West Bengal: ಬಂಗಾಳದಲ್ಲಿ ಎಲೆಕ್ಷನ್‌ ಹಿಂಸಾಚಾರ; ಬಿಜೆಪಿ ಅಭ್ಯರ್ಥಿಯನ್ನು ಕಲ್ಲೆಸೆದು ಓಡಿಸಿದ ಟಿಎಂಸಿ ಕಾರ್ಯಕರ್ತರು, Video ಇದೆ - Vistara News

ಪ್ರಮುಖ ಸುದ್ದಿ

West Bengal: ಬಂಗಾಳದಲ್ಲಿ ಎಲೆಕ್ಷನ್‌ ಹಿಂಸಾಚಾರ; ಬಿಜೆಪಿ ಅಭ್ಯರ್ಥಿಯನ್ನು ಕಲ್ಲೆಸೆದು ಓಡಿಸಿದ ಟಿಎಂಸಿ ಕಾರ್ಯಕರ್ತರು, Video ಇದೆ

West Bengal: ಪಶ್ಚಿಮ ಬಂಗಾಳದ ಝಾರ್‌ಗ್ರಾಮ್‌ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಣತ್‌ ತುಡು ಅವರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮಂಗಳಪೋಟಾ ಗ್ರಾಮದಲ್ಲಿ ಅವರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿಯು ಅವರಿಗೆ ಭದ್ರತೆ ಒದಗಿಸಿದರೂ, ಕೆಲ ದುಷ್ಕರ್ಮಿಗಳು ಅವರನ್ನು ಬೆನ್ನತ್ತಿ, ಅವರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಪ್ರಣತ್‌ ತುಡು, ಭದ್ರತಾ ಸಿಬ್ಬಂದಿ ಹಾಗೂ ಪತ್ರಕರ್ತರು ಓಡಿ ಹೋಗುವ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

VISTARANEWS.COM


on

West Bengal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕೊತಾ: ಪಶ್ಚಿಮ ಬಂಗಾಳದಲ್ಲಿ (West Bengal) ಚುನಾವಣೆ ಇರಲಿ, ಮತ ಎಣಿಕೆ ದಿನವೇ ಇರಲಿ, ಹಿಂಸಾಚಾರ ನಡೆದೇ ನಡೆಯುತ್ತವೆ. ಮತಯಂತ್ರಗಳನ್ನು ಧ್ವಂಸಗೊಳಿಸುವುದು, ಎದುರಾಳಿ ಪಕ್ಷದ ಅಭ್ಯರ್ಥಿ ಮೇಲೆ ಹಲ್ಲೆ ನಡೆಸುವುದು ಸೇರಿ ಹಲವು ರೀತಿಯಲ್ಲಿ ಹಿಂಸಾಚಾರ ನಡೆಯುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಲೋಕಸಭೆ ಚುನಾವಣೆಯ (Lok Sabha Election 2024) ಆರನೇ ಹಂತದ ಮತದಾನದ ವೇಳೆ ಟಿಎಂಸಿ ಪಕ್ಷದ ದುಷ್ಕರ್ಮಿಗಳು ಬಿಜೆಪಿ ಅಭ್ಯರ್ಥಿಯ (BJP Candidate) ಮೇಲೆಯೇ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಗಲಿಬಿಲಿಗೊಂಡ ಬಿಜೆಪಿ ಅಭ್ಯರ್ಥಿಯು ಗ್ರಾಮದಿಂದಲೇ ಓಡಿ ಹೋಗುವಂತಾಯಿತು.

ಹೌದು, ಝಾರ್‌ಗ್ರಾಮ್‌ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಣತ್‌ ತುಡು ಅವರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮಂಗಳಪೋಟಾ ಗ್ರಾಮದಲ್ಲಿ ಅವರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿಯು ಅವರಿಗೆ ಭದ್ರತೆ ಒದಗಿಸಿದರೂ, ಕೆಲ ದುಷ್ಕರ್ಮಿಗಳು ಅವರನ್ನು ಬೆನ್ನತ್ತಿ, ಅವರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಪ್ರಣತ್‌ ತುಡು, ಭದ್ರತಾ ಸಿಬ್ಬಂದಿ ಹಾಗೂ ಪತ್ರಕರ್ತರು ಓಡಿ ಹೋಗುವ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇದರ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಇದೆಲ್ಲ ಟಿಎಂಸಿ ಕೃತ್ಯ ಎಂದು ದೂರಿದೆ.

ಬಿಜೆಪಿ ನಾಯಕ ಅಮಿತ್‌ ಮಾಳವೀಯ ಅವರು ಕಲ್ಲುತೂರಾಟದ ವಿಡಿಯೊವನ್ನು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಟಿಎಂಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವವನ್ನು ಕೊಲೆ ಮಾಡುತ್ತಿದ್ದಾರೆ. ಟಿಎಂಸಿಯ ಗೂಂಡಾಗಳು ಬಿಜೆಪಿ ಅಭ್ಯರ್ಥಿ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಜನರು ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಲು ಅವಕಾಶ ನೀಡುತ್ತಿಲ್ಲ. ಇಷ್ಟಾದರೂ, ರಾಜ್ಯದಿಂದ ಟಿಎಂಸಿಯನ್ನು ಕಿತ್ತೆಸೆಯುವ ದಿಸೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಮತದಾನ ಮಾಡುತ್ತಿದ್ದಾರೆ” ಎಂಬುದಾಗಿ ಪೋಸ್ಟ್‌ ಮಾಡಿದ್ದಾರೆ.

ಪ್ರಸಕ್ತ ಲೋಕಸಭೆ ಚುನಾವಣೆಯ ಪ್ರತಿಯೊಂದು ಹಂತದ ಮತದಾನದ ವೇಳೆಯೂ ಪಶ್ಚಿಮ ಬಂಗಾಳದಲ್ಲಿ ಭಾರಿ ಹಿಂಸಾಚಾರ ಸಂಭವಿಸಿದೆ. ಮತಗಟ್ಟೆಗಳ ಬಳಿ ಜನ ಶಾಂತಿಯಿಂದ ಮತದಾನ ಮಾಡಲೂ ಆಗದಂತಹ ಪರಿಸ್ಥಿತಿಯೂ ನಿರ್ಮಾಣವಾಗಿದೆ. ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕವೂ ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದ ಹಿಂಸಾಚಾರ ನಡೆದಿತ್ತು. ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಜತೆಗೆ ತನಿಖೆಗೂ ಆದೇಶಿಸಿತ್ತು.

ಇದನ್ನೂ ಓದಿ: Narendra Modi: 10 ವರ್ಷ ಬಲಿಷ್ಠ ಪ್ರತಿಪಕ್ಷ ಇರಲಿಲ್ಲ ಎಂಬುದೇ ನೋವು ತಂದಿದೆ; ಮೋದಿ ಬೇಸರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Actress Nayanathara: ‘ಬಾಹುಬಲಿ’ ಸಿನಿಮಾ ದೃಶ್ಯದ ಮರುಸೃಷ್ಟಿಯಲ್ಲಿ ವಿಘ್ನೇಶ್ ಶಿವನ್ ಪುತ್ರರು!

Actress Nayanathara: ಬಾಹುಬಲಿ…. ಈ ಸಿನಿಮಾದ ಹೆಸರು ಕೇಳುತ್ತಲೇ ಮೈ ನವಿರೇಳುತ್ತದೆ. ಜನಮಾನಸದಲ್ಲಿ ಹಾಸುಹೊಕ್ಕಾಗಿರುವ ಸಿನಿಮಾವಿದು. ದಕ್ಷಿಣ ಭಾರತದ ಹಿಟ್ ಚಲನಚಿತ್ರಗಳಲ್ಲಿ ಒಂದಾದ ಬಾಹುಬಲಿ ಚಿತ್ರ ಜನರ ಮೆಚ್ಚುಗೆಯನ್ನು ಪಡೆದ ಸೂಪರ್ ಹಿಟ್ ಚಿತ್ರವಾಗಿತ್ತು. ಅದರ ಒಂದೊಂದು ದೃಶ್ಯವು ಅಮೋಘವಾಗಿ ಮೂಡಿಬಂದಿತ್ತು. ಈ ಸೂಪರ್ ಹಿಟ್ ಚಿತ್ರದ ದೃಶ್ಯವೊಂದನ್ನು ನಯನತಾರಾ ಹಾಗೂ ವಿಘ್ನೇಶ್ ಪುತ್ರರು ಮರುಸೃಷ್ಟಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೊವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವ ಮೂಲಕ ನಟಿ ನಯನತಾರಾ ವಿಘ್ನೇಶ್ ಶಿವನ್ ಅವರಿಗೆ ತಂದೆಯ ದಿನದ ಶುಭಾಶಯ ತಿಳಿಸಿದ್ದಾರೆ.

VISTARANEWS.COM


on

Actress Nayanathara
Koo

ಬೆಂಗಳೂರು: ಕಾಲಿವುಡ್ ನಟಿ ನಯನತಾರಾ(Actress Nayanathara) ಹಾಗೂ ನಿರ್ಮಾಪಕ ವಿಘ್ನೇಶ್ ದಂಪತಿ ಉಯಿರ್ ಮತ್ತು ಉಲಗ್ ಎಂಬ ಅವಳಿ ಮಕ್ಕಳನ್ನು ಹೊಂದಿರುವ ವಿಚಾರ ಎಲ್ಲರಿಗೂ ತಿಳಿದಿದೆ. ಈ ದಂಪತಿ ಇತ್ತೀಚಿಗೆ ತಮ್ಮ ಮುದ್ದಿನ ಮಕ್ಕಳೊಂದಿಗೆ ಖುಷಿ ಖುಷಿಯಾಗಿ ಸಮಯವನ್ನು ಕಳೆಯುತ್ತಿದ್ದಾರೆ. ಈ ನಡುವೆ ಈ ದಂಪತಿ ಸೂಪರ್ ಹಿಟ್ ಸಿನಿಮಾವೊಂದರ ದೃಶ್ಯವನ್ನು ತಮ್ಮ ಮಕ್ಕಳ ಮೂಲಕ ಮರು ಸೃಷ್ಟಿ ಮಾಡಿದ್ದಾರೆ.

ದಕ್ಷಿಣ ಭಾರತದ ಹಿಟ್ ಚಲನಚಿತ್ರಗಳಲ್ಲಿ ಒಂದಾದ ಬಾಹುಬಲಿ ಚಿತ್ರ ಜನರ ಮೆಚ್ಚುಗೆಯನ್ನು ಪಡೆದ ಸೂಪರ್ ಹಿಟ್ ಚಿತ್ರವಾಗಿತ್ತು. ಅದರ ಒಂದೊಂದು ದೃಶ್ಯವು ಅಮೋಘವಾಗಿ ಮೂಡಿಬಂದಿತ್ತು. ಹಾಗಾಗಿ ಅದು ಹೆಚ್ಚಿನ ಪ್ರೇಕ್ಷಕರನ್ನು ಆಕರ್ಷಿಸಿತ್ತು. ಇಂತಹ ಸೂಪರ್ ಹಿಟ್ ಚಿತ್ರ ದೃಶ್ಯವೊಂದನ್ನು ನಯನತಾರಾ ಹಾಗೂ ವಿಘ್ನೇಶ್ ಪುತ್ರರು ಮರುಸೃಷ್ಟಿ ಮಾಡಿದ್ದಾರೆ.

ಈ ಚಿತ್ರದಲ್ಲಿ ರಮ್ಯಕೃಷ್ಣರವರು ಶಿವಗಾಮಿ ಪಾತ್ರದಲ್ಲಿ ನೀರಿನಲ್ಲಿ ಮುಳುಗುತ್ತಿರುವಾಗ ಬಾಹುಬಲಿಯನ್ನು ಕೈಯಲ್ಲಿ ಎತ್ತಿ ಹಿಡಿದಿರುವ ದೃಶ್ಯ ಇಂದಿಗೂ ಎಲ್ಲರ ಮನದಲ್ಲಿ ನೆಲೆಯೂರಿದೆ. ಅಂತಹ ದೃಶ್ಯವನ್ನು ಇದೀಗ ವಿಘ್ನೇಶ್‌ ಅವರು ಮರುಸೃಷ್ಟಿ ಮಾಡಿದ್ದಾರೆ. ತಮ್ಮ ಮಕ್ಕಳಿಗೆ ಬಾಹುಬಲಿ ಸಾಂಪ್ರದಾಯಿಕ ಉಡುಗೆಯನ್ನು ತೊಡಿಸಿ, ವಿಘ್ನೇಶ್ ಅವರು ನೀರಿನಲ್ಲಿ ಮುಳುಗಿಕೊಂಡು ತಮ್ಮ ಮಕ್ಕಳನ್ನು ಕೈಯಲ್ಲಿ ಎತ್ತಿ ಹಿಡಿದಿದ್ದಾರೆ. ಹಾಗೇ ಇದಕ್ಕೆ ಸಂಬಂಧಿಸಿದ ಫೋಟೊವನ್ನು ನಯನತಾರಾ ಅವರು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡು “My dear Baahubali 1&2 cos of U 2. It’s a Happy Father’s Day. Life with U boys sooo sooo amazingly satisfying. Love you my uyir & ulag @nayanathara(sic)” ಎಂಬ ಶೀರ್ಷಿಕೆ ನೀಡಿದ್ದಾರೆ.

ನಯನತಾರಾ ಈ ಫೋಟೊವನ್ನು ಹಂಚಿಕೊಳ್ಳುವ ಮೂಲಕ ವಿಘ್ನೇಶ್ ಶಿವನ್ ಅವರಿಗೆ ತಂದೆಯ ದಿನದ ಶುಭಾಶಯ ತಿಳಿಸಿದ್ದಾರೆ. ಹಾಗೇ ಮಕ್ಕಳ ಆಗಮನದಿಂದ ಅವರ ಜೀವನ ಎಷ್ಟು ತೃಪ್ತಿಕರವಾಗಿದೆ ಎಂಬುದನ್ನು ವಿವರಿಸಿದ್ದಾರೆ.
ನಯನತಾರಾ ಹಾಗೂ ವಿಘ್ನೇಶ್ ತಮ್ಮ ಅವಳಿ ಗಂಡುಮಕ್ಕಳಾದ ಉಯಿರ್ ಮತ್ತು ಉಲಗ್ ಅವರನ್ನು ಅಕ್ಟೋಬರ್ 2022ರಲ್ಲಿ ಬಾಡಿಗೆ ತಾಯ್ತನದ ಮೂಲಕ ಸ್ವಾಗತಿಸಿದರು. ಅಂದಿನಿಂದ ಅವರು ತಮ್ಮ ಮುದ್ದಾದ ಮಕ್ಕಳೊಂದಿಗಿನ ಫೋಟೊಗಳು ಮತ್ತು ವಿಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚಿಗೆ ಅವರು ತಮ್ಮ ಮಕ್ಕಳೊಂದಿಗೆ ಮೋಜು ಮಸ್ತಿ ಮಾಡಲು ಹಾಂಗ್‌ಕಾಂಗ್‌ಗೆ ಹೋಗಿದ್ದರು.

ಇದನ್ನೂ ಓದಿ: Viral Video: ನಾಯಿ ಜತೆ ವಾಕಿಂಗ್ ನೋಡಿರುತ್ತೀರಿ, ಹುಲಿ ಜತೆ? ಈ ವಿಡಿಯೊ ನೋಡಿ!

ಪ್ರಸ್ತುತ ನಯನತಾರಾ ಅವರು ನಿವಿನ್ ಪೌಲಿ ಅವರೊಂದಿಗೆ ‘ಡಿಯರ್ ಸ್ಟೂಡೆಂಟ್ಸ್’ ಚಿತ್ರದ ಚಿತ್ರೀಕರಣದಲ್ಲಿದ್ದಾರೆ. ಹಾಗೇ ಟೆಸ್ಟ್’ ಮತ್ತು ‘ಮನ್ನಂಗಟ್ಟಿ 1960’ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ನಿರ್ಮಾಪಕ, ನಿರ್ದೇಶಕ ವಿಘ್ನೇಶ್ ಅವರು ಪ್ರದೀಪ್ ರಂಗನಾಥನ್, ಕೃತಿ ಶೆಟ್ಟಿ ಮತ್ತು ಎಸ್.ಜೆ ಸೂರ್ಯ ಅಭಿನಯದ ‘ಲವ್ ಇನ್ಶೂರೆನ್ಸ್ ಕಾರ್ಪೊರೇಷನ್’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.

Continue Reading

ದೇಶ

Train Accident: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್​ ರೈಲು ಡಿಕ್ಕಿ; 5 ಮಂದಿ ಸಾವು

Train Accident: ಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೋಮವಾರ ಕಾಂಚನಜುಂಗಾ ಎಕ್ಸ್​ಪ್ರೆಸ್​ ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.

VISTARANEWS.COM


on

Train Accident
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೋಮವಾರ ಕಾಂಚನಜುಂಗಾ ಎಕ್ಸ್​ಪ್ರೆಸ್​ (Kanchanjunga Express) ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ (Train Accident).

ʼʼಅಪಘಾತದಲ್ಲಿ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 20-25 ಮಂದಿಗೆ ಗಂಭೀರ ಗಾಯವಾಗಿವೆ. ಪರಿಸ್ಥಿತಿ ಗಂಭೀರವಾಗಿದೆ. ಗೂಡ್ಸ್ ರೈಲು ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ” ಎಂದು ಡಾರ್ಜಿಲಿಂಗ್ ಎಸ್‌ಪಿ ಅಭಿಷೇಕ್ ರಾಯ್ ಮಾಹಿತಿ ನೀಡಿದ್ದಾರೆ. ಗಾಯಗೊಂಡಿರುವವರನ್ನು ನ್ಯೂ ಜಲ್‌ಪೈಗುರಿ ಜಂಕ್ಷನ್‌ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗರ್ತಲಾದಿಂದ ಸೀಲ್ದಾಹ್‌ಗೆ ಪ್ರಯಾಣಿಸುತ್ತಿದ್ದ 13174 ಸಂಖ್ಯೆಯ ಕಾಂಚನಜುಂಗಾ ಎಕ್ಸ್‌ಪ್ರೆಸ್ ರಂಗಪಾಣಿ ಮತ್ತು ಚಥರ್‌ಹತ್ ನಿಲ್ದಾಣದ ಮಧ್ಯೆ ಅಪಘಾತಕ್ಕೀಡಾಗಿ ಹಳಿ ತಪ್ಪಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ʼʼಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ದುರಂತ ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಯಿತು. ಕಾಂಚನಜುಂಗಾ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ವೈದ್ಯಕೀಯ ನೆರವಿಗಾಗಿ ಡಿಎಂ, ಎಸ್ಪಿ, ವೈದ್ಯರು, ಆಂಬ್ಯುಲೆನ್ಸ್‌ಗಳು ಮತ್ತು ವಿಪತ್ತು ತಂಡಗಳು ಸ್ಥಳಕ್ಕೆ ಧಾವಿಸಿವೆʼʼ ಎಂದು ತಿಳಿಸಿದ್ದಾರೆ.

ಡಿಕ್ಕಿ ಹಿಡೆದ ರಭಸಕ್ಕೆ ಕಾಂಚನಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿ ತಪ್ಪಿವೆ ಎಂದು ತಿಳಿದುಬಂದಿದೆ. ಕಾಂಚನಜುಂಗಾ ಎಕ್ಸ್‌ಪ್ರೆಸ್‌ ಬಂಗಾಳವನ್ನು ಈಶಾನ್ಯ ನಗರಗಳಾದ ಸಿಲ್ಚಾರ್ ಮತ್ತು ಅಗರ್ತಲಾದೊಂದಿಗೆ ಸಂಪರ್ಕಿಸುತ್ತದೆ. ಈ ಮಾರ್ಗವು ಚಿಕನ್ಸ್ ನೆಕ್ ಕಾರಿಡಾರ್‌ನಲ್ಲಿದೆ. ಈ ಮಾರ್ಗದಲ್ಲಿನ ಅಪಘಾತವು ಹಲವು ರೈಲುಗಳ ಸಂಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಸಹಾಯವಾಣಿ

ರೈಲ್ವೆ ಇಲಾಖೆ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. 033-23508794 ಮತ್ತು 033-23833326 (ಸೀಲ್ಡಾ) ಹಾಗೂ 03612731621, 03612731622 ಮತ್ತು 03612731623 (ಗುವಾಹಟಿ) ಸಂಖ್ಯೆಯನ್ನು ಸಂಪರ್ಕಿಸಬಹುದು.

ರಕ್ಷಣಾ ಕಾರ್ಯಾಚರಣೆಗಳು ಸಮರೋಪಾದಿಯಲ್ಲಿ ಪ್ರಾರಂಭವಾಗಿವೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಎಕ್ಸ್ ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. “ಎನ್ಎಫ್ಆರ್ ವಲಯದಲ್ಲಿ ಅಪಘಾತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ಸಮರೋಪಾದಿಯಲ್ಲಿ ನಡೆಯುತ್ತಿದೆ. ರೈಲ್ವೆ, ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ಕಾರ್ಯನಿರ್ವಹಿಸುತ್ತಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ” ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷ ಜೂನ್‌ನಲ್ಲಿ ಒಡಿಶಾದಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ 238ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಒಡಿಶಾದ ಬಾಲಾಸೋರ್‌ ಜಿಲ್ಲೆಯಲ್ಲಿ ಶಾಲಿಮಾರ್-ಚೆನ್ನೈ ಕೋರಮಂಡಲ ಎಕ್ಸ್‌ಪ್ರೆಸ್‌ ರೈಲು, ಬೆಂಗಳೂರು-ಹೌರಾ ರೈಲು ಹಾಗೂ ಗೂಡ್ಸ್‌ ರೈಲು ಡಿಕ್ಕಿಯಾಗಿದ್ದು ಈ ಅಪಘಾತ ಸಂಭವಿಸಿತ್ತು. ಈ ದುರಂತದಲ್ಲಿ 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಅದೇ ವರ್ಷ ಅಕ್ಟೋಬರ್‌ನಲ್ಲಿ ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ಸಂಭವಿಸಿದ ಎರಡು ರೈಲುಗಳ ಡಿಕ್ಕಿಯಲ್ಲಿ 13 ಮಂದಿ ಅಸುನೀಗಿದ್ದರು. ಆ ಆಘಾತಗಳು ಮರೆಯುವ ಮುನ್ನ ಮತ್ತೊಂದು ದೊಡ್ಡ ದುರಂತ ನಡೆದಿದೆ.

ಇದನ್ನೂ ಓದಿ: Andhra train accident: 13 ಜನರ ಬಲಿ ಪಡೆದ ಆಂಧ್ರ ರೈಲು ಅಪಘಾತದ‌ ಮೂಲ ಕಾರಣ ಬಹಿರಂಗ

Continue Reading

ದೇಶ

Maoists Killed: ಭದ್ರತಾ ಪಡೆಗಳ ಕಾರ್ಯಾಚರಣೆ; ಮತ್ತೆ 4 ಮಾವೋವಾದಿಗಳ ಹತ್ಯೆ

Maoists Killed: ಭದ್ರತಾ ಪಡೆ ಸೋಮವಾರ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ 4 ಮಾವೋವಾದಿಗಳನ್ನು ಹೊಡೆದುರುಳಿಸಿದೆ. ಹತ್ಯೆಗೀಡಾದವರ ಪೈಕಿ ಓರ್ವ ಮಹಿಳಾ ಮಾವೋವಾದಿಯೂ ಇದ್ದಾಳೆ ಎಂದು ಮೂಲಗಳು ತಿಳಿಸಿವೆ. ಛತ್ತೀಸ್‌ಗಢದ ಅಬುಜ್ಮಾರ್ಹ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ಜೂನ್‌ 15ರಂದು ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 8 ಮಾವೋವಾದಿಗಳು ಸಾವನ್ನಪ್ಪಿದ್ದರು. ಅದಾಗಿ ಎರಡನೇ ದಿನಗಳಲ್ಲಿ ಈ ಬೆಳವಣಿಗೆ ಕಂಡು ಬಂದಿದೆ.

VISTARANEWS.COM


on

Maoists Killed
Koo

ರಾಂಚಿ: ಭದ್ರತಾ ಪಡೆ ಸೋಮವಾರ (ಜೂನ್‌ 17) ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ 4 ಮಾವೋವಾದಿಗಳನ್ನು ಹೊಡೆದುರುಳಿಸಿದೆ. ಹತ್ಯೆಗೀಡಾದವರ ಪೈಕಿ ಓರ್ವ ಮಹಿಳಾ ಮಾವೋವಾದಿಯೂ ಇದ್ದಾಳೆ ಎಂದು ಮೂಲಗಳು ತಿಳಿಸಿವೆ (Maoists Killed).

ಪೊಲೀಸರು ಹಾಗೂ ಭದ್ರತಾ ಪಡೆ ಈ ಜಂಟಿ ಕಾರ್ಯಾಚರಣೆ ಕೈಗೊಂಡಿದೆ. ಹತರಾದ ಮಾವೋವಾದಿಗಳಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜತೆಗೆ ಇಬ್ಬರನ್ನು ಬಂಧಿಸಲಾಗಿದೆ.

ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಶೇಖರ್ ಅವರು ಈ ಬಗ್ಗೆ ಮಾಹಿತಿ ನೀಡಿ, “ಗುವಾ ಮತ್ತು ಜೆಟೆಯಾ ಪಿಎಸ್ ಪ್ರದೇಶಗಳ ಗಡಿಯಲ್ಲಿರುವ ಸರಂದಾ ಅರಣ್ಯಗಳಲ್ಲಿ ಸೋಮವಾರ ಬೆಳಿಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ನಮ್ಮ ಜಂಟಿ ಪಡೆಗಳು ಮಾವೋವಾದಿ ವಲಯ ಕಮಾಂಡರ್, ಉಪ-ವಲಯ ಕಮಾಂಡರ್, ಪ್ರದೇಶ ಕಮಾಂಡರ್ ಮತ್ತು ಮಹಿಳಾ ಮಾವೋವಾದಿ ಸೇರಿದಂತೆ ನಾಲ್ವರು ಮಾವೋವಾದಿಗಳನ್ನು ಹೊಡೆದುರುಳಿಸಿವೆ. ಕಾರ್ಯಾಚರಣೆ ಮುಂದುವರಿದಿದೆ” ಎಂದು ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ಮತ್ತು ಅರೆಸೈನಿಕ ಪಡೆಗಳ ಜಂಟಿ ತಂಡವು ಸೋಮವಾರ ಮುಂಜಾನೆ ಸರಂದಾ ಮೀಸಲು ಅರಣ್ಯದೊಳಗಿನ ಲುಕುಂಗ್ ರೈಕೆಲಾ ಕಾಡುಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿತ್ತು. ದಟ್ಟವಾದ ಅರಣ್ಯ ಪ್ರದೇಶದಲ್ಲಿ ಅಡಗಿದ್ದ ಮಾವೋವಾದಿಗಳು ಇದ್ದಕ್ಕಿದ್ದಂತೆ ದಾಳಿ ನಡೆಸಿದ್ದರು. ಈ ವೇಳೆ ಎನ್‌ಕೌಂಟರ್‌ ಆರಂಭವಾಗಿತ್ತು.

8 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಅಬುಜ್ಮಾರ್ಹ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ಜೂನ್‌ 15ರಂದು ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 8 ಮಾವೋವಾದಿಗಳು ಸಾವನ್ನಪ್ಪಿದ್ದರು. ಈ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದರು. ಕಳೆದ ಕೆಲವು ದಿನಗಳಿಂದ ಅಬುಜ್ಮಾರ್ಹ್‌ ಒಳಗೊಂಡ ನಾರಾಯಣಪುರ ಜಿಲ್ಲೆಯಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಅಬುಜ್ಮಾರ್ಹ್ ಒಂದು ಗುಡ್ಡಗಾಡು ಅರಣ್ಯ ಪ್ರದೇಶವಾಗಿದ್ದು, ಇದು ನಾರಾಯಣಪುರ, ಬಿಜಾಪುರ ಮತ್ತು ದಾಂತೇವಾಡ ಜಿಲ್ಲೆಗಳ ಮಧ್ಯದಲ್ಲಿದೆ. ಇದು 4,000 ಚದರ ಕಿಲೋಮೀಟರ್ ಪ್ರದೇಶದಲ್ಲಿ ಹರಡಿದ್ದು ಮಾವೋವಾದಿಗಳ ಅಡುಗುತಾಣವಾಗಿ ಬದಲಾಗಿದೆ. ಜನ ಸಂಚಾರ ಕಡಿಮೆ ಇರುವ, ಭೌಗೋಳಿಕವಾಗಿ ಪ್ರತ್ಯೇಕವಾಗಿರುವ ಈ ಪ್ರದೇಶವನ್ನು ಮಾವೋವಾದಿಗಳ ಚಟುವಟಿಕೆಗಳ ಕೇಂದ್ರವೆಂದು ಪರಿಗಣಿಸಲಾಗಿದೆ.

ನಾರಾಯಣಪುರ, ಕಂಕರ್, ದಾಂತೇವಾಡ ಮತ್ತು ಕೊಂಡಗಾಂವ್ ಜಿಲ್ಲೆಗಳ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಅಬುಜ್ಮಾರ್ಹ್ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿತ್ತು. ಈ ನಾಲ್ಕು ಜಿಲ್ಲೆಗಳ ಜಿಲ್ಲಾ ರಿಸರ್ವ್ ಗಾರ್ಡ್ (DRG), ವಿಶೇಷ ಕಾರ್ಯಪಡೆ (STF) ಮತ್ತು ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP)ನ 53ನೇ ಬೆಟಾಲಿಯನ್ ಸಿಬ್ಬಂದಿಯನ್ನು ಒಳಗೊಂಡ ತಂಡ ಜೂನ್ 12ರಂದೇ ಇಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಮಾವೋವಾದಿಗಳು ದಾಳಿ ನಡೆಸಿದಾಗ ಗುಂಡಿನ ಚಕಮಕಿ ಆರಂಭವಾಗಿತ್ತು.

ಇದನ್ನೂ ಓದಿ: Encounter In Kanker: ಭದ್ರತಾ ಪಡೆಗಳೊಂದಿಗೆ ಎನ್‌ಕೌಂಟರ್‌; ಓರ್ವ ನಕ್ಸಲ್‌ ಸಾವು

ಏಪ್ರಿಲ್‌ನಲ್ಲಿ ಭದ್ರತಾ ಪಡೆಯ ಸಿಬ್ಬಂದಿ 29 ಮಾವೋವಾದಿಗಳನ್ನು ಹತ್ಯೆ ಮಾಡಿದ್ದರು. ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಈ ಎನ್‌ಕೌಂಟರ್‌ ನಡೆದಿತ್ತು. ಗುಪ್ತಚರದ ಖಚಿತ ಮಾಹಿತಿಯ ಮೇರೆಗೆ ಬಿಎಸ್ಎಫ್ (BSF) ಮತ್ತು ಜಿಲ್ಲಾ ರಿಸರ್ವ್ ಗಾರ್ಡ್ (DRG) ಕಂಕರ್‌ನ ಚೋಟೆಬೆಟಿಯಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಬಿನಗುಂಡ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಮಾವೋವಾದಿಗಳನ್ನು ಕೊಂದಿದ್ದರು.

Continue Reading

ಪ್ರಮುಖ ಸುದ್ದಿ

Petrol Diesel Price: ಪೆಟ್ರೋಲ್‌ ಬೆಲೆ ಏರಿಕೆ ವಿರೋಧಿಸಿ ಇಂದು ಬಿಜೆಪಿ ಮಿಂಚಿನ ಪ್ರತಿಭಟನೆ

Petrol Diesel Price: ಲೋಕಸಭಾ ಚುನಾವಣೆ (Lok Sabha Election results) ಫಲಿತಾಂಶದ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಜನಾಕ್ರೋಶಕ್ಕೆ ಕಾರಣವಾಗಿದೆ. ಪ್ರತಿಪಕ್ಷಗಳ ನಾಯಕರು ಹಾಗೂ ಜನಸಾಮಾನ್ಯರು ಕೂಡ ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಖಂಡಿಸಿದ್ದಾರೆ.

VISTARANEWS.COM


on

petrol diesel price hike
Koo

ಬೆಂಗಳೂರು: ಇದ್ದಕ್ಕಿದ್ದಂತೆ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಗಳನ್ನು (petrol diesel price hike) ಏರಿಸಿರುವ ರಾಜ್ಯ ಸರಕಾರದ (Karnataka Govt) ಕ್ರಮವನ್ನು ವಿರೋಧಿಸಿ ಪ್ರತಿಪಕ್ಷ ಬಿಜೆಪಿ (BJP) ಇಂದು ರಾಜ್ಯಾದ್ಯಂತ ಮಿಂಚಿನ ಪ್ರತಿಭಟನೆಗೆ (protest) ಮುಂದಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ (Freedom park) ಹಾಗೂ ರಾಜ್ಯದ ನಾನಾ ಕಡೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗಳು ನಡೆಯಲಿವೆ.

ಲೋಕಸಭಾ ಚುನಾವಣೆ (Lok Sabha Election results) ಫಲಿತಾಂಶದ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಜನಾಕ್ರೋಶಕ್ಕೆ ಕಾರಣವಾಗಿದೆ. ಪ್ರತಿಪಕ್ಷಗಳ ನಾಯಕರು ಹಾಗೂ ಜನಸಾಮಾನ್ಯರು ಕೂಡ ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಖಂಡಿಸಿದ್ದಾರೆ. ದರ ಏರಿಕೆ ವಿರೋಧಿಸಿ ಇಂದು ಪ್ರತಿಭಟನೆಗೆ ಕರೆ ನೀಡಿರುವ ಬಿಜೆಪಿ, ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra), ವಿಪಕ್ಷ ನಾಯಕ ಆರ್. ಅಶೋಕ್ (R Ashok) ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

ಬೆಳಗ್ಗೆ 11.30ಕ್ಕೆ ಪ್ರತಿಭಟನೆ ಆರಂಭವಾಗಲಿದೆ. ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲು ಪ್ರತಿಪಕ್ಷ ನಿರ್ಧರಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿರುವ ಪರಿಣಾಮ ಎತ್ತಿನ ಗಾಡಿಯೇ ಗತಿಯಾಗಿದೆ ಎಂದು ಸೂಚಿಸಲು ಎತ್ತಿನಗಾಡಿ, ಸೈಕಲ್ ಮೂಲಕ ಪ್ರಯಾಣ ಮಾಡಿ ಸರ್ಕಾರದ ನೀತಿಯನ್ನು ಖಂಡಿಸಲಿದ್ದಾರೆ. ಬಳಿಕ ಸಿಎಂ ಮನೆಗೆ ಮುತ್ತಿಗೆ ಹಾಕಲು ಬಿಜೆಪಿ ನಿರ್ಧರಿಸಿದೆ.

ಹೆಚ್ಚಿಸಿರುವ ಅಷ್ಟೂ ದರವನ್ನು ಇಳಿಸುವಂತೆ ಬಿಜೆಪಿ ಆಗ್ರಹಿಸಿದ್ದು, ದರ ಇಳಿಸುವವರೆಗೂ ಹಂತಹಂತವಾಗಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಪ್ರತಿಭಟನೆಗೆ ವಿವಿಧ ಸಂಘಟನೆಗಳ ಬೆಂಬಲವನ್ನೂ ಕೋರಿದೆ.

ರಾಜ್ಯದ ಜನರಿಗೆ ಬರೆ: ವಿಜಯೇಂದ್ರ

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಗ್ಯಾರಂಟಿ ಬಗ್ಗೆ ಸಾಕಷ್ಟು ಪ್ರಚಾರ ತೆಗೆದುಕೊಂಡಿದೆ. ಗ್ಯಾರಂಟಿ ಬಗ್ಗೆ ಸಾಧನೆ ಅಂತ ಬಿಂಬಿಸಿಕೊಂಡಿದೆ. ಮತ್ತೊಂದು ಕಡೆ ರಾಜ್ಯದ ಜನರಿಗೆ ಬರೆ ಎಳೆಯುತ್ತಿದೆ. ಸ್ಟ್ಯಾಂಪ್ ಡ್ಯೂಟಿ ಜಾಸ್ತಿ ಮಾಡಿದೆ. ಲೋಕಸಭಾ ಚುನಾವಣೆ ಬಳಿಕ ಪೆಟ್ರೋಲ್, ಡೀಸೆಲ್ ತೆರಿಗೆ ಹೆಚ್ಚಿಸಿದೆ. ಸರ್ಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ತಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ದೂರಿದ್ದಾರೆ.

“ಬರಗಾಲದಲ್ಲಿ ರಾಜ್ಯ ಸರ್ಕಾರದ ಈ ಕೆಟ್ಟ ನಡವಳಿಕೆಯನ್ನು ಬಿಜೆಪಿ ಗಂಭೀರವಾಗಿ ತೆಗೆದುಕೊಂಡಿದ್ದು, ಬರುವ ಶುಕ್ರವಾರ ಕೂಡ ಮತ್ತೊಂದು ಹೋರಾಟ ರೂಪಿಸುತ್ತೇವೆ. ನಾವು ಸುಮ್ಮನೆ ಕೂರುವುದಿಲ್ಲ. ನೆರೆಯ ರಾಜ್ಯದಲ್ಲಿ ನಮಗಿಂತ ದರ ಹೆಚ್ಚಿದೆ ಎಂದು ಸಿಎಂ ಹೇಳಿದ್ದಾರೆ. ಕೂಡಲೇ ಆದೇಶವನ್ನು ಕೈಬಿಟ್ಟು ಹಿಂದೆ ಸರಿಯಬೇಕು ಎಂದು ನಾನು ಆಗ್ರಹಿಸುತ್ತೇನೆ” ಎಂದಿದ್ದಾರೆ.

“ರಾಜ್ಯದ ಮುಗ್ಧ ಮತದಾರರು ಚುನಾವಣೆ ಸಂಧರ್ಭದಲ್ಲಿ ಮತ ಕೊಟ್ಟು ಅಧಿಕಾರಕ್ಕೆ ತಂದಿದ್ದಾರೆ. ಇಂದು ಅದೇ ಜನ ಸಿಎಂಗೆ ಶಾಪ‌ ಹಾಕ್ತಿದ್ದಾರೆ. ವಿಪಕ್ಷದಲ್ಲಿ ಇದ್ದಾಗ ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಹಾರಾಡುತ್ತಿದ್ದರು. ಇಂದು ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹಾಳಾಗಿದೆ. ರೈತರ ಮೇಲೆ ಹೊರೆಯಾಗುತ್ತಿದೆ. ತೈಲ ದರ ಏರಿಕೆಯಿಂದ ಟ್ಯಾಕ್ಸಿ, ಬಸ್ ಆಪರೇಟರ್, ಎಲ್ಲಾ ವಸ್ತುಗಳ ಬೆಲೆ ಗಗನಕ್ಕೆ ಏರುತ್ತಿದೆ. ಸಿಎಂ‌ ಕೂಡಲೇ ದರ ಹಿಂಪಡೆಯಬೇಕು. ಅಲ್ಲಿಯವರೆಗೂ ಹೋರಾಟ ಮಾಡುತ್ತೇವೆ” ಎಂದು ವಿಜಯೇಂದ್ರ ಹೇಳಿದ್ದಾರೆ.

ಇಂದು ಮಧ್ಯಾಹ್ನ ಸಿಎಂ ಪತ್ರಿಕಾಗೋಷ್ಠಿ

ಇಂದು ಮಧ್ಯಾಹ್ನ 12.30 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಪತ್ರಿಕಾಗೋಷ್ಠಿ ಕರೆದಿದ್ದಾರೆ. ಪೆಟ್ರೋಲ್- ಡಿಸೇಲ್ ದರ ಹೆಚ್ಚಳ ಕುರಿತು ಸಿಎಂ ಮಾತನಾಡಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ. ದರ ಹೆಚ್ಚಳ ಕುರಿತು ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ವಿವರಣೆ ನೀಡಲಿದ್ದಾರೆ. ಪ್ರತಿಪಕ್ಷ ಬಿಜೆಪಿ ದರ ಹೆಚ್ಚಳದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ, ದರ ಹೆಚ್ಚಳದ ಅನಿವಾರ್ಯತೆ ಹಾಗೂ ಅಂಕಿ ಅಂಶಗಳನ್ನು ಸಿಎಂ ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Petrol Diesel Price: ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದ ಸಿಎಂ

Continue Reading
Advertisement
Actress Nayanathara
Latest9 mins ago

Actress Nayanathara: ‘ಬಾಹುಬಲಿ’ ಸಿನಿಮಾ ದೃಶ್ಯದ ಮರುಸೃಷ್ಟಿಯಲ್ಲಿ ವಿಘ್ನೇಶ್ ಶಿವನ್ ಪುತ್ರರು!

Actor Darshan Rakshak Bullet Not Celebrating His Birthday Due To Darshan Arrest
ಸ್ಯಾಂಡಲ್ ವುಡ್13 mins ago

Actor Darshan: ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿದ್ದಾರೆ; ಬರ್ತ್‌ಡೇ ಕ್ಯಾನ್ಸಲ್ ಮಾಡಿದ ರಕ್ಷಕ್ ಬುಲೆಟ್!

pattanagere shed darshan renuka swamy murder
ಕ್ರೈಂ20 mins ago

Renuka Swamy Murder: ಸಿಸಿಟಿವಿ ದಾಖಲೆ ಸಂಪೂರ್ಣ ನಾಶ ಮಾಡಿದ ಪಾತಕಿಗಳು! ಆ ಭಯಾನಕ ಶೆಡ್‌ನಲ್ಲಿದೆ ಇನ್ನಷ್ಟು ರಹಸ್ಯ!

murder Case in chikkodi
ಬೆಳಗಾವಿ30 mins ago

Murder Case : ನಡುರಸ್ತೆಯಲ್ಲಿ ಚಿಮ್ಮಿದ ರಕ್ತ; ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಕೊಲೆ

Train Accident
ದೇಶ40 mins ago

Train Accident: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್​ ರೈಲು ಡಿಕ್ಕಿ; 5 ಮಂದಿ ಸಾವು

Actor Darshan old interview goes viral Explain About Murder And His Mindset
ಸ್ಯಾಂಡಲ್ ವುಡ್42 mins ago

Actor Darshan: ಕೊಲೆಯನ್ನು ಆತುರದಲ್ಲಿ ಮಾಡಿರ್ತಾನೆ ಬಳಿಕ ಕೊರಗುತ್ತಾನೆ; ದರ್ಶನ್ ಹಳೆಯ ಸಂದರ್ಶನ ವೈರಲ್‌!

Paris Olympics 2024
ಕ್ರೀಡೆ42 mins ago

Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಗೀತ ಗೋವಿಂದಂ ಚಿತ್ರದ ಹಾಡು; ಹರ್ಷ ವ್ಯಕ್ತಪಡಿಸಿದ ರಶ್ಮಿಕಾ-ದೇವರಕೊಂಡ

Actor Darshan case real star upendra react about case
ಸ್ಯಾಂಡಲ್ ವುಡ್48 mins ago

Actor Darshan: ದರ್ಶನ್ & ಗ್ಯಾಂಗ್ ಪೊಲೀಸ್ ವಿಚಾರಣೆ ಲೈವ್ ಸ್ಟ್ರೀಮಿಂಗ್ ಆಗಬೇಕು ಎಂದ ಉಪೇಂದ್ರ!

water Price hike in bwssb
ಬೆಂಗಳೂರು53 mins ago

Water Price Hike : ತೈಲ ದರ ಬಳಿಕ ಕುಡಿಯುವ ನೀರು ದುಬಾರಿ! ನೀರಿನ ದರ ಏರಿಕೆಗೆ ಜಲಮಂಡಳಿ ಪ್ರಸ್ತಾವನೆ!

Maoists Killed
ದೇಶ1 hour ago

Maoists Killed: ಭದ್ರತಾ ಪಡೆಗಳ ಕಾರ್ಯಾಚರಣೆ; ಮತ್ತೆ 4 ಮಾವೋವಾದಿಗಳ ಹತ್ಯೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ18 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ19 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ24 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌