ಉದ್ಭವಿಸುವ ಸಂಭಾವ್ಯ ರಾಜತಾಂತ್ರಿಕ ಸವಾಲುಗಳಿಗೆ ಎದುರಿಸಲು ಸಿದ್ಧರಾಗುವಂತೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದೆ.

ಇದನ್ನೂ ಓದಿ: Pakistani Labours: ಭಿಕ್ಷಾಟನೆ, ಅಪರಾಧ ಕೃತ್ಯ; ಪಾಕಿಸ್ತಾನಿಯರನ್ನು ಒದ್ದು ಓಡಿಸುತ್ತಿರುವ ಗಲ್ಫ್‌ ರಾಷ್ಟ್ರಗಳು!

ಭಾರತವು ಪಾಕಿಸ್ತಾನದೊಂದಿಗೆ 772 ಕಿ.ಮೀ. ಉದ್ದದ ನಿಯಂತ್ರಣ ರೇಖೆ (ಎಲ್ಒಸಿ) ಗಡಿಯನ್ನು ಹಂಚಿಕೊಂಡಿದೆ. ಭಾರತವನ್ನು ದುರ್ಬಲಗೊಳಿಸಲು ಪಾಕಿಸ್ತಾನ ಸೇನೆಯು ಇಂತಹ ಕುತಂತ್ರಗಳಲ್ಲಿ ತೊಡಗಿರುವುದು ಇದೇ ಮೊದಲಲ್ಲ. ಆದಾಗ್ಯೂ ಅದರ ಹಿಂದಿನ ಕಾರ್ಯತಂತ್ರಗಳು ವಿಫಲವಾದ ಕಾರಣ ಇದೀಗ ವಿಶ್ವಸಂಸ್ಥೆಯಲ್ಲಿ ತಾನು ಬಲಿಪಶು ಎಂದು ಬಿಂಬಿಸಲು ಪ್ರಯತ್ನಿಸುತ್ತಿದೆ ಎಂದು ವರದಿ ತಿಳಿಸಿದೆ.

Continue Reading

ಹಾಸನ

Shiradi Landslide: ಶಿರಾಡಿ ಘಾಟಿ ಸಂಚಾರ ಮುಕ್ತ, ನಿಮ್ಮದೇ ರಿಸ್ಕ್‌ನಲ್ಲಿ ಸಂಚರಿಸಿ!

Shiradi Landslide: ಸಕಲೇಶಪುರದ ದೊಡ್ಡತಪ್ಲೆ ಭಾಗದಲ್ಲಿ ನಿನ್ನೆ ರಾತ್ರಿ ಮೂರನೇ ಬಾರಿಗೆ ಗುಡ್ಡ ಕುಸಿದಿತ್ತು. ಹಲವಾರು ವಾಹನಗಳು ಸಿಲುಕಿಕೊಂಡಿದ್ದವು ಅದೃಷ್ಟವಶಾತ್‌ ಜೀವಹಾನಿ ಆಗಿರಲಿಲ್ಲ. ಇಲ್ಲಿ ತಾತ್ಕಾಲಿಕವಾಗಿ ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

VISTARANEWS.COM


on

shiradi landslide
Koo

ಹಾಸನ: ಬೆಂಗಳೂರು- ಮಂಗಳೂರು (Bangalore- Mangalore) ಸಂಪರ್ಕಿಸುವ ಪ್ರಮುಖ ರಸ್ತೆ ಹಾದುಹೋಗುವ ಶಿರಾಡಿ ಘಾಟಿಯಲ್ಲಿ (Shiradi Ghat) ನಿನ್ನೆ ರಾತ್ರಿ ಮತ್ತೆ ಭೂಕುಸಿತದಿಂದ (Shiradi Landslide) ಮುಚ್ಚಿಹೋಗಿದ್ದ ಜಾಗವನ್ನು ವಾಹನಗಳು ಸಂಚರಿಸುವಷ್ಟು ತೆರವು ಮಾಡಲಾಗಿದೆ. ಆದರೆ ಭೂಕುಸಿತದ ಆತಂಕ ಇನ್ನೂ ಇದ್ದು, ವಾಹನ ಸವಾರರು ಜೀವಭಯದಿಂದಲೇ ಸಂಚರಿಸಬೇಕಿದೆ.

ಸಕಲೇಶಪುರದ ದೊಡ್ಡತಪ್ಲೆ ಭಾಗದಲ್ಲಿ ನಿನ್ನೆ ರಾತ್ರಿ ಮೂರನೇ ಬಾರಿಗೆ ಗುಡ್ಡ ಕುಸಿದಿತ್ತು. ಹಲವಾರು ವಾಹನಗಳು ಸಿಲುಕಿಕೊಂಡಿದ್ದವು ಅದೃಷ್ಟವಶಾತ್‌ ಜೀವಹಾನಿ ಆಗಿರಲಿಲ್ಲ. ಇಲ್ಲಿ ತಾತ್ಕಾಲಿಕವಾಗಿ ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಎನ್‌ಹೆಚ್‌ಎಐನ ಅಧಿಕಾರಿಗಳು ಸ್ಥಳದಲ್ಲಿದ್ದು ರಸ್ತೆ ಮೇಲೆ ಕುಸಿತವಾಗಿರುವ ಮಣ್ಣನ್ನು ಮಾತ್ರ ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

ಒಂದು ವಾರದ ಹಿಂದೆ ದೊಡ್ಡತಪ್ಲು ಬಳಿ ರಸ್ತೆಗೆ ಗುಡ್ಡದಿಂದ ಮಣ್ಣು ಕುಸಿಯಲು ಆರಂಭಿಸಿದೆ. ಆಗಲೇ ಸ್ಥಳೀಯರು ಎಚ್ಚರಿಸಿದ್ದರು. ಎರಡು ದಿನ ಹಿಂದೆ ಇಲ್ಲಿ ರಸ್ತೆಗೆ ಗುಡ್ಡ ದೊಡ್ಡ ಪ್ರಮಾಣದಲ್ಲಿ ಕುಸಿದಿತ್ತು. ಎರಡು ಕಾರುಗಳು, ಲಾರಿ ಹಾಗೂ ಟ್ಯಾಂಕರ್‌ ಸಿಲುಕಿಕೊಂಡಿದ್ದವು. ಪ್ರಯಾಣಿಕರನ್ನು ಪಾರು ಮಾಡಿ ವಾಹನಗಳನ್ನು ಈಚೆಗೆ ತೆಗೆಯಲಾಗಿತ್ತು. ನಿನ್ನೆ ಬೆಳಗ್ಗೆಯುಷ್ಟೇ ರಸ್ತೆ ಸಂಚಾರ ಮುಕ್ತಗೊಂಡಿತ್ತು. ನಿನ್ನೆ ಮಧ್ಯಾಹ್ನ ಕಂದಾಯ ಸಚಿವ ಕೃಷ್ಣಭೈರೇಗೌಡರು ಇಲ್ಲಿಗೆ ಭೇಟಿ ನೀಡಿ ಅವಲೋಕಿಸಿದ್ದರು. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.

ನಂತರ ನಿನ್ನೆ ರಾತ್ರಿ ಇದೇ ಸ್ಥಳದಲ್ಲಿ ಮತ್ತೆ ಗುಡ್ಡ ಕುಸಿದಿದೆ. ಮಣ್ಣಿನಡಿ ಹಲವು ವಾಹನಗಳು ಸಿಲುಕಿಕೊಂಡವು. ಗುಡ್ಡ ಕುಸಿತದ ರಭಸಕ್ಕೆ ಕಂಟೇನರ್ ಒಂದು ಪಲ್ಟಿಯಾಗಿದೆ. ನಂತರ ಇಲ್ಲಿ ಪೂರ್ತಿಯಾಗಿ ರಸ್ತೆ ಸಂಚಾರ ಬಂದ್‌ ಮಾಡಿ ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ಆದೇಶ ನೀಡಿದ್ದರು. ನಿರಂತರ ಗುಡ್ಡ ಕುಸಿಯುತ್ತಿರುವುದರಿಂದ ಜಿಲ್ಲಾಡಳಿತ ಈ ಆದೇಶ ನೀಡಿದ್ದು, ಬದಲಿ ಮಾರ್ಗದಲ್ಲಿ ಸಂಚಾರ ಮಾಡುವಂತೆ ಆದೇಶಿಸಿತ್ತು.

ಕಂದಾಯ ಸಚಿವರ ಕ್ಲಾಸ್‌

ನಿನ್ನೆ ಗುಡ್ಡ ಕುಸಿತ ಸ್ಥಳಕ್ಕೆ ಸಚಿವರ ಭೇಟಿ ನೀಡಿದ್ದ ಸಚಿವ ಕೃಷ್ಣೆಬೈರೇಗೌಡ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದರು. ʼಇಷ್ಟೆಲ್ಲಾ ಸಮಸ್ಯೆ ಆಗಿದೆ, ನಮ್ಮ ಇಡೀ ಅಧಿಕಾರಿ ವರ್ಗ ಇಲ್ಲಿ ಸಮಸ್ಯೆ ಆಗಬಾರದು ಎಂದು ಎಚ್ಚರಿಕೆ ವಹಿಸಿದೆ. ನೀವು ಜನರಿಗೆ ಸಮಸ್ಯೆ ಆಗದಂತೆ ಏನು ಎಚ್ಚರಿಕೆ ವಹಿಸಿದ್ದೀರಿ? ಬೇಕಾಬಿಟ್ಟಿಯಾಗಿ ರಸ್ತೆಯ ಬದಿಗಳನ್ನು ಕಡಿದು ತೆಗೆದಿದ್ದೀರಾʼ ಎಂದು ಕಿಡಿ ಕಾರಿದರು. ʼಇದು ರಾಜ್ಯದ ಪ್ರಮುಖ ರಸ್ತೆ. ಬಂದ್ ಮಾಡಲು ಆಗುವುದಿಲ್ಲ. ಮೊದಲೇ ಜಾಗೃತೆ ವಹಿಸಬೇಕಿತ್ತಲ್ಲವೇʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ʼನಮ್ಮ ಅದೃಷ್ಟ ಯಾರಿಗೆ ಏನೂ ತೊಂದರೆ ಆಗಿಲ್ಲ. ಗುಡ್ಡ ಕುಸಿದು ಮಣ್ಣಿನ ಅಡಿ ಸಿಲುಕಿದ್ದ ವಾಹನಗಳನ್ನ ನಮ್ಮ ಸಿಬ್ಬಂದಿ ಹೊರ ತೆಗೆದಿದ್ದಾರೆ. ಶಿರಾಡಿ ಘಾಟ್ ಸಮಸ್ಯೆ ಇಂದು ನೆನ್ನೆಯದಲ್ಲ. ಇದು ಹಲವು ವರ್ಷಗಳಿಂದ ಸಮಸ್ಯೆ ಇದೆ. ಗುಡ್ಡಗಳನ್ನು ನೆರವಾಗಿ ಕಡಿದಿದ್ದರಿಂದ ಸಮಸ್ಯೆ ಆಗಿದೆ. ಇಲ್ಲಿನ ಸಮಸ್ಯೆ ಬಗ್ಗೆ ನಾವು ಸಿಎಂ ಅವರಿಂದಲೂ ಕೂಡ ಪತ್ರ ಬರೆಸುತ್ತೇವೆ ಎಂದಿದ್ದರು ಸಚಿವರು.

ʼಸೂಕ್ತ ಬಂದೋಬಸ್ತ್ ಮಾಡದೆ ರಸ್ತೆ ಮಾಡಿ ಸಮಸ್ಯೆ ಆಗಿದೆ. ಇಲ್ಲಿನ ಸಮಸ್ಯೆ ಬಗ್ಗೆ ಜಿಯೊಲಜಿಕಲ್ ಸರ್ವೆ ಆಫ್ ಇಂಡಿಯಾದಿಂದ ವರದಿ ಪಡೆಯುತ್ತೇವೆ. ಈಗ ಏನಾಗಿದೆ, ಯಾವ ರೀತಿ ಆಗಬೇಕು ಎಂದು ವರದಿ ಪಡೆಯುತ್ತೇವೆ. ಸಿಎಂ ಮೂಲಕ ಎನ್ಎಚ್ಎಗೆ ಪತ್ರ ಬರೆದು ಸಮಸ್ಯೆ ಬಗೆಹರಿಸಲು ತಾಕೀತು ಮಾಡುತ್ತೇವೆ. ನಮ್ಮ ರಾಜ್ಯದ ಹಲವು ಕಡೆ ಗುಡ್ಡ ಕುಸಿತ ಆಗಿದೆ. ಒಟ್ಟು 300 ಕೋಟಿ ವೆಚ್ಚದಲ್ಲಿ ಭೂ ಕುಸಿತ ಆಗೋ ಸಾಧ್ಯತೆ ಕಡೆಗಳಲ್ಲಿ ಕಾಮಗಾರಿ ಮಾಡುತ್ತೇವೆ. ಈ ಬಗ್ಗೆ ಶೀಘ್ರವಾಗಿ ಡಿಸಿಗಳಿಂದ ಪ್ರಸ್ತಾವನೆ ಪಡೆದು ತಡೆ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಸಚಿವರು ನುಡಿದರು.

ಇದನ್ನೂ ಓದಿ: Shiradi Ghat: ಗುಡ್ಡ ಕುಸಿತ; ಶಿರಾಡಿ ಘಾಟ್‌ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್‌, ಬದಲಿ ಮಾರ್ಗ ಸೂಚನೆ

Continue Reading
Advertisement
Parliament Session
ರಾಜಕೀಯ27 mins ago

Parliament Session: ಸಂಸತ್ ಅಧಿವೇಶನದಲ್ಲಿ ಪ್ರತಿಧ್ವನಿಸಲಿದೆ ವಯನಾಡು ದುರಂತ; ಕ್ಷಣ ಕ್ಷಣದ ಮಾಹಿತಿಗಾಗಿ Live ನೋಡಿ

Aishwarya Rai Returns From NY Vacation With Aaradhya
ಬಾಲಿವುಡ್35 mins ago

Aishwarya Rai : ಡಿವೋರ್ಸ್ ವದಂತಿ ಮಧ್ಯೆ ಒಬ್ಬರೇ ಮಗಳ ಜತೆ ನ್ಯೂಯಾರ್ಕ್ ವಕೇಶನ್‌ ಎಂಜಾಯ್‌ ಮಾಡಿ ಬಂದ ಐಶ್ವರ್ಯಾ ರೈ!

Kaveri River Flood
ಪ್ರಮುಖ ಸುದ್ದಿ38 mins ago

Kaveri River Flood: ಕಾವೇರಿ ನದಿಯಲ್ಲಿ ಪ್ರವಾಹ, 9 ಗ್ರಾಮಗಳ ಜನ ಸ್ಥಳಾಂತರ

wayanad Landslide
ದೇಶ40 mins ago

Wayanad Landslide: “ಧಾರ್ಮಿಕ ಸಂಘಟನೆಗಳ ಒತ್ತಡದಿಂದ ವಯನಾಡಿನಲ್ಲಿ ಭೂಮಿ ಒತ್ತುವರಿ ತೆರವು ಸಾಧ್ಯವಾಗ್ತಿಲ್ಲ”- ತೇಜಸ್ವಿ ಸೂರ್ಯ ಕಿಡಿ

IPL 2025
ಕ್ರೀಡೆ51 mins ago

IPL 2025: ಇಂದು ಐಪಿಎಲ್ ಮೆಗಾ ಹರಾಜು ಕುರಿತು ಸಭೆ; ಫ್ರಾಂಚೈಸಿಗಳಿಂದ ಹಲವು ಬೇಡಿಕೆ!

Pakistani Army
ದೇಶ1 hour ago

ಪಾಕಿಸ್ತಾನದ ಮತ್ತೊಂದು ಕುತಂತ್ರ ಬಯಲು: ಪಿಒಕೆಯಲ್ಲಿ ಸಮವಸ್ತ್ರದ ಬದಲು ಪಠಾಣಿ ಸೂಟ್ ಧರಿಸಿ ಬೇಹುಗಾರಿಕೆಗೆ ಮುಂದಾದ ಪಾಕ್‌ ಸೇನೆ

shiradi landslide
ಹಾಸನ1 hour ago

Shiradi Landslide: ಶಿರಾಡಿ ಘಾಟಿ ಸಂಚಾರ ಮುಕ್ತ, ನಿಮ್ಮದೇ ರಿಸ್ಕ್‌ನಲ್ಲಿ ಸಂಚರಿಸಿ!

Actor Darshan siddharudha life journey book sent to Darshan
ಸ್ಯಾಂಡಲ್ ವುಡ್1 hour ago

Actor Darshan: ನಟ ದರ್ಶನ್‌ಗೆ ಹುಬ್ಬಳ್ಳಿ ಸಿದ್ಧಾರೂಢ ಮಠದಿಂದ ಪುಸ್ತಕ ರವಾನೆ

Paris Olympics Boxing
ಕ್ರೀಡೆ1 hour ago

Paris Olympics Boxing: ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ಬಾಕ್ಸರ್‌ ನಿಶಾಂತ್‌ ದೇವ್‌; ಟಿಟಿಯಲ್ಲಿ ಶ್ರೀಜಾ ಅಕುಲಾ ಪರಾಭವ

sri reddy me too fame telugu actress post goes viral
ಟಾಲಿವುಡ್2 hours ago

Sri Reddy: ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ; ಅರೆಬೆತ್ತಲೆ ಪ್ರತಿಭಟನೆ ಮೂಲಕ ಸದ್ದು ಮಾಡಿದ ನಟಿ ಶ್ರೀರೆಡ್ಡಿ ಪೋಸ್ಟ್‌ ವೈರಲ್‌!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ4 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ4 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ4 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌