Rohit Sharma : ನರೇಂದ್ರ ಮೋದಿ ರೋಹಿತ್​ ಶರ್ಮಾಗೆ ಗುಟ್ಟಾಗಿ ಹೇಳಿದ್ದೇನು? ಹೆಚ್ಚಿದ ಕುತೂಹಲ - Vistara News

ಪ್ರಮುಖ ಸುದ್ದಿ

Rohit Sharma : ನರೇಂದ್ರ ಮೋದಿ ರೋಹಿತ್​ ಶರ್ಮಾಗೆ ಗುಟ್ಟಾಗಿ ಹೇಳಿದ್ದೇನು? ಹೆಚ್ಚಿದ ಕುತೂಹಲ

VISTARANEWS.COM


on

Rohit Sharma
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ : ಟಿ20 ವಿಶ್ವಕಪ್ (T20 World Cup) ವಿಜೇತ ರೋಹಿತ್ ಶರ್ಮಾ ನೇತೃತ್ವದ (Rohit Sharma) ಭಾರತೀಯ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ದೆಹಲಿಯ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಭೇಟಿಯಾಗಿ ಕರೆಸಿ ಆತಿಥ್ಯ ಕೊಟ್ಟರು. 2024ರ ಟಿ 20 ವಿಶ್ವಕಪ್ ನ ಅಂತಿಮ ಪಂದ್ಯದಲ್ಲಿ ಗೆಲುವು ಸಾಧಿಸಿದ ನಂತರ ನರೇಂದ್ರ ಮೋದಿ ಅವರು ಭಾರತೀಯ ನಾಯಕ ರೋಹಿತ್ ಶರ್ಮಾ ಅವರಿಗೆ ಕರೆ ಮಾಡಿದ ನಿವಾಸಕ್ಕೆ ಆಹ್ವಾನಿಸಿದ್ದರು. ಅಂತೆಯೇ ತಂಡಕ್ಕೆ ಆತಿಥ್ಯ ಕೊಟ್ಟ ಅವರು ರೋಹಿತ್​ ಜತೆ ಗುಟ್ಟಾಗಿ ಮಾತನಾಡಿದರು. ಅವರಿಬ್ಬರು ಏನು ಮಾತನಾಡಿದರು ಎಂಬುದು ಆ ಕ್ಷಣದಲ್ಲಿ ಗೊತ್ತಾಗಲಿಲ್ಲ. ಹೀಗಾಗಿ ಕೌತುಕ ಹೆಚ್ಚಾಯಿತು.

ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆದ ಟೂರ್ನಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದು ಭಾರತ ತಂಡಕ್ಕೆ ಎರಡನೇ ಟಿ20 ವಿಶ್ವ ಕಪ್​. ಜೂನ್ 29ರಂದು ಬಾರ್ಬಡೋಡ್​ನಲ್ಲಿ ನಡೆದ ಫೈನಲ್​​ನಲ್ಲಿ ಮೆನ್ ಇನ್ ಬ್ಲೂ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳಿಂದ ಸೋಲಿಸಿತು.

ಬಾರ್ಬಡೋಸ್​ನಲ್ಲಿ ರೋಹಿತ್ ಶರ್ಮಾ 2024 ರ ಟಿ 20 ವಿಶ್ವಕಪ್ ಗೆಲುವನ್ನು ಪಿಚ್ ಮಣ್ಣಿನ ತುಂಡನ್ನು ತಿನ್ನುವ ಮೂಲಕ ಆಚರಿಸಿದರು. ಪ್ರತಿ ಗೆಲುವಿನ ನಂತರ ವಿಂಬಲ್ಡನ್​ ಅಂಗಣದ ಹುಲ್ಲು ತಿನ್ನುವ ಟೆನಿಸ್ ತಾರೆ ನೊವಾಕ್ ಜೊಕೊವಿಕ್ ಅವರ ಸಂಪ್ರದಾಯವನ್ನು ಭಾರತೀಯ ನಾಯಕ ಅನುಕರಿಸಿದರು. ರೋಚಕ ಮುಖಾಮುಖಿಯಲ್ಲಿ ಗೆಲುವಿನೊಂದಿಗೆ ಭಾರತ ಕ್ರಿಕೆಟ್ ತಂಡವು 11 ವರ್ಷಗಳ ಐಸಿಸಿ ಪ್ರಶಸ್ತಿ ಬರ ಕೊನೆಗೊಂಡಿತು.

ಮಣ್ಣಿನ ರುಚಿ ಹೇಗಿದೆ ಎಂದು ಪ್ರಶ್ನಿಸಿದ ನರೇಂದ್ರ ಮೋದಿ

ಬೆರಿಲ್ ಚಂಡಮಾರುತದಿಂದಾಗಿ ಭಾರತ ತಂಡ ಬಾರ್ಬಡೋಸ್​ನಿಂದ ನಿರ್ಗಮನ ತಡವಾಯಿತು. ಟಿ 20 ವಿಶ್ವಕಪ್ ಗೆಲುವಿನ ಐದು ದಿನಗಳ ನಂತರ ಭಾರತೀಯ ಕ್ರಿಕೆಟ್ ತಂಡ ಭಾರತಕ್ಕೆ ಮರಳಿತು. ವಿಶೇಷವಾಗಿ ವ್ಯವಸ್ಥೆ ಮಾಡಿದ ಚಾರ್ಟರ್ ವಿಮಾನದ ಮೂಲಕ ದೆಹಲಿಗೆ ಬಂದಿಳಿದರು. ಗುರುವಾರ ಮುಂಜಾನೆ ಆಗಮಿಸಿದ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಈ ವೇಳೆ ಮೋದಿ ಅವರ ಬಲಭಾಗದಲ್ಲಿ ರೋಹಿತ್ ಶರ್ಮಾ, ಎಡಭಾಗದಲ್ಲಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕುಳಿತಿದ್ದರು. ಭಾರತೀಯ ಕ್ರಿಕೆಟಿಗರು ಮತ್ತು ಕೋಚಿಂಗ್ ಸಿಬ್ಬಂದಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಜರ್ಸಿಗಳನ್ನು ಮುಂಭಾಗದಲ್ಲಿ ದಪ್ಪ ಅಕ್ಷರಗಳಲ್ಲಿ ಧರಿಸಿದ್ದರು, ಬಿಸಿಸಿಐ ಲಾಂಛನದ ಮೇಲಿನ ಜರ್ಸಿಯ ಮೇಲೆ ಎರಡು ಸ್ಟಾರ್​​ಗಳಿದ್ದವು.

ಇದನ್ನೂ ಓದಿ: Narendra Modi : ಟ್ರೋಫಿಯನ್ನು ಕೈಯಲ್ಲಿ ಮುಟ್ಟದ ಪ್ರಧಾನಿ ಮೋದಿ, ಕಾರಣವೇನು?

ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ನರೇಂದ್ರ ಮೋದಿ ಅವರು ಭಾರತೀಯ ಕ್ರಿಕೆಟ್ ತಂಡದ ಗೆಲುವಿನ ಬಗ್ಗೆ ಸಂತೋಷ ವ್ಯಕ್ತಪಡಿಸಿದರು. ನಿರ್ಣಾಯಕ ಕ್ಷಣಗಳಲ್ಲಿ ತಂಡದ ಸಂವೇದನೆಯನ್ನು ಶ್ಲಾಘಿಸಿದರು. ಈ ವೇಳೆ ಅವರು ರೋಹಿತ್ ಬಳಿ ಗುಟ್ಟಾಗಿ, ಗೆದ್ದ ಮೇಲೆ ಪಿಚ್​ನ ಮಣ್ಣು ತಿಂದಿದ್ದೀರಲ್ವಾ ಅದರ ರುಚಿಯೇನು ಎಂದು ಕೇಳಿದರು ಎಂಬುದು ಗೊತ್ತಾಯಿತು.

ವಿರಾಟ್ ಕೊಹ್ಲಿ ಮತ್ತು ಮೋದಿ ಅವರು ಪ್ರಧಾನಿಯೊಂದಿಗಿನ ಭಾರತೀಯ ತಂಡದ ಭೇಟಿಯ ಬಗ್ಗೆ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ. ನರೇಂದ್ರ ಮೋದಿಯವರನ್ನು ಅವರ ನಿವಾಸದಲ್ಲಿ ಭೇಟಿಯಾಗುವ ಆಹ್ವಾನ ಮತ್ತು ಗೌರವಕ್ಕೆ ಕೊಹ್ಲಿ ಕೃತಜ್ಞತೆ ಸಲ್ಲಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಭೇಟಿ

ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಅವರು ನಾಳೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ವಿಧಾನಸಭೆಯಲ್ಲಿ ಭೇಟಿಯಾಗಲಿದ್ದಾರೆ ಎಂದು ಶಿವಸೇನೆ ಮುಖಂಡ ಪ್ರತಾಪ್ ಸರ್ನಾಯಕ್ ಎಎನ್ಐಗೆ ತಿಳಿಸಿದ್ದಾರೆ. ಏಕನಾಥ್ ಶಿಂಧೆ ಅವರನ್ನು ಭೇಟಿಯಾಗಲು ಆಟಗಾರರು ತಮ್ಮ ಆಹ್ವಾನವನ್ನು ಸ್ವೀಕರಿಸಿದ್ದಾರೆ ಎಂದು ಸರ್ನಾಯಕ್ ಹೇಳಿದ್ದಾರೆ.

“ಮುಂಬೈನಲ್ಲಿ ಇಂದಿನ ಕಾರ್ಯಕ್ರಮವನ್ನು ಬಿಸಿಸಿಐ ಆಯೋಜಿಸಿದೆ. ನಾಯಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಸೇರಿದಂತೆ ಮುಂಬೈನ ಟೀಮ್ ಇಂಡಿಯಾ ಆಟಗಾರರು ನಾಳೆ ಮಹಾರಾಷ್ಟ್ರ ವಿಧಾನಸಭೆಗೆ ಬರಲಿದ್ದು, ಸಿಎಂ ಏಕನಾಥ್ ಶಿಂಧೆ ಅವರನ್ನು ಭೇಟಿಯಾಗಲಿದ್ದಾರೆ. ಎಂಸಿಎ ಸದಸ್ಯನಾಗಿ, ನಾನು ಆಟಗಾರರನ್ನು ಆಹ್ವಾನಿಸಿದ್ದೇನೆ ಮತ್ತು ಅವರು ನನ್ನ ಆಹ್ವಾನವನ್ನು ಸ್ವೀಕರಿಸಿದ್ದಾರೆ ” ಎಂದು ಸರ್ನಾಯಕ್ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Puri Jagannath Temple: ಪುರಿ ಜಗನ್ನಾಥ ದೇವಾಲಯದ 10 ಅದ್ಭುತ ಸಂಗತಿಗಳಿವು!

Puri Jagannath Temple: ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಭಾರತದ ಅತ್ಯಂತ ಪೂಜ್ಯನೀಯ ದೇವಾಲಯಗಳಲ್ಲಿ ಒಂದಾಗಿದೆ. ಈ ದೇವಾಲಯದಲ್ಲಿ ಹಲವು ರಹಸ್ಯಗಳು ಮತ್ತು ಪವಾಡಗಳು ನಡೆಯುತ್ತದೆ. ಆದರೆ ಇದಕ್ಕೆ ಯಾವುದೇ ವೈಜ್ಞಾನಿಕ ಕಾರಣವಿಲ್ಲ. ಇತಿಹಾಸಕಾರರು, ವಿಜ್ಞಾನಿಗಳು, ಪುರೋಹಿತರು ಮತ್ತು ಸಾಮಾನ್ಯ ಜನರು ಈ ರಹಸ್ಯಗಳನ್ನು ಪರಿಹರಿಸಲು ಅನೇಕ ವರ್ಷಗಳಿಂದ ಶ್ರಮಿಸುತ್ತಿದ್ದಾರೆ ಆದರೆ ಇದು ಇಲ್ಲಿಯವರೆಗೆ ನಿಗೂಢವಾಗಿಯೇ ಉಳಿದಿದೆ. ಆ ರಹಸ್ಯಗಳು ಯಾವುವು ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Puri Jagannath Temple
Koo

ಪುರಿ ಜಗನ್ನಾಥ ದೇವಾಲಯವು (Puri Jagannath Temple) ಭಾರತದ ಅತ್ಯಂತ ಪೂಜ್ಯನೀಯ ದೇವಾಲಯಗಳಲ್ಲಿ ಒಂದಾಗಿದೆ. ಈ ದೇವಾಲಯವು ಒಡಿಶಾದ ಪುರಿಯಲ್ಲಿದೆ. ಪ್ರತಿವರ್ಷ ಲಕ್ಷಾಂತರ ಭಕ್ತರು ಜಗನ್ನಾಥ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಜಗನ್ನಾಥ ದೇವಾಲಯದಲ್ಲಿ ಭಗವಾನ್ ಕೃಷ್ಣನನ್ನು ಭಗವಾನ್ ಜಗನ್ನಾಥನ ರೂಪದಲ್ಲಿ ಪೂಜಿಸಲಾಗುತ್ತದೆ. ಇಲ್ಲಿ ಕೃಷ್ಣನು ಜಗನ್ನಾಥನ ರೂಪದಲ್ಲಿ ಸಹೋದರ ಬಲರಾಮನ ರೂಪವಾದ ಭಗವಾನ್ ಬಲಭದ್ರ ಮತ್ತು ತಂಗಿ ದೇವಿ ಸುಭದ್ರಾ ಅವರೊಂದಿಗೆ ಈ ದೇವಾಲಯದಲ್ಲಿ ನೆಲೆಸಿದ್ದಾನೆ.

ಈ ದೇವಾಲಯದಲ್ಲಿ ಹಲವು ರಹಸ್ಯಗಳು ಮತ್ತು ಪವಾಡಗಳು ನಡೆಯುತ್ತದೆ. ಆದರೆ ಇದಕ್ಕೆ ಯಾವುದೇ ವೈಜ್ಞಾನಿಕ ಕಾರಣವಿಲ್ಲ. ಇತಿಹಾಸಕಾರರು, ವಿಜ್ಞಾನಿಗಳು, ಪುರೋಹಿತರು ಮತ್ತು ಸಾಮಾನ್ಯ ಜನರು ಈ ರಹಸ್ಯಗಳನ್ನು ಪರಿಹರಿಸಲು ಅನೇಕ ವರ್ಷಗಳಿಂದ ಶ್ರಮಿಸುತ್ತಿದ್ದಾರೆ ಆದರೆ ಇದು ಇಲ್ಲಿಯವರೆಗೆ ರಹಸ್ಯವಾಗಿ ಉಳಿದಿದೆ. ಆ ರಹಸ್ಯಗಳು ಯಾವುವು ಎಂದು ತಿಳಿಯೋಣ :-

Puri Jagannath Temple

ಧ್ವಜದ ದಿಕ್ಕು:

ಜಗನ್ನಾಥ ದೇವಾಲಯದ ಮೇಲ್ಭಾಗದಲ್ಲಿರುವ ಧ್ವಜವು ಗಾಳಿ ಬೀಸುವ ದಿಕ್ಕಿಗೆ ವಿರುದ್ಧ ದಿಕ್ಕಿನಲ್ಲಿ ಹಾರಾಡುತ್ತದೆ. 1800 ವರ್ಷಗಳ ಹಿಂದೆ, ಅರ್ಚಕರು ಸಂಪ್ರದಾಯದ ಪ್ರಕಾರ ಧ್ವಜವನ್ನು ಬದಲಾಯಿಸುವ ಸಲುವಾಗಿ ಪ್ರತಿದಿನ ಜಗನ್ನಾಥ ದೇವಾಲಯದ ಶಿಖರದ ಮೇಲೆ ಏರುತ್ತಾರೆ. ಈ ಆಚರಣೆಯನ್ನು ಒಂದು ದಿನದ ಮಟ್ಟಿಗೆ ತಪ್ಪಿಸಿದರೆ ದೇವಾಲಯವು 18 ವರ್ಷಗಳ ಕಾಲ ಮುಚ್ಚಲ್ಪಡುತ್ತದೆ ಎಂದು ಹೇಳಲಾಗುತ್ತದೆ. ಈ ದೇವಾಲಯವು ತುಂಬಾ ಎತ್ತರವಾಗಿದೆ. ದೇವಾಲಯದ ಮೇಲೆ ಏರಲು ಯಾವುದೇ ಉಪಕರಣವನ್ನು ಬಳಸುವುದಿಲ್ಲ ಇದನ್ನು ಬರಿಗೈಯಿಂದ ನಿರ್ವಹಿಸಲಾಗುತ್ತದೆ.

ಮರದ ವಿಗ್ರಹಗಳು;

ಇಲ್ಲಿ ದೇವರ ವಿಗ್ರಹಗಳನ್ನು ಪವಿತ್ರವಾದ ಬೇವಿನ ಮರದಿಂದ ತಯಾರಿಸಲಾಗುತ್ತದೆ ಮತ್ತು ನಬಕಲೆಬರಾ ಎಂಬ ಜಗನ್ನಾಥನ ವಿಶೇಷ ಹಬ್ಬದ ಸಮಯದಲ್ಲಿ ವಿಗ್ರಹಗಳನ್ನು ಬದಲಾಯಿಸಿ ಹೊಸ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುತ್ತದೆ. ಈ ಆಚರಣೆಯನ್ನು ಪ್ರತಿ 8, 12, ಅಥವಾ 19 ವರ್ಷಗಳಿಗೊಮ್ಮೆ ಮಾಡಲಾಗುತ್ತದೆ. ಈ ವಿಗ್ರಹ ಮಾಡಲು ಕಟ್ಟುನಿಟ್ಟಾದ ಕ್ರಮಗಳನ್ನು ಹೊಂದಿದ್ದು, ಇದಕ್ಕಾಗಿ ಪವಿತ್ರ ಬೇವಿನ ಮರಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ದ ಬಡಗಿಗಳು 21 ದಿನಗಳ ಅವಧಿಯಲ್ಲಿ ಕೆತ್ತನೆಯನ್ನು ರಹಸ್ಯವಾಗಿ ಮಾಡುತ್ತಾರೆ. ಹಳೆಯ ವಿಗ್ರಹಗಳನ್ನು ಕೊಯಿಲಿ ವೈಕುಂಠದ ಬಳಿ ಸಮಾಧಿ ಮಾಡಲಾಗಿದೆ. ಕೊನೆಯ ನಬಕಲೆಬರಾ 2015 ರಲ್ಲಿ ನಡೆಯಿತು ಮತ್ತು ಲಕ್ಷಾಂತರ ಭಕ್ತರು ಈ ಹಬ್ಬಕ್ಕೆ ಬಂದಿದ್ದರು.

Puri Jagannath Temple

ದೇವಾಲಯದ ನೆರಳು:

ದಿನದ ಯಾವುದೇ ಸಮಯದಲ್ಲಿ, ಸೂರ್ಯನ ಪ್ರಕಾಶ ಆಕಾಶದಲ್ಲಿ ಎಷ್ಟೇ ಹೆಚ್ಚಾಗಿದ್ದರೂ ಕೂಡ ದೇವಾಲಯದ ನೆರಳು ಬೀಳುವುದಿಲ್ಲ. ಅದು ವಾಸ್ತುಶಿಲ್ಪದ ಅದ್ಭುತವೇ ಅಥವಾ ಪವಾಡವೇ ಎಂಬುದು ಇನ್ನೂ ಬಗೆಹರಿದಿಲ್ಲ.

ಅಬಾಧ ಮಹಾಪ್ರಸಾದಂ:

ಮಹಾಪ್ರಸಾದವನ್ನು ಭಗವಾನ್ ಜಗನ್ನಾಥನಿಗೆ 5 ಹಂತಗಳಲ್ಲಿ ನೀಡಲಾಗುತ್ತದೆ ಮತ್ತು ಇದು 56 ರುಚಿಕರವಾದ ಭಕ್ಷ್ಯಗಳನ್ನು ಒಳಗೊಂಡಿದೆ. ಇದರಲ್ಲಿ ಎರಡು ವಿಧಗಳಿವೆ, ಸುಖಿಲಾ ಮತ್ತು ಶಂಖುಡಿ. ಸುಖಿಲಾ ಎಲ್ಲಾ ಒಣ ಮಿಠಾಯಿಗಳನ್ನು ಒಳಗೊಂಡಿದೆ ಮತ್ತು ಶಂಖುಡಿ ಅಕ್ಕಿ, ದಾಲ್ ಮತ್ತು ಇತರ ವಸ್ತುಗಳನ್ನು ಒಳಗೊಂಡಿದೆ. ಇದು ದೇವಾಲಯದ ಆವರಣದಲ್ಲಿರುವ ಆನಂದ ಬಜಾರ್‌ನ ಮಾರುಕಟ್ಟೆಯಲ್ಲಿ ಭಕ್ತರಿಗೆ ಲಭ್ಯವಿದೆ ಮತ್ತು ಇದು ದೈವಿಕ ರುಚಿಯನ್ನು ನೀಡುತ್ತದೆ.

Puri Jagannath Temple

ಮಹಾಪ್ರಸಾದದ ತಯಾರಿಕೆ:

ಮಹಾಪ್ರಸಾದವನ್ನು ಇಲ್ಲಿ ಸಾವಿರಾರು ಪುರೋಹಿತರು ತಯಾರಿಸುತ್ತಾರೆ ಮತ್ತು 7 ಮಣ್ಣಿನ ಮಡಕೆಗಳನ್ನು ಒಂದರ ಮೇಲೊಂದರಂತೆ ಇರಿಸಲಾಗುತ್ತದೆ ಮತ್ತು ಆಹಾರವನ್ನು ಸೌದೆ ಒಲೆಯ ಮೇಲೆ ಬೇಯಿಸಲಾಗುತ್ತದೆ. ಹೀಗೆ ಕಾಯಿಸಿದಾಗ ಮೇಲಿನ ಮಡಕೆಯಲ್ಲಿನ ಆಹಾರ ಮೊದಲು ಬೇಯುತ್ತದೆ. ಉಳಿದವು ನಂತರ ಬೇಯುತ್ತದೆ. ಇದು ಇಲ್ಲಿನ ಮತ್ತೊಂದು ಪವಾಡ.

Puri Jagannath Temple

ಅಲೆಗಳ ಶಬ್ದ:

ನೀವು ಒಮ್ಮೆ ದೇವಾಲಯದ ಒಳಗೆ ಕಾಲಿಟ್ಟರೆ, ಅಲ್ಲಿ ನಿಮಗೆ ಸಮುದ್ರದ ಅಲೆಗಳ ಶಬ್ದ ಕೇಳಿಸುವುದೇ ಇಲ್ಲ. ಪುರಾಣದ ಪ್ರಕಾರ, ಸುಭದ್ರಾ ದೇವಿಯು ದೇವಾಲಯವು ಪ್ರಶಾಂತತೆಯ ಸ್ಥಳವಾಗಬೇಕೆಂದು ಬಯಸಿದಳು, ಹಾಗಾಗಿ ಈ ದೇವಾಲಯದ ಒಳಗೆ ಸಮುದ್ರದ ಅಲೆಗಳ ಶಬ್ದ ಕೇಳಿಸುವುದಿಲ್ಲ ಎನ್ನಲಾಗಿದೆ.

Puri Jagannath Temple

ದೇವಾಲಯದ ಮೇಲೆ ಏನೂ ಹಾರುವುದಿಲ್ಲ:

ನೀವು ಆಕಾಶದಲ್ಲಿ ಮೇಲಕ್ಕೆ ನೋಡಿದಾಗ, ಪಕ್ಷಿಗಳು ಎತ್ತರಕ್ಕೆ ಹಾರುವುದನ್ನು ಕಾಣುತ್ತೀರಿ. ಆದರೆ ಪುರಿ ಜಗನ್ನಾಥ ದೇವಾಲಯದ ಗುಮ್ಮಟದ ಮೇಲೆ ಒಂದೇ ಒಂದು ಪಕ್ಷಿಯನ್ನು ಸಹ ನೋಡಲಾಗುವುದಿಲ್ಲ. ಯಾವುದೇ ಪಕ್ಷಿ ಗುಮ್ಮಟದ ಮೇಲೇ ಹಾರುವುದಿಲ್ಲ, ಯಾವುದೇ ವಸ್ತುವು ಹಾರುವುದಿಲ್ಲ. ಇದಕ್ಕೆ ಇನ್ನೂ ಯಾವುದೇ ತಾರ್ಕಿಕ ಸ್ಪಷ್ಟೀಕರಣ ಸಿಕ್ಕಿಲ್ಲ.

Puri Jagannath Temple

ಚಕ್ರದ ದಿಕ್ಕು:

ದೇವಾಲಯದ ಮೇಲ್ಭಾಗದಲ್ಲಿ ಅದೃಷ್ಟ ಚಕ್ರವಿದೆ. ಅದು ಸುಮಾರು ಒಂದು ಟನ್ ತೂಕವಿದೆ. ಅತ್ಯಂತ ಆಶ್ಚರ್ಯಕರ ಸಂಗತಿಯೆಂದರೆ, ಪುರಿಯ ಯಾವುದೇ ಸ್ಥಳದಲ್ಲಿ ನಿಂತು ಚಕ್ರವನ್ನು ಎತ್ತರದಿಂದ ಯಾವುದೇ ದಿಕ್ಕಿನಲ್ಲಿ ನೋಡಿದರೂ ವೀಕ್ಷಕರಿಗೆ ಯಾವಾಗಲೂ ಚಕ್ರವು ತನ್ನ ಕಡೆಗೆ ಮುಖ ಮಾಡಿರುವಂತೆ ಕಾಣುತ್ತದೆ. ಇನ್ನೂ ನಿಗೂಢವಾದ ವಿಚಾರವೇನೆಂದರೆ, 12ನೇ ಶತಮಾನದ ಜನರು ದೇವಾಲಯದ ಮೇಲ್ಭಾಗದಲ್ಲಿ ಇಷ್ಟು ಭಾರವಾದ ಚಕ್ರವನ್ನು ಹೇಗೆ ಹಾಕಿದರು ಎಂಬುದು!

Puri Jagannath Temple

ಪ್ರಸಾದದ ರಹಸ್ಯ:

ಪ್ರತಿವರ್ಷ ಲಕ್ಷಾಂತರ ಯಾತ್ರಾರ್ಥಿಗಳು ಈ ಪವಿತ್ರ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ರಥಯಾತ್ರೆ ಅಥವಾ ಜಗನ್ನಾಥನ ಪೂಜಾ ದಿನಗಳಲ್ಲಿ ಸಾಮಾನ್ಯ ದಿನಗಳಿಗಿಂತ ಹೆಚ್ಚಿನ ಯಾತ್ರಾರ್ಥಿಗಳು ಬರುತ್ತಾರೆ. ಆದರೆ ಪ್ರತಿದಿನ ಅಷ್ಟೇ ಪ್ರಮಾಣದಲ್ಲಿ ಪ್ರಸಾದವನ್ನು ಬೇಯಿಸಲಾಗುತ್ತದೆ. ಯಾವುದೇ ದಿನಗಳಲ್ಲಿ, ಪ್ರಸಾದವು ವ್ಯರ್ಥವಾಗುವುದಿಲ್ಲ, ಮತ್ತು ಯಾವುದೇ ಭಕ್ತರು ಪ್ರಸಾದವಿಲ್ಲದೆ ಹಿಂತಿರುಗುವುದಿಲ್ಲ.

ಇದನ್ನೂ ಓದಿ: ಕೀರ್ತಿ ಚಕ್ರ ಸ್ವೀಕರಿಸಿದ ಹುತಾತ್ಮ ಯೋಧನ ಪತ್ನಿ; ಭಾವುಕರಾದ ದ್ರೌಪದಿ ಮುರ್ಮು‌,ರಾಜನಾಥ್ ಸಿಂಗ್!

Puri Jagannath Temple

ಹಿಮ್ಮುಖ ಸಮುದ್ರದ ಗಾಳಿ:

ಇದು ಸಾಮಾನ್ಯವಾಗಿ ಕರಾವಳಿ ಪ್ರದೇಶಗಳಲ್ಲಿ ಹಗಲಿನಲ್ಲಿ ಸಂಭವಿಸುವ ನೈಸರ್ಗಿಕ ವಿದ್ಯಮಾನವಾಗಿದೆ, ಗಾಳಿಯು ಸಮುದ್ರದಿಂದ ಭೂಮಿಯ ಕಡೆಗೆ ಬೀಸುತ್ತದೆ ಮತ್ತು ಸಂಜೆಯ ಸಮಯದಲ್ಲಿ ಅದು ಭೂಮಿಯಿಂದ ಸಮುದ್ರದ ಕಡೆಗೆ ಬೀಸುತ್ತದೆ. ಆದರೆ ಪುರಿಯಲ್ಲಿ, ಇದು ವಿರುದ್ಧ ರೂಪದಲ್ಲಿ ನಡೆಯುತ್ತದೆ!

Continue Reading

ಭವಿಷ್ಯ

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಸಿಗಲಿದೆ ಶುಭ ಸುದ್ದಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ ಬಿದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಭಾನುವಾರವೂ ಸಿಂಹ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಅತಿಯಾದ ಸಂಶಯಾತ್ಮಕ ಸ್ವಭಾವ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ವೃಷಭ ರಾಶಿಯವರು ಕೈಗೆ ಬಂದ ತುತ್ತು ಬಾಯಿಗೆ ಬರುವ ಮುನ್ನ ಕೋಪದಿಂದ ಹದಗೆಡಲು ಹಾದಿ ಮಾಡಿಕೊಳ್ಳುವುದು ಬೇಡ, ತಾಳ್ಮೆಯಿಂದ ವರ್ತಿಸಿ. ತುಲಾ ರಾಶಿಯವರು ಆಪ್ತರ ಮಾತುಗಳು ನಿಮ್ಮ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹಣಕಾಸು ವ್ಯವಹಾರದಲ್ಲಿ ಕುಂಠಿತವಾಗಲಿದೆ. ಕುಟುಂಬ ಸದಸ್ಯರ ಆರೋಗ್ಯದಲ್ಲಿ ವ್ಯತ್ಯಾಸ ಆಗಬಹುದು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (7-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.
ತಿಥಿ: ಬಿದಿಗೆ 28:58 ವಾರ: ಭಾನುವಾರ
ನಕ್ಷತ್ರ: ಪುಷ್ಯ 30:01 ಯೋಗ: ಹರ್ಷಣ 26:11
ಕರಣ: ಬಾಲವ 16:37 ಅಮೃತಕಾಲ: ರಾತ್ರಿ 11:19 ರಿಂದ 01:00 ರವರೆಗೆ
ದಿನದ ವಿಶೇಷ: ಶ್ರೀರಾಮ ರಥೋತ್ಸವ, ಚಂದ್ರದರ್ಶನ

ಸೂರ್ಯೋದಯ : 05:58   ಸೂರ್ಯಾಸ್ತ : 06:50

ರಾಹುಕಾಲ: ಸಂಜೆ 05:14 ರಿಂದ 06:50
ಗುಳಿಕಕಾಲ: ಮಧ್ಯಾಹ್ನ 03:37 ರಿಂದ 05:14

ಯಮಗಂಡಕಾಲ: ಮಧ್ಯಾಹ್ನ 12:25 ರಿಂದ 02:01

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರೋಗ್ಯ ಉತ್ತಮವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಲಾಭ ಇರಲಿದೆ. ಅತಿಯಾದ ಸಂಶಯಾತ್ಮಕ ಸ್ವಭಾವ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಕೈಗೆ ಬಂದ ತುತ್ತು ಬಾಯಿಗೆ ಬರುವ ಮುನ್ನ ಕೋಪದಿಂದ ಹದಗೆಡಲು ಹಾದಿ ಮಾಡಿಕೊಳ್ಳುವುದು ಬೇಡ, ತಾಳ್ಮೆಯಿಂದ ವರ್ತಿಸಿ. ಕೆಲಸ ಕಾರ್ಯಗಳಲ್ಲಿ ನಿಧಾನಗತಿ. ಕುಟುಂಬದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಆಪ್ತ ವ್ಯಕ್ತಿಗಳಿಂದ ಸಲಹೆ ಸಿಗಲಿದೆ. ಆರ್ಥಿವಾಗಿ ಬಲ ಸಿಗಲಿದೆ. ದ್ವಿಸ್ವಭಾವದರಾದ ನೀವು ಆಂತರಿಕ ಭಯದಿಂದ ಬಳಲುತ್ತಿರುವ ಹಾಗೆ ಭಾಸವಾಗುವುದು. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ಹೊಸ ವ್ಯವಹಾರದಲ್ಲಿ ತೊಡಗುವಿರಿ. ಆತುರದ ತೀರ್ಮಾನಗಳನ್ನು ಮಾಡದೆ, ಕುಟುಂಬದ ಸದಸ್ಯರೊಂದಿಗೆ ಚರ್ಚೆ ನಡೆಸಿ. ಸಂಗಾತಿಯ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ಅತಿಯಾದ ವ್ಯಾಮೋಹ ದುಃಖಕ್ಕೆ ಕಾರಣವಾಗಬಹುದು. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ನಿಮ್ಮ ಶಕ್ತಿ ಮತ್ತು ನಿಮ್ಮ ಮುಂದಿನ ಯೋಜನೆಗಳನ್ನು ಮರು ನಿರ್ಣಯಿಸುವ ಸಮಯವಿದು. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಅತಿಥಿಗಳ ಆಗಮನ ಸಂತಸ ತರುವುದು. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆಪ್ತರ ಮಾತುಗಳು ನಿಮ್ಮ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹಣಕಾಸು ವ್ಯವಹಾರದಲ್ಲಿ ಕುಂಠಿತವಾಗಲಿದೆ. ಕುಟುಂಬ ಸದಸ್ಯರ ಆರೋಗ್ಯದಲ್ಲಿ ವ್ಯತ್ಯಾಸ ಆಗಬಹುದು. ಧೃತಿಗೆಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ : ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ಉದಾರ ವರ್ತನೆಯನ್ನು ಬಳಸಿಕೊಂಡು ಬೇರೆಯವರು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ದೈಹಿಕ ಆಯಾಸವಾಗುವುದು. ಅತಿಯಾದ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಕೆಲಸ-ಕಾರ್ಯಗಳಲ್ಲಿ ನಿಧಾನಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 3

Horoscope Today

ಮಕರ: ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ. ಎಂದಿಗಿಂತ ಇಂದು ಉತ್ಸಾಹದಿಂದ ಇರುವಿರಿ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಪ್ರೀತಿ ಅಂಕುರವಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಭರವಸೆಯು ನಿಮ್ಮ ಕೆಲಸದಲ್ಲಿ ಸಹಾಯ ಮಾಡುವುದು. ಕುಟುಂಬ ಸದಸ್ಯರ ಬೆಂಬಲ ದೊರೆಯಲಿದೆ. ವ್ಯಾಪಾರ-ವ್ಯವಹಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮೀನ: ಪ್ರೀತಿ, ಭರವಸೆ, ನಂಬಿಕೆ, ಸಹಾನುಭೂತಿ, ಆಶಾವಾದ ಮತ್ತು ನಿಷ್ಠೆಗಳಂಥ ಧನಾತ್ಮಕ ಭಾವನೆಗಳನ್ನು ಗ್ರಹಿಸಲು ಮನಸ್ಸು ಪ್ರೋತ್ಸಾಹಿಸುವುದು. ಕಾರ್ಯದಲ್ಲಿ ಪ್ರಗತಿ ಇರಲಿದೆ. ಹಿರಿಯರ ಆಶೀರ್ವಾದ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

Champions Trophy 2025 : ಭಾರತ ತಂಡ ಪಾಕಿಸ್ತಾನಕ್ಕೆ ಬರಲೇಬೇಕು ಹಠ ಹಿಡಿದು ಕುಳಿತಿರುವ ಪಿಸಿಬಿ

Champions Trophy 2025 : ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈ ತಿಂಗಳು ಶ್ರೀಲಂಕಾದಲ್ಲಿ ನಡೆಯಲಿರುವ ಐಸಿಸಿ ಸಭೆಯಲ್ಲಿ ಈ ವಿಷಯವನ್ನು ಎತ್ತಲು ಯೋಜಿಸಿದೆ. ಅಲ್ಲದೆ ಭಾರತ ತಂಡ ಬರಲೇಬೇಕು ಎಂದು ಒತ್ತಾಯ ಮಾಡುವ ಸಾಧ್ಯತೆಗಳಿವೆ. ಇದು ಸಭೆಯಲ್ಲಿ ನಿರ್ಧಾರ ಮಾಡಲು ದೊಡ್ಡ ಸಮಸ್ಯೆಗಳನ್ನು ತಂದೊಡ್ಡಲಿದೆ.

VISTARANEWS.COM


on

Champions Trophy 2025:
Koo

ಬೆಂಗಳೂರು: 2024ರ ಟಿ20 ವಿಶ್ವಕಪ್ ಬಳಿಕ ಇದೀಗ ಎಲ್ಲರ ಗಮನ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರತ್ತ (Champions Trophy 2025 ) ನೆಟ್ಟಿದೆ. ಮುಂದಿನ ವರ್ಷ ಫೆಬ್ರವರಿ-ಮಾರ್ಚ್​​ನಲ್ಲಿ ಪಾಕಿಸ್ತಾನದಲ್ಲಿ ಪಂದ್ಯಾವಳಿ ಆಯೋಜನೆಗೊಂಡಿದೆ. ಆದರೆ, ಟೂರ್ನಿಯಲ್ಲಿ ಭಾರತೀಯ ತಂಡದ ಭಾಗವಹಿಸುವಿಕೆಯೇ ಯಕ್ಷ ಪ್ರಶ್ನೆಯಾಗಿ ಉಳಿದಿದೆ. ಇತ್ತೀಚಿನ ವರದಿಗಳ ಪ್ರಕಾರ, ಐಸಿಸಿ ಚಾಂಪಿಯನ್ಸ್ ಟ್ರೋಫಿಯ 2025 ರ ಆವೃತ್ತಿಯಲ್ಲಿ ಭಾಗವಹಿಸಲು ಭಾರತ ಕ್ರಿಕೆಟ್ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವ ಸಾಧ್ಯತೆಯಿಲ್ಲ. ಪಂದ್ಯಾವಳಿಯಲ್ಲಿ ಅವರ ಭಾಗವಹಿಸುವಿಕೆಯು ಭಾರತ ಸರ್ಕಾರ ತೆಗೆದುಕೊಳ್ಳುವ ನಿರ್ಧಾರವನ್ನು ಅವಲಂಬಿಸಿರುತ್ತದೆ.

ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸದಿರಲು ಕಾರಣವೆಂದರೆ ದೇಶಗಳ ನಡುವಿನ ರಾಜಕೀಯ ಉದ್ವಿಗ್ನತೆ. ಉಭಯ ತಂಡಗಳು ದ್ವಿಪಕ್ಷೀಯ ಸರಣಿಗಳಲ್ಲಿ ಪರಸ್ಪರ ಆಡುವುದಿಲ್ಲ. ಐಸಿಸಿ ಈವೆಂಟ್ಗಳು ಮತ್ತು ಏಷ್ಯಾ ಕಪ್​ಗಳಲ್ಲಿ ಮಾತ್ರ ಪರಸ್ಪರ ಮುಖಾಮುಖಿಯಾಗುತ್ತವೆ. 2012-13ರಲ್ಲಿ ಕೊನೆಯ ಬಾರಿ ಸರಣಿ ಆಡಿತ್ತು.

ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ ಭಾರತ ಪ್ರಯಾಣಿಸದಿರುವ ವಿಷಯ ಸರ್ಕಾರದ ನಿರ್ಧಾರದ ಮೇಲೆ ಅವಲಂಬಿತವಾಗಿರುತ್ತದೆ/ ಅದರ ವಿವರಗಳನ್ನು ಐಸಿಸಿ ಸಭೆಯ ನಂತರ ಬಹಿರಂಗಪಡಿಸಲಾಗುವುದು ಎಂದು ಬಿಸಿಸಿಐ ಹೇಳಿದೆ.

ಇದನ್ನೂ ಓದಿ: ZIM vs IND : ಜಿಂಬಾಬ್ವೆ ವಿರುದ್ಧ 13 ರನ್​ಗಳಿಂದ ಸೋತ ವಿಶ್ವ ವಿಜೇತ ಭಾರತ ತಂಡ

ಪಂದ್ಯಾವಳಿಯ ವಿವರಗಳನ್ನು ಇನ್ನೂ ಚರ್ಚಿಸಲಾಗಿಲ್ಲವಾದರೂ, ಭಾರತ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವ ಸಾಧ್ಯತೆಯಿಲ್ಲ. ಅಂತಿಮವಾಗಿ, ನಿರ್ಧಾರವು ಭಾರತ ಸರ್ಕಾರಕ್ಕೆ ಬಿಟ್ಟಿದ್ದು. ಆದಾಗ್ಯೂ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈ ತಿಂಗಳು ಶ್ರೀಲಂಕಾದಲ್ಲಿ ನಡೆಯಲಿರುವ ಐಸಿಸಿ ಸಭೆಯಲ್ಲಿ ಈ ವಿಷಯವನ್ನು ಎತ್ತಲು ಯೋಜಿಸಿದೆ. ಅಲ್ಲದೆ ಭಾರತ ತಂಡ ಬರಲೇಬೇಕು ಎಂದು ಒತ್ತಾಯ ಮಾಡುವ ಸಾಧ್ಯತೆಗಳಿವೆ. ಇದು ಸಭೆಯಲ್ಲಿ ನಿರ್ಧಾರ ಮಾಡಲು ದೊಡ್ಡ ಸಮಸ್ಯೆಗಳನ್ನು ತಂದೊಡ್ಡಲಿದೆ.

ಈ ವಿಷಯದಲ್ಲಿ ಸರ್ಕಾರದ ನಿರ್ಧಾರವು ಅಂತಿಮವಾಗಿರುತ್ತದೆ. ಏಕೆಂದರೆ ನಾವು ಅದನ್ನು ಆಂತರಿಕವಾಗಿ ಇನ್ನೂ ದೃಢಪಡಿಸಿಲ್ಲ. ಇದು ಐಸಿಸಿ ಟೂರ್ನಿಯಾಗಿರುವುದರಿಂದ ಯಾವುದೇ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ನಮಗಿಲ್ಲ. ಆದಾಗ್ಯೂ, ಮುಂದಿನ ಐಸಿಸಿ ಸಭೆಯಲ್ಲಿ ಹೆಚ್ಚಿನ ವಿವರಗಳು ಹೊರಬರಬಹುದು ಎಂದು ಮೂಲಗಳು ತಿಳಿಸಿವೆ. ಭಾರತ ತನ್ನ ನಿರ್ಧಾರ ಬದಲಿಸದು ಎಂಬ ಕಾರಣಕ್ಕೆ ಪಾಕಿಸ್ತಾನ ಹಠ ಹಿಡಿಯಲಿದೆ.

2008ರ ಬಳಿಕ ಭಾರತ ತಂಡ ಪಾಕಿಸ್ತಾನ ಪ್ರವಾಸ ಕೈಗೊಂಡಿಲ್ಲ. ಅವರು 2023 ರಲ್ಲಿ ಏಷ್ಯಾ ಕಪ್ ಆಡಬೇಕಿತ್ತು ಆದರೆ ಅವರು ಪ್ರಯಾಣಿಸಲಿಲ್ಲ ಮತ್ತು ಪಂದ್ಯಾವಳಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಡಲಾಯಿತು. ಭಾರತ ಶ್ರೀಲಂಕಾದಲ್ಲಿ ಪಂದ್ಯಗಳನ್ನು ಆಡಿತು. ಆದರೆ ಅದರ ನಂತರ, ಭಾರತವು ಪ್ರಯಾಣಿಸಲು ನಿರಾಕರಿಸಿದರೂ ಪಾಕಿಸ್ತಾನವು ಸಕಾರಾತ್ಮಕ ಪ್ರತಿಕ್ರಿಯೆ ನೀಡಿತು.

2023ರ ಐಸಿಸಿ ವಿಶ್ವಕಪ್ ಟೂರ್ನಿಗಾಗಿ ಪಾಕಿಸ್ತಾನ ತಂಡ ಭಾರತಕ್ಕೆ ಪ್ರಯಾಣ ಬೆಳೆಸಿತ್ತು. ಅವರು ಹೈದರಾಬಾದ್, ಅಹಮದಾಬಾದ್, ಚೆನ್ನೈ, ಬೆಂಗಳೂರು ಮತ್ತು ಕೋಲ್ಕತ್ತಾದಲ್ಲಿ ಪಂದ್ಯಗಳನ್ನು ಆಡಿದರು ಮತ್ತು ಅವರು ಭಾರತದಲ್ಲಿ ಆಡಿದ ಎಲ್ಲಾ ಸ್ಥಳಗಳಾದ್ಯಂತ ಅಭಿಮಾನಿಗಳಿಂದ ಗರಿಷ್ಠ ಸ್ವಾಗತವನ್ನು ಪಡೆದಿದ್ದರು.

ವೇಳಾಪಟ್ಟಿ ಪ್ರಕಟಿಸಿದ ಪಾಕಿಸ್ತಾನ ಕ್ರಿಕೆಟ್ ಮಂಡಳಿ

ಇತ್ತೀಚೆಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ 2025 ರ ಚಾಂಪಿಯನ್ಸ್ ಟ್ರೋಫಿಯ ಕರಡು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತು. ಲಾಹೋರ್​ನಲ್ಲಿ 7 ಪಂದ್ಯಗಳು, ರಾವಲ್ಪಿಂಡಿಯಲ್ಲಿ 5 ಪಂದ್ಯಗಳು ಮತ್ತು ಕರಾಚಿಯಲ್ಲಿ 3 ಪಂದ್ಯಗಳು ನಡೆಯಲಿವೆ. ಭಾರತವು ತನ್ನ ಎಲ್ಲಾ ಪಂದ್ಯಗಳನ್ನು ಲಾಹೋರ್​ನಲ್ಲಿ ಆಡಬೇಕಾಗಿದೆ.

ಮಾರ್ಚ್ 1 ರಂದು ಲಾಹೋರ್​ನ ಗಡಾಫಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ಪಂದ್ಯ ನಡೆಯಲಿದೆ ಎಂದು ವರದಿಗಳು ಉಲ್ಲೇಖಿಸಿವೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಗಾಗಿ ಬಹುತೇಕ ಎಲ್ಲಾ ಯೋಜನೆಗಳು ಪೂರ್ಣಗೊಂಡಿದ್ದು, ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ನೋಡಬೇಕಾಗಿದೆ.

Continue Reading

ದೇಶ

Rain News: ವರುಣನ ಆರ್ಭಟ; ಮಳೆ ಸಂಬಂಧಿ ಅವಘಡಗಳಿಗೆ 24 ಗಂಟೆಯಲ್ಲಿ 13 ಜನ ಬಲಿ

Rain News: ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದಲ್ಲಿ 18.3 ಮಿಲಿಮೀಟರ್‌ ಮಳೆಯಾಗಿದೆ. ಫತೇಪುರದಲ್ಲಿ ಇಬ್ಬರು, ರಾಯ್‌ಬರೇಲಿಯಲ್ಲಿ ಇಬ್ಬರು, ಬುಲಂದ್‌ಶಹರ್‌, ಕನೌಜ್‌, ಮೈನ್‌ಪುರಿ, ಕೌಶಂಬಿ, ಫಿರೋಜಾಬಾದ್‌, ಪ್ರತಾಪ್‌ಗಢ ಹಾಗೂ ಉನ್ನಾವೋ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

Rain News
Koo

ಲಖನೌ: ಕರ್ನಾಟಕದ (Karnataka) ಹಲವೆಡೆ, ಅದರಲ್ಲೂ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಸ್ತೆಗಳು ಕೊಚ್ಚಿಕೊಂಡು ಹೋಗಿದ್ದು, ಮನೆಗಳು ಕುಸಿದಿವೆ. ಇದರಿಂದ ನಾಡಿನ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಕರ್ನಾಟಕ ಮಾತ್ರವಲ್ಲ, ಉತ್ತರ ಪ್ರದೇಶದಲ್ಲೂ (Uttar Pradesh) ವರುಣನ ಆರ್ಭಟವು (Rain News) ಜೋರಾಗಿದೆ. ಕಳೆದ 24 ಗಂಟೆಗಳಲ್ಲಿಯೇ ಮಳೆ ಸಂಬಂಧಿ ಅವಘಡಗಳಿಂದ 13 ಜನ ಮೃತಪಟ್ಟಿದ್ದು, ನೂರಾರು ಜನ ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಮಳೆ ಸಂಬಂಧಿ ಅವಘಡಗಳ ಕುರಿತು ಉತ್ತರ ಪ್ರದೇಶ ಪರಿಹಾರ ಇಲಾಖೆಯ ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ. ಮಳೆ ಸಂಬಂಧಿ ಅವಘಡಗಳಾದ ಸಿಡಿಲು, ಕಟ್ಟಡ ಕುಸಿತ, ಭೂಕುಸಿತ ಸೇರಿ ಹಲವು ರೀತಿಯ ಅವಘಡಗಳಿಂದ 13 ಜನ ಮೃತಪಟ್ಟಿದ್ದಾರೆ. ಶುಕ್ರವಾರ ಸಂಜೆ 6.30ರಿಂದ ಶನಿವಾರ ಸಂಜೆ 6.30ರ ಅವಧಿಯ 24 ಗಂಟೆಗಳಲ್ಲಿಯೇ ಇಷ್ಟು ಜನ ಮೃತಪಟ್ಟಿದ್ದಾರೆ. ನೂರಾರು ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದಲ್ಲಿ ಸರಾಸರಿ 18.3 ಮಿಲಿಮೀಟರ್‌ ಮಳೆಯಾಗಿದೆ. ಫತೇಪುರದಲ್ಲಿ ಇಬ್ಬರು, ರಾಯ್‌ಬರೇಲಿಯಲ್ಲಿ ಇಬ್ಬರು, ಬುಲಂದ್‌ಶಹರ್‌, ಕನೌಜ್‌, ಮೈನ್‌ಪುರಿ, ಕೌಶಂಬಿ, ಫಿರೋಜಾಬಾದ್‌, ಪ್ರತಾಪ್‌ಗಢ ಹಾಗೂ ಉನ್ನಾವೋ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ 75 ಜಿಲ್ಲೆಗಳ ಪೈಕಿ 45 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಸತತ ಮಳೆಯಿಂದಾಗಿ ರಾಜ್ಯದ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿವೆ. ಮೀನುಗಾರಿಕೆಗೆ ತೆರಳದಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಅಸ್ಸಾಂನಲ್ಲಿ 52 ಮಂದಿ ಸಾವು

ಅಸ್ಸಾಂನಲ್ಲಿ ಮಳೆಯಿಂದಾಗಿ ಕಳೆದ 24 ಗಂಟೆಗಳಲ್ಲಿ ಸುಮಾರು 52 ಮಂದಿ ಮೃತಪಟ್ಟಿದ್ದು, ನೂರಾರು ಮಂದಿ ಮನೆ ಕಳೆದುಕೊಂಡಿದ್ದಾರೆ. ನೆರೆಯಿಂದಾಗಿ ಅಂದಾಜು 24 ಲಕ್ಷ ಮಂದಿ ತೊಂದರೆಗೆ ಒಳಗಾಗಿದ್ದಾರೆ. ರಾಜ್ಯದ ಮುಕ್ಕಾಲು ಭಾಗಗಳಲ್ಲಿ ನೆರೆ ಆವರಿಸಿದೆ. ರಾಜ್ಯದ 35 ಜಿಲ್ಲೆಗಳ ಪೈಕಿ 30 ಜಿಲ್ಲೆಗಳು ತೀವ್ರವಾಗಿ ಪ್ರವಾಹದ ಹೊಡೆತಕ್ಕೆ ಸಿಲುಕಿವೆ. ಒಂದು ತಿಂಗಳಿನಿಂದ ಇಲ್ಲಿನ ಪರಿಸ್ಥಿತಿ ಭೀಕರವಾಗಿದ್ದು, ಪ್ರಾಣಹಾನಿಯ ಜತೆಗೆ ವ್ಯಾಪಕ ಪ್ರಮಾಣದಲ್ಲಿ ಬೆಳೆ ನಾಶ ಉಂಟಾಗಿದೆ. ಈ ಈಶಾನ್ಯ ರಾಜ್ಯದ ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ ಮತ್ತು ನಿರಾಶ್ರಿತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Continue Reading
Advertisement
Pavithra Gowda was a challenge for Darshan
ಕ್ರೈಂ30 mins ago

Actor Darshan: ಪವಿತ್ರಾಗೌಡ ಮುನಿಸು ಶಮನ‌‌ ಮಾಡೋದೇ ಚಾಲೆಂಜ್‌ ಆಗಿತ್ತು ದರ್ಶನ್‌ಗೆ!

Vinesh Phogat
ಕ್ರೀಡೆ40 mins ago

Vinesh Phogat: ಕೊನೆಯ ಕ್ಷಣದಲ್ಲಿ ವೀಸಾ ಪಡೆದು ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ ಟೂರ್ನಿಯಲ್ಲಿ ಚಿನ್ನ ಗೆದ್ದ ವಿನೇಶ್ ಫೋಗಟ್

Road Accident
ಬೆಂಗಳೂರು58 mins ago

Road Accident: ರಾಜಕಾಲುವೆಗೆ ಬಿದ್ದ ಬೈಕ್‌ ಸವಾರನ ಮೃತದೇಹ ಪತ್ತೆ

MS Dhoni Birthday
ಕ್ರೀಡೆ1 hour ago

MS Dhoni Birthday: ಧೋನಿ ನಾಯಕರಾಗಿದ್ದಾಗ ಬಳಸಿದ ಮಹತ್ವದ ಗೆಲುವಿನ ತಂತ್ರಗಳು ಇಲ್ಲಿವೆ

Road Accident
ಕ್ರೈಂ2 hours ago

Road Accident: ಲಾರಿಗೆ ಬೈಕ್‌ ಡಿಕ್ಕಿ ಹೊಡೆದು ಪತ್ರಕರ್ತ ಸಾವು: ಇಬ್ಬರನ್ನು ಬಲಿ ಪಡೆದ ಅಪರಿಚಿತ ಕಾರು

actor darshan wife vijayalakshmi conducted a special pooja at bande mahakali last year goes viral
ಸ್ಯಾಂಡಲ್ ವುಡ್2 hours ago

Actor Darshan: ದರ್ಶನ್‌ಗಾಗಿ ವಿಶೇಷ ಪೂಜೆ ಮಾಡಿಸಿದ್ರಾ ವಿಜಯಲಕ್ಷ್ಮಿ? ಅಸಲಿ ಕಥೆ ಬೇರೆಯೇ ಇದೆ!

MS Dhoni Birthday
ಕ್ರಿಕೆಟ್2 hours ago

MS Dhoni Birthday: ಸಲ್ಮಾನ್​ ಖಾನ್​ ಜತೆ ಕೇಕ್​ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ ಧೋನಿ

Building Collapse
ದೇಶ2 hours ago

Building Collapse: ಐದು ಅಂತಸ್ತಿನ ಕಟ್ಟಡ ಧರಾಶಾಹಿ- ಏಳು ಜನ ದಾರುಣ ಸಾವು

Kannada New Movie Not Out Trailer out
ಸ್ಯಾಂಡಲ್ ವುಡ್2 hours ago

Kannada New Movie: ಕುತೂಹಲ ಮೂಡಿಸಿದೆ ʻನಾಟ್ ಔಟ್ʼ ಚಿತ್ರದ ಟ್ರೈಲರ್‌!

Boiler Blast
ಕರ್ನಾಟಕ2 hours ago

Boiler Blast: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟ; ತಪ್ಪಿದ ಬಹುದೊಡ್ಡ ಅನಾಹುತ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ4 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ16 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ19 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ20 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು22 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ24 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ2 days ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ2 days ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

ಟ್ರೆಂಡಿಂಗ್‌