Viral News : ರೈಲಿನಲ್ಲಿ ಹುಟ್ಟಿದ ಹೆಣ್ಣು ಮಗುವಿಗೆ ರೈಲಿನದ್ದೇ ಹೆಸರಿಟ್ಟರು! - Vistara News

ಪ್ರಮುಖ ಸುದ್ದಿ

Viral News : ರೈಲಿನಲ್ಲಿ ಹುಟ್ಟಿದ ಹೆಣ್ಣು ಮಗುವಿಗೆ ರೈಲಿನದ್ದೇ ಹೆಸರಿಟ್ಟರು!

Viral News : ಸಹ ಪ್ರಯಾಣಿಕರ ನೆರವಿನಿಂದ ಮಗುವಿನ ಜನುಮ ನೀಡಿದ ಮಹಿಳೆ ರೈಲಿನ ಹೆಸರನ್ನು ಮಗುವಿಗೆ ಇಡುವ ಮೂಲಕ ವಿಶೇಷ ಎನಿಸಿಕೊಂಡಿದ್ದಾರೆ.

VISTARANEWS.COM


on

Train Birth
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿದಿಶಾ: ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಚಲಿಸುತ್ತಿದ್ದ ರೈಲಿನಲ್ಲೇ ಜನಿಸಿದ ಹೆಣ್ಣು ಮಗುವಿಗೆ (Girl Child) ಆ ರೈಲಿನ ಹೆಸರಿಟ್ಟಿರುವ ಅಪರೂಪದ ಪ್ರಸಂಗ ನಡೆದಿದೆ (Viral News). 24 ವರ್ಷದ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡು ಮುಂದಿನ ನಿಲ್ದಾಣ ತಲುಪುವ ಮೊದಲೇ ಮಗುವಿಗೆ ಜನ್ಮ ನೀಡಿದ್ದರು. ಮುಂಬೈ ಮತ್ತು ವಾರಣಾಸಿ ನಡುವಿನ ಕಾಮಯಾನಿ ಎಕ್ಸ್​ಪ್ರೆಸ್ (Kamayani Experss)​ ರೈಲಿನಲ್ಲಿ ಘಟನೆ ನಡೆದಿದೆ.

ಮಹಿಳೆ ತನ್ನ ಪತಿಯೊಂದಿಗೆ ಮಹಾರಾಷ್ಟ್ರದ ನಾಸಿಕ್​ನಿಂದ ಮಧ್ಯಪ್ರದೇಶದ ಸತ್ನಾಗೆ ಪ್ರಯಾಣಿಸುತ್ತಿದ್ದರು. ಭೋಪಾಲ್ ಮತ್ತು ವಿದಿಶಾ ನಡುವೆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ ಎಂದು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (RPF) ಇನ್​ಸ್ಪೆಕ್ಟರ್​ ಮಂಜು ಮಹೋಬೆ ತಿಳಿಸಿದ್ದಾರೆ. ಆ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಗರ್ಭಿಣಿಗೆ ಹೆರಿಗೆ ಮಾಡಿಸಲು ಸಹಾಯ ಮಾಡಿದ್ದಅರೆ. ಪುರುಷ ಪ್ರಯಾಣಿಕರು ಅಧಿಕಾರಿಗಳಿಗೆ ಮಾಹಿತಿ ತಲುಪಿಸಿದ್ದರು.

ರೈಲು ವಿದಿಶಾ ರೈಲ್ವೆ ನಿಲ್ದಾಣಕ್ಕೆ ಬಂದ ನಂತರ, ನವಜಾತ ಶಿಶು ಮತ್ತು ತಾಯಿಯನ್ನು ಅವರ ಆರೋಗ್ಯದ ಪರೀಕ್ಷೆಗಾಗಿ ಹರ್ದಾ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇಬ್ಬರೂ ಚೆನ್ನಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ರೈಲಿನಲ್ಲಿ ಜನಿಸಿದ ಮಗುವಿಗೆ ‘ಕಾಮಯಾನಿ’ ಎಂದು ಹೆಸರಿಸಿಟ್ಟಿದ್ದಾರೆ.

ಹೆಣ್ಮಕ್ಳೇ ಸ್ಟ್ರಾಂಗು ಗುರು; ಮನೆಗೆ ನುಗ್ಗಿದ ಕಳ್ಳರನ್ನು ಒದ್ದೋಡಿಸಿದ ತಾಯಿ-ಮಗಳು!

ಹೈದರಾಬಾದ್:‌ ಬರೀ ಹೆಣ್ಣುಮಕ್ಕಳೇ ಇರುವ, ಒಂಟಿ ಮಹಿಳೆಯರು ವಾಸಿಸುವ ಮನೆಗಳಿಗೆ ನುಗ್ಗಿ, ದರೋಡೆ ಮಾಡುವ ಪ್ರಕರಣಗಳು ನಗರಗಳಲ್ಲಿ ಇತ್ತೀಚೆಗೆ ಜಾಸ್ತಿಯಾಗಿವೆ. ಆದರೆ, ಹೈದರಾಬಾದ್‌ನಲ್ಲಿ (Hyderabad) ಮನೆಗೆ ನುಗ್ಗಿದ ಇಬ್ಬರು ದರೋಡೆಕೋರರ (Robbers) ವಿರುದ್ಧ ತಾಯಿ-ಮಗಳು ಹೋರಾಡಿ, ಅವರನ್ನು ಬಡಿದು ಮನೆಯಿಂದ ಓಡಿಸುವ ಮೂಲಕ ಶೌರ್ಯ ಮೆರೆದಿದ್ದಾರೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ (Viral Video) ಆಗಿದ್ದು, ತಾಯಿ-ಮಗಳ ಸಾಹಸವನ್ನು ಜನ ಕೊಂಡಾಡಿದ್ದಾರೆ.

ಇದನ್ನೂ ಓದಿ : IPL 2024 : ಡಾನ್ಸ್​ ಮಾಡಿ ಪ್ರೇಕ್ಷಕರನ್ನು ರಂಜಿಸಿದ ಕೊಹ್ಲಿ, ಇಲ್ಲಿದೆ ವಿಡಿಯೊ

ಹೈದರಾಬಾದ್‌ನ ರಸೂಪ್‌ಪುರದ ಪೈಗಾಹ್‌ ಕಾಲೋನಿಯಲ್ಲಿರುವ ಮನೆಗೆ ಇಬ್ಬರು ಕಳ್ಳರು ನುಗ್ಗಿದ್ದಾರೆ. ಶಸ್ತ್ರಸಜ್ಜಿತವಾಗಿಯೇ ಮನೆಗೆ ನುಗ್ಗಿದ ಅವರು, ತಾಯಿ-ಮಗಳನ್ನು ಕೊಂದು, ಮನೆಯಲ್ಲಿರುವ ನಗ-ನಾಣ್ಯಗಳನ್ನು ಕದ್ದೊಯ್ಯುವ ಉದ್ದೇಶ ಹೊಂದಿದ್ದರು ಎಂದು ತಿಳಿದುಬಂದಿದೆ. ಆದರೆ, ಇಬ್ಬರೂ ಕಳ್ಳರ ವಿರುದ್ಧ ತಾಯಿ-ಮಗಳು ಹೋರಾಡಿದ್ದಾರೆ. ಅವರಿಗೆ ಬಡಿದು, ಒದ್ದು ಮನೆಯಿಂದ ಓಡಿಸಿದ್ದಾರೆ. ಆ ಮೂಲಕ ಇಬ್ಬರೂ ಶೌರ್ಯ ಮೆರೆದಿದ್ದಾರೆ. ತಾಯಿ-ಮಗಳ ಹೊಡೆತ ತಾಳದ ಕಳ್ಳರು ಎದ್ನೋ, ಬಿದ್ನೋ ಎಂದು ಕಾಲ್ಕಿತ್ತಿದ್ದಾರೆ.

ಮನೆಯ ಬಾಗಿಲಿನ ಬಳಿ ಕಳ್ಳನೊಬ್ಬ ಇಬ್ಬರ ಕೈಗೆ ಸಿಕ್ಕಿದ್ದಾನೆ. ಆತನು ಇಬ್ಬರ ಮೇಲೆ ಹಲ್ಲೆ ನಡೆಸಿ, ದರೋಡೆ ಮಾಡಲು ಮುಂದಾಗುತ್ತಲೇ ತಾಯಿ-ಮಗಳು ಆತನನ್ನು ಹಿಮ್ಮೆಟ್ಟಿಸಿದ್ದಾರೆ. ಅವನಿಗೆ ಹೊಡೆದು, ಬಡಿದು ಮನೆಯಿಂದ ಓಡಿಸಿದ್ದಾರೆ. ಮತ್ತೊಬ್ಬ ಕಳ್ಳನು ಮನೆಯೊಳಗೆ ಅವಿತು ಕೂತಿದ್ದು, ಇಬ್ಬರೂ ಮನೆಯೊಳಗೆ ಹೋಗಿ ಆತನಿಗೂ ನಾಲ್ಕು ಕೊಟ್ಟಿದ್ದಾರೆ. ಅವನೂ ಎದ್ನೋ-ಬಿದ್ನೋ ಎಂದು ಮನೆಯಿಂದ ಓಡಿ ಹೋಗಿದ್ದಾನೆ.

ಇಬ್ಬರೂ ದರೋಡೆಕೋರರನ್ನು ತಾಯಿ-ಮಗಳು ಕೂಡಿ ಹಿಮ್ಮೆಟ್ಟಿಸಿದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೈದರಾಬಾದ್‌ ಪೊಲೀಸರು ಕೂಡ ಪ್ರಕರಣವನ್ನು ದೃಢಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಂತೂ ತಾಯಿ-ಮಗಳ ಧೈರ್ಯವನ್ನು ಕಂಡ ಜನ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

PUC Exam 2024: ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ!

PUC Exam 2024: ಪಿಯುಸಿ ಎರಡನೇ ವಾರ್ಷಿಕ ಪರೀಕ್ಷೆಯನ್ನು ಬರೆಯಲು ರಾಜ್ಯಾದ್ಯಂತ ಒಟ್ಟು 1,49,300 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 84,933 ವಿದ್ಯಾರ್ಥಿಗಳು ಹಾಗೂ 64,367 ವಿದ್ಯಾರ್ಥಿನಿಯರು ಇದ್ದಾರೆ. ಇನ್ನು, 32,848 ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಮಂಡಳಿಯು ಸಕಲ ಸಿದ್ಧತೆ ಮಾಡಿಕೊಂಡಿದೆ.

VISTARANEWS.COM


on

PUC Exam 2024
Koo

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು (KSEAB) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 (PUC Exam 2024) ನಡೆಯಲಿದೆ. ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು, ಅವಶ್ಯಕತೆ ಇರುವ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಇನ್ನು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಸ್‌ ಸಂಚಾರ ಸೇವೆಯು ಉಚಿತವಾಗಿ ಸಿಗಲಿದೆ.

ರಾಜ್ಯಾದ್ಯಂತ 301 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಂಡಳಿಯು ನಾಳೆಯಿಂದ ಪ್ರಾರಂಭವಾಗಿ ಮೇ 16ರವರೆಗೂ ಈ ಪರೀಕ್ಷೆ ನಡೆಸಲಿದೆ. ದ್ವಿತೀಯ ಪಿಯುಸಿ ಮೊದಲ ವಾರ್ಷಿಕ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಎರಡನೇ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಂಡಿದ್ದಾರೆ. ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಅನುತ್ತೀರ್ಣರಾದ ಕೆಲ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

SSLC exam

1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಎರಡನೇ ವಾರ್ಷಿಕ ಪರೀಕ್ಷೆಯನ್ನು ಬರೆಯಲು ರಾಜ್ಯಾದ್ಯಂತ ಒಟ್ಟು 1,49,300 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 84,933 ವಿದ್ಯಾರ್ಥಿಗಳು ಹಾಗೂ 64,367 ವಿದ್ಯಾರ್ಥಿನಿಯರು ಇದ್ದಾರೆ. ಇನ್ನು, 32,848 ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಮಂಡಳಿಯು ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.

ಮೇ 9 ರಂದು ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ, ಮೇ 11 ರಂದು ಸಮಾಜಶಾಸ್ತ್ರ, ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಮೇ 13 ರಂದು ಅರ್ಥಶಾಸ್ತ್ರ, ಮೇ 14 ರಂದು ಐಚ್ಛಿಕ ಕನ್ನಡ, ಲೆಕ್ಕ ಶಾಸ್ತ್ರ, ಮೇ 15 ರಂದು ಹಿಂದಿ ಪರೀಕ್ಷೆಗಳು ನಡೆಯಲಿವೆ. ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌ ಭಾಷಾ ಪರೀಕ್ಷೆಗಳು ಮೇ 16 ರಂದು ಬೆಳಗಿನ ಅವಧಿಯಲ್ಲಿ ನಡೆಯಲಿವೆ.

ಇತರೆ ಕಲಾ ಮತ್ತು ಕೌಶಲ ವಿಭಾಗಕ್ಕೆ ಸಂಬಂಧಪಟ್ಟ ವಿಷಯಗಳಾದ ಹಿಂದುಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್‌, ಆಟೋಮೊಬೈಲ್‌, ಬ್ಯೂಟಿ ಅಂಡ್‌ ವೆಲ್‌ನೆಸ್‌ ಪರೀಕ್ಷೆಗಳು ಮಧ್ಯಾಹ್ನ 2.15 ರಿಂದ ಸಂಜೆ 4.30 ರವರೆಗೆ ನಡೆಯಲಿವೆ. ಆದರೆ, ದ್ವಿತೀಯ ಪಿಯುಸಿ ಪರೀಕ್ಷೆ 2 ನಡೆಯುತ್ತಿರುವುದರಿಂದ ಸಿಇಟಿ ಬರೆಯುವ ಮಕ್ಕಳಿಗೆ ತೊಂದರೆಯಾಗುತ್ತಿದೆ. ಇದರಿಂದ ಮಕ್ಕಳು ಗೊಂದಲಕ್ಕೀಡಾಗಿದ್ದಾರೆ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೆಕ್ಷನ್‌ 144 ಜಾರಿ

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ. ಪರೀಕ್ಷೆಯು ದ್ವಿತೀಯ ಪಿಯುಸಿ ಪರೀಕ್ಷೆ ನಡೆದ ಮಾದರಿಯಲ್ಲೇ ನಡೆಯಲಿದೆ. ಆದರೆ ಈ ಬಾರಿ ಪರೀಕ್ಷೆ ನಡೆಯುವುದನ್ನು ವೆಬ್ ಕ್ಯಾಮೆರಾ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: CET 2024: ಸಿಇಟಿ ಮರು ಪರೀಕ್ಷೆಯೋ? ಗ್ರೇಸ್‌ ಮಾರ್ಕ್ಸ್‌ ಭಾಗ್ಯವೋ? ನಾಳೆ ನಿರ್ಧಾರ ಪ್ರಕಟ?

Continue Reading

ಬೆಂಗಳೂರು

Car Accident: ಮಾದಾವರ ಟೋಲ್‌ಗೇಟ್ ಬಳಿ ಕಾರು ಅಪಘಾತ ಪ್ರಕರಣ; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಸಾವು

Car Accident: ಬೆಂಗಳೂರು-ತುಮಕೂರು ಹೆದ್ದಾರಿಯ ಮಾದಾವರ ಟೋಲ್‌ಗೇಟ್ ಬಳಿ ಏ.21ರಂದು ಮಾರುತಿ ಓಮ್ನಿಗೆ ಬಲೆನೊ ಕಾರು ಡಿಕ್ಕಿಯಾಗಿ ಅಪಘಾತ ನಡೆದಿತ್ತು. ಅಂದು ಓಮ್ನಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದ್ದರಿಂದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಳು. ಅಪಘಾತದಲ್ಲಿ ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಭಾನುವಾರ ಕೊನೆಯುಸಿರೆಳೆದಿದ್ದಾರೆ.

VISTARANEWS.COM


on

Car Accident
Koo

ಬೆಂಗಳೂರು: ಮಾದಾವರ ಟೋಲ್‌ಗೇಟ್ ಬಳಿ ಏ.21ರಂದು ನಡೆದಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಭಾನುವಾರ ಮೃತಪಟ್ಟಿದ್ದಾರೆ. ಇದರಿಂದ ಪ್ರಕರಣದಲ್ಲಿ ಸಾವಿನ ಸಂಖ್ಯೆ 4ಕ್ಕೇರಿದೆ. ಅಪಘಾತದಲ್ಲಿ ಮಾರುತಿ ಬಲೆನೊ ಕಾರು ಡಿಕ್ಕಿಯಾಗಿದ್ದರಿಂದ ಪಲ್ಟಿಯಾದ ಓಮ್ನಿಗೆ ಬೆಂಕಿ ಹೊತ್ತಿಕೊಂಡಿತ್ತು. ಇದರಿಂದ ಬಾಲಕಿಯೊಬ್ಬಳು ಸಜೀವ ದಹನವಾಗಿದ್ದಳು. ಘಟನೆಯಲ್ಲಿ (Car Accident) ಗಾಯಗೊಂಡಿದ್ದ 14 ಜನರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿತ್ತು, ಈ ಪೈಕಿ ಮೂವರು ಇದೀಗ ಕೊನೆಯುಸಿರೆಳೆದಿದ್ದಾರೆ.

ಘಟನೆಯ ವಿವರ

ಬೆಂಗಳೂರು-ತುಮಕೂರು ಹೆದ್ದಾರಿಯ ಮಾದಾವರ ಟೋಲ್‌ಗೇಟ್ ಬಳಿ ಏ.21ರಂದು ರಾತ್ರಿ ಮಾರುತಿ ಓಮ್ನಿ (Maruti Omni) ವಾಹನಕ್ಕೆ ಬಲೆನೊ ಕಾರು (Baleno) ಹಿಂದಿನಿಂದ ಡಿಕ್ಕಿಯಾದ (Road Accident) ಪರಿಣಾಮ ಬಾಲಕಿಯೊಬ್ಬಳು (girl death) ಮೃತಪಟ್ಟು, ನಾಲ್ವರ ಸ್ಥಿತಿ ಗಂಭೀರವಾಗಿತ್ತು.

ಓಮ್ನಿಯಲ್ಲಿದ್ದವರು ಅಬ್ಬಿಗೆರೆ, ದಾಸಾನುಪುರದ ಸಂಬಂಧಿಕರ ಮನೆಯಿಂದ ಬರುತ್ತಿದ್ದಾಗ ದುರಂತ ಘಟಿಸಿತ್ತು ಒಟ್ಟು ಎಂಟು ಜನ ಮಾರುತಿ ಓಮ್ನಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಬಲೆನೊ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಬಲೆನೊ ಕಾರು ಹಿಂದಿನಿಂದ ಬಂದು ಡಿಕ್ಕಿ ಹೊಡೆದ ರಭಸಕ್ಕೆ ಓಮ್ನಿ ಮೂರು ಪಲ್ಟಿಯಾಗಿತ್ತು. ಈ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿತ್ತು. ಇದರಿಂದ 14 ವರ್ಷದ ಬಾಲಕಿ ದಿವ್ಯ ಸ್ಥಳದಲ್ಲೇ ಸಾವಿಗೀಡಾಗಿದ್ದಳು.

ಓಮ್ನಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಎಂಟು ಜನರಲ್ಲಿ ಮಾಯಾಂಕ್, ಮಂಜುಳ, ಸುನಿತಾ, ತರುಣ್, ಮಹೇಶ್, ನಮನ್, ಶಾಂತಿಲಾಲ್ ಗಾಯಗೊಂಡಿದ್ದರು. ಎಲ್ಲರೂ ದಾಸನಪುರ ನಿವಾಸಿಗಳು. ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ನಮನ್, ಸುನಿತಾ, ಮಾಯಾಂಕ್ ಚಿಕಿತ್ಸೆ ಫಲಿಸದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ | Amrita Pandey: ಭೋಜ್‌ಪುರಿ ಜನಪ್ರಿಯ ನಟಿ ಅಮೃತಾ ಪಾಂಡೆ ಆತ್ಮಹತ್ಯೆ; ಸಾವಿಗೆ ಮುನ್ನ ಬರೆದ ವಾಟ್ಸಾಪ್ ಸ್ಟೇಟಸ್‌ನಲ್ಲಿ ಏನಿದೆ?

ಮತ್ತೊಂದು ಕಾರಿನಲ್ಲಿದ್ದ ಚಾಲಕ ರಕ್ಷಿತ್, ಚೇತನ್, ಮುಬಾರಕ್, ಸಲ್ಮಾ ಸೇರಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದವು. ಅವರು ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಅಪಘಾತಕ್ಕೆ ಕಾರಣವಾದ ಬಾಲೆನೋ ಕಾರು ಚಾಲಕ ಇನ್ಶೂರೆನ್ಸ್ ಹಣ ಕಟ್ಟದೆ ಫೇಕ್ ನಂಬರ್ ಹಾಕಿದ್ದ ಎನ್ನಲಾಗಿದೆ. ಜತೆಗೆ ಇದರ ಅಸಲಿ ಕಾರಿನ ಕಾರು ನಂಬರ್ ಬೆಳಗಾವಿಯ ಪಲ್ಲವಿ ಎಂಬುವವರಿಗೆ ಸೇರಿದ್ದು, ಹೀಗಾಗಿ ಡಿವೈಎಸ್ಪಿ ಜಗದೀಶ್ ನೇತೃತ್ವದಲ್ಲಿ ತನಿಖೆ ಚುರಕುಗೊಂಡಿದೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕರ್ನಾಟಕ

CET 2024: ಸಿಇಟಿ ಮರು ಪರೀಕ್ಷೆಯೋ? ಗ್ರೇಸ್‌ ಮಾರ್ಕ್ಸ್‌ ಭಾಗ್ಯವೋ? ನಾಳೆ ನಿರ್ಧಾರ ಪ್ರಕಟ?

CET 2024: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳನ್ನು ಕೇಳಿರುವುದು ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸಿದೆ. ಇದರ ಬೆನ್ನಲ್ಲೇ, ತಜ್ಞರ ಸಮಿತಿಯ ವರದಿ ಆಧಾರದ ಮೇಲೆ ಸೋಮವಾರ ರಾಜ್ಯ ಸರ್ಕಾರವು ಅಂತಿಮ ನಿರ್ಧಾರ ಪ್ರಕಟಿಸಲಿದೆ ಎಂದು ಮೂಲಗಳು ತಿಳಿಸಿವೆ. ಹಾಗಾಗಿ, ಎಲ್ಲರ ಗಮನವೀಗ ರಾಜ್ಯ ಸರ್ಕಾರದ ತೀರ್ಮಾನದ ಮೇಲಿದೆ.

VISTARANEWS.COM


on

CET
Koo

ಬೆಂಗಳೂರು: ಎಂಜಿನಿಯರಿಂಗ್‌ ಸೇರಿ ಹಲವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (CET 2024) ಔಟ್‌ ಆಫ್‌ ಸಿಲಬಸ್‌ (Out Of Syllabus) ಪ್ರಶ್ನೆಗಳನ್ನು ಕೇಳಿರುವ ಬಗ್ಗೆ ಪರಿಶೀಲನೆ ನಡೆಸಲು ರಚಿಸಿರುವ ತಜ್ಞರ ಸಮಿತಿಯು ರಾಜ್ಯ ಸರ್ಕಾರಕ್ಕೆ (Karnataka Government) ವರದಿ ಸಲ್ಲಿಸಿದೆ. ತಜ್ಞರ ಸಮಿತಿಯ ವರದಿ ಅನ್ವಯ ರಾಜ್ಯ ಸರ್ಕಾರವು ಸೋಮವಾರ (ಏಪ್ರಿಲ್‌ 29) ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದ್ದು, ಮರು ಪರೀಕ್ಷೆ ನಡೆಸಲಾಗುತ್ತದೆಯೋ ಅಥವಾ ಗ್ರೇಸ್‌ ಅಂಕಗಳನ್ನು ನೀಡಲಾಗುತ್ತದೆಯೋ ಎಂಬ ಕುತೂಹಲ ವಿದ್ಯಾರ್ಥಿಗಳಲ್ಲಿ ಮೂಡಿದೆ.

ಪಿಯು ಬೋರ್ಡ್‌ ಹಾಗೂ ಕೆಇಎ ನಡುವೆ ಪಠ್ಯಕ್ರಮದ ಕುರಿತು ಪತ್ರಗಳ ಸಮರ ನಡೆದಿದೆ. ಇದರ ಮಧ್ಯೆಯೇ, ಸಿಇಟಿ ಗೊಂದಲವೂ ವಿದ್ಯಾರ್ಥಿಗಳನ್ನು ಆತಂಕಕ್ಕೀಡು ಮಾಡಿದೆ. ಹಾಗಾಗಿ, ಸಿಇಟಿ ವೇಳೆ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳನ್ನು ಕೇಳಲು ಏನು ಕಾರಣ? ಎಲ್ಲಿ ಲೋಪವಾಯಿತು ಎಂಬುದರ ಕುರಿತು ವರದಿ ಆಧರಿಸಿ ರಾಜ್ಯ ಸರ್ಕಾರವು ಸೋಮವಾರವೇ ತೀರ್ಮಾನ ಪ್ರಕಟಿಸಲಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ವಿದ್ಯಾರ್ಥಿಗಳು ಹಾಗೂ ಪೋಷಕರ ಗಮನವೀಗ ರಾಜ್ಯ ಸರ್ಕಾರದ ಮೇಲಿದೆ.

cet exam karnataka exam authority

ಎಂಜಿನಿಯರಿಂಗ್‌ ಸೇರಿ ಇನ್ನಿತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಏಪ್ರಿಲ್‌ 18 ಮತ್ತು 19ರಂದು ಸಿಇಟಿ ಪರೀಕ್ಷೆಯಲ್ಲಿ ಔಟ್‌ ಆಫ್‌‌‌ ಸಿಲಬಸ್‌‌ ಪ್ರಶ್ನೆಗಳ ಕುರಿತಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರ ಆಕ್ರೋಶ ಈಗಾಗಲೇ ಭುಗಿಲೆದ್ದಿದೆ. 4 ವಿಷಯಗಳಲ್ಲಿ ಕನಿಷ್ಠ 45 ಪ್ರಶ್ನೆಗಳು ಕೈಬಿಟ್ಟ ಪಠ್ಯದಿಂದ ಬಂದಿರುವುದಾಗಿ ಆರೋಪ ಮಾಡಲಾಗಿದೆ. ಭೌತಶಾಸ್ತ್ರ, ರಾಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರದಲ್ಲಿ ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೇಳಲಾಗಿತ್ತು. ಹೀಗಾಗಿ ಪಿಯು ಬೋರ್ಡ್‌ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಡುವೆ ಪತ್ರ ಸಮರವೂ ನಡೆದಿತ್ತು. ಕೊನೆಗೆ ಎಚ್ಚೆತ್ತ ಸರ್ಕಾರ ತಜ್ಞರ ಸಮಿತಿ ರಚಿಸಿ ಆದೇಶ ಹೊರಡಿಸಿತ್ತು.

ಪ್ರತಿ ಪತ್ರಿಕೆಯೂ 60 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಎಷ್ಟು ಪ್ರಶ್ನೆಗಳು ಪಠ್ಯಕ್ಕೆ ಹೊರತಾಗಿವೆಯೋ ಅಷ್ಟು ಕೃಪಾಂಕ ನೀಡಬಹುದು. ಹಾಗೆ ನೀಡಿದರೆ ಪ್ರತಿಭಾವಂತರಿಗೆ ಅನ್ಯಾಯವಾಗುತ್ತದೆ. ಪಿಯು ಅಂಕಗಳನ್ನಷ್ಟೇ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸಿದರೆ ಸಿಇಟಿ ಉದ್ದೇಶ, ಮಾಡಿದ ಖರ್ಚು ವ್ಯರ್ಥವಾಗುತ್ತದೆ. ಹಾಗಾಗಿ, ಮರು ಪರೀಕ್ಷೆ ನಡೆಸುವ ಅಥವಾ ಪಠ್ಯಕ್ಕೆ ಹೊರತಾದ ಪ್ರಶ್ನೆಗಳನ್ನು ಕೈಬಿಟ್ಟು ಉಳಿದ ಪ್ರಶ್ನೆಗಳನ್ನಷ್ಟೇ ಮೌಲ್ಯಮಾಪನ ಮಾಡಿ ಶೇ.100ಕ್ಕೆ ಪರಿಗಣಿಸಿ ಫಲಿತಾಂಶ ಪ್ರಕಟಿಸಲು ಕೆಇಎ ಹಾಗೂ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ಪದವಿ ಪೂರ್ಣ ಶಿಕ್ಷಣ ಇಲಾಖೆಯು 2023-24ನೇ ಶೈಕ್ಷಣಿಕ ಸಾಲಿನಲ್ಲಿ ಕೈಬಿಟ್ಟಿರುವ ಪಾಠದ ಪ್ರಶ್ನೆಗಳನ್ನು ಕೇಳಿರುವ ಕುರಿತು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಆರೋಪಿಸಿದ್ದರು. ಹಾಗಾಗಿ, ರಾಜ್ಯ ಸರ್ಕಾರವು ಪರಿಶೀಲನೆ ನಡೆಸಲು ತಜ್ಞರ ಸಮಿತಿ ರಚಿಸಿತ್ತು. ತಜ್ಞರ ಸಮಿತಿಯು ಏಪ್ರಿಲ್‌ 25ರಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.

ಇದನ್ನೂ ಓದಿ: UPSC EXAM-2023: ಲಕ್ಷಾಂತರ ರೂಪಾಯಿ ಸಂಬಳವಿದ್ದ ಉದ್ಯೋಗವನ್ನೇ ತೊರೆದಿದ್ದ ಯುಪಿಎಸ್‌ಸಿ ಟಾಪರ್ ಆದಿತ್ಯ ಶ್ರೀವಾಸ್ತವ

Continue Reading

Lok Sabha Election 2024

Lok Sabha Election 2024: ಒವೈಸಿ ಪ್ರಕಾರ ಮುಸ್ಲಿಮರೇ ಹೆಚ್ಚು ಕಾಂಡೋಮ್ ಬಳಸುತ್ತಾರಂತೆ!

Lok Sabha Election 2024: ಧಾನ ಮಂತ್ರಿ ನರೇಂದ್ರ ಮೋದಿ ಅವರ ʼಮುಸ್ಲಿಮರು ಹೆಚ್ಚಿನ ಮಕ್ಕಳನ್ನು ಹೊಂದಿರುತ್ತಾರೆʼ ಎನ್ನುವ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ ಹೈದರಾಬಾದ್‌ನ ಸಂಸದ ಅಸಾದುದ್ದೀನ್ ಒವೈಸಿ, ಸಂಸದ ಅಸಾದುದ್ದೀನ್ ಒವೈಸಿ (Asaduddin Owaisi), ʼʼಮುಸ್ಲಿಂ ಸಮುದಾಯದ ಪುರುಷರು ಕಾಂಡೋಮ್ ಅನ್ನು ಹೆಚ್ಚು ಬಳಸುತ್ತಾರೆ ಮತ್ತು ಮಕ್ಕಳ ಅಂತರದಲ್ಲಿ ಉತ್ತಮ ದಾಖಲೆಯನ್ನು ಹೊಂದಿದ್ದಾರೆʼʼ ಎಂದು ಹೇಳಿದ್ದಾರೆ. “ಮುಸ್ಲಿಮರ ಫಲವತ್ತತೆ ದರ ಕುಸಿಯುತ್ತಿದೆ. ಆದರೆ ನರೇಂದ್ರ ಮೋದಿ ಅವರು ನಮ್ಮ ಹಿಂದೂ ಸಹೋದರರಲ್ಲಿ ಭಯವನ್ನು ಸೃಷ್ಟಿಸಲು ದ್ವೇಷ ಹರಡುತ್ತಿದ್ದಾರೆʼʼ ಎಂದು ಅವರು ಟೀಕಿಸಿದ್ದಾರೆ.

VISTARANEWS.COM


on

Lok Sabha Election 2024
Koo

ಹೈದರಾಬಾದ್‌: ಚುನಾವಣಾ ಕಣದಲ್ಲಿ (Lok Sabha Election 2024) ಪ್ರಮುಖ ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರ ʼಮುಸ್ಲಿಮರು ಹೆಚ್ಚಿನ ಮಕ್ಕಳನ್ನು ಹೊಂದಿರುತ್ತಾರೆʼ ಎನ್ನುವ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ ಹೈದರಾಬಾದ್‌ನ ಎಐಎಂಐಎಂ (AIMIM Hyderabad) ಸಂಸದ ಅಸಾದುದ್ದೀನ್ ಒವೈಸಿ (Asaduddin Owaisi), ʼʼಮುಸ್ಲಿಂ ಸಮುದಾಯದ ಪುರುಷರು ಕಾಂಡೋಮ್ ಅನ್ನು ಹೆಚ್ಚು ಬಳಸುತ್ತಾರೆ ಮತ್ತು ಮಕ್ಕಳ ಅಂತರದಲ್ಲಿ ಉತ್ತಮ ದಾಖಲೆಯನ್ನು ಹೊಂದಿದ್ದಾರೆʼʼ ಎಂದು ಹೇಳಿದ್ದಾರೆ.

ʼʼಮುಸ್ಲಿಮರು ಹೆಚ್ಚು ಮಕ್ಕಳನ್ನು ಪಡೆಯುತ್ತಾರೆ ಎಂದು ಮೋದಿ ಹೇಳುತ್ತಿದ್ದಾರೆ. ನರೇಂದ್ರ ಮೋದಿ ಅವರಿಗೆ ಆರು ಜನ ಸಹೋದರರಿದ್ದಾರೆ. ಅಮಿತ್ ಶಾ ಅವರಿಗೆ ಆರು ಸಹೋದರಿಯರು ಮತ್ತು ಆರ್‌ಎಸ್‌ಎಸ್‌ ಮುಖ್ಯಸ್ಥರಿಗೆ ಸುಮಾರು 10-12 ಸಹೋದರಿಯರು ಮತ್ತು ಸಹೋದರರು ಇದ್ದಾರೆ” ಎಂದು ಒವೈಸಿ ಟೀಕಿಸಿದ್ದಾರೆ.

“ಮುಸ್ಲಿಮರ ಫಲವತ್ತತೆ ದರ ಕುಸಿಯುತ್ತಿದೆ. ಆದರೆ ನರೇಂದ್ರ ಮೋದಿ ಅವರು ನಮ್ಮ ಹಿಂದೂ ಸಹೋದರರಲ್ಲಿ ಭಯವನ್ನು ಸೃಷ್ಟಿಸಲು ದ್ವೇಷ ಹರಡುತ್ತಿದ್ದಾರೆ. ಈ ದೇಶದಲ್ಲಿ ಮುಸ್ಲಿಮರು ಎಂದಿಗೂ ಬಹುಸಂಖ್ಯಾತರಾಗುವುದಿಲ್ಲ. ನರೇಂದ್ರ ಮೋದಿ, ಮುಸ್ಲಿಮರ ಬಗೆಗಿನ ಈ ಭಯವನ್ನು ನೀವು ಎಷ್ಟು ದಿನ ಮುಂದುವರಿಸುತ್ತೀರಿ?ʼʼ ಎಂದು ಚುನಾವಣಾ ರ‍್ಯಾಲಿಯಲ್ಲಿ ಓವೈಸಿ ಪ್ರಶ್ನಿಸಿದ್ದಾರೆ.

ʼನುಸುಳುಕೋರರುʼ ಎಂಬ ಪದ ಬಳಕೆಗೆ ಅವರು ಪ್ರಧಾನಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರು 17 ಕೋಟಿ ಭಾರತೀಯ ಮುಸ್ಲಿಮರನ್ನು ಗುಸ್ಪೆಟಿಯಾ (ಒಳನುಸುಳುಕೋರರು) ಎಂದು ಕರೆದಿದ್ದಾರೆ. ನೀವು ಗುಸ್ಪೆಟಿಯಾ ಆಗಿದ್ದೀರಾ?” ಎಂದು ಪ್ರಶ್ನಿಸಿದ ಅವರು, “ದಲಿತರು ಮತ್ತು ಮುಸ್ಲಿಮರ ವಿರುದ್ಧ ಪ್ರಧಾನಿ ಮೋದಿ ದ್ವೇಷ ಹರಡುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ಮಾಧವಿ ಲತಾ ವಿರುದ್ಧವೂ ವಾಗ್ದಾಳಿ

ಇದಕ್ಕೂ ಮುನ್ನ ಹೈದರಾಬಾದ್ ಬಿಜೆಪಿ ಲೋಕಸಭಾ ಅಭ್ಯರ್ಥಿ ಮಾಧವಿ ಲತಾ ವಿರುದ್ಧವೂ ಒವೈಸಿ ವಾಗ್ದಾಳಿ ನಡೆಸಿದ್ದಾರೆ. ʼʼಹೈದರಾಬಾದ್‌ನ ಓಲ್ಡ್ ಸಿಟಿಯ ಮಸೀದಿಯೊಂದರ ಮೇಲೆ ಬಾಣ ಹೂಡುವಂತೆ ಮಾಧವಿ ಲತಾ ಅವರು ಸನ್ನೆ ಮಾಡಿದ್ದಾರೆ. ಬಿಜೆಪಿಯ ಮೆರವಣಿಗೆಯ ವಿಡಿಯೊದಲ್ಲಿ ಇದು ಸ್ಪಷ್ಟವಾಗಿ ಕಂಡು ಬಂದಿದೆ. ಇದು ಮಸೀದಿಯ ಮೇಲೆ ಹೂಡಿದ ಬಾಣವಲ್ಲ, ಬದಲಾಗಿ ನಗರದಲ್ಲಿ ಶಾಂತಿಯನ್ನು ಹಾಳು ಮಾಡುವ ಉದ್ದೇಶಿತ ಪ್ರಯತ್ನ” ಎಂದು ಅವರು ಟೀಕಿಸಿದ್ದಾರೆ.

ಮೋದಿ ಹೇಳಿದ್ದೇನು?

ರಾಜಸ್ಥಾನದಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಮೋದಿ ʼʼದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಇದೆ ಎಂದು ಕಾಂಗ್ರೆಸ್ ಈ ಹಿಂದೆ ಹೇಳಿತ್ತು. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ದೇಶದ ಆಸ್ತಿಯನ್ನು ವಿತರಿಸುವುದಾಗಿ ಹೇಳಿದೆ. ಯಾರಿಗೆ? ಈ ಹಿಂದೆ, ಅವರ (ಕಾಂಗ್ರೆಸ್) ಸರ್ಕಾರ ಅಧಿಕಾರದಲ್ಲಿದ್ದಾಗ, ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಇದೆ ಎಂದು ಹೇಳಿದ್ದರು. ಇದರರ್ಥ ಅವರು ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ, ಒಳನುಸುಳುವವರಿಗೆ ವಿತರಿಸುತ್ತಾರೆ. ನೀವು ಕಷ್ಟಪಟ್ಟು ಸಂಪಾದಿಸಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಒಪ್ಪುತ್ತೀರಾ?” ಎಂದು ಮೋದಿ ಕೇಳಿದ್ದರು. ಜತೆಗೆ ದೇಶದ ಸಂಪನ್ಮೂಲಗಳ ಮೇಲೆ ಅಲ್ಪಸಂಖ್ಯಾತ ಸಮುದಾಯಕ್ಕೆ ಮೊದಲ ಹಕ್ಕು ಇದೆ ಎಂಬ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೇಳಿಕೆಯನ್ನೂ ಅವರು ಉಲ್ಲೇಖಿಸಿದ್ದರು. ಈ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಇದನ್ನೂ ಓದಿ: Narendra Modi : ಹೆಚ್ಚು ಮಕ್ಕಳಿದ್ದವರಿಗೆ ಕಾಂಗ್ರೆಸ್​ನಿಂದ ಸಂಪತ್ತು ವಿತರಣೆ; ಮೋದಿ ಹೇಳಿಕೆಗೆ ಕೈ ಪಕ್ಷದ ಆಕ್ಷೇಪ

Continue Reading
Advertisement
Arecanut cultivation
ಚಿತ್ರದುರ್ಗ5 mins ago

Arecanut Cultivation: ಒಣಗುತ್ತಿರುವುದು ಅಡಿಕೆ ಮರಗಳಲ್ಲ ರೈತರ ಬದುಕು!

IPL 2024
ಕ್ರೀಡೆ31 mins ago

IPL 2024: ಗೆಲುವಿನಲ್ಲೂ ನೂತನ ದಾಖಲೆ ಬರೆದ ಆರ್​ಸಿಬಿ

PUC Exam 2024
ಕರ್ನಾಟಕ32 mins ago

PUC Exam 2024: ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ!

Money Guide
ಮನಿ-ಗೈಡ್41 mins ago

Money Guide: ಫೊರೆಕ್ಸ್‌ ಕಾರ್ಡ್‌ V/S ಕ್ರೆಡಿಟ್‌ ಕಾರ್ಡ್‌: ವಿದೇಶ ಪ್ರವಾಸಕ್ಕೆ ಯಾವುದು ಸೂಕ್ತ?

lehar singh siroya
ದಾವಣಗೆರೆ58 mins ago

Lehar Singh Siroya: ಹರಿಹರದ ಪಂಚಮಸಾಲಿ ಜಗದ್ಗುರು ಪೀಠಕ್ಕೆ ರಾಜ್ಯಸಭಾ ಸದಸ್ಯ ಲೆಹರ್​ಸಿಂಗ್ ಭೇಟಿ

Car Accident
ಬೆಂಗಳೂರು1 hour ago

Car Accident: ಮಾದಾವರ ಟೋಲ್‌ಗೇಟ್ ಬಳಿ ಕಾರು ಅಪಘಾತ ಪ್ರಕರಣ; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಸಾವು

CET
ಕರ್ನಾಟಕ1 hour ago

CET 2024: ಸಿಇಟಿ ಮರು ಪರೀಕ್ಷೆಯೋ? ಗ್ರೇಸ್‌ ಮಾರ್ಕ್ಸ್‌ ಭಾಗ್ಯವೋ? ನಾಳೆ ನಿರ್ಧಾರ ಪ್ರಕಟ?

YAJAMANA PREMIER LEAGUE SEASON-3 (2)
ಕ್ರೀಡೆ2 hours ago

YAJAMANA PREMIER LEAGUE SEASON-3: ಈ ಬಾರಿ ಟಿ10 ಮಾದರಿಯಲ್ಲಿ ನಡೆಯಲಿದೆ ಯಜಮಾನ ಪ್ರೀಮಿಯರ್ ಲೀಗ್​

Lok Sabha Election 2024
Lok Sabha Election 20242 hours ago

Lok Sabha Election 2024: ಒವೈಸಿ ಪ್ರಕಾರ ಮುಸ್ಲಿಮರೇ ಹೆಚ್ಚು ಕಾಂಡೋಮ್ ಬಳಸುತ್ತಾರಂತೆ!

Virat Kohli
ಕ್ರಿಕೆಟ್2 hours ago

Virat Kohli: ಟೀಕೆಗಳಿಗೆ ಬಹಿರಂಗವಾಗಿಯೇ ತಿರುಗೇಟು ನೀಡಿದ ಕಿಂಗ್​ ಕೊಹ್ಲಿ​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20245 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20248 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202410 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202410 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ13 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ17 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌