Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಇಂದು ಭಾರತಕ್ಕೆ ಯಾವ್ಯಾವ ಸ್ಪರ್ಧೆಗಳಿವೆ? ಇಲ್ಲಿದೆ ಎಲ್ಲ ವಿವರ - Vistara News

ಪ್ರಮುಖ ಸುದ್ದಿ

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಇಂದು ಭಾರತಕ್ಕೆ ಯಾವ್ಯಾವ ಸ್ಪರ್ಧೆಗಳಿವೆ? ಇಲ್ಲಿದೆ ಎಲ್ಲ ವಿವರ

Paris Olympics 2024 : ಶುಕ್ರವಾರ ಪುರುಷರ ಕುಸ್ತಿಯ 57 ಕೆ.ಜಿ ವಿಭಾಗದಲ್ಲಿ ಅಮನ್ ಗೆದ್ದ ಕಂಚಿನ ಪದಕದೊಂದಿಗೆ ಭಾರತದ ಒಟ್ಟು ಪದಕಗಳ ಸಂಖ್ಯೆ 6ಕ್ಕೆ ಏರಿದೆ. ಅದರಲ್ಲಿ 5 ಕಂಚಿನ ಪದಕವಾದರೆ ಒಂದು ಬೆಳ್ಳಿಯ ಪದಕವಾಗಿದೆ. ಬೆಳ್ಳಿಯನ್ನು ನೀರಜ್​ ಗೆದ್ದಿದ್ದರೆ, ಶೂಟರ್​​ ಮನು ಭಾಕರ್ ಎರಡು ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದರು. ಅದರಲ್ಲೊಂದು ಮಿಶ್ರ ತಂಡದಲ್ಲಿ ಸರಬ್​ಜೋತ್ ಸಿಂಗ್​ ಜತೆಗೆ. ಪುರುಷರ ಶೂಟಿಂಗ್​ನಲ್ಲಿ ಸ್ವಪ್ನಿಲ್ ಕುಸಾಳೆ ಮತ್ತೊಂದು ಪದಕ ಗೆದ್ದಿದ್ದರು. ಮತ್ತೊಂದು ಕಂಚಿನ ಪದಕ ಹಾಕಿ ತಂಡದ ಮೂಲಕ ದೊರಕಿದೆ. ಇದೀಗ ಅಮನ್​ ಒಂದು ಪದಕ ಗೆದ್ದಿದ್ದಾರೆ.

VISTARANEWS.COM


on

Paris Olympics 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಳೂರು: ಪ್ಯಾರಿಸ್ ಒಲಿಂಪಿಕ್ಸ್​ (Paris Olympics 2024) ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದೆ. ಶನಿವಾರ 10ನೇ ದಿನ ಸ್ಪರ್ಧೆಗಳು ನಡೆಯಲಿವೆ. ಆ ದಿನ ಭಾರತಕ್ಕೆ ಹೆಚ್ಚಿನ ಸ್ಪರ್ಧೆಗಳು ಇಲ್ಲ. ಗಾಲ್ಫ್​ ಹಾಗೂ ಫ್ರೀಸ್ಟೈಲ್​ ಕುಸ್ತಿ ಬಿಟ್ಟರೆ ಬೇರೆ ಯಾವುದೇ ಸ್ಪರ್ಧೆಯಲ್ಲಿ ಭಾರತೀಯರು ಇಲ್ಲ. 14ನೇ ದಿನವಾದ ಶುಕ್ರವಾರ ಸಂಜೆಯ ತನಕವೂ ಭಾರತಕ್ಕೆ ಹೆಚ್ಚಿನ ಲಾಭವೇನೂ ಆಗಿಲ್ಲ. ಆದರೆ, ಜಾವೆಲಿನ್ ಎಸೆತದಲ್ಲಿ ಬೆಳ್ಳಿಯ ಪದಕ ಗೆದ್ದಿರುವ ನೀರಜ್ ಚೋಪ್ರಾ ಅವರ ಬಗ್ಗೆಯೇ ದಿನವಿಡೀ ಚರ್ಚೆಗಳು ನಡೆದಿವೆ.

ಶುಕ್ರವಾರ ಪುರುಷರ ಕುಸ್ತಿಯ 57 ಕೆ.ಜಿ ವಿಭಾಗದಲ್ಲಿ ಅಮನ್ ಗೆದ್ದ ಕಂಚಿನ ಪದಕದೊಂದಿಗೆ ಭಾರತದ ಒಟ್ಟು ಪದಕಗಳ ಸಂಖ್ಯೆ 6ಕ್ಕೆ ಏರಿದೆ. ಅದರಲ್ಲಿ 5 ಕಂಚಿನ ಪದಕವಾದರೆ ಒಂದು ಬೆಳ್ಳಿಯ ಪದಕವಾಗಿದೆ. ಬೆಳ್ಳಿಯನ್ನು ನೀರಜ್​ ಗೆದ್ದಿದ್ದರೆ, ಶೂಟರ್​​ ಮನು ಭಾಕರ್ ಎರಡು ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದರು. ಅದರಲ್ಲೊಂದು ಮಿಶ್ರ ತಂಡದಲ್ಲಿ ಸರಬ್​ಜೋತ್ ಸಿಂಗ್​ ಜತೆಗೆ. ಪುರುಷರ ಶೂಟಿಂಗ್​ನಲ್ಲಿ ಸ್ವಪ್ನಿಲ್ ಕುಸಾಳೆ ಮತ್ತೊಂದು ಪದಕ ಗೆದ್ದಿದ್ದರು. ಮತ್ತೊಂದು ಕಂಚಿನ ಪದಕ ಹಾಕಿ ತಂಡದ ಮೂಲಕ ದೊರಕಿದೆ. ಇದೀಗ ಅಮನ್​ ಒಂದು ಪದಕ ಗೆದ್ದಿದ್ದಾರೆ.

ಇನ್ನು ಶುಕ್ರವಾರ ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಭಾರತದ ಪುರುಷರ ಮತ್ತು ಮಹಿಳಾ ತಂಡಗಳು 4×400 ಮೀಟರ್ ರಿಲೇಯ ಫೈನಲ್​​ಗೆ ಅರ್ಹತೆ ಪಡೆಯಲು ವಿಫಲವಾಗಿವೆ. ಜ್ಯೋತಿಕಾ ಶ್ರೀ ದಂಡಿ, ಶುಭಾ ವೆಂಕಟೇಶನ್, ವಿಥ್ಯಾ ರಾಮರಾಜ್, ಎಂ.ಆರ್.ಪೂವಮ್ಮ ಮತ್ತು ಪ್ರಾಚಿ ಅವರನ್ನೊಳಗೊಂಡ ಮಹಿಳಾ ತಂಡ 16 ತಂಡಗಳ ಪೈಕಿ 3:32:51 ಸಮಯದೊಂದಿಗೆ 15ನೇ ಸ್ಥಾನ ಪಡೆಯಿತು.

ಕ್ಯೂಬಾ ಮಾತ್ರ 3:33:99 ಸಮಯದೊಂದಿಗೆ ಅವರಿಗಿಂತ ಕೆಳಗಿತ್ತು. ಭಾರತವು ಆರಂಭದಿಂದಲೂ ಹಿಂದೆ ಬಿದ್ದಿತು, ನಂತರ ಅವರು ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಯುನೈಟೆಡ್ ಸ್ಟೇಟ್ಸ್ 3: 21:44 ಸಮಯದೊಂದಿಗೆ ಅಗ್ರಸ್ಥಾನವನ್ನು ಗಳಿಸಿತು, ಇದು ಅವರ ಋತುವಿನ ಅತ್ಯುತ್ತಮ ಸಮಯವಾಗಿದೆ. ಗ್ರೇಟ್ ಬ್ರಿಟನ್ ಕೂಡ 3:24:72 ಸಮಯದೊಂದಿಗೆ ತಮ್ಮ ಋತುವಿನ ಅತ್ಯುತ್ತಮ ಪ್ರದರ್ಶನವನ್ನು ನೀಡಿತು.

ಫ್ರಾನ್ಸ್ (3:24:73), ಜಮೈಕಾ (3:24:92), ಬೆಲ್ಜಿಯಂ (3:24:92), ನೆದರ್ಲ್ಯಾಂಡ್ಸ್ (3:25:03), ಐರ್ಲೆಂಡ್ (3:25:05) ಮತ್ತು ಕೆನಡಾ (3:25:77) ಮಹಿಳಾ ರಿಲೇ ಸ್ಪರ್ಧೆಯ ಫೈನಲ್​ಗೆ ಪ್ರವೇಶಿಸಿದ ಇತರ ತಂಡಗಳು.

ಇದನ್ನೂ ಓದಿ: Neeraj Chopra : ವಿನೇಶ್ ಪೋಗಟ್​​ಗೆ ಅನರ್ಹತೆ ಬಗ್ಗೆ ಮಾತನಾಡಿದ ನೀರಜ್ ಚೋಪ್ರಾ; ಏನಂದ್ರು ಅವರು?

ಭಾರತದ ಪುರುಷರಿಗೂ ಹಿನ್ನಡೆ

ಅಮೋಲ್ ಜಾಕೋಬ್, ರಾಜೇಶ್ ರಮೇಶ್, ಸಂತೋಷ್ ಕುಮಾರ್, ಮುಹಮ್ಮದ್ ಅಜ್ಮಲ್ ಮತ್ತು ಮುಹಮ್ಮದ್ ಅನಾಸ್ ಅವರನ್ನೊಳಗೊಂಡ ಪುರುಷರ ತಂಡವು ಕಠಿಣ ಹೋರಾಟ ನಡೆಸಿತು. ಆದರೆ 3: 00.58 ಸಮಯದೊಂದಿಗೆ 10 ನೇ ಸ್ಥಾನ ಪಡೆದ ನಂತರ ಸ್ಪರ್ಧೆಯಿಂದ ಹೊರಬಿದ್ದಿತು. ಅರ್ಹತಾ ಸುತ್ತಿನಲ್ಲಿ ಬೋಟ್ಸಾನಾ 2:57:76 ಸೆಕೆಂಡುಗಳಲ್ಲಿ ಗುರಿ ತಲುಪಿ ಅಗ್ರಸ್ಥಾನ ಪಡೆಯಿತು.

ಪುರುಷರ 4*400 ಮೀಟರ್ ರಿಲೇ ಫೈನಲ್ನಲ್ಲಿ ಗ್ರೇಟ್ ಬ್ರಿಟನ್ (2:58:88), ಯುನೈಟೆಡ್ ಸ್ಟೇಟ್ಸ್ (2:59:15), ಜಪಾನ್ (2:59:48), ಫ್ರಾನ್ಸ್ (2:59:53), ಬೆಲ್ಜಿಯಂ (2:59:84), ಜಾಂಬಿಯಾ (3:00:08) ಮತ್ತು ಇಟಲಿ (3:00:26) ತಂಡಗಳು ಫೈನಲ್​ಗೇರಿವೆ.

ಆಗಸ್ಟ್​​ 10ರಂದು ಭಾರತದ ಸ್ಪರ್ಧೆಗಳು ಈ ರೀತಿ ಇವೆ

ಗಾಲ್ಫ್ 12:30ಕ್ಕೆ: ಮಹಿಳಾ ರೌಂಡ್ 4 (ಪದಕದ ಸ್ಪರ್ಧೆ)

ಕುಸ್ತಿ 03:00: ಮಹಿಳಾ ಫ್ರೀಸ್ಟೈಲ್ 76 ಕೆಜಿ 1/8 ಫೈನಲ್. ರೀತಿಕಾ ಹೂಡಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Aman Sehrawat: 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್​ ಸೆಹ್ರಾವತ್; ಹೇಗಿತ್ತು ಅವರ ಪರಿಶ್ರಮ?

Aman Sehrawat: ಅಮನ್​ ಅವರು ಸೆಮಿಫೈನಲ್​ ಪಂದ್ಯದಲ್ಲಿ ಸೋತ ಬಳಿಕ 61 ಕೆಜಿ ತೂಕ ಹೊಂದಿದ್ದರಂತೆ. ಈ ವೇಳೆ ಅವರ ಕೋಚ್​ಗಳ ನೆರವಿನಿಂದ ಸತತ 10 ಗಂಟೆಗಳ ಕಾಲ ಕಸರತ್ತು ನಡೆಸಿ ಬರೋಬ್ಬರಿ 4.6 ಕೆಜಿ ತೂಕ ಇಳಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

VISTARANEWS.COM


on

Aman Sehrawa
Koo

ಪ್ಯಾರಿಸ್​: ನಿಗದಿತ ತೂಕಗಿಂತ ಹೆಚ್ಚಿನ ಭಾರ ಇದ್ದ ಕಾರಣ ಮಹಿಳಾ ಕುಸ್ತಿಪಟು ವಿನೇಶ್‌ ಪೋಗಟ್‌(vinesh phogat) ಫೈನಲ್​ ಪಂದ್ಯದಿಂದ ಅನರ್ಹಗೊಂಡು ಪದಕ ವಂಚಿತರಾಗಿದ್ದು ಎಲ್ಲರಿಗೂ ತಿಳಿದೇ ಇದೆ. ಇದರ ಬೆನ್ನಲ್ಲೇ ಶುಕ್ರವಾರ ನಡೆದಿದ್ದ 57 ಕೆಜಿ ವಿಭಾಗದ ಪುರುಷರ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಅಮನ್​ ಸೆಹ್ರಾವತ್(Aman Sehrawat)​ ಕೂಡ ಅನರ್ಹಗೊಳ್ಳುವ ಭೀತಿಗೆ ಎದುರಾಗಿದ್ದರಂತೆ. ಹೌದು, ಪಂದ್ಯಕ್ಕೂ ಮುನ್ನ ಅಮನ್​ ಕೇವಲ 10 ಗಂಟೆಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚಿನ ಪದಕ ಗೆದ್ದ ರೋಚಕ ಸಂಗತಿಯೊಂದನ್ನು ಅವರ ಕೋಚ್​ ಬಹಿರಂಗಪಡಿಸಿದ್ದಾರೆ.

ಹೌದು, ಅಮನ್​ ಅವರು ಸೆಮಿಫೈನಲ್​ ಪಂದ್ಯದಲ್ಲಿ ಸೋತ ಬಳಿಕ 61 ಕೆಜಿ ತೂಕ ಹೊಂದಿದ್ದರಂತೆ. ಈ ವೇಳೆ ಅವರ ಕೋಚ್​ಗಳ ನೆರವಿನಿಂದ ಸತತ 10 ಗಂಟೆಗಳ ಕಾಲ ಕಸರತ್ತು ನಡೆಸಿ ಬರೋಬ್ಬರಿ 4.6 ಕೆಜಿ ತೂಕ ಇಳಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಹೇಗಿತ್ತು ಅಮನ್​ ಕಸರತ್ತು?


ಕೋಚ್​ ವೀರೇಂದ್ರ ದಹಿಯಾ(virender dahiya coach) ನೀಡಿದ ಮಾಹಿತಿ ಪ್ರಕಾರ, ಅಮನ್​ ಗುರುವಾರ ಸಂಜೆ, ಅಂದರೆ ಸೆಮಿಫೈನಲ್​ ಮುಕ್ತಾಯದ ಬಳಿಕ 61.5 ಕೆಜಿ ತೂಕವನ್ನು ಹೊಂದಿದ್ದರು. ನಿಗದಿತ ಮಿತಿಗಿಂತ ನಿಖರವಾಗಿ 4.5 ಕಿಲೋಗ್ರಾಂಗಳಷ್ಟು ಹೆಚ್ಚು ತೂಕ ಹೊಂದಿದ್ದರು. ಈಗಾಗಲೇ ಕುಸ್ತಿಯಲ್ಲಿ ಒಂದು ಪದಕ ಕಳೆದುಕೊಂಡು ಆಘಾತದಲ್ಲಿದ್ದ ಕಾರಣ ಯಾವುದೇ ಕಾರಣಕ್ಕೂ ನಾವು ಮತ್ತೊಂದು ಪದಕ ಕಳೆದುಕೊಳ್ಳಬಾರದೆಂದು ನಿರ್ಧರಿಸಿ ಆರು ಸದಸ್ಯರ ಕುಸ್ತಿ ತಂಡದ ಹಿರಿಯ ಭಾರತೀಯ ತರಬೇತುದಾರರಾದ ಜಗಮಂದರ್ ಸಿಂಗ್ ಜತೆಗೂಡಿ ಅಮನ್​ಗೆ ವ್ಯಾಯಾಮ ಆರಂಭಿಸಲಾಯಿತು.

ತಮ್ಮ ಬಳಿ ಕೇವಲ 10 ಗಂಟೆ ಮಾತ್ರ ಉಳಿದಿತ್ತು. ಆರಂಭದಲ್ಲಿ ಅಮನ್​ಗೆ 1 ಗಂಟೆ ಟ್ರೆಡ್‌ಮಿಲ್‌ನಲ್ಲಿ ನಾನ್‌ಸ್ಟಾಪ್‌ ಓಟ ಅಭ್ಯಾಸ ಮಾಡಿಸಲಾಯಿತು. ಇದಾದ ಬಳಿಕ 5 ನಿಮಿಷ ವಿರಾಮ ನೀಡಿ ಬಳಿಕ ಸತತ ಒಂದೂವರೆ ಗಂಟೆ ಮ್ಯಾಚ್‌ ಸೆಷನ್‌ ಅಭ್ಯಾಸ ಮಾಡಿಸಿ 30 ನಿಮಿಷಗಳ ಕಾಲ ವಿರಾಮ ನೀಡಲಾಯಿತು. ಬಳಿಕ ಬಿಸಿ ನೀರಿನ ಸ್ನಾನ ಮಾಡಿಸಲಾಯಿತು. ಎಲ್ಲ ವ್ಯಾಯಮ ಮುಗಿದ ಬಳಿಕ ಅವರು 3.6 ಕಿಲೋಗಳನ್ನು ಕಳೆದುಕೊಂಡರು.

ಇದನ್ನೂ ಓದಿ Aman Sehrawat: ಬಾಲ್ಯದಲ್ಲೇ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದ ಅಮನ್​ ಇಂದು ದೇಶಕ್ಕಾಗಿ ಕಂಚು ಗೆದ್ದ ಸಾಧಕ

ಅಂತಿಮವಾಗಿ ಮಸಾಜ್ ಮಾಡಿ, ನಂತರ ಲಘು ಜಾಗಿಂಗ್ ಮತ್ತು 15 ನಿಮಿಷಗಳ ರನ್ನಿಂಗ್ ಸೆಷನ್ ಮಾಡಲಾಯಿತು. ಇದಾದ ಬಳಿಕ ಬೆಳಗಿನ ಜಾವ 4:30 ರ ಹೊತ್ತಿಗೆ, ಅವರ ತೂಕವು 56.9 ಕಿಲೋಗಳಿಗೆ ಕಡಿಮೆಯಾಯಿತು, ಅನುಮತಿಸುವ ಮಿತಿಗಿಂತ 100 ಗ್ರಾಂ ಕಡಿಮೆಯೇ ಆಗಿತ್ತು. ಬಳಿಕ ನಾವು ನಿಟ್ಟುಸಿರುವ ಬಿಟ್ಟೆವು ಎಂದು ಕೋಚ್​ ವೀರೇಂದ್ರ ದಹಿಯಾ ಹೇಳಿದ್ದಾರೆ.

ಕೇವಲ ನೀರು ಸೇವನೆ


ಅಮನ್‌ಗೆ ಯಾವುದೇ ಆಹಾರ ಪದಾರ್ಥಗಳನ್ನು ನೀಡಲಿಲ್ಲ. ಜೇನುತುಪ್ಪ ಬೆರಸಿದ ಉಗುರುಬೆಚ್ಚಗಿನ ನೀರು ಹಾಗೂ ಸ್ವಲ್ಪ ಕಾಫಿ ಕುಡಿಯಲು ಮಾತ್ರ ಅವಕಾಶ ನೀಡಲಾಗಿತ್ತು. ಅಲ್ಲದೇ ಕಂಚಿನ ಪದಕದ ಪಂದ್ಯ ಮುಗಿಯುವವರೆಗೂ ಅಮನ್‌ ನಿದ್ರೆಗೆ ಜಾರಲೇ ಇಲ್ಲ ಎಂದು ಕೋಚ್‌ಗಳು ತಿಳಿಸಿರುವುದಾಗಿ ವರದಿಗಳು ಉಲ್ಲೇಖಿಸಿವೆ.

Continue Reading

ಪ್ರಮುಖ ಸುದ್ದಿ

PM Narendra Modi: ಭೂಕುಸಿತ ಪೀಡಿತ ವಯನಾಡಿಗೆ ಇಂದು ನರೇಂದ್ರ ಮೋದಿ ಭೇಟಿ

ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ವಯನಾಡ್‌ ಭೂಕುಸಿತದ ಸಂತ್ರಸ್ತರನ್ನು ಆಸ್ಪತ್ರೆಗಳು ಮತ್ತು ಪರಿಹಾರ ಶಿಬಿರಗಳಲ್ಲಿ ಭೇಟಿ ಮಾಡಲಿದ್ದಾರೆ. ದುರಂತದಲ್ಲಿ ಸಂತ್ರಸ್ತರಾದವರಿಗೆ ಸರಿಯಾದ ಬೆಂಬಲ, ಪರಿಹಾರ ದೊರೆಯುವಿಕೆಯನ್ನು ಖಚಿತಪಡಿಸಿಕೊಳ್ಳಲಿದ್ದಾರೆ.

VISTARANEWS.COM


on

pm narendra modi wayanad landslide
Koo

ಹೊಸದಿಲ್ಲಿ: ದಾರುಣ ಭೂಕುಸಿತ (Kerala Landslide) ಸಂಭವಿಸಿದ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲು, ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು (ಆಗಸ್ಟ್ 10) ಕೇರಳದ ವಯನಾಡ್ (Wayanad Landslide) ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಪ್ರಧಾನಿ ಮೋದಿ ಭೂಕುಸಿತದ ಸಂತ್ರಸ್ತರನ್ನು ಆಸ್ಪತ್ರೆಗಳು ಮತ್ತು ಪರಿಹಾರ ಶಿಬಿರಗಳಲ್ಲಿ ಭೇಟಿ ಮಾಡಲಿದ್ದಾರೆ. ದುರಂತದಲ್ಲಿ ಸಂತ್ರಸ್ತರಾದವರಿಗೆ ಸರಿಯಾದ ಬೆಂಬಲ, ಪರಿಹಾರ ದೊರೆಯುವಿಕೆಯನ್ನು ಖಚಿತಪಡಿಸಿಕೊಳ್ಳಲಿದ್ದಾರೆ.

ವಯನಾಡ್‌ನ ಮಾಜಿ ಸಂಸದ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi), ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡುತ್ತಿರುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಭೇಟಿಯ ನಂತರ ಪ್ರಧಾನಿ ವಯನಾಡ್ ಭೂಕುಸಿತವನ್ನು ʼರಾಷ್ಟ್ರೀಯ ವಿಪತ್ತುʼ ಎಂದು ಘೋಷಿಸುತ್ತಾರೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

“ಮೋದಿ ಜೀ, ಭೀಕರ ದುರಂತದ ಬಗ್ಗೆ ವೈಯಕ್ತಿಕವಾಗಿ ಅವಲೋಕನ ಮಾಡಲು ವಯನಾಡ್‌ಗೆ ಭೇಟಿ ನೀಡುತ್ತಿರುವುದಕ್ಕಾಗಿ ಧನ್ಯವಾದಗಳು. ಇದೊಂದು ಒಳ್ಳೆಯ ನಿರ್ಧಾರ. ಪ್ರಧಾನಿ ಒಮ್ಮೆ ವಿನಾಶದ ಪ್ರಮಾಣವನ್ನು ನೇರವಾಗಿ ನೋಡಿದ ನಂತರ, ಅವರು ಅದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುತ್ತಾರೆ ಎಂದು ನನಗೆ ವಿಶ್ವಾಸವಿದೆ” ಎಂದು ಗಾಂಧಿ ಶುಕ್ರವಾರ ರಾತ್ರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮೋದಿ ಭೇಟಿಯ ಪೂರ್ಣ ವೇಳಾಪಟ್ಟಿ ಇಲ್ಲಿದೆ

ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಕೇರಳದ ಕಣ್ಣೂರು ತಲುಪುವ ನಿರೀಕ್ಷೆಯಿದೆ. ಅಲ್ಲಿಂದ ಅವರು ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಕೈಗೊಳ್ಳಲಿದ್ದಾರೆ. ನಂತರ, ಮಧ್ಯಾಹ್ನ 12:15ರ ಸುಮಾರಿಗೆ ಭೂಕುಸಿತದಿಂದ ಸಂತ್ರಸ್ತವಾಗಿರುವ ಸ್ಥಳಗಳಿಗೆ ನೇರ ಭೇಟಿ ನೀಡಲಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಸ್ಥಳಾಂತರ ಕಾರ್ಯಾಚರಣೆಗಳ ಕುರಿತು ರಕ್ಷಣಾ ತಂಡಗಳಿಂದ ವಿವರ ಪಡೆಯಲಿದ್ದಾರೆ. ಭೂಕುಸಿತದಿಂದ ಬದುಕುಳಿದವರು ಪ್ರಸ್ತುತ ಪುನರ್ವಸತಿ ಬಯಸುತ್ತಿರುವ ಪರಿಹಾರ ಶಿಬಿರ ಮತ್ತು ಆಸ್ಪತ್ರೆಗೆ ಪ್ರಧಾನಿ ಭೇಟಿ ನೀಡಲಿದ್ದಾರೆ. ಸಂತ್ರಸ್ತರೊಂದಿಗೆ ಸಂವಾದ ನಡೆಸಿ ಅವರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ. ನಂತರ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅಲ್ಲಿನ ಪರಿಹಾರ ಪ್ರಯತ್ನಗಳ ಬಗ್ಗೆ ವಿವರವಾಗಿ ತಿಳಿಯಲಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Kearala CM Pinarayi Vijayan) ಅವರು ಈ ವಾರದ ಆರಂಭದಲ್ಲಿ ಮೋದಿ ಅವರ ವಯನಾಡ್ ಭೇಟಿಯನ್ನು ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು. ಕೇಂದ್ರ ಸರ್ಕಾರ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.

400ಕ್ಕೂ ಹೆಚ್ಚು ಸಾವು

ಜುಲೈ 30ರಂದು ವಯನಾಡಿನ ಚೂರಲ್ಮಲಾ ಮತ್ತು ಮುಂಡಕ್ಕೈನಲ್ಲಿ ಸಂಭವಿಸಿದ ಭಾರಿ ಭೂಕುಸಿತ ವ್ಯಾಪಕ ವಿನಾಶವನ್ನು ಸೃಷ್ಟಿಸಿದ್ದವು. ಭೂಕುಸಿತದಲ್ಲಿ 400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 150 ಜನರು ಇನ್ನೂ ನಾಪತ್ತೆಯಾಗಿದ್ದಾರೆ. ಪತ್ತೆಯಾದ ಮೃತದೇಹಗಳ ಡಿಎನ್‌ಎ ಫಲಿತಾಂಶದ ಬಳಿಕ ಅಂತಿಮ ಸಾವಿನ ಸಂಖ್ಯೆ ಖಚಿತವಾಗಲಿದೆ ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: Wayanad Tragedy: ವಯನಾಡ್ ಭೂಕುಸಿತ; ದಕ್ಷಿಣ ಭಾರತದ ಸಿನಿಮಾ ನಟರಿಂದ ಸಂತ್ರಸ್ತರಿಗೆ ನೆರವಿನ‌ ಮಹಾಪೂರ

Continue Reading

ಕ್ರೀಡೆ

Aman Sehrawat: ಬಾಲ್ಯದಲ್ಲೇ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದ ಅಮನ್​ ಇಂದು ದೇಶಕ್ಕಾಗಿ ಕಂಚು ಗೆದ್ದ ಸಾಧಕ

Aman Sehrawat: ಚೊಚ್ಚಲ ಪ್ರಯತ್ನದಲ್ಲೇ ಪದಕ ಗೆದ್ದ ಅಮನ್​ ಸೆಹ್ರಾವತ್​ ಈ ಪದಕವನ್ನು ಅಗಲಿದ ತಂದೆ-ತಾಯಿಗೆ ಅರ್ಪಿಸಿದ್ದಾರೆ. ಕಂಚು ಗೆಲ್ಲುವ ಮೂಲಕ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಭಾರತದ ಅತ್ಯಂತ ಕಿರಿಯ ಸ್ಪರ್ಧಿ ಎಂಬ ಇತಿಹಾಸವನ್ನು ಕೂಡ ಅಮನ್​ ನಿರ್ಮಿಸಿದ್ದಾರೆ.

VISTARANEWS.COM


on

Aman Sehrawat
Koo

ಬೆಂಗಳೂರು: ಕೆಲವು ಕ್ರೀಡಾಪಟುಗಳ ಬಗ್ಗೆ ಬರೆಯುವಾಗ, ಓದುವಾಗ ಯಾವಾಗಲೂ ರೋಮಾಂಚನಗೊಳ್ಳುತ್ತೇವೆ. ಕಡು ಬಡತನದಲ್ಲಿ ಬೆಳೆದು ಕೊನೆಗೆ ಯಶಸ್ಸಿನ ಸಾಧನೆಯ ಗೌರಿಶಿಖರವನ್ನು ಏರಿ ಗೆಲುವಿನ ಬಾವುಟ ಹಾರಿಸಿದ ಅದೆಷ್ಟೋ ಕ್ರೀಡಾಪಟುಗಳಿದ್ದಾರೆ. ಇದೀಗ ಈ ಸಾಲಿಗೆ ಪ್ಯಾರಿಸ್​ ಒಲಿಂಪಿಕ್ಸ್​(paris olympics 2024) ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ 21 ವರ್ಷದ ಅಮನ್​ ಸೆಹ್ರಾವತ್(Aman Sehrawat)​ ಸೇರ್ಪಡೆಗೊಂಡಿದ್ದಾರೆ.

ಬಾಲ್ಯದಲ್ಲೇ ತಂದೆ ತಾಯಿಯನ್ನು ಕಳೆದುಕೊಂಡ…


ಬಡ ಕುಟುಂಬದಿಂದ ಬಂದ ಅಮನ್ ಸೆಹ್ರಾವತ್​ ಹರಿಯಾಣದ ಮೂಲದವರು. ಇಲ್ಲಿ ಜಜ್ಜರ್ ಜಿಲ್ಲೆಯ ಬಿರೋಹರ್ ಗ್ರಾಮದವರು. ಅವರ ಬಾಲ್ಯದ ಜೀವನ ಎಲ್ಲರಂತೆ ಖಷಿಯಿಂದ ಕೂಡಿರಲಿಲ್ಲ. ಕಾರಣ ಅವರು 11 ವರ್ಷ ಇದ್ದಾಗಲೇ ತಾಯಿಯನ್ನು(ತಾಯಿ ಕಮಲೇಶ್​​ ಸೆಹ್ರಾವತ್) ಕಳೆದುಕೊಂಡರು. ಈ ಆಘಾತದಿಂದ ಮಗ ಹೊರ ಬರಬೇಕು ಎನ್ನುವ ಉದ್ದೇಶದಿಂದ ಅಮನ್ ಅವರ ತಂದೆ(ಸೋಮ್​ವೀರ್​ ಸೆಹ್ರಾವತ್) ಮಗನನ್ನು ಕುಸ್ತಿಗೆ ಸೇರಿದರು. ತಾಯಿಯನ್ನು ಕಳೆದುಕೊಂಡ ನೋವು ಇನ್ನೇನು ಮಾಸಬೇಕು ಎನ್ನುವಷ್ಟರಲ್ಲಿ ಅಮನ್​ಗೆ ಮತ್ತೊಂದು ಬರ ಸಿಡಿಲು ಬಡಿಯಿತು. ಅನಾರೋಗ್ಯದಿಂದ ತಂದೆಯನ್ನು ಕೂಡ ಕಳೆದುಕೊಂಡರು. ತಂದೆ ತಾಯಿ ಇಬ್ಬರನ್ನು ಕಳೆದುಕೊಂಡ ಅವರು ಅಕ್ಷರಶಃ ಅನಾಥರಾಗಿದ್ದರು.

ಇದನ್ನೂ ಓದಿ Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಇಂದು ಭಾರತಕ್ಕೆ ಯಾವ್ಯಾವ ಸ್ಪರ್ಧೆಗಳಿವೆ? ಇಲ್ಲಿದೆ ಎಲ್ಲ ವಿವರ

ಅಣ್ಣನ ನೆರವಿಗೆ ನಿಂತ ತಂಗಿ…


ತಂದೆ ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದ ಅಮನ್​ ಮತ್ತು ಅವರ ಸಹೋದರಿ ಪೂಜಾ ಮುಂದೆ ಅಜ್ಜ, ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಆಶ್ರಯದಲ್ಲಿ ಬೆಳೆದರು. ಕುಸ್ತಿಯಲ್ಲಿ ಅಮನ್​ ಮುಂದುವರಿಯುಂತೆ ಮಾಡಿದ್ದು ಅವರ ಸಹೋದರಿ. ಪ್ರತಿಭಾವಂತನಾಗಿದ್ದ ಅಮನ್‌ 18ನೇ ವಯಸ್ಸಿಗೆ 23 ವಯೋಮಿತಿಯ ಕುಸ್ತಿ ಆಡಿ ಚಾಂಪಿಯನ್‌ ಆಗಿದ್ದರು. ಈ ಪ್ರದರ್ಶನದಿಂದ ಅವರು ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ತರಬೇತಿಗೆ ಆಯ್ಕೆಯಾದರು. ಇಲ್ಲಿ ಪ್ರವೀಣ್ ದಹಿಯಾ ಅವರ ಅಡಿಯಲ್ಲಿ ಪಟ್ಟುಬಿಡದೆ ತರಬೇತಿ ಪಡೆದರು. ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿದ್ದಾರೆ.

ಪದಕ ತಂದೆ-ತಾಯಿಗೆ ಅರ್ಪಣೆ


ಚೊಚ್ಚಲ ಪ್ರಯತ್ನದಲ್ಲೇ ಪದಕ ಗೆದ್ದ ಅಮನ್​ ಸೆಹ್ರಾವತ್​ ಈ ಪದಕವನ್ನು ಅಗಲಿದ ತಂದೆ-ತಾಯಿಗೆ ಅರ್ಪಿಸಿದ್ದಾರೆ. ಕಂಚು ಗೆಲ್ಲುವ ಮೂಲಕ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಭಾರತದ ಅತ್ಯಂತ ಕಿರಿಯ ಸ್ಪರ್ಧಿ ಎಂಬ ಇತಿಹಾಸವನ್ನು ಕೂಡ ಅಮನ್​ ನಿರ್ಮಿಸಿದ್ದಾರೆ. ಈ ಹಿಂದೆ ಈ ದಾಖಲೆ ಪಿವಿ ಸಿಂಧು ಅವರ ಹೆಸರಿನಲ್ಲಿತ್ತು. ಸಿಂಧು ರಿಯೋ ಒಲಿಂಪಿಕ್ಸ್​ನಲ್ಲಿ 21 ವರ್ಷ  1 ತಿಂಗಳು ಮತ್ತು 14 ದಿನಗಳಲ್ಲಿ ಪದಕ ಗೆದ್ದಿದ್ದರು.

ಭಾರತದಿಂದ ಸ್ಪರ್ಧಿಸಿದ್ದ ಏಕೈಕ ಕುಸ್ತಿಪಟು


ಅಮನ್​ ಈ ಬಾರಿಯ ಒಲಿಂಪಿಕ್ಸ್‌ನಲ್ಲಿ(Paris Olympics) ಭಾಗಿಯಾಗಿದ್ದ ಭಾರತದ ಏಕೈಕ ಪುರುಷ ಕುಸ್ತಿಪಟು ಎನಿಸಿಕೊಂಡಿದ್ದರು. 57 ಕೆ.ಜಿ. ವಿಭಾಗದ ಕುಸ್ತಿಯಲ್ಲಿ ಕಳೆದ ಟೋಕಿಯೊ ಬೆಳ್ಳಿ ಪದಕ ಗೆದ್ದಿದ್ದ ರವಿ ದಹಿಯಾ ಅವರನ್ನು ರಾಷ್ಟ್ರೀಯ ಆಯ್ಕೆ ಟ್ರಯಲ್ಸ್‌ನಲ್ಲಿ ಮಣಿಸುವ ಮೂಲಕ ಅಮನ್‌ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದರು.  -ಕಾರ್ಟರ್‌ ಫೈನಲ್‌ ಮತ್ತು ಕ್ವಾರ್ಟರ್‌ ಫೈನಲ್‌ನಲ್ಲಿ ತಾಂತ್ರಿಕ ಮೇಲುಗೈ ಸಾಧಿಸುವ ಮೂಲಕ ಜಯ ಸಾಧಿಸಿದ್ದಾಗಲೇ ಅಮನ್​ ಪದಕ ಗೆಲ್ಲುವುದು ನಿಶ್ಚಿತ ಎನ್ನಲಾಗಿತ್ತು. ಸೆಮಿ ಫೈನಲ್​ ಪಂದ್ಯದಲ್ಲಿ ಅಗ್ರ ಶ್ರೇಯಾಂಕದ ಜಪಾನ್‌ನ ರೀ ಹಿಗುಚಿ ವಿರುದ್ಧ ಸೋಲು ಕಂಡ ಕಾರಣ ಕಂಚಿನ ಪದಕ್ಕೆ ಹೋರಾಟ ನಡೆಸಿ ಇಲ್ಲಿ ಮೇಲುಗೈ ಸಾಧಿಸಿದರು. ಕಂಚಿನ ಪದಕ ಸ್ಪರ್ಧೆಯಲ್ಲಿ ಅಮನ್​ ಪೆರುಗ್ವೆಯ ಡರಿಯನ್‌ ಟೊಯ್‌ ಕ್ರೂಜ್‌ರನ್ನು 13-5 ಅಂಕಗಳಿಂದ ಸೋಲಿಸಿ ಕಂಚಿಗೆ ಕೊರಳೊಡ್ಡಿದರು.

Continue Reading

ವಿದೇಶ

Bangladesh Unrest: ಶೇಖ್‌ ಹಸೀನಾ ಓಡಿ ಬಂದ ಬಳಿಕ ಬಾಂಗ್ಲಾದೇಶದಲ್ಲಿ 232 ಜನರ ಕಗ್ಗೊಲೆ, ಹಿಂದೂಗಳೇ ಟಾರ್ಗೆಟ್

Bangladesh Unrest: ಈ ವಾರದ ಆರಂಭದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ನಿರ್ಗಮನದ ನಂತರ ದೇಶದ ಹಿಂದೂ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಿಂಸಾಚಾರಕ್ಕೆ ಪ್ರತಿಕ್ರಿಯೆಯಾಗಿ ಶುಕ್ರವಾರ, ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ನೂರಾರು ಜನ ಹಿಂದೂಗಳ ಪ್ರತಿಭಟನೆ ನಡೆಸಿದರು.

VISTARANEWS.COM


on

Bangladesh Unrest hindus protest
Koo

ಢಾಕಾ: ಕಳೆದ ಮೂರು ದಿನಗಳಲ್ಲಿ ಬಾಂಗ್ಲಾದೇಶದಾದ್ಯಂತ (Bangladesh Unrest) ನಡೆದ ವಿವಿಧ ದಾಳಿಗಳು ಮತ್ತು ಘರ್ಷಣೆಗಳಲ್ಲಿ (Bangladesh violence) ಕನಿಷ್ಠ 232 ಜನರು ಸಾವನ್ನಪ್ಪಿದ್ದಾರೆ. ಹೆಚ್ಚಾಗಿ ಅಲ್ಲಿನ ಅಲ್ಪಸಂಖ್ಯಾತ ಹಿಂದೂ (Hindus) ಸಮುದಾಯವನ್ನೇ ಗುರಿಯಾಗಿಸಿ ದಾಳಿಗಳು ನಡೆಯುತ್ತಿವೆ. ಅಮಾಯಕ ಹಿಂದೂಗಳ ಮೇಲೆ ಹಲ್ಲೆ, ಅತ್ಯಾಚಾರಗಳು (hindus protest) ನಿರಂತರವಾಗಿವೆ.

ಅಲ್ಲಿನ ಪ್ರಧಾನಿ ಶೇಖ್ ಹಸೀನಾ (Sheikh Hasina) ಅವರು ಆಗಸ್ಟ್ 5ರಂದು ರಾಜೀನಾಮೆ ನೀಡಿ ಭಾರತಕ್ಕೆ (India) ಪಲಾಯನ ಮಾಡಿದ್ದರು. ಅವರ ಪದಚ್ಯುತಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆಗಳು ನಡೆದಿದ್ದವು. ಕಳೆದ ಮೂರು ವಾರಗಳಿಂದ ಬಾಂಗ್ಲಾದೇಶದಲ್ಲಿ ನಡೆದ ತೀವ್ರ ಮತ್ತು ರಕ್ತಸಿಕ್ತ ಸರ್ಕಾರಿ ವಿರೋಧಿ ಪ್ರತಿಭಟನೆಗಳು ಶೇಖ್ ಹಸೀನಾ ಸರ್ಕಾರದ ಪತನಕ್ಕೆ ಕಾರಣವಾಯಿತು.

ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ (Muhammad Yunus) ನೇತೃತ್ವದ ಮಧ್ಯಂತರ ಸರ್ಕಾರ ದೇಶದ ಆಡಳಿತವನ್ನು ವಹಿಸಿಕೊಂಡಿದೆ. ವರದಿಗಳು ತಿಳಿಸುವಂತೆ ಇದುವರೆಗೆ 469 ಜನ ಗಲಭೆಗಳಲ್ಲಿ ಸತ್ತಿದ್ದಾರೆ. ಸ್ಥಳೀಯ ಮಾಧ್ಯಮಗಳು ಹೇಳುವಂತೆ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳಿಗೆ ತೀವ್ರ ಕಿರುಕುಳ ಸೃಷ್ಟಿಸಲಾಗುತ್ತಿದೆ. ಹಿಂಸಾಚಾರದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಯಭೀತರಾದ ಬಾಂಗ್ಲಾದೇಶಿಗಳು ಅಕ್ರಮವಾಗಿ ಭಾರತಕ್ಕೆ ದಾಟಲು ಹಲವಾರು ಪ್ರಯತ್ನಗಳನ್ನು ನಡೆಸಿದರು. ಆದರೆ ಅವರನ್ನು ಬಿಎಸ್‌ಎಫ್‌ ಹಿಮ್ಮೆಟ್ಟಿಸಿದೆ.

ಬಾಂಗ್ಲಾದೇಶದ ಪ್ರಮುಖ ವಿರೋಧ ಪಕ್ಷವಾದ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ, ಶೇಖ್ ಹಸೀನಾ ಅವರು ದೇಶದಲ್ಲಿ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದೆ. ಶೇಖ್‌ ಹಸೀನಾಗೆ ಆಶ್ರಯ ನೀಡಿರುವ ಹಿನ್ನೆಲೆಯಲ್ಲಿ, ಭಾರತವು ತನ್ನ ನೆರೆಹೊರೆಯವರೊಂದಿಗೆ ಸಂಬಂಧವನ್ನು ಹಾಳುಮಾಡುವ ಅಪಾಯದಲ್ಲಿದೆ ಎಂದು ಎಚ್ಚರಿಸಿದೆ.

ಜುಲೈ 16 ಮತ್ತು ಆಗಸ್ಟ್ 4ರ ನಡುವಿನ ಮೀಸಲಾತಿ ವಿರೋಧಿ ವಿದ್ಯಾರ್ಥಿ ಚಳುವಳಿಗಳ ವೇಳೆ ಒಟ್ಟು 328 ಸಾವುಗಳು ವರದಿಯಾಗಿವೆ ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ. ಹೀಗಾಗಿ, ಕಳೆದ 23 ದಿನಗಳಲ್ಲಿ ಒಟ್ಟು ಸಾವಿನ ಸಂಖ್ಯೆ 560 ಕ್ಕೆ ತಲುಪಿದೆ.

ಈ ವಾರದ ಆರಂಭದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ನಿರ್ಗಮನದ ನಂತರ ದೇಶದ ಹಿಂದೂ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಿಂಸಾಚಾರಕ್ಕೆ ಪ್ರತಿಕ್ರಿಯೆಯಾಗಿ ಶುಕ್ರವಾರ, ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ನೂರಾರು ಜನ ಹಿಂದೂಗಳ ಪ್ರತಿಭಟನೆ ನಡೆಸಿದರು. ಮುಸ್ಲಿಂ ಬಹುಸಂಖ್ಯಾತ ಬಾಂಗ್ಲಾದೇಶದಲ್ಲಿ ಹಿಂದೂ ಮನೆಗಳು, ವ್ಯಾಪಾರಗಳು ಮತ್ತು ದೇವಾಲಯಗಳ ಮೇಲೆ ದಾಳಿ ನಡೆದಿದೆ. ಇವುಗಳಲ್ಲಿ ಶಾಲಾ ಶಿಕ್ಷಕಿಯೊಬ್ಬರು ಸಾವನ್ನಪ್ಪಿ ಕನಿಷ್ಠ 45 ಮಂದಿ ಗಾಯಗೊಂಡರು.

ಬಾಂಗ್ಲಾದೇಶದ 17 ಕೋಟಿ ಜನಸಂಖ್ಯೆಯ ಸುಮಾರು 8 ಪ್ರತಿಶತ ಹಿಂದೂಗಳಿದ್ದಾರೆ. ಇವರು ಸಾಂಪ್ರದಾಯಿಕವಾಗಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಬೆಂಬಲಿಗರು. ಇದು ಕಳೆದ ತಿಂಗಳು ಕೋಟಾ ವಿರೋಧಿ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಹಿಂಸಾತ್ಮಕ ಘರ್ಷಣೆಯ ನಂತರ ಮುಸ್ಲಿಮರ ಕೋಪದ ಕೇಂದ್ರಬಿಂದುವಾಗಿದೆ.

ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಮುಹಮ್ಮದ್ ಯೂನಸ್ ನೇತೃತ್ವದಲ್ಲಿ ಗುರುವಾರ ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರವನ್ನು ನೇಮಿಸಲಾಯಿತು. ಸಂವಿಧಾನದ ಅಡಿಯಲ್ಲಿ, 90 ದಿನಗಳಲ್ಲಿ ಚುನಾವಣೆಯನ್ನು ನಡೆಸಬೇಕಾಗಿದೆ. ಆದರೆ ಯೂನಸ್ ಹಾಗೂ ಮಿಲಿಟರಿ ಮತ್ತು ಅಧ್ಯಕ್ಷರು, ಚುನಾವಣೆಗಳು ಯಾವಾಗ ನಡೆಯುತ್ತವೆ ಎಂಬುದರ ಕುರಿತು ಪ್ರತಿಕ್ರಿಯಿಸಿಲ್ಲ.

ಇದನ್ನೂ ಓದಿ: Muhammad Yunus: ಹಿಂದುಗಳನ್ನು ಮೊದಲು ರಕ್ಷಿಸಿ; ಬಾಂಗ್ಲಾದೇಶದ ಮೊಹಮ್ಮದ್‌ ಯೂನಸ್‌ಗೆ ಮೋದಿ ಆಗ್ರಹ

Continue Reading
Advertisement
Aman Sehrawa
ಕ್ರೀಡೆ19 mins ago

Aman Sehrawat: 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್​ ಸೆಹ್ರಾವತ್; ಹೇಗಿತ್ತು ಅವರ ಪರಿಶ್ರಮ?

Duniya Vijay Starrer Bheema Movie Collects three and half crore
ಸ್ಯಾಂಡಲ್ ವುಡ್32 mins ago

Duniya Vijay: ಮೊದಲ ದಿನದ ಗಳಿಕೆಯಲ್ಲಿ ʻಬ್ಲಾಕ್‌ ಕೋಬ್ರಾʼ ಭರ್ಜರಿ ಅಬ್ಬರ; ʻಭೀಮʼಗೆ ಬಹುಪರಾಕ್ ಎಂದ ಪ್ರೇಕ್ಷಕರು!

Namma Metro ticket price hike
ಬೆಂಗಳೂರು51 mins ago

Namma Metro Ticket Price Hike: ಮೆಟ್ರೋ ಟಿಕೆಟ್‌ ದರದ ಮೇಲೆ ಕೈ ಇಟ್ರೋ! ಬೆಂಗಳೂರು ಜನರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ?

IPL 2025
ಕ್ರೀಡೆ1 hour ago

IPL 2025: ರಾಜಸ್ಥಾನ್​ ರಾಯಲ್ಸ್​ಗೆ ರಾಹುಲ್​ ದ್ರಾವಿಡ್​ ನೂತನ ಕೋಚ್​?

pm narendra modi wayanad landslide
ಪ್ರಮುಖ ಸುದ್ದಿ1 hour ago

PM Narendra Modi: ಭೂಕುಸಿತ ಪೀಡಿತ ವಯನಾಡಿಗೆ ಇಂದು ನರೇಂದ್ರ ಮೋದಿ ಭೇಟಿ

Nikkita Ghag Breaks Internet With Naked Photoshoot
ಬಾಲಿವುಡ್2 hours ago

Nikkita Ghag: ಬೆತ್ತಲೆ ಫೋಟೋಶೂಟ್‌ನೊಂದಿಗೆ ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ ಖ್ಯಾತ ಬಾಲಿವುಡ್‌ ನಟಿ!

Aman Sehrawat
ಕ್ರೀಡೆ2 hours ago

Aman Sehrawat: ಬಾಲ್ಯದಲ್ಲೇ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದ ಅಮನ್​ ಇಂದು ದೇಶಕ್ಕಾಗಿ ಕಂಚು ಗೆದ್ದ ಸಾಧಕ

Venu Swamy Prediction On Naga Chaitanya And Sobhita Dhulipala Engagement
ಟಾಲಿವುಡ್2 hours ago

Venu Swamy: ಚೈತು-ಶೋಭಿತಾದು ಜಾತಕ ಮಾತ್ರವಲ್ಲ ನಿಶ್ಚಿತಾರ್ಥ ಮುಹೂರ್ತವೇ ಸರಿಯಿಲ್ಲ ಎಂದ ಜ್ಯೋತಿಷಿ ವೇಣುಸ್ವಾಮಿ!

Bangladesh Unrest hindus protest
ವಿದೇಶ2 hours ago

Bangladesh Unrest: ಶೇಖ್‌ ಹಸೀನಾ ಓಡಿ ಬಂದ ಬಳಿಕ ಬಾಂಗ್ಲಾದೇಶದಲ್ಲಿ 232 ಜನರ ಕಗ್ಗೊಲೆ, ಹಿಂದೂಗಳೇ ಟಾರ್ಗೆಟ್

Tharun Sudhir And Sonal Montero Haldi Shastra Photos
ಸ್ಯಾಂಡಲ್ ವುಡ್2 hours ago

Tharun Sudhir: ತರುಣ್ ಸುಧೀರ್-ಸೋನಲ್ ಮದುವೆ ಸಂಭ್ರಮ; ಅದ್ಧೂರಿಯಾಗಿ ನಡೆದ ಅರಿಶಿಣ ಶಾಸ್ತ್ರ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ6 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ7 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌